ಒಟ್ಟು 1575 ಕಡೆಗಳಲ್ಲಿ , 108 ದಾಸರು , 1290 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನೆಲೆಯಾವುದಯ್ಯ ಹೊಲಬಾವುದಯ್ಯತಿಳಿದು ಆತ್ಮನನು ತಿಳಿಯದ ಮನುಜರಿಗೆ ಪ ವೇದ ಸಾರವನೋದಿ ವೇದದರ್ಥವ ಕಂಡುಆದಿಯಾಗಿಹಅನಾದಿ ಮೂರುತಿಯನ್ನುಸಾಧಿಸಿ ಸಾಧ್ಯವಾಗದೆ ಸರ್ವರೊಳಗಾಗಿಬಾಧೆಯೊಳಗೆ ಸಿಕ್ಕುಬಿದ್ದ ಮನುಜಗೆ 1 ತನುದುಸ್ಥಿತಿಯ ಕಂಡು ತನುವಲಿಹನ ಕಂಡುಚಿನುಮಯವಾದ ಚಿದ್ರೂಪನೆಂಬನಮನದ ಕೊನೆಯಲಿಟ್ಟು ಮಥಿಸಲಾರದೆ ತಾನುಘನ ದುಃಖದೊಳು ಬಿದ್ದು ಗಲಭೆಯಾದವಗೆ2 ಕರಣ ಚರಿತೆಯ ನೋಡಿ ಕರಣ ಸಾಕ್ಷಿಯ ಕಂಡುಸ್ಥಿರ ಬುದ್ಧಿಯಾಗಿಯೆ ಸ್ಥಿಮಿತನಾಗದೆ ತಾನುವರ ಚಿದಾನಂದ ಪದ ಹೊಂದಲಾರದೆ ನರಕದೊಳಗೆ ಬಿದ್ದು ನರಳಾಡುವವನಿಗೆ 3
--------------
ಚಿದಾನಂದ ಅವಧೂತರು
ನೈವೇದ್ಯವಿದು ಭುಂಜಿಸಲು ಯೋಗ್ಯವಾಗಿದೆಕೈವಲ್ಯದಾಯಕ ನೀನಾರೋಗಣೆ ಮಾಡು ಪಆದಿತ್ಯ ವಸು ರುದ್ರ ಬ್ರಹ್ಮಾದಿ ಸಕಲ ದೇವರ್ಕಳು ಮಂಡಲದೊಳಗಿಹರುಆದಿಯೊಳ್ ಭೂಮಿಯ ಪ್ರೋಕ್ಷಿಸಿ ಮತ್ತಲ್ಲಿಸಾಧಿಸಿ ಮಂಡಲವದು ರಂಜಿಸುತಲಿದೆ 1ಭೋಗ್ಯ ಭೋಕ್ತøಗಳೆಂದು ಬಗೆಯರಡಾಗಿದೆಭೋಗ್ಯವು ಜಗವಿದು ಭೋಕ್ತø ನೀನುಪ್ರಾಜ್ಞ ರೂಪದಿ ಸುಪ್ತಿ ಸುಖಸಾಕ್ಷಿರೂಪನೆಸಾಘ್ರ್ಯಪಾದ್ಯಗಳಿಂದ ಸತ್ಕರಿಸುವೆನೀಗ 2ಜಡಪ್ರಕೃತಿಯೆ ಪಾದವೆಂಟರ ಪೀಠವುಜಡವಿರಹಿತವಾದ ಪ್ರಕೃತಿ ತಾ ಮಣೆಯುದೃಢ ವಿವೇಕವೆ ದಿವ್ಯ ಹರಿವಾಣವದರಲ್ಲಿಒಡಗೂಡುವನುಭವವೆಂಬನ್ನ ಬಡಿಸಿದೆ 3ಇಪ್ಪತ್ತುನಾಲ್ಕು ತತ್ವಂಗಳೆ ಶಾಕಂಗಳೊಪ್ಪುವ ಬಹು ವಿಷಯಗಳೆ ವ್ಯಂಜನವುತಪ್ಪದೆ ಮಾಡುವ ಭಕ್ತಿ ತಾ ರಸವುತುಪ್ಪವು ಜೀವನ ಬೆರಸುವ ಗುಣವು 4ಪರಮನೊಳೈಕ್ಯವಾದನುಭವ ಕ್ಷೀರವುನೆÀರೆ ಪುಟ್ಟಿದಾನಂದ ತಾನೆ ಸಖ್ಖರೆಯುತಿರುಪತಿ ನಿಲಯ ಶ್ರೀ ವೆಂಕಟರಮಣನೆಕರುಣಕಟಾಕ್ಷದಿಂದಾರೋಗಣೆ ಮಾಡು5ಓಂ ನವನೀತವಿಲಿಪ್ತಾಂಗಾಯ ನಮಃ
--------------
ತಿಮ್ಮಪ್ಪದಾಸರು
ನೊಂದು ಸಂಸಾರದೊಳಗೊಂದಿಸುವೆನೋ ಇಂದು ಮಾಧವ ಯಾದವ ಪ ಕರುಣಬಾರದೆ ನಿನಗೆ ಅಕಟಕಟ ಅಕಟಕಟ ಶರಣ ನಾ ನಿನಗಲ್ಲವೇ ಸ್ವಾಮಿ ನಿನ್ನ ಮೊರೆಹೊಕ್ಕೆ ಸರ್ವಾಂತರ್ಯಾಮಿ-ಎನ್ನ ಎರವು ಮಾಡುವರೇನೋ ಪ್ರೇಮಿ-ಇನ್ನು ಪರಿಹರಿಸು ಸಂಚಿತಾಗಾಮಿ-ಇದೇ ಸರಿಯೇನೊ ಜಗದೊಳಗೆ ಭಕುತವತ್ಸಲನೆಂಬ ಬಿರುದು ಪೊಳ್ಳಾಗದೇನೊ ನಿರುತ ಖ್ಯಾತ1 ಸತತ ಸುಖವುಳ್ಳರೆ ಬಾಯ್ದೆರೆದು ಪಲ್ಗಿರಿದು ನುತಿಸಿ ಬೇಡಿಕೊಂಬೆನೇ ನಿನ್ನ- ಮುಂದೆ ಗತಿಯ ಕಾಣದಲೆ ಚಾಲ್ವರಿದೆ ಭೇದ- ಮತಿ ಕೊಡದೆ ನೋಡುವುದು ಬರಿದೆ-ಸರ್ವ ಕ್ಷಿತಿಯೊಳಗೆ ನೀನೆಂದು ಅರಿದೆ-ವರ- ತತುವ ನಿಯ್ಯಾಮಕರ ಬಳಿ ಪಿಡಿದು ನಿನ್ನಂಘ್ರಿ ಶತಪತ್ರ ತೋರಿಸೈಯ್ಯಾ ಜೀಯಾ 2 ಶೃತಿಶಾಸ್ತ್ರ ಪೌರಾಣ ಭಾರತ ರಾಮಾಯಣ ಇತಿಹಾಸ ಪಾಂಚರಾತ್ರ ನಿಗಮ-ನಿನ್ನ ತುತಿಪ ಭಕುತರಿಗೆ ತಲೆಬಾಗಿ-ಕೊಂಡು ಪ್ರತಿದಿವಸದಲಿ ಚೆನ್ನಾಗಿ-ವಲಿದು ಅತಿಶಯವ ಕೊಡುತ ಲೇಸಾಗಿ-ವಿಘ್ನ ತತಿಕಳೆದು ನೀ ಬಂದು ಸಾರೆ ಬೆರಗಾಗುತಿದೆ ಪತಿತಿ ಪಾವನ ಮೋಹನ-ಚೆನ್ನ3 ತಡವ್ಯಾಕೆ ಗುಣಕಾಲ ಕರ್ಮದೇಶಗಳೆಲ್ಲ ವಡೆಯ ಎನ್ನಾಧೀನವೇ ಪೇಳೊ-ದು:ಖ ಬಿಡಿಸುವುದು ನಿನಗುಚಿತವಲ್ಲ-ಪಾಟು ಸಿರಿ ಲಕುಮಿನಲ್ಲ-ಒಂದು ನುಡಿವೆ ನಾನಾಂತರ್ಯ ಸೊಲ್ಲ-ಇಂತು ಕಡೆಮಾಡಿ ನೋಡದಿರು ದಿವಸ ಹಿಂದಾಗುತಿದೆ ಬಡವರಾಧಾರಿ ಕರುಣೀ-ದಾನಿ4 ಧ್ರುವನು ನಭದೊಳು ಇಲ್ಲಿ ರಾವಣಾನುಜ ಅಧೋ ಭುವನದಲಿ ಬಲಿರಾಯನ ನೋಡಿ, ನಾನು ತವಪಾದ ಗತಿಯೆಂದು ಬಂದೆ-ಮಹಾ ಭವಣೆ ಬಟ್ಟೆನೊ ಕೇಳು ಹಿಂದೆ-ಜಗದಿ ತ್ರಿವಿಧ ತಾಪಗಳಿಂದ ನೊಂದೆ-ಈ ಅವಸರಕೆ ಬಂದೊದಗಿ ನಿನ್ನ ನಾಮಾಮೃತದ ಸವಿದೋರೊ ದ್ವಾರಾವತಿಯ-ಜೀಯ 5 ಅಂಧಕೂಪದಲಿ ಬಿದ್ದವನ ನೋಡಿ ನಿನಗೆ ಚ ಕ್ಕಂದವಾಗಿದೆಯೊ ಕಾಣೆ-ನಾನು ಸಂದೇಹ ದ್ವೇಷದವನಲ್ಲ-ಇದು ಎಂದೆಂದಿಗೂ ಪುಸಿಯು ಅಲ್ಲ-ಹೃದಯ- ಮಂದಿರದೊಳು ಬಲ್ಲೆಯೆಲ್ಲ-ಸ್ವಾಮಿ ನೊಂದು ಕೂಗಿದರೆ ಎಳೆಗಂದಿಯೆಂಬಾ ಮಾತು ಇಂದು ಎತ್ತಲಿ ಪೋಯಿತೋ ತಾತ-ನೀತ 6 ಗುಣವಂತ ಬಲವಂತ ಜಯವಂತ ಸಿರಿವಂತ ಘನವಂತ ಧೈರ್ಯವಂತ ಶ್ರೀಕಾಂತ-ಎನ್ನ ಮನದ ದುಮ್ಮಾನವನೆ ಬಿಡಿಸೊ-ನಿನ್ನ ಅನವರತ ನಾಮವನು ನುಡಿಸೊ-ಮಧ್ವ ಮುನಿ ಕರುಣ ಕವಚವನು ತೊಡಿಸೊ-ಇದೇ ಜನುಮ ಜನುಮಕೆ ಬೇಡಿಕೊಂಬೆ-ಶರಣೆಂಬೆ ಪ್ರಣತ ಹೃದಯಾಬ್ಜ ತುಂಬೆ-ಕಾಂಬೆ 7 ಮಾನಸ್ನಾನವನುಂಡು ಮತಿಗೆಟ್ಟ ಪೂರ್ಣ ವಿ ಜ್ಞಾನಮಯನೆ ನಿನ್ನ ಮರೆದೆ-ಕರ್ಮ ಪ್ರಾಣೇಂದ್ರಿಯಂಗಳು ನಿನ್ನ ವಶವೊ-ಇಂಥ ಜಾಣತನ ಬಹಳ ಸಂತಸವೊ-ಹೀಗೆ ಮಾಣದಲೆ ಇಪ್ಪ ಸಾಹಸವೋ ಚನ್ನ ಜ್ಞಾನ ಭಕುತಿ ವಿರಕುತಿ ಕೊಟ್ಟು ನಿನ್ನವರೊಳಾನಂದದಲಿ ನಿಲ್ಲಿಸೈಯ್ಯ ಜೀಯ 8 ಶಂಖ ಚಕ್ರ ವರಾಭಯ ಹಸ್ತದಲಿ ನಿಂದ ವೆಂಕಟಾಚಲ ನಿವಾಸ ಶ್ರೀಶ-ನಿನ್ನ ಕಿಂಕರನ ಕಿಂಕರನೊ ನಾನು-ಅಕ- ಳಂಕ ಮನುಜನ ಮಾಡೊ ನೀನು-ಭವ ಸಂಕಟವ ಕಳೆಯಾ ಸುರಧೇನು-ಬೊಮ್ಮ ವಿನುತ ವಿಜಯವಿಠ್ಠಲ ಹರಿ- ಣಾಂಕ ಸೌವರ್ಣ ಪೂರ್ಣ ಸಂಪೂರ್ಣ 9
--------------
ವಿಜಯದಾಸ
ನೊಂದೆ ನಾನಾವಿಧದಲೀ ಬಂದ ಜನ್ಮಾವಧಿಯಲಿ ತಂದೆ ತಾಯಿ ಬಂಧು ಬಳಗ ಎಲ್ಲರೂ ನೀನೇ ಪ ಮಂದರಧರನೇ ಬೇಲೂರ ಚೆನ್ನಿಗರಾಯ ಹಿಂದಿಟ್ಟುಕೊ ಮುರಹರ ಸ್ವಾಮೀ ಅ.ಪ ಕುಕ್ಷಿಯೊಳೀರೇಳು ಲೋಕವನು ತಾಳ್ದನೇ ಪಕ್ಷಿವಾಹನಮೂರ್ತಿ ಮತ್ಸ್ಯಾವತಾರನೇ ಅಕ್ಷಯಾಗೆಂದು ದ್ರೌಪದಿಯ ಅಭಿಮಾನವನು ರಕ್ಷಿಸಿದ ಕೃಷ್ಣ ನೀನೆ ಸ್ವಾಮಿ 1 ಚಿಕ್ಕಂದು ಮೊದಲು ನಿನ್ನನು ನೆನೆವ ಬಾಲಕನಾ ಕಕ್ಕಸದ ಬಾಧೆಯಲಿ ಮೂದಲಿಪ ಹಿರಣ್ಯಕನಾ ಸೊಕ್ಕುಗಳ ಮುರಿದವನ ಕರುಳ ಮಾಲೆಯನಿಟ್ಟ ¨Àಕ್ತವತ್ಸಲನು ನೀನೇ ಸ್ವಾಮಿ 2 ಕರಿಕಂಠ ಹರನು ದಾನವನ ತಪಸಿಗೆ ಮೆಚ್ಚಿ ಅರಿತು ಅರಿಯದ ತೆರದಿ ಉರಿಹಸ್ತವನು ಕೊಡಲು ತರುಣಿ ರೂಪಿಲಿ ಪರಿಹರಿಸಿ ಭಸ್ಮಾಸುರನಾ [ಉರಿಸಿ]ಗೆಲಿದ ದೇವರದೇವಾ ಸ್ವಾಮಿ3 ಅಂದು ಮರೆಹೊಕ್ಕ ವಿಭೀಷಣಗೆ ರಾಜ್ಯವನು ಸಂದೇಹವಿಲ್ಲದಂದದಲಿ ಪಾಲಿಸಿ ನರನಾ ಮುಂದೆ ಸಾರಥಿಯಾಗಿ ರಥವ ನಡಸಿದ ಗೋ ವಿಂದ ಸಲಹಯ್ಯ ಯೆನ್ನನೂ [ಸ್ವಾಮಿ] 4 ದೇಶದೇಶದೊಳತ್ಯಧಿಕ ಕಾಶಿಗಿಂ ಮಿಗಿಲು ಭೂಸ್ವರ್ಗವೆನಿಪ ವೇಲಾಪುರವಾಸಾ ಕೇಶವ ಶ್ರೀವೈಕುಂಠ ಚೆನ್ನಿಗರಾಯಾ ಶೇಷಶಯನನೇ ಕರುಣಿಸೈ ಸ್ವಾಮೀ 5
--------------
ಬೇಲೂರು ವೈಕುಂಠದಾಸರು
ನೋಡಯ್ಯ ನಿನ್ನ ದಾಸರ ಮೇಲೆ ಕೃಪೆಗಳನುಮಾಡಯ್ಯ ಮನ್ಮನಕೆ ಸಂತಸವನುತೀಡಯ್ಯ ಭವಭಯದ ಪಾತಕಂಗಳ ದಾನವಾಡ ಗುಡ್ಡದ ತಿರುಮಲೇಶ ಸರ್ವೇಶ ಪ ಆದಿಯಲಿ ವೇದಗಳ ಕದ್ದುಕೊಂಡೊಯ್ದವನಸಾಧನಂಗೆಯ್ವೆನೆಂದಾಕ್ಷಣದೊಳುಪೋದನೆಲ್ಲೆನುತ ಶರನಿಧಿಯೊಳಗೆ ಪೊಕ್ಕ ಮ-ತ್ತಾ ದಿತ್ಯನಂ ಕೊಂದು ತಿಕ್ಕಿಮುಕ್ಕೆನೀ ದಯಾ ಪಾತ್ರನೆಂಬುದ ಕೇಳಿ ನಾನರಿತೆಭೂ ಧರೆಯ ಸುರರ ನೀ ಸಲುಹಲಾಗಪೋದ ನಿಗಮಂಗಳನು ತಂದು ಸಲೆ ರಕ್ಷಿಸಿದೆಆದಿ ಮತ್ಸ್ಯವತಾರ ಶರಣೆಂಬೆನು 1 ಮೂರ್ತಿ ನೀನಂದು ಬೇರೆಸುಮತವನು ಬೆನ್ನಲ್ಲಿ ಸಲೆ ಆತು ರಕ್ಷಿಸಿದೆಕಮಠಮೂರುತಿ ನಿನಗೆ ಶರಣೆಂಬೆನು 2 ಚಿನ್ನಗಣ್ಣವನೆಂಬನೊರ್ವ ಖಳ ಭೂದೇವಿಕನ್ನಿಕೆಯನೊಯ್ಯುತಿರೆ ಕನಲಿ ಮನದಿಇನ್ನು ಅವನನು ಸೆಣಸಿ ಜಯಿಸುವವರನು ಕಾಣೆನೆನ್ನುತಲಿ ರೋಮಗಳನುಬ್ಬೆತ್ತುತತನ್ನ ಮುಂಗೋರೆಗಳ ಮಸೆದೊಡನೆ ರಕ್ಕಸನಬೆನ್ನಟ್ಟಿ ಬರಸೆಳೆದು ಸದೆದೊರಗಿಸಿಚೆನ್ನಾಗಿ ಧರಣಿಯನು ತಂದು ಸಲೆ ರಕ್ಷಿಸಿದೆಹನ್ನೆರಡು ಪೆಸರವನೆ ಶರಣೆಂಬೆನು3 ಹೇಮಕಶ್ಯಪನೆಂಬ ನಾಮಜನ ಸುತನೊರ್ವನಾ ಮಹಾಘನವೆಂದು ನೆನೆಯುತಿರಲುತಾಮಸದ ಖಳ ತನ್ನ ತನುಜನನು ಮಥಿಸುತಿರೆರಾಮನನು ತೋರೆಂದು ಬಾಧಿಸುತಿರೆಧೂಮಜ್ವಾಲೆಗಳೊಡನೆ ಭುಗುಭುಗಿಲು ಛಿಟಿಲೆನುತಆ ಮಹಾ ರಕ್ಕಸನ ಪೊಡೆಯ ಸೀಳಿಪ್ರೇಮದಲಿ ಪ್ರಹ್ಲಾದಗೊಲಿದು ಪಟ್ಟವನಿತ್ತೆಸಾಮಜಾರಿಯ ವದನ ಶರಣೆಂಬೆನು 4 ಬಲಿಯಧ್ವರದ ಸಾಲೆಗೊಂದು ವೇಷವನಾಂತುಸಲೆ ಬಂದು ಧರೆಯ ಮೂರಡಿಯ ಬೇಡೆಒಲಿದು ಇತ್ತಪೆನೆನಲು ಧಾರೆಯನೆರೆಯಲಸುರಕುಲಗುರುವು ಜುಳಿಗೆಯೊಳು ತಡೆದು ನಿಲಲುಸಲಿಲ ವರ್ಜಿತ ನಯನನನು ಮಾಡಿ ಆಕಾಶನೆಲವೆರಡು ಪಾದವನ್ನಳೆದ ಬಳಿಕತಲೆ ಮೇಲೆ ಇರಿಸೆನಲು ತಳಕಿಳಿಸಿ ಅವನ ಬಾ-ಗಿಲ ಕಾಯ್ದ ವಾಮನನೆ ಶರಣೆಂಬೆನು 5 ರೇಣುಕೆಯ ಬಸುರಿನಲಿ ಜನಿಸಿ ಪಿತನಾಜ್ಞೆಯನುಮಾಣಬಾರದು ಎಂಬ ಮತವ ಪಿಡಿದುಕ್ಷೂಣವಿಲ್ಲದೆ ತಾಯ ಶಿರವರಿದು ತಂದೆಯನುಪ್ರಾಣಹತ್ಯವ ಮಾಡಿದರ ಕುಲವನುಕ್ಷೋಣಿಗೆರಗಿಸಿ ಕಾರ್ತವೀರ್ಯಾರ್ಜುನನ ಮಡುಹಿಜಾಣತನದಲ್ಲಿ ಭೂದಾನಗಳ ಭೂಸುರರಕಾಣುತಲೆ ಕರೆಕರೆದು ಕೊಟ್ಟೆಯೈ ನೀನು ಪೂಬಾಣಜನಕನೆ ರಾಮ ಶರಣೆಂಬೆನು 6 ಸೀತೆಯನು ಕದ್ದು ಒಯ್ದವನ ಕೊಲ್ಲುವ ಭರದಿಭೂತಳದ ಕಪಿಗಳನು ಕೂಡಿಕೊಂಡುಸೇತುವೆಯ ಕಟ್ಟಿ ಶರನಿಧಿ ದಾಟಿ ಬರಲಾಗಭೂತಗಣ ಸಂತತಿಯು ನಡುನಡುಗುತಿರಲುಚೇತನದ ರಾವಣೇಶ್ವರ ಕುಂಭಕರ್ಣ ಸ-ತ್ತ್ವಾತಿಶಯ ರಕ್ಕಸರ ಇರಿದೊರಗಿಸಿಮಾತು ಲಾಲಿಸಿ ವಿಭೀಷಣಗೆ ಪಟ್ಟವನಿತ್ತದಾತ ರಘುನಾಥನೇ ಶರಣೆಂಬೆನು 7 ಶಕಟ ಕುಕ್ಕುಟ ಧೇನುಕಾಸುರರ ಪೂತನಿಯಬಕ ವತ್ಸಹಕ ವೃಷಾಸುರ ಮುಖ್ಯರಪ್ರಕಟದಿಂದರಿದು ಕರಿಯನು ಸೀಳಿ ತನಗೆ ಸಂ-ಮುಖರಾದ ಮಲ್ಲರನು ಇರಿದೊರಗಿಸಿಮುಕುರ ದಂತ್ಯದ ಹಮ್ರ್ಯದೊಳಗಿಂದ ಕಂಸನಪುಕಪುಕನೆ ತಿವಿದವನನಿರಿದೊರಗಿಸಿಸಕಲವೆಸೆದಿರ್ದ ಮಧುರಾಪುರವ ಉಗ್ರಸೇನಕಗಿತ್ತ ಕೃಷ್ಣನೇ ಶರಣೆಂಬೆನು 8 ಮೂರು ಪುರದಬಲೆಯರ ವ್ರತಗಳನೆ ಕೆಡಿಸಲಿಕೆಬೇರೊಂದು ಅಶ್ವತ್ಥ ವೃಕ್ಷವಾಗಿನಾರಿಯರ ವ್ರತಭಂಗಗೆಯ್ಯಲಾ ದೆಸೆಯಿಂದಊರುತ್ರಯವದು ತಿರುಗುವುದು ನಿಲ್ಲಲಾಗನೀರ ಮಸ್ತಕದಲ್ಲಿ ಧರಿಸಿದನ ಕರವಿಲ್ಲನಾರಿಯೊಳು ನಾರಾಯಣಾಸ್ತ್ರವಾಗಿಘೋರತನವೆತ್ತ ತ್ರಿಪುರದ ಕೀಲ ಪರಿದ ಮದನಾರಿ ಸಖ ಬುದ್ಧನೇ ಶರಣೆಂಬೆನು 9 ಮದವೆತ್ತ ರಕ್ಕಸರು ಮಹಿಯೊಳಗೆ ಹೆಚ್ಚಲುತ್ರಿದಶಾಂತ ನಡನಡನೆ ನಡುಗುತಿರಲುಬೆದರಬೇಡೆನುತ ಅಭಯವನಿತ್ತು ಮುದದಿಂದಸುಧೆಯೊಳಗೆ ಬಂದು ಜನಿಸಿಕುದುರೆವಾಹನನಾಗಿ ಕುಂಭಿನಿಯ ಮೇಲೆ ತನಗಿದಿರಾದ ರಾವುತರನಿರಿದೊರಗಿಸಿಮೊದಲ ಭಾಷೆಯನು ದಿವಜರಿಗಿತ್ತೆ ಬೇಗದಲಿಚದುರ ಕಲ್ಕ್ಯವತಾರ ಶರಣೆಂಬೆನು10 ಇಂತು ದಶ ಅವತಾರಗಳನೆತ್ತಿ ರಕ್ಕಸರಸಂತತಿಯನೊರಸಿ ಭೂಭಾರವಿಳುಹಿಕಂತುಪಿತ ತಿರುವೆಂಗಳೇಶ ತಿರುಮಲೆಯೊಳಗೆಚಿಂತಿಸುವ ಭಕ್ತರನು ಪಾಲಿಸುತಲಿದಂತಿರಾಜನ ಪೊರೆದು ದಾನವಾಡಿಗೆ ಬಂದುನಿಂತಾದಿಕೇಶವನೆ ಶರಣೆಂಬೆನು 11
--------------
ಕನಕದಾಸ
ನೋಡಿ ನೋಡಿ ನಿಮ್ಮೊಳು ನಿಜಘನವ ಧ್ರುವ ಆಧಾರ ದೃಢದಿಂದ ಆರು ಸ್ಥಳವ ಮುಟ್ಟಿ ಆದಿ ಅನಾದಿಯ ಪಥವು ನೋಡಿ 1 ಭೂಚರ ಖೇಚರಚಾಚರ ಗೋಚರ ಅಲಕ್ಷ ಮುದ್ರೆಯ ಸ್ಥಾನ ನೋಡಿ 2 ಪರಾಪಶ್ಯಂತಿಯು ಮಧ್ಯಮ ವೈಖರಿ ಸಾರ ನೋಡಿ3 ಪಂಚತತ್ವದ ಗತಿ ಪಂಚಪ್ರಾಣವದ ಸ್ಥಿತಿ ಪಂಚಕರುಣಾಕೃತಿ ಗತಿ ನೋಡಿ 4 ಸ್ಥೂಲ ಸೂಕ್ಷ್ಮಕಾರಣ ಮಹಾಕಾರಣ ನೋಡಿ ಆನಂದಗತಿಯಲಿ ಬೆರೆದಾಡಿ 5 ಶೂನ್ಯ ಮಹಾ ಶೂನ್ಯ ನಿಶ್ಯೂನ್ಯ ನೋಡಿ 6 ಮಹಿಪತಿಸ್ವಾಮಿ ಶ್ರೀಗುರು ಸರ್ವೋತ್ತಮ ನೋಡಿ ಆನಂದಗತಿಯಲಿ ಬೆರೆದಾಡಿ 7
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ನೋಡಿ ನೋಡಿನೊ ರಂಗಾ ನಿನ್ನ ನೋಡಿನೊ ಆಡಲೇನಯ್ಯಾ ಪರಸತಿಯರ ಮೋಹಕ್ಕೆ ಸಿಲುಕಿ ಪ ಹೆಣ್ಣ ನಾ ಕಾಣುತ ಮನಸು ದ್ರವಿಸುವದು ದೃಢವಾಗಿ ಮುನ್ನೆ ದಾರಿದ್ರತನ ಯೆಣಿಸಿಕೊಳದೆ ಕಣ್ಣು ಹೋಗುವ ಸುದ್ದಿ ತಿಳಿಯದಲೆ ನೀಕ್ಷಿಸಿ ನಿತ್ಯ 1 ಜಲ್ಪಸಿಲ್ಪಿಗಳಿಂದ ಮಂತ್ರ ಮಾಡುವೆ ಅವಳಾ ಬಲ್ಪು ವಯ್ಯಾರ ಗುಣಗುಣಿಸಿಕೊಳುತಾ ತಲ್ಪಮಿಕ್ಕಾದ ಭೋಗದ್ರವ್ಯ ಬಯಸಿ ವಿ ಕಲ್ಪ ಸಂಕಲ್ಪದಲ್ಲಿ ಬಳುಲುವೆನುಬ್ಬಸವಳಿದು 2 ವ್ಯಾಖ್ಯಾತ ಪಂಡಿತದ್ವ್ಯಾಪಕ ಪಾಠಕ ಮಹಾ ಪ್ರಖ್ಯಾತ ವೇದವೇದಾಂತ ಪ್ರೌಢ ಸೌಖ್ಯ ಪುಸ್ತಕ ಪಾಣಿ ಜ್ಞಾನಿ ಎನಿಸಲು ಅವಳ ಆಖ್ಯಾನ ಕೇಳುತಲೆ ಕಿವಿಗೊಟ್ಟು ಲಾಲಿಸುವೆ 3 ಬೀದಿಯೊಳು ಪೋಗುವವಾಳೊಂದು ಪ್ರಯೋಜನಕೆ ಹಾದಿಯನು ಹಿಡಿದು ಸಮೀಪ ಬರಲು ಪಾದಕಾದರು ಬಿದ್ದು ಮಾತಾಡುವೆನೆಂಬೊ ಮೋದವನು ತಾಳಿ ಏಕಾಂತ ಹುಡುಕುವೆ 4 ಅಂಧಕ ಮೂಕಿ ಬಧಿರೆ ಹೀನಾಂಗ ಅವರೋತ್ತಮ ಜಾತಿ ವಿಧಿ ನಿಷೇಧವನು ಚಿಂತಿಸದೆ ತೀವರದಿಂದ ಅಧೋಗತಿಗೆ ಇಳುವೆನು ಸತ್ಕರ್ಮವನು ತೊರೆದು 5 ನೀರು ಸೀರೆವೊಗಿವಾಗ ಮೈ ತೊಳೆದು ಉಡುವಾಗ ಉರು ಕುಚ ಕಚ ನೋಳ್ಪ ಆಶೆಯಲ್ಲಿ ಮೂರು ಹತ್ತನೆ ತತ್ವ ನೆನೆನೆನೆದು ಯೋಚಿಸಿ ವಾರಿತಿಯ ಕೇಳಿ ತಲೆದೂಗುವೆನೊ ಲೇಸಾಗಿ 6 ಕಣ್ಣುಯಿದ್ದದಕೆ ಸಾರ್ಥಕವಾಗಲಿಲ್ಲ ಪ್ರ ಸನ್ನ ಮೂರುತಿ ಯೆನ್ನ ಸಾಧನವೇನೊ ಘನ್ನ ಏಲ್ಲೆಲ್ಲಿ ನಾ ನೋಡಿದರೆ ಅಲ್ಲಲ್ಲಿ ನಿನ್ನ ರೂಪವ ತೋರೊ ವಿಜಯವಿಠ್ಠಲ ಒಲಿದು 7
--------------
ವಿಜಯದಾಸ
ನೋಡಿ ಮರುಳಾಗದಿರು ಪರಸತಿಯರ ಪ ನಾಡೊಳಗೆ ಕೆಟ್ಟವರ ಪರಿಯ ನೀನರಿತು ಅ ಶತಮಖವ ಮಾಡಿ ಸುರಸಭೆಗೈದ ನಹುಷ ತಾನಾತುರದಿ ಶಚಿಗೆ ಮನಸೋತು ಭ್ರಮಿಸಿಅತಿ ಬೇಗ ಚಲಿಸೆಂದು ಬೆಸಸಲಾ ಮುನಿಯಿಂದಗತಿಗೆಟ್ಟು ಉರಗನಾಗಿದ್ದ ಪರಿಯರಿತು 1 ಸುರಪತಿಯು ಗೌತಮನ ಸತಿಗಾಗಿ ಕಪಟದಿಂಧರೆಗೆ ಮಾಯಾವೇಷ ಧರಿಸಿ ಬಂದುಪರಮ ಮುನಿಯ ಶಾಪದಿಂದಂಗದೊಳು ಸಾ-ಸಿರ ಕಣ್ಗಳಾಗಿರ್ದ ಪರಿಯ ನೀನರಿತು 2 ಸ್ಮರನ ಶರತಾಪವನು ಪರಿಹರಿಸಲರಿಯದೆದುರುಳ ಕೀಚಕನು ದ್ರೌಪದಿಯ ತುಡುಕಿಮರುತ ಸುತ ಭೀಮನಿಂದಿರುಳೊಳಗೆ ಹತನಾಗೆನರಗುರಿಯೆ ನಿನ್ನ ಪಾಡೇನು ಧರೆಯೊಳಗೆ3 ಶರಧಿ ಮಧ್ಯದೊಳಿದ್ದುದುರುಳ ದಶಶಿರನು ಜಾನಕಿಯನೊಯ್ಯೆಧುರದೊಳಗೆ ರಘುವರನ ಶರದಿಂದ ಈರೈದುಶಿರಗಳನೆ ಹೋಗಾಡಿಸಿದ ಪರಿಯನರಿತು 4 ಇಂತಿಂಥವರು ಕೆಟ್ಟು ಹೋದರೆಂಬುದನರಿತುಭ್ರಾಂತಿಯನೆ ಬಿಟ್ಟು ಭಯಭಕ್ತಿಯಿಂದಕಂತುಪಿತ ಕಾಗಿನೆಲೆಯಾದಿಕೇಶವನ ನಿ-ರಂತರದಿ ಭಜಿಸಿ ನೀ ನಿತ್ಯಸುಖಿಯಾಗು 5
--------------
ಕನಕದಾಸ
ನೋಡಿದೆ ಗುರುಗಳ ನೋಡಿದೆ ಪ ನೋಡಿದೆನು ಗುರುರಾಘವೇಂದ್ರರ ಮಾಡಿದೆನು ಭಕುತಿಯಲಿ ವಂದನೆ ಬೇಡಿದೆನು ಕೊಂಡಾಡಿ ವರಗಳ ಈಡು ಇಲ್ಲದೆ ಕೊಡುವ ಗುರುಗಳಅ.ಪ ಗಾಂಗೇಯ ಶಯ್ಯಜನು ಈ ನದಿಯ ತೀರದಲ್ಲಿ ಯಾಗವ ಮುದದಿ ರಚಿಸಿ ಪೂರೈಸಿ ಪೋಗಿರ ಲದನು ತಮ್ಮೊಳು ತಿಳಿದು ತವಕದಿ ಹೃದಯ ನಿರ್ಮಲರಾಗಿ ರಾಗದಿ ಬುಧಜನರ ಸಮ್ಮೆಳದಲಿ ಸಿರಿ ವದನನಂಘ್ರಿಯ ತಿಳಿದು ನೆನೆವರ ಉದಿತ ಭಾಸ್ಕರನಂತೆ ಪೊಳೆವರ 1 ಆಲವಬೋಧ ಮಿಕ್ಕಾದ ಮಹಮುನಿ ಗಳು ಸಅಂಶರು ಒಂದು ರೂಪದಿ ನೆಲೆಯಾಗಿ ನಿತ್ಯದಲಿ ಇಪ್ಪರು ಒಲಿಸಿಕೊಳುತಲಿ ಹರಿಯ ಗುಣಗಳ ತಿಳಿದು ತಿಳಿಸುತ ತಮ್ಮ ತಮಗಿಂ ರಧಿಕರಿಂದುಪದೇಶ ಮಾರ್ಗದಿ ಕಲಿಯುಗದೊಳು ಕೇವಲ ಕ ತ್ತಲೆಯ ಹರಿಸುವ ಸೊಬಗ ಸಂತತ 2 ರಾಮ ನರಹರಿ ಕೃಷ್ಣ ಕೃಷ್ಣರ ನೇಮದಿಂದೀ ಮೂರ್ತಿಗಳ ಪದ- ತಾಮರಸ ಭಜನೆಯನು ಮಾಳ್ಪರು ಕೋಮಲಾಂಗರು ಕಠಿನಪರವಾದಿ ಸ್ತೋಮಗಳ ಮಹಮಸ್ತಕಾದ್ರಿಗೆ ಭೂಮಿಯೊಳು ಪವಿಯೆನಿಸಿದ ಯತಿ ಯಾಮ ಯಾಮಕೆ ಎಲ್ಲರಿಗೆ ಶುಭ ಕಮಿತಾರ್ಥವ ಕರೆವ ಗುರುಗಳ 3 ನೂರು ಪರ್ವತ ವರುಷ ಬಿಡದಲೆ ಚಾರು ವೃಂದಾವನದಲಿ ವಿ ಸ್ತಾರ ಆರಾಧನೆಯು ತೊಲಗದೆ ವಾರವಾರಕೆ ಆಗುತ್ತಿಪ್ಪುದು ಸಾರೆ ಕಾರುಣ್ಯದಲಿ ಲಕುಮೀ ನಾರಾಯಣ ತಾ ಚಕ್ರರೂಪದಿ ಸಾರಿದವರಘವ ಕಳೆದು ಇವರಿಗೆ ಕೀರುತಿಯ ತಂದಿಪ್ಪುದನುದಿನ4 ಮಿತವು ಎನದಿರಿ ಇಲ್ಲಿ ದಿನ ದಿನ- ಕತಿಶಯದೆ ಆಗುವುದು ಭೂಸುರ ತತಿಗೆ ಭೋಜನ ಕಥಾಶ್ರವಣ ಭಾ- ರತ ಪುರಾಣಗಳಿಂದಲೊಪ್ಪುತ ಕ್ಷಿತಿಯೊಳಗೆ ಮಂಚಾಲೆ ಗ್ರಾಮಕೆ ವ್ರತಿಯ ಇಲ್ಲವೆಂದೆನಿಸಿಕೊಂಬುದು ಪತಿತಪಾವನ ವಿಜಯವಿಠಲನ ತುತಿಸಿಕೊಳ್ಳುತ ಮೆರೆವ ಗುರುಗಳ 5
--------------
ವಿಜಯದಾಸ
ನೋಡಿದೆ ಶ್ರೀಕೃಷ್ಣನ ನೋಡಿದೆ ಪ. ನೋಡಿದೆ ಒಂಬತ್ತುಗೂಡಿನ ಕಿಟಕಿಯೊಳ್ಕೂಡಿದ ಮಂದಿಯೊಳ್ಗಾಡಿಕಾರನನಿಂದುಅ.ಪ. ನಾರಿಪುರುಷರೊಂದುಗೂಡಿ ಮುಂದೆದಾರಿಯ ಬಿಡದೆ ಹೋರ್ಯಾಡಿ ದೇಹಯಾರದಂತೆÉ ಪುಡಿಪುಡಿ ಮತ್ತೆಶ್ರೀರಮಣನ ಪಾಡಿ ಬೇಡಿ ಆಹಾ ಸುತ್ತಸೇರಿದ ಜನರಿವರ ಮಧ್ಯದಿಚಾರು ಮೌಕ್ತಿಕದ ಮಣಿಹಾರÀ ಶೃಂಗಾರನ್ನ1 ಅಂಗದೊಳಿಹ ದಿವ್ಯಾಭರಣ ಕನ-ಕಂಗಳೊಪ್ಪಿದ ರವಿಕಿರಣ ಮುನಿ-ಪುಂಗವೆ ವಂದಿಪ ಚರಣಕಮ-ಲಂಗಳ ನೆನೆವರ ಕರುಣ ಆಹಾ ಹಿಂಗದೆÉ ಪೊರೆವ ಶ್ರೀರಂಗನುತ್ಸವÀಕೆಂದುಮಂಗಲಾರತಿಯಾಗಿ ಸಂಗಡ ಪೊರಡಲು 2 ಭರದಿಂದ ಪಲ್ಲಕ್ಕಿನೇರಿ ಮಧ್ವಸರೋವರದೆಡೆಯನು ಸಾರಿ ಸುತ್ತಮೆರೆವ ದೀಪದಿಂದೀರಿ (?) ನೋಳ್ಪ ಜ-ನರಿಗೆ ಜಲಕ್ರೀಡೆ ತೋರಿ ಆಹಾಸಿರಿ ಅರಸನು ಹಯವದನನೇರಿ ಮೆರೆವ ಉಡುಪಿಯೊಳ್ಪರಿಯಾಯ ವಿನೋದವನ್ನು 3
--------------
ವಾದಿರಾಜ
ನೋಡಿದೆನು ತಿರುವೆಂಗಳೇಶನಾ ಮಾಡಿದೆನು ಭಕುತಿಯಲಿ ವಂದನೆ ಬೇಡಿದೆನು ಕೊಂಡಾಡಿ ವರಗಳ ನಾಡೊಳಗೆ ಈಡಿಲ್ಲದಪ್ಪನಾ ಪ ಘನಸುಂದರ ಜ್ಞಾನ ತೀರ್ಥ ಆನಂದ ಧನ ವರಹಾ ವೈರಾಗ್ಯನಿಲಿ ರ ತುನ ಚಂದ್ರಮ ವರಧÀರ್ಮ ನಾರಾ ಯಣ ಭಕುತಿ ಶ್ರೀಕಾಂತಿ ಬ್ರಹ್ಮಾ ರುಣ ವೃಷಭ ಶ್ರುತಿ ಗರುಡ ಸರ್ಪ ಜನತ ಪೂಜಿಪ ಸುರ ಸುಧಾನಂತ ಇನಿತು ಪೆಸರುಳ್ಳ ಪುಷ್ಕರಾದ್ರಿಯಾ1 ಖಗನ ಪೆಗಲಲಿ ನಗವ ತಂದ ಜಗದೊಳು ಸುವರ್ಣಮುಖರಿ ನಿ ಮ್ನಗ ತೀರದಲಿ ಸ್ಥಾಪಿಸಿದ ಸುತ್ತಲು ಝಗಝಗಿಸುದೆ ನೋಳ್ಪ ಜನರಿಗೆ ಹಿಮ್ಮೊಗವಾಗಿ ಪೋದವು ಯುಗ ಯುಗ ಕಥಾಭೇದ ಬಗೆಬಗೆ ಪೊಗಳಿದರೆ ನೆಲೆಗಾಣೆ ಅನುದಿನಾ 2 ಸರಸ್ವತಿಗೆ ಮುನಿಯಿಂದ ಶಾಪವು ಬರಲು ಭರದಲಿ ಬಂದು ವಿರಜಾ ಸರತಿಯೊಳು ಬೆರಸಿದಳ್ ತಪದಲಿ ಹರಿಯ ಕರುಣವ ಪಡೆದು ಪ್ರತಿದಿನ ಸ್ಮರಸಿದವರಿಗೆ ಪುಣ್ಯವೀವುತ ಸರುವ ಸರೋವರಧಿಕವೆನಿಪ ಸುಂ ದರ ಸ್ವಾಮಿ ಪುಷ್ಕರಣಿಯನು ತ್ರಿ ಕರಣ ಬಲು ಒಂದಾಗಿಬಿಡದಲೆ 3 ಎರಡೈದು ಪ್ರಾಕಾರ ಗೋಪುರಾ ಎರಡೈದು ದ್ವಾರಗಳು ಕಟ್ಟಿದಾ ಮಕರ ತೋರಣ ಧರೆಗೆ ಮಟ್ಟಿದ ಎಡಬಲದ ಪೂ ಸರಗಳೊಪ್ಪಲು ದ್ವಾರಪಾಲಕರಿ ರುತಿಪ್ಪರಲ್ಲೆಲ್ಲಿ ಕಾವುತಾ ನಿಕರ ತುಂಬಿರೆ ಪರಿಪರಿಯ ಮಂಟಪಗಳಿಂದಾ 4 ಭಂಗರಹಿತ ಬಂಗಾರಮಯವಾದಾ ತುಂಗ ಆನಂದ ನಿಲಯ ವಿಮಾನಾ ಕಂಗಗಳಿಗೆ ಬಲು ತೇಜಿಃಪುಂಜದಿ ಹಿಂಗದಲೆ ಗೋಚರಿಸುತದೆ ನರ ಸಿಂಗ ಮೂತ್ರ್ಯಾದಿಗಳು ಪ್ರಾಣ ಭು ಜಂಗಧರಾದಿ ದಿಕ್ಪಾಲರೆಲ್ಲರು ಸಂಗ ಮತಿಯಲಿ ವಾಸವಾಗಿರೆ ಮಂಗಳಾಂಗ ಪ್ರಿಯಾಂಗ ಪ್ರಿಯನಾ 5 ಮುಕ್ತಿ ಬೀದಿಗಳೆರಡು ವಿ ರಕ್ತಿ ಜ್ಞಾನ ಸತ್ಕರ್ಮ ಬಲು ದೃಢ ಭಕ್ತಿಯೋಗವು ಯಾವ ತ್ಯಾಗ ಸಂ ವ್ಯಕ್ತ ರಾಗವು ಈಪರಿ ಸು ಉಕ್ತಿ ದ್ವಾದಶ ಸಾಲ ಬೀದಿಗ ಳುಕ್ತ ಜನ ಸಂಚರಿಸುತ್ತಿಪ್ಪರು ಶಕ್ತನೊಬ್ಬನೆ ಜಗದೊಳೀತನೆ ವ್ಯಕ್ತ ಅವ್ಯಕ್ತದಲಿ ಚಿತ್ರವಾ 6 ಲೋಕೇಶ ಲೋಕಪಾಲಕರು ಖಗ ಕಾಕೋದರ ಗಂಧರ್ವ ಸನಕಾದಿ ಲೋಕ ಚಕ್ಷು ಸೀತಾಂಶು ಉದಿಸಿದರು ಏಕಾಂತನು ವಾಯುನಂದನ ಪಾಕಶಾಸನ ಸೌಮ್ಯ ಗುರು ಕವಿ ನಾಕಜನ ಮಿಗಿಲಾದ ಭಕ್ತರು ಏಕಗುಣವಾರಂಭಿಸಿ ಅ ನೇಕ ಗುಣದಲಿ ಭಜಿಸುತಿಪ್ಪುದಾ7 ಸಾರಿದರೆ ನೆಲೆದೋರದು ಕಂ ಸಾರಿ ಚಿನ್ಮಯ ಲೀಲೆಗೆ ಮತ್ತಾರಾದರು ಗಣ್ಯಮಾಳ್ಪರೆ ಧಾರುಣಿಲಿ ಮಧ್ಯದಲಿದಕೆ ಎ ದಿರುಗಾಣೆನು ಎಲ್ಲಿ ಚರಿಸಲು ಮಾರುತನು ತಾನೊಬ್ಬ ಬಲ್ಲ ವಿ ಸ್ತಾರವಿದರ ವಿಚಾರ ಮತಿಯಲಿ8 ಧೀರ ಜಗದೋದ್ಧಾರ ರಿಪು ಸಂ ಹಾರ ನಾನಾವತಾರ ನವನೀತ ಜಾರ ಶಿರೋಮಣಿ ಶ್ರೀ ನಾರಿಯರರಸನೆ ತಾ ಭಕ್ತ ಚ ಕೋರ ಚಂದ್ರಮ ಪೂರ್ಣ ಸುಂದರ ಸಾರ ಭವಾರ್ಣವತಾರ ಕಾರಣ ವೀರ ವಿತರಣ ಶೂರನೆನಿಪನ್ನ ದ್ವಾರದಲಿ ಬಂದು ಸ್ತುತಿಸಿದೆನು ನಿಂದೂ 9 ಈ ವೈಲಕ್ಷಣವುಳ್ಳ ದೊರೆತನ ಈ ವೈಭವ ಸರ್ವೋತ್ತಮನೆಂಬದು ಈ ವೈಭೋಗ ಸಾಕಲ್ಯವಾಗಿದೆ ಈ ವೈಯಾರವು ಈತಗಲ್ಲದೆ ಈ ವೈಕುಂಠನ ನೋಡುವುದು ಮಹಾ ಈ ವೈದಿಕದ ಭಾಗ್ಯಕ್ಕೆಣೆಯೆ ಈ ವೈಧಾತ್ರಿಗೆಯಿವನು ಪೇಳಿದ ಈ ವೈಚಿತ್ರವ ಕೇಳಿ ಮನದಲಿ 10 ರನ್ನಮಯ ಕಿರೀಟ ಕುಂಡಲ ಕರ್ಣ ಕಸ್ತೂರಿನಾಮ ಪಣೆಯಲಿ ಕೆನ್ನೆ ಚಂಪಕ ನಾಸದಂತ ಪ್ರ ಸನ್ನ ವದನಾಂಭೋಜಲೋಚನಾ ಚಿನ್ನಸರ ಉಡುದಾರ ಸರಿಗೆ ಮೋ ಹನ್ನ ಪೀತಾಂಬರ ನೂಪುರಗೆಜ್ಜೆ ಸನ್ನಿಧಿಗೆ ನಡೆತಂದು ದೇವವರೇ ಣ್ಯನಂಘ್ರಿಯ ನೆನೆದೆ ಚೆನ್ನಾಗಿ 11 ಮೆರೆವ ಉತ್ಸವ ವಾಹನಂಗಳು ನೆರೆದ ಪ್ರಜೆದಟ್ಟಡಿಯಾಗಿದೆ ನೋಡಿ ಎರಡೊಂದು ವಿಧದವರುಯಿಲ್ಲಿಗೆ ಬರುವರೈ ಅವರವರ ತಕ್ಕದು ಹರಿಯ ಫಲವನು ಕೊಡುವನಿಲ್ಲದೆ ಅರಮರೆ ಇಲ್ಲಿದಕೆ ಎಂದಿಗು ಮೊರೆವ ನಾನಾ ವಾದ್ಯ ರಭಸ ವಿ ಸ್ತರಿಸ ಬಲ್ಲೆನೆ ನೂತನೂತನಾ 12 ರಥದ ಸಂಭ್ರಮವಾರು ಬಲ್ಲರು ಪ್ರತಿಗಾಣೆ ಈ ಪೃಥ್ವಿಯೊಳಗೆ ಅ ಪ್ರತಿ ಸಾಹಸಮಲ್ಲ ತನ್ನಯ ಸತಿಯೊಡನೆ ಪರುಠವಿಸಿ ಪೊಳೆವುತ್ತ ಚತುರ ಬೀದಿಯ ಸುತ್ತಿ ಸುಮನಸ ತತಿಯ ಸಂಗಡ ಬರುವ ಭರ ಉ ನ್ನತವ ಗುಣಿಸುತ್ತ ನಲಿನಲಿದು ಅ ಚ್ಯುತನ ಕ್ರೀಡೆಯ ಸ್ಮರಿಸಿ ನಮೋ ಎಂಬೆ13 ರಾಜರಾಜೇಶ್ವರ ನಿರಂತರ ರಾಜಿಸುತಿಪ್ಪ ಬಗೆಬಗೆ ಸಂಪೂಜೆಯಲಿ ರಾಜೋಪಚಾರದಿ ಮೂಜಗದೊಳು ಈ ನಿಧಿಯಲಿದ್ದ ಸೋಜಿಗವೆ ಮತ್ತೆಲ್ಲಿಯಿಲ್ಲವು ರಾಜಶೇಖರ ಬಲ್ಲವನೊಬ್ಬನೆ ಮಾಜದಲೆ ಸಜ್ಜನರು ಸತ್ಕರ್ಮ ಬೀಜಮಂದಿ ಮಾಡಿಬಿಡಲೆ 14 ದರ ಸುದರಶನ ಪಾಣಿ ತನ್ನ ಸಂ ದರುಶನವೆಮಗಿತ್ತು ಘನ ಆ ದರ ಪಾಲಿಸಿ ಸಂಚಿತಗಾಮಿ ಪಠಿಸಿ ಪ್ರಾರಬ್ಧವೇ ತೀರಿಸಿ ಕರುಣದಿಂದಲಿ ದಿವ್ಯರೂಪದ ಗುರುತು ತೋರುವ ಅಂತರಂಗದಿ ಪರಮಪಾವನ ವಿಜಯವಿಠ್ಠಲ ಪೊರೆವ ಪ್ರೀತಿಲಿ ಬಂದು ಮರಿಯದೆ15
--------------
ವಿಜಯದಾಸ
ನೋಡಿದ್ಯಾ ಶ್ರೀರಾಮನ ನೋಡಿದ್ಯಾ ಪ. ನೋಡಿದ್ಯಾ ನಯನವೆ, ಕೊಂಡಾಡಿದ್ಯಾ ಮನವೆ ಪಾಡಿದ್ಯಾ ವದನವೆ ಬಾಗಿದ್ಯಾ ಶಿರವೇ ಅ.ಪ. ಕುವಲಯ ಶ್ಯಾಮ ಸುಂದರನ ಶ್ರೀ ಭುವಿಜಾತೆಯರಸನ ರಾಘವನ (ವರ) ಪವಮಾನಸುತ ಸಂಸೇನ್ಯನ ಸರ್ವವ್ಯಾಪಕ ಶ್ರೀ ರವಿಕುಲ ತಿಲಕನ ಭುವನಮೋಹನ ವಿಗ್ರಹನಾ 1 ಪಂಕ್ತಿರಥನಂದನನ ವರ ಪಂಕೇರುಹ ಪತ್ರೇಕ್ಷಣನ ವರ ಪಂಕಜಸಖನಿಭ ಭಾಸುರನ ಆಹಾ ಪಂಕಜಾಸನನ ಪೆತ್ತಾತನ ಶಂಕರಪ್ರಿಯ ಕೋದಂಡರಾಮನ 2 ದುಷ್ಟ ತಾಟಕಿಯನು ತಾ ಕೊಂದು ಎಸೆವ ಮಂಗಳಮೂರ್ತಿ ದಶರಥರಾಮನ 3 ದೃಢದಿಯಹಲ್ಯೆಯ ಶಾಪಕಳೆದು ಬಂದು ಪೊಡವಿಜಾತೆಯ ಕೈಪಿಡಿದು ಪಡೆದ ತಾಯ್ತಂದೆಯರ ಒಡಗೂಡಿ ಮೆರೆದಂಥ ಒಡೆಯ ರಾಘವನ 4 ದಾಸರ ದಾಸನೆಂದೆನಿಸಿದಾತನ 5 ಗರುಡವಾಹನ ಮುರಹರನ ವರ ಪರಶುಧರ ಗರ್ವಹರನಾ ಆಹಾ ವರಶೇಷಗಿರಿಯಲ್ಲಿ ಮೆರೆವ ವೆಂಕಟನಾ ಶರಣಾಭರಣ ಶ್ರೀ ನರಹರಿ ರೂಪನ 6
--------------
ನಂಜನಗೂಡು ತಿರುಮಲಾಂಬಾ
ನೋಡಿರೇ ನೋಡಿರಮ್ಮಾ ಚೆಲುವನಾ ನೋಡಿರೇ || ಇವ|| ರೂಢಿಗೆ ಆವನಿಜೆಯಾ ತಕ್ಕುವರನೇ ಮುದ್ದುಸ್ಮರನೇ ಪ ಪಾದ ಜಂಘಯಿಂದ ಜಾನೂರುಮಾರಾ ತ್ರಿವಳವೇ| ಹಾರ ದಿಯ ಕರ ಸರಳವೇ 1 ಮಂಡಿತದ ಕುಂಡಲವಾ| ಮೃಗಮದ ಕಿರೀಟ 2 ಆವರಾಯನಮಗನೋತಾನರಿಯೇ|ಭೂಸು| ರಾವಳಿಯೊಳಿಂದ್ಧಾರೇನು |ಅಂಗ| ದಾವ ತೇಜಮುಸುಕಿತು ಧರಿಯೇ|ತ್ರ್ಯೆಭುವನವರಕ್ಷಿಸ ಬಂದಾಹರಿಯೇ | ಮುಜ್ಜಿಮರಿಯೇ 3 ಮುಟ್ಟಿಲೀ ತಗಧನುಏಳಲಿ ಝಮ್ಮೆನೇ ನಾವು ನೆಟ್ಟನೆಪೂಜಿಪೆವು ಗೌರಮ್ಮನೇ ಎಂದು ಬಿಟ್ಟ ಮಗಳು ಬೇಡಿಕೊಂಡರು ಸುಮ್ಮನೇ ಆಡಿಯಿಟ್ಟುನಲಿದು ಬರುವ ರಾಮೊ ಘಮ್ಮನೇ ಪರಬೊಮ್ಮನೆ 4 ಬಂದು ನೋಡಿಬಿಲ್ಲನೆತ್ತಿದ್ದಾಚಕ್ಕನೇ ಅರುವಿಂದ ಲೋಚನೆ ಮಾಲಿ ಹಾಕಲು ಘಕ್ಕನೇ ವೃಂದ ಕಾಣುತ ಹೆದರಿತುಧಕ್ಕನೇ ನಮ್ಮ ತಂದೆ ಮಹಿಪತಿ ನಂದನ ಪ್ರಭು ಠಕ್ಕನೇ ಪಾಲಕ್ಕುನೇ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ನೋಡೋರು ಕೃಷ್ಣನ ನಾಡಿನ ಪ್ರಜರೆಲ್ಲಮೂಡಲಗಿರಿವಾಸನ ಬೇಡಿದವರಗಳ ನೀಡುವ ದಯದಿಕೊಂಡಾಡುವರು ವೆಂಕಟರಾಯನ ಪ. ಶ್ರೀನಿವಾಸನ ಕೋಟಿ ಆನೆ ಶೃಂಗರಿಸ್ಯಾವ ನಾನಾರತ್ನಗಳಿಂದ ಭಾನು ಕೋಟಿ ತೇಜ ತಾನು ನಿರ್ಮಿಸಿದನು ಏನೆಂಬೆÉನು ಛಂದ 1 ಚಿತ್ರ ವಿಚಿತ್ರದ ಮುತ್ತಿನ ಪಲ್ಲಕ್ಕಿ ರತ್ನ ಮಾಣಿಕ ಹಚ್ಚಿಚಿತ್ತ ಜನೈಯನ ಪ್ರತ್ಯೇಕ ವಿವರಿಸಿ ಅರ್ಥಿಹೇಳುವೆನಂದ2 ಎಂಟು ದಿಕ್ಕಿಗೆ ಒಪ್ಪೊಒಂಟಿ ಸಾಲಗಳು ವೈಕುಂಠಪತಿಯ ಮುಂದೆ ಕಂಠಿ ಚಿತ್ರವÀ ಬರೆಸಿ ಕರುಣಿ ವೆಂಕಟದಿವ್ಯಗಿಲೀಟು ವಸ್ತ್ರಗಳ ಹೊಚ್ಚಿ 3 ಹೇಳಲು ವಶವಲ್ಲ ಕಾಲೊಳುಆಭರಣವ ಭಾಳ ಮುತ್ತಿನ ಕುಚ್ಚುವ್ಯಾಳಾಶಯನನು ಅವರಿಗೆ ಹೇಳಿನೇಮಿಸಿದನು ಆಳುಮಂದಿಯು ಮೆಚ್ಚ4 ವಾಹನ ಸುತ ಸತಿಯರಿಗಿತ್ತು ಅತಿ ಸೇವ್ಯರು ಮೆಚ್ಚಿ5 ಕೆಂಚೆ ಕೃಷ್ಣನ ರಥಕೆ ಗೊಂಚಲ ಮುತ್ತುಗಳೆಷ್ಟಮಿಂಚುವ ಸೂರ್ಯನಂತೆ ಮುಂದೆ ನೊಡುಣು ಬಾರೇಚಂಚಲಾಕ್ಷಿ ಕೇಳೇ ವಿರಂಚಿ ಬೆರಗಾಗೋನಂತೆ6 ಚದುರ ರಾಮೇಶನ ಕುದುರೆ ಸಾಲುಗಳಿಗೆ ಅದ್ಬುತ ರತ್ನಗಳೆ ಮದನಜನಯ್ಯನುಮುದದಿ ನಿರ್ಮಿಸಿದನು ಸುದತೆ ಹೇಳುವೆ ಕೇಳೆ 7
--------------
ಗಲಗಲಿಅವ್ವನವರು
ನ್ನಿಂತಾವಳೀ ಜಗದೊಳುಂಟೇನೆ ರಮಣೀ ಪ ನಿಂತಾಗೆ ನುಂಗಿದಳು ಕಂತೆ ಕಬ್ಬಾ ಅ.ಪ ಗರತಿಯು ತಾನಲ್ಲ ಗೌಡಿಯ ತಾನಲ್ಲ ಗುರುತೇಳುತದೆ ನೀವೆದ್ದರೆ ಕೇಳಿರೈ ಸರಿತಾಯಿ ಪರಿಯುತ್ತೆ ವರಗಂಡನಿಗೆ ಮೋಸ ಕರಿಯುತ್ತಳಿಹ ಪ್ರಖ್ಯಾತ ನಳ್ಳಿಯೊಳು 1 ಆದಿಲಿ ಹೊಗ ಪರಬೀದಿಯೊಳು ತಾನೆಂತೂ ವಾದಿಸಿ ಅವರೊಳು ಭೇದವಿಡಿದೆ ಕಾದಿರುವೆ ನಿನಗಾಗಿ ಕಾಮನಯ್ಯನೆ ಬಾರೊ ವೇದಗೋಚರ ಗುರು ಶ್ರೀತುಲಸೀರಾಮಾ2
--------------
ಚನ್ನಪಟ್ಟಣದ ಅಹೋಬಲದಾಸರು