ಒಟ್ಟು 1559 ಕಡೆಗಳಲ್ಲಿ , 113 ದಾಸರು , 1275 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನೋಡು ಎನ್ನೊಳು ಮಾಡು ದಯವನು ಬೇಡಿಕೊಂಬುವೆ ಮುರಹರ ಪ ರೂಢಿಯೊಳು ಎನ್ನ ಖೋಡಿಮಾಡದೆ ಕಾ ಪಾಡು ಬೇಗ ಭಕ್ತಹಿತಕರ ಅ.ಪ ಪಂಕಜಾಕ್ಷನೆ ಕಿಂಕರನ ಈ ಮಂಕುಗುಣಗಳ ಬಿಡಿಸಯ್ಯ ಶಂಖಸುರಹರ ಶಂಕೆಯಾತಕೆ ಕಿಂಕರನು ನಾಂ ಪಿಡಿ ಕೈಯ 1 ಹಿಂದು ಇಲ್ಲೆನ್ನ ಮುಂದು ಇಲ್ಲಯ್ಯ ತಂದೆ ನಿನ್ಹೊರತ್ಯಾರ್ಯಾರು ಮಂದಮತಿಯನು ಛಿಂದಿಸಿ ಬೇಗ ಕಂದನನು ಪೊರೆ ದಯಾಕರ 2 ತಂದೆ ನೀನೆ ತಾಯಿ ನೀನೆ ಬಂಧು ನೀನೆ ಶ್ರೀಕರ ಬಂದ ದುರಿತದಿಂದ ಕಾಯೊ ಸಿಂಧು ನೀನೆ ದೇವರೊ 3 ಉರಗನ ಬಾಯಲಿರುವ ಮಂಡೂಕ ಸ್ಮರಿಸಿ ನೋಣಕ್ಹವಣಿಸುವ ತೆರದಿ ಶರಧಿಸಂಸಾರ ಸ್ಥಿರವೆಂದರಿಯದೆ ಮರವಿನಿಂ ಬಿದ್ದೆ ದುರಿತದಿ 4 ಕಾಯಜೆಂಬುವ ಮಾಯಕೋರನು ಪಾಯಕೆ ಒಳಪಟ್ಟೆನು ತೋಯಜಾಕ್ಷೇರ ಮಾಯಮೋಹದಿ ಕಾಯದಂದಿಸಿ ಕೆಟ್ಟೆನು 5 ಕುಂಭಿನಿಯೊಳೆನಗಿಂಬುಗೊಟ್ಟು ಬಲು ನಂಬಿದವರಾಸ್ತ್ಯಳಿದೆನೊ ಜಂಬಬಡಿಯುತ ಶುಂಭಗುಣಗಳಿ ಗಿಂಬುಗೊಟ್ಟು ದಿನಗಳೆದೆನೊ 6 ಪ್ರಾಣತಗ್ಗಿಸಿ ದೀನತನದಲಿ ದೈನ್ಯಬಡುವರಿಗ್ಹಾನಿಮಾಡಿದೆ ದಾನಕೊಡುವರ ದಾನಕಡ್ಡಾಗಿ ನಾನಾ ದುರ್ಬೋಧವುಸುರಿದೆ 7 ಜಾನಕೀಶನ ಧ್ಯಾನಯುತರಿಗೆ ಹೀನ ಹಾಸ್ಯವ ಗೈದೆನೊ ಏನು ತಿಳಿಯದೆ ಗಾಣಕೆ ಬಿದ್ದ ಮೀನಿನಂತೆ ನಾನಾದೆನೊ 8 ಶ್ವಾನನಂದದಿ ಖೂನವಿಲ್ಲದೆ ನಾನಾಪಾಪವ ಗೈದೆನೊ ಮಾನವಜನುಮೇನು ಶ್ರೇಷ್ಠಿದ ಜ್ಞಾನದೋಳ್ಹೊತ್ತುಗಳೆದೆನೊ9 ಮಂಗನಂದದಿ ಹಂಗದೊರೆದು ಅಂಗಲಾಚಿ ಪರರನ್ನು ಬೇಡಿದೆ ಅಂಗಜಪಿತ ಮಂಗಳಾಂಗ ಶ್ರೀ ರಂಗ ನಿಮ್ಮ ಮಹಿಮ್ಯರಿಯದೆ 10 ದಾಸ ಮಾಡಿದ ದೋಷ ಮನ್ನಿಸಿ ಪೋಷಿಸು ಶ್ರೀರಾಮನೆ ಶ್ರೀಶ ಶ್ರೀನಿವಾಸ ಎನ್ನಂತ ರಾಸೆ ಪೂರೈಸು ಬೇಗನೆ 11
--------------
ರಾಮದಾಸರು
ನೋಡು ನೋಡು ನಿನ್ನ ಹಿತವಾ ಪ ಇಂದು ನರದೇಹದಲ್ಲಿ ಬಂದುದೇನೋ | ಒಂದು ಪಥವರಿಯದಾ ಛಂದವೇನೋ ಅ.ಪ ಗುರುವಿನಂಘ್ರಿಯ ಕಂಡ ಗುರುತ ಅನುಭವನುಂಡ ಸೈಸ್ಯೆ | ಕರುವೇ ಬಾರೆನ್ನುತಾ ಸೈಸ್ಯೆ | ಶರಣ ಬಾರೆನ್ನುತಾ ಸೈಸ್ಯೆ | ಹರಿಯ ಭಕ್ತ ನೆನ್ನುತಾ ಧರಿಯೊಳ್ಹೀಂಗ ಹಿರಿಯರಿಂದ | ಕರಿಸ ಕೊಳ್ಳಲಾಗದೇ | ಬರಿದೆ ಭ್ರಾಂತಿಗೆ ಬಿದ್ದು | ಬರಡ ಜನ್ಮ ಮಾಡ ಬ್ಯಾಡಾ 1 ನೀಗಿ ಕೇಳು ಕೇಳು | ಆದಿ ಸನ್ಮಾರ್ಗವ ಕೇಳು ಕೇಳು | ಸಾಧನವ ಬಲಿಯೋ ನೀ | ಕಂದ ಭೂಮಿಯ ಮೇಲೆ ಹನಿ ಮಾಡದೇ 2 ಗುರುಮಹಿಪತಿಸ್ವಾಮಿ ಅರ್ಹವಿನೊಳಗೆರಕವಾದ ಧೀರ ಧೀರ| ನೀರು ಪದ್ಮ ಹೋಲುವಾ ಎರಡು ಸಮನಿನಿಸಿ ಸುಖ | ಭರಿತರಾದ ಪರಿಯಲಿ ಹರಿಯ ಧ್ಯಾನ ಬಲಿಯೋ ಮೈಯ್ಯ | ಮರೆಯಬೇಡಾ ಮನವೇ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ನೋಡುವ ಬನ್ನಿ ಪೂಜೆ ಮಾಡುವ ಬನ್ನಿ | ಪಾಡಿ ನಲಿದಾಡುತಲಿ ಎನ್ನೊಡೆಯಾ ಲಿಂಗಗ ಪ ದೇಹ ದೇವಾಲಯದಲ್ಲಿ ಹೃದಯ ಜಲ ಹರಿಯಲಿ | ಊಹಿಸಿ ನೆಲೆಯಾಗಿ ಹೊಳೆವ ಆತ್ಮಲಿಂಗಗ 1 ಜ್ಞಾನದಭಿಷೇಕ ಸಮ್ಯಕ್ ಜ್ಞಾನದಾ ವಸ್ತ್ರ ನೀಡಿ | ಧ್ಯಾನದೀಪಾ ಸಂಚಿತದ ಧೂಪಾರತಿಯಾ ಲಿಂಗಗ 2 ಭಾವಭಕ್ತಿ ಗಂಧಾಕ್ಷತೆ ಸುಮನ ಪುಪ್ಪದಲಿಂದು ಅವಗು ಸುವಾಸನೆಯು ಪರಿಮಳ ಲಿಂಗಗ 3 ಘನ ಗುರು ಮಹಿಪತಿ ಸುತ ಪ್ರಭುಲಿಂಗಗ 4
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ನೋಡುವರೇ ಅಂತವಾ|ನೋಡುವರೇ| ಮೂಢ ಪಾಮರನೆಂದುದ್ದರಿಸದೇ ಸುಮ್ಮನೇ ತಾಕೂಡುವುದೇ ಪ ಜ್ಞಾನ ಧ್ಯಾನ ಮೌನವರಿಯೆ|ಪೂಜೆಯ ನಾ ಮಾಡುವರೇ| ಗಾನ ಮಾನ ಏನೂ ಅರಿಯೆ|ಸ್ತುತಿ ಸ್ತವನ ಪಾಡುವರೇ?1 ಚತುರ ಉತ್ತರ ಮಾತುಗಳರಿಯೆ|ಸತ್ಸಂಗದಿ ಕೂಡುವರೇ| ಇತರ ಯಾತರ ಆತುರನರಿಯೆ|ವರಗಳನಾ ಬೇಡುವರೇ 2 ಹಾವ ಭಾವ ಭಕ್ತಿಗಳರಿಯೇ|ಛಲ ಬಿಂಕವ ಹಿಡಿವರೇ| ದೇವಕಾವುದು ಮಹಿಪತಿ ಸುತ ಪ್ರಭುತವ ದಾಸನ ಮಾಡುವರೇ3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ನ್ಯಾಯ ವೇನೋ ಕೃಷ್ಣಯ್ಯ _ ನ್ಯಾಯವೇನೋ ಪ ಜೀಯ ನಿನ್ನ ಸ್ಮರಣೆ ಕೊಡದೆ ಎರಡು ಭ್ರಷ್ಟ ಮಾಡಿಸೊದು ಅ.ಪ. ಇತ್ತಲಿಲ್ಲ ಅತ್ತಲಿಲ್ಲ ಅರ್ಥಮಾನ ಹೋಯಿತಲ್ಲಾ ಕಾಲ ಕಳೆಸಿ ಸುತ್ತಿ ಸುತ್ತಿ ಚರಿಸೋದು 1 ಹೊಟ್ಟೆಬಟ್ಟೆಗಾಗಿ ಹೊಗಿ ಕೆಟ್ಟ ಜನರ ಸೇವೆ ಮಾಡಿ ಕಾಯ ಭ್ರಷ್ಟನಾಗಿ ಮಾಡೋದೆನ್ನ 2 ಮಾಯಪಾಶದಲ್ಲಿ ಹಾಕಿ ಹೇಯ ವಿಷಯ ಆಶೆಕೊಟ್ಟು ನ್ಯಾಯ ಮಾರ್ಗ ತೋರದೇನೆ ನೋಯಿಸೋದು ಎನ್ನನೀನು 3 ಮೋಸಮಾಡಿ ಪರರಗಂಟು ಆಶೆಯಿಂದ ಕೂಡಿಹಾಕಿ ಘಾಸಿಭವದಲಿ ನೂಕಿ ಕ್ಲೇಶಪಡಿಸುವುದು ಎನ್ನ 4 ಇಂದು ಎಂದು ಹೇಳಿ ಮಂದನಾಗಿ ಕಾಲಕಳೆಸಿ ಪಾದ ದ್ವಂದ್ವ ಧ್ಯಾನ ಮರೆಸೋದು 5 ಮಧ್ವಮತದಲ್ಲಿ ಪುಟ್ಟಿ ಮಧ್ವಗ್ರಂಥ ಓದದೇನೆ ಶುದ್ಧಮೂಢನಾಗಿ ತಿರುಗಿ ಗದ್ದನೆನಿಸುವುದು ಎನ್ನ6 ಇನ್ನು ಮುನ್ನು ನೀನೆ ಗತಿ ಎನ್ನ ಕೈ ಪಿಡಿಯೊ ಬೇಗ ಘನ್ನ ನವನೀತಧರ ಚೆನ್ನ ಶ್ರೀ ತಾಂಡವ ಕೃಷ್ಣವಿಠಲ 7
--------------
ಕೃಷ್ಣವಿಠಲದಾಸರು
ಪಚ್ಚೆಯ ಬಂದೀಗ ಶ್ರೀ ಪುಲಿಗಿರಿ ಪಚ್ಚೆಯ ನೋಡಿ ಬೇಗ ಪ ಸಚ್ಚಿದಾನಂದರೂಪಚ್ಚರಿಯಾದಂಥ ಮುಚ್ಚುಮರೆಯಿಲ್ಲದಚ್ಚುತನೆಂಬುವ ಅ.ಪ ಕೈಗೆ ಸಿಕ್ಕುವುದಲ್ಲವೈ ತಕ್ಕಡಿಯಲ್ಲಿ ತೂಗಿ ನೋಡುವುದುಲ್ಲ ವೈ ಯೋಗಿ ಹೃದಯದಲ್ಲಿ ಭಾಗವತರೊಳನುರಾಗದಿ ಮೆರೆಯುವ 1 ಬೆಲೆಯ ಕಟ್ಟುವದಲ್ಲವೈ ಈ ಪಚ್ಚೆಯ ನೆಲೆಯ ಕಂಡವರಿಲ್ಲವೈ ನಲಿದು ಧ್ಯಾನಿಪರಿಗೆ ಒಲಿದು ತೋರುವ ದಿವ್ಯ ಜಲಧರವರ್ಣದ ಜಲಜಾಕ್ಷನೆಂಬುವ 2 ಧರೆಯೊಳುತ್ತಮವಾಗಿಹ ಶ್ರೀ ಪುಲಿಗಿರಿಯೆಂಬ ಗಿರಿಯೊಳು ನೆಲೆಯಾಗಿಹ ಚರಣವ ನಂಬಿದ ಶರಣರ ಪೊರೆಯುವ ವರದವಿಠಲ ದೊರೆ ವರದೆನಂದೆಸರಾದ3
--------------
ವೆಂಕಟವರದಾರ್ಯರು
ಪಚ್ಚೆಯು ಬಂತೀಗ-ಶ್ರೀಪುಲಿಗಿರಿ ಪಚ್ಚೆಯ ನೋಡಿ ಬೇಗ ಪ ಮುಚ್ಚುಮರೆಯಿಲ್ಲದಚ್ಚುತ ನೆಂಬುವ ಅ.ಪ ಕೈಗೆ ಸಿಕ್ಕುವದಲ್ಲವೈತ-ಕ್ಕಡಿಯಲ್ಲಿ-ತೂ ಗಿನೋಡುವದಲ್ಲವೈ ಯೋಗಿ ಹೃದಯದಲ್ಲಿ ಭಾಗವತರೊಳನುರಾಗದಿಮೆರೆಯುವ 1 ಬೆಲೆಯ ಕಟ್ಟುವದಲ್ಲವೈ ಈ ಪಚ್ಚೆಯ ನೆಲೆಯಕಂಡವರಿಲ್ಲವೈ ನಲಿದು ಧ್ಯಾನಿಪರಿಗೆ-ಒಲಿದು ತೋರುವ ದಿವ್ಯ ಜಲಧರವರ್ಣದ ಜಲಜಾಕ್ಷನೆಂಬುವ 2 ಗಿರಿಯೊಳು ನೆಲೆಯಾಗಿಹ ವರದವಿಠಲ ಧೊರೆವರದನೆಂದೆಸರಾದ 3
--------------
ಸರಗೂರು ವೆಂಕಟವರದಾರ್ಯರು
ಪಡಕೋ ನೀನ್ಹಿಡಕೋ ರಂಗ ಶಾಯಿನಾಮವ ಕಡಕೋ ನೀ ದುಡಕೋ ನಿಖಿಲೇಶನ ಪ್ರೇಮ ಪ ಜನಮೆಚ್ಚಿ ವಂದಿಸಲು ನಿನಗೆ ಬಂದದ್ದೇನೋ ಜನದೂಷಿಸಳಿದರೆ ನಿನಗೆ ಕುಂದೇನೋ ಮನಮೆಚ್ಚಿ ನಡೆದು ಬಿಡದನುದಿನದಿ ಗಳಿಸುವಿ ನೀ ಚಿನುಮಯ ಮನುಮುನಿವಿನಮಿತರ ಧ್ಯಾನ 1 ಅಹುದೆಂದು ಇಹ್ಯದವರು ಭವಬಂಧ ತೊಲಗಿಪರೆ ಸಹಿಸದೆ ಅಲ್ಲೆಂದು ಭವಕೆ ನೂಕುವರೆ ಕುಹುಕಿಗಳ ಎದೆಮೆಟ್ಟೆ ಸಹಿಸಿಬಂದ ನಿಂದೆಗಳ ಪಡಿ ದೃಢದಿ ಅಹಿಶಾಯೆ ಅಡಿಭಕ್ತಿ 2 ದೂಷಣ ಭೂಷಣನುಮೇಷ ಸಮಭಾವಿಸಿ ನಾಶನೆನಿಸುವ ಜಗದ ವಾಸನೆಯ ಕಡಿದು ದಾಸಜನರೊಡೆಯ ಮಮಶ್ರೀಶ ಶ್ರೀರಾಮನಡಿ ಧ್ಯಾಸದೊಳಗಿಟ್ಟುಪಡಿ ಲೇಸೆನಿಪ ಮುಕ್ತಿ 3
--------------
ರಾಮದಾಸರು
ಪಂಢರಪುರವಾಸ ಪಾಲಿಸೊ ಶ್ರೀಶ ಪ ಶ್ರೇಷ್ಠ ಭಕ್ತನು ಕೊಟ್ಟ ಇಟ್ಟಿಕಲ್ಲಿನ ಮ್ಯಾಲೆ ಗಟ್ಯಾಗಿ ನಿಂತಿದ್ದ ವಿಠೋಬ ದಯಮಾಡೊ 1 ಪಾಂಡುರಾಯನ ಸುತ ಗಾಂಡೀವರ್ಜುನ ದೂತ ಬಂಡಿ ನಡೆಸಿದಾತ ಪುಂಡರೀಕ್ವರದನೀತ2 ಮುಕುತಿದಾಯಕ ಮುದ್ದು ರುಕುಮಿಯ ರಮಣನೆ ಭಕುತ ವತ್ಸಲಯೆನಗೆ ಸಕಲಾಭೀಷ್ಟವ ನೀಡೊ 3 ಬುಕ್ಕಿ ್ಹಟ್ಟು ತುಳಸಿಮಾಲೆ ಕಟ್ಟಿ ಕೊರಳಿಗೆ ಹಾಕಿ ದಾತ 4 ಲೋಕ ಲೋಕದೊಳಗಿದ್ದಾನೇಕ ಜೀವರನೆಲ್ಲ ಸಾಕಿ ಸಾಕಾಯ್ತೆ ಕರವೇಕೆ ಟೊಂಕದಲ್ಲಿಟ್ಟಿ 5 ಸೃಷ್ಟಿಸ್ಥಿತಿಯು ಜನಸಂರಕ್ಷಣೆ ಮಾಡಿ ನಿನ್ನ ರಟ್ಟೆ ಸೋತವೆ ಟೊಂಕಕಿಟ್ಟು ಕಯ್ಯನು ನಿಂತೆ 6 ಕಂಬದೊಳಗೆ ನಿಂತ ಪುರಂದರದಾಸರು ವಂದನೆಮಾಡೆ ಇವರೆ ನಾರಂದರೆಂದು ನಾ ತಿಳಿದೆ 7 ರುಕ್ಮಿಣಿ ಸತ್ಯಭಾಮೆ ರಾಧೆ ಲಕ್ಷುಮಿಯೇರ ಹತ್ತಿಲೆ ನಿಂತ ನಮ್ಮಪ್ಪ ವೆಂಕಟರಮಣ 8 ಭೀಮರಥಿಯ ಸ್ನಾನ ಸ್ವಾಮಿ ನಿಮ್ಮ ದರುಶನ ಭೀಮೇಶಕೃಷ್ಣನ ಧ್ಯಾನ ಮಾಡುವೋದ್ವೈಕುಂಠಸ್ಥಾನ 9
--------------
ಹರಪನಹಳ್ಳಿಭೀಮವ್ವ
ಪಂಢರಿನಾಥ ವಿಠಲ | ತೊಂಡನನು ಸಲಹೊ ಪ ಅಂಡಜಾದಿಪತುರಗ | ಕುಂಡಲಿಯ ಶಯನಾ ಅ.ಪ. ಭವ ಸಮುದ್ರಕೆ ಪೋತ | ತವಪಾದವಾಶ್ರಯಿಸಿಬವಣೆಗಳ ಕಳೆವೆನೆನೆ | ತವಕದಿಂದಿರುವಾ |ಇವನ ಕೈ ಪಿಡಿಯುತ್ತ | ಧೃವವರದ ಸಲಹೋಮಾಧವನೆ ಭಿನ್ನವಿಪೆ ಶ್ರೀ | ಪವನ ವಂದಿತನೇ 1 ಅಂತರಂಗದ ದೈತ್ಯ | ಸಂತತಿಯು ಕೊಡುತಿಪ್ಪಸಂತಾಪ ಹರಿಸಿ ಮ | ಧ್ವಾಂತರಾತ್ಮಾ ಹರಿಯೆಸಂತತವು ತವನಾಮ | ಚಿಂತೆಯಲ್ಲಿರಿಸುತ್ತಸಂತಸವ ಬಡಿಸೊ ಶ್ರೀ | ಕಂತುಹರಸಖನೇ 2 ಇಂದು | ಆಶಿಸುತ್ತಿಹನೇ |ಲೇಸಾದ ಸತ್ಪಂಥ | ದಾಶಯವ ತಿಳಿಸುತ್ತದಾಸನಾಗೆಂದೆನುತ | ಆಶಿಷವನೀವೇ 3 ಹರಿಗುರೂ ಸದ್ಭಕ್ತಿ | ಪರತತ್ವ ಸುಜ್ಞಾನಮರುತ ಮತ ದೀಕ್ಷೆಯನು | ವಿಷಯ ವೈರಾಗ್ಯ |ಕರುಣಿಸುತ ತರಳನ್ನು | ಪೊರೆಯೆಂದು ಬಿನ್ನೈಪೆಕರಿವರದ ಕಮಲಾಕ್ಷ | ಕಾರುಣ್ಯ ನಿಧಿಯೇ 4 ಗಾನಲೋಲನೆ ಇವಗೆ | ಧ್ಯಾನ ಸಾಧನ ಕೊಟ್ಟುಕಾಣಿಸೋ ಹೃದ್ಗುಹದಿ | ಮೌನಿಜನವಂದ್ಯ |ಜಾಣಗುರೂಗೋವಿಂದ | ವಿಠಲ ಮಧ್ಭಿನ್ನತವನೀನಾಗಿ ಸಲಿಸೆಂದು | ಆನಮಿಸಿ ಬೇಡ್ವೆ5
--------------
ಗುರುಗೋವಿಂದವಿಠಲರು
ಪತಿ ತನಯೇ ಪ ಆರು ನಿನಗೆ ಸರಿ ಮೂರು ಲೋಕದೊಳುವೃತ್ರಾರಿಗಳಿಂದಾರಾಧಿತಳೇ ಅ.ಪ. ಅಗಜೆ ಎನ್ನ ವದನಾ | ಮಾಡಲಿ | ನಗಧ5ಗುಣಸ್ತವನಾಖಗ ವಹ ಸಖ ಶಿವ | ಮೃಗ ಪಾಣಿಯ 5iÉುಹಗಲಿರುಳಲಿ ಹರಿ ಗಾಯನ ಮಾಡಿಸೇ 1 ಮನಸಿಜಾರಿಯ ಜಾಯೇ | ಮನ್ಮನ | ಚಪಲ ಬಿಡಿಸು ತಾಯೇಕನಸಿಲಿ ಮನಸಿಲಿ ಘನ ವಿಷಯಂಗಳನೆನೆವ ಕೊಡದೆ ಹರಿ ಧ್ಯಾನವನೀಯೇ 2 ಲೋಕ ಪಾವನ ಮೂರ್ತೇ | ಪಾಲಿಸು | ಏಕದಂತನ ಮಾತೇನೋಕನೀಯ ಗುರು ಗೋವಿಂದ ವಿಠಲನಜೋಕೆಯಿಂದ ನೆನೆ ನೆನೆಯುವ ಮಾತೇ 3
--------------
ಗುರುಗೋವಿಂದವಿಠಲರು
ಪತಿ ವಿಠಲ | ಉದ್ದರಿಸೊ ಇವಳ ಪ ಮೋದದಾಯಕನಾಗಿ | ಶ್ರೀದ ಶ್ರೀಹರಿಯೇ ಅ.ಪ. ದಾಸರಾಯರ ಕರುಣ | ವಾಶ್ರಯಿಸಿ ದಿನದಿನದಿಲೇಸು ಕೊಂಡಾಡುತಲಿ | ಮೇಶ ದಾಸರನೂಭಾಸುರ ಸುಗಾನ ಉ | ಲ್ಲಾಸದಲಿ ಮೈಮರೆದುಕೇಶವನ ಗುಣವನಧಿ | ಈಸುವಂತೆಸಗೋ 1 ವ್ಯಾಜ ಕರುಣೀಮಾಜದಲೆ ವೆಂಕಟನ | ನೈಜ ರೂಪವ ಕಂಡವ್ಯಾಜದಲ್ಲಿಂಕಿತಳು | ವಾಜಿ ಮುಖ ಹರಿಯೇ 2 ವಲ್ಲಭೆಯು ಶ್ರೀ ತುಳಸಿ | ಚೆಲ್ವಶಿಲೆ ಸುತ್ತುತಲಿನಲ್ಲ ಹರಿಪರಿ ಪೂರ್ಣ | ಎಲ್ಲೆಡೆಯಲೆಂಬಾಸೊಲ್ಲನಿವಳಿಗೆ ತೋರಿ | ಸಲ್ಲಿಸಿಹ ಹರಿಸೇವೆಬಲ್ಲವರ ಬಲ್ಲರೋ | ಘುಲ್ಲಕರಿಗಲ್ಲಾ 3 ಹರಿಗುರೂ ಸದ್ಭಕ್ತಿ | ಗುರು ಹಿರಿಯರ ಸೇವೆ ಕರುಣಿಸುತ ಕನ್ಯೆಯನು | ಪೊರೆಯುವುದು ಸತತಗಿರಿಜೆ ದರ್ಶನ ಫಲಕೆ | ಸರುವ ಮಂಗಳವಿತ್ತುನಿರುತ ಸಲಹೆಂದಿವಳ | ಪ್ರಾರ್ಥಿಸುವೆ ಹರಿಯೇ 4 ಮಧ್ವರಾಯರ ಮತದಿ | ಶುದ್ಧ ಬುಧಿಯನಿತ್ತುಮಧ್ವೇಶ ಹರಿಪಾದ | ಹೃದ್ಗುಹದಿಕಾಂಬಅಧ್ಯಾನಲ್ಲಿವಳ | ಬದ್ಧಳನೆ ಮಾಡಿ ಪೊರೆಮಧ್ವಾಂರಾತ್ಮ ಗುರು | ಗೋವಿಂದ ವಿಠಲಾ5
--------------
ಗುರುಗೋವಿಂದವಿಠಲರು
ಪತಿ ವಿಠಲ | ರಕ್ಷಿಸೊ ಇವಳಾ ಪ ಪಕ್ಷೀಂದ್ರ ವಹ ಹರಿಯೆ | ಅಕ್ಷಯ್ಯ ಫಲದಾ ಅ.ಪ. ಮೋದ ತೀರ್ಥರ ಪ್ರೀಯಬೋಧಿಸೀ ತತ್ವ ಸಂ | ಧಾನವನೆ ಈಯೋ 1 ಫಣಿ ಶಾಯಿ | ಪ್ರಹ್ಲಾದ ವರದಾ 2 ಭವ ಭಂಗ ಕಳೆಯಲು ಸುಜನಸಂಗವನೆ ಕೊಟ್ಟು ಹರಿ | ಕಾಪಾಡ ಬೇಕೋಸಂಗರದಿ ಮೈದುನನ | ಭಂಗವಿಲ್ಲದೆ ಕಾಯ್ದೆಸಂಗೀತ ಲೋಲ ಸುಖ | ಶೃಂಗಾರ ಮೂರ್ತೇ 3 ಜ್ಞಾನಾನು ಸಂಧಾನ | ಸಾನು ಕೂಲಿಸಿ ಇವಳಪ್ರಾಣ ಪ್ರಾಣನು ನಿನ್ನ | ಧ್ಯಾನ ಮಾಳ್ಪಂತೇಮಾನಸಾದಲಿ ನಿಂತು | ಚೊದನೆಯ ಗೈಯ್ಯುತ್ತಗಾನ ಮಾಡಿಸೊ ದೇವ | ನಿನ್ನ ಮಹಿಮೆಗಳು4 ಪಾವನಾತ್ಮಕ ದೇವ | ಪಾವನ್ನ ತವ ಮಹಿಮೆಆವಾಗಲೂ ತುತಿಪ | ಭಾವವನೆ ಇತ್ತೂ |ಶ್ರೀವರ ಶ್ರೀ ಗುರೂ | ಗೋವಿಂದ ವಿಠ್ಠಲನೆಕಾವುದಿವಳನು ಎಂದು | ಪ್ರಾರ್ಥಿಸುವೆ ನಿನ್ನಾ 5
--------------
ಗುರುಗೋವಿಂದವಿಠಲರು
ಪಂಥವ್ಯಾಕೋ ಪ್ರತಿಜ್ಞೆ ಯಾಕೋ ಪ ಸಂತಸದಿ ನಿನ್ನಂತರಂಗದಿ ಕಂತುಪಿತ ನೀನೆನಲು ಸಾಕೊ ಅ.ಪ ಕೋಪವ್ಯಾಕೊ ತಾಪವ್ಯಾಕೋ ತಾಪತ್ರಯಗಳ ಲೋಪ ಸಿರಿವರ ಕಾಪಾಡೆನಲದೊಂದೆ ಸಾಕೊ 1 ಕುಂದು ಯಾಕೋ ನಿಂದೆ ಯಾಕೋ ಸಿಂಧುಶಯನಗೋವಿಂದಗರ್ಪಿ ತೆಂದು ನೋಡ್ಹೆಚ್ದಿಂದ್ಯಾಕೆ ಬೇಕೊ 2 ಕ್ಷೇತ್ರ ಯಾಕೋ ಯಾತ್ರವ್ಯಾಕೋ ಖಾತ್ರಿಯಿಂದ ಜಗತ್ರಯಕೆ ಸು ಸೂತ್ರಾಧಾರಿಯೆಂದ ಮಾತ್ರ ಸಾಕೊ 3 ಸ್ನಾನವ್ಯಾಕೋ ಸಂಧ್ಯಾನವ್ಯಾಕೋ ಜ್ಞಾನವಿಡಿದು ಭಕ್ತಪ್ರಾಣನಾಥನ ಧ್ಯಾನಗೈಯಲದೊಂದೆ ಸಾಕೊ 4 ಜಪವು ಯಾಕೋ ತಪವು ಯಾಕೋ ಕಪಟನೀಗಪರಿಮಿತ ಹರಿಯ ಗುಪಿತದಿಂದರ್ಚಿಸಲು ಸಾಕೊ 5 ಮಂತ್ರವ್ಯಾಕೋ ತಂತ್ರವ್ಯಾಕೋ ಮಂತ್ರಮೂರ್ತಿ ಸರ್ವಾಂತರ್ಯಾಮಿಯ ಅಂತರಂಗ ತಿಳಿಯೆ ಸಾಕೊ 6 ನೇಮವ್ಯಾಕೋ ನಿತ್ಯವ್ಯಾಕೋ ಸ್ವಾಮಿಯೆನುತ ಪ್ರೇಮಿಯ ಶ್ರೀ ರಾಮನ ನಂಬಿಕೊಳ್ಳಲು ಸಾಕೊ 7
--------------
ರಾಮದಾಸರು
ಪದ್ಯ ಅಥಃ ಪ್ರಥÀಮೋಧ್ಯಾಯ ಪಾದ ವಾರಿಜಕೆರಗುತ ನೀರಜ ಮುಖಿ ಸರಸ್ವತಿಯಾ || ಸಾರ ಭಕ್ತಿಲಿ ಸ್ತುತಿಸಿ ಪೇಳುವೆ ಸತ್ಯ ಚಾರು ಕಥೆಯಾ ಪ ಸುರಮುಖಿವಂದಿತ ಸರಸಿಜ ಭವಪಿತ ಶರಧಿ ಕರಿವರದಾ | ಹರುಷದಿಂದಲಿ ನಿನ್ನ ಚರಿತೆ ಕೊಂಡಾಡಲು ವರವ ಪಾಲಿಸು ದಯದಿಂದ 1 ಶರನಿಧಿ ಸಂಭೂತೆ ಸುರಜೇಷ್ಟ ಸ್ಮರಮಾತೆ ಪುರಹರ ವಂದಿತೆ ಖ್ಯಾತೆ || ಸ್ಮರಿಸಿ ಬೇಡುವೆ ನಿನ್ನ ಧೊರಿಯ ವರ್ಣಿಸಲೀಗ ಗರಿಯೆ ವರವ ಸುಖದಾತೆ 2 ಹರಿಕುಲೋತ್ತುಮ ನಿನ್ನ ಸರಸಿಜ ಪದಯುಗ ನೆರೆನಂಬಿದೆನು ಮುದಿಂದ || ಹರಿಸುಚರಿತ್ರವು ಅರುಹಲು ಎನ್ನಗೆ ಸ್ಥಿರ ಬುದ್ಧಿಕೊಡು ವಾಯುಕಂದ 3 ಗಿರಿಜೇಶ ಶಚಿಪತಿ ಸುರತತಿಗೆರಗುವೆ ಪರಮ ಸುಭಕ್ತಿ ಪೂರ್ವಕದಿ || ಹರಿದಾಸ ವರ್ಗಕೆ ಶುಭನೀಡಲೆನಗೆಂದು ಶಿರಬಾಗಿ ಬೇಡುವೆ ಮನದಿ 4 ಘನತರ ನೈಮಿಷವನದೊಳು ವಾಸಿಪ ಮುನಿ ಸೂತನಲ್ಲಿಗೆ ಬಂದು | ವಿನಯದಲಿ ವಿಜ್ಞಾಪನ ಮಾಡಿಕೊಂಡರು ಶೌನಕಾದಿಗಳೆಲ್ಲ ನಿಂದು 5 ಕ್ಷಿತಿಯೊಳು ಮನದಾಸೆ ಹಿತದಿಂದ ನೀಡುವ | ವ್ರತದಾವದ್ಹೇಳಿರೆನುತ || ಅತಿ ಭಕ್ತಿಯಿಂದ ಕೇಳುವ ಮುನಿಗಳ ಕಂಡು ಕಥಿಸಿದನಾಗೆತಿ ಸೂತಾ 6 ಛಂದದಿ ಕೇಳಿರಿ ಒಂದೆ ಮನದಿ ಈಗಾ | ನಂದದಿ ನಾರದ ತಾನೂ || ಹಿಂದಕ್ಕೆ ಈತೆರ ನಂದನ ಗೋ ವಿಂದನ ಪ್ರಶ್ನೆ ಮಾಡಿದನೂ 7 ಕಾರುಣ್ಯದಿಂದಲಿ ಸಾರಸೋದ್ಭವಕು | ಮಾರ ನಾರದ ಮುನಿವರಗೆ || ಶೌರಿ ಪೇಳಿದ ಕಥೆ ಸಾಧುವೆ ಮೋದದಿ ನಿಮಗೆ 8 ವರಸುರ ಲೋಕಾದಿ ಚರಿಸುತ್ತನಾರದ | ಹರುಷದಿ ಭೂಮಿಗೆ ಬರಲು || ನರರತಿ ಕಷ್ಟದಿ ಮರುಗುವದಂ ನೋಡಿ | ಪೊರೆಟರು ಹರಿಗ್ಹೇಳಿ ಕೊಳಲು 9 ಪದುಮಜ ಸುತ ನಾರದ ಮುನಿ ವೇಗದಿ | ವಿದುಧರ ವಂದಿತನಾದ || ಯದುಪನಲ್ಲಿಗೆ ಬಂದು ಮುದಮನದಿಂದಲಿ | ವಿಧ ವಿಧದಲಿ ಸ್ತುತಿಗೈದಾ 10 ಅಗಣಿತ ಮಹಿಮನೆ ತ್ರಿಗೂಣ ವರ್ಜಿತ ತ್ರಿವಿಕ್ರಮನೆ || ಪೊಗಳುವ ತವ ಪದಯುಗಕೆರಗುತ ನಾನು ಜಗದುತ್ವತ್ತಿ ಕಾರಣನೆ 11 ಮಗಳಲ್ಲಿ ಪುಟ್ಟದಿ ಮಗನನ್ನು ಕುಟ್ಟದಿ | ಮಗನ ಮಗಳ ಮದುವ್ಯಾದಿ || ಮಗನ ಮಗನ ವರಪಡೆದಾತನ ಜೈಸಿ ಮಗನ ಮಗನ ನೀನು ತಂದಿ 12 ಸಿಂಧುಜರಿಪ್ರಸಖ ನಂದನ ಕೊಂದನ | ತಂದೆಯ ತಂದೆಯಾ ಸುತೆಯಾ || ನಂದಿನಿಯಳಿಗಾಗಿ ನೊಂದಿದಿ ನೀ ನರ ರಂದದಿ ಕವಿಗಣಗೇಯಾ 13 ಘನ್ನ ಮಹಿಮ ನಿನ್ನ ಅನಂತ ಚರಿಯವ ಬಣ್ಣಿಸ ಬಲ್ಲೆನೆ ದೇವಾ || ಪನ್ನಗರಾಜಗಾಗಣ್ಯವಾಗಿಪ್ಪುದು ಮನ್ನಿಸು ಎನ್ನ ಬಿನ್ನಪವಾ 14 ಬಾ ಮುದ್ದು ನಾರದನೆ ಬಾ ಮುನಿವರ್ಯನೆ ಬಾ ಮೂರು ಭುವನ ಸಂಚಾರಿ ನೇಮದಿಂದಲಿ ನಿನ್ನ ಕಾಮಿತ ಪೇಳೀಗ ಪ್ರೇಂದಿಂದಲಿ ವೀಣಾಧಾರಿ 15 ಮುರಹರ ನಿನ್ನಗೆ ಅರಿಯದ ವಾರ್ತೆಯು | ಧರಣಿ ತ್ರಯದಿ ಉಂಟೇನೋ || ನರರತಿ ಕಷ್ಟದಿ ಮರುಗುತಲಿಪ್ಪರು ಹರಿಪೇಳಿದಕುಪಾಯವನು 16 ಸತ್ಯಲೋಕೇಶನ ಪುತ್ರನೆ ನಿನ್ನಯ | ಉತ್ತಮ ಪ್ರಶ್ನೆಗೆ ನಾನು || ಚಿತ್ತೈಸು ಮುನಿವರ ನೀನು 17 ನಾರದ ಶ್ರೀ ಸತ್ಯನಾರಾಯಣ ವ್ರತ ಧಾರುಣಿಯೊಳಗಿನ ಜನರು ಆರು ತಮ್ಮ ಪರಿವಾರದಿಂದಲಿ ಗೈಯ್ಯೆ ಭೂರಿ ಸೌಖ್ಯದಿ ಮೆರೆವರೋ 18 ದೇವನೆ ಈ ನಿನ್ನ ಸೇವಕನಿಗೆ ಸತ್ಯ || ದೇವನೆ ವ್ರತದ ವಿಧಾನ || ಸಾವಧಾನದಿ ಪೇಳು ಭಾವ ಜಪಿತ ಏಕೋ ಭಾವದಿ ಕೇಳುವೆ ಮುನ್ನ 19 ಬುಧನುತ ನಾರದ ಘೃತಕ್ಷೀರ ಶರ್ಕರ | ಕದಳಿ ಗೋಧೂ ಮಾದಿಗಳನು || ಪದುಳದಿಂದಲಿ ಸುಪಾಕಗೈದು ಮೇಣ್ ವಿಧ ವಿಧ ಪಕ್ವಾದಿಗಳನು 20 ಪರಮ ಭಕ್ತಿಯಲಿಂದ ಪರಿವಾರ ಸಹಿತದಿ ಧರುಣಿಸುರನ ಪರಿಮುಖದಿ ತುರಧೂಳಿಕಾಲದಿ ಪರಿಪರಿ ಪೂಜಿಸಿ ಹರಿಗರ್ಪಿಸಲಿ ಬೇಕು ಮುದದಿ 21 ಈರೀತಿಗೈವರ ಕೋರಿಕೆಯನು ದಯ | ವಾರಿಧಿ ಶಾಮಸುಂದರನೂ || ನಿತ್ಯ ವಾರಿಜಸಹಿತದಿ ಸೇರಿ ತಾ ನಲಿದಾಡುತಿಹನೂ 22 ಇತಿ ಪ್ರಥಮೋಧ್ಯಾಯ ಸಂಪೂರ್ಣಂ ಅಥಃ ದ್ವಿತೀಯೋಧ್ಯಾಯಃ ಅತಿ ಮೋದದಿಂದಲಿ ಮತಿಯುತರೆ ಈಗ ಪೃಥವಿಯೊಳಗೆ | ಪೂರ್ವದಲಿ || ವ್ರತಗೈದ ಸುಗುಣರ ಇತಿಹಾಸ ನಿಮ್ಮಗೆ ಕಥಿಸುವೆ ಹಿತದಿಂದ ಕೇಳಿ 1 ಕಾಶಿಯೊಳಗೆ ಒಬ್ಬ ಭೂಸುರ ಬಡತನ ಕ್ಲೇಶದಿ ವಾಸಿಸುವದನು || ಶ್ರೀಶ ಅವನ ನೋಡಿ ಪೋಷಿಸಲು ವೃದ್ಧ ವೇಷದಿ ಮಾತನಾಡಿಸಿದನು 2 ಭೂತವಕದಿ ವಿಪ್ರನಾಥನೆ ತವ ಮುಖ ಪಾಥೋಜ ಬಾಡಿದ ಬಗೆಯಾ ಈ ತೆರ ದುಃಖದಿ ನೀ ತಿರಗುವಂಥ ಮಾತು ಪ್ರೀತಿಲಿ ಪೇಳಯ್ಯಾ 3 ಕಥಿಸುವೆ ಹೇವಿಪ್ರ ಹಿತದಿಂದ ನೀಯನ್ನ | ಸ್ಥಿತಿಯಾ ಲಾಲಿಸು ಮನದಿಂದಾ || ಗತಿಗೆಟ್ಟು ಚರಿಸುವೆ ಪೃಥಿವಿಯೊಳಗೆ ಈಗ ಅತಿ ಬಡತನ ದೆಶೆಯಿಂದಾ 4 ಶ್ರೇಷ್ಟನೆ ದಾರಿದ್ರ್ಯ ಕಷ್ಟ ತೊಲಗುವಂಥ | ಥಟ್ಟನೆ ನೀ ಪೇಳುಪಾಯಾ || ಘಟ್ಪ್ಯಾಗಿ ನಿನ್ನ ಉತ್ಕøಷ್ಟ ಪಾದಾಂಬುಜ ಮುಟ್ಟಿ ಸೇವಿಪೆ ಮಹರಾಯಾ 5 ಮಿಡುಕುತ್ತ ವಿಪ್ರನು ನುಡಿದ ಮಾತನುಕೇಳಿ | ಕಡಲಜಪತಿ ಕವಿಗೇಯಾ || ಕಡುದಯದಲಿ ಪೇಳ್ದ ಬಡತನ ಕಳೆಯುವ ಪೊಡೆವಿಯೊಳಿದ್ದ ಉಪಾಯಾ 6 ಸಾರುವೆ ಕೇಳಯ್ಯ ಮಾರಜನಕ ನಿಜ | ನಾರಾಯಣನ ಸು ವ್ರತವಾ ಆರು ಜಗದಿ ಭಕ್ತಿ ಪೂರ್ವಕ ಮಾಳ್ವರು ದಾರಿದ್ರ್ಯ ಹರಿ ದೂರಗೈವಾ 7 ಮುದುಕನ ನುಡಿಕೇಳಿ ಮುದಮನದಿಂದಲಿ ಸದನಕ್ಕೆ ದ್ವಿಜ ಬಂದು ತಾನೂ ಸುದತಿ ಸಹಿತನಾಗಿ ಸತ್ಯನಾಥಾನ ಪೂಜೆ ವಿಧ ವಿಧದಲಿ ಮಾಡಿದನೂ 8 ಹರುಷದಿ ಈ ರೀತಿ ಧರಣಿ ದೇವನು ಮಾಡೆ | ಶಿರಿಸತಿ ಸುತರಿಂದ ತಾನೂ || ಧರೆಯೊಳು ಸುಖಬಿಟ್ಟು ಪರಮ ದುರ್ಲಭವಾದ ಪಥ ಹಿಡಿದನೂ 9 ಸೂತರೆ ಅತ್ಯಂತ ಕೌತುಕವಾಗಿಹ ಧಾತ ಪಿತನ ಈ ವ್ರತವು ಭೂತಳದೊಳಗೆಂತು ಖ್ಯಾತಿಯ ಪೊಂದಿತು ಪ್ರೀತಿಲಿ ಪೇಳಿರಿ ನೀವು 10 ಸತಿಸುತ ಪರಿವಾರ ಸಹಿತಾ ಅತಿ ಹಿತದಲಿ ಮನೋರಥ ಪೂರೈಸುವ ಈ ವ್ರತ ಮಾಡುತಿರಲಾಗತ್ವರಿತಾ 11 ಚರಣನೋರ್ವನು ಶಿರದಿ ಕಾಷ್ಟಭಾರವ ಧರಿಸಿ ಮಾರಲು ಬೀದಿಗಳಲಿ ಬರುತಿರೆ ಮಾರ್ಗದಿ ಧರಣಿದೇವನೆ ಮಂ ದಿರ ಕಂಡ ಪರಮ ಮೋದದಲಿ 12 ಶ್ರೀನಿವಾಸನ ಘನಧ್ಯಾನದಿಂರ್ಚಿಪ ಕ್ಷೋಣಿ ಸುರನ ನೋಡಿ ಜವದಿ ಮಾನವ ಕೇಳಿದ ಏನಿದೆಂದೆನು ತಲಾಕ್ಷಣದಿ 13 ಶೂದ್ರನ ನುಡಿ ಕೇಳಿ ಆ ದ್ವಿಜ ಪೇಳ್ದನು ಶುದ್ಧ ಮನದಿ ಚರಣೋಧ್ಭವ ಗೈದನಿ ಶುದ್ಧನ ಪಾದಾರ್ಚನವಾ 14 ಹರುಷದಿಂದಲಿ ಸತ್ಯ ಹರಿ ಪೂಜಿಸಿದ ಶೂದ್ರ ಪರಮ ಸೌಜನ್ಯದಿ ಇದ್ದು ಕೊನೆಗೆ ಪರಿವಾರಯುತನಾಗಿ ತೆರಳಿದ ಸ್ಥಿರ ಉಳ್ಳ ಶಿರಿಶಾಮಸುಂದರನ ಪುರಿಗೆ 15 ಇತಿ ದ್ವಿತೀಯೋಧ್ಯಾಯ ಸಂಪೂರ್ಣಂ ಅಥಾಃತೃತೀಯೋಧ್ಯಾಯ ಋಷಿ ಜನಗಳೆ ಕೇಳಿ ವಸುಧಿ ತ್ರಯದಿ ಘನ ಪೆಸರಾದ ಇನ್ನೊಂದು ಕಥೆಯಾ ಉಸುರುವೆ ಕೇಳ್ವರ ವ್ಯಸನವು ಪರಿಹಾರ ಪುಸಿಯಲ್ಲಿ ಈ ನುಡಿ ಖರಿಯಾ 1 ವರ ಉಲ್ಕಮುಖನೆಂಬ ಧರಣೀಶನೋರ್ವನು ಹರುಚದಿಂದಲಿ ತನ್ನ ಹಿತದಾ ಶರಧಿ ತೀರದಿ ನಿಜ ಹರಿಯನ್ನು ಪೂಜಿಸುತಿರ್ದ 2 ಕ್ಷೋಣಿಪಾಲಕನಿದ್ದ ಆ ನದಿತೀರದಿ | ವಾಣಿಜ್ಯ ಮಧುನಾಯಕನೂ || ಸಾನುರಾಗದಿ ಬಂದು ಶ್ರೀನಿಧಿ ವ್ರತದ ವಿ ಧಾನವೇನೆಂದು ಕೇಳಿದ 3 ಭೂಮಿಪಾಲಕ ಮಧುನಾಮಕ ವೈಶ್ಯನ ಆ ಮೃದು ನುಡಿಕೇಳಿ ಜವದಿ ಕಾಮಿತದ ಸತ್ಯ ಸ್ವಾಮಿಯ ವ್ರತ್ತದಾ ನೇಮವ ಪೇಳ್ವ ಸಮ್ಮುದದಿ 4 ರಕ್ಕಸಾರಿಯ ಕಥಾ ಭಕ್ತಿಲಿ ಕೇಳುತ ಲಕ್ಕುಮಿಯುತ ಮುದದಿಂದ ಮಕ್ಕಳೆನಗಾಗಲು ಚಕ್ರಿಯ ಸುವೃತ ಅಕ್ಕರದಲಿ ಮಾಳ್ಪೆನೆಂದ 5 ಈ ರೀತಿ ಧೃಡ ಬ್ಯಾಪಾರಿಯು ತಾಗೈದು ಶೌರಿ ಪ್ರಸಾದ ಸ್ವೀಕರಿಸಿ || ಸಾರಿ ಪೇಳಿದ ತನ್ನಾಗಾರಕ್ಕೆ ಬಂದು ತಾ ನಾರಿಯ ಮುಂದೆ ವಿಸ್ತರಿಸಿ 6 ಸತಿ ಶಿರೋಮಣಿ ಲೀಲಾ ವತಿಯು ತನ್ನ ಮಂದಿರದಿ || ಪತಿ ಕರುಣದಿ ಗರ್ಭ ವತಿ ತಾನಾದಳಾಕ್ಷಣದಿ 7 ಹತ್ತನೆ ಮಾಸದ ಉತ್ತಮ ಪುತ್ರಿಯ ಪೆತ್ತಳು ಆ ನಾರಿ ತಾನೂ || ಅತ್ಯಂತ ಸನ್ಮುದ ಚಿತ್ತನಾಗಿ ಸಾಧು ಮರ್ತನು ಹರಿವ್ರತವನ್ನು 8 ಸತಿ ಲೀಲಾವತಿ ತನ್ನ ಪತಿಗಭಿವಂದಿಸಿ ನಿಂದು || ಅತಿ ಭಕ್ತಿಯಿಂದಲಿ ಕಥಿಸಿಕೊಂಡಳಲ ಯದು ಪತಿ ವ್ರತ ಮಾಡಬೇಕೆಂದು 9 ಸುದತಿಯ ನುಡಿಕೇಳಿ ಮಧುನಾಮಕ ಸಾಧು ವಿಧಿಸಿದ ಸುತೆ ಕಲಾವತಿಯಾ || ಮದುವೆಯ ಕಾಲದಿ ಉದುಪನರ್ಚಿಪೆನೆಂದು ಮುದದಿಂದ ಪೇಳ್ದನುಪಾಯಾ 10 ಪರಿಪರಿ ಸೌಖ್ಯದಿಂದಿರುತಿರೆ ವೈಶನ ತರುಳೆಗೆ ಪೂರ್ಣಯೌವನವು | ಬರಲು ಮಾಡಿದ ತಕ್ಕವರ ತಂದು ಲಗ್ನವ ಮರೆತು ಬಿಟ್ಟನು ಹರಿವ್ರತವಾ 11 ಶ್ರೀಮಂತವೈಶ್ಯನು ಪ್ರೇಮದಿಂದಲಿ ತನ್ನ ಜಾಮಾತನೊಡನೆ ವ್ಯಾಪಾರಾ ನೇಮದಿ ಗೈಯಲು ಗ್ರಾಮ ತ್ಯಜಿಸಿ ಪೋದಾ ಆ ಮಹಾಪುರ ರತ್ನಸಾರಾ&ಟಿbs
--------------
ಶಾಮಸುಂದರ ವಿಠಲ