ಒಟ್ಟು 1021 ಕಡೆಗಳಲ್ಲಿ , 96 ದಾಸರು , 868 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಮೋಹನಾರ್ಯನೆ ಯೆನ್ನಾ | ಪೀಡಿಸುವ ಭವಮೋಹಕಳೆವುದು ಮುನ್ನಾ | ಹರಿಯಂಘ್ರಿ ಭಜನೆಯಈಹ ಕೊಡುವುದು ಇನ್ನಾ | ಭೂಸುರವರೇಣ್ಯಾ ಪ ದೇಹ ಮಮತೆಯ ದಾಶೆಯಲಿ ಸುಖ | ವಾಹಿನಿಗಳನುಭವಿಸೆ ಬಲುದುರ್‍ದೇಹ ಪೋಷಣೆಗೈದು ಹರಿಪದ | ಈಹಿಸದೆ ಬಲುನೊಂದೆ ಭವದಲಿ ಅ.ಪ. ಜಯದಲುದಿಸುತಲಂದೂ | ತಾರುಣ್ಯವನುನಿರ್‍ಭಯದಿ ಕಳೆದಿಹೆ ಬಂಧೂ | ವಿದ್ವೇಷದೊಳಗ್ಹರಿಹಯನನುಜ ವರ್ತಿಗಳಂದೂ | ಸಲಹಿದರು ಎನ್ನಯ ಭಯ ನಿವಾರಿಸುತಂದೂ | ಕಾರುಣ್ಯ ಸಿಂಧೂ ||ಹಯಮುಖನ ಪದ ಸತ್ಸರೋಜಗಳ್ | ದ್ವಯಭಜಿಪ ಮನವಿರದೆ ವಿಷಯದಹುಯಿಲಿನಲಿ ಬೆಂಡಾಗಿ ತಾಪದ | ತ್ರಯದಿ ಬಲು ಬಳಲಿರುವೆನಯ್ಯ |ಜಯದ ಸಂವತ್ಸರವು ಮರಳಿ | ಬಯಲು ಆಗದ ಮುನ್ನ ಹರಿಪದದ್ವಯಗಳನು ಕಾಂಬಂಥ ಹದನವ | ದಯದಿ ತೋರುತ ಸಲಹೊ ಬಂಧು 1 ಕಾಮಮದ ಮಾತ್ಸರ್ಯಾ | ಅರಿಗಳನಮನನೇಮನಿಷ್ಟಯ ಚರ್ಯಾ | ಕುಂದಿಸುತ ವಿಷಯಸ್ತೋಮ ಕಳೆಯುವರಯ್ಯ | ಈ ಪರಿಯ ಪರಿಭವಸೀಮೆ ಮೀರುವ ಚರ್ಯಾ | ಪರಿಹರಿಸೊ ಜೀಯ ||ಭ್ರಾಮಕತ್ರಯ ಮಾರಿಗೆನ್ನ ಸು | ಹೋಮಿಸುವ ದುರುಳನನು ಸದೆವತಾಮರಸಭವ ಪದಕೆ ಬರುತಿಹ | ಆ ಮಹಾ ಮಾರುತ ನೊಳಿರುವ |ರಾಮ ಚಂದ್ರ ಪದಾರವಿಂದವ |ಕಾಮಿಸುತ ತನ್ಮಹಿಮೆಗಳ ಸನ್‍ನಾಮ ಕೀರ್ತನೆಗೈದು ಮೋದಿಪ | ಪ್ರೇಮಮನವಿತ್ತೆನ್ನ ಸಲಹೋ 2 ನೀರೊಳಾಡುತ ಬಂದಾ | ಬೆನ್ನಿನಲಿ ಬಹುಭಾರ ಪೊತ್ತುದೆ ಛಂದಾ | ಅವನಿಯನು ತನಕೋರೆದಾಡೆಗಳಿಂದಾ | ತರಳನನು ಬಹುಘೋರರೂಪದಲಿಂದಾ | ಸಲಹಿದುದೆ ಛಂದಾ ||ಮೂರು ಪಾದವ ಬೇಡಿ ಬಲಿಯನು | ಭಾರಿ ಕೊಡಲಿಯ ಪೆತ್ತು ಪೆಗಲೋಳು |ಘೋರ ಅಟವಿಯ ತಿರುಗಿ ತಿರುಗಿ | ನಾರೆರೊಲುಮೆಗೆ ಸಿಲ್ಕಿ ತ್ರಿಪುರದನಾರಿಯರ ವ್ರತಗೆಡಿಸಿ ಹಯವನು | ಏರ್ದ ಗುರುಗೋವಿಂದ ವಿಠ್ಠಲಕಾರಣನು ಜಗಕೆಂಬ ಮತಿಯನು | ಧೀರಗುರು ಮೋಹನ್ನ ಕರುಣಿಸು 3
--------------
ಗುರುಗೋವಿಂದವಿಠಲರು
ಯತಿಗಳು (ಶ್ರೀ ಬ್ರಹ್ಮಣ್ಯತೀರ್ಥರು) ಕೈಪಿಡಿದು ಪಾಲಿಸೈ ಬ್ರಹ್ಮಣ್ಯಗುರುವೇ ಪ ಅಯ್ಯನೀನೆಂದು ನಿನ್ನಡಿಗೆ ವಂದಿಸುವೇ ಅ.ಪ ಮೂಢವiತಿಗಳು ಬಂದು ಬೇಡಿ ಕೊಳ್ಳಲು ಕರುಣ ನೀಡಿ ನಿನ್ನವರನ್ನು ಕಾಯ್ದರೀತಿ ಗಾಢದಿಂದಲಿ ಬಂದು ಮೂಢನಾದೆನ್ನನು ಗೂಢದಿಂದಲಿ ಕಾಯೊ ಗುಣನಿಧಿಯೆ ಗುರುವೇ . . 1 ಪುರುಷೋತ್ತಮಾರ್ಯರ ವರಪುತ್ರನೆಂದೆನಿಸಿ ಹರುಷದಿಂದಲಿ ಬಂದ ಭಕ್ತಜನರ ಮೊರೆಯಲಾಲಿಸಿ ಸ್ವಾಮಿ ಸ್ಮರಣೆಯ ಕೊಟ್ಟೆನ್ನ ಹರುಷಪಡಿಸುವ ಗುರುವು ನೀನೆಂದು ನಾ ಬಂದೆ 2 ವರಕಣ್ವನದಿ ಕೂಲದಲಿ ಕಲ್ಮಷ ತೊಳೆದು ಸಾರ್ವಭೌಮನ ಗುಣವ ಸರ್ವದಾ ಪಾಡುತಲಿ ಸರ್ವಜನರನು ಕಾವೆ ಸರ್ವಕಾಲದಲಿ 3 ಸರ್ವಗುಣ ಪೂರ್ಣ ಬ್ರಹ್ಮಣ್ಯಪುರ ವಾಸ ನರಹರಿಯ ಪಾದವನು ಸ್ಮರಿಸಿನಿತ್ಯ ಸರಸದಲಿ ಅಬ್ಬೂರು ಪುರವಾಸಿಗಳನೆಲ್ಲ ಅರ್ಭಕರ ತೆರನಂತೆ ರಕ್ಷಿಸುವ ಗುರುವರ್ಯ 4 ಮಣಿದು ಬೇಡುವೆ ನಿನ್ನ ಚರಣದಾಶ್ರಯವಿತ್ತು ಅಣುಗನೆಂದೆನಿಸೆನ್ನ ಸಲಹಬೇಕೊ ಗುಣನಿಧಿ ಶ್ರೀ ಪ್ರಾಣನಾಥ ವಿಠ್ಠಲನ ಘನ ಚರಣ ಸ್ಮರಣೆಯ ನೀಯೊ ಗುರುವೆ 5
--------------
ಬಾಗೇಪಲ್ಲಿ ಶೇಷದಾಸರು
ಯಮುನೇ ದುರಿತೋಪಶಮನೇ ಪ ಶರಣೆಂಬೆ ತವ ಪಾದಾಂಬುರುಹ ಯುಗಳಿಗೆ ದಿವಾ ಕರತನಯೆ ಸಪ್ತಸಾಗರ ಭೇದಿನೀ ಹರಿತೋಷ ಲಾಭ ಸುಂದರಿ ಸುಭಗೆ ನಿನ್ನ ಸಂ ದರುಶನಕೆ ಬಂದೆ ಭಕ್ತರ ಪಾಲಿಪುದು ಜನನಿ 1 ಮಕರಾದಿ ಮಾಸದಲಿ ವಿಖನಸಾವರ್ತ ದೇ ಶಕೆ ಬಂದು ವಿಜ್ಞಾನ ಭಕುತಿಯಿಂದಾ ತ್ರಿಕರಣದ ಶುದ್ಧಿಯಲಿ ಸಕೃತ ಸ್ನಾನದ ಗೈಯೆ ಸಕಲ ಸುಖವಿತ್ತು ದೇವಕೀಸುತನ ತೋರಿಸುವೆ 2 ಕನಕಗರ್ಭಾವರ್ತವೆನಿಪ ದೇಶದಲಿ ಸ ಜ್ಜನರ ಪಾಲಿಪೆನೆಂಬ ಅನುರಾಗದಿ ಪ್ರಣವಪಾದ್ಯಗೆ ವಿಮಲ ಮುನಿಯಂತೆ ನಿರುತ ಕುಂ ಭಿಣಿಯೊಳಗೆ ಸರಸ್ವತಿ ದ್ಯುನದಿಯಂದದಿ ಮೆರೆದೆ 3 ಜಮದಗ್ನಿ ಮುಖ್ಯ ಸಂಯಮಿಗಳನುದಿನದಿ ಆ ತಮ ತಮ್ಮೊಳಗೆ ರಮಾರಮಣ ದಾಮೋದರನ ಸುಮಹಿಮೆಗಳನು ಪೊಗಳುತಮಿತ ಮೋದದಲಿಹರು 4 ಪಿಂಗಳಾಧಿಷ್ಠಿತೆ ಶುಭಾಂಗಿ ಸುಮನವನಿತ್ತು ಕಂಗೊಳಿಸು ಎನ್ನಂತರಂಗದಲ್ಲಿ ತುಂಗ ಸುಮಹಿಮ ಜಗನ್ನಾಥ ವಿಠಲನ ಸುಗು ಣಂಗಳ ತುತಿಪುದಕೆ ಮಂಗಳ ಮತಿಯನೀಯೇ 5
--------------
ಜಗನ್ನಾಥದಾಸರು
ಯಾಕೆ ಬೇಕು ಜನ್ಮವಾದರು ಲೋಕನಾಥನೆ ಪ ಜೋಕೆ ಮಾಡುತಲೆನ್ನ ಕಾಯದ ನೌಕ ನಾಯಕ ನೀ ಕರುಣ ಬಿಡೆ 1 ಮಾತೆ ಕರುಣದೊಳಾತ್ಮಜಗೆ ಸ್ತನವಿತ್ತು ಪೊರೆವಂತೆ ಪ್ರೀತಿಯಲಿ ತವಜಾತನೆಂದು ಆತುರದಿ ನೀನಾದರಿಸದಿರೆ 2 ವಾರಿಧರ ನೆರೆ ಚಾತಕಗೆ ನೀರಬಿಂದುವೀವಂತೆ ಧೀರ ನರಸಿಂಹವಿಠಲನೆ ಕರುಣಾರಸವೆನಗೆ ಬೀರದಿರ್ದೊಡೆ 3
--------------
ನರಸಿಂಹವಿಠಲರು
ಯಾಕೆಂದು ದಣುಕೊಂಡಿರಿ ಸುಮ್ಮನೆ ವೃಥಾ ನಾಮವೊಂದಿದ್ದಮೇಲೆ ಪ ಕಣ್ಣಾಣದವರವೋಲು ತಿರುಗುವಿರಿ ಚರಿಸುತಿದ್ದಾಮೇಲೆ 1 ಘಾಸಿ ಮಾಡುವುದೇಕೆ ದೇಹವನು ನೆಲೆಯನು ತಿಳಿಯದೆ 2 ತನ್ನಯ ಮಂದಿರವು ತನುವಿದುಸ್ಥಿರವಲ್ಲ ತೃಣವಿತ್ತು ಸಾರಿದೆ 3 ಸುಟ್ಟು ಹುಡಿಹುಡಿಗೊಂಬ ಶರೀರವನ್ನು ಬಡಿವಾರ ತರವಲ್ಲ 4 ಮತಿಗೆಟ್ಟು ಸುಮ್ಮನೆ ತೊಳಲದಿರು ಜ್ಯೋತಿಯ ಕೂಡುಕಂಡ್ಯಾ 5
--------------
ಕವಿ ಪರಮದೇವದಾಸರು
ಯಾಕೆನ್ನೊಳು ಪಂಥಾ ಶ್ರೀಕಾಂತಾ ಪ. ಯಾಕೆ ಪಂಥ ಲೋಕೈಕನಾಥ ದಿ- ವಾಕರಕೋಟಿಪ್ರಭಾಕರ ತೇಜನೇ ಅ.ಪ. ಪೂರ್ವಾರ್ಜಿತ ಕರ್ಮದಿಂದಲಿ ಇರ್ವೆನು ನರಜನ್ಮ ಧರಿಸುತ ಗರ್ವದಿಂದ ಗಜರಾಜನಂತೆ ಮತಿ ಮರ್ವೆಯಾಯ್ತು ನಿನ್ನೋರ್ವನ ನಂಬದೆ ಗರ್ವಮದೋನ್ಮತ್ತದಿ ನಡೆದೆನು ಉರ್ವಿಯೊಳೀ ತೆರದಿ ಇದ್ದೆನಾದರೂ ಸರ್ವಥಾ ಈಗ ನಿಗರ್ವಿಯಾದೆಯಹ ಪರ್ವತವಾಸ ಸುಪರ್ವಾಣ ವಂದಿತ 1 ಯಾರಿಗಳವಲ್ಲ ಮಾಯಾ ಕಾರ ಮಮತೆ ಸಲ್ಲ ಸಂತತ ಸಾರಸಾಕ್ಷ ಸಂಸಾರಾರ್ಣವದಿಂದ ಪಾರಗೈದು ಕರುಣಾರಸ ಸುರಿವುದು ನತ ಮಮ ಕಾರ ಹೋಯ್ತೆ ಕಡೆಗೆ ಏನಿದು ಭಾರಿ ಭಾರಿ ಶ್ರುತಿ ಸಾರುವುದೈ ದಯ ವಾರಿಧಿ ನೀನಿರಲ್ಯಾರಿಗುಸುರುವುದು 2 ಬಾಲತ್ವದ ಬಲೆಗೆ ದ್ರವ್ಯದ ಶೀಲವಿತ್ತೆ ಎನಗೆ ಆದರೂ ಪಾಲಿಸುವರೆ ನಿನಗಾಲಸ್ಯವೆ ಕರು- ಸಾಲದೆರಡು ಮೂರು ನಿನ್ನಯ ಮೂಲ ಸಹಿತ ತೋರು ಮುನಿಕುಲ ಪಾಲ ಶ್ರೀಲಕ್ಷ್ಮೀನಾರಾಯಣ ಗುಣ ಶೀಲ ಕಾರ್ಕಳ ನಗರಾಲಯವಾಸನೇ 3
--------------
ತುಪಾಕಿ ವೆಂಕಟರಮಣಾಚಾರ್ಯ
ಯಾಚಿಸುವೆನು ನಿನ್ನನಿದಕೆ ಕರುಣಸಾಗರ ಗಮನ ಜಗತ್ಪಾಲ ಪ್ರಭುವರ ಪ ದೈನ್ಯರಾಹಿತ್ಯ ರಹಿತ ಜಾಡ್ಯರಹಿತವು ಪಾದ ಕಮಲರತಿ ಸದಾವಕಾಲವು 1 ಪ್ರಭುವೆ ನಿನ್ನ ಭೃತ್ಯನಾನಾದಿಕಾಲದಿ ಅಭಯವಿತ್ತು ಪಾಲಿಸೆನ್ನ ಹೇ ದಯಾನಿಧೆ 2 ತುಷ್ಟನಾದರೇನುರುಷ್ಟನಾರೇನೊಲೊ ಇಷ್ಟದೈವ ನಿನ್ನ ಹೊರತು ಗತಿಯ ಇಲ್ಲೆಲೊ 3 ತುಷ್ಟನಾದ ಬಳಿಕ ನೀನೆ ಹೇ ಕೃಪಾಕರ ಬಿಟ್ಟುನಿನ್ನ ಭಜೀಸಲ್ಯಾಕೆ ಯಿತರಕಾಯ್ವರ 4 ನೀನೆ ರೋಷವನ್ನು ತಾಳೆ ಸುಜನಬಂಧುವೆ ದೀನನನ್ನು ಕಾಯ್ವರಾರು ನೀನೆಯಲ್ಲವೆ 5 ದೋಷ ಕ್ಷಮಿಸುವಲ್ಲಿ ನಿನ್ನ ಪೋಲ್ವ ಅರಸರು ದೇಶಸರ್ವಗಳಲಿ ಪುಡುಕಲಲ್ಲೆ ದೊರಕರು 6 ಎನ್ನಸರಿ ಕೃತಘ್ನ ವಂಚನೀಯ ಮಾಳ್ಪನ ವನ್ನಜಾಭವಾಂಡದೋಳಾವಲ್ಲಿ ಕಾಣೆನಾ 7 ದೀನ ದಾಸ ನಿನಗೆ ನಾನು ಹೇ ಜಗತ್ಪತೆ ಮಾಣದೆಲ್ಲಿರಲ್ಲಿ ತೋರಿ ಪ್ರೇಮ ಸಾಮ್ಯತೆ 8 ಎನ್ನ ವಿಷಯ ಭಯವು ನಿನಗೆ ಲಕ್ಷವಾವುದು ಮನ್ನಿಸೆನ್ನ ಪೊರೆವ ಸರ್ವಭಾರ ನಿನ್ನದು 9 ಈಶಪೂರ್ಣಕಾಯ ನಿನಗಸಾಧ್ಯವಾವುದು ಆಶೆಯನ್ನದಾವಘನವು ನಿನಗೆ ತೋರ್ಪುದು 10 ದಾಸನಾಶೆಪೂರ್ತಿಸಲ್ಕಾಲಸ್ಯವುಚಿತವೋ? ಅಶಿಶಿಸುವನು ದಾಶಗೈವುದೇನು ನೀತವೋ? 11 ಲೋಕನಾಥ ಕರುಣ ಪೂರ್ಣನೇ ಪರಾತ್ಪರ ಯಾಕೆ ಯೊನ್ನೊಳಿನಿತು ನೀನು ನಿರ್ದಯಾಪರ 12 ಗರವತಾಯಿತನನುಜಗೀಯೆ ಅವುದೋಗತಿ ತರುಳನಲ್ಲಿ ಕರುಣಿಸುವದು ಕೃಷ್ಣ ಮೂರುತಿ 13 ದಾತ ಜ್ಞಾತನು ನಿನ್ನ ವಿನಹಾಭಿಷ್ಟಫಲದ ಕರ್ತೃ ಆವನು 14 ಲಕ್ಷ್ಮಿಪತಿಯ ಪೋಲ್ಪೋದಾರ ಸುಗುಣ ಶೀಲನ ಈಕ್ಷಿಸಲ್ಕೆ ಜಗದೊಳಾರನೆಲ್ಲಿ ಕಾಣೆನಾ 15 ನಿನ್ನ ಔದಾರ್ಯ ಸರ್ವರಲ್ಲಿ ಸಾಮ್ಯವು ಎನ್ನೊಳಿನಿತ್ತು ನಿನ್ನದ್ಯಾಕೆ ಕಾರ್ಪಣ್ಯವು 16 ಆರ್ತಬಂಧುವೆಂದು ನಿನಗೆ ಶರಣುಬಂದೆನು ಸಾರ್ಥಕವನು ಮಾಡುವಿಯೊ ಜರಿದೆ ಬಿರುದನು 17 ದೀನ ಬಂಧು ಕರುಣಸಿಂಧು ಸುಹೃದ್ಬಾಂಧವ ಹೀನ ಭವಾರ್ಣವದಿ ಮಗ್ನನಿರುವೆ ಭೂಧವ 18 ತಾರಿಸೈ ಭವಾಬ್ದಿಯಿಂದ ಇಂದಿರಾವರ ಸೂರಿಜನರ ಸಂಗವೆನ್ನಗೀಯೋಗಿರಿಧರ19 ಶ್ರೀನೃಸಿಂಹ ಸತತ ನೀನು ಸದಯ ಮೂರುತಿ ದೀನ ನನ್ನೊಳ್ಯಾಕೆ ನಿರ್ದಯವ ತೋರುತಿ 20 ಸಾಧುಗಳು ನಿರ್ಗುಣಿಗಳಲ್ಲಿ ದಯವÀ ಮಾಳ್ಪರು ಸಾದರದಲಿ ಸರ್ವರಲ್ಲಿ ಸದಯರಿಪ್ಪರು 21 ಧನ್ಯಜನಕೆ ನಿನ್ನನೀವುದೇನು ಅಚ್ಚರ ದ್ಯೆನ್ಯ ಬಡುವನನ್ನು ಪಾಲಿಸುವದು ಪರತರ 22 ಚಂದ್ರಚಾಂಡಾಲಗೃಹದ ಮೇಲೆಯಾದರು ಸುರತರು 23 ಈತೆರ ಶ್ರೀ ಪತಿಯೆ ಎನಗೆ ಪ್ರೀತನಾಗೆಲೋ ನೀತವಾಗಿ ಕರುಣದಿಂದ ಕರವಪಿಡಿಯಲೊ 24 ಪುನಃ ಪುನಃ ನಿನ್ನನಿದನೆ ಬೇಡಿಕೊಂಬೆನಾ ಮನದೊಳು ಪ್ರಸನ್ನನಾಗು ಜನಕಜಾರಮಣ25 ಪಂಚರಾತ್ರಾಗಮೋಕ್ತ ಈಸ್ತುತಿಯನು ವಿನುತ ಶ್ರೀ ರಾಮಚಂದ್ರನು 26 ಮುದದಿ ಮನಸಿನೊಳಗೆ ತಾನೆವದಗಿ ಪೇಳಿದ ಅದನೆ ಶ್ರೀವರದೇಶ ವಿಠಲ ನುಡಿಸಿ ಬರೆಸಿದ 27
--------------
ವರದೇಶವಿಠಲ
ಯಾತಕೊ ಭಯ ಭೀತಿ ಚಪಲತೆಯು ನಿನ ಗ್ಯಾತಕೊ ಮೂಢಮಾನವ ಪ ಪಾತಕವಳಿ ಗುರುನಾಥನ ಕೃಪೆಯೊಳು ಭೂತಳದತಿಶಯದಾತನು ಕಾಣುವಾ ಅ.ಪ ಈತರದಿ ನೀ ಬಾರದಿರುವಿಯಲ ಮೂಢಮಾನವ ರಾತ್ರಿ ಬೆಳಕಿನೊಳೇಕವಾಗೋ ಭಲಾಸಿ ಶೀತೆಯ ಕೊಂಡೊಯ್ದಾತನ ತಮ್ಮಗೆ ಪ್ರೀತಿಲಿ ಸ್ಥಿರಪದವಿತ್ತನು ಚೀ ಚೀ ನಿನಗ್ಯಾತಕೋ 1 ಯಾತ್ರೆ ಮಾಡೆಲೊ ಕ್ಷೇತ್ರವನ್ನರಿತು ಮೂಢಮಾನವ ಸೂತ್ರ ಪಿಡಿದಲ್ಲಿ ಪಾತ್ರನಾಗೆಲೊ ಧಾತ್ರಿಯೊಳು ತುಲಶೀರಾಮನು ಮಾತ್ರ ತಾ ನಿಜ ಧೋತ್ರವ ತೊಡಿಸುವ ಯಾತಕೊ 2
--------------
ಚನ್ನಪಟ್ಟಣದ ಅಹೋಬಲದಾಸರು
ಯಾತರ ಸುಖವಯ್ಯಾ ಇದು ಇನ್ಯಾತರ ಸುಖವಯ್ಯಾ ಪ ಶ್ರೀ ತರುಣೀಶನ ಮರೆತು ಸಂಸಾರದಿ ಬಾಳುವುದೆಂತೆನೆ ಅ.ಪ. ಹಣ ಉಳ್ಳ ಮನುಜಂಗೆ ಗುಣವುಳ್ಳ ಸತಿಯಿಲ್ಲ ಗುಣವುಳ್ಳ ಸತಿಯಿರೆ ಗುಣಡೊಂಕುಪತಿಯು ಅನುಕೂಲವಿರೆಎರಡು ತನಯರೊಬ್ಬರು ಇರರು ಗುಣಿಸಿ ನೋಡಲು ಎಲ್ಲು ನ್ಯೂನತೆ ಸರಿಯೈ 1 ವಿತ್ತವಿದ್ದರೆ ಹಿತರು ಬಂಧು ಬಳಗವೆಲ್ಲ ವಿತ್ತವಿಲ್ಲಾದಿರಲು ನಿಂದಿಸಿ ನಗುತಿಹರು ಬತ್ತಲೆ ಬಂದುದು ಬತ್ತಲೆ ಪೋಪುದು ಮತ್ತೆ ಮಮತೆ ಯಾಕೊ ಮಧ್ಯೆ ಮತ್ತಿದ್ದುದಕೆ 2 ಸಂತೆಯತೆರಸರಿ ಸತಿಸುತ ಪರಿಜನ ನಿಂತು ಪೋಪರು ತಮ್ಮಯ ಋಣತೀರೆ ಅಂತ್ಯವಿಲ್ಲ ಸಂಸಾರದ ಶರಧಿಗೆ ಸಂತಸಪ್ರದವೆಂಬ ಭ್ರಾಂತಿಯ ನೀಗಯ್ಯ 3 ಜನನ ಮರಣವೆಂಬ ದುಃಖವೆ ತಾಕಿರೆ ದಿನದಿನ ಪ್ರತಿದಿನ ರೋಗದ ಕಾಟಗಳು ಗುಣಿಸಿ ನೋಡಲು ಮತ್ತೆ ಮನಕೆ ನೆಮ್ಮದಿ ಇಲ್ಲ ಅನಿಲ ಮಂದಿರ ನೊಲಿಸಿ ಗುಣದೂರನಾಗಯ್ಯ 4 ಕಾಲನೆಡೆಗೆ ಜನ ಬೀಳ್ಪುದು ನೋಡಿಯು ಬಾಳು ಸ್ಥಿರವೆಂದು ಕೇಳಿಲಿ ಮುಳುಗುವುದೇ ಬಾಲ ಯೌವ್ವನ ಮತ್ತೆ ಮುಪ್ಪಿಲಿ ಬೀಳುವ ಸ್ಥೂಲ ಶರೀರವೆ ಗೋಳಿನ ಸೆರೆಮನೆಯೈ5 ಊಟ ತಿಂಡಿಗೆ ಮೇಲ್ನೋಟದ ಕೀಟಗೆ ಕರ್ಮ ಮೂಟೆಯ ಘಳಿಸುವರೇ ಭವ ಕಾಟಕ ದಾಟಲು ಘೋಟಕಾಸ್ಯನ ಪದವಾರಿಜ ಪಿಡಿಯೈಯ್ಯ 6 ಮಂದನಾಗದೆ ಬಹು ಮುಂದಿನ ಗತಿ ನೋಡು ವಂದಿಸಿ ಜಯತೀರ್ಥ ವಾಯ್ವಾಂತರ್ಗತ ಪತಿ ಕೃಷ್ಣವಿಠಲನ ಭಜಿಸಲು ಕುಂದುಗಳಿಲ್ಲದೆ ಶಾಶ್ವತಾನಂದವು ಕೇಳಯ್ಯ 7
--------------
ಕೃಷ್ಣವಿಠಲದಾಸರು
ಯಾರ ಭಯವೇನಿಹುದು ಶ್ರೀವೇಂಕಟೇಶ ನೀನೆ ದಯವಾದ ಮೇಲ್ಯಾರ ಹಂಗೇನು ಪ ಪೊಡವಿಯಾಳುವ ದೊರೆಯು ಒಡವೆವೊಯ್ದರೆಯೇನು ಅಡವಿಯೊಳು ಮೃಗಬಂದು ತಡೆದರೇನು ತೊಡೆಯನೇರುವ ಮಗನ ಅಡವಿಗಟ್ಟಿದರೇನು ನೆಗಳು ಕಾಲ್ಪಿಡಿದರೇನು 1 ವ್ಯಾಳ ಬಹುರೋಷದಲಿ ಕಾಲು ಸುತ್ತಿದರೇನು ಕಾಳ ರಾಕ್ಷಸ ಕೈಯ ಪಿಡಿದರೇನು ಜ್ವಾಲೆ ನಾಲ್ದೆಸೆಯಿಂದ ಮೇಲೆ ಮುಸುಕಿದರೇನು ಹಗೆ ತನಗೆ ವಿಷವಿಕ್ಕಲೇನು 2 ಯಾಗಕೋಸುಗ ಮೃಗವ ಹೋಗಿ ತರುವೆನುಯೆಂದು ರಾಗದೊಳು ಬಲವಂತ ಕರೆಯಲಾಗಿ ಮೃಗ ಬಂದು ಬಾಗಿಲೊಳು ಕಾಲ್ಪಿಡಿಯೆ ಆಗ ಬಿಡಿಸಿದವರಾರು ನಾಗಗಿರಿವಾಸ 3 ಕಡುಗಲಿಯು ದ್ರೌಪದಿಯ ಉಡಿಮಡಿಯ ಸೆಳೆವಂದು ಒಡೆಯ ರಕ್ಷಿಸುಯೆಂದು ನಡುಗುತಿರಲು ಮಡದಿಗಕ್ಷಯವಿತ್ತು ನುಡಿದ ಭಾಷೆಯ ಸಲಿಸಿ ಕೊಡಲಿಲ್ಲವೆ ನೀನು ಒಡೆಯ ಗಿರಿವಾಸ 4 ಕೆಡೆನುಡಿದು ಬಾಲಕನ ಅಡವಿಗಟ್ಟಲು ಪಿತನು ಸಡಗರದ ಮಡದಿಯಳ ಮಾತ ಕೇಳಿ ಒಡೆಯ ನೀನೆಯೆಂದು ಕಡುತಪವನರ್ಚಿಸಲು ಉಡುಗಣಕೆ ಮೇಲಾದ ಪದವ ತೋರಿದೆಲಾ 5 ಮೃಗ ಜಲದ ಹೊಂಡದೊಳಗಾಡುತಿರೆ ಕಂಡು ಕಡು ರೋಷದಲಿ ಕಾಲ್ಪಿಡಿಯಲು ಪುಂಡರಿಕಾಕ್ಷನನು ಭಯಗೊಂಡು ಕರೆದರೆ ತುಂಡಿಸಿದೆ ಚಕ್ರದೊಳು ನೆಗಳ ಗಂಟಲನು 6 ಒಬ್ಬನೆ ಪಥದೊಳಗೆ ಸರ್ಬಬಲನೈದುತಿರೆ ಹೆಬ್ಬಾವು ಆತನನು ಮೈಸುತ್ತಲು ಗರ್ಭದೊಳು ನಡುನಡುಗಿ ಉಬ್ಬಸವ ಬಿಡುತಿರಲು ಎಬ್ಬಿಸಿದರಾರಲ್ಲಿ ನಿರ್ಭಯವ ತೋರಿ 7 ದುರುಳ ದೈತ್ಯನು ತನ್ನ ಕುವರನನು ಕೊಲುವುತಿರೆ ಭರದಿಂದ ಕಂಬದೊಳು ಹೊರಟು ಬಂದು ನರಹರಿಯ ರೂಪದಲಿ ಕರುಳ ಮಾಲೆಯ ಧರಿಸಿ ತರಳನನು ಕಾಯಿದವರಾರು ಶ್ರೀಹರಿಯೆ 8 ಉರಿಯ ಮನೆಯಂದರಿಯದರಸರೈವರ ಹೊಗಲು ಇರಿಸಿರ್ದ ಬಾಗಿಲೊಳು ಉರಿ ಮುಸುಕಲು ಬೆರಸಿರ್ದ ನಿದ್ರೆಯೊಳು ಇರಿಸಿ ಕಾಯಿದವರಾರು ಕರೆಸಿ ದ್ರೌಪದಿಯನ್ನು ಕೊಡಿಸಿದವರಾರು 9 ಚಂದ್ರಹಾಸನು ವಿಷವ ತಿಂದು ಸಾಯಲಿಯೆಂದು ತಂದೆ ಬರೆದಿಹ ಲಿಖಿತ ನಂದನನು ನೋಡಿ ಮಂದಗಮನೆಯ ಕೊಟ್ಟು ಚಂದ್ರಹಾಸನ ನಿಲಿಸಾ ನಂದಳಿದ ಮಾಯವೇನೆಂದು ಹೇಳಯ್ಯ 10 ಕಾಯ ಭಯ ಹೊರತಾಗಿ ಮೀರಿದಾಪತ್ತಿನಲಿ ಕಡೆ ಸೇರಿಸೊ ಭೂರಮಣ ವರಾಹತಿಮ್ಮಪ್ಪ ಚರಣವನು ಕುಲಿಶ ನೀನಾಗು 11
--------------
ವರಹತಿಮ್ಮಪ್ಪ
ಯಾರಿಗುಸರಲೇನು ದುರಿತಾರಿ ನೀನೆ ರಕ್ಷಿಸು ಕಂ- ಸಾರಿ ನೀನೆ ರಕ್ಷಿಸು ಮುರಾರಿ ನೀನೆ ರಕ್ಷಿಸು ಪ. ಭಾರಿ ಭಾರಿ ನಿನ್ನ ಪದವ ಸೇರಿದವರ ಕಾಯ್ದ ದೊರೆಯೆ ಅ.ಪ. ಪತಿಗಳೈವರಿದಿರೆ ಪತಿವ್ರತೆಯ ಖಳನು ಸೆಳೆಯೆ ಲಕ್ಷ್ಮೀ- ಪತಿಯೆ ನೀನೆ ಕಾಯ್ದೆಯಲ್ಲದೆ ಗತಿಯದಾರು ತೋರ್ದರಯ್ಯ 1 ಪಿತನ ತೊಡೆಯೊಳಿದ್ದ ಸುತನ ಸತಿಯು ಕಾಲಿನಿಂದೊದೆಯೆ ಖತಿಯೊಳೈದಿ ಭಜಿಸೆ ಅತಿಶಯದ ವರವನಿತ್ತೆ 2 ದನುಜ ಕೋಪದಿಂದ ತನ್ನ ತನುಜನನ್ನು ಬಾಧೆಗೊಳಿಸೆ ಮನುಜ ಸಿಂಹನಾಗಿ ಭಕ್ತಗನುಪಮಾದ ಹರುಷವಿತ್ತೆ 3 ಮಕರ ಬಾಧೆಯಿಂದ ಕರಿಯು ಸಕಲಕರ್ತನೆನುತಲೊದರೆ ಅಖಿಳ ದೈವಂಗಳಿರಲು ಬಕವಿರೋಧಿ ನೀನೆ ಪೊರೆದೆ 4 ಕೂರ್ಮ ಕ್ರೋಢ ಸಿಂಹ ಬ್ರಾಹ್ಮಣೇಂದ್ರ ರಾಮಕೃಷ್ಣ ಬುದ್ಧ ಕಲ್ಕಿ ದಾನವಾರಿ ಸಲಹೊ ಎನ್ನ 5 ಸರ್ವಲೋಕ ಜನಕ ನಿನ್ನ ಸರ್ವಕಾಲದಲ್ಲಿ ನೆನೆವೆ ವಿನುತ ಸರ್ವಸೌಖ್ಯ ನೀಡು ಹರಿಯೆ 6 ಕಂಜಜೇಶ ಪನ್ನಗೇಶ ನಿರ್ಜರೇಶ ಮುಖ್ಯ ದಾಸವರದ ಶೇಷ ಭೂಧರೇಶ ಎನ್ನ ಸಲಹೊ ಬೇಗ 7
--------------
ತುಪಾಕಿ ವೆಂಕಟರಮಣಾಚಾರ್ಯ
ಯಾರಿಗೆ ದೂರುವೆನು ವೆಂಕಟರಾಯ ಚಾರದ ಮಹಿಮೆಯನು ಪ ಈರಾರು ಸ್ಥಳವಲ್ಲಿ ಮೂರಾರು ಸೇರಿಸಿ ಹೋರಾಟವನಿತ್ತು ಮಾರಿದೆಯೆನ್ನನು ಅ.ಪ ತೇಜವುಳ್ಳವನೊಬ್ಬನು ಐದನೆಯಲ್ಲಿ ಮೋಜಾಗಿ ಒಳಹೊಕ್ಕನು ಹೂಜಿ ತುಂಬಿದ್ದುದ ಸೋಜಿಗದೊಳು ಕದ್ದು ಪಾಜಿ ಮಾಡಿದನೆನ್ನ ಮೂಜಗದೊಡೆಯ 1 ಸೀತವಾದವನೊಬ್ಬನು ಅಷ್ಟಮದದಲ್ಲಿ ಕಾತುರದೊಳು ಬಂದನು ಘಾತಕತನ ಮಾಡಿ ಭೀತಿಗಳನು ತೋರಿ ದಾತ 2 ಮೂರನೆಯವನೊಬ್ಬನು ಏಳನೆಯಲ್ಲಿ ಸೇರಿಯೆ ಕಳುತಿದ್ದನು ಏರಿ ಬಂದುದನೆಲ್ಲ ಆರಿಸಿ ಮಾರಿಸಿ ಸೂರೆಗೊಂಡನು ಎನ್ನ ವಾರಿಜನಾಭ 3 ಅತ್ರಿಯ ಮೊಮ್ಮಗನು ನಾಲ್ಕನೆಯಲ್ಲಿ ಶತ್ರುವಾಗಿಯೆ ನಿಂತನು ಗೋತ್ರದಿ ಕಲಹವ ಬೆಳಸಿಯೆಯಿದ್ದಂಥ ಪಾತ್ರವÀ ತೀರಿಸಿ ಗಾತ್ರವ ಕೆಡಸಿದ 4 ಸುರಗುರುವೆಂಬುವನು ಮೂರನೆಯಲ್ಲಿ ಸ್ಥಿರವಾಗಿ ನಿಂತಿಹನು ಗುರುಗಳ ಮುಖದಿಂದ ಕರಕರೆ ಹತ್ತಿಸಿ- ದರು ಪಾಡಿ ಹರಿಯನ್ನು ತಿರುಕನಾದೆನು ನಾನು 5 ಆರನೆ ಮನೆಯೊಳಗೆ ದೈತ್ಯರ ಆ- ಚಾರಿಯನು ನಿಂತಿಹನು ಹಾರುಮಾತುಗಳೇಕೆ ತೂರಿದನೆಲ್ಲವ ಪಾರಾದೆನು ನಾನು ವಾರಿಜನೇತ್ರ 6 ಆದಿತ್ಯ ಪುತ್ರನಾದ ಶನೈಶ್ವರ ಬಾಧಿಪ ಮನೆಗಳಾರು ದ್ವಾದಶ ಆದಿಯು ದ್ವಿತೀಯ ಪಂಚಮದಲ್ಲಿ ವೇದಗಳೆಲ್ಲವು ಏಳುಯೆಂಟಿರಲಿ 7 ನಾಡನಾಳುವ ರಾಯರ ಕೆಡಿಸಿ ಮುಂದೆ ಕಾಡಿಗೆ ಸೇರಿಸಿದ ಈಡಿಲ್ಲ ಈತಗೆ ಜೋಡಿಲ್ಲ ಗ್ರಹರೊಳು ಪಾಡೆಲ್ಲ ಕೆಡಿಸಿದ ರೂಢಿಗೆ ಒಡೆಯ 8 ವಾರಿಧಿ ಮಥನದಲಿ ಸುಧೆಯನ್ನುಂಡು ಸೇರಿದ ಗೃಹರೊಳಗೆ ಮೀರಿದರಿಬ್ಬರ ಪಾರುಪತ್ಯಗಳನ್ನು ಮಾರ ಸನ್ನಿಭನೆ 9 ಸಂಧಿ ಸಂಧಿಯಲಿವರು ಬಂದೆನ್ನನು ದಂದುಗ ಬಡಿಸುವರು ಇಂದ್ರಾದಿ ದೇವರಿಗಳವಲ್ಲ ಇವರೊಳು ಹಿಂದು ಮುಂದರಿಯೆನು ಬಂದ ಬವರವನ್ನು 10 ಶುಭದಲ್ಲಿ ಶುಭವಿತ್ತರು ವೆಂಕಟರಾಯ ಶುಭ ತೋರಿಸೊ ಅಭಯವನಿಪ್ಪಂಥ ವರಾಹತಿಮ್ಮಪ್ಪನೆ ಪ್ರಭುವೆಂದು ನೀ ಹೇಳಿ ವಿಭವಗಳೆನಗೀಯೊ 11
--------------
ವರಹತಿಮ್ಮಪ್ಪ
ಯಾವ ದಾರಿಯೆನಗೇ ಮುರಾರಿಯಿ- ನ್ನಾವ ಗತಿಯು ತನಗೇ | ದೇವರ ದೇವನೆ ನೀ ವಂಚಿಸಿದರೆ | ಕಾವರೊಬ್ಬರನು ಕಾಣೆ ನಾ ದಿಟವಿದು ಪ ವಾಸುಕಿಶಯನನೆ 1 ಮೋಕ್ಷವಿತ್ತೆನ್ನನು | ರಕ್ಷಿಸದಿರ್ದಡೆ 2 ಕಂದನ ಸಲಹೆನ್ನ | ತಂದೆ ಸದಾನಂದ 3
--------------
ಸದಾನಂದರು
ಯೇನು ಕರುಣಾಳೋ ದೇವವರೇಣ್ಯ ಯೇನು ಭಕುತರಧೀನನೋ ಪ ಕನ್ನಯ್ಯ ಧ್ಯಾನವಿತ್ತ ನಾರಾಯಣಾ ಅ.ಪ. ಅನಂತಾನಂತ ಜನುಮದಲ್ಲಿ ಅನ್ನೋದಕ ಕಾಣದಿದ್ದ ದರಿ ದ್ರನ್ನ ಕರವನೆ ಪಿಡಿದು ಮೃಷ್ಠಾನ್ನ ಭೋಜನ ಮಾಡಿಸಿ ಒಡನೆ ತಿರುಗೂವ ಕನ್ನಿ ಸಂಕಲ್ಪ ಕೆದುರುಗಾಣದೆ ಘನ್ನ ಮೂರುತಿ ಕೇಶವಾ 1 ಪಾವನವ ಮಾಡಿದನು ಬಲು ಕೃ ಪಾವಲೋಕನ ಪರಮ ಸೂರ್ಯರ್ ರಾವಣಾಸುರ ಮರ್ದನಾ ಕವಿ ಮನ್ನಿಸಿ ತಪ್ಪನೆಣೆಸದೆ ದೇವ ಜಗತ್ರಯ ಜಿತ ಕರಣ ವಸುದೇವ ದೇವಕೀನಂದನಾ2 ದೋಷರಾಶಿಯೊಳಿದ್ದು ಅನುದಿನ ಮೋಸಗೊಳಿಸುವ ಭವವನಧಿ ಮಧ್ಯ ಈಶ ಕಡಕಾಣಲಾರದೆ ಕ್ಲೇಶದಲಿ ಸಂಚರಿಸುತ್ತಿಪ್ಪ ಮಾನೀಶ ಪಶುವನು ನೋಡಿ ವೇಗದಿ ಲೇಸು ಕೊಡುವೆನೆಂದು ಆನಂದ ದಾಸರೊಳಗಿದ್ದ ನರಹರೀ 3 ಡಂಬಕಾ ಭಕುತಿಯನೆ ಬಿಡಿಸೀ ವೆಂಬೋದೆ ನಿರ್ಮಲ ಮಾಡೀ ಪಾದ ಇಂಬು ಬಯಸುವ ಸುಖವೆ ಪಾಲಿಸಿ ಪೊಂಬುಡೆಧರ ಗೋವಿಂದಾ 4 ಜಪತಪಾನುಷ್ಠಾನ ನಾನಾ ವುಪವಾಸ ವ್ರತದಾನ ಧರ್ಮಗ ಳಪರಿಮಿತವಾದ ಯಾಗ ಕನ್ಯಾದಾನ ನಾನಾಲೋಚನ ಸ್ವಪನದಲಿ ಕಾಣಿಸುವ ತಾನೆ ಕೃಪಣರಿಗೆ ವಲಿದಲ್ಲದೆ ಬಿಡ ಚಪಲ ವಿಜಯವಿಠಲಾ5
--------------
ವಿಜಯದಾಸ
ರಕ್ಷಕ ದುರ್ಜನ ಶಿಕ್ಷಕ ಸಂತತ 1 ಚಾರು ಮಾಳ್ವತಿ ಧೀರನೆ ಭಕ್ತೋದ್ಧಾರನೆ ಸಂತತ 2 ಕಂಬು ಕಂಧರ ಹೇರಂಬನಾನುಜ ಗುಹ ಅಂಬುಜೇಕ್ಷಣ ಅರಿ ಭಂಜನ ಸಂತತ 3 ಸ್ತುತ್ಯವ ಮಾಡುವ ಭೃತ್ಯನ ಸಂತತ 4 ಗಿರಿಜಾತೆಯ ಕುವರಾ | ಅಭಯಾ | ಕರುಣದಿಂದೀಕ್ಷಿಸಿ ವರವಿತ್ತು ಸಂತತ 5
--------------
ಬೆಳ್ಳೆ ದಾಸಪ್ಪಯ್ಯ