ಒಟ್ಟು 12527 ಕಡೆಗಳಲ್ಲಿ , 133 ದಾಸರು , 6731 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಏನಾಯಿತೀ ಜನಕೆ ಮೌನವದು ಕವಿದಂತೆ |ಮಾನುಷ್ಯರಾಗಿ ಮರೆತರು ಹರಿಯನು ಪ.ನಾಲಗೆಗೆ ಮುರಿಯಿತೆ ನೆಗ್ಗಿಲ ಕೊನೆಮುಳ್ಳು |ಬಾಲತನದಲಿ ಭೂತ ಹೊಡೆಯಿತೆ - ಕೆಳಗು - |ಮೇಲಿನ ತುಟಿ ಎರಡು ಒಂದಾಯಿತೇ -ಅವರ - |ಕಾಲಮೃತ್ಯು ಬಂದು ಕಂಗೆಡಿಸಿತೆ ? 1ಘಟಸರ್ಪ ಕಚ್ಚಿ ವಿಷ ಘನವಾಗಿ ಏರಿತೆ |ಕಟಗರಿಸಿ ನಾಲಗೆ ಕಡಿದು ಹೋಯಿತೆ ? ||ಹಟ ಹಿಡಿದ ಹೊಲೆಮನಸುಹರಿ ಎನ್ನಲಾರದೆ |ಕುಟಿಲ ಚಂಚಲ ಬುಧ್ಧಿ ಕಂಗೆಡಿಸಿತೆ ? 2ಹರಿಯೆಂದರವರ ಶಿರ ಹರಿದು ಬೀಳುವುದೆ |ಪರಬ್ರಹ್ಮ ಪಣೆಯಲ್ಲಿ ಬರೆದಿಲ್ಲವೆ ||ಸಿರಿದೇವಿಗೊಲಿದ ಶ್ರೀ ಪುರಂದರವಿಠಲನ |ಸ್ಮರಿಸಿದರೆ ಸಿಡಿಲೆರಗಿ ಸುಟ್ಟು ಕೊಲ್ಲುವುದೆ ? 3
--------------
ಪುರಂದರದಾಸರು
ಏನಾಯಿತು ರಂಗನೆ ನೋಡಿರಮ್ಮ-ನಿ-|ಧಾನಿಸಿ ಎನಗೊಂದು ಪೇಳಿರಮ್ಮ ಪಪುಟ್ಟಿದಾರಭ್ಯ ಕಣ್ಣ ಮುಚ್ಚನಮ್ಮ-ತಾನು |ಎಷ್ಟಾದರೂ ಮೊಲೆಯುಣ್ಣನಮ್ಮ ||ಸೊಟ್ಟಾದ ಮುಖ ಮೇಲಕ್ಕೆತ್ತನಮ್ಮ-ಹೀಗೆ |ಎಷ್ಟು ಹೇಳಲಿ ಬಾಯ ಮುಚ್ಚನಮ್ಮ 1ಕಾಯಇದ್ದಂತಿದ್ದು ಹೆಚ್ಚಿತಮ್ಮ-ಹೆತ್ತ |ತಾಯಿಯ ಬಲವಿಲ್ಲದಾಯಿತಮ್ಮ ||ನೋಯೆ ನೋಟಕೆಅಬ್ಧಿಬತ್ತಿತಮ್ಮ-ಅವನ |ಬಾಯಿಯೊಳಗೆವಿಶ್ವತೋರಿತಮ್ಮ2ಅತ್ಯಂತ ಮಾತುಗಳನಾಡಿದನಮ್ಮ-ಮುಂದೆ |ಸತ್ಯವು ಕುದುರೆಯನೇರುವನಮ್ಮ ||ನಿತ್ಯನಿರ್ದೋಷಪುರಂದರವಿಠಲ ತನ್ನ-|ಭಕ್ತರ ಸಲಹುವದೇವನಮ್ಮ 3
--------------
ಪುರಂದರದಾಸರು
ಏನಿದ್ದೀತೇನಿದ್ದೀತೋ ಈ ನಾಮದಲ್ಲೇನಿದ್ದೀತೇನಿದ್ದೀತೋ ಪಏನಿದ್ದೀತೇನಿದ್ದೀತೇನ ಪೇಳಲಿ ನಾಜಾನಕೀಶನ ನಾಮ ಹಾನಿಮಾಡದೆ ಕಾಯ್ವುದೇ ಅ.ಪಜ್ಞಾನ ಕೊಡುವುದಲ್ಲೋ ಅಜ್ಞಾನ ಖೂನಕ್ಕುಳಿಸದಿರೆಲೋಸಾನುರಾಗದಿ ನಿಜಜ್ಞಾನ ಬೋಧಿಸಿ ಮಹಹೀನ ಬವಣೆಕಳೆದಾನಂದ ಕೊಡುವುದು 1ನರಕಕ್ಹೋಗುವನನ್ನು ಭರದಿಕರುಣಿಸಿ ಪದವನ್ನುಕರುಣದಿತ್ತು ಹರಿಶರಣರೊಳಾಡಿಸಿಪರಮಪರತರವೆನಿಪ ಸ್ಥಿರಸುಖ ಪಾಲಿಸಿತು2ಜರಮರಣಳಿಯುವುದು ಅದರೊಳ್ಕರುಣವೆ ತುಂಬಿಹ್ಯದುದುರಿತದಿ ಸಿಲ್ಕೆಲ್ಲಿ ಕರೆದರು ಅಲ್ಲಿಗೆತ್ವರಿತದೊದಗಿ ಬಂದು ನಿರುತದಿಂ ಸಲಹುವುದು 3ಭವಬಾಧೆ ಕಳೆಯುವುದುಜವನ ಭಯವೆ ತಪ್ಪಿಸುತಿಹ್ಯದುದಿವರಾತ್ರಿ ಎನ್ನದೆ ನಯದಿ ಭಜಿಪರೊಳುದಯದಿ ನಿಂತು ತಾನೆ ಜಯವ ನೀಡುವುದು 4ಅಂತ್ಯಪಾರಿಲ್ಲ ಕಾಣೋ ಶ್ರೀರಾಮನಾಮದ್ದೆಂಥ ಶಕ್ತಿಯೇನೋಚಿಂತಿಪ ಭಕ್ತರ ಅಂತರಂಗವನರಿತುಸಂತಸ ನೀಡಿ ಮುಕ್ತಿಸಂಪದ ಕೊಡುವುದು 5
--------------
ರಾಮದಾಸರು
ಏನು ಇರದ ಎರಡು ದಿನದ ಸಂಸಾರಜ್ಞಾನದಲಿ ದಾನಧರ್ಮವ ಮಾಡಿರಯ್ಯ ಪ.ಹಸಿದು ಬಂದವರಿಗೆ ಅಶನವೀಯಲು ಬೇಕುಶಿಶುವಿಗೆ ಪಾಲ್ಬೆಣ್ಣೆಯುಣಿಸಬೇಕುಹಸನಾದ ಭೂಮಿಯನು ಧಾರೆಯರೆಯಲು ಬೇಕುಪುಸಿಯಾಡದಲೆ ಭಾಷೆ ನಡೆಸಲೇಬೇಕು 1ಕಳ್ಳತನಗಳ ಮಾಡಿ ಒಡಲ ಹೊರೆಯಲು ಬೇಡಕುಳ್ಳಿರ್ದ ಸಭೆಯೊಳಗೆ ಕುಟಿಲ ನಡಿಸಲು ಬೇಡಒಳ್ಳೆಯವ ನಾನೆಂದು ಬಲು ಹೆಮ್ಮಲಿರಬೇಡಬಾಳ್ವೆ ಸ್ಥಿರವೆಂದು ನೀನಂಬಿ ಕೆಡಬೇಡ 2ದೊರೆ ತನವು ಬಂದಾಗ ಕೆಟ್ಟ ನುಡಿಯಲು ಬೇಡಸಿರಿ ಬಂದ ಕಾಲಕ್ಕೆ ಮರೆಯಬೇಡಸಿರಿವಂತನಾದರೆ ಪುರಂದರವಿಠಲನಚರಣ ಕಮಲವ ಸೇರಿ ಸುಖಿಯಾಗು ಮನುಜ 3
--------------
ಪುರಂದರದಾಸರು
ಏನು ಕೌತಕ ಕೃಷ್ಣ ತಾನೆ ಕನಸಿನೊಳು |ಮಾನವರ ತೆರನಂತೆ ಮುರುಳಾಡಿಸಿದನೆನ್ನ ಪಹಿಂದೆ ಮಾಡಿದ ಪದವ ಒಂದು ಹೇಳೆಂದೆನುತ |ಮುಂದೆ ಅದರಂದವನು ಎಲ್ಲ ತಾಪೇಳ್ದ ||ಒಂದು ದೋಸೆಯ ತನಗೆ ತಂದುಕೊಡು ಎಂದೆನಲು |ತಿಂದ ಮೀಸಲಕೊಡೆನು ಎಂದು ಹೇಳಿದೆನು 1ಮೋಸಹೋದೆನು ನಾನು ದೋಸೆಯನು ಹರಿಗೆ-ಆ-ಪೋಶನವನಿಕ್ಕದೇ ಪೋಷಿಸಿದೆನು ||ಮಿಸಲಾದರು ಅಹುದು ದೋಷವಿಲ್ಲೆಂದೆನುತ |ಆಸುರದ ಮಾತುಗಳ ವಾಸಿತೋರಿಸಿದನು 2ಎಳೆಯ ಪ್ರಾಯದೊಳಿರುವ ಚೆಲುವೆಯೊರ್ವಳು ಬಂದು |ಹೊಳೆಯೊಳಗೆ ಈಸಾಡಿ ನಲಿವುದನು ನೋಡಿ ||ನಳಿನಮುಖಿಯನು ಮೇಲೆ ಕರೆಸಲಾ ಮೈಲಿಗೆಯ |ತೊಳಕೊಂಡು ಒಳಯಿಂಕೆ ಬಂದುದನು ಕಂಡೆ 3ಈ ರೀತಿ ಸಿರಿಸಹಿತ ವಾರಿಜಾಕ್ಷನು ಕೃಷ್ಣ |ತೋರಿದನು ಸ್ವಪ್ನ ಕಣ್ಣಾರೆ ನೋಡಿದೆನು ||ಹಾರಿಹೋಯಿತು ಕಷ್ಟ ಸೂರೆಗೊಂಡೆನು ಸಿರಿಯ |ಏರಿ ಬಂದುದು ಶುಭದ ವಾರಿಧಿಯು ಮುಂದೆ.................... 4ಈ ಮಹಾಮೂರ್ತಿಯನು ಜಾವಪರ್ಯಂತರದಿ |ಕಾಮಿಸಿಯೆ ನೋಡಿದೆನು ಸೌಮ್ಯನಸ್ಯದಲಿ ||ಆ ಮಹಾ ಹರಿಯು ಪರಧಾಮವನು ಕೈಕೊಂಡು |ಭೂಮಿಪತಿಯಾಗಿರ್ದ ಪುರಂದರವಿಠಲ........................... 5
--------------
ಪುರಂದರದಾಸರು
ಏನು ಗತಿಯೊ ರಂಗ ನಾ ನಿನ್ನವನಾಗಿಜ್ಞಾನದಂತಿರಲಿಲ್ಲವೊ ಪ.ಉಂಡುಂಡುತುಡುಗಕೋಣನಪರಿಸೊಕ್ಕಿದೆಕಂಡಲ್ಲಿ ಕುಳಿತೆ ನೊಣನ ತೆರದಿಭಂಡು ಭೂತದ ಮಾತನಾಡಿ ಭಂಡನಾದೆಪುಂಡರೀಕಾಕ್ಷನನ್ನಂಥ ಪಾತಕಿಗೆ1ಬಲು ಶಾಸ್ತ್ರಶ್ರವಣೆಂಬುವ ಮಳೆಗರೆದರೇನುಕಲುಗುಂಡಿನಂತೆ ಕೆಟ್ಟೆದೆ ತೊಯ್ಯದುಹಲವು ಅಧ್ಯಾತ್ಮವನುಸುರೇನು ಚಿತ್ತದಕಳವಳಿ ನಿಲಿಸಲಾರದ ಪಾಮರಗೆ 2ಭವಸುಖ ಉಂಬಾಗ ನೋವು ಬೇವಾದಾಗತವಕದಿ ನುಡಿವಾಗ ಕನಸಿನಾಗಅವಿರಳಅಚ್ಯುತನಿನ್ನಂಘ್ರಿ ನೆನೆದೀಶಅವಸರಕೊದಗೆಂದೆ ಪ್ರಸನ್ವೆಂಕಟೇಶ 3
--------------
ಪ್ರಸನ್ನವೆಂಕಟದಾಸರು
ಏನು ಧನ್ಯಳೋ - ಲಕುಮಿ - ಎಂಥ ಮಾನ್ಯಳೋ ಪಸಾನುರಾಗದಿಂದ ಹರಿಯ ತಾನೆ ಸೇವೆ ಮಾಡುತಿಹಳೊ ಅ.ಪಕೋಟಿ ಕೋಟಿ ಭೃತ್ಯರಿರಲು ಹಾಟಕಾಂಬರನ ಸೇವೆ |ಸಾಟಿಯಿಲ್ಲದೆ ಪೂರ್ಣಗುಣಳು ಸರ್ವಕಾಲ ಮಾಡುತಿಹಳು 1ಛತ್ರ ಚಾಮರವ್ಯಜನಪರ್ಯಂಕ ಪಾತ್ರರೂಪದಲ್ಲಿ ನಿಂತು |ಚಿತ್ರಚರಿತನಾದ ಹರಿಯ ನಿತ್ಯಸೇವೆ ಮಾಡುತಿಹಳು 2ಸರುವಸ್ಥಳದಿ ವ್ಯಾಪ್ತನಾದ | ಸರುವದೋಷರಹಿತನಾದ |ಗರುಡಗಮನನಾದ ಪುರಂದರವಿಠಲನ ಸೇವಿಸುವಳೋ 3
--------------
ಪುರಂದರದಾಸರು
ಏನು ಫಲ ಇದು ಏನು ಫಲಏನು ಫಲ ಇನ್ನೇನು ಫಲಪಬೇವಿನ ಮೂಲಿಕೆ ಬೆಲ್ಲವ ಸುರಿದರೆಹಾವಿಗೆ ಹಾಲೆರೆದಷ್ಟೆ ಫಲಮಾವಿನ ಮರದಡಿ ಗಾಯನ ಹಾಡಲುಸಾವಿನ ಮನೆಯೊಳಗತ್ತ ಫಲ1ಕೋಣನ ಮುಂದೆ ವೀಣೆಯ ನುಡಿಸಲುಮಾಣಿಕ್ಯ ಮರ್ಕಟಗಿತ್ತ ಫಲಶ್ವಾನನ ಬಾಲವ ನಳಿಗೆಯೊಳಿಟ್ಟರೆಹೀನ ಕುಲಜ ಮಡಿಯುಟ್ಟ ಫಲ2ಮೂರ್ಖಗೆ ಬುದ್ಧಿಯ ಮಾತನು ಪೇಳಲುಗೋರ್ಕಲ್ಲ ಮೇಲೆ ಮಳೆ ಹೊಯ್ದ ಫಲಊರ್ಕತಿ ಕಂಟಕನಾಗಿಹ ಮನುಜನುನೂರ್ಕಾಲ ಬದುಕಿದರೇನು ಫಲ3ಸೂಳೆಯ ಬಳಿಯಲಿ ಅಂತರ್ಯ ನುಡಿದರೆಗಾಳಿಗೆ ಕಸ್ತೂರಿ ಇಟ್ಟ ಫಲಕೋಳಿಯ ಕಾಲಿಗೆ ಗೆಜ್ಜೆಯ ಕಟ್ಟಲುನೀಲಿಯ ನೀರೊಳು ತೊಳೆದ ಫಲ4ಹಂದಿಯ ಕೊರಳಿಗೆ ಹಾರವ ಹಾಕಲುಅಂಧಗೆ ಕನ್ನಡಿ ಕೊಟ್ಟ ಫಲಮಂಧರಧರ ಗೋವಿಂದನೋಳ್ವೈರದಿಇಂzÀ್ರನು ಮಳೆ ಸುರಿದ ಫಲ5<?xmಟ veಡಿsioಟಿ='1.0' eಟಿಛಿoಜiಟಿg='uಣಜಿ-8'?>
--------------
ಗೋವಿಂದದಾಸ
ಏನು ಬೇಡಲಿ ನಿನ್ನ ಹರಿಯೆ ಪಏನ ಬೇಡಲಿ ನಿನ್ನ ಚಂಚಲ ಕಠಿಣನ |ಮಾನದಿಂದ ಮೋರೆ ಓರೆಮಾಡುವನ ಅ.ಪಕರುಳಹರಕನ - ಏನ ಬೇಡಲಿ |ತಿರಿದು ತಿಂಬುವನ ||ಕೊರಳಗೊಯ್ಕ ಅರಣ್ಯ ತಿರುಗವನ ಮೊ - |ಸರು ಬೆಣ್ಣೆ ಕದ್ದು ತಿಂಬವನ 1ವಾಸಶೂನ್ಯನ - ಬೇಡಲೇನು ಕತ್ತಿ - |ಬೀಸಿ ಸವರುವನ ||ಕಾಸುವೀಸವನೆಲ್ಲ ಮೀಸಲು ಮಾಡಿಟ್ಟು |ಕೇಸಕ್ಕಿ ಉಂಡುಂಡು ವಾಸಿಸುವನ2ಬೇಡಿದರೆ ಕೊಡನ - ಮೋರೆನೋಡಿ |ಭಿಡೆಯ ಹಿಡಿಯದವನ |ಬಡವರ ಕರೆತಂದು ಅಡಿಗೆ ಸೇರಿಸಿಕೊಂಡ |ಒಡೆಯ ಪುರಂದರವಿಠಲದೊರೆಯ 3
--------------
ಪುರಂದರದಾಸರು
ಏನು ಭ್ರಮೆ ಮನುಜ ನಿನಗ್ಯಾಕೆ ಹರಿಭಟರಹಗೆಪರಮಾನಿನಿಯ ಸಂಗ ನರಕದೊಳು ಬಲುಭಂಗಪ.ಮಬ್ಬು ಮುಸುಕಿದ ಪರಿಯ ನಿಜಸತಿಯ ನೋಡದೆ ಮತ್ತೊಬ್ಬಳ ಕುಚಕೆ ಕಮಲವ ಹೋಲಿಸಿಕೊಬ್ಬು ಮೈಯವಳ ಸಖವಿಡಿದರದು ಮಹಾಶೋಕತಬ್ಬಿಬ್ಬುಗೊಳುತ ನಿರಯಂಗಳುಂಬೆ 1ಇಂದುಮುಖಿಯಳ ಸಂಗ ಎನಗಿಂದು ಕೈಗೂಡಲೆಂದೊಬ್ಬ ಕುಂಟಣಿಗೆ ಧನವಿತ್ತೆ ನಿನ್ನಸಂದುಗಳ ಕಡಿದು ವೈತರಣಿ ಸಲಿಲದಿ ದೇಹಹೊಂದಿಸುವರುಂಟು ಕಾಲನ ಕುಂಟಣಿಗರು 2ಚಿಕ್ಕಬಲೆಯರ ಕಂಡು ಚಂಚಲಿತನಾಗ್ಯವರವಕ್ರನೋಟದಿ ಹಲವು ಸನ್ನೆಯಿಂದತರ್ಕೈಸಬೇಕೆಂಬ ಲಂಪಟದಿ ತಪ್ತಾದಶರ್ಕರಾಯಸ ಸ್ತಂಭವಪ್ಪಿ ಪೊರಳೇಳುವೆ 3ಹರಿದಾಸರಾಚಾರ ಕೇಳಲಸಿ ಪಳಿದೊರೆದುಒರಟು ಮಾತಿನ ಸರಕಲಾಯುಗಳಿದೆವಿರತಿಜ್ಞಾನಾನ್ವಿತರ ವೆರಸದಂಧಕನಾದೆತರಣಿಯೊಳು ಹೊಂಬುಳವು ಗರುವಿಸಿದ ತೆರದಿ 4ಜಂಬುಕವು ಹರಿಯೊಡನೆ ಸರಸವಾಡಿದ ಪರಿಯೊಳಂಬುಜಾಕ್ಷನ ದಾಸನಿಂದೆ ಮಾಡಸಲ್ಲಕುಂಭಿಪಾಕಿನಿಯಲ್ಲಿ ಮರಳಿಸುವ ಭಯವರಿತುನಂಬು ಪ್ರಸನ್ವೆಂಕಟೇಶನಂಘ್ರಿಯ 5
--------------
ಪ್ರಸನ್ನವೆಂಕಟದಾಸರು
ಏನು ಮರುಳಾದೆಯೇ ಎಲೆ ರುಕ್ಮಿಣಿ |ಹೀನಕುಲ ಗೊಲ್ಲ ಶ್ರೀ ಗೋಪಾಲಗೆ ಪಹಾಸಿಕಿಲ್ಲದೆ ಪೋಗಿ ಹಾವಿನೊಳು ಪವಡಿಸಿದ |ಹೇಸಿಕಿಲ್ಲದೆ ಕರಡಿಯನುಕೂಡಿದ||ಗ್ರಾಸಕಿಲ್ಲದೆ ಪೋಗಿ ದಾಸನ ಮನೆಯಲುಂಡ |ದೋಷಕಂಜದೆಮಾನವಶಿರವ ತರಿದವಗೆ1ಕುಂಡಗೋಳಕರ ಮನೆ ಕುಲದೈವವೆನಿಸಿದನು |ಮಂಡೆಬೋಳಾದವರ ಮನೆದೈವವು ||ಹಿಂಡುಗೋವಳರೊಳಗೆ ಹಿರಿಯ ಗೋವಳನೀತ |ಭಂಡಾಟಗಾರನಿವ ಭುವನದೊಳಗೆಲ್ಲ 2ಒಬ್ಬರಲಿ ಪುಟ್ಟಿದನು ಒಬ್ಬರಲಿ ಬೆಳೆದನು |ಒಬ್ಬರಿಗೆ ಮಗನಲ್ಲ ಭುವನದೊಳಗೆ ||ಅಬ್ಬರದ ದೈವಸಿರಿ ಪುರಂದರವಿಠಲನ |ಉಬ್ಬುಬ್ಬಿ ಮರುಳಾದೆ ಉತ್ಸಾಹದಿಂದ 3
--------------
ಪುರಂದರದಾಸರು
ಏನು ಮಾಡಿದರೇನು ಏನು ನೋಡಿದರೇನುದಾನವಾಂತಕ ನಿನ್ನನರಿಯದ ಪಾಪಿ ಪನಾನಾದೇಶವ ತಿರುಗಿ ಯಾತ್ರೆ ಮಾಡಿದರೇನುನಾನಾತೀರ್ಥವ ಮುಳುಗಿ ಸ್ನಾನ ಮಾಡಿದರೇನುನಾನಾಕ್ಷೇತ್ರದಿನಿಂದುದಾನ ಮಾಡಿದರೇನುದೀನರಕ್ಷಕ ನಿನ್ನ ಒಲುಮಿಲ್ಲದವರು 1ನಾನಾಗುಹೆಗಳ ಪೊಕ್ಕು ತಪವ ಮಾಡಿದರೇನುಮೌನದಿಂ ಕುರಿತು ಬಲುಜಪ ಮಾಡಿದರೇನುನಾನಾಶಾಸ್ತ್ರವ ಅರ್ಥಮಾಡಿದರೇನುಜಾನಕೀಶನೆ ನಿನ್ನ ದಯವಿಲ್ಲದವರು 2ನಾನಾಗುಡಿಗಳ ಪೊಕ್ಕು ಪ್ರತಿಮೆ ನೋಡಿದರೇನುನಾನಾಸತ್ಯರ ಮುಖವನಿತ್ಯನೋಡಿದರೇನುಧ್ಯಾನಿಕರಸುಲಭ ಶ್ರೀರಾಮ ನಿನ್ನಡಿಕುಸುಮಕಾಣದಧಮರು ಈ ಜಗದೊಳಗೆ ಪುಟ್ಟಿ 3
--------------
ರಾಮದಾಸರು
ಏನು ಮೆಚ್ಚಿದೆ ಎಲೆ ಹೆಣ್ಣೆ-ಏನು ಮರುಳಾದೆಯೆ |ಏನು ಮೆಚ್ಚಿದೆಯೆಲೆ ಹೆಣ್ಣೆ ಪನೋಟದಿ ಚೆಲುವನೆಂಬೆನೆ ಚಂಚಲರೂಪ|ಮಾಟದಿ ಚೆಲುವನೆ ಬೆನ್ನಲಿ ಬುಗುಟಿ ||ಗೂಟದಂತೆ ಹಲ್ಲು ಮೊಳದುದ್ದ ಮೋರೆಯು |ಬೂಟಕತನದಲ್ಲಿ ಬಾಯ ತೆರೆವನಿಗೆ 1ಅಣುರೂಪದವನಿವ ನಿಲುವು ಉಳ್ಳವನಲ್ಲ |ಬನವ ತವರಿವವನಂತೆ ಕೈಯಲಿ ಕೊಡಲಿ ||ಅನುಜರ ಬಿಟ್ಟು ಕಪಿಗಳ ಕೂಡಿ ಆಡುವ |ಮನೆಮನೆಗಳ ಪೊಕ್ಕು ಕದ್ದು ತಿಂಬವನಿಗೆ 2ಗಂಭೀರ ಪುರುಷನೆಂಬೆನೆ ದಿಗಂಬರನಿವ |ಅಂಬರದಲಿ ಕುದುರೆ ಕುಣಿಸುವನು ||ಅಂಬುಜಾಕ್ಷನಮ್ಮ ಪುರಂದರವಿಠಲಗೆ |ಸಂಭ್ರಮದಿಂದಲಿ ಮರುಳಾದೆ ಹೆಣ್ಣೆ 3
--------------
ಪುರಂದರದಾಸರು
ಏನು, ಬರೆದೆಯೊ ಬ್ರಹ್ಮ ಎಂತು ನಿರ್ದಯನು-ಅಭಿ |ಮಾನವನು ತೊರೆದು ಪರರನು ಪೀಡಿಸುವುದ ಪಬಲ್ಲಿದರ ಮನೆಯ ಬಾಗಿಲ ಕಾಯ್ದು ಬೇಸತ್ತು |ಸೊಲ್ಲುಸೊಲ್ಲಿಗೆಅವರಕೊಂಡಾಡುತ ||ಇಲ್ಲ ಈ ವೇಳೆಯಲಿ ನಾಳೆ ಬಾ-ಎನಲಾಗಿ |ಅಲ್ಲವನೆ ತಿಂದ ಇಲಿಯಂತೆ ಬಳಲುವುದ 1ಗೇಣೊಡಲ ಹೊರೆವುದಕೆ ಹೋಗಿ ನರರೊಳು ಪಂಚ-|ಬಾಣ ಸಮರೂಪ ನೀನೆಂದು ಪೊಗಳೆ ||ಮಾಣು ಎನ್ನಾಣೆ ನೀ ನಾಳೆ ಬಾ ಎಂದೆನಲು |ಗಾಣತಿರುಗುವ ಎತ್ತಿನಂತೆ ಬಳಲುವುದ2ಹಿಂದೆ ಬರೆದಾ ಬರೆಹ ಏನಾದರಾಗಲಿ |ಮುಂದೆನ್ನ ವಂಶದಲಿ ಪುಟ್ಟುವರಿಗೆ ||ಸಂದೇಹಬೇಡ ಶ್ರೀಪುರಂದರವಿಠಲನೇ |ಕಂದರ್ಪನಯ್ಯ ಉಡುಪಿಯ ಕೃಷ್ಣರಾಯ 3
--------------
ಪುರಂದರದಾಸರು
ಏನುಚೋದ್ಯಶ್ರೀನಿಧೆಹರಿಮಾನಿನಿಶ್ರೀದೇವಿ ಭೂದೇವಿರಮಣಪಸೃಷ್ಟಿಕರ್ತನೆಂದು ಪೇಳ್ವರು ಪಾಂಡವರ ಮನೆಯಬಿಟ್ಟಿ ಬಂಡಿಬೋವನೆಂಬೋರು ಪಾಂಚಾಲಿಗೆ ಒದಗಿದಕಷ್ಟಕಳೆದÀು ಪೊರೆದನೆಂಬೊರೊಕೆಟ್ಟದಾನವರ ಅಟ್ಟುಳಿಯ ಕಳೆದುದುಷ್ಟಕಂಸನವಧೆಯ ಸ್ಪಷ್ಟ ಪೇಳುತಿಹರೊ 1ಗಜನ ಸಲಹಿ ಪೊರೆದನೆಂಬೊರೊ ನೆಗಳೆಯನು ಸೀಳಿತ್ರಿಜಗದೊಡೆಯ ಶ್ರೀಶನೆಂಬೊರೊ ಪ್ರಹ್ಲಾದ ಧೃವಗೆನಿಜಸೌಭಾಗ್ಯ ಇತ್ತೆ ಎಂಬೊರೊವಿಜಯಸಾರಥಿಯ ವಿಶ್ವರೂಪ ತೋರಿಸುಜನರನ್ನು ಪೊರೆದ ನಿಜವ ಪೇಳುತಿಹರು 2ವತ್ಸಾಸುರನ ಮಡುಹಿದೆಂಬೊರೊ ಅಡವಿಯಲಿ ಕಾಡ-ಕಿಚ್ಚನುಂಗಿ ಬೆಳೆದಿ ಎಂಬೊರೊ ತಾಯಿಗೆ ಬಾಯೋಳಹೆಚ್ಚಿನ್ವಿಷಯ ತೋರ್ದಿ ಎಂಬೊರೊಕಚ್ಚ ಬಂದ ಘಣಿಯ ಮೆಟ್ಟಿ ತುಳಿದು ಜಲವಸ್ವಚ್ಛಗೈದನೆಂದಾಶ್ಚರ್ಯ ಪೇಳುತಿಹರೊ 3ಕರಡಿ ಮಗಳು ಮಡದಿಯೆಂಬೊರೊ ಪುಷ್ಪವನು ತರಲುತೆರಳಿ ಯುದ್ಧ ಮಾಡ್ದನೆಂಬೊರೊ ದೇವೇಂದ್ರನ ಗೆಲಲುತರುಣಿ ಸಮರಗೈದಳೆಂಬೊರೊಮುರಳಿನಾದದಿಂದ ತರುಣಿಯರ ಮನವಮರುಳುಗೈದನೆಂದು ಪರಿಪರಿ ಪೇಳುವರೊ 4ಕೆಟ್ಟದ್ವಿಜನ ಪೊರೆದಿ ಎಂಬೊರೋ ವನವನವ ಚರಿಸಿಸುಟ್ಟ ದಾಸಗೊಲಿದೆ ಎಂಬೊರೋ ಒಪ್ಪಿಡಿಯ ಗ್ರಾಸವಕೊಟ್ಟದ್ವಿಜನ ಪೊರೆದಿಯೆಂಬೊರೊಅಟ್ಟಹಾಸದಿ ತಂದ ರುಕ್ಮಿಣಿಯ ತನ್ನಪಟ್ಟದರಸಿಯೆಂದು ಸ್ಪಷ್ಟ ಪೇಳುತಿಹರೊ 5ಶಿಲೆಯ ಸತಿಯಗೈದನೆಂಬರೊ ಅಡವಿಗಳ ಚರಿಸಿಬಲುಕಪಿಗಳ ಕೂಡ್ದನೆಂಬೊರೊ ಭಯ ಭಕ್ತಿಗೆ ಮೆಚ್ಚಿಫಲದ ಎಂಜಲ ಸವಿದನೆಂಬೊರೊ ಮೆಚ್ಚಿಸುಲಭದಿಂದ ದೈತ್ಯಕುಲವನೆಲ್ಲ ಸವರಿಛಲದ ದಶಶಿರನ ವಧೆಯ ಪೇಳುತಿಹರೊ 6ಪುಟ್ಟಬ್ರಹ್ಮಚಾರಿ ಎಂಬೋರೊ ಬಲಿರಾಜನ ಬೇಡಿಕೊಟ್ಟದಾನ ಕೊಂಡನೆಂಬೋರೊ ಈರಡಿಯನಳೆದುಮೆಟ್ಟಿ ಸಿರವ ತುಳಿದನೆಂಬೋರೊಎಷ್ಟು ಪೇಳಲಿ ನಿನ್ನ ಶ್ರೇಷ್ಠಗುಣಗಳನ್ನುದಿಟ್ಟ ಕಮಲನಾಭ ವಿಠ್ಠಲ ಸರ್ವೇಶ 7
--------------
ನಿಡಗುರುಕಿ ಜೀವೂಬಾಯಿ