ಒಟ್ಟು 13948 ಕಡೆಗಳಲ್ಲಿ , 132 ದಾಸರು , 6945 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಶ್ರೀಯತಿವರ ನಮಿಪರ ಸುರತರುವೆ | ಮಮಗುರುವೆ | ನಿರುತದಿ ಭಕುತರ ಪೊರೆವೆ ಅ.ಪ ದಯಾಸಾಂದ್ರ ರಾಘವೇಂದ್ರ | ಸುರುಚಿರಮಂತ್ರಾಲಯೇಂದ್ರ | ಜಯಯತಿವರ ನಮಿಪರ ಸುರತರುವೆ 1 ಭಾಸುರಾಂಗ ಜಿತಾನಂದ | ರಘುವರಪದಮಲಭೃಂಗ | ಜಯಯತಿವರ ನಮಿಪರ ಸುರತರುವೆ 2 ಶ್ರೀಸುಧೀಂದ್ರವರಕುಮಾರ | ಶ್ರೀಶಕೇಶವಾಂಘ್ರಿರುಚಿರ | ಜಯಯತಿವರ ನಮಿಪರ ಸುರತರುವೆ 3
--------------
ಶ್ರೀಶ ಕೇಶವದಾಸರು
ಶ್ರೀರಂಗ ರಂಗನಾಥ ಎನ್ನ ಕಣ್ಗಾಳೆದುರು ನಿಂತಿದಂತಿದೆ ಪ ವಜ್ರಮಾಣಿಕದ ಕಿರೀಟವನಿಟ್ಟು ಪ್ರಜ್ಜಲಿಸುವ ಹಣೆಯ ಕಸ್ತೂರಿಬಟ್ಟು ವಜ್ರದ ಕರ್ಣಕುಂಡಲ ಅಳವಟ್ಟು ಸಾಜದ ಅಧರಚಂದವಿನ್ನೆಷ್ಟು 1 ಕಬ್ಬುಬಿಲ್ಲನು ಪೋಲ್ವ ಪುಬ್ಬಿನ ಚಂದ ಅಬ್ಜದಂತೆಸೆವಾ ನಯನದಾನಂದ ಕುಸುಮವ ಪೋಲುವ ನಾಸಿಕದಂದ ಕದಪು ಹೊಳೆಯುತ್ತ ಬಂದ 2 ಕಂಠದೊಳಗೆ ಇಟ್ಟ ಕೌಸ್ತುಭಮಣಿಯು ಎಂಟು ಪದಕಗಳನಳವಡಿಸಿದ ಅಣಿಯು ಗಂಟೆ ಗೆಜ್ಜೆವುಡಿದಾರದ ಫಣಿಯು ಸಂಧ್ಯರಾಗವ ಪೋಲ್ವ ಪೀತಾಂಬರದಣಿಯು 3 ಶಂಖಚಕ್ರವು ಗದೆ ಆಭಯಹಸ್ತಗಳು ಪಂಕಜಮುಖಿ ಇರುವ ವಕ್ಷಸ್ಥಳವು ಶಂಕರನಪಿತನ ಪಡೆದ ನಾಭಿದಳವು ಶಂಕೆ ಇಲ್ಲದ ಕಣಕಾಲಿನ ಹೊಳವು 4 ಅಂದುಗೆ ಗೆಜ್ಜೆಗಳ ಚಂದದಿಂದಿಟ್ಟು ಕುಂದಣದ ಪಾಡಗವನಳವಟ್ಟು ಚಂದದಿಂ ವಜ್ರದಾವುಗೆಯ ಮೆಟ್ಟು ತ [ಬಂದ] ಗಂಗೆ ಪಡೆದನಖಾಪಂಕ್ತಿಗಳೆಷ್ಟು5 ವಜ್ರಾಂಕುಶ ಧ್ವಜರೇಖೆಗಳಿಂದ ಪದ್ಮಪಾದದ ಕೆಂಪುಗಳು ಬಹುಚಂದ ಹೊದ್ದಿದ ಭಕ್ತರ ಪಾಪವನೆಲ್ಲ ಒದ್ದು ಮುಕ್ತಿಯನೀವ ಮುದ್ದು ಶ್ರೀ ವೆಂಕಟಕೃಷ್ಣ 6
--------------
ಯದುಗಿರಿಯಮ್ಮ
ಶ್ರೀರಂಗ ಬಾರನೆ ಪ. ಕರೆದರಿಲ್ಲಿ ಬಾರನೆ ಕಾಂತೆ ಮುಖವ ತೋರನೆ ಮಧುರ ಪುರದ ಅರಸನೆ ಕೂಡಿ ಎನ್ನ ರಮಿಸನೆ ಅ.ಪ . ಮುನಿಸು ಮನದಲ್ಲಿಟ್ಟನೆ ಮೋಹವನ್ನು ಬಿಟ್ಟನೆಮನದಿ ಛಲವತೊಟ್ಟನೆ ಮನೆಗೆ ಬಾರದೆ ಬಿಟ್ಟನೆ 1 ಎಂತು ನಂಬಿ ಇದ್ದನೆ ಎಂತು ಗುರುತು ಮರೆತನೆಪಂಥವ್ಯಾತಕೆ ಕಲಿತನೆ ಕಾಂತೇರÀ ಕೂಡಿ ಮೆರೆದನೆ 2 ಸೋಳಸಾಸಿರ ಗೋಪಿಸಹಿತ ಜಲದಲಾಡಿ ಪೋದನೆಸೆಳೆದು ಒಬ್ಬಳ ಒಯ್ದನೆ ಚೆಲುವ ಹಯವದನನೆ 3
--------------
ವಾದಿರಾಜ
ಶ್ರೀರಂಗನಾಟದ ಪರಿಯ ತೋರುದು ನೋಡಚ್ಚರಿಯ ದೇವಕಿಕಂದ ದೇವಮುಕುಂದ ಮಾವಕಂಸನ ಕೊಂದ ಧ್ರುವ ಫಣಿ ಮೆಟ್ಯಾಡಿದ ಚಂದ ಕಾವನಯ್ಯ ಗೋವಿಂದ 1 ಆಸುಹೀರಿದ ಪೂತಣಿಯ ಮೊಸರು ಹಾಲು ಬೆಣ್ಣಿಗೆ ದಣಿಯ 2 ಕುಸುಮನಾಭನೆ ಶೇಷಶಯ್ಯ ಲೇಸಾಗ್ಹೊರೆವ ಮಹಿಪತಿಯ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಶ್ರೀರಂಗಶಾಯಿ ವಿಠಲ ಪೊರೆಯ ಬೇಕಿವಳ ಪ ಭವ ಶರಧಿ ದಾಂಟಿಸುತ ಅ.ಪ. ಕಾರಾಣಾತ್ಮಕ ನಿನ್ನ | ಗುಣರೂಪ ಕ್ರಿಯೆಗಳಧಾರಣೆಗಳಿಲ್ಲದಲೆ | ಧ್ಯಾನರತಳಾಗಿಮೂರಾರು ದ್ವಾರಗಳ | ಬಂಧಿಸುತ ಯೋಗದಲಿಆರಾಧ್ಯ ಮೂರ್ತಿಯನೆ | ಮರೆತ ಯೋಗಿಣಿಯ 1 ತೈಜಸ ಸು | ವ್ಯಕ್ತ ಅಂಕಿತವಾ 2 ತಾರತಮ್ಯ ಜ್ಞಾನ | ಮೂರೆರಡು ಭೇದಗಳಸಾರತತ್ವಗಳರುಹಿ | ಪೊರೆಯ ಬೇಕಿವಳ |ಕಾರುಣಿಕ ಕಂಕಣಾ | ಕಾರ ಚಕ್ರಾಕೃತಿಯತೋರಿರುವೆ ತನ್ಮಹಿಮೆ | ಅರಿಯ ಕಾತುರಳಾ 3 ಸಿರಿ ಸತ್ಯ ನರೆಯಣನೆಪರಿಪರಿಯಲಿಂದಿವಳ | ಪೊರೆಯ ಬೇಕೋಗರುಡಗಮನನೆ ದೇವ | ಸರ್ವಜ್ಞ ನೀನಿರಲುಒರೆವೆನೆಂಬಪರಾಧ | ಮರೆದು ಪಾಲಿಪುದೋ 4 ಅದ್ವೈತ ಉಪದೇಶ | ತಿದ್ದಿನಿನ ಪದದಲ್ಲಿಶುದ್ಧ ಭಕ್ತಿಜ್ಞಾನ | ವೃದ್ಧಿಯನೆ ಗೈಸೀಮಧ್ವಾಂತರಾತ್ಮ ಗುರು | ಗೋವಿಂದ ವಿಠ್ಠಲನೆಅದ್ವಿತೀಯನು ಯೆಂಬ | ಬುದ್ಧಿ ಸ್ಥಿರ ಮಾಡೋ 5
--------------
ಗುರುಗೋವಿಂದವಿಠಲರು
ಶ್ರೀರಂಗೇಶವಿಠಲ | ಪೊರೆಯೆನ್ನ ಹೃದಯಾ- ಧಾರನೆ ಮಾಲೋಲ | ಸ್ಮರಕೋಟಿ ಸುಂದರಾ- ಕಾರ ನತಜನಪಾಲ | ಅರಿಮಸ್ತಕ ಶೂಲ ಪ ಆರು ಅರಿಗಳ ಗೆಲಿಸಿಯೆನ್ನಿಂ- ದಾರು ಎರಡನು ಮುರಿಸಿ ನಿನ್ನೊಳು ಆರು ಮೂರನೆಯಿತ್ತು ಸರ್ವದ ಪಾರುಗೈಯ್ಯಬೇಕೆಂಬೆ ದೇವ ಅ.ಪ. ಆನೆಗೊಂದಿ ನಿವಾಸ | ಭಕುತರ ನಿರಂತರ ಮಾನದಿಂ ಪೊರೆವ ಶ್ರೀಶ | ಎಂದೆಂದಿಗು ನಾನಿನ್ನ ದಾಸರ ದಾಸ | ನೆಂದು ಕರುಣಿಸು ನೀನೆನಗೆ ಲೇಸ | ಭಾನುಕೋಟಿ ಪ್ರಕಾಶ ಮಾನ ಅವಮಾನಗಳು ನಿನ್ನಾ- ಧೀನವೆಂದೇ ನಂಬಿಕೊಂಡಿಹ ದೀನನೆನ್ನನು ದೂರ ನೋಡದೆ ಸಾನುರಾಗದಿ ಪೊರೆವುದೈಯ್ಯಾ ನಳಿನಭವ ಅಂಡದೊಳಗೆ ದಾನಿ ನೀನಲ್ಲದನ್ಯರುಂಟೆ ಏನ ಬೇಡೆನು ನಿನ್ನ ಬಳಿಯಲಿ ಜ್ಞಾನ ಭಕುತಿ ವೈರಾಗ್ಯವಲ್ಲದೆ1 ವರಾಹ ಜನ ತಾಪ | ತ್ರಯ ದೂರ ವಾಮನ ಮಾನವೇಂದ್ರರ ಪ್ರತಾಪ | ವಡಗಿಸಿದೆ ಪ್ರಬಲ ದಾನವೇಂದ್ರನ ಶಾಪ | ನೀನೆ ಕಳೆದೆಯೊ ಶ್ರೀಪಾ ವಾನರ ಬಲ ನೆರಹಿಕೊಂಡು ನೀನು ರಾವಣನನ್ನು ಕೊಂದು ಮಾನಿನಿಯ ಪೊರೆದು ಶರಣಗೆ ನಿ ದಾನ ಮಾಡದೆ ಪಟ್ಟಗಟ್ಟಿದೆ ದಾನವಾಂತಕನೆಂಬ ನಾಮವ- ನ್ಯೂನವಿಲ್ಲದೆ ಪರಸತಿಯರಭಿ ಮಾನ ಕಳುಪಿದ ಜಾಣ ಕಲ್ಕಿಯೆ 2 ಸೂರಿಜನ ಪರಿಪಾಲ ಸದ್ಗುಣಗಣನಿಲಯ ಘೋರರಕ್ಕಸಕಾಲ | ವರಶೇಷತಲ್ಪವ ನೇರಿ ನಿರುಪಮ ಬಾಲ | ನಂದದಿ ನಿರುತ ನೀ ತೋರುತಿರುವೆಯೊ ಲೀಲ | ಶ್ರೀ ರಂಗೇಶವಿಠಲ ಮಾರ ಜನಕನೆ ಮಂಗಳಾಂಗನೆ ಕ್ರೂರ ಕುಲವನದಾವ ಅನಲನೆ ಭೂರಿ ಕರುಣವ ಬೀರಿ ಎನ್ನಸು ಭಾರ ನಿನ್ನದು ವಾರಿಜಾಕ್ಷನೆ ಎನ್ನ ಹೃದಯದಿ ಚಾರು ಬಿಂಬವ ಸಾರಿ ಬೇಡುವೆ ಬಾರಿ ಬಾರಿಗೆ ಶರಧಿ ಬಡಬನೆ3
--------------
ರಂಗೇಶವಿಠಲದಾಸರು
ಶ್ರೀರಮಣನೆ ಕಾಯೊ ದಯಮಾಡು ರಂಗಶ್ರೀರಮಣನೆ ಕಾಯೊ ಏ ಕರುಣದಿ ಪ. ನೀರಜಭವಜನಕ ತಾರಿದೆ ಭವದಿಂದ ಏ ಮುರಹರೆಸೇರಿದೆ ನಿನ್ನ ಪದವ ಶ್ರೀರಮಣನೆ ಕಾಯೊ ಅ.ಪ. ಕರುಳ ಸಂಬಂಧವೆಂಬೊ ಎನ್ನ ಕೊರಳಿಗೆಉರುಳುಗಳನೆ ಸಿಲುಕಿ [ಸಿ]ಬರಿದೆ ಮದಗಳೆಂಬ ಈಕರಿಗಳ ಧುರತಗ್ಗದು ಹರಿಯೆ 1 ಅರಿಷಡ್ವರ್ಗವೆಂಬ ಈ ಮಹಾಉರಗಭಯಕೆ ಸಿಲುಕಿಬರಿದೆ ಮದಗಳೆಂಬ ಈ ಕರಿಗಳ ಧುರತಗ್ಗದು ಹರಿಯೆ 2 ಬಲುದುರ್ವಿಷಯಂಗಳ ಈ ಬಲೆಗಳಸಾಲಿಗೆ ಒಳಗಾದೆಕಲಾವತಿ ಜನರೆಂಬ ಈಖಳರ ಒಳಬಿದ್ದೆನೊ ಹರಿಯೆ3 ಜರೆನರೆಗಳು ಬಂದು ಇರುವಾಗಪರಸತಿಯರ ಕಾಟನರನಾಯಿಗಳಂತೆ ಈ-ಪರಿ ನೆರೆಹೊರೆಗಳ ಕೂಟ 4 ದಯವಿಲ್ಲದ ಸತಿಯು ಈ ದುರುಳರುನಯಹೀನರು ಸುತರುಭಯದಿಂದಲಿ ನೊಂದೆದಯಾಂಬುಧೇ ಹಯವದನ ನೀ ಬಂಧು 5
--------------
ವಾದಿರಾಜ
ಶ್ರೀರಮಣಿ ದಯದೋರು ಬ್ರಹ್ಮ ಸಮೀರಜನ ನೀ ಬೇಗ ಮೂರುತಾಪದ ದೂರಗೈಸಿ ಸರೋರುಹಾಕ್ಷನ ಸಾರಗೈಸುತ ಪ. ಶ್ರೀನಿವಾಸನ ಸರ್ವಸೇವೆಯ ತಾನೆ ಮಾಳ್ಪೆನೆಂದು ಭಾನುಕೋಟಿ ಸಮಾನಭಾಸ ವಿಮಾನವಾಗಿ ನಿಂದು ಮಹಾನಭೀಯ ಸಮಸ್ತ ವಸ್ತು ವಿ- ಧಾನರೂಪಿಣಿಯಾಗಿ ಭಕ್ತಜನಾನುವರ್ತಿಯ ಭಾವ ಗ್ರಹಿಸಿದ 1 ಹಾರಕಟಕ ಕಿರೀಟವರ ಕೇಯೂರ ಬಾಹುಪುರಿಯು ಚಾರುತರ ಗಂಭೀರರವ ಶೃಂಗಾರದ ನೂಪುರವ ಮಾರನೈಯ್ಯನ ಮುದ್ದು ಹಸ್ತದಿ ವಾನೈಜಾರಿಗದಾಬ್ಜರೂಪದಿ ಸೇರಿ ಶೋಭಿಪ ಶಕ್ತಿ ನಿನ್ನ ಪದಾರವಿಂದವ ನಂಬಿ ನಮಿಪೆನು 2 ಕುಂದ ನೋಡದಿಂದೂ ಹರಿ ಚಂದನಾತ್ಮಕ ವೆಂಕಟೇಶನು ಬಂದಿಲ್ಲಿಹನೆಂದು ಮುನಿಜನವೆಂದ ಮಹಿಮೆಯ ನಿಂದು ತೋರುತ ಸನ್ನಿಹಿತಳಾಗೆಂದು ಚರಣದ್ವಂದ್ವ ಪೊಗಳುವೆ 3 ,
--------------
ತುಪಾಕಿ ವೆಂಕಟರಮಣಾಚಾರ್ಯ
ಶ್ರೀರಮಣೀಮಣಿ ಬಾರೌ ಶ್ರೀಕರಮಣಿಪೀಠಕೆ ಪ. ಸಾರಸದಳನಯನೆ ಸುಗುಣಾಭರಣೆ ಸಾರಸಭವವಂದಿತಚರಣೆ ಕ್ಷೀರಸಾಗರನಂದನೇ ವರ ಕಾರುಣ್ಯಾಮೃತಪೂರಿತ ವದನೆ 1 ಪವನಾತ್ಮಜಸಂಸೇವಿತಾಂಘ್ರಿಯುಗಳೇ ಪಾಲಿತಾಮರ ಜಾಲೇ ಪಾವನಗುಣಶೀಲೇ ಶಶಾಂಕನಿಭಫಾಲೇ ಪಾಲಿಸುನೀಂ ಪಂಕಜಸುಮಮಾಲೆ 2 ಕೇಶವಹೃದಯನಿವಾಸಿನೀ ಪದ್ಮಾಸಿನೀ ಕ್ಲೇಶ ನಿವಾರಿಣಿ ಭುವನೈಕ ಜನನಿ ಕಾಂಕ್ಷಿತಾರ್ಥ ಪ್ರದಾಯಿನಿ 3
--------------
ನಂಜನಗೂಡು ತಿರುಮಲಾಂಬಾ
ಶ್ರೀರಮಾಧವಾಶ್ರೀತಜನಪಾಲಿತ ಮಾರಕೋಟಿರೂಪ ವಾರಿಧಿಶಯನ ಮುರಾರಿ ಕೇಶವ ಶ್ರೀಮ- ನ್ನಾರಾಯಣ ನೀರಜದಳಲೋಚನಪ. ಮಾನುಷತ್ವವಾಂತ ಸಮಯದಿ ಹೀನ ಭೋಗದ ಚಿಂತೆ ನಾನು ನೀನೆಂಬಾಭಿಮಾನದಿ ಮನಸು ನಿ- ಧಾನವಿಲ್ಲದೆ ಅನುಮಾನದಿಂದಿಹುದೈ ಏನು ಕಾರಣ ಹೃದಯನಳಿದೊಳು ನೀನೆ ನೆಲಸಿಕೊಂಡೀ ನರಯೋನಿಗೆ ನೀನೆ ಬರಿಸಿಯವಮಾನ ಬಡಿಸುವದು ಊನವಲ್ಲವೆ ಪದದಾಣೆ ಸತ್ಯವಿದು1 ಬಾಲಕತನದೊಳಗೆ ಕಾವ್ಯದ ಶೀಲವಿತ್ತೆಯೆನಗೆ ಕೀಳುಮಾಡದೆ ಯೆನ್ನ ಬಾಲಭೂಷಿತಂಗಳ ಕೇಳೈ ಶ್ರೀಲಕ್ಷ್ಮೀಲೋಲ ವೆಂಕಟರಾಯ ಕಾಲಕಾಲಪ್ರಿಯ ಪಾಲಿಸೊಲಿದು ಕರು- ಣಾಲವಾಲ ನತಪಾಲಶೀಲ ಮುನಿ ಜಾಲವಂದ್ಯ ವನಮಾಲದಾರಿ ಜಗ ಮೂಲಸ್ವರೂಪ ವಿಶಾಲ ಗುಣಾರ್ಣವ2 ಹಿಂದಾದುದನರಿಯೆ ಇದರಿಂ ಮುಂದಾಗುವುದು ತಿಳಿಯೆ ಹಿಂದು ಮುಂದಿಲ್ಲದೆ ಬಂಧನದೊಳು ಬಲು ನೊಂದೆನೈ ನಿನಗಿದು ಚಂದವೆ ಶ್ರೀಹರಿ ತಂದೆ ತಾಯಿ ಬಂದು ಬಾಂಧವ ಬಳಗ ನೀ ನೆಂದು ನಿನ್ನಯ ಪದದ್ವಂದ್ವವ ಭಜಿಪಾ ನಂದಸುಜ್ಞಾನದಿಂದೆಂದಿಗೂ ಸುಖ ದಿಂದಿರುವಂದದಿ ತಂದೆ ನೀ ಪಾಲಿಸು3 ಧಾರಿಣಿಗಧಿಕವಾದ ಮೆರೆವ ಕು ಮಾರಧಾರೆಯ ತಟದ ಚಾರುನೇತ್ರಾವತಿ ತೀರ ಪಶ್ಚಿಮ ಭಾಗ ಸಾರಿ ತೋರುವ ವಟಪುರದೊಳು ನೆಲಸಿಹ ವೀರ ವೆಂಕಟಪತಿ ವಾರಿಜನಾಭ ಖ- ರಾರಿ ತ್ರಿದಶಗಣವಾರವಂದ್ಯ ಭಾ- ಗೀರಥೀಪಿತ ದುರಿತಾರಿ ದೈತ್ಯಸಂ- ಹಾರಿ ಶ್ರೀಲಕ್ಷ್ಮೀನಾರಾಯಣ ಹರಿ4
--------------
ತುಪಾಕಿ ವೆಂಕಟರಮಣಾಚಾರ್ಯ
ಶ್ರೀರಮಾರಮಣ ಶರಣಾರ್ತಿನಿವಾರಣಾ ಪ ಸಾರಸಾಕ್ಷ ಕರುಣಾರಸಪೂರ್ಣ ಭೂರಿ ಸುವೈಭವ ಭುವನರಕ್ಷಣಅ.ಪ ನಾನು ನಿನ್ನೊಳು ಮೊರೆಯಿಡುತಿರುವೆನೊ ನೀನೆನ್ನೊಳು ದಯೆದೋರು ಹರಿಯೆ ದೀನಪಾಲನಾಪರ ನೀನೆನ್ನುತ ಲಾನು ಬಂದೆನೊ ಶ್ರೀನಿಕೇತನ 1 ಹಿಂದೆಯನೇಕರ ಕಾಪಾಡಿರುವೆ ಮುಂದೆಯು ಭಕ್ತರ ಬೆಂಬಿಡದಿರುವೈ ತಂದೆ ಬಂದು ಗಜರಾಜನ ಸಲಹಿದೆ ಯೆಂದು ನಂಬಿದೇ ಮಂದರಾದ್ರಿಧರ 2 ಸುಧಾಮ ಅಜಮಿಳ ಅಂಬರೀಷ ದ್ರೌ ಪದಿಯರ ಸಮಯದಿ ಕಾಯ್ದವನೇ ವಿಧಿಪಿತ ನೀನದುಭುತಮಹಿಮನಯ್ಯ ಸುಧಾ[ಮ] ನ ಬಂಧುವೆ ಜಾಜೀಶಾ 3
--------------
ಶಾಮಶರ್ಮರು
ಶ್ರೀರಮೆಯನಾಥ ನಿನ್ನಂಘ್ರಿಗಳ ಸೇರಿದನ ದೂರ ಮಾಡಿರುವುದುಚಿತವೆ ಪ ವಾರಿಜಾಂಬಕ ಎನ್ನ ಕ್ರೂರಚಿಂತೆಯ ಹರಿಸಿ ಬೇಡಿದುಪ್ಪವನೀವುದೂ ಅ.ಪ ವ್ರತಶೀಲನಾಗಿ ಭೂಪತಿ ಅಂಬರೀಷನ ಅತಿಶಯದಿ ಪೊಗಳುತಿರಲೂ ಯತಿರಾಜ ದೂರ್ವಾಸನಡೆತಂದು ದ್ವಾದಶಿಯ ತಿಥಿಯೊಳನ್ನವ ಬೇಡಲು ಪೃಥಿವೀಶ ಕೊಟ್ಟನೆನೆ ದ್ವಾದಶಿಯ ಪಾರಣೆಯ ಮಿತಿ ಮೀರಿ ಪೋಗುತಿರಲೂ ಕಥನದಿಂ ಶ್ರೀತುಳಸಿಯನು ಭುಂಜಿಸಲು ಕೋಪಿಸಲಾಗ ನತಜನಾಶ್ರಯ ನೀನು ಪೊರೆದೆ ಅಹುದು 1 ಮುಂದನರಿಯದೆ ಯಮನಂದನಂ ದ್ಯೂತಮಂ ಅಂದು ಕೌರವನೊಳಾಡೆ ಮಂದಮತಿಯಾಗಿ ಸೋಲಲು ನಾರಿಯನು ಆ ಸಭೆಗೆ ತಂದು ಮಾನಭಂಗವನೆ ಮಾಡೆ ಇಂದುಮುಖಿಯುಟ್ಟ ಸೀರೆ ಅಕ್ಷಯ ವೆಂದು ನಂದಕುಮಾರ ಸಲಹೇ 2 ಎನ್ನಳವೆ ನಿನ್ನಯ ಮಹಿಮೆಯನು ಪೊಗಳುವಡೆ ಯ ಪರ್ಣವಾಹನರೊಡನೇ ಮನ್ಮಥನ ಶತಕೋಟಿ ಲಾವಣ್ಯ ಯದುಕುಲಾಮ ರಾರ್ಣವಕೆ ಚಂದ್ರ ನೀನೇ ಸನ್ನುತನಾದೆ ಸುರಪುರದ ಲಕ್ಷ್ಮೀವರನೆ ಮನ್ನಿಪುದು ಶರಣಪ್ರಿಯನೆ ಭಿನ್ನವಿಲ್ಲದೆ ನೀಂ ದಾಸಾನುದಾಸರನು ಪ್ರ ಇಂದು ಬಂದು3
--------------
ಕವಿ ಲಕ್ಷ್ಮೀಶ
ಶ್ರೀರಾಘವೇಂದ್ರರ ಸ್ತೋತ್ರ ವಿನಯಾದಿಂದಲಿ ನಮಿಸುವೆನಾ ವೃಂದಾ ವನದಿ ರಾಜಿಪ ರಾಘವೇಂದ್ರ ಗುರವಿನ ಪ ದುರಿತವಾರಣ ಪಂಚಾನನನ ನರ - ಹರಿರೂಪಸ್ತಂಭದಿ ಪ್ರಕಟಗೈಸಿದನ ಹರಿಭಕ್ತಾಗ್ರಣಿಯೆಂದೆನಿಪನ ನಾರ - ದರ ಉಪದೇಶಗರ್ಭದಿ ಕೈಕೊಂಡಿಹನ 1 ಸಿರಿವ್ಯಾಸತೀರ್ಥರೆನಿಪನ ಪುರಂ - ದರ ದಾಸಾರ್ಯರಿಗು ಪದೇಶ ಗೈದವÀನ ವರಚಂದ್ರಿಕಾ ರಚಿಸಿದನ ದುಷ್ಟ ಪರಮಾದ್ರಿಗಳಿಗೆ ಕುಲಿಶನೆನಿಪನ 2 ಶ್ರೀ ಸುಧೀಂದ್ರ ಕರಾಬ್ಜಜನ ದಿವ್ಯ ಭಾಸುರ ಪರಿಮಳ ಗ್ರಂಥ ಕರ್ತರನ - ಮೀಸಲ ಮನದಿ ಭಜಿಪರನ ದೋಷ - ನಾಶನ ಗೈಸಿ ಪೋಷಿಸುವ ಶಕ್ತರನ3 ವರಮಂತ್ರ ಸದ್ಮನಿಲಯನ ಶ್ರೀ - ಗುರು ಮಧ್ವಮತ ದುರಂಧರದೆನಿಸುವನ ಹರಿಪ್ರೀತಿ ಪೂರ್ಣಪಾತ್ರರನ ಈ ಧರಿಯೊಳು ಬಹುಪರಿ ಮೆರೆವ ಮುನಿಪನ 4 ತುಂಗಭದ್ರಾತೀರವಾಸನ ಶುಭ ಮಂಗಲಚರಿತ ಕಮಂಡಲಧರನ ರಂಗವರದೇಶ ವಿಠಲನ ಪದ ಭೃಂಗ ಯತಿಕುಲ ಕಂಜಾರ್ಕ ಸನ್ನಿಭನ 5
--------------
ವರದೇಶವಿಠಲ
ಶ್ರೀರಾಘವೇಂದ್ರರು ಸಂತಜನರ ಪ್ರಿಯ ಸಂತತಕರುಣಿಸು ಮಂತ್ರಾಲಯ ಸುಖದಾತ ನಮೋ ಮಂತ್ರಮೂರ್ತಿ ಗುರುನಾಥ ಪ ಬಾಗಿವಂದಿಪೆ ದಯಾಸಾಗರ ನಿಜಯತಿ ರಾಘವೇಂದ್ರ ಸುಖದಾತ ನಮೋ ಮಂತ್ರಮೂರ್ತಿ ಗುರುನಾಥ 1 ಜ್ಞಾನಕವಚ ತೊಟ್ಟು ಕ್ಷೋಣಿಯೊಳ್ ಅವತರಿಸಿದಿ ಜ್ಞಾನಶರಧಿ ಸುಖದಾತ ನಮೋ ಮಂತ್ರಮೂರ್ತಿ ಗುರುನಾಥ 2 ಮೇದಿನ್ಯುದ್ಧರಿಸಿದಿ ವೇದವೇದಾಂತದ ಸ್ವಾದವರಿದು ಸುಖದಾತ ನಮೋ ಮಂತ್ರಮೂರ್ತಿ ಗುರುನಾಥ 3 ವಾದಿಮತರ ಕುವಾದ ಮುರಿದು ಸು ಮಂತ್ರಮೂರ್ತಿ ಗುರುನಾಥ 4 ಜಗದೊಳಗನುಪಮ ಭಗವದ್ಭಕ್ತಿ ಘನ ಮಿಗಿಲೆನಿಸಿದಿ ಸುಖದಾತ ನಮೋ ಮಂತ್ರಮೂರ್ತಿ ಗುರುನಾಥ 5 ನಿತ್ಯ ನೆನಿಪ ನಿಜ ತತ್ತ್ವದಾದಿ ಜಗ ಕುತ್ತರಿಸಿದಿ ಸುಖದಾತ ನಮೋ ಮಂತ್ರಮೂರ್ತಿ ಗುರುನಾಥ 6 ಸತ್ಯವಾದ ಪರಮಾರ್ಥಪಥದಿ ನಿಂತು ನಿತ್ಯದಾಡಿದಿ ಸುಖದಾತ ನಮೋ ಮಂತ್ರಮೂರ್ತಿ ಗುರುನಾಥ 7 ಪೃಥ್ವಿಯೊಳು ನಿಮ್ಮ ಭಕ್ತಜನರ ಬಿಡ ಗುರುನಾಥ 8 ಕೂಡಿಸಿ ದ್ವಿಜವೃಂದಾಡುತಲನುದಿನ ಮಂತ್ರಮೂರ್ತಿ ಗುರುನಾಥ 9 ನಿರುತ ಭೂಸುರಗಣಕ್ಹರುಷವಿತ್ತು ಸದಾ ಮಂತ್ರಮೂರ್ತಿ ಗುರುನಾಥ 10 ಬೇಡಿದವರಿಗೆ ಬೇಡಿದ ವರಗಳ ಮಂತ್ರಮೂರ್ತಿ ಗುರುನಾಥ 11 ಗಾಢಮಹಿಮೆ ತೋರಿ ರೂಢಿಜನರ ಕಾ ಪಾಡ್ಹಿದ್ಹಿತದಿ ಸುಖದಾತ ನಮೋ ಮಂತ್ರಮೂರ್ತಿ ಗುರುನಾಥ 12 ಧರೆಯೊಳು ನರಹರಿ ಶರಣಜನರ ಕೂಡಿ ಮಂತ್ರಮೂರ್ತಿ ಗುರುನಾಥ 13 ಮುಳುಗಿರ್ದ ಪುಣ್ಯಮಯದಿಳೆಯನು ನಿಮ್ಮೊಳು ಗುರುನಾಥ 14 ಧರ್ಮಗೆಟ್ಟಿಳಗೆ ಸದ್ಧರ್ಮ ಬಿತ್ತಿದಿ ಸ್ಥಿರ ಮಂತ್ರಮೂರ್ತಿ ಗುರುನಾಥ 15 ಸಾಧಿಸಿ ಮಹ ತಪದಾದಿ ಮೂರ್ತಿಯಿಂ ಮಂತ್ರಮೂರ್ತಿ ಗುರುನಾಥ 16 ನಿಗಮಾತೀತನೊಳ್ ಬಗೆಬಗೆಯಾಟವ ಮಂತ್ರಮೂರ್ತಿ ಗುರುನಾಥ 17 ಮಂಗಳಮೂರ್ತಿಯ ಕಂಗಳಿಂದ ಕಂಡು ಭವ ಮಂತ್ರಮೂರ್ತಿ ಗುರುನಾಥ 18 ತುಂಗನಿವಾಸ ಮಹ ಮಂಗಳಾಂಗ ಸುಜ ಮಂತ್ರಮೂರ್ತಿ ಗುರುನಾಥ 19 ನಿತ್ಯ ನಿಮ್ಮಪಾದ ಭಕ್ತಿಯಿಂ ಭಜಿಸಲು ಮಂತ್ರಮೂರ್ತಿ ಗುರುನಾಥ 20 ಮುಕ್ತಿದಾಯಕ ಜಗದಾಪ್ತ ಶ್ರೀರಾಮನಂ ಮಂತ್ರಮೂರ್ತಿ ಗುರುನಾಥ 21
--------------
ರಾಮದಾಸರು
ಶ್ರೀರಾಮ ಎನ್ನಿರೊ ಶ್ರೀರಾಮ ಎನ್ನಿರೊ ಪ ದುರಿತ ಪರ್ವತಕೆ ವರವಜ್ರವೆನಿಪುದು ಜಗವರಿಯೆ ಅ.ಪ. ನಿತ್ಯ ಪೊರೆಯುವ ಸತ್ಯ ತಾರಕ ನಾಮಕೆ ಮತ್ತೊಂದು ಸಾರ ಸಹಸ್ರನಾಮಕೆ ಶ್ರೀರಘುನಾಥನ ನಾಮವೆಂತೆಂದು ಸಾರಿ ಮಹೇಶನು ಸುರನರ ವಂದ್ಯನು ಗಿರಿಜೆಗೆ ಪ್ರೇಮದಿ ಪೇಳಿದನು ಮರುತಾತ್ಮಜನು ನಿರುತದಿ ಭಜಿಪನು ಪರಿಪರಿ ಪಾಡಿ ಸುಖಗೂಡಿ 1 ಪತಿತ ಪಾವನ್ನ ಸತತ ಈ ನಾಮ ಗತಿಯಿಲ್ಲದವರಿಗೆ ಗತಿ ಈವ ನಾಮ ಹತವೆ ಮಾಡುತಲಿದ್ದ ಕಿತವನಿಗೊಲಿದು ಕ್ಷಿತಿಯೊಳು ಮುನಿಪತಿ ಎನ್ನಿಸಿತು ಪಥದಿ ಪಾಷಾಣವ ಪೆಣ್ಣನು ಮಾಡಿದ ಅತುಳ ಮಹಿಮನ ಹಿತನಾಮ 2 ಕುಲ ಶೀಲಗಳನ್ನು ಎಂದೂ ಎಣಿಸನೊ ಸುಲಭರೊಳಗೆ ಬಲು ಸುಲಭನು ಇವನು ಕಲುಷದಿ ದೂರನು ಶಬರಿಯ ಫಲವನು ಮೆಲ್ಲುತೆ ಮುಕ್ತಿಯನಿತ್ತಿಹನು ಲಲನೆಯ ಕದ್ದೊಯ್ದ ಖಳನ ತಮ್ಮನಿಗೆ ನೆಲವಿತ್ತ ದಯವಂತ ಶ್ರೀಕಾಂತ 3
--------------
ಲಕ್ಷ್ಮೀನಾರಯಣರಾಯರು