ಒಟ್ಟು 18838 ಕಡೆಗಳಲ್ಲಿ , 137 ದಾಸರು , 8355 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ರುದ್ರದೇವರು ಶಿವನೆ ನಾ ನಿನ್ನ ಕರೆಯುವೆ ಬಾರೊ ಪ ಗಿರಿಜಾಮನೋಹರನೆ ಶಂಕರನೆ ಅ.ಪ. ನೀಲ ಹರಳಿನಂತ್ಹೊಳೆವುದು 1 ಬಾಲಮುನಿಯು ತನ್ನ ಕೇಳಿ ಮೃತಿಯನುನೀಲ ಲೋಹಿತಾ ನಿನ್ನ ಸೇವೆಯ ಮಾಡಿದನುಕಾಲನ ಜೈಸುತ ಬಹಳ ಆಯುಷ್ಯವಿತ್ತವ್ಯಾಳಚಲಾಂತಕ ಶ್ರೀಶೈಲದಿ ನಿಂತೆ 2 ಮಂದರುಗ್ಮಿಯು ತಪದಿಂದ ಒಲಿಸಲುಬಂದು ಶಾಪವ ನೀಡಿ ತಂದಿ ಕ್ಷಿತಿಯೊಳುಇಂದಿರೇಶನ ದ್ವೇಷ ಎಂದು ಮಾಡುವಿ ಶಾಪಅಂದೇ ಬರುವದು ಮಂದಿರಕೋ ಇತಿ 3
--------------
ಇಂದಿರೇಶರು
ರುದ್ರದೇವರು ಶಿವನೆ ನಾ ನಿನ್ನ ಸೇವಕನಯ್ಯ ದುಮ್ಮಾನ ಬಿಡಿಸಯ್ಯ ಸುಜನ ಸಹಾಯ ಸಿರಿಧರನರಮಯ್ಯ ಪ ಭಾಗವತ ಶಾಸ್ತ್ರವನು ಅವನೀಶಗೆ ಪೇಳ್ದವ ನೀನಲ್ಲವೆ ಅ.ಪ. ತೈಜಸ ತಾಮಸವೆಂಬ ತ್ರೈತತ್ತ್ವಗಳೆಂಬ ಸಾಂಬ ಸುರಪಾದ್ಯರ ಬಿಂಬ ವೈಕಲ್ಯಾಸ್ಪದವನು ಕಳೆದೊಮ್ಮೆಲೆ ವೈಕುಂಠಕೆ ಕರೆದೊಯ್ಯೊ ಕರಿಗೊರಳಾ 1 ಮೃತ್ಯುಂಜಯ ಮುಪ್ಪುರಹರ ಮಹದೇವ ದೇವರ್ಕಳ ಕಾವ ಸ್ತುತ್ಯಾದ್ರಿಜಾಪತಿ ಜತತೀವನದಾವ ದುರಿತಾಂಬುಧಿ ನಾವ ಕೃತ್ತಿವಾಸ ಉನ್ನತ್ಯವರಾಧಗ - ಳೆತ್ತಿಣಿಸದೆ ಕೃತಕೃತ್ಯನ ಮಾಡೈ 2 ಗಂಗಾಧರ ಷಣ್ಮುಖ ಗಣಪರ ತಾತ ತ್ರೈಲೋಕ್ಯಖ್ಯಾತ ಲಿಂಗಾಹ್ವಯ ತಾರಕಹರ ನಿರ್ಭೀತ ಭುವನಾಧಿನಾಥ ತುಂಗ ಮಹಿಮ ನಿಸ್ಸಂಗ ಹರಿಯದ್ವತೀ ಯಂಗ ಡಮರು ಶೂಲಂಗಳ ಧರಿಸಿಹ 3 ಪಂಚಾನನ ಪನ್ನಗಭೂಷಣ ಭೀಮ ಭುವನಾಭಿರಾಮ ಸಂಚಿಂತನ ಮಾಡುವ ಸಂತತ ನೇಮ ಶ್ರೀರಾಮನಾಮ ಪಂಚಶರಾರಿ ವಿರಿಂಚಿಕುವರ ನಿ - ಷ್ಕಿಂಚನರೊಡೆಯನ ಮಂಚಪದಾರ್ಹನೆ4 ಸ್ಪಟಿಕಾಭ ಕಪಾಲಿ ಕಾಮಿತಫಲದ ಫಲ್ಗುಣಸಖ ಶ್ರೀದ - ವಿಠಲಾಶ್ರಯವಿತ್ತಪಮಿತ್ರ ದ್ವಿರದ ಚರ್ಮಾಂಬರನಾದ ಕುಟಿಲರಹಿತ ಧೂರ್ಜಟಿ ವೈಷ¨sಕಧ್ವಜ ನಿಟಿಲನಯನ ಸಂಕಟವÀ ನಿವಾರಿಸೊ 5
--------------
ಶ್ರೀದವಿಠಲರು
ರುದ್ರದೇವರು ಹರಿ ಭಕುತಿಯ ಪೊಂದಿಸೆಲೋ ಕರುಣದಿ ಗಿರಿಜಾರಮಣ ಪ ದುರುಳ ಜನರು ಅ.ಪ ಗಂಗೆಯ ಶಿರದಲಿ ಧರಿಸಿ ಭುಜಂಗವ ಕೊರಳಲ್ಲಿ ಪೊಂದಿದ ಮಂಗಳ ವರಶೈಲಜೆಯ ಅಪಾಂಗರಸ ಅನಂಗವೈರಿ1 ಶ್ರೀಹರಿಯಾಜ್ಞೆಯನು ವಹಿಸಿ ಮೋಹಶಾಸ್ತ್ರಗಳನು ರಚಿಸಿ ಈ ಮಹಿಯೊಳು ದುರುಳರನ್ನು ಮೋಹಿಸಿದ ಮಹಾದೇವ 2 ಪನ್ನಗಭೂಷಣ ಶಂಕರ ಷಣ್ಮುಗಪಿತ ಚಂದ್ರಮೌಳಿ ಸನ್ನುತಿಸುವೆ ನಿನ್ನ ಮನವಿ ಎನ್ನಲಿ ದಯದಿಂ ಪ್ರಸನ್ನ 3
--------------
ವಿದ್ಯಾಪ್ರಸನ್ನತೀರ್ಥರು
ರುದ್ರಾ ವೀರಭದ್ರ ಅದ್ರಿನಂದನೆ ರಮಣಾ ಪ ರೌದ್ರ ಮೂರುತಿ ದಯಾಸಮುದ್ರ ಎನ್ನನು ಕಾಣೊ ಅ. ಪ. ಮುಪ್ಪುರವ ಗೆದ್ದ ಮುಕ್ಕಣ್ಣ ಮನ್ಮಥ ವೈರಿ ಸರ್ಪಭೂಷಣ ಮೃತ್ಯು ನಿವಾರಣ ವಾಕು 1 ಸದ್ಯೋಜಾತ ಭೂತನಾಥ ಭಕುತರದಾತ ಖದ್ಯೋತ ಲಾವಣ್ಯ ಸುರಜ್ಯೇಷ್ಠನ ಮಧ್ಯವಾಸನ ಛೇದ ಶ್ರೀ ವಿಷ್ಣುವಿನ ಪಾದ ಹೃದ್ಯದೊಳಗಿಟ್ಟ ಜಟಾ ಜೂಟ ಬಲು ಧಿಟ್ಟ2 ಮನೋನಿಯಾಮಕ ಗುರುವೆ ದೈನ್ಯದಿಂದಲಿ ಕರೆವೆ ಜನಿಸಿ ಕಾಡುವ ರೋಗ ಕಳೆಯೊ ಬೇಗ ಅನುಪಮ ವಿಜಯವಿಠ್ಠಲನ ನಾಮಾಮೃತವ ಎನಗುಣಿಸುವುದೋ ಸಾಂಬು ಮರುತ ಪ್ರತಿಬಿಂಬ 3
--------------
ವಿಜಯದಾಸ
ರೋಗವನು ಪರಿಹರಿಸೊ ಗುರು ರಾಘವೇಂದ್ರಾ ಪ ಕರಮುಗಿದು ಬಿನ್ನೈಪೆ ಧೀರ ಯೋಗೇಂದ್ರ ಪಾಲಾ ಅ.ಪ. ಅರಿಯದಾ ತರಳ ತನ್ನ ನಿಜಮತಿಯಿಂದ ದೂಷಿಸಲಿಲ್ಲ ಪರರ ಮಾತನು ಕೇಳಿ ದೂಷಿಸಿದನಲ್ಲದೇ 1 ಏನ ಪೇಳಲಿ ಗುರುವೆ ನಿನ್ನ ಸಮಕರುಣಿಗಳು ಇನ್ನುಂಟೆ ಜಗದೊಳು ಕೇಳಿದ ಕಾರಣದಿ ಬಂದು ಬಿನ್ನೈಸಿದೆ 2 ಬಾಲಕನು ಪರಿಪರಿಯಿಂದ ಪೀಡಿತನಾಗಿ ಬೆಂಡುಬೆಂಡಾದಾತಂದೆವರದಗೋಪಾಲವಿಠ್ಠಲ ಪ್ರೀಯಾ 3
--------------
ತಂದೆವರದಗೋಪಾಲವಿಠಲರು
ರೌದ್ರಿ ಭದ್ರಿ ಮಹಕ್ಷುದ್ರ ಛಿದ್ರಿ ಹಿ ಮಾದ್ರಿಯುದ್ಭವಿಗೆ ನಮೋ ನಮೋ ಪ ರುದ್ರರೂಪೆ ದಾರಿದ್ರ್ಯಮರ್ದನಿ ರುದ್ರನರ್ಧಾಂಗಿಗೆ ನಮೋ ನಮೋ ಅ.ಪ ನಿಗಮಾತೀತೆ ಮಹದಾಗಮನುತೆ ತ್ರೈ ಜಗದ ಮಾತೆಗೆ ನಮೋ ನಮೋ ಸುಗುಣಸಂತಜನರಘನಾಶಿನಿ ಸುಖ ಸ್ವರ್ಗಾಧಿಕಾರಿಗೆ ನಮೋ ನಮೋ 1 ಮೃಡಮೃತ್ಯುಂಜನನೆಡದೊಡೆಯೊಳು ಕಡುಸಡಗರವಾಸಿಗೆ ನಮೋ ನಮೋ ದೃಢತರ ಭಕ್ತರ ದೃಢದ್ವಾಸಿನಿ ಜಗ ದೊಡೆಯ ಮೃಡಾಣಿಗೆ ನಮೋ ನಮೋ 2 ಕಮಲೆ ಕಾತ್ಯಾಯಿನಿ ಉಮೆ ಶಿವೆ ಸಾವಿತ್ರಿ ಕಮಲನೇತ್ರೆಗೆ ನಮೋ ನಮೋ ಸುಮನ ಸೌಭಾಗ್ಯ ಶಮೆ ದಮೆ ದಯಾನ್ವಿತೆ ವಿಮಲ ಚರಿತ್ರೆಗೆ ನಮೋ ನಮೋ 3 ಭಂಡದನುಜಕುಲ ರುಂಡ ಚೆಂಡಾಡಿದ ಪುಂಡ ಉದ್ದಂಡೆಗೆ ನಮೋ ನಮೋ ಖಂಡ ಕಿತ್ತು ಖಳರ್ಹಿಂಡು ಭೂತಕಿತ್ತ ಚಂಡಿ ಚಾಮುಂಡಿಗೆ ನಮೋ ನಮೋ 4 ರಕ್ತಬೀಜರೆಂಬ ದೈತ್ಯರ ಮದ ಮುರಿ ದೊತ್ತಿದ ವೀರೆಗೆ ನಮೋ ನಮೋ ಮತ್ತೆ ಶುಂಭರ ಶಿರ ಮುತ್ತಿ ಕತ್ತಿರಿಸಿದ ಶಕ್ತಿ ಶಾಂಭವಿಗೆ ನಮೋ ನಮೋ 5 ಓಂಕಾರರೂಪಿಣಿ ಹ್ರೀಂಕಾರಿ ಕಲ್ಯಾಣಿ ಶಂಕರಿ ಶರ್ವಾಣಿಗೆ ನಮೋ ನಮೋ ಮ ಹಂಕಾಳಿ ನತಸುಖಂಕರಿ ಪಾರ್ವತಿ ಶಂಕರನರಸಿಗೆ ನಮೋ ನಮೋ 6 ಶೌರಿ ಔದರಿಯ ಶಾರದೆ ಶ್ರೀಕರಿ ಶೂರ ಪರಾಂಬೆಗೆ ನಮೋ ನಮೋ ಪಾರಾವಾರ ದಯೆಕಾರಿ ನಿರಾಮಯೆ ಧೀರ ಚಿದ್ರೂಪೆಗೆ ನಮೋ ನಮೋ 7 ಉಗ್ರರೂಪಿ ಭವನಿಗ್ರಹ ದುಷ್ಟ ಸ ಮಗ್ರ ಹರಿಣಿಗೆ ನಮೋ ನಮೋ ಆಗ್ರಭಕ್ತರಿಷ್ಟ ಶೀಘ್ರ ಕೊಡುವ ಜೈ ದುರ್ಗಾದೇವಿಗೆ ನಮೋ ನಮೋ 8 ಹೈಮಾವತಿಯೆ ನಿರ್ಮಾಯೆ ಮೂರುತಿ ಕೋಮಲ ಹೃದಯೆಗೆ ನಮೋ ನಮೋ ಭೀಮಪರಾಕ್ರಮಿ ರಾಮದಾಸಜನ ಪ್ರೇಮಪೂರ್ಣಿಗೆ ನಮೋ ನಮೋ 9
--------------
ರಾಮದಾಸರು
ಲಕುಮಿ ರಮಣನು ಹೆಜ್ಜೆನಿಕ್ಕಲುಕಿಂಕಿಣಿ ಕಿಂಕಿಣಿ ಎಂದಿವೆ ಟೊಂಕದ ಗೆಜ್ಜೆ ಪ. ಲೆಕ್ಕವಿಲ್ಲದ ಹಗ್ಗ ತಂದುಚಕ್ಕನೆ ಕಟ್ಟೋಳು ಬಂದುಚಿಕ್ಕಟೊಂಕಲಿಂತೆಂದುಅಕ್ಕಜ ಬಟ್ಟಳಾಕೆ ಬಂದು1 ಧಿಟ್ಟನು ವರಳೆಳದು ತಂದುಥಟ್ಟನೆ ಮರ ಮುರಿದು ಬಂದುಸ್ಪಷ್ಟವಾದರೊ ಸೂರ್ಯರೆಂದುಕೊಟ್ಟ ಕೃಷ್ಣ ಅಭಯವೆಂದು2 ತೊಡೆಯ ನೇರುವಳೆ ಬಂದುನಡವ ವರ್ಣಿಸೆವೆÉಂದುನುಡಿಯಲಾರೆವಿತಂಡನುಡಿದಳುರಮೆ ಬಂದು 3
--------------
ಗಲಗಲಿಅವ್ವನವರು
ಲಕುಮಿವಲ್ಲಭ ಹರಿಯ ಮಂದಿರದಿಂದ ಬಕುಳೆ ಬಂದ ಪರಿಯ ನಗುತ ಸದ್ಯುಕುತಿಯಿಂದಲಿ ಪೇಳ್ದಳು ಪ. ಯಾರು ಬಲ್ಲರಿವನ ಸಂಸ್ಥಿತಿಯನ್ನು ನೀರೆ ನೀ ಪೇಳ್ವದನ ದಾರಿಯ ಪೇಳೆ ಜಾಣೆ 1 ಕ್ಷೀರಾಂಬುಧಿವಾಸನ ಸಕಲಗುಣ ವಾರುಧಿ ವರದೇಶನ ಸಾರಿ ಸಾರಿಗೆ ಸರ್ವ ಸುರಮುನೀಶ್ವರರೆಲ್ಲ ಸೇರಿ ಬಾಳುವರೀತನ 2 ಮಾತಿಗೆ ದೊರೆಯನಂತೆ ಮನೋಗತಿ ನೀತಿಯು ನಡೆಯದಂತೆ ಜಾತಿ ಗೋತ್ರ ಬಂಧು ಜನರಿಲ್ಲದವನಿಗಿನ್ಯಾತಕೆ ಪರಿಣಯವು 3 ಭೂತೇಂದ್ರಿಯ ಮನವು ಬಲಿಷ್ಠ ಮಹಾತತ್ವ ಹಂಕೃತಿಯು ಶ್ರೀ ತರುಣಿಯ ಗುಣ ತ್ರಯಮುಖ ತತ್ವ ಸಂಘಾತವೀತನಿರಲು 4 ಮನೆಯ ಕಟ್ಟಿದನೆಂಬೊರು ನಿಜವಾಗಿ ಪೇಳು 5 ಸಕಲ ಜಗನ್ನಿವಾಸ ಸಾಂಗೋಪಾಂಗ ಮುನಿಗಳ ಸರಿವನಂತೆ ತನುಮನದಲಿ ತನ್ನ ನೆನೆವರ ಕೃತ್ಯಗಳನು ತಾನೆ ಮಾಳ್ಪನಂತೆ 6 ಮನೆವಾರ್ತೆಗಳ ಬಿಟ್ಟು ಸಂಚರಿಸುವ ಮುನಿಗಳ ಸರಿವನಂತೆ ತನುಮನದಲಿ ತನ್ನ ನೆನೆವರ ಕೃತ್ಯಗಳನು ತಾನೆ ಮಾಳ್ಪನಂತೆ 7 ದಾಸರ ಪಾಲಿಪುದು ಎಂದೆಂದಿಗು ಶ್ರೀಶನ ಮಹಬಿರುದು ದೋಷದೂರನಾದರಿಂದ ಮೌನಿ ಮನೋವಾಸನಾಗಿಹ ನೆರದು 8 ಕುಲಹೀನನಾಗಿ ಕಲ್ಪಾಂತದೊಳಿರುವಗೆ ಲಲನೆಯ ನಿಪ್ಪುದೆಂತೆ 9 ಸುಧೆಯನು ತಾನೆ ತಂದ ಮುದವ ತೋರಿದ ಮುಕುಂದ 10 ಹೊಡದಾಡಿ ಬರುವನಂತೆ ಕೊಡುವದೆಂತೆ 11 ಮಗುವಿನ ಮಾತ ಕೇಳಿ ತಕ್ಷಣ ನರಮೃಗನಾಗಿ ಕೋಪತಾಳಿ ಬಗೆದು ಬಲಿಷ್ಠ ದೈತ್ಯನು ಸುಲಭದಿ ಬೇಗ ತೆಗೆದನು ಕರುಳನಂತೆ 12 ಸಿರಿಯನಾಳುವನಾದರೆ ದೈತ್ಯರ ಮುಂದೆ ತರಿವುದು ಸರಿಯೆ ನೀರೆ ಮರುಳು ಮಾತುಗಳಾಡಲ್ಯಾತಕೆ ಸುಮ್ಮನೆ ಥರವಲ್ಲ ಹಿಂದೆ ಸಾರೆ 13 ಕೃತ್ರಿಮ ದ್ವಿಜನಿವನು ಭೂಭಾರಕ ಕ್ಷತ್ರ ಸಮೂಹವನು ಶಸ್ತ್ರ ಪಿಡಿದು ಬುಡ ಕತ್ತ್ರಿಸಿ ಮಡುಗಳ ನೆತ್ರದಿ ರಚಿಸಿದನು 14 ದಾನವರನು ಗೆಲಲು ಚಪಲ ಬುದ್ಧಿ ವಾನರರನು ಒಲಿಸಿ ಪೇಳ್ವ ಹೀನವಾರ್ತೆಗಳೇನಿದು 15 ಧರೆಯ ಭಾರವನಿಳುಹಿ ಸಕಲ ಸುರವರ ಮುನಿಗಳ ಸಲಹಿ ತೆರವ ತೋರಿದ ಕೃಷ್ಣನು 16 ಜೈನರ ಸಭೆಯೊಳಗೆ ಮೈಯೊಳು ವಸ್ತ್ರಹೀನನಾಗಿರುವ ಬಗೆ ನಾನರಿಯೆನೆ ಬಹು ಮಾನ ಬಿಟ್ಟವನಿಗೆ ಏನೆಂದು ಮಗಳೀವನೆ 17 ಕೊಲುವನು ಖಡ್ಗದಲಿ ನಿಖಿಳ ಕುಲವನುದ್ಧರಿಸುವನು 18 ಏನೆಂದರು ಮನದಿ ನಿರ್ಣಯ ತೋರದೇನು ಮಾಡಲಿ ಕೆಳದಿ ಮಾನಿನಿ ಶಿರೋಮಣಿಯೆ 19 ದೋಷ ಲೇಶಹೀನನು ಸಕಲಗುಣ ಭೂಷಿತ ಶ್ರೀವರನು ಶೇಷ ಗಿರೀಶನೆನಲು ತನ್ನ ಮಗಳೀವ ಭಾಷೆಕೊಟ್ಟಳು ಧರಣಿ 20
--------------
ತುಪಾಕಿ ವೆಂಕಟರಮಣಾಚಾರ್ಯ
ಲಕುಮೀಶ ನಿನಗಾರತಿ ಭಕುತಿಯಿಂದೆತ್ತುವೆ ಸಕಲರ ಸುಖಕರ ಭಕ್ತರಿಗೊಲಿಯುವ ರುಕ್ಮಿಣಿಯರಸನೆ ಪ. ರಮಾಪತಿ ನಿನ್ನನು ನಮಿಸಿ ನುತಿಸುತ್ತಿರ್ಪೆನು ಕಮಲಾಂಘ್ರಿಯ ಭ್ರಮರವೆಂದಮಲನೆ ಕೈಪಿಡಿ ರಮಣನೆ ನುಡಿ ನುಡಿ1 ಇನಕುಲಮಂಡನ ವನರುಹಲೋಚನ ಜನಕಜಾ ಸುಪ್ರೇಮನೆ ಚಿನ್ಮಯರೂಪನೆ ಮನುಮುನಿ ಸೇವ್ಯನೆ 2 ಸುರನರ ಪೂಜಿತ ಸರಸಿಜ ಭವಪಿತ ಕರುಣಾಕರ ನರಕೇಸಂ ಮರೆಹೊಕ್ಕೆನು ಪೊರೆ ವರಶೇಷಗಿರಿದೊರೆ 3
--------------
ನಂಜನಗೂಡು ತಿರುಮಲಾಂಬಾ
ಲಂಕೆ ನಿರ್ಧಾಮ ಮಾಡಲು ಇಲ್ಲದೆ ಈ ಸೀತಾ ಲಲನೆ ಕ್ಷೇಮವು ತರಲು ಶಂಕೆಯಿಲ್ಲದ ಬಿರುದಾಂಕನ ಸೇವಕರು ಅಂಕರಲಿ ಪೇಳಿರಲಧಿಕ ಬಲವಂತರೆಲ್ಲಾ ಪ ಭೇದಿಸಿ ದೈತ್ಯರ ಹಿಡಿಯಲೊ ಆಪುರಿಸೇರಿ ಹೊಡೆದು ಮಾರಿಯ ಮಾಡಲು ದೃಢವು ಎನ್ನಯಮಾತುಬಿಡದೆ ಆರಾವಣನಾ ಹೊಡೆದು ಹೆಡ ಮುಡಿ ಕಟ್ಟಿ ----ಲ್ಲಿ ತರಲು ಇಲ್ಲದೆ 1 ವಾರಿಧಿ ಲಂಘಿಸಲು ಒಳಹೊಕ್ಕು ದೈತ್ಯ ವಂಶವೇ ಭೇದಿಸಲೆ ಸಾರಿ ಹೇಳುವೆ ಇನ್ನು ಸರಸಜ್ಞರೆಲ್ಲ ಕೇಳಿ ವಾರೆಲ್ಲ ಎನ್ನ ಮಾತು ಒಂದೇ ನಿಮಿಷದಿ ಹೇಳಿನ್ನೂ 2 ನಿಟ್ಟಾಗಿ ಒಳಹೋಗಲು ಹೋಗುತಲಿ ನಗರಸುಟ್ಟು ಬೂದಿಯ ಮಾಡಲು ಘಟ್ಟ್ಯಾಗಿ ಕೇಳಿರಿನ್ನು ಘನ 'ಹೊನ್ನವಿಠ್ಠಲ 'ನಾದ ಧಿಟ್ಟ ಶ್ರೀರಾಮರ ಭಂಟ ಹನುಮಂತನಾನು 3
--------------
ಹೆನ್ನೆರಂಗದಾಸರು
ಲಕ್ಷುಮೀನಾರಾಯಣ ಜಯಲಕ್ಷುಮೀ ನಾರಾಯಣ ಲಕ್ಷುಮೀನಾರಾಯಣ ಜಯ ಲಕ್ಷುಮೀ ನಾರಾಯಣ ಪ. ಪಾದ ದಾನವ ಗರ್ವಹರಣ ಗದಾದಿ ಧಾರಣ ಪರ್ವತಾರಿ ವರ ಪ್ರದ 1 ನಂಬಿಕೊಂಡಿಹೆ ನಿನ್ನ ದಿವ್ಯ ಪದಾಂಬುಜಗಳನು ಸರ್ವಕಾಲದಿ ಮನದೊಳಗಿಂಬುಗೊಳು ಕಮಲಾಂಬಕ 2 ಆರು ಸಂಖ್ಯೆಯ ಕಳ್ಳರೆನ್ನನು ಗಾರುಮಾಡುವರಾದರಿಂದತಿ ಧೀರ ನಿನ್ನ ಪದಾರವಿಂದಕೆ ದೂರುವೆನು ರಘುವೀರನೆ 3 ದುರ್ಮತಿಗಳಾದಸುರಹರಣಕೆ ಭರ್ಮಗರ್ಭನು ಬಂದು ಸ್ತುತಿಸಲು ಧರ್ಮಸಂಸ್ಥಾಪಿಸುತ ಬಹು ಶುಭಕರ್ಮ ತೋರುವ ಕರುಣಿಯೆ 4 ಸಪ್ತ ಋಷಿಗಳ ಕೂಡಿಕೊಂಡತಿ ಭಕ್ತಿಯಿಂದಲಿ ನಿನ್ನ ಭಜಿಸಿದ ಸತ್ಯವ್ರತನಿಗೆ ಸಕಲ ಶ್ರುತಿಗಳ ತತ್ವ ತಿಳಿಸಿದ ಮತ್ಸ್ಯನೆ 5 ಮುಳುಗಿಕೊಂಡಿಹ ಅಮಿತಗುರು ಮಂದರವ ಧರಿಸುತ ಅಮೃತರಸ ತೆಗೆದಿತ್ತನೆ 6 ದೈತ್ಯನ ತರಿದು ಬಿಸುಟು ವಿ- ಜನಿತ ಪವಿತ್ರ ಯಜ್ಞ ವರಾಹನೆ 7 ಘಡುಘಡಿಸಿ ಕಂಬದೊಳು ಬಂದ ಸಿಡಿಲಿನಂತಿಹ ನಖದಿ ದೈತ್ಯನ ಒಡಲ ಬಗೆದನು ಕೋಪದಿಂದ 8 ದಾನಕೊಂಡನಾನೆವನದಿ ದಾನವಾಹೃತ ಧರೆಯ ಕಸ್ಯಪಸೂನುಗಳಿಗೊಲಿದಿತ್ತನೆ 9 ದುಷ್ಟಭೂಭುಜಭಾರದಿಂದತಿ ಕಷ್ಟಪಡುತಿಹ ಧರೆಯ ಕರುಣಾ ನೃಪರ ಕಡಿದ 10 ನೀರಜಾವದನಾರವಿಂದ ಮಹಾ ರಸಾಸ್ವಾದನ ಪದ ಕಪಿವೀರನಿಗೆ ಸ್ವಾರಾಜ್ಯ ನೀಡಿದ ಮಾರುತಿಗೆ ದಯ ಮಾಡಿದ 11 ಬಾಲ ಲೀಲೆಯ ತೋರಿ ಗೋಪಕ ಬಾಲೆಯರ ಕೂಡಾಡಿದೆ ಖೂಳಕಂಸನ ಕೆಡಹಿ ದಾನವಮೂಲ ಕಿತ್ತು ಬಿಸಾಡಿದೆ 12 ಜೈನರನು ಮೋಹಿಸುವೆನೆಂದನುಮಾನವಿಲ್ಲದೆ ನಗ್ನನಾಗಿ ಹೀನ ಬುದ್ಧಿಯ ತಿಳಿಸಿ ತ್ರಿಪುರವ ಹಾನಿಗೈಸಿದ ಬೌದ್ಧನೆ 13 ಸುಧೆಯನು ಕರೆದು ಶಿರದಲಿ ತುಂಗ ವಿಷಯ ತರಂಗ ತಪ್ಪಿಸು ಅಂಗಭಂಗವ ಶಿಂಗನೆ 14 ಮಿಂಚಿನೊಡ್ಡಿದ ಮೇಷನಂದದಿ ಪಂಚವರ್ಣದ ತುರಗವೇರಿ ಸಂಚರಿಸಿ ಮ್ಲೇಂಛರನು ಕೊಲ್ಲಿಸಿ ಲಾಂಛಜೀವನ ವರದನೆ 15 ಮಂದಿರದಿ ನೀ ಬಂದು ರಕ್ಷಿಪೆ ಎಂದು ಸಕಲಾನಂದಗೊಂಡಿಹೆ ಇಂದಿರೇಶನೆ ಎಂದಿಗೂ ಈ ಅಂದದಿಂದಲಿನಿಂದ ಸಲಹು 16 ಕೇಶವಾದಿ ದ್ವಿದಶರೂಪವು ಮಾಸಗಳಿಧಿಷ್ಠಾನನಿಗೆ ಪ- ರೇಶ ಕಡೆಯಲಿರುವ ಕಾರ್ತಿಕವಾಸ ದಾಮೋದರ ಹರನೆ 17 ಬಳಲಿ ಕರ್ಮವ ಮಾಡಲಾರೆ ನಳಿನಜಾರ್ಜಿತ ನಿನ್ನ ಪಾದದ ನೆಳಲನಂಬಿ ಸುಮ್ಮನಿರುವೆ 18 ಅಖಿಳದೋಷ ನಿವಾರಣಾದ್ಭುತ ಸಕಲಸದ್ಗುಣಧಾರಣಾ ಕುಂಡಲ ಧಾರಿ ವೆಂಕಟಶಿಖರ ವರ ಸುಖಕಾರಣಾ 19
--------------
ತುಪಾಕಿ ವೆಂಕಟರಮಣಾಚಾರ್ಯ
ಲಕ್ಷ್ಮಿ ರಮಣಗೆ ಮಾಡಿದಳು ಉರುಟಾಣಿÉ ಪ. ಇಳೆಯೊಳಗತಿಜಾಣೆ ಸುಂದರ ಫಣಿವೇಣಿ ಅ.ಪ. ಕಚ್ಛಪ ಕಿರನೆ ಕೇಸರಿಯಂದದ ಮುಖನೆ ಸ್ವಚ್ಛಮುಖವ ತೋರೈ ಅರಿಸಿನ ಹಚ್ಚುವೆನು 1 ದುರುಳ ಕ್ಷತ್ರಿಯರನ್ನು ಕೊರಳ ತರಿದ ಹರಿಯೆ ಹರುಷದಿಂ ಕೊರಳ ತೋರೈ ಗಂಧವ ಹಚ್ಚುವೆನು 2 ದಶರಥsÀನಲಿ ಜನಿಸಿ ದಶಮುಖನ ಸಂಹರಿಸಿ ಕುಸುಮ ಮುಡಿಸುವೆನು 3 ಹರಿನಾರು ಸಾಸಿರ ಸುದತಿಯರನಾಳಿದನೆ ಪದುಮಕರವ ತೋರೈ ವೀಳ್ಯವ ಕೊಡುವೆನು 4 ವಸನರಹಿತನಾಗಿ ವಸುಧೆಯ ತಿರುಗಿದೆ ಬಿಸಜನಾಭನೆ ನಿನಗೆ [ವಸನ ಉಡಿಸುವೆನು] 5 ವರ ತುರಗವನೇರಿ ಕಲಿಯ ಸಂಹರಿಸುವಿ ಸಿರಿಹಯವದನನೆ ಆರತಿಯೆತ್ತುವೆನು 6
--------------
ವಾದಿರಾಜ
ಲಕ್ಷ್ಮೀ ನಾರಾಯಣ ವಿಠಲ | ಪೊರೆಯ ಬೇಕಿವಳಾ ಪ ವಾಹನ ದೇವ | ಲಕ್ಷುಮಿಯ ರಮಣಾ ಅ.ಪ. ಸೃಷ್ಟಿ ಸ್ಥಿತಿ ಸಂಹಾರ | ಅಷ್ಟಕ್ಕು ಕಾರಣನೆಕಷ್ಟಗಳ ಪರಿಹರಿಸಿ | ಕಾಪಾಡೊ ಹರಿಯೇ |ಶಿಷ್ಟ ಸದಾಚಾರ | ನಿಷ್ಠೆಯಲಿ ಗೈಯ್ಯುವಳುಶಿಷ್ಟೇಷ್ಟ ಹರಿಯೆ ಸದ | ಭೀಷ್ಟಗಳಗರೆಯೋ 1 ವಿೂಸಲೆಂದೆನಿಸಿರುವ | ದಾಸತ್ವದಾಕಾಂಕ್ಷೆಸಾಸಿರಕ್ಕೋರ್ವರಿಗೆ | ಲೇಸು ಪುಟ್ಟವುದೋಈ ಸಮಯದಲ್ಲೀಕೆ | ಆಶಿಸುತ್ತಿಹಳಯ್ಯಕೇಶವನೆ ಒಲಿದಿವಳ | ದಾಸ್ಯ ಸ್ವೀಕರಿಸೋ 2 ಶುದ್ಧ ತರತಮ ಜ್ಞಾನ | ಮಧ್ವೇಶನಲಿ ಭಕುತಿಇದ್ವದಕೆ ತೃಪ್ತಿಯಿಂ | ಬದ್ಧ ವೈರಾಗ್ಯಾಸಿದ್ಧಿಸುತ ಸಾಧನದಿ | ಬದ್ಧ ಕಂಕಣಳೆನಿಸೊಅದ್ವಿತೀಯನೆ ಹರಿಯೆ | ಮಧ್ವಾಂತರಾತ್ಮಾ 3 ಮುಪ್ಪುರದ ವೈರಿನುತ | ಸರ್ಪಶಯನನೆ ದೇವಾಸ್ವಪ್ನ ಸೂಚನೆಯಂತೆ | ಗೋಪ್ಯದಂಕಿತವಾಸುಪ್ತೀಶ ಇತ್ತಿಹೆನೊ | ಒಪ್ಪಿ ಕೈಪಿಡಿ ಇವಳಗುಪ್ತ ಮಹಿಮನೆ ದೇವ | ಆಪ್ರಕಟ ಹರಿಯೇ 4 ಶರ್ವಾದಿ ದಿವಿಜೇಡ್ಯ ಶಾರ್ವರೀಕರ ಪಾಲದುರ್ವಾದಿ ತಿಮಿರಕ್ಕೆ ಮಾರ್ತಾಂಡ ರೂಪೀದರ್ವಿ ಜೀವಿಯ ಕಾವ | ನಿರ್ವಹಣೆ ನಿನ್ನದೋಗುರ್ವಂತರಾತ್ಮ ಗುರು | ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ಲಕ್ಷ್ಮೀ ಬಾರಮ್ಮ ಮುತ್ತೈದೆ ಬಾರಮ್ಮ ಪ ಲಕ್ಷ್ಮೀರಮಣನ ವಕ್ಷಸ್ಥಳದಲಿ ರಕ್ಷಿತಳಾದೆ ಸುಲಕ್ಷಣ ದೇವಿ 1 ಗೆಜ್ಜೆಯ ಕಾಲಿನ ನಾದಗಳಿಂದಲಿ ಸಜ್ಜನರಿಗೆ ನೀ ಅಭಯವ ಕೊಡುತಲಿ2 ಕಮಲನಾಭ ವಿಠ್ಠಲನೊಡಗೂಡುತ ಭ್ರಮರ ಕುಂತಳೆ ಸೌಭಾಗ್ಯದ ನಿಧಿಯೆ3
--------------
ನಿಡಗುರುಕಿ ಜೀವೂಬಾಯಿ
ಲಕ್ಷ್ಮೀದೇವಿ 13 ಭಾಗ್ಯವ ಕೊಡು ತಾಯೆ ಪ ಭಾರ್ಗವಿ ನಿನ್ನಯ| ಪದಯುಗಕೆರಗುವೆ| ಭಾಗ್ಯದ ಲಕ್ಷ್ಮೀ ಸೌ| ಭಾಗ್ಯದ ನಿಧಿಯೇ ಅ. ಪ ಸಾಗರಸಂಜಾತೆ| ದೇವಿ| ನಾಗವರದಪ್ರೀತೆ || ಯೋಗಿಜನಾವಳಿ| ಮಾನಸಪೂಜಿತೆ | ಅಗಣಿತಗುಣಮಣಿ| ತ್ರಿಜಗದ್ವಂದಿತೆ 1 ಸುರುಚಿರಸುಮಗಾತ್ರೆ | ದೇವಿ| ಹಿಮಕರನಿಭವಕ್ತ್ರೆ || ಕಿನ್ನರ | ಸುರಮುನಿ ಪೂಜಿತೆ | ಕಾಮಿತವೀಯುವ || ಕರುಣಾಕರೆಯೆ 2 ಜನನಿಯೆ ನಿರತವು ನೀ | ಪ್ರೇಮವ | ನಿರಿಸುತಲೆನ್ನೊಳು ನೀ | ಕನಕದ ವೃಷ್ಟಿಯ | ಕರೆಯುತಲನುದಿನ | ಮನ್ಮನದಿಷ್ಟವು | ಸಿದ್ಧಿಸುವಂದದ 3 ಅಹಿಪತಿ ಶಯನನಿಗೆ | ಮೋಹದ | ಮಹಿಷಿಯು ನೀನಾಗೆ || ಮಹಿಮಾಕರೆ ನೀ | ಮಹಿಯೊಳಗನಿಶವು | ಇಹಪರ ಸುಖವನು | ಭವಿಸುವ ತೆರದಾ 4 ಅಜಭವಸುರವಿನುತೆ | ದೇವಿ | ಸುಜನಾವಳಿಪ್ರೀತೆ || ಗಜವಾಹಿನಿ ವರ | ಮದಗಜಗಮನೆಯೆ | ವಿಜಯವಿಠಲಪ್ರಿಯೆ ಶ್ರೀ ಗಜಲಕ್ಷ್ಮಿಯೆ 5 ಶುಭ | ಮಂಗಳೆ ಸುಪವಿತ್ರೆ || ಮಂಗಳಾಂಗಿ ನರ | ಸಿಂಗನ ರಮಣಿಯೆ | ಮಂಗಳಕಾರ್ಯಗ | ಳನುದಿನವೆಸಗುವ 6 ಪಂಕಜದಳನೇತ್ರೆ | ದೇವಿ | ಕಿಂಕರನುತಿಪಾತ್ರೆ || ಶಂಖಚಕ್ರಾಂಕಿತ | ಶ್ರೀ ವೈಕುಂಠನ |ಅಂಕದಿ ಮೆರೆವಖಿ | ಳಾಂಕ ಮಹಿಮಳೇ 7
--------------
ವೆಂಕಟ್‍ರಾವ್