ಒಟ್ಟು 646 ಕಡೆಗಳಲ್ಲಿ , 82 ದಾಸರು , 509 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಸಿಕ್ಕಿದೆ ಬಾರೆಲೆ ಹೇ ಕಳ್ಳಾ ನಿನ್ನಚೊಕ್ಕ ಸಹಸಾ ಜರಿವವಳಲ್ಲಭಕುತೀಲೆ ಕಟ್ಟುವೆ ಈರಡಿಯ ನಡೆಅಕ್ಕ ಗೋಪಮ್ಮನಿದ್ದೆಡೆಯ ಪ.ಮುನ್ನಿನಪರಾಧಗಳ ತಾಳ್ದೆ ನಾನಿನ್ನ ದಿಟ್ಟತನ ಬಲವರಿದೆಚಿನ್ನನೆನಬಹುದೇನೊ ನಿನಗೆ ದಿಟ್ಟಗಣ್ಣವ್ಹರಿದೆಮ್ಮಯ ಮೊಲೆಗೆಉನ್ನತ ಗೋಡೆಗೆ ನಿಚ್ಚಣಿಕೆಯಿಕ್ಕದೆ ಪಾರಿದೆಘನ್ನ ಪಾಲು ಮೊಸರ ಗೋಪರೊಡನೆ ಸವಿದೆಉನ್ನತ ಮಹಿಮೆಯೆತ್ತ ಘನ್ನಜಾರತನಯೆತ್ತಬೆನ್ನ ಬಡಿಯುತ ನಗೆ ಬಿಡದಿಹ ಕಳ್ಳಾ 1ಹರಿಮಧ್ಯದಬಲೆಯರೆಳೆದೆ ಪಂಚಶರನ ಭರಕೆ ಮತಿಗಳೆದೆಹರವಿ ತುಪ್ಪಾದರೆ ನೆಗೆದೆ ಈಗಕರೆದರೆ ಬರಲೊಲ್ಲೆ ನಗದೆಚೋರತನವೇಕೆ ಗಂಭೀರತನವೇಕೆಪರಿಪರಿಹಲವಂಗವೇಕೆ ವರಕರುಣೇಕೆಸಿರಿಕಾಂತನಹದೆತ್ತ ದುರುಳತನಗಳೆತ್ತಕ್ರೂರಮುಖಕಂಜಿದಡೆ ಬಿರುದು ಪೋಯಿತಲಾ 2ತೊಂಡಮಕ್ಕಳ ಬಲವ ನೋಡಿದೆ ಬಲುಪುಂಡನಂತೆ ಕದನವನಾಡಿದೆಭಂಡತನದಲೊಬ್ಬನ ಬಡಿದೆ ದೊಡ್ಡಗಂಡಸಿನಂದದಿ ಮೇಲೋಡಿದೆಗಂಡನುಳ್ಳ ಬಾಲೆಯರ ಸದನಕೆ ಗಮಿಸಿ ಪ್ರಚಂಡತನದಿ ಮಿಂಡವೆಣ್ಣುಗಳ ಪಿಡಿದೆತಂಡ ತಂಡದೊಳು ಮುದ್ದುಕೊಡಲೀಸದಿರರು ಬೊಮ್ಮಾಂಡ ಪತಿಯಾದರಿದು ಸಲುವುದೆ ಕಳ್ಳಾ 3ಉತ್ತಮ ಮರ ನೆರಳ ನೋಡಿದೆ ಮರಹತ್ತುತಲೆ ಚಂಡನೀಡಾಡಿದೆಸುತ್ತಲಿಹ ಗೋವರ ಬೇಡಿದೆ ಅವರೆತ್ತಿ ಕೊಡದಿರೆ ಹಗೆವಿಡಿದೆಮತ್ತಮಾವನ್ನೊತ್ತಿ ಮುದುಮುತ್ತನ ಕೈವಿಡಿದೆಕತ್ತಲೆ ಹಕ್ಕಿಯ ಮಾಡಿ ದಿತಿಜರನರಿದೆಎತ್ತಣ ವೈಕುಂಠ ನಿನಗೆತ್ತಣನಂತಾಸನವೊಭಕ್ತರ ಕಾಯ್ದೆ ಆವಪಟ್ಟಲಿಹೆ ಕಳ್ಳಾ 4ಪೊಂದೊಡಿಗೆ ತೊಡದೆ ನಡುವಿರುಳೆ ಬರೆಕುಂದದೆ ವ್ರತಗೆಟ್ಟ ತರಳೆಛಂದವೇನೊ ನಿನಗೀವಾಜರೆಲೆ ಗೋವಿಂದೆರಡು ಕೈಕಟ್ಟಿ ತೋರಲೆಒಂದೊಂದುಸುರಲಿ ನಿನ್ನ ಗುಣಮಾಣಿಕದಖಣಿಅಂಧರಿಗರಿವುದೆ ಪ್ರಸನ್ವೆಂಕಟೇಶಮಂದರಘ ರಂಧ್ರಾವಳಿ ಪೊಂದಿಸಿ ನೋಡಲಾಗದುಇಂದಿರೆಯರಸನೆ ದಾಸವೃಂದವನು ಪೊರೆಯೊ 5
--------------
ಪ್ರಸನ್ನವೆಂಕಟದಾಸರು
ಸುಪುತ್ರನು ಎಂಬುವನಿವನುಸುಪುತ್ರನನು ಹೇಳುವೆ ನಾನುಪತಂದೆ ತಾಯಿಗಳ ಪೂಜಿಸುವಬಂಧುಗಳಿಗೆ ಬಹು ಪ್ರಿಯನಾಗಿ ಇರುವಎಂದಿಗೂ ಕೆಟ್ಟದ್ದ ನುಡಿಯ ಆವ-ಬಂದವರಿಗೆಲ್ಲ ಅನ್ನವ ಕೊಡುವ1ಕುಲದ ಆಚಾರವ ತಪ್ಪಿಸನುಹಲವು ವ್ರತಗಳನವ ತಾ ಬಿಡನುಬಲು ತಿಳುವಳಿಕೆಯನು ತಿಳಿದಿಹನುನೆಲೆಯಿಲ್ಲದ ತಪಮಾಡುವನು2ಅಣ್ಣ ಅತ್ತಿಗೆಗೆ ಉತ್ತರಕೊಡನುಪುಣ್ಯ ಕಥೆಯನು ಕೇಳ್ವುದ ಬಿಡನುತನ್ನ ದೇಹವ ಪೋಷಣೆ ಮಾಡನುಭಿನ್ನ ಬುದ್ಧಿಯನೆಂದಿಗು ತೋರನು3ತತ್ವ ವಿಚಾರವೆಂಬುದೆ ಜೀವನಿತ್ಯಅನಿತ್ಯವ ತಿಳಿದು ಅವನೀವಸತ್ಪುರುಷರೊಳು ಒಡನಾಡುವಎಲ್ಲಮಿಥ್ಯೆಎಂದರಿವ4ಸಂಶಯ ಸಂಕಲ್ಪನೀಗಿಧ್ವಂಸ ಮಾಡಿ ವಾಸನೆಯೆಲ್ಲವಶಿಂಶುಮಾರದ ಚಕ್ರಕೆ ಹೋಗಿಹಂಸ ಚಿದಾನಂದ ಗುರುವಾಗಿ5
--------------
ಚಿದಾನಂದ ಅವಧೂತರು
ಸುವ್ವಿ ಕೈಟಭಹಾರಿ ಸುವ್ವಿ ಚಾಣೂರದಾರಿಸುವ್ವಿಮಲ್ಲಮುಷ್ಟಿಕರವೈರಿಶ್ರೀ ಕೃಷ್ಣನ್ನಸುವ್ವೆಂದು ಪಾಡಿ ರಕ್ಷಿಪ ಸುವ್ವಿ ಪ.ವಿಶ್ವಬೀಜವ ಪೊತ್ತ ಗಿರಿ ಪೊತ್ತಧರೆಪೊತ್ತಶಿಶು ಕೃಷ್ಣಾಜಿನ ಪರಶು ಧನು ಪೊತ್ತಶಿಶು ಕೃಷ್ಣಾಜಿನ ಪರಶುಧನು ಪೊತ್ತಗವ ಪೊತ್ತ ದಿಗ್ವಸನ ಇಟ್ಟಿಯ ಪೊತ್ತ 1ಶ್ರುತಿಗೆದ್ದವನ ಗೆದ್ದಾಮೃತ ಗೆದ್ದಸತಿಗೆದ್ದದಿತಿಜಬಲಿಕ್ಷತ್ರಿಯರಾಕ್ಷಸರ ಗೆದ್ದದಿತಿಜಬಲಿಕ್ಷತ್ರಿಯ ರಾಕ್ಷಸರ ಗೆದ್ದ ಅಲರ ಗೆದ್ದಪತಿವ್ರತೆ ಅಧರ್ಮಿಗಳ ಗೆದ್ದ 2ಎವೆ ಇಲ್ಲ ಮೃದು ಇಲ್ಲ ಜವದೊಳೆಡಬಲವಿಲ್ಲಕುವರೇಂದ್ರ ವಿಪ್ರಮಾರ್ಗೆಡರಿಲ್ಲಕುವರೇಂದ್ರ ವಿಪ್ರಮಾರ್ಗೆಡರಿಲ್ಲ ಕೃಷ್ಣ ಪ್ರಸನ್ವೆಂಕಟಯೋಗಿಕೃಪೆಗೆ ಕಡೆಯಿಲ್ಲ3
--------------
ಪ್ರಸನ್ನವೆಂಕಟದಾಸರು
ಸ್ಥಾಣುಮಹೇಶ್ವರ ತ್ರಿನಯನ ||ಶಂಕರ||ಮಾಣದೆಸಲಹೋ ರುದ್ರಾಣಿ ಮನೋಹರ ಪಪೂರ್ಣ ಕೃಪೆಯೊಳ್ ನಿನ್ನ | ಶರಣನೆಂದೆನಿಸೆನ್ನ ಅಬಾಣನಿಗೊಲಿದಾತಣ್ಗದಿರನಿಶೇಖರ |ಭೂತನಾಥನೆಭವ| ಭೀತಿವಿನಾಶನೆ |ಪಾತಕಹರಸುರ | ವ್ರಾತಾನಮಿತನೆ ಚಭೂತಳದೊಳಗೆ ಸರ್ವಾರ್ಥರಕ್ಷಕನೆಂದು |ಖ್ಯಾತಿಯ ತಳೆದ ಕಾತ್ಯಾಯನಿ ರಮಣಾ 1ರುದ್ರಚಮಕಗಳಿಂದ | ಲಭಿಷೇಕವಗೈದು |ಶ್ರದ್ಧೆಯೊಳರ್ಚಿಸಲಾರೇ | ಪತ್ರೆಯ ಕೊಯ್ದು |ರುದ್ರಾಕ್ಷಿಯು ಭಸ್ಮಲೇಪನ ಧರಿಸುತ |ಪ್ರದೋಷದ ವ್ರತವರಿಯೆನ್ನುದ್ಧರಿಸೊ 2ಸುಗುಣಶರಧಿಲಿಂಗ | ಪೂಜೆ ವಿನೋದಿತ |ಮೃಗದ ನೆವದಿ ಪಾರ್ಥಗೊಲಿದಕೈರಾತ|ಜಗದೀಶ್ವರನೆ ಗೋವಿಂದನಸಖನಿನ್ನ |ಮೊಗವ ತೋರಿಸುದಾಸಗೊಲಿದು ನೀ ದಯದಿ 3
--------------
ಗೋವಿಂದದಾಸ
ಹರಿ ನಿನ್ನೊಲುಮೆಯು ಆಗುವತನಕ |<?xmಟ veಡಿsioಟಿ='1.0' eಟಿಛಿoಜiಟಿg='uಣಜಿ-8'?>ಅರಿತು ಸುಮ್ಮಗಿರುವುದೆ ಲೇಸು ಪ.ಮರಳಿ ಮರಳಿ ತಾ ಪಡೆಯದ ಭಾಗ್ಯವು |ಮರುಗಿದರೆ - ತನಗಾದೀತೆ ? ಅಪದೂರು ಬರುವ ನಂಬಿಗೆಯನು ಕೊಟ್ಟರೆ |ದುರ್ಜನ ಬರುವುದು ತಪ್ಪೀತೆ ||ದೂರ ನಿಂತು ಮೊರೆಯಿಟ್ಟು ಕೂಗಿದರೆ |ಚೋರರಿಗೆ ದಯ ಪುಟ್ಟೀತೆ |ಜಾರನಾರಿ ತಾ ಪತಿವ್ರತೆ ಎನ್ನಲು |ಜಾಣರಿಗೆ - ನಿಜ ತೋರೀತೆ ||ಊರ ಬಿಟ್ಟು ಬೇರೂರಿಗೆ ಹೋದರೆ |ಪ್ರಾರಬ್ಧವು ಬೇರಾದೀತೆ 1ಪಾಟುಪಡುವುದು ಪಣೆಯಲ್ಲಿರಲು |ಪಟ್ಟಮಂಚ ತನಗಾದೀತೆ ||ಹೊಟ್ಟೆಯಲ್ಲಿ ಸುತರಿಲ್ಲೆಂದು ಹೊರಳಲು |ಹುಟ್ಟು ಬಂಜೆಗೆ ಮಕ್ಕಳಾದೀತೆ ?||ಬೆಟ್ಟದ ನವಿಲಿಗೆ ಕಣ್ಣೀರು ಬಂದರೆ |ಬೇಟೆಗಾರಗೆ ದಯ ಪುಟ್ಟೀತೆ ||ಕೆಟ್ಟ ಹಾವು ತಾ ಕಚ್ಚಿದ ವಿಷವದು |ಬಟ್ಟೆಯಲೊರಸಲು ಹೋದೀತೆ 2ಧನಿಕನ ಕಂಡು ಪಾಡಿ ಪೊಗಳಿದರೆ |ದಾರಿದ್ರ್ಯವು ತಾ ಹಿಂಗೀತೆ ||ದಿನದಿನ ನೊಸಲೊಳು ನಾಮವನಿಟ್ಟರೆ |ದೇವರಿಗೆ ತೃಪ್ತಿಯಾದೀತೆ ||ಎಣಿಸಿಕೊಂಡು ಎಳ ಹಂಜಿಯ ನೂತರೆ |ಅಣೆಯದ ಸಾಲವು ತೀರೀತೆ |ಅನುದಿನದಲಿ ಶ್ರೀ ಪುರಂದರವಿಠಲನ |ನೆನೆಯದಿದ್ದರೆಭವಹಿಂಗೀತೆ3
--------------
ಪುರಂದರದಾಸರು
ಹರಿಕಥಾ ಶ್ರವಣ ಸಾಧನವೆ ಮುಕುತಿ ಇದಕೆಸರಿ ಧರ್ಮವಿಲ್ಲೆಂದು ಪೇಳ್ವವು ಶ್ರುತಿತತಿ ಪ.ಶ್ರವಣದಿಂದಲಿ ಸಕಲ ಸದ್ಧರ್ಮ ಸಾಧನವುಭುವಿಯಲ್ಲಿ ಪೂಜ್ಯರಾಹೋರು ಸುಜನರುಸವೆಯದಾನಂದಮಯ ಭಕುತಿಸಿರಿದೊರಕುವುದುಅವರೇವೆ ಸೂಜÕರಾಗ್ವರು ಹರಿಯ ದಯದಿ 1ಅನವರತಶ್ರವಣವೆ ಮನನ ಮೂಲವು ಗಡಮನನದಲಿ ಹರಿಧ್ಯಾನ ಖಚಿತಾಹುದುಘನಪರಾತ್ಪರ ತತ್ವ ತಿಳುಹಿ ವಿರಕುತಿ ಭಾಗ್ಯವನು ಕೊಟ್ಟು ಶ್ರೀ ವಿಷ್ಣು ತೋರ್ವಗತಿಈವ2ಶ್ರವಣದಲಿ ನಾರದಗೆ ಗತಕಲ್ಪದ್ಯಪರೋಕ್ಷಸವಿಯಾದ ಸಾಮ್ರಾಜ್ಯ ಲೆಕ್ಕಿಸದ ಪ್ರಿಯವ್ರತಅವನಿಪರುವನಪೊಕ್ಕು ಹರಿಯನಾಶ್ರಯಸಿದರುದಿವಸೇಳರಲಿ ವಿಷ್ಣುರತನಿಗೆ ಮೋಕ್ಷ 3ದಿವಿಜಋಷಿ ಗಂಧರ್ವ ನೃಪರು ಮನುಜೋತ್ತಮರುವಿವಿಧ ತಿರ್ಯಗ್ಜಾತಿ ಸಜ್ಜೀವರುಶ್ರವಣಮಾತ್ರದಲಿ ಕಂಡರು ಸದ್ಗತಿಯನವರುದಿವಸಗಳೆಯದಲೆ ಆದರದಿಂದ ಬುಧರು 4ಹರಿಕಥಾಶ್ರೋತರಿಗೆ ಕರತಲವು ಮೋಕ್ಷ ಗಡಗುರುದ್ವಾರದಲಿಹರಿದೊರಕುವನು ಸತ್ಯಗುರುಮಧ್ವವರದ ಶ್ರೀಪ್ರಸನ್ವೆಂಕಟ ಕೃಷ್ಣಕರವಿಡಿದು ಪೊರೆವ ಸದ್ಗುರು ಪ್ರಿಯಜನಕೆ 5
--------------
ಪ್ರಸನ್ನವೆಂಕಟದಾಸರು
ಹರಿತಾ ದೂರಿಲ್ಲ ದೂರಿಲ್ಲಒರಟು ಮಾತಿನ ಸರಕೆ ಸಲ್ಲ ಪ.ಹರಿದಾಸರ ಸಂಗಕೆ ಸರಿ ಇಲ್ಲ ಗುರುಕೃಪೆಯಿರಲಿ ನಿತ್ಯೆಲ್ಲತರತಮವಿರಹಿತಗೆಲ್ಲಿ ಕೈವಲ್ಯವು ಅ.ಪ.ಧರ್ಮಾಥರ್Àಕಾಮ ಮೋಕ್ಷವನಿಚ್ಛಿಸುವನಿರ್ಮಳ ಮತಿಗಳಿಗಾವಾಗಕರ್ಮದ ಮೋಡಿಗೆ ಸಿಲುಕದವನಗುಣಕರ್ಮನಾಮೋಚ್ಚರಣೆ ಸಾಧನ1ಜ್ಞಾನ ಭಕುತಿ ವೈರಾಗ್ಯ ಹೊಲಬಲಿನಾನಾ ವ್ರತವ ಮಾಡಲು ಬೇಕುಹೀನಕೇಳಿಕೆ ಕಾಳಿಕೆಯನುಳಿದುನಿತ್ಯಶ್ರೀನಿವಾಸನೆಗತಿಎನ್ನಲು2ಸಂತತ ಅಂಗದಿ ಬಲವಿರುವನಕಕಾಂತ ಪ್ರಸನ್ವೆಂಕಟಪತಿಯಅಂತರಂಗದಿ ಚಿಂತಿಸಿ ಕಳೇವರವನುಪ್ರಾಂತಯಾತ್ರೆಗೆ ತ್ಯಜಿಸುವಗೆ 3
--------------
ಪ್ರಸನ್ನವೆಂಕಟದಾಸರು
ಹರಿದಿನ ಇಂಥ ಹರಿದಿನ ಪ.ಹರಿದಿನದ ಮಹಿಮೆ ಹೊಗಳಲಗಾಧಪರಮಭಾಗವತರಾಚರಣೆಗಾಹ್ಲಾದÀದುರಿತದುಷ್ಕøತ ಪರ್ವತಕೆ ವಜ್ರವಾದಮರುತ ಸದ್ವ್ವ್ರತಕೆಲ್ಲ ಶಿರೋರತ್ನವಾದ ಅ.ಪ.ಭಕ್ತಿಗೆ ಮೊದಲು ವಿರಕ್ತಿ ಬೀಜವೆಂಬಸಕಲ ತಪದೊಳೆಲ್ಲ ಮೇಲೆನಿಸಿಕೊಂಬಮಖಕೋಟಿಗಧಿಕ ಫಲಸ್ಥಿರ ಸ್ತಂಭಮುಕ್ತಿ ಸೋಪಾನ ನಿಧಾನತ್ವವೆಂಬ 1ತ್ವಕ್ ಚರ್ಮ ಅಸ್ತಿ ಮಜ್ಜ ಮಾಂಸರುಧಿರಯುಕ್ತ ಸಪ್ತ ಧಾತುಗಳಿಹ ಶರೀರನಖಕೇಶ ಕಫ ಸ್ವೇದ ಮಲ ಮೂತ್ರಾಗರ ಈನಿಖಿಳಪಾವನ ಮಾಡುವ ನಿರಾಹಾರ2ವರವಿಪ್ರಕ್ಷತ್ರಿಯ ವೈಶ್ಯ ಶೂದ್ರ ಜನರುತರಳಯೌವನ ವೃದ್ಧ ನಾರಿಯರುಕಿರಾತಪುಲತ್ಸ್ಯಾಂದ್ರ ಹೂಣ ಜಾತಿಯವರುಹರಿವ್ರತ ಮಾತ್ರದಿ ಮುಕ್ತಿಯೈದುವರು 3ದ್ವಿಜಗೋವಧ ನೃಪರನು ಕೊಂದ ಪಾಪನಿಜಗುರು ಸತಿಯರ ಸಂಗದ ಪಾಪಅಜಲಪಾನದ ದಿನದುಂಡ ಮಹಾಪಾಪನಿಜನಾಶ ಮೋಕ್ಷ ಪ್ರಾಪ್ತಿಯು ಸತ್ಯಾಲಾಪ 4ಯಾಮಿನಿಯಲಿ ಅನಿಮಿಷದ ಜಾಗರವುಶ್ರೀ ಮದ್ಭಾಗವತ ಶ್ರವಣ ಗೀತಾಪಠಣಪ್ರೇಮವಾರಿಧಿಲಿ ಮುಳುಗಿ ಸಂಕೀರ್ತನೆಯುಧಾಮತ್ರಯದ ಸುಖಕಿದೇ ಕಾರಣವು 5ಅರ್ಧಕೋಟಿ ತೀರ್ಥಸ್ನಾನವೆಲ್ಲ ಅಜಸ್ರಪ್ರಯಾಗ ಕಾಶಿವಾಸವೆಲ್ಲ ಸಹಸ್ರ ಕೋಟಿ ಭೂಪ್ರದಕ್ಷಿಣೆಯೆಲ್ಲಸುಶ್ರದ್ಧೆ ಸಹ ಜಾಗರಕೆ ಸರಿಯಲ್ಲ 6ಪಂಚಮಹಾ ಪಾಪ ಪ್ರಪಾಪವವಗೆವಂಚಕ ಪಿಶುನ ಜನರ ಪಾಪವವಗೆಮಿಂಚುವ ಕ್ಷೇತ್ರವಳಿ ಪಾಪವವಗೆಪಂಚಕವ್ರತ ಪೆತ್ತ ವ್ರತ ಉಲ್ಲಂಘಿಪಗೆ 7ಸರ್ಪಶಯನಗೆ ನೀರಾಜನವೆತ್ತಿ ನೋಡಿಉಪವಾಸದಿ ಭಗವಜ್ಜನ ನೃತ್ಯವಾಡಿಚಪ್ಪಾಳಿಕ್ಕುತ ದಂಡಿಗೆ ಮುಟ್ಟಿ ಪಾಡಿತಪ್ಪೆ ನಾಯಿ ನರಕ ಫಲ ಕೈಗೂಡಿ 8ಶ್ರುತಿಪಂಚರಾತ್ರಾಗಮವು ಸಾರುತಿವೆಯತಿ ಮಧ್ವರಾಯರುಕುತಿ ಪೇಳುತಿವೆಕ್ರತುಪ್ರಸನ್ವೆಂಕಟ ಕೃಷ್ಣ ಮತವೆಕ್ಷಿತಿಪತಿ ಸುರರತಿಶಯದ ಸದ್ವ್ವ್ರತವೆ 9
--------------
ಪ್ರಸನ್ನವೆಂಕಟದಾಸರು
ಹರಿಯೆ ಗತಿಯೆನ್ನಿರೈ ಶ್ರೀನರಹರಿಯೆ ಶರಣೆನ್ನಿರೈ ಪ.ಹರಿಪಾದಕಮಲವ ನಂಬದ ಮೂಢನು ಮನುಜನಲ್ಲದನುಜಶ್ರೀಹರಿಚರಿತಾಮೃತ ಕೇಳದೆ ಗರ್ವಿಪ ನರನು ಪಾಮರನÀು 1ಹರಿಯ ಬಂಟರ ಅನುಸರಣೆಗಳ ಪರಿತ್ಯಾಗಿ ವೃದ್ಧಗೂಗಿಹರಿಮಹಿಮೆಯ ಹೊಗಳಾಡದ ಮಾತಿನ ಮುಖನು ಮಂಡೂಕನು 2ಕೃಷ್ಣಗೆ ಪ್ರಿಯವ್ರತ ದಾನಕೆ ವಿಮುಖಾದ ಧನಪನವ ಕುಣಪಕೃಷ್ಣಾಕೃತಿಯ ಬಹಿರಂತದಿ ನೋಡದ ಜಾಣನವ ಕೋಣ 3ಕೃಷ್ಣಗೆ ನಮಿಸದೆಸತಿಸುತರೊಳು ಭೂರಿತುಷ್ಟ ಹಿತನಷ್ಟ ಶ್ರೀಕೃಷ್ಣನವರ ಕಂಡೆರಗದ ವಿಷಯದಭೋಗಿಭವರೋಗಿ4ಗೋವಿಂದ ಸರ್ವೋತ್ತಮನಿರೆ ಬೇರೆಂಬಜ್ಞಾನಿ ಮದ್ಯಪಾನಿಗೋವಿಂದನೊಳು ವಿಶ್ವಾಸಿಲ್ಲದ ಭಕ್ತಿಯ ಧೀರ ಶುದ್ಧಜಾರ5ಗೋವಿಂದ ತೀರ್ಥ ಪ್ರಸಾದÀವ ನರಿಯದ ಬಲ್ಲನೆ ಕಳ್ಳನುಗೋವಿಂದನೊಪ್ಪದ ಮತವಿಡಿದವ ಮಹಿಗೆಕಕ್ಕಸರಕ್ಕಸ6ಪ್ರಸನ್ನ ಮೂರುತಿ ವಿಧಿಭವವಂದ್ಯನ ಅರ್ಚಕ ಧನ್ಯರೆ ಮಾನ್ಯರುಪ್ರಸನ್ನವೆಂಕಟಪತಿ ಕಂಡುಂಡಾ ಭಕ್ತಿಯಾಸಕ್ತರೆ ಮುಕ್ತರು 7
--------------
ಪ್ರಸನ್ನವೆಂಕಟದಾಸರು
ಹರಿಯೆಂದು ಮನದಲ್ಲಿ ಮರೆದೊಮ್ಮೆ ನೆನೆದರೆ |ದುರಿತಪರ್ವತ ಖಂಡಿಪುದು ವಜ್ರದಂತೆ ಪ.ಮೇರು ಸುವರ್ಣದಾನವ ಮಾಡಲು ಪುಣ್ಯ |ನೂರು ಕನ್ಯಾದಾನವ ಮಾಡಲು ||ಧಾರಿಣಿಯೆಲ್ಲವ ಧಾರೆಯ ನೆರೆಯಲು ||ನಾರಾಯಣ ಸ್ಮರಣೆಗೆ ಸರಿಬಹುದೆ ? 1ಹತ್ತುಲಕ್ಷ ಗೋದಾನ ಮಾಡಲು ಪುಣ್ಯ - |ವ್ರತಗಳಅನುದಿನ ಆಚರಿಸಲು ||ಶತಕೋಟಿ ಯಜÕನ ಮಾಡಲು ಲಕ್ಷ್ಮೀ - |ಪತಿನಾಮ ಸ್ಮರಣೆಗೆ ಸರಿಯೆನ್ನಬಹುದೆ 2ಗಂಗೆ ಕಾಳಿಂದಿ ಗೋದಾವರಿ ಕಾವೇರಿ |ತುಂಗಭದ್ರೆಯಲಿ ಸ್ನಾನವ ಮಾಡೆ ||ಮಂಗಳಮೂರುತಿ ಪುರಂದರವಿಠಲ |ರಂಗನ ಸ್ಮರಣೆಗೆ ಸರಿಯೆನ್ನಬಹುದೆ ? 3
--------------
ಪುರಂದರದಾಸರು
ಹಲವನು ಯೋಚಿಸಲೇನು ಫಲ ಬರಿ |ಜಲವನು ಮಥಿಸಲಿನ್ನೇನು ಫಲ ||ಕುಲಜನು ಶೂದ್ರನ ಲಲನೆಯ ಕೂಡುತ |ಸಲಿಲದಿ ಮುಳುಗಿದರೇನು ಫಲ ||ಜಲಜಾಕ್ಷನ ಪದದೊಲುಮೆಯಿಲ್ಲದೆನರ|ಬಲಯುತ ತಾನೆನಲೇನು ಫಲ1ಪರಸತಿ ಪರಧನದಾಸೆಯೊಳಿರ್ಪನು |ಸುರನದಿಮುಳುಗಿದರೇನು ಫಲ ||ಪರಮಾತ್ಮನ ತಮ್ಮ ಹೃದಯದಿ ಕಾಣದೇ |ಧರೆಯಲ್ಲರಸಿದರೇನು ಫಲ2ಕಾಣದೆ ಕುಣಿಯೊಳು ಬಿದ್ದಾನೆಯು ಬಲು |ತ್ರಾಣಿಯಂತಾದರಿನ್ನೇನು ಫಲ ||ಕ್ಷೋಣಿಯೊಳಗೆ ಹರಿದಾಸರ ಜರೆಯುತ |ಜ್ಞಾನಿಯು ತಾನೆನಲೇನು ಫಲ3ಧೂರ್ತತನದಿ ಹಣ ಗಳಿಸುತ ಲೋಭದಿಸ್ವಾರ್ಥವೆಂದೆನಿಸಿದರೇನು ಫಲ ||ಪಾತ್ರಾಪಾತ್ರವನೆಣಿಸದೆ ದಾನವ |ಅರ್ತಿಯೊಳೆಸಗಿದರೇನು ಫಲ4ಪತಿಯನು ವಂಚಿಸಿರೂಪಮಾರುವಸತಿ|ವ್ರತಗಳ ಮಾಡಿದರೇನು ಫಲ ||ರತಿಪತಿಪಿತಗೋವಿಂದನ ನೆನೆಯದೆ |ಗತಿಯನುಬಯಸಿದರೇನು ಫಲ5xmಟ veಡಿsioಟಿ='1.0' eಟಿಛಿoಜiಟಿg='%SಔUP-ಇಓಅಔಆIಓಉ%'
--------------
ಗೋವಿಂದದಾಸ
ಹಲವು ಜನ್ಮದಲ್ಲಿ ಹರಿಯ ನೆನೆಯಲಿಲ್ಲಕಲಿಗಳು ಆಗಿ ನೀ ಕೆಡಬೇಡ ಮನುಜ 1ನೀಚಜಾತಿಯಲಿ ಪುಟ್ಟಿ ಅಧಮನಾಗಿರಬೇಡಭಜಿಸು ಭಕ್ತಿಗಳಿಂದ ಮಹಾಮಹಿಮ ಕೃಷ್ಣರ 2ನಂದ ಭದ್ರಾ ಜಯರಿಕ್ತ ಪೂರ್ಣ ವೆಂಬೊಚೆಂದುಳ್ಳ ತಿಥಿಯಲ್ಲಿಘೃತನವನೀತದಧಿಕ್ಷೀರ3ನಂದದಿ ಸಕ್ಕರೆಘೃತನವನೀತದಧಿಕ್ಷೀರದಿಂದಲಿ ಅರ್ಚಿಸಿ ಸುಕೃತವಪಡಿ4ಶಯನಾದಿಗಳಿಂದ ಶಾಖಾದಿ ಫಲವ್ರತಭಯದಿಂದ ಮಾಡೋರೆ ಸತತ 5ಅದರಿಂದ ಚಾತುರ್ಮಾಸ ನಾಲ್ಕು ತಿಂಗಳುಉಳಿದಿನ ಬಂತಲ್ಲ ಭವನ ಪಾವಕ(?) ಭೀತಿ 6ಆಷಾಢÀ ಶುದ್ಧ ಏಕಾದಶಿ ಮೊದಲಾಗಿಕಾರ್ತಿಕ ಶುದ್ಧ ದ್ವಾದಶಿ ಪರಿಯಂತ್ರ 7ಶ್ರೀಕಾಂತ ಯೋಗನಿದ್ರೆಲಿ ತಾ ಪವಳಿಸಿಈಕ್ಷಿಸುತಿರುವೋನೆ ಭಕ್ತರ 8ಹರಿಮಲಗ್ಯಾನೆ ಎಂದು ಅಜ್ಞಾನದಲಿ ನೀವ್ ಕೆಡಬೇಡಿಪರಿಪರಿಕಲ್ಪೋಕ್ತದ ಪ್ರಕಾರದ ವ್ರತಗಳ ಮಾಡಿ9ಸ್ನಾನ ಸಂಧ್ಯಾವಂದನೆಯ ಕಾಲಕಾಲದಲಿ ಮಾಡಿಮನದಲ್ಲಿ ವಾಮನನ ನೆನದು ಸುಕೃತವಪಡಿ10ಅತಿಥಿಗಳ ಮನ್ನಿಸಿ ಅನಾಚಾರಗಳ ಬಿಡಿಸತಿಸುತರನೆ ಒಡಗೂಡಿ ವಿಹಿತವ್ರತಗಳ ಮಾಡಿ 11ಆಷಾಡಮಾಸದಲಿ ಶಾಕ ಹದ್ದಿನ ಮಾಂಸಭೂಷಣ ಶ್ರಾವಣದಲಿದಧಿನಾಯಿಶ್ಲೇಷ್ಮ12ಭಾದ್ರಪದ ಮಾಸದಲಿ ಪಾಲು ಸುರಾಪಾನ ಆಶ್ವೀಜಕಾರ್ತೀಕ ಮಾಸದಲಿ ಚಿತ್ರಕ್ರಿಮಿರಾಶಿದ್ವಿದಳಬಹುಬೀಜ13ಮಾಸನಿಷಿದ್ಧ ವಸ್ತುವನು ಕುದಿಸಿ ಬೇಯಿಸಿದರೆಅಸ್ತ್ರವನು ದೇವರ ಅಂಗದೊಳಿಟ್ಟಂತೆ 14ಮಾಸನಿಷಿದ್ಧ ವಸ್ತುವನು ದೇವರಿಗೆ ಸಮರ್ಪಿಸಿದರೆಬಹುಕಲ್ಪ ನರಕದೊಳದ್ದುವಿರಿ ಪಿತೃಗಳ 15ಧರ್ಮಜರು ನಾರದರು ಸ್ತುತಿ ಮಾಡುತಿರುವೋರುಧರ್ಮರಾದರ ಸಂವಾದ ಚಾತುರ್ಮಾಸದ ಸಂಕಲ್ಪ 16ಈ ಕಥೆ ವ್ರತವನೆಲ್ಲ ಅರಿತು ಯೋಚಿಸಿದವರಿಗೆಬೇಕೆಂಬೊ ಮುಕ್ತಿಯನು ಕೊಡುವ ಹಯವದನ 17
--------------
ವಾದಿರಾಜ
ಹೆಸರು ತಂದಿರ್ಯಾ ಭಿಕ್ಷಕೆ |ಹೆಸರು ತಂದಿರ್ಯಾಪಅಸಮವೀರರೆಂಬ ಹೆಸರು |ಕುಶಲಗಾರರೆಂಬ ಹೆಸರುಶಶಿಯಂತೆ ಶೋಭಿಸುವ ಶಿಶುವು |ಕುಲಕೆ ಯೋಗ್ಯನೆಂಬ ಹೆಸರು ||ಹೆಸರು||1ದಾನಶೀಲರೆಂಬ ಹೆಸರು |ಮಾನವಂತರೆಂಬ ಹೆಸರು |ಸಾನುರಾಗದಲ್ಲೂ ಆತ್ಮ |ಜ್ಞಾನಿಗಳೆಂದೆಂಬ ಹೆಸರು2ಹಿರಿಯ ಮನೆತನದ ಹೆಸರು |ಗುರುಗಳಾ ಭಕ್ತಿಯಲಿ ಹೆಸರು |ಪರಮಭಾಗವತರ ತೆರದಿ |ಹರಿಯ ಶರಣರೆಂಬ ಹೆಸರು3ಪುತ್ರವತಿಯರೆಂಬ ಹೆಸರು |ಸತ್ಯಶೀಲೆಯರೆಂಬ ಹೆಸರು |ಪತಿಯ ಸೇವೆಯಲ್ಲಿನಿರತ|ಪತಿವ್ರತೇಯರೆಂಬ ಹೆಸರು4ಸತ್ಯಸಂಧರೆಂಬ ಹೆಸರು |ತತ್ವಜÕರೆಂದೆಂಬ ಹೆಸರು |ಚಿತ್ತ ಶುದ್ಧರೆನಿಸಿ | ಗೋವಿಂದಾನ |ದಾಸರೆಂಬ ಹೆಸರು5
--------------
ಗೋವಿಂದದಾಸ
ಹೋಯಿತಲ್ಲಾಯುಷ್ಯ ಹೋಯಿತಲ್ಲಯ್ಯಸಾಯಸಬಟ್ಟೆನು ಭವದಿ ಶ್ರೀಯರಸನ್ನ ನಂಬದೆ ಪ.ಪಶ್ಚಿಮ ಜಾಗರದಿ ಕಾಕುತ್ಸ್ಸ್ಥನ ಪ್ರೀತಿಗೋಸುಗದುಶ್ಚಿತ್ತ ವೃತ್ತಿಯನೀಗಿನಿಶ್ಚಿತನಾಗಿಸಚ್ಚಿದಾನಂದಕಾಯನ ಆಶ್ಚರ್ಯಕರ ನಾಮವಉಚ್ಚರಿಸದೆ ನಿದ್ರೇಲಿ ಮೆಚ್ಚಿ ಘುರುಘುರಿಸುತ 1ತುಲಸಿ ಮಂಜರಿ ಪುಷ್ಪ ಅಲಸದೆ ತಂದು ಶ್ರೀನಳಿನನೇತ್ರನ್ನ ನಾಮಾವಳಿಗಳಿಂದಸಲೆ ಅವನಂಘ್ರಿಕಮಲಕರ್ಪಿಸದೆ ಸದಾಲಲನೆಸಂಪದಾಬ್ಧಿಲಿ ಮುಳುಗಿ ದುರಾಶೆಯಲ್ಲಿ2ಸತತ ಶಕ್ತ್ಯಾನುಸಾರ ವ್ರತಧರ್ಮಾಚರಿಸದೆಅತಿಥÀರೊಳೀತನ ನಂಟನೆಂದರೆಅತಿಸ್ನೇಹ ಬಳಸುತ ಹಿತಬಿಟ್ಟೆ ವೃಥಾ ಕೆಟ್ಟೆಗತಿಕಾಣಿಸಿನ್ನಾರೆ ಶ್ರೀಪತಿ ಪ್ರಸನ್ವೆಂಕಟಯ್ಯ3
--------------
ಪ್ರಸನ್ನವೆಂಕಟದಾಸರು