ಒಟ್ಟು 32405 ಕಡೆಗಳಲ್ಲಿ , 137 ದಾಸರು , 8458 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಯಾಕೆ ಮರುಳಾದೆ ಹೀಂಗೆ ಎಲೆ ಮನವೆ ಕಾಕು ಬುದ್ಧಿಯ ಬಿಡು ಬಿಡು ಸುಮ್ಮನೆ ಪ. ಧನದಾಸೆಯನು ಮರಿ ಮನುಮಥನ ಬಾಣಕಳುಕದಿರು ತೊಳಲದಿರು ನೆಲದಾಸೆಗೆ ನೀನದರ ಅನುವರಿತು ಹರಿಯ ಸ್ಮರಿಸು ಮನವೆ 1 ಅನ್ಯರಾಗುಣ ದೋಷಯಣಿಸದಲೆ ನಿನ್ನಿರವ ನೋಡು ಕಂಡ್ಯಾ ಮನವೆ ಬಂಣಗಾರಿಕೆಯು ಬರಿದೆ ಔದಂಬ್ರ- ಹಣ್ಣಿನಂತೀ ಕಾಯವು ಮನವೆ 2 ತಮ್ಮ ಬುದ್ದಿ ತಲೆಗೆ ಸುತ್ತಿ ಸಂಸಾರ ಭ್ರಮೆಗೊಂಡು ಬಳಲಾದಿರೋ ಕಮಲಪತ್ರಕ್ಕೆ ಒಳಗಿನ ಜಲದಂತೆ ನೆಲಕೆ ನಿರ್ಲೇಪನಾಗೋ ಮನವೆ 3 ಈ ದೇಹ ಸ್ಥಿರವಲ್ಲವೊ ಕಾಲನಾ ಬಾಧೆಗೋಳಗಾಗದಿರೋ ಮನವೆ ಭೇದ ದುರ್ಗುಣವ ತ್ಯಜಿಸು ನೀ ಗೇರುಬೀಜದಂದದಿ ತಿಳಿಯೊ ಮನವೆ 4 ಮಾಡು ಹರಿಸೇವೆಯನ್ನು ಮನದಣಿಯೆ ಬೇಡು ಹರಿಭಕ್ತಿಯನ್ನು ಕೂಡು ಹೆಳವನಕಟ್ಟೆಯ ವೆಂಕಟನ ಬೇಡಿ ಮುಕ್ತಿಯನು ಪಡೆಯೊ ಮನವೆ 5
--------------
ಹೆಳವನಕಟ್ಟೆ ಗಿರಿಯಮ್ಮ
ಯಾಕೆ ಮಲಗಿದೆಯೊ ಶ್ರೀಕಾಂತ ದ್ವಾರಕಾವಾಸ ಸೂರ್ಯ ಉದಯಾಯಿತು ಗೋಕುಲದೊಳಗಿದ್ದ ಗೋಮಕ್ಕಳೆಲ್ಲ ಧ್ವಜ- ರೇಖಾ ಚರಣಕಮಲಕೆರಗಿ ಕರೆಯುತಲಾಗ ಪ ಅಂಬುಧಿ ಒಳಗಾಡಿ ತಂದು ವೇದವನು ಕೊಡು ಮಂದರೋದ್ಧಾರ ಸುರರಿಗೆ ಸುಧೆಯ ನೀಡು ತಂದು ದಾಡಿಂದ ಧರೆಯನು ಹರವಿ ಧರಾಪತಿಯೆ ಕೊಂದು ರಕ್ಕಸನ ನಂದನಗೆ ದಯಮಾಡದಲೆ 1 ಬೇಡಿ ದಾನವ ಭುವನ ಮಾಡಿದೆಲೆ ಮೂರ್ಹೆಜ್ಜೆ ಆಡಿದ್ವಚÀನವ ನಡೆಸುತಾರಣ್ಯವಾಸದಲಿ ಆದಿಲಕ್ಷ್ಮಿಯನೆ ಕದ್ದಸುರನ್ನ ಸಂಹರನೆ 2 ಗೊಲ್ಲ ಸತಿಯರ ಕೂಡ ಸಲ್ಲಾಪ ಸಾಲದಲೆ ಎಲ್ಲ ತ್ರಿಪುರರ ಸತಿಯರಲ್ಲಿ ಪೋಗುವರೆ ಎಲ್ಲಿ ಓಡ್ಯಾಡಿದ್ಹೇಳಿಲ್ಲಿ ವಾರಿಧಿಶಯನ 3
--------------
ಹರಪನಹಳ್ಳಿಭೀಮವ್ವ
ಯಾಕೆ ಮೂಕನಾದ್ಯೋ ಗುರುವೆ ನೀ ನ್ಯಾಕ ಮೂಕನಾದ್ಯೋ ಪ ಲೋಕ ಪಾಲಕ ಎನ್ನ ಸಾಕುವರ್ಯಾರಯ್ಯ ಶ್ರೀಕರ ರಾಘವೇಂದ್ರ ಅ.ಪ ಹಿಂದಕ್ಕೆ ನೀ ಎನ್ನ ಮುಂದೆ ಸುಳಿದಾಡಿದೆ ಮಂದಿಯೊಳಗೆನ್ನ ಮಂದನ್ನ ಮಾಡಿದ್ಯೊ 1 ಬೇಕಾಗದಿದ್ದರಿನ್ಯಾಕೆ ಕೈಯನು ಪಿಡಿದೆ ಕಾಕುಜನರೊಳೆನ್ನ ನೂಕಿ ಬಿಟ್ಟು ನೀನು 2 ಹೀಂಗೆ ಪಾಲಿಸಿದರೆ ಯೋಗಿಕುಲವರ್ಯ ರಾಘ ಭವ ಸಾಗುವದ್ಹ್ಯಾಂಗಯ್ಯ 3 ನಿನ್ನಂಥ ಕರುಣಿಲ್ಲ ಎನ್ನಂಥ ಕೃಪಣಿಲ್ಲ ಘನ್ನ ಮಹಿಮ ನೀ ಎನ್ನನು ಬಿಟ್ಟೀಗ 4 ಜನನಿಯು ನೀ ಎನ್ನ ಜನಕನಯ್ಯ ಮನ್ನಿಸೋ ನೀ ನಿತ್ಯಾನನ್ಯ ಶರಣನೆ 5 ಎಂದಿಗಗಾದರು ನಿನ್ನ ಪೊಂದಿಕೊಂಡವನೆಲೊ ಇಂದು ಕೈ ಬಿಟ್ಟರೆನ್ನ ಮುಂದೆ ಕಾಯುವರ್ಯಾರೊ 6 ನಾಥನು ನೀ ಅನಾಥನು ನಾನಯ್ಯ ಪಾತಕದ ಜಗನ್ನಾಥ ವಿಠಲ ದೂತ 7
--------------
ಜಗನ್ನಾಥದಾಸರು
ಯಾಕೆ ಮೈ ಮರೆತಿದ್ದೆ ಹೇಳೋ ಎಲೆ ಮರುಳೆ ಜೋಕÉ ತೀರೀತು ನಿನ್ನ ಬಾಳು ಪ ನಿಟ್ಟೆಲುಗಳಿಂದ ಕೈ ಕಾಲ್ಗಳೆಂಬುವನು ಮಾಡಿ ಚಿಟ್ಟೆಲುಗಳನು ಸಂದಕೂಡಿ ಪಟ್ಟಿನಲ್ಲಿ ತನುಪುರವ ಕಟ್ಟಿದರು ನರದಿಂದ ಪಟ್ಟಣವ ನಿರ್ಮಿತವ ಮಾಡಿ ಅಷ್ಟಪುರ ಕಲ್ಲಲ್ಲಿ ನವಕವಾಟವ ರಚಿಸಿ ದುಷ್ಟದುರ್ಜನರೆಲ್ಲ ಕೂಡಿ ಕಟ್ಟಿದರು ಜೀವನಿಗೆ ಇವರ ಕೂಡಾಡಿ 1 ರಕ್ತಮಾಂಸವು ಚರ್ಮಪೂಡಿ ಮತ್ತೆ ಮಲ ಮೂತ್ರ ಕ್ರಿಮಿ ಕೀಟ ರುಜೆಬಾಧೆಯಲಿ ವಿಸ್ತರದಲಿದಕೆÉ ನಲಿದಾಡಿ ವ್ಯರ್ಥದಲಿ ದಿನವ ನೀಗಾಡಿ ಅಸ್ಥಿರದ ದೇಹವನು ನಚ್ಚಿಭವ ಶರಧಿಯೊಳು ಕುಸ್ತರಿಸಿ ಬಿದ್ದು ಈಜಾಡಿ 2 ಹೊಲಸು ಹೆಬ್ಬಡಿಕೆ ನಾರುವನರಕ ಕೀವು ಕ್ರಿಮಿ ಯಲು ನರಂಗಳು ಮಜ್ಜೆ ಮಾಂಸ ಕೊಳಕು ನಾರುವ ಹಡಿಕೆಗೆಳಸುತಿಹ ನಾಯಂತೆ ಬಲಿದಿಹುದು ನಿನ್ನ ಮೇಲಂಶ ಬಳಲಿ ಬಸವಳಿದೆಲೋನ ಪುಂಸ ಕೊಳೆಯ ಮೇಧ್ಯದ ಪುಂಜ ತನುವಿದನು ನೆರೆನಂಬಿ ಫಲವಿಲ್ಲ ಹರಿಯಧ್ಯಾನಿಸೋ ಪರಮಹಂಸ 3 ಸತಿ ಹೊಂದುವರು ನಿನ್ನ ಕಣ್ಣಾರೆ ಕೇಳ್ವೆ ಕಿವಿಯಿಂದ ಗುರಿಯಾಗಿ ಇಂದಿರೇಶನ ಪೂಜಿಸಲು ನಾಕೈಯಾರೆ4 ಇದರೊಳಗೆ ಬಾಲ್ಯಕೆನೊರ್ಯ ಯೌವ್ವನವೆಂಬ ಉದಯಾಸ್ತಮಾನ ಪರಿಯಂತರವು ಸುದತಿ ಸುತರಲಿ ಮೋಹವಿರಿಸಿ ದಣಿಯದಿರು ಮನವ ನೆರೆನಿಲಿಸಿ ಲಕ್ಷ್ಮೀರಮಣನನು ಹೃದಯದೊಳುಸ್ಮರಿಸಿ 5
--------------
ಕವಿ ಪರಮದೇವದಾಸರು
ಯಾಕೆ ಮೈಮರೆದೆ ನೀನು ಪ. ಯಾಕೆ ಮೈಮರೆದೆ ಶ್ರೀ ಹಯವದನನ ಪಾದವನುಬೇಕೆಂದು ಬಿಡದೆ ಭಜಿಸೊ ನಿನ್ನಕಾಕು ವ್ಯಸನಗಳ ತ್ಯಜಿಸೊ ಈ ದೇಹತಾ ಕಂಡ ಕನಸೋ ಸ್ಥಿರವಲ್ಲ ಇನ್ನುನೀ ಕೇಳದಿರೆ ನಿನ್ನ ಮನಸೋ ಪ್ರಾಣಿ ಅ.ಪ. ಪರಹೆಣ್ಣುಗಳ ನೋಡಿ ಪಾತಕಿಗಳ ನೀಡಾಡಿಹರಿದೆದ್ದು ಕಡೆಗೆ ಕರೆವೆ ಎಲೆಮರುಳೆ ಹರುಷದಿಂದವಳ ನೆರೆವೆ ಅಕಟಕಟದುರುಳ ಜೀವನೆ ನಿನಗೆ ತರವೆ ಮತ್ತೊ-ಬ್ಬರಿಗೆ ಬರಿದೆ ನೀ ಹೇಳುವೆಲ್ಲೊ ಶಾಸ್ತ್ರಗಳನೊರದೊರದು ಕೇಳ್ವೆಯಲ್ಲೊ ನೀ ಹೋಗಿನರಕದೊಳು ಬೀಳ್ವೆಯಲ್ಲೊ ಪ್ರಾಣಿ 1 ಧನವ ಕೂಡಿಸಿಕೊಂಡು ದಾನ ಧರ್ಮವ ಮಾಡ-ದೆನಗಾರು ಸಾಟಿಯೆಂಬೆ ಇಷ್ಟಜನರ ಬಿಟ್ಟೊಬ್ಬನುಂಬೆ ಎಲೊ ಎಲೊಮುನಿದು ಸಕಲರ ಮುನಿಯಗೊಂಬೆ ಆಧನವು ಮನಶುದ್ಧವಾಗಿ ಇಹುದೆ ಅದು ಸಾವದಿನದೆ ಸಂಗಡ ಬಾಹುದೆ ಕುಬೇರನಬಿಟ್ಟು ಕಡೆಗೆ ಹೋಹುದೆ ಪ್ರಾಣಿ 2 ಅಳೆವ ಕೊಳಗದ ಮಾಟ ಆತ್ಮನಿನ್ನೋಡಾಟ ಸರ-ಕಳೆದ ಬಳಿಕ ನೋಡೊ ದೇಹ ತಾ-ನುಳಿಯದು ಹಮ್ಮು ಮಾಣೊ ಎಲೆ ಮರುಳೆಗಳಿಸಿರೋ ಧರ್ಮಗಳ ವ್ಯರ್ಥ ಕೆಡಬ್ಯಾಡೊ ದಿನಮಾನಗಳ ಕಳೆಯದಿರು ನಿತ್ಯವಲ್ಲ ಇದಕೆಉಳಿದರ್ಥ ಕೆಲಸಕಿಲ್ಲ ಹಿಂದೆಉಳಿದವರೊಬ್ಬರಿಲ್ಲ ಪ್ರಾಣಿ 3 ಕೊಲೆ ದೋಷವೆಂದರಿಯೆ ಕೊಸರು ಒಬ್ಬನ ಜರೆವೆಇಳೆಯೊಳದಾವನೀತ ನಿನಗೆ ನೀತಿಳಿದುಕೊ ನಿನ್ನಮಾತ ನೀಖಿಲಗೊಳಬೇಡ ಆಭಾಸ ಸೂಚಿಸಿ ಜರೆವರೆಕೊಲೆಗೆ ಗುರಿಯಾದೆ ಕಾಣೊ ಈ ಕೋಪಹೊಲೆಗೆ ಸರಿಯಲ್ಲವೇನೊ ನಿನ್ನಹುಳುಕು ಬುದ್ಧಿಯನು ಮಾಣೊ ಪ್ರಾಣಿ 4 ಮರೆದು ಕಳೆ ಕ್ರೋಧವನು ಮಾಡದಿರು ಲೋಭವನುಗುರುಹಿರಿಯರಾದವರಿಗೆರಗೂ ಅನಾ-ಥರಿಗೆ ಚೆನ್ನಾಗಿ ಮರುಗೊ ಇದೆಪರಮಗತಿಯ ಸೆರಗೊ ಭಕ್ತರಿಗೆಸಿರಿಯರಸ ಹಯವದನನೊಡೆಯ ಲೋಕಪರನಿಂದಕರಿಂಮುಕ್ತಿಪಡೆಯೊ ಭಜಿಸಿದುರಿತ ಸಂಕಲೆಯ ಕಡಿಯೊ ಪ್ರಾಣಿ 5
--------------
ವಾದಿರಾಜ
ಯಾಕೆ ರಂಗ ನಿನಗೆ ಮಾಕಾಂತೆಯೊಳು ಗರ್ವ | ಲೋಕದೊಳು ಅಬಲೆಯೇನೋ ಕೇಳಯ್ಯಾ ನೀನು ಪ ಮೀನಾವತಾರವ ನೀನಂದು ವಿಡಿದರೆ | ಮೀನಾಂಬಕಿ ತಾನಾದಳೋ1 ಬೆಟ್ಟವ ಬೆನ್ನಿಲಿ ಕಷ್ಟದಿ ನೆಗೆದರೆ | ಬಟ್ಟ ಕುಚಗಳ ಹೊತ್ತಳೋ 2 ಧರೆಯ ಭಾರವ ತಾಳಿದರ ನಿನ್ನಾಭಾರವನು | ಧರಿಸಿದಳಂದಗಲದಲೆ 3 ಸಿಂಹಾನನನಾಗಿ ಮಹಿಮೆ ದೋರಿಸಿದರೆ | ಸಿಂಹದಂತೆ ನಡು ನಡುವಾದಳೋ 4 ಬಲಿ ಬಾಗಿಲಕಾಯಿದರೆ ನೆಲೆಸಿಹಳವಳಲ್ಲಿ | ಬಲಿಯಾ ಭಾಗ್ಯ ರೂಪವಾಗಿ5 ಸುರರ ಹೊರಿಯಲಿಕ್ಕೆ ಪರಶವ ಪಿಡಿದರೆ | ಪರಸಗೈಯ್ಯ ತಾನಾದಳೋ 6 ಹರನಾ ಚಾಪವನೆಗೆದರೆ ಅದನೆವೆ ಮುನ್ನೆ | ಕರೆದಲೆ ತ್ಯಾಡಿದಳೊ 7 ಸೆರೆಹರಿದು ಸ್ತ್ರೀಯರಾ ತಂದರೆ ನಾರದರಿಂದ | ಸೆರೆವಿಡಿಸೆ ಕೊಂಡಳೋ 8 ಮುಪ್ಪರ ಹೊಕ್ಕರೆ ನೀವಪ್ಪುತಲಿ ಹನಿನ್ನಾ | ಮುಪ್ಪುರದಲಿ ಮೆರೆದಳೋ 9 ತುರುಗವ ಏರಿಕೊಂಡು ತಿರುಗಲು ನಿನ್ನಾಕೂಡ | ತುರಗಮನಿ ತಾನಾದಳೋ 10 ಕಡೆಯಕಾಲಕ ನೀರೊಳೊಡಗೂಡಿ ಮಲಗಲು | ಒಡನೆ ವಟದೆಲೆ ಯಾದಳೋ11 ಗುರು ಮಹಿಪತಿ ಪ್ರಭು ಚರಿತೆಯಾ ನಿಮ್ಮೀರ್ವರ | ಭರದಿ ಹೇಳಲೆನ್ನಳವೇ 12
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಯಾಕೆ ಸುಮ್ಮನೆ ಇದ್ದೆಪ್ಪ ಬಂದು ಜೋಕೆ ಮಾಡು ಎನ್ನ್ಹಡೆದಪ್ಪ ಪ ಸಾಕಾರವಿಲ್ಲದ ಭವಕಪ್ಪ ಎನ್ನ ನೂಕಬಾರದಿತ್ತೆನ್ನಪ್ಪ ಅ.ಪ ಕೇಡಿನುಗಮ ಪ್ರಪಂಚಪ್ಪ ಇದು ಮಾಡಿಟ್ಟ ಮಹ ಕಾಡಡವ್ಯಪ್ಪ ಮೋಡಿ ಇಂದ್ರಜಾಲ ಛಾಯಪ್ಪ ತುಂಬಿ ಮಾಡಿದ್ಯೋ ಬಲು ಮಂಗಮಲಕಪ್ಪ ಗಾಢಾಂಧಾಕಾರಮಯ ಕಾಳಪ್ಪ ಎನ್ನೀ ಕೇಡಿನಿಂದುಳಿಸು ಸದಾನಂದಪ್ಪ 1 ತುಂಬಿ ಪ್ರಪಂಚವೆಂಬ ಬೈಲಪ್ಪ ಜಡ ಬೊಂಬೆ ಕುಣಿಸುವಿ ಬಲು ಚಂದಪ್ಪ ನಂಬಿದವರ ಅಂತರಂಗಪ್ಪ ನಿನ್ನ ಕಾಂಬುವರರಾರು ಮಹಿಮೆ ಮೇಲಪ್ಪ ನಂಬಿದೆ ನಿನ್ನ ಪಾದಪದುಮಪ್ಪ ಎನ ಗಿಂಬುಪಾಲಿಸು ನಿಜ ಧರ್ಮಪ್ಪ 2 ಧಾತ್ರಿ ಈರೇಳಕ್ಕೆ ರಾಜಪ್ಪ ಜಗ ಸೂತ್ರಧಾರ ನೀನೆ ಸತ್ಯಪ್ಪ ಭ್ರಾತೃ ಬಂಧು ನೀನೆ ಶರಣಪ್ಪ ಪಿತ ಮಾತೃ ನೀನೆ ಎನ್ನ ಪಾಲಪ್ಪ ಪಾತ್ರನೆನಿಸು ದಾಸಸಂಗಪ್ಪ ನಿನ್ನ ಖಾತ್ರಿ ಕೊಡೆನಗೆ ಶ್ರೀರಾಮಪ್ಪ 3
--------------
ರಾಮದಾಸರು
ಯಾಕೆ ಸುಮ್ಮನೆ ಹೊತ್ತ ಕಳೆವಿರಿ ಲೋಕವಾರ್ತೆಯಲಿ ಶ್ರೀಕರನ ಸರ್ವತ್ರ ಸ್ಮರಿಸುತ ನಾಕ ಭೂಗತ ಸೌಖ್ಯ ಬಯಸದೆ ಏಕಚಿತ್ತದಿ ನಂಬಲನುದಿನ ಸಾಕುವನು ಸಕಲೇಷ್ಟದಾಯಕ ಪ. ಸ್ನಾನ ಜಪ ದೇವಾರ್ಚನ ವ್ಯಾಖ್ಯಾನ ಕರ್ಮಗಳು ದಾನ ಧರ್ಮ ಪರೋಪಕಾರ ನಿಜಾನುಪಾಲನವು ಏನು ಮಾಡುವುದೆಲ್ಲ ಲಕ್ಷ್ಮೀಪ್ರಾಣನಾಯಕ ಮಾಳ್ಪನೆಂದರಿ- ದಾನು ನನ್ನದು ಎಂಬ ಕೀಳಭಿಮಾನ ತಾಳದೆ ಧ್ಯಾನ ಮಾಡಿರಿ 1 ಪೊಟ್ಟಿಯೊಳಗಿಂಬಿಟ್ಟು ಚೀಲದಿ ಕಟ್ಟಿ ಬಿಗಿದಿರುವ ಕಾಲದಿ ಕೊಟ್ಟು ಬುತ್ತಿಯನಿಟ್ಟು ಬಾಯೊಳು ಧಿಟ್ಟ ತಾ ಪೊರೆವ ವಿಠಳ ಕರುಣಾಳು ಕಾಯನೆ ಥಟ್ಟನೊದಗುವ ತನ್ನ ದಾಸರ ಮಾಡುವ ರಾಜನಿರುತಿರೆ 2 ಪಾಪವೆಂಬುದೆ ಪಂಕಜಾಕ್ಷ ರಮಾಪತಿಯ ಮರವು ಪುಣ್ಯ ಕಲಾಪವೆಂಬುದೆ ಪೂರ್ವ ಗಿರಿವರ ಭೂಪತಿಯ ನೆನಪು ಈ ಪರಿಯ ಶ್ರುತ್ಯರ್ಥಸಾರ ಪದೇ ಪದೇ ಮನದಲ್ಲಿ ಗ್ರಹಿಸುತ ತಾಪ ಹೊಂದದೆ ಭೂಪರಂತಿರಿ 3
--------------
ತುಪಾಕಿ ವೆಂಕಟರಮಣಾಚಾರ್ಯ
ಯಾಕೆÀ ಬಾರ ಸಖಿ ತ್ರಿವಿಕ್ರಮನ್ಯಾಕೆ ಬಾರ ಸಖಿ ಅ-ನೇಕ ಮಹಿಮ ವಿವೇಕನಿಲಯ ಮೂ-ಲೋಕ ಮೋಹನಮೂರ್ತಿ ಮುಕ್ತಶೋಕ ಪ. ಕರ್ಮ ವಿಮೋಚನಮುಂಜÉರಗ ಪಿಡಿದೆಳೆಯೆಸಂಜೆ ಬರಲೆಂದು ಸವಿನುಡಿಯ ನುಡಿವಕುಂಜರನ ಭಯಭೇದಿ ಬಹಳ ವಿನೋದಿ ಸಕಲರಿಗಾದಿ ಸುಗುಣನಿಧಿ 1 ನಿನ್ನಿನಿರುಳು ನಿನ್ನ ನೇಮಿಸದ ಮುನ್ನಮನ್ನಿಸಿ ಮನೆಗೆ ಬಂದಾತಅನ್ಯವರಿಯದ ಅಬಲೆ ನಾನೆಂದೀಗಕಣ್ಣಾರ ತಾ ಕಂಡನಲ್ಲ ಪುಸಿಯಿನ್ನು ಸಲ್ಲ ಸಕಲವು ಬಲ್ಲ ಎನ್ನ ನಲ್ಲ2 ಇಂದಿರೆಯನು ಬಿಟ್ಟು ಇರವ ಎನ್ನೊಳಗಿಟ್ಟುಎಂದೆಂದು ಎತ್ತಿಕೊಂಡಾತಕುಂದದೆ ತಾನಿಂದು ಕೂಡಿದರೆ ಬಂದುತಂದು ಹಯವದನನೊಲಿಸು ಸ್ನೇಹವ ಬಲಿಸು ಮದನನೊಲಿಸು ಎನಗೊಲಿಸು 3
--------------
ವಾದಿರಾಜ
ಯಾಕೆಂದು ದಣುಕೊಂಡಿರಿ ಸುಮ್ಮನೆ ವೃಥಾ ನಾಮವೊಂದಿದ್ದಮೇಲೆ ಪ ಕಣ್ಣಾಣದವರವೋಲು ತಿರುಗುವಿರಿ ಚರಿಸುತಿದ್ದಾಮೇಲೆ 1 ಘಾಸಿ ಮಾಡುವುದೇಕೆ ದೇಹವನು ನೆಲೆಯನು ತಿಳಿಯದೆ 2 ತನ್ನಯ ಮಂದಿರವು ತನುವಿದುಸ್ಥಿರವಲ್ಲ ತೃಣವಿತ್ತು ಸಾರಿದೆ 3 ಸುಟ್ಟು ಹುಡಿಹುಡಿಗೊಂಬ ಶರೀರವನ್ನು ಬಡಿವಾರ ತರವಲ್ಲ 4 ಮತಿಗೆಟ್ಟು ಸುಮ್ಮನೆ ತೊಳಲದಿರು ಜ್ಯೋತಿಯ ಕೂಡುಕಂಡ್ಯಾ 5
--------------
ಕವಿ ಪರಮದೇವದಾಸರು
ಯಾಕೆನಗೆ ವೈರಾಗ್ಯ ಪುಟ್ಟಲಿಲ್ಲವೊ ದೇವ ಏನು ಪಾಪಿಯೊ ಜಗದಲಿ ಪ. ಸಾಕು ಸಾಕೀ ವಿಷಯ ಚಿಂತನೆಯ ಬಿಡಿಸಿನ್ನು ಲೋಕನಾಯಕನೆ ಸ್ವಾಮಿ ಅ.ಪ. ಅಸನವಸನಗಳಿಗೆ ಆಲ್ಪರಿದು ಅನ್ಯರಿಗೆ ಬಿಸಜನಯನನೆ ಕಾಲಹರಣೆಯನೆಗೈದೆ ವಸುದೇವಸುತ ನಿನ್ನ ಅರಘಳಿಗೆ ನೆನೆಯದಲೆ ಹಸಿವು ತೃಷೆಯಿಂ ಬಳಲಿ ಬೆಂಡಾದೆನಯ್ಯಾ 1 ಇಂದ್ರಿಯಗಳೆಲ್ಲವನು ಬಂಧನದೊಳಗೆ ಇರಿಸಿ ಇಂದಿರೇಶನೆ ನಿನ್ನ ಧ್ಯಾನಿಸದಲೆ ಮಂದಮತಿಯಿಂದ ನಾ ಮಮಕಾರದಲಿ ಬಿದ್ದು ಮಂದ ಜನರೊಡನಾಡಿ ಮಾಯಕೊಳಗಾದೆ 2 ಭಕ್ತಿಮಾರ್ಗವ ಕಾಣೆ ಜ್ಞಾನ ಮೊದಲೆ ಅರಿಯೆ ಮುಕ್ತಿಗೊಡೆಯನೆ ಎನ್ನ ಮುದದಿಂದ ಸಲಹೊ ಯುಕ್ತಯುಕ್ತಿಗಳರಿಯೆ ಸುತ್ತುತಿಪ್ಪೆನೊ ಭವದಿ ಶಕ್ತ ನೀ ಒಳಗಿದ್ದು ಎನ್ನ ಕಾಡುವರೆ 3 ಕರ್ಮಮಾರ್ಗವ ತೊರೆದು ನಿರ್ಮಲದಲಿ ನಿನ್ನ ಒಮ್ಮೆಗಾದರೂ ಮನದಿ ನೆನೆಯಲಿಲ್ಲ ರಮೆಯರಸನೆ ಶ್ರೀ ಗುರುಗಳಂತರ್ಯಾಮಿ ಕರ್ಮತ್ರಯಗಳ ಕಡಿದು ಕರುಣದಲಿ ಕಾಯೊ4 ಪಾಪರಹಿತನೆ ಎನ್ನ ಪಾಪ ಕರ್ಮಗಳೆಲ್ಲ ಪರಿ ನುಡಿದೆ ನೀ ಪರಿಹರಿಸಿ ಕಾಯೋ ಗೋಪಾಲಕೃಷ್ಣವಿಠ್ಠಲನೆ ನೀನಲ್ಲದಲೆ ಈ ಪಾಪಿಯನು ಕಾಯ್ವರಾರೊ ಶ್ರೀ ಹರಿಯೆ5
--------------
ಅಂಬಾಬಾಯಿ
ಯಾಕೆನ್ನ ಎದುರಲಿ ನಿಲ್ಲುವುದಿಲ್ಲೋ ಯಾಕೆನ್ನಯ ಕರೆ ಕೇಳುವುದಿಲ್ಲೋ ಪ ಯಾಕೆನ್ನ ಅರ್ಚನೆಗೊಲಿಯುವುದಿಲ್ಲೋ ಯಾಕೆನ್ನೊಳು ದಯಮಾಡುವುದಿಲ್ಲೋ ಅ.ಪ ತರಳ ಧೃವನ ಮೊರೆ ಕೇಳಿಸಿತಲ್ಲ ಕರಿ ಎತ್ತಿದ ಸುಮ ಕಾಣಿಸಿತಲ್ಲ ಅರಿ ಅನುಜನ ಸೇವೆ ಹಿರಿದಾಯ್ತಲ್ಲಾ ಕರುಣ ಎನ್ನೊಳಗೇಕೆ ಬರದೋ ಕೃಷ್ಣಯ್ಯ 1 ಅಗಣಿತ ಗೋಪಿಯರೆಡೆಯಲಿ ನಲಿದೆ ನಗಧರನಾಗಿ ಗೋಪಾಲರ ಪೊರೆದೆ ಖಗನಿದ್ದೆಡೆಗೇ ಭರದಲಿ ನಡೆದೆ ನಗುಮೊಗದರಸ ಮಾಂಗಿರಿಯ ರಂಗಯ್ಯ2
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಯಾಕೆನ್ನನಿಲ್ಲಿಗೆ ಎಳೆ ತಂದ್ಯೊ ಹರಿ ತಪ್ಪೇನನೆಸಿಗಿದೆನೊ ಪ. ಜೋಕೆಯಿಂದಲಿ ಎನ್ನ ಕಾಯಬೇಕಲ್ಲದೆ ನೂಕಿದರೆನ್ನನು ಸಾಕುವರ್ಯಾರೊ ದೊರಿ ಅ.ಪ. ಯಾರಿಗೇನೆಸಗಿದೆ ಆರ ನಾ ದೂಷಿಸಿದೆ ಆರ ನಾ ನಿಂದಿಸಿದೆನೊ ಕಾರದಿ ನೋಡಿದೆನೊ ಈ ರೀತಿ ನೊಂದೆನು 1 ವಿಧಿ ಬರಹದೊಳಿನ್ನು ವಿಧಿಪಿತ ನಿನ್ನ ಕಾಣಲಿಲ್ಲ ಮದಗರ್ವ ಬಿಡಿಸೆನ್ನ ಸದಮಲ ಹೃದಯದಿ ಪದ ಪದುಮವ ತೋರಿ ಉದ್ಧರಿಸೆನ್ನನು 2 ಸೃಷ್ಟಿಕರ್ತನೆ ಕೇಳೊ ಕಷ್ಟವಪಡಲಾರೆ ದೃಷ್ಟಿಲಿ ನೋಡಿ ಕಾಯೊ ಎಷ್ಟು ಬೇಡಲೊ ನಾನು ಬೆಟ್ಟದೊಡೆಯ ಹರಿ ವೃಷ್ಣೀಶ ಗೋಪಾಲಕೃಷ್ಣವಿಠ್ಠಲ ದೊರಿ3
--------------
ಅಂಬಾಬಾಯಿ
ಯಾಕೆನ್ನೊಳಿಂತು ನಿರ್ದಯವೆಲೊ ದೇವ ನೀ ಕರುಣದಿ ನೋಡದಿರಲು ಮತ್ತಾವ ಕಾವ ಪ ಗಜರಾಜನ ನೀ ಸಲಹಲಿಲ್ಲೇ ಅಂದು ನಿಜಭಕ್ತ ಪ್ರಹ್ಲಾದನ ಪೊರೆಯಲಿಲ್ಲೇ ಪರಿ ಎಲ್ಲ ಬಲ್ಲೆ ನಿನ್ನ ಭಜನೆಯೊಳಿಹ ಎನ್ನನೇಕೆ ನೋಡಲೊಲ್ಲೆ 1 ದ್ರೌಪದಿ ಕರೆಯಲಕ್ಷಯ ವಸ್ತ್ರವ ಕೊಟ್ಟೆ ನೀನು ಶಾಪದ ಶಿಲೆಯ ಕುಲಕೆ ತರಲಡಿಯಿಟ್ಟೆ ಪಾಪಿ ಅಜಮಿಳನ ಅಘಗಳ ಸುಟ್ಟೆ ಸ್ವಾಮಿ ಶ್ರೀಪದಗ್ರಸ್ತನಾದೆನ್ನ ನೀ ಕೈಬಿಟ್ಟೆ 2 ಬಿಡಬೇಡೆನ್ನ ಕೈಯ ಶ್ರೀನಿವಾಸ ಬಹು ಬಡವ ನಾನಹುದು ಮಧ್ವಗೃಹವಾಸ ಕಡುಪಾಪಿ ನಾನಲ್ಲವೊ ರಂಗೇಶವಿಠಲ ದೃಢವಾಗಿ ನಂಬಿಹೆನೊ ನಿನ್ನ ಸರ್ವೇಶ 3
--------------
ರಂಗೇಶವಿಠಲದಾಸರು
ಯಾಕೆನ್ನೊಳು ಪಂಥಾ ಶ್ರೀಕಾಂತಾ ಪ. ಯಾಕೆ ಪಂಥ ಲೋಕೈಕನಾಥ ದಿ- ವಾಕರಕೋಟಿಪ್ರಭಾಕರ ತೇಜನೇ ಅ.ಪ. ಪೂರ್ವಾರ್ಜಿತ ಕರ್ಮದಿಂದಲಿ ಇರ್ವೆನು ನರಜನ್ಮ ಧರಿಸುತ ಗರ್ವದಿಂದ ಗಜರಾಜನಂತೆ ಮತಿ ಮರ್ವೆಯಾಯ್ತು ನಿನ್ನೋರ್ವನ ನಂಬದೆ ಗರ್ವಮದೋನ್ಮತ್ತದಿ ನಡೆದೆನು ಉರ್ವಿಯೊಳೀ ತೆರದಿ ಇದ್ದೆನಾದರೂ ಸರ್ವಥಾ ಈಗ ನಿಗರ್ವಿಯಾದೆಯಹ ಪರ್ವತವಾಸ ಸುಪರ್ವಾಣ ವಂದಿತ 1 ಯಾರಿಗಳವಲ್ಲ ಮಾಯಾ ಕಾರ ಮಮತೆ ಸಲ್ಲ ಸಂತತ ಸಾರಸಾಕ್ಷ ಸಂಸಾರಾರ್ಣವದಿಂದ ಪಾರಗೈದು ಕರುಣಾರಸ ಸುರಿವುದು ನತ ಮಮ ಕಾರ ಹೋಯ್ತೆ ಕಡೆಗೆ ಏನಿದು ಭಾರಿ ಭಾರಿ ಶ್ರುತಿ ಸಾರುವುದೈ ದಯ ವಾರಿಧಿ ನೀನಿರಲ್ಯಾರಿಗುಸುರುವುದು 2 ಬಾಲತ್ವದ ಬಲೆಗೆ ದ್ರವ್ಯದ ಶೀಲವಿತ್ತೆ ಎನಗೆ ಆದರೂ ಪಾಲಿಸುವರೆ ನಿನಗಾಲಸ್ಯವೆ ಕರು- ಸಾಲದೆರಡು ಮೂರು ನಿನ್ನಯ ಮೂಲ ಸಹಿತ ತೋರು ಮುನಿಕುಲ ಪಾಲ ಶ್ರೀಲಕ್ಷ್ಮೀನಾರಾಯಣ ಗುಣ ಶೀಲ ಕಾರ್ಕಳ ನಗರಾಲಯವಾಸನೇ 3
--------------
ತುಪಾಕಿ ವೆಂಕಟರಮಣಾಚಾರ್ಯ