ಒಟ್ಟು 11785 ಕಡೆಗಳಲ್ಲಿ , 132 ದಾಸರು , 6311 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಹಿಂಡು ಉದ್ದಂಡ ನರಸಿಂಹನ ಕಂಡೆನಯ್ಯ ಪ ಘುಡುಘುಡಿಸಿ ಕಂಬದಲಿ ಧಡಧಡ ಸಿಡಿಲು ಸಿಡಿಯೆಕಿಡಿಕಿಡಿಸೆ ನುಡಿಯಡಗಲೊಡನೆ ಮುಡಿವಿಡಿದುಘಡಘಡನೆ ನಡುನಡುಗೆ ಘುಡುಘುಡಿಸಿ ಸಭೆ ಬೆದರೆಹಿಡಿ ಹಿಡಿದು ಹಿರಣ್ಯಕನ ತೊಡೆ ಮೇಲೆ ಕೆಡಹಿದನ1 ಅರಿ ಶೋಣಿತ ಸುರಿಯೆಹರಿಹರಿದು ಕರುಳ ಕೊರಳೊಳಿಟ್ಟವನ2 ಸುರರು ಹೂಮಳೆಗರೆಯೆತರತರದ ವಾದ್ಯ ಸಂಭ್ರಮಗಳಿಂದಹರಿಹರಿ ಶರಣೆಂದು ಸ್ತುತಿಸಿ ಶಿಶು ಮೊರೆಯಿಡುವಕರುಣಾಳು ಕಾಗಿನೆಲೆಯಾದಿಕೇಶವನ3
--------------
ಕನಕದಾಸ
ಹಿತ ನೋಡಿ ಸಂತರ ಕೂಡೀ ಪ ಹಿತ ನೋಡಿ ಸಂತರ ಕೂಡೀ | ಮತಿ ನಿಜ ಮಾಡಿ | ಶ್ರೀ ಪತಿಯ ಕೊಂಡಾಡಿ 1 ದುರಿತ ವಿಭಂಗಾ | ನೆರೆ ಕರುಣಾಂಗದಿ | ಹೊರೆವನು ರಂಗಾ 2 ಪರಿ | ರಂಜಿಸುತಿಹ ತೇಜಃ | ಪುಂಜನ ನೋಡಿ 3 ಕಂಡಪದಕ ಹರಿದಂಡಲಿಯದೆ ನೆಲೆ | ಗೊಂಡ ವಿವೇಕದ | ಪಂಡಿತರಾಗಿ 4 ತಂದೆ ಮಹಿಪತಿನಂದನು ಸಾರಿದಾ | ಬಂದ ಜನುಮಕಿದು | ಛಂದದು ನೋಡಿ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಹಿತ ನೋಡೀ ಮಾಡಿ ಸುಜನರ | ಪಥವನೆಕೂಡಿ ಪ ಗುರುವಿಗೆ ಬಾಗಿ ಶರಣವ ಹೋಗಿ | ತರಳತೆ ನೀಗಿ ಅರಹುತರಾಗಿ 1 ಭ್ರಾಂತರಕೂಡಿ ಮತಿಗಳ ಬ್ಯಾಡೀ | ಸಂತರೊಳಾಡಿ ಅನಂತನ ಪಾಡಿ 2 ಸಂಧಿಸಿ ತಂದ ಸುಕೃತಗಳಿಂದ | ಹೊಂದುವವೆಂದೇ ನರದೇಹ ಮುಂದೆ 3 ವಿವೇಕದಿಂದಾ ವಿಡಿರಿದೆ ಛಂದಾ | ಅವನಿಲಿ ಬಂದಾ ಜನುಮಕ ಛಂದಾ 4 ಗುರುಮಹಿಪತಿಯಾ ಚರಣದ್ವಿತಿಯಾ | ವರಿಸಿ ಮುಕುತಿಯಾ ಪಡೆವದು ಗತಿಯಾಜ್ಞ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಹಿತದಿ ಜೀವಿಸು ಬಾಲೆ ಪತಿಯ ಪ ಸೇವಾನುಕೂಲೆ ಕ್ಷಿತಿಯೊಳಗೆ ಪತಿವ್ರತಾ ಧರ್ಮನಿರತಳೆನಿಸಿ ಬಹುಸುತರ ಪಡೆದು ಅ.ಪ ರತಿಪತಿಪಿತನಿಗೆ ಪ್ರತಿಮೆಗಳೆನಿಸುವ ಅತಿಥಿಗಳ ಸಂತತ ಸುಶೇವಾ- ರತಳು ಬಹು ಗುಣವತಿಯಳೆನಿಸುವ 1 ಗುರುಜನರಿಗೆ ಸದಾ ಶಿರಬಾಗಿ ನಡೆಯುತ ಹರುಷದಲಿ ಹರನರಸಿಯಳ ಪದ ಸರಸಿಜದಿ ಮನವಿರಿಸಿ ಪೂಜಿಸಿ 2 ಶರಣು ಜನಕೆ ಸುರತರುವೆನಿಪ ಕಾರ್ಪರ ಸಿರಿಮನೋಹರ ನರಹರಿಯ ಶುಭ ಚರಣಯುಗಲವ ಸ್ಮರಿಸುತನುದಿನ 3
--------------
ಕಾರ್ಪರ ನರಹರಿದಾಸರು
ಹಿಂದಿಲ್ಲ ಸ್ವಾಮಿ ಮುಂದಿಲ್ಲ ತಂದೆ ನೀನಲ್ಲದೆ ಕಾಯುವರೆನಗಾರು ಪ ಚರಣದಾಸರಿಗೆ ಆವರಿಸಿದ ಸಂಕಟ ಪರಿಹರಿಸಿ ಕಾಯಲು ಹರಿಯೆ ನೀನಲ್ಲದೆ 1 ಭಕ್ತವತ್ಸಲ ನೀನು ಮುಕ್ತಿ ದಾಯಕನಯ್ಯ ಭಕ್ತರ ವಿಪತ್ತು ಕಳೆಯುವರಾರು ನಿನ್ನ್ಹೊರತು 2 ಶ್ರೀಶ ಶ್ರೀರಾಮ ಜಗದೀಶ ಈ ದಾಸನ ಆಸೆಯ ಪೂರೈಸಿ ಪೋಷಿಸು ಬೇಗನೆ 3
--------------
ರಾಮದಾಸರು
ಹಿರಣ್ಯಕಶ್ಯಪವೈರಿ ಮುರದಾನವವಿದಾರಿ ದುರಿತರೋಗ ನಿವಾರಿ ಪಾಹಿ ನೃಹರಿ ನಖಮುಖಮಹಾಯುಧ ಅಖಿಲ ಸಂಪತ್ಪ್ರದ ನಿಖಿಲ ಲೋಕಾಧೀಶ ಭಕ್ತಪೋಷ | ನೃಪಂಚಮುಖದೇವ ಸುಪವಿತ್ರ ಶ್ರೀಧವ | ಕೃಪಾರ್ಣವ ಕೇಶವ ಸುಪ್ರಭಾವ | ಘೋರ ವಿಕ್ರಮರೂಪ ವೈರಿ ಭಂಜನಕೋಪ | ಸಾರಸುಗುಣ ಕಲಾಪ ವಿಜಿತತಾಪ ವೇದವೇದ್ಯಸುಭದ್ರ ತರಳೆವರದ ಸಾಧುಸಮ್ಮತಚರಿತ ಸಿದ್ಧಿದಾತ ಕ್ಷುದ್ರದೈದ್ಯವಿನಾಶ ಚಿದ್ವಿಲಾಸ ಭದ್ರಶೇಷಾದ್ರೀಶ ಶ್ರೀನಿವಾಸ
--------------
ನಂಜನಗೂಡು ತಿರುಮಲಾಂಬಾ
ಹಿರಣ್ಯಾ ಸುರಹರÀನೇ ಪ ದುರುಳ ದೈತ್ಯನು ಧಾರುಣಿಯನು ಬಾಧಿಸಲಾಗ ಹಿರಣ್ಯನ ಕೊಂದು ದೇವಿಯನು ಪಾಲಿಸಿದೇ 1 ತರಳ ಪ್ರಲ್ಹಾದನು ಮೊರೆಯಿಡುತಿರಲಾಗ ನರಸಿಂಹರೂಪದಿ ಬಂದು ಪಾಲಿಸಿದೇ 2 ಕನಕಾಸುರನು ತನ್ನ ಕಂದನ ಕೆಣಕಲು ದನುಜನ ಬಗೆದ ಶ್ರೀ ಚೆನ್ನಕೇಶವನೇ 3
--------------
ಕರ್ಕಿ ಕೇಶವದಾಸ
ಹಿರಿಯ ಅತ್ತಿಗೆಯರ ಗರವು ಕಂಡೆವೆಮೇರುಗಿರಿಗಿಂತ ಕೋಟಿ ಅಧಿಕವೆ ಸಖಿಯೆನಾ ಹ್ಯಾಂಗೆಸುಮ್ಮನಿರಲಿ ಪ. ಓಡಿ ಬಂದವಳು ಒಳಗೆ ಸೇರಿಮಾತಾಡಳು ನೋಡಳು ನಮ್ಮ ಅಣ್ಣನ ಮಡದಿಯುನೋಡಳು ನಮ್ಮ ಅಣ್ಣನು ಮಡದಿಗೆಮಾಡಿದ ಮೋಹ ತಲೆಗೇರಿ1 ಹೆಣ್ಣು ರುಕ್ಮಿಣಿ ತಮ್ಮ ಅಣ್ಣನವಂಚಿಸಿಓಡಿ ಬಂದು ಕಣ್ಣಿಲೆನೋಡಿ ಕರೆಯಳುಕಣ್ಣಿಲೆ ನೋಡಿ ಕರೆಯಳು ಇವಳು ನಮ್ಮಅಣ್ಣನ ಬಲವ ಹಿಡಕೊಂಡು2 ಇಂದು ರುಕ್ಮಿಣಿ ತಿಳಿದು ಬಂದಳು ಭಾಳೆ ವಿನಯದಿಬಂದಳು ಭಾಳೆ ವಿನಯದಿ ದ್ರೌಪತಿಯಆಲಿಂಗನವÀ ಮಾಡಿ ಕರೆದಳು 3 ಬಾರವ್ವ ಸುಭದ್ರೆ ಏರವ್ವ ಸೋಪಾನ ತೋರವ್ವ ನಿನ್ನ ವಚನವತೋರವ್ವ ನಿನ್ನ ವಚನವ ಎನುತಲಿ ದ್ವಾರದಿ ಕೈಯ್ಯ ಹಿಡಕೊಂಡು4 ಬಂದ ಬೀಗಿತ್ತಿಯರು ಚಂದದಿಂದ ಇದುರುಗೊಂಡು ಮಂದಹಾಸದಲೆ ನುಡಿಸುತಮಂದ ಹಾಸದಲೆ ನುಡಿಸುತ ರುಕ್ಮಿಣಿ ಬಂದವರು ಯಾರು ಮನೆಯೊಳು 5 ಸೊಂಡಿಲನಗರದ ಪಾಂಡು ಭೂಪನ ಸೊಸೆಗಂಡುಗಲಿ ಪಾರ್ಥನ ಆರ್ಧಾಂಗಿಗಂಡುಗಲಿ ಪಾರ್ಥನ ಆರ್ಧಾಂಗಿ ಸುಭದ್ರಾಮುಯ್ಯವ ಕೈಕೊಂಡು ಬ್ಯಾಗ ತಿರುಗಿಸು 6 ಹರದಿ ರುಕ್ಮಿಣಿ ದೇವಿ ಸೆರಗ ಹಿಡಿದು ದ್ರೌಪದಿಯದೊರೆಗಳ ಹೆಸರು ನಮಗ್ಹೇಳೆ ದೊರೆಗಳ ಹೆಸರು ನಮಗ್ಹೇಳೆ ರಾಮೇಶನ ಪರಮಭಕ್ತರಿಗೆ ನುಡಿದಳು 7
--------------
ಗಲಗಲಿಅವ್ವನವರು
ಹೀಗಿದ್ದವನೇ ತಿಳಿದವನು | ನಿಜ | ಯೋಗದ ಮಾರ್ಗಕ ಬೇಗ ಹೊಂದುವನು ಪ ನೆಂಟರಿಷ್ಟರೊಳು ದಾಕ್ಷಿಣ್ಯಾ | ತನ್ನ | ಬಂಟ ಜನರ ಮ್ಯಾಲ ಘನ ಕಾರುಣ್ಯಾ | ಶುಂಠ ಶಠರೊಳು ಕಾಠಿಣ್ಯಾ | ತನ | ಗುಂಟಾದ ಸಾಧುಗಳೊಳು ಪ್ರೀತಿ ಬಣ್ಣಾ 1 ಅರಸುಗಳಲಿ ನಮ್ರ ಸ್ಥಿತಿ | ಸರ್ವ | ವರಿತ ವಿದ್ವತ್ತರೋಳರ್ಜಿವ ವೃತ್ತಿ | ಅರಿಗಳೊಳಗೆ ಶೌರ್ಯ ಖ್ಯಾತಿ | ತನ್ನ | ಗುರುಗಳೊಳಗ ಭೆಜ್ಜರಂಜಿಕೆ ನೀತಿ 2 ಹೆಂಗಳೆಯರೊಳು ಧೂರ್ತತನಾ | ತಾನು | ಹಿಂಗದೆ ಮಾಡುವ ಶ್ರವಣ ಮನನಾ | ತುಂಗ ಮಹಿಪತಿ ಸುತ ಪ್ರಿಯನಾ | ಮಂಗ | ಳಂಗುಟ ನೆನೆವನು ಬಿಡದನು ದಿನಾ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಹೀಂಗ್ಯಾಕ ಪ್ರಾಣಿ | ಹೀನ ಗುಣಗಳನೆಬಿಡಲಿಲ್ಲ | ಶ್ರೀ ಗುರುವಿನಾಶೆಯ ಮಾಡಲಿಲ್ಲ ಪ ವಿವೇಕವ ತೊಡಲಿಲ್ಲ ಅ-ವಿವೇಕವ ಸುಡಲಿಲ್ಲ |ಸಾವಧಾನದಿ ಮನವಿಡಲಿಲ್ಲ 1 ಆಚಾರವ ಕೊಳಲಿಲ್ಲಮತ್ಸರವ ಮರೆಯಲಿಲ್ಲಸಚ್ಚಿದಾನಂದ ಸುಖ ಉಣಲಿಲ್ಲ 2 ಈ ನಡತೀ ತರಹವಜಾಣನಾದವನೇ ಬಲ್ಲ |ಜ್ಞಾನಬೋಧನು ಸಾರಿದ ಸೊಲ್ಲ 3
--------------
ಜ್ಞಾನಬೋದಕರು
ಹುಚ್ಚು ಹಿಡಿದಿದೆ ಎನಗೆ ಹುಚ್ಚು ಹಿಡಿದಿದೆ ಪ ತುಚ್ಛ ವಿಷಯವೆಂಬುವಂಥ ಅಚ್ಚಮದ್ದು ನೆತ್ತಿಗೇರಿಅ.ಪ ಹಿರಿಯರರಿಯೆ ಕಿರಿಯರರಿಯೆ ಹರಿಯ ಸ್ಮರಣೆ ಮಾಡಲರಿಯೆ ನಾರಿಯರ ಪರಿಚಯದಿ ಆರು ಪುರುಷರೊಡನೆ ಇರುವೆ 1 ಇದ್ದರಿದ್ದೆ ಎದ್ದರೆದ್ದೆ ಇದ್ದ ಸುದ್ದಿ ಪೇಳಲರಿಯೆ ಕದ್ದ ಕಳ್ಳನಂತೆ ಇದ್ದು ಬುದ್ಧಿ ಹೊದ್ದಿಕಿ ಬಿಟ್ಟಿರುವೆ 2 ಹೀನಗುಣಗಳೇನು ಪೇಳಲಿ ಶ್ರೀ ನರಹರಿಯೆ ನೀನೆ ಬಲ್ಲಿ ಮಾನವಂತರು ಜ್ಞಾನವಿತ್ತು ಅಜ್ಞಾನ ವಿಷಯ ಹಾನಿ ಮಾಡಿರಿ3
--------------
ಪ್ರದ್ಯುಮ್ನತೀರ್ಥರು
ಹುಚ್ಚು ಹಿಡಿಯಿತು ಎನಗೆ | ಹುಚ್ಚು ಹಿಡಿಯಿತು ಪ ಸ್ವಚ್ಛ ಭಾಗವತವ ಕೇಳಿ | ಅಚ್ಯುತನ್ನ ಮಹಿಮೆ ಎಂಬಮೆಚ್ಯಮದ್ದು ಶಿರಕೆ ಏರಿ | ಹುಚ್ಚು ಹಿಡಿಯಿತು ಅ.ಪ. ಶ್ರವಣ ಸ್ತವನ ಸ್ಮರಣೆ ಸೇವೆ | ಅವನ ಅರ್ಚನೆ ವಂದನೆ ಸಖ್ಯಅವ ದಾಸ್ಯ ಆತ್ಮ ಅರ್ಪಣ | ನವವು ವಿಧದ ಭಕ್ತಿಗಳಿಪ 1 ಸಪ್ತ ದಿನದ ಕ್ಲುಪ್ತಿಯಿಂದ | ಸರ್ಪಶಯನ ಮಹಿಮೆ ಶ್ರವಣಶೃತಿ ಬಧಿರ ವಾಯ್ತು ಆತ್ಮ | ರಿಕ್ತ ವಿಷಯ ಶ್ರವಣಕೆಲ್ಲ 2 ಸ್ತವನ ಮಾಳ್ಪ ಶುಕರ ದೇಹ | ಭವಣೆ ಮರೆತು ಕೀರ್ತಿಸಿದರುಅವರ ಕಂಡು ಲೋಕವಾರ್ತೆ | ಸ್ತವನ ಗೈವರ ದೂಡುವಂಥ 3 ಹರಿಯ ಸ್ಮರಿಸಿ ಪ್ರಹಲ್ಲಾದ | ಹರಿಯ ಕಂಡು ಭವವ ಗೆದ್ದಸ್ಮರಿಸಿ ಸ್ಮರಿಸಿ ಅದನ ನಾನು | ನರರ ನಡುವೆ ಮೂಕನಾಗ್ದ 4 ನಿತ್ಯ ಮಾಳ್ಪ ಹರಿಯ ಸೇವೆಅರ್ತುಸಂತರ ಸೇವೆ ವ್ಯತಿ | ರಿಕ್ತಕೆಲ್ಲ ಪ್ರತಿಯ ಭಟಿಪ 5 ಅಂಬೆ ರಮಣನರ್ಚಿಸೀದ | ಕುಂಬಾರ ಭೀಮನ ಕೇಳಿ ನಾನುಅಂಬುಜಾಕ್ಷನರ್ಚನೆಗಲ್ಲದ | ತುಂಬಿದ್ವ್ಯೊಭವ ಚೆಲ್ಲುವಂಥ 6 ಕೃಷ್ಣ ವಂದನ ಅಕ್ರೂರ ಗೈದು | ಸುಷ್ಠು ಹರಿಯ ರೂಪ ಕಂಡಜಿಷ್ಣು ಸಖನ ನಮಿಸದವರ | ಭ್ರಷ್ರ್ರರೆಂದು ಬೈಯ್ಯುವಂಥ 7 ನಿತ್ಯ ನೆನೆಯದವರ | ಕ್ಷಣವು ಅವರ ಸಂಗಜರಿವ 8 ಪಾರ್ಥ ಸಖ್ಯತನದಿ ಪರಮ | ಅರ್ಥ ಪಡೆದುದನ್ನ ಕೇಳಿನಿತ್ಯ ಸಖನ ಮರೆತ ಜನರು | ವ್ಯರ್ಥರೆಂದು ಅರ್ಥಿಲಿ ನಗುವ9 ಭೃತ್ಯ ಬಲಿಯು ತನ್ನನಿತ್ತಸತ್ಯ ವಾರ್ತೆ ಕೇಳಿ ಕೇಳಿ | ಪ್ರವೃತ್ತಿ ಗೈದಿನ್ಯತ ನೆದಿ 10 ನಿಚ್ಚ ಗುರು ಗೋವಿಂದ ವಿಠಲ11
--------------
ಗುರುಗೋವಿಂದವಿಠಲರು
ಹುಚ್ಚುಗೊಳಿಸುವರೆ ಮರುಳೆ ತರುಳಾರ ಅಚ್ಚುತ ಪರಮ ಗಂಭೀರ ಪುರುಷನೆ ಪ ಎಲ್ಲವು ಬಯಸುವ ಹಟದಿ ಶಿಸುವಿಗೆ ಬೆಲ್ಲವ ತೋರಿಸಿ ನಿಲುದಿಪ್ಪೋದು1 ಮಿನುಗುವ ಮಣಿತೋರೆ ತನು ಬೆವರೆ ಪೋಗೆ ಕನಡಿಭಾನಿಂದುದಕ ಕೆಳಗೊಳಿಸುವರೆ 2 ಕಪ್ಪು ವಸ್ತ್ರವ ಕಂಡು ನಡುಗುವಂಗೆ ಕಪ್ಪ ಕಲ್ಪಿಸೆ ಅಪ್ಪಾ ಎನ್ನೆ ಅಪ್ಪಿ ನಗಿಸುವರೆ 3 ನಗುವ ಕೂಸಿನ ಅಳಿಸಿ ಮುದ್ದಾಡಿ ನಗುಸುವೀ ನೀನು ಬಗೆ ಬಗೆಯಿಂದ 4 ಪರಿ ಮಾಡದಿದ್ದರೆ ವಾಸು ಕಾಲ ಕಳೆವದೆಂತೊ 5
--------------
ವ್ಯಾಸತತ್ವಜ್ಞದಾಸರು
ಹುಡುಕಿ ಕರೆತಾರೆ ಸಖಿ ಜಡಜನಯನ ಒಡೆಯನ್ಹಂಬಲ ಪಾದ ಗಡನೆ ಪೋಗಿ ಪ ಧ್ಯಾನಧೃಢ ಅವನು ಇರುವ ಸ್ಥಾನ ಪೇಳುವೆ ಜಾಣೆ ಕೇಳೆ ಹಗಲು ಇರುಳು ಖೂನವಿಲ್ಲವನಿಹ್ಯ ಸ್ಥಳದಿ ತಾನೆತಾನಾಗಿ ಸೂಕ್ಷ್ಮದಿ ಶೂನ್ಯ ಪೀಠದಿ ವಾಸಿಪ ಜಾಣನ ಜವದಿಂ ಪೋಗಿ 1 ಅರಿದು ಮರೆದಿರೆ ಅವನ ಗುರುತು ಒರೆಯುವೆ ಜರಾಮರಣಿವಲ್ಲವಗೆ ಧರಿಸಿರುವಂತವತಾರ ತಿರುಗಲು ಮೂಡವು ಅಡಿಗಳು ನೆರಳೇ ಇಲ್ಲವು ನಿಲ್ಲಲು ಶರೀರವಿಲ್ಲದೆ ತೋರುವ ಪರಮನ ತ್ವರಿತದಿ ಹಿಡಿದು 2 ಪ್ರೇಮ ಸುಂದರೀ ಅವನ ನಾಮ ಪೇಳುವೆ ನೇಮದಿಂದ ಕೂಗುತಿಹ್ಯವು ಸಾಮಯಜುರಾದಿ ವೇದವು ಆಮಹಮಹಿಮನ ಘನತರ ನಾಮದ ನೆಲೆಯೇ ಸಿಗದಿದೆ ಕಾಮಿನಿಯಂಥ ಸ್ವಾಮಿ ಶ್ರೀ ರಾಮ ಸದ್ಗುರು ಪ್ರಭುವಿನ 3
--------------
ರಾಮದಾಸರು
ಹುಡುಕಿ ನೋಡೆಲೋ ನಿನ್ಯಾರೆಂದು ಧೃಢಚಿತ್ತಕÉ ತಂದು ಪ ಮಲಮೂತ್ರದ ಬೀಡು ಹೊಲೆಯ ಸಂಸಾರದೊಳೀಡು ಗುರುಚರಣಕೆ ಕೂಡು 1 ಏಸು ದುರ್ಗಂಧದೊಳು ನೀ ಬೆಳಿದೆ ಸೂತಕದಿಂದಿಳಿದೆ ಆಶಾಪಾಶದಲಿ ದಿನವನು ಕಳೆದೆ ಮಾಯೆಯೊಳು ಸಳಿದೆ 2 ಅಂತರಾತ್ಮನ ನೆಲೆಯ ಹುಡುಕು ಇದಕ್ಯಾತಕೆ ತುಡುಕು ಶಾಂತ ಶ್ರೀ ವಿಮಲಾನಂದನ ಹುಡುಕು ಅಜ್ಞಾನವ ಬಿಡುಕು 3
--------------
ಭಟಕಳ ಅಪ್ಪಯ್ಯ