ಒಟ್ಟು 1184 ಕಡೆಗಳಲ್ಲಿ , 98 ದಾಸರು , 1035 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಬಂದು ನಿಲ್ಲೋ ರಮಾಪತೆ ಬಂದು ನಿಲ್ಲೋ || ಬಂದು ನಿಲ್ಲೊ ನಿನಗೊಂದಿಸುವೆ ಗೋ | ವಿಂದ ಗೋವಳ ರಾಯ ಸಂದೇಹ ಮಾಡದೆ ಪ ಸದೋಷಿಗ ನಾನು ಸದಾ ನಿರ್ಮಲ ನೀನು || ಪಾದೋಪಾದಿಗೆ ಬೇಡಿಸುವದುಚಿತವಲ್ಲ 1 ಮನದೊಳು ಪೊಳದು ಚಿಂತನೆ ನೆಲೆಯಾಗಿ || ಘನಮಹಿಮನೆ ಮಧ್ವಮುನಿ ಮನಮಂದಿರ 2 ಕಡಗೋಲ ನೇಣ ಪಿಡಿದ ಪರಮಾನಂತ ||ಉಡುಪಿನ ಶ್ರೀಕೃಷ್ಣ ವಿಜಯವಿಠ್ಠಲರೇಯಾ 3
--------------
ವಿಜಯದಾಸ
ಬಯಸಿ ಕರೆದರೆ ಬರುವರೇನಯ್ಯಾ ನರಹರಿಯ ದಾಸರು ಬಯಸಿ ಕರೆದರೆ ಬರುವರೇನಯ್ಯಾ ಪ ಬಯಸಿಕರೆದರೆ ಬರುವರೇನೋ ಜಯಶ್ರೀ ಮುರಹರಿಯ ನಾಮ ಓದಿ ಕಳೆದುಕೊಂಡ ಶೂರರು ಅ.ಪ ಮಹ ವಿಷಯಲಂಪಟ ಬಿನುಗು ತ್ರಿಗುಣೆಂಬ್ಹೇಸಿಕೆಯ ಬಳಿದು ಸುಸ್ಸಂಗಶ್ರವಣ ಮನನದಿಂ ನಿಜಮೂಲ ಮರ್ಮರಿದು ಆಸನವ ಬಲಿದು ಲೇಖ್ಯದಮೇಲೆ ಘನ ಅನಂದದಿರುವರು 1 ಆರು ದ್ವಯಗಜ ಇಕ್ಕಡಿಯ ಗೈದು ಬಿಡದ್ಹಾರಿಬರುವ ಆರು ಹುಲಿಗಳ ತಾರ ಸೀಳೊಗೆದು ಬಲುಘೋರಬಡಿಪ ಆರುನಾಲ್ಕು ಶುನಕಗಳು ತುಳಿದು ಸತ್ಪಥವ ಪಿಡಿದು ಸಾರಾಸಾರ ಸುವಿಚಾರಪರರಾಗಿ ಮಾರನಯ್ಯನ - ಪಾರಮಹಿಮೆಯ ಅಮೃತ ಪೀರುವವರು 2 ತಾಸಿನ ಜಗಮಾಯವೆಂದರಿದು ಇದು ಸತ್ಯವಲ್ಲೆಂದು ಬೇಸರಿಲ್ಲದೆನುಭವದಿ ದಿನಗಳೆದು ಸುಚಿಂತದನುದಿನ ದಾಸದಾಸರ ಸಾಕ್ಷಿಗಳ ತಿಳಿದು ನಿಜಧ್ಯಾಸದ್ಹುಡಿಕ್ಹಿಡಿದು ನಾಶನಭವದ್ವಾಸನೆಯ ನೀಗಿ ಸಾಸಿರನಾಮದೊಡೆಯ ನಮ್ಮ ಶ್ರೀಶ ಶ್ರೀರಾಮಚರಣಕಮಲದಾಸರಾಗಿ ಸಂತೋಷದಿರುವರು 3
--------------
ರಾಮದಾಸರು
ಬರಹೇಳಮ್ಮಾ ಭಾವೇ ಮನೆಗೆ ಬಿರದಂಕ ಹರಿಯಾ| ಚರಣವನ್ನು ಗಾಣದೆನ್ನ ಚಿತ್ರನೆಲೆ ಗೊಳ್ಳದಮ್ಮಾ ಪ ಬಾಲೆಕೇಳೆ ಕುಂತಳೆ ಬೇಸರ ವಿದೇನೇ| ಪಾಲಗಡಲ ಮನೆಯಾ ಬಿಟ್ಟು ಪವನಾಹಾರನ ಪರ್ಯಂಕವನು| ಜಾಳಿಸಿ ತಾನ್ಯಾಕ ಪೋದನೇ ಜಲರುಹ ನಾಭ| ಕಾಲಿಲಲ್ಲದವನಾಗಿ ಕೊಂದು ತಮನನೀಗಿ| ಮ್ಯಾಲಗಿರಿಯ ಪೊತ್ತ ಮರರಿಗ ಮೃತವಿತ್ತಾ| ಭೂಲಲನೆ ಬಡಿಸಿ ಭೂವರಾಹೆನಿಸಿ| ಬಾಲಕರಿಯಲು ರೂಪ ಬೆಡಗಾ ವಿಡಿಸು 1 ಉಡುರಾಜದವನೆ ಕೆಳದೀ ಉನ್ನತಿಯ ನೋಡೇ| ಷಡ್ಗುಣೈಶ್ವರ್ಯವುಳ್ಳಾ ಸುರಮುನಿಸೇವಿತ ಪಾದಾ| ಬೇಡಿ ಭಾಗ್ಯವ ನೀಡುವ ಬಲುದೊರೆ ತಾನಾಗಿ| ಬಡಹಾರುವನಂತೆ ಭೂಮಿ ಬೇಡಿದನಂತೆ| ಕೊಡಲಿಪಿಡಿದರೆ ಸಕುಲ ಮಾಡಿದ ನಾಶಾ ವಡನೆ ವಾನರ ಸಂಗ ವಿರಹರಿಸಿ ಸುರತುಂಗಾ| ತುಡುಗತನದಿ ಬೆಣ್ಣೆತಿನ್ನುವರೆ ರನ್ನೆ 2 ಕರಿರಾಜ ಗಾಮಿನೀ ಕಿರೀಟ ಕುಂಡಲದಾ ಶಿವತ್ವಕುಂಡಲದಿಂದಾ| ಪರಮಪುರಷದೇವನು ಪೀತಾಂಬರಧಾರೀ| ಬರಿಯ ಬತ್ತೆಲೆಯಾಡಿ ಬೌದ್ಯರೋಳಗ ಕೂಡೀ| ತುರಗೀರಿಯ ವನರ ತುಳಿಸುತ ಸುರವರ ಮೊರೆಗೇಳಿ ಬಂದನು ಮನದೊಳು ನಿಂದನು| ಗುರು ಮಹಿಪತಿ ಪ್ರೀಯಾ ಗುಣಗಣನಿಲಯಾ3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಬರಿದೆ ಹಾಳು ಶರೀರ ಬಾಳು ಅರಿದಡಿದು ಮಹ ಟೊಳ್ಳು ಟೊಳ್ಳು ಪ ನಾರಿಪುರುಷರು ಮಾರಕದನದಿಂ ಸೇರಿ ಸುಖಿಸಲು ಜಾರಿದಿಂದ್ರಿಯ ಕಾರಣಾಗಿ ಮೂರುದಿನದಿ ತೋರಿ ಪೋಗ್ವಸಾರಮಯ 1 ಮಿಡುಮಿಡುಕಿ ಒಡಲಿಗಾಗಿ ದುಡಿದು ಮೂಢರಡಿಯ ಪಿಡಿದು ಬಿಡದೆ ರೋಗದೊಡನೆ ನರಳಿ ಪಡುತಕಷ್ಟ ಕಡೆಗೆ ಸಾಯ್ವ 2 ಪರರಸೇವೆ ನಿರುತಗೈದು ಪರಕೆ ಇಹ್ಯಕೆ ತಿರುಗಿ ತಿರುಗಿ ಗರುವದಿಂದ ಚರಿಸಿ ನಮ್ಮ ಸಿರಿಯರಾಮನ ಚರಣಕ್ಹೊಂದದ 3
--------------
ರಾಮದಾಸರು
ಬರುತಲಿಹರು ನೋಡಿ ಗುರುವರೇಣ್ಯ ಸುಖತೀರ್ಥ ಯತಿವರರು ಪ ಹರಿದು ಬರುವ ಸುರನದಿಯ ಪ್ರವಾಹದ ತೆರದಲಿ ಪರಿಪರಿ ಪರಿವಾರ ಸಹಿತ ಅ.ಪ ಕರದಲಿ ಪಿಡಿದಿಹ ದಂಡ ಕಮಂಡಲ ಕೊರಳೊಳು ತುಳಸಿಯ ಚಿಗುರಿನ ಮಾಲೆಯು ಅರಿವಾರಿಜ ಲಾಂಛನಗಳಿಂದೊಪ್ಪುವ ವರ ದ್ವಾದಶ ನಾಮಗಳನು ಧರಿಸುತ 1 ಯತಿಗಳು ಗೃಹಿಗಳು ಬ್ರಹ್ಮಚಾರಿಗಳು ಶತಶತ ಸಂಖ್ಯೆಗಳಲಿ ಸೇರಿಹರು ಅತಿ ಸಂಭ್ರಮದಲಿ ನೋಡಲು ಪುರುಷ ರತುನವು ಮಾರ್ಗದ ಖತಿಪರಿಹರಿಸುತ 2 ಅವನಿಸುರರು ಮುಂಬದಿಯಲಿ ತಮ್ಮಯ ಕವಿತೆಗಳಲಿ ಗೋವಿಂದನ ಗುಣಗಳ ನವ ನವ ಸ್ವರದಲಿ ಪಾಡುತ ಕುಣಿಯಲು ಶ್ರವಣ ನಯನಕಾನಂದವ ಬೀರುತ 3 ತ್ವರೆಯಲಿ ಸರಿದು ತಾ ಬರುತಿರೆ ಯುವ ಕೇ- ಸರಿಯ ಧಿಕ್ಕರಿಸುವ ಸಂಭ್ರಮ ಗಮನ ಚರಣಯುಗಳ ಕಾಂತಿಯ ಪಸರಿಸುತಲಿ ಧರಣಿಯ ಪಾವನ ಮಾಡುವ ಬಗೆಯಲಿ 4 ಏನಿರಬಹುದೆಂದು ನೋಡುವರಿಗೆ ಕಾಣಿಸುವುದು ತೇಜದ ಪುಂಜ ಭೂನಿಲಯವ ಬೆಳಗಲು ಅತಿ ನೂತನ ಭಾನು ಉದಯಿಸಿದ ತೆರದಲಿ ಪೊಳೆಯುತ 5 ಪದುಮರಾಗ ಕಾಂತಿಯ ಮೀರಿದ ನಖ ಕೂರ್ಮ ಪ್ರಪದಗಳು ವಿಧಿಭವಮುಖ ಸುರಸೇವಿತ ಜಂಘವು ಮದಗಜ ಕರವನು ಪೋಲುವ ತೊಡೆಗಳು 6 ಪುಷ್ಪ ನಿತಂಬಗಳಲಿ ಪೊಳೆಯುತಲಿಹ ರೇಷ್ಮೆಯ ವಸ್ತ್ರವ ಧರಿಸಿಹರು ಕುಕ್ಷಿಲಲಾಟ ಶಿರೋಧರಗಳಲತಿ ಶ್ರೇಷ್ಠದ ತ್ರಿವಳಿಗಳಿಂದ ರಾಜಿಸುತ7 ಕೆಚ್ಚಿನ ವಕ್ಷಸ್ಥಳವತಿ ಸುಂದರ ಉಚ್ಚ ಪೀವರದ ಸ್ಕಂಧಯುಗಳವು ಸ್ವಚ್ಛದ ಕೆಂಬಣ್ಣದ ಕರತಲದಲಿ ಬಿಚ್ಚಿ ಹಾರುತಿಹ ಧ್ವಜಲಾಂಛನದಿ 8 ಚಂದಿರ ಬಿಂಬವಿದೋ ಪ್ರೇಕ್ಷಕರಾ ನಂದತರಂಗವ ಉಕ್ಕಿಸುತಿಹುದು ಒಂದು ಕಳಂಕವು ಕಾಣದಿರುವ ಅತಿ ಸುಂದರ ಪುರುಷವರೇಣ್ಯರು ಸೊಗಸಿಲಿ 9 ಸುಂದರ ಮಂದಸ್ಮಿತದಿಂ ಶೋಭಿಪ ಕುಸುಮ ತೆರದಲಿ ದಂತಗಳು ಮಂದಿಗಳಿಗೆ ಬಲು ಹರುಷವಿತ್ತು ಅರ ವಿಂದ ನಯನ ಆನಂದತೀರ್ಥ ಮುನಿ 10 ಕಿವಿಯಲಿ ಪೊಳೆಯುವ ತುಳಸಿಯದಳಗಳು ಅವಿರಳ ತೇಜದಿ ಹೊಳೆಯುವ ಕಪೋಲ ಭುವನತ್ರಯಗಳಭೀಷ್ಟವ ನೀಡುವ ಸುವಿಮಲ ಸುಂದರ ಭ್ರಕುಟಿ ವಿಲಾಸದಿ 11 ಅಕಲಂಕ ಶರೀರರು ಬರುತಿಹುದನು ಸಕಲ ಕಲಾಕುಶಲರು ನೋಡಿ ಶಕುತಿಗೆ ಮೀರಿದ ಮಾದರಿಯೆಂದರು ಪ್ರಕೃತಿ ಮಧುರ ಸರ್ವಾಂಗ ಸುಂದರರು 12 ಕಾಂತಿ ಸುಧೆಯ ಪಾನವ ಮಾಡಿರಿ ಸುಖ ಶಾಂತಿ ನಿಲಯರಾಶ್ರಯದಲಿ ಬಾಳಿರಿ ಚಿಂತೆ ಸಂತಾಪಗಳೆಲ್ಲವ ತೊಳೆಯಿರಿ ಸಂತತ ಹರಿದಾಸ್ಯದಲಿ ಪ್ರಸನ್ನರು 13
--------------
ವಿದ್ಯಾಪ್ರಸನ್ನತೀರ್ಥರು
ಬರುವ ಹಾದಿಯ ಪೇಳೆ ಶ್ರೀಹರಿಬರುವ ಹಾದಿಯ ಪೇಳೆ ಪ ಬರುವ ಹಾದಿಯ ಪೇಳೆ ಬರುವೆನು ಅಲ್ಲಿಗೆ ಪರಮ ಮಂಗಳ ದ್ರವ್ಯ ಕರದಿ ತೆಗೆದುಕೊಂಡು ಅ.ಪ. ಉತ್ತರ ದಿಕ್ಕಿನಲ್ಲಿ ಇರುತಿಹ ಉತ್ತಮ ಪುರದಲ್ಲಿಮುಕ್ತ ಜನರು ಅವನ್ಹತ್ತಿರ ಇರುವರು ಇತ್ತ ಬಿಡುವರೇನೇ ಏನೇ 1 ಗರುಡನ ಏರಿಹನೆ ತೊಡಿಯೊಳು ತರುಣಿಯ ಕೂಡಿಹನೆಶರಣಾಗತರನು ಪೊರೆವಗೋಸುಗ ತನ್ನ ಪುರವಬಿಟ್ಟಿಹನೇನೇ ಏನೇ 2 ಛತ್ರವ ಪಿಡಿದಿಹರೆ ಚಾಮರ ಸುತ್ತಲು ಬೀಸುವರೇಮತ್ತೆ ಘನ್ನೋದಕ ದಾಟಿ ಬ್ರಹ್ಮನ ಮನಿ ಹತ್ತಿರಬಂದಿಹನೇ ಏನೇ 3 ಸುರಪುರ ಬಿಟ್ಟಿಹನೆ ಕರಿಪುರ ಹತ್ತಿರ ಬಂದಿಹನೆಸ್ಮರಿಸಿ ದ್ವಾರಕೆಯನು ಕುರುಕುಲದಲ್ಲಿ ವಸ್ತಿ ಇರಳುಮಾಡಿದನೇನೇ ಏನೇ 4 ಇಂದು ಈ ಪುರದಲ್ಲಿ ಮನ್ಮನ ಮಂದಿರ ಮಧ್ಯದಲೀಇಂದಿರೇಶನು ಕೃಷ್ಣ ಸುಂದರ ಮೂರುತಿ ಬಂದು ತೋರುವನೇ ನೇ 5
--------------
ಇಂದಿರೇಶರು
ಬಲು ರಮ್ಯವಾಗಿದೆ ಹರಿಯ ಮಂಚ ಪ ಎಲರುಣಿಕುಲ ರಾಜ ರಾಜೇಶ್ವರನ ಮಂಚಅ.ಪ. ಪವನತನಯನ ಮಂಚ ಪಾವನತರ ಮಂಚ ಭುವನತ್ರಯನ ಪೊತ್ತ ಭಾರಿಮಂಚ ಕಿವಿಗಳಿಲ್ಲದ ಮಂಚ ಶ್ರೀನಿಕೇತನ ಮಂಚ ಶಿವರೂಪದಲಿ ಹಿಂದೆ ಹರಿಯನೊಲಿಸಿದ ಮಂಚ 1 ನೀಲಾಂಬರವನುಟ್ಟು ನಳನಳಿಸುವ ಮಂಚ ನಾಲಗೆ ಎರಡುಳ್ಳ ನೈಜಮಂಚ ನಾಲ್ವತ್ತು ಕಲ್ಪದಿ ತಪವ ಮಡಿದ ಮಂಚ ತಾಲ ಮುಸಲ ಹಲವ ಪಿಡಿದಿರುವ ಮಂಚ 2 ರಾಮನನುಜನಾಗಿ ರಣವ ಜಯಿಸಿದ ಮಂಚ ತಾಮಸ ರುದ್ರನನು ಪಡೆದ ಮಂಚ ಭಿಮಾವರಜನೊಳು ಆವೇಶಿಸಿದ ಮಂಚ ಜೀಮೂತ ಮಂಡಲವ ತಡೆಗಟ್ಟಿದ ಮಂಚ 3 ಜೀವನಾಮಕನೆನಿಸಿ ವ್ಯಾಪ್ತನಾದ ಹರಿಯ ಸೇವಿಸಿ ಸುಖಿಸುವ ದಿವ್ಯ ಮಂಚ ಸಾವಿರ ಮುಖದಿಂದ ತುತ್ತಿಸಿ ಹಿಗ್ಗುವ ಮಂಚ ದೇವಕೀಜಠರದಿ ಜನಿಸಿದ ಮಂಚ4 ವಾರುಣೀ ದೇವಿ ವರನೆನಿಸಿದ ಮಂಚ ಸಾರುವ ಭಕುತರ ಸಲಹೊ ಮಂಚ ಕಾರುಣ್ಯನಿಧಿ ಜಗನ್ನಾಥ ವಿಠಲನ ವಿ ಹಾರಕ್ಕೆ ಯೋಗ್ಯವಾದ ವಿಮಲ ಶೇಷ ಮಂಚ5
--------------
ಜಗನ್ನಾಥದಾಸರು
ಬಲ್ಲಿದನಲ್ಲೇನು ಶ್ರೀಹರಿ ಬಲ್ಲಿದನಲ್ಲೇನು ಪ ಬಲ್ಲಿದನಲ್ಲೇನು ಖುಲ್ಲಮನವೆ ತಿಳಿ ಎಲ್ಲ ಲೋಕಗಳ ನಲ್ಲನಾಗಿಹ್ಯನೀತ ಅ.ಪ ಕಡುದಯದಿಂದಿನ್ನು ಪಿಡಿದು ಬಿಡದೆ ಪಾಂಡವರನ್ನು ಪೊಡವಿನೆಲ್ಲ ಒಂದೆ ಕೊಡೆಯಿಂದಾಳಿಸಿದ ಎಡರು ತಾರದಂತೆ ಒಡೆಯ ಮುಕ್ಕುಂದನೀತ 1 ಧೂರ್ತ ಹಿರಣ್ಯಕನ ಕರದಿಂ ಭಕ್ತ ಪ್ರಹ್ಲಾದನ್ನ ಸ್ವಸ್ಥದಿಂದ ದಯವಿತ್ತು ಕಾಯ್ದನಿಗೆ ದಾರು ಸರಿ ಅರ್ತುನೋಡಲೀತ 2 ಉರಿಹಸ್ತ ಪಡೆದವನ ಕ್ಷಣದಿಂ ಉರುವಿದ ಮಾರಮಣ ಭರದಿಂ ತ್ರಿಪುರರ ಹರಿದಿಯರ್ವ್ರತ ಕೆಡಿಸ್ಹರನ ಮೊರೆಯ ಕೇಳಿ ಸುರರ ಸಲಹಿದೀತ 3 ಮೀರಿದ ಅಸುರರನು ತರಿದು ಸಾರುವ ಬಿರುದನ್ನು ಅ ಪಾರ ಶೂರ ದನುಜಾರಿ ಭಕ್ತ ಸಹಕಾರಿ ಶೌರಿ ನಿಜ ಮೂರು ಜಗದಿ ಈತ 4 ಜಡಮತಿ ಮಾನವರ ನುಡಿಗಳು ದೃಢಲ್ಲೆಲೊ ಪೂರ ಪೊಡವಿಗಧೀಶ ನಮ್ಮ ಒಡೆಯ ಶ್ರೀರಾಮನಡಿ ದೃಢದಿ ನಂಬು ಭವತೊಡರ ಕಡಿವನೀತ 5
--------------
ರಾಮದಾಸರು
ಬಳೆಯ ತೊಡಿಸಿದ ಭಾಗ್ಯಪುರುಷನೂ ನಳಿನಾಕ್ಷಿಕೈಗೆ ಪ ಮಣಿ ಕರಗಳಿಗೆ ತಕ್ಕ ಅರುಣಮಯ1 ಬಳೆಗಳನೆ ತಂದು ಕರಗಳನೆ ಪಿಡಿದು 1 ಇಳೆಯಪತಿ ಬಳೆಗಾರನಾಗುತ ಪೊಳಲು ಎಲ್ಲ ಸಂಚರಿಸುತ ನಳಿನಮುಖಿಯ2 ಕಂಡು ನಗುತಲಿ ಕರವ ಪಿಡಿದು3 2 ಮಾನನಿಧಿ ಪ್ರಾಣನಾಥವಿಠಲನುಸಾನುರಾಗದಿಭಜಿಸುವರ ಸುರ ಧೇನು ವಂದದಿ ಸಲಹುವನಂತೆ ಮಾನಿನಿಯಮನಕೆ ಒಪ್ಪುವೊ 3
--------------
ಬಾಗೇಪಲ್ಲಿ ಶೇಷದಾಸರು
ಬಾಗಿಲನು ತೆರೆದು ಸೇವೆಯನು ಕೊಡು ಹರಿಯೆಕೂಗಿದರು ಧ್ವನಿ ಕೇಳಲಿಲ್ಲವೇ ನರಹರಿಯೇ ಪ ಪರಮ ಪದದೊಳಗೆ ವಿಷಧರನ ತಲ್ಪದಲಿ ನೀಸಿರಿ ಸಹಿತ ಕ್ಷೀರವಾರಿಧಿಯೊಳಿರಲುಕರಿರಾಜ ಕಷ್ಟದಲಿ ಆದಿಮೂಲಾ ಎಂದುಕರೆಯಲಾಕ್ಷಣ ಬಂದು ಒದಗಿದೆಯೊ ನರಹರಿಯೆ 1 ಕಡುಕೋಪದಿಂ ಖಳನು ಖಡುಗವನು ಪಿಡಿದು ನಿ-ನ್ನೊಡೆಯನೆಲ್ಲಿಹನೆಂದು ಜಡಿದು ನುಡಿಯೆದೃಢ ಭಕುತಿಯಲಿ ಶಿಶುವು ಬಿಡದೆ ನಿನ್ನನು ಭಜಿಸೆಸಡಗರದಿ ಕಂಬದಿಂದೊಡೆದೆ ನರಹರಿಯೆ 2 ಯಮಸುತನ ರಾಣಿಗಕ್ಷಯ ವಸನವನ್ನಿತ್ತೆಸಮಯದಲಿ ಅಜಮಿಳನ ಪೊರೆದೆಸಮಯಾಸಮಯವುಂಟೆ ಭಕ್ತವತ್ಸಲ ನಿನಗೆಕಮಲಾಕ್ಷ ಕಾಗಿನೆಲೆಯಾದಿಕೇಶವನೆ 3
--------------
ಕನಕದಾಸ
ಬಾಗಿಲನು ತೆರೆದು ಸೇವೆಯನು ಕೊಡು ಹರಿಯೇ ಕೂಗಿಡುವ ಧ್ವನಿಯು ಕೇಳುವುದಿಲ್ಲವೇ ನಿನಗೆ ಪ ಪರಮಪದದೊಳಗೆ ವಿಷಧರನ ತಲ್ಪದೊಳು ಇಂ ದಿರೆಯರಸಿ ಹರುಷವಾರಿಧಿಯೊಳಿರಲೂ ಕರಿ ಗುಪ್ತಕಂಠಧ್ವನಿಯಿಂದಾದಿಮೂಲವೆಂದೊದರೆ ಆಕ್ಷಣ ಕರಿಯ ಕಾಯ್ದೆ ಜಗವರಿಯೆ 1 ಕಡುಮುನಿಸಿನಿಂ ಖಳನು ಖಡ್ಗವನು ಪಿಡಿದು ನಿ ನ್ನೊಡೆಯರಾರೆಂದು ತೋರೆನುತ ಬಡಿಯೆ ದೃಢಭಕುತ ಶಿಶುವು ಕಂಗೆಡದೆ ನಿನ್ನನು ಕರೆಯೆ ಘುಡಿಘುಡಿಸಿಕಂಬದಿಂದೊಡೆದು ಮೂಡಿದೆ ಹರಿಯೆ 2 ಯಮಸುತನರಾಣಿಗಕ್ಷಯ ವಸ್ತ್ರವನಿತ್ತು ಕ್ರಮದಿಂದ ಅಜಮಿಳನ ಪೊರದೆ ಅಂದೂ ಸಮಯಾಸಮಯ ಉಂಟೆ ಭಕುತವತ್ಸಲ ನಿನಗೆ ಕಮಲಾಕ್ಷ ವೈಕುಂಠಚನ್ನಕೇಶವ ಬೇಗ 3
--------------
ಬೇಲೂರು ವೈಕುಂಠದಾಸರು
ಬಾರನ್ಯಾತಕ ಯದು ವೀರಾ|ಪದಾಂಬು ಜವದೋರಾ| ದಯರಸವಾಬೀರಾ| ಸಾರಿದವರಿಗಿನ್ನುದರಾವಾಗಿರಾ ಧೀರಾ ಪ ಮಂದ ಮುಗುದೆಯು ನಾನೆಂದು ಅರಿತು ಮೊದಲಿಂದು| ಕೈಯ್ಯ ಪಿಡಿದು ಬಂದು| ಕುಂದಾಲಿಸುವ ದಯಸಿಂಧು|ಉಚಿತ ವೇನಿಂದು 1 ಎನ್ನ ಬಿನ್ನಹ ಹೇಳಲೇ ಜಾಣೇ| ತಾಪಕೌಷಧಕಾಣೆ| ಕ್ಷಣಯುಗವ ನಿನ್ನಾಣೆ| ಮನ್ನಿಸಿ ತಂದು ತೋರಿನ್ನೆನೆ ಬಾರೇ ಪ್ರವೀಣೇ 2 ಶರಣ ಹೊಕ್ಕವರೆಂದು ಮರೆಯಾ|ನೆಂಬ ಮಾತಿದು ಖರೆಯಾ ಬಂದು ಕೂಡಿದ ತ್ವರಿಯಾ| ಗುರು ಮಹಿಪತಿ ಸ್ವಾಮಿಚರಿಯಾ ಬೊಮ್ಮತಾನರಿಯಾ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಬಾರಪ್ಪ ನೀ ಬಾರಪ್ಪಾ ಭಾರತಿರಮಣಾ ಮುಖ್ಯಪ್ರಾಣಾಗೋ'ನದಿನ್ನಿ ಹಣ್ಣಮಪ್ಪಾ ನೀ ಗಾಲವ ಕ್ಷೇತ್ರಕೆ ಬಾರಪ್ಪಾ ಪಗಾಲವಕ್ಷೇತ್ರಕ್ಕೆ ಬಾರಪ್ಪಾ ನೀ ಹೋಳಿಗೆತುಪ್ಪಾ ಹೊಡೆಯಪ್ಪಾಕೃಷ್ಣವೇಣಿಯ ತಟದ ಶಿಲೆಯೊಳು ಒಡಮೂಡುತ ನೀ ಇದ್ದೆಪ್ಪಾ1ಶಿಷ್ಟರಾದ ಶ್ರೀ ಉಮರ್ಜಿ ಆಚಾರ್ಯರ ನಿಷ್ಠೆಗೆ ಒಲಿದು ಬಂದೆಪ್ಪಾಶರಧಿಗೆ ಜಿಗಿದು ಸೀತಾದೇ'ಗೆ ರಾಮಮುದ್ರಿಕೆಯ ಕೊಟ್ಟೆಪ್ಪಾದುರುಳ ರಾವಣನ ಲಂಕಾಪಟ್ಟಣ ಸುಟ್ಟ ಕಪಿವರನು ನೀನಪ್ಪಾದುಷ್ಟ ಕೌರವನ ತೊಡೆಯ ಒಡೆದು ಗದೆಪಿಡಿದ ಭೀಮ ನೀ ಹೌದಪ್ಪಾ 2ದುಃಶಾಸನನ ಕರುಳ ಬಗೆದು ನರಸಿಂಹನ ಪ್ರೀತಿ ಪಡೆದೆಪ್ಪಾಹರಿಯದ್ವೇಗಳ ದುರ್ಮತಗಳನು ಮುರಿದು ಮಧ್ವಯತಿ ಆದೆಪ್ಪಾರಾಶಿ ರಾಶಿ ಸದಗ್ರಂಥ ರಚಿಸಿ ನೀ ವ್ಯಾಸರ ಸನ್ನಿಧಿ ಪಡೆದೆಪ್ಪಾಕೃಷ್ಣವೇಣಿತಟ ನರಾಹರಿ ಇರುವನು ರಾಯರು ಇರುವರು ಬಾರಪ್ಪಾ 3ಎಲ್ಲಿ ನರಹರಿ ಎಲ್ಲಿ ರಾಯರು ಅಲ್ಲಿ ನೀ ಇರಬೇಕಪ್ಪಾಪಾಪಿಷ್ಠರ ಗತಿಭಯಂಕರನು ನೀಪುಣೈವಂತರಿಗೆ ಸುಲಭಪ್ಪಾಭೂಪತಿ'ಠ್ಠಲನ ಭಕ್ತರ ಪೊರೆಯಲು ನೀ ಗಾಲವ ಕ್ಷೇತ್ರಕೆ ಬಾರಪ್ಪಾ 4ರುದ್ರದೇವರು
--------------
ಭೂಪತಿ ವಿಠಲರು
ಬಾರಯ್ಯ ದಯೆದೋರಯ್ಯ ನೀರಜನಾಭನೆ ಕರುಣಿಸು ಮಹರಾಯ ಪ ಸಂಸಾರಸರಕಿನೊಳು ಸಿಲುಕಿ ನಾ ಬಳಲುವೆ ಶಿಶುವಿನೊಳು ದಯವಿಟ್ಟು ಸೆರೆ ಬಿಡಿಸೆನ್ನಯ್ಯ 1 ಪುಸಿನುಡಿ ನುಡಿದು ನಾ ದೆಸೆ ಬಾಯ ಬಿಡುವೆನು ಕುಸುಮಾಕ್ಷ ಪಿಡಿದೆನ್ನ ಹಸನ ಮಾಡೆನ್ನಯ್ಯ2 ಜಡಭವತೊಡರನು ಗಡನೆ ಕಡೆಹಾಯ್ಸಿ ನಿ ನ್ನಡಿಭಕ್ತಿ ಕೊಡು ಬೇಗೆನ್ನೊಡೆಯ ಶ್ರೀರಾಮಯ್ಯ 3
--------------
ರಾಮದಾಸರು
ಬಾರೆಂದು ಹಸೆಗೆ ಕರೆವೆÀನು ಕ್ಷೀರಾಬ್ಧಿಶಯನನೆ ಸಾರಸನಯನನೇ ಪ. ಕ್ಷೀರಾಬ್ಧಿಜಾವರ ಮೇರುಗಂಭೀರನೆ ನೀರಜಭವಪಿತ ಮಾರಹರಾರ್ಚಿತ ಚಾರುನೀರದಗಾತ್ರ ಪರಮ ಪವಿತ್ರ ಅ.ಪ ಧರಣೀಸುರರ ಮೊರೆಗಳನಾಲಿಸಿ ಧರೆಯೊಳಗವತರಿಸಿ ನರರೂಪಧರಿಸಿ ಧರಣಿಪ ದಶರಥತರಳನೆಂದೆನಿಸಿ ಧರೆಯ ಭಾರವನಿಳಿಸಿ ಕರುಣಿಸು ಮನವೆರಸಿ 1 ಅಸುರೆ ತಾಟಕಿಯ ಅಸುವನಳಿದು ದುಷ್ಟ ನಿಶಿಚರರನು ಸದೆದು ಅನುಜನೊಡಗೊಂಡು ಕುಶಿಕನಂದನನ ಕ್ರತುವನು ತಾ ಕಾಯ್ದು ಅಸಮ ಶೂರನೆನಿಸಿ ಅಮರರ ಮನತಣಿಸಿ 2 ಶಿಲೆಯ ಶಾಪವಕಳೆದು ಲಲನೆಯ ಪೂಜೆಗೊಲಿದು ಬಲುಹಿನಿಂದಲೆ ಬಂದು ಹರಧನು ಮುರಿದು ಲಲನೆ ಜಾನಕಿಯ ನಲವಿನಿಂ ಕೈಪಿಡಿದು ಬಲುಗರ್ವಿತ ಭಾರ್ಗವ ಮದಮುರಿದೆ ಸಲಹೆನ್ನ 3 ಈಶವಿನುತ ಶ್ರೀ ಶೇಷಾಚಲ ನಿಲಯನೆ ದಾಸರಮನದೊಳು ವಾಸವಾಗಿಹನೇ ವಾಸವಾದ್ಯಮರ ಪೋಷಕನೆನಿಸಿಹನೆ ಭಾಸುರವದನನೆ ಶ್ರೀಸತೀಸದನನೆ ನೀಂ ನಲಿದು 4
--------------
ನಂಜನಗೂಡು ತಿರುಮಲಾಂಬಾ