ಒಟ್ಟು 13659 ಕಡೆಗಳಲ್ಲಿ , 138 ದಾಸರು , 6755 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಸಫಲವಾಯಿತು ಜನುಮ ಸಫಲವಾಯಿತು ಸಫಲವಾಯಿತೆನ್ನ ಜನುಮ ವಿಭು ಶ್ರೀ ವೈಕುಂಠೇಶನ ಕಂಡೇ ಪ ಚತುರವೇದ ಸ್ಮøತಿ ಪುರಾಣ ತತಿಗಳೊಂದಾಗಿ ನೆರೆದು ತಮ್ಮ ಮತಿಗಳಿಂದ ನುತಿಸಿ ಮಹಿಮೋ ನ್ನತಿಯ ಕಾಣದ ಮಹಿಮನ ಕಂಡೇ 1 ಶಂಖ ಚಕ್ರ ಗದೆ ಪದುಮಾ ಲಂಕೃತವಾದ ಹಾರ ಕೇಯೂರ ಕಟಕ ಮುಕುಟಾ ಲಂಕೃತನಾದ ಹರಿಯ ಕಂಡೇ 2 ಕರವ ಜಘನದ ಮೇಲೆ ಮ ಕರವ ತಾನಿದ್ದಯಿರವೆ ಸಂದೇಹವೇಕೆ ವೈಕುಂಠ ವೆಂದು ಅಟ್ಟೈಸುವಂದದಿ ಹರಿಯ ಕಂಡೇ 3 ಲಕುಮಿಗುಣಗಳೆಣಿಪನೆಂದು ಪಿಡಿದು ಅಕಳಂಕದುಂಗುಟದುಗುರುರೆ ಧ್ಯಾನಿಸಿ ಪ್ರಕಟಿತವಾದ ಗುಣಗಳನಂತ ನಿಕರವ ತೋರಿದ ಹರಿಯ ಕಂಡೇ 4 ತನ್ನ ನಂಬಿದವರನೆಂದು ಮನ್ನಿಪೆನೆಂಬ ಬಿರಿದ ತೋರ್ಪ ಚನ್ನ ಶ್ರೀ ರಂಗನಾಥ ಘನ್ನ ವೈಕುಂಠೇಶನ ಕಂಡೇ 5
--------------
ಬೇಲೂರು ವೈಕುಂಠದಾಸರು
ಸಮಜೊ ಭಾಯಿ ಸಕುನಾ ಚಾರೊ ಖುದಾಕಾ ತೆಲಗು ಕನ್ನಡ ತುರಕಾರೆ ವಂದೇ ಸುಖ ಧ್ರುವ ನಜರೋಮೆ ನಜರೋಮೆ ತನ್ನೊಳಗದೆ ಅತಿಸೂಕ್ಷ್ಮವಾಗಿ ತಿಳಕೋಮೆ ತಿಳಕೋಮೆ ಸದ್ಗುರು ವಚನ ಶೋಧುನಿ ಪಾಹಾ ಸಪ್ರೇಮ ಸಪ್ರೇಮ ಚುಡುವಯ್ಯ ಉನ್ನದಿ ಪೂರ್ಣ ಘನ ಮಹಿಮೆ 1 ಫ್ಯಾರೆ ವಳಖೂನಿ ಸಾರಾಸಾರಾ ನಿವಡೂನಿ ನಿವಡೂನಿ ನಜರ ಹುಜರ ದೇಖೋ ಯಾರಾ ಹೈಗನೀ ಹೈಗನಿ ಜನ್ಮಕ ಬಂದು ಮಾಡುವದೆ ಸಾಧನೀ ಸಾಧನೀ ಮಂಚಿ ಉನ್ನದಿ ನಕಳೆ ಸದ್ಗುರು ಪಾವುನಿ 2 ಚೆಪ್ಪೆವೈಯ್ಯ ಎಂದರ ಹೇಳುವ ಗುರು ನೀಠಾ ಗುರುನೀಠಾ ಆನಂದ ಆಹೆ ತುಜ ಮಹಿಪತಿ ಸುಖ ಮೋಠಾ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಸಮಾಜ ಚಿಂತನೆ :ನೀತಿಬೋಧನೆ ಅಜ್ಞಾನಿಗಳ ಕೂಡೆ ಅಧಿಕ ಸ್ನೇಹಕ್ಕಿಂತಸುಜ್ಞಾನಿಗಳ ಕೂಡೆ ಜಗಳವೇ ಲೇಸು ಪ ಉಂಬುಡುವುದಕಿಲ್ಲದರಸಿನೋಲಗಕಿಂತತುಂಬಿದೂರೊಳಗೆ ತಿರಿದುಂಬುವುದೆ ಲೇಸುಹಂಬಲಿಸಿ ಹಾಳ್ಹರಟೆ ಹೊಡೆವುದಕಿಂತ - ಹರಿಯೆಂಬ ದಾಸರ ಕೂಡೆ ಸಂಭಾಷಣೆಯೆ ಲೇಸು1 ಒಡನೆ ಹಂಗಿಸುವನೋಗರವನುಂಬುದಕಿಂತಕುಡಿನೀರು ಕುಡಿದುಕೊಂಡಿರುವುದೇ ಲೇಸುಬಿಡದೆ ಬಾಂಧವರೊಡನೆ ಕಡಿದಾಡುವುದಕಿಂತಅಡವಿಯೊಳಗಜ್ಞಾತ ವಾಸವೇ ಲೇಸು2 ಮಸೆಯುತಿಹ ಮತ್ಸರದ ನೆರೆಯೊಳಿರುವುದಕಿಂತಹಸನಿಲ್ಲದ ಹಾಳುಗುಡಿಯೇ ಲೇಸುಬಿಸಜಾಕ್ಷ ಕಾಗಿನೆಲೆಯಾದಿಕೇಶವರಾಯವಸುಮತಿಯೊಳು ನಿನ್ನ ದಾಸತ್ವವೇ ಲೇಸು 3
--------------
ಕನಕದಾಸ
ಸಮಾಸಮಳೆ ಸೀತೆ | ಹರಿಗೆ ಭುವಿ ಜಾತೆಬ್ರಹ್ಮೋದ್ಭವನ ಧನು | ಹಮ್ಮೀನ ನೃಪ ಮಂದಿದಮ್ಮು ಹಿಡಿದು ಎತ್ತೇ | ಹಮ್ಮು ಅಡಗಿತು ಪ ಅಮ್ಮಾ ನಿಮ್ಮಯ್ಯನ | ಒಮ್ಮನ ಪಣವನುಬ್ರಹ್ಮರ್ಷಿ ವಿಶ್ವಮಿತ್ರ | ಹಿಮ್ಮೇಳನಾಗಿ ಬಂದರಮ್ಮೆರಮಣ ರಾಮ | ಒಮ್ಮೇಲಿ ಪೂರೈಸಿದ ಅ.ಪ. ಬಾಲೆರಡ ಬಲ | ಮೇಳವಿಸಿ ಬರೆಮಾಲೆ ಪೂವಿನ | ಕೈಲಿ ಧರಿಸುತನೀಲವೇಣಿ ವಿ | ಶಾಲ ಕೀರ್ತಿಯಬಾಲ ಕೊರಳೊಳು | ಹಾಕಿ ನಿಂತಳು 1 ಸ್ಥಾಣು 2 ವ್ಯಾಜ ಅ | ಮಾರ್ಗ ಅತುಳನ್ನಮಾರ್ಗಣದಿ ಹನ | ಗೈದು ಸುಜನಕೆಭಾರ್ಗವೈಕ್ಯವ | ತೋರ್ದ ತನ್ನೊಳಗೆ 3 ಸತಿ | ಸಾನುಜ ಪೊರಟಏಣತೆರ ಕ್ರೂರ | ಕಾಣಿಸಲು ಸತಿತಾನಪೇಕ್ಷಿಸೆ | ಬಾಣ ಪಿಡಿಧ್ಹೋದ 4 ಕೃತಿ | ಸೇರಿ ಪುರಕ್ಹೊರಟ5 ವಾತ ಅಬ್ಧಿ ವೇ | ಗಾತಿಶಯ ಹಾರಿಮಾತೆಗುಂಗುರವಿತ್ತು | ವಾರ್ತೆ ಪೇಳೆ ಪ್ರಭುಸೇತು ಕಟ್ಟುತ | ಖ್ಯಾತ ಖಳ ಹನಸೀತೆಯೊಡ ಸೇರಿ | ಭ್ರಾತನನು ಪೊರೆದ 6 ಸಂಜೀವ ಸತಿ ಸಹ | ರಂಜಿಸಿ ರಾಜ್ಯ ಪ್ರಭಂಜನ ಗುರು ಗೋ | ವಿಂದ ವಿಠಲ ಮೆರೆದ7
--------------
ಗುರುಗೋವಿಂದವಿಠಲರು
ಸಮೀರಜ ಹನುಮ ಎನ್ನ ಪ್ರಾಣಾಪದಕಾ ಪ ಶಿರಿಚರಣದಲಿ ಮಸ್ತಕವನಿಟ್ಟ ಹೊಂತಕಾರಿ ಸುರಪನಂದನನ ಕೊಲ್ಲಿಸಿದ ನಿರುತ ಉದಾರಿ ಪರಮ ನಿನ್ನಂಘ್ರಿಯವಾರಿ ಸತತ ಶಿರದಲಿ ಧರಿಸುವೆನು ರಿಪುನಿಕರ ಮಾರೀ1 ಉಂಗುರುವ ಕೊಂಡು ಸರ್ರನೆ ಸಾಗರ ಹಾರಿ ತುಂಗ ಮಹಿಮಳಿಗೆ ವಂದಿಸಿ ಗುರುತನೆ ತೋರಿ ಸಂಗಡಲೆ ಯಿತ್ತು ನಂದನ ಕಿತ್ತೆ ಬಲು ಮೀರಿ ಸಂಗರಕೆ ಬಂದ ವಿಕಾರಿಗಳ ನೋಡಿ ಭಂಗಬಡಿಸಿದೆ ಅವರ ಬಲವೆಲ್ಲ ತೂರಿ 2 ನಭಚರರು ಕೊಂಡಾಡೆ ಪುರವೆಲ್ಲ ದಹಿಸಿದೆ ಅಭಿವಂದಿಸಿ ಕುರುಹವರಿಯನ ಮುಂದುವರಿಸಿದೆ ಅಬುಧಿಯನು ವೇಗ ಬಂಧಿಸಿದೆ ಪರ್ವತವ ರಭಸ ಮಿಗೆ ತಂದು ಕಪಿಬಲವನೆಬ್ಬಿಸದೆ 3 ದಾತನಿಗೆ ರಥವಾಗಿ ಚಲ್ಲಿರಿದು ಬೊಬ್ಬಿರಿದೆ ಭೂತಳಕೆ ನೆಗ್ಗೊತ್ತಿ ಎದುರಾದವರ ತರಿದೆ ನೀ ತಡೆಯದೆ ಪೋಗಿ ಮೈರಾವಣನ ಮುರಿದೆ ಕೋತಿಗಳೊಳಗೆ ನೀ ಮೆರೆದೆ ವೇದ ವಿಖ್ಯಾತನೆ ರಾಮ ಸಹಭೋಜದಲಿ ನೆರೆದೆ 4 ಬಲವನು ಬೆಳಿಸಿ ವಾರಿಧಿಯ ಆಚೆಗೆ ಬಲವ ಆಲಸÀಗೈಸದಲೆ ದಾಟಿಸಿದೆ ಬಲು ಛಲವಾ ವಾಲಯದಲಿ ಮಾಡಿ ವೈರಿದಳವನು ಗೆಲುವಾ ಕಾಳಗದೊಳು ನಿನ್ನ ಬಲವ ಕೊಂಡಾಡಿದವರು ಮೂಲೋಕದೊಳಗೆ ಸವಿಯದು ಬಲು ಚೆಲುವಾ 5 ಶತಮೌಳಿಯನು ಕೊಲಿಸಿ ಸತ್ಕೀರ್ತಿಯನು ಪಡೆದೆ ಪ್ರತಿಕಕ್ಷಿ ನಿನಗಿಲ್ಲವೆಂದು ಸತ್ಯವ ನುಡಿದೆ ಸತತದಲಿ ಕಾಪಾಡು ಎನುತ ಪಾದವ ಪಿಡಿದೆ ಮತಿಯಲಿಡು ಎಂದು ಬೇಡಿದೆ ಅಭಯವ ಚತುರ ಫಲದಾಯಕನೆ ದಯಮಾಡು ಬಿಡದೆ 6 ಕಿಂಪುರುಷ ಖಂಡದಲಿ ನಿಜಮೂರುತಿಯ ಧ್ಯಾನ ಇಂಪಾಗಿ ಮಾಡುವ ಅಂಜನೆಯನಂದನಾ ಲಂಪಟವೆ ಸಾಕು ನಿನ್ನಯ ಸುರದ್ರುಮ ಚರಣ ಸಂಪಿನಲಿ ಪೊಂದಿಸನುದಿನ ಎನ್ನ ಗುರುಸಂಪತ್ತು ವಿಜಯವಿಠ್ಠಲನಲ್ಲಿ ಪ್ರಾಣಾ7
--------------
ವಿಜಯದಾಸ
ಸಮೀರನ ಮಹಿಮೆ ಪೇಳುವೆವಾಸುದೇವ ವಿಧೀರ ಮುಖಸುರರಾಶಿತಸ್ತ್ರೀ ಮುನಿಯತೀಶ ಸು-ದಾಸರಭಿ ನಮಿಪೆ ಪ ವಾರಿಧಿಯನು ದಾಟುಲೋಸುಗಶ್ರೀ ರಮೇಶನ ನಮಿಸಿ ಗಿರಿಯನುಚಾರು ಚರಣದಿ ಮೆಚ್ಚಿ ಮೇಲಕೆ ಹಾರಿದನು ಹನುಮಾ 1 ಹರಿಯ ಬಲವನು ಸರಿಸಿ ಪೋದುವುತರುಗಳಬ್ಧಿಯು ಯಾದಸಂಗಳುಶರಧಿ ತಳಗತ ಕಪಿಯಗೋಸುಗಗಿರಿಯು ಎದ್ದಿಹನು 2 ಧರಣಿಧರ ಪಕ ನಾಶ ಕಾಲದಿಮರುತ ರಕ್ಷಿತ ಪಕ್ಷ ಹೈಮನುಶರಧಿ ಭೇದಿಸಿ ಹನುಮ ವಿಹೃತಿಗೆತ್ವರದಿ ಬಂದಿಹನು 3 ಪರಮ ಪೌರುಷ ಬ ಲನು ಕಪಿವರಚರಿಸದಲೆ ವಿಶ್ರಮವನದರೊಳುಹರುಷದಿಂದಪ್ಯವನ ಕಂಡನುಉರಗ ಮಾತೆಯನು 4 ಸುರಸೆಯೆಂಬುವ ನಾಗಮಾತೆಗೆವರವ ನೀಡುತ ಕಪಿಯ ಬಲವನುಅರಿಯಲೋಸುಗ ಕಳುಹಿಸೀದರುಸುರರು ಶರಧಿಯಲಿ 5 ಯಾವ ವಸ್ತುವ ತಿನ್ನೋ ಇಚ್ಛೆಯು ೀವಿ ನಿನಗಾಗುವದೊ ಅದು ತವಬಾಯಿಗನ್ನಾಗಿರಲಿ ಎಂದರುದೇವತೋತ್ತುಮರು 6 ಸುರರ ವರವನು ಕಾಯೊಗೋಸುಗಸುರಸೆ ಮುಖದೊಳು ಹೊಕ್ಕು ಹೊರಡುತಪರಮಮಣು ರೂಪದಲಿ ದಿವಿಜರಹರುಷ ಬಡಿಸಿದನು 7 ಅಸುವರಾತ್ಮಜನುರು ಪರಾಕ್ರಮಹೃಷಿತರಾಗುತ ನೋಡಿ ದಿವಿಜರುಕುಸುಮವೃಷ್ಟಿಯ ಮಾಡುತವನಲಿಯಶಸು ಪಾಡಿದರು 8 ಛಾಯಾ ಪ್ರಾಣಿಗಳನ್ನು ಹಿಡಿಯುವಮಾಯಾ ಸಿಂಹಕೆ ನಾಮ ಕಸುರಿಯವಾಯುಸುತ ನೋಡಿದನು ಎದುರೆ ವಿಹಾಯ ಮಾರ್ಗದಲಿ 9 ವಿಧಿಯು ಲಂಕೆಯ ಕಾಯಲೋಸುಗಸುತಿಗ್ವರಗಳನಿತ್ತು ಕಾದಿಹಾಮದದಿ ಅಸುರಿಯು ತನ್ನ ಛಾಯವವದಗಿ ಪಿಡಿದಿಹಳು 10 ಆಗ ಆಕೆಯ ಪೊಕ್ಕು ಪೊಟ್ಟೆಯಯೋಗದಿಂದಲಿ ಪಾವಮಾನಿಯುಬೇಗ ಬಂದನು ಹೊರಗೆ ತತ್ತನುಭಾಗ ಮಾಡುತಲೆ 11 ಆತ್ಮಬಲವಮಿತೆಂದು ತೋರಿವಿಧಾತೃ ವರವುಳ್ಳವಳ ಕೊಲ್ಲುತವಾತನಂತೆ ತ್ರಿಕೂಟ ಪರ್ವತಕೀತ ಹಾರಿದನು 12 ಬೆಕ್ಕಿನಂದದಿ ಹನುಮ ತನ್ನಯಚಿಕ್ಕ ರೂಪವ ಮಾಡಿ ಲಂಕೆಯಪೊಕ್ಕು ನಿಶಿಯಲಿ ಮಧ್ಯಮಾರ್ಗದಿರಕ್ಕಸಿಯ ಕಂಡಾ 13 ಬಟ್ಟಿಯಲಿ ಬಂದಡ್ಡಗಟ್ಟುವದುಷ್ಟ ರಾಕ್ಷಸೀಯನ್ನು ಗೆಲ್ಲುತಮುಷ್ಟಿಯಿಂದಲಿ ಹೊಡೆದು ಲಂಕಾಪಟ್ಟಣವ ಪೊಕ್ಕಾ 14 ಪುರದ ಹೊರಗೊಳಗ್ಹೊಕ್ಕು ರಾಮನತರುಳೆ ಕಾಣದೆ ಹನುಮ ಶಿಂಶುಪತರುನ ಮೂಲದಿ ಕಂಡ ಸೀತೆಯಉರುತರಾಕೃತಿಯಾ 15 ನರಜನಂಗಳ ಮೋಹ ಮಾಡುವಪರಮ ಪುರುಷನ ಚೇಷ್ಟೆಗಳನನುಸರಿಸಿ ನಡೆಯುವ ದೇವಿ ಚರಿಯನುಸರಿಸಿ ಚೇಷ್ಟಿಸಿದಾ 16 ರಾಮನಿಂದಲಿ ಅಂಗುಲಿಯನುಪ್ರೇಮದಿಂದಲಿ ಕೇಸರಿಯ ಸುತಾಭೂಮಿ ಜಾತೆಗೆ ಕೊಟ್ಟು ಸುಖಿಸಿದಾನಾಮ ಹದ್ದನದಿ 17 ರುಚಿ ನೀಡಿದವು ರಾವಣನ್ಹರಣ ಕಾಲದಲಿ 18 ಧರಣಿದೇವಿಯ ಸುತೆಯ ತನ್ನಯಪರಮ ಚೂಡಾಮಣಿಯನಿತ್ತಳುಗುರುತು ತೋರಿಸು ರಾಮದೇವಗೆಮರುತಾ ಸುತನೆಂದು 19 ಸೀತೆ ಹನುಮರದೀ ವಿಡಂಬನಯಾತು ಧಾನರಿಗಲ್ಲಾ ನಾಕಗಭೂತ ವಿಡಂಬನ ಧೈತ್ಯವಂಚನಹೇತು ಆಗುವದು 20 ಇಂಥ ಕಾರ್ಯವ ಮಾಡಿ ತನ್ನಯಾನಂಥ ಪೌರುಷ ಪ್ರಕಟ ಮಾಡುವದಿಂತು ಮನವನು ಮಾಡಿದನು ಮತಿವಂತ ವಾನರನು 21 ಚಾರು ಶಿಂಶುಪ ಬಿಟ್ಟು ರಾಕ್ಷಸವಾರ ವಳಿಸುವ ಮನದಿ ಹನುಮನುಭೂರಿವನವನು ಮುರಿದು ಲಂಕೆಯತೋರಣೇರಿದನು 22 ಭೃತ್ಯ ಜನರಿಗೆಕಟ್ಟಿ ಹಾಕಿರಿ ಕಪಿಯನೆಂದನುರುಷ್ಟನಾಗುತಲೆ 23 ಹರನ ವರದಲಿ ಮರಣ ವರ್ಜಿತಸರವ ಭೃತ್ಯರು ರಾಕ್ಷಸೇಶನಮರುತ ಸೂನುನ ಮೇಲೆ ಬಂದರುಪರಮ ವೇಗದಲಿ 24 ಹತ್ತು ಒಂದು ಕೋಟಿ ಯೂಥವತತ್ಸಮಾನ ಪುರಃ ಸರಾನ್ವಿತಎತ್ತಿ ಆಯುಧ ಸೈನ್ಯ ಹನುಮನಸುತ್ತಿಕೊಂಡಿಹುದು 25 ಹಿಡಿದು ಕರದಲಿ ಆಯುಧಂಗಳಹೊಡೆವ ಸೈನ್ಯವ ನೋಡಿ ಹನುಮನುಹೊಡೆದು ಕರತಳದಿಂದಲೆಲ್ಲರಪುಡಿಯ ಮಾಡಿದನು 26 ನೀಲಕಂಠನ ವರಗಿರಿಪ್ರಭಏಳುಮಂದಿಯ ಮಂದಿ ಪುತ್ರರಕಾಲಿನಿಂದಲಿ ಒದ್ದು ಕೆಡಹಿದನಾಳು ಮಾಧವನಾ 27 ಧುರದಿ ಮುಂಭಾಗದಲಿ ಪೋಗುವಗರುವ ಮಾಡುವ ರಾಕ್ಷಸಂಗಳಮುರಿದು ಸೈನ್ಯದ ತೃತೀಯ ಭಾಗವಹರಿಯು ಕೊಂದಿಹನು 28 ಪೋರ ಬಲವನು ಕೇಳಿ ಹನುಮನಚಾರ ಮುಖದಲಿ ಸ್ವಾತ್ಮ ಸದೃಶರುಮಾರ ಕಾಕ್ಷಾಭಿಧನ ಕಳುಹಿದ ವೀರ ರಾವಣನು 29 ಉತ್ತುಮಾಸ್ತ್ರಗಳಿಂದ ಮಂತ್ರಿತವೆತ್ತಿ ಬಾಣಗಳ್ಹೊಡೆದು ಹನುಮನಕೆತ್ತಿ ಹಾಕಲು ಅಕ್ಷ ಸಾಲದೆಶಕ್ತಿ ನಿಂತಿಹನು 30 ಮಂಡ ಮಧ್ಯೆಯ ತನಯ ಅಕ್ಷನುಪುಂಡ ರಾವಣ ಸಮನು ಸೈನ್ಯದಹಿಂಡಿನೊಳು ತೃತೀಯಾಂಶ ಯಂದುದ್ದಂಡ ಚಿಂತಿಸಿದಾ 31 ಹತ್ತು ತಲೆಯವನನ್ನೆ ಕೊಲ್ಲುವದುತ್ತಮಾತ್ಮವು ಆದರೀತನುತುತ್ತು ರಾಮಗೆ ಕಾರಣಿಂಥಾಕೃತ್ಯ ಥರವಲ್ಲಾ 32 ಇಂದ್ರಜಿತನನು ನಾನು ಈಗಲೆಕೊಂದು ಹಾಕಿದರಿವನ ಕೃತಿಗಳಛಂದ ನೋಡುವುದಿಲ್ಲಾ ಕಪಿಗಳವೃಂದ ಯುದ್ಧದಲಿ 33 ತತ್ಸಮಾಗಿಹ ಮೂರನೆಯವನ್ಹತ್ಯೆ ಮಾಡುವೆನೆಂದು ಹನುಮನುಚಿತ್ತದಲಿ ಚಿಂತಿಸುತ ತತ್ವದ ವೆತ್ತಿ ಹಾರಿದನು 34 ತಿರುಹಿ ಚಕ್ರದ ತೆರನೆ ರಾಕ್ಷಸರರಸೀನಾತ್ಮಜನನ್ನು ಕ್ಷಣದಲಿಧರಿಯ ಮೇಲಪ್ಪಳಿಸಿ ಒಗೆದನುಮರುತನಾತ್ಮಜನು 35 ಹನುಮನಿಂದಲಿ ತನ್ನ ಕುವರನುಹನನ ಪೊಂದಲು ನೋಡಿ ರಾವಣಮನದಿ ಶೋಕಿಸುತಾತನಣ್ಣನರಣಕೆ ಕಳುಹಿದನು36 ಇಂದ್ರಜಿತು ಪರಮಾಸ್ತ್ರಯುತ ಶರವೃಂದದಲಿ ಹೊಡೆದು ಹನುಮನಹಿಂದಕಟ್ಟಲು ಶಕ್ತಿ ಸಾಲದೆನಿಂದು ಚಿಂತಿಸಿದಾ 37 ಸರವ ದುಃಸಹವಾದ ಬ್ರಹ್ಮನಪರಮಮಸ್ತ್ರವ ಬಿಡಲು ರಾವಣಿಹರಿಯು ವ್ಯಾಕುಲನಾಗದಲೆ ಈಪರಿಯ ಚಿಂತಿಸಿದಾ 38 ವಾಣಿನಾಥನ ಎಷ್ಟೊ ವರಗಳನಾನು ಮೀರಿದೆ ದುಷ್ಟ ಜನದಲಿಮಾನಿನೀಯನು ಕಾರಣಾತನಮಾನ ಮಾಡುವೆನು 39 ದುಷ್ಟ ರಾಕ್ಷಸರೆಲ್ಲ ಎನ್ನನುಕಟ್ಟಿ ಮಾಡುವದೇನು ಪುರಿವಳಗಿಷ್ಟು ಪೋಗಲು ರಾಕ್ಷಸೇಶನಭೆಟ್ಟಿಯಾಗುವದು 40 ಹೀಗೆ ಚಿಂತಿಸಿ ಹನುಮನಸ್ತ್ರಕೆಬಾಗಿ ನಿಲ್ಲಲು ಅನ್ಯ ಪಾಶಗಳಾಗೆ ಬಿಗಿದರು ಬ್ರಹ್ಮನಸ್ತ್ರವುಸಾಗಿತಾಕ್ಷಣದಿ 41 ಕಟ್ಟಿ ಕಪಿಯನು ರಾಕ್ಷಸೇಶನ ಭೆಟ್ಟಿಗೊಯ್ಯಲು ಆತನೀತನದೃಷ್ಟಿಯಿಂದಲೆ ನೋಡಿ ಪ್ರಶವನೆಷ್ಟೊ ಮಾಡಿದನು 42 ಕಪಿಯೆ ನೀನು ಕುತೋಸಿ ಕಸ್ಯವಾಕೃತಿಯ ಮಾಡಿದಿ ಯಾತಕೀಪರಿಕಿತವ ಕೇಳಲು ರಾಮನೊಂದಿಸಿ ಚತುರ ನುಡಿದಿಹನು 43 ಹೀನ ರಾವಣ ತಿಳಿಯೇ ಎನ್ನನು ಮಾನವೇಶ್ವರ ರಾಮದೂತನುಹಾನಿಮಾಡಲು ನಿನ್ನ ಕುಲವನುನಾನು ಬಂದಿಹೆನು 44 ಜಾನಕೀಯನು ರಾಮದೇವಗೆಮಾನದಿಂದಲಿ ಕೊಡದೆ ಹೋದರೆಹಾನಿ ಪೊಂದುವಿ ಕೇಳೊ ನೀ ನಿಜಮಾನವರ ನೀ ಕೂಡಿ 45 ಶಕ್ತರಾಗರು ಸರ್ವ ದಿವಿಜರುಮತ್ರ್ಯನಾತನ ಬಾಣ ಧರಿಸಲುಎತ್ತೋ ನಿನಗಿವಗಿನ್ನು ಧರಿಸಲುಹತ್ತು ತಲೆಯವನೆ 46 ಸಿಟ್ಟು ಬಂದರೆ ಆತನೆದುರಿಲಿಘಟ್ಟಿನಿಲ್ಲುವನಾವ ರಾಕ್ಷಸಇಷ್ಟು ಸುರದಾನವರೊಳಾತನದೃಷ್ಟಿಸಲು ಕಾಣೆ 47 ಇಂಥಾ ಮಾತನು ಕೇಳುತಾತನಅಂತ ಮಾಡಿರಿಯನ್ನೆ ವಿಭೀಷಣಶಾಂತ ಮಾಡಲು ಪುಚ್ಛ ದಹಿಸಿರಿಯಂತ ನುಡಿದಿಹನು 48 ಅರಿವೆಯಿಂದಲಿ ಸುತ್ತಿ ಬಾಲಕೆಉರಿಯನ್ಹಚ್ಚಲು ಯಾತುಧಾನರುಮರುತ ಮಿತ್ರನು ಸುಡದೆ ಹನುಮಗೆಹರುಷ ನೀಡಿದನು 49 ಯಾತುಧಾನರು ಮಾಡಿದಂಥಪಘಾತವೆಲ್ಲವ ಸಹನ ಮಾಡಿದವಾತಪೋತನು ಲಂಕೆ ದಹಿಸುವಕೌತುಕಾತ್ಮದಲಿ 50 ತನ್ನ ತೇಜದಿ ವಿಶ್ವಕರ್ಮಜಘನ್ನಪುರಿಯನು ಸುಟ್ಟು ಬಾಲಗವನ್ಹಿಯಿಂದಲೆ ಸರ್ವತಃ ಕಪಿಧನ್ಯ ಚರಿಸುತಲೆ 51 ಹೇಮರತ್ನಗಳಿಂದ ನಿರ್ಮಿಸಿದಾಮಹಾ ಪುರಿಯನ್ನು ರಾಕ್ಷಸಸ್ತೋಮದಿಂದಲಿ ಸಹಿತ ಸುಟ್ಟುಸುಧಾಮ ಗರ್ಜಿಸಿದಾ 52 ಹನುಮಸಾತ್ಮಜ ರಾಕ್ಷಶೇಶನತೃಣ ಸಮಾನವ ಮಾಡಿ ನೋಡಲುದನುಜರೆಲ್ಲರ ಭಸ್ಮ ಮಾಡುತಕ್ಷಣದಿ ಹಾರಿದನು 53 ಕಡಲ ದಾಟುತ ಕಪಿಗಳಿಂದಲಿಧಡದಿ ಪೂಜಿತನಾಗಿ ಮಧುವನುಕುಡಿದು ರವಿಜನ ವನದಿ ರಾಘವನಡಿಗೆ ಬಂದಿಹನು 54 ಸೀತೆ ನೀಡಿದ ಚೂಡಾರತ್ನವನಾಥನಂಘ್ರಿಯೊಳಿತ್ತು ಸರ್ವಶಗಾತ್ರದಿಂದಲಿ ನಮಿಸಿ ರಾಮಗೆಶಾತ ನೀಡಿದನು 55 ರಾಮನಾದರು ಇವಗೆ ನೀಡುವಕಾಮ ನೋಡದೆ ಭಕ್ತಿಭರಿತಗೆಪ್ರೇಮದಿಂದಲಿ ಅಪ್ಪಿಕೊಂಡನುಶ್ರೀ ಮನೋಹರನು 56 ಇಂದಿರೇಶನೆ ಎನ್ನ ಚಿತ್ತದಿನಿಂದುಮಾಡಿದ ನೀಸುಕವನವನಿಂದು ಭಕ್ತಿಲಿ ತತ್ಪುದಾಂಬುಜದ್ವಂದ್ವಕರ್ಪಿಸುವೆ 57 ಇತಿ ಶ್ರೀ ಸುಂದರ ಕಾಂಡಃ ಸಮಾಪ್ತಃ (ಪ್ರಾಕೃತ)ಶ್ರೀ ಗುರುವರದ ಇಂದಿರೇಶಾರ್ಪಣಮಸ್ತು ನೋಡುವೆನು ನೋಡುವೆನು ತೋರಿಸುನಿಮ್ಮ ನೋಡುವೆ ಪ ನೋಡುವೆ ಮಾಡು ದಯ ಎನ್ನೊಳುರೂಢಿಯೊಳಗೆ ನಿಮ್ಮ ಪಾಡುತ ಮಹಿಮೆ ಅ.ಪ. ಮದನ ಜನಕನೊಳು ಕದನ ಮಾಡಿದ ದು-ರ್ಯೋಧನನ ಶಿರದೊಳಿಟ್ಟ ಪದುಮ ಪಾದಗಳನು 1 ನೂರುಗಾವುದ ಜಲ ಹಾರುವಾಗಲೆ ದಿವ್ಯಭೂರುಹ ಕೆಡದಿಹ ಊರುಗಳನ್ನು ಸ್ವಾಮಿ 2 ಕೆಟ್ಟ ಬಕನ ಕೊಂದು ಅಷ್ಟು ಅನ್ನವನುಂಡಹೊಟ್ಟಿ ನೋಡುವೆ ದಿವ್ಯ ದೃಷ್ಟಿ ನೀಡಿರಿ ಸ್ವಾಮಿ 3 ಭೂಮಿ ಸುತೆಯ ವಾರ್ತೆ ರಾಮನು ಕೇಳಿದಾಪ್ರೇಮಾಲಿಂಗನವಿತ್ತ ಆ ಮಹಾವುರವನ್ನೆ 4 ಮದಗಜಗಳ ಕೂಡ ಕದನ ಮಾಡಿದ ದಿವ್ಯಗದೆಯ ಪಿಡಿದ ಕರವದು ಮಗಳನು ಸ್ವಾಮಿ 5 ಅಜಗರ ನಹುಷನ ವಿಜಯ ಸಹೋದರ ಪದುಮನಾಭನ ಗುಣಮುದದಿ ಸಾರುತ ದೈತ್ಯ ಕದನಗೆಳೆದ ನಿನ್ನ ವದನಕಮಲವನ್ನು 6 ವೇದ ಶಾಸ್ತ್ರಗಳನ್ನು ಓದಿ ಹೇಳುತ ಶಿಷ್ಯಮೋದಗರೆವ ನಿನ್ನ ವಾಣಿ ಸ್ವಾದು ಕೇಳುವೆ ನಿನ್ನ 7 ಇಂದಿರೇಶನ ದಯದಿಂದ ಗೆಲಿದಿ ಇಪ್ಪ-ತ್ತೊಂದು ಮತವ ಆನಂದ ತೀರ್ಥರೆ ನಿಮ್ಮ 8
--------------
ಇಂದಿರೇಶರು
ಸರಸಿಜನಯನಗೆ ಸಾಗರಶಯನಗೆ ನಿರುತ ಸುಖಾನಂದಭರಿತನಾದವಗೆ ಬರೆಸಿ ಉತ್ತರವ ಕಳುಹಿ ಹರುಷದಿ ತಂದ ಸತಿಯ- ರರಸಿ ರುಕ್ಮಿಣಿ ಸಹಿತ ಹರುಷದಿ ಕುಳಿತ ಹರಿಗೆ ಸರಸದಾರತಿಯ ಬೆಳಗಿರೆ ಪ ನಿಂದ್ಯ ಪರಿಹರಿಸಲು ಬಂದು ಯುದ್ಧವ ಮಾಡಿ ಸಿಂಧುಗಟ್ಟಿದ ರಾಮಚಂದ್ರಗ್ವೊಂದಿಸುತ ತಂದು ಮಗಳ ಧಾರೆ ಮಂದರೋದ್ಧ್ಧರಗೆರೆಯೆ ಜಾಂಬುವಂತ್ಯೇರ ಸಹಿತಾನಂದದಿ ಕುಳಿತ ಹರಿಗೆ 1 ಮಿತ್ರೆ ಕಾಳಿಂದಿ ಭದ್ರಾ ಅಚ್ಚುತನೆಡಬಲ ನೀಲ ನಕ್ಷತ್ರದಂದದÀಲಿ ಒಪ್ಪುವÀ ಚಂದ್ರನಂಥ ವಾರಿಜಾಕ್ಷನು ಇರಲು ಅಷ್ಟಭಾರ್ಯೇರ ಸಹಿತ ನಕ್ಕು ಕುಳಿತ ಹರಿಗೆ 2 ನಾಶವಾಗಲಿ ನರ್ಕಾಸುರನ ಮಂದಿರ ಪೊಕ್ಕು ಏಸುಜನ್ಮದ ಪುಣ್ಯ ಒದಗಿ ಶ್ರೀಹರಿಯು ಶ್ರೀಶನ್ವೊಲಿದ ಭೀಮೇಶಕೃಷ್ಣನು ಸೋಳ- ಸಾಸಿರ ಸತಿಯರಿಂದ್ವಿಲಾಸದಿ ಕುಳಿತ ಹರಿಗೆ 3
--------------
ಹರಪನಹಳ್ಳಿಭೀಮವ್ವ
ಸರಸಿಜನಾಭ ಶ್ರೀಹರಿಪಾದಕಾರತಿಯ ಬೆಳಗಿರೆ ಪ ವಸುದೇವ ಸುತನೆಂದೆನಿಸಿ ಅಸುರೆ ಪೂತನಿಯ ಸಂಹರಿಸಿ ಆನಂದ ಸುರಿಸಿ ಕಾಳಿಮಡುವ ಧುಮುಕಿ ಫಣಿಯ ಮೇಲೆ ನಾಟ್ಯವನಾಡಿದವಗೆ ಸನಕಾದಿ ನಾರದ ಮುನಿವಂದ್ಯಗೆ ಸುರ ರಮಣಿಯರು ಹರುಷದಿ 1 ಮಧುರೇಲಿ ಜನಿಸಿದವಗೆ ಮಾವಕಂಸನ ತರಿದವಗೆ ಮಧುವೈರಿಹರಿಗೆ ಮುರಳಿನಾದಗೈದು ಸ್ತ್ರೀಯರ ಮರುಳುಗೊಳಿಸಿ ಆಡಿದವಗೆ ಮುರವೈರಿ ಹರಿ ಮುಚುಕುಂದ ವರದನ ಪಾಡುತಲಿ ಮುದದಲಿ2 ಗೋಪಾಲರೊಡಗೂಡುತಲಿ ಗೋವರ್ಧನವೆತ್ತಿದವಗೆ ಗೋವಿಂದ ಹರಿಗೆ ಗೋಪಿಯರ ಮನೆಯ ಪೊಕ್ಕು ಬೇಕೆನ್ನುತ ಪಾಲ್ಬೆಣ್ಣೆ ಸವಿದ ಶ್ರೀಕಾಂತ ಕಮಲನಾಭ ವಿಠ್ಠಲನಿಗೆಸುದತಿಯರು ತ್ವರಿತದಿ 3
--------------
ನಿಡಗುರುಕಿ ಜೀವೂಬಾಯಿ
ಸರಸಿಜನಾಭನೆ ಸೆರಗೊಡ್ಡಿ ಬೇಡುವೆ,ದುರಿತಗಳೆಲ್ಲ ತರಿದು ವರವಿತ್ತು ಕರುಣಿಸೊ ಪ ಕರುಣಾಸಾಗರ ನಿನ್ನ ಚರಣವ ನಂಬಿದೆಪರಮ ಪಾವನ ನಿನ್ನ ಶರಣನ ಪೊರೆಯೆಂದು 1 ಈಶವಿನುತ ನಿನ್ನ ವಾಸಿಯ ಪೊಗಳುವೆದಾಸ ಎಂದೆನ್ನನು ಗಾಸಿಮಾಡದೆ ಕಾಯೊ 2 ಬಾರಿಬಾರಿಗೆ ಬರುವ ದಾರಿದ್ರ್ಯ ದುಃಖದದೂರಗೈಸುವಂಥ ದಾರಿ ತೋರಿಸೆಂದು 3 ಕಂತುಪಿತನೆ ಎನ್ನ ಅಂತರಂಗದಿ ನಿನ್ನಸಂತತÀ ನೆನೆವಂತೆ ಚಿಂತನೆ ನಿಲಿಸೆಂದು 4 ಮಂಗಳಾತ್ಮಕನೆ ಶ್ರೀರಂಗವಿಠ್ಠಲ ಭು-ಜಂಗಶಯನ ನಿನ್ನ ಹಿಂಗದೆ ಭಜಿಪೆನು5
--------------
ಶ್ರೀಪಾದರಾಜರು
ಸರಸಿಜಾಯತನೇತ್ರ ಸರಿಯಾರೆ ಧರೆಯೊಳಗೆ ಮೇರುಗಿರಿಯನೆಪೊತ್ತ ಧೀರನಿವನೆ ಅಪರಾಧವ ಪರಿಹರಿಸಿ ಕಾಪಿಡೆಂದೊರಲುವರ ಕೈಪಿಡಿದು ಕಾಪಾಡುವಾಪ್ತ ಬಂಧು
--------------
ನಂಜನಗೂಡು ತಿರುಮಲಾಂಬಾ
ಸರಸಿಜಾಲಯೆ ಪೊರೆಯೆ ಬೇಗನೇ ಹೇ ಮಾತೆ ಪ ಸಾರಸಭವನ ವೀರ ಮಾತೆಯೆ ನೀರಜಾಕ್ಷಿಯೆ ಹೇ ಮಾತೆ ಸಾರಸಾಕ್ಷ ಪರಮಪ್ರಿಯಳೆ ಸಾರಿಬಾರೆನ್ನ ಹೇ ಮಾತೆ 1 ತುರುವು ತನ್ನ ಕರುವ ಧ್ವನಿಯಂ ಅರಿತು ಬಾರದೆ ಹೇ ಮಾತೆ ಈ ತೆರದಿ ಎನ್ನ ಮೊರೆಯ ಕೇಳಿ ಕರವ ಹಿಡಿಯೆ ಹೇ ಮಾತೆ 2 ಪರಿಯು ಯಾರೆ ಸಿರಿಯು ನಿನಗೆ ಪರಮಪಾವನೆ ಹೇ ಮಾತೆ ಕರುಣದಿಂದ ಪೊರೆದು ತೋರೆ ಸಿರಿರಂಗೇಶವಿಠಲನ ಹೇ ಮಾತೆ 3
--------------
ರಂಗೇಶವಿಠಲದಾಸರು
ಸರಸಿಜಾಸನ ಮೊದಲು ಸ್ತಂಭ ಪರ್ಯಂತವು ಚರಚರಾತ್ಮಕ ಜಗವು ಎಲ್ಲವು ಪ ಪರತರನಾದ ಯಾವಾತನಾಧೀನವೋ ಆ ಹರಿಯೇ ಬಲವು ನಿನಗೆ ಎನಗೆ ಮತ್ತೆಲ್ಲರಿಗೆ ಅ.ಪ. ಕಾಲ ಉರುಕ್ರತು ಭಾಸುರತೇಜ ಓಜಸು ಸತ್ವನೊ ಬಲು ಶಕ್ತನೊ ಸರ್ವಜಗತ್ಸøಷ್ಟಿ ಸ್ಥಿತಿ ಲಯಕಾರನೊ ಆ ಸರ್ವೇಶÀನ ಬಿಟ್ಟು ಬಲವಾವುದಿನ್ನಯ್ಯಾ 1 ಆರು ವರ್ಗಗಳೆಂಬ ವೈರಿಗಳ್ ಕಳ್ಳರಂತೆ ಸೇರಿಕೊಂಡಿಹರು ಶರೀರದೊಳು ಗಾರು ಮಾಡುವರವರಗಲ್ಲದೆ ಧರೆಯಲ್ಲಿ ಭೂರಿ ಜಯಿಸಿದೆನೆಂಬ ಗರ್ವ ಸಲ್ಲುವುದೇನೊ 2 ನಿನ್ನ ಆಸುರೀಭಾವ ಇನ್ನಾದರೂ ಬಿಟ್ಟು ಘನ್ನಮಹಿಮ ಕರಿಗಿರೀಶನೊಳ್ ಮನವ | ಚೆನ್ನಾಗಿ ಕಲಿಸಿ ನೀ ಸಮಚಿತ್ತನಾದೊಡೆ ಇನ್ನು ನಿನಗೆ ವೈರಿಗಳು ಯಾರು ಇಹರಯ್ಯಾ 3
--------------
ವರಾವಾಣಿರಾಮರಾಯದಾಸರು
ಸರಸಿಜೋದ್ಭವನುತ ಸಿರಿಲೋಲ ಹರಿ ಸರ್ವರೊಳಿಹ ಶ್ರೀ ಗೋಪಾಲ ಶರಣಾಗತವತ್ಸಲ ಕರುಣಾನಿಧಿ ಕೃಪಾಲ ಸುರಜನ ಸಾನುಕೂಲ ವರಮುನಿಪಾಲ 1 ಮಾಮನೋಹರ ಮಾರಪಿತನೀತ ಕಾಮಪೂರಿತ ವಿಮಲ ಚರಿತ ಸಾಮಗಾಯನಪ್ರಿಯ ಸೋಮಶೇಖರ ಧೇಯ ಸಾಮಜ ವರದ ಸಮಸ್ತಹೃದಯ 2 ಸಾಹ್ಯಸಕಲಕೆ ಸನ್ನಿಧನೀತ ಇಹ ಸರ್ವಾನಂದ ಸರ್ವಭರಿತ ಸ್ವಹಿತ ಸುಖದಾತ ಬಾಹ್ಯಾಂತ್ರ ಸದೋದಿತ ಮಹಿಪತಿ ಪ್ರಾಣನಾಥ ಶ್ರೀಹರಿ ಸಾಕ್ಷಾತ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಸರಸೀಔಂಬಕಿ ನೀರೇ ಎನಗ|ತ್ವರತದಿ ತೋರೆ| ಸರಸಿರುಹ ವಂದ್ಯನಾ ಪ ಪಲ್ಲವಧರದಲಿಂದಾ|ಕೊಳಲು ನಾನಾ ಪರಿಯಾ| ಬಲ್ಲತನದಲಿ ಊದಲು| ಹುಲ್ಲೆಯಂದದಿ ಮನಸು|ಮರಳು ಗೊಂಡಾಥನಿಗೆ| ಭುಲ್ಲವಿಸುತಿಹುದಮ್ಮಾ ನಮ್ಮಾ 1 ಕೈರವ ಸರ್ವೋದಯವ ಕಂಡು|ಮುದದಿಂದ| ಚಕೋರ ಸಂತೋಷಿಸುವಂತೆ| ನೀರಜಾನನ ನೋಡ ಲಕ್ಷಣದಿ ನೋಟಕ| ಪಾರಣೆ ಯಾಗುದಮ್ಮಾ ನಮ್ಮಾ 2 ಪರಮ ಜ್ಞಾನಾಂಗನೆಒಂದೊಂದು ಘಳಿಗೆ ವತ್ಸರ| ದಂತೆ ಪೋಗುತಿಹುದು| ತರಿತ ಮಹಿಪತಿ ನಂದ|ನೋಡಿ ಯನನು ತೋರೆದಡೆ| ಹರನ ನಿಲ್ಲದಮ್ಮಾ ನಮ್ಮಾ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಸರಸ್ವತಿ ಮಂಗಳಾರುತಿಯನೆತ್ತೀರೆ ವಾರಿಜಭವಮುಖಿಗೆ ಮಂಗಳಾರುತಿಯನೆತ್ತೀರೆ ಪ ಇಂದು ಬಿಂಬ ಸದೃಶ ವದನೆಗೆ ಲಾವಣ್ಯ ಖಣಿಗೆ ಅಂದ ಕುಂಕುಮಭೂಷಿತ ಫಣೆಗೆ ಹರಿದ್ರ ಭೂಷೆಗೆ ಸಂದ ಮೌಕ್ತಿಕ ಚಂಪಕ ನಾಸಿಕೆಗೆ ಚಂದ ಕರುಣಾಭರಣ ಭೂಷಿತೆಗೆ ಚಾಪ ಇಂದು ಛವಿಯ ಕಿರೀಟ ಭೃತೆಗೆ ಹಿಂದೆ ಜೋಲ್ವ ಕನಕವೇಣಿಗೆ ಮಂಗಳಾರುತಿಯನೆತ್ತಿರೆ 1 ಚಾರುವಸನ ಭೂಷಿತಾಂಗೆಗೆ ವಿದ್ಯುತ್ಸುಕಾಂತೆಗೆ ಹಾರಪದ ಶÀಮಿರೂಪ ಕಂಠೆಗೆ ಸುಕಂಬು ಶ್ರೀದೇವಿಗೆ ಸಾರ ವೇದಾಂಗ ಭೂತೆಗೆ ನೀರಜ ಪಲ್ಲವಗಾತ್ರೆಗೆ ಸಾರಸಾಕ್ಷಿ ಶಿರಿವಂತೆಗೆ ಮಂಗಳಾರುತಿಯನೆತ್ತಿರೆ2 ಕರದಿ ವೀಣೆ ಧರಿಪ ದೇವಿಗೆ ಪಾವನ್ನಗಾತ್ರೆಗೆ ಧರೆಯ ಸೃಷ್ಟಿಕರ್ತನರಸಿಗೆ ಮಂಗಳ ವಾಣಿಗೆ ಪರಿಪರಿಯಲಂಕಾರ ಭೂಷಿತೆಗೆ ಸರಸ ಕೋಮಲ ಪದ್ಮಪಾತೆಗೆ ಮರಕತಭೂಷಣ ಭಾಸೆಗೆ ನಿರುತ ಜನಕೆ ವಿದ್ಯಪ್ರದೆಗೆ ನರಸಿಂಹವಿಠ್ಠಲನ ಬಾಲೆಗೆ ಮಂಗಳಾರುತಿಯನೆತ್ತಿರೆ 3
--------------
ನರಸಿಂಹವಿಠಲರು