ಒಟ್ಟು 10544 ಕಡೆಗಳಲ್ಲಿ , 133 ದಾಸರು , 5597 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಶರಣು ನಿನ್ನ ಚರಣಗಳಿಗೆ ಭಾರತೀಶನೆ |ಕರವಪಿಡಿದು ಸಲಹೋ ಬಿಡದೆ ಭಾರತೀಶನೆ ಪಎಲ್ಲ ಕಡೆಗೆ ವ್ಯಾಪ್ತ ನೀನೆ ಭಾರತೀಶನೆ |ಅಲ್ಲಿ ವಿಷವ ಕುಡಿದೆಯೆಂದು ಭಾರತೀಶನೆ ||ಗೆಲ್ಲಿಸಿದೆಯೊ ಸರ್ವ ಸುರರ ಭಾರತೀಶನೆ |ಬಲ್ಲಿದನು ನಿನಗೆಣೆ ಯಾರೋ ಭಾರತೀಶನೆ1ಅಂಜನಾ ಕುಮಾರನಾಗಿ ಭಾರತೀಶನೆ |ಕಂಜನಾಭನಂಘ್ರಿ ಭಜಿಸಿ ಭಾರತೀಶನೆ ||ಲಿಂಜದುದಧಿದಾಟಿ ಪೋಗಿ ಭಾರತೀಶನೆ |ಸಂಜಿ ಚರರ ಸಂಹರಿಸಿದೆಯೊ ಭಾರತೀಶನೆ2ಕುಂತಿ ಜಠರದಿಂದ ಜನಿಸಿ ಭಾರತೀಶನೆ |ಹಂತ ಕೌರವರನ ತರಿದಿ ಭಾರತೀಶನೆ ||ಕಂತುಪಿತನ ಕರುಣ ಪಡೆದೆ ಭಾರತೀಶನೆ |ಅಂತಗಾಣೆ ನಿನ್ನ ಮಹಿಮೆಗೆ ಭಾರತೀಶನೆ 3ಯತಿಯರೂಪಇಳಿಯೊಳಾಗಿ ಭಾರತೀಶ£ É |ಮತಿಯ ಸರ್ವ ಬುಧಂಗಿತ್ತೆ ಭಾರತೀಶನೆ ||ಸತತ ನಿನ್ನ ಪೂಜಿಪರಿಗೆ ಭಾರತೀಶನೆ |ಗತಿಯ ಕೊಡುವೆ ದೋಷ ಕಳೆದು ಭಾರತೀಶನೆ 4ಘನ್ನ ಪ್ರಾಣೇಶ ವಿಠಲ ನಾಳೆ ಭಾರತೀಶನೆ |ಬಿನ್ನಪವನು ಲಾಲಿಸುವದೋ ಭಾರತೀಶನೆ ||ನಿನ್ನ ದಾಸನೆನಿಸಬೇಕೋ ಭಾರತೀಶನೆ |ಅನ್ಯ ವಿಷಯವೊಂದನೊಲ್ಲೆ ಭಾರತೀಶನೆ 5
--------------
ಪ್ರಾಣೇಶದಾಸರು
ಶರಣು ಭಾರತೀ ತಾಯೆ |ಕರವಬಿಡದಲೆ ಕಾಯೆ ||ಮರುತದೇವನ ರಮಣಿ | ಸುರ ನದಿಯ ಭಗಿನಿ ಪಪ್ರದ್ಯುಮ್ನ ದೇವಸುತೆ | ರುದ್ರಾದಿ ಸುರ ವಿನುತೆ ||ಭದ್ರ ವಿಗ್ರಹೆ ದಯಾ ಸ | ಮುದ್ರೆ ಕುಲಿಶೆ ||ಅದ್ರಿಯೋಪಮ ದೋಷ | ಕಿದ್ದ ದುರ್ಮತಿಕ್ಲೇಶ||ವೊದ್ದು ನಿನ್ನವನೆನ್ನು | ಬುದ್ಧಿ ಕೊಡು ಇನ್ನೂ 1ನೀರಜಾಂಬಕೆ ಯನಗೆ | ತೋರು ಸಾಧನ ಕುನಗೆ |ಜಾರಿಸು ಭಕುತಿಯನ್ನು | ತೋರು ಕರುಣಾ ||ವಾರಿಧಿಹರಿಯಪಾದ| ಆರಾಧಿಸಲುಮೋದ|ವಾರವಾರಕೆ ಈಯೇ |ವಾರಣಗಮನೆಯೇ 2ಪ್ರಾಣೇಶ ವಿಠಲನ | ಧ್ಯಾನದೊಳಗಿರಿಸು ಮನ |ವಾಣೀ ಪದವೈದುವಳೇ |ಮಾನನಿನ್ನದೆಲೆ ||ಹೀನ ವಿಷಯಗಳೊಲ್ಲೆ | ನೀನೇ ಸ್ವಾಂತದಿ ನಿಲ್ಲೆ |ಕ್ಷೋಣಿಯೊಳಗತಿ ಮಾನೀ | ಜ್ಞಾನೀ ಅಹಿವೇಣೀ 3
--------------
ಪ್ರಾಣೇಶದಾಸರು
ಶರಣು ಮಂಜುನಾಥಾ | ಪಾಲಿಸು || ಶರಣ ಜನರ ಪ್ರೀತಾ ||ಮರೆಯದೆ ನಿನ್ನಯ ಚರಣವ ನಂಬಿದ |ತರಳನ ಮೇಲ್ ದಯವಿರಿಸೈ ಜಯ ಜಯ 1ಧರ್ಮಾಧರ್ಮವನೂ ಶೋಧಿಪ | ಧರ್ಮದೇವ ನೀನು ||ಧರ್ಮ ಸುಕರ್ಮದ ಮರ್ಮವನರಿಯುತಾ ||ಧರ್ಮಸ್ಥಳದಲಿ ನೆಲಸಿದೆ ಜಯ ಜಯ 2ಕಪ್ಪಕಾಣಿಕೆಗಳನೂ | ದಿನ ದಿನ ತಪ್ಪದೆ ತರಿಸುವನೂ ||ಸರ್ಪಧರನೆ ನಿನ್ನಪ್ಪಣೆಯಿಂದ | ಣ್ಣಪ್ಪನು ನರರನು -ಒಪ್ಪಿಸಿ ಜಯ ಜಯ 3ದುಷ್ಟ ಜನರು ಬರಿದೇ | ಕೊಡುತಿಹ | ಕಷ್ಟವ ನಿನಗೊರೆದೇ |ಸೃಷ್ಟಿಪಾಲ ಯನ್ನ ರಕ್ಷಿಸಬೇಹುದು |ಕೆಟ್ಟೆನಯ್ಯಾ ನಿಟಿಲಾಕ್ಷನೆ ಜಯ ಜಯ 4ಚಂದ್ರಧರನೆ ಕಾಯೋ | ಕರುಣಾ-||ನಂದ ವರವನೀಯೋಮಂದರಧರಗೋ|ವಿಂದದಾಸನನಿಂದು |ಚಂದದಿ ಪಾಲಿಸು |ವಂದಿಪೆ ಜಯ ಜಯ 5
--------------
ಗೋವಿಂದದಾಸ
ಶರಣು ಶರಣು ಶರಣ್ಯವಂದಿತ ಶಂಖಚಕ್ರಗದಾಧರ |ಶರಣು ಸರ್ವೇಶ್ವರ ಅಹೋಬಲ ಶರಣ ಸಲಹೋ ನರಹರಿ ಪ.ಶೀಲದಲಿ ಶಿಶು ನಿನ್ನ ನೆನೆಯಲುಕಾಲಲೋತ್ತುತ ಖಳರನು |ಲೀಲೆಯಿಂದಲಿ ಚಿಟಿಲು ಭುಗಿಭುಗಿ -ಲೆನುತ ಉಕ್ಕಿನ ಕಂಬದಿ ||ಖೂಳದೈತ್ಯನ ತೋಳಿನಿಂದಲಿ ಸೀಳಿಹೊಟ್ಟೆಯ ಕರುಳನು ||ಮಾಲೆಯನು ಕೊರಳೊಳಗೆ ಧರಿಸಿದಜ್ವಾಲನರಸಿಂಹಮೂರ್ತಿಗೆ 1ಖಳಖಳಾ ಖಳನೆಂದು ಕೂಗಲು ಕೋಟಿ ಸಿಡಿಲಿನ ರಭಸದಿ ||ಜಲಧಿ ಗುಳಗುಳನೆದ್ದು ಉಕ್ಕಲು ಜ್ವಲಿತ ಕುಲಗಿರಿ ಉರುಳಲು ||ನೆಲನು ಬಳಬಳನೆಂದು ಬಿರಿಯಲು ಕೆಳಗೆ ದಿಗ್ಗಜ ನಡುಗಲು ||ಥಳ ಥಳಾ ಥಳ ಹೊಳೆವ ಮಿಂಚಿನೊಲ್ಹೊಳೆವ ನರಸಿಂಹ ಮೂರ್ತಿಗೆ 2ಕೋರೆ ಕೆಂಜೆಡೆ ಕಣ್ಣು ಕಿವಿ ತೆರೆ -ಬಾಯಿ ಮೂಗಿನ ಶ್ವಾಸದಿ||ಮೇರುಗಿರಿ ಮಿಗಿಮಿಗಿಲು ಮಿಕ್ಕುವ ತೋರ ಕಿಡಿಗಳ ಸೂಸುತ ||ಸಾರಿಸಾರಿಗೆ ಹೃದಯರಕುತವ ಸೂರೆ ಸುರಿಸುರಿದೆರಗುತಘೋರರೂಪಗಳಿಂದ ಮೆರೆಯುವ ಧೀರ ನರಹರಿಮೂರ್ತಿಗೆ3ಹರನು ವಾರಿಜಭವನು ಕರಗಳ ಮುಗಿದು ಜಯಜಯವೆನುತಿರೆ ||ತರಳ ಪ್ರಹ್ಲಾದನಿಗೆ ತಮ್ಮಯ ಶರಿರಬಾಧೆಯ ಪೇಳಲು ||ಕರುಣಿ ಎನ್ನನು ಕರುಣಿಸೆನ್ನಲು ತ್ವರದಲಭಯವನೀಡುತ ||ಸಿರಿಬರಲು ತೊಡೆಯಲ್ಲಿ ಧರಿಸಿದ ಶಾಂತ ನರಹರಿಮೂರ್ತಿಗೆ4ವರವ ಬೇಡಿ ದನಿರುವ ತಂದೆಯ ಪರಿಯನೆಲ್ಲವ ಬಣ್ಣಿಸಿ ||ನಿರುತದಲಿ ನಿನ್ನೆರಡು ತೊಡೆಯಲಿ ಶರೀರವಿರಲೆಂದೆನುತಲಿ ||ಸುರರು ಪುಷ್ಪದ ವೃಷ್ಟಿಗರೆಯಲು ಸರಸಿಜಾಕ್ಷನು ಶಾಂತದಿ ||ಸಿರಿಯ ಸುಖವನು ಮರೆದಹೋಬಲವರದ ಪುರಂದರವಿಠಲಗೆ 5
--------------
ಪುರಂದರದಾಸರು
ಶರಣು ಶ್ರೀನಿವಾಸ | ಪಾಲಿಸು |ಶರಣ ಜನರ ಪೋಷಾರಿಪಕರುಣದಿ ನಿನ್ನಯ ಚರಣವ ನಂಬಿದ |ಶರಣನಭವಭಯ ದುರಿತವ ಕಳೆಯುವಅ.ಪನಂಬಿದವರ ಪೊರೆವಾ | ಭಕ್ತ ಕು | ಟುಂಬಿ ವಾಸುದೇವಾ |ಕಂಬುಕಂಧರಕಮ | ಲಾಂಭಕ ಶ್ರೀವರಶಂಭು ಸಖನೆ | ಶುಕ್ಲಾಂಬರಧರಹರಿ||ಶರಣು||1ಪದ್ಮನಾಭಎನ್ನ | ಪಾಲಿಸು | ಪದ್ಮಾವತಿರಮಣಾ |ಪದ್ಮನಯನ ಮುಖ | ಪದ್ಮವ ತೋರಿಸುಪದ್ಮೋದ್ಭವನುತ | ಪದ್ಮಮಾಲಾಧರ ||ಶರಣು||2ತಿರುಪತಿ ಗಿರಿವಾಸಾ |ಕಾಣಿಕೆ| ಬರಲತಿ ಸಂತೋಷಾ |ಪರಿಪರಿ ವಿಧದಲಿ | ಹರಕೆಯ ತರಿಸುವ |ಉರಗಶಯನ ಗೋ | ವಿಂದನೆ ಶ್ರೀಹರಿ ||ಶರಣು||3xmಟ veಡಿsioಟಿ='1.0' eಟಿಛಿoಜiಟಿg='%SಔUP-ಇಓಅಔಆIಓಉ%'
--------------
ಗೋವಿಂದದಾಸ
ಶರಣು ಸಕಲ ಪ್ರಾಣನಾಥಸರಸಿಜಭವ ಪದವಿಭೋಕ್ತಮೂರವತಾರಿಮುಖ್ಯಪ್ರಾಣಹರಿಪರಾಯಣ ತೇ ನಮೊ ಪ.ತುತ್ತಿಸಿನನ ಬಿಸುಟು ಜಗದಕರ್ತರಘು ಪುಂಗವನ ಪದದಿಭಕ್ತಿ ಬಲಿದು ಇತರ ವಿಷಯಚಿತ್ತನಾಗದ ಸುಗುಣಧೀಹತ್ತು ಹೆಡಕಿನವನ ವನವಕಿತ್ತು ಸಭೆಯನುರುಹಿ ಭಯವಬಿತ್ತಿಜನನಿಕುಶಲ ಒಡೆಯಗಿತ್ತ ಹನುಮ ತೇ ನಮೊ 1ಮುಪ್ಪಿನವಳ ಮಗನನರಿದು ಕೃಷ್ಣಾರ್ಪಣವನೆ ಮಾಡಿನೃಪರಕಪ್ಪಹೊರಿಸಿ ತಂದು ಮಖಕೆಒಪ್ಪಿಸಿದ ಅಗ್ರಜಾತಗೆಭೂಪನಣ್ಣನ ಅಣುಗರನ್ನುಅಪ್ಪಳಿಸಿ ತಮಸಕೆ ಕಳುಹಿತಪ್ಪದೆಂದೂ ರಂಗ ಸೇವೆಯೊಳಿಪ್ಪ ಶ್ರೀಭೀಮ ತೇ ನಮೊ 2ವಿಷ್ಣುಭಟರ ಮತಿಗೆ ಕಲಿಯುವೇಷ್ಟಿಸಿರಲು ಬ್ರಹ್ಮಸೂತ್ರಸ್ಪಷ್ಟ ತಿಳುಹಿ ತಾತ್ವಿಕ ಜನಶ್ರೇಷ್ಠಿ ನೆರಹಿ ಮಿಥ್ಯರಭ್ರಷ್ಟವಚನ ನೀಕರಿಸಿ ನಿಜೇಷ್ಟಮತರ ಹೊರೆದೆ ಗುರುವರಿಷ್ಟ ಮಧ್ವಪ್ರಸನ್ನವೆಂಕಟಕೃಷ್ಣ ಮತ್ಯ ತೇ ನಮೊ 3
--------------
ಪ್ರಸನ್ನವೆಂಕಟದಾಸರು
ಶರಣೆಂಬೆ ವಾಣಿ ಪೊರೆಯೆ ಕಲ್ಯಾಣಿ ಪವಾಗಭಿಮಾನಿ ವರಬ್ರಹ್ಮಾಣಿಸುಂದರವೇಣಿ ಸುಚರಿತಾಣಿ ಅ.ಪಜಗದೊಳು ನಿಮ್ಮ ಪೊಗಳುವೆನಮ್ಮಹರಿಯ ತೋರಿಸೆಂದು ಪ್ರಾರ್ಥಿಪೆನಮ್ಮ 1ಪಾಡುವೆ ಶ್ರುತಿಯ ಬೇಡುವೆ ಮತಿಯಪುರಂದರವಿಠಲನ ಸೋದರ ಸೊಸೆಯೆ2
--------------
ಪುರಂದರದಾಸರು
ಶಾಂತೇರಿ ಕಾಮಾಕ್ಷಿ ಲಕ್ಷ್ಮೀಕಾಂತನ ಸೋದರಿಸಂತಜನರ ಭಯನಿವಾರಿ ಕಂತುಸಹಸ್ರ ಸುಂದರಿ ಪ.ಬಂಗಧಿ ದೇವಿ ಸುಪ್ರಸಿದ್ಧೆ ಮಹೇಶ್ವರಿಶುದ್ಧ ಶ್ರೀಹರಿಭಕ್ತಿಜ್ಞಾನ ಶ್ರದ್ಧೆಯ ನೀಡಮ್ಮ ಶಂಕರಿ 1ಪಂಚಾಸ್ಯನಾರಿ ಪಾವನೆ ಕಾಂಚನಾಭೆ ಗೌರಿಪಂಚ ಮಹಾಪಾಪವಿದಾರಿ ಪಾಹಿಮಾಂ ಶ್ರೀವಿಶ್ವಂಭರಿ 2ಸುಕ್ಷೇತ್ರ ಕುಮಟಾಖ್ಯ ನಗರಾಧ್ಯಕ್ಷೆ- ದೇವಿ ಭವಾನಿತ್ರೈಕ್ಷನ ರಾಣಿ ಕಲ್ಯಾಣಿ ಲಕ್ಷ್ಮೀನಾರಾಯಣಿ 3
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಶಾರದಾಂಬೆಯೆ ನಾರಿ ಲಕುಮೀಸಾರಸಾಕ್ಷಿ ಮಹೇಶ್ವರಿಘೋರಮಹಿಷಿನಿಶುಂಭ ಮರ್ದಿನಿಧೀರ ಚಂಡಮುಂಡಾರ್ದನಿ ಜಯತು ಜಯತೂ ಪಜ್ವಾಲಿನೀ ಅಕ್ಷಾರ ಮಾಲಿನೀನೀಲಕುಂತಳೆ ಭಾರ್ಗವೀಶೂಲಿನೀ ಹರಿಲೋಲೆ ನೀಗುಣಶೀಲೆ ಗಾಯನ ರಾಣಿ ಜಯತು ಜಯತೂ 1ವಾರಿಜಾಲಯೆ ವೀಣಾಪಾಣಿಯೇಮಾರಹರನ ಅರ್ಧಾಂಗಿಯೇಕ್ಷೀರಸಾಗರಕನ್ಯೆ ಗಿರಿಸುತೆಕೀರವಾಣಿ ಸರಸ್ವತೀ ಜಯತು ಜಯತೂ 2ರಮೆಯೆ ರಕ್ಷಿಸು ಉಮೆಯೆಪಾಲಿಸುಕಮಲಸಂಭವನರಸಿಯೆಅಮಿತ ಮಂಗಲೆ ಅಮರ ದೈವವೆಕಮಲಮುಖಿ ವಾಗ್ದೇವಿಯೆ ಜಯತು ಜಯತೂ 3ಕರವಮುಗಿವೆ ಸ್ಮರಿಸಿ ನಿನ್ನನುಶಿರವ ಚಾಚುವೆ ಚರಣಕೆಕರುಣದಲಿ ಗೋವಿಂದದಾಸನಪರಸಿ ರಕ್ಷಿಸಬೇಹುದು ಜಯತು ಜಯತೂ 4
--------------
ಗೋವಿಂದದಾಸ
ಶುಭವು ಶ್ರೀಹರಿಯ ನಾಮವು ಸುಜನರಿಗೆಲ್ಲಶುಭವು ಶ್ರೀಹರಿಯ ನಾಮವು ಪಶುಭವು ಶ್ರೀಹರಿಯ ನಾಮವಿಭವದಿಂ ಪೊಗಳಲುಶುಭಕೃತು ನಾಮ ಸಂವತ್ಸರದಲಿಶುಭಶುಭವೆನ್ನುತ ಪಾಡುವರನು ಸಲಹುವಅ.ಪಸಿಂಧುಶಯನ ಹರಿಯಇಂದಿರೆಸಹಿತಚಂದದಿ ಭಜಿಸುವರಮಂದರಧರಅರವಿಂದನಯನ ಶ್ರೀಮು-ಕುಂದಭಕ್ತರ ಭವಬಂಧನ ಬಿಡಿಸುವಪೊಂದಿ ಭಜಿಸುವರಾನಂದದಿ ಸಲಹುವಸುಂದರವದನಶುಭಾಂಗನು ಮುದದಲಿಇಂದ್ರಾದಿಗಳು ಆನಂದದಿ ಪೊಗಳೆ ಗೋ-ವಿಂದ ಆನಂದ ಹೃನ್ಮಂದಿರ ವಾಸನು 1ಶುಭವು ಭಕ್ತರಕಾರ್ಯಕೆ ಶ್ರೀಹರಿಯನಾಮಶುಭವು ಮುಕ್ತಿಸಾಧನಕೆಶುಭವು ಬಂಧುಗಳಿಂದ ಸದನದಿ ವೆÀುರೆಯಲುಶುಭವು ಭಕ್ತರ ವೃಂದ ಕೂಡಿ ನಲಿದಾಡಲುಶುಭಗುಣ ಶೀಲನ ಶುಭಗುಣಗಳು ಸ-ನ್ಮುದದಲಿ ಪಾಡಲು ಶುಭಕೊಡುವನುಶುಭಶುಭಶುಭವೆನ್ನುತ ನಲಿದಾಡೆ ಅ-ಶುಭಗಳನೋಡಿಸಿ ಶುಭವೀವನುಹರಿ2ಶುಭವು ಶೋಭನ ಶ್ರೀಶಗೆ ಶ್ರೀ ಸಹಿತದಿವೆÀುರೆವ ಮಹಾನುಭಾವಗೇಶುಭವೆಂದು ಪಾಡಲುಅಗಣಿತಮಹಿಮನಬಗೆಬಗೆಯಿಂದವರಘ ಪರಿಹರಿಸುವಖಗವಾಹನಶ್ರೀ ಕಮಲನಾಭ ವಿಠ್ಠಲನನು ಪಾಡುವ ಸುಜನರ ಸಲಹುವಹಗಲಿರುಳೆನ್ನದೆ ಭಜಿಸುತ ಪಾಡಿರೊಕಡಲೊಡೆಯನಪಾದಧೃಡ ಭಕುತಿಯಲಿ3
--------------
ನಿಡಗುರುಕಿ ಜೀವೂಬಾಯಿ
ಶೇಷಾಚಲನಾಯಕ ಸಲಹಯ್ಯಾಶೇಷದುರಿತ ದೂರಕ ಪ.ಮಕರಾಲಯಸದನಮಾಧವಮಕರಕುಂಡಲಕರಣಮಕರಕೇತನತಾತಮಾಕಾಂತವಿಲಸಿತಮಕುಟಕೌಸ್ತುಭಭೂಷಿತ ಮುಕುಂದ1ಸ್ವಾಮಿಪುಷ್ಕರಿಣೀವಾಸ ಮುಕುಂದಸಾಮಗಾಯನ ವಿಲಾಸಸೋಮದ್ಯುಮಣಿನಯನಾಬ್ಜಕೊದರ್ವದಳಶ್ಯಾಮಸಿರಿಭೂಲೋಲ ಮುಕುಂದ2ಸನ್ಮಾರ್ಗವ ತೋರಿಸೊ ಸಂತರಸನ್ನಿದಲ್ಲಿರಿಸೊಶೂನ್ಯಭಾಗ್ಯವ ನೋಡಿ ಸಲಹಯ್ಯ ತಂದೆ ಪ್ರಸನ್ನವೆಂಕಟನಾಯಕ ಮುಕುಂದ 3
--------------
ಪ್ರಸನ್ನವೆಂಕಟದಾಸರು
ಶೇಷಾದ್ರಿತಟವಾಸ ಸುರೇಶ ಕಾಯೊ ನಿನ್ನದಾಸಾನುದಾಸ ನಾ ತಾರಿಸೊ ಪ.ಈ ಬೆಂದ ಭವಾಂಧಕಾರಿಂದಹಂದಿಂದೆ ನಾಮಂದಕಂದನು ನೊಂದೆನೊ ತಂದೆ ಹೊಂದಿಸುಗತಿ1ಎನ್ನೊಡೆಯ ಕೈವಿಡಿಯೊ ಅಮೃತ ನುಡಿಯೊ ಮೈದಡಹೊ ಮತ್ತಡಿಗಡಿಗೆಡರಂ ಬಡಿಯೊ ಮೃಡನುತ ಅಡಿಯಲ್ಲಿಡು 2ಶ್ರೀನಲ್ಲ ನೀನಲ್ಲದಾರಲ್ಲಾಶ್ರಯಿಲ್ಲಯ್ಯಬೆಲ್ಲವಿಲ್ಲನ ಗೆಲ್ವ ಪ್ರಸನ್ವೆಂಕಟೊಲ್ಲಭ ಜಯ 3
--------------
ಪ್ರಸನ್ನವೆಂಕಟದಾಸರು
ಶೋಭಾನವೇ ಬಗಳಾಮುಖಿ ದೇವಿಗೆಶೋಭಾನವೇ ಸದ್ಗುರುನಾಥಗೆ ಶೋಭಾನವೆನ್ನಿ ಶುಭವೆನ್ನಿಪಸುತ್ತಿದ ಸರಿಗೆಯು ಒತ್ತಿದ ಚಿಂತಾಕೆತ್ತಿದ ರಾಗಟೆ ಹತ್ತಿದ ಚವುರಿಮತ್ತೆ ತುರುಬಿಗೆ ಪಂಚಕ ಮುಡಿದಿಹಮುಡಿದೀ ಬಗಳಾಮುಖಿಗೆ ರತ್ನದಾರತಿಯ ಬೆಳಗಿರೇ1ಶ್ರವಣ ಮನನ ನಿಧಿಧ್ಯಾಸನ ಸಾಧಿಸಿಭವಭವಗಳ ತರಿದೆಲ್ಲವ ಛೇದಿಸಿಶಿವಸಾಕ್ಷಾತ್ತಾಗಿ ಬೆಳಗುತ ಬೆಳಗುತ ಸದ್ಗುರುನಾಥಗೆಪವಳದಾರತಿಯೆ ಬೆಳಗಿರೆ2ವಾಲೆಬಳೆಗಳು ತಾಳಿಯು ಮೂಗುತಿಸಾಲಿನ ಅಡ್ಡಿಕೆ ತಾಯಿತ ಸರಪಳಿಮೇಲು ಪದಕವೆ ಮೆರೆದಿಹ ಮೆರೆದಿಹ ಬಗಳಾಮುಖಿಗೆಲೋಲದಾರತಿ ಬೆಳಗಿರೆ3ಬಾಲೋನ್ಮತ್ತ ಪಿಶಾಚಾಂಧರ ಬದಿರ ಲಕ್ಷಣಮೂಕಾವಸ್ಥೆಯ ತಾ ತಾಳಿ ಅರವಸ್ಥೆಯ ಧರಿಸಿಧರಿಸಿಹ ಸದ್ಗುರುನಾಥಗೆತೈಲದಾರತಿಯ ಬೆಳಗಿರೆ4ಹೊಸ ಮಿಂಟಿಕೆ ಪಿಲ್ಲೆ ಸವಂದಿಗೆಜಸವುಂಗರ ಮೀನೆಸೆದಿಹಮುದ್ರಿಕೆಮಿಸುನಿಯೊಡ್ಯಾಣವು ತೊಳಗುವ ತೊಳಗುವ ಬಗಳಾಮುಖಿಗೆಶೀಲದಾರತಿಯ ಬೆಳಗಿರೆ5ಧಗಧಗಿಸುವ ಪೀತಾಂಬರದುಡುಗೆಯಝಗ ಝಗಿಸುವ ಮಹಾಸ್ವರ್ಣದ ಕಂಚುಕಿನಿಗಮವೆಡಬಲದಲ್ಲಿ ಹೊಗಳುವ ಹೊಗಳುವ ಬಗಳಾಮುಖಿಗೆಸುಗಮದಾರತಿಯ ಬೆಳಗಿರೆ6ಝಗ ಝಗಿಸುವ ಪ್ರಭೆ ದೃಷ್ಟಿಸಿ ಶ್ರವಣದಿಮೊಗೆ ಮೊಗೆದು ದಶನಾದವ ಸೇವಿಸಿಬಗೆ ಬಗೆ ಆನಂದದಿ ಸುಖಿಸುವ ಸುಖಿಸುವ ಸದ್ಗುರುನಾಥಗೆಸುಗಮದಾರತಿಯ ಬೆಳಗಿರೆ7ಸಪ್ತಾವರಣ ಭಸ್ಮವ ಮಾಡಿಸಪ್ತಭೂಮಿಕೆ ಪಾವಟಿಗೆಯನೇರಿಗುಪ್ತ ಪ್ರಭಾತೀತವಾಗಿ ತೊಳಗುವ ತೊಳಗುವ ಸದ್ಗುರುನಾಥಗೆತೃಪ್ತದಾರತಿಯ ಬೆಳಗಿರೆ8ಕಂಕಣ ಹರಡಿಯ ಹಸ್ತದ ಕೈಯ್ಯಲಿಅಂಕುರಪಟ್ಟಿಯು ಪರಿಘವು ಶರಧನುಅಂಕೆಯಿಲ್ಲದಾಯುಧ ಪಿಡಿದಿಹ ಪಿಡಿದಿಹ ಬಗಳಾಮುಖಿಗೆಪಂಕಜದಾರತಿಯ ಬೆಳಗಿರೆ9ಸಾರಿಯೆ ತ್ವಂ ಪದ ತತ್ವಮಸಿ ಪದಮೀರಿಯೆ ಸಗುಣ ನಿರ್ಗುಣ ರೂಪವ ತೋರಿಚರಿಸುವಚರಿಸುವ ಸದ್ಗುರುನಾಥಗೆ ಸಾರದಾರತಿಯ ಬೆಳಿಗಿರೆ10ಪಿಡಿದೆಡಗೈಯಲಿ ವೈರಿಯ ಜಿಹ್ವೆಯ ಕೆಡುಹುತ ತುಳಿದೆಹೊಡೆಯುತ ಖಡುಗದಿ ಕೊಡುತ ಬೇಡಿದವರಿಗೆ ಅಭಯವಅಭಯವೀವ ಬಗಳಾಮುಖಿಗೆ ಸಡಗರದಾರತಿಯ ಬೆಳಗಿರೆ11ಸಾಧನ ನಾಲ್ಕನು ಸಾಧಿಪ ಸಚ್ಛಿಷ್ಯರಿಗೆಅಭಯವ ನೀಡುತ ಭಕ್ತಿರಿಗಾಧಾರವಾಗಿ ಕರುಣಿಪಕರುಣಿಪ ಸದ್ಗುರುನಾಥಗೆ ಸಾಧುಗಳಾರತಿ ಬೆಳಗಿರೆ12ಚಿದಾನಂದ ಪರಬ್ರಹ್ಮವು ತಾನೇಮದಮುಖನು ಸಂಹರಿಸಲೋಸುಗಸದನಬ್ರಹ್ಮ ರಂಧ್ರದಿ ಸ್ಥಾನವಾಯ್ತುಸ್ಥಾನವಾಯ್ತು ಬಗಳಾಮುಖಿಗೆ ಸುಧೆಯ ಆರತಿ ಬೆಳಗಿರೆ13ಸಿದ್ದ ಪರ್ವತವಾಗಿಹ ಪ್ರ-ಸಿದ್ಧ ಬಗಳಾಮುಖಿಯೆಂದೆಣಿಸುವಸಿದ್ಧ ಚಿದಾನಂದಾವಧೂತಅವಧೂತಸದ್ಗುರುನಾಥಗೆಸಿದ್ಧದಾರತಿಯ ಬೆಳಗಿರೆ14
--------------
ಚಿದಾನಂದ ಅವಧೂತರು
ಶ್ಯಾಮಸುಂದರ ಶ್ರೀಮಾಧವಕಾಮಿಸುವಳಾ ಕಾಮಿನಿಯು ಪ.ಭಾಮಾಮಣಿಯು ನಿನ್ನನೀಕ್ಷಿಸದೆಯಾಮಯಾಮಕೆ ತಾಮಸಗೊಂಬಳು ಅ.ಪ.ಚಂದನಾದಿ ಸೌಗಂಧಕುಸುಮ ವಿಷ-ದಂದವೆಣಿಸುವಳು ಚಂದ್ರಮುಖಿಮಂದಾನಿಲ ಮಕರಂದ ಪಾನರಸ-ವೊಂದನೊಲ್ಲಳ ಪ್ರಿಯಸಖಿನಂದನ ಕಂದನೆ ವಂದನೆ ವಲ್ಲಭಗೈವಳು 1ಹಾರ ಹೀರ ಬಂಗಾರ ಭೂಷಣವಭಾರವೆಂದು ಶೃಂಗರಿಸಳುಕೀರಕೀಕಿಪಿಕಚೀರುಸ್ವನ ಶರ-ಧಾರೆಯೆಂದು ತಾ ಸೈರಿಸಳುಕಾರುಣ್ಯವಾರಿಧೆ ಬಾರದೆ ಬಾಯಾರಿರುವಳು 2ಮೀನಧ್ವಜನುರುಬಾಣದುರುಬೆಗೆಕ್ಷೀಣವಾಗಿಹಳು ಮೀನಾಕ್ಷಿಭಾನುತೇಜ ಲಕ್ಷ್ಮೀನಾರಾಯಣಧ್ಯಾನಿಸುವಳು ನಿನ್ನ ಪ್ರಾಣಸಖಿಮಾನಾಭಿಮಾನಾಧೀನವನಿನ್ನೊಳಗಿಟ್ಟಿಹಳು3
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಶ್ರವಣಮನನ ನಿಧಿ ಧ್ಯಾನವು ಯೋಗಕ್ಕೆಸಮನಿಸೆ ಸಾಧಕಂಗೇತಕೆ ಈ ಮೂರುಪನಿತ್ಯಗುರುಮುಖದಿಂದ ನಿಜವೇದಾಂತ ಸಾರವ-ನಿತ್ಯಕಾಲದಲ್ಲಿ ಕೇಳುತಲಿ ಇದ್ದುನಿತ್ಯಜೀವರಪರಮನಿಲುಗಡೆಗಳ ತಿಳಿದುಸತ್ಯತಾನೆಂದು ಕಂಡು ನಿಶ್ಚೈಸಿದುದೆ ಶ್ರವಣ1ವಾಸನೆಹರವಾಗಿ ಬಲಿದು ಆತ್ಮಾನಂದಕೆಸೂಸದೆ ಮನವನು ನಿಲ್ಲಿಸುತದೇಶಿಕೋತ್ತಮನಿಂದ ತನಗಾವ ಉಪದೇಶಬೇಸರಿಸದೆ ಮತ್ತೆ ಮತ್ತೆ ನೆನೆವುದೆ ಮನನ2ದಧಿಮಥನವ ಮಾಡೆನವನೀತತೇಲುವೊಲುಉದಧಿಮಥಿಸೆ ಅಮೃತ ತಾ ಬಂದಂತೆಮಥಿಸೆ ಕಾಷ್ಟಕ್ಕೆಕಾಷ್ಠಅಗ್ನಿ ತಾ ಪುಟಿದಂತೆವಿಧಿಸೆ ಈ ತೆರದಲಿ ತಾನದುವೆ ನಿಧಿಧ್ಯಾಸ3ಈ ಮೂರು ಸಾಧನಗಳಿರಬೇಕು ಯೋಗಕ್ಕೆಈ ಮೂರು ಸಾಧಿಸಲು ರಾಜಯೋಗಿ ತಾನುಇವರೊಳು ಒಂದು ಕಡಿಮೆಯಾದರು ಯೋಗಿಯಾಗನುಇಂತಿಲ್ಲದಿರೆ ನಿಜಮುಕ್ತಿ ದೊರಕದು4ಶ್ರವಣವೆಂಬುದು ಅದು ಸರ್ವಸಾಧನವಯ್ಯಶ್ರವಣ ಮನನವಾಗೆ ಶ್ರಮ ಪರಿಹಾರವುಶ್ರವಣ ಮನನ ನಿಧಿಧ್ಯಾಸ ಮೂರಾಗೆಶಿವನೆ ಆತನು ಚಿದಾನಂದ ದೇವನವನು5
--------------
ಚಿದಾನಂದ ಅವಧೂತರು