ಒಟ್ಟು 1031 ಕಡೆಗಳಲ್ಲಿ , 95 ದಾಸರು , 911 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಮಹದೇವ ಮದ್ರೋಗ ಮೂಲವಳಿಯೊ ಪ ಮಹದಾದಿಗಳ ದೈವ ಹರಿಯಲ್ಲಿ ರತಿ ನಿಲಿಸಿ ಅ.ಪ. ಸರ್ವಸಿದ್ಧನೆ ವಿಷಯ ಪರ್ವತಕೆ ಮಹಕುಲಿಶ ಕಮಲ ಭೃಂಗ ಮರ್ವೆಂಬ ಮಾರಿಯನು ಅವಳ ನೇತ್ರದಿ ಸುಟ್ಟು ಸರ್ವಾತ್ಮ ಹರಿಧ್ಯಾನಮಗ್ನ ಮನ ನೀಡೆನಗೆ 1 ತಾಳಲಾರೆನೊ ಸ್ವಾಮಿ ಕಾಳ ವಿಷಯದ ದೋಷ ಫಾಲಾಕ್ಷ ಬಿಡಿಸೈಯ್ಯ ಭೋಗದಾಸೆ ಶೀಲ ಮನದಲಿ ಹರಿಯ ಲೀಲೆ ಲಾವಣ್ಯಗಳ ಮೇಲಾಗಿ ನೋಡುವ ಮಹಕರುಣ ಮಾಡೆನ್ನ 2 ಭಾರತೀಶನ ಪಾದಕಮಲ ಮಧುಪನೆ ನಿನ್ನ ಕಾರುಣ್ಯವಾದವನೆ ಶೌರಿವಶನೊ ಮಾರಾರಿ ಮದ್ಭಾರ ವಹಿಸಿ ಪಾಲಿಸು ಎನ್ನ ಧೀರ ತವ ಚರಣಾಬ್ಜ ವಾರಿಜಕೆ ಮೊರೆ ಹೊಕ್ಕೆ 3 ಎನ್ನ ಹೀನತೆ ನೋಡಿ ಘನ್ನ ಭಯಗೊಂಡಿಹೆನೊ ಧನ್ಯರ ಮಾಳ್ಪ ದಯ ನಿನ್ನದಯ್ಯಾ ಪುಣ್ಯತಮ ಮೂರುತಿಯ ಪ್ರತಿಬಿಂಬ ಹರಿಸಖನೆ ಧನ್ಯನಾ ಮಾಡೆನ್ನ ವಿಷಯ ಜಯ ದಯಮಾಡಿ 4 ಅಮಿತ ಮಂಗಳದಾಯಿ ವಿಭವ ವಾಮದೇವ ಮಮತಾದಿ ಅಭಿಮಾನ ದೋಷವರ್ಜಿತ ಮಹಾ ಸಾಮ್ರಾಜ್ಯ ಯೋಗಕ್ಕೆ ಅಧಿನಾಥ ಕರುಣಿಪÀುವುದು 5 ಶಂಭು ಶಂಕರ ತವ ಪದಾಂಬುಜದಿ ಶಿರವಿಟ್ಟು ಹಂಬಲಿಪೆನಿಷ್ಟಪದ ಪಾಲಿಸೆಂದು ತುಂಬಿತ್ವಕ್ಕರಸನ ಹೃದಂಬುಜದೊಳರಳಿಸಿ ಮೂರ್ತಿ ದರುಶನ ನೀಡೊ 6
--------------
ಜಯೇಶವಿಠಲ
ಮಹಾಲಕ್ಷ್ಮೀ ಅಷ್ಟಕಂ ಪಂಕಜ ಮಾಲಿನಿಪಾಹಿಮಾಂ ಕರವೀರವಾಸಿನಿ ಪಾಹಿ ರಾಘವ ಕಾಮಿನಿ ಪ ಚಂದ್ರಮಂಡಲ ಹಾಸ ಸನ್ಮುಖ ಮಂದಹಾಸ ಸುಶೋಭಿತೆಸಿಂಧುರೇಂದ್ರ ಕರಾಮೃತೌಘ ಸುಗಂಧ ಬಿಂದು ನಿಷೇಚಿತೆಕುಂದರೋಜ್ವಲ ಇಂದ್ರನೀಲ ಮಣೀಂದ್ರಹಾರ ವಿಲಾಸಿತೇಬಂದ್ರಿರಾಜಸುತೇವ ಸೂನುಮನಾದಿ ಬಂಧ ವಿವರ್ಜಿತೇ 1 ಸಾಂಬ ಸುಶಾಂತಿ ಕಾಂತಿ ಸಹೋದ್ಭವೆ 2 ಚಾರು ಸುರಾಳಿ ಮೌಳಿಗ ಹಸ್ತತೇ 3 ತಪ್ತಕಾಂಚನ ನೂಪುರೋಜ್ವಲ ರಕ್ತಪಾಲ ಸರೋರಹೆಚಿತ್ರಪೇಟ ಪಟೋಲ್ಲ ಸತ್ಕಟೆ ರತ್ನ ಕಾಂಚಿ ಗುಣೋದ್ಭವೇನಿತ್ಯತೃಪ್ತ ನಿರಂಜನೈಸುರ ಮೃತ್ಯುಮೋಹನ ವಿಗ್ರಹೆತತ್‍ಕೃಪೈವಪು ಮೃತ್ಯುಸಾಧನ ಸಪ್ತ ಮೋಡಿಹ ವಿದ್ಮಹೆ 4 ಅಂಬಜಾವಕ ಲಕ್ಷ್ಮೀ ಮೇಷ ಕದಂಬಿನೀನಿಲಯಸ್ಥಿತೆಕಂಬುಕಂಜರ ತಾರಿಬೇಟ ಕರಾಂಬು ಸಂಭವ ಸೇವಿತೆಶಂಭರಾರಿ ಸುತಾಂಘ್ರಿಪಂಕಜೆ ಬಿಂಬರಾಹಿ ಭೂಸುತೆಸಾಂಬಹೀಂಬ ನಿಹಾ ಸುದರ್ಶಯ ಜಂಜವೈರಿನಿ ಸೇವಿತೆ 5 ತಲ್ಪ ಮಂದ ಸೌಭಗ ಶಾಲನಂವಂದ್ಯ ಮಾನ ವಿದೇಂದ್ರ ದೈವತ ವೃಂದ ವೈಭವದಾಯಿನಂಸುಂದರಾಂಗಿಣಿ - ನಿವೇದಗೇಹ ಭವಾಂಧಿ ಪೋಪನೀ ಶೋರ್ಪಣಂ 6 ಜೀವವರ್ಗ ಹೃದಾಲಯ ಸ್ಥಿತ ಭೂವರಾಹಸಹಾನನೇಪಾವನೀತಾಹೇ ವಸೇದ್ರುಮ ಹಾನು ಭಾವ ಶಿಖಾಮಣಿಹಾವಭಾವ ವಿಲಾಸಿನಾಕಿ ಸುವಾಸಿನಿನುತ ಸದ್ಗುಣಿಸೇವಕೇಯ ವಿಭಾವಿತಾಖಿಲ ಭಾವಕಾಯದ ಶಿಕ್ಷಣಿ 7 ಇಂದಿರೇಶ ಸತೀಂದುಮೌಳಿ ಕರಾರವಿಂದ ನಿಷೇವಣೇಚಂದ್ರಮಾರುತರೇಂದು ಸೈಂದವವೀಂದ್ರ ಪೂರ್ವಸು ವಾಹನೇಅಂಧಕೂಪ ಸಮಾನ ದುರ್ಭವ ಬಂಧ ಸೇಘನೀ ಪೋಷಿಣಿನಂದನಂದನ ಮಾಸುದರ್ಶಯ ಬಂಧುರಾಮೃತ ಭಾಷಿಣಿ 8
--------------
ಇಂದಿರೇಶರು
ಮಾಡಿದಫಲವನುಭವಿಸಣ್ಣ ನೀ ಒಲ್ಲೆಂದರೆ ಬೆನ್ನ ಬಿಡದಣ್ಣ ದೊರಕುವುದ್ಹ್ಯಾಗಣ್ಣ ಪ ಜತೆಯಿಲ್ಲದೆ ನೀ ಮೊದಲ್ಹುಟ್ಟಿ ಮತ್ತು ಜತೆಯಿಲ್ಲದ್ಹೋಗ್ವುದು ಮರೆತುಬಿಟ್ಟಿ ಸತಿಸುತರ್ಹಿತರೆಂದು ಮತಿಗೆಟ್ಟ ಮಂದ ಮತಿಯಾಗಿ ಸಂಸಾರ ತಿಳಿದಿ ಗಟ್ಟಿ ಗತಿಸುವ ದೇಹದ ಸ್ಥಿತಿ ವಿಚಾರಿಸದೆ ಸತತ ಒದ್ದಾಡಿದಸತ್ಯದೊಳಗೆ ಭ್ರಷ್ಟ 1 ಗಳಿಸಲು ತುಸು ಬೇಸರಲ್ಲದ್ಹೋಗಿ ಕೇಳಿದಳುಕಿ ಅಳುಕಿ ಜನರಿಗೆ ಬಾಗಿ ಅಳಿದುಪೋಗುವ ಕಾಸು ಹಣಕಾಗಿ ಕೆಟ್ಟು ಬಳಲಿಬಳಲಿ ದುಡಿದೆಲೆ ಗೂಗಿ ನಳಿನಾಕ್ಷನ ಪೂಜೆ ಒಮ್ಮೆ ಮಾಡೆನ್ನಲು ಅಳುಮೋರೆ ಮಾಡಿದಿ ತಲೆಬಾಗಿ 2 ಕೆಟ್ಟ ಕೃತ್ಯದಿ ನಿನ್ನ ವಯ ಕಳೆದಿ ಮನೆ ಗಿಷ್ಟಮಿತ್ರರು ಬರಲತಿ ನೊಂದಿ ಕೊಟ್ಟದ್ದು ಕೊಡಲಿಕ್ಕೆ ಸಿಟ್ಟಿಗೆದ್ದಿ ನೀ ಶಿಷ್ಟರ ಸಂಗಕೆ ದೂರಾದಿ ಇಷ್ಟದಾಯಕ ನಮ್ಮ ಶಿಷ್ಟ ಶ್ರೀರಾಮನಡಿ ಗಟ್ಟ್ಯಾಗಿ ಭಜಿಸದೆ ಕೆಟ್ಟ್ಹೋದಿ 3
--------------
ರಾಮದಾಸರು
ಮಾಧವ ಗೀತೆ ಶರಣು ಹರಿಗೆ ಶರಣು ಸಿರಿಗೆ ಶರಣು ಬ್ರಹ್ಮವಾಣಿಯರಿಗೆ ಶರುಣು ಭವಗೆ ಶರಣು ಶಿವೆಗೆ ಶರಣು ಬೆನಕಗೆ ಶರಣು ತತ್ವಮಾನಿಗಳಿಗೆ ಶರಣು ಮುನಿ ಸಮೂಹಗಳಿಗೆ ಮಾಧವ 1 ಪರಮಭಕ್ತರಾಗಿ ಮೆರೆದ ಗುರು ಪುರಂದರಾದಿ ಸಾಧು ವರರ ವಚನ ಮಣಿಗಳನ್ನು ಮನದೊಳಾರಿಸಿ ಸರವ ಮಾಡಿ ಶರಣ ಜನರ ಕರುಣದೆಳೆಯೊಳಿದನು ಬಿಗಿಸಿ ಮಾಧವ 2 ಶ್ರೀಯೆ ಸತಿಯು ನಿನಗೆ ಬ್ರಹ್ಮರಾಯ ಹಿರಿಯ ಮಗನು ವೈನ- ತೇಯ ರಥವು ಖಾದ್ರವೇಯೆ ಶಯ್ಯೆ ಛತ್ರವು ಮನೆಯ ದಾಸಿ ಸುರನಿ ಮಾಧವ 3 ಪರ್ವತೇಶನಣುಗಿ ತಂಗಿ ಶರ್ವದೇವ ನರ್ಮ ಸಖಳು ಸರ್ವದುರಿತವಳಿವ ಗಂಗೆ ನಿನ್ನ ಪುತ್ರಿಯು ಸರ್ವಕರ್ತ ಸರ್ವಶಕ್ತ ಸರ್ವಕಾಲ ದೇಶ ವ್ಯಾಪ್ತ ಭೋಕ್ತ ಮಾಧವ 4 ನೀನೆ ತಾಯಿ ನೀನೆ ತಂದೆ ನೀನೆ ಬಂಧು ನೀನೆ ಬಳಗ ನೀನೆ ಸಖಳು ನೀನೆ ಗುರುವು ನೀನೆ ದ್ರವ್ಯವು ನೀನೆ ಧೃತಿಯು ನೀನೆ ಸ್ಮøತಿಯು ನೀನೆ ಮತಿಯು ಮಾಧವ 5 ನಿನ್ನ ನಾಮ ಪುಣ್ಯನಾಮ ನಿನ್ನ ರೂಪ ಮಾನ್ಯರೂಪ ಅನ್ಯ ದೈವರನ್ನು ಕಾಣೆ ಘನ್ನ ಭಕ್ತವರ್ಯರಾಣೆ ಮಾಧವ 6 ದೀನ ನಾನು ದಾನಿ ನೀನು ಹೀನ ನಾನು ಮಾನಿ ನೀನು ಏನ ಬಲ್ಲೆನೈಯ ನಾನು ಜ್ಞಾನಪೂರ್ಣನೈಯ ನೀನು ಮಾಧವ 7 ಹೃದಯದಲ್ಲಿ ನಿನ್ನ ರೂಪ ವದನದಲ್ಲಿ ನಿನ್ನ ನಾಮ ಉದರದಲ್ಲಿ ಅರ್ಪಿತಾನ್ನವಿತ್ತು ಅನುದಿನ ಒದಗಿ ಬಂದು ಬದಿಯಲಿದ್ದು ಮದಡ ಬುದ್ಧಿಯನ್ನು ಬಿಡಿಸಿ ಮಾಧವ 8 ಸ್ನಾನ ಮೌನ ಧ್ಯಾನ ತಪಗಳೇನು ಮಾಡಲೇನು ದೇವ ನೀನೆ ಕೃಪೆಯಿನೊಲಿಯದಿರಲು ಜ್ಞಾನ ಬಾರದು ಏನು ಹೀನ ಹಾನಿ ಬರಲು ನೀನು ಮಾತ್ರ ಬಿಡದಿರೆನ್ನ ಮಾಧವ 9 ನಿತ್ಯವಲ್ಲ ದೇಹವಿನ್ನು ವ್ಯರ್ಥವಾಗಿ ಪೋಪುದಾಯು ಮತ್ತೆ ಬರುವುದೇನು ನಿಜವು ಮತ್ರ್ಯಕಾಯವು ನಿತ್ಯ ನಿನ್ನ ಭಜಿಸುತಿಪ್ಪ ಮಾಧವ 10 ಅಂಬುಗುಳ್ಳೆಯಂತೆ ಇರುವ ಡಿಂಬವನ್ನು ನಂಬಿ ಕೆಟ್ಟು ಹಂಬಲಿಸುತ ವಿಷಯಗಳಿಗೆ ಡೊಂಬನಾದೆನು ಕಂಬಳಿಯೊಳು ಕಟ್ಟಿದನ್ನ ತಿಂಬುವನಿಗೆ ದೊರೆವ ಸುಖವು ಮಾಧವ 11 ಹೊಟ್ಟು ತಂದು ಕುಟ್ಟಿ ಕೇರಿ ಕಷ್ಟಪಟ್ಟು ತುಕ್ಕಿ ಬೀಸಿ ಅಟ್ಟಹಾಸದಿಂದ ರೊಟ್ಟಿ ಸುಟ್ಟು ತಿನ್ನಲು ಎಷ್ಟು ಸುಖವೊ ಅಷ್ಟೆಯಿನ್ನು ಭ್ರಷ್ಟ ಭವದಿ ಮಮತೆಯಿಡಲ ಮಾಧವ 12 ಹೊಟ್ಟೆಕಿಚ್ಚು ಪಡುವೆ ದೈವಕೆಷ್ಟು ಪೂಜೆ ಮಾಡೆ ಕರುಣ ಪುಟ್ಟಲೊಲ್ಲದದಕೆ ಬೆಟ್ಟದಷ್ಟು ಕೊಟ್ಟರು ಬೆಟ್ಟು ನೀರೊಳದ್ದಿ ಬಾಯೊಳಿಟ್ಟು ಚಪ್ಪರಿಸಲು ರುಚಿಯ ಮಾಧವ 13 ತಪ್ಪು ಸಾಸಿರಂಗಳನ್ನು ಒಪ್ಪಿಕೊಂಡು ಕಾವದೇವ ಮುಪ್ಪುರಂಗಳನ್ನು ಗೆಲಿಸಿದಪ್ರಮೇಯನೆ ಕಪ್ಪು ಮೇಘಕಾಂತಿಯಿಂದಲೊಪ್ಪುತಿಪ್ಪ ತಿರುಮಲೇಶ ಮಾಧವ 14 ಒರಳ ನೆಕ್ಕಿ ವ್ರತವ ಕೆಟ್ಟ ಮರುಳನಂದವಾಯ್ತು ದೇಹ ಧರಿಸಿದುದಕೆ ನಿನ್ನ ಬಿಟ್ಟು ನರರ ಸ್ತುತಿಸಲು ಹರಕು ಚಿಂದಿ ಬಿಡಿಸಲಿಲ್ಲ ಕರಕು ಅನ್ನ ಹೋಗಲಿಲ್ಲ ಮಾಧವ 15 ಮೊರಡು ತುರುವ ಹಿಡಿದು ಕಟ್ಟಿ ಕರೆದು ಕಷ್ಟ ಪಟ್ಟು ಪಾಲ ನುರಗಗಳಿಗೆ ಎರೆದ ತೆರದಲಾಯ್ತು ನಿನ್ನನು ತರಣಿ ಮುಣಗ ದುಡಿದು ಬಡಿದು ಮಾಧವ 16 ಕೆರವ ತಿಂಬ ನಾಯಿಗಿನ್ನು ಸುರುಚಿಯನ್ನ ಸೊಗಯಿಸುವುದೆ ನರಕ ಭಾಗಿ ಪಾಮರಂಗೆ ನಿನ್ನ ನಾಮವು ಗರಳದಂತೆ ತೋರ್ಪುದೈಯ ಗುರುಗಳಿಲ್ಲ ಹಿರಿಯರಿಲ್ಲ ಮಾಧವ 17 ಕ್ರೂರ ಮಾನವರೊಳುದಾರ ಧೀರ ಶೂರರೆಂದು ಸಾರಿ ಬಾರಿ ಬಾರಿಗಿನ್ನು ಪೊಗಳಿ ಬೊಬ್ಬೆಯಿಟ್ಟರು ಬಾರದವರಿಗೆಂದು ಕರುಣ ಘೋರತನದ ದನುಜರವರು ಶೌರಿ ಮಾಧವ 18 ಹಾಳು ಹೊಲಕೆ ನೀರನೆತ್ತಿ ತೋಳು ಬೀಳು ಹೋದವೋಲು ಖೂಳ ಜನಕೆ ಪೇಳಿಕೊಳ್ಳುತಿಹನು ಬಾಳ್ವೆಯು ದಾಳಿ ಮಾಳ್ಪ ವಿಷಯಗಳನು ಹೂಳಿ ಜ್ಞಾನ ಭಕ್ತಿಯನ್ನು ಮಾಧವ 19 ಎಷ್ಟು ನೀಲಿಯನ್ನು ತೊಳೆಯೆ ಬಿಟ್ಟು ಹೋಗದವರ ಬಣ್ಣ ದುಷ್ಟ ಮಾನವರಿಗೆ ಕರುಣ ಪುಟ್ಟದೆಂದಿಗು ಕಷ್ಟಪಟ್ಟು ಸೇವಿಸುವರ ಹೊಟ್ಟೆಯನ್ನು ಹೊಡೆದು ತಮ್ಮ ಮಾಧವ 20 ನಿರುತ ನಿನ್ನ ಕಥೆಯ ಬಿಟ್ಟು ನರರ ಕಥೆಗಳನ್ನು ಕೇಳಿ ಗುರುಗಳನ್ನು ಹಿರಿಯರನ್ನು ಜರೆಯುತಿಪ್ಪರು ಪೊರೆದ ತಂದೆ ತಾಯ ಮಾತ ಪರಿಕಿಸದಲೆ ತೊರೆದು ತಮ್ಮ ಮಾಧವ 21 ಪಟ್ಟದರಸಿಯನ್ನು ತೊರೆದು ಬಿಟ್ಟು ಪರರ ಸತಿಯ ಕೂಡಿ ಕೊಟ್ಟ ಸಾಲವನ್ನು ಕೊಡದೆ ನುಂಗುತಿಪ್ಪರು ಕರವ ಭಾಷೆಯನ್ನು ಕೊಟ್ಟು ಮೋಸ ಮಾಡುತಿಹರು ಮಾಧವ 22 ಉಂಡ ಮನೆಗೆ ಬಗೆವರೆರಡನವರು ಭಂಡರು ಕಂಡು ನುತಿಸಿ ಬೇಡಿಕೊಂಡರು ದಂಡಿಸುವರ ಕಂಡು ನಡುಗಿ ಮಾಧವ 23 ಕೊಳ್ಳರೊಳಗೆ ಸ್ನೇಹ ಬಹಳ ಸುಳ್ಳರೊಳಗೆ ಸೋಲುತಿಹರು ಒಳ್ಳೆಯವರ ಕಂಡವರ ಟೊಳ್ಳು ಮಾಳ್ಪರು ಬಳ್ಳೆಸುರಿದು ಬಲ್ಲಿದವರಿಗಳ್ಳೆ ಬಿರಿಯಲುಣಿಸಿ ದಣಿಸಿ ಮಾಧವ 24 ಮಾಡಿದಂಥ ಕೃತಿಯು ಮರೆತು ಕೇಡು ಬಗೆದು ಕಾಡುತಿಹನು ನೋಡರೊಮ್ಮೆಗಾದರವರು ಬಡವರೆಂಬುದ ಜಾಡೆಯರಿತು ನಿನ್ನ ನಾಮ ಪಾಡಿ ಪೊಗಳುತಿಹರಿಗೆಂದು ಮಾಧವ 25 ಶಾಕವ್ರತದೊಳೆಲ್ಲ ಶಾಕಂಗಳನ್ನು ಬಿಡುವ ತೆರದಿ ಬೇಕು ಬೇಕು ಎಂಬ ಬಯಕೆ ಬಿಡಲು ಬಾರದು ಸಾಕೆನಿಸದೆ ರತಿಯ ಸುಖದೊಳೇಕ ಚಿತ್ತನಾಗುವಂತೆ ಮಾಧವ 26 ನೇಮ ನಿಷ್ಠೆಯೆಂದು ಪರರ ಧಾಮದನ್ನ ಬಿಡುವವೋಲು ಕಾಮಲೋಭ ಮೋಹಗಳನು ಬಿಡಲು ಬಾರದು ನಿತ್ಯ ಪರರ ಮಾಧವ 27 ಹೇಸಿಗೆಯನು ಕಂಡು ಕರದಿ ನಾಸಿಕವನು ಹಿಡಿಯುವಂತೆ ಹೇಸಿ ವಿಷಯ ವಾಸನೆಯನು ಬಿಡಲು ಸಲ್ಲದು ಘಾಸಿಬಟ್ಟು ಪರರ ಸೇವೆಯಾಸೆಬಟ್ಟು ಮಾಡುವಂತೆ ಮಾಧವ 28 ವಿತ್ತ ಪದವಿ ಕಂಡು ಹರುಷ ಕ್ಲೇಶಗಳಿಗೆ ಸಿಲುಕು- ತಿರುಳು ಹಗಲು ಬಿಡದೆ ಕುದಿದು ತೊಳಲುತಿರುವೆನು ದುರುಳ ವಿಷಯಗಳಿಗೆ ಮನವ ಮಾಧವ 29 ಹೇಸಿ ವಿಷಯ ಸುಖವ ನಾನು ಲೇಸೆನುತ್ತೆ ತಿಳಿದು ಮಮತೆ ಯಾಸೆಯಲ್ಲಿ ಕಟ್ಟುಬಿದ್ದು ಕ್ಲೇಶಪಡುತಿಹೆ ಪಾಶಬಿಡಿಸಿ ದಾಸ ದಾಸ ದಾಸನಾಗಿಸೆನ್ನ ದೋಷ ಮಾಧವ 30 ಆಗದೆನಗೆ ಅಬುಜನಾಭ ಭಾಗವತವ ಕೇಳೆ ಮನಸು ಬೈಗು ಬೆಳಗು ಪೋಗುತಿಹುದು ಸಾಗಿ ಬಾರದು ಭೋಗ ಭಾಗ್ಯಗಳನು ಬಯಸಿ ರಾಗ ಲೋಭಗಳಲಿ ನೆಲಸಿ ಮಾಧವ 31 ಬಂದ ಕಾರ್ಯವಾಗಲಿಲ್ಲ ಎಂದು ಬ್ರಹ್ಮ ದೇಹ ಧರಿಸಿ ಮುಂದ ನೊಂದನರಿಯೆ ಮಾಧವ 32 ದಾಸ ವೇಷವನ್ನು ಹಾಕಿ ದೇಶ ದೇಶವನ್ನು ತುಕ್ಕಿ ಮೋಸಮಾಡಿ ಸುಜನರನ್ನು ಘಾಸಿಗೊಳಿಸಿದೆ
--------------
ಲಕ್ಷ್ಮೀನಾರಯಣರಾಯರು
ಮಾನಸ-ಗಣ್ಯಚಿನ್ಮಯನ ಪ ವನಮಾಲಿಕಾಗಳನ ಮಿಂಚನು ಸೋಲಿಸುತಿಹನ ||ಕಣ್ಣಾರೆ|| 1 ಹೃದಯಾತಂಕಮೋಚನನ ಚಕುಂಕುಮಾಂಕಿತನ 2 ಗುಣವೃಂದ ಪೂರಿತನ ಚಕೋರನಂದ ಚಂದಿರನ 3 ಕುಂಡಲ ಭೂಷಣನಿಕರ ಭೂಷಿತನ ಸುಖದಾಯಕನ ||ಕಣ್ಣಾರೆ|| 4 ಶರಣೆಂದು ಕರದಿ ತೊರುವವನ ನೆಲಸಿಹ ವರದ ವಿಠಲನ 5
--------------
ಸರಗೂರು ವೆಂಕಟವರದಾರ್ಯರು
ಮಾಮನೋಹರಾ ಮುರಾರಿ ಬಾರೋ ಪ ಕರಿವರದಾಯಕ ಮರಚಮುಸ್ಥಾಪನ | ಶರಣಾಗತ ಸಹಕಾರಿ ಬಾರೋ | ಸರಸಿಜಾಸನ ವಂದಿತಾಂಘ್ರಿ | ದುರಿ | ತಾಚಲ ವಜ್ರಧಾರಿ ಬಾರೋ 1 ಮನೋಜನಿತ ಜನಕರವಿಂದ ಲೋಚನ | ಮುನಿಜನ ಹೃದಯ ವಿಹಾರಿ ಬಾರೊ| ಘನಮಹಿಮ ಸುದಾಮ ರಕ್ಷಕಕ | ದನುಜಾವಳಿ ಮದಹಾರಿ ಬಾರೋ 2 ಕಾಲ ಪಯೋಧರ | ಮಂದರೋದ್ಧಾರಿ ಬಾರೋ | ನಂದನಾತ್ಮಜ ದೇವ ಮಹಿಪತಿ | ನಂದನ ಪ್ರಭು ಉದಾರಿ ಬಾರೋ3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಮಾಮವತು ಶ್ರೀ ರಮಾಪತೇ | ರಘುಪತೇ ಸೀತಾಪತೇ ಪ ಭೀಮಪರಾಕ್ರಮ ದನುಜಾರಾತೇ | ಕಾಮಿತಾರ್ಥದಾಯಕ ನಮೋಸ್ತುತೇ ಅ.ಪ ಜನಕ ನೃಪಾತ್ಮಜಾಯುತ ಸುರ ಭೂಜಾ | ಇನಶಶಿತೇಜ ನಯನಸರೋಜ | ವಿನಮಿತ ಶುಂಭ ವಿನತಸುತಾಧ್ವಜ | ಮುನಿಪ ಸಮಾಜ ರೂಪ ಮನೋಜ ||1 ವಾನರಪತಿ ಸಂಸೇವಿತ ಚರಣಾ | ದಾನವವೈರಿ ವಿಭೀಷಣ ಕರುಣಾ | ದೀನಜನಾಶ್ರಯ ಪಾವನಚರಣಾ ಶ್ರೀನುತ ಮಾಂಗಿರಿ ವೆಂಕಟರಮಣಾ 2
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಮಾರ ಕೋಟಿ ಸುಂದರ ಪ ಸೋಮಶೇಖರಾದಿ ಸುರ ಸ್ತೋಮನುತ ನಾಮ ಅ.ಪ ಸಾಯಕ ಶ್ರೀದಾಯಕ ನಿರ್ಮಾಯ ರಘುರಾಯ 1 ಅಪ್ರಾಕೃತ ಶರೀರ ಗೋ ವಿಪ್ರಜನ ಪಾಲ ನಿನ್ನ ಸುಪ್ರಭಾವ ಪೊಗಳಲು ಸರ್ಪಾಧಿಪಗಳವೇ 2 ದೇವ ಗುರುರಾಮ ವಿಠಲಾ ವನಜನೇತ್ರ ನೂತ- ನಾವರಣ ಪುರಿವಾಸ ಕಾವುದೆಮ್ಮನು ಸರ್ವೇಶಾ 3
--------------
ಗುರುರಾಮವಿಠಲ
ಮಾರ ಜನಕನ ನೀರೆ ಪ ಕರವ ಹರುಷದಿಂದಾ ಅ.ಪ ಕ್ಷೀರವಾರ್ಧಿತನಯೆಯೆಂದು ಸಾರಸಾಕ್ಷಿಯರು ಬಂದು ಕೋರಿ ಭಜಿಸುವರು ನಿನ್ನ ಅಪಾರ ಮಹಿಮೆಗಳನು 1 ಸುತ್ತ ಜ್ಯೋತಿಗಳ ಬೆಳಗಿ ಮುತ್ತೈದೆಯರೆಲ್ಲ ಕೂಡಿ ಮುತ್ತು ಮಾಣಿಕ ಪೀಠವಿರಿಸಿ ಭಕ್ತಿಯಿಂದ ಪ್ರಾರ್ಥಿಸುವರು 2 ಜನಕರಾಯನ ಕುಮಾರಿ ಸನಕಾದಿಯೋಗಿ ಜನಾಧಾರೀ ದಿನಕರ ಕೋಟಿ ಪ್ರಕಾಶೆ ದಿವ್ಯಮಣಿಮಯ ಭೂಷೆ 3 ಮಾನಸಾಬ್ಜ ಮಂಟಪದಲಿ ಧ್ಯಾನವೆಂಬೊ ಪೀಠದಲ್ಲಿ ಜ್ಞಾನಿಶಕ್ತಿಗಳು ಪೊಗಳೆ ಸಾನುರಾಗದಿಂದಲೀಗಾ 4 ನಿತ್ಯಸಂಪತ್ಪ್ರದಾಯಿನಿ ಭೃತ್ಯವತ್ಸಲೆ ಜನನೀಸತ್ಯಸಂಕಲ್ಪ ಗುರುರಾಮ ವಿಠಲನ ಪಟ್ಟದರಾಣಿ 5
--------------
ಗುರುರಾಮವಿಠಲ
ಮಾರುತಿಯೆ ಕೃಪೆ ಮಾಡೈ ವರ ಪ ಪ್ರಾಣ ಹರ ಗಂಭೀರನೆ ಅ.ಪ. ಕಾಲ ವಕ್ಷ ವಿಮಲ ಪಕ್ಷ 1 ವಾತ ಲಂಕೇಶ ಮುಖ ಭೀತಿಸಂದಾಯಕ2 ವಿವರ್ಜಿತ ಭೀಮ ನಿತ್ಮಾತ್ಮಕ 3 ಕಾನನ ಗೋಚರ ವಾನರ ಪುಂಗವ ಜನಕೀ ಪ್ರಾಣದ ಧೇನುನಗರಹಿತ4
--------------
ಬೇಟೆರಾಯ ದೀಕ್ಷಿತರು
ಮಾಲಕೌಸ್ತುಭ ಸತ್ಯಭಾಮಲೋಲ ನೀಲಶಾಮಸುಂದರ ಕಾಲಕಾಲದಿ ಬಿಡದೆ ಎನ್ನ ಪಾಲಿಸಭವನೆ ಪ ಭುವನವೀರೇಳು ಸೂತ್ರಧಾರ ಭವದರೋಗಕ್ವೈದ್ಯ ಭಕ್ತಭಯ ಪರಿಹಾರ ಸತ್ಯ ಬುವಿಜಾಮನೋಹರ 1 ಕೋಮಲಾಂಗ ಭಜಕಜನರ ಕಾಮಿತಾರ್ಥ ಕೊಡುವ ಸುರ ಕಾಮಧೇನು ಕಲ್ಪವೃಕ್ಷ ಸ್ವಾಮಿ ದಯಾಕರ 2 ಸಾರ ಮಾಯಾಮೋಹವಿದೂರ ಕೇಶವ 3 ಪರಕೆ ಪರಮ ಪರಾತ್ಪರ ಮರಣರಹಿತ ಮಾರಮಣ ಉರಗಶಾಯಿ ಪರಮಪುರುಷ ಶರಣು ಸುಖಕರ 4 ನಿಗಮವೇದ್ಯ ನಿರುಪಮಾತ್ಮ ಅಗಣಿತಗಣಿತಗಮ್ಯಚರಿತ ಸುಗುಣ ಶಾಂತಾಕಾರ ಮೂರು ಜಗದ ಪಾಲಯಾ 5 ಸಕಲವಿಘ್ನದೂರ ನಿನ್ನ ಭಕುತಿಯಿಂದ ಭಜಿಸಿಬೇಡ್ವೆ ಮುಕುತಿಸಂಪದ ನೀಡಿ ಸಲಹು ಭಕ್ತವತ್ಸಲ 6 ಕಂದಮಾಡಿದಪರಾಧಗಳ ತಂದೆ ದಯದಿ ಕ್ಷಮಿಸಿ ಬಂದ ಬಂಧಗಳನು ಪರಿಹರಿಸಯ್ಯ ಸಿಂಧುಮಂದಿರ 7 ನಾನಾಯೋನಿಯೊಳಗೆ ಪುಟ್ಟಿ ಜ್ಞಾನಗೆಟ್ಟು ಬಳಲುವಂಥ ಹೀನ ಬವಣೆ ತಪ್ಪಿಸಯ್ಯ ದೀನಪಾಲ 8 ನಿರುತ ನಿನ್ನ ಚರಣದೆಡೆಗೆ ಬರುವ ಸುಲಭಮಾರ್ಗ ಆವು ದ್ವರವ ಪಾಲಿಸೊಲಿದು ಎನಗೆ ಕರುಣಸಾಗರ 9 ದೋಷದಾರಿದ್ರ್ಯಗಳೆಲ್ಲ ನಾಶಗೈದು ಹರಿಯೆ ನಿಮ್ಮ ದಾಸನೆನಿಸುದ್ಧಾರಮಾಡು ದೋಷನಾಶನ 10 ಮರೆಯಬಿದ್ದ ತರಳನನ್ನು ಕರುಣದೃಷ್ಟಿಯಿಂದ ನೋಡಿ ಸರ್ವಭಯ ಪರಿಹಾರಮಾಡು ಹರಿಸರ್ವೋತ್ತಮ 11 ನಿನ್ನ ಒಲವು ಬಲವು ಎನಗೆ ಅನ್ಯಬಲವ ಒಲ್ಲೆಸ್ವಾಮಿ ಮನ್ನಿಸಬೇಕಿನ್ನು ಮಗನ ಸನ್ನುತಾಂಗನೆ 12 ನಂಬಿ ಭಜಿಪ ಬಕ್ತಜನರ ಇಂಬುದಾಯಕ ನೀನು ಇಂಬುಗೊಟ್ಟು ಸಲಹು ಎನ್ನ ಅಂಬುಜಾಕ್ಷನೆ 13 ಏನುತಪ್ಪು ಇರಲು ನೀನೆ ದಯದಿ ಕ್ಷಮಿಸಿ ಇನ್ನು ನಾನಾಬೇನೆ ಕಳೆದು ಕಾಯೊ ಜಾನಕೀಶನೆ 14 ಚಾರುವೇದ ಪೊಗಳುವಂಥಪಾರ ನಿನ್ನ ದಿವ್ಯಮೂರ್ತಿ ತೋರಿಧನ್ಯನೆನಿಸು ಎನ್ನ ನಾರಸಿಂಹನೆ 15 ಭಾರ ನಿನ್ನದಯ್ಯ ಬಂದ ಘೋರ ತಾಪತ್ರಯಂಗಳಿಂದ ಪಾರುಮಾಡಿ ಕಾಯುವುದು ಕಾರುಣ್ಯ ನಿಧೆ 16 ಪ್ರಾಣಹಾರಿ ಹೋಗಲು ನಿನ್ನ ಧ್ಯಾನವಗಲದಂತೆ ಎನಗೆ ತ್ರಾಣಪಾಲಿಸಯ್ಯ ಮೊದಲು ಧ್ಯಾನದಾಯಕ 17 ದಾಸನರಿಕೆ ದಯದಿ ಪೂರೈಸಿ ಕಾಯಬೇಕು ದೇವ ಘಾಸಿಗೈಯದೆ ರಕ್ಷಿಸಯ್ಯ ದಾಸಪ್ರಿಯನೆ 18 ಕೆಟ್ಟಶಕುನರಿಷ್ಟ ಸ್ವಪ್ನ ತಟ್ಟಬೇಕೆ ನಿನ್ನ ಪಾದ ನಿಷ್ಠೆಯಿಂದ ಭಜಿಪರ್ಗೆ ಸೃಷ್ಟಿಕರ್ತನೆ 19 ನಿತ್ಯ ನಿರ್ಮಲಾತ್ಮ ನಿನ್ನ ನಿತ್ಯಭಕ್ತಿ ಸುಖವನಿತ್ತು ಸತ್ಯಸಂಧನೆನಿಸು ಎನ್ನ ಸತ್ಯರಾಧಾರ 20 ಮರವೆ ತರಿದು ಹರಿಯೆ ನಿಮ್ಮ ಕರುಣ ನೀಡಿ ಮರಣ ಭಯವ ಪರಿಹರಿಸಯ್ಯ ಸಿರಿಯವಲ್ಲಭ 21 ಭಾನುಕೋಟಿಪ್ರಕಾಶ ನಿನ್ನ ಧ್ಯಾನಿಸಿ ಮರೆಹೊಕ್ಕೆ ನಾನಾಬೇನೆ ಗೆಲಿಸಿ ಕಾಯೊ ದಾನವಾಂತಕ 22
--------------
ರಾಮದಾಸರು
ಮಾವಿನಕೆರೆ ಎಲ್ಲಿರುವೆ ಬಾರಂಗ ಬಾ ಮೋಹನಾಂಗ ಎಲ್ಲಿರುವೆ ನೀಲಾಂಗ ಮಾಂಗಿರಿರಂಗ ಪ ಇಲ್ಲಿರುವೆಯಾರಂಗ ಸಲ್ಲಲಿತ ರಂಗ ಮೆಲ್ಲನೇ ರಂಗ ಓ ಮುದ್ದುರಂಗಾ ಅ.ಪ ಅಲ್ಲಿ ನೋಡಿದರಿಲ್ಲ ಇಲ್ಲಿ ಕಾಣಿಸಲಿಲ್ಲ ಬಲ್ಲೆ ನಾನೀ ಚೆಲ್ಲ ವರದಾತನಲ್ಲ ಇಲ್ಲಿ ತಿಳಿಗೊಳವಿಲ್ಲ ಮಲ್ಲಿಗೆಯ ಹೂವಿಲ್ಲ ಇಲ್ಲಿರುವ ಧೃಢವಿಲ್ಲ ನೀ ಬರುವೆ ಅರಿವಿಲ್ಲ 1 ಗಜರಾಜ ಕರೆದನೆ ಅಜಾಮಿಳನು ಕೂಗಿದನೆ ಅಜನು ಬಾರೆಂದನೆ ಲೋಕವಂದಿತನೆ ರಜತಾದ್ರಿ ವಾಸನೆ ಪೂಜಿಸಲು ಕರೆದನೊ ಸುಜನ ವರದಾಯಕನೆ ವಿಜಯ ಪೂರಿತನೇ 2 ವನವನದಿ ಸಂಚರಿಸಿ ದನಿದನಿಯನನುಸರಿಸಿ ಮನದಿ ನೋವನನುಭವಿಸಿ ಕನಸೆಂದು ಭಾವಿಸಿ ಕನವರಿಪ ಯೆನ್ನೊಳಗೆ ಕನಿಕರವ ಸೂಸಿ 3
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಮುಖ್ಯಪ್ರಾಣ ಮೂಲಗುರು ಅಹುದೊ ಪ. ಅಹುದೊ ಧರಣಿಯ ಮ್ಯಾಲೆ ದಿವಾಕರನ ಪ್ರಭೆಯಂತೆಅಹುದೊ ಮಧ್ವಮತಕೆ ಬಿರುದು ನೀ ಅಹುದೊಅ.ಪ. ಅಂಜನೆಯ ಗರ್ಭದಲಿ ಉದ್ಭವಿಸಿದ್ಯೊ ನೀನುಸಂಜೀವನವ ತಂದ್ಯೊ ಸಕಲ ಕಪಿಗಳಿಗೆಮಂಜುಭಾಷಣ ನೀನು ಶರಧಿಯನು ದಾಟಿದೆಯೊಕಂಜಾಕ್ಷಿ ಸೀತೆಗೆ ಉಂಗುರವನಿತ್ತೆ 1 ಕುಂತಿಯ ಗರ್ಭದಲಿ ಉದ್ಭವಿಸಿದ್ಯೊ ನೀನುಪಂಥವನಾಡಿ ದಾಯಾದ್ಯರೊಡನೆಕಂತುಪಿತನ ಕೂಡಿ ಕೌರವರ ಗೆಲಿದ್ಯೊಸಂತೋಷದಿಂದ ಸಾಮ್ರಾಜ್ಯ ಕೈಗೊಂಡೆ 2 ಮಧ್ವಾವತಾರದಲಿ ಮುನಿವೇಷವನು ತಾಳಿಅದ್ವೈತವೆಂಬೊ ಅರಣ್ಯವನು ತರಿದೆಮಧ್ವಶಾಸ್ತ್ರವೆಂಬೊ ಮತವ ನಿರ್ಣೈಸಿದೆಮುದ್ದು ಹಯವದನದಾಸ ನೀನಹುದೊ 3
--------------
ವಾದಿರಾಜ
ಮುಖ್ಯಪ್ರಾಣ ತೋರೋ ಸದಾನಂದಮಯ ಜಗತ್ಪ್ರಾಣ ಪ ನಿಗಮ ತ್ರಿಗುಣ ವ್ಯಾಪಾರ ಶ್ರೀ ರಘುಪತಿ ಪ್ರಿಯನೆ 1 ಮುಕ್ತಿದಾಯಕ ಪರಮಾತ್ಮನು ನೀನೆ 2 (ಉದಾನ) ಸಮಾನ ಸದಾನಂದ ನೀನೆ 3
--------------
ಸದಾನಂದರು
ಮುನಿದ ಭಾವುನದಂಡು ಕಂಡು ನಿನ್ನ ಮನೆಮಾರಿ ನಾಸೆಯನು ನೀಡಾಡು ಪ ಲಂಬಾಣಿ ಜನ ಬಂತು ನೋಡು ನೀನು ದಿಬ್ಬವ ಹತ್ತಿ ಕಾನಿಗೆ ಓಡು ತಂಬಿಗೆಗಳ ಜೊತೆಮಾಡು ತಲೆ ಚಂಬಿಗೆ ಬಂತು ಮಾನವರಿಗೆ ಕೇಡು 1 ಕಂಡ ಕಂಡವರನು ಹಿಡಿದು ಕರ ಚೆಂಡಾಡಿ ಹೊಯ್ದು ಕೆಡಹಿ ಮೆಟ್ಟಿ ತಿವಿದು ಖಂಡೆಯದೊಳು ಘಾಯ ಗರೆದು ಮೈ ರೊಂಡಿ ಮುರಿದು ಗಂಟಿಗೆ ನೀರನೆರೆದು 2 ಕತ್ತಿಯ ಕಿತ್ತು ಕೈಯೆತ್ತು ಗೋಣ ಕುತ್ತಿ ಹಸ್ತಕೆ ಹಸ್ತವನು ತರಿದೊತ್ತಿ ರಕ್ತ ಮಾಂಸದ ಕರುಳೊತ್ತಿ ಹಾ ರಿತು ಗೂಡಿಂದ ಜೀವನು ಕಣ್ಣ ಕುತ್ತಿ 3 ಹಂತಕಾರಿಗಳೊಂದೆ ರೂಪು ಪಾಪ ವಂತರಿಗಿನಜ ತೋರಿಸುವ ವಿದೂಪ ನರ ಕಂತೆಯ ಬಿಡದೆ ಸುಲಿಯಲಿಕೆ ಸಾಪು 4 ಶೀಲವಂತರು ಶೀಲಗೆಟ್ಟರು ದುಃ ಶೀಲರು ಶೀಲದಾಚಾರವ ಸೊಟ್ಟರು ಕೀಳು ಮೇಲೊಂದಾಯಿತಷ್ಟು ಲಕ್ಷ್ಮೀ ಲೋಲ ಮಾಡಿಸುವ ಕುಚೇಷ್ಟೆ ಇವಿಷ್ಟು 5
--------------
ಕವಿ ಪರಮದೇವದಾಸರು