ಒಟ್ಟು 4285 ಕಡೆಗಳಲ್ಲಿ , 121 ದಾಸರು , 3030 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಓಂ ನಮೋ ನಮಃ ಕುಲಸ್ವಾಮಿ ಬಿನ್ನಪ ಲಾಲಿಸು ಪ್ರೇಮಿ ಮನ್ನಿಸೆಮ್ಮ ಭಕ್ತ ಸುಪ್ರಸನ್ನ ಮೂರುತಿ ಪ. ವಹ್ನಿಜಠರಸಂಸ್ಥಿತ ಸ್ವರ್ನದೀಗರ್ಭಸಂಭೃತ ಪನ್ನಂಗಭೂಷಣನ ವೀರ್ಯೋತ್ಪನ್ನ ಸಂಪನ್ನ 1 ತಾರಕಾದಿದೈತ್ಯಾಂತಕ ವೀರವೈಷ್ಣವರ ತಿಲಕ ಸೇರಿದವರ ಪೊರೆವ ಕರುಣಾವಾರಿ ರಾಶಿಯೇ2 ಶಿವಕುಮಾರಾಶ್ರಿತಮಂದಾರ ದಿವಿ ಭುವಿ ವಿಖ್ಯಾತ ಶೂರ ನವವಿಧ ಹರಿಭಕ್ತಿಯಂ ಬೇಡುವೆನು ನೀಡಯ್ಯಾ 3 ಸ್ಥಾನಿಕಾಖ್ಯವಿಪ್ರರಿಂದ ಅನವರತ ಪೂಜೆಗೊಂಬ ದೀನಜನವತ್ಸಲ ಭವಾನಿಪುತ್ರನೆ 4 ಭೂವಳಯದಲ್ಲಿ ಮೆರೆವ ಪಾವಂಜಾಖ್ಯ ಪುರನಿವಾಸ ದೇವಲಕ್ಷ್ಮೀನಾರಾಯಣನ ಸೇವಕೋತ್ತಮ 5
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಓಂ ನಮೋ ನಮಃ ಕುಲಸ್ವಾಮಿ ಬಿನ್ನಪ ಲಾಲಿಸು ಪ್ರೇಮಿ ಮನ್ನಿಸೆಮ್ಮ ಭಕ್ತ ಸುಪ್ರಸನ್ನ ಮೂರುತಿಪ. ವಹ್ನಿಜಠರಸಂಸ್ಥಿತ ಸ್ವರ್ನದೀಗರ್ಭಸಂಭೃತ ಪನ್ನಂಗಭೂಷಣನ ವೀರ್ಯೋತ್ಪನ್ನ ಸಂಪನ್ನ1 ತಾರಕಾದಿದೈತ್ಯಾಂತಕ ವೀರವೈಷ್ಣವರ ತಿಲಕ ಸೇರಿದವರ ಪೊರೆವ ಕರುಣಾವಾರಿ ರಾಶಿಯೇ2 ಶಿವಕುಮಾರಾಶ್ರಿತಮಂದಾರ ದಿವಿ ಭುವಿ ವಿಖ್ಯಾತ ಶೂರ ನವವಿಧ ಹರಿಭಕ್ತಿಯಂ ಬೇಡುವೆನು ನೀಡಯ್ಯಾ3 ಸ್ಥಾನಿಕಾಖ್ಯವಿಪ್ರರಿಂದ ಅನವರತ ಪೂಜೆಗೊಂಬ ದೀನಜನವತ್ಸಲ ಭವಾನಿಪುತ್ರನೆ4 ಭೂವಳಯದಲ್ಲಿ ಮೆರೆವ ಪಾವಂಜಾಖ್ಯ ಪುರನಿವಾಸ ದೇವಲಕ್ಷ್ಮೀನಾರಾಯಣನ ಸೇವಕೋತ್ತಮ5
--------------
ತುಪಾಕಿ ವೆಂಕಟರಮಣಾಚಾರ್ಯ
ಓಂ ನಮೋ ನಾರಾಯಣಾಯ ತೇ ನಮೋ ನಮೋ ನಮೋ ಪ ಓಂ ನಮೋ ಓಂಕಾರಾದಿ ನೀ ಘನ್ನ ಮಹಿಮ ಅಷ್ಟಾಕ್ಷರಾತ್ಮಕನೆ ಅ.ಪ ಪ್ರಣವ ಪ್ರತಿಪಾದ್ಯ ನೀ ಅಷ್ಟಾಕ್ಷರದೊಳು ವಿಶ್ವತÉೈಜಸ ಪ್ರಾಜ್ಞ ತುರ್ಯಾತ್ಮ ಅಂತರಾತ್ಮ ಪರಮಾತ್ಮ ಜ್ಞಾನಾತ್ಮ ವರ್ಣಾತ್ಮಕ ನೀ ಓಂಕಾರದೊಳು ಅಉ ಮನಾದಬಿಂದು ಘೋಷ ಶಾಂತ ಅತಿಶಾಂತದೊಳು ಪ್ರತಿಪಾದ್ಯಮೂರುತಿ ಹರೆ1 ಪ್ರಣವದೊಳು ಆದಿವರ್ಣದಿಂದಭಿವ್ಮಕ್ತಿ ಕಾಲಗಳ್‍ವ್ಯಕ್ತವೊ ಪ್ರಾಣ ಲಕುಮಿಯಭಿಮಾನಿಗಳನಂತ ವೇದಗಳಿಂ ವಿಶ್ವಮೂರುತೀ ಹರೆ2 ವಯ್ಯ ಕವರ್ಗ ವರ್ಗವೈದು ಪಂಚಭೂತಗಳಂ ವರ್ಣದೊಳಭಿಮಾನಿಗಳ್ ಭೂತಕ ಗಣಪ ಪ್ರಹವವಾಯು ತೈಜಸ ಮೂರುತೇ3 ಪ್ರತಿಪಾದ್ಯನೆ ಮಕಾರ ವಾಚ್ಯ ಶ್ರೀ ಪ್ರಾಜ್ಞ ನಿನ್ನಿಂದಭಿ- ವ್ಯಕ್ತಿ ಚವರ್ಗ ಪಂಚಕ ಜ್ಞಾನೇಂದ್ರಿಯ ವೈದು ಸೂರ್ಯ ಪ್ರಾಣ ದಿಗ್ದೇ- ವತೆಗಳಿಹರು ಪ್ರತಿಗಾಣಿನೊ ಶ್ರೀ ಪ್ರಾಜ್ಞಮೂರುತಿ ಹರೆ4 ನಾದವಾಚ್ಯಪ್ರತಿಪಾದ್ಯ ತುರ್ಯನೆ ಅಭಿವ್ಯಕ್ತ ಪಂಚವರ್ಣ ಟವರ್ಗ ಕರ್ಮೇಂದ್ರಿಯಗಳ್ ಶ್ರೀ ತುರ್ಯ ಮೂರುತೆ 5 ಬಿಂದುವಾಚ್ಯ ಪ್ರತಿಪಾದ್ಯ ನೀನಾತ್ಮ ಬಿಂದುವಿಂದ ತವರ್ಗ ಪೊಂದಿಕೊಂಡಿಹುದು ತನ್ಮಾತ್ರಪಂಚಕ ಪಂಚವಾಯುಗಳಿಹರಯ್ಯ ಬಂಧ ಮೋಚಕ ನೀ ಕಾರಣ ಹರೆ 6 ಘೋಷದಿಂದಲಭಿವ್ಯಕ್ತಿ ಪಂಚಮನೋ ವೃತ್ತಿಗಳದರಭಿಮಾನಿ ಓಷಧೀಧರ ಖಗಪ ಶೇಷೇಂದ್ರ ಕಾಮರು ಪಕಾರ ಪಂಚವರ್ಣ ದೋಷರಹಿತ ಮನೋಧಾಮದಿ ನೀ ದೊರೆ 7 ಕಾರಾದಿ ಸಪ್ತವರ್ಣ ಸಪ್ತಧಾತುಗಳಲ್ಲಿ ಪರಿ ಅರಿಯೆನೊ ಹರಿಯೆ 8 ಅತಿ ಶಾಂತದೊಳು ಪ್ರತಿಪಾದ್ಯನಾಗಿಹೆ ಜ್ಞಾನಾತ್ಮ ಹಕಾರಾದಿ ತ್ರೈವರ್ಣ ಅದರಿಂದ ಗುಣಕ್ರಿಯವೊ ತತುಕ್ರಿಯ ಜಾಗೃತ ಸ್ವಪ್ನ ಸುಷುಪ್ತಿ ವಿಶ್ವಾದಿರೂಪದಿಂದ ಉರಗಾದ್ರಿವಾಸವಿಠಲ ಮೂರುತೇ 9
--------------
ಉರಗಾದ್ರಿವಾಸವಿಠಲದಾಸರು
ಓಡಿ ಬಾ ನಿನ್ನ ಎತ್ತಿ ಮುದ್ದಾಡುವೆ ನಾಗಶಯನ ರಂಗನೇ ಪ. ನಾಗಶಯನ ರಂಗನೆ, ನಾಗಶಯನ ರಂಗನೇ ಅ.ಪ. ಕುಣಿ ಕುಣಿಯುತ ಗೆಜ್ಜೆ ಝಣ ಝಣರೆನೆÀ್ನ ಕೃಷ್ಣಾ ಫಣಿಶಾಯಿ ನಿನ್ನ ನಾ ಕ್ಷಣದಲ್ಲಿ ಬಿಗಿದೂ 1 ಚಿನ್ನರೊಡನೆಗೂಡಿ ಮಣ್ಣನೆ ಮೆಲ್ಲದಿರೂ ಕೃಷ್ಣಾ ಅಣ್ಣಯನೊಡನಾಡೊ ಚಿನ್ನ ಗೋಪಾಲನೇ 2 ಗೋಪಿಯರೊಡನಾಡಿ ಗೋಕುಲಾಂಬುಧಿ ಚಂದ್ರ ಗೋಪಾಲಕೃಷ್ಣವಿಠಲ ಗೋವಳರೊಡೆಯ 3
--------------
ಅಂಬಾಬಾಯಿ
ಓಡ್ಯಾಡುತ ನೀ ಒಲಿದೊಲಿದು ಮನೆಗೆ ಬಾರೊ ಮುಕುಂದ ನೋಡೆನ್ನನು ದಯಮಾಡದಿರುವುದೇನು ಚೆಂದ ಪ ನೀಲವರ್ಣನೆ ನೀರಜಾಕ್ಷ ನಿನ್ನಪಾರ ಗುಣವ ನಾ ಏನುವರ್ಣಿಸಲ್ಹೇಳೊ ಸಾಕ್ಷ ಇಂದಿರಾಪತಿ ನಿನ್ನ ಆಕಾರ ನೋಡುವೆ- ನೆಂದ್ಹುಟ್ಟಿತೆನಗೆ ಮಹಾಪೇಕ್ಷ 1 ಹಸ್ತಿ ವರದ ಕೇಳು ನಿನ್ನ ಚರಣಾಬ್ಜಗಳಿಗೆ ನಾ ಮಸ್ತಕ ಬಾಗುವೆ ಮುನ್ನ ತಿಳಿ ಭೃತ್ಯನೆಂದೆನ್ನ ಚಿತ್ತಕೆ ತಂದು ನೀ- ನಾಗ ಬೇಕೆನಗೆ ಪ್ರಸನ್ನ 2 ಉಟ್ಟಾಂಬರನಿರಿಜರವು ಭೂಷಣ ಹೊಸ ಪರಿಯು ವಕ್ಷಸ್ಥಳದಿ ನೋಡೋ ಸಿರಿಯು ಇಟ್ಟಿರೋ ಬಾಪುರಿಯು ಶ್ರೇಷ್ಠ ಭೀಮೇಶ- ಕೃಷ್ಣನೆ ಲೋಕನಾಳುವ ದೊರೆಯು 3
--------------
ಹರಪನಹಳ್ಳಿಭೀಮವ್ವ
ಓದಲೇಕೋ ಬರಿದೆ ಓದಲ್ಯಾಕೋ ಪ ಆದಿ ಮಧ್ಯ ಅಂತ್ಯವೆಂಬೊ ನಾದಬಿಂದು ಕಳೆಯನು ಅರಿಯದೆ ಅ.ಪ ಏಳಬೇಕೋ ನಾರಿಯಾಳಬೇಕೋ ಏಳು ಎಂಟು ಆತ್ಮವಿಚಾರ ತಾಳಿ ತತ್ವ ಜ್ಞಾನವನ್ನು ನೀಲಜ್ಯೋತಿಯನ್ನು ಕಾಣದೆ ಜಾಲಾಮಾನಿನಿಯರೊಳು ಬೆರೆದೂ 1 ಓದಬೇಕೋ ಓದದ್ದೋದಬೇಕೊ ಓದಿತಾವೊಂದಕ್ಷರವನ್ನು ಪಾದಸೇವೆಯನ್ನು ಕೊಟ್ಟಾ ಭೋಧಾಚಾರ್ಯನೆಂಬೊ ತುಲಸೀ ಆದಿಪ್ರಣವವನ್ನು ಬಿಟ್ಟುವೋದಲೇಕೊ 2
--------------
ಚನ್ನಪಟ್ಟಣದ ಅಹೋಬಲದಾಸರು
ಓದಿ ಮರುಳಾದರಯ್ಯ ಬೋಧವಿಲ್ಲದೆ ಓದಿನೋಡಲದನರಿತು ಹರಿಯ ನೆನೆಯಲೊಲ್ಲದೆ ಪ. ಕರಣೇಂದ್ರಿಯ ಕಾಟಕೆ ಸಿಲುಕದ ಕರ್ಮದಾವುದು ಪರಗತಿ ವಿಚಾರವಿಲ್ಲದ ನಿಜದಾವುದು ಗುರುಚರಣ ಪರಿಚಯವಿಲ್ಲದ....ಯಾವುದು1 ಅಂತರಂಗ ಶುದ್ಧಿಯಿಲ್ಲದ ಕಂತೆಯಾವುದು ನಿತ್ಯ ಶಾಂತಿ ಶಮದಮವಿಲ್ಲದ ಭ್ರಾಂತಿ ಯಾವುದು ಸಂತತ ಸಮಾಧಾನದ ಚಿಂತೆಯಾವುದು ನಮ್ಮ ಕಪಟ ದಾವುದು 2 ಮಧ್ವಮತದ ಮಾರ್ಗವನ್ನು ಮೀರಿದಾವುದು ಶ್ರುತಿ ಸಿದ್ಧ ಹರಿಯ ಗುಣವ ಹಾಡಿಪಾಡದ್ಯಾವುದು ವೃದ್ಧರನ್ನು ಕೆಣಕಿ ಕಾಡಿ ಕೊಂಬದಾವುದು ಅದು ಸಿದ್ಧಯಮನ ಬಾಧೆಗೆ ಒಳಗಾಗುವದಾವುದು 3 ಸಾರತತ್ವ ಸುಧೆಯ ಸವಿಯ ದೂರಿದಾವುದು ಪರಿ- ವಾರ ಜನರ ಪೊರೆವರುಪಚಾರ ದಾವುದು ಸಾರಿ ತನ್ನ ಸಾಕ್ಷಿಗಿನ್ನು ಬಾರದಾವುದು ಅದು ಕೀರನಾಕ....ಯಾ ಸಂಸ್ಕಾರ ದಾವುದು 4 ಅನ್ನದ ಜೀವ ಭಿನ್ನಹರಿ ಎನ್ನದಾವುದು ದ್ವಾಸು- ಪರ್ನಪಥವ ಪಾ....ಮಾಡದಾವುದು ಧನ್ಯ ಹಯವದನ ನಾನೆನ್ನುವುದು ಅದು ಕುನ್ನಿಯಂತೆ ಹಲವು ಪರಿಯ ಕೂಗುವುದದು 5
--------------
ವಾದಿರಾಜ
ಕಂ||ಇಂದುವಿನ ವಾರದರ್ಚನೆಸಂದುದು ನಿನ್ನಡಿಗಳಿಂಗೆ ಗ್ರಹಗತಿ ಸೂಚಿಸೆಹಿಂದಣ ಕರ್ಮದ ಫಲವನುಸಂದೇಹವು ಬಿಡದು ಬಿಡಿಸು ವೆಂಕಟರಮಣನೆದುರಿತವನು ಪರಿಹರಿಸು ಸ್ಥಿರಭಕ್ತಿುರಿಸುತಿರುಪತಿಯ ಸ್ಥಿರವಾಸ ಶ್ರೀ ವೆಂಕಟೇಶ ಪಭಯವಾಗುತಿದೆ ದೇವ ಭಯಬಡಿಸುತಿರೆ ಕರ್ಮಭಯವಿಲ್ಲದಿರುವದೆಂತುಭಯನಿವಾರಕನಾಮ ಭಯತಿಮಿರ ರವಿಯಹುದುಭಯ ಹೋಗಿ ಸ್ಥಿರವಾಗಿ ಮನ ನಿಲ್ಲದಿಹುದು 1ಪರಮ ಯೋಗ್ಯನಿಗೊಂದು ಪಿರಿದಾದ ದುಃಖವಿದೆಪರಿಹರಿಸದಾವ ವಿಧದಿಕರಗಿ ಕಂದುತಲಿರಲು ಬಿರಿಸು ಕರ್ಮದ ಗತಿಯುನರಹರಿಯೆ ಮಹಿಮೆಯನು ನೆರೆ ತೋರಿಸೀಗ 2ಭಜನೆಯನು ಮಾಡಿದರೆ ಭಜನೆ ಕಾಮನೆಯಾಗಿನಿಜ ದೊರಕದೆಂಬ ಭಯವುಭಜಿಸಿ ಪಾಪವ ಕಳೆಯೆ ಭಜನೆಯದಕಾಗುವುದುಭಜನೆ ದೇಹದಿ ನಿಂದು ಭವ ತಾನು ನಿಲ್ಲುವುದು 3ಕರ್ಮಕೀ ಪರಿ ಬಲವು ಧರ್ಮವಾಗಿರೆ ಬಲಿತುಕರ್ಮವೇ ಬೆಳೆಯುತಿಹುದುಮರ್ಮವರಿತರು ಬಿಡದು ಹೆಮ್ಮೆಯದು ಬಲ್ಲವಿಕೆಧರ್ಮ ಬರುವದು ನಿನಗೆ ಕರ್ಮವಿದ ಕಡೆಗೊಳಿಸು 4ಇಚ್ಛೆುಂದಿದ ಸೃಜಿಪೆ ುಚ್ಛೆುಂ ಪರಿಹರಿಪೆಇಚ್ಛೆಯೇ ತೋರುತಿಹುದುಇಚ್ಛೈಸಿ ನಿನ್ನಡಿಯನಚ್ಯುತನೆ ಭಜಿಪರಿಗೆ 5ತುಚ್ಛವಾದೀ ಕರ್ಮ ಬಿಚ್ಚದಿಹುದೇನುಗರ್ವ ಬರುವದು ಜನಕೆ ಸರ್ವಗತನೆನಿಸಿದರೆನಿರ್ವಹಿಪೆನೆನಲು ಹೀಗೆಸರ್ವೇಶ ನೀನೊಲಿದು ಸರ್ವದೋಷವ ಕಳೆಯೆಗರ್ವವೆಡೆಗೊಳ್ಳದೈ ಪೂರ್ವದವನೆನಿಸು 6ಸೂತ್ರವನು ನಿರ್ಮಿಸಿದೆ ಸೂತ್ರ ನಿನ್ನಾಧೀನಸೂತ್ರಕ್ಕೆ ಶಕ್ತಿಯೆಂತುಯಾತಕೀ ಕರ್ಮಗತರನು ಮಾಡಿ ಜನರುಗಳ ಪಾತಕರು ಹೊರಗೆಂದು ಯಾತನೆಯ ಮಾಳ್ಪೆ 7ಮೃಷೆಯೆಂದ ಮಾತ್ರದಲಿ ಮೃಷೆಯಾಗದೀ ದುಃಖವಿಷಮವೇ ಬಳಲಿಸುವದುವಿಷವು ಮೊದಲಾಗಿ ತದ್ವಿಷಮ ಕರ್ಮದಿ ಹರವುವಿಷಮವಿದು ನಿನ್ನ ನಿಜದಲಿ ತೊಲಗದೆಂತು 8ಕರುಣಾಕರನೆ ನೀನು ಗುರುಮುಖದಿ ಕರ್ಮಗಳಬರಸೆಳೆದು ಬಯಲಮಾಡೆಮರೆವೆಯಾವರಣವಿರಬೇಕೆ ತಿರುಪತಿವಾಸವರದ ಶ್ರೀ ವಾಸುದೇವಾರ್ಯ ವೆಂಕಟರಮಣ 9ಓಂ ಪಾರ್ಥಸಾರಥಯೇ ನಮಃ
--------------
ತಿಮ್ಮಪ್ಪದಾಸರು
ಕಂ||ಮಂಗಳವಾರದ ಪೂಜೆಗೆಮಂಗಳ ನೈರುತ್ಯದಲ್ಲಿ ಶಿವನಪ್ಪಣೆುಂಮಂಗಳ ನಾಮವ ಜಪಿಸುತಮಂಗಳವನ್ನೀಯುತೆಮಗೆ ಶೋಭಿಸುತಿಪ್ಪಳ್‍ನಿನ್ನ ಚರಣವ ನಂಬಿ ಭಜಿಸುತಿಹ ಭಕ್ತನಿಗೆ ುನ್ನುಂಟೆ ಗ್ರಹಗತಿಗಳು ಕೃಷ್ಣಾ ಪಉನ್ನತದ ಚಕ್ರವರ್ತಿಯ ಹೊಂದಿ ಬದುಕುವನಿಗನ್ಯರಟ್ಟುಳಿ ಬರುವದೇ ಕೃಷ್ಣಾ ಅ.ಪನೀನೊಬ್ಬನೇ ದೇವನೆಂದು ಪೇಳುತಲಿಹುದುಸಾನುನಯವುಳ್ಳ ಶ್ರುತಿಯು ಕೃಷ್ಣಾಏನೊಂದು ರೂಪಾಗಿ ತೋರಿದರು ಸಕಲವೂನೀನಲ್ಲದನ್ಯವುಂಟೇ ಕೃಷ್ಣಾಏನೆಂಬೆ ಚಿನ್ನ ಹಲವಂದದಾಭರಣದಲಿಕಾಣಿಸಿದರದು ಭೇದವೇ ಕೃಷ್ಣಾನೀನೇ ದೇವಾತ್ಮಕನು ನೀನೆ ಗ್ರಹರೂಪಕನುನೀನೊಲಿದ ನರಗೆ ಭಯವೇ ಕೃಷ್ಣಾ 1ಉತ್ತವನು ಬಿತ್ತುವನು ಬಿತ್ತಿದವನುಂಬವನುಮತ್ತೊಬ್ಬನದಕೆ ಬಹನೇ ಕೃಷ್ಣಾಉತ್ತು ಬಿತ್ತಿದೆ ಮಾಯೆಯೆಂಬ ಕ್ಷೇತ್ರದಿ ನಿನ್ನಚಿತ್ತೊಂದು ಬೀಜವನ್ನು ಕೃಷ್ಣಾಬಿತ್ತು ವೃಕ್ಷಾಕಾರವಾದಂತೆ ಲೋಕವಿದುವಿಸ್ತರದಿ ಬಹುವಾುತು ಕೃಷ್ಣಾಬಿತ್ತಿ ಬೆಳೆದುಂಬಾತನುತ್ತಮನು ನೀನಿರಲುಮತ್ತೊಂದು ಭಯವದೇಕೆ ಕೃಷ್ಣಾ 2ಇಂದ್ರಾದಿ ದಿಕ್ಪಾಲಕರ ರೂಪನಾಗಿರುವೆಚಂದ್ರಾದಿ ಗ್ರಹರೂಪನು ಕೃಷ್ಣಾಇಂದ್ರ ಚಂದ್ರಾದಿತ್ಯ ವರುಣಾದ್ರಿ ಗಗನಾದಿಇಂದ್ರಿಯಾಧೀಶ ನೀನೆ ಕøಷ್ಣಾಇಂದ್ರಿಯಾಧೀನರಾಗಿರುವರರಿಯರು ನಿನ್ನಮಂದಬುದ್ಧಿಯ ಮೂಢರು ಕೃಷ್ಣಾತಂದ್ರಿಯನು ಪರಿಹರಿಸಿ ಹೊಂದಿ ನಿನ್ನನು ಭಜಿಪಛಂದವನು ನೀ ತೋರಿಸು ಕೃಷ್ಣಾ 3ಒಡೆಯನೊಬ್ಬನು ಜಗಕೆ ಬಳಿಕಾತನಾಜ್ಞೆಯಲಿನಡೆವರೆಲ್ಲರು ಮೀರದೆ ಕೃಷ್ಣಾನಡೆಯಲರಿಯದು ಹಲಬರೊಡೆಯರಾಗಲು ನೀತಿಕೆಡುವುದದು ಕದನಮುಖದಿ ಕೃಷ್ಣಾನುಡಿದು ಭೇದವ ನಿತ್ಯ ಕದನವನು ಮಾಡುತಿಹಜಡರ ಮಾತದು ಸತ್ಯವೇ ಕೃಷ್ಣಾಬಿಡಿಸಿ ಭೇದವನೊಬ್ಬನೊಡೆಯನೆಂದುರು ಸಾರ್ವಸಡಗರದ ಶ್ರುತಿ ನಿತ್ಯವು ಕೃಷ್ಣಾ 4ಬಿಡದೆ ನಿನ್ನಂಘ್ರಿಯನು ದೃಢವಾಗಿ ಭಜಿಸುವರುಜಡತೆಯಳಿದ ಮಹಾತ್ಮರು ಕೃಷ್ಣಾಬಿಡುವದವರಿಗೆ ಲೋಕ ನಡೆವ ನಡತೆಯ ಭ್ರಮೆಯುನಡತೆಯದು ನಿನ್ನ ನಿಜವು ಕೃಷ್ಣಾನಡೆದು ಬಳಿಕಾ ಮಾರ್ಗವನು ಹೊಂದಿದವ ನಿಪುಣಬಿಡಬೇಕು ಮೂಢಮತವ ಕೃಷ್ಣಾಪೊಡವಿಯೊಳು ತಿರುಪತಿಯ ವಾಸ ವೆಂಕಟರಮಣಕೊಡು ನಿನ್ನ ಭಜಿಪ ಮತಿಯ ಕೃಷ್ಣಾ 5ಓಂ ಅವ್ಯಕ್ತ ಗೀತಾಮೃತ ಮಹೋದಧಯೇ ನಮಃ
--------------
ತಿಮ್ಮಪ್ಪದಾಸರು
ಕಟ್ಟಿದಳು ಕಂಕಣವ ನಾರಿ ಲಕುಮಿವಿಷ್ಣು ಮೂರುತಿ ಕರಕೆ ವೈಕುಂಠರಾಣಿ ಪ.ಅವಿಯೋಗಿಯಾದ ಶ್ರೀ ಸತಿಯ ಸೇವೆಗೆ ಒಲಿದುಪವಮಾನನೊಡೆಯ ವರ ಬೇಡೆನ್ನಲುಭುವನೇಶ ನಿನ್ನ ಕೃಪೆ ಪೂರ್ಣಳಾನೆಂದೆನುತಹವಣೆಯಿಂ ಕೇಳ್ದಳೆರಡೊರವ ಲೋಕೋದ್ಧಾರಿ 1 ಶರಣಾಗತ ರಕ್ಷಕನು ಎಂಬ ಬಿರುದೊಂದುಶರಣಾಗತ ವತ್ಸಲನು ಎಂಬುದೊಂದುಧರಿಸು ಈ ಬಿರುದು ಹರಿ ವರವು ಅದೆ ಎನಗೆನಲುಕಿರುನಗೆಯ ನಗುತ ಒಲಿದನು ಸತಿಯ ನುಡಿಗೆ 2 ನಾರಿರನ್ನಳೆ ನಿನ್ನ ಕೋರಿಕೆಯ ತೆರನಂತೆಆರಾಧನೆಯ ಮಾಳ್ಪ ಶರಣರಿಗೆ ಒಲಿವೆತೋರಲೀ ಬಿರುದುಗಳು ನಿನ್ನ ಕರಗಳಲೆಂದುಶ್ರೀ ರಮೆಯ ಕರಕೆ ಕಂಕಣಗಳನೆ ತೊಡಿಸಿದನು 3 ನಾರಿ ಈ ಕಂಕಣವ ನಿನಗ್ಯಾಕೆ ಅರ್ಪಿಸಲುತೋರದೆನ್ನುತ ನಟನೆಗೈವನಿತರೊಳ್‍ಕ್ಷೀರಸಾಗರ ಮಥನ ಕಾಲದಲಿ ಜನಿಸುತಲಿಶ್ರೀ ರಮೇಶಗೆ ಒಲಿದು ಮಾಲೆ ಹಾಕಿದಳು 4 ಭಕ್ತಿ ಪ್ರೇಮಕೆ ಒಲಿದು ಭಕ್ತವತ್ಸಲ ಅಭಯಹಸ್ತವನು ಶಿರದಲ್ಲಿ ಇಡಲು ನಾರಿಚಿತ್ತದಲಿ ಆನಂದಪುಳಕಾಂಕುರಿತಳಾಗಿಚಿತ್ತದೊಲ್ಲಭನ ಮುಖಕಮಲ ವೀಕ್ಷಿಸುತ 5ಈಕ್ಷಿಸಲು ಶ್ರೀ ಹರಿಯ ಕರಕಮಲ ಲಕ್ಷಣವಲಕ್ಷ್ಮಿ ಬೆರಗಾಗಿ ಮುನ್ನಿನಕಿಂತ ಅಧಿಕಅಕ್ಷಯದ ಸಾಮುದ್ರಿ ಲಕ್ಷಣವ ಕಾಣುತಲಿಪಕ್ಷಿವಾಹನನ ಮೊಗ ಈಕ್ಷಿಸುತ ನಗುತ 6 ನೀನಿತ್ತ ವರದಾನ ಕಂಕಣದ ಬಂಧನವನಿನಗರ್ಪಿಸುತ ಧನ್ಯಳಾಗ್ವೆನೆಂದುಆನಂದದಲಿ ಮಾಡಿ ಕಂಕಣವ ಕಟ್ಟಿದಳು 7 ಜಗವನಾಡಿಸುವಂಥ ಸೂತ್ರವನೆ ಹದಿನಾರುಬಗೆ ಕಲೆಗಳೆಂಬ ಎಳೆ ಮಾಡಿ ಹಳದಿಮಿಗೆ ಕಾಂತಿ ಬಣ್ಣದಲಿ ಮಂಗಳಾಕಾರದಜಗಕೆ ವಿೂರಿಸಿದಂಥ ಕಂಕಣವ ಕಟ್ಟಿದಳು 8 ಕರಿ ಕೆಂಪು ಬಿಳುಪು ವರ್ಣವು ಪ್ರಳಯ ಕಾಲದಲಿಇರಲಾರದೆಂದು ತ್ಯಜಿಸುತ ಹಳದಿಯವರಕಾಂತಿ ಬಣ್ಣವನು ಪೂಸಿ ಮಂಗಳವದನೆಸರದಿಂ ಮೂರು ಗ್ರಂಥಿಯ ಬಿಗಿದಳಾಗ 9 ಪರಿ ಏನು ಪೇಳೆಂದು ಸರಸದಲಿ ಹರಿ ಕೇಳೆ ಹರಿಣಾಕ್ಷಿಯು ಪರಮ ಪುರುಷನೆ ನೀನು ಅರಿಯದಿನ್ನುಂಟೆ ಕೇಳ್ ಸರಸವಾಣಿಯಲಿ ಪೇಳ್ಪೆನು ದೇವ ದೇವ 10 ಒಂದು ಮುಕ್ತಿಯ ಗ್ರಂಥಿ ಒಂದು ಕರ್ಮದ ಗ್ರಂಥಿ ಒಂದು ಅಜ್ಞಾನ ನಿನ್ನ ಬಂಧಕರ ಗ್ರಂಥಿ ಇಂದಿರೇಶನೆ ಇದರ ಗುಟ್ಟು ಅರುಹುವÉ ಕೇಳು ಒಂದೊಂದು ವಿವರಗಳ ವಂದ್ಯ ಬ್ರಹ್ಮಾದಿ 11 ಕರ್ಮಗ್ರಂಥಿಯು ಬ್ರಾಹ್ಮಣರ ಯಜ್ಞದುಪವೀತ ಕರ್ಮ ಬಿಡುಗಡೆ ಇದು ಯತಿರತ್ನಗಳಿಗೆ ನಿಮ್ಮ ಬಂಧಕರ ಗ್ರಂಥಿ ಅಜ್ಞಾನಿ ಹೃದಯಕ್ಕೆ ನಿಮ್ಮ ಕೃಪೆಯಿಂದ ಬಿಡುಗಡೆ ಕೇಳು ಜೀವರಿಗೆ 12 ಮುಕ್ತರಿಗೆ ಸಂಸಾರ ಮತ್ತೆ ಬರದಂದದಲಿ ಕತ್ತರಿಸಿ ಲಿಂಗವನು ಕಾಯ್ದು ನಾನು ಚಿತ್ತಜಾಪಿತನೆ ನಿನ್ನಸ್ತಕೊಪ್ಪಿಸಿ ಬಿಗಿದು ಸುತ್ತಿ ಕಗ್ಗಂಟು ಹಾಕಿರುವೆ ನೀ ಗ್ರಂಥಿ 13 ಬಿಚ್ಚಲಾರೆಯೊ ನೀನು ಬಿಚ್ಚಲಾರೆನೊ ನಾನು ಬಿಚ್ಚಿಕೊಳಲಾರರೊ ಮುಕ್ತ ಜನರು ಅಚ್ಯುತನೆ ಇದೆ ನಿನಗೆ ಹೆಚ್ಚಿನಾ ಬಿರುದು ನಾ ಮೆಚ್ಚಿ ಕಟ್ಟಿರುವೆ ನೀ ಗ್ರಂಥಿ ಕಂಕಣವ 14 ಎರಡು ಗ್ರಂಥಿಯ ತೊಡಕು ಹರಿದು ಭಕ್ತರ ಕಾಯ್ದು ಪರಮ ಆನಂದ ಮುಕ್ತರಿಗೆ ಶರೆ ಮಾಡಿ ಮೆರೆಯೊ ಶರಣಾಗತರ ರಕ್ಷಕನೆ ಎಂದೆನುತ ಸಿರಿ ಮುತ್ತಿನಾರತಿಯನೆತ್ತಿದಳು 15 ಸಿರಿಹರಿಯ ಏಕಾಂತ ಸರಸ ವಚನಗಳಿದನು ಅರಿತವರು ಯಾರೆಂಬ ಅನುಮಾನ ಬೇಡಿ ಹರಿಶಯನನಾದವನು ಅರಿತು ಧೈರ್ಯದಿ ಜಗದಿ ಹರಹಿದುದ ಸಜ್ಜನರು ಅರಿತು ಆನಂದಿಸಲಿ 16 ಸಿರಿ ಒಲಿಯೆ ಶ್ರೀಹರಿಯು ತ್ವರಿತದಲಿ ಒಲಿಯುವನು ಮರುತ ಒಲಿಯಲು ಸಿರಿಯು ತಾ ಒಲಿವಳು ಗುರುವು ಒಲಿಯಲು ಮರುತ ಮರುಕ್ಷಣದಿ ಒಲಿಯುವನು ಅರಿವುದಿದರಿಂ ಗುರುವ ಒಲಿಮೆ ಅಧಿಕೆಂದು 17 ಪರಮ ಸುಜ್ಞಾನದಿಂದರಿತು ತತ್ವಾರ್ಥಗಳ ಶರಣ ನಾ ನಿನಗೆನಲು ವಾತ್ಸಲ್ಯದಿ ಸಿರಿಯರಸ ತನ್ನಭಯ ಹಸ್ತ ಶಿರದಲಿಟ್ಟು ಶರಣರನು ಪಾಲಿಸುವ ಮುಕ್ತಿ ಪದವಿಯನಿತ್ತು 18 ಹರಿಸಿರಿಯ ಲೀಲೆಗಳ ಗುರುಕರುಣ ಬಲದಿಂದ ಅರುಹಿದ ಮಹಿಮೆ ಧರೆಯಲ್ಲಿ ಮೆರೆದು ಪರಮ ಮಂಗಳ ಕೊಡಲಿ ನಿರುತ ಸದ್ಭಕ್ತರಿಗೆ ಕರುಣಾಳು ಗೋಪಾಲಕೃಷ್ಣವಿಠ್ಠಲನ ದಯದಿ 19
--------------
ಅಂಬಾಬಾಯಿ
ಕಡಲಶಯನ ಹರಿಯ ತೊಡೆಯಲ್ಲಿ ಮಡದ್ಯೇರಿಬ್ಬರು ಕುಳಿತು ಪ ಪನ್ನಂಗಶಯನ ಕೇಳೆ ಸ್ವಾಮಿ ನೀ ಎನ್ನ ಮನೆಗೆ ಏಳೊ ನಿನ್ನ ಪಾದಕ್ಕೆ ಎರಗುವೆನೆಂದು ಭಾಮೆ ಕೈ- ಯನ್ನು ಮುಗಿದಳಾಗ 1 ಎನ್ನ ಮನೆಯಲ್ಲಿದ್ದ ಶ್ರೀಹರಿ- ಯನ್ನು ಕರೆಯಲವರ ಕಣ್ಣೇಸೆನುತಲಿ ಕರ್ಣಿ(ನ್ಯೆ?) ರುಕ್ಮಿಣಿ ಕೋಪ- ವನ್ನು ಧರಿಸಲಾಗ 2 ಎಷ್ಟು ಹಣವ ನೀನು ಕೃಷ್ಣಗೆ ಕೊಟ್ಟು ಕೊಂಡಿ ಹೇಳೆ ದಿಟ್ಟತನದ ಮಾತಾಡೋ ರುಕ್ಮಿಣಿ ನಿನ್ನ ಶ್ರೇಷ್ಠತನವೇನ್ಹೇಳೆ 3 ಹತ್ತು ಆರು ಸಾವಿರದಷ್ಟ ಭಾರ್ಯೇರವೊಳಗೆ ಸತ್ಯಭಾಮೆ ಉತ್ಕøಷ್ಟ ಚೆಲುವೆಯೆಂದು ಕೃಷ್ಣ ನಿನ್ನಲ್ಲಿಹನೆ4 ಹದಿನಾಲ್ಕು ಲೋಕದಲಿ ಹರಿ ಪಾದಾಂಬುಜವ ಕಾಂಬುವೋರಿಲ್ಲೆ ಯದುನಾಥನ ಎದೆ ಮ್ಯಾಲ್ಹತ್ತಿರುವೋದು ಇದು ಸೋಜಿಗವಲ್ಲೆ 5 ಇಷ್ಟೆ ಸೋಜಿಗವೆಂದು ಆಡಲು ದಿಟ್ಟೆ ನಿನಗೆ ಅರಿದೆ ಅಷ್ಟದಿಕ್ಪಾಲಕರನೆ ಓಡಿಸಿ ವೃಕ್ಷ ಕಿತ್ತು ಒದರು(ರುವು?) ದಲ್ಲೆ 6 ಜಲಪ್ರಳಯ ಕಾಲದಲಿ ಜನರಿಲ್ಲದ ಅಂಧಕಾರದಲಿ ಎಲೆಯಾಗಾ ಪರಮಾತ್ಮನ ಮನವ ನೀ ಮೊ- ದಲೆ ಒಲಿಸಿಕೊಂಡೆ 7 ಕಾದು ಸೇವಿಸೆ ಹರಿಯ ಪಾದದ- ಲ್ಲಾದರವಿಲ್ಲದಲೆ ದಾನ ಮಾಡುತ ಮುನಿಹಿಂದಟ್ಟಿದರ್ಹರಿ ಹ್ಯಾಗೆ ಬರುವನ್ಹೇಳೆ 8 ಮೂರು ಲೋಕದ ದೊರೆಯ ಮೂರೆಲೆ ತುಳಸಿ- ಸರಿಯ ಮಾಡಿ ಮುಕುತಿದಾಯಕ ಕೈವಶವಾ- ಗಿರಲು ನೀ ಸಕಲ ಮಾಯವ ಬಲ್ಲೆ 9 ಪಟ್ಟದ್ವೊಲ್ಲಭೆ ನಾನು ಕೃಷ್ಣಗೆ ಮೆಚ್ಚಿ ಬಂದೆಯೆ ನೀನು ಅಚ್ಚುತ ತಾ ಪರಮಾನುಗ್ರ(ಹ)ವ ಮಾಡಿ ಬಂ- ದಿಚ್ಛೆಲಿರುವ ತಾನು10 ಮಾತಾಪಿತರು ಅನುಜನನ್ವಂಚಿಸಿ ಈತಗ್ವಾಲೆಯ ಬರೆದು ಯಾತಕಂಜಿಕೆ ವಲಿಸ್ಯೋಡಿ ಬಂದವಳೆಂದು ಕೀರ್ಹೊಗಳುವುದಲ್ಲೆ 11 ತಂದು ಕೊಡಲು ಮಣಿಯ ಸಭೆಯೊಳು ಅಂದು ತಗ್ಗಿಸಿ ತಲೆಯ ನಿಂದ್ಯದ ಮಾತಿಗೆ ತಂದು ನಿಮ್ಮಯ್ಯ ಮುಂದಿಟ್ಟು ಪೋದನೆ ನಿನ್ನ 12 ಕೇಳೊ ಕೇಳೊ ನುಡಿಯ ನೀನೀ- ರೇಳು ಲೋಕದ ಒಡೆಯ ಹೇಳೋ ಬುದ್ಧಿ ನಿನ್ನಯ ವಲ್ಲಭೆ ಮಾತಾ- ಡೋಳೊ ನಿರ್ಭಿಡೆಯ 13 ರಕ್ಕಸಾಂತಕ ಕೇಳೊ ನಿನ್ನ ಚಿಕ್ಕವಲ್ಲಭೆ ಮ(ಹಿ)ಮೆ ಉಕ್ಕಿ ಉಕ್ಕಿ ಎನ್ನ ಮ್ಯಾಲೆ ಬರಲು ನಿನ- ಗಕ್ಕರ ತೋರುವುದೆ 14 ಆರ್ಯಳೆಂದು ನಾನು ತಾಳಿದೆ- ನಕ್ಕ ರುಕ್ಮಿಣಿ ಮಾತ ಏರಿ ಏರಿ ಏನ್ನಮ್ಯಾಲೆ ಬರಲು ಇದು ನ್ಯಾಯವೇನೊ ನಿನಗೆ 15 ನಾಲ್ಕು ತೋಳಿನಿಂದ ಆಲಿಂಗಿಸಿ ಕಾಂತೆಯರಿಬ್ಬರನು ಯಾತಕಿಂಥ ಕದನವು ಘನವಾಯಿತು ಸಾಕು ಸಾಕುಯೆನುತ16 ವಾರಿಜಾಕ್ಷ ಕೇಳೋ ನಾರದ- ರ್ಹೂಡಿದರೀ ಜಗಳ ಪಾರಿಜಾತ ಸರಿಸವತಿಗೆ ಕೊಟ್ಟ- ರಿನ್ಯಾರು ಸೈರಿಸೋರ್ಹೇಳೊ 17 ನಂದನವನ ತರುವ ನಾ ತಂದಿಟ್ಟೆನಂಗಳದಲ್ಲೆ ಅಂದಿಬ್ಬರನಾನಂದವ ಬಡಿಸಿದ ಚೆಂದದಿಂದಲಿ ನಗುತ 18 ಭಾಮೆ ರುಕ್ಮಿಣಿ ಸಹಿತ ನಡುವೆ ಭೀಮೇಶ ಕೃಷ್ಣನು ಕುಳಿತ ಕಾಮನಯ್ಯನ ಚರಿತ್ರೆಯ ಪಾಡ- ಲಮೃತ ಪಾನವು ನಿರುತ 19
--------------
ಹರಪನಹಳ್ಳಿಭೀಮವ್ವ
ಕಂಡು ಎಂದಿಗೆ ಧನ್ಯಳಾಗುವೆ ನಾನು ಪಾದ ಪುಂಡರೀಕವನೂ ಪ. ಪುಂಡರೀಕನಿಗೊಲಿದು ಒಂದು ಇಟ್ಟಿಗೆ ಮೇಲೆ ಪಾಂಡವರ ಪ್ರಿಯ ಬಂಧು ನೆಲಸಿದಂಥಾ ಪಂಡರೀ ಕ್ಷೇತ್ರದಲಿ ಚಂದ್ರಭಾಗದಿ ಮಿಂದು ಮಂಡೆ ಬಾಗುತ ಹರಿಗೆ ಹಿಂಡಘವ ಕಳೆದೂ 1 ಕೋಮಲದ ಚರಣಕಭಿನಮಿಸಿ ಕರಯುಗದಿಂದ ಶ್ಯಾಮವರ್ಣನ ಪಾದಕಮಲ ಮುಟ್ಟೆ ಆ ಮಹಾ ಆನಂದ ಅನುಭವಿಪ ಭಾಗ್ಯವನು ಶ್ರೀ ಮಹಾಲಕುಮಿಪತಿ ಎಂದು ಕಾಂಬುವೆನೋ 2 ಆಪಾರಭಕ್ತರಿಗೆ ವಲಿದ ವಿಠಲನ ಮೂರ್ತಿ ಆಪಾದ ಮೌಳಿ ಈಕ್ಷಿಸುತ ಹೃದಯದಲಿ ಇರ್ಪಮೂರ್ತಿಯ ತಂದು ಗುರುಬಿಂಬ ಸಹಿತದಲಿ ಗೋಪಾಲಕೃಷ್ಣವಿಠಲನ ಎಂದು ಕಾಂಬೆ 3
--------------
ಅಂಬಾಬಾಯಿ
ಕಂಡು ಧನ್ಯಳಾದೆ ನಾ ಪಾಂಡುರಂಗವಿಠಲನಾ ಪ. ಕಂಡು ಧನ್ಯಳಾದೆ ಹರಿಯ ಪುಂಡರೀಕ ಪದದಿ ಎನ್ನ ಮಂಡೆ ಇಟ್ಟು ವಂದಿಸುತಲಿ ಪುಂಡರೀಕ ವರದ ನಾ ಅ. ದೂರದಿಂದ ಬಂದು ಹರಿಯ ಸೇರಿವಂದಿಸುತಲಿ ಈಗ ಹಾರಹಾಕಿ ನಮಿಸಿ ಮನೋ ಹಾರ ನೋಡಿ ದಣಿದೆನಿಂದು 1 ಗುರುಗಳಂತರ್ಯಾಮಿ ಹರಿಯ ಇರಿಸಿ ಎನ್ನ ಬಿಂಬ ಸಹಿತ ಸ್ಮರಿಸಿ ಚಿಂತಿಸಿ ವಿಠಲನಲ್ಲಿ ಕರುಣಮೂರ್ತಿ ಪಾಂಡುರಂಗನ 2 ಗುರುಪುರಂದರ ಸ್ತಂಭ ಕಂಡೆ ವರದ ಚಂದ್ರಭಾಗ ತೀರದಿ ಚರಣ ಇಟ್ಟಿಗೆಯಲಿ ಇಟ್ಟು ಸಿರಿ ಗೋಪಾಲಕೃಷ್ಣವಿಠಲನ 3
--------------
ಅಂಬಾಬಾಯಿ
ಕಂಡು ಧನ್ಯಳಾದೆ ನಾನೀಗ | ಈ ದಿವ್ಯ ಪಾದ ಕಂಡು ಧನ್ಯಳಾದೆ ನಾನೀಗ ಪ. ಕಂಡು ಧನ್ಯಳಾದೆನೀಗ ತಂಡ ತಂಡದ ಪಾಪಗಳನು ಪಾದ ಅ.ಪ. ಭಕ್ತ ನುಡಿಗೆ ಮನದಿ ಮರುಗಿ ಮುಕ್ತಿ ತೋರ್ವೆನೆಂದು ಬಂದು ಶಕ್ತನಾದ ಹರಿಯ ತೋರಿ ಪಾದ 1 ಕಮಲನಾಭನ ಭಜಿಪ ಪಾದ ಕಮಲಾಪತಿಗೆ ಪ್ರೀತಿ ಪಾದ ಕಮಲಪುಷ್ಪ ಹರಿಗೆ ಅರ್ಪಿಸಿ ಪಾದ 2 ತಂದೆ ಮುದ್ದುಮೋಹನರೆಂ- ತೆಂದು ಜಗದಿ ಮೆರೆವೊ ಪಾದ ನಂದ ಕಂದನ ಮನದಿ ತೋರಿ ಇಂದು ಆನಂದ ಕೊಡುವೊ3 ಪಾದೋದಕವÀ ಪಾನಮಾಡಿ ಪಾದಪದ್ಮ ನಂಬಿ ನಮಿಸಿ ಪಾದಕಮಲ ಸ್ತೋತ್ರಗೈವೆ 4 ಗೋಪಾಲಕೃಷ್ಣವಿಠ್ಠಲನ ರೂಪ ಮನದಿ ತೋರ್ವ ಪಾದ ಪಾಪಗಳನು ಧ್ವಂಸಗೈದು ಪಾದ 5
--------------
ಅಂಬಾಬಾಯಿ
ಕಂಡು ನಮಿಸಿದೆ ಸತ್ಯಬೋಧ ಮುನಿಯ ಮಂಡೆ ಬಾಗುತ ದೇಹ ದಂಡವಿಕ್ಕುತಲಿ ಪ. ಭವ್ಯ ಬೃಂದಾವನದಿ ವೈಭವದಿ ಮೆರೆವವರ ಸವ್ಯಸಾಚಿಯ ಸಖನ ಪ್ರಿಯ ಪಾತ್ರರ ದಿವ್ಯ ಕೂರ್ಮಾಸನದಿ ಕುಳಿತು ತಪಚರಿಸುವರ ಅವ್ಯಯಾತ್ಮನ ಚರಣ ಧ್ಯಾನ ಮಾಳ್ಪವರ 1 ವಿಷವಿಡಲು ಪಾಪಿಗಳು ರಾಮಗರ್ಪಿಸಿ ಭುಜಿಸೆ ನಿಶಿಯಲ್ಲಿ ನಿದ್ರೆ ಜೈಸುತ ನಿತ್ಯದಲಿ ಹಸನಾಗಿ ದೇವತಾರ್ಚನೆ ಭೋಜನವಗೈಯೆ ದೂಷಿಸಿದ ಕುಜನರಿಗೆ ರಾತ್ರೆ ಸೂರ್ಯನ ತೋರ್ದ 2 ಕಾಶಿಗ್ಹೋಗುವೆನೆಂಬ ಆಸೆ ಪೂರೈಸುವೊಡೆ ತಾ ಸ್ವಪ್ನದಲಿ ಬಂದು ಜಾಹ್ನವಿಯು ಪೇಳೆ ರಸರಹಿತವಾದ ವೃಕ್ಷದಿ ಗಂಗೆಯನೆ ತರಿಸಿ ತಾ ಸ್ನಾನಗೈದು ಭಾಗೀರಥಿಯ ಪೂಜಿಸಿದ3 ಪೇಳಲಳವಲ್ಲದಿಹ ಬಹಳ ಕೌತುಕ ಮಹಿಮೆ ಕಾಲಕಾಲಕೆ ತೋರಿ ಭಕ್ತರನು ಕಾಯ್ದು ಮೇಲಾದ ಮಧ್ವ ಶಾಸ್ತ್ರಾರ್ಣವದಿ ಈಜುತಲಿ ಲೀಲೆಯಿಂದಲಿ ಮಾಯ್ಗಳನೆ ಗೆದ್ದ ಮಹಿಮ 4 ಪ್ರತಿವರ್ಷ ಪಾಲ್ಗುಣದಿ ದ್ವಿತೀಯ ಪಕ್ಷದಿ ದ್ವಿತೀಯ ತಿಥಿಯಲ್ಲಿ ದಿವ್ಯ ಉತ್ಸವ ಕೊಳುತ ಸತತ ಈ ಸವಣೂರು ಕ್ಷೇತ್ರದಲಿ ನೆಲಸುತಲಿ ಚ್ಯುತರಹಿತ ಗೋಪಾಲಕೃಷ್ಣವಿಠ್ಠಲನ ಭಜಿಪೆ5
--------------
ಅಂಬಾಬಾಯಿ