ಒಟ್ಟು 24320 ಕಡೆಗಳಲ್ಲಿ , 137 ದಾಸರು , 9123 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಭಾಗೀರಥೀ ಜನಕಗೆ ಭಾಗವತಪ್ರಿಯಗೆ ಆಗ ನೀರೆರೆದರವಿಂದಲೋಚನನಿಗೆ ಗೋಪಿ 1 ಸಾಗರಶಯನನ ತೂಗಿ ತೊಟ್ಟಿಲೊಳಿಟ್ಟು ನಾಗಮುರಿಗೆ ವಂಕಿ ನಂದಗೋಪನ ಸುತಗೆ ಬೆರಳಿಗುಂಗುರ ಕೋಟಿಭಾಸ್ಕರತೇಜಗೆ ಹೊಳೆವೊ ಬಿಂದಲಿ ಗುಂಡು ಭುಜಕೀರ್ತಿ ಭೂಷಣ 2 ಮಲಕು ಮುತ್ತಿನ ಹಾರ ಪದಕ ಪಚ್ಚೆಯ ಕಾಂತಿ ಕೌಸ್ತುಭ ರತ್ನ ಥಳಥಳಿಸುವ ಕರ್ಣದಲ್ಲಿ ಬಾವುಲಿ ಚೌಕುಳಿ ಚಳತುಂಬು ಮುತ್ತಿನಬಟ್ಟು ಮುಂದಲೆಗೆ 3 ಹೊಸ ವಜ್ರದರಳೆಲೆ ಹುಲಿಯುಗುರು ತಾಯಿತ ಕುಸುಮನಾಭಗೆ ಕಿರುಗೆಜ್ಜೆ ಕಾಲಲಂದಿಗೆ ಮಿಸುಣಿ ಮಾಣಿಕ್ಯದುಡಿದಾರದಡ್ಡಿಕೆ ಕಟ್ಟಿ ಗೋಪಿ 4 ಕಂಜನಯ್ಯನ ನೋಡೆ ಕಂಗಳಿನ್ನೆರಡಿಲ್ಲ ಜಿಹ್ವೆ ಒಂದೆ ಸಾಲದೆನಗೆಂದು ಅಂಗಿಟೊಪ್ಪಿಗೆ ಹಾಕ್ಯಾಲಿಂಗನೆ ಮಾಡುತ ಸತಿ ತಾನಂದಾನಂದಭರಿತಳಾಗಿ5 ತನ್ನ ಮಗನ ಮುದ್ದು ತಾ ನೋಡಿ ಸಾಲದೆ ಹೊನ್ನ ಪುತ್ಥಳಿಯಂತೆ ಹೊಳೆವೊ ಕೂಸನು ಎತ್ತಿ ನಿನ್ನ ಮಗನ ಆಟ ನೀ ನೋಡೆಂದೆನುತಲಿ ತನ್ನ ಪತಿಯ ತೊಡೆಯಲ್ಲಿಟ್ಟು ನಲಿಯುತ 6 ಹೊನ್ನ ಪುತ್ಥಳಿಗೊಂಬೆ ಹೊಸ ಚಿನ್ನದರಗಿಳಿಯೆ ಹೊನ್ನು ತಾ ಗುಬ್ಬಿತಾರಮ್ಮಯ್ಯ ಎನುತಲಿ ಬಣ್ಣ ಬಣ್ಣದ ಆಟ ವರ್ಣಿಸುತಲಿ ನೀಲ- ವರ್ಣನ ತನ್ನ ತೋಳಿಂದಪ್ಪಿ ನಲಿಯುತ 7 ಸೃಷ್ಟಿಮಾಡುವರಿಲ್ಲೀ ಶಿವ ಬ್ರಹ್ಮರೊಡೆಯನ ಸೃಷ್ಟಿಕರ್ತನಾದನನ್ಹುಟ್ಟಿಸಿದ ನಾಭಿಯಿಂದಿವನು ಹೊಟ್ಟೆಲೀರೇಳು ಜಗವಿಟ್ಟು ಸಲಹುವ ಎಷ್ಟು ಸರ್ವೋತ್ತಮ ಈಗಿಲ್ಲ್ಯವತರಿಸಿದ 8 ಚತುರವದನಗೆ ವೇದ ತಂದಿಟ್ಟು ಸಾಗರ ಮಥಿಸಿ ಮಂದರವನು ಪೊತ್ತು ಅಮೃತವ ಹೀರಿ ಪೃಥಿವಿಯನು ತಂದ ಕೋರೆಯಲಂದ್ಹಿರಣ್ಯಾಕ್ಷನ ಹತವ ಮಾಡಿದ ತಾ ಭೂಪತಿ ಎಂದೆನಿಸಿದಿವನು 9 ಪರಮಭಕ್ತನು ಕರೆಯೆ ಬಿರುದು ಕಂಬದಿ ಬಂದು ಕರುಳ ಬಗೆದ ಪುಟ್ಟ ತÀರÀಳ ರೂಪವ ನೋಡಿ ಮರುಳಾಗಿ ಬಲಿ ಮೂರು ಚರಣ ದಾನ ನೀಡೆ ಬೆಳೆದು ಬ್ರಹ್ಮಾಂಡಕ್ಕೆ ಭುವನ ವ್ಯಾಪಿಸಿಕೊಂಡ10 ಕ್ಷತ್ರ ಸಂಹಾರಿ ತಾ ಎತ್ತಿ ಧನುವ ಸೀತಾ ಸೌ- ಮಿತ್ರಿಸಹಿತ್ವನದಲ್ಲಿ ಇರುತಿರಲಾಗ ಪತ್ನಿ ಒಯ್ಯಲು ಅಸುರನ್ಹತ್ತು ಶಿರಗಳ ತರಿದ ದುಷ್ಟ- ರಂತಕನೆ ನಿರ್ದುಷ್ಟ ಸಜ್ಜನಪ್ರಿಯ 11 ದೇವಾಧಿದೇವ ದೇವಕ್ಕಿ ಜಠರದಿ ಬಂದು ಮಾಯಾ- ಪೂತಣಿಯನ್ನು ಕೊಂದು ವಿಷಮೊಲೆನುಂಡು ಕಾಲಲಿ ಶಕಟನ ಕೆಡವಿದ ಯದುವೀರ ತಾ- ಗೋಪಾಲಕ ಗೋಪೀಸುತನೆಂದೆನಿಸಿಕೊಂಡ12 ವಿಪರೀತ ಮಾಯದಿ ತ್ರಿಪುರದ ಜನರಿಗೆ ದುರ್ಮತವ ಬೋಧಿಸಿ ಅಸುರಾರಿ ಮೋಹಕ ತೋರಿ ಚಪಲ ಚೆನ್ನಿಗ ಖಡ್ಗಪಿಡಿದು ತೇಜಿಯ- ನೇರಿ ಕಪಟನಾಟಕ ಕಲಿಮರ್ದನ ಕರಿಗ್ವರವಿತ್ತ13 ಜನ್ಮಕರ್ಮವು ಜರಾಮರಣಗಳಿವಗಿಲ್ಲ ಜಗದೋ- ಪರಬ್ರಹ್ಮನ ಪಾದಾಂಘ್ರಿಸ್ಮರಣಿ (ಣೆಯಿ?)ರೆ ಪರಮಾ- ದರದಿ ಕರೆದೊಯ್ವ ತನ್ನ (ಬಳಿಯ)ಲ್ಲೆ 14 ಏಸುಜನ್ಮದ ಫಲವಿನ್ನೆಷ್ಟು ಜನ್ಮದ ಸುಕೃತ ಈ ಸಮಯದಿ ಫಲಿಸಿತೀತ ಇಲ್ಲುದಿಸಿರಲು ದೋಷವರ್ಜಿತನೆ ಸಂತೋಷಭರಿತನಿವ ಭೀ- ಮೇಶಕೃಷ್ಣ ಯಶೋದೆ ಕೂಸೆಂದೆನಿಸಿಕೊಂಡ15
--------------
ಹರಪನಹಳ್ಳಿಭೀಮವ್ವ
ಭಾಗ್ಯವಂತನು ಇನ್ನು ಯಾರಯ್ಯ ಪ. ಯೋಗ್ಯ ವೈಷ್ಣವಕುಲದ ಭಾಗವತನಲ್ಲದೆ ಅ.ಪ. ಚತುರನೆನಿಸಿ ಲಕ್ಷ ಮನೆಮನೆ ತಿರುಗಿದೆಚತುರಾನನನಾ ಮಾತು ಅನುಸರಿಸಿದೆಸತು ಚಿತು ಆನಂದ ಆತ್ಮ ಹರಿಸ-ರ್ವೋತ್ತಮನ ದಾಸರದಾಸ ಎಂಬುವನಲ್ಲದೆ 1 ತಾರÀತಮ್ಯ ಪಂಚಭೇದವನೆ ತಿಳಿದು ಶ್ರೀಮಾರುತನ ಮತಗಳೇ ಹಾರೈಸುತಕರ್ಮ ವಂಚನೆಯಿಲ್ಲದನುದಿನದಿ ಮಾಡುತಚರಿಸುತ ಸಂಚಿತಾಗಾಮಿ ಕಳೆವವನಲ್ಲದೆÉ2 ಪತಿತಪಾವನ ಶ್ರೀಹರಿಗುರುಗಳನು ಮೋದದಿಕ್ಷಿತಿಯೊಳಗೆ ಭಜನೆಯೆ ಧನವೆನ್ನುತಅತಿಶಯದಿ ಶೇಷಾದ್ರಿ ಹಯವದನನ್ನ ನೆನೆನೆನೆದುಪ್ರೀತಿಯಿಂದಲಿ ಭಜಿಸುವವನಲ್ಲದೆ 3
--------------
ವಾದಿರಾಜ
ಭಾಗ್ಯವಂತರಾರು ಪೇಳಿರೈ ಸದ್ಭಕ್ತರೆಲ್ಲರು ಪ ಭಾಗ್ಯವೊ ವೈರಾಗ್ಯವೊ ನಿಮ್ಮ ಯೋಗ್ಯತಾನುಸಾರ ಶ್ಲಾಘ್ಯವೆಂದರಿತವರು ಅ.ಪ ಧನಿಕನು ಪರರನು ಗಣಿಸದೆ ತ- ಹಣವುಯಿಲ್ಲದ ಸುಗುಣವಂತನು ತಾ ವನಜಾಕ್ಷನನೆನದೂ ಅನುದಿನದಿ ಸುಖಿಸುವನು1 ಭಾಗವತ ಜನ ವಿ- ರಾಗ ವೈಭೋಗದಿ ತ್ಯಾಗಿಗಳೆನಿಪರು 2 ತಾಮನೆಯೆನಿಸಿ ಧಾಮರಾಗಿಹರ್ ಕ್ಷೇಮವುಳ್ಳ ಸಾಧುಗಳು ನಿರತ ಗುರು- ರಾಮವಿಠಲನ ನಿಷ್ಕಾಮದಿ ಭಜಿಸುವರು 3
--------------
ಗುರುರಾಮವಿಠಲ
ಭಾಮಾರಮಣನೆ | ಶ್ಯಾಮಸುಂದರನೆ ಓ ಮಹಾಮಹಿಮ ಕೇಶವನೆ ಪ ಪ್ರೇಮಾನಂದ ಸುಧಾಮಾರ್ಚಿತ ಪದ ಶ್ರೀಮಹಿಜಾ | ಮಹಿಜಾ ಸಂಜೀವನೇ ಅ.ಪ ದೈತ್ಯಭಯಂಕರ ಮುನಿನಿಕರಾ ಸ್ತುತ್ಯದಿವಾಕರ ಭಕ್ತನಿಶಾಕರ ಮೌಕ್ತಿಕರುಚಿರಾ ಅಭಯಕರಾ 1 ಸುರಮುನಿಪಾಲಾ ಕರುಣಾಲವಾಲಾ ಮುರಳೀಲೋಲಾ ವನಮಾಲಾ ಮುರ ಬಕಕಾಲಾ ಹೃದಯವಿಶಾಲ ವರಮಾಂಗಿರಿಬಾಲಾ ಗೊಪಾಲಾ 2
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಭಾಮೆ ಲಕುಮಿ ಕೇಳಮ್ಮಾ ಪ. ಕಾಮಜನಕ ಪೂರ್ಣ ಕಾಮನಾಗಿಹನಮ್ಮ ಅಭೀಷ್ಟ ಕೊಡುವನಮ್ಮ ಅ.ಪ. ವೈಕುಂಠ ತೊರೆದನಮ್ಮಾ | ನಿನಗಲ್ಲಿ ಬ ಹು ಕಷ್ಟವೆಂಬೊನಮ್ಮಾ ನೀ ಕೊಲ್ಲಾಪುರಕೆ ಬರಲು ಖೇದಪಡುತಲಿ ಆ ಕೋಲಗಿರಿಯಲಿ ತಾನೆ ನೆಲಸಿದನಮ್ಮಾ 1 ಬಲುದಿನವಾಯಿತಂತೇ | ನಿನ್ನನು ನೋಡಿ ಛಲವಿನ್ನು ಬೇಡವಂತೆ ಲಲನೆ ಪದ್ಮಾವತಿ ದೂರದಲ್ಲಿಹಳಂತೆ ವಲಿದು ನೀ ವಕ್ಷ ಸ್ಥಳದಿ ನೆಲಸ ಬೇಕಂತೆ 2 ನೋಡಬೇಕೆಂಬೊನಮ್ಮಾ | ನಿನ್ನೊಡನೊಂದು ಆಡಬೇಕೆಂಬೊನಮ್ಮಾ ಮಾಡಿಸಿದೇಯಂತೆ ಪದ್ಮಿಣಿ ಲಗ್ನವ ಮಾಡಿದ ಉಪಕಾರ ಮರಿಯನಂತಮ್ಮ 3 ತಿಳಿದು ಮಾಡುವರ್ಯಾರಮ್ಮಾ ಲಲನೆ ನಿನ್ಹೊರತಿಲ್ಲ ಕೆÀಲಕಾಲ ಸೇವಿಪೆ ತಿಳಿದು ತಿಳಿದು ಇಲ್ಲಿ ನೆಲೆÉಸಿದೆÀ ಯಾಕಮ್ಮ 4 ವಡೆಯಳೆ ಭಾಗ್ಯವಂತೆ | ನೀ ತೊರೆಯಲು ಬಡತನ ಬಂದಿತಂತೆ ಕೊಡುವ ಜನರ ಕಪ್ಪಕೊಳುತ ದರ್ಶನವನ್ನು ಕೊಡದೆ ಹೊಡೆಸುವಂಥ ಕಡುಲೋಭ ಕಲಿತನೆ 5 ಅಷ್ಟ ಐಶ್ವರ್ಯ ಪ್ರದೆ | ಹೃದಯದಲಿರೆ ಎಷ್ಟು ವೈಭವವಿಹುದೆ ಬಿಟ್ಟೆ ನೀನೀಗೆಂದು ಎಷ್ಟು ಆಭರಣಗ ಳಿಟ್ಟು ಮೆರೆವೊನಮ್ಮ ದೃಷ್ಟಿ ಸಾಲದು ನೋಡೆ 6 ಎಷ್ಟು ಲೀಲೆಯೆ ನಿಮ್ಮದೂ | ವೈಕುಂಠವ ಬಿಟ್ಟು ಇಬ್ಬರು ಇಹುದೂ ಗುಟ್ಟು ಬಲ್ಲಂಥ ಹರಿದಾಸರಿಗೊಲಿಯುವ ಶ್ರೇಷ್ಠ ಶ್ರೀ ಗೋಪಾಲಕೃಷ್ಣ ವಿಠ್ಠಲನರಸಿ 7
--------------
ಅಂಬಾಬಾಯಿ
ಭಾರ ನಮ್ಮಪ್ಪನಿಗೀ ಸಂಸಾರ ಉಪ್ಪಿನ ಹೇರಂತಿದು ಬಹುಕ್ಷಾರ ಕೈ- ತಪ್ಪಿದರೆ ಬಾರದು ಸಣ್ಣ ಚೂರಾ ಪ. ಅಗಳಿನಾಶೆಗೆ ಪೋಗಿ ನಿಗಳ ಕಂಠಗೆ ಸಿಲುಕಿ ನೆಗೆದು ಬೀಳ್ವ ಮಚ್ಛ್ಯಗಳಂದದಿ ಬಹು ಹಗರಣಗೊಳ್ಳುತ ಮರುಳಾಗಿಹೆನು 1 ಬಾಲಬುದ್ಧಿಯೊಳೆರಡು ಶಾಲೆ ಕೊಂಡರೆ ಪರರ ಮೇಲೊಡ್ಡುತ ಬಹು ಸಾಲಗಾರನೋಲೆ ಕೋಳುಗೊಂಬನು ಪಂಚಗೋಲ ಸುಖತಿಯಲಿ 2 ಪುಣ್ಯಕರ್ಮವ ಮಾಡಿ ತನ್ನದೆಂದರೆ ನಿಲದು ದಾನವರೊಯ್ವರು ಘನಪಾತಕಗಳು ಬೆನ್ನ ಬಿಡವು ಮಕ್ಷಿಕಾನ್ನದಂತಿಹವು 3 ಕರ್ಮಶಾಸ್ತ್ರವ ಗಹನ ಮರ್ಮವ ತಾಳದ ನರನಾ ನಿರ್ಮಲ ಮಾಡಲು ಚವರ್i ತೊಳಿಯೆ ದು- ಷ್ಕರ್ಮ ಕಲುಷವನು ನಿರ್ಮೂಲಗೊಳಿಸದೆ 4 ಹೇಸಿಕೆ ಜೊಲ್ಲಿನ ಮುಸುಡಾ ಹಾಸಿಕೆಯಿಂದೆತ್ತುತಲಿ ದೂಷಿಸುತನ್ಯರ ಮೀಸೆಯ ತಿರುಹುತ ಲೇಸಗಾಣದೆ ಬಹು ಮೋಸಗೊಂಡಿಹೆನು 5 ಹಸ್ತಪಾದಾದಿಗಳ ಮೃತ್ತಿಕೆಯಿಂದಲಿ ತೊಳೆವ ತತ್ವ ನೋಡಲು ಕಣ್ಣು ಕತ್ತಲೆ ಬರುವುದು ಕತ್ತೆಗೆ ಷಡ್ರಸವೆತ್ತಲು ದೊರೆಯದು 6 ಸ್ನಾನದ ರೀತಿಯನಿನ್ನೇನೆಂದು ವರ್ಣಿಪೆನು ಮಾನವರಿದಿರು ನಿಧಾನದಿ ನಡೆವುದು ಮಾನಸ ವೈಶಿಕಧಾನಿಯಾಗಿಹುದು 7 ಮಡಿಯೆಂದು ಕೂತಿರಲು ಮಡದಿ ಹತ್ತಿರ ಬರಲು ಒಡವೆಯ ನೋಡುತ ಅಡಿಗೆಯ ಪಣ್ಕೆಯ ನುಡಿಯಲ್ಲದೆ ಜಪಗೊಡವೆಯೇನಿರದು 8 ಪಾಕ ಪೂರಣವಾಗೆ ಈಗ ಸಾಕೆಂಬೆ ಹರಿಪೂಜೆ ಶಾಕಾದಿಗಳು ವಿವೇಕವಾಗದಿರೆ ಭೀಕರಿಸುತ ಅವಿವೇಕನಾಗುವೆನು 9 ತದನಂತರದಿ ಪರರ ಕದನವನೆಬ್ಬಿಸುತಲಿ ಒದಗುತ ನಾನಾ ವಿಧದಲಿ ಎನ್ನಯ ವದನ ತುಂಬುವ ಮಾರ್ಗದಿ ದಿನ ಕಳೆವೆನು 10 ಇಂತು ದಿವಾಯುಷವನ್ನು ಸಂತರಿಸುತ ನಿಶೆಯೊಳ್ ಕಂತು ಕಲಾಪದ ಭ್ರಾಂತಿಗೊಂಡು ಮರ ದಂತೆ ಬೀಳಲು ನಿಮಿಷಾಂತರ ದೊರೆಯದು 11 ಪಾರಾವಾರದಕಿಂತ ಘೋರವಾಗಿರುವೀ ಸಂ- ಸಾರದಿ ಸಿಲುಕಿದರ್ಯಾರು ಕಾವರಿಲ್ಲ ಶ್ರೀರಮಾಪತಿ ಚರಣಾರವಿಂದವೆ ಗತಿ 12 ಈ ವಿಧ ದುಷ್ಕøತದಿಂದ ಕಾವನು ನೀ ಗೋವಿಂದ ಪಾವನಾತ್ಮಕ ಶೇಷಾವತಾರ ಗಿರಿ ಭವ ನಾವ ಮುಕುಂದ 13
--------------
ತುಪಾಕಿ ವೆಂಕಟರಮಣಾಚಾರ್ಯ
ಭಾರ ನಿನ್ನದು ತಂದೆ ಸಿಂಧು ಎಂದೆಂದು | ಗುರುವರ್ಯ ಬಂದು ಕರುಣಿಸುವನು ಮದ್ಬಂಧೊ 1 ಮಂಗಳಾತ್ಮನೆ ಎನ್ನ ಅಂಗದಲಿ ನೀನಿಂದು ಪೊಂಗಳಧರನ ತೋರಯ್ಯ | ಅಜರಾಯ ಭಂಗಬಡಲಾರೆ ಭವದೊಳÀು 2 ನಾರಾಯಣನ ಪುತ್ರ ನಾರಾಯಣಗೆ ಮಿತ್ರ ನಿರವದ್ಯ | ನೀಡಭಯ ಕರುಣಾತ್ಮ ಗುರುವೆ ಒಲಿದಿಂದು 3 ಕಾಮರೂಪನೆ ಹರಿಯನೇಮದಲಿ ಕಪಿಯಾಗಿ ಆ ಮಹಿಮೆಗುಂಗುರ ಅರ್ಪಿಸಿ | ಅಗ್ನಿಯಲಿ ತಾಮಸರ ಹುರಿದೆ ಪುರದಲ್ಲಿ 4 ಮರಳಿ ಶರಧಿಯ ದಾಂಟಿ ಭರದಿ ರಘುಪತಿ ಚರಣ ಸರಸಿಜದಿ ಚೂಡಾಮಣಿಯನ್ನು | ಒಪ್ಪಿಸಿ ಹರಿ ಅಂಗ ಸಂಗ ಪಡೆದಯ್ಯ 5 ಸಿಂಧÀುವನು ಬಂಧಿಸಿ ಬಂದ ವಿಭೀಷಣಗೆ ಕುಂದದೆ ಅಭಯ ಕೊಡಿಸಿದೆ | ದಯಸಿಂಧು ನಿಂದೆನ್ನ ಒಳಗೆ ಮುದವೀಯೊ 6 ದೇವೇಶನಾಜ್ಞೆಯಲಿ ಜೀವೇಶ ಸಂಜೀವ ಪರ್ವತ ತಂದು ಕಪಿಸೈನ್ಯ | ಎಬ್ಬಿಸಿ ಮೊದಲೆಡೆಗೆ ಬಗೆದ ಕುಶಲಾತ್ಮ 7 ದಶಶಿರನ ಕೊಲ್ಲಿಸಿ ವಸುಧಿಪುತ್ರಿಯ ತಂದು ನಸುನಗುತ ರಾಮಚಂದ್ರಾಗೆ | ಒಪ್ಪಿಸಿ ವಿ ಭೀಷಣಗೆ ರಾಷ್ಟ್ರ ಕೊಡಿಸಿದೆ 8 ಪ್ರೇಮದಿ ಭರತನು ಸ್ವಾಮಿ ಬರಲಿಲ್ಲೆಂದು ಕಾಯ ಬಿಡುತೀರೆ | ಉಳುಹಿದೆ ಶ್ರೀ ರಾಮನಾಗಮನ ತಿಳುಹೀಸಿ9 ತುಷ್ಟನಾದೆನು ಹನುಮ ಇಷ್ಟ ನೀ ಬೇಡೆನಲು ಪಾದ ಪಿಡಿಯಲು | ಭಕ್ತಿಯಲಿ ಪಟ್ಟಾಭಿರಾಮ ತನ್ನಿತ್ತ 10 ಆಖಣಾತ್ಮಕಾಯನೆ ಅಕಳಂಕ ಗುಣಧಾಮ ನಿಖಿಲಾತ್ಮ ಹರಿಯ ಪೂಜಿಪ | ದೃಢಮಹಿಮ ಶ್ರೀಕೃಷ್ಣ ಭಕ್ತಾ ಕಲಿಭೀಮ 11 ಶಿಶುಭಾವದಲಿ ನೀನು ಶತಶೃಂಗ ಗಿರಿವಡೆದು ನಸುನಗುತ ಜನನಿಗಭಯವ | ನಿತ್ತಂಥ ಪಶುಪಾಲ ಪರನೆ ಪೊರೆಯೆನ್ನ 12 ದುರ್ಯೋಧನನ ತ್ರಾಣ ತಂತುಗಳ ಹರಿದಾಡಿ ಸರ್ವೇಶ ಹರಿಗೆ ಪ್ರಿಯಮಾಡಿ | ನಲಿದಂಥ ಸರ್ವಜ್ಞ ಭೀಮ ಬಿಡೆ ನಿನ್ನ 13 ದುಶ್ಯಾಸನನ ಮಹಾದುಶ್ಯೀಲ ಸ್ಮರಿಸುತ್ತ ಪಶುವಂತೆ ವಧೆಯ ಮಾಡಿದಿ | ರಣದೊಳು ಸುಸ್ವಾದ ಗುಣಸಾರ ಮಹವೀರ 14 ಮಾನಿನಿಯ ಸಂಕಲ್ಪ ತ್ರಾಣನೀ ಪೂರೈಸಿ ಪ್ರಾಣಸಖನಾಗಿ ಸಲಹಿದೆ | ಜಯಭೀಮ ಪಾಣೆ ಪಿಡಿಯೆನ್ನ ಮಹಘನ್ನ 15 ದುರಾರಾಧಕ ದುಷ್ಟ ಜರಸಂಧನ ಸೀಳಿ ಮುರಾರಿ ಮತ್ಪ್ರೀತಿ ಬಿಡಿಸಿದೆ | ದೀಕ್ಷೆಯಲಿ ತ್ರಿ ಪುರಾರಿ ವಂದ್ಯಾಗತಿ ನೀನೆ 16 ನಾರಾಯಣಾಸ್ತ್ರವನು ವೀರ ಗುರುಸುತ ಬಿಡಲು ಚೀರಿ ನಮೋಯೆನ್ನೆ ನೃಪರೆಲ್ಲ | ಸ್ಮøತಿ ತಪ್ಪೆ ಧೀರ ಎದುರಾಗಿ ನೀ ನಿಂತೆ 17 ಗರಡಿಯಲಿ ಕೀಚಕನ ಮುರಿದು ಮುದ್ದೆಯ ಮಾಡಿ ಮರಿಯದೆ ಅವನ ಅನುಜರ | ಸದೆಬಡಿದು ಮೋದ ನೀನಿತ್ತೆ 18 ಉರಗ ಬಂಧವ ಹರಿದು ಕರಿ ಮುಂದೆ | ನೀನಿಂತೆ ಸರ್ವನಿತ್ಯಾತ್ಮ ಕೃಷ್ಣಾತ್ಮ 19 ಮಧುವೈರಿ ಧ್ಯಾನದಲಿ ಕುದುರೆ ಆಟವನಾಡಿ ಮುದದಿಂದ ಕುರುಪನ್ಹೆಗಲೇರಿ | ಹುದುಗ್ಯವನ ಮುದದಿಂದ ನಲಿದೆ ಕಮಲಾಕ್ಷ 20 ಅರಗಿನ ಮನೆಯಲ್ಲಿ ವೈರಿಜನರ ಕೊಂದು ಪೊರೆದೆ ನೀ ಜನನಿ ಅನುಜರ | ಪಂಜರನೆ ಧರೆಯೊಳಗೆ ಎನ್ನ ಸಲಹಯ್ಯ 21 ಹಿಡಿಂಬನ ಕೊಂದು ವರ ಹಿಡಿಂಬಿಯ ಕೈಪಿಡಿದು ನಡೆದೇಕ ಚಕ್ರಪುರದಲ್ಲಿ | ಬಕನೊರಸಿ ನಡಕ ಬಿಡಿಸೀದಿ ಸುಜನರ 22 ವ್ಯಾಸದೇವನ ಕಂಡು ಸೂಸಿದ ಸದ್ಭಕ್ತಿ ಪಾಶದಲಿ ಕಟ್ಟಿ ಒಳಗಿಟ್ಟು | ಪೂಜಿಸುತ ಲೇಸಾಗಿ ಮುಂದೆ ನಡೆದಯ್ಯ 23 ನೀ ಸ್ವಯಂವರ ಸಭೆಯ ವೇಷಾಂತರದಿ ಪೊಕ್ಕು ವಾಸುದೇವನ ಕಂಡು ಆನಂದ | ತುಳುಕುತ್ತ ಆ ಸತಿಯ ತಂದೆ ವಿಜಯಾತ್ಮ 24 ರಾಜರೆಲ್ಲರ ಹಿಡಿದು ರಾಜಸೂಯಯಾಗವನು ಪೂಜೆಯನು ಮಾಡಿ ಮೆರದಯ್ಯ 25 ಲಕ್ಷ್ಮೀವನಕ್ಹೋದಂತೆ ಪಕ್ಷಿಯರ ಒಡಗೂಡಿ ದಕ್ಷನೆ ನೀನು ವನವಾಸ | ಅಜ್ಞಾತ ಪಕ್ಷವ ಕಳೆದು ಮರಳಿದೆ26 ಸಂಗರವ ನೀ ಹೂಡಿ ಭಂಗಿಸಿ ಕೌರವನ ರಂಗನ ಮುಂದೆ ಅರ್ಪಿಸಿ | ವಂದಿಸಿ ಮಂಗಳಾತ್ಮಕನೆ ಸಲಹೆಮ್ಮ 27 ನಿರ್ಮಲ ರಾಜ್ಯವನು ಧರ್ಮಂಗೆ ನೀನಿತ್ತೆ ನಿರ್ಮೂಲಗೈದು ಅರಿಗಳ | ಕೊಂದ ಪರ ಧರ್ಮಪರರನ್ನು ಪೊರೆದಯ್ಯ 28 ಮಧ್ವಾಖ್ಯ ಮಹವೀರ ಶುದ್ಧ ಸತ್ವ ಶರೀರ ಉದ್ಧರಿಪುದೊಂದೆ ವ್ಯಾಪಾರ | ಕೈಕೊಂಡ ವಿದ್ಯಾಧಿಪತಿಯೆ ಸಲಹೆನ್ನ 29 ಶ್ವಾಸ ನಿಯಾಮಕ ಪ್ರಭುವಾಸವೆ ನಿನ್ನಿಂದ ಉಸರಲೇನಯ್ಯ ನಿನ್ನಲ್ಲಿ | ಜೀವೇಶ ಸೂಸುವ ಭಕ್ತಿ ನೀಡಯ್ಯ 30 ವೇದ ಚೋರನ ಮಡುಹಿ ಸಾದರದಿ ಸುಜನಕ್ಕೆ ಬೋಧ ಮಾಡೆಂದು ಶ್ರೀ ವಿಷ್ಣು | ಕಳುಹಿದ ಮಧ್ವಾಖ್ಯ ಗುರುವೆ ಪರಿಪಾಹಿ 31 ಸುರರು ದುಂದಭಿ ಮೊರೆಯೆ ದುರುಳರ ಎದೆಯು ನಡುಗಲು | ಹರುಷದಲಿ ಮೆರೆದು ನೆರೆದರು ಸುಜನರು 32 ಕೈವಲ್ಯ ನೀನಿತ್ತೆ ಶ್ರೀವಲ್ಲಭನ ಪ್ರಥಮಾಂಗ | ಪ್ರಸನ್ನ ನೀವಲಿದು ಹರಿಯ ತೋರಯ್ಯ 33 ಹುಣಿಸೆ ಬೀಜದಿ ಪಿತನ ಘನೃಣವ ತೀರಿಸಿದಿ ಅಣಿಮಾದಿ ಸಿದ್ಧಿ ತೃಣವಯ್ಯ | ನಿನಗಿನ್ನು ಗುಣಪೂರ್ಣ ಹರಿಯ ಪ್ರತಿಬಿಂಬ 34 ಶಿವಭಟ್ಟನನು ಗೆದ್ದು ಜಯಾಂಕ ರಸ ತೋರೆ ವಿಪ್ರ ಸುರರು ಪೂಜಿಸೆ | ನಲವಿಂದ ಅವನಿಯೊಳು ಪೊಳೆದೆ ರವಿಯಂತೆ 35 ವಿದ್ಯಾಧಿಪತಿ ಗುರುವೆ ವಿದ್ಯೆ ಪೇಳಿದ ದ್ವಿಜಗೆ ಸದ್ಭಕ್ತಿ ದಕ್ಷಿಣೆ ನೀನಿತ್ತೆ | ಕರುಣಾತ್ಮ ಉದ್ಧರಿಸು ಎನ್ನ ದ್ವಿಜರತ್ನ 36 ಜನನಿ ಜನಕರು ತಡಿಯೆ ಅನುವಾದ ಸುತನಿತ್ತು ಘನವಾದ ತುರ್ಯ ಆಶÀ್ರಮ | ಕೈಗೊಂಡು ಸುನವ ಪದ್ಧತಿಯ ತೋರಿದೆ 37 ಅಚ್ಯುತ ಪ್ರೇಕ್ಷಕರಿಗೆ ಹೆಚ್ಚಾದ ದಯದಿ ಹರಿ ನಿನ್ನ | ವೊಯ್ದಿತ್ತ ಅಚ್ಚುಮೆಚ್ಚುವ ನೀ ಹರಿಗೆಂದು 38 ವಾದಿಗಳ ಭಂಗಿಸಲು ಸಾದರದಿ ಯತಿ ಕರಿಯೆ ಛೇದಿಸಿ ಖಳರ ಮದವನ್ನು | ಹರಿಸಿದೆ ಸ್ವಾದ ಗುಣಸಿಂಧು ಮದ್ಬಂಧು 39 ಬಾಳೆಗೊನೆಗಳ ಮೆದ್ದು ಬಾಡಲೇತಕೆ ಉದರ ಪೇಳೆಂದ ಯತಿಗೆ ಜಠರಾಗ್ನಿ | ಬ್ರಹ್ಮಾಂಡ ಕೊಳ್ಳುವದುಯೆಂದು ವರದಯ್ಯ 40 ವಾದಗಳ ಪರಿಹರಿಸಿ ಬೋಧಿಸಲು ಆ ದ್ವಿಜರು ಪಾದಕ್ಕೆ ಎರಗಿ ನಮೋ ಎಂದು ಅಮರರಿಗೆ ಆ ಬೋಧವೊ ಮಹಿಮೆಯೆಂದಾರು 41 ಬದರಿಯಾತ್ರೆಯಲಿ ಸುರನದಿಯು ತಾ ಮಹಿಪಡೆದು ಮುದದಲ್ಲಿ ಬಂದು ನಮಿಸಲು | ಶಿಷ್ಯಜನ ಯೈದಿ ಭಕ್ತಿಯನು ನಮೋ ಎಂದು 42 ಹರಿಯಂತೆ ನರಿಗಳನು ತುರಕ ದೂತರ ಜರಿದು ನರಪನಿಂದರ್ಧ ಮಹಿಮೆಯನ್ನು | ಪಡೆದಂಥ ಯರಡೇಳು ಭುವನ ಅಧಿಪತಿ 43 ಸತ್ಯತೀರ್ಥರ ಬಳಿಗೆ ದೈತ್ಯ ವ್ಯಾಘ್ರನು ಬರಲು ಮೃತ್ಯುವಿನ ಪುರಕೆ ಕಳುಹಿದೆ | ಲೀಲೆಯಲಿ ಭೃತ್ಯತ್ವಯೆನಗೆ ನೀಡಯ್ಯ 44 ಸೂಸುವಾ ಭಕ್ತಿಯಲಿ ವ್ಯಾಸದೇವನ ಕಂಡು ಈಶ ಸಲಹೆಂದು ಎರಗಲು | ಮನವುಬ್ಬಿ ಬಾ ಸುತನೆ ಎಂದು ತಬ್ಬಿದ 45 ಆನಂದ ಮೂರ್ತಿಯ ಆನಂದ ಸಂಗವನು ಆನಂದದಿಂದ ನೀ ಯೈದಿ | ನಂದ ಆನಂದ ತೀರ್ಥ ಕೊಟ್ಟೆಯೊ 46 ನಾರಾಯಣನಲಿ ಕರೆದೊಯ್ಯೆ ಬದರಿಪನ ಚರಣಾಬ್ಜಕೆರಗಿ ಹರಿಲೀಲೆ | ಸ್ಮರಿಸಿದ ಗುರುರತ್ನ ಸಲಹೊ ಧನ್ಯಾತ್ಮ 47 ಅಚ್ಯುತನ ಸಂಗದಲಿ ಚಿತ್ಸುಖವ ಉಂಡುಬ್ಬಿ ಹೆಚ್ಚಿನ ಪದವಿ ಇಲ್ಲೆಂದು | ನಲಿದಂಥ ಅಚ್ಯುತಾತ್ಮಾನೆ ಸಲಹೆನ್ನ 48
--------------
ಜಯೇಶವಿಠಲ
ಭಾರ ನಿನ್ನದೋ ಮಾರಜನಕ ಭಾರ ನಿನ್ನದೊ ಪ ಭಾರ ನಿನ್ನದಯ್ಯ ಸರ್ವ ಸಾರತರದಿ ಕಾಯುವಂಥ ಪಾರಮಹಿಮ ನಿನ್ನ ಚರಣ ವಾರಿಜವೇ ಗತಿ ಎನಗೆ 1 ನಿನ್ನ ಧ್ಯಾನವೆ ಪರುವಕಾಲ ನಿನ್ನ ನಾಮವೆ ಸೌಖ್ಯ ಸಕಲ ನಿನ್ನ ಕೀರ್ತನೆನಗೆ ಸುಫಲ ಪನ್ನಂಗಶಯನ ವೇಣುಗೋಪಾಲ 2 ಕರಿ ಸಂಕಟ ವನ್ನು ನಿರುತ ಗೆಲಿದನಕಟ ನಿನ್ನ ಭಜಿಸಿ ವಿಭೀಷಣ ಪಟ್ಟ ವನ್ನು ಸ್ಥಿರಪಡೆದ ದಿಟ 3 ಜಯ ನಿನ್ನ ಧ್ಯಾನವೆಂದೆ ಜಯ ನಿನ್ನ ಚರಣವೆಂದೆ ಜಯ ನಿಖಿಲ ನಿನ್ನದೆಂದೆ ದಯಪಾಲಿಸು ಶ್ರೀರಾಮ ತಂದೆ 4
--------------
ರಾಮದಾಸರು
ಭಾರತಿ ದೇವಿಯೆ ಮಾರುತಿ ರಾಣಿಯೆ ಪ. ಮಂದಿ ನಾಲ್ವರನು ಹೊಂದಿಸಿ ಉದರÀದಿಒಂದೆ ರೂಪದಿ ಜನರಿಗೆ ತೋರುವ ಸತಿ1 ಸೀತಾಕಾಂತನ ದೂತನಾಗಿ ಪ್ರ-ಖ್ಯಾತಿಯ ಪಡೆದನ ಪ್ರೀತಿಯ ಸತಿಯಳೆ 2 ದುಷ್ಟ ಕಲಿಯ ಕುಲಕುಟ್ಟಿ ಕೆಡಹಿದ ಭಲಕಟ್ಟಾಳು ಭೀಮನ ಪಟ್ಟದಸತಿಯಳೆ 3 ಮೂರುಏಳುಕುಲ ಮಾಯಿಗಳನು ಗೆದ್ದುಬೋರೆಮರದ ಕೆಳಗಿರುವನ ಸತಿಯಳೆ 4 ಹಗಲಿರುಳೆನ್ನದೆ ಹಯವದನನ ಪದಹೃದಯ ಕಮಲದೊಳು ಭಜಿಪನ ಸತಿಯಳೆ 5
--------------
ವಾದಿರಾಜ
ಭಾರತಿ ಪೊರೆಯೆಮ್ಮನು ಕಾರುಣ್ಯಮೂರುತಿ ಸಾರಸಭವಸತಿ ತೋರಿಸು ಸನ್ಮತಿ ಪ. ವೀಣಾಪುಸ್ತಕಧಾರಿಣಿ ಪನ್ನಗವೇಣಿ ವಾಣಿ ಗೀರ್ವಾಣಿ ಜನನೀ ಜಾಣೆ ಬ್ರಹ್ಮನ ರಾಣಿ ಸುಶ್ರೋಣಿ ಕಲ್ಯಾಣಿ 1 ನಾರದಮುನಿ ಸನ್ನುತೆ ಸಾರಸನೇತ್ರೇ ಚಾರುಚರಿತೇ ಸುರಸುತೆ ಮಾರನಯ್ಯನ ಚರಿತೆ ಸಾರುವಂತೆಸಗು ಮಾತೆ 2 ನಾಲಿಗೆಯೊಳು ನೆಲಸುತ ನಲಿನಲಿಯುತ ಮೇಲಹಕೃತಿ ನುಡಿಸುತ ಪಾಲಿಸು ಶ್ರೀಗಿರಿಲೋಲನ ಸೊಸೆ ನಿರುತ 3
--------------
ನಂಜನಗೂಡು ತಿರುಮಲಾಂಬಾ
ಭಾರತಿ ಮರುತನ ರಾಣಿ ಶುಭ ವಾಣಿಯಾಗಿರುವಿ ಕಲ್ಯಾಣಿ ನಾರಸಿಂಹನ ಸೊಸೆಯಾದಿ ಸರ್ವ ನಾರಿಯರಿಗೂ ನೀ ಮೇಲಾದಿ ಪ ಭೀಮನು ಶೂದ್ರನೆಂದಿರಲು ನೀನು ಶೂದ್ರೆಯೆಂದೆನಿಸುತಲಿರುವಿ ಕಾಮಿ ಕೀಚಕನಿಗೆ ಮೃತ್ಯುವಾಗಿ ನಿನ್ನ ಪ್ರೇಮವನೇನು ಬಣ್ಣಿಸಲಿ 1 ಜುಟ್ಟನು ಕೈಯೊಳು ಸೆಳೆದ ದುಷ್ಟ ದೈತ್ಯನ ಪಂಥದಿ ಮಥಿಸಿ ಪಟ್ಟದರಸನು ತೋರಿದುದದ್ಭುತವು ಸಿಟ್ಟು ನಿನಗಾಗಿ ತೋರ್ದುದಾಶ್ಚರ್ಯ 2 ರಾಜಧರ್ಮನು ಸುಮ್ಮನಿರಲು ರಾಜನಾಥ ಶ್ರೀಹಯಮುಖ ದಾಸ ರಾಜ ಭೀಮನು ತೋರ್ದ ಶಾಂತತೆಯ ರಾಜೀವಾಕ್ಷ ನಿನ್ನೊಳು ತೋರಿದ ಕರುಣ 3
--------------
ವಿಶ್ವೇಂದ್ರತೀರ್ಥ
ಭಾರತಿ ವಂದಿತೆ ಮನಸಿಜ ಮಾತೇ |ಕೋರುವೆ ತವಪದ ವನಜ ವಿಖ್ಯಾತೇ ಪ ನೀರಜ ಜಾತೆ ಅ.ಪ. ಪತಿ ಪರಿ ಸತಿ ಕೃತಿ ಸತಿ 1 ಖಗ ಗಮನನ ಪ್ರಿಯೆಬಗೆ ಬಗೆ ಹರಿಲೀಲೆ | ಲಗು ಬಗೆಯಲಿ ಪೇಳೆಸುಗುಣ ಮಣಿಯಮಾಲೆ | ಮಿಗಿಲು ಪೇಳೆ ಸುಶೀಲೆ 2 ಚಿನುಮಯ ಪ್ರಕೃತಿಯೆ | ಅಣು ಮಹದ್ರೂಪಿಯೆಇನಯನಗನುಸಾರಿ | ಕುಣಿಯುವೆ ಸುಂದರಿ |ಪ್ರಣತರ ಪಾಲ ಗುರು | ಗೋವಿಂದ ವಿಠಲನಗುಣಮಣಿ ಮಾಲೆ ಸದಾ | ಎಣಿಸುವೆ ಮೋದಾ 3
--------------
ಗುರುಗೋವಿಂದವಿಠಲರು
ಭಾರತಿದೇವಿ ಭಕ್ತರತಾಯಿಭಾರತಿ ದೇವಿ ನಿಮ್ಮ ಆರಾಧಿಸುವೆವಮ್ಮನಾರಿಯರ ಸೋಲಿಸಮ್ಮಮಾರಿ ಮೇಲಾಗಿಸಮ್ಮ ಪ. ಮದನನತ್ತಿಗೆ ರಂಭೆ ಮೊದಲಿಗೆ ಬಲಗೊಂಬೆ ಮುದದಿಂದ ಗೆಲಿಸೆಂಬೆ ಸುದತೆ ಪುತ್ಥಳಿಗೊಂಬೆ1 ಸುಪ್ಪಾಣಿ ಕಲ್ಯಾಣಿ ನಿನ್ನನುಗಾಣೆ 2 ಪ್ರದ್ಯುಮ್ನನ ಮಗಳೆ ರುದ್ರಾದಿವಂದ್ಯಳೆಮುದ್ದು ರಾಮೇಶನ ಪ್ರವಾಳೆ ಶುದ್ಧಪಾತ್ರಳೆ ಕೇಳೆ 3
--------------
ಗಲಗಲಿಅವ್ವನವರು
ಭಾರತಿದೇವಿ ಭಕ್ತಸಂಜೀವಿ ಪ ಮಾರುತನರಾಣಿ ಮಾಮಮ ಕಲ್ಯಾಣಿ ಅ.ಪ ಭಕುತಿ ವಿದೂರ ಕುಯುಕುತಿಗಳ ತರಿದು ಯುಕುತ ಮಾರ್ಗದೊಳಗಿರಿಸುವದೆಮ್ಮನು | ಜನನಿ 1 ಬುದ್ಧಿಯನು ಪರಿಶುದ್ಧಮಾಡಿಯನಿ- ರುದ್ಧನ ತೋರಿಸೆ ಪ್ರದ್ಯುಮ್ನನ ಸುಕುಮಾರಿ 2 ಸ್ಮರಿಸುವ ಶರಣರ ಚರಣಸೇವೆಯ ಕೊಡುವುದು 3
--------------
ಗುರುರಾಮವಿಠಲ
ಭಾರತಿರಮಣ ನಾ ಸಾರುವೆ ಚರಣಾ ಭೂರಿ ಸುಕರುಣಾ ಪ ಮೂರು ಕಾಲದಿ ನಾನಾಮೂರೊಂದು ರೂಪಾ ಮೂರಾರು ಭಕುತಿಲಿ ಸಾರುವೆ ಸುರಪಾ 1 ಮೂರೆರಡಾರಿಂದಲಿ ಮೂರಿಂದ ತಾಪಾ ಮೂರುಮಾಡದಲೆನ್ನಾ ಪೊರೆಯಯ್ಯಾ ಭೂಪಾ 2 ಕುಟಿಲ ದುರ್ವಿಷsÀಯ ಲಂಪಟ ಬಿಡಿಸೀಗಾ ದಿಟ ಗುರುಜಗನ್ನಾಥ ವಿಠಲನ ನಣುಗಾ 3
--------------
ಗುರುಜಗನ್ನಾಥದಾಸರು