ಒಟ್ಟು 626 ಕಡೆಗಳಲ್ಲಿ , 80 ದಾಸರು , 571 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕೇಳಿಮರೆವುದು ಮನ ಕುಶಶಯನನಆಳು ಕಂಡಂತೆಚಂದ್ರಮೌಳಿಹೇಳಿದಂತೆಪ.ಮುಂಜಾವದಿ ಗುರುಮಧ್ವಮತ ಮಹಿಮಾಹರಪಾದಕಂಜಗಳ ಬಲಗೊಂಡು ಕಲಿಯಾನಕೆಂದು ಲಕುಂಜರವರದನ ನಾಮ ಕೀರ್ತನೆ ಮಾಡೆಂದುಮಂಜುಳ ಶಾಸ್ತ್ರಶ್ರವಣ ಮಹಿಮೆ ಪುರಾಣ 2ಪ್ರಸನ್ವೆಂಕಟೇಶನಪಾದಪಿಡಿದವರಿಗಾಹ್ಲಾದನಿಶಿದಿನ ಸಂಸಾರ ನಿಸ್ಸಾರಘೋರ3
--------------
ಪ್ರಸನ್ನವೆಂಕಟದಾಸರು
ಕೊಂಡಾಡಲಳವೆ ಕರುಣಾನಿಧಿ ಕಾವನದಂಡ ಸಂಜಿತ ಗುರುಸತ್ಯನಾಥರ ಕೀರ್ತಿ ಪ.ಶ್ರೀ ವಾಸುದೇದ ತಾ ಭಾವಿಸಿ ಚಿತ್ತದಿಭೂವಲಯಕೆ ಸುಜನಾವಳಿಗಾಶ್ರಯವೀವೆನೆನುತ ಶುಭದೇವವೃಕ್ಷವನಟ್ಟೆಈವರ ಪರಮಹಂಸಾವಲಂಬನ ತಾಳ್ದುಶ್ರೀ ವಾಯುಮತದಿ ತತ್ವವೆ ಲಕ್ಷಿಸುವ ಪ್ರೇಕ್ಷಾವಂತರಾಗಿಹ ಜೀವಕೋಟಿಗಳ ಕೃಪಾವಲೋಕನದೊಳಿಟ್ಟ ಅಪೇಕ್ಷಿತಭಾವಾರ್ಥಗಳನೆ ಕೊಟ್ಟು ನಂಬಿದಸೇವಕರ್ಗಭಯವಿಟ್ಟ ಗುರುರಾಯನ 1ಭಾನುತೋರುವ ಮುನ್ನೆ ಸ್ನಾನವ ಮಾಡಿ ಸುಮ್ಮಾನದಿಂದಲಿ ನೇಮ ಮೌನದೊಳಿದ್ದು ಶ್ರೀಮಾನಾಥನಂಘ್ರಿಯ ಮಾನಸದಲಿ ದೃಢಧ್ಯಾನದಿಂ ಬಲಿದುಗೀರ್ವಾಣಭಾಷ್ಯಾಮೃತಪಾನವ ಜನರಿಗೆ ಸಾನುರಾಗದಲಿತ್ತುನಾನಾ ತತ್ವಾರ್ಥ ವ್ಯಾಖ್ಯಾನವ ಜನರಿಗೆತಾನಂದು ಬೋಧಿಸಿದತಾಮಸಜ್ಞಾನವನೋಡಿಸಿದ ಆ ಕಾಮಧೇನುವೆನಿಸಿ ಎಸೆದ ಗುರುರಾಯನ 2ಭೇದವರ್ಜಿತ ಮತ್ತವಾದ ಕುಂಭಿಯಕುಂಭಭೇದಕಸಿಂಗಹಲಾಧಾರಿಹರಿಸಗುಣೋದರ ಸಾಕಾರಮಾಧವಹರನುತಪಾದನೆನುತಸೂತ್ರವೇದ ಪುರಾಣದಿಸಾಧಿಸಿ ಕುತ್ಸಿತವಾದಿಗಳಪಾದಾಕ್ರಾಂತರ ಮಾಡಿ ಮೇದಿನಿಯೊಳು ಜಯನಾದಭೇರಿಯ ಹೊಯಿಸಿದ ಮುಕ್ತಿಯಸಾಧನ ತೋರಿಸಿದ ಭ್ರಷ್ಟಂಕುರೋದಯ ಮಾಣಿಸಿದ ಗುರುರಾಯನ 3ಕಾಲಕಾಲಕೆ ಧರ್ಮ ಪಾಲಿಸಿ ಯಾಚಕಜಾಲಕೆ ಮನ್ನಿಸಿ ಮೂಲ ಮಂತ್ರೋಪದೇಶಪೇಳಿ ಪೂತರ ಮಾಡಿ ಹಾಲು ಸಕ್ಕರೆ ತುಪ್ಪಹೋಳಿಗ್ಯನ್ನವನಿಕ್ಕಿ ಮೇಲೆ ದ್ರವ್ಯವನಿತ್ತುಪಾಲಿಸಿ ತಾಯಿತಂದೆಗಳ ಹಂಬಲ ಬಿಡಿಸಿ ಲೋಕದವರಿಗಭಿಲಾಷಾ ಪೂರ್ಣಾನುಕೂಲಚಿಂತಾಮಣಿಯ ಯತಿಕುಲಮೌಳಿಮಕುಟಮಣಿಯ ವಿರತಿಭಾಗ್ಯಶಾಲಿ ಸುಗುಣಖಣಿಯ ಗುರುರಾಯನ 4ಮಣ್ಣು ವನಿತೆಸತಿಹೊನ್ನಿನ ಬಯಕೆಯಘನ್ನತೆಜರಿದುಪಾವನ್ನಮಹಿಮನಾದಚೆನ್ನ ಸತ್ಯನಿಧಿ ತೀರಥನ್ನ ಕರೋದ್ಭವತನ್ನಾಕಷೆಂಬುವಭಿನ್ನವಚಂದ್ರಿಕೆಯನ್ನು ಪ್ರಕಾಶಿಸಿ ಪೂರ್ಣಚಂದ್ರಮನಂತೆಉನ್ನತ ಕಳೆಯುತ ಚಿನ್ಮಯ ವರದ ಪ್ರಸನ್ನ ವೆಂಕಟಾಧಿಪನ ಭಜಿಸಿನಿತ್ಯಧನ್ಯನೆನಿಸುತಿಪ್ಪನ ಸತ್ಯಾಭಿನವರನ್ನನ ಪೊರೆದÀಪ್ಪನ ಗುರುರಾಯನ 5
--------------
ಪ್ರಸನ್ನವೆಂಕಟದಾಸರು
ಕೊಡು ಕಂಡೆಯಾ ಹರಿಯೆ-ನಿನ್ನ ನಾಮ-|ಕೊಡು ಕಂಡೆಯಾ ಹರಿಯೆ ಪಬಡವ ನಾನೆಂದು ಕಾಡಲಿಲ್ಲ ಹರಿಯೆ ಅ.ಪಒಡಲುತುಂಬದು ಎಂದು ಬಳಲಿಸೆ ಬರಲಿಲ್ಲ |ಸಡಗರದಿಂ ಭಾಗ್ಯ ಬೇಡಲಿಲ್ಲ ||ಮಡದಿ-ಮಕ್ಕಳಿಗಾಗಿ ಕಡು ಮೋಹವೆನಗಿಲ್ಲ |ಬಿಡದೆ ನಾಮಸ್ಮರಣೆ ಕೊಡು ಒಂದೇ ಸಾಕೊ 1ಸ್ನಾನ-ಮೌನ ಜಪ-ತಪಗಳು ಎನಗಿಲ್ಲ |ನಾನಾಯೋನಿಗಳಲ್ಲಿ ಬಳಲಿ ಬಂದೆ ||ದೀನರಕ್ಷಕ ನೀನೆ ದಯದಿಂದಲೆನಗಿನ್ನು |ಧ್ಯಾನಸುಧೆಯನಿತ್ತು ಸಲಹಯ್ಯ ಹರಿಯೆ 2ಬಲೆಗೆ ಸಿಲುಕಿದ ಮೃಗದಂತೆ ಬಾಯ್ಬಿಡುತಲಿ |ಅಲಸಿ ಕೋಟಲೆಯ ಸಂಸಾರದಿಂದ |ತಲೆಹುಳಿತ ನಾಯಂತೆ ಬಯಲಾಸೆಗೆ ಸಿಲುಕಿದೆ |ಸಲಹೊ ದೇವರ ದೇವಪುರಂದರವಿಠಲ3
--------------
ಪುರಂದರದಾಸರು
ಕೋಮಲಾಮಲ ಗಾತ್ರನ ತಾಮರಸದಳ ನೇತ್ರನಸ್ವಾಮಿ ಸಿರಿನಿವಾಸನ ಕಂಡೆ ಹೇಮಗಿರಿ ವರದೀಶನ ಪ.ಕನ್ನೆ ಲಕುಮಿಯನೆತ್ತಿದಶುಭಚಿನ್ನವಕ್ಕಿಯ ಹತ್ತಿದರನ್ನದುಡುಗೆಗಳಿಟ್ಟನ ಸುವರ್ಣದಂಬರನುಟ್ಟನಕರ್ಣಕುಂಡಲ ಬೆಳಗಿನ ನುಣ್ಗೆನ್ನೆಲಲುಗುವ ಕುರುಳಿನಸಣ್ಣನಾಮದ ನೊಸಲಿನ ಶ್ರೀ ಚಿನ್ಮಯನ ಬಲು ಚೆಲುವನ 1ಕುಂದದಲರಿನ ಮಾಲೆಯ ಪ್ರಭೆಗುಂದದ ಮಕುಟಮೌಳಿಯಸ್ಯಂದನಾಂಗದರಾಭಯವರ ಹೊಂದಿದಮಲ ಸುಪಾಣಿಯಮುಂದೆ ನಾರದ ಹನುಮರ ಗಾಯನಾನಂದದಲಿ ತಾ ಕೇಳುವಹಿಂದೆಡಬಲದಿ ಛತ್ರವ ಪಿಡಿದಿಂದಿರೆಯರೊಳೊಪ್ಪುವ 2ತೋರ ಮುತ್ತಿನ ಹಾರದಕೇಯೂರಕೌಸ್ತುಭವಕ್ಷದಚಾರುಸ್ಮಿತ ಮುಖರೋಚಿಯ ದಯಾವಾರಿಧಿಯ ಮಹೋದಾರಿಯಸಾರಿದರ ಸುರತರುವಿನ ಸುರವೈರಿಕರಿಪಂಚಾನನಭೂರಿಪ್ರಸನ್ವೆಂಕಟೇಶನ ಹೃದಯಾರವಿಂದ ನಿವಾಸನ3
--------------
ಪ್ರಸನ್ನವೆಂಕಟದಾಸರು
ಕ್ಷುಲ್ಲರಿಗೊದಗದು ಫುಲ್ಲನಾಭನ ಪದಅಲ್ಲ್ಲ್ಯವಧಾರಣ ಬುದ್ಧಿಗಳುಬಲ್ಲಿದಸುಖತೀರ್ಥರುಲ್ಲಾಸದಪಥದಲ್ಲಿಹರಿಗೆ ಪರಸಿದ್ಧಿಗಳು ಪ.ಆಡುವುದಮಿತವು ಮಾಡುವುದಹಿತೀಶಾಡುವದಾಶೆಗಳಬ್ಧಿನಾಡವಚನ ಉಪಗೂಡಿಸಿ ಠಾಳಿಪಮೂಢರ್ಗೆ ವಿಷಯದ ಲುಬ್ಧಿರೂಢಿಯೊಳಿವ ತನುಗೂಡಿದ ಬಯಕೆಯ ನೀಡಾಡಿದರೆ ಸುಖ ಲಬ್ಧಿಹಾಡಿ ಹರಿಯ ಕೊಂಡಾಡ್ಯನುದಿನಕೋಲ್ಯಾಡಲು ಒಲಿವ ದಯಾಬ್ಧಿ 1ಹೀನ ಶ್ರದ್ಧದಿಘನಸ್ನಾನ ಸುರಾರ್ಚನೆನಾನಾಡಂಬರಕುದಿಸುವ ಗಳಿಕೆಮೌನವೆ ವಧು ಹಣ ಧ್ಯಾನದಾರೋಹಣಜ್ಞಾನದೊಳಜ್ಞಾನದ ಬಳಕೆಏನೊಂದರಿಯರು ಮಾನುಭವಾರ್ಯರುಮಾನಪಮಾನ್ಗಳ ವೆಗ್ಗಳಿಕೆಶ್ರೀನಾಥಪದಕೊಪ್ಪು ಪ್ರಾಣವನೊಪ್ಪಿಪಜಾಣರ್ಗೆ ಮುಕುತಿಯ ಕಳವಳಿಕೆ 2ತರ್ಕಕೆ ನಿಶಿದಿನಕರ್ಕಶಭಾವದವರ್ಕಡು ಪಾತಕರ್ಬಾಧಕರುಮರ್ಕಟ ಮುಷ್ಟಿಯೊಳು ಮೂರ್ಖ ಪ್ರತಿಷ್ಠೆಯೊಳುನರ್ಕಪದೇ ಪದೇ ಸಾಧಕರುಆರ್ಕೂಡ ಮುಕ್ತರು ಶರ್ಕರ ಸೂಕ್ತರುಅರ್ಕಸುತೇಜ ಮುಖಾಧೀಶರುತರ್ಕೈಪರು ಸಂತರ್ಕಳಖಳಸಂಪರ್ಕಕೆ ಹೆದರುವ ಭೇದಕರು 3ಶಾಸ್ತ್ರ ವಿಚಾರಿಸಿ ಪ್ರಸ್ತಾರದೋರಿ ಸ್ಮರಾಸ್ತ್ರಕೆ ಮಗ್ಗುತ ಸೋಲುವರುಸ್ವಸ್ಥ ಮನಿಲ್ಲದೆ ದುಸ್ತರಬೋಧಸಮಸ್ತರೊಳಗೆ ಬೋಧಿಪರವರುವಿಸ್ತರ ತತ್ವ ಪ್ರಶಸ್ತ ಬೀರುತ್ತ ಪರಸ್ತ್ರೀ ಜನನಿಸಮನೆಂಬುವರುಅಸ್ತಮಯೋದಯದಿ ವ್ಯಸ್ತವಿದೂರ ಹೃದಯಸ್ಥ ಹರಿಯನೆ ಚರಿಸುವರು 4ಒಂದರಿದವರು ನೂರೊಂದನರಿತವರಾರೆಂದತಿಶಯಮದ ವಿಹ್ವಲರುಕುಂದುಕುಚೇಷ್ಟೆ ವಿನಿಂದೆಯ ಧೃಷ್ಟ ಮುನೀಂದ್ರ ದ್ರೋಹದಗುಣಸಂಕುಲರುಮಂದರಧರನವರಂದನುಭವದಿವನೊಂದನರಿಯರತಿ ನಿರ್ಮಳರುತಂದೆ ಪ್ರಸನ್ವೆಂಕಟೇಂದ್ರನಕಿಂಕರರೆಂದೆಂದಿಗಪವಾದಕೊಳಗೊಳರು 5
--------------
ಪ್ರಸನ್ನವೆಂಕಟದಾಸರು
ಗುರುವರದೇಂದ್ರ ದಯಾಂಬುಧೇ ಶರಣಾಗತ ವತ್ಸಲ ಈಶ |ಚರಣಕಮಲಷಟ್ಪದ ಪಾಲಿಸು ಕಾಷಾಯವಸನಭೂಷಾ ಪದುರ್ಮತಭುಜಗಕುಘರ್ಮ ವಿನಾಯಕಕರ್ಮಬದ್ಧವ್ರತಾ |ಶರ್ಮತ್ರಿಧರ ಪ್ರಿಯ ಧರ್ಮಾಸಕ್ತನೆ ನಿರ್ಮಲ ಶುಭಚರಿತಾ ||ಭರ್ಮ ಸಮಾಂಗ ಅಧರ್ಮ ಶಿಕ್ಷಕರಿಚರ್ಮಾಂಬರ ಪ್ರೀತ |ಕಿರ್ಮೀರಾರಿ ಸುಶರ್ಮ ತೀರ್ಥಸಖಕರ್ಮಂದಿಪ ನಾಥ 1ಶ್ರೀ ಮನೋರಮ ಸು ತ್ರಿಧಾಮದೇವ ಶ್ರೀರಾಮ ಪದಾಸಕ್ತಾ |ಕಾಮಿತ ಫಲದಧರಾಮರವಂದಿತ ಸ್ವಾಮಿ ನಮಿಪ ಭಕ್ತ ||ಶ್ರೀಮಂದಾರಅನಾಮಯ ಸದ್ಗುಣಧಾಮನೆ ಸುವಿರಕ್ತಾ |ಪಾಮರದೂರ ಲಲಾಮ ವದಾನ್ಯ ಮಹಾಮಹಿಮನೆ ಶಕ್ತ 2ಮಾನಿ ಪೂಜ್ಯ ಸುಜ್ಞಾನಿ ಧೀರ ಸದ್ಭಾನುಚಂದ್ರ ಭಾಸ |ದೀನ ಪೋಷಕ ನಿಜಾನುಗ ಪಾಲಕ ಕ್ಷೋಣಿಪ ನಿರ್ದೋಷ ||ಸಾನುರಾಗದಲಿ ಪೋಣಿಸುಸನ್ಮತಿಮೌನಿ ಕುಲಾಧೀಶ |ನೀನಲ್ಲದೆ ಶ್ರೀ ಪ್ರಾಣೇಶ ವಿಠ್ಠಲ ತಾನೊಲಿಯನು ಲೇಶ 3
--------------
ಪ್ರಾಣೇಶದಾಸರು
ಗುರುಸತ್ಯಾಧಿರಾಜಸುಜನತಾರಾರಾಜಪೊರೆಎನ್ನ ಕಲ್ಪಭೂಜಸ್ಮರನಯ್ಯನ ಸಿರಿಚರಣಕಮಲಭೃಂಗವಿರತ್ಯಾದಿ ಗುಣೋತ್ತುಂಗ ಶುಭಾಂಗ ಪ.ಕರಿವಿಂಡು ಶಂಕೆಯಿಲ್ಲದೆ ತಿರುಗುತ ಕೇಸರಿಯ ಕಂಡೋಡುವಂತೆಧರೆಯೊಳು ದುರ್ವಾದಿಗಳು ನಿನ್ನಿದಿರು ಸಂಚರಿಸಲಂಜುವರಮ್ಮಮ್ಮ ಮಹಿಮ 1ಕಾಲವರಿತ ಸ್ನಾನ ಮೌನ ಜಪ ಸೃಕ್ಜಾಲವ್ಯಾಖ್ಯಾನಗಳಪೇಳಿ ಶ್ರೀರಾಮನ ಮೆಚ್ಚಿಸುವಪೂತಶೀಲ ತತ್ವಕಲ್ಲೋಲ ವಿಶಾಲ 2ಹಾಟಕಕುವಧುಕಾಂಕ್ಷೆರಹಿತ ಪ್ರಸನ್ನವೆಂಕಟಪತಿ ಪದದ್ವಯವತ್ರುಟಿಯೊಳಗಲ ಸತ್ಯಾಭಿನವ ತೀರ್ಥಕರಕಟ ಸಂಜಾತ ಸುಪ್ರೀತ 3
--------------
ಪ್ರಸನ್ನವೆಂಕಟದಾಸರು
ಚಿತ್ತಶುದ್ಧಿಯಿಲ್ಲದವನವ ಜ್ಞಾನಿಯೆ - ಪುಣ್ಯಪಾತಕಗಳನರಿಯದವ ಮನುಜನೆ ಕೃಷ್ಣ ಪ.ಮಾರಿ ಮನೆಯೊಳಗಿರಲು ಸಹಕಾರಿಯೆನಬಹುದೆ ?ಊರೊಳಗಿನಾ ಕಳ್ಳ ಅವ ಸುಜನನೆ ?ಜಾರತನವೆಸಗುವಳು ಕುಲವನಿತೆಯಹುದೆ - ಸಂಸಾರದೆಚ್ಚವಿಲ್ಲದವ ಸುಗಣನೆ ? 1ಶ್ವಾನ ಬೂದಿಯಲಿರಲು ಶಿವಭಕ್ತನನೆಬಹುದೆ ?ಕಾನನದೊಳಿಹ ಕಾಗೆ ವನವಾಸಿಯೇ ?ಗಾಣ ತಿರುಗುವ ಎತ್ತಿಗದು ಪ್ರದಕ್ಷಣೆಯೆ ಬಕಧ್ಯಾನವನು ಮಾಡಲದು ಮೌನವೇ ಕೃಷ್ಣಾ ? 2ತೋಳ ಅಡವಿಯಲಿರಲು ಅದು ದಿಗಂಬರನಹುದೆ ?ಗಾಳಿಯಂಬುವ ಉರುಗ ಉಪವಾಸಿಯೇ ?ಆಲವದು ಜಡೆಬಿಡಲುಪರಮ ಋಷಿಯಹುದೆ - ಬಲುಕಾಲಉಳಿದ ಹದ್ದು ತಾ ಹಿರಿಯದೆ ?3ಬಂಧನದೊಳಿಹ ವ್ಯಾಘ್ರವನು ತಪಸಿಯೆನಬಹುದೆ ?ಸಿಂಧುಜವು ಎನೆ ವಿಷಯ ಶೀತಕರನೆ ?ಅಂಧಕನು ಕಣ್ಮಚ್ಚಲದು ಧ್ಯಾನವೇ, ಗಜವುಮಂದಗತಿಯಾದರದು ಸ್ಮರಣೆಯೆ ಕೃಷ್ಣಾ ? 4ಮರಣಕ ಗಂಟಲನು ಮಾಡಲದು ಮಂತ್ರವೆ ?ಗಂಡು ನೀರಲಿ ಮುಳುಗಲದು ಸ್ನಾನವೇ ?ಪುಂಡರೀಕಾಕ್ಷ ಶ್ರೀ ಪುರಂದರವಿಠಲನತೊಂಡನಾಗದ ನರನ ಬಾಳು ಬಾಳುವೆಯೆ ? 5
--------------
ಪುರಂದರದಾಸರು
ಚಿತ್ತೈಸಿದ ವ್ಯಾಸರಾಯ |ಚಿತ್ತಜನಯ್ಯನ ಬಳಿಗೆ ಪ.ಮುತ್ತಿ ಮುತ್ತೈದೆಯರೆಲ್ಲಎತ್ತೆ ರತುನದಾರತಿಯ ಅಪಹೇಮಪಿಡಿಗಳುಳ್ಳಂತಹ |ಚಾಮರಂಗಳನು ಪಿಡಿದು ||ಕಾಮಿನಿ ಮಣಿಯರು ಕೆಲವರು |ಸ್ವಾಮಿಯೆಂದು ಬೀಸುತಿರೆ 1ಹಾಟಕದ ಬೆತ್ತನೂರು |ಸಾಟಿಯಿಲ್ಲದಲೆ ಪಿಡಿದು ||ನೀಟಾದ ಓಲಗದವರ |ಕೂಟಗಳ ಮಧ್ಯದಲಿ 2ಸಾಧುವಿಪ್ರಜನಂಗಳು |ವೇಧಘೋಷ ಮಾಡುತಿರೆ ||ಮೋದದಿಂದ ಗೋವಿಂದನ |ಸಾಧನ ಮಾರ್ಗವ ಪಿಡಿದು 3ಭೇರಿ ತುತ್ತೂರಿ ಮೃದಂಗ |ಮೌರಿ ಚಾರುವೇದ್ಯಂಗಳು ||ಬಾರಿಬಾರಿಗೆ ಹೊಡೆಯೆ |ನಾರದರು ತಾ ಕೂಡಿಯೆ | 4ಅರವಿಂದಾಸನನಯ್ಯ |ಪುರಂದರವಿಠಲನು||ಸಿರಿಸಹಿತದಿ ಬಂದು |ಕರಪಿಡಿದೆತ್ತಿದ್ದು ಕಂಡೆ 5
--------------
ಪುರಂದರದಾಸರು
ಚೆಂಡನಾಡುತ ಬಂದ ಪುಂಡ ಕೃಷ್ಣನು ತನ್ನ |ಹಿಂಡುಗೋಪಾಲಕರ ಕೊಂಡು ಯಮುನೆಯ ತಡಿಗೆಪಓರೆ ತುರುಬನೆಕಟ್ಟಿಗೀರುನಾಮವನಿಟ್ಟು |ಹಾರ ಕಂಕಣ ತೋಳಬಂದಿ ಘುಂಗುರ ಘನ-|ಸಾರಕುಂಕುಮ ಕೇಸರಿಗಂಧ ಕೂಡಿಸಿ |ಸೇರಿಸುತ ನಡುವಿಗೆ ಕಾಸಿದಟ್ಟಿಯನುಟ್ಟು |ಹಾರಾಡುತಲಿ ಬಂದ-ತೊಡರಗಾಲ |ತೋರ ಚಿನ್ಮಣಿಗಳಿಂದ. ಮುತ್ತಿನ ಚೆಂಡು |ಧಾರಿಣಿಗೆ ಪುಟಿಸಿ ನಿಂದ-ವಜ್ರದಖಣಿ|ತೋರಿ ಗೆಳೆಯರ ಕೂಡ ಬಂದರಾ ಮನೆಯಿಂದ 1ಕೊಂಡಾಲ ತಿಮ್ಮನು ಚೆಂಡನೆ ಹೊಡೆದನು |ಮಿಂಡೆಯರ ಮೊಲೆಗಾಗಿ ಹಾರಿಹರಿದು ಬೀಳೆ |ಹಿಂಡುನಾರಿಯರೆಲ್ಲ ಸುತ್ತಿಕೊಂಡಿರೆಅವರ|ಮುಂಡೆಗೆ ತಗುಲಿಸಿ ಪುರದ ಬಾಗಿಲ ಬಿಟ್ಟು |ಕಿಂಡಿಯಿಂದಲಿ ಬಂದನು-ನಾರಿಯರ |ಮಂಡೆಗೆ ಚೆಂಡಿಟ್ಟನು-ತೋರಿಸುವರ |ಕಂಡು ತಾ ನಗುತಿದ್ದನು-ಕೌತುಕವೆಂದು |ದಿಂಡೆಯರುಮಡುವಿನೊಳಗೆ ಹಾಕಿ ನಡೆದರು2ಗೆಳೆಯರೆಲ್ಲರು ಕೂಡಿ ಚೆಂಡು ತಾ ಎನಲಾಗಿ |ಗುಳುಗುಳಿಸುವ ವಿಷದ ಯಮುನಾ ತಡಿಯಲಿನಿಂದು|ಬಳಿಯ ವೃಕ್ಷದ ಮೇಲೇರಿ ತಾ ಧುಮುಕಲು |ಕಳಕಳಿಸುವ ಗೋಪಾಲರಳುತಿರೆ |ಇಳಿದ ನೀರೊಳಗಾಗಲು-ನಾಗರಫಣಿ|ತುಳಿದು ಕುಣಿಕುಣಿಯುತಿರಲು-ಬ್ರಹ್ಮನು ಬಂದು |ತಿಳಿದು ಮದ್ದಲೆ ಹೊಯ್ಯಲು-ಇಂದ್ರಾದ್ಯರು |ನಲಿದು ತಾಳವನಿಟ್ಟು ಕೊಂಡಾಡುತಿದ್ದರು 3ಮಗನ ಸುದ್ದಿಯಕೇಳಿಹರಿದು ಬಂದಳುಗೋಪಿ|ನಗರದ ಹೊರಗಾಗಿ ಬಾಯ ನಾದದಿಂದ |ವಿಗಡೆಯರು ಬಿಟ್ಟ ಮಂಡೆಯ ಜುಂಜು ಕೆದರುತ |ತೆಗೆದು ಮಣ್ಣನೆ ತೂರಿ ಕುಳಿತಲ್ಲಿಂದಲೆ ನಮ್ಮ-|ನ್ನಗಲಿ ಹೋಗುವರೆ ಹೀಗೆ-ರಂಗ ನಮ್ಮ |ಮೊಗವ ನೋಡುವುದೆಂದಿಗೆ-ನೋಡಿದ ಕಣ್ಣ |ತೆಗೆದು ಕೀಳುವೆನಿಂದಿಗೆ-ಪಡೆದ ಪೊಟ್ಟೆ |ದಗದಗಿಸಲು ಕೊಟ್ಟು ಮುನಿಯದೆ ಬಾ ಬೇಗ 4ಏನನೆಂಬೆನು ಕೃಷ್ಣ ನಿನ್ನ ಕಾಣದೆ ಪುರದ |ಮಾನಿನಿಯರು ಬೆರಗಾಗಿ ಬೀಳುತ ಕರುವ |ಕಾಣದಿರೆತ್ತಿಗೆ ಕರುವನು ಬಿಡುವರು |ಆ ನಾಸಿಕದ ಮೂಗುತಿ ಕಿವಿಗಿಡುವರು |ಧೇನುಮೇವನೆ ತೊರೆದುವು-ಗೋವುಗಳನ್ಯ-|ರಾಮನೆಗೋಡಿದುವು-ವತ್ಯಗಳೆಲ್ಲ |ಮೌನದಿ ಮೊಲೆ ತೊರೆದುವು ಕೃಷ್ಣಯ್ಯನ |ವೇಣುನಾದದ ಧ್ವನಿ ಕೇಳದೆ ಮೆಚ್ಚವು 5ದ್ವಾರಕಿ ಕೃಷ್ಣ ನೀ ಬಾಯೆಂದು ಕರೆವೆನೊ |ತೋರುವ ಸಮಪಾದ ವಿಠಲನೆಂಬೆನೊ |ಶ್ರೀರಮಣ ವೆಂಕಟನೆಂದು ಒದರುವೆನೊ |ಶ್ರೀರಂಗಶಯನನೆಂದೆನಲ್ಲದೆ ನಿನ್ನ |ಚೋರ-ಜಾರನೆಂದೆನೆ-ಹದ್ದಿನ ಮೇಲೆ |ಏರಿ ತಿರುಗುವನೆಂದೆನೆ-ಬೆಣ್ಣೆಯ ಕದ್ದು |ಸೂರೆ ಮಾಡುವನೆಂದೆನೆ-ಕೃಷ್ಣಯ್ಯ ನೀ |ಬಾರಯ್ಯ ಬಾರದಿದ್ದರೆ ಪ್ರಾಣ ನೀಗುವೆ 6ಕಣ್ಣೆತ್ತಿ ನೋಡಿದನೆಂದೆನೆ ಕಡೆಗೋಲ |ಬೆನ್ನಲಿ ಪಿಡಿದನೆಂದೆನೆ ಹಲ್ಲಳನೂರಿ |ಮಣ್ಣ ಕಚ್ಚಲು ಬಾಯ ತೆರೆಯುವನೆಂದೆನೆ |ಮಣ್ಣ ಬೇಡಲು ನಾ ಕೊಡಲಾರೆನೆಂದೆನೆ |ಎನ್ನ ಕುತ್ತಿಗೆ ಕೊಯ್ವರೆ-ಮಾತೆಯ ಮಾತು |ಮನ್ನಿಸಿ ವನಕೆ ಪೋಪರೆ-ಬಲಭದ್ರ |ಅಣ್ಣನಿಗೆ ಮುಖವ ತೋರೆ-ಕೃಷ್ಣಯ್ಯ ನೀ |ಸಣ್ಣವನೆನ್ನದೆ ಹರಿಯ ಕೊಂಡಾಡಿದೆ 7ಎಂದ ಮಾತನು ಕೇಳುವಾ ಸಮಯ ನಾಗಿಣಿ-|ವೃಂದವೆಲ್ಲವು ತಮ್ಮ ಕಂಠಭೂಷಣರಾಗಿ |ಅಂದದ ಮೇಲುದ ಸುತ್ತಿಕೊಂಡಿರೆ ಅರ-|ವಿಂದನಾಭಾಚ್ಯತ ಕೇಶವಮುರಹರ|ಮಂದರಧರಹರಿಯೆ-ನಿನಗೆ ನಾವು |ಮಂದಾಕಿನಿಯ ಸರಿಯೆ-ಮಾಂಗಲ್ಯದ |ಚೆಂದ ಕಾಯೈ ದೊರೆಯೆ-ಹರಿಯ ಕೃಪೆ-|ಯಿಂದ ಕರೆದು ನಮ್ಮ ಕಾಯಬೇಕೆಂದರು 8ಇಂತಿಂತು ಸ್ತವನವ ಮಾಡೆ ಕಾಳಿಂಗನ |ಕಾಂತೆಯರ ಸ್ತೋತ್ರಕ್ಕೆ ಮೆಚ್ಚಿ ನಾಗನ ಬಿಟ್ಟು |ಕಂತುಕ ಸಹಿತ ಪಂಕಜನಾಳವನೆ ಕೊಂಡು |ಸಂತಸದಲಿ ಇಕ್ಕುತ-ಶೋಕದಿ ನೀವು |ಭ್ರಾಂತಿ ಬಿಡಿರಿ ಎನ್ನುತ-ಬರಿದೆ ಎಲ್ಲ |ಸಂತೆ ಕೂಡಿದೆ ಎನ್ನುತ-ನಾ ಹಸಿದೆನು |ಪಂತಿಭೋಜನ ಕೊಂಡು ನಡೆಯಿರಿ ಮನೆಗೆಂದ 9ಸುರರಿಗೆಸುಧೆಮುಂಚೆ ಉಣಿಸಿದ ಪರಬ್ರಹ್ಮ |ಪರಿಪರಿ ಭೋಜನ ಮಾಳ್ಪ ಕಂಡುವರಾರು? |ಸುರದುಂದುಭಿ ಪೊಡೆದು ಪಾರಿಜಾತದ ಮಳೆ |ಸುರಿಸಿದರಾಕ್ಷಣಕೆ-ಬ್ರಹ್ಮನು ತಾನು |ತೆರಳಿದನಾಶ್ರಮಕೆ-ಪುರಂದರವಿಠಲ |ತಿರುಗಿದ ನಿಜಧಾಮಕೆ-ಕೃಷ್ಣನ ಲೀಲೆ |ಗುರುದಯೆಯಲಿ ನಮ್ಮ ಹರಿಯ ಕೊಂಡಾಡಿದೆ 10
--------------
ಪುರಂದರದಾಸರು
ಚೌತಿಯ ದಿವಸರಂಭೆ : ವಾರಿಜಗಂಧಿನಿ ನೋಡಿತ್ತ ಶ್ರುತಿ-ಮೌರಿರಭಸದಿ ಲಕ್ಷ್ಮೀಕಾಂತಭೂರಿವೈಭವದಿ ಪೊರಟನೆತ್ತ ಯಾವಕಾರಣವೆಂದು ಪೇಳೆಲೆ ಸತ್ಯ 1ದೇವರ ಪೂಜೆಗೋಸುಗ ಬಂದಪಾವನಮೂರ್ತಿಯಾದುದರಿಂದ ನಮ್ಮಕಾವನು ಕರುಣಾಕಟಾಕ್ಷದಿಂದ 2ರಂಭೆ : ನೂತನವಾಯ್ತೆ ಕೇಳಲೆ ಜಾಣೆ ಜಗ-ನ್ನಾಥನಿಗ್ಯಾವ ಕುಲವು ಕಾಣೆರೀತಿಯನರುಹಬೇಕೆಲೆ ಬಾಲೆ ಸರ್ವಚೇತನಾತ್ಮನ ನಾಟಕದ ಲೀಲೆ 3ಕೊಂಡಕಾರಣದಿ ಪೂಜೆಗಳೆಲ್ಲಕಂಡು ಪೊಗಳಲು ಕವಿಗು ಸಲ್ಲ ಇನ್ನುಪುಂಡರೀಕಾಕ್ಷನವನೆ ಬಲ್ಲ 4ರಂಭೆ : ರಾಜವದನೆ ಪೂಜೆಯಾದ ಮೇಲೆ ಅಂ-ಭೋಜನಾಭನು ತಾಕ್ಷ್ರ್ಯನ ಮೇಲೆರಾಜಬೀದಿಯೊಳ್ ಬರುವದೇನೆ ಇಂಥಸೋಜಿಗವೇನು ಪೇಳೆಲೆ ಜಾಣೆ 5ಬಟೆನಿಸ್ಸಾಳರವದಿ ಬರುವ ಚಂದಸಟೆಯಲ್ಲ ಕೇಳು ಕರುಣದಿಂದ ನಮ್ಮಕಟಕರಕ್ಷಿಸಲು ಬರುವ ಗೋವಿಂದ6ರಂಭೆ : ಬಳಿಕ ಪಲ್ಲಂಕಿಯೇರಿದ ಕಾಣೆ ಜನ-ಗಲಭೆಗಳಿಂದ ಪೋಗುವದೇನೆನಲವಿನಿಂದಲಿ ಪೊರಟೆಲ್ಲಿಗೆನೆ ಮಹಾ-ಜಲಜನಾಭನ ಮಹಿಮೆಯ ಜಾಣೆ 7ದೀಪವೆಂದೆನುತ ಭಕ್ತರು ಮುದದಿಶ್ರೀಪರಮಾತ್ಮ ವಿಲಾಸದಿ ಭಕ್ತ-ರಾಪೇಕ್ಷೆಗಳನು ಸಲ್ಲಿಸುವಂದದಿ 8ರಂಭೆ : ಸೋಮಾರ್ಕಜ್ಯೋತಿಹಿಲಾಲುಗಳು ಜನ-ಸ್ತೋಮಜೇನುಂಡೆಬಿರುಸುಮಿಗಿಲುವ್ಯೋಮಕೇಶಗಳ ಪೊಗಳತೀರದು ಸರಿಭೂಮಿಯೊಳ್ ಕಾಣೆನೆಂಬಂತಾದುದು 9ಅಮಮ ಇದೇನೆ ಇಂದಿನ ಲೀಲೆ ಜನ-ರಮರಿಕೊಂಡಿಹರೇನಿದು ಬಾಲೆಸಮವಿಲ್ಲ ಇಂತೀ ವೈಭೋಗಕ್ಕೆಲೆ ನ-ಮ್ಮಮರಾವತಿಗಿಂತಧಿಕ ಬಾಲೆ 10ಲಾರ್ತಿ ಹರಣವಾಗ್ವದು ಜಾಣೆಕೀರ್ತಿತರಂಗಮಾಗಿಹುದೇನೆ ಶೇಷ-ತೀರ್ಥವೆಂದರೆ ಕೇಳಿದು ಪ್ರವೀಣೆ 11ರಂಭೆ :ಏಸುದೊಡ್ಡಿತೆ ಕೇಳಲೆ ಬಾಲೆ ಅನಂ-ತಾಸನದಂತೆ ಮರೆವುದಲ್ಲೇನಾಸಿರ ದೀಪಸೋಪಾನದಲೆ ಮಹಾ-ಶೇಷನಿಹನು ಮಧ್ಯದೊಳಿಲ್ಲೇ 12ಊರ್ವಶಿ :ಕರುಣಾಕರನು ನಮ್ಮೆಲ್ಲರನುನಿತ್ಯಪೊರೆಯಲೋಸುಗ ಬಂದನು ತಾನುಸುರುಚಿರ ಮಂಟಪವೇರಿದನು ಭೂ-ಸುರರಿಂದ ವೇದಘೋಷವ ಕೇಳ್ವನು 13ದೃಷ್ಟಾಂತವಾಗಿ ಪೇಳುವದೇನೆ ಬ್ರಹ್ಮಸೃಷ್ಟಿಗೆ ಪೊಸತಾಗಿಹುದು ಕಾಣೆಕಟ್ಟಿಸಿದವನು ಪುಣ್ಯೋತ್ತಮನು ಪರ-ಮೇಷ್ಠಿ ಜನಕನ ಕೃಪೆಯಿನ್ನೇನು 14ಭಜಕರ ಮುಖದಿಂದೆಲ್ಲ ತಾನು ಭೂ-ಭುಜನಾಗಿ ನಡೆಸುವನಿದನೆಲ್ಲನುನಿಜವಾಗಿನಿತ್ಯಸಾಕಾರವನು ತೋರಿತ್ರಿಜಗವನೆಲ್ಲ ರಕ್ಷಿಸುತಿಹನು 15ರಂಭೆ : ಬಿಡದೆ ಇನ್ನೊಂದು ಕೇಳುವೆ ನಾರಿ ಜಗ-ದೊಡೆಯ ಪೊರಡುವ ಕಾಲದಿ ಭಾರಿಬೆಡಿಖಂಬ ಧ್ವನಿಯು ಇದೇನೆ ಪೇಳೆ ಇಂಥಕಡು ಬೆಡಗನು ಉಸುರೆಲೆ ಬಾಲೆ 16ಊರ್ವಶಿ: ಜನರು ಎಲ್ಯಾದರಂಜಿದÀ ಭಯವ ತಮ್ಮತನುವಿಗೆ ಸೋಂಕಲದನೆಲ್ಲವಮನದಿ ಝುಮ್ಮೆನಿಸಿ ಬೆಚ್ಚೋಡಿಸುವ ಖಂಬ-ಧ್ವನಿಯೆಸಗಿದರು ಕೇಳಿದರಂದವ 17ತಿರುಗಿಯೇರಿದನು ಪಲ್ಲಂಕಿಯಲ್ಲಿ ಸುತ್ತು-ಬರುವನು ವೇದನಿನಾದದಲಿವರರತ್ನ ಖಚಿತ ಮಂಟಪದಲ್ಲಿ ನಿಂತನಿರವದಿ ಸುಖದಾಯಕನಲ್ಲಿ 18ಶರಣರ ಪಾಪ ಮನಕೆ ತಾರ ದುಡಿದವರಭೇರಿಗೆರೆವ ಬಿಸಿನೀರವರಲಕ್ಷ್ಮೀನಾರಾಯಣಧೀರ ಸುರು-ಚಿರ ಸಿಂಹಾಸನವೇರಿದ ವೀರ 19
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ತಪ್ಪು ನೋಡದೆ ಬಂದೆಯಾ ನನ್ನ ತಂದೆಯೆಅಪ್ಪ ತಿರುವೆಂಗಳೇಶನೆ ನಿರ್ದೋಷನೆ ಪ.ಆಪಾದಮೌಳಿ ಎನ್ನೊಳುಅಘಬಹಳಶ್ರೀಪತಿ ಕ್ಷಮಿಸಿ ಕಾಯಿದೆಯ ಉದಧಿಶಯ್ಯಾ 1ಜಗದಘಹರನೆಂಬುದು ನಿನ್ನ ಬಿರುದುತ್ರಿಗುಣಾತೀತನೆ ರಾಮನೆ ಗುಣಧಾಮನೆ 2ಇನ್ನೆನ್ನ ಕಲುಷವಾರಿಸೊ ಭವತಾರಿಸೊ ಪ್ರಸನ್ನ ವೆಂಕಟರಮಣ ಭಯಶಮನ 3
--------------
ಪ್ರಸನ್ನವೆಂಕಟದಾಸರು
ತುತ್ತೂರಿಮೌರಿತಾಳ ದಂಡಿಗೆ ಮದ್ದಲೆ |ಉತ್ತಮ ಶಂಖದ ನಾದಗಳಿಂದ ||ಸುತ್ತಮುತ್ತಿ ನಾರಿಯರು ತಾಥೈಯೆಂದು |ಅರ್ತಿಯಿಂದ ಕುಣಿಸುವರುಪರವಸ್ತುತತ್ಥೈಹಿಡಿದು 2ಕಾಮಿನಿಯರೆಲ್ಲ ನೆರೆದು ಕಂದನೊಡನಾಟವಾಡಿ |ಪ್ರೇಮದಿಂದ ಬಿಗಿಬಿಗಿದಪ್ಪಿ ಮುದ್ದಾಡಿ ||ಕಾಮಿತ ಫಲವೀವ ಭಕುತಜನರೊಡೆಯ |ಸ್ವಾಮಿ ಶ್ರೀ ಪುರಂದರವಿಠಲರಾಯನ 3
--------------
ಪುರಂದರದಾಸರು
ದುರಿತವೆತ್ತಣದೊ ದುರ್ಗತಿಯು ಎಲ್ಲಿಹುದೊ ?ಹರಿನಾಮ ಸ್ಮರಣೆಯೆಚ್ಚರದಲ್ಲಿದ್ದವರಿಗೆ ಪ.ಸ್ನಾನವೇತಕೆ ಸಂಧ್ಯಾ ಜಪತಪವೇತಕೆಮೌನವೇತಕೆ ಮಾಸವ್ರತವೇತಕೆ ||ಮಾನಸದಲಿ ವಿಷ್ಣುಧ್ಯಾನವ ಮಾಡುವಜ್ಞÕನವಂತರ ಸಂಗಸುಖದೊಳಿಪ್ಪವರಿಗೆ 1ಯಾತ್ರೆಯೇತಕೆ ಕ್ಷೇತ್ರಗಳ ನೋಡಲೇತಕೆಗೋತ್ರಧರ್ಮದ ಪುಣ್ಯ ಫಲವೇತಕೆ ? ||ಸೂತ್ರದಿ ಜಗವ ಮೋಹಿಸುವ ಮುರಾರಿಯಸ್ತೋತ್ರ ಮಾಡಿ ಪೊಗಳುವ ಭಾಗವತರಿಗೆ 2ಅಂಗದಂಡನೆ ಏಕೆ ಆತ್ಮಗಾಸಿಯು ಏಕೆತಿಂಗಳ ಚಾಂದ್ರಾಯಣವೇತಕೆ ? ||ಮಂಗಳ ಮಹಿಮ ಶ್ರೀ ಪುರಂದರವಿಠಲನಹಿಂಗದರ್ಚನೆ ಮಾಡುವ ಭಕ್ತ ಜನರಿಗೆ 3
--------------
ಪುರಂದರದಾಸರು
ನದೀದೇವತೆಗಳ ಸ್ತುತಿ116ಸ್ಮರಿಸುವೆನನುದಿನ ಮುದದಿಂದ | ಈಧರಿಯ ಮ್ಯಾಲುಳ್ಳ ಮಹಾ ನದಿಗಳ ಪಗೌತಮನಘ ಪರಿಹಾರ ಮಾಡಿದ ಗೋದಾ |ಮಾತೆ ಶ್ರೀ ಕೃಷ್ಣವೇಣೀ ಸರಸ್ವತೀ ||ಆ ತರೂವಾಯ ಶ್ರೀ ಕಾವೇರಿ, ಸರಿಯು ಶ್ರೀ ಯಮುನಾ |ಧೌತ ಪಾತಕೆ ಶ್ರೀ ನರ್ಮದ ತುಂಗಾ 1ಸಿಂಧೂ ಭವನಾಶಿನಿ ಕುಮದ್ವತಿ ಶ್ರೀ ವಂಝಾರ |ಸುಂದರ ಭೀಮಾ ತಾಮ್ರಪರಣೀ ಮಲಹಾ ||ಮಿಂದರೆ ಪಾವನ ಮಾಡುವ ಬಹು ನದಿಗಳ |ಒಂದೇ ಮನಸಿಲಿಂದಾ ಪೊಗಳುವೆ 2ವಾರಣೀ ಫಲ್ಗುಣೀ ಶ್ರೋಣ ಭದ್ರಾ ಗಂಡಕಿಹೇಮ|ಮೂರುವೇಣಿಗಾಯತ್ರಿ ವೇಗವತೀ ||ಸೂರಿಗಮ್ಯ ಕೌಸಿಕ ಮಣಿಕರಣಿಕ ಗೌತಮಿ ಭಾ |ಗೀರಥಿ ಕಾಗಿನಿ ಶ್ರೀ ವೇತ್ರವತೀ3ಹೇಮವತಿ ನೇತ್ರವತಿ ಪಾಪನಾಶಿ ಶ್ರೀ ಸೀತಾ |ಆ ಮಹಾಳಕನಂದಾ ಹಯಗ್ರೀವ ||ಹೇಮಮುಖರ ತಾಪಿನಿ ಕಾಳಿ ಸೌಪರಣಿ ಪಿನಾಕೀ |ಶ್ರೀ ಮತ್ಕಪಿಲ ಜಮದಗ್ನಿಪ್ರಣವಸಿದ್ಧ4ಮರುದ್ವತಿ ಮದಿರ ಮೇನುಕಾ ಸೂನಾಸಿ ಚಕ್ರವತಿ |ಗರುಡ ಶಂಖವತೀ ಕುಹು ಮಹೇಶ್ವರೀ ||ಸರಯು ಜಯ ಮಂಗಳ ಯೋಗಕೃತು ಮಾಲಾ ಗದಾ |ಧರಿ ಮಾಲಿನೀ ಗಾರ್ಗಿಣೀ ದೇವವತಿ5ಸಾವಿತ್ರಿ ಧನ್ಯಮಾಲಾ ಧರ್ಮ ಚಕ್ರತೀರ್ಥಹರಿ|ದ್ರಾವತಿ ಇಂದ್ರಾಣಿ ಪಾತಾಳಗಂಗಾ ||ಶೈವಕುಂಡ ಕುಂಡಿನಿ ನೀರ ಕುಮಾರ ಧಾರೀ ಶು |ಶಾವರ್ತಿ ಮೌಳೀ ಲೋಕಪಾವನೀ 6ಸ್ವಾಮಿ ಪುಷ್ಕರ್ಣಿ ಚಂದ್ರ ಪುಷ್ಕರ್ಣಿ ಮಾನಸ ಪುಷ್ಕರ್ಣಿ |ಶ್ರೀ ಮಧ್ವ ಸರೋವರ ಪದ್ಮ ಸರಾ ||ಸೋಮಭಾಗಾ ವ್ಯಾಸಸಿಂಧುಶ್ರೀ ಪಂಪಾ ಸರೋವರ |ವಾಮನ ಶ್ರೀ ಮಯೂರ ಸರೋವರ 7ರೋಮ ಹರ್ಷಣ ತೀರ್ಥ ಸೀತಾ ಸರೋವರ ಪುಣ್ಯ |ಧಾಮಾ ಶ್ರೀ ಕಪಿಲತೀರ್ಥ ಧವಳಗಂಗಾ ||ಭೀಮಸೇನ ತಟಾಕಬ್ರಹ್ಮಜ್ಞಾನಕನ್ಯಹೃದಯ |ಶ್ರೀ ಮದ್ವಿಶಿಷ್ಟ ತೀರ್ಥ ತಾರಾ ತೀರ್ಥ 8ಈ ತೀರ್ಥಗಳ ದಿವ್ಯನಾಮನಿತ್ಯಪಠಿಸಲು |ಯಾತಕ್ಕಾದರೂ ವಿಘ್ನ ಬಾರದು ||ಮಾತರಿಶ್ವಪ್ರೀಯ ಪ್ರಾಣೇಶ ವಿಠಲನು ಬಹು |ಪ್ರೀತನಾಗಿ ಬಿಡದೆ ಪೊರೆವನು 9
--------------
ಪ್ರಾಣೇಶದಾಸರು