ಒಟ್ಟು 9830 ಕಡೆಗಳಲ್ಲಿ , 132 ದಾಸರು , 5659 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಮುಟ್ಟು ಮುಟ್ಟೆನ್ನುತ ಮೂರ್ನಾರು ಹೊರಲೆಮುಟ್ಟಲಿ ಬಂತೆ ಬಿಕನಾಶಿಪಮುಟ್ಟೋ ನೀನೇ ಮಡಿಯೂ ನೀನೇಕೆಟ್ಟಿತು ನಿನಮಡಿ ಮೊದಲೇ ಜಲದಲಿ ನೀ ಮುಳುಗೆಕಡೆಯಲಿ ಆ ಉದಕವನೇ ತರುವೆದೇವರಿಗಿಂದಭಿಷೇಕವ ಮಾಡುತಅಹಂನ ಬಿಡು ನಿನ ಬಿಕನಾಶಿ1ಎಲುಬು ಚರ್ಮದಿ ಮಲಮೂತ್ರದ ಗೂಡಲಿನಲಿಯುತಲಿದ್ದೆ ಬಿಕನಾಶಿನೆಲೆಗೊಂಡಾ ನವ ದ್ವಾರದ ಜಲದೊಳುತೊಳಲುತ ಬಿಕನಾಶಿ2ಹುಟ್ಟುತಸೂತಕಹೊಂದುತಸೂತಕನಟ್ಟ ನಡುವೆ ಬಿಕನಾಶಿಪಟ್ಟಣದಾ ಕಾವೇರಿ ಮುಳುಗಲುಮುಟ್ಟು ತೇಲಿಯಿತೆ ಬಿಕನಾಶಿ3ಉತ್ತಮ ಹತ್ತಿ ಬತ್ತಿರಲಾಂಜನವೃಕ್ಷದಿ ಬೆಳೆವುದೆ ಬಿಕನಾಶಿಉತ್ತಮ ರೋಧನ ಭಾರವ ಕೆಡಿಸಲುಕೆಟ್ಟಿತು ನಿನ ಮಡಿ ಬಿಕನಾಶಿ4ನಾನಾ ಶಾಸ್ತ್ರವನೋದಿ ನಾ ನಿನ್ನ ಮರೆವೆನುಹೀನವ ಬಿಡು ನಿನ್ನ ಬಿಕನಾಶಿನಾನಾ ಶಾಖದಲಿ ಇರಲಾದರೂರ್ವಿಅದುರುಚಿತಿಳಿವುದೆ ಬಿಕನಾಶಿ5ಚರ್ಮವು ತೊಳೆದರೆ ಕರ್ಮವು ಹೋಯಿತೆಕರ್ಮವು ಬಿಡದು ನಿನ್ನ ಬಿಕನಾಶಿಒಮ್ಮೆ ಚಿದಾನಂದ ಪಾದವ ಸ್ಮರಿಸಲುನಿರ್ಮಲವಾದೆಯ ಬಿಕನಾಶಿ6
--------------
ಚಿದಾನಂದ ಅವಧೂತರು
ಮುತ್ತು ರತ್ನದಕೋಲಮತ್ತಮಲ್ಲಿಗಿಕೋಲತತ್ವ ಸೂಸ್ಸಾಡುವಕೋಲಮಿತ್ರೆಯರು ಹರುಷದಿ ಎತ್ತಿ ಕೋಲ್ಹಾಕುವಅತ್ಯಂತ ಸೊಬಗಿನಕೋಲಪ.ನಳಿನಾಕ್ಷಿಯರ ಮನ ಕೊಳಲೂದಿ ರಾತ್ರಿಲೆಸೆಳಿದೆಲ್ಲ್ಯೊಕಪಟಭಾವದಲೆ ಕೃಷ್ಣಸೆಳಿದೆಲ್ಲ್ಯೊಕಪಟಭಾವದಲೆಎಳೆಯ ಮಕ್ಕÀಳುಗಂಡಉಳಿದ ಭಾಗ್ಯವ ಬಿಟ್ಟುಅಳೆದೆಲ್ಲೊಅವರಒಗೆತನವ1ಕಂಜಾಕ್ಷ ಶ್ರೀಕೃಷ್ಣ ರಂಜಿಸಿ ಕೊಳಲೂದಿಮಂಜುಳ ಸ್ವರಕೆ ಮೋಹಿಸುತ ಬಾಲೆಮಂಜುಳ ಸ್ವರಕೆ ಮೋಹಿಸುತಕುಂಜರಗಮನೆಯರು ಸಂಜಿಲೆ ಬಂದರುಅಂಜದೆ ಅತ್ತೆಮಾವರಿಗೆ 2ಭಾವಮೈದುನರನ್ನ ಕೇವಲ ತುಚ್ಛಿಸಿಧಾವಿಸಿ ಬಂದ ಬಾಲೆಯರ ಕೃಷ್ಣಧಾವಿಸಿ ಬಂದ ಬಾಲೆಯರಪಾವನ ಮಾಡದೆ ದೇವ ರಾತ್ರಿಯೊಳುಯಾವ ಪಾಶವ ಬಿಡಿಸಿದಯೊ 3ತಂದೆತಾಯಿ ಬಳಗ ಬಂಧು ಜನರ ಬಿಟ್ಟುಹೊಂದಲು ನಿನ್ನಂಘ್ರಿಗಾಗಿ ಕೃಷ್ಣಹೊಂದಲು ನಿನ್ನಂಘ್ರಿಗಾಗಿಬಂದ ಕಾರಣವ ಒಂದೂ ಮಾತಾಡದೆಕಂದಿಕುಂದಿಸಿದೆಲ್ಲಾ ಅವರ 4ಚಿತ್ತ ಚಂಚಲವಾಗಿ ಎತ್ತಿಗೆ ಮುರವಿಟ್ಟುಮತ್ತೊಂದು ಹೋರಿಯ ತರಿಸೆ ಬಾಲೆಮತ್ತೊಂದು ಹೋರಿಯ ತರಿಸೆಹತ್ತಿರಿದ್ದವರೆಲ್ಲ ಅತ್ಯಂತ ನಗುವರುಒಂದು ಅರ್ಥಿಯು ಮಾಡಿಸಿದೆಲ್ಲೊ 5ಮಂಗನ ಮರಿಯೆತ್ತಿ ಅಂಗಿಯ ತೊಡಿಸುತರಂಗನ ಬಳಿಗೆ ಬಾರೆಂದು ಕಂದರಂಗನ ಬಳಿಗೆ ಬಾರೆಂದುಅಕ್ಕ ತಂಗಿಯರು ಕಂಡು ಹಂಗಿಸಿ ನಗುವರುಶ್ರೀರಂಗ ಮಾಡಿದ ಕೌತುಕವ 6ಬೆಕ್ಕಿನ ಬಾಯೊಳಗೆ ಇಕ್ಕುತ ತುತ್ತನೆಚಿಕ್ಕ ಕಂದಯ್ಯ ಉಣ್ಣೆನುತ ಬಾಲೆಚಿಕ್ಕಕಂದ ಉಣ್ಣೆನುತ ನಕ್ಕರುಗೆಳತಿಯರು ಚಕ್ಕನೆ ಜರಿದರುಚಕ್ಕಂದವೇನು ಮಾಡಿದೆಯೊ 7ಪಟ್ಟಿ ಮಂಚದ ಮೇಲೆ ಬಿಟ್ಟು ಕಂದನ ಬಾಲೆತೊಟ್ಟಿಲ ತೂಗಲು ಭರದಿ ಬಾಲೆತೊಟ್ಟಿಲ ತೂಗಲು ಭರದಿಬಟ್ಟಿ ಬಂದವರು ಅಷ್ಟೂರು ನಗುವಂತೆಎಷ್ಟು ಸೋಜಿಗವ ಮಾಡಿದೆಯೊ 8ಉಟ್ಟ ಪೀತಾಂಬರ ಬಿಟ್ಟು ಹಾಕಿಸಿ ಮ್ಯಾಲೆಕೃಷ್ಣನ ಕೊಳಲು ಲಾಲಿಸುತ ಬಾಲೆಕೃಷ್ಣನ ಕೊಳಲು ಲಾಲಿಸುತ ಧಿಟ್ಟನಕೊಳಲೊಳು ಧಿಟ್ಟೆ ಲಾಲಿಸಿದಳುಶ್ರೀಕೃಷ್ಣ ಮಾಡಿದ ಕೌತುಕವ 9ಕಾಲಿನ ಗೆಜ್ಜೆಯು ಮ್ಯಾಲೆ ಕೊರಳಿಗೆಕಟ್ಟಿಮೇಲಾದ ಸರ ಕಾಲಿಗ್ಹಾಕಿ ಬಾಲೆಮೇಲಾದ ಸರ ಕಾಲಿಗ್ಹಾಕಿಶಾಲೆ ಹಂಬಲ ಬಿಟ್ಟು ಲೋಲಾಕ್ಷಿ ನಡೆದಳುಕೋಲಾಹಲವ ಮಾಡಿಸಿದಿಯೊ 10ಹಣೆಗೆ ಕುಂಕುಮ ಗಲ್ಲಕ್ಕೆ ಕಾಡಿಗೆಚಲ್ವ ಫಣಿಗೆ ಅರಿಷಿಣವು ಬಾಲೆಚಲ್ವ ಫಣಿಗೆ ಅರಿಷಿಣವುನಲ್ಲೆಯರೆಲ್ಲರು ತಮ್ಮ ವಲ್ಲಭರನ ಬಿಟ್ಟುಅಲ್ಲೆ ರಾತ್ರಿಲೆ ಒರಗಿದರು 11ಕಜ್ಜಲ ನೇತ್ರಿಯರ ಲಜ್ಜವಗೈಸಿದೆಸಜ್ಜಾಗಿ ಕೊಳಲೂದಿದೊಮ್ಮೆಸಜ್ಜಾಗಿ ಕೊಳಲೂದಿಗುಜ್ಜಿರಮಾದೇವಿಹೆಜ್ಜೆ ಹೆಜ್ಜೆಗೆ ಹಂಗಿಸುವಳುಅರ್ಜುನ ಆಡಿದ ನಗುತ ರಾಮೇಶ ಇದಕೆ ಮೆಚ್ಚಿದ12
--------------
ಗಲಗಲಿಅವ್ವನವರು
ಮುಂದೋರುವನು ಮುರಾರಿಎಂದೆಂದು ಕುಜನಕೆ ದೂರನುಶೌರಿಪ.ಘನಭಾಗವತಶ್ರವಣವ ಮಾಳ್ಪರಿಗೆವನಜನಾಭನ ಸಂಕೀರ್ತನೆ ಕಾಮೇಷ್ಟರಿಗೆಮುನಿವಂದ್ಯ ಕೃಷ್ಣನ ಮನಸಲಿ ಮರಿಯದೆಗುಣಕರ್ಮನಾಮ ಸ್ಮರಣೆಯಲಿಹರಿಗೆ1ಶ್ರೀ ವಾಸುದೇವಾಂಘ್ರಿ ಸೇವಾಸಕ್ತರಿಗೆಶ್ರೀವರನರ್ಚನೆ ಸದ್ಭಾವಯುಕ್ತರಿಗೆಸಾವಿರಭಿದಾನದ ದೇವದೇವಗೆ ಸರ್ವದಾ ವಂದಿಸುವ ವ್ಯಾಸಂಗವಿಡಿದರಿಗೆ 2ಶೇಷಶಯನನ ಸದ್ದಾಸರಾದರಿಗೆದೋಷದೂರನ ಸಖರಹ ಸಜ್ಜೀವರಿಗೆಪ್ರಸನ್ವೆಂಕಟವಾಸಗೆ ತನ್ನನರ್ಪಿಸಿ ಮುಕುತಿ ಮನೆಯಾಸೆವಂತರಿಗೆ 3
--------------
ಪ್ರಸನ್ನವೆಂಕಟದಾಸರು
ಮುನಿಯ ನೋಡಿರೊ ಮುಕುತಿಧನವ ಬೇಡಿರೊಜನುಮರಹಿತನಾಗಿನಿಂದುಸಂತರಗೂಡಿ ಸಕಲ ಚಿಂತೆಯ ಬಿಡಿಗೋಳಕತ್ರಯ ಇನ್ನು ಕೇಳು ನಿರ್ಣಯಮಂದಜಗವನು ಪೊರೆಯೆ ಒಂದು ರೂಪದಿ
--------------
ಗೋಪಾಲದಾಸರು
ಮುಯ್ಯಕ್ಕೆ ಮುಯ್ಯ ತೀರಿತು - ಜಗ |ದಯ್ಯವಿಜಯಸಹಾಯ ಪಂಢರಿರಾಯಪಸಣ್ಣವನೆಂದು ನಾ ನೀರು ತಾಯೆಂದರೆ |ಬೆಣ್ಣೆಗಳ್ಳ ಕೃಷ್ಣ ಮರೆಯಮಾಡಿ ||ಚಿನ್ನದ ಪಾತ್ರೆಯ ನೀರ ತಂದಿತ್ತರೆ |ಕಣ್ಣ ಕಾಣದೆ ನಾನು ಟೊಣೆದೆ ಪಂಢರಿರಾಯ - 1ಎನ್ನ ಪೆಸರ ಪೇಳಿ ಸೂಳೆಗೆ ಕಂಕಣ |ವನ್ನು ನೀನು ಕೊಟ್ಟು ನಿಜವಮಾಡೆ ||ಎನ್ನ ನೋಯಿಸಿ ಅಪರಾಧ ಭಂಡನ ಮಾಡಿ |ನಿನ್ನ ಮುಯ್ಯಕೆ ಮುಯ್ಯ ತೋರಿದೆ ಪಂಢರಿರಾಯ - 2ಭಕ್ತವತ್ಸಲನೆಂಬ ಬಿರುದು ಬೇಕಾದರೆ |ಕಿತ್ತು ಈಡಾಡೊ ಇನ್ನೊಂದು ಕಂಕಣವ ||ಮುಕ್ತಿಗೆ ನೀನಲ್ಲದಾರನು ಕಾಣೆನು |ಮುಕ್ತೀಶ ಪುರಂದರವಿಠಲ ಪಂಢರಿರಾಯ - 3
--------------
ಪುರಂದರದಾಸರು
ಮುರಹರನಗಧರನೀನೆಗತಿಧರಣಿ ಲಕ್ಷ್ಮೀಕಾಂತ ನೀನೆಗತಿಪಶಕಟ ಮರ್ದನ ಶರಣಾಗತ ವತ್ಸಲಮಕರಕುಂಡಲಧರ ನೀನೆಗತಿ||ಅಕಳಂಕ ಚರಿತನೆ ಆದಿನಾರಾಯಣರುಕುಮಿಣಿಪತಿ ಕೃಷ್ಣ ನೀನೆಗತಿ1ಮನೆಮನೆಗಳ ಪೊಕ್ಕು ಕೆನೆ ಹಾಲು ಬೆಣ್ಣೆಯದಿನ ದಿನ ಮೆದ್ದಹರಿನೀನೆಗತಿ||ಅನುದಿನಭಕುತರ ಬಿಡದೆ ಕಾಯುವಘನಮಹಿಮನೆ ಕೃಷ್ಣ ನೀನೆಗತಿ2ಪನ್ನಗಶಯನ ಸುಪರ್ಣಗಮನನೇಪೂರ್ಣ ಚರಿತಹರಿನೀನೆಗತಿ||ಹೊನ್ನ ಹೊಳೆಯಲಿಹಪುರಂದರವಿಠಲಚೆನ್ನ ಲಕ್ಷ್ಮೀಕಾಂತ ನೀನೆಗತಿ3
--------------
ಪುರಂದರದಾಸರು
ಮುಳಿದು ಮಾಳ್ವುದೇನು ಜನರುಜ್ಞಾನಿಪುರುಷನತನು ಗುಣಂಗಳೆಂಬುವನ ಮುಟ್ಟದಿದ್ದ ಬಳಿಕಪಸುಖವುಬರೆ ಹಿಗ್ಗಲಿಲ್ಲ ದುಃಖದಿಂದ ಕುಗ್ಗಲಿಲ್ಲನಿಖಿಳಪ್ರಪಂಚದಲ್ಲಿ ವಾಸನಿಲ್ಲವೋಸಕಲ ವಿಷಯ ಸಂಗವಿಲ್ಲ ಶಠದಭಾವವೆಂಬುದಿಲ್ಲಪ್ರಕಟ ಪರಮಾತ್ಮನಾಗಿ ಮುಕುತಿ ಪತಿಯು ಆದ ಬಳಿಕ1ನಿಂದೆ ಸ್ತುತಿಗೆ ಮರುಗಲಿಲ್ಲ ಬಂದುದನ್ನು ಕಳೆಯಲಿಲ್ಲಕುಂದುಗಳಿಗೆ ನೊಂದು ಮನಸು ಮಿಡುಕಲಿಲ್ಲವೋಹಿಂದಣದನೆನೆಯಲಿಲ್ಲ ಬೆಂದ ಒಡಲಿನಾಸೆಯಿಲ್ಲಸುಂದರಾತ್ಮತಾನೆಯಾಗಿ ಬಿಂದು ಸಾಕ್ಷಿಯಾದ ಬಳಿಕ2ಅರಿವುಮರೆವು ಎಂಬುದಿಲ್ಲ ಪರರ ಜರೆದು ನುಡಿಯಲಿಲ್ಲಇರುಳು ಹಗಲು ಎಂಬುವಾವು ತೋರಲಿಲ್ಲವೊಮರಣ ಭಯದ ಚಿಂತೆಯಿಲ್ಲ ದುರುಳತನದ ಚರ್ಚೆಯಿಲ್ಲಶರಣ ಸರ್ವಕಾಲ ಕರಣ ದೂರನಾದ ಬಳಿಕ3ಮೋಹದಲ್ಲಿ ಸಿಲುಕಲಿಲ್ಲ ತಾಮಸದಲ್ಲಿ ತೊಡಗಲಿಲ್ಲಕಾಮ ಬಾಧೆ ಎಂಬುವಾವು ಕಾಡಲಿಲ್ಲವೋನೇಮನಿತ್ಯಮೊಳೆಯಲಿಲ್ಲ ಕಾಮಿತಕ್ಕೆ ಕೂಡಲಿಲ್ಲಪ್ರೇಮಾನಂದನಾಗಿನಿತ್ಯವ್ಯೋಮಾತೀತನಾದ ಬಳಿಕ4ತನ್ನವರು ಎನ್ನಲಿಲ್ಲ ತನ್ನ ತಾನು ಹೊಗಳಲಿಲ್ಲಮನ್ನಣೆ ಎಂಬುದದಕೆ ಹಿಗ್ಗಲಿಲ್ಲವೋಭಿನ್ನ ಭಾವವೆಂಬುದಿಲ್ಲ ನನ್ನ ನಿನ್ನದೆಂಬುದಿಲ್ಲಚೆನ್ನ ಚಿದಾನಂದ ಚೇತನಾತ್ಮತಾನಾದ ಬಳಿಕ5
--------------
ಚಿದಾನಂದ ಅವಧೂತರು
ಮುಳುಗಿದನುಯೋಗಿಮುಳುಗಿದನುಒಳ್ಳೆ ಬಲಹುಳ್ಳ ನಾದ ಸಮುದ್ರ ಮಧ್ಯದಿಯೋಗಿಪಸತಿಮೂವರ ಸಮನಿಸಲಾರದೆಪಿತರೀರ್ವರ ಕರಕರೆಯನುನೀಗಿಸುತರೈವರೆನಿಪರು ಮಾತು ಕೇಳದಿರೆಮತಿಯೇನು ಹೇಳಲಿ ಎಲ್ಲ ಸಂಗವ ಬಿಟ್ಟು1ಜೇಷ್ಟರಾರುವರ ಕಾಟವ ತಾಳದೆದುಷ್ಟನಾದಿನಿಯ ನಾಲ್ವರ ತೊರೆದುಅಷ್ಟಮಾತುಳರಪ್ರಯೋಜಕವೆಂದುಕಷ್ಟರಿವರು ಎಂದು ಮನವ ಭೀತಿಯ ಬಿಟ್ಟು2ಇಂತು ಎಲ್ಲವ ಬಿಟ್ಟು ಚಿಂತಕ ತಾನಾಗಿಭ್ರಾಂತು ಎಳ್ಳಿನಿತು ಒಬ್ಬರೊಳಿಲ್ಲದೆಚಿಂತಕನು ಚಿದಾನಂದ ಮೂರುತಿಯನುಅಂತು ಬಲಿದು ಎನ್ನ ದೇಹ ಮರೆವಗಿಳಿ3
--------------
ಚಿದಾನಂದ ಅವಧೂತರು
ಮೂರ್ಖರಾದರು ಇವರು ಲೋಕದೊಳಗೆಏಕದೈವವ ಬಿಟ್ಟು ಕಾಕುದೈವವ ಭಜಿಸಿ ಪ.ಒಂಟಿಯಲಿ ಹೆಂಡತಿಯ ಬಿಡುವಾತನೇ ಮೂರ್ಖಗಂಟನೊಬ್ಬನ ಕೈಯಲಿಡುವವನೆ ಮೂರ್ಖನಂಟರಿಗೆ ಸಾಲವನು ಕೊಡುವಾತ ಮೂರ್ಖ - ಜಗಕಂಟಕನಾದವನು ಕಡು ಮೂರ್ಖನಯ್ಯಾ 1ಮುಪ್ಪಿನಲಿ ಹೆಂಡತಿಯ ಮಾಡಿಕೊಂಬವ ಮೂರ್ಖಸರ್ಪನಲಿ ಗಾರುಡವ ನಡಸುವನೆ ಮೂರ್ಖಇಪ್ಪತ್ತು ಒಂದು ಕುಲ ಉದ್ಧರಿಸದವ ಮೂರ್ಖಅಪ್ಪ ರಂಗಯ್ಯನನು ನೆನೆಯದವ ಮೂರ್ಖ 2ಸತ್ತ ಕರುವಿನ ತಾಯ ಹಾಲು ಕರೆವವ ಮೂರ್ಖಒತ್ತೆಯಿಲ್ಲದೆ ಸಾಲ ಕೊಡುವವನೆ ಮೂರ್ಖಹತ್ತೆಂಟು ಬಗೆಯಲಿ ಹಂಬಲಿಸುವವ ಮೂರ್ಖಹೆತ್ತ ತಾಯ್ ಬೈವವನು ಕಡು ಮೂರ್ಖನಯ್ಯ 3ಪಡೆದ ಮಗಳನುಮಾರಿ ಒಡಲಹೊರೆವವ ಮೂರ್ಖಮಡದಿ ಹುಟ್ಟಿದ ಮನೆಯೊಳಿರುವವನೆ ಮೂರ್ಖಬಡತನವು ಬಂದರೆ ಬಯಸಿಕೊಂಬವ ಮೂರ್ಖದೃಡಬುದ್ಧಿಯಿಲ್ಲದವ ಕಡು ಮೂರ್ಖನಯ್ಯ 4ರಾಮನಾಮವ ಸ್ಮರಿಸದಿದ್ಧಾತನೇ ಮೂರ್ಖಹೇಮವನು ಗಳಿಸಿ ಉಣದಿದ್ದವನೆ ಮೂರ್ಖನೇಮದಲಿ ಹಿರಿಯರನು ನೋಡದವ ಮೂರ್ಖ ದುರ್ನಾಮವನು ಕೊಂಬಾತ ಕಡು ಮೂರ್ಖನಯ್ಯ 5ಕಾಶಿಯಲಿ ದೇಹವನು ತೊಳೆಯದಿದ್ದವ ಮೂರ್ಖಭೂಸೂರರಿಗನ್ನವನು ಕೊಡದವನೆ ಮೂರ್ಖಶೇಷಪತಿ ಕೃಷ್ಣನ ನೆನೆಯದವ ಮೂರ್ಖಹರಿದಾಸನಾಗಿರದವನು ಕಡು ಮೂರ್ಖನಯ್ಯ 6ಉಂಡ ಮನೆಗೆರಡನ್ನು ಬಗೆವಾತನೇ ಮೂರ್ಖಕೊಂಡೆಯವ ಪೇಳಿ ತಿರುಗುವವ ಮೂರ್ಖಪುಂಡರೀಕಾಕ್ಷ ಶ್ರೀ ಪುರಂದರವಿಠಲನಕೊಂಡು ಭಜಿಸದ ಮನುಜ ಕಡು ಮೂರ್ಖನಯ್ಯ 7
--------------
ಪುರಂದರದಾಸರು
ಮೋಕ್ಷೋಪಾಯಕಾನಂದ ಮುನೀಂದ್ರನಶಿಕ್ಷಾ ಮಾರ್ಗಹುದಯ್ಯಲಕ್ಷ್ಷ್ಯಶ:ಲಕ್ಷಣವಾರ್ಹೇಳೇನುಲಕ್ಷದಿ ಗುಣವಿಲ್ಲಯ್ಯ ಪ.ಸುಕೃತತಾನಾದರೆ ಚಿರಕಾಲಕೆ ಒಮ್ಮೆಧಿಕೃತವಾಹುದು ಭವತುಷ್ಟಿಸುಖವೆಂಬುದು ಸ್ವರೂಪಾನಂದಾನುಭವವಿಕಸವಾಗುವ ಜ್ಞಾನದೃಷ್ಟಿ ಆಸುಖವಾಪೇಕ್ಷಿಸಿ ಪ್ರಕೃತವುದಾಸಿಪದಖಿಳ ಮಹಾತ್ಮರಭೀಷ್ಟಿಸಕಳಾನಿಷ್ಟವ ಸಾಗಿಸುವ ಶ್ರೀಸುಖತೀರ್ಥರ ಶುಭಗೋಷ್ಟಿ 1ಕಿವಿಯಲಿ ಸತ್ಶಾಸ್ತ್ತ್ರವಕೇಳಿಧ್ಯಾನಮನನವ ಸಾಧಿಪುದೆ ದೇವಸಾರ್ಥಿಕುವಲಯಪ್ರಿಯಕುಲತಿಲಕನು ಮೆಚ್ಚಿಹನವಭಕುತಿಯಪಥಕೀರ್ತಿಅವಿರಳ ಎದೆಗದ್ದಿಗೆಯೊಳು ಮೆರೆವನಸವಿಗುಣ ನಿರ್ಣಯವಾರ್ತಿವಿವರಿಸಿ ವಾರಂವಾರ ವರದ ಮದ್ಧವ ಜಗದ್ಗುರು ವರಮೂರ್ತಿ 2ಈಶ್ವರ ಸಾಕ್ಷಾತ್ಕಾರದ ಭೇದರಹಸ್ಯ ವಿಚಾರವಂತಯೋಗಿನಶ್ವರಾನಶ್ವರವರಿತ ವೈರಾಗ್ಯದಐಶ್ವರ್ಯಾನ್ವಿತಭೋಗಿಶಾಶ್ವತ ಪ್ರತ್ಯಕ್ಷಾದಿ ತ್ರಿಪ್ರಮಾಣಭಾಷ್ಯಕ ಶ್ರೀಪದಯೋಗಿವಿಶ್ವದೊಡೆಯ ಪ್ರಸನ್ವೆಂಕಟಪತಿ ಪದವಿಶ್ವಾಸಿಕ ಮುನಿಯೋಗಿ 3
--------------
ಪ್ರಸನ್ನವೆಂಕಟದಾಸರು
ಮೋರೆಯ ಕಾಂತಿಗೆ ಹಚ್ಚಿರೋ ಕಿಚ್ಚಾಮರುಳಾಗುತಿರುತಿಹನವ ಹುಚ್ಚಾಪಯೋನಿಯ ಮುಖ ನೋಡೆ ಎಲ್ಲಕೆಹೇಸಿಕೆತಾನೆ ರಕ್ತವ ನಿತ್ಯತವಿಸುತಿಹುದುಏನೇನು ಶುಚಿಯಲ್ಲ ಇಂತು ವಿವೇಕವಿಲ್ಲಏನು ಕಾರಣ ಮೋಹ ಪಡುವರೋ1ನರಕಾಣುವ ಪೂರಿತವದು ಭಗವದುಭರದಿ ದುರ್ಗಂಧವಾಸನೆಬಹುದುಸರಸಿಜೋದ್ಭವನಾಗಲಿ ಶಿವನೆ ತಾನಾದರಾಗಲಿಮರುಳೆ ಪುನಃ ಜನ್ಮಕೆ ತಾರದೆ ಬಿಡುವುದೇ2ಚಕ್ರಿ ಖಂಡವು ಆಸ್ತಿ ಚದುರಸ್ತಿರೊಪಾಗಿಕರ್ಮವೆಂಬುದಕೆ ಸ್ಥಾನವಾಗಿಹುದುನಿರ್ಮಳ ಚಿದಾನಂದ ವಸ್ತುವ ತಿಳಿಗೊಡದಧರ್ಮದಾ ಪಥದಲ್ಲಿ ಕೆಡಹುತಿಹುದು3
--------------
ಚಿದಾನಂದ ಅವಧೂತರು
ಯತಿಗಳು-ದಾಸರು72ವ್ಯಾಸರಾಯರ ದಿವ್ಯ ಪಾದಕಮಲವನು ಸೇವಿಸುವ ಭಕುತರಿಗೆಪನ್ನಗಶಯನನಪರಮಆಜÕದಿ ತಾನುಶಾಪಾನುಗ್ರಹ ಸಮರ್ಥಿಕೆಯುಳ್ಳ ಚೆಲುವ ನಿಜಸ್ನಾನವನು ಮಾಡಿ ಅಸಂಪ್ರಜ್ಞಾತ ಸಮಾಧಿಯಲಿನಾನಾಪರಿ ಗ್ರಂಥ ನ್ಯಾಯಾಮೃತ ಚಂದ್ರಿಕೆ-ಎರಡು ನಾಲ್ಕುಮಂದಿ ಪರಮಶಿಷ್ಯರು ಆದದಾನ ಮಾನವು ವ್ಯಾಖ್ಯಾನ ಸುಳಾದಿಗಳಮಧ್ವಮತವೆಂತೆಂಬೊ ಅಬ್ಧಿಯಲಿ ಚಂದ್ರನಂ-
--------------
ಗೋಪಾಲದಾಸರು
ಯತಿರತನತಿಮತಿಯುತನೆರÀತಿಪತಿಪಿತ ಸೇವಾರತನೆ ಮರುತಮತ ಭಕುತಿಪೂರಿತನೆನಾಥ ಸತ್ಯಾಭಿನುತ ನವ? ತೀರಥÀನೆ ಪ.ಶ್ರುತಿಸ್ಮøತಿಇತಿಹಾಸಾರ್ಥ ನೀಜ್ಞಾತತೆಗತಿ ಸಮರ್ಥಕ್ಷಿತಿಸತಿವಿತ್ತ ವಿರಹಿತನೆ ಮನ್ಮಥ ಜಿತಕಾಂತಿ ಶೋಭಿತನೆನೀತಿ ಚತುರತೆ ಸುವಿರತಿ ನಿಸ್ಸೀಮ ವಿಖ್ಯಾತ ರಘುಪತಿ ಅರ್ಚಿತ ಪಥಗಮ್ಯಸತತ ವಿದ್ವತ್ತ ಪ್ರತತಿಗೆ ವಿತ್ತರಣ ಶೂರೋನ್ಮತ್ತ ದುರ್ಮತ್ತಕಾಂತಾರಕುಠಾರ1ಧ್ಯಾನ ಮೌನ ಪೂರ್ಣ ಗಂಭೀರ ಗೀರ್ವಾಣ ವಾಣಿನಿರುತ ಉಚ್ಚಾರಜ್ಞಾನಿಜನರಿಗೆ ಘನ್ನಗುರುವೆ ನಿದಾನಗುಣಕಲ್ಪತರುವೆಮಾನಾಥನ ಪೂಜೆ ಮನ ಮನೆಯೊಳು ಮಾಡಿನೀಣ್ಯವಿನಾನೆಸದು ? ನಲಿನಲಿದಾಡಿದೀನಜನರಿಗೆ ತತ್ವಜ್ಞಾನಸುಧೆಯನುದಿನದೊಳೆರೆದೆ ಕಾಮಧೇನುವಿನಂತಯ್ಯ 2ತ್ರ್ರೇತಾ ಕ್ಷಿತಿಪರ್ಗೆ ಮಿಗಿಲೆನಿಸಿ ಶ್ರೀಸೀತಾಪತಿ ಅತಿಮುದಬಡಿಸಿಮತ್ತಮಾಯಿಮೊತ್ತಗಜಸಿಂಗ ನಿನ್ನಪ್ರತಿಎಂತೊ ಗುರುಕುಲೋತ್ತುಂಗಚಿತ್ತಜನಯ್ಯ ಪ್ರಸನ್ವೆಂಕಟೇಶ ಭಜನಶೀಲಸತ್ಯನಾಥಸುತ ಸತ್ಯಾಭಿನುತ ನವ? ತೀರಥನೆಸುತ್ತ ವಿಸ್ತರಿಸಿ ನಿನ್ನ ಕೀರ್ತಿ ದ್ಯುತಿಮಣಿಯಂತನ್ಯಥಾಗತಿಕಾಣೆನೆನ್ನ ರಕ್ಷಿಸಯ್ಯ ಪಿತನೆ3
--------------
ಪ್ರಸನ್ನವೆಂಕಟದಾಸರು
ಯದುವೀರ ಒದಗೆನ್ನ ನಾಲಿಗೆಗೆಉದಯಾದಿ ಅಸ್ತಾಂತ ಆವಾವಾಗೆ ಪ.ನಿನ್ನ ನಾಮದ ಸ್ಮರಣೆಯೆ ಶುಭಕರ್ಮವುಉನ್ನತ ಸಂಕೀರ್ತನೆ ಶತಕ್ರತುವುಪುಣ್ಯಗಂಗಾಸ್ನಾನದ ಫಲಕಧಿಕವುಘನ್ನ ಜಪದ ಬೀಜವೆÉ ನಾಮವು 1ಬಂಗಾರದಿಳೆಯಳೆದೊಲಿದೀವ ದಾನದಿಹಿಂಗದೆ ಉಭಯಸ್ಯ ಗೋಶತದಿಶೃಂಗಾರ ಕೋಟಿ ಕನ್ಯಾದಾನಕಧಿಕವುಮಂಗಳಮಹಿಮ ಮುಕುಂದನ ನಾಮವು 2ಧರ್ಮಾರ್ಥ ಕಾಮಮೋಕ್ಷಗಳ ಮೂಲವಿದೆಂದುನಿರ್ಮಲಶ್ರುತಿಸಾರುತಾವೆಂದುಮರ್ಮವರಿತು ನಾಮ ನಂಬಿದೆ ಶೇಷಾದ್ರಿಯಹಮ್ರ್ಯನಿಲಯ ಪ್ರಸನ್ವೆಂಕಟಯ್ಯ 3
--------------
ಪ್ರಸನ್ನವೆಂಕಟದಾಸರು
ಯಾಕಿಂತು ಮನಸೋತೆ ಏ ರುಕ್ಮಿಣೀದೇವಿಲೇಖನವ ಬರೆದು ನೀನಾ ಕೃಷ್ಣಗೆಪಲೋಕಮಾನ್ಯಳೆ ನೀನು ಬೇಕಾಗಿ ಮರುಳಾದೆಈ ಕೃಷ್ಣ ಯಾದವರ ಕುಲಕೆ ತಿಲಕಅ.ಪಜನಿಸಿದನು ಮಧುರೆಯೊಳು ದೇವಕಿಯ ಜಠರದಲಿತನಯನೆನಿಸಿದ ಗೋಪಿಗಿವನು ಗೋಕುಲದಿದನುಜೆ ಪೂತನಿಯಳ ಮೊಲೆಯುಂಡು ತೇಗಿದನುಮನೆ ಮನೆಯ ಪಾಲ್ಮೊಸರು ಕದ್ದು ಮೆದ್ದಾ1ತುರುವ ಕಾಯ್ದನ ವನದಿ ತಿರಿಯ ಬುತ್ತಿಯನುಂಡಶಿರಕೊರಳಿಗಾಭರಣ ನವಿಲ್ಗರಿಯ ತುಂಡುತರಳತನದಲಿ ಹಲವು ತರುಣಿಯರ ವ್ರತವಳಿದಕರಿಯನಿವ ಸ್ತ್ರೀಯರುಡುವ ಸೀರೆ ಕದ್ದೊಯ್ದ2ನಂದಗೋಕುಲದಿ ಸಾಕಿದ ಸ್ತ್ರೀಯರನು ಬಿಟ್ಟುಬಂದು ಮಧುರೆಯೊಳು ಮಾತುಳನ ಮರ್ದಿಸಿದಾಚಂದವೆ ಆ ಕುಬುಜೆ ಡೊಂಕ ತಿದ್ದಿಯೆ ನೆರೆದಸಿಂಧುಮಧ್ಯದಿಂzÀಗೋವಿಂದ ಮಾಗದಗಂಜಿ3xmಟ veಡಿsioಟಿ='1.0' eಟಿಛಿoಜiಟಿg='%SಔUP-ಇಓಅಔಆIಓಉ%'
--------------
ಗೋವಿಂದದಾಸ