ಒಟ್ಟು 10544 ಕಡೆಗಳಲ್ಲಿ , 133 ದಾಸರು , 5597 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಇಂದುವದನೆ ಪಾರ್ವತಿಯೆ ನಾ ಇಲ್ಲಿಗೆ ಬಂದೆನು ಬಾಗಿಲು ತೆಗೆಯೆ ಜಾಣೆ ಬಂದೆನು ಬಾಗಿಲು ತೆಗೆಯೆ 1 ಬಂದವರ್ಯಾರೀ ವ್ಯಾಳ್ಯದಿ ಬಾಗಿಲು ಬಂದು ತೆಗೆಯೊರ್ಯಾರಿಲ್ಲ ಈಗ ಬಂದು ತೆಗೆಯೊರ್ಯಾರಿಲ್ಲ 2 ಅಂಗನಾಮಣಿ ಕೇಳೆ ಗಂಗಾಧರೆನಿಸಿದ ಚಂದ್ರಶೇಖರ ನಾ ಬಂದೀನೆ ಜಾಣೆ ಚಂದ್ರಶೇಖರ ನಾ ಬಂದೀನೆ 3 ಸಿಂಧುರಾಜನ ಸತಿಸುತರನ್ಹೊತ್ತಿಲ್ಲಿಗೆ ಬಂದ ಕಾರಣವೇನು ನೀನು ಅವ ರಿಂದ ಕಾರಣ ಮತ್ತೇನು 4 ಪಶುಪತಿ ನಾ ಬಂದೆ ಕುಶಲದಿ ಬಾಗಿಲು ತೆಗೆಯೆ ಜಾಣೆ ಕುಶಲದಿ ಬಾಗಿಲು ತೆಗೆಯೆ 5 ಪಶುಗಳಿಗೆಲ್ಲ ಪತಿಯಾದರೆ ನಿನ ಕೊಂಬು ಹಸನಾಗಿ ತೋರಿಸೊ ಎನಗೆ ಕೊಂಬು ಹಸನಾಗಿ ತೋರಿಸೊ ಎನಗೆ 6 ಸರ್ವಶರೀರದಲ್ಲೆತ್ತಿಕೊಂಡಿರುವಂಥ ಶ್ರೇಷ್ಠ ಶಿವನು ನಾ ಬಂದೀನೆ ಜಾಣೆ ಶ್ರೇಷ್ಠ ಶಿವನು ನಾ ಬಂದೀನೆ 7 ಸರ್ವ ಸೇರಿರುವಂಥ ಹುತ್ತ ನೀನಾದರೆ ಇತ್ತ ಬರುವೋದುಚಿತಲ್ಲ ಪೋಗೊ ಇತ್ತ ಬರುವೋದುಚಿತಲ್ಲ 8 ಕಾಂತೆ ಪಾರ್ವತಿ ನೀಲಕಂಠ ನಾ ಬಂದೀನಿ ಸಂತೋಷದಿ ಬಾಗಿಲು ತೆಗೆಯೆ ಸಂತೋಷದಿ ಬಾಗಿಲು ತೆಗೆಯೆ 9 ಕಂಠದೊಳಗೆ ಕಪ್ಪಿದ್ದರೆ ನೀ ನವಿ- ಲಂತೆ ಕುಣಿದು ತೋರಿಸೆನಗೆ ನವಿ- ಲಂತೆ ಕುಣಿದು ತೋರಿಸೆನಗೆ 10 ಫಾಲಾಕ್ಷ ನಾ ರುಂಡಮಾಲೆ ಧರಿಸಿದಂಥ ಶೂಲಿಯು ನಾನು ಬಂದೀನೆ ತ್ರಿ- ಶೂಲಿಯು ನಾ ಬಂದೀನೆ11 ಮೂರು ಶೂಲೆಗಳ್ಯಾವ್ಯಾವ ಕಡೆಯಲುಂಟು ಭಾಳ ಬಲ್ಲವರಲ್ಲೆ ಪೋಗಯ್ಯ ನೀ ಭಾಳ ಬಲ್ಲವರಲ್ಲೆ ಪೋಗಯ್ಯ 12 ಸ್ಥಾಣು ನಾ ಬಂದೀನಿ ಜಾಣೆ ನೀ ಬಾಗಿಲು ತೆಗೆಯೆ ಒಳ್ಳೆ ಜಾಣೆ ನೀ ಬಾಗಿಲು ತೆಗೆಯೆ 13 ಸ್ಥಾಣು ನೀನಾದರೆ ವೇಣುಮದ್ದಲೆ ಮಾಡೊ ಜಾಣರ ಮನೆಗೆ ನೀ ಪೋಗಯ್ಯ ಒಳ್ಳೆ ಜಾಣರ ಮನೆಗೆ ನೀ ಪೋಗಯ್ಯ 14 ಗಜ ಚ- ರ್ಮಾಂಬರಧಾರನು ನಾನೇ ಚ- ರ್ಮಾಂಬರಧಾರನು ನಾನೇ 15 ವೈರಿ ಭಸ್ಮಾಂಗವ ಧರಿಸಿz À ಸಾಮಜ ವಸನವ ನೋಡಿ ಇರ- ಲಾರೆನು ನಿನ್ನೊಡಗೂಡಿ 16 ಭೂತಗಣಂಗಳ ನಾಥನಾಗಿರುವೊ ಪ್ರ- ಖ್ಯಾತನು ನಾನು ಬಂದೀನೆ ಸದ್ಯೋ- ಜಾತನು ನಾನು ಬಂದೀನೆ 17 ಭೂತಗಣವ ಕೂಡಿ ಯಾತಕೆ ಬರುವುದು ಭೀತಿ ಬಡುವೆ ಮುಂಚೆ ಸಾಗೋ ನಾ ಭೀತಿ ಬಡುವೆ ಮುಂಚೆ ಸಾಗೋ18 ಮಾತಿಗೆ ಮಾತನಾಡುವೋರೆ ಪಾರ್ವತಿ ಕೇಳೆ ಮೂಕನಂತಿರುವೆನೆ ನಾನು ಇನ್ನು ಮೂಕನಂತಿರುವೆನೆ ನಾನು 19 ಮೂಕನಂತಿರುವುದ್ವಿವೇಕ ಭೀಮೇಶಕೃಷ್ಣ- ನ್ನ ಕಾರುಣಕೆ ಪಾತ್ರಳೇನೋ ನಿನಗೆ ನಾ ಕೈಯ ಮುಗಿವೆ ಬಾ ನೀನು 20
--------------
ಹರಪನಹಳ್ಳಿಭೀಮವ್ವ
ಇದುವೆ ಕೈವಲ್ಯವು | ಸದ್ಗುರುವೇ | ನಿಮ್ಮಿಂದೆವೆ ಕೈವಲ್ಯವು | ನಂದನ ಕಂದ ಮುಕುಂದನ | ಛಂದದಿ ನೆನೆವುತಾನಂದದಲಿಪ್ಪರಾ ಪ ಭಂಗ ಬಡುವಾ ಭವದಾ | ಚಿರಳಿಯೆನಿಸ್ಸಂಗ ಶಸ್ತ್ರವ ವಿಡಿದಾ | ಹಂಗವಳಿದು ದೇಹದಾ ಪ್ರಪಂಚದ ರಂಗನೊಳಗ ಬೆರೆದಾ | ಅನುದಿನ | ಮಂಗಳ ಹರಿಚರಿತಂಗಳ ಕೇಳುವಗಿಂದೇ 1 ಕಂತು ಪಿತನ ಧ್ಯಾಯಿಸೀ ಮನಸಿನಿಂದಾ | ಅಂತರಂಗದಿಪೂಜಿಸೀ | ಶಾಂತಿಯ ಗುಣ ಧರಿಸೀ | ತಂತು ವಿಡಿದು ನಿಶ್ಚಿಂತದಿ ಇಹಪರ ಭ್ರಾಂತಿಯಳಿದು ವಿಶ್ರಾಂತಿಯ ಪಡೆದವಗಿದೇ2 ಮುಂದಾಗುವ ಮುಕ್ತಿಯನು ಗುರುದಯದಿ | ಇಂದೇಕಾಣುತ ಧನ್ಯನು | ಸಂದೇಹ ವಳಿದನು ತುರ್ಯಾತೀತಾ | ವಂದಿಸಿ ಭಾವದಿ ತಂದೆ ಮಹೀಪತಿ | ದ್ವಂದ್ವ ಚರಣವನು ಹೊಂದಿದ ನಂದನಗಿದೇ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಇದುವೇ ಸಾಧಕ ವೃತ್ತಿಗಳು | ಇದೇ ಅಬಾಧಕ ಯುಕ್ತಿಗಳು ಪ ಸದ್ಗುರು ಪಾದಕ ಸದ್ಭಾವದಿ ನಂಬಿ | ಹೃದ್ಗತ ಗುಜವನು ಪಡೆದಿಹನು | ಸದ್ಗತಿಕಾಂಕ್ಷಿತ ಹರಿ ಕೀರ್ತನೆಗಳ | ಉದ್ಗಾರ ಪ್ರೇಮದ ಮಾಡುವನು 1 ಬಲ್ಲವನು ಕಂಡೆರಗಿ ಸಿದ್ಧಾಂತದಾ | ಉಳ್ಳಸದ್ಭೋಧವ ಕೇಳುವನು | ಮೆಲ್ಲನೆ ಮನನದಿ ಧ್ಯಾಸವು ಬಲಿಯುತ | ಕ್ಷುಲ್ಲರ ಮಾತಿಗೆ ಮನ-ವಿದನು 2 ಅನ್ಯರ ಸದ್ಗುಣ ವಾರಿಸಿ ಕೊಳುತಲಿ | ತನ್ನವಗುಣಗಳ ಜರಿಸಿದವನು | ಸನ್ನುಡಿ ಬಿರುನುಡಿಗಳಕದೆ ಕುಜನರ | ಮನ್ನಿಸಿ ಶಾಂತಿಯನು ಜಡಿದಿಹನು 3 ಬುದ್ಧಿಯ ಹೇಳಿದರೆ ನೀ ಹಿತ ಬಗೆಯದೆ | ತಿದ್ದುದರಂದದಿ ತಿದ್ದುವನು | ಇದ್ದಷ್ಟರೊಳಗೆ ಸಾರ್ಥಕದಲಿ ದಿನ | ಗದ್ದಿರ ಹೊರಿಯಲು ಉದರವನು 4 ಸರ್ವರೊಳಗೆ ಬಾಗಿ ಶಮೆ ದಮೆಯಿಂದಲಿ | ಗರ್ವವ ತ್ಯಜಿಸಿಹ ಜನರೊಳಗೆ | ಸರ್ವಭಾವದಿ ಗುರು ಮಹಿಪತಿ ಸ್ವಾಮಿಯು | ಅರ್ವವ ಜಗಸನ್ಮತನು 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಇಂದೆ ಕುಂದುಗಳನು ಹರಿಸು ಪ ಕಂದನಮುಂದಕೆ ಬರುತಲಿ ಚಂದವಾದ ನಿನ್ನಯ ಮುಖ ಚಂದ್ರಮನಂ ತೋರಿ ನೇತ್ರೇಂದ್ರಿಯಕಾನಂದ ಬೀರೈ ಅ.ಪ ಶ್ರೀವರ ನಿನ್ನ ಭಕ್ತರ ಭಾವಿಸುತ್ತ ತಪ್ಪ ಕ್ಷಮಿಸಿ ನೋವಕೊಡದೆ ರಕ್ಷಿಸುವ ಕೃಪಾಳುವು ನೀನೈ ದೇವಕಿನಂದನ ನಿನ್ನಯ ಪಾವನತರ ಪದಪದ್ಮಕೆ ನಾ ವಿನಯದಿ ನಮಿಸಿ ತಳಿವೆ ಹೆಜ್ಜಾಜಿಕೇಶವಾ ಓ ವಿಭೀಷಣಹಿತಕರ ಸಾವಕಾಶ ಮಾಡದೆ ನೀ ಕಾವುದೆನ್ನ ಸಮಯವರಿತು ಸಾಮಗಾನಸನ್ನುತ 1 ಚಿಟ್ಟೆಸ್ವರಕ್ಕೆ ಭವ ಭಯ ಭಂಗ ವರಭಕ್ತೇಷ್ಟ ದಾತಾರ ದೈತ್ಯಾರಿ ವೈಕುಂಠ ಪುರಹರನುತ ಶುಭಗುಣಯುತ ಪರಮಚರಿತ ನಿರುಪಮಪದ ಕು ವರ ಧ್ರುವನಿಗೊಲಿದ ದ್ವಿಜನ ಪೊರೆದ ಕರುಣಾ ಧರಣೀ ಭರಹರಣಾ ಪಾವನಚರಣ ಜಾಜಿಕೇಳುವ 2
--------------
ಶಾಮಶರ್ಮರು
ಇಂದೆನ್ನ ಜನ್ಮ ಪಾವನವಾಯಿತು ತಂದೆ ಶ್ರೀಗುರು ನಿಮ್ಮ ಚರಣ ದರುಶನದಿ ಧ್ರುವ ಅರ್ಕ ಮಂಡಲಗಳು ರವಿಶಶಿ ಕಿರಣವು ಝಳಝಳಿಸುವ ಪ್ರಭೆ ನೋಡಿ ಅನಿಮಿಷದಾದೃಷ್ಟಿಲೆನ್ನ ಲಕ್ಷಿಯೊಳು ಸಾಕ್ಷಾತ್ವಸ್ತು ಗತಿಯು ನಿಮ್ಮ ಪ್ರಕಾಶವನು ಕಂಡಾಂಧತ್ವಗಳದಿನ್ನು 1 ಓಂಕಾರ ಮೊದಲಾದ ದ್ವಾದಶ ನಾದದಾ ಭೇದದಾ ಘೋಷವನು ಕೇಳಿನ್ನೀ ದೃಶ್ಯದಾ ಕರ್ಣಲೆನ್ನಾ ಲಯಲೀಲೆಯೊಳು ಸಾದೃಶ್ಯ ಮೂರ್ತಿಯು ನಿಮ್ಮ ಶ್ರುತಿಗಳು ಕೇಳಿ ಬಧಿರತ್ವವಾಗಳಿದಿನ್ನು 2 ಜಪವನ್ನು ತಿಳಿದು ಪ್ರಣಮ್ಯಲೆನ್ನ ಮೂರ್ತಿ ನಿಮ್ಮ ಮಂತ್ರವನು ತಿಳಿದು ಪಿಶಾಚತ್ವ ಕಳೆದಿನ್ನು 3 ಸ್ತುತಿ ಸ್ತೌತ್ಯ ಸ್ಮರಿಸುವ ದಿವ್ಯನಾಮಾಮೃತವ ನುಡಿದು ಪಯಸ್ವನೀ ಜಿಹ್ವೆಲೆನ್ನ ಮೂರ್ತಿ ನಿಮ್ಮ ಸ್ಮರಿತ ಗತಿವರಿತು ಮೂಕತ್ವ ಕಳೆದಿನ್ನು 4 ಚಿನ್ಮಯ ಚಿದ್ರೂಪ ಕಂಡು ಬೆರಗಾಗಿ ಮನ ಭ್ರಾಂತಿ ಅಜ್ಞಾನವನ್ನು ಜರಿಯಲೆನ್ನ ಏಕೋದೇವ ಈತ ವಿಶ್ವಾತ್ಮ ಹಂಸನೆಂದು ಸಂದೇಹ ಸಂಕಲ್ಪ ಬಾಧೆಯಾಗಳದಿನ್ನು 5 ಭಕ್ತಿ ಮುಕ್ತಿ ಉದಾರಿ ಆತ್ಮದಲಿ ಸಾರಿದೋರಿ ನಿಜ ಬೋಧಾಮೃತ ಬೆರೆದು ತಾರಿಸಲೆನ್ನ ಗರ್ಭಪಾಶದ ಬಲಿಯು ಹರಿದು ಧರೆಯೊಳಿನ್ನು ಉತ್ಪತ್ತಿ ಸ್ಥಿತಿ ಲಯದ ಬೀಜವನ್ನು ಹುರಿದಿನ್ನು 6 ಭಾಸ್ಕರಸ್ವಾಮಿಯ ಕರುಣಾಳು ಮೂರ್ತಿಯ ಮೂಢ ಮಹಿಪತಿಯ ಕೃಪಾಂಬುಧಿಯು ಕರುಣದಭಯ ಹಸ್ತವನು ಶಿರಸದಲ್ಲಿಡಲಾಗಿ ಧನ್ಯನಾದೆನು ಸತಿಪತಿ ಸಹಿತವಾಗಿನ್ನು 7
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಇದೇ ಇದೇ ಘನಸುಖಾ ಸಾಧಿಸಿ ಗುರುಮುಖಾ ಧ್ರುವ ಅಂಜದಾಲಿಸಿ ಕೇಳಿ ಪ್ರಾಂಜಳಾಗ್ಯದೆ ಝಂ ಝಂ ಝಂ ಝಂ ಝಂ ಝಂ ಝೆಂಕರಿಸುತಲ್ಯದೆ 1 ಒಂದೊಂದು ಪರಿಲ್ಯಾನಂದವುದೋರುತಲ್ಯದೆ ಧೀಂ ಧೀಂ ಧೀಂ ಧೀಂ ಧೀಂ ಧೀಂ ಧೀಂಮಿಡುಗುತದೆ 2 ಮನೋಹರಾಗುವ ಅನುಭವದೋರುತದೆ ದೀನ ಮಹಿಪತಿಗೆ ಪಾವನಗೈಸುತದೆ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಇದೇ ದೇವ ಪೂಜಿಯು ನೋಡಿ ಹೃದಯದಲಿ ನಿಜ ಒಡಗೂಡಿ ಧ್ರುವ ಮೂರ್ತಿಎಂಬುದೆ ಅಮೂರ್ತಿ ನಾಮರೂಪ ನಿಜ ಗುಹ್ಯವಾರ್ತಿ ವ್ಯೋಮಾಕಾರದ ಮನೆಮೂರ್ತಿ ಸ್ವಾಮಿ ಸದ್ಗುರುವಿನ ಕೀರ್ತಿ 1 ನಿತ್ಯನಿರ್ಗುಣ ನಿರ್ವಿಕಲ್ಪ ಸತ್ಯಸದ್ಗುರು ಸ್ವರೂಪ ನಿತ್ಯ ನಿತ್ಯದಿತ್ಯರ್ಥ ಸುದೀಪ ತತ್ವಙÁ್ಞನ ಮನಮಂಟಪ 2 ಸ್ವಾನುಭವ ಸ್ವಾದೋದಕ ಙÁ್ಞನ ಭಾಗೀರಥಿ ಅಭಿಷೇಕ ಮೌನ ಮೌನ್ಯ ವಸ್ತ್ರಾಮೋಲಿಕ ಧಾನ್ಯವೆಂಬುದೆ ಸೇವಿ ಅನೇಕ 3 ಗಂಧಾಕ್ಷತಿ ಪರಿಮಳ ಫಲಪುಷ್ಪ ಬುದ್ಧಿ ಮನವಾಯಿತು ಸ್ವರೂಪ ಸದ್ವಾಸನ್ಯಾಯಿತು ಧೂಪ ದೀಪ ಸದ್ಭಾವನೆ ನೈವೇದ್ಯ ಮೋಪ 4 ಫಲತಾಂಬೂಲವೆ ಸದ್ಭಕ್ತಿ ಮೂಲಜೀವ ಭಾವನೆ ಮಂಗಳಾರ್ತಿ ಬಾಲಕ ಮಹಿಪತಿ ನಿಜಪೂಜಿಸ್ಥಿತಿ ಕುಲಕೋಟಿ ಉದ್ಧರಿಸುವ ಗತಿ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಇದೇ ನೋಡಿರೋ ನಿಜನೋಡಿರೋ ಧ್ರುವ ನೋಡಿನೋಡಿ ನೋಡಿ ನೋಡುದರೊಳು ಕೂಡಿ ನೋಡುವದೇನೆಂದು ನೋಡಿ ನೋಡಿದ ಮ್ಯಾಲಿನ್ನು ಮೂಡಿಬಂದರ ಘನ ನೋಡುವದೇ ಖೂನ ಮಾಡಿ ಮಾಡಿದ ಮಾಟವು ಕೂಡಿಬಂದರೆ ಕೈಯ ನಾಡಗೂಡ ಹೇಳಬ್ಯಾಡಿ ಗೂಢ ಗುಹ್ಯದ ಮಾತು ಒಡೆದು ಹೇಳುವದಲ್ಲಾ ನೋಡಿ ನಿಮ್ಮೊಳು ಬೆರೆದಾಡಿ 1 ಓದಿದರೋದಬೇಕಿದೊಂದೇ ಅಕ್ಷರ ಭೇದಿಸುವಂತೆ ಬ್ರಹ್ಮಾಂಡ ಇದೇ ಸಾಧಿಸಿನ್ನು ಮೂಲವ ತಿಳಿಯದೆ ಓದುವದ್ಯಾಕೆ ಉದ್ದಂಡ ಹಾದಿ ತಿಳಿಯದಿದ್ದರೆ ಹೇಳಿಕೊಡುವನು ಸದ್ಗುರು ಘನಪ್ರಪಂಚ ಭೋದಿಸಿ ಬ್ರಹ್ಮಾನುಸಂಧಾನದ ಸುಖ ಉದಯ ಮಾಡುವ ಅಖಂಡ 2 ನಾನ್ಯ ಪಂಥವೆಂಬ ಮಂತ್ರದನುಭವ ಚನ್ನಾಗ್ಯಾಗಬೇಕು ಖೂನ ಇನ್ನೊಂದು ಬ್ಯಾರೆಂಬ ಭಿನ್ನವಳಿದ ಮ್ಯಾಲೆ ತನ್ನೊಳಾಯಿತು ಸಮ್ಯಕಙÁ್ಞನ ಧನ್ಯ ಧನ್ಯ ಧನ್ಯ ಧನ್ಯಗೈಸುವದಿದು ಕಣ್ಣಾರೆ ಕಾಂಬೊ ಸಾಧನ ಉನ್ಮತವಾಗದೆ ಸನ್ಮತದೋರದು ಇನ್ನೊಬ್ಬರ ಕೇಳುವದೇನ 3 ಸರ್ವಮಿದಂ ಖಲು ಬ್ರಹ್ಮವೆಂಬುವ ಮಾತು ದೋರ್ವಾಂಗೆ ನೆಲೆಗೊಳಬೇಕು ಸರ್ವ ಸಾಕ್ಷಿ ಸರ್ವಾಧಾರವು ತಿಳಿಯದೆ ಗರ್ವಿತಲ್ಯಾಡುವ ಮಾತು ಹೋತು ಗುರ್ವಿನಂಘ್ರಿಗಿನ್ನು ಗುರುತವ ಕೇಳದೆ ಮವ್ರ್ಹಿನೊಳೀಹುದು ಮುಸುಕು ನಿರ್ವಿಕಲ್ಪನ ನಿಜ ಸ್ಮರಿಸುವಾಂಗೆ ಕಣ್ಣ ದೆರ್ವದಿದೊಂದೇ ಸಾಕು 4 ತ್ರಾಹಿ ತ್ರಾಹಿ ತ್ರಾಹಿ ತ್ರಾಹಿ ಎಂದು ಗುರುವಿಗೆ ಕೇಳಿ ನಿಜ ವಂದ ದೇಹದ ಒಳಗಿಹ್ಯ ದ್ಯಾವರ ತಿಳಿದರ ಜನ್ಮಕೆ ಬಂದುದು ಚಂದ ಸೋಹ್ಯ ಸೊನ್ನೆಯ ಗುಹ್ಯವ ತಿಳಿದರ ಭವ ಮೂಲದಿಂದ ಬಾಹ್ಯಾಂತ್ರ ಪರಿಪೂರ್ಣ ಭಾಸುತಲ್ಯದೆ ಮಹಿಪತಿಗಿದೆ ಬ್ರಹ್ಮಾನಂದ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಇದೇ ನೋಡಿರೋ ಸಂಧ್ಯಾನ ಸದಾ ಆತ್ಮಾನುಸಂಧಾನ ಧ್ರುವ ತಿಳಿಯದೆನಗೆ ತ್ರಿಕಾಲಾ ಹೊಳವುತಿಹ್ಯದು ಸೂರ್ಯಅಚಲಾ ಇಳೆಯೊಳಾಯಿತು ಧರ್ಮಾನುಕೂಲ 1 ಚಂಚಲೆಂಬುದೆ ಅಚಮನ ಮುಂಚೆ ಸಂಧ್ಯಾನಕಿದೆ ಸಾಧನ ವಂಚÀನಿಲ್ಲದಾಯಿತು ಅಘ್ರ್ಯದಾನಾ 2 ಪರಮೇಷ್ಠಿ ಪರಬ್ರಹ್ಮಋಷಿಃ ಅರಿತು ಪ್ರಣಮ್ಯ ಸಾಧಿಸಿ ತಿರುಗಿನೋಡಿಘನ ಸ್ಮರಿಸಿ ಕರಿಗಿ ಹೋಯಿತು ಪಾಪದ ರಾಶಿ 3 ಆ ಹಪವೆ ಗಾಯತ್ರಿಮಂತ್ರ ಬೀಜಾಕ್ಷರವಿದು ಪವಿತ್ರ ರಾಜಿಸುತಿಹ್ಯದು ಸರ್ವಾಂತರಾ ನಿಜಗುಹ್ಯ ಋಷಿಮುನಿಗೋತ್ರ 4 ಸದೋದಿತ ಗುರುಭೋಧಪೂರ್ಣ ಇದಕಿಲ್ಲ ಉದಯಾಸ್ತಮಾನ ಇದೇ ಮಹಿಪತಿ ಸಂಧ್ಯಾನ ಸದಾ ನಿತ್ಯಾನುಂಸಂಧಾನ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಇದೇ ಭಕುತಿ ಮತಿಗೆ ಮುಕುತಿ | ಇದಕ್ಕಧಿಕವಾಗಿಪ್ಪ ವಿಧಿಗಳೆಲ್ಲಿಯಿಲ್ಲಾ ಪ ರತುನ ಗರ್ಭದೊಳಗೆ ತಿಳಿ | ರತುನ ಸಮಕ್ಷೇತ್ರಗಳಿಗೆ | ರತುನವೆನ್ನಿ ಯತಿವಂಶ | ರÀತುನ ಮಧ್ವಮುನಿಮಾಡಿದಾ 1 ಪದ ಜೀವಸ್ತರಿಗದೆ ಪಾ | ಪ ಜನರು ಕೃಷ್ಣರಾಯನ ಪಾದವ ನೋಡಿ ನಿತ್ಯಾ | ಸಾಧನಿ ಮನ ಮಾಡಿರಯ್ಯಾ 2 ಏಳು ಒಂದು ಮಠದ ಲೋಕರಂಸೆ ಸದನವೆನ್ನಿ | ಪೇಳಲೇನು ಅವರೇ ಯಿಲ್ಲಿ ಊಳಿಗವ ಮಾಡುತ್ತಿಪ್ಪರು 3 ಮೇರೊ ಪರ್ವತ ತುಲ್ಯವಿದೆ | ವಾರಿಜನೆ ಮಧ್ವರಾಯ | ಈ ರಜತ ಪೀಠವೆ ಮಂದಿರ ಶತಕೋಟಿ ಎನ್ನೀ4 ಮೆರೆವ ಮಧ್ವತೀರ್ಥ ಬಾಹಿರ | ವರಣ ಉದಕವೆನ್ನಿ ಇಲ್ಲಿ | ಚರಿಸುವಂಥ ಸುಗುಣ ತೃಣಾ ದ್ಯರು ಮುಕುತಿ ಯೋಗ್ಯರಹುದು5 ಉಡಪಿ ಯಾತ್ರೆ ಮಾಡಿದವನು | ಪೊಡವಿ ತುಂಬ ಯಾತ್ರೆ | ಬಿಡದೆ ಚರಿಸಿದವನೆ ಎಂದು | ಮೃಡನು ಇಲ್ಲಿ ಸಾರುತಿಪ್ಪಾ 6 ಉಬ್ಬಿ ಸರ್ವ ಇಂದ್ರಿಯಂಗಳಾ | ಹಬ್ಬವಾಗಿ ಸುಖಿಪದಕೆ | ಊರ್ಬಿಯೊಳಗೆ ಉಡುಪಿ ಯಾತ್ರೆ | ಅಬ್ಬದಲೆ ದೊರಕದಯ್ಯಾ 7 ಹಿಂಗಿ ಪೋಗದಕೆ ಇದೇ | ಅಂಗವಲ್ಲದೆ ಬೇರೆ ಇಲ್ಲ | ರಂಗ ಸುಲಭಸಾಧ್ಯಾವಾಹಾ 8 ನೂರು ಕಲ್ಪಧರ್ಮ ಮಾರನಯ್ಯ ವಿಜಯವಿಠ್ಠಲನ | ಸಾರಿ ತಂದು ಕೊಡುವಾ9
--------------
ವಿಜಯದಾಸ
ಇದೇ ಸಂಧಿಸಿ ಧರ್ಮ ಭೇದಸಿ ಗುರುವರ್ಮ ಶೋಧಿಸಿ ನೋಡಲಿಕ್ಕೆ ಛೆÉೀದಿಸಿಹೋಗುದು ಭವಕರ್ಮ ಧ್ರುವ ಕಾಣಾದ ಕಾಣಬ್ಯಾಡಿ ಕಾಣಿಸುವದು ನೋಡಿ ಕಾಣಿಸಿ ಕಾಣಗೊಡದಿಹ್ಯದ ಖೂನ ನಿಜಮಾಡಿ 1 ದೋರದ ನೋಡಬ್ಯಾಡಿ ದೋರಿಸುವದು ನೋಡಿ ದೋರಿಸಿದೋರಗುಡದಿಹುದ ಖೂನ ನಿಜಮಾಡಿ 2 ಕೇಳದ ಕೇಳಬ್ಯಾಡಿ ಕೇಳಿಸುವದ ನೋಡಿ ಕೇಳಿಸಿ ಕೇಳೆಗೊಡದಿಹುದ ಖೂನ ನಿಜಮಾಡಿ 3 ಆಡದ ನೋಡಬ್ಯಾಡಿ ಅಡಿಸುವದ ನೋಡಿ ಅಡಿಸಿ ಆಟ ನೋಡಗೂಡದ ಖೂನ ನಿಜಮಾಡಿ 4 ನುಡದ ನೋಡಬ್ಯಾಡಿ ನುಡಿಸುವದ ನೋಡಿ ನುಡಿಸಿ ನುಡಿ ತಿಳಿಯಗುಡದ ಖೂನ ನಿಜಮಾಡಿ 5 ಮಾಡದ ನೋಡಬ್ಯಾಡ ಮಾಡಿಸೂವದ ನೋಡಿ ಮಾಡಿಸಿ ಮಾಡದೋರಗುಡದ ಖೂನ ನಿಜಮಾಡಿ 6 ತಿಳುಹದ ನೋಡಬ್ಯಾಡಿ ತಿಳುಹಿಕುಡದ ನೋಡಿ ತಿಳುವಿಸುವದ ತಿಳುವದೆ ಮಹಿಪತಿವಸ್ತ ನೋಡಿ7
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಇದೇ ಸಮಯವು ನೋಡು ಸಖನೇ ರತಿ ಕ್ರೀಡೆಗೆ ಶುಭಕಾಲ ಪ ರತಿಪತಿಪಿತ ನಿನ್ನತಿಶಯ ಹಿತವಾಗುವ ಸುಖಸವಿಯದ ಮ್ಯಾಲೆ ಸಖಿಯರ ಬಾಳೇ ಅ.ಪ. ಮದನ ಸಾರ ಸುರಿಸೋ ಸರಸಿಜಾಕ್ಷಾ 1 ಜಾಣೆ ನೀಯೆನ್ನ ಪ್ರಾಣದಾಣೆಯೆ ಗೇಣು ವಳಗಡೆ ಜೀವದೊಳಗಿದ್ದುಪೂರ್ಣಸುಖವಿತ್ತು ಪಾರುಗಾಣಿಪೆ ಪ್ರಾಣಕಾಂತೆಯೆ 2 ಎಂತು ಪೇಳಲಿ ನಿನ್ನ ಮಹಿಮೆಯ ಪ್ರಾಂತಗಾಣದೆ ಶ್ರಾಂತರಾಗುವರೈ ಹನುಮಂತ ಮೊದಲಾದ್ಯನಂತ ಗುಣಿಗಳು ದಿಗ್ಭ್ರಾಂತರಾದರು ತಂದೆವರದಗೋಪಾಲಕಂತುಪಿತ 3
--------------
ತಂದೆವರದಗೋಪಾಲವಿಠಲರು
ಇದೇನಿದೇನು ನಿನ್ನ ಪದವ ನಂಬಿದವ ಗೆಡರು ಬಾಧಿಸು ವದೇನು ಪ ಅವನ ಬದಿಯಲಿ ಗರುಡ ಮಣಿಯಿರೆ| ಹಾವಿನ ಗರಳವ ಏರುವದೇ| ಅಮೃತ ಕಲಶ ಮನೆಯೊಳಿರೆ| ಸಾವಿನ ಭಯದಿಂಬಳಲುವರೇ ರಂಗಯ್ಯಾ 1 ಹನುಮನ ಪರಿಚಾರಕರಿಗೆ ಬೆಂಬತ್ತಿ ಬಿನಗು ಭೊತಂಗಳು ತಟ್ಟುವವೇ ಅನಳನ ಹೊರಿಯಲಿ ಕುಳಿತಿರೆ ಹಿಮದಿಂದ ತನುಗುಗ್ಗರಿಸಿ ಬಿದ್ದು ಎರಗುವ ದೇನಯ್ಯಾ 2 ದುರಿತ ಬಂದು| ಕುಂದ ನಿನಗಲ್ಲವೇ ಎನ್ನವ ಗುಣಗಳ ನೋಡದೆ ರಕ್ಷಿಸು ಸನ್ನುತ ಮಹಿಪತಿ ನಂದನ ಜೀವನ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಇದೇನೈ ಛಂದಾ | ಗುರುವೇ | ಇದೇನೈ ಛಂದಾ ಪ ಅರೂಪದಲಿ ಗೋಚರಿಸಿತು ಪ್ರೇಮ1 ವನದೊಳು ವೃಂದಾವನದೊಳು ನಲಿದೆ2 ಯಾತಕೆ ಮೌನದ ರೀತಿಯ ಹಿಡಿದೆ 3 ಏನೆಂದು ಅರಿಯದ ಜ್ಞಾನಿಯುನಾನು | ನ್ಯೂನಾರಿಸದೆ ನೀಡು ಸ್ವಾನಂದವನು 4 ಎಂದೆಂದು ಕರಿಯೆ `ಓ' ಎಂದನು ಕರುಣಾ5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಇದೇವೆ ನಿಜನೋಡಿ ನಮ್ಮ ನೇಮನಿತ್ಯ ಸಾಧು ಜನರಿಗೆ ನಡೆವದು ಸತ್ಯ ಧ್ರುವ ಅನುಸಂಧಾನ ತ್ರಿಕಾಲ ಸಂಧ್ಯಾನ ನಿತ್ಯ ನಿತ್ಯದಿತ್ಯರ್ಥದ ನಿಜಸುಷ್ಠಾನ 1 ದೇವದೇವೇಶನಾರಾಧನೆಯು ಭುವನತ್ರಯದಲಿದೆ ಸರ್ವಸಾಧನೆಯು 2 ಕರ್ಮಹರಿಸಿದ ನಿಮಿಷದೊಳಗೆ ಬ್ರಹ್ಮಾನಂದವಾಯಿತು ಮಹಿಪತಿಗೆ3
--------------
ಕಾಖಂಡಕಿ ಶ್ರೀ ಮಹಿಪತಿರಾಯರು