ಒಟ್ಟು 1263 ಕಡೆಗಳಲ್ಲಿ , 109 ದಾಸರು , 1093 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಬಾರೋ ನೂತನ ಗೃಹಕೆ ಹರಿಯೆ ಸಿರಿ ಮಾರುತ ಮುಖಸುರರೊಡಗೂಡಿ ಧೊರಿಯೆ ಪ ಯಾರು ಕೇಳದಲಿಹ ಸ್ಥಳವ ನೀನೆ ಪ್ರೇರಿಸಿ ಗೃಹವ ನಿರ್ಮಿಸಿದೆಯೋ ದೇವ ನೂರಾರು ಪರಿರೂಪಾಂತರವ ಪೊಂದಿ ಈ ರೀತಿ ನವಸುಸಂಸ್ಕøತವಾದ ಗೃಹವ 1 ಈರಪ್ಪÀ ಬಡಿಗನೆಂಬುವನು ಮನಿಯ ಚಾರುತನದಲಿಂದ ನಿರ್ಮಿಸಿರುವನು ತೋರುವ ಸಿಂಹಾಸನವನು ಮಧ್ಯಾ ಗಾರದಿನಿನಗಾಗಿ ವಿರಿಚಿಸಿಹನು 2 ಸುತ್ತಲು ನಿರ್ಭಯವಿಹುದು ವಂ - ಭತ್ತು ದ್ವಾರಗಳಿಂದ ಶೋಭಿಸುತಿಹುದು ಹತ್ತಿರೆ ಗುರುಗೃಹ ವಿಹುದು ಮುಂದೆ ಚಿತ್ತಜನಯ್ಯನ ಮಂದಿರ ವಿಹುದು 3 ಉತ್ತಮ ಗೃಹವೆನಿಸುವದು ಇ - ಪ್ತತ್ತುನಾಲಕುವಸ್ತುಗಳಕೂಡಿಹುದು ಸುತ್ತೇಳು ಪ್ರಾಕಾರವಿಹುದು ಸುತ್ತು ಮುತ್ತಲು ದ್ವಿಜಜನಹೊಂದಿ ಕೊಂಡಿಹುದು 4 ಗೃಹವುನಾಲ್ಕು ವಿಧವಿಹುದು ಸೂಕ್ಷ್ಮ ಗೃಹ ನಿನಗಾಗಿಯೆ ನೇಮಿಸಿಯಿಹುದು ಬಹಿರದಿ ಪಾಕಗೃಹ ವಿಹುದು ಅಲ್ಲಿ ಗೃಹಿಣಿಯಿಂ ತ್ರಿವಿಧಾನ್ನ ಪಕ್ವಗೈತಿಹುದು5 ನಡುಮನೆ ದೊಡ್ಡದಾಗಿಹುದು ಅಲ್ಲಿ ಸಡಗರದಲಿ ಬ್ರಹ್ಮವೃಂದ ಕೂಡುವದು ಬಿಡದೆ ಸತ್ಕಥೆನಡೆಯುವದು ಮುಂದೆ ಪಡಸಾಲೆಯಲಿ ಸರ್ವಜನ ಸಭೆಯಹುದು 6 ಶ್ವಸನ ಮಾರ್ಗವಲಂಬಿಸಿರುವೆ ಮನಿಯ ಹಸನ ಮೆಹದೀನಾದಿಯಿಂ ಮಾಡಿಸಿರುವೆ ಹೊಸಸುಣ್ಣವನು ಹಚ್ಚಿಸಿರುವೆ ಏಕಾ ದಶ ಸೇವಕರ ನಿನ್ನ ವಶದೊಳಿರುಸುವೆ 7 ನಾನಾಧನ ನಿನಗರ್ಪಿಸುವೆನು ತನು ಮಾನಿನಿಸಹ ನಿನ್ನಾಧೀನ ಮಾಡುವೆನು ಜ್ಞಾನಭಕ್ತಿಯೆ ಇಚ್ಛಿಸುವೆನು ನಿನ್ನ ಧ್ಯಾನಾನಂದದಿ ಧನ್ಯನೆಂದಿನಿಸುವೆನು8 ಹರಿಯೆ ಲಾಲಿಸು ಎನ್ನ ಸೊಲ್ಲಾ ಮುಂದೀ - ಪರಿಗೃಹದೊರೆವುದು ಸುಲಭವೇನಲ್ಲಾ ¨ರೆ ನಿನ್ನ ಬಿಡೆನೊ ಶ್ರೀ ನಲ್ಲಾ ಎನ್ನ ಮೊರೆಯ ನಾಲಿಸಿ ನೋಡೋ ವರದೇಶವಿಠಲಾ9
--------------
ವರದೇಶವಿಠಲ
ಬಾರೋ ಶ್ರೀ ಕೃಷ್ಣವಿಠಲ ಮನ್ಮನ ದೈವ ಪ ಮೆಲ್ಲಮೆಲ್ಲನೆ ಪದ ಪಲ್ಲವ ವಿಡುತಲಿ ಗುಲ್ಲು ಮಾಡದೆ ಭವ ದಲ್ಲಣಗೊಳಿಸು ವಲ್ಲಭ ಸಿರಿಸಹ ನಿಲ್ಲದೆ ಮನೆಯೊಳು ಬಲ್ಲಿದರಿಗೆ ಬಹು ಬಲ್ಲಿದನೆನಿಸಿಹ ಅ.ಪ. ನೆಗೆಯುವ ನಿಲ್ಲುತೆ ಚಿಗರಿಯ ತೆರೆದನು ರಾಗದಿನೋಡುತ ಬಗೆ ಬಗೆ ಹರ್ಷದ ನಗೆಮೊಗಹಾಸದಿ ಬಿಗಿಯುತ ಮನ ಅಗಣಿತ ಗುಣನಿಧಿ 1 ಸಾಗರನಳಿಯನೆ ಸಾಗರಶಯನನೆ ಯಾಗ ಸುಭೋಕ್ತನೆ ಯೊಗಿಗಳರಸನೆ ಬಾಗುವೆ ಚರಣದಿ ಸಾಗುತ ಮನ ಬಡ ಬಡ ನೀಗಿಸಿ ಮಲಮನದಾಗಸಗೀಗಲೆ 2 ಕುಣಿಸುತ ಹುಬ್ಬನು ಉಣಿಸುತ ಭಕ್ತಿಯ ತನುಮನವೆಲ್ಲವ ಮಿನುಗಿಸಿ ಜ್ಞಾನವÀ ಧಣಧಣ ತಾಳಕೆ ಅಭಿನಯಸಹಿತದಿ ಕುಣಿಯುತ ಕುಣಿಸುತ ದಣಿಸದೆ ಕರುಣದಿ 3 ಕರ್ಜಿಸಿ ರಾಮದ ಕಜ್ಜಿಯಮನದಿಂ ಮಜ್ಜನಗೈಸುತ ಭಕ್ತಿಯಕಡಲಲಿ ಗೆಜ್ಜೆಯಕಟ್ಟಿಸಿ ಹೆಜ್ಜೆಹೆಜ್ಜೆಗೆ ಪೂ- ರ್ವಾರ್ಜಿತವೆಲ್ಲವ ಭರ್ಜನೆ ಗೈಸಲು 4 ಇಂದಿರೆಯರಸನೆ ಚಂದ್ರನ ಹಳಿವನೆ ಛಂದಸುವೇದ್ಯನೆ ಬಂಧ ಸುಮೋಚಕ ಬಂಧುವೆ ಸರ್ವರ ಮಂದಜಭವಪಿತ ತಂದೆಯೆ ವಿಶ್ವದ ನಂದವ ನೀಡಲು 5 ವೇದವ ತಂದವ ವೇದನ ಪೊರೆದವ ಭೂಧರ ಪೊತ್ತವ ಮಾಧವನಾದವ ಮೋದವ ತಂದವ ಖೇದವ ತರಿದವ ಮೇದಿನಿ ಪೊರೆದವ ಛೇದಿಸಿ ಬಂದವ 6 ಮೇದಿನಿ ಇತ್ತವ ಮೇದಿನಿಸುತೆಯಳ ಮೋದದಲಾಳ್ದವ ಮೇದಿನಿಸುತಹರ ವೇದವ ಕಾಯ್ದವ ಛೇದಿಸಿ ಕಲಿಗಣ ಹಾದಿಯ ತೊರುವ 7 ನಂದನಂದ ಅರವಿಂದ ನಯನ ಬಹು ಸುಂದರತಮಶ್ರೀ ಮಂದಿರ ಗೋಕುಲ ಚಂದಿರ ಶುಭಗುಣಸಾಂದ್ರ ಮಹೋಜಸ ಇಂದ್ರನ ಹಳಿದ ಮಹೇಂದ್ರ ಪರಾತ್ಪರ8 ಗೋಪಿಕಂದ ಬಹು ಗೋಪಿಕಾಮಸ್ತ್ರೀ ರೂಪಧಾರಿ ನಗಚಾಪವರದ ಶಿವ ಭಂಗ ಹರಣ ನಿ- ರ್ಲೇಪ ದುಃಖ ಸುಖಲಾಪ ಚರಿತ ಭಗ 9 ವಾಸುದೇವ ಸಂತೋಷದಾತ ಗೋಕೇಶವೇದ್ಯ ವಾಗೀಶ ಜನಕ ನಿಜದಾಸಪೋಷ ಖಳ- ದಾತ ಮಹಿ- ದಾಸಪೂರ್ಣವಿಭು 10 ವೈರಿ ಕುರುವಂಶ ಧ್ವಂಸ ನಿಜ ಹಂಸರೂಪ ಯದುವಂಶ ಚಂದ್ರ ನೀ- ಲಾಂಶುಧಾಮ ಗರುಡಂಸಗಮನ ಭವ ದಮನ ದೇವಾಂಶಗಣಪೋಷ 11 ತುಂಬಿರೆಜಯಜಯ ದುಂಧುಭಿನಾದವು ಅಂಬರಸುರಗಣ ವರ್ಷಿಸೆಕುಸುಮವ ಸಂಭ್ರಮದಾರತಿ ಎತ್ತಲ್ ಸ್ತ್ರೀಗಣ ಕಂಬು ಚಕ್ರಾಂಕಿತ ಪಾಣಿಯೆಸರಸರ 12 ಮಂಗಳಮೂರ್ತಿಯೆ ಮಂಗಲ ದಾತನೆ ಅಂಗಜರಿಪುಗಳ ಭಂಗವ ಹರಿಸುತ ತಿಂಗಳು ಬೆಳಕಿನ ತುಂಗ ಸುರೂಪವ ಕಂಗಳು ಮನಸಿನ ಸಂಗದಿ ತೋರುತ13 ಸಾಸಿರ ಶಿರಮುಖ ಸಾಸಿರ ನೇತ್ರನೆ ಸಾಸಿರ ಬಾಹುವೆ ಸಾಸಿರನಾಮಕ ಸಾಸಿರಕೀರ್ತಿನಿರ್ದೋಷ ಸುಖಪೂರ್ಣ ಶ್ವಾಸವಿನುತ ವಿಶ್ವಾಸವ ಬೀರುತ 14 ಜಯಮುನಿ ಹೃದಯಗ ವಾಯು ವಿನಾಯಕ ಜೀಯ ಶ್ರೀ ಕೃಷ್ಣವಿಠಲ ಮಹಾಂತನೆ ಪ್ರೇಮದ ಮನವಳಿದ ಹೇಯದು ನಿನ್ನಯ ಧೇಯವೆ ನಡೆಸುತ ಶ್ರೀ ಯವ ನೀಡಲು 15
--------------
ಕೃಷ್ಣವಿಠಲದಾಸರು
ಬಾಲೆಯಾದಾನು ಬಲಭೀಮ ಪ ಬಾಲೇಂದು ಮುಖ ಸೋಲಿಪ ವದನದಿಂದೊಪ್ಪುತಅ.ಪ. ಸೊಲ್ಲು ಸೊಲ್ಲಿಗೆ ಬಲು ಕಳವಳಿಸುವನಾ ತರುಣಿ ದ್ರೌಪದಿ ತಾ ತಾಳದೆ ತನ್ನೊಳು ತಿಳುಪಿದಳು ಪತಿಯೊಡನೆಕೇಳಿದ ಮಾತ್ರದಿ ಸೀಳುವೆನೆನುತಲಿ ಕೋಪದಿಂದೊಮ್ಮೆಗೆ 1 ಸನ್ನುತ ಶಶಿಮುಖಯೆಂಬೋದು ಸರಿಯಾ-ಶ್ವಾಸನ ಸತಿಯಳ ಸರಸಾಟ ಸಹಿಸದೆ ಮೀಸೆಯ ತಿರುವುತ ಸಾರಿ ಸರಿ ಯಾರೆನ್ನುತ ಸತಿಯಾಗಿರು ಸುಖಸತಿಯಳ ಮಾಡಿ ನಿನ್ನಾಳುವೆನೆಂಬೋದು ಕೇಳಿ ಭರದಿ 2 ಸುಮಶರ ಶೋಷಕೆ ಹಿಮಕರ ವ್ಯಾಪಿಸಿ ಹರುಷವಗೊಳುತಾ ಸರಸಿಜಮುಖಿಯೆಂದು ಸರಸರ ಸಾಗಲು ಶಿರದೊಳು ಚರಣವ ಸೇರಿಸಿದಾ ಶಾಮರೂಪ ತಂದೆವರದಗೋಪಾಲವಿಠ್ಠಲನ ಸ್ಮರಿಸುತ 3
--------------
ತಂದೆವರದಗೋಪಾಲವಿಠಲರು
ಬಾಳು ಬಾಳು ಹರಿ ಪೂಜಾಲೋಲುಪÁಳೊ ಬಾಳೊ ಮುನಿವಾದಿರಾಜಬಾಳೆಂದಕ್ಷತಿನಿಟ್ಟು ದೇವಕ್ಕಳೆಲ್ಲಬಲು ಕೃಪೆಯಲಿ ಹರಸಿದರೊಪ. ಮಕ್ಕಳ ಮ್ಯಾಲೆಂದೆಂದು ಬಲುಅಕ್ಕರುಳ್ಳ ತಾಯಿ ಬಳಗಅಕ್ಷತಿನಿಕ್ಕಿ ಹರಸುವಂದದಿ ದೇ-ವಕ್ಕಳೆನ್ನ ಹರಸಿದರೊ 1 ಸಾಲಿಗ್ರಾಮ ತೀರ್ಥವನು ಮ್ಯಾಲೆಫಲವೀವ ಕ್ಷೇತ್ರವನುಕಾಲಕಾಲದಿ ಹರಿಸ್ಮರಣೆಯ ಬಿಡದಿರುಕೀಳು ಭವವೆಂಬ ಶತ್ರುವನು 2 ತುಲಸಿ ಪದ್ಮಾಕ್ಷಿಯ ಸರವ ನಿನ್ನಕೊರಳ ರವದಲ್ಲಿ ಮೆರೆವಅಲಸದೆ ಹರಿವಾಸರವನೆ ಬಿಡದಿರುಸುಲಭದಿ ಹರಿ ನಿನ್ನ ಪೊರೆವ 3 ಭ್ರಾಮಕರೊಡನಾಡದಿರು ಕಂಡಕಾಮಿನಿಯರ ಕೂಡದಿರುನೇಮನಿಷ್ಠೆಗಳನ್ನು ಬಿಡದಿರು ಎಂದೆಂದುತಾಮಸನಾಗಿ ಕೆಡದಿರು 4 ಹಯವದನಗೆ ನಮಿಸುತಿರು ನಿ-ರ್ಣಯದ ಶ್ರುತಿಯಸೇವಿಸುತಿರುಪ್ರಿಯ ಪುರಾಣಗಳ ಕೇಳುತಿರು ನಿ-ರ್ಭಯದಿಂದವನ ಪೊಗಳುತಿರು 5 ಹರಿಭಕುತರೊಳೆಂದೆಂದಾಡಿರೊ ನರ-ಹರಿಯ ನಾಮಗಳನು ಪಾಡಿರೊ ಹರಿ ಅರ್ಚನೆಯನು ಮಾಡಿರೊ ಶ್ರೀಹರಿಯ ಮೂರುತಿಯನು ನೋಡಿರೊ 6 ದೂರಕ್ಕೆ ದೂರನು ದಾವನ ಹ-ತ್ತಿರ ಬಂದ ಭಕುತರ ಕಾವನಆರಾಧಿಸಲು ಫಲವೀವನ ಹ-ತ್ತಿರ ಸೇರುವ ಭಾವ ದಾವನ 7 ಕಾಮದೇವನ ಪೆತ್ತ ಕರುಣಿಯ ಸುತ್ತಸೇವಿಪರಘತಮ ತರಣಿಯ- - - - - - - - - - -- - - - - - - - - - -8 ಜಯಿಸಿ ಕಂಸನೆಂಬ ಮಾವನ ಆಶಯವಿತ್ತು ಭಕುತ ಸಂಜೀವನಹಯವದನನಾಗಿ ಪಾವನ ಶ್ರು-ತಿಯ ತಂದ ದೇವರದೇವನ9
--------------
ವಾದಿರಾಜ
ಬಿಟ್ಟನ್ಯಭಜನೆಯ ಕಂಡು ಪ ಹೊಚ್ಚಿ ಸುಳಿದಟ್ಟಿ ಸುಡುವ ಅಡವಿಗಿಚ್ಚಿನ ಭಯಕೆ ಬೆಚ್ಚಿ ಅರಗಿನ ಮನೆಯ ಹೊಗುವವನಂತೆ ಅಚ್ಚರಿಯೆನಿಸೆ ದಹಿಪ ತಾಪತ್ರಯಕ್ಕಳುಕಿ ತುಚ್ಛ ದೈವಗಳ ಮರೆಯೊಗುವ ಮನುಜರಕಂಡು 1 ಉರಿಯ ಮಳೆಗರೆಯುತಿರೆ ತೃಣಗೇಹವನು ಹೊಕ್ಕು ಹರಣವನುಳುಹಿಕೊಂಬೆನೆಂಬಂತೇ ಉರುಬೆ ನಾನಾ ರೋಗಗಳುಳುಹಲು ಹಲವು ದೈವಗಳಿ ಗೆರಗಿ ಜೀವನಕೆ ಕಳಕಳಿಪ ಮನುಜರ ಕಂಡೂ 2 ಮುಗಿಲಗಲ ಧರೆ ಜರಿಯುತಿರೆ ಹುಲ್ಲಿನಣಬೆಯೊಡ್ಡಿ ಮಿಗೆ ಬಾಳ್ವೆನೆಂಬ ಮರುಳನಂದದೀ ಉಗಿದಸಿಯ ಮೃತ್ಯುವಿನ ಭಯಕೆ ನಾನಾದೇವ ತೆಗಳಮರೆಯೊಗುವ ಮನುಜರ ಕಂಡು 3 ಘುಡು ಘುಡಿಸಿ ಸಿಡಿಲೆರಗುತಿರೆ ತನ್ನ ಕೈ ವಿಡಿದ ಕೊಡೆಯ ಮರೆಗೊಂಡುಳಿವೆನೆಂಬಂತೇ ಮುಡಿವಿಡಿದೆಳೆವ ಕಾಲನ ಭಯಕೆ ನಾನಾದೈವ ದಡಿವಿಡಿದೆರಗಿ ಹಲು ಬಿಡುವ ಮನುಜರ ಕಂಡು 4 ಯಾತಮುಳಿದರೆ ಜಗದಲುಳಿದವರಾರು ಮ ತ್ತೀತನುಳುಹಿದನನು ಕೊಂದವನಾವ ಇ ದೇತಕರಿಯರೋ ನರರು ಅಕಟಕಟ ವೈಕುಂಠ ನಾಥ ಪರಿಪೂತನ ಪದಕಮಲವ ಭಜಿಸರೆಂದು 5 ನೀರಡಿಸಿ ಜಾಹ್ನವಿಯ ತೀರದಲಿ ಭಾವಿಯಾ ನೀರ ಕುಡಿವ ಮಾನವನ ತೆರದೀ ಹರಿಯ ಚರಣವಿರಲು ಭೂರಿದೈವಂಗಳಿನ್ನೇಕೆ ಭಜಿಸುವೆ ಮನುಜ ಹರಿ ಕಾರುಣ್ಯನಿಧಿ ವೈಕುಂಠವಲ್ಲಭ ಬೇಲೂರ ಚೆನ್ನಿಗರಾಯ ಕೃಪಾನಿಧಿಯಿರಲು 6
--------------
ಬೇಲೂರು ವೈಕುಂಠದಾಸರು
ಬಿಡಬೇಡೆಲೆ ಮನಸೆ ಶ್ರೀಹರಿಪಾದ ಹಿಡಿ ಬಿಗಿಯಲೆ ಮನಸೇ ಪ ಹಿಡಕೋ ಕಡಕಿಂ ಕಡಲಕಡಿದಮರರ ಪಾದ ಅ.ಪ ಅನುದಿನ ಸಿರಿಯರೊತ್ತುವ ಪಾದ ಪರತರ ಭಕುತಿಯಿಂ ಸುರರುಪೂಜಿಪ ಪಾದ ನೆರೆದು ಋಷಿಸ್ತೋಮರರಸಿನಲಿಯುವ ಪಾದ ಪರಮನಾರದ ತುಂಬುರರು ಪಾಡುವ ಪಾದ ಪಾದ 1 ನೀಲಬಣ್ಣದಪಾದ ಪಿಡಿದೆತ್ತಿ ಮೂಲೋಕಾಳುವ ಪಾದ ತಾಳಿ ವಿಲಸಿತರೂಪ ಖೂಳನ ಎದೆಮೆಟ್ಟಿ ಸೀಳಿ ಉದರಮಂ ಬಾಲನ್ನಪ್ಪಿಕೊಂಡು ಪಾಲಿಸಿದಂಥ ಮಹ ಮೇಲಾದಮಿತಪಾದ ಸುಜನ ತಲೆಮೇಲೆ ಹೊತ್ತಪಾದ 2 ಬಲಿಯತುಳಿದಪಾದ ಮುನಿಯಾಗ ಒಲಿದು ಕಾಯ್ದಪಾದ ಶಿಲೆಯನೊದೆದಪಾದ ವನಕೆ ಪೋದಪಾದ ಖಳರಥಳಿಸಿ ಮುನಿಕುಲವ ಸಲಹಿದಪಾದ ಜಲಧಿದಾಂಟಿ ಸ್ಥಿರಪಟ್ಟ ಭಕ್ತನಿಗೆ ಸುಲಭದೊದಗಿಕೊಟ್ಟ ಚೆಲುವ ಸುದಯಪಾದ 3 ಪಾದ ಬಹು ಜರಮರಣ ನಿವಾರ ಪಾದ ತರಳಗೆ ಸ್ಥಿರವರ ಕರುಣದಿತ್ತ ಪಾದ ಭರದಿಗರಡನೇರಿ ಸರಸಿಗಿಳಿದ ಪಾದ ತರುಣಿಮಣಿಯರವ್ರತ ಹರಣಗೈದ ಪಾದ ಸಿರಿ ಪಾದ 4 ಪಾದ ಭಕುತರ ಮೊರೆಯ ಕೇಳ್ವ ಪಾದ ದುರುಳ ಕುರುಪನ ಗರುವಕಂಡ ಬುವಿ ವಿಶ್ವ ಪಾದ ಪರಮ ತುರಗವೇರಿ ಮೆರೆವ ವಿಮಲ ಪಾದ ಪಾದ 5
--------------
ರಾಮದಾಸರು
ಬಿಡಿ ಬಿಡಿ ಸಂದೇಹವನು ಪೊಡವಿ ಮನುಜರೆಲ್ಲಒಡೆಯನೊಬ್ಬನೆ ಜಗಕೆ ರಂಗವಿಠಲ ಪ ಹರಿಹರವಿರಿಂಚರೊಳು ಪರದೈವವಾರೆಂದುಪರಮ ಮುನಿಗಳು ವಿವಾದವನು ಮಾಡೆಸರಸಿಜಾತನ ಸುತನ ಭೃಗುವನಟ್ಟಲು ಪೋದಅರಿದು ಬಹೆನೆಂದು ಪದ್ಮಜನ ಸಭೆಗೆ1 ಮುನಿವರನು ಕಂಡು ಪದ್ಮಜಗೆ ವಂದಿಸದಿರಲುವನಜಭವ ಕೋಪವನು ಮಾಡಿ ಜರಿಯೆಮುನಿ ಪರಮ ತತ್ತ್ವ ಇವನಲ್ಲವೆಂದೆನೆ ಕನಲಿಮನಸಿಜವೈರಿಯ ಲೋಕಕೆ ಪೋದನು 2 ಹರ ಕಂಡು ಭೃಗುಮುನಿ ಬರಲು ತನ್ನನುಜನೆಂದುಭರವಸೆಯಲೆದ್ದು ತಕ್ಕೈಸ ಪÉÇೀಗೆ ಜರಿದು ಹರನನು ಮುಟ್ಟದಿರೆ ಶಂಕರನು ಕನಲಿಕರೆದ ಶೂಲವ ಜಡಿದು ಕೊಲಲುಬಗೆದ 3 ಹರನ ಕೋಪವ ಕಂಡು ಗಿರಿಜೆ ಚರಣವ ಪಿಡಿದುಕರುಣಿ ಮುನಿಯನು ಕಾಯಬÉೀಕೆಂದೆನಲುಮರಣ ಭಯದಿಂದ ನಿರ್ಮುಕ್ತನಾಗಿ ಮುನಿವರನು ಸರಸಿಜನಯ್ಯನಿಪ್ಪ ವೈಕುಂಠಕೆ ಪೋದನು 4 ಅಲ್ಲಿ ಮಹಲಕ್ಷುಮಿಯ ತೊಡೆಯಲ್ಲಿ ಪವಡಿಸಿ ಇರಲುಫುಲ್ಲನಾಭನ ಚರಣದಿಂದಲೊದೆಯೆಮೆಲ್ಲನೆ ಪಾದವ ಪಿಡಿದು ಮುನಿವರಗೆ ಪೊಡಮಟ್ಟುಇಲ್ಲಿ ಬಿಜಯಂಗೈಸಬೇಕೆಂದನು 5 ಪರಮ ಮುನಿ ನಿಮ್ಮ ಪದ ಸೋಂಕಲು ಪಾವನನಾದೆಚರಣರಜ ಪರಮ ಪಾವನ ಸುಲಭವೆಸಿರಿಗೆ ನೆಲೆವನೆಯಾದೆ ಪದಸಂಗದಿಂದಲೆನೆಪರಮ ಹರುಷದಲಿ ಮುನಿತನುವ ಮರೆದ 6 ಪರತತ್ವವನು ಕಂಡು ಬಂದು ಮುನಿವರನಂದುಒರೆಯೆ ಋಷಿವರರಿಗವರವರ ಪರಿಯಅರಿದರಾ ಮುನಿವರರು ಹರಿಯೆ ಪರದೈವವೆಂದುನೆರೆ ತಿಳಿದು ಭಜಿಸಿ ನರಹರಿಯ ಹರಿಯ 7 ಸುರರು ಕಡೆಯೆ ಕಡಲೊಳಗಿರ್ದಮಡದಿ ಮಹಾಲಕ್ಷುಮಿ ಅವತರಿಸಿ ಬರಲುಮೃಡ ಕಮಲಜ ಸುರಮುಖ್ಯರನು ಜರಿದು ಸಿಂಧುವಿನದಡದಲ್ಲಿ ಹರಿಯ ವರಿಸಿದಳು ವರನೆಂದು 8 ಕರಿಪತಿಯ ಸರಸಿಯೊಳು ಮೊಸಳೆ ಪಿಡಿಯಲು ಭರದಿಪರಮ ಪುರುಷ ಜಗತ್ಪತಿಯೆನಲುಗರುಡವಾಹನನಾಗಿ ಹರಿ ಬಂದವನ ಕಾಯ್ದಪರದೈವವಾರು ಜಗದೊಳಗೆ ಪೇಳಾ9 ರಾಜಸೂಯವ ಧರ್ಮಸುತ ಮಾಡೆ ಅವನಗ್ರ-ಪೂಜೆಗರುಹರು ಸುರರೊಳಾರೆಂದೆನಲುಭಾಜನನು ಸದ್ಗುಣನು ಕೃಷ್ಣನೊಬ್ಬನೆಯೆಂದುರಾಜಸಭೆಯಲಿ ದೇವವ್ರತ ನುಡಿದನು 10 ಗಂಗೆ ಈತನ ಪಾದಸಂಗದಿ ಪಾವನವೆನಲುಗಂಗಾಧರನು ಪರಮ ದಾಸನೆನಲುಮಂಗಳಾತ್ಮಕ ವಿಶ್ವಜನ್ಮಾದಿ ಕಾರಣನುರಂಗವಿಠಲರೇಯನ ನೆರೆನಂಬಿರೋ 11
--------------
ಶ್ರೀಪಾದರಾಜರು
ಬಿಡು ಬಿಡು ಇನ್ನು ಸೋಗಾಚಾರ | ಒಡಿಯ ಬಲ್ಲನು ನಾನು ನಿನ್ನ ವಿಚಾರ ಪ ತುಡಗತನ ಕಲಿತು ನೆರೆಹೊರೆಯವರ ಮನೆಯಲ್ಲಿ | ಗಡಿಗೆ ತುಪ್ಪಾ ಬೆಣ್ಣೆ ಮೊಸರು | ಹಾಲು | ಕುಡಿದು ಛೀ ಹಳಿ ಕದ್ದ ಕಳ್ಳನೆನೆಸಿಕೊಂಡ | ಪಡಚುತನವಲ್ಲದೆ ಭಾರಕನು ನೀನಲ್ಲ 1 ಸೀರಯನು ಕದ್ದಂದು ಕಡವಿನ ಮರವನೇರಿ | ಊರ ನಾರಿಯರ ಮಾನಕ್ಕೆ ಸೋತು || ಜಾರತನದವನಾಗಿ ತಿರಗಿ ಜಗದಾ ಭಂಡ | ಪೋರರಿಗೆ ಪೋರನಲ್ಲದೆ ಹಿರಿಯನಲ್ಲ2 ಮುನಿಗಳೆಜ್ಞದಲ್ಲಿ ತಿರಿತಂದು ಗೊಲ್ಲತೆರ | ತನುಜರ ಸಂಗಡಲಿದ್ದು ಎಂಜಲುಂಡು | ಮನುಜದೇಹವ ತೆತ್ತು ಬಿನಗು ಲೀಲಾಕೃತಿ | ದನಗಾವಿ ಎಲ್ಲದೆ ದೊರೆ ಮಗನು ನೀನಲ್ಲ 3 ಯಾತಕ್ಕೆ ಬಾರದ ಕುನಪೆಣ್ಣಿಗೆ ಮೆಚ್ಚಿ | ಮಾತುಳನ ಕೊಂದು ಮುತ್ತೈಯಗೊಲಿದು | ಭೀತಿಯಲಿ ಪರರಾಯನ ಮಗಳ ಕೊಂಡು ಬಂದ | ಯಾತರ ಪೌರುಷದವನು ಲೋಕದೊಳಗೆಲ್ಲ 4 ತೊತ್ತಿನ ಮಗನಲ್ಲಿ ವುಂಡು ಬಿಗಿಸಿಕೊಂಡು | ಮಿತ್ರಭೇದವನಿಕ್ಕಿ ಬಂಧುಗಳಿಗೆ | ತೆತ್ತಿಗನು ನೀನಾಗಿ ವಾಜಿಗಳ ಪಿಡಿದು | ಹತ್ಯವ ಮಾಡಿಸಿದೆ ಉತ್ತಮನು ನೀನಲ್ಲ 5 ಅಣ್ಣ ತಮ್ಮಂದಿರನು ಅಗಲಿಸಿ ವೈರದಲಿ | ನುಣ್ಣಗೆ ಒಬ್ಬರೊಬ್ಬರ ಕೊಲ್ಲಿಸಿ | ಇನ್ನೇನು ಉಸರುವೆನು ಕಟ್ಟಕಡಿಗೆ ಎಲ್ಲ | ನಿನ್ನ ಕುಲವನು ಕೊಂದೆ ಇದು ಪುಶಿಯಲ್ಲ 6 ತಿಳಿಯಲಾರರು ನಿನ್ನ ಠಕ್ಕು ಠವಳಿಯ ಮಾಯ | ಜಲಜ ಸಂಭವ ಶಿವ ಇಂದ್ರಾದ್ಯರು | ಸುಲಭ ದೇವರದೇವ ವಿಜಯವಿಠ್ಠಲರೇಯ |ವೊಲಿದ ದಾಸರಿಗೆ ಸಂತಾನ ಕುಲದೀಪ7
--------------
ವಿಜಯದಾಸ
ಬಿಡೆ ಬಿಡೆನೋ ನಿನ್ನಾ|ಅಡಿಗಳ ಯುಗಳನ್ನಾ ಪ ಬಿಡೆ ಬಿಡೆನೋ ನಿನ್ನಾ|ಅಡಿಗಳ ಯುಗಳನ್ನಾ ಬಿಡದಿಹ ಪಾವನ್ನಾ| ಪೊಡವಿಯೊಳಗೆ|ಮೃಡ ಅಜರಿಗೆ ವಡಿಯ ನೀನೀಗ| ಒಡಲ ಹೊಕ್ಕೆನು ಕರುಣಾ ನಿನಗ 1 ಹಲವು ಜನ್ಮಂಗಳನು|ಬಲುತೆರ ಸೂಸಿದೆನು| ನೆಲೆಗಾಆಣದೆ ನಾನು|| ಸುಲಭದಿ ದೊರೆಕಿತು ದೀನೊದ್ದರನೆ 2 ಮುನ್ನ ಮಾಡಿದ ಪರಿ|ಬನ್ನ ಬಡಿಸದೆ ಸಾರಿ| ಚನ್ನಾಗೊಲಿಹರಿ| ಯನ್ನ ಹೃದಯದಲಿ ಇನ್ನು ನಿಶಿದಿನಲಿ|ನೆನೆವ ಭಕುತಿಲಿ| ಸನ್ನುತ ಮಹಿಪತಿ ನಂದನ ಪ್ರಭುವೇ3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಬಿಡ್ವು-ದುತ್ತ ಮವು ಪ ಹೋದಯೋಚನೆ ಮಾಡಲು ಮನದಲ್ಲಿ ಅತಿಶಯವೇನಲ್ಲಿ ಫಲವೇನಿಲ್ಲಾ ಬಹು ಭಾದಕ ವಂದೆ ಬುದ್ಧಿಯು ತಿಳಿಯದೆ ಸುಲಭದಿಂದಲಿ ಮುನಿವಂದ್ಯನ ಸ್ತುತಿಯ ಮಾಡಿದಲ್ಲಿ ಖನಿಯಂತೆ ಭಾಗ್ಯವು ಬೇಗನೆ ಕೊಡುವನು---ಸ್ಥಿರವಲ್ಲಿ 1 ಹೊಟ್ಟಿಯ ದೆಸೆಯಿಂದಾ ಕೃಷ್ಣನ ಚರಣಾರವ ಕ್ರಿಯದಲಿ ಪೂಜಿಸಿ ನಿಷ್ಟವಾಗು---- ಕಷ್ಟವೆಲ್ಲ ಕಳೆದು ಕರುಣಿಸಿ ಶೀಘ್ರದಿ ಕಾಯುವ ಗೋವಿಂದ 2 ಕೂಡಿ ಪುಣ್ಯವು ಕಳೆದು ಪಾಪಕೆ ಹೋಗಬೇಡಾ ಮಂqಲದೊಡೆಯನ ಮಹಿಮ ವುಳ್ಳ ದಾಸರ ಮನ್ನಿಸದಿರ ಬೇಡಾ -------- ಪಾದ ಬಿಡಬೇಡಾ 3
--------------
ಹೆನ್ನೆರಂಗದಾಸರು
ಬಿದಿಗೆಯ ದಿವಸ (ಹನುಮಂತನನ್ನು ಕುರಿತು) ರಂಭೆ : ಕಮಲದಳಾಕ್ಷಿ ಪೇಳೆಲೆ ಈತನ್ಯಾರೆ ಸಮನಸನಾಗಿ ತೋರುವನಲ್ಲೆ ನೀರೆಪ. ಧನ್ಯನಾಗಿರುವ ದೊರೆಯ ಧರಿಸುತ್ತ ಚೆನ್ನಿಗನಾಗಿ ತೋರುವನಲ್ಲೆ ಈತ1 ಪಟ್ಟೆಕಂಬಿಯ ನಿರುದುಟ್ಟುಕೊಂಡಿರುವ ಕಟ್ಟಿದುತ್ತರೀಯ ಭೂಷಣದಿಂದ ಮೆರೆವ 2 ಸೋಮಾರ್ಕಶಿಖಿಯಂತಿರುವುದು ತ್ರಿನಾಮ ರಾಮಣೀಯಕ ಮನೋಹರ ಪೂರ್ಣಕಾಮ3 ವೀರವೈಷ್ಣವ ಮುದ್ದು ಮೋಹನಕಾಯ ಭೂರಿಭೂಷಣಭುಜಬಲ ಹರಿಪ್ರಿಯ4 ರೂಪ ನೋಡಲು ಕಾಮರೂಪನಂತಿರುವ ಚಾಪಲ ಪ್ರೌಢ ಚಿದ್ರೂಪನಂತಿರುವ 5 ಬಾಲವ ನೆಗಹಿ ಕಾಲೂರಿ ಶೋಭಿಸುವ ನೀಲದುಂಗುರದ ಹಸ್ತವ ನೀಡಿ ಮೆರೆವ 6 ಗೆಜ್ಜೆ ಕಾಲುಂಗರ ಪದಕ ಕಟ್ಟಾಣಿ ಸಜ್ಜನನಾಗಿ ತೋರುವನು ನಿಧಾನಿ 7 ಊರ್ವಶಿ : ತರುಣಿ ಕೇಳೀತನೆ ದೊರೆ ಮುಖ್ಯಪ್ರಾಣ ವರ ನಿಗಮಾಗಮ ಶಾಸ್ತ್ರಪ್ರವೀಣ 1 ಮಾಯವಾದಿಗಳ ಮಾರ್ಗವ ಖಂಡಿಸಿದ ರಂಭೆ : ದಿಟವಾಯ್ತು ಪೇಳ್ದ ಮಾತಾದರು ಜಾಣೆ ಚಟುಳ ಹನುಮನ ಉತ್ಕಟರೂಪ ಕಾಣೆ 1 ವಾಮನನಾದ ಕಾರಣವೇನೆ ಪೇಳೆ ನಾ ಮನಸೋತೆ ಎಂತುಂಟೊ ಹರಿಲೀಲೆ 2 ಊರ್ವಶಿ : ನಾಗವೇಣಿ ನೀ ಕೇಳೆ ನಾಗವೈರಿಯೊಳು ಸಾಗಿತು ಸೇವೆಯೆಂಬುದು ಮನಸಿನೊಳು1 ವಾದವ ಮಾಡಿ ವಿನೋದದಿ ಹರಿಯ ಪಾದಸೇವೆಗೆ ಮನನಾದ ಕೇಳಿದೆಯೊ2 ವೀರ ವೇಷವನಿದ ಕಂಡು ಶ್ರೀಹರಿಯ ದೂರವಾದನೋ ಎಂದು ಮನದೊಳು ನಿಜವು3 ಭೂರಿಭೂಷಣ ಸುಂದರ ರೂಪವಾಂತ4 ಇಂದಿನ ಸೇವೆಯೆನ್ನಿಂದತಿ ದಯದಿ ಮಂದರಧರಿಸಿಕೊಳ್ವುದು ಎಂದು ಭರದಿ5 ಒಯ್ಯನೆ ಪೇಳುತ್ತ ವಯ್ಯಾರದಿಂದ ಕೈಯನು ನೀಡಿ ಸಾನಂದದಿ ಬಂದ6 ಕಂತುಪಿತನು ಹನುಮಂತ ಮಾನಸಕೆ ಸಂತಸ ತಾಳಿ ಆನಂತನು ದಿಟಕೆ7 ಭೂರಿ ವೈಭವದಿ ಸ್ವಾರಿಯು ಪೊರಟ ಸಾಕಾರವ ಮುದದಿ8 ತೋರಿಸಿ ಭಕ್ತರ ಘೋರ ದುರಿತವ ಸೂರೆಗೊಳ್ಳುವನು ವಿಚಾರಿಸಿ ನಿಜವ9 ಹದನವಿದೀಗೆಲೆ ಬಿದಿಗೆಯ ದಿನದಿ ಮದನಜನಕನು ಮೈದೋರುವ ಮುದದಿ10 ಪ್ರತಿದಿನದಂತೆ ಶ್ರೀಪತಿ ದಯದಿಂದ ಅತಿಶಯ ಮಂಟಪದೊಳು ನಲವಿಂದ11 ಎಂತು ನಾ ವರ್ಣಿಪೆ ಕಂತುಜನಕನ ಅಂತ್ಯರಹಿತ ಗುಣಾನಂಮಹಿಮನ12 ಏಕಾಂತದಿ ಲೋಕೈಕನಾಯಕನು ಶ್ರೀಕರವಾಗಿ ನಿಂದನು ನಿತ್ಯಸುಖನು13 * * * ರಂಭೆ : ಇವನತಿಜಾಣನಮ್ಮಾ ಇವನ್ಯಾರಮ್ಮಾಪ. ಇವನತಿಜಾಣ ಲಕ್ಷ್ಮೀಧವನಿಗಿಂತಲು ಮುಂದೆ ತವಕದಿ ಬರುವತ್ತಿತ್ತವರನ್ನು ನೋಡದೆ 1 ಅಂದಣವೇರಿ ಮತ್ತೊಂದ ತಾ ನೋಡದೆ ಒಂದೇ ಮನದಿ ಬೇಗ ಮುಂದೆ ಬರುವನಮ್ಮಾ2 ಬಾಲಬ್ರಹ್ಮಚಾರಿ ಶಿಲೆಯಂತಿರುವನು ಅಲೋಚಿಸಲಿವ ಮೂಲಪುರುಷನಮ್ಮಾ3 ಪುಟ್ಟನಾದರು ಜಗಜಟ್ಟಿಯಂತಿರುವನು ದಿಟ್ಟನಿವನವನ ಮುಟ್ಟಿ ನೋಡಮ್ಮ 4 ಊರ್ವಶಿ : ನಾರೀ ಇವನೀಗ ಹೊಂತಕಾರಿ ಲೋಕಕ್ಕಾಧಾರಿ ಪ. ಕೊಬ್ಬಿದ ದೈತ್ಯರಿಗೀತನೆ ಕಾಲ ಹಬ್ಬುವದಾತ್ಮಕ್ಕೀತನೆ ಮೂಲ ಉಬ್ಬುವ ಹರಿಯೆಂದರೆ ಮೈಯೆಲ್ಲ ಒಬ್ಬನಿಗಾದರೂ ಬಗ್ಗುವನಲ್ಲ1 ಎಲ್ಲಿರುವನು ಹರಿ ಅಲ್ಲಿಹನೀತ ಬಲ್ಲಿದ ನಾರಾಯಣಗಿವ ದೂತ ಖುಲ್ಲರ ಮನಕತಿ ಝಲ್ಲೆನುವಾತ ಸುಲ್ಲಭನೆಯಿವ ಮುಂದಿನ ಧಾತ2 ಭೇದವಿಲ್ಲೆಂಬುದವರಿಗೆಯಿವ ತುಂಟ ಮೇದಿನಿ ಬಾಧಕರಿಗೆ ಯಿವ ಕಂಟ ಆದಿ ಮೂರುತಿ ಕೇಶವನಿಗೆ ಬಂಟ ಮಾಧವಭಕ್ತರಿಗೀತನೆ ನೆಂಟ 3 ದುರಿತಾರಣ್ಯದಹನ ನಿರ್ಲೇಪ ವರ ವೆಂಕಟಪತಿಯಿದಿರೊಳಗಿಪ್ಪ ಪರಮಾತ್ಮನ ಪರತತ್ತ್ವ ಸ್ವರೂಪ ಮರೆಮಾತೇನಿವ ದೊರೆ ಹನುಮಪ್ಪ4
--------------
ತುಪಾಕಿ ವೆಂಕಟರಮಣಾಚಾರ್ಯ
ಬಿನ್ನಪವ ಕೇಳು ಬಿನ್ನಪವ ಕೇಳೈಪ್ರಸನ್ನ ವೆಂಕಟರಮಣ ಪತೊಳಲಿದರು ಬಹುಭವದಿ ತೊಡರಿ ಬಂದಿಹ ಕರ್ಮತೊಲಗದೆ ಬಳಲಿಸುತಲಿಹುದು ಜಗದೀಶಸುಲಭ ಮಾರ್ಗವ ಕಾಣದಳಲುತಿರೆ ನೀನೆ ಕೃಪೆದಳೆದು ಗುರುರೂಪದಿಂ ಬಂದೆ ನನ್ನೆಡೆಗೆ 1ಗೆದ್ದೆನೆ ಭವವ ಗುರು ಒದ್ದು ನೂಕಿದ ದುರಿತವಿದ್ದರೂ ನನಗೆ ಭಯವಿಲ್ಲೆನ್ನುತಿಹೆನುಬದ್ಧತೆಯು ಬಿಡಲಿಲ್ಲ ಮೋಹ ಸಡಿಲುವುದಿಲ್ಲನಿರ್ಧರದಿ ನಿಜವು ತಾ ನಿಲುಕದಿಹುದೀಶ 2ಕಂಡ ಭಯ ಕಾಡುವುದು ಷಂಡತನವೋ ನನ್ನಪಂಡಿತತ್ವಾಭಿಮಾನದ ಬಲವೊ ತಿಳಿಯೆಪುಂಡರೀಕಾಕ್ಷ ನನ್ನೊಲವಿಗಿದಿರೆನಿಸದಿದುದಿಂಡುಗೆಡೆದಿಹೆನೀಗ ದಯಮಾಡು ಸ್ವಾಮೀ 3ನೀನೊಲಿದು ನಿರ್ಣಯವು ನಿಲುಕದಿಹುದೇಕೆ ಬಲುಮಾನಾವಮಾನಗಳು ತೊಲಗದಿಹವೇಕೆಹೀನಕರ್ಮಂಗಳಲಿ ರುಚಿಗೆಡದೆುಹುದೇಕೆದೀನವತ್ಸಲನೆ ದಮೈಯ ನಂಬಿದೆನು 4ನಿನ್ನವನು ನಾನಾಗಿ ನಿನ್ನಿದಿರೆ ರಿಪುಗಳಿಂಬನ್ನಬಡಲೊದಗದಪವಾದವೆನಗೀಗನನ್ನ ಕರ್ಮವದೆಂಬೆನೇ ಸ್ವತಂತ್ರತೆಯುಂಟೆರನ್ನ ತಿರುಪತಿಯ ವೆಂಕಟ ನೀನೆ ಬಲ್ಲೆ 5ಓಂ ಸತ್ಯವಾಚೇ ನಮಃ
--------------
ತಿಮ್ಮಪ್ಪದಾಸರು
ಬಿನ್ನಹ ಮಾಡುವೆನು ಅತ್ತಿಗೆಯರ ಚನ್ನಾಗಿ ಗೆಲಿಸೆಂದುಚದುರ ಮುದ್ಗಲವಾಸನೆದುರಿಗೆಮಧುರ ವಾಕ್ಯಗಳ ನುಡಿಸೆಂದು ಪ. ಗೋಕರ್ಣ ಹಿಮವಂತ ಕೇದಾರಿ ದೇಶಗೋಕುಲ ವೃಂದಾವನ ಮಥುರೆಯಗೋಕುಲ ವೃಂದಾವನ ಮಥುರೆಯ ಒಡೆಯನಸಾಕಲ್ಯದಿಂದ ಬಲಗೊಂಬೆ 1 ಕರವೀರ ಪುರವಾಸ ದೊರೆಯುಪಂಢರಿನಾಥವರವಡ್ಡಿಒಡೆಯ ಬದರಿಯವರವಡ್ಡಿಒಡೆಯ ಬದರಿ ನಾರಾಯಣಗೆಕರವ ಜೋಡಿಸುವೆ ಕರುಣಿಸು2 ಅಯೋಧ್ಯ ಪುರವಾಸ ಗಯಾ ಗದಾಧರಕೈವಲ್ಯ ನೀವ ಜಗದೊಡೆಯಕೈವಲ್ಯ ನೀವ ಜಗದೊಡೆಯನ ಪಾದಕೈಮುಗಿದು ಮೊದಲೆ ಬಲಗೊಂಬೆ3 ದೇಶ ದೇಶದ ಜನಕೆ ಲೇಸಾಗಿ ಸಲಹುವೆಶ್ರೀ ಸತಿದೇವಿ ಅರಸನೆಶ್ರೀ ಸತಿದೇವಿ ಅರಸನೆ ಕಾಶಿವಿಶ್ವೇಶ್ವರನ ಮೊದಲೆ ಬಲಗೊಂಬೆ4 ಹರಿಹರವಾಸಗೆ ಕರಗಳ ಜೋಡಿಸಿಸರ್ವರಿಗೆ ವರವ ಸುಲಭದಿಸರ್ವರಿಗೆ ವರವ ಸುಲಭದಿ ಕೊಡುವಹರದೆಯರ ಪಂಥವ ಗೆಲಿಸೆಂದು5 ಲಕ್ಷ್ಮಿರಮಣನೆ ಪಕ್ಷಿವಾಹನ ಸ್ವಾಮಿಕುಕ್ಷಿಲೆ ಜಗವ ಸಲಹುವೆಕುಕ್ಷಿಲೆ ಜಗವ ಸಲಹುವೆ ಶೂರ್ಪಾಲಿವೃಕ್ಷರಾಜನ ಬಲಗೊಂಬೆ6 ಗಲಗಲಿ ನರಸಿಂಹ ಬಲು ದಯವಂತಸುಲಭದಿ ವರವ ಕೊಡುವವನುಸುಲಭದಿ ವರವ ಕೊಡುವ ರಾಮೇಶನ ಚಲ್ವ ಮೂರ್ತಿಯ ಬಲಗೊಂಬೆ 7
--------------
ಗಲಗಲಿಅವ್ವನವರು
ಬಿಲ್ವಪತ್ರೆಯ ಪೂಜೆಗೊಲಿವನು ಜಗದ್‍ವಲ್ಲಭನಾದ ರಾಮೇಶ್ವರನು ಪ ಕೋಟಿ ಕನ್ಯಾದಾನವ ಮಾಡಿದ ಫಲಕೋಟಿ ತುರಗದಾನದ ಫಲವುಕೋಟಿ ಸಂಖ್ಯಾ ಗಜದಾನದ ಫಲ ಶಶಿಜೂಟಗೊಂದೆ ಬಿಲ್ವಪತ್ರೆಯೇರಿಸಿದರೆ 1 ಕೋಟಿ ಗಂಗಾಸ್ನಾನವ ಮಾಡಿದ ಫಲಕೋಟಿ ಪ್ರಯಾಗ ಸ್ನಾನದ ಫಲವುಕೋಟಿ ಗೋದಾನದ ಫಲ ಬರುವುದು ಶಶಿಜೂಟಗೊಂದೆ ಬಿಲ್ವಪತ್ರೆಯೇರಿಸಿದರೆ2 ಲಕ್ಷ ಪಂಚಾಕ್ಷರಿ ಜಪವ ಮಾಡಿದ ಫಲಲಕ್ಷಭೂಮಿಯ ಪ್ರದಕ್ಷಿಣ ಫಲವುಲಕ್ಷಾಶ್ವಮೇಧಯಾಗವ ಮಾಡಿದ ಫಲತ್ರ್ಯಕ್ಷಗೊಂದೆ ಬಿಲ್ವಪತ್ರೆಯೇರಿಸಿದರೆ 3 ವೇದಪುರಾಣವ ಪಠಿಸಿದ ಫಲ ಸರ್ವಮೇದಿನಿ ದಾನವನಿತ್ತ ಫಲವುಭೂದಿವಿಜರ ಸಂರಕ್ಷಿಸಿದ ಫಲ ಶ್ರೀಮಾದೇವಗೇಕ ಬಿಲ್ವವನೇರಿಸಿದರೆ4 ಸೋಮವಾರದ ದಿನ ನೇಮದಿಂದಲಿ ಬಹುಕೋಮಲ ಬಿಲ್ವಪತ್ರೆಗಳ ತಂದುಶ್ರೀ ಮಹಾದೇವಗರ್ಪಿಸಿದಂಥ ಭಕ್ತರ್ಗೆರಾಮೇಶಲಿಂಗ ಮುಕ್ತಿಯನೀವನು 5
--------------
ಕೆಳದಿ ವೆಂಕಣ್ಣ ಕವಿ
ಬೆಟ್ಟದ ಶೃಂಗವ ಹತ್ತಿ ಧುಮುಕುವೆ ನಾನು ಕೃಷ್ಣನೇ ಸರ್ವೋತ್ತಮ ಮತ್ತಾರೊಬ್ಬರಿಲ್ಲವೆಂದು ಪ ಪಂಕಜಾಸನಾಹಿಪ ಶಂಕರಾದಿಗಳು ಹರಿಗೆ ಕಿಂಕರರು ಮತ್ತು ಇವಗೆ ಪುತ್ರ ಪೌತ್ರರು `ಏಕೋ ನಾರಾಯಣ ಆಸೀನ್ನಬ್ರಹ್ಮೇ'ತಿ ಶ್ರುತಿಯೊಂದೇ ಸಾಕೊ ಮತ್ತಿನ್ಯಾಕೆ ಸಂಶಯ ಹರಿ ನೀನೆ ಗತಿಯೆಂದು 1 `ಯಂಕಾಮಯೇ' ಎಂಬ ಶ್ರುತಿ ಪಂಕಜಾಸನಾನಿಲ ಶಂಕರರೆಲ್ಲರೂ ಹರಿಕಿಂಕರರು ಸಿರಿಗೆ ಕಿಂಕರರೆಂಬುದ ನಿಶ್ಶಂಕವಾಗಿ ಪೇಳಲು ಶಂಕೆ ಯಾಕೊ ಸಲಹೊ ಶ್ರೀ ಪಂಕಜಲೋಚನನೆಂದು 2 ಜಾನಕಿ ವಿಯುಕ್ತನಾಗಿ ಕ್ಲೇಶಗಳಪಟ್ಟಿರುವ ಮತ್ತು ಜರಾಸಂಧಗಂಜಿ ಬೆಟ್ಟವೇರಿದನು ನಿರವದ್ಯ ನಿರನಿಷ್ಟ ಎಂಬೊ ಶ್ರುತಿಯನ್ನೆ ನೋಡಿ ನಿರ್ದೋಷನಿದನೆಂದು 3 ದೇವದತ್ತ ಯಜ್ಞದತ್ತ ಮೊದಲಾದ ಜನರಂತೆ ಪುರುಷನಾದ ಮೇಲೆ ಇವನಲ್ಪಗುಣನು ಎಂಬ ದುರ್ಮತಿಯ ಬಿಟ್ಟು ಗುಣಶ್ರುತ ಸವಿರುದ್ಧ ಎಂಬೋ ಶ್ರುತ್ಯರ್ಥವ ತಿಳಿದು ಹರಿಗುಣಪೂರ್ಣನೆಂದು 4 ಸೋಮಕುಲಶೇಖರನೆ ಭಾಮಾವಲ್ಲಭ ಬಲ ರಾಮನಿಗೆ ಸಹೋದರ ಸಾಮಗಪ್ರಿಯ ಶ್ರೀಮನ್ನಾಮಗಿರಿ ಶ್ರೀ ಸ್ವಾಮಿ ನೃಹರಿಯೆ ವಿದ್ಯಾ ರತ್ನಾಕರ ಯೋಗಿಯನ್ನು ಹರಿ ನೀನೆ ರಕ್ಷಿಸೆಂದು 5
--------------
ವಿದ್ಯಾರತ್ನಾಕರತೀರ್ಥರು