ಒಟ್ಟು 12410 ಕಡೆಗಳಲ್ಲಿ , 137 ದಾಸರು , 5990 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕೃಷ್ಣನಾಮಾಮೃತ ರುಚಿಕರವೆಲ್ಲವುಶ್ರೇಷ್ಠ ಭಕ್ತರಿಗಲ್ಲದೇದುಷ್ಟಮಾನವಮತಿಹೀನಗೆಪೇಳಲು ಇಷ್ಟವಾಗಲು ಬಲ್ಲುದೇ ಪಗುಡಶೈಲದಲಿ ಲಿಂಬೆ ಬೀಜ ಪ್ರತಿಷ್ಠಿಸೆಫಲವು ಮಧುರವಹುದೆ ಗುಡುಗುಮೋಡಕೆ ಮಯೂರವು ಕುಣಿದಂತೆಕುಕ್ಕುಟ ನೋಡಿ ಕುಣಿವುದೆ ಸುಡುವಗ್ನಿಯಲಿಬೀಜಬಿತ್ತಿ ನೀರೆರೆದರೇ ಗಿಡವಾಗಿ ಶೋಭಿಪುದೇಪೊಡವಿಯೊಳಗೆ ಲಕ್ಷ್ಮೀಯೊಡೆಯನಚರಿತೆಯ ಮೂಢಮಾನವಬಲ್ಲನೇ 1ವೀಣೆಯ ನುಡಿಸುತ್ತ ಗಾಯನ ಹಾಡಲುಕೋಣಗೆ ಹಿತವಹುದೆ ಸಾಣೆಕಲ್ಲನುಬಿಸಿನೀರಿನೊಳಿಟ್ಟರೆ ಮೇಣದಂತಾಗುವುದೇಜಾಣತನದಿ ವೇದ ಓದಿದ ಹೊಲೆಯನುಬ್ರಾಹ್ಮಣನೆನಿಸುವನೆ ಕ್ಷೋಣಿಯೊಳಗೆವಾಸುದೇವನ ಚರಿತೆಯ ಹೀನಮತಿಯು ಬಲ್ಲನೆ 2ಕೋಗಿಲೆ ಸಾಕಿದ ಕಾಗೆಯ ಮರಿ ತನ್ನ ರಾಗದಿಮೋಹಿಪುದೇ ನಾಗರಹಾವಿಗೆ ಹಾಲೆರೆದರೆನಿತ್ಯವಿಷವ ನೀಗಿಸಿಕೊಂಬುದೇ ಭೋಗದಾಸೆಯಸ್ತ್ರೀಗೆ ವಿಟನ ಮೇಲಲ್ಲದೇ ಯೋಗಿಯೊಳ್ಹಿತವಹುದೇ ಸಾಗರಶಯನ ಗೋವಿಂದನಮಹಿಮೆಯಭೋಗಾಸಕ್ತನು ಬಲ್ಲನೇ 3
--------------
ಗೋವಿಂದದಾಸ
ಕೃಷ್ಣಲೀಲೆಅಕ್ಕ ನಂದಗೋಪನ ಅರಮನೆಯೊಳಗೊಬ್ಬ |ಅಕ್ರೂರ ಬಂದನಂತೆ ಪಹೊಕ್ಕು ಬಳಕೆಯಿಲ್ಲ ಹೊಸಬನು ಇವನಂತೆ |ಇಕ್ಕೋ ಬಾಗಿಲ ಮುಂದೆ ಈಗ ರಥವ ಕಂಡೆ ಅ.ಪಮಧುರಾ ಪಟ್ಟಣವಂತೆ ಮಾವನ ಮನೆಯಂತೆ |ನದಿಯ ದಾಟಲುಬೇಕಂತೆ ||ಎದುರು ಅರಿವಿಲ್ಲದಂತೆ ಏನೆಂಬೆ ಏಣಾಕ್ಷಿ |ಉದಯದಿ ಪಯಣವಂತೆ 1ಒಳ್ಳೆ ವೇಳೆಗಳಂತೆ ಬಿಲ್ಲುಹಬ್ಬಗಳಂತೆ |ಎಲ್ಲಾ ಬೀದಿ ಸಿಂಗರವಂತೆ ||ಮಲ್ಲರ ಕೂಟವಂತೆ ಮತ್ತೆ ಕಾಳಗವಂತೆ |ಅಲ್ಲೆ ತಾಯ್ತಂದೆಗಳ ಕಾಲಿಗೆ ನಿಗಳವಂತೆ 2ಮತ್ತೆ ಪಾಂಡವರಂತೆ ಮೋಹದ ಸೋದರರಂತೆ |ಅತ್ತೆಯ ಮಕ್ಕಳಂತೆ ||ಸುತ್ತ ಶತ್ರುಗಳಂತೆ ಸಕಲ ಕಾರ್ಯಗಳಂತೆ |ಚಿತ್ತಜನಯ್ಯನ ಚಿತ್ತ ಎರಡಾಯ್ತಂತೆ 3ಅಲ್ಲಿ ಪುಟ್ಟಿದನಂತೆ ಅರಸನಳಿಯನಂತೆ |ಇಲ್ಲಿಗೆ ಬಂದನಂತೆ ||ಕಳ್ಳಕಪಟನಂತೆ ಎಂದಿಗೂ ಹೀಗಂತೆ |ನಿಲ್ಲದೆ ಯಶೋದೆಗೆ ಕಣ್ಣ ನೀರಂತೆ 4ತಾಳಲಾರೆವು ನಾವು ಪುರಂದರವಿಠಲನ |ಕಾಣದೆ ನಿಲಲಾರೆವೆ ||ಕಾಲದಲೊಂದಾಗಿ ಕಾಮಿನಿಯರು ಕೂಡಿ |ಆಲಸ್ಯವಿಲ್ಲದೆ ಆಣೆಯಿಡುವ ಬನ್ನಿ
--------------
ಪುರಂದರದಾಸರು
ಕೃಷ್ಣೇತಿ ಮಂಗಳಂ ದಿವ್ಯನಾಮ ಪಇಷ್ಟರಿಂದಲಿ ಭವಬಂಧನನಷ್ಟವಾಗಿ ಹೋಹುದೋ ಅ.ಪನಾರದಮುನಿ ತಾನು ನರಕ ಪಟ್ಟಣಕೆ ಹೋಗಿವಾರೀಜನಾಭ ಎಂದು ಒದರಿದಾಗ ||ಘೋರ ಪಾತಕವೆಲ್ಲ ದೂರವಾಗಿ ಹೋಯ್ತುಸೂರೆಯಾಯಿತು ಸ್ವರ್ಗಲೋಕವೆಲ್ಲ 1ಅಜಮಿಳನು ಈ ನಾಮ ಅಂತ್ಯಕಾಲಕೆ ಸ್ಮರಿಸೆನಿಜಪದವಿಯೈದಿದನು ನಿಮಿಷದಲಿ ||ಭುಜಗಭೂಷಣನು ತಾ ಶ್ರೀರಾಮನಾಮವನಿಜಕಾಂತೆಯನು ಕರೆದು ಉಪದೇಶವಿತ್ತ 2ಪಂಚಪಾಂಡವರನು ಪರಿಪಾಲಿಸಿತು ನಾಮಪಾಂಚಾಲೀ ಮೊರೆಕೇಳಿ ಪೊರೆಯಿತು ನಾಮ ||ವಂಚನೆ ಮಾಡಿ ಕೌರವರ ಮಡುಹಿ ನಿ -ಶ್ಚಿಂತೆಯಲಿ ಪಾಂಡವರ ಪಟ್ಟಗಟ್ಟಿದ ನಾಮ 3ಸರಸಿಯೊಳಗೆ ಮುಳುಗಿ ಅರಿಯ ಬಾಧೆಗೆ ಸಿಲುಕಿಕರಿರಾಜ ಹರಿಯೆಂದು ಮೊರೆಯಿಡಲು ||ತ್ವರಿತದಿಂದಲಿ ಬಂದು ಕರಿಯನುದ್ಧರಿಸುತಕರಿರಾಜವರದನೆಂದೆನಿಸಿಕೊಂಡ ನಾಮ 4ಧ್ರುವ ತನ್ನ ತಂದೆ ತೊಡೆಯ ಮೇಲೇರಲು ಪೋಗೆಅವನ ಮಲತಾಯಿ ಗರ್ಜಿಸಿದಳಾಗ ||ಧ್ರುವ ಸುಖಬಿಟ್ಟು ವನಕೆ ಪೋಗಿ ತಪ ಮಾಡಿಸವಿಯಾದಚಲಪದವ ಪಡೆದನಾಗ 5ಹಿರಣ್ಯಕಶಿಪು ತನ್ನ ಮಗನ ಬಾಧೆಯ ಪಡಿಸೆಗಿರಿಯ ಶಿಖರದಿಂದೀಡಾಡಲು ||ನರಹರೆ ನರಹರೆ ರಕ್ಷಿಸೆಂದನ್ನಲುನರಸಿಂಹ ರೂಪದಿಂದವನ ಪಾಲಿಸಿದ 6ಕಂದನ ಅಪರಾಧವ ಕೇಳದೆ ನೃಪನು ತಾನಂದತಿ ದಾರುಣ ಕಡಹದೋಳು ಕೆಡಹೆ ||ಅಂದು ಸುಧನ್ವ ಶ್ರೀಕೃಷ್ಣನೆಂದೆನಲಾಗಿಬೆಂದು ಕಂದಿವ ಎಣ್ಣೆ ತಣ್ಣೀರಾಯಿತು 7ಅಸುರ ಬಾಧೆಗೆ ಸಿಲುಕಿ ಅಶೋಕವನದಲಿಶಶಿಮುಖಿ ಬೀಜಮಂತ್ರವ ಜಪಿಸೆ ||ಅಸುರನ ಕೊಂದು ಅಶೋಕವನವ ಬಿಡಿಸಿವಸುಧೀ ಸುತೆಯ ಸಲಹಿದ ರಾಮನಾಮ 8ಪರಿಪರಿ ಭಕ್ತರನು ಪಾಲಿಸಿತು ಈ ನಾಮಪರಮ ಮಂಗಲವು ಪಾವನವು ಈ ನಾಮ ||ಸುರರು ಬ್ರಹ್ಮಾದಿಗಳು ಸ್ರೋತ್ರ ಮಾಡುವ ನಾಮಧರೆಯೊಳುಸಿರಿಪುರಂದರ ವಿಠಲ ನಾಮ9
--------------
ಪುರಂದರದಾಸರು
ಕೆಟ್ಟೆನಲ್ಲೊ ಹರಿಯೆ |ಸಿಟ್ಟು ಮಾಡಿ ಎನ್ನ ಬಿಟ್ಟು ಕಳೆಯ ಬೇಡ ಪಬಂದೆನು ನಾ-ತಂದೆ-ತಾಯಿಗಳುದರದಿ |ಒಂದನೂ ಅರಿಯದೆ ಬಾಲಕತನದೊಳು ||ಮುಂದುವರಿದ ಯೌವನದೊಳು ಸತಿ-ಸುತ-|ರಂದವ ನೋಡುತ ನಿನ್ನ ನಾ ಮರೆತೆನೊ 1ಸ್ನಾನ-ಸಂಧ್ಯಾನವು ಹೀನವಾಯಿತು ಬಹು-|ಮಾನವಿಲ್ಲದೆ ಕುಲಹೀನರಾಶ್ರಯದಿಂದ ||ಙ್ಞÕನಿಗಳೊಡನಾಟವಿಲ್ಲದೆ ಮನದೊಳು |ದಾನ-ಧರ್ಮದ ಬಟ್ಟೆಯಂತೆಂದು ಮರೆತನು 2ಮೊದಲೆ ಬುದ್ದಿಯು ಹೀನ ಅದರೊಳು ವೃದ್ಧಾಪ್ಯ |ಕದನವು ದಶದಿಕ್ಕಿನುದಯದ ರಾಯರ ||ಎದೆನೀರು ಬತ್ತಿತು ಅದರಿಂದ ನಿನ್ನಯ |ಪದಪದ್ಮಯುಗಳದ ತುದಿಯ ನಾ ಮರೆತೆನು 3ಮೂಢನಾದೆನು ನಿನ್ನ ಬೇಡಿಕೊಳ್ಳದೆ ನಾನು |ಕಾಡೊಳಗಾಡುವ ಮೃಗದಂತೆ ಜೀವಿಸಿ ||ಗೂಡೊಳಗಿರುತಿಹ ಗೂಬೆಯ ತೆರನಂತೆ |ಮಾಡದೆ ನಿನ್ನಯ ಸ್ಮರಣೆಯ ಮರೆತೆನು 4ಬುದ್ದಿಹೀನನು ನಾನು ಉದ್ದರಿಸೆಲೊ ದೇವಮುದ್ದು ಶ್ರೀಪುರಂದರವಿಠಲನೆನ್ನ ||ಬುದ್ದಿಯೊಳಡಗಿಯೆ ತಿದ್ದಿಟ್ಟು ನಡೆಸಯ್ಯ |ಪೊದ್ದುವೆ ನಿನ್ನಯ ಚರಣಾರವಿಂದವ 5
--------------
ಪುರಂದರದಾಸರು
ಕೇಶವ ನಾರಾಯಣಮಾಧವ -ಹರಿ |<?xmಟ veಡಿsioಟಿ='1.0' eಟಿಛಿoಜiಟಿg='uಣಜಿ-8'?>ವಾಸುದೇವಎನಬಾರದೆ ?ಪ.ಕೇಶವನ ನಾಮವನುಏಸುಬಾರಿ ನೆನೆದರೂ |ದೋಷಪರಿಹವಪ್ಪುದು - ಏ ಜಿಹ್ವೆ ಅಪಜಲಜನಾಭನ ನಾಮವು - ಈ ಜಗ - |ದೊಳು ಜನಭಯಹರಣ ||ಸುಲಭವೇದ್ಯನೆನಲೇಕೆ ಸುಖಕೆ ಸಾಧನವಿದು |ಬಲಿಯೆಂಬ ಭಕ್ತನು ಬಗೆದು ರಸವನುಂಡು ಹೇಜಿಹ್ವೆ1ಹೇಮಕಶ್ಯಪ ಸಂಹಾರ - ಭಕ್ತರು ನಿನ್ನ |ನಾಮವ ಸವಿದುಂಬರು ||ವಾಮನ ವಾಮನನೆಂದು ವಂದಿಸಿದವರಿಗೆ |ಶ್ರೀಮದನಂತ ಪುರಂದರವಿಠಲನುಕಾಮಿತ ಫಲವೀವನು - ಹೇಜಿಹ್ವೆ3
--------------
ಪುರಂದರದಾಸರು
ಕೇಶವ ಬಾ ನಾರಾಯಣ ಬಾ ಬಾಮಾಧವಬಾ ಮಧುಸೂದನ ಬಾಪಗೋವಿಂದ ಬಾ ಬಾ ಗೋಪಾಲ ಬಾ ಬಾಗೋವರ್ಧನ ಗಿರಿಧಾರಿಯೆ ಬಾ ಅ.ಪರಂಗನೆ ಅಂದಿಗೆ ಗೆಜ್ಜೆಯಕಟ್ಟಿಚುಂಗುಬಿಟ್ಟು ರುಮಾಲನೆ ಸುತ್ತಿಶೃಂಗಾರದ ಹಾರ ಪದಕಗಳ್ಹಾಕಿಅಂಗಳದೊಳಗಾಡಲು ಕಳುಹುವೆನು 1ಚಂಡು ಬುಗುರಿ ಗೋಲಿ ಗಜ್ಜುಗ ಹರಿಯೆಗುಂಡು ಬಿಂದಲಿನಿಟ್ಟಿ ಕರದಲಿ ಕೊಡುವೆಹಿಂಡುಗೋಪಾಲರ ಕೂಡಿಸುವೆಪುಂಡರಿಕಾಕ್ಷನೆ ಪಾಲಿಸು ದೊರೆಯೆ 2ಹಸುಳೆ ನಿನಗೆ ಹೊಸ ಬೆಣ್ಣೆಯ ನೀವೆಬಿಸಿ ಬಿಸಿ ಕಡುಬು ಕಜ್ಜಾಯವ ಕೊಡುವೆಶಶಿಮುಖಿಯರ ಕೂಡಾಡದಿರೆನುವೆಮೊಸರು ಬೆಣ್ಣೆ ಪಾಲ್ಸಕ್ಕರೆ ಕೊಡುವೆ 3ಜರದವಲ್ಲಿ ಅಲಂಕರಿಸುತ ನಲಿವೆಪರಿಪರಿ ಗೆಳೆಯರ ಕೂಡಿಸಿ ಕೊಡುವೆಮುರಳಿ ನುಡಿಸೆನ್ನುತಕರಮುಗಿವೆಪರಮಾತ್ಮನೆ ಜಗನ್ಮೋಹನ ಹರಿಯೆ 4ಕಮಲಭವೇಂದ್ರಾದ್ಯಮರರು ಪೊಗಳೆಕಮಲಪುಷ್ಪ ಮಲ್ಲಿಗೆ ಮಳೆ ಕರೆಯೆಕಮಲನಾಭ ವಿಠ್ಠಲ ಶ್ರೀಹರಿಯೆಶ್ರಮ ಪರಿಹರಿಸೆನ್ನುತ ಪ್ರಾರ್ಥಿಸುವೆ 5
--------------
ನಿಡಗುರುಕಿ ಜೀವೂಬಾಯಿ
ಕೇಶವನೊಲುಮೆಯು ಆಗುವ ತನಕ ಹರಿದಾಸರೊಳಿರು ಮನವೆಕ್ಲೇಶ ಪಾಶಗಳ ಹರಿದು ವಿಳಾಸದಿ ದಾಸರ ನುತಿಗಳ ಪೊಗಳುತ ಮನದೊಳು ಪ.ಮೋಸದಿ ಜೀವಿಯಘಾಸಿ ಮಾಡಿದ ಫಲಕಾಶಿಗೆ ಹೋದರೆ ಹೋದೀತೆದಾಸರ ಕರೆ ತಂದು ಕಾಸು ಕೊಟ್ಟ ಫಲ ಲೇಸಾಗದೆ ಸಸಿನಿದ್ದೀತೆಭಾಷೆಯ ಕೊಟ್ಟು (ನಿ) ರಾಸೆಯ ಮಾಡಿದಫಲ ಮೋಸವು ಮಾಡದೆ ಬಿಟ್ಟೀತೆಶಶಿವದನೆಯ ಅಧರಾಮೃತ ಸೇವಿಸಿ ಸುಧೆಯೆಂದಡೆ ನಿಜವಾದೀತೆ 1ಕನಕದ ಪಾತ್ರದ ಘನತೆಯ ಪ್ರಭೆಗಳು ಶುನಕನಮನಸಿಗೆ ಸೊಗಸೀತೆಹೀನ ಮನುಜನಿಗೆ ಜಾÕನವ ಭೋಧಿಸೆ ಹೀನ ವಿಷಯಗಳು ಹೋದಿತೇಮಾನಿನಿ ಮನಸು ನಿಧಾನವು ಇಲ್ಲದಿರೆಮಾನಭಿಮಾನ ಉಳಿದೀತೆಭಾನುವಿಕಾಸನ ಭಜನೆಯ ಮಾಡದ ದೀನಗೆ ಮುಕುತಿಯು ದೊರಕೀತೆ 2ಸತ್ಯದ ಧರ್ಮವ ನಿತ್ಯವು ಭೋಧಿಸೆ ತೊತ್ತಿನ ಮನಸಿಗೆ ಸೊಗಸೀತೆತತ್ವದ ಅರ್ಥ ವಿಚಿತ್ರದಿ ಪೇಳಲು ಕತ್ತೆಯ ಮನಸಿಗೆ ತಿಳಿದೀತೆಪುತ್ಥಳಿ ಬೊಂಬೆಯ ಚಿತ್ರದಿ ಬರೆದಿರೆ ಮುತ್ತುಕೊಟ್ಟರೆ ಮಾತಾಡೀತೆಕತ್ತುರಿ ತಿಲಕವನೊತ್ತಿ ಫಣೆಯೊಳಿಡೆ ಅರ್ತಿಯುತೋರದೆ ಇದ್ದೀತೆ 3ನ್ಯಾಯವ ಬಿಟ್ಟು ಅನ್ಯಾಯ ಪೇಳುವ ನಾಯಿಗೆ ನರಕವು ತಪ್ಪೀತೆತಾಯಿ ತಂದೆಗಳ ನೋಯಿಸಿದ ಅನ್ಯಾಯಿಗೆ ಮುಕ್ತಿಯು ದೊರಕೀತೆಬಾಯಿ ಕೊಬ್ಬಿನಿಂದ ಬೈಯುವ ಮನುಜಗೆ ಘಾಯವುಆಗದೆ ಬಿಟ್ಟೀತೆಮಾಯಾವಾದಗಳ ಕಲಿತಾ ಮನುಜಗೆ ಕಾಯಕಷ್ಟ ಬರದಿದ್ದೀತೆ 4ಸಾಧು ಸಜ್ಜನರನು ಬಾಧಿಸಿದಾ ಪರವಾದಿಗೆ ದೋಷವು ತಪ್ಪೀತೆಬಾಧಿಸಿ ಬಡವರ ಅರ್ಥವ ಒಯ್ವವಗೆ ವ್ಯಾಧಿ ರೋಗಗಳು ಬಿಟ್ಟೀತೆಬದ್ದ ಮನುಜ ಬಹು ಕ್ಷುದ್ರವ ಕಲಿತರೆಬುದ್ದಿ ಹೀನನೆಂಬುದು ಹೋದೀತೆಕದ್ದು ಒಡಲ ತಾ ಪೊರೆವನ ಮನೆಯೊಳಗೆಇದ್ದುದು ಹೋಗದೆ ಇದ್ದೀತೆ 5ಅಂಗದ ವಿಷಯಂಗಳನು ತೊರೆದಾತಗೆ ಅಂಗನೆಯರಬಗೆ ಸೊಗಸೀತೆಸಂಗ ಸುಖಂಗಳು ಹಿಂಗಿದ ಮನುಜಗೆ ಶೃಂಗಾರದ ಬಗೆ ಸೊಗಸೀತೆಇಂಗಿತವರಿಯುವ ಸಂಗ ಶರೀರ ವಜ್ರಾಂಗಿಯಾಗದೆ ಇದ್ದೀತೆಮಂಗಳ ಮಹಿಮನ ಅಂಘ್ರಿಯ ಕಾಣದ ಭಂಗಗೆ ಮುಕ್ತಿಯು ದೊರಕೀತೆ 6ಕರುಣಾಮೃತದಾ ಚರಣವ ಧರಿಸಿದ ಪರಮಗೆ ಸರಳಿ ಬಂದೀತೆಕರಣ ಪಾಶದುರವಣೆ ತೊರೆವಾತಗೆ ಶರಣರ ಪದ್ಧತಿ ತಪ್ಪೀತೆಆರುಶಾಸ್ತ್ರವನು ಮೀರಿದ ಯೋಗಿಗೆತಾರಕ ಬ್ರಹ್ಮವು ತಪ್ಪೀತೆವರದ ಪುರಂದರವಿಠಲನ ಚರಣಸ್ಮರಿಸುವವನಿಗೆ ಸುಖ ತಪ್ಪೀತೆ * 7
--------------
ಪುರಂದರದಾಸರು
ಕೇಳನೊಹರಿ ತಾಳನೋ<?xmಟ veಡಿsioಟಿ='1.0' eಟಿಛಿoಜiಟಿg='uಣಜಿ-8'?>ತಾಳ ಮೇಳಗಳಿದ್ದು ಪ್ರೇಮವಿಲ್ಲದ ಗಾನ ಪ.ತಂಬೂರಿ ಮೊದಲಾದಅಖಿಳ ವಾದ್ಯಗಳಿದ್ದುಕೊಂಬು ಕೊಳಲ ಧ್ವನಿಸಾರವಿದ್ದು ||ತುಂಬುರು ನಾರದರ ಗಾನ ಕೇಳುವಹರಿನಂಬಲಾರ ಈ ಡಂಭಕದ ಕೂಗಾಟ 1ನಾನಾಬಗೆಯಭಾವ ರಾಗ ತಿಳಿದು ಸ್ವರಜಾÕನ ಮನೋಧರ್ಮ ಜಾತಿಯಿದ್ದು ||ದಾನವಾರಿಯ ದಿವ್ಯ ನಾಮರಹಿತವಾದಹೀನ ಸಂಗೀತ ಸಾಹಿತ್ಯವ ಮನವಿತ್ತು 2ಅಡಿಗಡಿಗಾನಂದ ಬಾಷ್ಪ ಪುಳಕದಿಂದನುಡಿನುಡಿಗೂ ಶ್ರೀ ಹರಿಯೆನ್ನುತ ||ದೃಢಭಕ್ತರನು ಕೊಡಿ ಹರಿಕೀರ್ತನೆಯ ಪಾಡಿಕಡೆಗೆ ಪುರಂದರವಿಠಲನೆಂದರೆ ಕೇಳ್ವ 3
--------------
ಪುರಂದರದಾಸರು
ಕೇಳಲೊಲ್ಲನೆ ಎನ್ನ ಮಾತನು-ರಂಗ -|ಕಾಳಿಮರ್ದನನಿಗೆ ಪೇಳೇ ಗೋಪಮ್ಮ ಬುದ್ಧಿ ಪಬಿಟ್ಟ ಕಂಗಳ ಮುಚ್ಚಲೊಲ್ಲನೆ-ಬೇಗ- |ಬೆಟ್ಟಕೆ ಬೆನ್ನೊಡ್ಡಿ ನಿಂತನೆ ||ಸಿಟ್ಟಿಂದೆ ಕೋರೆಯ ತೋರ್ಪನೆ-ಬೇಗ-|ಗಟ್ಟಿ ಉಕ್ಕಿನ ಕಂಬ ಒಡೆದು ಬಂದನೆ ರಂಗ 1ಮೂರಡಿ ಭೂಮಿಯ ಬೇಡಿದನೆ-ನೃಪರ-|ಬೇರ ಕಡಿಯಲು ಕೊಡಲಿ ತಂದನೆ |ನಾರಸೀರೆಯನುಟ್ಟುಕೊಂಡನೆ-ಬೇಗ-|ಚೋರತನದಿ ಹರವಿ ಹಾಲ ಕುಡಿದನಮ್ಮ 2ಬತ್ತಲೆ ನಾರಿಯರನಪ್ಪಿದ-ಬೇಗ-|ಉತ್ತಮ ಅಶ್ವವ ಹತ್ತಿದ ||ಹತ್ತವತಾರವನೆತ್ತಿದ-ನಮ್ಮ-|ಸತ್ಯಮೂರುತಿ ಪುರಂದರವಿಠಲರಾಯನು 3
--------------
ಪುರಂದರದಾಸರು
ಕೇಳಿಮರೆವುದು ಮನ ಕುಶಶಯನನಆಳು ಕಂಡಂತೆಚಂದ್ರಮೌಳಿಹೇಳಿದಂತೆಪ.ಮುಂಜಾವದಿ ಗುರುಮಧ್ವಮತ ಮಹಿಮಾಹರಪಾದಕಂಜಗಳ ಬಲಗೊಂಡು ಕಲಿಯಾನಕೆಂದು ಲಕುಂಜರವರದನ ನಾಮ ಕೀರ್ತನೆ ಮಾಡೆಂದುಮಂಜುಳ ಶಾಸ್ತ್ರಶ್ರವಣ ಮಹಿಮೆ ಪುರಾಣ 2ಪ್ರಸನ್ವೆಂಕಟೇಶನಪಾದಪಿಡಿದವರಿಗಾಹ್ಲಾದನಿಶಿದಿನ ಸಂಸಾರ ನಿಸ್ಸಾರಘೋರ3
--------------
ಪ್ರಸನ್ನವೆಂಕಟದಾಸರು
ಕೇಳೆ ಯಶೋದೆ ನಿನ್ನ ಬಾಲಕನಾಟಗಳೂ |ಹೇಳಿಕೊಂಡರೆ ಸುಳ್ಳೇ ಕಾಣಿಸಿತಮ್ಮ ಪನೀರೊಳಾಡುವನಲ್ಲೆ, ಪೋರರ ಕೂಡಿಕೊಂಡು |ಮಾರಿಯೆಂಬೊದೇನು ಸಾರಿ ಬಾಹೊದೆ 1ಎಲ್ಲರಂತುಂಡು ಮನೆಯಲ್ಲಾಡಬಾರದೆ |ಕಲ್ಲೆತ್ತುವನೆ ಯಂಥ ಬಲ್ಲಿದನಂತೆ 2ನಿಮ್ಮ ಹಿತಾರ್ಥನಾಗಿ ಸಮ್ಮೀಸಿ ಪೇಳಿದರೆ |ಬೊಮ್ಮನ ಮಗನಂತೆ ನಮ್ಮನ್ನೇ ಬೈವ 3ಮೂರು ಕಣ್ಣವಪರನಾರೇರ ಮುಟ್ಟಲಾರ |ಊರೊಳಗಿವ ಬಲು ಮೀರಿದನಮ್ಮ 4ಸಣ್ಣವನೆನಬೇಡ ನಿನ್ನ ಮಗನಗೋಪಿ|ಅನ್ನಿಥವಾಡೆವೆಮ್ಮ ಚಿನ್ನಗಳಾಣೆ 5ಬೆಂಕಿಗಂಜದೆ ನಿರಾತಂಕದರೊಳಗಿಹ |ಮಂಕುತನವ ನೋಡೆ ಪಂಕಜನೇತ್ರೆ6ಇನ್ನೊಂದು ಮಾತು ಕೇಳೆ ಮೊನ್ನೆ ಮೊನ್ನೆ ಒಬ್ಬ |ಹೆಣ್ಣಿನ ಕೊಂದನಲ್ಲೆ ಅನ್ಯಾಯ ನೋಡೆ 7ಕಿತ್ತಿದನೊಂದು ಮರ ಮತ್ತೆರಡು ಮೂರೀದ |ಮತ್ತಗಜವ ಕೊಂದುನ್ಮತ್ತನ ನೋಡೆ 8ಸದ್ಯ ಹೋಗಲೀನಿತು ಇದ್ದೊಬ್ಬವನು | ಅಪ್ರ-ಬುದ್ಧನಾಗಬಾರದು ಬುದ್ಧಿಯ ಹೇಳೇ 9ಅಧಮರೊಡನೆನಿತ್ಯಕದನಮಾಡುವದೇಕೆ |ಮಧುಸೂದನನ್ನು ಒಳ್ಳೆ ಹದನದಲ್ಲೀಡೆ 10ಕಾಣ ಬಂದದ್ದಾಡಲು ಪ್ರಾಣೇಶ ವಿಠಲಗೆ |ಹೀನ ತೋರುವದಮ್ಮಾ ಏನನ್ನಬೇಕೆ 11
--------------
ಪ್ರಾಣೇಶದಾಸರು
ಕೇಳೆಗೋಪಿಗೋಪಾಲ ಮಾಡಿದ ಬಲು |ದಾಳಿಯ ಗೋಕುಲದಿ ಪತಾಳೆಲಾರೆವೆ ತವಕದಲಿ ಕಂದಗೆ ಬುದ್ಧಿ |ಹೇಳೆ ಕೃಷ್ಣವ ಕರೆದು ಅ.ಪಸರಿರಾತ್ರಿಯೊಳು ಸರಸರನೆ ಮನೆಗೆ ಬಂದು |ಸುರಿದು ಪಾಲ್ಪೆಣ್ಣೆಗಳ ||ಉರೋಜಗಳಿಗೆಕರಸರಿಸಿ ಕಣ್ಗಳನು |ತೆರೆದು ನೋಡುವನೆ ನಮ್ಮ 1ಗಂಡನು ಮನೆಯೊಳಗಿರಲು ಬಂದು ಕೃಷ್ಣ |ಭಂಡ ಮಾತುಗಳ ಬಹು ||ತುಂಟತನದಲಾಡಿಉದ್ದಂಡಕಠಿಣಕಾಯ |ದುಂಡುಕುಚವ ಪಿಡಿದ 2_______ವದ ಮೇಲಿರಲು ತಾ |ಸೀರೆಯ ಸೆಳೆವ ನೋಡೆ ||ಆರಿವರೆಂದು ವಿಚಾರಿಸಿ ನೋಡಲು |ಮೋರೆಯ ಬಾಗಿದನೆ 3ಕೇರಿಯೊಳಗೆದಧಿಮಾರುತಿರಲು ಕೃಷ್ಣ |ಸಾರಿ ಬಂದು ಮೊಸರ ||ಸೂರೆಗೊಂಡು ಪರನಾರಿಯರ ನೆರೆದು ತಾ |ಘೋರರೂಪದಿ ಮೆರೆದ 4ಆಡಲೇತಕೆ ನಮ್ಮ ಬಾಗಿಲಂಗಳದೊಳು |ಬೇಡುವ ಜಲ ದೈನ್ಯದಿ ||ನೀಡುವೆ ಜಲ ಜಲಜಾಕ್ಷ ಬಾಬಾ ಎನೆ |ಮಾಡುವರತಿಎಂಬನೆ5ಹುಡುಗನೆಂದು ಕೈಯ ಪಿಡಿಯ ಪೋಗಲು ನಮ್ಮ |ಉಡೆಮುಡಿ ಪಿಡಿದ ನೋಡೆ ||ಪಡೆದವಳಿಗೆ ಪೇಳುವೆ ನಡೆ ಎನೆ ಮಚ್ಚ |ಕೊಡಲಿ ತೋರುವನೆಗೋಪಿ6ಮಡದಿಯರೆಲ್ಲರು ಮಿಯುತಲಿರೆ ಮೈ |ಉಡುಗೆಯ ತೆಗೆದುಕೊಂಡು ||ಸಡಗರದಲಿ ಬೇಡಿಕೊಳ್ಳೆ ವಸ್ತ್ರಗಳನು |ಕೊಡದೆ ಅಡವಿಗೆ ನಡೆದ 7ಬೆಣ್ಣೆಯ ತಿಂದು ತಮ್ಮಣ್ಣಗೆ ತಾ ಕೊಟ್ಟು |ಚಿಣ್ಣರ ಬಡಿವ ನೋಡೆ ||ಬಣ್ಣಿಸಿ ನಮ್ಮ ಬಾಯಿಗೆ ಬೆಣ್ಣೆ ತೊಡೆಯುತ |ಬೆಣ್ಣೆಯ ತಿಂದಿರೆಂಬ 8ಏಣಲೋಚನೆ ಸರ್ಪವೇಣಿ ನಮ್ಮ ಮನೆ |ಓಣಿಯೊಳಗೆ ಪೋಗುತ ||ಕಾಣದಂತೆ ಚಕ್ರಪಾಣಿ ನಮ್ಮೊಳು ತನ್ನ |ತ್ರಾಣವ ತೋರಿದನೆ 9ಪದುಮನಾಭನು ಪುರದ ಚದುರಿಯರಿಗೆ ತಾನು |ಮದನಶಾಸ್ತ್ರವ ಪೇಳುತ ||ಮುದದೊಳಗಿರಲವರೊಡೆಯ ಬರಲು ಕೃಷ್ಣ |ಕುದುರೆಯ ನೇರಿದನೆ 10ಎಷ್ಟುಪದ್ರವ ಕೊಟ್ಟರು ಗೋಕುಲದೊಳು |ಬಿಟ್ಟವನಿರಲಾರೆವೆ ||ಸೃಷ್ಠಿಯೊಳಗೆ ಸರ್ವಾಭಿಷ್ಟದ ಪುರಂದರ-|ವಿಠಲ ಸಲಹುವನೆ 11
--------------
ಪುರಂದರದಾಸರು
ಕೈಯ ತೋರೋ ಕರುಣಿಗಳರಸಾ-ಕೈಯ ತೋರೊ |ಕೈಯಲಿ ಬೆಣ್ಣೆಯ ಮುದ್ದೆಯ ನೀಡುವೆ-ಕೈಯ ಪಅಂಗುಲಿಯೊಳು ಪೊನ್ನುಂಗುರವೊಪ್ಪುವ ಕೈಯ ತೋರೊ |ಶೃಂಗಾರದಿ ಶಂಖಚಕ್ರವ ಧರಿಸಿದ ಕೈಯ ತೋರೊ ||ಅಂಗೈಯಲಿ ಧ್ವಜಪಧ್ಮವಿರಾಜಿಪ ಕೈಯ ತೋರೊ |ಅಂಗನೆಯರಉತ್ತುಂಗಕುಚದಲಿಟ್ಟ ಕೈಯ ತೋರೊ1ಬಡಬ್ರಾಹ್ಮಣನವಲಕ್ಕಿಯ ಬೇಡಿದ ಕೈಯ ತೋರೊ |ಕೊಡೆ ಮಾಡಿ ಗಿರಿಯೆತ್ತಿ ಗೋಗಳ ಕಾಯ್ದ-ಕೈಯ ತೋರೊ ||ಕಡುಹಿರಣ್ಯಾಖ್ಯನ ಒಡಲನು ಬಗೆದ-ಕೈಯ ತೋರೊ |ಧೃಡ ಪ್ರಹ್ಲಾದನ ಮಂಡೆಯೊಳಿಟ್ಟ ಕೈಯ ತೋರೊ 2ಅಲ್ಲಿ ಪೂತನಿಯ ಅಸುವನೆ ಹೀರಿದ ಕೈಯ ತೋರೊ |ಬಲ್ಲಿದಮಲ್ಲರ ಮರ್ದಿಸಿ ಬಂದ-ಕೈಯ ತೋರೊ ||ಮೆಲ್ಲನೆ ಕುಬುಜೆಯ ಡೊಂಕನೆ ತಿದ್ದಿದ ಕೈಯ ತೋರೊ |ಬಿಲ್ಲನು ಎಡಗೈಯಲಿ ಮುರಿದಿಟ್ಟ ಕೈಯ ತೋರೊ 3ಬಲಿಯನು ವಂಚಿಸಿ ದಾನವ ಬೇಡಿದ ಕೈಯ ತೋರೊ |ಫಲಪುಷ್ಪ ಪಾರಿಜಾತವ ತಂದ ಕೈಯ ತೋರೊ ||ಒಲಿದು ಪಾರ್ಥಗೆ ರಥವನು ನಡೆಸಿದ ಕೈಯ ತೋರೊ |ಮಲ್ಲಿಗೆ ಜಾಜಿಯ ತುರುಬಿಗೆ ಮುಡಿಸಿದ ಕೈಯ ತೋರೊ 4ಆಕಾಶದ ಚಂದ್ರಮನನು ಕರೆದ-ಕೈಯ ತೋರೊ |ನಾಕಪತಿಗೆ ಅಭಯವನಿತ್ತ-ಕೈಯ ತೋರೊ |ನೇಕ ಬಗೆಯಲಿ ಕೊಳಲನೂದುವ-ಕೈಯ ತೋರೊ |ಶ್ರೀಕಾಂತ ನಮ್ಮ ಪುರಂದರವಿಠಲ-ಕೈಯ ತೋರೊ 5
--------------
ಪುರಂದರದಾಸರು
ಕೊಡಬಹುದೇ ಮಗಳ - ಸಮುದ್ರರಾಜಕೊಡಬಹುದೇ ಮಗಳ ಪನಡೆದರೆ ಬಡವಹಳೆಂಬ ಕುಮಾರಿಯ |ಹಿಡಿಬಿಟ್ಟಿ ಮಾಡಿ ಹರಿಗೆ ಸಿಂಧುರಾಜನುಅ.ಪಕುರುಹಬಲ್ಲವರಾರು, ಕುಲಗೋತ್ರವಾವುದೊ |ಅರಿತ ರಾಯರೊಳಗೆ ಆರ ಮಗನೊ ಇವ |ವರುಶಭಾಂಗಿಗೆ ತಕ್ಕ ವರನಹುದೆ ಇವ |ಹಿರಿಯರೆಂಬುದ ನೆರೆಹೊರೆಯೂ ಕಾಣದನಿವ |ಪರಿಪಂಥಿಜನಕೆಲ್ಲ ಪ್ರಾಣಘಾತಕನಿವ |ನಿರುತ ಮೇಘವ ಪೋಲ್ವ ನೀಲಮೆಯ್ಯವನಿವ,ಹಿರಿದಾದ ನಾಲ್ಕು ಹಸ್ತಗಳುಳ್ಳವನಿವ |ಅರುಣಚ್ಛಾಯೆಯ ರೇಖೆ ಅರಳಿಸಿಹಾರುವ ||ಗರುಡಹಕ್ಕಿಯ ನೆಚ್ಚಿದ - ಎದೆಯ ಮೇಲೆ |ಭರದಿ ಒದೆಯ ಮೆಚ್ಚಿದ - ಘೋರರೂಪ |ಧರಿಸಿ ಕೋಪದಿ ಹೆಚ್ಚಿದ - ಕರೆವ ಗೋವ |ಕರುಗಳ ಕೊರಳುಚ್ಚಿದ - ಸಂಸಾರದೊಳ್ |ಇರುತಿಹ ನಾರಿಯರ ಮನವೆಲ್ಲ ಬಿಚ್ಚಿದ 1ಅಡಿಗಡಿಗೆ ಹತ್ತು ಅವತಾರವ ಮಾಡಿದ |ಕಡುಕಪತಿಯಲ್ಲದೆ ಭಾರಿ ಗುಣದವನಲ್ಲ |ಗಿಡದ ಮರೆಯಲಿದ್ದು ಕಪಿಯ ಕೊಂದನುಹೊಲ್ಲ |ನಡತೆಯಲಿ ಸಲೆ ಜನಲಜ್ಜೆ ಇವನಿಗಿಲ್ಲ |ಹಿಡಿದು ಪೂತನಿ ಮೊಲೆಯುಂಡ ಚೌಪಟಮಲ್ಲ |ಮಡುಹಿದ ಮಾವನ ಮಧುರೆಯೊಳಗೆಖುಲ್ಲ |ಕೊಡೆಮಾಡಿ ಬೆಟ್ಟವ ಗೋಕುಲದೊಳಗೆಲ್ಲ |ಮಡದಿಯರುಡುಗೆಯ ಕದ್ದದ್ದು ಹುಸಿಯಲ್ಲ ||ಕಡಹದ ಮರವೇರಿದ -ಅವರಮಾನ - |ಕೆಡಿಸಿ ಭಂಡರ ಮಾಡಿದ - ದಧಿಕ್ಷೀರ - |ಗಡಿಗೆ ಸೂರೆಯ ಮಾಡಿದ - ಕಾಳಿಂಗನ - |ಮಡುವ ಕಲಕಿ ನೋಡಿದ - ಸ್ಯಂದನವನು |ನಡೆಸುವ ಕಾರಣ ನರಗೆ ಸಾರಥಿಯಾದ 2ಊದುತ ಕೊಳಲನರಣ್ಯದೊಳ್ ಗೋಗಳ |ಕಾದು ಕುಂಚಿಗೆ ಮಾಡಿ ಕಂಬಳಿ ಪೊದೆವನು |ಓದನವನು ಬೇಡಿ ಹೊಟ್ಟೆಯ ಹೊರೆದನು |ಯಾದವರೊಳಗಾಡಿ ಎಂಜಲನುಂಡನು |ಕ್ರೋಧದಿಂದ ಸುರರ ಕೊಂದು - ಕೊಂದಿಡುವನು |ಪಾದರಿ ಪೆಣ್ಣುಗಳೊಳಗಿರುತಿಪ್ಪನುಆದಿಯೆ ಇವಗಿಲ್ಲ ಎಂದೆಂದಿಗಿಪ್ಪನು |ಭೂದಿವಿಜರ ಕೂಡ ಬಿಕ್ಷಕೆ ಪೋಪನು ||ಮೇದಿನಿಯೊಳಗಿರುವ - ಮಸ್ತಕವು ಬೋ - |ಳಾದವರೊಳಗಿರುವ - ನೋಡಲು ಭೇದಾ - |ಭೇದದಂದದಿ ತೋರುವ - ಸಭೆಯೊಳಗೆ |ಬೈದರೆ ಮೈದೋರುವ ಶೇಷಶಾಯಿ - |ಯಾದಂಥಪುರಂದರ ವಿಠಲನೆಂದರಿಯದೆ3
--------------
ಪುರಂದರದಾಸರು
ಕೊಂಡಾಡಲಳವೆ ಕರುಣಾನಿಧಿ ಕಾವನದಂಡ ಸಂಜಿತ ಗುರುಸತ್ಯನಾಥರ ಕೀರ್ತಿ ಪ.ಶ್ರೀ ವಾಸುದೇದ ತಾ ಭಾವಿಸಿ ಚಿತ್ತದಿಭೂವಲಯಕೆ ಸುಜನಾವಳಿಗಾಶ್ರಯವೀವೆನೆನುತ ಶುಭದೇವವೃಕ್ಷವನಟ್ಟೆಈವರ ಪರಮಹಂಸಾವಲಂಬನ ತಾಳ್ದುಶ್ರೀ ವಾಯುಮತದಿ ತತ್ವವೆ ಲಕ್ಷಿಸುವ ಪ್ರೇಕ್ಷಾವಂತರಾಗಿಹ ಜೀವಕೋಟಿಗಳ ಕೃಪಾವಲೋಕನದೊಳಿಟ್ಟ ಅಪೇಕ್ಷಿತಭಾವಾರ್ಥಗಳನೆ ಕೊಟ್ಟು ನಂಬಿದಸೇವಕರ್ಗಭಯವಿಟ್ಟ ಗುರುರಾಯನ 1ಭಾನುತೋರುವ ಮುನ್ನೆ ಸ್ನಾನವ ಮಾಡಿ ಸುಮ್ಮಾನದಿಂದಲಿ ನೇಮ ಮೌನದೊಳಿದ್ದು ಶ್ರೀಮಾನಾಥನಂಘ್ರಿಯ ಮಾನಸದಲಿ ದೃಢಧ್ಯಾನದಿಂ ಬಲಿದುಗೀರ್ವಾಣಭಾಷ್ಯಾಮೃತಪಾನವ ಜನರಿಗೆ ಸಾನುರಾಗದಲಿತ್ತುನಾನಾ ತತ್ವಾರ್ಥ ವ್ಯಾಖ್ಯಾನವ ಜನರಿಗೆತಾನಂದು ಬೋಧಿಸಿದತಾಮಸಜ್ಞಾನವನೋಡಿಸಿದ ಆ ಕಾಮಧೇನುವೆನಿಸಿ ಎಸೆದ ಗುರುರಾಯನ 2ಭೇದವರ್ಜಿತ ಮತ್ತವಾದ ಕುಂಭಿಯಕುಂಭಭೇದಕಸಿಂಗಹಲಾಧಾರಿಹರಿಸಗುಣೋದರ ಸಾಕಾರಮಾಧವಹರನುತಪಾದನೆನುತಸೂತ್ರವೇದ ಪುರಾಣದಿಸಾಧಿಸಿ ಕುತ್ಸಿತವಾದಿಗಳಪಾದಾಕ್ರಾಂತರ ಮಾಡಿ ಮೇದಿನಿಯೊಳು ಜಯನಾದಭೇರಿಯ ಹೊಯಿಸಿದ ಮುಕ್ತಿಯಸಾಧನ ತೋರಿಸಿದ ಭ್ರಷ್ಟಂಕುರೋದಯ ಮಾಣಿಸಿದ ಗುರುರಾಯನ 3ಕಾಲಕಾಲಕೆ ಧರ್ಮ ಪಾಲಿಸಿ ಯಾಚಕಜಾಲಕೆ ಮನ್ನಿಸಿ ಮೂಲ ಮಂತ್ರೋಪದೇಶಪೇಳಿ ಪೂತರ ಮಾಡಿ ಹಾಲು ಸಕ್ಕರೆ ತುಪ್ಪಹೋಳಿಗ್ಯನ್ನವನಿಕ್ಕಿ ಮೇಲೆ ದ್ರವ್ಯವನಿತ್ತುಪಾಲಿಸಿ ತಾಯಿತಂದೆಗಳ ಹಂಬಲ ಬಿಡಿಸಿ ಲೋಕದವರಿಗಭಿಲಾಷಾ ಪೂರ್ಣಾನುಕೂಲಚಿಂತಾಮಣಿಯ ಯತಿಕುಲಮೌಳಿಮಕುಟಮಣಿಯ ವಿರತಿಭಾಗ್ಯಶಾಲಿ ಸುಗುಣಖಣಿಯ ಗುರುರಾಯನ 4ಮಣ್ಣು ವನಿತೆಸತಿಹೊನ್ನಿನ ಬಯಕೆಯಘನ್ನತೆಜರಿದುಪಾವನ್ನಮಹಿಮನಾದಚೆನ್ನ ಸತ್ಯನಿಧಿ ತೀರಥನ್ನ ಕರೋದ್ಭವತನ್ನಾಕಷೆಂಬುವಭಿನ್ನವಚಂದ್ರಿಕೆಯನ್ನು ಪ್ರಕಾಶಿಸಿ ಪೂರ್ಣಚಂದ್ರಮನಂತೆಉನ್ನತ ಕಳೆಯುತ ಚಿನ್ಮಯ ವರದ ಪ್ರಸನ್ನ ವೆಂಕಟಾಧಿಪನ ಭಜಿಸಿನಿತ್ಯಧನ್ಯನೆನಿಸುತಿಪ್ಪನ ಸತ್ಯಾಭಿನವರನ್ನನ ಪೊರೆದÀಪ್ಪನ ಗುರುರಾಯನ 5
--------------
ಪ್ರಸನ್ನವೆಂಕಟದಾಸರು