ಒಟ್ಟು 14277 ಕಡೆಗಳಲ್ಲಿ , 133 ದಾಸರು , 6728 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಸಕಲವೆಲ್ಲವು ಹರಿಸೇವೆ ಎನ್ನಿ ಯಕುತಿವಂತರು ಹರಿಭಕುತಿ ಯೆನ್ನಿ ಧ್ರುವ ಹುಟ್ಟಿ ಬಂದಿಹ್ಯದೆ ವಿಠ್ಠಲನ ಸುಸೇವೆಗೆನ್ನಿ ಸೃಷ್ಟಿಯೊಳಿಹ್ಯದೆ ಶ್ರೀ ವಿಷ್ಣು ಸಹವಾಸವೆನ್ನಿ 1 ಬದುಕಿ ಬಾಳುದೇ ಇದು ಶ್ರೀಧರ ಉದ್ದೇಶವೆನ್ನಿ ಸಾಧನ ಸಂಪತ್ತು ಶ್ರೀ ಮಾಧವನದು ಎನ್ನಿ 2 ಉಂಬುಂತಿಂಬುದೆಲ್ಲ ಅಂಬುಜಾಕ್ಷನ ನೈವೇದ್ಯವೆನ್ನಿ ಕೊಂಬುಕೊಡುವ ಹಂಬಲ ಶ್ರೀ ಹರಿಯದೆನ್ನಿ 3 ಇಡುವ ತೊಡುವದೆಲ್ಲ ಪೊಡವಿಧರನಾಭರಣವೆನ್ನಿ ಉಡುವ ಮುಡಿವದೆಲ್ಲ ಹರಿಯ ಸಡಗರವೆನ್ನಿ 4 ನುಡಿವ ನುಡಿಗಳೇ ಹರಿಬಿಡದೆ ಕೊಂಡಾಡುದೆನ್ನಿ ಬಡುವ ಹರುಷವೆಲ್ಲ ವಸ್ತುದೇ ಎನ್ನಿ 5 ನಡೆವ ನಡಿಗೆಯಿಲ್ಲ ಹರಿಯ ಪ್ರದಕ್ಷಿಣಿ ಎನ್ನಿ ಎಡವಿ ಬೀಳುದು ಹರಿನಮವೆನ್ನಿ 6 ಏಳುವ ಕೂಡುವದೆಲ್ಲ ಹರಿಯ ಊಳಿಗವೆನ್ನಿ ಹೇಳಿ ಕೇಳುದೆಲ್ಲ ಹರಿಪುರಾಣವೆನ್ನಿ 7 ನೋಡುವ ನೋಟಗಳೆಲ್ಲ ಹರಿ ಸುಲಕ್ಷಣವೆನ್ನಿ ಮಾಡುವ ಮಾಟಗಳೆಲ್ಲ ಹರಿಯದೆನ್ನಿ 8 ಮಲಗಿ ನಿದ್ರೆಗೈವದೇ ಹರಿಯ ಕಾಲಿಗೆರಗುದೆನ್ನಿ ಬಲಕ ಎಡಕ ಹೊರಳುದೇ ಲೋಟಾಂಗಣ(?) ವೆನ್ನಿ 9 ವನಿತೇರ ಸಂಗವೇ ತಾ ಹರಿಯ ಲೀಲೆಯು ಎನ್ನಿ ತನುಮನವೆಲ್ಲಾ ಹರಿಸ್ಥಾನವೆ ಎನ್ನಿ 10 ಸತಿಸುತ ಮಿತ್ರರೆಲ್ಲ ಹರಿಸೇವೆ ದೂತರೆನ್ನಿ ಮತ್ತೆ ಬಂಧುಬಳಗೆಲ್ಲ ಹರಿಯದೆನ್ನಿ11 ಸುಖದು:ಖವೆಂಬುದೇ ಶ್ರೀಹರಿಯ ಸಂಕಲ್ಪವೆನ್ನಿ ನಕ್ಕು ನುಡುವುದೆಲ್ಲ ಹರಿ ಆಖರವೆನ್ನಿ 12 ಹೆಣ್ಣು ಹೊನ್ನಾರ್ಜಿತವೆಲ್ಲ ಹರಿಯ ಕಾಣಿಕೆ ಎನ್ನಿ ನಾನೀನೆಂಬುದೆಲ್ಲ ಹರಿಚೇತನವೆನ್ನಿ 13 ಸ್ವಾರ್ಥ ಹಿಡಿವದೆಲ್ಲ ಪಾರ್ಥನ ಸ್ವಾಮಿಗೆ ಎನ್ನಿ ಅರ್ತು ಮರ್ತು ನಡೆವ ಹರಿಕರ್ತೃತ್ವವೆನ್ನಿ 14 ಅಂತ್ರಬಾಹ್ಯವೆಲ್ಲ ಹರಿಗುರು ಮಾತೃಪಿತೃವೆನ್ನಿ ಗುರ್ತುವಾದದ್ದೆಲ್ಲ ತೀರ್ಥಕ್ಷೇತ್ರವೆನ್ನಿ 15 ಲಾಭಾಲಾಭವೆಲ್ಲ ಹರಿಪಾದಕರ್ಪಿತವೆನ್ನಿ ಶುಭಾ ಶುಭವೆಲ್ಲ ಹರಿಶೋಭೆಯು ಎನ್ನಿ 16 ಕನಸು ಮನಸುಗಳೆಲ್ಲ ಹರಿಯ ನೆನೆವ ಸೇವೆನ್ನಿ ಧೇನಿಸಿ ಬಯಸುದೇ ಹರಿಧ್ಯಾನವೆನ್ನಿ 17 ನಿತ್ಯಕರ್ಮವೆಲ್ಲ ಹರಿಪಾದಕ ಸಮರ್ಪಣವೆನ್ನಿ ಸತ್ಯಾಸತ್ಯವೆಲ್ಲ ಹರಿ ಅಗತ್ಯವೆನ್ನಿ 18 ಹೆಜ್ಜೆಗೊಮ್ಮೆ ಬೆಜ್ಜರ್ಹಿಡಿದು ರಾಜೀವನಯನನೆನ್ನಿ ಸಜ್ಜನರೊಡೆಯ ಗಜವರದ ಎನ್ನಿ 19 ಸೋಹ್ಯ ಸೂತ್ರವೆಲ್ಲ ಹರಿಯ ಮಹಾಮಹಿಮೆ ಎನ್ನಿ ಗುಹ್ಯಗೂಢವೆಲ್ಲ ಹರಿಯಗುರುತ ಎನ್ನಿ 20 ಇಹಪವೆಲ್ಲ ಹರಿಸೇವೆಗನುಕೂಲ ವೆನ್ನಿ ಸೋಹ್ಯ ಮಾಡುದೆಲ್ಲ ಹರಿಯ ದಯವೆನ್ನಿ 21 ಸಕಲ ಧರ್ಮಗಳೆಲ್ಲ ಹರಿಯ ಶಿಖಾಮಣಿಯೆನ್ನಿ ಪ್ರಕಟವಾಗಿ ದೋರುದೇ ಪ್ರತ್ಯಕ್ಷವೆನ್ನಿ 22 ನೇಮನಿತ್ಯ ಇದೇ ಮಹಿಪತಿಯ ಸ್ವಾಮಿಯದೆನ್ನಿ ಪ್ರೇಮದಿಂದ ಒಪ್ಪಿಸಿಕೊಂಬ ದಯಾಳುವೆನ್ನಿ 23
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಸಕಲಸಾಧನವೆನಗೆ ಕೈಸೇರಿತುಮುಕುತಿಯ ಮಾತಿಗೆ ಬಾರದ ಧನವು ಪ. ಸಂಸಾರದಲಿ ಜ್ಞಾನ ಸತಿಸುತರಲಿ ಭಕ್ತಿಕಂಸಾರಿಪೂಜೆಯಲಿ ವೈರಾಗ್ಯವುಸಂಶಯದ ಜನರಲ್ಲಿ ಸಖತನವ ಮಾಡುವೆನುಹಿಂಸೆಪಡಿಸುವೆನು ಜನಸಂಗ ಹರಿ ರಂಗ 1 ವಿಷಯಂಗಳಲಿ ಧ್ಯಾನ ಲೌಕಿಕದಲಿ ಮನನವಶವಲ್ಲದ ಕತೆಗಳಲ್ಲಿ ಮನವುಹಸನಾಗಿ ಎಣಿಸುವ ಹಣಹೊನ್ನಿನ ಜಪವುಬಿಸಿಲೊಳಗೆ ಚರಿಸುವುದದೆÉ ಮಹಾ ತಪವು 2 ಪೀಠ ಪೂಜೆಂಬುವುದು ಲಾಜಚೂರಣವಯ್ಯಮಾಟದ ಪಯೋಧರವೆ ಕಲಶಪೂಜೆಚೂಟಿಯಲಿ ಉದರದ ಯಾತ್ರೆಯೆ ಮಹಾಯಾತ್ರೆ ಬೂಟಕತನದಲಿ ಅನೃತವನು ಪೇಳ್ವುದೇ ಮಂತ್ರ3 ಹೆಂಡತಿಯ ಕೊಂಡೆಯ ಮಾತುಗಳೆ ಉಪದೇಶಚಂಡಕೋಪವೆಂಬೋದಗ್ನಿಹೋತ್ರಪಂಡಿತನೆನಿಸುವುದೆ ಕುವಿದ್ಯ ಪಠನೆಗಳುಕಂಡವರ ಕೂಡೆ ವಾದಿಸುವುದೆ ತರ್ಕವÀಯ್ಯ4 ಓದಿದೆನು ಎಲ್ಲಣ್ಣ ಕಲ್ಲಣ್ಣ ಎನುತಲಿಸ್ವಾಧ್ಯಾಯವು ಎನಗೆ ಪಗಡೆ ಪಂಜಿಸಾಧಿಸಿ ಈ ಪರಿಯ ಧನವನ್ನು ಕೂಡ್ಹಾಕಿಮೋದಿ ಹಯವದನ ನಾ ನಿನ್ನ ಮರೆತೆ 5
--------------
ವಾದಿರಾಜ
ಸಕಲಸುಖ ಸಂತೋಷ ಸುಲಭದಲ್ಯಾಹುದು ಭವಭವಯದ ನಾಶ 1 ಕರೆಸುವದಾನಂದ ಹರುಷ ಹರಿಸುವದು ಕಲಿಮಲಕಲುಷ ಪರಿಶೋಷಿಸುವದು ಮಹಾಪಾತಕ ದೋಷ 2 ಸ್ವಹಿತ ಸಾಧನದಸು ಉಪದೇಶ ಬಾಹ್ಯಂತ್ರ ದೋರುವ ಪ್ರಕಾಶ ಮಹಿಪತಿಗಿದೆ ನಿತ್ಯಾನುಭವದುಲ್ಲಾಸ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಸಕಲಾಗಮ ಪೂಜಿತ ಏಕೋ ದೇವನೀತ ಏಕಾಕ್ಷರ ಬ್ರಹ್ಮೀತ ಹಂಸನಾಥ 1 ರವಿಕೋಟಿ ತೇಜನೀತ ಸಂವಿತ ಸುಖ ಸಾಕ್ಷಾತ ಪವಿತ್ರ ಪ್ರಣವನೀತ ಹಂಸನಾಥ 2 ಯತಿ ಮುನಿವಂದಿತ ಪಿತಾಮಹನ ಪಿತ ಅತಿಶಯಾನಂದನೀತ ಹಂಸನಾಥ 3 ಸನ್ಮಾತ್ರ ಸದೋದಿತ ಉನ್ಮನ ವಿರಹಿತ ಚಿನ್ಮಯನಹುದೀತ ಹಂಸನಾಥ 4 ಅನುದಿನ ಸಾಕ್ಷಾತ ಘನಗುರು ಶ್ರೀಕಾಂತ ಹಂಸನಾಥ 5 ವಿಶ್ವ ವ್ಯಾಪಕನೀತ ವಿಶ್ವರೂಪ ನಿರ್ಮಿತ ವಿಶ್ವಾತ್ಮನಹುದೀತ ಹಂಸನಾಥ 6 ಇಡದು ತುಂಬಿಹನೀತ ಮೂಢಮಹಿಪತಿ ದಾತ ಒಡಿಯನಹುದೀತ ಹಂಸನಾಥ7
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಸಕಲಾರ್ಥಕಿದೆ ಸುಖ ಸಾಧಿಸಿನ್ನು ನೋಡಿ ಭಕುತಿ ಭಾವದಿಂದ ಸದ್ಗುರು ಸೇವೆಯ ಪೂರ್ಣಮಾಡಿ ಧ್ರುವ ಭಾವವಿಟ್ಟು ನೋಡಿ ಖೂನ ದೇವದೇವೇಶನ ಕಾವ ಕರುಣನೇ ತೋರುತಿಹ್ಯ ತಾ ನಿಧಾನ 1 ನೋಟ ನಿಜಮಾಡಿ ನೋಡಿ ನೀಟ ನಿಜ ಧ್ಯಾನ ಘಾಟ ತಿಳಿದವರಿಗಿದೆ ಗುರುಕೃಪೆಙÁ್ಞನ 2 ಸವಿದುಣ್ಣಬೇಕು ಇದೇ ಸವಿ ಸವಿಯಿಂದ ಆವಾಗ ಮಹಿಪತಿಗಿದೆ ನೋಡಿ ಬ್ರಹ್ಮಾನಂದ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಸಂಕೀರ್ಣ ಇದೇ ವೀಳ್ಯ ಅಡಕ್ಯೆಂಬುದು ನೋಡಿ ಹದನಿಸಿ ನಾಲ್ಕುಗುಣ ಚೂರ್ಣಮಾಡಿ ಧ್ರುವ ಅಡಕೆಂಬದನುಮಾನಪೂಟ ಒಡೆದ ಹೋಳು ಮಾಡಿ ಚೊಕಷ್ಟ ಮಡಿಚಿಮ್ಮನೆಂಬುದು ವೀಳ್ಯ ನೀಟ ತೊಡೆದು ಅಹಂ ಸುಣ್ಣ ಖಾರಟಾ 1 ಗುರುವರ್ಮ ಕಾಚೆಂಬುದು ಪೂರ್ಣ ಸುರಮುನಿ ಜನರ ನಿಧಾನ ತೋರುತಿಹ್ಯದೊಂದೆ ನಿಜ ಖೂನ ಕರಗಿಹೋಯಿತು ಮೂರೊಂದು ವರ್ಣ 2 ವೀಳ್ಯ ಮಾಡಲು ಮರ್ದನ ಕಳದ್ಹೋಯಿತು ಅದರವಗುಣ ಕಳೆ ಹೆಚ್ಚಿತು ರಂಗ ಸಗುಣ ಥಳಿಥಳಿಸುವ ಜ್ಞಾನ ಸುಬಣ್ಣ 3 ನುಂಗಿ ತಾಂಬೂಲ ರಸ ಹಲವಂಗ ಹಿಂಗಿ ಹೋಯಿತು ಭವಭಯಭಂಗ ಕಂಗಳದ್ಯರಿಯತು ಅಂತರಂಗ ರಂಗದೋರಿತ್ಯನ್ನೊಳು ಸತ್ಸಂಗ 4 ವೀಳ್ಯ ಅಡಕಿ ಮಹಿಪತಿಗೆ ನೋಡಿ ತಿಳದವರಿದೆ ನಿಜಪೂರ್ಣ ಮಾಡಿ ಕಳೆದು ಕಲ್ಪನಿ ಕೊನೆ ಆಗ್ಯೀಡ್ಯಾಡಿ ಇಳಿಯೊಳಗಿದೆ ಸವಿ ಸುಖಗೂಡಿ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಸಂಕ್ಷೇಪ ರಾಮಾಯಣ ಶ್ರೀಜಾನಕೀಮನೋಹರ ಚರಿತೆಯನು ಮುನಿ ರಾಜವಾಲ್ಮೀಕರಿಗೆ ನಾರದಂಪೇಳ್ದನದು ರಾಜೀವನೇತ್ರ ಪೇಳಿಸಿದಂತೆ ಸಂಕ್ಷೇಪದಿಂ ಪೇಳ್ವೆನಾಲಿಸುವುದು ವರಮುನಿಯಯಾಗಮಂ ಕಾಯ್ದುತಾಟಕಿಯಸಂ ಮುರಿದು ಭೂಸುತೆಯ ಕರಪಿಡಿದಯೋಧ್ಯಾಪುರಿಗೆ ಬರುತ ಭಾರ್ಗವನ ಗರ್ವವಸೆಳೆದು ತಂದೆಯಂ ಹರುಷಪೊಂದಿಸಿದಂರಘುದ್ವಹಂ ರಾಮಚಂದ್ರನು ಬಾಲಕಾಂಡದಲಿ 1 ಮಾತೆಯನುಡಿಗೆ ಪಿತನಭಾಷೆಯಂ ಸಲಿಸಲ್ಕೆ ತಾತಮ್ಮಲಕ್ಷ್ಮಣ ಧರಾತ್ಮಜೆಯರ್ಸಹಿತ ಪ್ರ ಭರತಬಂದು ಜಾತಂಗೆ ಪಾದುಕವನಿತ್ತು ಮನ್ನಿಸಿಮುನಿ ರಘುವರನಯೋಧ್ಯಾಕಾಂಡದಿ 2 ದಂಡಕಾರಣ್ಯದಿ ವಿರಾಧನಂ ಸಂಹರಿಸಿ ಚಂಡಿ ಶೂರ್ಪಣಖಿ ಕಿವಿಮೂಗನಂ ಕೊಯಿಸಿಯು ಮಾಯಾಮೃಗದವ್ಯಾಜದಿಂ ರಾವಣಂ ಕೊಂಡೊಯ್ಯೆಸೀತೆಯಂಅರುಣಸುತನಿಂದಕೋ ದೀಕ್ಷಾಚಾರ್ಯ ಕೇಳ್ದಸತಿವಾರ್ತೆಯಂ ಕಂಡು ಶಬರಿಯನು ಪಂಪಾತಟಕೆಬಂದ ನಾರಣ್ಯಕಾಂಡದೊಳ್ರಾಮನು 3 ಮರುತಾತ್ಮಜನಕಂಡು ಸುಗ್ರೀವಸಖ್ಯವಾ ಚರಿಸಿ ವಾಲಿಯ ಮುರಿದು ಕಪಿರಾಜ್ಯದೋಳ್ ದಿವಾ ಸೀತೆಯಕುಶಳವಂತಹುದೆನೆ ತೆರಳಲು ಚತುರ್ದಿಕ್ಕಿಗಾಗವಾನರರುಮೂ ವರುಬಂದುಪೇಳ್ದರೆಲ್ಲಿಯು ಕಾಣೆವೆಂದು ವನ ಕಿಷ್ಕಿಂಧಕಾಂಡದಲಿ 4 ಶರಧಿಯದಾಟಿ ಲಂಕೆಯ ಪೊಕ್ಕುಲಂಕಿನಿಯ ಮುರಿದು ಪುರವೆಲ್ಲಮುಂ ತಿರುಗಿವನದೊಳಗೆರಘು ವನಭಂಗಮಂಗೈಯ್ಯುತ ಪರಮ ಸಂಭ್ರಮದೊಳಕ್ಷಾದ್ಯರಂಕೊಂದುವಿಧಿ ಶರಕೆ ಮೈಗೊಟ್ಟುಲಮಂಕಾಪುರವಸುಟ್ಟುಬಂ ಪತಿಗೆಸುಂದರಕಾಂಡದಲ್ಲಿ ಹನುಮಾ 5 ವನಧಿಯೊಳ್ಸೇತುವೆಯಗಟ್ಟಿ ಧುರದೊಳಗೆರಾ ವಣ ಕುಂಭಕರ್ಣಾದ್ಯರೆಲ್ಲರಂ ಸದೆದುತ ಪೊಗಳಲು ಜನಕನಂದನೆಯ ಪಾವಕನಿಂ ಪರಿಗ್ರಹಿಸಿ ಘನಪುಷ್ಪಕವನೇರಿಬರುತ ವಹಿಲದಲಿ ಭರ ಯುದ್ಧಕಾಂಡದಲಿ 6 ಪರಮಧರ್ಮದಲಿ ರಾಜ್ಯವಾಳುತಲಿ ಕಲಿರಾಮಭೂ ವರನು ಹನ್ನೊಂದುಸಾವಿರಲವಣನಂ ಪುತ್ರರಿಗೆ ರಾಜ್ಯವಿತ್ತು ಪುರಜನವ ಪಶುಪಕ್ಷಿ ಕೀಟವ್ರಜ ಸಹಿತ ತೆರಳಿದಂದಿವಿಗೆದೇವರ್ಕಳರಳಿನಮಳೆಯ ಸುರಿದು ಜಯಜಯವೆಂದು ಪೊಗಳಿದರುಹರಿ ಯನುತ್ತರಕಾಂಡದಲಿ ತಿಳಿವದು 7 ಇಪ್ಪತ್ತುನಾಲ್ಕುಸಾವಿರ ಶ್ಲೋಕ ಕಾಂಡಗ ಳೊಪ್ಪುವುದು ಸಪ್ತವೈನೂರುಸರ್ಗಗಳೆಂದು ವಾಲ್ಮೀಕಿ ಮುನಿವಿರಚಿಸಿದನು ತಪ್ಪದೇ ಪಠಿಸುವಗಮುದಿನಂ ಗಾಯತ್ರಿ ಇಪ್ಪತ್ತು ನಾಲ್ಕುಲಕ್ಷದ ಜಪದಫಲಬಹುದು ಚರಿತಸಜ್ಜನ ಕಲ್ಪವೃಕ್ಷವಿದುವೆ 8 ಇಂತಪ್ಪ ಮಹಿಮೆಯುಳ್ಳೀಕಥೆಯ ಸಂಕ್ಷೇಪ ದಿಂ ತರಳನಾಂ ಪೇಳ್ದೆತಪ್ಪಿದ್ದಡೆಯು ತಿದ್ದಿ ಸೇವಕಂಸೇವ್ಯನವನು ಎಂತಾದಡೆಯು ಹರಿಯನಾಮಾಮೃತದರುಚಿಮ ಹಾಂತರರಿವರು ದುರ್ಜನರು ನಿಂದಿಸಿದಡೇನು ಸಂಕ್ಷೇಪರಾಮಾಯಣಂ 9
--------------
ಗುರುರಾಮವಿಠಲ
ಸಖಿ ಕೇಳೇ ಇನ್ನು ಹರುಷದ ಮಾತಾ| ಸಕಲ ಜನರಿಗೆ ಆನಂದ ವೀವಾ| ಪ ಇಂತೆಂದು ಹರಿಯು ನಾನಾಪರಿ ವಿರಹದ| ಸಂತಾಪ ಮಾತವ ನುಡಿಯಲು ಕೇಳಿ| ಅಂತರಂಗದ ಕೋಪವಬಿಟ್ಟು ಎದ್ದು|ಅ| ನಂತನ ಬಿಗಿದಪ್ಪಿದಳು ಅಂಬುಜಾಕ್ಷಿ 1 ಲಲಿತಾಂಗಿ ಆಲಿಂಗನವ ನೀಯೇ ಹರಿಗಾಗಾ| ಒಲಿದು ಉಕ್ಕೇರಿತು ಆನಂದ ಉದಧಿ| ಸತಿ ಮಾತಾಡುವ ದೇವ ಶ್ರೀ| ಲಲನೇಯಾ ಸದ್ಬುವನೆಯಾ ಪೂರಿಸಿದನು 2 ಈ ಪರಿಯಾಡಿದ ಶ್ರೀ ಹರಿ ಚರಿತೆಯಾ| ನಾ ಪೇಳಿದುದು ಭಾವ ಭಕುತಿಯಲಿಂದಾ| ಆ ಪದಿಂದಲಿ ಕೊಂಡಾಡುವ ಮನುಜನ| ತಾ ಪಾಲಿಸುವಾ ಮಹಿಪತಿ ಸುತ ಪ್ರೀಯಾ3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಸಖಿ ನೋಡ ದ್ವಾಪರ ಯುಗವ ದ್ವಾಪರಯುಗವ ಅಪಾರ ಭಾಗ್ಯವ ಶ್ರೀಪತಿ ಇವರಿಗೊಲಿದಿರುವ ಸಖಿ ಪ. ಪಾದ ಬಲ್ಲಷ್ಟು ಬಲಗೊಂಡುಗೊಲ್ಲರ ಅರಸು ಜನಿಸಿದ ಗೊಲ್ಲರ ಅರಸು ಜನಿಸಿದ ಯುಗ ಧರ್ಮಎಲ್ಲವಿಸ್ತಾರ ರಚಿಸುವೆ ಸಖಿ 1 ಅಕ್ಕ ದ್ವಾಪರ ಧರ್ಮ ಶಕ್ಯವೆ ವರ್ಣಿಸಲುಲಕುಮಿದೇವಿಗೆ ವಶವಲ್ಲಲಕುಮಿದೇವಿಗೆ ವಶವಲ್ಲ ಯುಗಧರ್ಮತಕ್ಕಷ್ಟು ಹೇಳಿ ರಚಿಸುವೆ ಸಖಿ2 ಭೂಪ ದ್ವಾಪರದಲ್ಲೆ ಪಾಪಿ ಒಬ್ಬನಿಲ್ಲತಾಪಕೋಪಗಳು ಮೊದಲಿಲ್ಲತಾಪಕೋಪಗಳು ಮೊದಲಿಲ್ಲ ಧರೆ ಮ್ಯಾಲೆ ತಾಪಸ ಜನವೇ ಹರವಿತ್ತು ಸಖಿ 3 ಅಕ್ಷಯ ದ್ರವ್ಯವಲಕ್ಷ್ಯವಿಲ್ಲದಲೆ ಕೊಡುವೋರುಲಕ್ಷ್ಯವಿಲ್ಲದಲೆ ಕೊಡುವೋರು ರಂಗನ ರಕ್ಷೆಯ ಮಾಡಿಜೈಸೋರು ಸಖಿ 4 ಕೃಷ್ಣನ ಪಾದದಲೆ ನಿಷ್ಠೆಯುಳ್ಳವರನ್ನುದೃಷ್ಟಿಲೆ ನೋಡಿ ಸಹಿಸದೆದೃಷ್ಟಿಲೆ ನೋಡಿ ಸಹಿಸದೆ ಧರೆಮ್ಯಾಲೆ ಪುಟ್ಟಿದನಾಗ ಕಲಿಬಂದು ಸಖಿ5 ಸತ್ಯಶೌಚ ಆಚಾರ ಉತ್ತಮ ಧರ್ಮತತ್ವವಿಚಾರ ಮೊದಲಿಲ್ಲತತ್ವವಿಚಾರ ಮೊದಲಿಲ್ಲ ಧರೆ ಮ್ಯಾಲೆ ದೈತ್ಯಮಯವಾಗಿ ಜಡದಿತು ಸಖಿಯೆ 6 ಹರಿಗುರುಗಳರಿಯದ ಪರಮ ಪಾಮರಜನ ಧರೆಯ ಮೇಲಾಗ ಜನಿಸಿತುಧರೆಯ ಮೇಲಾಗ ಜನಿಸಿತು ರಾಮೇಶನಪರಮ ಭಕ್ತರನ ದಣಿಸಿತು ಸಖಿಯೆ 7
--------------
ಗಲಗಲಿಅವ್ವನವರು
ಸಖಿಬಾರೆ ಸುರಮೋಹನ ನೀಕರತಾರೆ ಪ ಮಕರಾಂಕನಯ್ಯನ ಕಾಣದೇ ನಾ ನಿಲ್ಲಲಾರೆ| ಯುಕುತಿಲೇ ತಂದು ನೀತೋರೇ| ಕ್ಷಣಯುಗವ ನೋಡುವರೇ| ಪ್ರಕಟದಲಿ ಕಣ್ಣಾರೆ ಕಾಂಬೆನೆಂದು 1 ದೀನಬಂಧು ಮೊರೆಹೊಕ್ಕವರ ಬಿಡನೆಂದು| ಮುನಿಜನ ಸಾರುವನೆಂದು|ನಂಬಿದೆನಾಮಕಬಂದು| ವನಜಾಕ್ಷ ಎನ್ನೊಳು ಕುಂದು|ನೊಡುವ ದುಚಿತವೇನಿಂದು| ಸನುಮುಖಕ ಮಾನವನು ತಂದುಕೂಡಿಸೇನಿಜಾ2 ನರಹರಿ ಶರಣಾಗತ ಸಹಕಾರಿ|ಬಿರುದವ ತಾಳಿದಾಪರಿ| ಮೊರೆಗೇಳಿದನು ದುರಿತಾರಿ|ಉರಗಾರಿ ಚಿನ್ನವನೇರಿ| ಬಂದ ನೋಡ ದಯಬೀರಿ| ಗುರು ಮಹಿಪತಿ ಪ್ರಭು ಉದಾರ|ನೆರೆದನೇತಾ3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಸಂಗಮಾಡೆಲೋ ಶ್ರೀಹರಿ ದಾಸರಾ ಹಿಂಗಿ ಹೋಹುದು ತಾಭವದಾಸರಾ ಮಂಗಳ ಮಂಗಳಾತ್ಮಕ ಕೈಗೂಡಿ ಬಾಹನು ಅಂಗಜ ಜನಕ ಸಚತುರ್ಬಾಹನು 1 ಅವರ ವಾಕ್ಯ ಸುಧಾರಸ ಪಾನವಾ ಶ್ರವಣದಿಂದಲಿ ಮಾಡೆಲೊ ಪಾನವಾ ಭವದ ಜನ್ಮ ಜರಾಲಯ ಜಾರುವೀ ತವಕದಿಂದ ಚಿತ್ಸುಖ ಸೇರುವಿ 2 ಹಲವು ಸಾಧನಭರಿಗೆ ಬೀಳದೇ ಕಲಿತ ವಿದ್ಯತ್ವ ಗರ್ವವ ತಾಳದೇ ಬಲಿದು ಭಕ್ತಿಯ ಹೋಗದೆ ಸಿಂತರಾ ನೆಲಿಯ ಕೇಳೆಲೋಭಾವದಿ ಸಂತರಾ 3 ಮರಹು ಕತ್ತಲಿವೆಂಬುದು ಹಾರಿಸೀ ಅರಿಗಳಾರರೆ ಸಂಕಟ ಹಾರಿಸೀ ಅರಹು ಭಾಸ್ಕರ ತೋರುವ ಬೋಧಿಸಿ ಹೊರವ ಸಜ್ಜನ ಸಂಗವ ಸಾಧಿಸಿ 4 ನೆಲಿಯ ಹೊಂದುವ ಪರಿಯನಿಲ್ಲದೇ ಸುಲಭಸಾಧನ ತೋರಿಪರಲ್ಲದೇ ಬಳಲುವಾಬಾಹಳ ಸಾಪೇಳರು ಬಲಿದು ಪಾಯವ ಸಂತರ ಕೇಳರು 5 ಹರಿಕಥಾ ಮೃತಸಾರಸ ಪೇಳುತಾ ದುರಿತ ದುಷ್ಕøತ ತರುಗಳ ಶೀಳುತಾ ಪರಮ ಭಕ್ತಿಯ ಭಾಗ್ಯವ ಕುಡುವರು ಅರಿತು ಸಂತರ ಸಂಗವ ಬಿಡುವರು 6 ಏಳು ಭೂಮಿಕಿ ಮಾರ್ಗವ ತೋರಿಸಿ ಮಾಲ ಚಿತ್ಸುಖ ಮಂದಿರ ಸೇರಿಸಿ ಕಾಲಕರ್ಮದ ಕೋಟಲೆ ವಾರಿಸೀ ಪಾಲಿಸುವರು ಭವದಿಂತಾರಿಸಿ 7 ಸಂಗದಿಂ ಚಂದನಾಹದು ಪಾಮರಾ ಜಂಗಮೊತ್ತಮನಾಗನೇಪಾಮರಾ ಅಂಗದಿಂಮಾಡು ಸಂತರ ವಂದನಾ ಇಂಗಿಥೇಳಿದ ಮಹಿಪತಿ ನಂದನಾ 8
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಸಂಗವಾಗಲಿ ಸಾಧು ಸಂಗವಾಗಲಿ ಪ ಸಂಗದಿಂದ ಲಿಂಗದೇಹ ಭಂಗವಾಗಲಿ ಅ.ಪ ಅಚ್ಚುತಾಂಘ್ರಿ ನಿಷ್ಠರ ಯದೃಚ್ಛ ಲಾಭ ತುಷ್ಟರನಿಶ್ಚಯಾತ್ಮ ಜ್ಞಾನವುಳ್ಳ ಅಚ್ಚ ಭಾಗವತರ1 ಸಾರ ಮೂರ್ತಿ ತಿಳಿದವರ2 ಪಂಚಭೇದ ಸಂಸ್ಕಾರ ಪಂಚ ಭೂತಾತ್ಮವಾದಪಂಚಭೇದ ಕೃಷúರಾಯನ ಪಂಚಮೂರ್ತಿ ತಿಳಿದವರ 3
--------------
ವ್ಯಾಸರಾಯರು
ಸಂಗಸುಖವ ಬಯಸಿ ಬದುಕಿರೋ ರಂಗವಲಿದ ಭಾಗವತರ ಪ ಸಂಗಸುಖವ ಬಯಸಿ ಬದುಕಿ ಭಂಗಪಡಿಪ ಭವವ ನೂಕಿ ಹಿಂಗದೇ ನರಸಿಂಗನನ್ನು ಕಂಗಳಿಂದ ಕಾಣುತಿಹರ ಅ.ಪ. ಪುಟ್ಟಿದಾರಭ್ಯ ಪರಮ ವೈಷ್ಣವಾಧ್ಯಕ್ಷರೆನಿಸಿ ನಿತ್ಯ ಮುದ್ದು ಕೃಷ್ಣ ಕೀರ್ತನೆಯನು ಪಾಡುತ ಕಾವ್ಯಕರ್ಮ ಬಿಟ್ಟು ಭಕ್ತಿಯನೆ ಮಾಡುತ ಮಧ್ವಮತವ ಪುಷ್ಟಿಗೈಸಿ ಖಳರ ಕಾಡುತ ಬಂದ ಲಾಭ ನಷ್ಟ ತುಷ್ಟಿಗಳಿಗೆ ಒಡಂಬಟ್ಟ ಬಗೆಯ ಪೇಳಲೆಷ್ಟು 1 ಭೂತದಯಾಶೀಲರಾದ ನೀತ ಗುರು ಜಗ- ನ್ನಾಥ ವಿಠಲಾಂಕಿತವನು ಪಡೆದು ಸಂಗೀತ ವೃತ್ತ ಪದ ಸುಳಾದಿಯ ಪೇಳಿ ಪ್ರೇ- ಮಾತಿಶಯದಿ ಒಲಿಸಿಕೊಂಡು ಮಧುವಿರೋಧಿಯ ಒಲಿಸಿಕೊಂಡ ಜಾತರಾಗಿ ಜವನಬಾಧೆಯ ಬಯಲು ಮಾಡಿ ಖ್ಯಾತರಾಗಿಹರು ಪುಸಿಯ ಮಾತಿದಲ್ಲ ಮರೆಯಸಲ್ಲ 2 ಮೇದಿನಿಯೊಳಗುಳ್ಳ ಗಂಗಾದಿತೀರ್ಥ ಸತಿಗಳಿವರ ಕಾದುಕೊಂಡಿಹರು ಬಿಡದೆ ಸ್ವಾದಿರಾಜೇಂದ್ರರ ಪ್ರ- ಸಾದದಿಂದ ಹರಿಕಾಥಾಮೃತ ಸಾರತತ್ವ ಸಾಧುಜನರಿಗಾಗಿ ಪ್ರಾಕೃತ ಪದ್ಧತಿಯಲಿ ಸಾದರದಲಿ ಪೇಳಿ ದುಷ್ಕøತ ದೂರಮಾಡಿ ಮೋದಿಸುವರಿಗೆಣೆಗಾಣೆ ಶ್ರೀದವಿಠಲನಾಣೆ 3
--------------
ಶ್ರೀದವಿಠಲರು
ಸಂಚಿತ ಕರ್ಮವಂತೆ ಕಂತೆ ಮುಂಗಡ ಪ ಬರೆದ ಬರೆಹ ತೊಡೆದ ಮೇಲೆ ಕರೆದರಾಗ ಹೋಗಬೇಕುನೆರೆದು ಸುತ್ತಮುತ್ತ ಕುಳಿತ ಪರಮ ಬಂಧುವರ್ಗವೆಲ್ಲಇರಿಸಬೇಡಿ ಸುಡುಸುಡೆಂಬರು ಸುಟ್ಟಬಳಿಕಭರದಿ ಬಂದು ಮನೆಯೊಳೆಂಬರು ಪಾಪಿ ಸತ್ತತರುಣಿ ಕೆಟ್ಟಳೆಂದುಕೊಂಬರು ಆತ್ಮ1 ಸತಿಯು ಸುತರು ಪುತ್ರಿ ಮಿತ್ರರತಿಶಯದೊಳು ತಂದೆ ತಾಯಿಅತಿ ವಿನೋದಗೈಯುವ ಭಾವ ಜತನವೆಂಬೊ ಅತ್ತೆ ಮಾವಜೊತೆಗೆ ಹುಟ್ಟಿದಣ್ಣ ತಮ್ಮ ಈ ದೇಹ ತಾನುಸತ್ತ ಗಳಿಗೆ ಮುಟ್ಟಲಮ್ಮರು ಬರಿದೆ ನಾವುವ್ಯಥೆಗೆ ಸಿಕ್ಕಿದೆವೆಂಬರು ಆತ್ಮ 2 ಕಟ್ಟಿದರ್ಧ ಕರೆವ ಎಮ್ಮೆ ಕೊಂಡುಕೊಂಡ ಸಾಲಕದನುಪೋಟು ಮಾಡಿ ಮಕ್ಕಳೊಡನೆ ಅಷ್ಟು ಹೇಳಿ ಸಾವತನಕದುಷ್ಟ ಜನರು ಸುಮ್ಮನಿರುವರೆ ಕೈಯಲೊದಗಿದಷ್ಟು ಧರ್ಮವನ್ನು ಮರೆವರೆ ಆದಿಕೇಶವನ್ನಮುಟ್ಟಿ ಭಜಿಸಿ ಕಡೆಗೆ ಬಿಡುವರೆ ಆತ್ಮ 3
--------------
ಕನಕದಾಸ
ಸಚ್ಚಿದಾನಂದಮಯಗೆಚ್ಚರಿಕೆ ಪ ನಿಶ್ಚಯದ ನಿರುಪಮಂಗೆಚ್ಚರಿಕೆ ಅಚ್ಚರಿಯ ಸಚ್ಚಿತ್ರಂಗೆಚ್ಚರಿಕೆ ಅ.ಪ ಕಾಂತೆಯರ ಮನೆಗೆ ಶ್ರೀಕಾಂತ ಪೊರಮಡುತಿಹನು ಕಾಂತೆಯರು ಕಟ್ಟುಮೆಟ್ಟದವೊಲೆಚ್ಚರಿಕೆ 1 ಸಂಚಿತಾಭರಣಗಳ ಮಿಂಚುಗುರುಚರಣಗಳ ಕುಂಚ ಕಾಳಂಜಿಯವರೆಲ್ಲವೆಚ್ಚರಿಕೆ 2 ನೀಡೆಸೆವ ಸೆಳ್ಳುಗುರು ಮೂಡುತಿಹ ಮೊಲೆಹೊಗರು ಆಡಿಸುವ ಹಡಪದವರೀಗ ಎಚ್ಚರಿಕೆ 3 ಬಿಂಬಾಧರಂ ಪೊಳೆಯೆ ಕಂಬುಕಂಠವು ಹೊಳೆಯೆ ಪೊಂಬಾಳ ದೀವಿಗೆಯ ಜನರು ಎಚ್ಚರಿಕೆ 4 ಚೆನ್ನಸಿರಿಯರಮನೆಯ ಚಿನ್ನವಾಗಿಲ ಕೊನೆಯ ರನ್ನದೋರಣ ತಡಿಯವರೆಚ್ಚರಿಕೆ 5 ಇಂದಿರಾದೇವಿಯರ ಮಂದಿರದ ಬೀದಿಯೊಳು ಸಂದಣಿಯಲತಿ ಜತನವಿರಲಿ ಯೆಚ್ಚರಿಕೆ 6 ದೇವಿಯರ ಮನೆಗೆ ವಿವಾಹ ತಾಬೇಡಿ ಬಂದ ದೇವಪುರ ಲಕ್ಷ್ಮೀಶಗೆಚ್ಚರಿಕೆ 7
--------------
ಕವಿ ಲಕ್ಷ್ಮೀಶ