ಒಟ್ಟು 15641 ಕಡೆಗಳಲ್ಲಿ , 133 ದಾಸರು , 7446 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ವಾದೀಂದ್ರ ಗುರುರಾಜ ನಿನ್ನ ಪಾದವ ತೋರಿಸಯ್ಯಾ ವಾದೀಂದ್ರ ಗುರು ನಿನ್ನ ಪಾದವ ನಂಬಿದೆ ಮೋದವÀ ಕೊಡುವುದು ಮದಗಳೋಡಿಸಿ ಪ ಉಪೇಂದ್ರ ಕರಕಮಲಜಾತ ಪಾಪಗಳೋಡಿಸಯ್ಯ ಪಾಪರಾಶಿಯ ಸುಟ್ಟು ದ್ರೌಪದೀವರದನ ಕೃಪೆಯಾಗುವಂತೆ ಮಾಡೋ ಶ್ರೀಪತಿ ಪ್ರಿಯನೆ 1 ಮೂಲರಾಮರ ಪಾದಪದುಮದಿ ಅಳಿಯಂತಿಪ್ಪ ಧೀರ ಶೀಲಾದಿ ಗುಣವಿತ್ತು ಶ್ರೀ ಲೋಲನಂಘ್ರಿಯ ಮಲಿನ ಮನವ ಕಳದು ಪೊಳೆಯುವಂತೆ ಮಾಡೋ2 ನಿತ್ಯ ಭಂಗಗಳೋಡಿಸುವಿ ಶೃಂಗಾರ ತುಳಸಿಯ ಮಂಗಳ್ಹಾರವ ಧರಿಸಿ ತುಂಗಮಹಿಮ ನರಸಿಂಗ ಮೂರುತಿ ತೋರೊ 3
--------------
ಪ್ರದ್ಯುಮ್ನತೀರ್ಥರು
ವಾದ್ಯವಸಿದನೀನವಧರಿಸುವೇದ್ಯದ ವಿದ್ಯವ ವ್ಯವಹರಿಸು ಪಹೊಂಕದ ಶಂಖದ ಪರಿಪರಿ ಧ್ವನಿಗಳಭೊಂಕನೆ ಮೊರೆಯುವ ಭೇರಿಗಳಅಂಕೆಯ ಮೀರಿದ ಆ ಪಟಹಂಗಳಶಂಕಿಸದೂದುವ ಸರಳೆಗಳ 1ಚರ್ಮದ ಬಂಧದ ಚರ್ಚಿತ ಘೋಷದಕರ್ಮಪ್ರದಮುಖ ಶುಭಕರ ಸ್ವರದನಿರ್ಮಲಕಾಂಸ್ಯದ ನಿತ್ಯನಿನಾದದಧರ್ಮದಿ ವೇಣುವು ಧ್ವನಿ ಮಾಡುವ 2ತುಂಬುರ ಮುಖ್ಯದ ತಂತ್ರಿಗಳ ರವವುಬೆಂಬಿಡದೊದಗಲು ಬಹು ವಿಧವುತುಂಬಿರೆ ತಿರುಪತಿನಾಥಗೆ ಯೋಗ್ಯವುಯೆಂಬಿವಕೊಡೆಯ ನೀ ವೆಂಕಟಪ್ರಭುವು3ಓಂ ದುರ್ಯೋಧನ ಕುಲಾಂತಕಾಯ ನಮಃ
--------------
ತಿಮ್ಮಪ್ಪದಾಸರು
ವಾನರ ವಂದ್ಯ ವಿಠಲ | ನೀನೆ ಪೊರೆ ಇವಳಾ ಪ ಗಾನ ಲೋಲನೆ ದೇವ | ಮೌನಿ ಕುಲ ಪೂಜ್ಯಾ ಅ.ಪ. ದಾಸತ್ವ ದೀಕ್ಷೆಯನು | ಆಶಿಸುವಳೀ ಕನ್ಯೆವಾಸವ ವಂದಿತನೇ | ವಾಸುದೇವಾಖ್ಯಾವಾಸನೆಯ ತೆರದಿ ಉಪ | ದೇಶವಿತ್ತಿಹೆನೆಯ್ಯಪೋಷಿಸೋ ಬಿಡದಿವಳ | ಹೃಷಿಕೇಶ ಹರಿಯೇ 1 ಸತಿ ನಿನ್ನ ಸ್ಮøತಿಯಾ |ಒಲಿಸಿ ಸರ್ವದ ನಿನ್ನ | ಪೊಳೆವ ಮಹಿಮೆಗಳನ್ನಒಲಿಸುವಂದದಿ ಮಾಡೊ | ಬಲ ಭೀಮ ವಂದ್ಯಾ 2 ಪರಿ ಪೂರ್ಣ | ಅಕುಟಿಲಾತ್ಮಕನೇಮುಕುತಿದಾಯಕ ಹರಿಯೆ | ಭಕುತ ವತ್ಸಲ ದೇವನಿಖಿಲ ಜಗವ್ಯಾಪಿ ಗುರು | ಗೋವಿಂದ ವಿಠಲಾ 3
--------------
ಗುರುಗೋವಿಂದವಿಠಲರು
ವಾಮ ಭಾಗದಿ ಲಕ್ಷ್ಮೀದೇವಿಯುಭೂಮಿ ದೇವಿಯು ದಕ್ಷಭಾಗದಿಶ್ರೀ ಮನೋಹರನಿಹನು ಮಧ್ಯದಿಪ್ರೇಮದಲಿ ನಮಿಸು 1 ನಮಿಸು ಕೃದ್ದೋಲ್ಕ ವಾಸುದೇವರಸ್ಮರಿಸು ಕೇಶವದ್ವಿತಿ ಮತ್ಪರಸ್ಮರಿಸು ಕೂರ್ಮಾನಂತ ಶಕ್ರರಸುರಿಪ ದಿಶಿಯಲ್ಲೀ 2 ಸ್ಮರಿಸು ಸಹಸ್ರೋಲ್ಕ ಮಾಯರಶಿರಿವರಾವನಿ ಧರನ ವಾರುಣಿಸ್ಮರಹರಾಂಚಿತನು ವಹ್ನಿಯಶರನ ಕೋನದಲಿ 3 ನಮಿಸು ಮಹೋಲ್ಕ ಸಂಕರ್ಷಣನನಮಿಸು ಗೋವಿಂದ ವಿಷ್ಣು ನರಹರಿನಮಿಸು ವಾಮನ ಬ್ರಹ್ಮ ಯಮರನುಕ್ರಮದಿ ದಕ್ಷಿಣದಿ 4 ಸ್ಮರಿಸು ಸಹಸ್ರೋಲ್ಕ ಜಯರನುಸ್ಮರಿಸು ಮಧುಹನ ಪರಷುರಾಮನಸರಸಿಜಾಸನ ಸತಿಯು ನಿಋತಿಯತಿಋತಿ ಕೋಣದಲಿ 5 ವೀರ ಉಲ್ಕ ಪ್ರದ್ಯುಮ್ನ ತ್ರಿವಿಕ್ರಮಸಾರ ರಘುವರ ವೃಷ್ಣಿನಾಥಸ-ಮೀರ ವರುಣರ ಪೂಜಿಸೂವುದುವಾರಿ ದಿಶೆಯಲ್ಲೀ 6 ನುತಿಸು ಸಹಸ್ರೋಲ್ಕ ಕೃತಿಯರನತಿಸು ಶ್ರೀಧರ ಬುದ್ಧಿ ಭಾರತಿಸತತ ಗಮನರ ವಾಯು ಕೋಣದೊಳತಿ ಸುಭಕ್ತಿಯಲಿ 7 ದ್ಯುಲ್ಕ ಅನಿರುದ್ದೇಂದ್ರಿಶೇಯರನಳಿನನಾಭನ ಕಲ್ಕಿ ನಂತರಸಲಿಲ ಮೂರುತಿ ರೋಹಿಣೇಶರಒಲಿಸು ಉತ್ತರದೀ 8 ಸ್ಮರಿಸು ಸಹಸ್ರೋಲ್ಕ ಶಾಂತರಸ್ಮರಿಸು ದಾಮೋದರನ ವಿಶ್ವನಗಿರಿಜೆಯನು ಪಾರ್ವತೀ ಪತಿಯಹರನ ಕೋಣದಲಿ 9 ವಾರಣಾಸನ ಮೊದಲು ನಿಜಪರಿವಾರ ಸಹಿತದಿ ಸರ್ವದಿವಿಜರುಮಾರನಯ್ಯನ ಸುತ್ತಲೂ ಪರಿ-ಚಾರರಾಗಿಹರು 10 ಈಸು ಪೀಠಾವರಣ ತ್ರಿದಿವನಿವಾಸಿಗಳ ಮಧ್ಯದಲಿ ಸಂತತವಾಸುದೇವನ ಪೂಜಕೇಶನಿ-ವಾಸ ಪೊಂದುವರು 11 ಗಿರಿಯೊಳಿರುತಿಹ ವೆಂಕಟೇಶನಸರಸ ಪೀಠಾವರಣ ಪೂಜೆಯಕರಡಿ ಮಗಳಿಗೆ ಜೈಗಿಷವ್ಯನುಅರುಹಿದನು ಮುದದಿ 12 ಗರುಡನಿಗೆ ಶ್ರೀಕೃಷ್ಣ ಪೇಳಿದಹರಿಯ ಪೀಠಾವರಣ ಪೂಜೆಯಸರ್ವ ಜನರಿಗೆ ತಿಳಿಯಲೋಸುಗವಿರಚಿಸಿದೆ ನಾನೂ 13 ಇಂದಿರೇಶನು ಎನ್ನವಾಣಿಲಿನಿಂದು ಮಾಡಿದನೀ ಸುಗ್ರಂಥವಲೆಂದು ಆತನ ಪಾದಕಮಲದ್ವಂದ್ವಕೊಪ್ಪಿಸುವೆ 14
--------------
ಇಂದಿರೇಶರು
ವಾಮನಾವತಾರ ವಾಮನನನು ನೆನೆ ಹೇ ಮನವೇ ವಟು ವಾಮನನನು ನೆನೆ ಹೇ ಮನವೇ ಕಾಮಪೂರಣ ಲಕ್ಷ್ಮೀಧಾಮನ ಮರೆಯದೆ ಪ. ಶ್ಯಾಮಸುಂದರ ಸುರ ಪ್ರೇಮದಿ ಕಶ್ಯಪ ಧಾಮವಾ ಬೆಳಗುತ ಬಂದ ಭೂಮಿಯನಳದ ಸುತ್ರಾಮಗಿತ್ತ ನಿ ಸ್ಸೀಮ ಸಾಹಸ ಗೋವಿಂದ ನೀ ಸಲಹೆಂದು 1 ಬಲಿಯ ದೃಢಕೆ ಮೆಚ್ಚಿ ಸಲಹುತ ಮುಂದಿನ ವಲಭಿದಾಗುವೀ ನೀನೆಂದ ಕಲುಷಾಪಹಪದಕಮಲವ ಶಿರದೊಳು ನಿಲಿಸಿ ಬಾಗಿಲೊಳು ನಿಂದವ ನೀನೆಂದು 2 ಶ್ರೀ ಭೂಮಿಯುತ ಮುಕ್ತಾಭರಣಾಶ್ರಿತ ಸೌಭಾಗ್ಯಕರ ಲೀಲಾ ಆಭೀರರ ಕನ್ನೆಯರೊಲಿಸಿದ ಪದ್ಮ- ನಾಭ ವೆಂಕಟಪತಿ ಪರಮ ಪುರುಷನೆಂದು 3
--------------
ತುಪಾಕಿ ವೆಂಕಟರಮಣಾಚಾರ್ಯ
ವಾಯ ದೇವರ ಮಹಿಮಾ ವರ್ಣನೆ ಮೂರವತಾರ , ಷಟ್ಪದಿ ಶ್ರೀರಮೇಶ ವಿಧೀರ ವಿಪವೃತ್ರಾರಿ ವಿನುತ ಸರ್ವಾಧಾರ ನಿರುಪಮನೆ ಸ್ವತಂತ್ರಗುಣಾರ್ಣವ ಪ್ರಭುವೇ | ಪತಿ ಓಂಕಾರ ವ್ಯಾಹೃತಿ ವಾಚ್ಯ ಸರ್ವಪ್ರೇರಕ ಬಲಸುಭಾಸಕ ಹರಿಯೆ ವಾಗ್ರಸನೆ ನಮಿಪೆ 1 ಆಪ್ತನೆಂದರೆ ಪ್ರಾಣ ಸರಿ ಪರಮಾಪ್ತ ಹರಿಯ ಯಥಾರ್ಥಜ್ಞಾನ ಪ್ರಾಪ್ತಿ ಮಾಡಿಸಿ ವಿಷ್ಣು ಕರುಣವ ಕೊಡಿಸುವನು ತಾನು | ಆಪ್ತ ನೆನ್ನೆಯಥಾರ್ಥ ಪೇಳುವ ಮತ್ತೆ ನಿಶ್ಚಯ ಜ್ಞಾನವುಳ್ಳವ ಶಕ್ತ ಕರುಣ ಪಟುತ್ವಯುತನಿರ್ವಂಚನೆಗಳಿಂದ 2 ಶಿಷ್ಯ ವಾತ್ಸಲ್ಯ ಯುತ ಗುರುಸರಿ ವಿಶ್ವ ಜನಕನ ಪ್ರಥಮ ಭಕ್ತಶ್ವಾಸಗಿಂತಲು ಬೇರೆಯವನಿಲ್ಲ ಪವಮಾನನವ | ದೋಷ ಸಂಶಯ ರಹಿತ ಹರಿ ವಿಶ್ವಾಸ ಪಾತ್ರ ವಿಶೇಷ ಮಹಿಮಸುರಾಶ್ರಯ ನಿವನು ವಂಶನೆ ನಿಸುವ ಸೂತ್ರಗಾನಮಿಪೆ 3 ಯಾವ ಜ್ಞಾನ ಬಲ ಸ್ವರೂಪ ಸುದೇವ ಕ್ರೀಡಾದಿ ಗುಣಯುತ ಭವನಾವಿಕ ಪ್ರಭು ವಾಯುವಿನಗುಣ ಚರಿತೆ ವೃಂದಗಳ | ಪಾವನ ಬಳಿತ್ಥಾದಿ ಶೃತಿಗಳು ಸಾವಧಾನದಿ ಪೊಗಳುವವೊ ಆಭಾವಿ ಬ್ರಹ್ಮನ ಮೂಲ ರೂಪವುಜ್ಞಾನ ಬಲಮಯವು 4 ಮೂಲ ರಾಮಾಯಣ ವಿಶೇಷವ ಪೇಳುವ ಹನುಮನೇ ಪ್ರಥಮ ನಿಹಖೂಳ ದಿತಿ ಜನ ಸೈನ್ಯ ಮಾರಕ ಭೀಮ ನೆರಡೆನ್ನಿ | ಶೀಲ ಸಖಗಳ ನೀವ ಶಾಸ್ತ್ರವ ಪಾಲಿಸಿದ ಗುರು ಮಧ್ವರಾಯರೆ ಮೂಲ ಮುಖ್ಯ ಪ್ರಾಣ ದೇವನ ಮೂರನೆಯ ರೂಪ 5 ಪ್ರಾಣ ನೀತ್ರಯ ರೂಪಗಳು ಸಮವೆನ್ನುವದು ಸರ್ವ ವಿಷಯದಿ ಮುಕ್ಕಣ ಪ್ರಮುಖರ ಜ್ಞಾನ ದಾತೃವಿಗಿನ್ನು ಸಮವುಂಟೆ | ಜ್ಞಾನ ವಾಚಕ ಹನುಮ ಶಬ್ದವು ಪೂರ್ಣ ಹರಿ ಸಂದೇಶವೈದನು ಜಾನಕಿಗೆ ನಿರ್ದೋಷ ವಾಕ್ಯಗಳನ್ನು ಧೀಮಂತ 6 ಪಂಚರಾತ್ರಾಗಮ ಪುರಾಣ ವಿರಂಚಿ ಜನಕನ ತೋರ್ಪವೇದವು ವಂಚಿಸದ ಇತಿಹಾಸಗಳು ಕೂಡುತಲಿ ಸಪ್ತಗಳ | ಮಿಂಚಿಸುತ ಸುಜ್ಞಾನ ಪಾಪದ ಸಂಚಯ ತರಿವ ಕಾರಣದಿ ಬಲಿವಂಚಕನ ಭಕ್ತರು ಕರೆಯುವರು ಸಪ್ತಶಿವ ವೆಂದು7 ಶಾಸ್ತ್ರ ವಚನಕೆ ಮಾತೃ ವೆಂಬರು ಸಪ್ತ್ರ ಶಿವಕರ ಮಾತೃಗಳ ಧರಿಸಿಪ್ಪ ನಿವನೆಂದು | ಖ್ಯಾತನಾಗಿಹ ಭೀಮ ನಾಮದಿ ತೀರ್ಥವೆನ್ನಲು ಶಾಸ್ತ್ರವಿದಿತವು ಮತ್ತೆ ಮಧುವೆನೆ ಸುಖವು ಮುಕ್ತಿಯನೀವ ಶಾಸ್ತ್ರವನು 8 ಇತ್ತ ದೇವನೆ ಮಧ್ವನೆಂಬರು ಸುತ್ತುತೀತ್ರಯ ನಾಮದರ್ಥವ ನಿತ್ಯ ತಿಳಿಯುತ ಪಠಿಸಿ ಪಾಡಲುವಾಯು ದೇವನನು | ಭಕ್ತ ಬಾಂಧವನಾತ ವಲಿಯುತ ತತ್ವವೇತ್ತನ ಮಾಳ್ವ ನಿಶ್ಚಯ ಭೃತ್ಯನಾನೆಂತೆಂದು ಮಧ್ವರ ಸಾರಿ ಭಜಿಸುತಿರಿ9 ಪ್ರೌಢ ಮಧ್ವಗೆ ಪೂರ್ಣ ಪ್ರಜ್ಞನೆ ಈತ ಶ್ರುತಿ ಸಿದ್ದ | ಬೀಡು ಮಾಡಿಹ ವಿದ್ಯೆ ನೂಕುತ ತೊಂಡ ನೆಂದಿವರಡಿಗೆ ಬೀಳಲು ಪಾಂಡುರಂಗನ ಬಿಚ್ಚಿ ತೋರುವ ಗೋ ಸಮುದ್ರದಲಿ10 ಏನ ಪೇಳಲಿ ಏನಪೇಳಲಿ ಜ್ಞಾನನಿಧಿ ಸರ್ವಜ್ಞ ಗುರುವರ ತಾನು ಗೈದ ಮಹೋಪಕಾರವ ಮುಕ್ತಿಯೋಗ್ಯರಿಗೆ | ಜ್ಞಾನ ಬಾಹುದೆ ಬಿಟ್ಟರೀತನ ಶೂನ್ಯವೆ ಸರಿ ಎಲ್ಲ ಆತಗೆ ಮನ್ನಿಸುವನೆ ಅನನ್ಯವನು ಹರಿ ಶರಣು ಆಚಾರ್ಯ 11 ಈತನೇ ಆನಂದ ತೀರ್ಥನು ಈತನೇ ಆಚಾರ್ಯ ನಿಶ್ಚಯ ಈತನೇ ಸರಿಮಾತರಿಶ್ವನು ವಾಯುವಿನರೂಪ | ಈತ ಚರಿಸುವ ಶಾಸ್ತ್ರವ್ಯೂಹದಿ ದೈತ್ಯರಿಂದಾಚ್ಛಾದಿತ ಗುಣಯುತ ಆತ್ಮಪೂರ್ಣಾನಂದ ದೇವನ ಶಾಸ್ತ್ರಮಥಿಸುತಲಿ 12 ಸಾರ ವೃಂದಕ್ಕೆ ಚುಚ್ಚುವನು ದುರ್ವಾದಿ ಮತಗಳ ಕೆಚ್ಚೆದೆಯವನು ಗರ್ಜಿಸುತವೇದೋಕ್ತವಾಕ್ಯಗಳ | ಹೆಚ್ಚು ಹೆಚ್ಚೇ ಸರಿಯು ವಿಷ್ಣುವು ಸ್ವಚ್ಛ ಪೂರ್ಣಾನಂದ ಸುಖಮಯ ಪೃಚ್ಛ ಪರಿವಾರ ಸರಿ ವಿಧ್ಯಾದಿಗಳು ಹರಿಗೆಂದು 13 ಕಚ್ಚಿಲತೆಗಳ ಬಿಸುಡುವಂದದಿ ನುಚ್ಚು ಮಾಡುವ ಪ್ರಶ್ನೆನೀಕವ ಅಚ್ಚನಾರಾಯಣನೆ ಪ್ರೇರಕ ನಿವಗೆ ಜನಕನಿಹ | ಮೆಚ್ಚು ಮಗ ಶ್ರೀ ಲಕ್ಷೀ ದೇವಿಗೆ ರಚ್ಚೆತನುವನು ಕಿತ್ತುವೋಡಿಸಿ ಹೆಚ್ಚಿಸುವ ಸುಜ್ಞಾನ ದೀಪವ ಹರಿಯ ಪ್ರಧಮಾಂಗ14 ಕೊಟ್ಟು ಉಂಗುರ ಸುಟ್ಟುಲಂಕೆಯ ಬಿಟ್ಟು ಕಾಮವ ಮೆಟ್ಟಿಖಳರನು ಜಟ್ಟಿ ಹನುಮನು ಪಟ್ಟ ಪುತ್ರನ ಪದವಿ ಸಾಧಿಸಿದ | ಹುಟ್ಟಿ ಕುಂತಿಲಿ ಕುಟ್ಟಿ ಕುರುಕುಲ ಇಟ್ಟು ಮನದಲಿ ದಿಟ್ಟ ಕೃಷ್ಣನ ಅಟ್ಟಿ ಹಾಸದಿ ಮೆರೆದ ಭೀಮನು ಜ್ಞಾನ ಭಾಸ್ಕರನು15 ಹುಟ್ಟು ಸಾವಿನ ಕಟ್ಟು ಬಿಡಿಸಲು ಘಟ್ಟ ದಡಿಯಲಿ ಭಟ್ಟನೆನಿಸುತ ಬಟ್ಟೆ ತವಕದಿ ಭ್ರಷ್ಟದಸ್ಯುಗಳ | ಕೆಟ್ಟ ಮತಗಳ ಸುಟ್ಟು ವಾದದಿ ಸೂತ್ರ ಭಾಷ್ಯವ ನೆಟ್ಟ ಸಂತರ ಮನದಿ ವಿಷ್ಣುವ ಶ್ರೇಷ್ಠಗುರುಮಧ್ವ16 ಏಕೆ ಭಯ ನಮಗಿನ್ನು ನಿರಯದ ಏಕೆ ಸಂಶಯ ಮುಕ್ತಿ ವಿಷಯದಿ ಏಕೆ ಕಳವಳ ಮಧ್ವರಾಯರ ಶಾಸ್ತ್ರ ಪೀಯೂಷ | ಜೋಕೆಯಿಂ ಪ್ರತಿದಿನವು ಸೇವಿಸೆ ಶ್ರೀಕಳತ್ರನು ಕೈಯ ಬಿಡುವನೆ ನಾಕಪತಿಯಿಂಬಿಟ್ಟು ಸಲಹುವ ಶಾಸ್ತ್ರಸಿದ್ಧವಿದು 17 ಹೆಚ್ಚು ಮಾತೇಕಿನ್ನು ಹರಿಮನ ಮೆಚ್ಚುಯೆನಿಸಿಹ ಮಧ್ವರಾಯರು ಬಿಚ್ಚಿತೋರಿದ ತೆರದಿ ಶೃತಿಗಳ ಭಜಿಸಿಖಳ ಜನಕೆ | ಬಚ್ಚಿಡುತ ವಿಜ್ಞಾನ ಮರ್ಮವ ನುಚ್ಚು ನೂಕುತ ದುರ್ಮತಕಿಡಿರಿ ಕಿಚ್ಚು ಕಮಲೇಶ ನೊಲಿಮೆಗೆ ಬೇರೊಂದು ಪಥವಿಲ್ಲ 18 ನಮ್ಮಹಿರಿಯರ ಖಿನ್ನನುಡಿಗಳ ನೊಮ್ಮನದಿ ನೀವೆಲ್ಲ ಕೇಳಿರಿ ರಮ್ಮೆಯರಸಗೆ ಸಮ್ಮತದ ಸಚ್ಛಾಸ್ತ್ರದರ್ಪಣವ | ಹೆಮ್ಮೆಯಿಂದಲಿ ಕೊಟ್ಟು ಬಂದೆವು ಒಮ್ಮೆಯಾದರು ನೋಡುವರೆ ಈ ನಮ್ಮ ಸಂತತಿ ಹಾ ಹರಿ ಹರೀಯೆಂಬ ಕ್ರಾಂತಿಯುತ19 ಉಣ್ಣಿರುಣ್ಣಿರಿ ಮಧ್ವಕಂದರೆ ಭವ ಹುಣ್ಣುವಳಿಯಿರಿ ಅಣ್ಣ ಪ್ರಾಣನದಯವ ಯಾಚಿಸಿಘನ್ನ ಶಾಸ್ತ್ರಾನ್ನ | ಅನ್ನ ಶೃತಿಗಳು ವಿವಿಧ ಸ್ಮøತಿಪ ಕ್ವಾನ್ನ ಪಾಯಸ ಗೀತೆ ಭಕ್ಷ್ಯಗಳೆನ್ನಿ ಬಗೆ ಬಗೆ ಸರ್ವ ಮೂಲವ ಸೂತ್ರಗಳೆ ಸಾರು 20 ತುಪ್ಪವೆನ್ನಿರಿ ನ್ಯಾಯ ಸುಧೆಯನು ಗೊಪ್ಪರಾಜರ ಗ್ರಂಥ ಹಲ್ಪವು ಅಪ್ಪರಾಯರ ವಾಣಿ ಕ್ಷೀರವು ದಾಸ ಸಾಹಿತ್ಯ | ತಪ್ಪದೆಲೆ ತಿಂಬಂಥ ತಿಂಡಿಯು ಚಪ್ಪರಿಸಿ ಭಾರತದ ಕೂಟನು ವಪ್ಪುವನು ಶ್ರೀ ಕೃಷ್ಣ ದೇವನು ಭಕ್ತ ನುಣ್ಣಲಿವ 21 ಎಂತು ಪೊಗಳಲಿ ನಿಮ್ಮ ಗುರುವರ ಹಂತ ಸುರಗಣ ವೆಲ್ಲ ನಿಮ್ಮಡಿ ನಿಂತು ಪಡೆದರು ಜ್ಞಾನ ಪ್ರಾತರ್ನಾಮಕನೆಶರಣು | ಕಂತೆ ಮತಗಳ ನಾಶಗೈದನ ನಂತ ಮಹಿಮನೆ ದೀನ ನಾನಿಹೆ ಕುಂತಿ ನಂದನ ನೀನೆ ತಿಳಸೈ ಸಕಲ ಶಾಸ್ತ್ರಾರ್ಥ 22 ಮೂರ್ತಳೆನಿಸುವ ಚಂದ್ರಮಾನಿನಿನಾಥ ಸೂರ್ಯ ನೊಳ್ ಆದಿತ್ಯ ನಾಮದಿ ನಿಂತು ದಿಕ್ಪತಿಗಳಿಗೆ ಶಕ್ತಿಗಳ | ಇತ್ತು ಸೃಷ್ಠಿಯ ಕಾರ್ಯ ವೆಸಗುವೆ ಉತ್ತರಾಯಣ ಪಗಲು ಮಾನಿಯೆ- ನಿತ್ಯ ಪ್ರೇರಿತ ನೀಪ್ರಜಾಪತಿನಾಮ ಹರಿಯಿಂದ 23 ಖ್ಯಾತ ಮೂರ್ತಾ ಮೂರ್ತ ಧಾರಕೆ ತತ್ವಪತಿಗಳ ಪೋಷತನುವಲಿ ಮೃತ್ಯುಹಾಗಶನಾಪಿಪಾಸಾಪಾನ ನಾಮಗಳ | ಎತ್ತಿ ನಡಿಸುವೆ ದೇಹ ಕಾರ್ಯವ್ರಾತ ಬಿಡಲೇನೊಂದು ನಡೆಯದು ಮಾತರಿಶ್ವನೆ ನಿಧಿಗು ಆರ್ಯುರ್ದಾತ ನೆನಿಸಿರ್ಪೆ 24 ಅನ್ನ ವಿಧಿಯಿಂ ಕೊಂಬೆ ಸಮಸರಿ ಯನ್ನ ಬ್ರಹ್ಮಗೆ ಜೀವ ಗಣತಾವುಣ್ಣಲಾರರು ನಿನ್ನ ಬಿಡೆ ಪ್ರಾಣದಿ ಪಂಚಕನೆ | ಸ್ವಪ್ನ ನಿದ್ರಾ ಸಮಯದೊಳ್ ಹರಿಯನ್ನು ಕೂಡಿರೆ ಕರಣಪರು ಘನಯಜ್ಞ ನಡಿಸಿ ಸರ್ಮರ್ಪಿಸುವೆ ನೀನೊಬ್ಬ ದೇವನಿಗೆ 25 ನಿನ್ನ ನಂಬಿದ ಭಕ್ತನಿಗೆ ಭವ ಹುಣ್ಣು ಮುಟ್ಟದು ವಿಷ್ಣು ವಲಿಯುತ ಮನ್ನಿಸುವ ಹರಿಯಾಜ್ಞೆಯಿಂಮುಕ್ತಿದನು ನೀ ಹೌದು | ವಿಶ್ವ ವಂಶನೆ ನಿನ್ನ ಮಹಿಮೆಯಗಣ್ಯ ಸಿದ್ಧವು ನಿನ್ನ ಧೊರೆ ಹರಿ ಒಬ್ಬ ಜೀವೋತ್ತುಮನೆ ಅಶರೀರ26 ಜ್ಞಾನ ಬಲ ಐಶ್ವರ್ಯಗಳು ಪರಿಪೂರ್ಣ ಸರಿ ವೈರಾಗ್ಯ ಹಾಗೆಯೆ ಪ್ರಾಣನಿನ್ನಲಿ ಕರಿಸುವೆಯೊ ಆಧ್ಯರ್ಧ ನಾಮದಲಿ | ಮಾನ್ಯ ವಿಷ್ಣುಸಹಾಯ ನಿನಗೈನ್ಯೂನ ವಿಲ್ಲವು ಯಾವ ತೆರದಲುಕಾಣೆ ಅಪಜಯ ಜೀವ ಸಾಧನೆಯೆಲ್ಲ ನಿನ್ನಿಂದ 27 ಶೇಷಗಸದಳ ನಿನ್ನ ಪೊಗಳಲು ಶೇಷ ಸರಿ ಬಡದಾಸನಹೆ ವಿಶ್ವಾಸದಿಂ ಸಂವತ್ಸರನೆ ನೀಕಾಯಬೇಕೆಂಬೆ | ಏಸು ಜನ್ಮಗಳನ್ನು ಕೊಟ್ಟರು ಶ್ವಾಸ ಪತಿತವ ಮತದಿ ಪುಟ್ಟಿಸಿ ದಾಸ ಭಾಗ್ಯವ ನೀಡು ಹರಿಯೊಳ್ ಶುದ್ಧ ಭಕ್ತಿಯುತ28 ಎರಡು ಸಹ ಮೂವತ್ತು ಲಕ್ಷಣ ವಿರುತಿಹ ಜಗದ್ಗುರುವೆ ವಿಷ್ಣುವಿಗೆರಡು ಎರಡು ಸರಿಯೆಂತೆಂದು ಸ್ಥಾಪಿಸಿ ಎರಡು ವಿದ್ಯೆಗಳಿರವು ತೊರುವ ಲೆರಡು ಸುಖಗಳ ಪಡೆಯೆಸಾಧನ ಮಾರ್ಗ ನೀಡ್ವೆಬತ 29 ಸರ್ವ ಶಕ್ತನೆ ಶರ್ವ ವಿನುತನೆ ಸರ್ವ ಸರ್ವಗ ಹಿರಿಯ ತನಯನೆ ಸರ್ವ ಜಗದಾಧಾರ ಪೋಷಕ ಸರ್ವ ತೋವರನೆ | ಸರ್ವ ಕಾಲದಿ ಸರ್ವ ದೇಶದಿ ಸರ್ವ ಗುಣದಿಂ ಹರಿಯ ಯಜಿಸುವ ಸರ್ವ ಸದ್ಗುಣ ಪೂರ್ಣ ದೋಷವಿದೂರ ಸರ್ವಜ್ಞ 30 ಹಿಂದೆ ಪೂರ್ವಜರೆಲ್ಲ ಕೂಡುತಲೊಂದು ಪಾಯವಗೈದು ಮೃತ್ಯುವತಂದು ದಿವಿಜ ವೃಂದಕೆ ಕುಂದು ವದಗಿಸಲು | ಕಂದುತಳಿಯಲ್ ನಿಖಿಲ ಸುರಗಣ ಕುಂದು ಮೃತ್ಯುವ ಗೈದು ಪುಡಿಪುಡಿ ವಂದನಾರ್ಹನು ಒಬ್ಬನೀನೇ ಯೆಂದು ಸ್ಥಾಪಿಸಿದೆ 31 ಪಾಹಿ ಅಮ ಶುಚಿ ಯೊಗ ಕ್ಷೇಮನೆ ಪಾಹಿ ಅಮರಲಲಾಮ ಅನಿಲನೆ ನಿರವದ್ಯ | ಪಾಹಿ ಸತ್ಯ ವಿಶುದ್ಧ ಸತ್ವನೆ ಪಾಹಿ ಲಕ್ಷ್ಮೀ ಪುತ್ರ ಭೃತ್ಯನೆ ಪಾಹಿ ಜೀವಗ ಬಾದರಾಯಣಪ್ರೀಯ ಮಹರಾಯ 32 ಪಾಹಿ ಹನುಮನೆ ಭೀಮ ಮಧ್ವನೆ ಪಾಹಿ ದುರ್ಮತ ಧ್ವಾಂತ ಸೂರ್ಯನೆ ಪಾಹಿ ನತಜನ ಪಾಲ ಪ್ರಾಣನೆ ಪಾಹಿ ಶ್ರೀಸುತನೆ | ಪಾಹಿ ಜಗದಾಧಾರ ಸೂತ್ರನೆ ಪಾಹಿ ಸಾಮನೆವಂಶ ದೂರನೆ ಪಾಹಿ ಹರಿಯಚ್ಛಿನ್ನ ಭಕ್ತನೆ ಪಾಹಿ ವಿಜ್ಞಾನ 33 ಪಾಹಿ ಋಜುಪತಿ ವಾಯುಕೂರ್ಮನೆ ಪಾಹಿ ಜೀವ ಲಲಾಮ ಗುಣನಿಧಿ ಪಾಹಿ ಶುಚಿ ಸರ್ವಜ್ಞ ಸಾಮಗಭಾವಿ ಶತಮೋದ | ಪಾಹಿ ಸತ್ಯನೆ ಕಲಿವಿದಾರಣ ಪಾಹಿ ಗುರು ಗೋವತ್ಸ ರೂಪಿಯೆ ಪಾಹಿ ಮಿಷ್ಣು ಪದಾಬ್ಜಮಧುಕರ ಭಾರತೀ ಕಾಂತ 34 ಪಾಹಿ ಅಮೃತನೆ ವಿಶ್ವರಜ್ಜುವೆ ಪಾಹಿ ಬೃಹತೀ ಛಂದ ಮಾನಿಯೆ ಪಾಹಿ ಹಂಸೋಪಾಸಕ ಪ್ರಭು ಆಖಣಾಶ್ಮಸಮ | ಪಾಹಿ ಸಾಯಂಖ್ಯಾತ ಜೀವಗ ಪಾಹಿ ಜಗಚೇಷ್ಠಾ ಪ್ರವರ್ತಕ ಪಾಹಿ ಅನಿಲನೆ ಶೇಷವಿಪಶಿವ ವಂದಿತಾಂಘ್ರಿಯುಗ 35 ಪಾಹಿ ಪರಿಸರ ಪಂಚ ಕೋಶಗ ಪಾಹಿ ಗುಣನಿಧಿ ಕೊವಿದೋತ್ತಮ ಪಾಹಿ ನಮಿಸುವೆ ಅಣುಮಹದ್ಘನ ರೂಪ ವಿಖ್ಯಾತ | ಪಾಹಿ ವಿಶ್ವಗ ವ್ಯಸನ ವರ್ಜಿತ ಪಾಹಿ ಹರಿಯನು ನಿತ್ಯನೋಳ್ಪನೆ ಪಾಹಿ ವಿಷ್ಣುದ್ವಾರ ಶರಣೈ ಪಾಹಿ ಹರಿ ಸಚಿವ 36 ಜಯ ಜಯವು ಶ್ರೀ ಹನುಮ ಭೀಮಗೆ ಜಯ ಜಯವು ಶ್ರೀ ಮಧ್ವರಾಯಗೆ ಜಯ ಜಯವು ತತ್ವೇಶರರಸಗೆ ಮುಖ್ಯಪ್ರಾಣನಿಗೆ | ಜಯ ಜಯವು ಜಯತೀರ್ಥ ಹೃಸ್ಥಗೆ
--------------
ಕೃಷ್ಣವಿಠಲದಾಸರು
ವಾಯು ಕುಮಾರ ಸುಜನೋದ್ಧಾರ ಮಾ ರಮಣ ಪ್ರಿಯ ಭಕುತವರ ಪ ಪಾರಾವಾರದಂತಿಹ ಈ ಘೋರ ಸಂಸಾರದ ಪಾರವಗಾಣಲುಪಾಯವ ತೋರೊಅ.ಪ ಇನಕುಲ ತಿಲಕನ ಅನವರತದಿ ದರು ಶನದಲಿ ಹಿಗ್ಗುವ ಅನುಭವವು ಸನಕ ಸನಂದನ ಮುನಿಜನಗಳಿಗುಂಟೆ ವಿನಯದಿ ಬೇಡುವೆ ಅನುಗ್ರಹವ 1 ಈ ಮಹಿಯೊಳು ಬಲ ಭೀಮನೆಂಬ ದಿವ್ಯ ನಾಮದಿ ಪರಿಪರಿ ಸೇವಿಸುತ ಸತ್ಯ ಭಾಮಾಕಾಂತನ ಪ್ರೇಮ ಪಾತ್ರನೆಂದು ಕಾಮಿಸುವೆನು ನಿನ್ನ ವರ ದಯುವ 2 ವರ ಯತಿ ವೇಷದಿ ಹರಿಮತವನು ಬಲು ಹರಡುತ ಧರೆಯೊಳು ಸುಜನರಿಗೆ ನರ ಹರಿ ಲೋಕಕೆ ಮಾರ್ಗವರುಹಿದ ಗುರುಗಣ ಗುರು ಮಧ್ವರಾಯ ಪ್ರಸನ್ನನಾಗೊ 3
--------------
ವಿದ್ಯಾಪ್ರಸನ್ನತೀರ್ಥರು
ವಾಯುದೇವರ ಪ್ರಾರ್ಥನೆ ಪ್ರಾಣಪತೇ ಪರಿಪಾಲಯ ಮಾಂಪ್ರಾಣಪತೇ ಪರಿಪಾಲಯ ಮಾಂ ಕಮಲಾಲಯ ಕರುಣೈಕಾಲಯ ಭೂಮನ್ಯೆ ಪ. ಋಜುಗಣನಾಯಕ ಭುಜಗಭೂಷಣ ದ್ವಿಜರಾಜಾಹಿಪರಾಜಾ 1 ಭಾರತೀಶ ಕರುಣಾರಸ ಭೂಷಣ ವಾರಿಜಾಸನ ಸಮಾಂಶಾ 2 ಕಪಿವರ ನೃಪವರ ಯತಿವರ ರೂಪ ದುರಿತ ಸುರೂಪ 3 ರಾಮಕೃಷ್ಣ ವ್ಯಾಸಾಮಲ ಮಂಗಲ ನಾಮಕ ಶ್ರೀಪತಿ ದೂತ 4 ವೆಂಕಟೇಶ ಚರಣಾಂಬುಜ ಮಧುಪ ವಿ- ಶಂಕ ಶಂಕರಾತಂಕ ನಿವಾರಣ 5
--------------
ತುಪಾಕಿ ವೆಂಕಟರಮಣಾಚಾರ್ಯ
ವಾಯುದೇವರು ಆಂಜನೇಯ ಕುಂತೀತನಯ- ಅಂಜನಾಭಪ್ರಿಯ ಮಧ್ವಾಖ್ಯರಾಯ ಪ. ಮಂಜುಳಾಂಗ ಮೃತ್ಯುಂಜಯಾದಿ ಸುರ- ನಿತ್ಯ ನಿ- ರಂಜನ ದೇವಪ್ರಭಂಜನತನಯ ಅ.ಪ. ರಾಮರಾಯಬಂಟ ದಿತಿಸುತ- ಸ್ತೋಮಹರಣ ತುಂಟ ಸ್ವಾಮಿಕಾರ್ಯಮನಪ್ರೇಮನಿರಾಮಯ ಭೀಮಪರಾಕ್ರಮಧಾಮ ಘನಾಘನ- ಶ್ಯಾಮ ನಿಕಾಮ ಸುಧೀಮಲಲಾಮ 1 ಚಿಂತಾಮಣಿ ರಾಮ ನೇಮ- ವಾಂತು ಸಾರ್ವಭೌಮ ಸಂತೋಷದಿ ಗಗನಾಂತರಪಂಥದಿಂ ಅಂತರಿಸುತ ಮಹಾಂತೋದಧಿಯ ಪ್ರಾಂತಕೆ ಹಾಯ್ದ ನಿಶ್ಚಿಂತ ಹನುಮಂತಾ2 ಆಟನೋಟದಿಂದ ವನದೊಳು ಸಾಟಿಯಾಗಿ ಬಂದ ಮೀಟೆನಿಸುವ ಬಲು ಕಾಟಕ ದೈತ್ಯರ ಕೂಟ ಕೆಡಹಿ ಪುರಕೋಟಿಯ ತಿಕ್ಕಿದ ಪಾಟಲಮುಖ ಶತಕೋಟಿಶರೀರ 3 ಅಟ್ಟಹಾಸದಿಂದ ಕಮಲದಿ ಪುಟ್ಟಿದಾಸ್ತ್ರದಿಂದ ಕಟ್ಟಿಕೊಳ್ಳಿಸಿ ಜಗಜಟ್ಟಿ ಖ್ಯಾತಿಯಿಂದ ದಟ್ಟಿಸಿ ಲಂಕೆಯ ಪಟ್ಟಣವನು ಸೂರೆ- ಸುಟ್ಟುಬಿಟ್ಟ ಕಡುದಿಟ್ಟ ಹನುಮಂತಾ 4
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ವಾಯುದೇವರು ಆಂಜನೇಯ ಕುಂತೀತನಯ- ಅಂಜನಾಭಪ್ರಿಯ ಮಧ್ವಾಖ್ಯರಾಯ ಪ. ಮಂಜುಳಾಂಗ ಮೃತ್ಯುಂಜಯಾದಿ ಸುರ- ನಿತ್ಯ ನಿ- ರಂಜನ ದೇವಪ್ರಭಂಜನತನಯ ಅ.ಪ. ರಾಮರಾಯಬಂಟ ದಿತಿಸುತ- ಸ್ತೋಮಹರಣ ತುಂಟ ಸ್ವಾಮಿಕಾರ್ಯಮನಪ್ರೇಮನಿರಾಮಯ ಭೀಮಪರಾಕ್ರಮಧಾಮ ಘನಾಘನ- ಶ್ಯಾಮ ನಿಕಾಮ ಸುಧೀಮಲಲಾಮ 1 ಚಿಂತಾಮಣಿ ರಾಮ ನೇಮ- ವಾಂತು ಸಾರ್ವಭೌಮ ಸಂತೋಷದಿ ಗಗನಾಂತರಪಂಥದಿಂ ಅಂತರಿಸುತ ಮಹಾಂತೋದಧಿಯ ಪ್ರಾಂತಕೆ ಹಾಯ್ದ ನಿಶ್ಚಿಂತ ಹನುಮಂತಾ 2 ಆಟನೋಟದಿಂದ ವನದೊಳು ಸಾಟಿಯಾಗಿ ಬಂದ ಮೀಟೆನಿಸುವ ಬಲು ಕಾಟಕ ದೈತ್ಯರ ಕೂಟ ಕೆಡಹಿ ಪುರಕೋಟಿಯ ತಿಕ್ಕಿದ ಪಾಟಲಮುಖ ಶತಕೋಟಿಶರೀರ 3 ಅಟ್ಟಹಾಸದಿಂದ ಕಮಲದಿ ಪುಟ್ಟಿದಾಸ್ತ್ರದಿಂದ ಕಟ್ಟಿಕೊಳ್ಳಿಸಿ ಜಗಜಟ್ಟಿ ಖ್ಯಾತಿಯಿಂದ ದಟ್ಟಿಸಿ ಲಂಕೆಯ ಪಟ್ಟಣವನು ಸೂರೆ- ಸುಟ್ಟುಬಿಟ್ಟ ಕಡುದಿಟ್ಟ ಹನುಮಂತಾ 4
--------------
ತುಪಾಕಿ ವೆಂಕಟರಮಣಾಚಾರ್ಯ
ವಾಯುದೇವರು ಎರಡೂ ಕೈ ಮುಗಿದೂ ಬೇಡುವನ್ಯಾರೇ ಪೇಳಮ್ಮಯ್ಯ ಪ ಸುರನರರ ಖಳರ ಪರಿಪರಿ ಕರ್ಮವ ಹರಿಗೊಪ್ಪಿಸುವಮರುತ ಕಾಣಮ್ಮ ಅ.ಪ. ಕರವ ಬಲಕೆತ್ತೆ ನಿಂತಹನ್ಯಾರೇ ಪೇಳಮ್ಮಯ್ಯಾಭರದಿಂದ ಚರಣಗಳೂರಿದನ್ಯಾರೇ ಪೇಳಮ್ಮಯ್ಯಾದುರುಳ ಜನರ ಮೆಟ್ಟಿ ಶರಣರಿಗಭಯವಕರೆದು ಕೊಡುವ ಬಹು ಕರುಣಿ ಕಾಣಮ್ಮ 1 ಬಿಂಕಾದಿ ಮುಖವಾ ತಿರುಹಿದನ್ಯಾರೇ ಪೇಳಕ್ಕಯ್ಯಟೊಂಕಾದಿ ಎಡಗೈಯಿಟ್ಟಿಹನ್ಯಾರೇ ಪೇಳಕ್ಕಯ್ಯಕಿಂಕರರಡಿ ಬರೆ ಅಂಕದೊಳೆತ್ತುವಡೊಂಕನಾದ ನಿಷ್ಕಳಂಕ ಕಾಣಮ್ಮ 2 ಚೆಲುವ ಸರ್ವಾಂಗಲಕ್ಷಣನ್ಯಾರೇ ಪೇಳಮ್ಮಯ್ಯಹಲವೂ ಫಲಗಳನೂ ನೀಡುವನ್ಯಾರೇ ಪೇಳಮ್ಮಯ್ಯಸುಲಭಗೋಪತಿವಿಠಲನ ಪ್ರಿಯಕದರುಂಡಲಗಿ ಪುರಿ ಧೊರೆ ಇವನಮ್ಮ 3
--------------
ಗೋಪತಿವಿಠಲರು
ವಾಯುದೇವರು ನಮೋ ನಮೋ ಹನುಮಾ ಪ್ಲವಗೋ ತ್ತುಮಾಂಜನೇಯ ನಾಮಾ ಪ ಶಮಾದಿಗುಣಗಣ ಸಮೀರ ನುತಜನ ಪ್ರಮಾದ ಹರಿಸೆಲೊ ಉಮೇಶ ವಂದ್ಯನೆ ಅ.ಪ ದಶಾಪುರುಷ ನೀನೇ ತ್ರೀ - ದಶಾಸ್ಯಮುಖ ಮಹ ನಿಶಾಚರೇಶರ ದಶಾಕಳೆದು ಈ ವಸೂಧಿಯೋಳು ಮೆರೆದೆ 1 ಬಕಾಸುರಗೆ ವೈರೀ ನಿನ್ನ ಭಕೂತ ಜನಕೀಪರಿ ಅಖೀಳ ಸೌಖ್ಯದ ಲಕೂಮಿರಮಣನ ಭಕೂತಿ ಪೂರ್ವಕ ಮೂಕೂತಿ ದಾಯಕ 2 ಯತೀಶಕುಲನಾಥಾ ದಶ - ಮತೀನಾಮ ಖ್ಯಾತಾ ಕ್ಷಿತೀಶ ಗುರುಜಗನ್ನಾಥಾವಿಠಲ ದೂತ ಪಾಥೋಜಜಾಂಡಕೆ ನಾಥಾನೆ ಪಾಲಿಸೊ 3
--------------
ಗುರುಜಗನ್ನಾಥದಾಸರು
ವಾಯುದೇವರು ನಿನ್ನ ನಂಬಿ ಬಂದೆ ಪಂಚಮುಖಿ ಪ್ರಾಣ ಅನ್ಯ ಹಂಬಲ ಬಿಡಿಸಿ ಬಿಂಬ ಮೂರುತಿ ತೋರೋ ಪ ಹಿಂದೆ ತ್ರೇತಾಯುಗದಿ ರಾಮನಾಜ್ಞೆಯ ಹೊಂದಿ ಸಿಂಧು ದಾಟಿ ಸೀತೆಗೆರಗಿ ನಿಂದು ಸುಂದರ ರಾಮ ಮುದ್ರಿಕೆಯಿತ್ತು ಲೀಲೆಯಲಿ ಕೊಂದ ರಕ್ಕಸ ಪುರವನನಲಗೆ ಇತ್ತೆ 1 ಬಂಡಿ ಅನ್ನವನುಂಡು ಭಂಡ ಬಕನಾ ಕೊಂದು ಹಿಂಡು ನೃಪರಾ ಜರಿದು ಕೊಂಡು ದ್ರೌಪದಿಯಾ ಮಂದಮತಿಗಳನಳಿದು ತಂದಿ ಸೌಂಗಂಧಿಕವ ಪುಂಡ ಕೀಚಕರಳಿದ ಪಾಂಡವಪ್ರಿಯದೂತ 2 ಮೋದತೀರ್ಥರೆನಿಸಿ ವಾದಿಗಳ ನಿಗ್ರಹಿಸಿ ಬೋಧಿಸಿ ಸುಜನರಿಗೆ ಮಾಧವನ ಗುಣವ ಸಾಧು ವಂದಿತ ಬಾದರಾಯಣರು ಇರುತಿರುವ ಬದರಿಯಲ್ಲಿರುವಿ ಶ್ರೀ ನರಹರಿಯ ತೋರೋ 3
--------------
ಪ್ರದ್ಯುಮ್ನತೀರ್ಥರು
ವಾಯುದೇವರು ಮಾರುತೀ ಮತ್ಪ್ರಾಣೇಶ ಮಾರುತೀ ಪ ಮಾರುತಿ ನಮಿಪೆ ನಾ ನಿನ್ನಾ ಭವಭಾರವನಿಳಿಸು ನೀ ಯೆನ್ನ | ಗತಿ ತೋರು ಸದ್ಗುಣ ಸಂಪನ್ನಾ | ಬೇರೆ ಯಾರಿಲ್ಲ ಪೊರೆವರು ಯನ್ನಾ | ನಿನ್ನೀ ಚಾರುಚರಿತೆಯ ಪಾಡಿ ಕೊಂಡಾಡುವೆ | ಸೇರೆ ರಾಮನ ಪದವಾರಿಜ ತೋರಿಸು ಅ.ಪ ಲಂಕಾ ಪತಿಯನು ಕಂಡೆ 1 ಪುರದಿ ಭೂಜಾತೆಯನರಸೀ ಕಾಣದರಿತು ವನವ, ತಲೆ ದುರುಳ ರಾವಣನ ಪರಿಕಿಸಿ | ಆಹಾ | ಭರದಿ ಮುದ್ರಿಕೆಯಿತ್ತು | ಪುರವನುರಿಸಿ | ರಘು | ವರನಡಿಗಳ ಕಂಡ | ಧುರಧೀರರರಸನೇ 2 ದೊಡೆಯನಿಗೆಡೆಗುಡೆ ಶರಧೀ | ಲಂಕೆ ಯೆಡೆಯೊಳ್ರಕ್ಕಸರ ಸಮರದಿ | ಕೊಲ್ಲುತಡುವ ಭೂತಗಳುಣ್ಣೆ ಅಡಿಯೊಂದಿಗೊರೆಸಿ ರಾಘವನ ಮೆಚ್ಚಿಸಿದ 3 ನರವರಗ್ಹ ಸ್ತಿನ ಪುರದೀ | ವರನೊಡಗೂಡಿ ಕಾಳಗದೀ | ದುರುಳ ಕೌರವರ ಬೇರೊರೆಸಿದ ಬಲಭೀಮ ||4 ಪುಟ್ಟಿ | ಬಲಿದರ ಶಾಸ್ತ್ರ ಬಲದೀ | ಸ್ಥಾಪಿಸಿ ನೀ ನಲಿದೀ | ಭಲ | ಭಳಿರೆ ರಜತಪುರಿಯರಸನ ರಘುರಾಮವಿಠಲ ದೂತ 5
--------------
ರಘುರಾಮವಿಠಲದಾಸರು
ವಾಯುದೇವರು - ಹನುಮಂತ ಎಂಥ ವೈರಾಗ್ಯ ಹನುಮಂತ ಎಂಥ ಸೌಭಾಗ್ಯ ಗುಣವಂತ ಪ ಸಂತತ ರಾಘವನಂಘ್ರಿ ಕಮಲದಲಿ ಅಂತರಂಗ ಭಕುತಿಯ ಬೇಡಿದೆಯೊ ಅ.ಪ ಆವರಿಹರು ನಿನ್ಹೊರತು ರಾಘವರ ಭಾವವರಿತು ಪ್ರತಿ ಕ್ಷಣಗಳಲಿ ಸೇವೆ ಸಲಿಸಿ ದಯ ಪಡೆಯಲು ಭೋಗವ ದಾವದನುಭವಿಸೆ ದುರ್ಲಭವು ಜೀವೋತ್ತಮನದ ಬಯಸದೆ ಏಕೋ ಭಾವದಿ ಪದಸೇವೆಯ ಕೇಳಿದ ವೀರ 1 ಜ್ಞಾನಪರಾಕ್ರಮ ಧ್ಯೆರ್ಯವೀರ್ಯಕಧಿ ಷ್ಠಾನ ಪವನಸುತ ಜಗತ್ರಾಣ ನೀನಲ್ಲದೆ ಖಗಮೃಗ ಸುರನರರುಗ ಳೇನು ಚಲಿಸಬಲ್ಲರೊ ಹನುಮ ಪ್ರಾಣಭಾವಿ ಚತುರಾನನ ಭುವಿಯೊಳ ಗೇನು ರುಚಿಯೊ ಕಲ್ಯಾಣಚರಿತ ನಿನಗೆ 2 ಕಪಿ ರೂಪದಿ ದಶಕಂಧರನ ಮಹಾ ಅಪರಾಧಕ್ಕೆ ಶಿಕ್ಷೆಯನಿತ್ತೆ ನೃಪರೂಪದಿ ದುರ್ಯೋಧನನಸುವನು ಅಪಹರಿಸಿದೆಯೋ ಬಲ ಭೀಮ ವಿಪುಲ ಪ್ರಮತಿ ವರವೈಷ್ಣವ ತತ್ವಗ ಳುಪದೇಶಿಸಿದ ಪ್ರಸನ್ನ ಯತಿವರೇಣ್ಯ3
--------------
ವಿದ್ಯಾಪ್ರಸನ್ನತೀರ್ಥರು