ಒಟ್ಟು 562 ಕಡೆಗಳಲ್ಲಿ , 86 ದಾಸರು , 513 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಹರಿದಿನದಲಿ ಉಂಡ ನರರಿಗೆ -ಘೋರ |<?xmಟ veಡಿsioಟಿ='1.0' eಟಿಛಿoಜiಟಿg='uಣಜಿ-8'?>ನರಕ ತಪ್ಪದು ಎಂದುಶ್ರುತಿಸಾರುತಲಿದೆಪ.ಗೋವ ಕೊಂದ ಪಾಪ, ಸಾವಿರ ವಿಪ್ರರ |ಜೀವಹತ್ಯದ ಮಾಡಿದ ಪಾಪವು ||ಭಾವಜನಯ್ಯನ ದಿನದಲುಂಡವರಿಗೆ |ಕೀವಿನೊಳಗೆ ಹಾಕಿ ಕುದಿಸುವ ಯಮನು 1ಒಂದೊಂದು ಅಗಳಿಗೆ ಕೋಟಿ ಕೋಟಿ ಕ್ರಿಮಿಗಳು |ಅಂದಿನ ಅನ್ನವು ನಾಯ ಮಾಂಸ ||ಮಂದರಧರನ ದಿನದಲುಂಡವರನು |ಹಂದಿಯ ಸುಡುವಂತೆ ಸುಡುವನು ಯಮನು 2ಅನ್ನ -ಉದಕ ತಾಂಬೂಲ - ದರ್ಪಣಗಳು |ಚೆನ್ನವಸ್ತ್ರಗಳೆಲ್ಲ ವರ್ಜಿತವು ||ತನ್ನ ಸತಿಯ ಸಂಗ ಮಾಡುವ ಮನುಜನ |ಬೆನ್ನಲಿ ಕರುಳ ಉಚ್ಚಿಸುವನು ಯಮನು 3ಜಾವದಜಾಗರಕ್ರತು ನಾಲ್ಕು ಸಾವಿರ |ಜಾವ ನಾಲ್ಕರ ಫಲಕೆ ಮಿತಿಯಿಲ್ಲವು ||ದೇವದೇವನ ದಿನದಿ ನಿದ್ರೆಗೈದರೆ ಹುರಿ - |ಗಾವಿಲಿಯೊಳು ಹಾಕಿ ಹುರಿಯುವ ಯಮನು 4ಇಂತು ಏಕಾದಶಿ ಉಪವಾಸಜಾಗರ |ಸಂತತ ಕ್ಷೀರಾಬ್ಧಿಶಯನನ ಪೂಜೆ ||ಸಂತೋಷದಿಂದಲಿ ಮಾಡಿದ ಜನರಿಗ - |ನಂತ ಫಲವನೀವ ಪುರಂದರವಿಠಲ 5
--------------
ಪುರಂದರದಾಸರು
ಹರಿಹರಿಧ್ಯಾನಿಸೊ ಲಕ್ಷ್ಮೀವರನ ಧ್ಯಾನಿಸೊಪಉರಗಶಯನನಾಗಿಘೋರಶರಧಿಯನ್ನು ಮಧಿಸಿರುವಸುರರಿಗಮೃತವೆರೆದ ನಮ್ಮ ಗರುಡಗಮನ ತಾನುಅ.ಪದಂಡಧರಗೆ ಸಿಲುಕಿ ನರಕ ಕೊಂಡದಲ್ಲಿ ಮುಳುಗಲ್ಯಾಕೆಪುಂಡರೀಕನಯನ ಪಾಂಡುರಂಗನೆನ್ನದೇಶುಂಡಲಾಪುರಾದಿ ಪಾಲ ಪಾಂಡುಪುತ್ರ ಧರ್ಮರಾಯಕಂಡು ನಮಿಸಿ ಪೂಜೆಗೈದ ಅಂಡಜವಾಹನನೆಂದು1ಬಾಯಬಡಿಕನಾಗಿ ಸರ್ವ ನ್ಯಾಯ ತಪ್ಪಿ ಮಾತನಾಡಿಕಾಯಬೆಳೆಸಿ ತಿರುಗಿ ಬಂದೆ ಸಾಯಲಾ ಕಥೆವಾಯುತನಯ ವಂದ್ಯಚರಣಕಾಯಜಛೆಂದೆರಗಿದವಗೆಆಯುಧವರೇಣ್ಯ ಸರ್ವಸಹಾಯವ ಮಾಡುವಾ2ಕಂದ ಅಬಲ ವೃದ್ಧರೆಂದು ಬಂಧು ಜನರು ಭಾಗ ಕಿರಿದುಕಂದುಕುಂದುರೋಗಿ ಸ್ತ್ರೀಯರೆಂದು ಭೇದವೊಇಂದಿರೇಶಗಿಲ್ಲ ನರರು ಒಂದೇ ಮನದಿ ಧ್ಯಾನಿಸಿದರೆಸುಂದರಾಂಗಮೂರ್ತಿಗೋವಿಂದ ಪೊರೆಯುವಾ3
--------------
ಗೋವಿಂದದಾಸ
ಹೇಳಲಾಗದು ತತ್ವ ಹೇಳಲಾಗದು ಜ್ಞಾನಖೂಳಮೂಳರಾದ ಕುಹಕಿಗಳಿಗೆಪನಾರುತಿಹ ತೊಗಲನು ಕಡಿದನಾಯಿ ಮುಖದ ಮುಂದೆದಾರವಟ್ಟದಲಿ ತುಪ್ಪವ ನೀಡಲು ಅರಿವುದೆಘೋರಸಂಸಾರ ವಿಷಗಟ್ಟಾಗಿ ಹಿಡಿದವಗೆಸಾರಬೋಧೆಯನರಿಯಲು ತಿಳಿಯುವುದೇ1ಗೊಜ್ಜಲ ತೃಣವನು ತಿಂಬ ಗಾರ್ಧಭನ ಮುಂದೆಸಜ್ಜಿಗೆಯ ತಂದಿಡಲಿಕೆ ಅದನರಿವುದೆಲಜ್ಜೆಯಹ ನಾನಾ ಮೋಹ ಪಾಶಲಿಪ್ಪರಿಗೆಸಜ್ಜನ ಶಾಸ್ತ್ರವನೊರೆಯಲದು ತಿಳಿವುದೇ2ದೊಡ್ಡಕ್ಕಚ್ಚನೆ ಕುಡಿವ ಗೊಡ್ಡೆಮ್ಮೆಯ ಮುಂದಕೆಲಡ್ಡುಗೆಯ ತಂದಿಡಲಿಕೆ ಅದನು ತಿಳಿವುದೇದಡ್ಡ ಬುದ್ಧಿಯು ಬಲಿತು ದೊಡ್ಡನಾದವಗೆದೊಡ್ಡ ಚಿದಾನಂದ ಬ್ರಹ್ಮವು ತಿಳಿವುದೇ3
--------------
ಚಿದಾನಂದ ಅವಧೂತರು