ಒಟ್ಟು 1740 ಕಡೆಗಳಲ್ಲಿ , 115 ದಾಸರು , 1388 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನಿಮ್ಮಿಚ್ಛೆ ಏನೇನು ಇಲ್ಲ ಎಲ್ಲಾ ಪರಮಾತ್ಮ ನಾಟ ಪ ಪಗಲಿರುಳಾರಿಂದಬಹುದು ರವಿಶಶಿ ದಿಗುವಿವರವ ಬೆಳಗುತಲುದಿಸುವರು ಗಗನ ಮಾರ್ಗದಿ ಮಳೆ ಬಹುದು ಜಗದುದರನಾಟದಿ ಸೃಷ್ಟಿ ಸ್ಥಿತಿಲಯವಹುದು 1 ಮುಳಗದಂತೆ ಇಳೆಯು ಇರುತಿಹುದು ಸುಳಿದು ಗಾಳಿಯು ಬೀಸುತಿಹುದು ಮೃತ್ಯು ಕಾಲ ಬಳಿ ಕೊಲ್ಲುತಿಹುದು 2 ನಾನು ಮಾಡಿದೆನೆನ್ನುತಿಹುದು ಕೆಡಿಸಿದನೆನ್ನುತಿಹರು 3 ಬಾಲ್ಯಯೌವನವು ತೋರುವುದು ನಿನ್ನ ಕಾಲ ಕಾಲಕಾಗುವುದಾಗು ತಿಹುದುವಧಿ ಕಾಲತೀರಲು ತನಗೆ ತಾ ಲಯವಹುದು 4 ಉಳ್ಳಷ್ಟ ಮೀರ ದಂತಿಹುದು ಎಲೆ ನಿಲ್ಲದೊಡುವ ವಾಯುಸುತನ ಕೋಣೆಯ ಲಕ್ಷ್ಮೀ ಊಳಿಗ ಸಾಗುತಿಹುದು 5
--------------
ಕವಿ ಪರಮದೇವದಾಸರು
ನಿರಂಜನ ನಿತ್ಯ ನಿರಂಜನ ಪ ಸುಗುಣ ಸಂತೃಪ್ತ ನಿಗಮಾದಿವಿನುತ ಅಗಜೇಶ ಜಗಪಾಲಯ 1 ಗಜಚರ್ಮಾಂಬರ ರಜತಾದ್ರಿ ಮಂದಿರ ಭಜಿಪರ ಭಯವಿದೂರ 2 ನಂಬಿದ ಭಕುತರ ಇಂಬುಗೊಟ್ಟು ವರ ಗುಂಭದಿ ಕೊಡುವ ದೇವ 3 ಮಹಿಮ ನೀ ಉದಯಾಗಿ ಮಹಿಯೊಳು ಮುಂಡರಗಿ ಮಹಸ್ಥಲವೆನಿಸಿದಿಯೋ4 ದೋಷವಿನಾಶನ ಶ್ರೀಶ ಶ್ರೀರಾಮನ ದಾಸರ ದಯಸಂಪೂರ್ಣ 5
--------------
ರಾಮದಾಸರು
ನಿರವದ್ಯ ಪ ಸದ್ಗುಣಪೂರ್ಣ ನೀನೇನೊ ಮೂಢ ಅ.ಪ ಬ್ರಹ್ಮಜಿಜ್ಞಾಸದ ಕ್ರಮವ | ನಿರ- ಸಮ್ಯಕ್ ಶೋಧಿಸದೇ ಅಹಂ ಬ್ರಹ್ಮಾಸ್ಮಿ ಎಂಬುವ ಆಮ್ನಾಯ ವಾಕ್ಯಕೆ ಅರ್ಥವ ತಿಳಿಯದೆ 1 ಕಾಕುಮಾಡುತಲರ್ಥ ಪೇಳ್ವುದಧರ್ಮ ಏಕವಾವುದು ಇನ್ನು ಏಕವಾವುದು ಎಂದು ನೀಕಳವಳಿಸುತ ನಿಜತತ್ವವರಿಯದೆ 2 ಆತ್ಮನಾತ್ಮಗಳೆಂದರೇನೊ | ಪರ- ಮಾತ್ಮ ಜೀವಾತ್ಮರೊ ಜೀವದೇಹಗಳೊ ಸ್ವಾತ್ಮಾನುಸಂಧಾನದಿಂದಲಿ ನೋಡ- ಧ್ಯಾತ್ಮ ವಿದ್ಯಾಭ್ಯಾಸ ಮಾಡದೆ ಬಾಯೊಳು 3 ರವಿ ಗಣಪತಿ ಶಿವ ಶಕ್ತಿ | ಭೈ- ರವ ವಿಷ್ಣು ಎಂಬುವ ಷಣ್ಮತಯುಕ್ತಿ ಎವೆ ಮಾತ್ರ ಸ್ವಾತಂತ್ರ್ಯವಿಲ್ಲ ಕೇಳ್ ಸರ್ವಶ- ಬ್ದವುಯಾವನಲ್ಲಿ ಸಮನ್ವಯವರಿಯದೆ 4 ಜೀವ ಜೀವರಿಗೆಲ್ಲ ಭೇದ | ವಿದುಸ್ವ ಭಾವವಾಗಿರುವುದು ಯಾತಕೀವಾದ ಜೀವರೂಪದಿ ಸರ್ವಜೀವರೊಳಗಿದ್ದು ದೇವಸಕಲ ಕರ್ಮಗಳ ಮಾಡಿಸುವನು 5 ಕರ್ಮವೆಂಬುದು ಅವನಿಗೆ ಲೋಪವಿಲ್ಲ ನಿರ್ಮಲ ಸಚ್ಚಿದಾನಂದ ಬ್ರಹ್ಮ ಎಂದು ನೀನೆ ಪೇಳುವೆಯಲ್ಲ ನಿನಗೆ ನಿಜವಿಲ್ಲ 6 ಸೂರ್ಯ | ಚಂದ್ರ ಕಿನ್ನರ ಸಿದ್ಧ ಸಾಧ್ಯ ನರತಿರ್ಯಕ್ ಪಶುಪಕ್ಷಿ ಕೀಟಾದಿ ನಾಮಗಳು ಪರಮಾತ್ಮನಲಿ ಸಮನ್ವಯವರಿಯದೆ 7 ಮಾಯಾ ಪ್ರಪಂಚವಿದೆನ್ನುತ | ನಿ- ಮಾಯೆಯಧಿಷ್ಠಾನದೊಳನಂತ ಜೀವನಿ- ಕಾಯವು ಗುಣಗಳಿರುವ ಮರ್ಮವರಿಯದೆ 8 ಸಾರ ಭೇದವಬದ್ಧ ಅಭೇದ ನಿಶ್ಚಯವೆಂದು ವಾದಿಸುವುದಕೇನಾಧಾರ ನಿನಗುಂಟೊ 9 ಜೀವಬ್ರಹ್ಮೈಕ್ಯವೆ ಮುಕ್ತಿ | ವೇ- ದಾವಳಿಗಳ ಪರಮಾರ್ಥದ ಉಕ್ತಿ ಜೀವನಿಂದೇನಾಗುವುದೆಂಬುದರಿಯದೆ 10 ದ್ವಾಸುಪರ್ಣವೆಂಬುವುದಕೆ | ವಿಷ- ಯಾಸಕ್ತ ಜೀವ ಆತ್ಮನು ಸಾಕ್ಷಿಯದಕೆ ನೀಸರ್ವೋತ್ತಮನಾದರೆ ಇನ್ನು ಮಹದಾದಿ ಈ ಸೃಷ್ಟಿ ಸ್ಥಿತಿಲಯವೇತಕೆ ತಿಳಿ ಜೋಕೆ 11 ಅಂಧ ಪರಂಪರವಾದ | ಬಿಟ್ಟು ಚಂದಾಗಿ ಪರಿಶೋಧಿಸು ಭÉೀದಾಭÉೀದ ತಂದೆತಾಯಿಗು ಮಗನಿಗೂ ಎಷ್ಟು ಭÉೀದ ಆ- ಪರಿ ತಿಳಿದರೆ ನಿರ್ವಾದ 12 ಪೂರ್ವೋತ್ತರ ವಿರೋಧವಿಲ್ಲ | ದಂತೆ ಸರ್ವಶೃತಿಗಳರ್ಥ ತಿಳಿದು ನುಡಿಸೊಲ್ಲ ಗರ್ವವೇತಕೆ ನಿನಗಿದರೊಳೇನಿಲ್ಲ ನೀ ಸರ್ವಜ್ಞನೊ ಕಿಂಚಜ್ಞನೊ ನೋಡು ದೃಢಮಾಡು 13 ಯೋಗ ಒದಗಿದಾಗ ಒಂದೆ ಎಂಬುವರೆ ಈಗೇನು ಆಗೇನು ಇಲ್ಲೇನು ಉಂಟೆ ನಾ- ವಾಗಲು ಜೀವರಿಗೆ ಹರಿಕರ್ತನಾಗಿರೆ 14 ಕಾಲಕರ್ಮ ಸ್ವಭಾವ ಜೀವ | ಹರಿಯ ಆಲಸ್ಯ ಬಿಟ್ಟು ಅವನಿಗೆ ದಾಸನಾಗದೆ 15 ಆಲೋಚಿಸಿದರರ್ಥ ನಿಜವಾಗಿ ತಿಳಿಯದೆ 16 ಜ್ಞಾನವೆ ನಾನು ಕರ್ಮವೆ ಮಿಥ್ಯವೆಂದು ನೀನಾಡುವುದಕೇನು ನೆಲೆ ಮೂಲ ಯಾವುದು ಸ್ವಾನುಭವವೋ ಶಾಸ್ತ್ರವೊ ಮನಕೆ ತೋರಿದ್ದೊ 17 ಹೋಮ ಜಪವು ಸ್ನಾನ ದಾನ | ನಿತ್ಯ ಭೃತ್ಯ ನ್ಯಾಯವರಿಯದವನು ಶುದ್ಧ ತತ್ವಾರ್ಥಿ ಎನಿಸುವನೆ 18 ಕರ್ತನು ನೀನೆಂದು ಭೃತ್ಯನು ನಾನೆಂದು ತೀರ್ಥಪಾದನ ದಿನದಿನದಿ ಸಂಸ್ತುತಿಸದೆ 19 ಪಾದ ವನಜಕೊಪ್ಪಿಸಿ ಸಂಸಾರದ ಕರಕರೆಯ ಮನದಿ ಲೆಕ್ಕಿಸದೆ ಚಿಂತನಗೈದು ಸರ್ವತ್ರ ಘನಮಹಿಮನ ದಿವ್ಯಗುಣರಾಶಿ ಪೊಗಳದೆ 20 ಹೊರಗಣ್ಣ ಮುಚ್ಚಿ ಮೋದದಲಿ | ಒಳ- ಗಿರುವಾಧಾರಾದಿ ಚಕ್ರಗಳ ಸ್ಥಾನದಲಿ ಸರಸಿಜಭವ ಶಂಕರಾದಿ ಸುರರ ನೋಡಿ ತರತಮವಾಗಿ ಮುಂದಿನ ಪರಿಯ ತಿಳಿಯದೆ 21 ಮಂಗಳ ಮೂರ್ತಿಯ ನೋಡಿ ಕೊಂಡಾಡಿ ಅ- ನಂಗಗೆ ಸಿಲುಕದೆ ಅರ್ಥಿಯ ಪೊಂದದೆ 22 ಎಪ್ಪತ್ತೆರಡು ಸಹಸ್ರನಾಡಿ | ಗಳೊ- ಳೊಪ್ಪುವ ಭಗವದ್ರೂಪಗಳನು ನೋಡಿ ಅಪ್ಪ ನೀನೆಂದು ಭಕ್ತಿಯಲಿ ಕೊಂಡಾಡಿ ಪುನ- ರಾವರ್ತಿರಹಿತ ಶಾಶ್ವತ ಸುಖಿಯಾಗನೆ 23 ವಿಪರೀತ ಮತಿಪುಟ್ಟದಂತೆ | ಧ್ಯಾನ- ಗುಪಿತವಾಗಿರುತ ಜನರಿಗೆ ಹುಚ್ಚನಂತೆ ಅಪವರ್ಗಾಪೇಕ್ಷಯಿಂ ನಿಷ್ಕಾಮಿಯಾಗದೆ24 ಆಪಾದಮಸ್ತಕ ದೇಹ | ದಿಸು ರಾಪದಜನಕ ಶ್ರೀಗುರುರಾಮವಿಠಲ ವ್ಯಾಪಾರವೆಲ್ಲ ಮಾಡಿಸುವನೆಂದರಿತರೆ ಸಾಫಲ್ಯನಾಗಿ ಜೀವನು ಧನ್ಯನಾಗುವ 25
--------------
ಗುರುರಾಮವಿಠಲ
ನಿಲಯ ಐಕೂರು ಗ್ರಾಮಾಲಯ | ಸ್ತಂಭೋಧ್ವವ ದೇವ ನಾಮಧೇಯ ಧ್ವಯಭಾರ್ಯ ಸುಮನಸಪ್ರಿಯ ಸದ್ಭಕ್ತಾರ್ತಿವಿದೂರ ವಿಮಲ ಹೃದಯ ಅತ್ಯಂತ ಕರುಣಾಮಯ | ಅಸ್ಮದ್ ಸದ್ಗುರುವರ್ಯ ನಿತ್ಯ ಸನ್ಮಂಗಳ 1 ಸಾರೋದ್ಧಾರ ಸಂಗೀತ ಭಾರತಿಯುತ ವೇದಾರ್ಥ ಸಂಪೂರಿತ | ಸಹ್ಲಾವಂಶಜ ದಾಸವರ್ಯ ವಿರಚಿತ ಶ್ರೀಶೌರಿ ಸುಕಥಾಮೃತ ಸಾರಜ್ಞಂ ಸುಶೀಲೇಂದ್ರತಿರ್ಥರ ಮಮತ ಸಂಪೂರ್ಣ ಸಂಪಾದಿತ ಅಸ್ಮದಗ ಸದ್ಗುರುವರ್ಯ ನಿತ್ಯ ಸನ್ಮಂಗಳ 2 ಅಷ್ಟಪದಲೋಷ್ಟ ಭಾವಸಮತ | ಕರತಧೀರ ಸನ್ಮಾನಿತ ಅಷ್ಟ್ಯೆಕಾಮಲ ಭಕ್ತಿ ಜ್ಞಾನ ಭರಿತ ವೈರಾಗ್ಯ ಸಂಶೋಭಿತ | ಸೃಷ್ಟ್ಯಂತರ್ಗತ ಮೂರ್ತಿ ಸತತ | ಸಂದರ್ಶನಾನಂದಿತ ನಿತ್ಯ ಸನ್ಮಂಗಳ 3 ಶೃಂಗಾರಾಂಗ ಸುನಾಮದ್ವಾದಶಧೃತ ಮುದ್ರಾಕ್ಷತಾಲಾಂಕೃತ ಕಮಲ ಜಪಿತ ಪದ್ಮಾಕ್ಷಮಾಲಾಂದ್ರಿತೆ ಇಂಗಿತಜ್ಞ ಸುಸಾಧು ಸಂಗ ಸಹಿತ ಮುಕ್ತ್ಯಂಗನಾಲಿಂಗಿತ ನಿತ್ಯ ಸನ್ಮಂಗಳ4 ತಾಪತ್ರಯದೂರ ಪಾಪರಹಿತ | ಕೋಪಾದಿಗುಣವರ್ಜಿತ | ಶಾಪಾನುಗ್ರಹಶಕ್ತ ಸುಜನಪ್ರೀತ ಸಂಸಾರ‌ಘನ ಮಾರುತ ಗೂಡಾರ್ಥ ಸಂಬೋಧಿತ ಅಸ್ಮದ್ ಸದ್ಗುರುವರ್ಯ ಈಯೋ ನೀ ನಿತ್ಯಸನ್ಮಂಗಳ 5 ಆಧ್ಯಾತ್ಮ ಸುವಿಚಾರ ಸತತ ಶೃತ್ಯರ್ಥಬಹು ಗರ್ಭಿತ | ಸತ್ಯವಲ್ಲಭ ಸತ್ಯದೇವ ಚರಿತ ವಕ್ತಾರ ಬುಧ ಸಮ್ಮತ | ನಾಡ್ಯಾಂತರ್ಗತ ಸರ್ವತೀರ್ಥ ಸ್ನಾತ | ತನ್ಮೂರ್ತಿ ಪ್ರತ್ಯಕ್ಷತ ನಿತ್ಯ ಸನ್ಮಂಗಳ 6 ಧರ್ಮಾಚಾರ ವಿಚಾರಶೀಲ ನಿರತ | ಷಟ್ಕರ್ಮ ಸಂಭೂಷಿತ | ನಿರ್ಮತ್ಸರ ಮೋಹ ದೇಹ ಮಮತ ಸುಶರ್ಮಕುಲರಾಜಿತ | ಧಮೋದರವಾತಜಾತ ಪೋತ ಜಾತಾರಿಖತಿವರ್ಜಿತ | ಅಸ್ಮಾದ್ ಸದ್ಗುರುವರ್ಯ ಈಯೋ ನಮಗೆ ಸತತ ನೀ ಸನ್ಮಂಗಳ 7
--------------
ಶಾಮಸುಂದರ ವಿಠಲ
ನಿಲ್ಲ ಬಾ ನಿಲ್ಲ ಬಾ ಮೆಲ್ಲಮೆಲ್ಲನೆ ಹೆಜ್ಜೆನಿಟ್ಟುನಿಲ್ಲ ಬಾರೋ ಕೃಷ್ಣಾ ನಿಲ್ಲ ಬಾರೋ ಪ ದುಷ್ಟ ಪೂತನಿಯ ದೊಡ್ಡ ಹೊಟ್ಟೆಯೊಳಾಡಿದಿ ಮಂದಿದೃಷ್ಟಿ ತಾಕಿಹುದೊ ರಕ್ಷೆನಿಟ್ಟು ಮುದ್ದಿಸುವೆ 1 ಆಲಯದಂಗಳದೊಳು ಲೀಲೆ ಮಾಡುವಿಯೊ ಕೆಟ್ಟಬಾಲೆಯರ ಗಾಳಿ ಸೋಕಿಹುದೋ ಹಣ್ಣು ನಿವಾಳಿಸಿಒಗೆವೆ ಕೃಷ್ಣ 2 ಇಂದಿರೇಶ ನಿನ್ನ ಬಹುಮಂದಿ ನೋಡುವರೋ ದೃಷ್ಟಿಇಂದು ಆಗಿಹುದೊ ಮಾಳ್ಪೆ ಕದಲಾರತಿಯ ಕೂಸೆ 3
--------------
ಇಂದಿರೇಶರು
ನೀ ಕೈಯ ಬಿಡಬೇಡವೋ ನರಹರಿ ಪ ನೀ ಕೈಯ ಬಿಡಬೇಡ ನಾಕೆಟ್ಟರೂ ಬೇಡ ನೀ ಕೊಟ್ಟ ಫಲವಿನ್ನು ಸಾಕೋ ಮಾಂಗಿರಿರಂಗ ಅ.ಪ ನನ್ನ ಕಾಯುವ ಭಾಗ ನಿನ್ನದಾಗಿರಲಯ್ಯ ಇನ್ನಾವುದನು ಕೇಳ್ವುದೆನ್ನ ಭಾವದೊಳಿಲ್ಲ ಸನ್ನುತಾಂಗ ಕೃಷ್ಣ ಪನ್ನಗಶಯನ [ಉನ್ನತದಿ ಸದಾ ಭಜಿಸುವೆನು ನಿನ್ನ] 1 ಆಡುವಾ ನುಡಿಗಳು ನೋಡುವಾ ನೋಟವು ಮಾಡುವ ಕಾರ್ಯವು ನಿನ್ನದಾಗಿರಲು ಮೂಡಿಸು ಮನದಲ್ಲಿ ತವಪಾದಭಕ್ತಿಯ ಜೋಡಿಸಿ ಕೈಗಳ ಮುಗಿವೆನೋ ರಂಗ 2
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ನೀ ಬುದ್ಧಿ ಕೊಡದಿರಲು ಮನುಜ ಪಶುವೊ ಜೀವ ಪಶುವೊ ಪ ಶ್ರೀ ಭೂಮಿ ದುರ್ಗೇಶ ಗೋವಿಂದ ಪರಿಪೂರ್ಣ ಅ.ಪ ಜಡಜನ್ಮದಿಂದಲೆ ದ್ವಿಜ ಜನ್ಮ ಬಂದಿಹುದು ಒಡೆಯಾ ನಮ್ಮೆತ್ನವೇ ಸತ್ಯ ಪೇಳೊ ಕಡುನಿದ್ರೆಯಲಿ ಜೀವ ನಿಶ್ಚೇತನಾಗಿರಲು ಬಿಡದೆ ದಿನದಿನದಲ್ಲಿ ಎಚ್ಚರಿಕೆ ಯಾರಿಂದ 1 ಸೃಷ್ಟಿಗೆ ಬರಲಿನ್ನು ಜೀವ ಯತ್ನವು ಉಂಟೆ ಸೃಷ್ಟಿ ಸ್ಥಿತಿ ಲಯ ಕರ್ತ ನೀನೆ ತಿಳಿಯೊ ಮೊಟ್ಟ ಮೊದಲಿಗೆ ನಿನ್ನ ವಶನಾಗಿ ನಾನಿರಲು ಸೃಷ್ಟಿಯಲಿ ನಮ್ಮೆತ್ನ ಕಲ್ಪಿಸುವುದುಂಟೆ 2 ಇಂತಿರಲು ನಿಜತತ್ವ ಎಂಥ ಶಕ್ತಿಯು ನಮಗೆ ಸ್ವಾಂತ ಮಂಗಳ ಸುಗುಣ ನಿಧಿಯೆ ಪೇಳೊ ಭ್ರಾಂತಿ ಜೀವನ ಬಿಡಿಸಿ ಜಯೇಶವಿಠಲ ಶಾಂತಿ ಪಾಲಿಸು ನಮಗೆ ಅಂತರಾತ್ಮಕ ದೇವ3
--------------
ಜಯೇಶವಿಠಲ
ನೀ ಮಾಯೆಯೊಳಗೊ ನಿನ್ನೊಳು ಮಾಯೆಯೊ ಪ ನೀ ದೇಹದೊಳಗೊ ನಿನ್ನೊಳು ದೇಹವೊ ಹರಿಯೆಅ ಬಯಲೊಳಗೆ ಆಲಯವೊ ಆಲಯದೊಳಗೆ ಬಯಲೊಬಯಲು ಆಲಯವೆರಡು ನಯನದೊಳಗೊನಯನ ಬುದ್ಧಿಯ ಒಳಗೊ ಬುದ್ಧಿ ನಯನದ ಒಳಗೊನಯನ ಬುದ್ಧಿಗಳೆರಡು ನಿನ್ನೊಳಗೊ ಹರಿಯೆ1 ಸವಿಯು ಸಕ್ಕರೆಯೊಳಗೊ ಸಕ್ಕರೆಯು ಸವಿಯೊಳಗೊಸವಿಯು ಸಕ್ಕರೆ ಎರಡು ಜಿಹ್ವೆಯೊಳಗೊಜಿಹ್ವೆ ಮನಸಿನ ಒಳಗೊ ಮನಸು ಜಿಹ್ವೆಯ ಒಳಗೊಜಿಹ್ವೆ ಮನಸುಗಳೆರಡು ನಿನ್ನೊಳಗೊ ಹರಿಯೆ 2 ಕುಸುಮದಲಿ ಗಂಧವೋ ಗಂಧದಲಿ ಕುಸುಮವೋಕುಸುಮ ಗಂಧಗಳೆರಡು ಆಘ್ರಾಣದೊಳಗೊಅಸಮಭವ ಕಾಗಿನೆಲೆಯಾದಿಕೇಶವರಾಯಉಸುರಲೆನ್ನಳವಲ್ಲ ಎಲ್ಲ ನಿನ್ನೊಳಗೊ ಹರಿಯೆ 3
--------------
ಕನಕದಾಸ
ನೀ ಮುನಿದು ಇಳೆಯೊಳಗೇ| ಸುರಮುನಿ ಜನಪಾಲನ ಮನದಲಿ ಬಂದದಿ ನೆರೆಯದೇ ಸಾರುವದೀಗ ಪ ನಿನ್ನಯ ಒಪ್ಪುವ ಮಾರ್ಗವ ನೋಡುತ| ಮುಚ್ಚನು ಕುಡಿಗಂಗಳ ಯವಿಯಾ| ಪನ್ನಗವೇಣೀ ನಿನ್ನವಿಯೋಗ ದುಗುಡದೀ| ಕುಳಿತನುಡಗಿ ಅವಯವ ಸೋಹ್ಯಾ 1 ನಿನ್ನ ಕಾಣುವೆ ನೆಂಬಂಥ ವಾಣಿಯಲೆದ್ದು ಲಜ್ಜಿಸಿ ಹಿಂದಕ ಕಾಲೆಳೆದಾ| ಘನ್ನ ವಿರಹ ತಾಪದ ದೆಶೆಯಿಂದಲಿ ಕಿಡಿ ಕಿಡಿ ಜ್ವಾಲಾಂಗನು ಆದಾ 2 ಕಪಟದಿ ಬಂದು ನೋಡುವೆ ನಿನ್ನೆನುತಲಿ ಯಾಚಕ ರೂಪತಾಳಿದನು| ವಿಪುಳಾಂಗ ತಾಳಲಾದರದೇ ನಿನ್ನ ಕುವರಿಯ ತೊರೆಂದೆ ಚಂದನು ಶರಧಿಯನು3 ದಿನದೊಳಗರಗಳಗಿ ಗಮಿಸದು ಯನುತಲಿ ವನದೋಳು ಪೋಗಿ ಹೊತ್ತುಗಳೆವಾ|ಮನಿ ಮನಿ ಪೊಕ್ಕು ಗೋಕುಲದಲಿ ನಿನ್ನನು ಅರಸುತಿಹನು ಪಾವನ ದೇವಾ4 ಕ್ಷತ್ರೀಯರು ನಿಷ್ಠುರರೆಂದು ನಿನ್ನಮ್ಯಾಲಿನ ಕೋಪದಿ ಕಂಡ ವೃತವಳದಾ| ಅತಿತವನೋಡದೇ ತಾನಾಗಿ ಬಂದನು ಹಯವೇ ನೋಡೆ ಜೀವನ ಜಗದಾ 5 ಕುವಲಯ ಲೋಚನೆ ಕೂಡಿದ ನಿಮ್ಮಿರ್ವರ ಹಾಸ್ಯದ ಮುಖವನು| ಜವದೀ ಅವನಿಲಿ ಕಂಡೆನು ಧನ್ಯಧನ್ಯಾದೆನು ಮಹಿಪತಿ ಸುತ ಪ್ರಭುವಿನ ದಯದೀ6
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ನೀ ವೆಂಕಟೇಶ ಪರಿಪಾಲಯ ಸುಗುಣಾಲಯ ಪ ಶಿಖಾಮಣಿ ಸೇವಕ ಸುಚಿಂತಾಮಣಿ ಅ.ಪ ಕಮಲಲೋಚನ ಭಕ್ತ ಕಮಲಲೋಚನ ಶಕ್ತ ವಿಮಲ ಚರಿತಪೂರ ಕಮನೀಯ ಶರೀರ1 ಧೀರ ದಶರಥ ಕುಮಾರ ಬುಧ ಜನವಿಹಾರ ವೀರ ಹಂ ಪರಿವಾರ ಕ್ರೂರಸುರ ವಿಹಾರ 2 ಸರಸಿಜಾಸನನುತ ಸುರಮುನಿಸೇವಿತ ಹರಿಣಾರಿಧಾರಾಗಾರ ವರದ ವಿಠಲಾಕಾರ 3
--------------
ವೆಂಕಟವರದಾರ್ಯರು
ನೀನಲ್ಲದಿನ್ನಾರು ಸಲಹುವರೊ ಎನ್ನ ಪ ನಾನು ನನ್ನದು ಎಂಬ ದುರಭಿಮಾನಿಯನ್ನಅ.ಪ. ಶ್ರೀಮದಾಚಾರ್ಯರ ಪುಸ್ತಕ ಭಂಡಾರವನು ಪ್ರೇಮದಿಂ ಧರಿಸುತ ವೃಷಭನಾಗಿರ್ದು ಚರಿಸಿ ಕಾಮಪಿತನೊಲಿಮೆಯಿಂ ಮರಳಿ ಜನಿಸಿ ಗುರುಗಳ ಆ ಮಹಾಭಾಷ್ಯವರುಹಿದ ಜಯತೀರ್ಥ ಗುರುವೆ 1 ಬಾಲತನದಲಿ ಸಕಲ ಲೀಲೆಗಳ ತೊರೆದು ಕಾಲುಂಗುಟಾಗ್ರದಿ ನಿಂದು ತಪವಗೈದು ಶ್ರೀಲೋಲನ ಮೆಚ್ಚಿದಂಥ ಧೀರ ದೈವ ಭೂ- ಪಾಲನಂಶದ ಶ್ರೀಪಾದರಾಜ ಗುರುವೆ2 ಪಿತನ ಮತ ಧಿಕ್ಕರಿಸಿ ಶ್ರೀಪತಿಯೆ ಪರನೆಂಬ ಮತಿಪÉೂಂದಿ ಶಿಶುತನದಲಿ ನರಹರಿಯ ಒಲಿಸಿ ಅತಿಹಿತನಾದ ಪ್ರಹ್ಲಾದದೇವನಂಶದಿಂ ಕ್ಷಿತಿಯೊಳುದ್ಭವಿಸಿದ ವ್ಯಾಸರಾಜ ಗುರುವೆ 3 ಈ ಧರೆಯೊಳೆಸೆಯುತಿಹ ಉಡುಪಿಯೊಳು ನೆಲಸಿರ್ಪ ಯಾದವ ತೀರ್ಥಾಯ ಪದ ಸರಸಿರುಹ ಭೃಂಗ ಮೋದ ತೀರ್ಥಾರ್ಯರ ಪದಕರುಹನಾದಂಥ ಸೋದೆಯೊಳ್ರಾಜಿಸುವ ವಾದಿರಾಜ ಗುರುವೇ 4 ಕಂತುಜನಕನಿಗತ್ಯಂತ ಪ್ರಿಯನಾದ ಮತಿ ವಂತನಾ ವ್ಯಾಸಮುನಿಯೆ ನೀನಾಗಿ ಬಂದು ಸಂತಸದಲಿ ಸಾಧು ಜನರಿಷ್ಟ ಪೂರೈಸುತ ಮಂತ್ರಾಲಯದಿ ಮೆರೆವ ರಾಘವೇಂದ್ರ ಗುರುವೆ 5 ಜಲಜಭವನೂರುಭವನಂಶದಲಿ ಜನಿಸಿ ಕಲಿಯುಗದಿ ಹರಿನಾಮವೆ ಗತಿಯೆಂದು ಸಾರಿ ಹಲವು ಪದ ಸುಳಾದಿಗಳ ರಚಿಸಿ ಸಜ್ಜನರ ಕಲುಷಗಳ ಕಳೆದ ಪುರಂದರದಾಸರಾಯ 6 ಸಕಲ ಋಷಿಗಳ ಸಂಶಯವ ಪರಿಹರಿಸಿ ವೇದ ಉಕುತಿಗಳಿಂದ ಹರಿಯೆ ಪರನೆಂದು ಸ್ಥಾಪಿಸಿ ಭಕುತಿ ವೈರಾಗ್ಯನಿಧಿ ಭೃಗುಮುನಿಯೆಂದೆನಿಸಿದ ಮುಕುತಿಪಥ ತೋರಿಸಿದ ವಿಜಯದಾಸರಾಯ 7 ಸೂತ್ರ ಪುರಾಣಗಳ ರಚಿಸೆ ದಾಸತ್ವವಹಿಸಿ ಸಕಲ ಗ್ರಂಥಗಳ ಬರೆದು ಶ್ರಿಶಗರ್ಪಿಸುತ ಲೇಸು ಜಗಕೆಗೈದಂಥ ಗ ಣೇಶಾವತಾರಿ ಗೋಪಾಲದಾಸರಾಯ 8 ಸಿರಿ ರಂಗೇಶವಿಠಲನ ಕಾಂಬ ತೃಷೆಯಲಿ ಹರಿಗೆ ಹರಿಕಥಾಮೃತಸಾರ ಪಾನಗೈಯಲಿತ್ತ ನರಹರಿಯ ಕೃಪಾಪಾತ್ರ ಸಹ್ಲಾದನಂಶದ ಗುರುವರ ಶ್ರೀ ಜಗನ್ನಾಥದಾಸರಾಯ 9
--------------
ರಂಗೇಶವಿಠಲದಾಸರು
ನೀನೆ ತಾಯಿಯು ನೀನೆ ತಂದೆಯು ನೀನೆ ಬಾಂಧವನು ರಂಗ ಪ ನೀನೆ ನಿತ್ಯನನಾದಿದೇವನು ನೀನೆ ಸತ್ಯಲೋಕೇಶನೀಶನು ಅ.ಪ ಲೋಕಭರಿತ ಅನೇಕಚರಿತ ಲೋಕಪಾಲಕನು ವಿಭವ ಲಯಗಳೇಕಕರ್ತನು ಶ್ರೀಕರಾ ಕೃಪಾಕರಾಸುರ ಭೀಕರಾಂಗನು ಪಿನಾಕಿ ವಿನುತನೂ ಕಳತ್ರನು 1 ನಂದಗೋಪನ ಕಂದ ಕೃಷ್ಣ ನೀನೆಂದು ನಂಬಿದೆನೋ ಮಂದಹಾಸವದನವ ನಾನೆಂದು ನೋಡುವೆನೋ ಸುಂದರಾರವಿಂದ ಪಾದವನೆಂದು ಪೂಜಿಪೆನೋ ತಂದೆ ಮಾಂಗಿರಿರಂಗನೊಲವನೆಂದು ಪಡೆದೇನೋ2
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ನೀನೆ ನಿಜಗುರುವಾಗುಎನಗೆ ಮಾಧವ ಪ ಮರವೆಯೆಂಬ ಪರದೆ ಹರಿದು ಅರಿವುಯೆಂಬಾಲಯದೊಳಿರಿಸಿ ದುರಿತಪರ್ವತ ತರಿದು ಪೊರೆಯುವ ಚರಣದಾಸರ ಭಾಗ್ಯನಿಧಿಯೆ 1 ಹೀನಸಂಸಾರೆಂಬುವ ಮಹ ಕಾನನದಿ ಬಳಲಿಸದೆ ಅನುದಿನ ಧ್ಯಾನಮೃತ ಪಾನಗೈಸುವ ಧ್ಯಾನಿಪರ ಮಹಪ್ರಾಣದರಸೇ 2 ಆವಕಾಲದಿ ಬಿಡದೆ ನಿಮಿಷ ಜೀವ ಭಕುತರ ಭಾವದ್ವಾಸಿಸಿ ಜಾವ ಜಾವಕೆ ಬುದ್ಧಿ ಕಲಿಸುವ ದೇವದೇವರ ದಿವ್ಯದೇವರೆ 3 ಸಕಲಕೋಟಿಮಂತ್ರಗಳಿಗೆ ನಿಖಿಲ ನೀನೆ ಆಧಾರನಾಗಿ ಅಖಿಲರೂಪದಿ ಜಗವ ಬೆಳಗುವ ಭಕುತಿದಾಯಕ ಸುಖದ ಶರಧಿಯೆ 4 ಸಾರಿ ಭಜಕರ ಭಾರವಹಿಸಿ ಘೋರಭವಸಾಗರವ ಗೆಲಿಸಿ ಧೀರ ಶ್ರೀಗುರುರಾಮ ಪ್ರಭುವೇ 5
--------------
ರಾಮದಾಸರು
ನೀನೆ ರಕ್ಷಿಸಬೇಕು ಹೀನಬುದ್ಧಿಯ ನರನ ಪಯೇನೆಂಬೆ ವಿಷಯಗಳೊಳು ಮನಮುಳುಗಿ ಧ್ಯಾನವನೊಮ್ಮೆಯು ಮಾಡದ ಮರುಳ ಅ.ಪಕಂಡುದನೆಲ್ಲವ ಬಯಸಿ ದಂಡಿಸಲಾರದೆ ಮನವಕೆಂಡಕೆ ಮುತ್ತುವ ಶಲಭನ ತೆರದಿ ಕಂಡು ನೊಂದು ಮತ್ತದ ಬಿಡದಿರಲು 1ಕಾಯವ ನಿತ್ಯವಿದೆಂದು ಹೇಯದಿ ತೋರಲು ಕಂಡು ನೋಯದೆ ತಾಪತ್ರಯಗಳನುಂಡು ಆಯಸಗೊಳುತಿರಲಿದ ನೀ ಕಂಡು 2ದುಃಖದಿ ನೋವರ ನೋಡಿ ಸುಕ್ಕುತಲಾಕ್ಷಣದೊಳಗೆದುಃಖವು ಬಂದರೆ ಪರಿಹರವಾಗದೆ ಸಿಕ್ಕಿರೆ ಬಲೆಯೊಳು ದುಃಖಿಸುತಿರಲು 3ಪ್ರಾಚೀನ ಕರ್ಮಗಳು ವೀಚಿಗಳಂದದಿ ಬರಲುಸೂಚಿಸಿ ಶಿಕ್ಷಿಪ ಶಾಸ್ತ್ರದ ನೆಳಲೊಳು ಚಾಚದೆ ತಾವೆ ತಾವಾಗಿರಲು 4ದುರಿತಗಳೆ ಬಹುವಾಗಿ ಸ್ಫುರಿಸುತ್ತಲಿರಲಾಗಿಮರುಗುವ ರಕ್ಷಕ ನೀನಿರಲಾಗಿ ಮರೆಯೊಗದಿರಲೀ ದುರಿತವ ನೀಗಿ 5ದ್ವಂದ್ವಗಳೊಂದೆಂದೊಮ್ಮೆ ನಿಂದಿರೆ ಕರ್ಮದ ಹೆಮ್ಮೆಹೊಂದದು ಎಂದಿಗು ಅದು ತನ್ನ ಸೊಮ್ಮೆಯೆಂದಿಗೆ ಹೃದಯದಿ ನಿಲುವೆ ನೀನೊಮ್ಮೆ 6ಮಾನವ ಬಿಟ್ಟರೆ ಬುದ್ಧಿ ಜ್ಞಾನದ ಸಾಧನ ಸಿದ್ಧಿತಾನೇ ಬರುವುದು ಪುಣ್ಯಸಮೃದ್ಧಿ ಜ್ಞಾನಾತ್ಮಕ ಕೃಷ್ಣ ನೀನಿರು ಹೊದ್ದಿ 7ಭಜಿಸಿದನೆ ಭಕ್ತಿಯಲಿ ಯಜಿಸಿದನೆ ಯಾಗದಲಿದ್ವಿಜತನವನ್ನಾದರು ಬಿಡದಿದ್ದನೆ ಅಜಮಿಳನೆ ನಿನ್ನೊಲವಿಗೆ ಸಾಕ್ಷಿ 8ಕರುಣಕಟಾಕ್ಷವ ನೀನು ುರಿಸಲು ಧನ್ಯನು ನಾನುತಿರುಪತಿ ನಿಲಯ ಶ್ರೀ ವೆಂಕಟ ಕಾಣು ಗುರು ವಾಸುದೇವರೂಪಿನ ಚಿದ್ಭಾನು 9ಓಂ ದಾನವೇಂದ್ರ ವಿನಾಶಕಾಯ ನಮಃ
--------------
ತಿಮ್ಮಪ್ಪದಾಸರು
ನೀನೆನನ್ಹುಟ್ಟಿಸಿದ್ಯೋ ನಾನೆ ನಿನ್ನ್ಹುಟ್ಟಿಸಿದೆನೋ ಜಾನಕೀಶ ನೀನೆನಗೆ ಸಿಟ್ಟಾಗದ್ಹೇಳೈ ಪ ತಂದೆ ಮಗನ್ನ್ಹೆತ್ತನೋ ಮಗ ತಂದೆನ್ಹೆತ್ತನೋ ತಂದೆ ಮಗನ್ನೀರ್ವರನು ತಾಯಿ ಹೆತ್ತಳೇನೋ ತಂದೆತಾಯಿಮಗತ್ರಯರು ಬಿಂದಿನಲುದ್ಭವಿಸಿದರೆ ಅಂದಮಾದ ಸಂಧಿದನು ಚೆನ್ನಾಗಿ ಬಿಡಿಸೈ 1 ಬೀಜದಿಂದ್ವøಕ್ಷಾಯ್ತೋ ವೃಕ್ಷದಲಿ ಬೀಜಾಯ್ತೋ ಬೀಜವ್ಯಕ್ಷಗಳೆರಡು ಹಣ್ಣಿನೋಳ್ಹುಟ್ಟಿದವೇ ಬೀಜವೃಕ್ಷ್ಹಣ್ಣುಮೂರು ಭೂಮಿಯೋಳ್ಹುಟ್ಟಿದವೇ ಸೋಜಿಗದ ಸಂಧಿದನು ನೈಜದಿಂ ಬಿಡಿಸೈ 2 ಜೀವದಿಂ ಮಾಯವೋ ಮಾಯದಿಂ ಜೀವವೋ ಜೀವಮಾಯಗಳೆರೆಡು ಭಾವದ್ಹುಟ್ಟಿಹ್ಯವೋ ಜೀವ ಮಾಯ ಮೂರು ಕಾಯದಲಿ ಜನಿಸಿದವೋ ನ್ಯಾಯದ ಸಂಧಿದನು ದಿವ್ಯವಾಗಿ ಬಿಡಿಸೈ 3 ಉತ್ಪತ್ತಿಯಿಂ ಲಯವೋ ಲಯದಿಂದ ಉತ್ಪತ್ತ್ಯೋ ಉತ್ಪತ್ತಿಲಯವೆರಡು ಸ್ಥಿತಿಯಿಂ ತೋರುವವೋ ಉತ್ಪತ್ತಿಲಯಸ್ಥಿತಿ ತತ್ವದೊಳು ಜನಿಸಿಹ್ಯವೋ ಗುಪ್ತದ ಸಂಧಿದನು ನಿರ್ತಾಗಿ ಬಿಡಿಸೈ 4 ವೇದದಿಂ ಸಾಧನವೋ ಸಾಧನದಿಂ ವೇದವೋ ವೇದಸಾಧನವೆರಡು ನಾದದ್ಹುಟ್ಟಿಹ್ಯವೋ ವೇದಸಾಧನ ನಾದಶೋಧದಿಂ ಜನಿಸಿಹ್ಯವೋ ಮೋದದ ಸಂಧಿದನು ಬೋಧದಿಂ ಬಿಡಿಸೈ 5 ಪಿಂಡಾಂಡದಿಂ ಬ್ರಹ್ಮಾಂಡೋ ಬ್ರಹ್ಮಾಂಡದಿಂ ಪಿಂಡಾಂಡೋ ಪಿಂಡಾಂಡಬ್ರಹ್ಮಾಂಡೆರಡು ಖಂಡನಿಂದ್ಹುಟ್ಟಿಹ್ಯವೋ ಪಿಂಡಾಂಡಬ್ರಹ್ಮಾಂಡ ಖಂಡನ್ಯೋಗಿಯಲಿ ಜನಸಿಹ್ಯವೊ ಗಂಡಾಂತರದ ಸಂಧಿದನು ಖಂಡಿತದಿಂ ಬಿಡಿಸೈ 6 ಕಾಮದಿಂ ನೇಮವೋ ನೇಮದಿಂ ಕಾಮವೋ ಕಾಮನೇಮಗಳೆರಡು ನಿತ್ಯದ್ಹುಟ್ಟಿಹ್ಯವೋ ನಿತ್ಯ ಶ್ರೀರಾಮ ನಿನ್ನಾಟವೋ ಈ ಮಹಸಂಧ್ಯೆನಗೆ ಪ್ರೇಮದಿಂ ಬಿಡಿಸೈ 7
--------------
ರಾಮದಾಸರು