ಒಟ್ಟು 13659 ಕಡೆಗಳಲ್ಲಿ , 138 ದಾಸರು , 6755 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಸಂಕರ್ಷಣ ಜಯಾತನಯಗೆ ಮಂಗಳ ಕಂತು ಭವನ ಪದವಿಯೋಗ್ಯಗೆ ಶಂಕ ಇಲ್ಲದ ಜೀವರಾಶಿಗಳೊಳಗಚ್ಯು ತಾ ಕಸ್ಥನೆನಿಸಿದ ಪವಮಾನಗೆ 1 ವಾನರ ವೇಷನಾ ತೋರ್ದಗೆ ಮಂಗಳ ಭಾನುತನಯನ ಕಾಯ್ದ್ದಗೆ ಮಂಗಳ ಜಾನಕಿಗುಂಗುರವಿತ್ತಗೆ ಮಂಗಳ ದಾನವತತಿ ಪುರವ ದಹಿಸಿದವಗೆ ಮಂಗಳ 2 ಅತಿ ಬಲವಂತರೆಂದೆನಿಸಿದ ದೈತ್ಯ ಸಂ ತತಿಗಳನೆಲ್ಲವ ಸವರಿದವಗೆ ಮಂಗಳ ಪ್ರೋತನದೊಳಗೆ ಪ್ರತಿಕೂಲ ಸುಯೋಧನನ ಮೃತಿಗೆ ಕಾರಣನಾದ ಮರುದಂಶಗೆ 3 ಏಳೇಳು ಲೋಕದ ಗುರುವರನೆನಿಸಿ ಮೂ ರೇಳು ಕುಭಾಷ್ಯವ ಮುರಿದವಗೆ ಮಂಗಳ ಏಳುಕೋಟ ಲೋಕದೊಳಗಿಟ್ಟು ದೈತ್ಯರ ಪಳದಂತೆ ಮಾಡಿದ ಯತಿರಾಯಗೆ 4 ಮೂರು ರೂಪಗಳಿಂದ ಮುಕ್ತಿ ಪ್ರದಾಯಕ ನಾರಾಧಿಸಿದ ಅನಿಮಿಷ ಪೂಜ್ಯಗೆ ಮಂಗಳ ಶ್ರೀ ರಮಾರಮಣ ಜಗನ್ನಾಥ ವಿಠಲನ ಕಾರುಣ್ಯ ಪಾತ್ರ ಸಮೀರಣಗೆ ಮಂಗಳ 5
--------------
ಜಗನ್ನಾಥದಾಸರು
ಸಂಕರ್ಷಣನ ರಾಣಿ ವೀರದುರ್ಗೆ ಕಿಂಕರರ ಪಾಲಿಸು ಖೂಳ ಜನ ಸಂಹಾರಿ ಪ ಅಮಿತ ಸದ್ಗುಣರಾಶಿ ಕುಜನಾರಿ ಸುಗನಾಪ್ತೆ ಕಾಯೆ ತಾಯೆ ಅ.ಪ ಮನದ ಖಳರಾ ಭೀತಿ ಬಹು ವೇಗ ಕೇಳಮ್ಮ ಪ್ರಣಿತ ಜನರ ಪಾಲೆ ಕೊಲ್ಲೆ ಅವರ ತನುಮನದಿ ನೆಲೆಸಿದ್ದು ಅನುದಿನವು ಪೊರೆ ನಮ್ಮ ಗುಣಪೂರ್ಣ ನಿನ್ನ ಪತಿಧ್ಯಾನ ಒದಗಿಸಿ ನಲಿಯೆ 1 ಪತಿವ್ರತವು ನೀ ಧರಿಸಿ ಪತಿವೈರಿಗಳ ಅರಿವೆ ಪತಿಹಿತರ ಕಾವ ಕಂಕಣವ ಕಟ್ಟಿ ಪತಿ ಪ್ರೀತಿಪಡಿಸುವೆ ವೀರವ್ರತ ದೀಕ್ಷೆಯಲಿ ಪತಿತಪಾವನೆ ನೀನೆ ಕಾವಲಮ್ಮಾ ನಮಗೆ2 ಕಲಿಯಲ್ಲಿ ಖಳಕೂಟ ಬಲು ಪ್ರಬಲ ಅತಿಕ್ರೂರ ಉಳಿಯಲೀಯರು ದೇವಿ ಸುಜನರನ್ನು ಬಲುಹೀನರೆಂತೆಂದು ಬಲು ಬಾಧೆಪಡಿಸುವರು ಪ್ರಳಯಗೈಸವರನ್ನು ಪಾಲಿಸು ನಿನ್ನವರ 3 ಜ್ಞಾನಮನ ತನುಕರಣ ಆಲಯದ ಅರಿಗಳ ಆಸಕ್ತಚಾರಿಗಳ ಬಿಡದೆ ಮಡುಹಿ ಆನಂದಮುನಿ ತಾಯೆ ಜಯೇಶವಿಠಲನ ಆನಂದ ನಿಜಕರುಣ ಬೆರಿಸಮ್ಮ ನಮ್ಮಲ್ಲಿ 4
--------------
ಜಯೇಶವಿಠಲ
ಸಕಲ ಕರ್ಮಗಳ ಮಾಡಿ ಮಾಡಿಸುವೆ ನೀನು ಪ ವಿಕಳಮತಿಗಳಿದನರಿಯರೇನೆಂಬೆ ನಾನು ಅ.ಪ. 'ತೇನವಿನಾ ತೃಣಮಪಿ ನ ಚಲತಿ' ಎಂಬುದನು ಆನುಪೂರ್ವಕದಿಂದ ತಿಳಿದು ತಿಳಿಯದಂತೆ ತಾನು ಪುಣ್ಯಕರ್ಮಗಳನು ಮಾಳ್ಪವನೆಂದು ನೀನು ಪಾಪಕೆಳಸುವೆನೆಂಬರಧಮ ಜನರು 1 ವಿಧಿವಿಹಿತ ಕರ್ಮಗಳನು ಮಾಡಿಸುವಾತ ಹರಿಯು ಆಧುನಿಕ ಕರ್ಮಗಳಿಗೆ ಕರ್ತೃ ತಾನೆ ಎಂದು ಅಧಮ ಕಾರ್ಯಗಳ ಮಧುವೈರಿಗಾರೋಪಿಸದೆ ನಿಧನರಾಗಿಹ ಜನರು ಮಧ್ಯಮರೆನಿಸುವರು 2 ಪಾಪ ಪುಣ್ಯ ಕರ್ಮಗಳೇನು ಮಾಡುವುದಕೆ ಶ್ರೀಪತಿ ರಂಗೇಶವಿಠಲ ಪ್ರೇರಕನಲ್ಲದೆ ವ್ಯಾಪಾರ ತನಗಿನಿತಾದರಿಲ್ಲವೆಂದರಿತು ಲೇಪರಹಿತರಾಗಿಹರೆ ಉತ್ತಮರಯ್ಯಾ 3
--------------
ರಂಗೇಶವಿಠಲದಾಸರು
ಸಕಲ ಕಾಲದಿ ಮಾಡಿದ ಕರ್ಮವು | ಭಕುತಿಯಿಂದಲಿ ಬಂದರ್ಪಿತವೆನ್ನಿ ಉಡುಪಿಯಲಿ ಪ ಯಾತ್ರೆಗಳ ಮಾಡಲಿ ತೀರ್ಥಗಳ ಮೀಯಲಿ | ಸ್ತೋತ್ರಗಳ ಮಾಡಲಿ ಕೊಂಡಾಡಲಿ || ನೇತ್ರದಲಿ ನೋಡಿ ಕರಮುಗಿದು ನಮಸ್ಕರಿಸಲಿ | ಹೋತ್ರವನು ಮಾಡಿ ಹಿತವಾಗಿ ನುಡಿಯಲಿ 1 ದಾನವನು ಮಾಡಲಿ ದಾಕ್ಷಿಣ್ಯವಾಗಲಿ | ಮೌನವನು ಮಾಡಲಿ ಮಾತಾಡಲಿ || ಕಾನನವ ಸೇರಲಿ ಕಂಡಲ್ಲಿ ತಿರುಗಲಿ | ಏನೇನು ಚರಿತೆಗಳ ಮಾಡುತಿರಲಿ 2 ಪುಣ್ಯವಾದರು ಲೇಸೆ ಪಾಪವಾದರು ಹರಿ | ಮನ್ನಿಸಿ ತಾನೀಗ ತೆಗೆದುಕೊಂಡು || ತನ್ನ ಸಮೀಪದಿ ಇಟ್ಟುಕೊಂಡು ಅವನ |ಘನ್ನ ಮೂರುತಿ ವಿಜಯವಿಠ್ಠಲ ಪೊರೆವ 3
--------------
ವಿಜಯದಾಸ
ಸಕಲ ಭೂತಗಣಕಧಿನಾಥ ನೀನೆ ಪಥ ತೋರುವ ಮಹ ಮಹಿಮ ನೀನೆ ಪ ಗರಳ ಕುಡಿದವ ನೀನೆ ಸರಸಿಜಾಕ್ಷನ ಪರಮ ಸಖನು ನೀನೆ ವರ ಭಗೀರಥನುತಿಸೆ ಸುರನದಿಯನು ನಿಜ ಸಿರಿಮುಡಿಯೊಳ್ಧರಿಸಿದಾತನು ನೀನೆ 1 ಸಿರಿರಾಮ ಮಂತ್ರವನು ಗಿರಿಜೆಗುಸುರಿದವ ನೀನೆ ವರ ಪಾಶುಪತ ಶರವ ನರನಿಗಿತ್ತವನು ನೀನೇ ವರ ಮಾರ್ಕಂಡಗೆ ವರವನಿತ್ತವ ನೀನೆ ಕರಿಚರ್ಮ ಧರಿಸಿರುವ ಪರಮ ವೈರಾಗಿಯೂ ನೀನೆ 2 ಕೋರಿದನು ಕೊಡಲುಳ್ಳ ಕರುಣಪೂರ್ಣನು ನೀನೆ ಶ್ರೀ ರಜತಗಿರಿಯಲಿ ಮೆರೆಯುವಾತನು ನೀನೆ ನೀರಜಾಕ್ಷ ಶ್ರೀ ರಂಗೇಶವಿಠಲ ಪರನೆಂದು ಸಾರುತಲಿ ಪೊಗಳುವ ಪರಮ ಭಾಗವತನು ನೀನೆ 3
--------------
ರಂಗೇಶವಿಠಲದಾಸರು
ಸಕಲಕಾರ್ಯಾಂತರ್ಗತನಾಗಿ ಹರಿ ಭಕುತರ ಹೃದಯದಲಿ ನೆಲಸಿ ಭಕುತರ ಮನ ಬಂದಂತೆ ಕುಣಿಸೆ ಅವರನು ಹರಿ ಸಕಲಕಾಲದಲ್ಲೂ ಕಾದು ಕೊಂಡಿದ್ದು ಸಲಹುವ ಶ್ರೀ ಶ್ರೀನಿವಾಸ ಪ. ಯಾವಾಗ ಬರುವನೋ ಭಕ್ತರೆಡೆಗೆ ಹರಿ ಹರಿ ಆವಾಗಲಾಗಮಿಸುವುದೇ ಪರ್ವಕಾಲ ಹರಿಯ ಆವಾಗಲೇ ನೆನದು ಮಿಂದು ಧ್ಯಾನಿಸೆ ಆವಾಗಲೇ ಸಂಧ್ಯಾಸಕಲ ಕರ್ಮವ ನಡೆಸೆ ಯಾವಾಗಲೂ ಹರಿ ತಾ ತನ್ನ ಭಕ್ತರ ಕೈ ಬಿಡ ಯಾವ ಕಾಲದಲ್ಲೂ ಶ್ರೀ ಶ್ರೀನಿವಾಸ 1 ನಾನು ದೊಡ್ಡವ ನೀನು ದೊಡ್ಡವನೆಂದು ಹೊಡೆದಾಡದೇ ನಿಮಗೂ ನಮಗೂ ಮತ್ತೊಬ್ಬನಿಹನು ಹರಿ ನಿಮಗ್ಯಾತಕೀ ಛಲದ ವಾದ ಮನುಜರೇ ಅನುದಿನವೂ ನೆನೆಯಿರಿ ಶ್ರೀಹರಿ ಶ್ರೀ ಶ್ರೀನಿವಾಸನ್ನ ಸಕಲರಿಗೂ ದೊಡ್ಡವನವನೇ ಕೇಳಿ ಸಜ್ಜನರೇ 2 ಕಾಲ ಆ ಕಾಲವೆಂದಿಲ್ಲ ಹರಿಗೆ ತನ್ನ ಭಕ್ತರ ಸಾಕಲು ಈ ಸಮಯ ಆ ಸಮಯವೆಂದು ನೋಡನು ಹರಿ ಇಂಥಾ ಈ ಕರುಣದೊರೆಯೆಲ್ಲಾದರುಂಟೆ ಜಗದಿ ಈ ತನುವಿರುವ ತನಕ ಈ ಪರಮ ಪುರುಷನನು ಬೇಕಾದ ಕಾಲದಲಿ ಈ ಮನುಜ ಜಪಿಸುತಿರೆ ಕಮಲನಾಭ ಶ್ರೀ ಶ್ರೀನಿವಾಸ ಸಲಹದಿರನೇ ನಿನ್ನ ಆಪತ್ತಿಗಾಹ ಶ್ರೀಶ ಶ್ರೀ ವೆಂಕಟೇಶಾ 3 ಜಾಗರದಲೂ ಹರಿ ಕಾವ ನಿದ್ರೆಯಲೂ ಹರಿಕಾವ ಜಾಗರ ಸುಷುಪ್ತಿಯಲಿ ಹರಿ ಜಾಗರಮೂರುತಿ ನಿನ್ನ ಕಾವ ಜಾಗು ಮಾಡದೆ ಭಜಿಸು ಜಾನಕಿರಮಣ ಶ್ರೀ ರಾಮಚಂದ್ರನ್ನ ನಿತ್ಯ ಶ್ರೀ ಶ್ರೀನಿವಾಸನ್ನ ಮನವೆ 4 ಬುದ್ಧಿ ಬಂದಿದ್ದು ಅವನಿಂದ ಬುದ್ಧಿ ಅರಿವುದು ಅವನಿಂದ ಅಪ್ರಬುದ್ಧನಾಗದೇ ಬುದ್ಧಿ ಪೂರ್ವಕ ನೀ ನೆನೆದರೆ ಹರಿ ಬದ್ಧಕಂಕಣ ತೊಟ್ಟಿಹನು ಭಕ್ತರ ಕಾಯೆ ಆ ಶ್ರೀ ಶ್ರೀನಿವಾಸನ ಶುದ್ಧ ಮನದಿ ನೆನೆಮನವೆ 5 ವೈರಿ ಗೆಲ್ಲು ಮೊದಲು ನೀನವರ ವಶವಾಗದೆ ನಿನ್ನ ಮನ ಶುದ್ಧಮಾಡಿಕೊ ಮೊದಲು ನಿನ್ನ ಮನಸಿನಶ್ವಕ್ಕೆ ಬುದ್ಧಿಲಗಾಮು ಹಾಕು ನಿನ್ನ ಬುದ್ಧಿಯಲಿ ಮೊದಲನೆ ಕಾರ್ಯವಿದು ಎಂದರಿ ಈ ಮೊದಲು ನನಿಕಾರ್ಯ ನೋಡಿ ಶ್ರೀ ಶ್ರೀನಿವಾಸ ಒಲಿವ ನಿನಗೆಂದೆಂದು ಮನವೆ6 ಈ ತನವು ಈ ನುಡಿ ಈ ಕಾರ್ಯ ಈ ವಾರ್ತೆ ಈ ಕೃಪೆಯು ಶ್ರೀ ಶ್ರೀನಿವಾಸಗಲದೆ ಅನ್ಯತ್ರವಿಲ್ಲ ಹರಿ ಭಕ್ತರ ಸುಳಾದಿ ಭಕ್ತವತ್ಸಲ ಶ್ರೀ ಶ್ರೀನಿವಾಸಗರ್ಪಿತವೆಂದು ತಿಳಿ ಮನವೆ 7
--------------
ಸರಸ್ವತಿ ಬಾಯಿ
ಸಕಲಲೋಕಪಾಲಕ ರಕ್ಷಿಸೈ ನಿಖಿಲವ್ಯಾಪಕ ಪ ಚರಣದಾಸನ ಮೊರೆಯ ಪಾಲಿಸಿ ಕರುಣವಂ ಬೆರೆಸಿ ಪೊರೆಯೊ ಶರಣಜನ ಪ್ರಿಯಕರನೆ ಮರೆಯ ಹೊಕ್ಕೆನು 1 ಇಂದೊದಗಿಬಂದ ದುರಿತವನು ತಂದೆ ನೀಬಂದು ಪರಿಹರಿಸೊ ಮುಂದಿನ್ನು ಬಂಧನದ ಬಲೆಯಚಿಂದಿಸಿ ಚಂದದಿಂ ಕಾಯೊ 2 ಕಾಯಜಪಿತನೆ ನಿನ್ನ್ಹೊರತು ಕಾಯುವ ಹಿತರು ಇಲ್ಲಯ್ಯ ದೂರದ ಸುತನ ಮೊರೆ ಕೇಳೊ ಕ್ಷಿತಿಜಪತಿಯೆ ಶ್ರೀರಾಮ 3
--------------
ರಾಮದಾಸರು
ಸಕಲವೆಲ್ಲವು ಹರಿಸೇವೆ ಎನ್ನಿ ಯಕುತಿವಂತರು ಹರಿಭಕುತಿ ಯೆನ್ನಿ ಧ್ರುವ ಹುಟ್ಟಿ ಬಂದಿಹ್ಯದೆ ವಿಠ್ಠಲನ ಸುಸೇವೆಗೆನ್ನಿ ಸೃಷ್ಟಿಯೊಳಿಹ್ಯದೆ ಶ್ರೀ ವಿಷ್ಣು ಸಹವಾಸವೆನ್ನಿ 1 ಬದುಕಿ ಬಾಳುದೇ ಇದು ಶ್ರೀಧರ ಉದ್ದೇಶವೆನ್ನಿ ಸಾಧನ ಸಂಪತ್ತು ಶ್ರೀ ಮಾಧವನದು ಎನ್ನಿ 2 ಉಂಬುಂತಿಂಬುದೆಲ್ಲ ಅಂಬುಜಾಕ್ಷನ ನೈವೇದ್ಯವೆನ್ನಿ ಕೊಂಬುಕೊಡುವ ಹಂಬಲ ಶ್ರೀ ಹರಿಯದೆನ್ನಿ 3 ಇಡುವ ತೊಡುವದೆಲ್ಲ ಪೊಡವಿಧರನಾಭರಣವೆನ್ನಿ ಉಡುವ ಮುಡಿವದೆಲ್ಲ ಹರಿಯ ಸಡಗರವೆನ್ನಿ 4 ನುಡಿವ ನುಡಿಗಳೇ ಹರಿಬಿಡದೆ ಕೊಂಡಾಡುದೆನ್ನಿ ಬಡುವ ಹರುಷವೆಲ್ಲ ವಸ್ತುದೇ ಎನ್ನಿ 5 ನಡೆವ ನಡಿಗೆಯಿಲ್ಲ ಹರಿಯ ಪ್ರದಕ್ಷಿಣಿ ಎನ್ನಿ ಎಡವಿ ಬೀಳುದು ಹರಿನಮವೆನ್ನಿ 6 ಏಳುವ ಕೂಡುವದೆಲ್ಲ ಹರಿಯ ಊಳಿಗವೆನ್ನಿ ಹೇಳಿ ಕೇಳುದೆಲ್ಲ ಹರಿಪುರಾಣವೆನ್ನಿ 7 ನೋಡುವ ನೋಟಗಳೆಲ್ಲ ಹರಿ ಸುಲಕ್ಷಣವೆನ್ನಿ ಮಾಡುವ ಮಾಟಗಳೆಲ್ಲ ಹರಿಯದೆನ್ನಿ 8 ಮಲಗಿ ನಿದ್ರೆಗೈವದೇ ಹರಿಯ ಕಾಲಿಗೆರಗುದೆನ್ನಿ ಬಲಕ ಎಡಕ ಹೊರಳುದೇ ಲೋಟಾಂಗಣ(?) ವೆನ್ನಿ 9 ವನಿತೇರ ಸಂಗವೇ ತಾ ಹರಿಯ ಲೀಲೆಯು ಎನ್ನಿ ತನುಮನವೆಲ್ಲಾ ಹರಿಸ್ಥಾನವೆ ಎನ್ನಿ 10 ಸತಿಸುತ ಮಿತ್ರರೆಲ್ಲ ಹರಿಸೇವೆ ದೂತರೆನ್ನಿ ಮತ್ತೆ ಬಂಧುಬಳಗೆಲ್ಲ ಹರಿಯದೆನ್ನಿ11 ಸುಖದು:ಖವೆಂಬುದೇ ಶ್ರೀಹರಿಯ ಸಂಕಲ್ಪವೆನ್ನಿ ನಕ್ಕು ನುಡುವುದೆಲ್ಲ ಹರಿ ಆಖರವೆನ್ನಿ 12 ಹೆಣ್ಣು ಹೊನ್ನಾರ್ಜಿತವೆಲ್ಲ ಹರಿಯ ಕಾಣಿಕೆ ಎನ್ನಿ ನಾನೀನೆಂಬುದೆಲ್ಲ ಹರಿಚೇತನವೆನ್ನಿ 13 ಸ್ವಾರ್ಥ ಹಿಡಿವದೆಲ್ಲ ಪಾರ್ಥನ ಸ್ವಾಮಿಗೆ ಎನ್ನಿ ಅರ್ತು ಮರ್ತು ನಡೆವ ಹರಿಕರ್ತೃತ್ವವೆನ್ನಿ 14 ಅಂತ್ರಬಾಹ್ಯವೆಲ್ಲ ಹರಿಗುರು ಮಾತೃಪಿತೃವೆನ್ನಿ ಗುರ್ತುವಾದದ್ದೆಲ್ಲ ತೀರ್ಥಕ್ಷೇತ್ರವೆನ್ನಿ 15 ಲಾಭಾಲಾಭವೆಲ್ಲ ಹರಿಪಾದಕರ್ಪಿತವೆನ್ನಿ ಶುಭಾ ಶುಭವೆಲ್ಲ ಹರಿಶೋಭೆಯು ಎನ್ನಿ 16 ಕನಸು ಮನಸುಗಳೆಲ್ಲ ಹರಿಯ ನೆನೆವ ಸೇವೆನ್ನಿ ಧೇನಿಸಿ ಬಯಸುದೇ ಹರಿಧ್ಯಾನವೆನ್ನಿ 17 ನಿತ್ಯಕರ್ಮವೆಲ್ಲ ಹರಿಪಾದಕ ಸಮರ್ಪಣವೆನ್ನಿ ಸತ್ಯಾಸತ್ಯವೆಲ್ಲ ಹರಿ ಅಗತ್ಯವೆನ್ನಿ 18 ಹೆಜ್ಜೆಗೊಮ್ಮೆ ಬೆಜ್ಜರ್ಹಿಡಿದು ರಾಜೀವನಯನನೆನ್ನಿ ಸಜ್ಜನರೊಡೆಯ ಗಜವರದ ಎನ್ನಿ 19 ಸೋಹ್ಯ ಸೂತ್ರವೆಲ್ಲ ಹರಿಯ ಮಹಾಮಹಿಮೆ ಎನ್ನಿ ಗುಹ್ಯಗೂಢವೆಲ್ಲ ಹರಿಯಗುರುತ ಎನ್ನಿ 20 ಇಹಪವೆಲ್ಲ ಹರಿಸೇವೆಗನುಕೂಲ ವೆನ್ನಿ ಸೋಹ್ಯ ಮಾಡುದೆಲ್ಲ ಹರಿಯ ದಯವೆನ್ನಿ 21 ಸಕಲ ಧರ್ಮಗಳೆಲ್ಲ ಹರಿಯ ಶಿಖಾಮಣಿಯೆನ್ನಿ ಪ್ರಕಟವಾಗಿ ದೋರುದೇ ಪ್ರತ್ಯಕ್ಷವೆನ್ನಿ 22 ನೇಮನಿತ್ಯ ಇದೇ ಮಹಿಪತಿಯ ಸ್ವಾಮಿಯದೆನ್ನಿ ಪ್ರೇಮದಿಂದ ಒಪ್ಪಿಸಿಕೊಂಬ ದಯಾಳುವೆನ್ನಿ 23
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಸಕಲಸಾಧನವೆನಗೆ ಕೈಸೇರಿತುಮುಕುತಿಯ ಮಾತಿಗೆ ಬಾರದ ಧನವು ಪ. ಸಂಸಾರದಲಿ ಜ್ಞಾನ ಸತಿಸುತರಲಿ ಭಕ್ತಿಕಂಸಾರಿಪೂಜೆಯಲಿ ವೈರಾಗ್ಯವುಸಂಶಯದ ಜನರಲ್ಲಿ ಸಖತನವ ಮಾಡುವೆನುಹಿಂಸೆಪಡಿಸುವೆನು ಜನಸಂಗ ಹರಿ ರಂಗ 1 ವಿಷಯಂಗಳಲಿ ಧ್ಯಾನ ಲೌಕಿಕದಲಿ ಮನನವಶವಲ್ಲದ ಕತೆಗಳಲ್ಲಿ ಮನವುಹಸನಾಗಿ ಎಣಿಸುವ ಹಣಹೊನ್ನಿನ ಜಪವುಬಿಸಿಲೊಳಗೆ ಚರಿಸುವುದದೆÉ ಮಹಾ ತಪವು 2 ಪೀಠ ಪೂಜೆಂಬುವುದು ಲಾಜಚೂರಣವಯ್ಯಮಾಟದ ಪಯೋಧರವೆ ಕಲಶಪೂಜೆಚೂಟಿಯಲಿ ಉದರದ ಯಾತ್ರೆಯೆ ಮಹಾಯಾತ್ರೆ ಬೂಟಕತನದಲಿ ಅನೃತವನು ಪೇಳ್ವುದೇ ಮಂತ್ರ3 ಹೆಂಡತಿಯ ಕೊಂಡೆಯ ಮಾತುಗಳೆ ಉಪದೇಶಚಂಡಕೋಪವೆಂಬೋದಗ್ನಿಹೋತ್ರಪಂಡಿತನೆನಿಸುವುದೆ ಕುವಿದ್ಯ ಪಠನೆಗಳುಕಂಡವರ ಕೂಡೆ ವಾದಿಸುವುದೆ ತರ್ಕವÀಯ್ಯ4 ಓದಿದೆನು ಎಲ್ಲಣ್ಣ ಕಲ್ಲಣ್ಣ ಎನುತಲಿಸ್ವಾಧ್ಯಾಯವು ಎನಗೆ ಪಗಡೆ ಪಂಜಿಸಾಧಿಸಿ ಈ ಪರಿಯ ಧನವನ್ನು ಕೂಡ್ಹಾಕಿಮೋದಿ ಹಯವದನ ನಾ ನಿನ್ನ ಮರೆತೆ 5
--------------
ವಾದಿರಾಜ
ಸಂಕ್ಷಿಪ್ತ ವಿರಾಟಪರ್ವ ಕೇಳು ಜನಮೇಜಯರಾಜ ಭೂಮಿ- ಪಾಲ ಪಾಂಡವರ ಸತ್ಕಥೆಯಪ. ಭೂರಿ ವ- ನಾಳಿಯನು ಸಂಚರಿಸಿ ಸಜ್ಜನ ಕೇಳಿಯಲಿ ವನವಾಸದವಧಿಯ ಕಾಲವನು ಕಳೆಕಳೆದು ಬಂದರುಅ.ಪ. ದರ್ವೀಧರಹಸ್ತನಾಗಿ ಮಹಾ ಪರ್ವತದಂತುರೆ ಮಸಗಿ ನಿರ್ವಹಿಸಿ ಸೂದತ್ವವನು ಸಲೆ ಗರ್ವಿತಾಧಮ ಕೀಚಕನ ಕುಲ ಸರ್ವವನು ಸಂಹರಿಪ ಭೀಮ ಪೆ- ಸರ್ವಡೆದ ಗುರುವರ್ಯ ಬಂದನು 1 ಕಡುಗಲಿ ಕಲಿಮಲಧ್ವಂಸ ಎದ್ದು ನಡೆದು ಬಂದನು ಪರಮಹಂಸ ನಿಡುಕಿ ಮನದಿ ವಿರಾಟರಾಯನ ಪೊಡವಿಗಿಡೆ ಪದ ಕೀಚಕಾಖ್ಯನ ಎಡದ ಭುಜ ಕಂಪಿಸಿತು ಮೂಜಗ ದೊಡೆಯನುಡುಪತಿಕುಲಶಿಖಾಮಣಿ2 ಗಂಗಾದಿ ನದಿಗಳ ತೀರ ಪಟ್ಟ ಣಂಗಳ ಗೈದ ಸಂಚಾರ ತುಂಗಬಲ ಮಲ್ಲರುಗಳನು ಸಲೆ ಸಂಘಟಿಸಿ ಜೀಮೂತವೀರಪ್ಪ ಸಂಗದಲಿ ವೈರಾಟಪುರ ರಾ ಜಾಂಗಣಕೆ ಭದ್ರಾಂಗ ಬಂದನು3 ಇಂತು ಮಲ್ಲರನೆಲ್ಲ ಸದೆದು ಬಲ ವಂತರಿರಲು ನೃಪಗೊಲಿದು ಸಂತಸವ ಬಡಿಸುತ್ತಲಿರಲ್ವಾ ಕುಂತಿತನಯರು ಹರಿಯ ನಾಮವ ಚಿಂತಿಸುತ ದಶಮಾಸ ಕಳೆದಾ ನಂತರದ ವೃತ್ತಾಂತವೆಲ್ಲವ4 ಕಥೆಯಂತೆ ಹಿಂದೆ ರಾವಣನ ಕೆಟ್ಟ ಗತಿಗನುಚರ ಕೀಚಕನ ಸ್ಥಿತಿಯು ದ್ರುಪದಜೆಗಾದ ಮಾನ ಚ್ಯುತಿಗೆ ಕಾರಣನಾದ ಜಡ ದು- ರ್ಮತಿ ಖಳಾಧಮನೊಂದು ದಿನ ನೃಪ ಸತಿಸಭೆಗೆ ಅತಿ ಹಿತದಿ ಬಂದನು5 ಪಾಪಿ ಕೀಚಕನಿಗಿಂತುಸುರಿ ದ್ರುಪದ ಭೂಪಾಲಕನ ಕಿಶೋರಿ ಶ್ರೀಪತಿಯ ನಾಮವನು ಸ್ಮರಿಸುತ- ಲಾ ಪತಿವ್ರತೆ ತೊಲಗಲಂಗಜ ತಾಪತಪ್ತಾಂತಃಕರಣ ನಾ ಪರಿಯ ಮತಿ ವ್ಯಾಪಿಸಿದನು6 ಲಾಲಿಸಿ ಮಾಲಿನಿವಚನ ತೋಷ ತಾಳಿದ ದುರ್ಗುಣಸದನ ಕಾಲಪಾಶದಿ ಬಿಗಿವಡೆದು ಹೇ- ರಾಳ ಮುದಕೀಲಾಲ ಸಲೆ ಕ- ಲ್ಲೋಲಜಾಲದಿ ಮುಳುಗಿ ನರ್ತನ ಶಾಲೆಗಾಗಿ ಕರಾಳ ಬಂದನು7 ಮಥಿಸಿ ಕೀಚಕನ ಮಂಟಪದಿ ದ್ರುಪದ ಸುತೆಗೆ ತೋರಿಸಲತಿ ಮುದದಿ ಸತಿಶಿರೋಮಣಿ ಕಂಡು ಮನದೊಳ- ಗತುಳ ಹರುಷವನಾಂತು ಸರ್ವೋ ನ್ನತಭುಜನ ಚುಂಬಿಸಿದಳು ಪತಿ ವ್ರತೆಯರ ಶಿರೋರತುನೆ ಪಾವನೆ8 ಇತ್ತ ವಿರಾಟನಗರದ ಸರ್ವ ವೃತ್ತಾಂತವೆಲ್ಲವ ತಿಳಿದ ಧೂರ್ತ ದುರ್ಯೋಧನ ದುರಾಗ್ರಹ ಚಿತ್ತಗ್ರಹಿಸಿದ ಕಾರ್ಯಕಾರಣ ವೃತ್ತಿಯಲ್ಲಿ ಪಾಂಡವರು ನಿಜವೆಂ- ದಾಪ್ತಜನರೊಳು ವಿಸ್ತರಿಸಿದನು9 ಕರ್ಣ ದ್ರೋಣ ಕೃಪಾ ದ್ಯರು ಕೂಡಿ ಕುಜನಪ್ರವೀಣ ಪೊರಟ ಪರಮೋತ್ಸಾಹ ಸಾಹಸ ಭರತಿ ಕೌರವರಾಯ ಮತ್ಸ್ಯನ ಪುರವರ ಸಮೀಪದಿ ಸುಶರ್ಮನ ಕರೆದೊರೆದ ಭೂವರ ನಿರ್ಧರ10 ನುಡಿಯ ಕೇಳುತಲಿ ಸುಶರ್ಮ ನಿಜ ಪಡೆಯ ನೆರಹಿ ವೈರಿವರ್ಮ ದೃಢಕರಿಸಿ ದಿನಮಣಿಯು ಪಶ್ಚಿಮ- ಕಡಲ ಸಾರುವ ಸಮಯ ಗೋವ್ಗಳ ಪಿಡಿದು ಗೋಪರ ಕೆಡಹಿ ಬೊಬ್ಬಿ- ಟ್ಟೊಡನೊಡನೆ ಪಡಿಬಲವನರಸಿದ11 ಹಾರಿಸಿದನು ರಥ ಪಾರ್ಥ ನರ ನಾರಿವೇಷದ ಪುರುಷಾರ್ಥ ತೋರಿಸುವೆನೆಂಬುತ್ಸಾಹದೊಳು ಬ್ಬೇರಿ ಮನದೊಳು ಕೃಷ್ಣನಂಘ್ರಿಸ- ರೋರುಹಕೆ ಮಣಿದುತ್ತರನ ಸಹ ಸೇರಿ ನಗರದ್ವಾರ ದಾಟಿದ12 ಭೀತಿಯ ಬಿಡು ಬಾರೆಂದು ಪುರು ಹೂತಸುತನು ಎಳತಂದು ಘಾತಿಸುವೆ ರಿಪುಬಲವನೆಂದು ವ- ರೂಥದಲಿ ಕುಳ್ಳಿರಿಸಿ ನೃಪತನು ಜಾತಸಹ ಪಿತೃವನದ ಮಧ್ಯ ಶ- ಮೀತರುವಿನೆಡೆಗೋತು ಬಂದರು13 ಇಂತು ತಿಳಿಸುತಲರ್ಜುನನು ಬಲ ವಂತನು ಧನುಶರಗಳನು ತಾಂ ತವಕದಿಂ ಧರಿಸಿ ವಿಜಯ ಮ- ಹಾಂತ ವೀರಾವೇಶಭೂಷಣ ವಾಂತು ಶಂಖನಿನಾದದಿಂ ರಿಪು ತಿಂಥಿಣಿಯ ಭಯಭ್ರಾಂತಗೊಳಿಸಿದ 14 ಹೂಡಿ ಬಾಣವನುರ್ಜುನನು ಚೆಂ- ಡಾಡಿದ ರಿಪುಬಲವನ್ನು ಮೂಢ ದುರ್ಯೋಧನನ ಕಣೆಗಳ ಜೋಡಣೆಗಳಿಂ ಬಿಗಿದು ತನ್ನೋಶ ಮಾಡಿಕೊಂಡನು ಗೋಪಗೋವ್ಗಳ ನಾಡಲೇನದ ಪ್ರೌಢತನವನು15
--------------
ತುಪಾಕಿ ವೆಂಕಟರಮಣಾಚಾರ್ಯ
ಸಂಕ್ಷೇಪ ರಾಮಾಯಣ ಶ್ರೀಜಾನಕೀಮನೋಹರ ಚರಿತೆಯನು ಮುನಿ ರಾಜವಾಲ್ಮೀಕರಿಗೆ ನಾರದಂಪೇಳ್ದನದು ರಾಜೀವನೇತ್ರ ಪೇಳಿಸಿದಂತೆ ಸಂಕ್ಷೇಪದಿಂ ಪೇಳ್ವೆನಾಲಿಸುವುದು ವರಮುನಿಯಯಾಗಮಂ ಕಾಯ್ದುತಾಟಕಿಯಸಂ ಮುರಿದು ಭೂಸುತೆಯ ಕರಪಿಡಿದಯೋಧ್ಯಾಪುರಿಗೆ ಬರುತ ಭಾರ್ಗವನ ಗರ್ವವಸೆಳೆದು ತಂದೆಯಂ ಹರುಷಪೊಂದಿಸಿದಂರಘುದ್ವಹಂ ರಾಮಚಂದ್ರನು ಬಾಲಕಾಂಡದಲಿ 1 ಮಾತೆಯನುಡಿಗೆ ಪಿತನಭಾಷೆಯಂ ಸಲಿಸಲ್ಕೆ ತಾತಮ್ಮಲಕ್ಷ್ಮಣ ಧರಾತ್ಮಜೆಯರ್ಸಹಿತ ಪ್ರ ಭರತಬಂದು ಜಾತಂಗೆ ಪಾದುಕವನಿತ್ತು ಮನ್ನಿಸಿಮುನಿ ರಘುವರನಯೋಧ್ಯಾಕಾಂಡದಿ 2 ದಂಡಕಾರಣ್ಯದಿ ವಿರಾಧನಂ ಸಂಹರಿಸಿ ಚಂಡಿ ಶೂರ್ಪಣಖಿ ಕಿವಿಮೂಗನಂ ಕೊಯಿಸಿಯು ಮಾಯಾಮೃಗದವ್ಯಾಜದಿಂ ರಾವಣಂ ಕೊಂಡೊಯ್ಯೆಸೀತೆಯಂಅರುಣಸುತನಿಂದಕೋ ದೀಕ್ಷಾಚಾರ್ಯ ಕೇಳ್ದಸತಿವಾರ್ತೆಯಂ ಕಂಡು ಶಬರಿಯನು ಪಂಪಾತಟಕೆಬಂದ ನಾರಣ್ಯಕಾಂಡದೊಳ್ರಾಮನು 3 ಮರುತಾತ್ಮಜನಕಂಡು ಸುಗ್ರೀವಸಖ್ಯವಾ ಚರಿಸಿ ವಾಲಿಯ ಮುರಿದು ಕಪಿರಾಜ್ಯದೋಳ್ ದಿವಾ ಸೀತೆಯಕುಶಳವಂತಹುದೆನೆ ತೆರಳಲು ಚತುರ್ದಿಕ್ಕಿಗಾಗವಾನರರುಮೂ ವರುಬಂದುಪೇಳ್ದರೆಲ್ಲಿಯು ಕಾಣೆವೆಂದು ವನ ಕಿಷ್ಕಿಂಧಕಾಂಡದಲಿ 4 ಶರಧಿಯದಾಟಿ ಲಂಕೆಯ ಪೊಕ್ಕುಲಂಕಿನಿಯ ಮುರಿದು ಪುರವೆಲ್ಲಮುಂ ತಿರುಗಿವನದೊಳಗೆರಘು ವನಭಂಗಮಂಗೈಯ್ಯುತ ಪರಮ ಸಂಭ್ರಮದೊಳಕ್ಷಾದ್ಯರಂಕೊಂದುವಿಧಿ ಶರಕೆ ಮೈಗೊಟ್ಟುಲಮಂಕಾಪುರವಸುಟ್ಟುಬಂ ಪತಿಗೆಸುಂದರಕಾಂಡದಲ್ಲಿ ಹನುಮಾ 5 ವನಧಿಯೊಳ್ಸೇತುವೆಯಗಟ್ಟಿ ಧುರದೊಳಗೆರಾ ವಣ ಕುಂಭಕರ್ಣಾದ್ಯರೆಲ್ಲರಂ ಸದೆದುತ ಪೊಗಳಲು ಜನಕನಂದನೆಯ ಪಾವಕನಿಂ ಪರಿಗ್ರಹಿಸಿ ಘನಪುಷ್ಪಕವನೇರಿಬರುತ ವಹಿಲದಲಿ ಭರ ಯುದ್ಧಕಾಂಡದಲಿ 6 ಪರಮಧರ್ಮದಲಿ ರಾಜ್ಯವಾಳುತಲಿ ಕಲಿರಾಮಭೂ ವರನು ಹನ್ನೊಂದುಸಾವಿರಲವಣನಂ ಪುತ್ರರಿಗೆ ರಾಜ್ಯವಿತ್ತು ಪುರಜನವ ಪಶುಪಕ್ಷಿ ಕೀಟವ್ರಜ ಸಹಿತ ತೆರಳಿದಂದಿವಿಗೆದೇವರ್ಕಳರಳಿನಮಳೆಯ ಸುರಿದು ಜಯಜಯವೆಂದು ಪೊಗಳಿದರುಹರಿ ಯನುತ್ತರಕಾಂಡದಲಿ ತಿಳಿವದು 7 ಇಪ್ಪತ್ತುನಾಲ್ಕುಸಾವಿರ ಶ್ಲೋಕ ಕಾಂಡಗ ಳೊಪ್ಪುವುದು ಸಪ್ತವೈನೂರುಸರ್ಗಗಳೆಂದು ವಾಲ್ಮೀಕಿ ಮುನಿವಿರಚಿಸಿದನು ತಪ್ಪದೇ ಪಠಿಸುವಗಮುದಿನಂ ಗಾಯತ್ರಿ ಇಪ್ಪತ್ತು ನಾಲ್ಕುಲಕ್ಷದ ಜಪದಫಲಬಹುದು ಚರಿತಸಜ್ಜನ ಕಲ್ಪವೃಕ್ಷವಿದುವೆ 8 ಇಂತಪ್ಪ ಮಹಿಮೆಯುಳ್ಳೀಕಥೆಯ ಸಂಕ್ಷೇಪ ದಿಂ ತರಳನಾಂ ಪೇಳ್ದೆತಪ್ಪಿದ್ದಡೆಯು ತಿದ್ದಿ ಸೇವಕಂಸೇವ್ಯನವನು ಎಂತಾದಡೆಯು ಹರಿಯನಾಮಾಮೃತದರುಚಿಮ ಹಾಂತರರಿವರು ದುರ್ಜನರು ನಿಂದಿಸಿದಡೇನು ಸಂಕ್ಷೇಪರಾಮಾಯಣಂ 9
--------------
ಗುರುರಾಮವಿಠಲ
ಸಖಿ ಕೇಳೇ ಇನ್ನು ಹರುಷದ ಮಾತಾ| ಸಕಲ ಜನರಿಗೆ ಆನಂದ ವೀವಾ| ಪ ಇಂತೆಂದು ಹರಿಯು ನಾನಾಪರಿ ವಿರಹದ| ಸಂತಾಪ ಮಾತವ ನುಡಿಯಲು ಕೇಳಿ| ಅಂತರಂಗದ ಕೋಪವಬಿಟ್ಟು ಎದ್ದು|ಅ| ನಂತನ ಬಿಗಿದಪ್ಪಿದಳು ಅಂಬುಜಾಕ್ಷಿ 1 ಲಲಿತಾಂಗಿ ಆಲಿಂಗನವ ನೀಯೇ ಹರಿಗಾಗಾ| ಒಲಿದು ಉಕ್ಕೇರಿತು ಆನಂದ ಉದಧಿ| ಸತಿ ಮಾತಾಡುವ ದೇವ ಶ್ರೀ| ಲಲನೇಯಾ ಸದ್ಬುವನೆಯಾ ಪೂರಿಸಿದನು 2 ಈ ಪರಿಯಾಡಿದ ಶ್ರೀ ಹರಿ ಚರಿತೆಯಾ| ನಾ ಪೇಳಿದುದು ಭಾವ ಭಕುತಿಯಲಿಂದಾ| ಆ ಪದಿಂದಲಿ ಕೊಂಡಾಡುವ ಮನುಜನ| ತಾ ಪಾಲಿಸುವಾ ಮಹಿಪತಿ ಸುತ ಪ್ರೀಯಾ3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಸಖಿ ಬಾರೆ ಬಾರೆ ಬೆಡಗತೋರೆ ನಡೆದು ಬಾರೆಲೆ ಸುಖದ ಸುಗ್ಗಿಯಿದೆಂದು ಸಾರೆ ಭ್ರಮರಕುಂತಲೆ ಪ. ಜಲಜಮುಖಿಯೆ ನಲಿದುಬಾರೆ ಕೋಲವಾಡುವ ಕಲಕೀರಕಂಠದಿಂದ ನಾವು ನಲಿದು ಪಾಡುವ 1 ಇಳೆಯ ಸುಖದ ಗೆಳೆಯ ಬಂದ ಬಳಿರೆ ಬಾಪುರೆ ಬೆಳಗುತಿರ್ಪ ದೀಪಾವಳಿಯೆ ಬಲಿಯ ಕೀರ್ತಿಯೆ 2 ವಿಜಯಯಾತ್ರೆಗೆಂದು ಹರಕೆಯೆತ್ತಿ ಭರದಲಿ ಅಜಸುರಾರ್ಚಿತಾಂಘ್ರಿಯುಗನ ಭಜಿಸಿಮುದದಲಿ 3 ನೀರನೆಮಗೆ ಮಾರತಾತನೆಂದು ಸಾರುವಾ ಶಾರದಾಗಮ ಸಮಯವಿದನು ಸಾರಿಯಾಡುವಾ 4 ಶೇಷಶೈಲಶಿಖರ ಧಾಮನೆಮ್ಮ ಮೆಚ್ಚುವೋಲ್ ಮೀಸಲೆತ್ತಿಯೊಸಗೆ ಪೇಳಿ ಪೊಸತಿದೆನ್ನುವೋಲ್ 5
--------------
ನಂಜನಗೂಡು ತಿರುಮಲಾಂಬಾ
ಸಖಿಯೆ ಬರುವದೀಗಲೆ ಪ ಕರಿದಂತ ರಚಿತ ಚರಣ ವರಮೌಕ್ತಿಕ ವಿಲಾಸ ಪರಿಶೋಭಿತ ಪರಿಯಂಕಕೆ ಬರುವದೀಗಲೆ1 ಮಂದರಧರ ಸಮೀರ ವಂದಿತನಂದ ಕುವರÀ ಕಂದರ್ಪ ಪಿತನ ಸುಖ ಶಯನಕೆ ಬರುವದೀಗಲೆ 2 ಏಣಾಂಕ ಬಿಂಬವದÀನೆ ಸುಶ್ರೋಣಿ ಮಂದಗಮನೆ ಶ್ರೀ ನಾರಸಿಂಹನ ವರಮಂಚಕೆ ಬರುವದೀಗಲೆ3
--------------
ಕಾರ್ಪರ ನರಹರಿದಾಸರು
ಸಖ್ಯವ್ಯಾಕೆ ಮುಖ್ಯ ಸ್ವಹಿತ ಹೇಳದನಕ |ಮಕ್ಕಳು ಯಾಕೆ ಪಿತೃಗಳ ಆಜ್ಞೆಯ ನಡೆಸದನಕ ಪ ದಾತನ್ಯಾಕೆ ಬಯಕೆ ಪೂರ್ಣ ಮಾಡದನಕ | ಬರಿ |ಮಾತು ಯಾಕೆ ಸ್ಥಿತಿಯ ಲೇಶ ಇಲ್ಲದನಕ 1 ಸಂತನ್ಯಾಕೆ ಶಾಂತಿ ನೆರಳು ಹಿಡಿಯದನಕ | ತನು |ಕಂಥೆಯಾಕೆ ಶಿವಪದಕ್ಕೆರಗೋ ತನಕ 2 ನೇಮವ್ಯಾಕೆ ಹೃದಯ ಶುದ್ಧವಾಗದ ತನಕ | ಶಿವನ |ನಾಮವ್ಯಾಕೆ ನಾಮರೂಪ ಅಳಿಯದ ತನಕ 3 ತುಂಬಿ ತುಳುಕದ ತನಕ 4 ಜಾಣನ್ಯಾಕೆ ಸಮಯ ಉಚಿತ ಅರಿಯದ ತನಕ | ಬರಿಗಾನವ್ಯಾಕೆ ಸ್ವರದ ಲಯವ ಧರಿಸದ ತನಕ 5 ಧರ್ಮವ್ಯಾಕೆ ಸಮಯ ಕಾಲಕ ಒದಗದ ತನಕ | ಸ- |ತ್ಕರ್ಮವ್ಯಾಕೆ ದಂಭತನವು ದಹಿಸದನಕ 6 ಧನ ವಿದ್ದ್ಯಾತಕೆ ಶರಣರಡಿಗೆ ತರದನ್ನಕ | ಈಮನ ವಿದ್ದ್ಯಾಕೆ ತನ್ನ ಉಗಮ ಸೇರದನ್ನಕ7 ಶಿಷ್ಯನ್ಯಾತಕೆ ಗುರುಗಳ ಹೃದಯ ತಿಳಿಯದನ್ನಕ | ಸರಸಭಾಷ್ಯವ್ಯಾತಕೆ ಶ್ರುತಿಯ ಗರ್ಭ ಉಸುರದನ್ನಕ 8 ಜ್ಞಾನವ್ಯಾಕೆ ಜ್ಞೇಯಗುರಿತವರಿಯದನಕ | ಬರಿ |ಧ್ಯಾನವ್ಯಾಕೆ ಚಿತ್ತವೃತ್ತಿ ಮರೆಯ ದನಕ 9 ಆರಾಮವ್ಯಾಕೆ ದುಃಖಸೀಮಿ ದಾಂಟದನಕ | ಶಿ- |ವರಾಮನ್ಯಾಕೆ ಪೂರ್ಣ ಸುಖದೊಳಾಡದ ತನಕ 10
--------------
ಶಿವರಾಮರು