ಒಟ್ಟು 1148 ಕಡೆಗಳಲ್ಲಿ , 88 ದಾಸರು , 890 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಮನ್ನಿಸೆನ್ನ ಮಹಾಲಿಂಗ ದೇವೋತ್ತುಂಗ ಪುಣ್ಯಶ್ಲೋಕ ನಿನ್ನ ವರ್ಣಿಪೆ ಮುಕ್ಕಣ್ಣ ಪ. ಭಕ್ತಪಾರಿಜಾತ ಶಕ್ತಿದೇವಿಪ್ರೀತ ಸತ್ಯಧರ್ಮಯೂಥ ಸ್ವಾಮಿಲೋಕನಾಥ 1 ವಂದನೀಯ ಕೃಪಾಸಿಂಧು ದಿವ್ಯರೂಪ ಚಂದ್ರಚೂಡ ಸಾಂದ್ರಾನಂದ ವೈಷ್ಣವೇಂದ್ರ 2 ಮಾರವೈರಿ ಲಕ್ಷ್ಮೀನಾರಾಯಣಪ್ರೇಮಿ ಸಾರತತ್ತ್ವಬೋಧ ಸಾಧುಸುಪ್ರಸೀದ 3
--------------
ತುಪಾಕಿ ವೆಂಕಟರಮಣಾಚಾರ್ಯ
ಮರುಗದೇ ನಿಂತಿಹುದೆ ಮನವು ನಿನ್ನಾಅರಿಯದಪರಾಧ ತಾನಳಿಸುತಿರಲೆನ್ನ ಪನೆರೆಯವರ ಮೈಸಿರಿಯ ನೋಡಿ 'ರಿಯರ ನಡೆಯಮರೆತು ಧನದಲಿ ಮತಿಯನಳಿದೆಯಾಕರಕೊಂಡು ನರತತಿಯ ಕೆಣಕಿುವರ ಸಹನೆಯಪರಿಪಾಕದಿಂ ನೋಡಿ ಬಂದ ಪೀಡನೆಯ 1'ತವರೆಂಬಂತಿರುವ 'ಂಸೆಯನಾಳೋಚಿಸುತ ಜೊತೆಯೊಳಾರೋಗಿಸುತ ಜಾರಿ ನಿಲ್ಲುತಸತಿ ಸುತಾದ್ಯರ ಭೋಗಸಾಧನವ ಕೆಡಿಸುತ್ತಪತಿತರಿಂದರಸುತ್ತ ಪಿಡಿಸಲು[ಕಾ]ಯುತ 2ಪಾದುಕಾರ್ಚನೆಯನ್ನು ಪಾಲಿಸಿದ ಬಗೆಯನುಬೋಧಿಸುತ ಚಿತ್ತವನು ಬೆದರಿಸುವದೆನೀ ದಯಾಸಾಗರನು ನೀಚರುಪಹತಿಯನುಸಾದರದಿ ಬಿಡಿಸಿನ್ನು ಸಾಕು ಮುನಿಸನು 3ಕಾಲ ದೇಶವ ಕಂಡು ಕಾಪಥವ ಕೈಕೊಂಡುಬಾಳಿದರಳು ಕೂತುಂಡು ಭಕ್ತಿ ಮುಂಕೊಂಡುಊಳಿಗವ ಬೆಸಗೊಂಡು ಊರೊಳಗೆ ತಿರುಕೊಂಡುಬಾಲ ಇರಲರಿದಾಡುಬಡಿಯೆ 'ಡುಕೊಂಡು 4ಮಂಗಳಾರ್ತಿಯ ಸೇವೆ ಮಾಣುತಿಹುದೇಗೈವೆಕಂಗಳಿಗೆ ನೀ 'ಭುವ ಕಾಣಿಸಿದೆ ಸುಖವೆತಿಂಗಳೆನಿತಾದರುವೆ ತಿರಿದೂಳಿಗಕೆ ತರುವೆಸಂಗಿನವರೊಳಗಿರುವೆ ಸತತವೆಲೆ ಗುರುವೆ 5ತಪ್ಪಿಗನುಸಾರವಾಗಿ ತಿಳಿಯೆ ಶಿಕ್ಷಿಪೆಯಾಗಿಒಪ್ಪದ ಪದವ ನೀಗಿಪೊಳಿತಾಗಿತೆಪ್ಪಗೂಳಿಗಕಾಗಿ ತಗುಲಿಸುವೆ ನೀನಾಗಿಸುಪ್ರಸನ್ನತೆಯಾಗಿ ಸುಖಬಡುವರಾಗಿ 6ದುರುಳರಹುದಹುದಿವರು ದೂರಿಗೊಳಗಾದವರುಚರಣಾಬ್ಜ ಸೇವಕರು ಚಾರುಮತಿಯವರುದುರಿತ ಶತವಡಿಸಿದರು ದಾಟುವರು ನಿನ್ನವರುಕರುಣಾಬ್ಧಿ ನೀನಿದಿರುಗಾಣೆ ಸುಖಮಯರು7ಸೆರೆಯ ಪರಿಹರಿಸಿನ್ನು ಸುಖಿಸು ಸದ್ಭಕ್ತರನುಗುರು ಸುತರ ಚರಣವನು ಕಂಡು ಬದುಕುವೆನುಬರಿದೆ ಬೇಡುವೆ ನಾನು ಪಾಲಿಸುವ 'ಭು ನೀನುಶರಣಾಗತಪ್ರಿಯನು ಶಾಂತಿದಾಯಕನು 8ಧರೆಯ ಜನರಜ್ಞತೆಯ ದ'ಸಿ ನಿಜ ಸದ್ಗತಿಯಕರೆದೀವ ಗುರುರಾಯ ವಾಸುದೇವಾರ್ಯಕರುಣ ನಾಗನಗರಿಯ ಸ್ಥಿರಗೈದು ಸುವಸತಿಯಒರೆದೆ ಭವ'ಜಯ ವೇದಾಂತಪದ್ಧತಿಯ 9
--------------
ವೆಂಕಟದಾಸರು
ಮರೆಯದೆ ಸಲಹೆನ್ನನು ಯಾದವಗಿರಿ- ದೊರೆ ಮಂಗರಾಯ ನೀನು ಸರ್ವಜೀವೋತ್ತಮನೆ ನಿನ್ನನು ಮರೆಯಹೊಕ್ಕೆನು ಮಾರುತಾತ್ಮಜ ಕರೆದು ಭಕÀುತರಿಗ್ವರವ ನೀಡುವೊ ಭಾರತೀಶ ಪ ಸೀತಾವಲ್ಲಭ ರಾಮರ ಪಾದಾಂಬುಜ ದೂತನೆಂದೆನಿಸಿದೆಯೊ ಮಾತೆಗಿಟ್ಟ ಮುದ್ರಿಕೆಯನು ಘಾತಕ ರಾವಣನ ಪುರಕೆ ಕಾರ್ತೀಕದುತ್ಸವ ಮಾಡಿ ಮಂಗ- ಳಾರ್ತಿ ಬೆಳಗಿದೆ ಬಾಲದಿಂದ 1 ಬಕ ಹಿಡಿಂಬಕ ಕೀಚಕ ಕಿಮ್ಮೀರ ಮಾಗಧ ಮುಖ್ಯ ಪ್ರಮುಖರನು ಸಕಲ ಅನುಜರ ಸಹಿತ ದುರ್ಯೋಧನನ ಪ್ರಾಣವ ಸೆಳೆದÀು ಬ್ಯಾಗನೆ ನಕುಲ ಧರ್ಮಜನಾ ಸಾದೇವ ದ್ರೌಪದಿಗೆ ಸುಖ ಸಂತೋಷ ನೀಡಿದೆ 2 ಮಧ್ಯಗೇಹರಲ್ಲಿ ಜನಿಸಿ ಸುಜನರಿಗೆ ಶುದ್ಧಶಾಸ್ತ್ರವ ಬೋಧಿಸಿ ಗೆದÀ್ದು ಮಾಯಾವಾದಿಗಳ ವಾದಪ್ರ- ಸಿದ್ಧನೆನಿಸಿದೆ ಮಧ್ವಮುನಿ ಮುದ್ದು ಭೀಮೇಶಕೃಷ್ಣನ ಪ್ರ- ಸಿದ್ಧಿ ಮಾಡಿದೆ ಪರಮ ಗುರುವೆ 3
--------------
ಹರಪನಹಳ್ಳಿಭೀಮವ್ವ
ಮಲಗು ಮಲಗಯ್ಯ ಹನುಮ ಕಲಿಭಂಜನ ಭೀಮ ಜಲಧಿ ಅಲವಬೋಧನಾಮಾ ಜೋ ಜೋ ಪ ತ್ರೇತೆಯಲಿ ರಾಮದೂತನಾಗಿ ನೀ ಬಂದು ಭೀತಿಯಿಲ್ಲದೆ ಲಂಕೆಯ ದಹಿಸಿದೆಯೊ ಅಂದು ಸೀತೆಯಿತ್ತಂಥ ಚೂಡಾಮಣಿಯನು ತಂದು ಪ್ರೀತಿಪಡಿಸಿದೆ ರಾಮನ ನೀ ದಯಾಸಿಂಧು 1 ದ್ವಾಪರಾಂತದಲಿ ಭೀಮನಾಗಿ ನೀ ಬಂದೆ ಪಾಪಿ ಕೀಚಕ ದುಶ್ಶಾಸನಾದ್ಯರ ಕೊಂದೆ ಸಿರಿ ಕೃಷ್ಣನ ಪಾದಕೆರಗಿ ನಿಂದೆ ಭಾಪು ಭಾಪುರೆಂದೆನಿಸಿಕೊಂಡೆ ಅವನಿಂದೆ 2 ನಾನೆ ದೇವರೆಂಬ ಮತವನು ಹೆಮ್ಮೆಯಿಂದ ದಾನವರೀ ಕಲಿಯುಗದಲಿ ಪೊಗಳೆ ಮುದದಿಂದ ನೀನವತರಿಸಿ ಮಧ್ವಮುನಿ ಪೆಸರಿನಿಂದ ಹೀನ ಮತವ ಮುರಿದೆಯೊ ವಾಗ್ಭಾಣಗಳಿಂದ 3 ಏಕಾದ್ಯಶ ಕರ್ಮಗಳ ಶ್ರೀ ಹರಿಗರ್ಪಿಸಿ ಆತನನು ನೀ ಬಹು ಸಂತೋಷವನುಪಡಿಸಿ ಜಾತರಹಿತನಾಗೆನುತ ಆಶಿಷವ ವಹಿಸಿ ವಾತಸುತ ಕುಳಿತಿಹೆ ಯಂತ್ರೋದ್ಧಾರನೆನಿಸಿ 4 ಕಂಗಳನು ಮುಚ್ಚಿ ಜಪಮಾಲೆಯನು ತಿರುಗಿಸುತ ರಂಗೇಶವಿಠಲನ ತಾನದೊಳು ಸ್ಮರಿಸುತ ಹಿಂಗೇಕೆ ಕುಳಿತಿಹೆ ಮಲಗೇಳಯ್ಯ ದಾತ ತುಂಗ ವಿಕ್ರಮ ನೀನು ತ್ರಿಭುವನದಿ ಪ್ರಖ್ಯಾತ 5
--------------
ರಂಗೇಶವಿಠಲದಾಸರು
ಮಹಾಬಲಿಪುರ ಮಹಾಬಲೇಶ್ವರ ಮಾವಳಿಪುರ ಮಿಹಿರಾ ಸುರುಚಿರ ಪರಾತ್ಪರಾ ಪ ಮಹೀಸುರಾರ್ಚಿತ ಸದಾಕೃಪಾಕರ ವಿಹಂಗವಾಹನ ಪೀತಾಂಬರ ಅ.ಪ ಮಧುಸೂದನ ತವಪಾದುಕಾ ಸಾರದ ಮಾಧವಿ ಸುಮದಲಿ ಪೂದತ್ತರುದಿಸಿ ಮೇದಿನಿಯೊಳು ತವಾರಾಧನ ತತ್ವವ ಬೋಧಿಸುವಂತೆ ನೀಗೈದೆ ಕೃಪಾನಿಧೆ 1 ಶ್ರೀಮದನಂತ ದಿವ್ಯಾಸನಮಂಡಿತ ಶ್ರೀಮಹೀಸಂಯುತ ಲೋಕವಿಖ್ಯಾತಾ ಪ್ರೇಮಸುಧಾನ್ವಿತ ಕಾಮಿತದಾತಾ ಶ್ರೀ ಮಾಂಗಿರಿಪತಿ ಶರಣಸಂಪ್ರೀತಾ2
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಮಾಡಿ ನೀವು ಸತ್ಸಂಗ ನೋಡಿ ಘನ ಅಂತರಂಗ ಧ್ರುವ ಸಾರಿದೂರಲಿಕ್ಕೆ ವೇದ ಅರರಿವದೆನಗಗಾಧ ದಾರಿದೋರಿಕುಡು ಬೋಧ ಗುರುಪ್ರಸಾದ 1 ಬದಿಲಿರಲಿಕ್ಕೆ ಖೂನ ಇದಕ್ಯಾಕುದ್ದರಿ ಜ್ಞಾನ ಛೇದಿಸಿ ಅನುಮಾನ ಭೇದಿಸಿರೊ ಪೂರ್ಣ 2 ಹಿಡಿಯಲಿಕ್ಕೆ ಸತ್ಸಂಗ ಓಡಿಬಾವ್ಹಾ ಶ್ರೀರಂಗ ಮಾಡಿ ಭವಭಯಭಂಗ ನೋಡುವ ಕೃಪಾಂಗ3 ಎಲ್ಲಕ್ಕೆ ಶಿಖಾಮಣಿ ಸುಲಭ ಈ ಸಾಧನಿ ಸೊಲ್ಲಿಗೆ ಮುಟ್ಟಿದ ಪ್ರಾಣಿ ಬಲ್ಲವ ಸುಜ್ಞಾನಿ 4 ಪಿಡಿದು ಸತ್ಸಂಗತಿ ಕಡಿದು ಹೋಯಿತು ಭ್ರಾಂತಿ ಪಡೆದ ಸುಖ ವಿಶ್ರಾಂತಿ ಮೂಢ ಮಹಿಪತಿ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಮಾಡು ಮನವೆ ಸದ್ಭಕ್ತಿ ನೋಡು ನಿನ್ನೊಳು ಸುಮುಕ್ತಿ ಧ್ರುವ ನೀಡಿ ತನುಮನ ಧನ ಕೂಡು ನೀ ಸದ್ಗುರುವಿನ ನೋಡು ನಿನ್ನೊಳಗೆ ಖೂನ ಗೂಢ ನಿಜಧನ 1 ಪಿಡಿದು ಸದ್ಗುರು ಪಾದ ಬಿಡದೆ ನೋಡು ನೀ ಸದಾ ತಡೆದು ಕಾಮಕ್ರೋಧ ಪಡಿಯೋ ಸುಬೋಧ 2 ಕೂಡಿ ಸದ್ಗುರು ಸುಪಥ ನೋಡು ನೀ ಸದೋದಿತ ಮೂಢ ಮಹಿಪತಿ ಮನವೆ ನಿನ್ನ ಸ್ವಹಿತ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಮಾಡುವುದೆಲ್ಲ ವಿವಾದಕೆ ಕಾರಣ | ಸಾಧಿಸುವದೆ ಬ್ರಹ್ಮಾ ಪ ಸಾಧು ಜನರ ಸುಸಮಾಧಿಯ ಬೋಧವು ಬಾಜಾರವೇನೋ ತಮ್ಮಾ ಅ.ಪ ಮನದೊಳು ತನದೊಳು ನಯನಗಳಿರುತಿರೆ | ಮನ ಬಯಸಿದದೊಂದು | ಘನ ಜ್ಯೋತಿಯ ತಾ ತಾರದೆ ತೋರದು | ಸನ್ಮುಖದಲಿ ನಿಂದೂ 1 ಅರಿವುದು ಕರಣದಿ ಬೆರೆವುತ ನಿನ್ನ | ಅರಿಯದಲಿರುತಿಹುದೂ | ಪರಮ ಪುರುಷರಾಚರಿಸುವ ಪರಿಯಲಿ | ಗುರುಪದ ಸಾರುವದೋ2 ತಪ್ಪದೆ ನೆಲಕೆ ಭಗುರಿಯನೆ ಎಸೆವರೆ | ಜಪ್ಪಿಸುವರೆ ಹೇಳಾ | ದಪ್ಪನೆ ಗುರು ಭವತಾರಕ ತ್ರಯ ಜಗದಪ್ಪನ ನೀ ಕೇಳಾ 3
--------------
ಭಾವತರಕರು
ಮಾತಿನ ಸುಖವೇನೋ ಸುಖವೇನೋ | ರೀತಿಯನರಿಯದೆ ತಾನು ಪ ಸಂತರ ವೇಷವ ಹಿಡಿವೀ | ಮನದಲಿ | ಶಾಂತಿಯ ಮನಗುಣ ಬಿಡುವೀ 1 ಪಡಿಯದೆ ಆತ್ಮ ವಿಚಾರಾ | ದೋರುವಿ | ನುಡಿಯಂಗಡಿಯ ಪಸಾರಾ 2 ಇಂದು | ಹೇಳುವಿ | ಸರ್ವಂ ವಾಸುದೇವೆಂದು ಮ 3 ತರಂಗವಿಲ್ಲದ ಶರಧಿಯಂತೆ | ಇರುವುದು ಪರಮ ಸಮಾಧಿ 4 ತಂದೆ ಮಹಿಪತಿ ಬೋಧಾ | ಮನನಕೆ | ತಂದವನೇ ಸುಖಿಯಾದಾ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಮಾತಿನಂತಲ್ಲನುಭವ ಜ್ಞಾನ ಮರುಳಜನ ಬಲ್ಲವೇನ ಯತಿಮುನಿಗಳು ಸಾಧಿಸುವ ಖೂನ ಮನೋನ್ಮನದ ಸಾಧನ ಧ್ರುವ ನುಡಿಜ್ಞಾನಾಡಿ ತೋರಬಹುದು ನಾಡ ಲೋಕದೊಳೆಲ್ಲ ನಡಿಜ್ಞಾನದೆ ದುರ್ಲಭವದು ಆಡಿ ದೋರಲಿಕ್ಕಿಲ್ಲ ಗುಹ್ಯ ನಿಜಬೋಧಿದು ಒಡೆದ್ಹೇಳುವದಲ್ಲ ಒಡನೆ ಸದ್ಗುರು ಘನ ದಯದಲಿದು ಪಡೆದವನೆ ತಾಂ ಬಲ್ಲ 1 ಕಲಿತಾಡುವ ಮಾತಿಗೆ ಸಿಲುಕದ ಮೂಲವಸ್ತುದ ಖೂನ ನೆಲೆನಿಭವೆ ತಾ ಅಗಮ್ಯಿದು ಬಲು ಸೂಕ್ಷ್ಮಸ್ಥಾನ ಬಲಿಯದೆ ರೇಚಕ ಪೂರ್ವಿದು ನೆಲೆಗೊಳ್ಳುದು ಸಾಧನ ನಿಲಕಡ್ಯಾಗದೆ ಕುಂಭಕಲಿದು ಬಲಿಯದು ಗುರುಙÁ್ಞನ 2 ಸ್ವಾನುಭವ ಸುಖ ಸಾಧಿಸಿ ಅನುದಿನದಿ ನೋಡಿ ಮನಗೆದ್ದು ಜನಕೆ ಮೋಹಿಸುವ ಅನುಭವ ಹೇಳಬ್ಯಾಡಿ ಭಾನುಕೋಟಿತೇಜನೊಲಿದು ತಾ ಖೂನಾಗುವ್ಹಾಂಗ ಮಾಡಿ ದೀನ ಮಹಿಪತಿ ಸ್ವಾಮಿ ಮನಗಂಡು ಮನೋಹರ ಕೊಂಡಾಡಿ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಮಾಧವ ಗುರುವರ ಬೋಧಿಸು ಸುಖಸಾರ ಪಾದವ ಸ್ತುತಿಪೆನು ದಯವಾಗೊ ಸುಖಕರ ಪ ನಶಿಸಿಪೋಗುವ ಈ ವಿಷಮಸಂಸಾರದ ವಿಷಯದಾಸ್ಹರಿಸೆನಗೆ ಅಸಮಸುಖದ ಮಾರ್ಗ 1 ಅನುದಿನ ತ್ರಿಮಲಮೋಹಂಗಳ ಕ್ರಮದಿ ಖಂಡ್ರಿಸಿ ಮಹ ವಿಮಲಪದವಿ ಮಾರ್ಗ 2 ಮರವೆ ಮಾಯವ ತರಿದು ಅರಿವಿನಾಲಯದಿರಿಸಿ ಪರಮ ಶ್ರೀರಾಮನ ಚರಣಕಮಲಭಕ್ತಿ 3
--------------
ರಾಮದಾಸರು
ಮಾಧವ ಸ್ವಾಮಿ ವಿಠಲ | ಪೊರೆಯ ಬೇಕಿವಳಾ ಪ ಹೇ ದಯಾಂಬುದಿ ಹರಿಯೆ | ಆದಿ ಮೂರುತಿಯೆ ಅ.ಪ. ಸಾದು ಸಂತರ ಸೇವೆ | ನೀ ದಯದಿಕೊಟ್ಟಿವಳಮೋದಮುನಿನುತದೀಕ್ಷೆ | ಹಾದಿಯಲ್ಲಿರಿಸೋಬೋಧವಾಗಲಿ ತತ್ವ | ತರತಮವು ಪಂಚಕೆಯುಸಾಧುವಂದಿತ ಹರಿಯೆ | ಬಾದರಾಯಣನೇ 1 ದಾಸತ್ವ ದೀಕ್ಷೆ ಆ | ಯಾಸ ವಿಲ್ಲದೆ ಸಾಗಿಕೇಶವನ ಒಲಿಮೆಗೇ | ಅವಕಾಶವಾಗೀಹೇಸಿ ಸಂಸಾರದಿ ನಿ | ರಾಶಿಯಾಗಲಿ ಎಂದುಆಶಿಸುವೆ ಶ್ರೀ ಹರಿಯೆ | ವಾಸವಾನುಜನೇ 2 ಇಂದ್ರಿಯವ್ಯಾಪಾರ | ಉಪೇಂದ್ರನದು ಎಂಬುವಚೆಂದುಳ್ಳ ಸ್ಮøತಿಯಿತ್ತು | ತಂದೆ ಕೈಪಿಡಿಯೋವಂದ್ಯಳೆಂದೆನಿಸು ಸ್ತ್ರೀ | ವೃಂದದೊಳಗೆ ಹರಿಯೆಮಂದಾಕಿನೀ ಜನಕ | ಇಂದಿರಾನಂದ 3 ಭವನಾವೆ ಎಂದೆನಿಸೊದೇವದೇವೇಶಗುರು | ಗೋವಿಂದ ವಿಠಲಾ 4 ದುರಿತ ದುಷ್ಕøತಹಾರಿ | ಸರ್ವಜ್ಞ ಮೂರುತಿಯೆಹರಿನಾಮ ಕವಚವನು | ತರಳಗೇ ತೊಡಿಸೀಪರಿಹರಿಸೊ ಭವಭಂದ | ಮರುತಾಂತರಾತ್ಮಕನೆಕರುಣಾಳು ಕರಿವರದ | ಮೊರೆ ಕೇಳೊ ಹರಿಯೇ 5
--------------
ಗುರುಗೋವಿಂದವಿಠಲರು
ಮಾಧವಮಧುಸೂದನೆನಿಪಪಾದಭಜನೆಯಮಾಡುವೇ ಸಾಧು ಶಿಖರನೆ ಸರ್ವತಂತ್ರನೇ ಬೋಧಿಸೆನುತಾ ಬೇಡುವೇ ಪ ವಾರಿಧಿಶಯನ ಪಾರಮಹಿಮ ಪರಾತ್ಪರ ಪಾಪವಿದೂರನೇ ಅ.ಪ ಆತೊಡರ್ಚಿತುವೋತಡಂತಿಸೂ ಭೂತಪಕ್ಷದಯಾನಿಧೆ ಭೀತಿಗೊಳಿಸದಿರೆನ್ನ ನೀನೆ ಅನಾಥರಕ್ಷ ಕೃಪಾನಿಧೇ 1 ನೀನೆ ಕಲುಷವಿಖಂಡ ನಿಶ್ಚಲ ನೀನೆ ವೇದಾಂತಾರ್ಯನೂ ಶ್ರೀನಿವಾಸದಯಾನಿಧೆ ಜಗದಾನುಭವತತ್ತೂರ್ಯನೂ 2 ದೇಶಿಕನೆ ತ್ವದ್ದಾಸನಾಡೆಯ ಆಶೆಯಳಿದೀಗೆರಿನನೂ ಪಾಶರಹಿತನ ಮಾಡೊಯೆನುತಲಿ ಪಾಡುವೆನಾ ನಿನಗೆನ್ನನೂ 3 ನಿತ್ಯಪೂರ್ಣನೆ ಸತ್ವಗುಣಮಣಿ ಚಿತ್ಸುಖಾಂಶ ಚಿದಂಬರಾ ತತ್ವಮೆನಗೆ ಪ್ರಸಾದಿಸಿದ ಶ್ರೀತುಲಶಿರಾಮ ದಿಗಂಬರಾ 4
--------------
ಚನ್ನಪಟ್ಟಣದ ಅಹೋಬಲದಾಸರು
ಮಾನವ ಜನುಮ ನಾನು ಯಾರೆಂಬ ಖೂನವಿಲ್ಲದೆ ಪ ಕಾಲನಾಜ್ಞೆಯನ್ನು ಪಡೆದು ಸೂಳ ಎಣಿಸಿ ಜಗಕಿಳಿದು ಜಾಲಹಾಕಿ ಜವನಗೊಲಿದು ಶೂಲಕ್ಹಾಕುವ ಮಾರಿಗೊಲಿದು 1 ತಂದ ಪುಣ್ಯವನ್ನು ಕೆಡಿಸಿ ಮಂದಿಮಕ್ಕಳನ್ನು ಬಿಡಿಸಿ ಮಂದನೆನಿಸಿ ಕುಂದುಹೊರೆಗೆ ಬಂಧಕ್ಕೆಳೆವ ರಂಡೆನ್ಹೊರೆಸಿ2 ಜನನಿಜನಕರನ್ನು ಜರೆದಿ ಮನೆಯ ಹೆಂಡಿರ ಮಾನ ಕಳೆದಿ ಬಿನುಗು ಸೂಳೆಗೆ ವಶನಾದಿ ಬಿನುಗರೊಳಗೆ ಬಿನುಗನಾದಿ 3 ನೀಗಿದಿ ಕುಲಶೀಲತೆ ಮುದಿ ಗೂಗೆಯಂದದಿ ದಿನಗಳೆದಿ ಭಾಗವತದ ಭಾಗ್ಯ ಮರೆದಿ ಕಾಗೆನುಂಗಿದ ಹೊಲೆಯನಾದಿ 4 ಸಾಧು ಸುಜನಬೋಧ ಜರೆದಿ ವೇದವಾಕ್ಯ ಮೀರಿ ನಡೆದಿ ಶೋಧಿಸಿ ಸಮಯ ತಿಳಿಯದ್ಹೋದಿ ಆದಿ ಶ್ರೀರಾಮಗ್ಹೊರತಾದಿ 5
--------------
ರಾಮದಾಸರು
ಮಾನವ ನಿನ್ನಾ | ಪಡೆದು ಕೊ ಸದ್ಗತಿಯನು ಪ ತಡಿಯದೇ ಸದ್ಗುರು ಅಡಿಗಳ ಪೂಜಿಸಿ | ಒಡನೆ ಭವಾಂಭವಾಂಬುಧಿ ಥಡಿಯವ ಸಾರೆಲೋ ಅ.ಪ ಪತ್ರೇಂದ್ರವಾಹನನು | ಮಣಿಗಣ ಸೂತ್ರದಂದದಿ ಜೀವನು | ಚಿತ್ರ ವಿಚಿತ್ರದಲಿ ಅಡಿಸುವ | ಗು | ಣತ್ರಯ ವಾದಲಿ | ಕಳತ್ರ ಸುಮಿತ್ರ ಸಮಂಧ | ಧತ್ರಿಲಿ ಮಾಯ ಚರಿತ್ರವಿದೆಂದು 1 ತಾನಾರು ತನುವಾರದು ತನುವಿನ | ತಾನೀ ಸಂಮಂಧವಾರದು | ಜ್ಞಾನಿಗಳನು ಮತದಿ ತಿಳಿದು ನೋಡು | ಸ್ವಾನುಭವದ ಬೋಧದೀ | ಹಾನಿ ಯಶ _ ಸುಖ ಮಾನಾಪಮಾನವು | ಮಾನವರಿಗೆ ಪ್ರಾಚೀನ ಫಲೆಂದು 2 ಹಿಂದಾದ ನೆನಹಿಸದೇ ವಾಸನೆಗಳ | ಮುಂದೇನು ಕಾಮಿಸದೇ | ಕ | ನಸಿನಾನಂದ ವಿದೆಂದು ಭಾವಿಸೀ | ತಂದೆ ಮಹಿಪತಿ ಕಂದಗ ಸಾರಿದ | ದ್ವಂದ್ವಗೆಲಿದು ಗೋವಿಂದ ನೆನೆಯುತ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು