ಒಟ್ಟು 1122 ಕಡೆಗಳಲ್ಲಿ , 101 ದಾಸರು , 1027 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಭಯ ನಿವಾರಣವು ಶ್ರೀಗುರು ದಿವ್ಯನಾಮ ನಿಮ್ಮ ನಾಮ ಧ್ರುವ ಕ್ಲೇಶಪಾಶವು ಕತ್ತರಿಸಿ ದೋಷನಾಶವನು ಗೈಸಿ ಪೋಷಿಸುವ ಕೇಶವ ನಿಮ್ಮ ನಾಮ 1 ನರಕ ಘೋರದ ಘಟವೆಂಬ ನರಜನ್ಮದುರ್ಘಟ ತಾರಿಸುವ ನಾರಾಯಣ ನಿಮ್ಮ ನಾಮ 2 ಮದಮತ್ಸರವ ಜರಿಸಿ ಭೇದಾಭೇದವು ಹರಿಸಿ ಮಾಧವ ನಿಮ್ಮ ನಾಮ 3 ಭವ ಹಿಂಗಿಸುವ ಗೋವಿಂದ ನಿಮ್ಮ ನಾಮ 4 ಇಷ್ಟಾರ್ಥಗಳ ಕೊಟ್ಟು ಕಷ್ಟಾರ್ಥ ಪರಿಹರಿಸಿ ದೃಷ್ಟಾಂತದಲಿ ಹೊರೆವ ವಿಷ್ಣು ನಿಮ್ಮ ನಾಮ 5 ಮೊದಲು ಮೂವಿಧಿಯಗಳು ಜರಿಸಿ ಸದಮಲ ಪುಣ್ಯ ಪದವೀವ ಮಧುಸೂದನ ನಿಮ್ಮ ನಾಮ 6 ತ್ರಿವಿಧಾಧ್ಯಾತ್ಮ ಸ್ಥಿತಿಗತಿಯ ಈವ ಶಾಸ್ತ್ರಗಳನರಿಸಿ ಭಾವಭಕ್ತೀವ ತ್ರಿವಿಕ್ರಮ ನಿಮ್ಮ ನಾಮ 7 ವರ್ಮಧರ್ಮವನರಿಸಿ ಕರ್ಮಪಾಶವ ಹರಿಸಿ ಜನ್ಮ ತಾರಿಸುವ ವಾಮನ ನಿಮ್ಮ ನಾಮ 8 ಶ್ರೀಕರವನಿತ್ತು ಸಿರಿಸಕಲ ಸೌಭಾಗ್ಯದಲಿ ಸೃಷ್ಟಿಯೊಳು ಹೊರೆವ ಶ್ರೀಧರ ನಿಮ್ಮ ನಾಮ 9 ಹರಿಸಿ ಸಂದೇಹ ಸಂಕಲ್ಪ ಬಾಧೆಯಗಳು ಹರುಷ ಗತಿನೀವ ಹೃಷೀಕೇಶ ನಿಮ್ಮ ನಾಮ 10 ಪಾತಕ ಹರಿಸಿ ಪದ್ಮನಾಭ ನಿಮ್ಮ ನಾಮ 11 ದುರಿತ ವಿಧ್ವಂಸನಿಯ ಮಾಡಿ ಧರೆಯೊಳು ದ್ಧರಿಸುವ ದಾಮೋದರ ನಿಮ್ಮ ನಾಮ 12 ಸಕಲ ಪದವಿತ್ತ ಸುಖಸಾಧನವ ತೋರುತಿಹ್ಯ ಅಖಿಳದೊಳು ಸಂಕುರುಷಣ ನಿಮ್ಮ ನಾಮ 13 ವಾಸನೆಯು ಪೂರಿಸುತ ಭಾಷೆ ಪಾಲಿಸುತಿಹ ಲೇಸಾಗಿ ಶ್ರೀವಾಸುದೇವ ನಿಮ್ಮ ನಾಮ 14 ಪ್ರಾಣಪ್ರಿಯವಾಗಿ ಪ್ರಸನ್ನವಾಗುವ ಪೂರ್ಣ ಪ್ರತ್ಯಕ್ಷವಿದು ಪ್ರದ್ಯುಮ್ನ ನಿಮ್ಮ ನಾಮ 15 ಅನುಮಾನ ಪರಿಹರಿಸಿ ಅನುಭವಾಮೃತ ಸುರಿಸಿ ಅನಿರುದ್ಧ ನಿಮ್ಮ ನಾಮ 16 ಪೂರ್ವಕರ್ಮವ ಹರಿಸಿ ಪೂರ್ಣಕಳೆಯೊಳು ಬೆರೆಸಿ ಪುಣ್ಯಪದವೀವ ಪುರುಷೋತ್ತಮ ನಿಮ್ಮ ನಾಮ 17 ಅಧ್ಯಾತ್ಮ ಸುಖವರಿಸಿ ಸಿದ್ಧಾಂತವನು ತೋರಿ ಅಧ್ಯಕ್ಷವಾಗುವಾಧೋಕ್ಷಜ ನಿಮ್ಮ ನಾಮ 18 ನರಜನ್ಮವನು ಹರಿಸಿ ಹರಿಭಕ್ತಿಯೊಳು ಬೆರೆಸಿ ಅರುವು ಕುರ್ಹುವ್ಹಿಡಿದ ನರಸಿಂಹ ನಿಮ್ಮ ನಾಮ 19 ಅರ್ಚನೆಯು ಪ್ರಾರ್ಥನೆಯು ಪರಮಪೂಜೆಯನರಿಸಿ ಅಚ್ಯುತ ನಿಮ್ಮ ನಾಮ 20 ಜನನ ಮರಣವನಳಿಸಿ ತನುಮದೊಳು ಬೆರಿಸಿ ಜನುಮ ಹರಿಸುವ ಜನಾರ್ದನ ನಿಮ್ಮ ನಾಮ21 ಉಪಮೆಯ ರಹಿತ ವಸ್ತುವುಪಾಯದಲಿ ತೋರಿ ಕೃಪೆಯಿಂದ ಹೊರೆವ ಉಪೇಂದ್ರ ನಿಮ್ಮ ನಾಮ22 ಹರಿಸಿ ಅಹಂಭಾವ ಅರಿಸಿ ಅನುಭವ ಪೂರ್ಣ ಸುರಿಸುವ ಸುಖ ಶ್ರೀಹರಿ ನಿಮ್ಮ ನಾಮ 23 ಕರಕಮಲವಿಟ್ಟು ಶಿರದಲಿ ಸದ್ಗೈಸುತಿಹ ಕರುಣಾಳು ಮೂರುತಿ ಶ್ರೀಕೃಷ್ಣ ನಿಮ್ಮ ನಾಮ 24 ಸಾರ ಸಂಧ್ಯಾಯನದಿ ಮಹಿಪತಿಯ ಹೊರೆವ ಶ್ರೀಗುರು ನಿಮ್ಮ ನಾಮ 25
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಭಯ ನಿವಾರಿಸೋ ಜಯ ಶ್ರೀ ಹರಿಯೆ ಭಯ ನಿವಾರಿಸಯ್ಯ ದಯದಿ ಭಯ ನಿವಾರನೆನ್ನ ಪ ಮರವೆಯೆಂಬುವ ಇರುಳಿನಲ್ಲಿ ದುರಿತಯೆಂಬುವ ಗಿರಿಯಲ್ಲಿ ಪರನಿಂದೆಂಬುವ ಶರಧಿಯಲ್ಲಿ ಕರುಣವಿಲ್ಲದ ಕಾಯದುರ್ಗದರಣ್ಯಕಂಜಿ ಕೊರುಗುತಿರುವೆ ಹರಿಯೆ ನಿಮ್ಮ ಸ್ಮರಣವೆಂಬ ನಿರುತ ಧೈರ್ಯ ಕರುಣಿಸಭವ 1 ವ್ಯಸನವೆಂಬ ಮುಸುಕಿನಿಂದ ಪಿಸುಣತೆಂಬುವ ದಸಕಿನಿಂದ ಪುಸಿಯುಯೆಂಬುವ ಮಿಸುನಿಯಿಂದ ವಿಷಯದಾಸೆ ತಸ್ಕರಗಂಜಿ ದೆಸೆಗೆ ಬಾಯ ಬಿಡುವೆನಯ್ಯ ಅಸಮಮಹಿಮನ್ವ ಚಶ್ರವಣೆಂಬೆಸೆವ ಧೈರ್ಯ ಕರುಣಿಸಭವ 2 ಆರು ಹುಲಿಗಳ ಘೋರಿಸುವ ಮೂರು ಮರಿಗಳ ಹಾರುತಿರುವ ಮೂರೇಳು ನಾಯ್ಗಳ ಘೋರತಾಪ ಸೈರಿಸದೆ ಸಾರಸಾಕ್ಷ ಮರೆಯ ಹೊಕ್ಕೆ ಶ್ರೀರಾಮ ನಿಮ್ಮ ಚರಣ ಭಕ್ತೆಂ ಬ್ವೀರತನವ ಕರುಣಿಸಭವ 3
--------------
ರಾಮದಾಸರು
ಭವ ಬಂಧವೂ ಪಗಂಗಾಜನಕ ಖಗೊತ್ತುಂಗ ತುರಗನೆ ದೇವ ರಂಗಾಪುರಾಗಾರನೆ ಸ್ವಾ'ು ಅ.ಪದುರಿತ ಕೋಟಿಗಳ ಪರಿಹರಿಸಿ ರಕ್ಷಿಪ ನಿನ್ನ ಬರಿನಾಮಸ್ಮರಣೆಯೊಂದುಪರಿಪರಿಯ ಭವದ ಕೋಟಲೆಯ ಬಿಡಿಸುವ ನಿನ್ನ ಚರಿತೆಯ ಶ್ರವಣವೊಂದುಅರಿತರಿಯದೆಸಗಿದಘರಾಶಿಯ ದ'ಸಿ ನಿನ್ನ ಶರಣಜನ ಸಂಗವೊಂದುಇರಲಿವನು ಬಯಸಿ ಬೇಡುವೆನೆಂದು ನಿನ್ನ ಸಿರಿಚರಣದೆಡೆಗೈದಿ ಸಂತಸದಳೆದುನಿಂದೂ 1ಆವಜನ್ಮಾರ್ಜಿತದ ಸುಕೃತ ಪರಿಪಾಕವೊ ದೇವ ನಿನ್ನಯ ಕರುಣವೋಸಾವಧಾನದಿ ನಿನ್ನ ನೆನೆದು ಪೂಜಿಸಿ ನುತಿಪ ಸೇವಕರ ಪ್ರೇಮದೊಲವೋಜೀವರಾಶಿಗಳೊಳುದುಸಿ ಮಡಿಯೆ ಪುಟ'ಟ್ಟ ಭಾವಬಂದೀ ಬಣ್ಣವೋಆವುದನು ತಿಳಿಯದಜ್ಞನನು ನಿನ್ನವರೊಯ್ದು ಪಾವನಕ್ಷೇತ್ರವನು ಪೊಗಿಸಿದತಿಶಯವೋ 2ಗುರು ವಾಸುದೇವಾರ್ಯನಾಗಿ ಚಿಕನಾಗಾಖ್ಯಪುರದಿ ಮ'ಮೆಯ ತೋರ್ದೆಯೈಕರೆದಜ್ಞರಜ್ಞತೆಯ ಪರಿದು ಸುಜ್ಞಾನ ಸುಧೆಯೆರೆದು ನೀನೆ ಪೊರೆದೆಯೈಪರದೇಸಿ ವೇಷದಿಂ ಮೂಢ ಜನರಿಗೆ ಭಕ್ತಿುರವ ಕೈಸಾರಿಸಿದೆಯೈಮರೆಯೊಕ್ಕೆ ನಾನು ತಿಮ್ಮದಾಸ ದೇವ ಪರಾಕು ಕರ'ಡಿದು ಕಾಯಬೇಕೆನ್ನ ವೆಂಕಟರಮಣ 3
--------------
ತಿಮ್ಮಪ್ಪದಾಸರು
ಭವ ಕೂಪನಿ ಪತಿತಂ ಪ ಘೊರ ದುರಿತಹರ ಚಾರುಚರಣಯುಗಲಂ ಪ್ರಣ ಮಾಮಿ ತ್ರಿಕಾಲಂ ಅ,ಪ ಕಾರ್ಪರ ಋಷಿಕೃತ ಘೋರ ತಪ:ಪ್ರೀತ ಅ- ತ್ರಾವಿರ್ಭೂತ ಕಾರ್ಪರ ಗ್ರಾಮೇತೀರ ಗತಾಶ್ವತ್ಥ ಪೇಣ ಸಮಸ್ತ ಆರಾಧಕ ನಿಜಭಕ್ತ ಜ- ನಾಭಿಷ್ಟ ವರ್ಷಣ ಸರ್ವೇಷ್ಟ ನಾರಾಯಣ ಮುನಿ ಪೂಜಿತ ಸುರವ್ರಾತ ಸಂಸ್ತುತ ಶುಭಚರಿತ 1 ಸಾಕ್ಷಾಚ್ಛ್ರೀರ ಪಿವೀಕ್ಷ್ಯಾದ್ಭುತರೂಪಂ ತವ ಪ್ರಕಟಿತ ಕೋಪಂತ್ರ್ಯಕ್ಷಾದ್ಯಮರೈ:ಪ್ರೇಷಿತಾಪಿ ಸ್ವ¥ತಾ ಶಂಕೆ- ತೇವ ತಸ್ಥಾ ರಕ್ಷಿತÀವಾನಭಿ ವೀಕ್ಷ್ಯ ಪ್ರಹ್ಲಾದಂ ಕೃತ್ವಾಪ್ರ ಸಾದಂ ಲಕ್ಷ್ಮೀಧವಖಲ ಶಿಕ್ಷಣ ತವಚರಿತಂ ಜ್ಞಾಪಯಮೇ ಸತತಂ 2 ಭಕ್ತಿಂದೇಹಿ ಪ್ರಶಸ್ತಾಂತ್ವಯಿ ಕೃಪಯಾ ಚಿಂತಿತ ದುರ್ವಿಷಯಾ ಸಕ್ತಿಂಜಹಿ ಸದ್ಭಕ್ತ ಚಿತ್ತನಿಲಯ ಕಾಯಾಧವ ಪ್ರಿಯ ಶೃತಿಪುಟಸಂಭೃತಯಾ ಮುಕ್ತಾ ಮುಕ್ತ ಸಮಸ್ತ ಜಗತ್ಕಾಯಾ ಸುರಗಣ ಸಂಶೇವ್ಯಾ3 ಸುಜನಾರ್ತಿಹರಣಾ ವೃಕ್ಷಾದವತೀರ್ಣ ಮದೃತ್ತಿಮಿರ ಪ್ರದ್ಯೋತನಕಿರಣ ಸನ್ನಿಭಶುಭ ಚರಣ ಷಡ್ಗುಣಸಂಪನ್ನ 4 ಮಂಗಳ ಕೃಷ್ಣ ತರಂಗಿಣೆ ಕೂಲಸ್ಥ ಅಶ್ವತ್ಥೋದ್ಭೂತ ತುಂಗವದನ ಬಹು ಶಾಲಿಗ್ರಾಮಗತ ಷೋಡಶ ಬಾಹುಯುತ ಮಾತಂಗ ಸಂಗೀತಪ್ರಿಯ ಮಂಗಳತರಚರಿತ ಶತಿತತಿ ವಿಖ್ಯಾತ 5
--------------
ಕಾರ್ಪರ ನರಹರಿದಾಸರು
ಭವತಿ ಭಿಕ್ಷಾಂ ದೇಹಿ ಪರಬ್ರಹ್ಮಭವದೂರ ಮಾಂಪಾಹಿಭುವನ ಪಾವನ ಪರಮಾನಂದ ವರಗುಣಾಸುವಿಮಲ ಶಾಂತಿ ಸದ್ಭಕ್ತಿ ಜೀವನ್ಮುಕ್ತಿ ಪ ನಿತ್ಯ ನಿರ್ಮಲ ಜ್ಞಾನ ವಿಚಾರ ಪ್ರ-ವೃತ್ತಿ ವಿವೇಕದಾನಸತ್ಯ ಸದ್ವಿನಿಯ ಸಶ್ರವಣ ಮಾನಸಯೋಗಚಿತ್ತ ನಿಧಿಧ್ಯಾಸ ಜಪತಪವ್ರತ ಪೂಜಾ 1 ದೋಷರಹಿತ ಭಾಷ ದುರಿತಗುಣನಾಶ ಪರಮ ಸಂತೋಷಕ್ಲೇಶ ವಿದೂರ ವಿಶೇಷ ವಿರಾಗವಿಶ್ವಾಸ ವಿಹಿತ ಸದ್ಧರ್ಮ ವಿಚಾರ 2 ಪಾವನ ಪರಿಪೂರ್ಣ ಹೃದಯ ಸದಾದೇವ ನಾಮಸ್ಮರಣಭಾವ ಭರಿತ ಧ್ಯಾನ ಧಾರಣಯೋಗ ಸ-ದ್ಭಾವ ಬ್ರಹ್ಮ ಆದಿಕೇಶವ ದಾಸತೆ 3
--------------
ಕನಕದಾಸ
ಭವದ ಬಂಧವಿನ್ನೆನಗೆ ಯಾಕೆ ಭವಹರಣ ನಾಮ ಎನ್ನ ಜಿಹ್ವೆಯೊಳಗೆ ಇರುತಿರಲು ಪ ದುರಿತ ಭೀತಿ ಯಾಕೆ ಎನಗೆ ಕರ್ಮದ ಲೇಪವ್ಯಾಕೆ ಎನಗೆ ಕುಲ ಚಲಗಳ್ಯಾಕೆ ಎನಗೆ ಮಡಿಯು ಮೈಲಿಗ್ಯಾಕೆ ಅನುದಿನದಿ ಪಾವನಾತ್ಮಕನ ನೆನವು ಎನ್ನ ಮನದೊಳಿರಲು 1 ನಷ್ಟ ಪ್ರಪಂಚಂಟಿನ್ನ್ಯಾತಹೆÉ ಬಿಟ್ಟ ಬಡತನ ತಂತಿನಗ್ಯಾಕೆ ಹುಟ್ಟು ಸಾವು ಕಷ್ಟ ಮತ್ತ್ಯಾಕೆ ಕೆಟ್ಟ ಯಮನ ಅಂಜಿಕಿನ್ನ್ಯಾಕೆ ಸೃಷ್ಟಿ ಕರ್ತನ ಶಿಷ್ಟಪಾದ ನಿಷ್ಠೆಯೆನ್ನೊಳು ಗಟ್ಟಿಯಿರಲು 2 ನಿತ್ಯ ನೇಮ ಪೂಜೆ ಯಾಕೊ ಮತ್ತೆ ಜಪ ತಪವು ಯಾಕೊ ನಿತ್ಯ ನಿರ್ಮಲಾನಂದ ರೂಪಿ ಸತ್ತು ಚಿತ್ತನಂದದಾತ ಮುಕ್ತಿದಾಯಕ ಶ್ರೀರಾಮ ಪಾದ ಭಕ್ತನಾಗಿ ನಾ ಮೆರೆಯುತಿರಲು 3
--------------
ರಾಮದಾಸರು
ಭವಭಯಹರ ಶ್ರೀ ಮುಕ್ಕುಂದ ಭವರೋಗಕ್ವೈದ್ಯ ಶ್ರೀ ಗೋವಿಂದ ಪ ಧ್ರುವ ದ್ರುಪದತನುಜಾತೆಯೊರೆದ ಹರಿ ಶಿವನುತ ಸಚ್ಚಿತ್ತಾನಂದ ಅ.ಪ ಪಂಕಜಾನಪಿತ ಗೋವಿಂದ ಕಿಂಕರಾಶ್ರಿತ ಗೋವಿಂದ ಶಂಖಧಾರಣ ಸಿರಿಗೋವಿಂದ ಶಂಖಾಸುರನ ಹರ ಗೋವಿಂದ ಮಂಕು ದನುಜಕುಲ ಬಿಂಕ ಮುರಿದ ಅಕ ಳಂಕಮಹಿಮ ಮಹ ಗೋವಿಂದ1 ಸ್ಮರಿಪ ನೆರೆವಾಸ ಗೋವಿಂದ ದುರುಳರ ಕುಲನಾಶ ಗೋವಿಂದ ದುರಿತ ನಿವಾರಣ ಗೋವಿಂದ ಶರಣಜನರಪ್ರಾಣ ಗೋವಿಂದ ತರಳನೋದ್ಧಾರಣ ಕರಿರಾಜವರದನ ತರುಣೆಯ ರಕ್ಷಣ ಗೋವಿಂದ 2 ಜಗದಾಧಾರನೆ ಗೋವಿಂದ ಸುಗಣಗುಣಾಂತರಂಗ ಗೋವಿಂದ ರಘುಕುಲಪಾವನ ಗೋವಿಂದ ಖಗಪತಿವಾಹನ ಗೋವಿಂದ ನಿಗಮಕೆ ಸಿಲುಕದ ಅಗಾಧ ಮಹಿಮ ಜಗತ್ರಯ ಮೋಹನ ಗೋವಿಂದ 3 ನೀಲಮೇಘಶ್ಯಾಮ ಗೋವಿಂದ ಕಾಲಕಾಲಹರ ಗೋವಿಂದ ಪಾಲಸಾಗರಶಾಯಿ ಗೋವಿಂದ ಲೋಲ ವಿಶ್ವರೂಪ ಗೋವಿಂದ ಪಾಲಭಜಕ ಭವ ಜಾಲಹರಣ ಸರ್ವ ಮೂಲಮಂತ್ರ ಹರಿ ಗೋವಿಂದ 4 ಭೂಮಿಜಾತೆಪತಿ ಗೋವಿಂದ ಕಾಮಜನಕ ಶ್ರೀಶ ಗೋವಿಂದ ಕೋಮಲಾಂಗ ರಂಗ ಗೋವಿಂದ ಸ್ವಾಮಿ ಪುಣ್ಯನಾಮ ಗೋವಿಂದ ಶಾಮವರ್ಣನುತ ಪ್ರೇಮಮಂದಿರ ಶ್ರೀ ರಾಮ ದಾಮೋದರ ಗೋವಿಂದ 5
--------------
ರಾಮದಾಸರು
ಭವಭಯಹರ ಸಿರಿಧವ ನರಹರಿ ಪೊರೆ ಭವಭವದಲಿ ನೀಡು ತವಪಾದ ಸೇವೆಯ ಪ ಮನುಮುನಿ ಘನಸುರ ವಿನಮಿತ ಸುಜನರ ಅನುಪಮ ಪ್ರಿಯಕರ ಜನಕಜೆ ಮನೋಹರ 1 ದುರಿತವಿನಾಶ ಪರಮಪ್ರಕಾಶ ಗಿರಿಧರ ಪರಾತ್ಪರ ಪರತರ ಲಕಮೀಶ 2 ಅಸುರಕುಲಾಂತಕ ವಸುಧೆಯುದ್ಧಾರಕ ಅಸಮ ಶ್ರೀರಾಮ ಮಹ ಮುಕ್ತಿಪ್ರದಾಯಕ 3
--------------
ರಾಮದಾಸರು
ಭಾಗಣ್ಣಾ | ಗುರು ನಿನ್ನ ಪೊಗಳುವೆನಯ್ಯಾಕರುಣದಿ ಪಿಡಿಕೈಯ್ಯಾ | ಮುರಹರ ಕುವರಯ್ಯಾ ಪ ನಗಧರ ಮೊಮ್ಮಗ ಮಗನೀ ಯೆನ್ನನುಖಗವರ ವಹ ಪ್ರಿಯ ಪಾಲಿಸೊ ಜೀಯಾ ಅ.ಪ. ಜ್ಞಾನ ಸದ್ಭಕ್ತಿ ವಿರಕ್ತಿಯ ಮೂರ್ತೀ | ಸಾರುವೆ ತವಕೀರ್ತೀಗಾನ ಲೋಲನ ಸೇವಿಸೆ ಜಾಗರ್ತೀ | ಮಾಡುವೆ ಶರಣಾರ್ತೀ |ಘನ್ನ ಮಹಿಮ ಕಾರುಣ್ಯ ಮೂರುತೀಎನ್ನವ ಗುಣ ಮರೆದು ಸಲಹೊ ವಿಶ್ವಂಭರ 1 ಜಲಧಿ ವಿಹಾರನೆಸುಲಭದಿ ಸಾಧನ ಪಾಲಿಸೋ ಜೀಯ 2 ಅರುಹಲೇತಕೊ ಎನದುರಿತ ಸಮೂಹ | ನೀನಲ್ಲವೆ ದುರಿತಹರತುರು ತನ್ನ ಕರುವನೆ ಮರೆವುದೆ ಆಹಾ | ಪಾಲಿಸು ತವನೇಹಾಸಿರಿಪತಿ ಗುರುಗೋವಿಂದ ವಿಠಲನಚರಣಾಂಬುಜದೊಳು ನಿಲಿಸೆಲೊ ಮನವಾ 3
--------------
ಗುರುಗೋವಿಂದವಿಠಲರು
ಭಾಗವತ ಮಹಿಮೆ ಬಣ್ಣಿಸಲಳವೇ ಪ ಈ ಭವಶರಧಿಗೆ ಸುನಾವೆಯಂತಿಹುದಯ್ಯಅ.ಪ ಸೂನು ಶ್ರೀ ಮನ್ನಾರಾಯಣ ಆಪದ್ಬಾಂಧವನಲ್ಲದಿನ್ನಿಲ್ಲವೆಂಬುವಾ1 ಮತ್ತೆ ಶಾಪದಲಿ ನಾರದನ ವಿಷಯವ ಪೇಳ್ವ 2 ಪರೀಕ್ಷಿತ ಶುಕ ಶ್ರೀಹರಿಯ ಅವತಾರಗಳ ವರ್ಣನೆಗಳು ಮತ್ತೆ ಮಹದಾದಿ ತತ್ವ ಸೃಷ್ಟಿಕ್ರಮ ಇತ್ಯಾದಿ ಪುಣ್ಯಚರಿತಗಳನು ಪೇಳ್ವ 3 ಆ ಬೊಮ್ಮಂಡದಿಂದೆ ಚತುರ್ಮುಖನ ಸೃಷ್ಟಿಯು ವಿಭಾಗವ ಪೇಳ್ವ ಸೂಕ್ಷ್ಮ ಪರಮಾಣು ಅಬ್ದಾದಿ ಕಾಲಗಳು ವ್ಯಷ್ಟಿ ಭೂತೋತ್ಪತ್ತಿ ಶ್ರೀ ವರಹ ರೂಪದಿ ತೋರಿದ ಮಹಿಮೆಯಾ 4 ವರಹಾವತಾರದೀ ಧರಣೀಯ ತಂದಂಥ ಶ್ರೀ ಕಪಿಲ ದೇವಹೂತಿಯ ಸಂವಾದವ ಪೇಳ್ವ 5 ಚತುರ ಸ್ಕಂದದಿ ನವಬ್ರಹ್ಮರ ಉತ್ಪತ್ತಿ ಪ್ರಾಚೀನ ಬರ್ಹಿಷರ ವೃತ್ತಾಂತವನು ಪೇಳ್ವ 6 ನೃಪರ ಋಷಭ ಚರಿತೆಗಳು ಪುತ್ರ ಭರತನ ಕಥೆಯು ನದ ನದಿಗಳ ಸೃಷ್ಟಿ ಜ್ಯೋತಿಶ್ಚಕ್ರ ನರಕ ಪಾತಾಳಗಳ ಪೇಳ್ವ 7 ಮಾನವ ವೃತ್ರನ ಜನನ ಮರಣಗಳೆಲ್ಲ ಪೇಳ್ವ 8 ಹಿರಣ್ಯಕಶಿಪುವಿನ ದುರುಳತನವು ಮತ್ತೆ ಧೀವರನಾದ ಪ್ರಹ್ಲಾದರಾಯನಿಂ ವ- ರ್ಣಿತಮಾದ ಶ್ರೀಹರಿಯ ಮಹಿಮೆಯ ಪೇಳ್ವ 9 ಅಷ್ಟಮ ಸ್ಕಂದದಿ ಮನ್ವಂತರ ವಿವರವು ಕಮಠ ಹಯವದನನವತಾರ ಸುಧೆಯಿತ್ತ ಮಹಿಮೆಯ10 ಇಳೋಪಾಖ್ಯಾನವ ತಾರೋಪಾಖ್ಯಾನವ ಪೇಳ್ವ 11 ಶರ್ಯಾತಿ ಕಾಕುಸ್ಥ ಖಟ್ವಾಂಗ ಧೀರ ಮಾಂ- ಧಾತೃ ಸೌಭರಿ ಸಗರರ ಚರಿತೆ ಪರಮಾತ್ಮ ರಘುರಾಮನ ಚರಿತೆಗಳನು ಪೇಳ್ವ12 ಮತ್ತೆ ನಿಮಿಯ ದೇಹತ್ಯಾಗದ ವಿಷಯವು ಉತ್ತಮ ಚಂದ್ರವಂಶದ ನಹುಷಾಸುತ ಯ- ಯಾತಿ ಶಂತನುಯದು ಚರಿತೆಗಳುಳ್ಳ 13 ದಶಮ ಸ್ಕಂದದಿ ಹರಿ ಯದುವಂಶದಿ ಜನಿಸಿ ಶಿಶುಲೀಲೆಗಳ ತೋರಿ ಅಸುರಿ ಪೂತನಿ ಕೊಂದು ಅಸುರಭಂಜಕ ಹರಿಯು ಮೆರೆದ ಮಹಿಮೆಯ ಪೇಳ್ವ 14 ಮಾಯಾ ಮಹಿಮಧೇನು ಪ್ರಲಂಬಕರಾ ಕೊಂದು ಕಾಡುಕಿಚ್ಚಿನಿಂದ ಗೋಪಾಲರ ಕಾಯ್ದ ನೋಯಿಸಿ ಕಾಳಿಯ ಬಾಯ ಬಿಡಿಸಿ ಕಾಳಿಮರ್ದನ ಕೃಷ್ಣ ನಾಡಿದ15 ಗೋಪಸ್ತ್ರೀಯರ ಚರಿತ ಗೋವರ್ಧನೋದ್ಧಾರಣ ಕಂಸವಧೆಯ ಮಾಡಿ ಗುರುಸುತನನು ತೋರ್ದ 16 ಜರೆಯ ಸೇನೆಯ ಜಯಿಸಿ ಕಾಲಯವನರ ಕೊಂದು ಸಿರಿ ರುಕ್ಮಿಣಿಯ ಪಡೆದು ಸೆರೆಯ ಬಿಡಿಸಿ ರಾಜಕನ್ಯೆಯರನು ಕಾಯ್ದ 17 ದ್ವಿವಿಧ ಮುರಾಸುರರೆಲ್ಲರ ನಾಶಪಡಿಸಿ ಕಾಶೀಪುರವ ದಹನ ಮಾಡಿ ಪಾಂಡವರನ್ನು ಕಾಯ್ದ ಪರಮ ಮಹಿಮೆಯ ಪೇಳ್ವ 18 ಭೂಭಾರನಿಳುಹಲು ಕುರು ಪಾಂಡವರೊಳು ಸದ್ಧವರ್i ಸ್ಥಾಪಿಸಿದ ಶ್ರೀಕೃಷ್ಣಚರಿತೆಯ ಪೇಳ್ವ 19 ಭೂಸುರ ಶಾಪದಿ ಯುದ್ಧವನೆ ಮಾಡಿ ಏಕನಾಗಿದ್ದ ಉದ್ಧವನಿಗೆ ಬೋಧಿಸಿ ಲೋಕಾವನೈದು ನಿಜಧಾಮಕ್ಕೆ ತೆರಳಿದ 20 ನಿತ್ಯನೈಮಿತ್ತಿಕ ಪ್ರಾಕೃತಗಳ ಸೃಷ್ಟಿ ವೇದ ವಿಭಾಗವು ಹರಿರಾತನ ಅಂತ್ಯ ಮಾರ್ಕಂಡೇಯ ಚರಿತ ಸೂರ್ಯಗಣಗಳ ಪೇಳ್ವ 21 ಮರೆ ವೆಯಿಂದಾಗಲಿ ರುಜೆಯಿಂದಾಗಲಿ ಹರಿಯೇನಮಃ ಎಂದುಚ್ಚರಿಸಿದ ಮಾತ್ರದಿ ದುರಿತಪಾಪವು ನಾಶವಾಗಿ ಪೋಗುವುದಯ್ಯ 22 ದುರಿತವ್ಯಾಧಿಗಳು ತ್ವರಿತದಿ ಓಡುವುವು ಹರಿಸಂಬಂಧವಲ್ಲದ ಮಾತೆಲ್ಲವೂ ವ್ಯರ್ಥವೋ 23 ಭಾಗವತದ ಸಪ್ತಾಹದ ಪುಣ್ಯಫಲವು ಪಾವನವಾದ ಶ್ರೀಪಾದವ ಸೇರುವ24
--------------
ಉರಗಾದ್ರಿವಾಸವಿಠಲದಾಸರು
ಭಾಗವತರ ಭಾಗ್ಯನಿಧಿಯೆ ಭೋಗಿಶಯನ ಭೋ ಶ್ರೀರಾಮ ಪ ವೇದಾಗಮಕೆ ಸಿಲುಕದಂಥ ನಾದಬ್ರಹ್ಮಾಯೋಧ್ಯ ರಾಮ ಸಾಧುಜನಸಂಪ್ರೀತ ಭವರೋಗ್ವೈದ್ಯ ಸಾಧನ ಸಾಧ್ಯ ರಾಮ 1 ಬೋಧ ರಾಮ ಮಹದಾದಿ ರಾಮ 2 ಕಂಟಕ ದೂರ ರಾಮ ಪರಕೆಪರಮ ಪರಮಪುರುಷ ಸರುವ ಜಗದಾಧಾರ ರಾಮ 3 ಹತ್ತು ಅವತಾರೆತ್ತಿ ಭೂಭಾರ್ಹೊತ್ತು ಇಳುಹಿದ ಸತ್ಯ ರಾಮ ಜಗತ್ಕರ್ಮ ರಾಮ 4 ದಾಸಜನರಭಿಲಾಷೆಯನು ಪೂರೈಸಲೋಸುಗ ಈಶ ರಾಮ ಶೇಷಾಚಲನಿವಾಸನಾದ ದಾಸಗಣ ಸಂತೋಷ ರಾಮ 5 ಅಸಮ ಪಾದಕುಸುಮಗಳನಿಟ್ಟೊಸುಧೆ ವೈಕುಂಠೆನಿಸಿ ರಾಮ ಜನರಿಂಗೊಸೆದು ರಾಮ6 ಬ್ರಹ್ಮಾದಿಗಳ ಹಮ್ಮನಳಿದ ಕರ್ಮಚರ ಪರಬ್ರಹ್ಮ ರಾಮ ಸುಖಧಾಮ ರಾಮ 7 ದಾತ ರಾಮ ಗುರುನಾಥ ರಾಮ 8 ತತ್ವದರ್ಥ ಉತ್ತರಿಸೆನ್ನ ಕಟ್ಟುಮಾಡೊ ಶಿಷ್ಟರಾಮ ಮೂರ್ತಿ ರಾಮ 9 ಹುಟ್ಟಿಬರುವ ಕಷ್ಟದ್ಹಾದಿ ಕಟ್ಟುಮಾಡೊ ಶಿಷ್ಟರಾಮ ನಿಷ್ಠೆಯಿಂ ನಿಮ್ಮ ಮುಟ್ಟಿ ಭಜಿಪ ಪಟ್ಟಗಟ್ಟೆಲೊ ದಿಟ್ಟ ರಾಮ 10 ದಾಸಜನರ ವಾಸದಿರಿಸೊ ಕೇಶವ ಜಗದೀಶ ರಾಮ ದೋಷರಾಶಿ ನಾಶಗೈದು ಪೋಷಿಸೆನ್ನನನುಮೇಷ ರಾಮ 11 ವೇದ ವಿದ್ಯದ್ಹಾದಿಸಾಧನ ಭೋಧಿಸೆನಗ್ವಿನೋದ ರಾಮ ಪಾದಭಕ್ತಿ ಮೋದದಿತ್ತು ಭವಬಾಧೆಯಳಿ ಸುಖಸ್ವಾದ ರಾಮ 12 ಕಳಿ ಮಮಜೀವ ರಾಮ ಬಿಡಿಸೆನ್ನಯ ರಾಮ 13 ಮತ್ತೆ ಮತ್ತೆ ಪೃಥ್ವಿ ಮೇಲೆ ಸತ್ತು ಹುಟ್ಟಿ ಬೇಸತ್ತೆ ರಾಮ ಕರ್ತು ನಿನ್ನ ಗುರ್ತು ಅರಿಯದನರ್ಥವಾದೆನಾತ್ಮ ರಾಮ 14 ಆಸೆಯೆಂಬ ಪಾಶದಿಂದ ಘಾಸಿಯಾದೆ ಭವನಾಶ ರಾಮ ದೋಷದೂರೆನ್ನ ಕ್ಲೇಶಗಳನು ನಾಶಿಸೈ ದಯಭೂಷ ರಾಮ 15 ಅರಿದು ಅರಿದು ಉರಿವದೀಪದೆರಗುವ ಹುಳದಿರವು ರಾಮ ಸಿರಿಯ ರಾಮ 16 ಮರೆದು ನಾನು ಧರೆಗೆ ಬಿದ್ದು ದುರಿತದೊಳಗೆ ಬೆರೆದೆ ರಾಮ ಪೊರೆಯೊ ರಾಮ 17 ಕರುಣಿಸುತ ತಂದೆ ರಾಮ ಬಯಲ್ಹರಿಸು ರಾಮ 18 ಮಾನ ಅಭಿಮಾನ ನಿನ್ನದು ಧ್ಯಾನಿಪರ ಸುರಧೇನು ರಾಮ ಜ್ಞಾನವಿತ್ತು ಮಾನದಿಂದ ನೀನೆ ಪೊರೆ ಜಗತ್ರಾಣ ರಾಮ 19 ಭಿನ್ನವಿಲ್ಲದೆ ನಿನ್ನ ನಂಬಿ ಧನ್ಯನಾದೆನಿನ್ನು ರಾಮ ಎನ್ನ ಮನಸಿಗಿನ್ನು ಸಂತಸವನ್ನು ಕೊಡು ಪಾವನ್ನ ರಾಮ 20 ಭೃತ್ಯನ ಮಹ ಚಿತ್ತಭ್ರಮೆ ಮುರಿದೊತ್ತಿ ಕರಪಿಡಿದೆತ್ತು ರಾಮ ಭಕ್ತಿಯುಕ್ತಿ ಮುಕ್ತಿ ಸುಖವನಿತ್ತು ಪೊರೆ ಗುರುದತ್ತ ರಾಮ 21 ನಿಖಿಲವ್ಯಾಪಕ ಅಖಿಲರಕ್ಷಕ ಸಕಲಬಲ ನೀನೇಕ ರಾಮ ಮುಕುತಿಸಂಪದ ಸಿದ್ಧಿ ನೀನೆ ಭಕುತಪ್ರಿಯ ಲೋಕೈಕ ರಾಮ 22 ಭಿನ್ನವಿಲ್ಲದೆ ನಿನ್ನ ನಾಮವನ್ನು ಪೊಗಳುವರಿನ್ನು ರಾಮ ಮಾನ್ಯರಾಗನನ್ಯ ಸುಖಸಂಪನ್ನರೆನಿಪನನ್ಯ ರಾಮ 23 ಉದಯದೆದ್ದು ಪದುಳದೀನಾಮ ಓದಿಕೇಳಲು ಸದಾ ರಾಮ ಸದಯ ರಾಮ 24 ನಿತ್ಯ ಭಕ್ತಿಯಿಂ ಬರೆಯುತ್ತ ಪಠಿಸಲು ಕರ್ತುರಾಮ ಮುಕ್ತಿಯೆಂಬ ಸಂಪತ್ತನಿತ್ತು ಬಿಡದ್ಹತ್ತಿರಿರುವನು ಸತ್ಯ ರಾಮ 25
--------------
ರಾಮದಾಸರು
ಭಾರ ನಿನ್ನದು ದೇವಾ ಭಕುತ ಸಂಜೀವಾ ಪ ದೂರ ನೋಡದೆ ಪೊರೆಯೊ ದುರಿತಗಳ ತರಿಯೊ ಅ.ಪ. ಮೂರನೆ ಗುಣದಿಂದ ಮತ್ತನಾಗಿ ಬಹಳ ಮೂರು ವಿಧ ವಿಷಯದಲಿ ಮಗ್ನನಾದೆ ಮೂರುಖಾಗ್ರೇಸರಿಗೆ ಮುಂದಾವಗತಿಯೈಯ ಮೂರಾವತಾರವುಳ್ಳ ಮರುತಾತ್ಮಜನೆ 1 ಆರು ಮೂರರ ದ್ವಾರದ ಸ್ಥಿರದ ಮನೆಯೊಳಗೆ ಆರು ವೈರಿಗಳು ಕಂಡಾವಾಗಲೂ ಆರು ಬಿಡಿಸದ ಬವಣೆ ಬಡಿಸುತಲೈದಾವರೆ ಆರೆರಡು ಪೆಸರುಳ್ಳ ಅಂಜನಾತ್ಮಜನೆ 2 ಪಂಚೇಂದ್ರಿಯಗಳು ಕೂಡೆ ಪರಿಪರಿ ಬಗೆಯಿಂದ ಪಂಚಮಹಾ ಪಾತಕಕೆ ಎಳೆಯುತಾರೆ ಪಂಚಕಷ್ಟಕೆ ಗುರಿಯು ಆಗಲಾರೆನು ಪ್ರಾಣ ಪಂಚಪದಕವೇ Pದರುಂಡಲಗಿ ಹನುಮಯ್ಯ 3
--------------
ಕದರುಂಡಲಗಿ ಹನುಮಯ್ಯ
ಭಾರತೀಪತಿ ಮೂರುತಿ ಮಾರುತಿ ಕಾಯೊ ಪ ಘೋರದುರಿತೌಘ ಪರಿಹಾರ ಸುಸಮೀರ ಧೀರಾ ಅ.ಪ ಸತ್ತ್ವ್ವ ಸತ್ತ್ವಾತ್ಮಕ ತತ್ತ್ವದೇವತೆಗಳ ನಿತ್ಯ ನಿಯಾಮಕ ಗುರು 1 ಪಟುತರಾಂಗನೆ ಧೂರ್ಜಟಿಯ ಸೇವೆಗೆ ಮಚ್ಚಿ ಪರಮೇಷ್ಠಿ ಪದ 2 ನಂಜಯನಾಗ್ರಜನೆ ಮೂರ್ಜಗ ಗುರು 3 ಶ್ರೇಷ್ಠಮೂರುತಿ ಜಗಚ್ಚೇಷ್ಟಾಪ್ರದಾಯಕ ಪ್ರವಿಷ್ಠ ಸರ್ವಸೃಷ್ಟಿಕಾರ್ಯ ತೊಟ್ಟಿರುವೆ4 ಮುಖ್ಯವಾಚ್ಯನು ದೇವ ಅಮುಖ್ಯವಾಚ್ಯನು ನೀನು ಮುಖ್ಯ ಜೀವಕೋಟಿಯೊಳು ಪ್ರಮುಖನಯ್ಯ ಮುಖ್ಯಪ್ರಾಣ5 ಶ್ವಾಸನಿಯಾಮಕ ನಿಶೆಯೊಳು ನಿದ್ರೆಯೊಳು ಅಸುರಾದಿ ಜೀವರೊಳು ಶ್ವಾಸಭೂರ್ಭುವನೆನಿಸುವೆ 6 ಸರ್ವನಿಯಾಮಕ ಶರ್ವರೊಂದಿತಪಾದ ಸರ್ವೋತ್ತಮ ಶ್ರೀ ವೇಂಕಟೇಶನೋರ್ವನೆ ಮುಖ್ಯನೆಂದೆ7
--------------
ಉರಗಾದ್ರಿವಾಸವಿಠಲದಾಸರು
ಭಾರತೀಯ ರಮಣ ಪ್ರಾಣಾ | ಜಗಭಾರ ನಿನ್ನದಯ್ಯ ಪವನಾ ಪ ಘೋರದುರಿತ ಅಟವಿ ದಹನಾ | ಮಾರನಯ್ಯನ ತೋರೊ ಕರುಣ ಅ.ಪ. ಪಾದ ಪಾದ ಬಿಸಜ ಭವ ವಾರಿಧಿ ಮುರ | ವೈರಿಯ ಪದ | ತೋರುತ ಉ | ದ್ಧಾರವಗೈ 1 ದಿವಿಜ ವಿನುತಾ | ನೀ ಸಲಹೊ ಸಕಲ ವ್ಯಾಪ್ತಾ ||ವೀಶ ಶೇಷ | ಈಶಾ ಸುರ | ಪೇಶಾ ರವಿ | ಭಾಸಾ ಸ್ವಪ್ರಕಾಶಕ ಜಗ | ಪೋಷಕ ಚಿ | ತ್ತಾಕಾಶದಿ | ಭಾಸಿಸನಿಲ 2 ಕರಿ ಪರಿ ಪರಿಯಲಿ | ನಿರಂತರ 3
--------------
ಗುರುಗೋವಿಂದವಿಠಲರು
ಭಾರತೀಶನೆ ಉದ್ಧರಿಸುವದೆನ್ನ ಪ ಕಂಸಾರಿ ಪ್ರೀಯ ಸಂ - ಸಾರ ಬಂಧನ ನಿವಾರಿಸೊ ಜವದಿ ಅ.ಪ ಅಂಜನಾದೇವಿಯ ಸಂಜಾತನೆ ಭವ ಭಂಜನ ಹರಿಪದಕಂಜಾರಾಧಕ 1 ಮಾರುತಿ ನಿನ್ನ ಸುಕೀರುತಿ ತ್ರಿಜಗದಿ ಸಾರುತಲಿದೆಯುದ್ಧಾರಕನೆಂದು 2 ಹರಿಕುಲಜಾತನೆ ಹರಿಸಂಪ್ರೀತನೆ ಹರಿಹಯ ವಿನುತನೆ ಹರಿದುರಿತವನು 3 ಕಾಮಿತ ಫಲದ ನಿಸ್ಸೀವÀು ಪರಾಕ್ರಮಿ ಪ್ರೇಮವ ಕೊಡು ಶ್ರೀ ರಾಮನ ಪದದಿ 4 ಕುಂತಿ ಕುಮಾರಾದ್ಯಂತ ವಿದೂರನೆ ಅಂತರಂಗದಿ ಹರಿಚಿಂತನೆಯಕೊಡು 5 ಧರ್ಮಾನುಜಸದ್ಧರ್ಮ ಸ್ಥಾಪಕನೆ ಕಿರ್ಮೀರಾಂತಕ ನಿರ್ಮಲ ಚರಿತ 6 ಭೀಮನೆ ಸುದ್ಗುಣ ಧಾಮನೆ ಕುರುಕುಲ ಸೋಮನೆ ಸುರಮುನಿಸ್ತೋಮನಮಿತನೆ 7 ಅರ್ಜುನಾಗ್ರಜನೆ ದುರ್ಜನ ಶಿಕ್ಷಕ ಧೂರ್ಜಟಿವಂದ್ಯನೆ ಮೂರ್ಜಗ ಕರ್ತಾ 8 ಆರ್ಯನೆ ಕೃತ ಸತ್ಕಾರ್ಯನೆ ಜಗದೊಳು ನಾರ್ಯಕುರುಪನೂರು ಶೌರ್ಯದಿ ತರಿದ 9 ಕರಿವರದನ ಚರಣಾರವಿಂದ ಯುಗ ನಿರುತ ಸ್ಮರಿಪತೆರ ಕರುಣಿಸು ಭರದಿ 10 ದುಷ್ಟದ್ವಂಸಕನೆ ಶಿಷ್ಟಪಾಲಶ್ರೀ - ಕೃಷ್ಣನಂಘ್ರಿಯಲಿ ನಿಷ್ಠೆಯ ತೋರೋ 11 ಮಧ್ಯಗೇಹ ಸುತ ಸದ್ವೈಷ್ಣವ ಯತಿ ಅದ್ವೈತಕರಿ ಹರಿ ಸಿದ್ಧಾಂತ ಕರ್ತಾ 12 ಮಿಥ್ಯಾವಾದಿಬಾಯಿ ಎತ್ತದಂತ ಶ್ರು - ತ್ಯರ್ಥವ ಪೇಳ್ದ ಸಮರ್ಥನಹುದು ನೀ 13 ಹರಿಸರ್ವೋತ್ತಮ ಸಿರಿಯು ಅಕ್ಷರಳು ಸುರರೊಳು ನೀನೆ ಪಿರಿಯನು ಸತ್ಯ 14 ಸದಮಲಚರಿತನೆ ಹೃದಯದ ತಿಮಿರವ ವದೆದು ತರಿವುದಕೆ ಉದಿತ ಭಾಸ್ಕರ 15 ಮೂರು ರೂಪಾತ್ಮಕ ಸಾರಿದೆಯನ್ನಯ್ಯs ಪಾರದುರಿತ ಪರಿಹಾರವ ಗೈಸೊ 16 ಹೇಸಿಕೆ ಭವದಲಿ ನಾಶಿಲುಕಿಹೆ ವರ - ದೇಶ ವಿಠಲನ ಸೋಶಿಲಿ ತೋರೊ 17
--------------
ವರದೇಶವಿಠಲ