ಒಟ್ಟು 29424 ಕಡೆಗಳಲ್ಲಿ , 137 ದಾಸರು , 9577 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಭೂಷಣವಿದು ಭೂಷಣ ಕೇಶವಧ್ಯಾನ ಪಭೂಷಣವದನಾ ವಿಭೀಷಣ ಧರಿಸುತೆನಾಶರಹಿತ ಪೌರುಷವಾಂತ ಧರಣಿಯೊಳು ಅ.ಪಶೇಷಶಯನನಾಮ ಭೂಷಣದೋಷರಹಿತ ಶಿರೋಧಿ ಭೂಷಣಶ್ರೀಶ ವಿಠ್ಠಲನಾಮ ಭೂಷಣಶೇಷಫಣಿಮಣಿಧೃತ ಭೂಷಣ1 ಕರಯುಗಗಳ ಭೂಷಣ ಹರಿಪೂಜೆಯುಶಿರಕೆ ವಂದನೆ ಭೂಷಣಹರಿಪಾದದರ್ಶನ ವರನೇತ್ರಭೂಷಣವರಕ್ಷೇತ್ರಸಂಚಾರ ಚರಣಕೆ ಭೂಷಣ 2 ಹರಿಯ ಚರಿತೆಯು ಕರ್ಣಭೂಷಣಹರಿತುಳಸಿ ನಾಸಿಕಕೆ ಭೂಷಣಹರಿಯ ಕೊಂಡಾಡುವುದೆ ರಸನೆಗೆ ಭೂಷಣಹರಿಯ ಭಜನೆಯು [ಜಿಹ್ವಾಭೂಷಣ] 3 ಧರೆಯೊಳು ಜನಿಸಿದ ಮಾನವರಿಗೆಹರಿನಾಮವೆ ಭೂಷಣಾಸಿರಿರಮಣನಾಮ ಕಿರೀಟವಯ್ಯವರದನೆಂಬುವನಾಮ ವರಕರ್ಣಾಭರಣವು 4 ಗಂಗಾಜನಕನೆಂಬ ನಾಮವೆ ಅಂತರಂಗಕೆ ಮಣಿಭೂಷಣಾರಂಗನೆಂಬುವ ನಾಮ ಹಸ್ತಸಿಂಗರದ ಪೀತಾಂಬರವು ತಾಮಾಂಗಿರೀಶನ ನಾಮ ಮಂಗಳಕರ ಭೂಷಣವೈ 5
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಭೃಂಗ ಕುಂತಳೆಯರು ಮುಯ್ಯ ತಂದಾರೆಂದು ಪ. ಅಂದದ ವಸ್ತವಧರಿಸಿ ದೂತೆ ಚಂದದ ಸೀರೆ ಶೃಂಗರಿಸಿಇಂದಿರೇಶಗೆ ನಮಸ್ಕರಿಸಿತಾನು ಬಂದಾಳೆ ದ್ರೌಪತಿ ಸ್ಮರಿಸಿ 1 ಬಾಗಿಲಿಗೆ ಬಂದಾಳು ನೋಡಿದ್ವಾರಪಾಲಕಗೆ ಉಚಿತವ ಹೇಳಿಹೊನ್ನುಂಗುರಆತಗೆ ನೀಡಿಒಳಗೆ ಪೋದಳು ಹರಿಯ ಕೊಂಡಾಡಿ2 ವಂದಿಸಿ ಯದುನಾಥನಢಿಗೆಮಂದಹಾಸವ ಬೀರಿದೂತೆಯಡೆಗೆಬಂದಾರೈವರೆಂಬೊ ನುಡಿಗೆಆನಂದ ಬಟ್ಟ ಕೃಷ್ಣ ಬ್ಯಾಗನೆ3 ವೇಗದಿ ರುಕ್ಮಿಣಿಗೆಬಾಗಿ ಸುದ್ದಿ ಹೇಳಿ ಮುಯ್ಯದ ಬಗಿ ಬಗಿನಾಗವೇಣಿಯು ಹರುಷಾಗಿಕರೆಯ ಬರತೇವಂತ್ಹೇಳೆ ಹೋಗಿ4 ಪುತ್ಥಳಿ ಮನಕೆ ತಾರೆಂದು 5 ಗುರ್ತು ಹೇಳುವೆ ಕೇಳೊ ದೊರೆಯೆ ಕೃಷ್ಣಚರ್ಚೆ ಮಾತಿನ ಚಮತ್ಕಾರಿಯೆಶೃತ್ಯರ್ಥದಾ ಮಳೆಗರಿಯೆಪ್ರತಿಯುತ್ತರವಕೊಡೋದು ಮರಿಯೆ 6 ಕೋಕಿಲ ಸ್ವರದಂತೆ ಅಳಕು ಹರುಷಾಗಿರಾಮೇಶಗ್ಹಾಕಿ ಮಲಕುಆಗಮಾ ತರತಾಳೆ ಮಲಕುಎಲ್ಲಾ ನಾರಿಯರು ಅಕೆಗೆ ಅಳಕು 7
--------------
ಗಲಗಲಿಅವ್ವನವರು
ಭೃಂಗ ಜಯ ಶರಣು ಶ್ರೀ ಸುಜ್ಞಾನ ಭಕುತಿ ವೈರಾಗ್ಯಪರನೆ ಜಯ ಶರಣು ದಾಸೋತ್ತಮರ ಮಣಿಯ ನಿನಗ್ಯಾರೆಣಿಯೆ ಗುರು ಪುರಂದರದಾಸರೆ ನಿಮಗೆ ಪ ಪಾಕಶಾಸನಪುರದ ಚಿನಿವಾರ ವರದಪ್ಪ ನಾ ಕುಮಾರನಾಗಿ ಜನಿಸಿ ಸಂಸಾರದೊಳು ಸಂಚರಿಸಿ ಲೌಕಿಕವನ್ನೆ ತೊರೆದು ಈ ಕಲಿಯುಗದಲ್ಲಿ ತುಂಗಾತೀರ ಪಂಪಾ ರಾಕಾಬ್ಜನಂತೆ ಪೊಳೆವ ನಿಧಿಗೆ ಬಂದು ನಿ ರಾಕರಿಸಿ ದುಸ್ಸಂಗ ವೈಷ್ಣವರಾಗಿ ಪತಿಕರಿಸಿ ಹರಿಭಕುತಿಯಾ 1 ಕಾಮಕ್ರೋಧ ಲೋಭ ಮದ ಮತ್ಸರ ಡಂಭ ಈ ಮರಿಯಾದಿಗಳ ಮರ್ಮವನೆ ಕಡಿದು ನಿ ಸಿರಿ ಕೈಕೊಂಡು ಆ ಮಹಾ ರಚನೆಯಲ್ಲಿ ಸೀಮೆಯೊಳು ಪ್ರಾಕೃತದ ಗೀತೆಯಲಿ ಕೊಂಡಾಡಿ ತಾಮರಸ ಸದೆ ಬಡಿದು ಮಧ್ವಸಿದ್ಧಾಂತ ಲ ಹುಯಿಸಿ ಕಾವನೈಯನ ಕುಣಿಸಿದ 2 ಸಿರಿ ವಿಠ್ಠಲನ್ನ ಮೃದು ಪದ್ಮಗಂಧವನು ಮಧುಪÀನಂತೆ ಸೇವಿಸುತ್ತ ಬುದ್ಧಿ ಪೂರ್ವಕದಿಂದಲಿ ಶುದ್ಧ ಮಂದರನೆಲ್ಲ ಎಂದೆಂದಿಗೂ ಬಿಡದೆ ಪೊದ್ದರ್ದ ಪಾಪಗಳು ತಿರುಗಗೊಡದಲೆ ಕಾಲಿ ಮಾರ್ಗದ ಪದ್ಧತಿಯ ಸ್ಥಿತಿ ಪೇಳಿದ 3 ವರದಪ್ಪನೇ ಸೋಮ ಗುರುರಾಯ ದಿನಕರನು ಗುರು ಮಧ್ವಪತಿಯೆ ಭೃಗು ಅಭಿನವನೆ ಜೀವ ಉಪದೇಶಿಸಿ ಪರಮ ಜ್ಞಾನಿಗಳ ಮಾಡಿ ಶರಧಿ ತೆರೆಯಂತೆ ಹರಿಗುಣಗಳನ್ನು ಪೊಗಳುತಿಹ ತರಳರನು ನೋಡಿ ಗುರು ವ್ಯಾಸಮುನಿರಾಯರಿಗೆ ಕರಣ ಚರಿತೆಯಲಿ ನಲಿದಾಡಿದ 4 ಫೃತದ ಬಿಂದಿಗೆ ತಂದ ಅತಿಥಿಯ ವೋಗರನುಂಡ ಸತಿಯಳೆಂದಾ ನುಡಿಗೆ ಚತುರ ಭಾಗ್ಯವನಿತ್ತ ಹಿತನಾಗಿ ದೃಢನೋಡಿದ ಯತಿಯ ಪಂಕ್ತಿಗೆ ಭಾಗೀರಥಿ ನದಿಯ ತರಸಿದ ಸುತನಾಗಿ ನೀರು ನಿಶಿತದಲಿ ತಂದ ಅ ಪ್ರತಿ ದೈವತಾ ಕಿಂಕರ 5 ವಜ್ರ ಪ್ರಹರವಿದು ಸಜ್ಜನರ ದಿವ್ಯ ಚರಣಾಬ್ಜಕ್ಕೆ ಭೃಂಗವಿದು ಹೆಚ್ಚು ಲಜ್ಜೆಯನು ತೊರೆದು ನಿತ್ಯ ಹೆಜ್ಚ್ಚಿ ಹೆಜ್ಚಿಗೆ ಬಿಡದೆ ದಾಸರ ಕರುಣವೆಂಬ ವಜ್ರ ಕವಚವ ತೊಟ್ಟು ನುಡಿದವನ ನುಡಿ ಸತ್ಯ ಅಬ್ಜಭವನೊಡನೆ ಗತಿಗೆ 6 ಎಂತು ವರ್ಣಿಸಲಿ ಎನಗಳವಲ್ಲ ಧರೆಯೊಳಗೆ ಸಂತತಿ ನೆಲಸಿದಂತೆ ಕಾವ್ಯವನೆ ಸ್ಥಾಪಿಸಿ ದಾಸರನ ಸಂತರಿಸಿ ಧರೆಗೆ ತೋರಿ ಸಿರಿ ವಿಠಲನ ಸ್ಮರಿಸುತ ಸು ಪಂಥವನು ಹಿಡಿದು ಸದ್ಗತಿಯಲ್ಲಿ ಸೇರಿದರು ಚಿಂತೆಯೊಳಗಿಟ್ಟ ಗುರುವೆ 7
--------------
ವಿಜಯದಾಸ
ಭೃಂಗ ಭಕ್ತ ಕಾಮಿತಾರ್ಥದ ಮಂಗಳಾಂಗ ತಾಮಸಬಲ ನಿಗ್ರಹಣ ಪತಂಗ ಭ ವಾಮಯಹರ ಭಾರತಿ ಮುಖ ಸಂಗ ಪ. ಮಾನ ಸೇವರಾತಿ ಭೂಪ ಭಾನುಸರಣ ಸುಪ್ರತಾಪ ದೈತ್ಯ ಕ್ಷೋಣಿ ಸಂದರ್ಶಿತ ಕೋಪ ಜಾನಕಿವರನ ನಿಜಾನುಗನೆನಿಪ ಮ- ಹಾನುಭಾವ ಪವಮಾನ ದಯಾಪರ 1 ಇಂದು ಕುಲದಿ ತಾ ಜನಿಸಿ ನಿಜ ಬಂಧುಗಳನು ಸತ್ಕರಿಸಿ ಇಂದಿರೆಯರಸನ ಒಲಿಸಿ ಜರಾ- ಸಂಧ ಮುಖರನು ಸಂಹರಿಸಿ ಒಂದೇ ಕ್ಷಣದಿ ಸೌಗಂಧಿಕ ಕುಸುಮವ ತಂದು ಮಡದಿಗಾನಂದ ತೋರಿದ 2 ಕಲಿಯುಗದೊಳು ತಾ ಬಂದು ಮಾಯಿ ಬಲಿ ಭುಜರನು ಗೆಲವಂದು ಜಲಜನಾಭವ ಕರೆತಂದು ರೌಪ್ಯ ನಿಲಯದಿ ಸ್ಥಾಪಿಸಿ ನಿಂದು ಚೆಲುವ ಶೇಷಗಿರಿ ಪತಿಗತಿಯೆಂದು ನೆಲೆಯ ತೋರಿದ ಪುರುಕರುಣಾಸಿಂಧು 3
--------------
ತುಪಾಕಿ ವೆಂಕಟರಮಣಾಚಾರ್ಯ
ಭೇದವ ಮರೆಸಿದ ನಮ್ಮಯ್ಯ ಸು ಸಾಧನ ತಿಳಿಸಿದ ಪ ಭೇದ ಮರೆಸುತ ವಾದನೀಗಿಸಿ ಪರ ಸಾಧನದ ನಿಜಹಾದಿಗೆ ಹಚ್ಚಿದ ಅ.ಪ ಮಂದಮತಿಯ ತರಿದ ಎನ್ನಯ ಭವ ಬಂಧ ಪರಿಹರಿಸಿದ ಕುಂದುವ ಜಗಮಾಯದಂದುಗ ಗೆಲಿಸಿದ ಕಂದನೆಂದುದ್ಧಾರಗೈದ ತಂದೆ ಸಿಂಧುಶಾಯಿ 1 ಜ್ಞಾನಕೆ ಹಚ್ಚಿದ ಎನ್ನದೆ ನಿಜ ಧ್ಯಾನವ ಪಾಲಿಸಿದ ನಾನಾಯೋನಿಯೊಳು ಜನಿಸಿ ಜನಿಸಿ ಬಹ ಹಾನಿಯಿಂದುಳಿಸಿದ ದಾನವಕುಲಹರ 2 ಏನೆಂದು ಬಣ್ಣಿಸಲಿ ನಮ್ಮಯ್ಯನ ಆನಂದದ ಕೀಲಿ ತಾನೆ ಒಲಿದಿತ್ತೆನ್ನಗಾನಂದಮಯಾಂಬುಧಿ ದೀನಜನಾಪ್ತ ಮಮಪ್ರಾಣ ಶ್ರೀರಾಮಯ್ಯ 3
--------------
ರಾಮದಾಸರು
ಭೋಕ್ತಸದ್ಗೈಸೋ ಅವಧೂತ ಧ್ರುವ ಅನುಭವ ಬೀರೋ ನಿಧಾನ ಅನುದಿನ ಕಾಯೋ ಕರುಣ 1 ಅತಿಹರುಷದಲಿಡೋ ತಂದೆ ಸುಖದಾಯಕ ನೀನೆಂದೆ 2 ಅರುಹು ಕುರುಹು ಆಗುವ ಮನೆಮೂರ್ತಿದೋರೋ ಶ್ರೀಗುರುವರಮೂರ್ತಿ ನಿಮ್ಮ ಕೀರ್ತಿ 3 ಹಿಡಿಯಲವನಿವನೆಂದು ಸುಗುಣ ನೋಡದಿರೆನ್ನವಗುಣ ಮಾಡಲಿಕ್ಕೆನ್ನ ಪುನೀತನ ಒಡಯನಹುದೋ ನೀ ಪೂರ್ಣ 4 ಬಾಲಕ ನಿಜ ನಿಮ್ಮಿಂದ ಮಹಿಪತಿಯ ಪಾಲಿಸಬೇಕು ಸುದಯಾ ಸಲಹೊ ಸದ್ಗುರು ನಮ್ಮಯ್ಯ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಭೋಗ ಬೇರಿಹುದಣ್ಣ ಭವ ಭೋಗಗಳೆಲ್ಲವು ರೋಗಗಳಣ್ಣ ಭೋಗವ ಪೊಂದುವ ಯೋಗವ ಮರೆಸುವ ರೋಗಗಳಿಗೆ ಗುರಿಯಾಗದಿರಣ್ಣ 1 ಬಗೆ ಬಗೆ ಭಕ್ಷಗಳ ಭೋಗವು ಸೊಗಸೆಂದರಿಯದಿರು ಹಗರಣದಲಿ ತನು ದುಗುಡಕೆ ಸಿಲುಕಲು ಸೊಗಸುಗಳೆಲ್ಲವು ಹಗೆಯಾಗುವುವು 2 ಅಂಗನೆಯರ ಸರಸ ಎಳೆಯ ಭು ಜಂಗನ ಸಹವಾಸ ಅಂಗಗಳಲಿ ಬಲ ಸಡಲಲು ನಿನ್ನಯ ಹಂಗಿಲ್ಲದೆ ಮಾನಭಂಗ ಮಾಡುವರು 3 ಉಡಿಗೆ ತೊಡುಗೆ ಯೋಗ ಜಗದಲಿ ಹುಡುಗುತನದ ಭೋಗ ಗಿಡಗ ಗಿಳಿಮರಿಯನೊಯ್ಯುವ ತೆರದಲಿ ಪಿಡಿಯಲು ದೂತರು ತಡೆ ಮಾಡುವರೇ 4 ಪ್ರಕೃತಿಯೊಳ್ ಸಿಲುಕಿರಲು ಭೋಗಕೆ ಶಕುತಿ ಸಾಲದಣ್ಣ ಭಕುತ ಪ್ರಸನ್ನನು ಭಕುತಿಯೆಂಬೊ ನಿನ್ನ ಯುಕುತಿಗೆ ನೀಡುವ ಮುಕುತಿಯೆಂಬ ದಿವ್ಯ 5
--------------
ವಿದ್ಯಾಪ್ರಸನ್ನತೀರ್ಥರು
ಭೋಜನ ಮಾಡೈಯ ಶ್ರೀರಾಮಚಂದ್ರ ಪ ರಾಜೀವಾನಯನ ಸ್ವರಾಜಾನುಜ ಮಹಾ ರಾಜ ವಂದಿತ ರಾಜಾರಾಜ ಸಖಾರ್ಚಿತ ಅ.ಪ ಉಪ್ಪು ಉಪ್ಪಿನಕಾಯಿ ಪಚ್ಚಡಿಗಳು ಗೊಜ್ಜು ಹಪ್ಪಳ ಸಂಡಿಗೆ ಶಾಖಗಳೂ ಒಪ್ಪುವ ರಸ ಕೂಟು ಹುಳಿ ಫಳಿದ್ಯವು ಸೂಪ ತುಪ್ಪ ಶಾಲ್ಯೋದನ ಚಿತ್ರಾನ್ನಗಳನ್ನು 1 ಹೊರೀಗೆ ಶಷ್ಕುಲಿ ಹೋಳಿಗೆ ಕಡುಬು ಮು- ಚ್ಚೋರೆಯು ಅತಿರಸ ಹೊಯಗಡಬೂ ಕೀರುಆಂಬೊಡೆ ಬೋಂಡ ಶಾವೀಗೆ ಹುಳಿದೋಸೆ ಕ್ಷೀರ ಶರ್ಕರ ಜೇನು ತುಪ್ಪವೆ ಮೊದಲಾಗಿ2 ಮಂಡೀಗೆ ಲಾಡು ಚಿರೋಟಿ ಘೀವರು ಪೇಣಿ ಬೆಂಡು ಸೋಮಾಶಿಬತ್ತಾಸು ಫೇಡಾ ಖಂಡ ಶರ್ಖರೆ ಕಬ್ಬು ಖರ್ಜೂರ ದ್ರಾಕ್ಷಿಗ- ಳುಂಡು ತ್ರಿಲೋಕಳುದ್ಧರಿಸುವ ಸ್ವಾಮಿ 3 ಪನಸು ಜಂಬೂ ಕದಳಿನಾರಂಗ ಎಳನೀರು ಪಾನಕ ತಕ್ರಬೆಣ್ಣೆಯು ಮೊಸರೂ ಸ್ವಾದೋದಕ ಮೊದಲಾಗಿ ಶ್ರೀ ಯರ್ಪಿಸುವಳು ಭಕ್ತಿಯಿಂದಾ ಕೈಕೊಂಡು ನೀ 4 ಸತ್ಯತಾಂಬೂಲ ವರ್ಪಿಸಲು ಯಥಾಶಕ್ತಿ ವಿತ್ತಸಮೇತವಾದಿದನು ಕೈಕೊಂಡು ನೀ 5 ಭೋಗದ್ರವ್ಯವು ಮುಕ್ತಚೂರ್ಣ ದಕ್ಷಿಣೆ ಸಹ ಈಗ ತಾಂಬೂಲ ವೊಪ್ಪಿಸಲು ಕೈಕೊಂಡು ನೀ6 ನವ್ಯ ಸುಗಂಧ ಪುನರ್ಧೂಪವರ್ಪಿಸಿ ಸೇವ್ಯಸೇವಕನಾಗಿ ಸೇವೆ ಕೈಕೊಳ್ಳೆಂದು ಭವ್ಯಚರಿತ ನಿನ್ನ ಪೊಗಳುತ್ತ ಕುಣಿವರು 7 ಅವ್ಯಯಾನಂತ ಜಗದ ಬದುಕು ನೀನೆಂದು ಸೇವ್ಯಸೇವಕನಾಗಿರುವೆ ಎಂದು ಭವ್ಯಚರಿತ್ರರು ಪೊಗಳುವರೈ ನಿನ್ನ ಸವ್ಯಸಾಚಿಯ ಸೂತ ಗುರುರಾಮ ವಿಠಲನೆ 8
--------------
ಗುರುರಾಮವಿಠಲ
ಭ್ರಮೆ ಬೇಡಲೆ ಮನ ತಿಳಿ ಜವದಿ ಹರಿ ವಿಮಲಚರಣಕಮಲ್ಹಿಡಿ ದೃಢದಿ ಪ ಸುಮನಸರಗೂಡಿ ನೀ ಸುಮಶರ ಪಿತನಂ ಸಮಯ ತಿಳಿದು ಭಜಿಸನುದಿನದಿ ಅ.ಪ ಸಾರವಿಲ್ಲದ ಸಂಸಾರ ಇದು ಮೇರೆನಿಲ್ಲದ ಸಾಗರ ಆರಿಗೆ ನಿಲುಕದೆ ಮೂರುಲೋಕವದ್ದಿ ಮೀರಿಬಡಿಸುವುದು ಬಲುಘೋರ 1 ಹೆಂಡರು ಮಕ್ಕಳೆಂದು ನಂಬಿದಿ ನಿನ್ನ ಹಿಂಡಿನುಂಗುವುದು ಅರಿಯದ್ಹೋದಿ ಕಂಡಕಂಡವರಿಗೆ ಮಂಡೆಬಾಗಿಸಿ ನಿನ್ನ ದಂಡನೆಗೆಳಪುದು ಅಂತ್ಯದಿ 2 ಕಾಕುಜನರ ಸಂಗ್ಹಿಡಿದಿದ್ದಿ ನೀ ಲೋಕನೆಚ್ಚಿ ನೂಕುನುಗ್ಗಾದಿ ಲೋಕಗೆಲಿದು ಭವನೂಕಿ ನಲಿಯುವರ ಸಾಕಾರಗಳಿಸದೆ ಕೆಟ್ಟ್ಹೋದಿ 3 ಧರೆಯ ಭೋಗವನು ಸ್ಥಿರ ತಿಳಿದಿ ನೀ ಹರಿದು ಹೋಗುವದಕೊಲಿತಿದ್ದಿ ಮರೆಮೋಸದಿ ಬಿದ್ದರು ಮೈಯಮರೆದು ಸ್ಥಿರಸುಖ ಪಡೆಯದೆ ದಿನಗಳೆದಿ 4 ಭೂಮಿಸುಖಾರಿಗೆ ನಿಜವಲ್ಲ ಇದು ಕಾಮಿಸಬೇಡೆಲೊ ಶೂಲ ಕಾಮಿತಗಳನಿತ್ತು ಕ್ಷೇಮದಿ ಸಲಹುವ ಸ್ವಾಮಿ ಶ್ರೀರಾಮನ ತಿಳಿಮಿಗಿಲ 5
--------------
ರಾಮದಾಸರು
ಭ್ರಷ್ಟ ಸಂಕಲ್ಪನ್ನ | ಮಾಡದಿರೆಲೋ |ಇಷ್ಟ ದೈವವೆ ಎನ್ನ | ಕಷ್ಟದೊಳು ಹಾಕಿ ಪ ಖಗ ವರಧ್ವಜ ದಾಸಮಿಗಿಲಾಗಿ ಪೇಳ್ವೆನೆಂದ | ವಘಡಿಸೀ ನುಡಿಸೀಹಗರಣದಿ ಹರಿದಿನದಿ | ಸುಗುಣ ತಾ ಬರದಿರಲುಖಗಗಮನ ನಿನ್ವಚನ | ಲಘುವಾಗಲಿಲ್ಲೇ 1 ಅಪ್ಪ ವಿಜಯಾರ್ಯ ಪದ | ವಪ್ಪಿ ಪೂಜಿಸಿ ಪೋಗಿಚಿಪ್ಪಗಿರಿಯಲಿ ನೋಡೆ | ಒಪ್ಪಿದವ ಬರದೇಅಪ್ಪಾರ ಮನನೊಂದು | ಅರ್ಪಿಸಿಹೆ ನಿನ್ನಡಿಗೆಕೃಪ್ಪೆಯಿಂ ಬರಮಾಡೊ | ಗೊಪ್ಪ ಶಿಷ್ಯನ್ನಾ 2 ಮಾನಾಪಮಾನಗಳು | ಯೇನೊಂದು ನಿನ್ನೊಳಗೊಮಾನನಿಧಿಯೆ ಕೇಳೊ | ಮೌನಿ ವರದಾದೀನ ಜನಪಾಲ ಗುರು | ಗೋವಿಂದ ವಿಠ್ಠಲನೆಮಾನ್ಯ ಮಾನದನೆಂಬ | ಸೂನೃತವ ಸಲಿಸೋ 3
--------------
ಗುರುಗೋವಿಂದವಿಠಲರು
ಭ್ರಷ್ಟನಾದೆನಲ್ಲಾ ಶ್ರೀಹರಿ ಪೂಜೆ ಮಾಡಲಿಲ್ಲಾ ಸೃಷ್ಟಿಗೀಶ ಕಡು ಕಷ್ಟವ ತೊಲಗಿಸಿ ಶಿಷ್ಟದಾಗದೊಳು ನಿಷ್ಠೆಯಗೊಳಿಸಿದ ಪ ದುಷ್ಟ ವಿಷಯ ಪಾದೋದಿ ಜಲದಿನಾ [?] ಕಷ್ಟದಿಂದೀಸಿನೆಷ್ಟು ಹೈರಾಣಾದೆ 1 ಸುತ ವ್ಯಾಮೋಹದಿ ಮತಿಯ ಶಿಲುಕಿ ಹರಿ ಪಥವೆಂಬುದನ ಗತಿ ಗಹನಪ್ಪುದು 2 ಶರಣವತ್ಸಲೆಂಬ ಬಿರುದನಾಂತ ಶ್ರೀ ನರಸಿಂಹವಿಠ್ಠಲ ಪೊರೆ ಎನ್ನ ಕರುಣದಿ 3
--------------
ನರಸಿಂಹವಿಠಲರು
ಭ್ರಷ್ಟನೆಂದಿಸಿದೆಯಾ ಕೃಷ್ಣನೇ ಎನ್ನ ಪ ಭ್ರಷ್ಟನೆಂದಿನಿಸಿದ್ಯಾ ಸೃಷ್ಟಿಗೀಶನೆ ಪರ ಮೇಷ್ಟಿ ಜನಕ ದಿವ್ಯ ದೃಷ್ಟಿ ಕೊಡದಲೆನ್ನ ಅ.ಪ ನರರ ಸಂದಣಿಯಲಿ ವಿರತಿ ಮಾತಾಡಿಸಿ ಮಾರನಾಟದಿ ಮನವೆರಗುವಂದದಿ ಮಾಡಿ 1 ಕಾಷಾಯ ದಂಡಿ ವೇಷವ ಧರಿಸಿ ಮುನ್ನ ಮೋಸಪಡಿಸಿ ಸ್ತ್ರೀಯರಾಸೆ ಬಿಡಿಸಿದೆನ್ನ 2 ಸೀಲರಂದಲಿ ಜಪಮಾಲೆ ಕೈಯಲಿ ಪಿಡಿಸಿ ಕಾಳಿಮರ್ಧನ ದೇವ ಮಲಿನ ಮನವನಿತ್ತು 3 ಕರವಶವನೆ ಮಾಡಿ ಸರಸದಿಂದ ಕಲೆಹಾಕಿ ಮರೆಸಿ ನಿನ್ನನೆ ಕೃಷ್ಣ ನಿರಯಭಾಗಿಯ ಮಾಡಿ4 ಕರುಣವಾರಿಧಿ ಎನ್ನ ಮರುಳುಗೊಳಿಸಿ ವಿಷಯ ಶರಪಂಜರದಿ ಬಿಗಿದು ಚರಣ ತೋರಿಸದೆಲೆ 5 ಮದ ಮತ್ಸರ ಕಾಮ ಕ್ರೋಧ ಲೋಭ ಮೋಹ ಮಾಧವ 6 ಪತಿತಾಗ್ರಣಿಯು ನಾನು ಪತಿತ ಪಾವನ ನೀನು ಸತತ ನಿನ್ನಯ ಸಂಸ್ಮøತಿಯ ನೀಡದಲೆನ್ನ 7 ದ್ವಿಜ ಅಜಮಿಳ ನಿಜನಾಮದಿಂದಲಿ ಸುಜನನೆಂದೆನಿಸಿದ್ದು ನಿಜತೋರದಲೆನ್ನ 8 ಹೀನರೊಳೆನ್ನೆಂಥ ಹೀನ ಜನರ ಕಾಣೆ ಸಾನುರಾಗದಿ ಕಾಯೊ ಶ್ರೀ ನರಹರಿಯೆ 9
--------------
ಪ್ರದ್ಯುಮ್ನತೀರ್ಥರು
ಮ'ಪತಿ ಸುತ ಕೃಷ್ಣರಾಯ ಕೃಪೆಯಮಾಡೊ ಮಹರಾಯಾಸ'ಸಲಾರೆ ತಾಪತ್ರಯ ಕರುಣದಿ ಪಿಡಿಕೈಯ್ಯಾ ಪನಿನ್ನ ಕರುಳ ಬಳ್ಳಿಯಲಿ ಜನಿಸಿ ನಿನ್ನ ಮರತೆನೆಂದುನೀನು ಮರೆಯಬೇಡಾ ತಾತಾ ಶಿರದಲಿ ಇಡು ವರದಹಸ್ತಾ1ನಿಮ್ಮ ಕೀರ್ತನೆ ಕೇಳುವಾಗ ಮೈ ಮರೆತರು ಸತ್ಯಪೂರ್ಣರುಚಕ್ರಧರನ ನಕ್ರಹರನ ತಂದು ತೋರಿದ ಮಹಾಮ'ಮನೆ 2ಜ್ಞಾನ ಭಕ್ತಿ ವೈರಾಗ್ಯ ತ್ರಿವೇಣಿ ನಿಮ್ಮ ವಾಣಿಶ್ರೀನಿಧಿ ಭೂಪತಿ'ಠ್ಠಲನ ಒಲಿಸಿದ ಹರಿದಾಸ ಸುಮಣಿ 3
--------------
ಭೂಪತಿ ವಿಠಲರು
ಮಕ್ಕಳ ಮಾಣಿಕವೆ ಮೋಹನ್ನ ಬಾ ರಂಗೈಯ್ಯಾ ಮಕ್ಕಳ ಮಾಣಿಕವೆ ಮೋಹನ್ನ ಎನ್ನಕ್ಕರದ ಗುಣನಿಧೆ ಬಾ ರಂಗೈಯ್ಯಾ ಪ. ಅಪ್ಪುತಪ್ಪು ಹೆಜ್ಜೆನಿಕ್ಕುತ ಬಾಯೊಳು ಜೊಲ್ಲು ಸುಪ್ಪಾಣಿಮುತ್ತಂತೆ ಸುರಿಯುತಾ ಬಾರಂಗೈಯ್ಯಾ ನಿನಗೊಪ್ಪುವಾಭರಣ ನೀಡುವೆನೊ ಅದನೊಲ್ಲದಿದ್ದರೆ ತುಪ್ಪಾಕಜ್ಜಾಯ ಕೊಡುವೆನೂ 1 ಅಂದಿಗೆ ಕಿರುಗೆÉಜ್ಜೆ ಅಲಗೊತ್ತು ಕೈಯೊಳಗಿದ್ದು ಬಿಂದುಲಿ ಬಾಜುಬಂದು ತಿರುಹೂತ ಬಾರಂಗೈಯ್ಯಾ ಬಂದೆನ್ನ ಬಿಗಿಯಪ್ಪಿಕೊಳ್ಳಯ್ಯ ಅದನೊಲ್ಲದಿದ್ದರೆ ಅಂದವಾದ ಒಂದು ಮುದ್ದು ತಾರಯ್ಯ 2 ಓಡಿಓಡಿ ಬಾರೋ ವಸುದೇವನಂದನಾ ಕಂದ ನೋಡಿ ನೋಡಿ ನಗುತ ಬಾರೊ ರಂಗಯ್ಯ ಕೋಡಗಲ್ಲವಾಸ ವೆಂಕಟ 3
--------------
ಹೆಳವನಕಟ್ಟೆ ಗಿರಿಯಮ್ಮ
ಮಗಟಖಾನ ಹುಬ್ಬಳ್ಳಿ ಶ್ರೀಯಾದವಾರ್ಯರ ಕರಾರ್ಚಿತ ಶ್ರೀನರಸಿಂಹ ಸ್ತೋತ್ರ ಕರುಣವೆಂತುಂಟೋ ನಿನಗೆ | ಶ್ರೀನಾರಸಿಂಹಾ ಪ ವರತಟನಿ ಮಲಪ್ರಭೆಯ | ತೀರಸ್ಥನೆನಿಸೀ ಅ.ಪ. ಪೂರ್ವದಲಿ ಋಷಿ ಚ್ಯವನ | ರಿಂದರ್ಚಿತವು ಎನೆಓರ್ವ ಶಿಲೆಯಲಿ ನಿಂದು ಯಾದವಾರ್ಯಾ |ಪಾರ್ವ ಯೋಗೀಶ ರಚಿ | ತಾಕಾರ ಗಂಧದಲಿಆಹ್ವಾನಿತನು ಆಗಿ ನೀನಿಲ್ಲಿ ಇರುವೇ 1 ಆದಿ ವ್ಯಾಧಿಲಿನೊಂದ | ಬುಧರಿಂದ ಬಹುಸೇವ್ಯಯಾದವಾರ್ಯಾಂತಸ್ಥ | ಶ್ರೀ ನಾರಸಿಂಹಾ |ಬಧಿರ ಮೂಕರು ತಮ್ಮ | ವ್ಯಾಕುಲವ ಕಳೆಯುತ್ತಮುದವಾಂತು ತವ ಮಹಿತಿ ಕೀರ್ತಿಸುತ್ತಿಹರೋ 2 ಮಾಸ ನಿಶಿ ಜೇಷ್ಠದಲಿಮತ್ತೆ ಹರಿದಿನದಲ್ಲಿ | ಮಂದವಾರದಲೀ |ಮತ್ಸರಾದ್ವಿರಹಿತರು | ಸತ್ಸುಜನರಿಂದ ಕೂಡಿಉತ್ಸಹದ ಜಾಗರವ | ನೀ ಮಾಡಿ ಮಾಡಿಸಿದ್ಯೊ 3 ಬೆಟ್ಟದಾಚಾರ್ಯರೆನೆ | ಸುಷ್ಠು ಕೀರ್ತನೆಗೊಂಡಶ್ರೇಷ್ಠ ಹುಚ್ಚಾಚಾರ್ಯ | ರಿಲ್ಲಿ ನೆಲೆಸುತಲೀಇಷ್ಟ ಸಿದ್ಧಿಗಾಗಿ ಶ್ರೇಷ್ಟ | ತಪವನೆ ಗೈದುಇಷ್ಟಾರ್ಥ ಪೊಂದಿತಾ | ಬೆಟ್ಟಕ್ಕೆ ತೆರಳಿದರೋ 4 ಮೋದ ಪಡಿಸುತ ಬುಧರಯಾದವೇಶನ ನೊಲುಮೆ | ಸಂಧಿಸುತ ಮೆರೆದೂ |ಆದರಿಸಿ ಮಂಗಳ ಸು | ಭೋದಗಳ ಬೀರುತಲಿಮೋದ ಬಡಿಸಿದ ಹರಿಯ | ಭೂದೇವ ಆರ್ಯ 5 ಪ್ರೇರ್ಯ ಪ್ರೇರಕರಾಗಿ | ಬೆಳಗಾವ್ಕರು ಎಂಬಪಾರ್ವನಲಿ ನೀ ನಿಂತು | ಅಚ್ಚರಿಯನೆಸಗೀಭಾರ್ಯೆ ತವ ಕೊಲ್ಲಾಪುರ | ಮ್ಮ ಸತ್ಯವ್ರತರಆರ್ಯಗೊಡ ದರ್ಶಿಸುವ | ಯೋಗ ನೀನಿತ್ತೇ 6 ಸೃಷ್ಠ್ಯಾದಿ ಅಷ್ಟಕವ | ದೃಷ್ಟಿ ಮಾತ್ರದಿಗೈವಇಷ್ಟ ಭಕುತಿಗೆ ಮೆಚ್ಚಿ | ಘಟ್ಟಿ ಕಂಬದಿ ಜಿಗಿದೂದುಷ್ಟನ್ನ ಸಂಹರಿಸಿ | ಕಷ್ಟಗಳ ಕಳೆದಂಥಕೃಷ್ಣ ಗುರು ಗೋವಿಂದ ವಿಠಲಾ ಗಾನಮಿಪೇ 7
--------------
ಗುರುಗೋವಿಂದವಿಠಲರು