ಒಟ್ಟು 776 ಕಡೆಗಳಲ್ಲಿ , 90 ದಾಸರು , 610 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಹರಿಕೃಷ್ಣ ವಿಠಲಾ | ಕರುಣಿಸಿವಳೀಗೆ ಪ ಕರುಣಾನಿಧಿ ಎಂದೆನುತ | ಮರೆಹೊಕ್ಕೆ ದೇವಾ ಅ.ಪ. ಜ್ಞಾನವರ್ಜಿತಳಾಗಿ | ಆಜ್ಞೆಳೆಂದೆನಿಸಿಹಳುಮಾನನಿಧಿ ನೀನಾಗಿ | ಜ್ಞಾನ ಸಾಧನವಾಸಾನುಕೂಲಿಸೆ ಕಾಯೊ | ಮೌನಿಜನ ಸದ್ವಂದ್ವನೀನೆಗತಿ ಎಂದೆನುತಾ | ತನುವನರ್ಪಿಪಳೊ 1 ಕತೃ ನೀನೆಂಬಂಥಾಉತ್ತಮದ ಮತಿಯಿತ್ತು | ಬೃತ್ಯಳನು ಪೊರೆಯೋ 2 ಕ್ಲೇಶಮೋದಗಳು ಸಮ | ಭಾಸವಾಗಲಿ ದೇವವಾಸವಾದ್ಯಮರನುತ | ವಾಸುದೇವಾ ಖ್ಯಏಸೇಸು ಜನ್ಮಗಳ | ರಾಶಿ ಪುಣ್ಯದ ಫಲದಿದಾಸ ದೀಕ್ಷೆಗೆ ಮನವ | ಆಶಿಸಿಹಳಯ್ಯಾ 3 ರಾಜೀವ ನಯನ ಹರಿಓಜಸ್ಸುಗಳ ಕೊಟ್ಟು ಕಾಪಾಡೊ ಇವಳಾ 4 ಸರ್ವಜ್ಞ ಸರ್ವೇಶ | ಸರ್ವಕಾರಣ ಮೂರ್ತಿಊರ್ವಿಯಾಳಿವಳೊಬ್ಬ | ದರ್ವಿಯಂತಿಹಳೋಸರ್ವದಾ ತವಸ್ಮರಣೆ | ಕೃಪೆಗೈದು ಪೊರೆ ಇವಳಾಗುರ್ವಂತರಾತ್ಮ ಗುರು | ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ಹರಿಯ ಮರೆದುದಕಿಂತ ಪಾಪವಿಲ್ಲಾ | ಹರಿ ಸ್ಮರಣೆಯಿಂದಧಿಕ ಪುಣ್ಯ ಮತ್ತೊಂದಿಲ್ಲಾ ಪ ಗೋಹತ್ಯ ಸುರಾಪಾನ ಕನಕತಸ್ಕರ ಸುಜನ- | ಕಪಟ ವ್ಯಸನ || ಬಾಹಿರವಾಗ್ ದ್ವೇಷ ಪರದಾರಗಮನ ವಿ- | ವಾಹಗಳ ಮಾಣಿಸುವ ಪಾಪಕಿಂತಲಿ ಮೇಲು 1 ಗಂಗಾನದಿಯಲ್ಲಿ ಸ್ನಾನ ಪ್ರಣವ ಆಚಮನ | ಹಿಂಗದಲೆ ಗಾಯತ್ರಿ ಮಂತ್ರ ಮೌನ || ಕರುಂಗ ದಾನ-ಧರ್ಮ ವೃತ್ತಿ ಕ್ಷೇತ್ರ ರತುನ | ಬಂಗಾರಯಿತ್ತಧಿಕ ಬಹಳ ಪುಣ್ಯ ಮೇಲು 2 ಹಾಸ್ಯ ವಿರೋಧ ಮದ ಮತ್ಸರ ಪರಕಾರ್ಯ | ದಾಸ್ಯದಲಿ ಕೆಡಿಸುವ ಶಠನ ಲೋಭಿ || ವೈಶ್ವ ದೇವಾಹಿತ ಅತಿಥಿಗಳ ನಿಂದ್ಯರ- | ಹಸ್ಯ ದೂರುವ ಬಲು ಪಾಪಕಿಂತಲು ಮೇಲು 3 ಭಾಗವತ ಪುರಾಣ | ಸಾರ್ಥತ್ಯವಾದ ಪ್ರವಚನ ಶಾಸ್ತ್ರ || ಸಾರ ಪ್ರಬಂಧ | ಅರ್ಥ ಪೇಳುವ ಬಲು ಪುಣ್ಯಕಿಂತಲಿ ಮೇಲು4 ಮಿತ್ರಘ್ನ್ಯಗರಳ ಪ್ರಯೋಗ ಗರ್ಭಿಣಿವಧ | ಗೋತ್ರಸಂಸರ್ಗ ಬಲು ಪ್ರಾಣಹಿಂಸಾ || ಕ್ಷೇತ್ರ ಅಪಹಾರ ಕ್ಷುದ್ರವಾಣಿ ನಿಜಕ- | ಳತ್ರದಿ ದ್ರೋಹ ಬಲು ಪಾಪಕಿಂತಲಿ ಮೇಲು 5 ಕರ್ಮ ಸರ್ವದಲ್ಲಿ ಗಯಾ ಶ್ರಾದ್ಧ | ಭೂಧರ ಸಮಾಗಮ ಸತ್ ಶ್ರªಣಾ || ಆದಿತ್ಯ ಚಂದ್ರ ಉಪರಾಗ ಪರ್ವಣಿ ನಾನಾ | ರಾಧನೆಯರೆ ಬಲು ಪುಣ್ಯಕಿಂತಲು ಮೇಲು 6 ಆವಾವ ಪಾಪ-ಪುಣ್ಯಗಳದವರ ಕಿಂಕರವು | ದೇವನ ನೆನಸಿದಂಥ ನೆನೆಯದಂಥ || ಜೀವರೊಳಗೊಬ್ಬ ಮುಕ್ತನು ಒಬ್ಬ ತಮಯೋಗ್ಯ | ಕೈವಲ್ಯಪತಿ ನಮ್ಮ ವಿಜಯವಿಠ್ಠಲ ಪ್ರೇರಕ7
--------------
ವಿಜಯದಾಸ
ಹರಿವಾಯುಗಳು ಮೂರಕ್ಕರದ ದೇವ ಮೂರು ವಸ್ತುವ ಬೆರಸಿ ಮೂರು ಮೂರಾಗಿಸೆಯೆ ಪಾಲಿಸುವ ನಮ್ಮ ಎರಡು ವಸ್ತುವು ಸೇರಿ ದೇಹಕ್ಕೆ ಚಲನೆಯದು ಹರಿವಾಯುಗಳ ಒಲುಮೆ ದೇಹ ರಕ್ಷಕವು4 ಅವ್ಯಾಕೃತಾಕಾಶ ರೂಪದಲಿ ತಾನಿಹನು ವಿಶ್ವಂಭರಾತ್ಮಕನು ದೇವ ನಿಜದಿಂದ ಸೃಷ್ಟಿಗವನೇ ಮೂಲ ವಾಸುದೇವಾತ್ಮಕನು ಮಧ್ವಹೃದಯನಿವಾಸಿ ಸರ್ವಮೂಲನವ 5 ಪೃಥಿವಿಯಪ್ ತೇಜಸ್ಸು ಮೂರು ಭೂತಾಣುಗಳು ತುಂಬಿಯಾಗಸದಲ್ಲಿ ವ್ಯಾಕೃತವದಹುದು ತುಂಬಿ ವಾಯುವಿನಣುಗಳ್ ಒಂದೆಡೆಯೆ ತಾನಹುದು ವ್ಯಾಕೃತಾಕಾಶ 6 ಆಗಸದಿ ವಾಯುವಿನ ಪರಮಾಣು ಒತ್ತಡವೆ ದೃಶ್ಯವಾಯುವು ತಾನೆ ಹರಿವುದಾಗಸದಿ ದೃಶ್ಯವಾಯುವಿನ ಪರಮಾಣುವೊತ್ತಡದಿ ನಿಜ ತೇಜವುದಯಿಸುವುದದರಲ್ಲಿ ಮೂರಿಹವು 7 ತೇಜದಿಂದಲೆ ನೀರು ಜಗಕೆಯಾಧಾರವದು ನೀರಿನಿಂದಲೆ ಭೂಮಿ ಉದಯಿಸುವದದರಿಂ ಪಂಚಭೂತಂಗಳಿವು ಭೂಮಿಯಲಿ ತೋರುವವು ಪಂಚಭೂತಾತ್ಮದ ಪ್ರಕೃತಿಯಿದು ಸತ್ಯ 8 ಇವುಗಳಿಗೆ ಒಡತಿಯಾ ಪ್ರಕೃತಿದೇವಿಯು ಸತ್ಯ ಪ್ರಕೃತಿಯೆದೆಯಲ್ಲಿರುವ ದೇವರೂ ಸತ್ಯ ಪ್ರಕೃತಿ ಪುರುಷರ ಲೀಲೆ ಮಧ್ವಮತದಾ ತಿರುಳು ಮಧ್ವ ಸದ್ಗ್ರಂಥಗಳು ಸರ್ವಮೂಲಗಳು 9 ಭೂತಕೃತ್ತೂ ಅವನೆ ಭೂತಪಾಲಕನವನೆ ಭೂತಭಾವದಲಿದ್ದು ಪ್ರೇರಕನು ಅವನೆ ಆತ್ಮಾಂತರಾತ್ಮವೆಂದೆರಡು ರೂಪಗಳವಗೆ ಹೃದಯದಾಕಾಶದಲಿ ವಾಸವಾಗಿಹನು 10 ಪಂಚಭೂತಗಳು ಪಂಚೇಂದ್ರಿಯಗಳು ಪಂಚ ಕರ್ಮೇಂದ್ರಿಯಗಳ ರಚಿಸಿ ಹರಿಯು ಪಂಚಾತ್ಮಕನು ದೇವ ಪಂಚವಾಯುಗಳಿಂದ ಪಂಚತನ್ಮಾತ್ರಗಳ ಜ್ಞಾನವೊದಗಿಪನು11 ಸುಖ ರತಿ ಪ್ರೇರಕನು ತಾನಾಗಿ ಸಿರಿವರನು ಶಾರೀರ ಪುರದಲ್ಲಿ ನೆಲೆಯಾಗಿ ಇಹನು ಬೆಳಗುತ್ತ ದೇಹವನು ಬೆಳಗಿಸುವ ದೇವತೆಗ ಳವನ ಬಳಿಯಿದ್ದು ಸೇವೆಯ ಗೈಯುತಿಹರು 12 ವಿಶ್ವ ದರ್ಶನಕಾಗಿ ವಿಶ್ವಜನರೊಳು ಕಣ್ಣಿನಲ್ಲಿ ನೆಲೆನಿಂತು ವಿಶ್ವಸಾಕ್ಷಿಯು ಸೂರ್ಯನಲ್ಲಿಯೂ ತಾನಿದ್ದು ವಿಶ್ವವನು ಬೆಳಗಿಸುತ ಜ್ಞಾನವೊದಗಿಪನು 13 ಸೂರ್ಯನೊಂದೆಡೆಯಿದ್ದು ತಾನ್ ಬೆಳಗಿ ಲೋಕವನು ತನ್ನ ಕಿರಣಂಗಳಿಂ ಬೆಳಗಿಸುವ ತೆರದಿ ಕಣ್ಣು ಮೊದಲಾದಿಂದ್ರಿಯಗಳಲಿ ತಾನಿದ್ದು ಅವುಗಳನು ಬೆಳಗಿಸುತ ರಕ್ಷಿಪನು ನಮ್ಮ14 ತೈಜಸದ ದೇವನವ ತೇಜದಾರೂಪದಲಿ ಕಂಠಗತನಾಗಿದ್ದು ದೇಹದಲಿ ಬೆಳಗಿ ಹುಲಿ ಕರಡಿ ಮೊದಲಾದ ಜಂತುಗಳ ಸೃಷ್ಟಿಸುತ ಸ್ವಪ್ನಲೋಕವನು ಮಾನಸಕೆ ತೋರಿಸುವ 15 ಪ್ರಾಜ್ಞರೂಪದ ದೇವನಪ್ಪಿ ಜೀವಾತ್ಮನನು ಮಾಯೆಯಾ ಮುಸುಕಿನಿಂದಜ್ಞಾನಬರಿಸಿ ಜೀವನಿಗೆ ತೋರದುದರಿಂದ ಪ್ರಾಜ್ಞನದಾಗಿ ಜಗಕೆ ತನ್ನಯ ಮಾಯೆಯನು ತೋರಿಸುವನು 16 ನಾಲ್ಕನೆಯ ರೂಪವದು ತುರ್ಯ ನಾಮದಲಿಹುದು ಮುಕ್ತರಿಗೆ ಮಾತ್ರವೇ ತೋರುವುದು ಪೇಳ್ವೆ ಜಾಗರಾದಿಯವಸ್ಥೆಗಳ ನಾಲ್ಕು ಪೇಳಿದನು ಮಾಯಾವಿ ಪರಮಾತ್ಮನದು ಲೀಲೆಗಳಿವು 17
--------------
ನಿಡಂಬೂರು ರಾಮದಾಸ
ಹಳೆಯವಾಸನೆ ನಿನ್ನ 'ೀರುವದಣ್ಣಬಳಸಿದೆ ಬಹುವಾಗಿ ಬಿಡುವದೆಂತಣ್ಣ ಪಭವರೋಗಿಯಾಗಿದ್ದು ಬಾಯ ಸ'ಗಾಗಿಅ'ವೇಕ ಪಥ್ಯಗಳ ಸ'ದು ಮೂರ್ಛೆದೋಷವುಮೂರ್ಛೆಯ ಕ'ದು ಮನ ತೇಲಿ ಬಂತಾಗಿಸು'ವೇಕ ಮುಚ್ಚೋುತೆ ತೋರದಾಗಿ 1ರಾಮನ ನಾಮ ರಸಾಯನವನ್ನುನೇಮದಿಂ ಸೇ'ಸು ಬಿಡದಿರುುನ್ನುಕಾಮಾಲೆ ಬರದಂತೆ ಕರಣಗಳನ್ನು ಸದಾ ಮನಗುತೆುಂದರಿತರೆ ಸುಖಿುನ್ನು2ಕರುಣದಿಂ ಚಿಕ್ಕನಾಗಪುರದೊಳಗಿರುವಗುರುಪರವಾಸುದೇವಾರ್ಯನ ಪದವ ಪಿಡಿದರೆ ಸುಜ್ಞಾನಾಮೃತವ ನಿನಗೆರೆವಮರೆವೆ ಹಳೆಯ ವಾಸನೆಯ ನಿನ್ನಿರವ3
--------------
ವೆಂಕಟದಾಸರು
ಹಾಸ್ಯದ ಮಾತಿದು ಮಾನವಗೆ ವಿಷಯೇಚ್ಛೆಯ ಜೀವನವೆಂಬುದು ಶಾಶ್ವತ ಶಾಂತಿಯ ನೀಡುವ ನಿನ್ನಯ ಪದವನೆ ಮೆರೆತಿಹದು ಗುರುವೇ ಈಶ್ವರನೀತನೆಂದು ಸಾರಿತು ಶೃತಿ ಇದ ಕೇಳುತ ನಾ ಕರುಣಾ ನಿಧಿಯೇ ನಿನ್ನ ಹೊರತಿ ನ್ನನ್ಯರು ಗತಿಯಿಲ್ಲೆನ್ನುತ ನಾ ಚರಣಕಮಲಕೆ ಮೊರೆಹೊಕ್ಕೆ ಪರಮಾನಂದಾತ್ಮ ಸ್ವರೂಪದಾ ಅರಿವನು ನೀಡಿ ಪೊರೆವುದು ಎನ್ನಶಂಕರ ಗುರುದೇವಾ
--------------
ಶಂಕರಭಟ್ಟ ಅಗ್ನಿಹೋತ್ರಿ
ಹಿತದಿಂದ ಪೊರೆಯೆನ್ನ | ವಿತತ ಮಹಿಮ ಹರಿಯೇ ಹಿತ ಅಹಿತವೆರಡನ್ನು | ಸಹಿಸುವಂತೇ ಪ ಅತಿ ದಯಾಪರನೆಂದು | ಖತಿದೂರನೆಂದೆನುತಶ್ರುತಿ ನಿಚಯ ಸಾರುತಿದೆ | ಗತಿ ಪ್ರದನೆ ದೇವಾ ಅ.ಪ. ವೇದ ವೇದ್ಯನೆ ದೇವ | ಆದ್ಯಂತ ರಹಿತನೇಕಾದುಕೋ ಎನ್ನನು | ಮೋದಗಳನಿತ್ತೂ ||ಸಾಧನ ಸುಮಾರ್ಗದಲಿ | ಹಾದಿಯನು ಕಾಣದಲೆಬಾಧೆಗೊಳಗಾಗಿಹನ | ಆದರಿಸು ದಯವನಧೀ 1 ಪ್ರಾಣಪತಿಯೇ ಎನ್ನ | ಪ್ರಾಣಗಳು ವಶವಿಲ್ಲಧ್ಯಾನ ಮಾಡುವೆನೆನ್ನ | ಮನನಿಲ್ಲಧ್ಹರಿಯೇ ||ಜ್ಞಾನ ಕರ್ಮೇದ್ರಿಗಳು | ಏನೊಂದು ನಿನ್ನಯಾಧೀನವಿರಲೂ ನಾನು | ಏನು ಮಾಡಲು ಸಾಧ್ಯ 2 ಗೋವರ್ಧನೋದ್ಧರನೆ | ಗೋವುಗಳ ಪರಿಪಾಲಕಾವ ಕರುಣೀ ನಮ್ಮ | ದೇವರ ದೇವಾ ||ಗೋವಿದಾಂಪತಿ ಗುರು | ಗೋವಿಂದ ವಿಠಲನೆನೀವೊಲಿಯದಿನ್ನಾರು | ಕಾವರನು ಕಾಣೆನಯ್ಯಾ 3
--------------
ಗುರುಗೋವಿಂದವಿಠಲರು
ಹೃತ್ಪದ್ಮದೊಳಿದ್ದು ಹೃತ್ತಾಪಗಳ ಕಳೆಯೊ ಜೀ- ವತ್ಪಿತಾಮಹ ಜನಕನೇಪ ಮೃತ್ಪಿಂಡದಂತೆನ್ನ ಉತ್ಪತ್ತಿಗೆ ಕ- ಣ್ಣೆತ್ತಿ ನೋಡಲರಿಯಾ ಜೀಯಾ ಅ.ಪ ನಿತ್ಯ ನಿತ್ಯ ಜಗವೆಲ್ಲವು ನಿತ್ಯವು ನಿತ್ಯತ್ವವೆಲ್ಲ ಸರಿಯೇ ಏನಿದ್ದರೇನು ಅನಾದಿಕರ್ಮದ ಬವಣೆ ಬೆನ್ನಟ್ಟಿ ಬರುತಿರ್ಪುದ- ಜ್ಞಾನಾಂಧಕಾರದಿಂ ಧ್ಯಾನವನು ತಿಳಿಯದೇ ಕಾನನದೊಳಿಪ್ಪೆನೋ ಜ್ಞಾನಗಮ್ಯನೆಂದು ಸಾರುತಿದೆ ಶ್ರುತಿ ಶಾಸ್ತ್ರ ಜ್ಞಾನಗುರು ದೊರೆತಿಲ್ಲವೋ ಸಾನುರಾಗದಿ ನೀನೆ ಸಾಧನಕೆ ಕರುಣಿಸಿ ಧ್ಯಾನದಲಿ ಮನಸು ನಿಲಿಸೋ ಉಳಿಸೋ 1 ಬಂಧ ಮೋಕ್ಷಕೆ ಎಲ್ಲ ಮನವೆ ಕಾರಣವೆಂದು ಎಂದೆಂದಿಗು ಪೇಳುತಿಹರು ಸಿಂಧುಶಯನನೆ ಭವಬಂಧಮೋಚಕನೆಂದು ವಂದಿಸಿ ಪೊಗಳುವರೊ ಮಂದರೊದ್ಧರ ನಿನ್ನ ಮಂದಮತಿಯಿಂದಲಿ ವಂದಿಸಲು ನಾನರಿಯೆನೊ ಕಂದರ್ಪಜನಕ ನೀ ಮಂದಭಾಗ್ಯನ ಮನವ ನೋಯಿಸದೆ ನಿನ್ನ ಪದದಲ್ಲಿರಿಸೊ ಅಂದೆ ಎನ್ನಯ ಭವಬಂಧನಾಶವಾಗುವು- ದೊಂದೆ ನಿನ್ನನು ಬೇಡುವೆನೊ ಜೀಯ 2 ಜೀವರೆಲ್ಲರು ಗುಣತ್ರಯಾವರಣದಿಂದ ಕರ್ಮ- ಪ್ರವಹದೊಳಿಪ್ಪರೊ ಕವಿಸಿ ಮೋಹವ ನೀನು ಭವಕೆ ಕಾರಣವಹುದು ದೇವೇಶ ನಿನ್ನಾಟವೋ ಶ್ರವಣದಿಂದಲಿ ಭವಬಂಧಮೋಚಕನೆಂದು ತವ ಬಿರುದು ಸಾರುತಿದೇಕೋ ಭಾವ ಬಲ್ಲವರಾರೋ ಕಾವ ಕರುಣಿ ನೀನೆ ಭಾವಜನ ಪಿತನು ಅದೇ ಭವಪಾಶ ಬಿಡಿಸೆ ನಾ ಭಕುತಿಪಾಶದಿಂದ ಪಾದ ಬಿಗಿವೆನಯ್ಯ ಜೀಯ 3 ಸ್ವಾತಂತ್ರ್ಯವೆಲ್ಲಿಹುದು ಸ್ವಾಮಿತ್ವವೆಲ್ಲಿಹುದು ಅ- ಸ್ವತಂತ್ರನಾಗಿಪ್ಪೆನೊ ಕಾತುರದಿ ನಾ ಮಾಳ್ಪ ಕ್ರಿಯೆಗಳೆಲ್ಲವು ಎನ್ನ ಸ್ವಾತಂತ್ರ್ಯವೆಂದ್ಹೇಳುವೆ ನೀ ತಂತ್ರಿಯಾಗಿದ್ದೆನ್ನ ನಡೆಸುವುದನರಿಯೆ ಕು- ತಂತ್ರವನು ನಾ ಮಾಡುವೆ ಸ್ವಾ- ತಂತ್ರನು ನೀನು ಸೂತ್ರನಾಮಕ ದೇವ ಮಂತ್ರಿಯಾಗೀದೇವ ಯಂತ್ರ ನಡೆಸುವ ಎಂತಾದರಡಿಗಡಿಗೆ ಅತಂತ್ರನಾಗಿಹೆ ನಾನೇ ಭ್ರಾಂತಿಪರಿಹರಿಸಿ ಕಾಯೊ ಶೌರೇ 4 ಭಕ್ತಿ ಇಲ್ಲದೆ ನಿನ್ನ ಭಕ್ತನಾಗುವುದೆಂತೋ ಭುಕ್ತಮಾತ್ರನು ನಾನು ಮುಕ್ತರೊಡೆಯ ನೀನು ಯುಕ್ತಿತೋರಿಸು ಎನಗೆ ಭಕ್ತಾಪರಾಧಸಹಿಷ್ಣು ಶಕ್ತ ನೀನಹುದೊ ವೇದೋಕ್ತ ಮಹಿಮಾತೀತ ಸಕ್ತವಾಗಲಿ ನಿನ್ನ ಪದದಿ ಮನಸು ವ್ಯಕ್ತನಲ್ಲವೊ ಸರ್ವ ಸಾರಭೋಕ್ತನು ನೀನು ಭಕ್ತವತ್ಸಲ ಪುರುಷಸೂಕ್ತಮೇಯ ಅಪ್ರಮೇಯ ಯುಕ್ತಿಮಾತಲ್ಲಿದು ಭಕ್ತಿಪೂರ್ವಕ ನಿನ್ನ ಭಕ್ತ ಶ್ರೇಷ್ಠರ ಸೇವೆ ಕೊಟ್ಟು ರಕ್ಷಿಸೊ ದೇವಾ 5 ನಾದಕ್ಕೆ ಪರನಾಗಿ ವಾದಕ್ಕೆದೊರೆಯೇ ನೀ ವೇದವೇದಾಂತವೇದ್ಯ ಸಾಧನವು ಕಾಣೆ ಸಾಧನಶರೀರವಿದು ಸಾದರದಿ ಕರುಣಿಸಿದೆ ಅನಿರುದ್ಧದೇವ ಬಾಧಿಪುದು ಬಂಧಗಳು ಅನಾದಿಕರ್ಮದಿ ಬಂದು ನಾ ಅಧಮತಮಸಾಧನವನ್ನೆಸಗಿದೆ ನೀ ದಯಾಸಿಂಧು ಎಂದಡಿಗಡಿಗೆ ಬೇಡುವೆನು ಕೃದ್ಧನಾಗದೆ ಇನ್ನು ಉದ್ಧರಿಸು ತಂದೇ ಎಂದೇ 6 ಶಂಖಚಕ್ರಾಂಕಿತನೆ ಮಂಕುಬುದ್ಧಿಯ ಬಿಡಿಸೋ ಅಂಕಿತವೆನಗೆ ಇಲ್ಲ ಅಂಕೆ ಇಲ್ಲವೊ ನಿನ್ನ ನೆನೆಹುದಕೆ ಎಂದಿಗೂ ಶಂಕೆಯ ಪಡುವನಲ್ಲ ವೇಂಕಟಾದ್ರಿಯ ವಾಸ ಶ್ರೀ ವೇಂಕಟೇಶನು ಮಮಕುಲಸ್ವಾಮಿ ದೈವವೆಂದನುದಿನ ಸಂಕಟಾಗಾಮಿಗಳ ಕಂಟಕವ ಹರಿಸಿ ಪದ ಪಂಕಜದಿ ಮನವ ನಿಲ್ಲಿಸೋ ಬಿಂಕದ ಮಾತಲ್ಲ ಪಂಕಜದಳಾಯತಾಕ್ಷ ಅಕ- ಳಂಕಮಹಿಮ ಕಾಯೋ ಜೀಯಾ7
--------------
ಉರಗಾದ್ರಿವಾಸವಿಠಲದಾಸರು
ಹೃದಯಾಧಿವಾಸಾ ಚಿನ್ಮಂiÀi ಪಾವನ ಅವನೆ ದೇವಾಧಿದೇವ ಮೂರು ಕಾಲದ ಸಾಕ್ಷಿ ಪರಮಾತ್ಮನೇ ಅವನೇ ಜಗದಾಧಿವಾಸ ಪ ಆಕಾರದೊರ ಏಕಾಂತಪೂರ ಏಕಾಂತಘನಪೂರ ತಾ ನಿರ್ವಿಕಾರ ಮನೋವಾಣಿದೂರ ಮನೋವಾಣಿಗೆದೂರ ಜಗಕೆಲ್ಲ ಆಧಾರ ತಾನಾಗಿಹ ಇವನೆ ಪರಮಾತ್ಮ ಈಶ ಹೃದಯಾಧಿವಾಸ 1 ಮನವೆಲ್ಲ ಉಡುಗಿ ಅನಿಸಿಕೆಯಡಗಿ ಅನಿಸಿಕೆ ತಾನಡಗಿ ತನಿನಿದ್ರೆಯಲ್ಲಿ ಇವು ಎಲ್ಲ ಮುಳುಗಿ ತಾನೇ ತಾನಾಗಿರ್ದ ಚಿನ್ಮಾತ್ರನೆ ಅವನೆ ಆನಂದರೂಪ ಹೃದಯಾಧಿವಾಸ 2 ಅವನೇ ನಾನೆಂದು ತಿಳಿ ಈಗ ನಿಂದು ಜಗವೆಲ್ಲ ಕನಸೆಂದು ಪರಮಾರ್ಥ ಸತ್ಯ ಶ್ರೀನಾರಾಯಣ ಇವನೇ ಗುರುಶಂಕರೇಶ ಹೃದಯಾಧಿವಾಸ 3
--------------
ಶಂಕರಭಟ್ಟ ಅಗ್ನಿಹೋತ್ರಿ
ಹೊನ್ನು ಹೆಣ್ಣು ಮಣ್ಣು ಮಾಯೆಯದು ಮೂರು ರೂಪಗಳ ನಾನು ಪೇಳುವೆನು ಹೊನ್ನು ಹೆಣ್ಣು ಮಣ್ಣು ಎಂಬ ಮೂರವುಗಳ್ ಅವುಗಳನು ಹಂಬಲಿಸಿ ಕೆಡಬೇಡ ಮರುಳೆ ನೀನ್ ಅವುಗಳೇ ಮೃತ್ಯುವಿನ ಕಡೆಗೊಯ್ಯುವವುಗಳ್ 52 ಕಷ್ಟದಿಂ ಸೃಷ್ಟಿಯಲಿ ನಗ್ನತೆಯೆ ಸುಂದರವು ಕಷ್ಟದಿಂ ಮರಣದಲಿ ನಗ್ನತೆಯ ದೇಹ ಕಷ್ಟವಿಕ್ಕ್ಕೆಡೆಗಳಲಿ ನಾಸ್ತಿಸುಖ ಮಧ್ಯದಲಿ ಕನಕ ಕನಕವದೆಂದು ಹೊನ್ನ ಪೇಳುವರು53 ಮೋಹಿನಿಯು ತಾನಾಗಿ ದ್ಯೆತ್ಯರನು ವಂಚಿಸಿದ ಮೋಹಿನಿಯು ತಾನಾಗಿ ರುದ್ರ ವಂಚಿತನು ಮೋಹಿನಿಯು ತಾನಾಗಿ ಸುಂದೋಪಸುಂದ ವಧೆ ಮೋಹಿನಿಯು ಪೆಣ್ಣು ಮೋಸವದಲ್ತೆ ಮನುಜ? 54 ಮಣ್ಣಿನಿಂದಲೆ ಹರಿಯು ದೇಹವನು ಸೃಷ್ಟಿಸುವ ಮಣ್ಣೆ ಅನ್ನವದಾಗೆ ಪಾಲಿಸುವ ನಮ್ಮ ಮರಣಕಾಲದಲದುವೆ ಮಣ್ಣನಪ್ಪುವದು ತಿಳಿ ಮಣ್ಣಿಗಾಗಿಯೇ ನೀನು ಹಂಬಲಿಪೆಯೇಕೆ 55 ಪ್ರಾಣದೇವರೆ ನಿನ್ನ ಉಸಿರಾಟ ಕಾರಣರು ಪ್ರಾಣನುಸಿರಾಟವದು ಯಾರಿಂದಲಹದು? ಅವನೆ ಪರಮಾತ್ಮ ತಿಳಿ ದೇವಾಧಿದೇವನವ ನಿನ್ನ ಬಾಳಿಗೆ ಕಾರಣರು ಇಬ್ಬರಹರು56 ಸೂರ್ಯದೇವನು ನೇತ್ರತತ್ವಕ್ಕೆ ಒಡೆಯನವ ಸೂರ್ಯನದು ಕಣ್ಣು ಯಾರಿಂದ ತೋರುವುದು? ಅವನೆ ಪುರುಷೋತ್ತಮನು ಪರಮಾತ್ಮ ಹರಿಯವನು ಆ ವಿಶ್ವರೂಪಿಯೇ ವಿಶ್ವಧಾರಕನು57 ವಾಸದಿಂ ಬೆಳಗಿಸುವ ಕಾರಣದಿ ಭಗವಂತ ವಾಸುದೇವಾತ್ಮಕನು ಸೃಷ್ಟಿಮೂಲನವ ವಸುದೇವಪುತ್ರನಾಗವತರಿಸಿ ಸಿರಿವರನು ಉಡುಪಿಯಲಿ ಪೂಜೆಗೊಂಬನು ನಿಜವ ಪೇಳ್ವೆ 58 ಕೃತಯುಗದ ಭಾರ್ಗವನು ತ್ರೇತೆಯಲಿ ದಾಶರಥಿ ದ್ವಾರಪದ ಕೃಷ್ಣ ನೀನೇಯಿರುವೆ ದೇವಾ ಮಧ್ವವರದನು ನೀನು ಭಾರ್ಗವನ ನೋಡಲ್ಕೆ ಉಡುಪಿಗೇ ಬಂದಿರುವೆ ಪರಮಾತ್ಮ ನೀನು 59 ಪರಶುರಾಮ ಕ್ಷೇತ್ರ ಶ್ರೀಕೃಷ್ಣನ ಕ್ಷೇತ್ರ ಪದ್ಮನಾಭಕ್ಷೇತ್ರ ಶಂಕರಕ್ಷೇತ್ರ ಹಲವಾರು ದೇವತೆಗಳಿಲ್ಲಿ ನೆಲೆಗೊಳ್ಳುತ್ತ ಪಾವನವ ಗೈಯುವರು ಭೂಮಿಯನ್ನಿದನು 60 ತುಲೆಯಲ್ಲಿ ತೂಗಿದಾಗುತ್ತಮವದದರಿಂದ ತುಲು ದೇಶವಿದು ಜಗದಿ ವಿಖ್ಯಾತವಹುದು ತುಲು ಲಿಪಿಯೆ ಸರ್ವಮೂಲ ಗ್ರಂಥ ಲೇಖನಕೆ ವೇದಾದ್ರಿಯಾಯಿತಿದು ವೇದಾಂತಭೂಮಿ 61 ಮಧ್ಯಗೇಹದ ಭಟ್ಟರಿಂ ಸೇವೆಯ ಪಡೆದು ವಾಯುದೇವೋತ್ತಮನ ಮಗನಾಗಿ ಕೊಡಿಸಿ ಸಜ್ಜನರ ಹೃದಯದಲಿ ಮುಖ್ಯ ತತ್ವವ ತಿಳಿಸೆ ಸರ್ವಜ್ಞ ಮೂರ್ತಿಯನು ತಂದಿರುವೆ ದೇವಾ62 ಪರಶುರಾಮನ ರೂಪದಿಂ ನೀಂ ತಪಗೈದ ಪಾಜಕ ಕ್ಷೇತ್ರದಲಿ ಭಕುತನವತರಿಸೆ ಜ್ಞಾನರೂಪದ ನೀನು ಅವನ ಹೃದಯವ ಪೊಕ್ಕು ಮಧ್ವಮತವನು ನೀನು ಪಸರಿಸಿದೆ ಹರಿಯೆ 63
--------------
ನಿಡಂಬೂರು ರಾಮದಾಸ
ಹ್ಯಾಂಗಾದರ್ಹಾಂಗಾಗಲಿ ಎ- ನ್ನಿಂಗಿತವ ನೀ ಬಲ್ಲೆ ರಂಗಯ್ಯಪ ಮಂಗಳಾಂಗ ನೀ ಕೊಟ್ಟು ಸಲಹೋ ಶುಭಾಂಗ ಅ- ನಂಗಜನಕ ಭುಜಂಗಶಯನ ಮಾ- ತಂಗವರದ ಶ್ರೀ ರಂಗನಾಥನೇ1 ದೇವಾ ನಾ ಸದ್ಭಾವದಲ್ಲಿ ನಿನ್ನ ಪಾದ ಪದುಮ ನಿರುತ ಧೇನಿಸುವೆ ಪವಮಾನ ಜೀವೋತ್ತಮ ನೀ ಧರ್ಮೋತ್ತಮನೆನ್ನುವ ಭಾವ ಎನಗಾವಕಾಲದಿ ಇರಲಿ ಬೇಡೆನು ಇತರ ಸಂಪದವಾ 2 ಶ್ರೀಶಾ ಶ್ರೀ ವೆಂಕಟೇಶ ನಿರ್ದೋಷ ಗುಣ ವಾಸನೆ ನಿನ್ನ ದಾಸಜನಭವಪಾಶ ಕ್ಲೇಶ- ನಾಶನವ ಗೈಸಿ ಸಲಹುವುದು ಶೇಷಶಯನ ಶ್ರೀ ರಂಗಶಾಯಿ 3
--------------
ಉರಗಾದ್ರಿವಾಸವಿಠಲದಾಸರು
(ಅನಂತೇಶ್ವರ ದೇವರನ್ನು ನೆನೆದು)ಯಾಕಿಲ್ಲಿ ಬಂದು ಮಲಗಿದೆಯೊ ಎಲಾ ಹರಿಯೇಲೋಕೋತ್ತಮಾನಂತೇಶ್ವರ ದೇವಾಲಯದಿ ಪ.ಬಿಡದೆ ಪಾಲ್ಗಡಲೊಳಗೆ ಕಡು ವೈಭವದಿ ತಡಿಗೆಝಡಿದು ಬರುತಿಹುದು ಭೋರ್ಗುಡಿಪ ತೆರೆಯಝಡಿವ ನಾದಕೆ ಒಡಂಬಡದೇಕಾಂತದಿ ಬಂದುಮಡದಿ ಶ್ರೀದೇವಿ ಸಹಿತೊಡನೆ ಮಲಗಿದೆಯೋ 1ನೀರೊಳಗೆ ಮುಳುಗಿ ವೇದವÀ ತಂದು ಬೆನ್ನಿನೊಳುಭಾರವನು ಪೊತ್ತು ಬಹಳಾಲಸ್ಯವೋಧಾರುಣಿಯ ಸಲಹೆ ಭೋರ್ಗುಡಿಸಿ ಸ್ತಂಭದಿ ಬಂದಕ್ರೂರತನಕಿದುವೆ ವಿಸ್ತಾರ ಸಮಾಧಾನತೆಯೋ 2ರೂಢಿಗೊಡೆಯ ತಾನಾಗಿ ಮೋಡಿಯೊಳು ಭೂದಾನ-ಬೇಡಿದೆನು ಎಂಬ ನಾಚಿಕೆಯ ಮನವೋಖೋಡಿನೃಪತಿಯರ ಹೋಗಾಡಿಸುತ ಕಾಡಿನೊಳುಕೋಡಗರ ಕೂಡಿ ರಥ ಓಡಿಸಿದ ಬೇಸರವೋ 3ಲೋಲಾಕ್ಷಿಯರ ವ್ರತವ ಹಾಳುಮಾಡುತ ಕಲಿಯಕಾಲದೊಳು ಗೈವಂತಮೇಲುಕಾರಿಯದಕಾಲೋಚಿತವ ಮನದೊಳಾಲೋಚಿಸುತ್ತಹಿಯಮೇಲೆ ಪವಡಿಸಿ ನಿದ್ರಾಲೋಲನಾಗಿಹೆಯೋ 4ಯುಗಯುಗದೊಳವತಿರಿಸ ಜಗದ ಭಾರವನಿಳುಹಿಬಗೆಬಗೆಯ ನಾಟಕದಿ ಮಿಗೆ ಪಟ್ಟ ಶ್ರಮವತೆಗೆಯಲೋಸುಗ ಚರಣಯುಗವ ಮೃದುಕರದಿ ಶ್ರೀಸೊಗಸಿನಿಂದೊತ್ತುವ ಸೊಂಪೊಗರಿತೋ ನಿನಗೆ 5ಲಲಿತ ವೈಕುಂಠದೊಳಗೆ ಜಲಜಭವಮುಖ್ಯಸುರ-ಗಲಭೆಯುಂಟೆಂದಲ್ಲಿ ನಿ¯ದೆ ಈಗಲಲನೆಯಳ ಕೂಡೆ ಸರಸಗಳನಾಡಲು ತನಗೆಸ್ಥಳವಿಲ್ಲವೆನುತಿಲ್ಲಿ ನೆಲಸಿಕೊಂಡಿಹೆಯೋ 6ಸೇರಿರ್ದ ಶರಣ ಸಂಸಾರಿ ನೀನೆಂದುಶ್ರುತಿಸಾರುವುದು ಕರುಣವನು ತೋರೆನ್ನ ದೊರೆಯೇದಾರಿದ್ರ್ಯದೋಷವಪಹಾರಿಸುತ ಇಷ್ಟಾರ್ಥ-ಸೇರಿಸೈ ಶ್ರೀ ಲಕ್ಷ್ಮೀನಾರಾಯಣನೆ ಹರಿಯೇ 7
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
(ಕೇಶವಾಯ ನಮಃ ದಿಂದ ಆರಂಭವಾಗುವ ಆಚಮನ ಸ್ತುತಿ)ಶ್ರೀನಿವಾಸಾಯ ನಮೋ ಪ.ಶ್ರೀನಿವಾಸಾಯ ಶತಭಾನುಪ್ರಕಾಶಾಯಶ್ರೀನಿವಾಸಾಯ ನಿಜ ಭಕ್ತಜನಪೋಷಾಯಶ್ರೀನಿವಾಸಾಯ ಪರಮಾನಂದಘೋಷಾಯ ಅ.ಪ.ದೋಷಗಂಧವಿದೂರ ಕೇಶಿಮುಖದಾನವ ವಿ-ನಾಶವಿಧಿಭವಸುಖನಿವಾಸ ವಾಸುಕಿಶಯನವಾಸವಾದ್ಯಮರಗಣಪೋಷ ಪಾವನವೇಷ ಶ್ರೀಶ ನಿರ್ಗತವಿಶೇಷದಾಸಜನಹೃದಯಾಬ್ಧಿಭೇಶ ಕೌಸ್ತುಭಮಣಿವಿ-ಭೂಷ ಭೂತಾತ್ಮ ಭವಪಾಶಹರ ಪರತರ ದ-ಯಾ ಸಮುದ್ರ ವಿನಿದ್ರ ಭೂಶಯನ ಭೂರಿಪ್ರದಕೇಶವಾಯ ನಮೋನಮಃ 1ಕ್ಷೀರಸಾಗರವಾಸ ಶ್ರೀರಮಾಪ್ರಾಣೇಶಸಾರಭೋಕ್ತøಸ್ವತಂತ್ರ ಚಾರುಷಡ್ಗುಣಭರಿತನಾರದಾದಿಮುನೀಂದ್ರವಾರಸನ್ನುತಪಾದನೀರರುಹದ್ವಂದ್ವನೆವಾರಿಜಾಸನಮುಖ್ಯಸುರರುತಿಳಿಯರು ನಿನ್ನಭೂರಿಮಹಿಮೆಗಳ ಸಾಕಾರವನು ಬಣ್ಣಿಸುವಧೀರನಾವನು ಮಹಾ ವೀರ ವಿಶ್ವಾಧಾರನಾರಾಯಣಾಯ ನಮೋ 2ವೇದವೇದ್ಯನೆ ದುರಿತಶೋಧನೆ ದೈತ್ಯಗಣ-ಛೇದಕನೆ ಸುರಸುಪ್ರಸಾದಕನೆ ಭಕ್ತಜನ-ಮೋದದಾಯಕ ಸ್ವಗತ ಭೇದವರ್ಜಿತಸಮಾನಾಧಿಕ್ಯರಹಿತ ಸತತಆದಿತ್ಯ ಶತಕೋಟಿತೇಜೋವಿರಾಜ ಮಹ-ದಾದಿಕಾರಣ ಮಧುವಿರೋಧಿ ಮಂಗಲಸುಖಾಂ-ಬೋಧಿ ಪದ್ಮಾಲಯವಿನೋದಿ ರಾಧಾರಮಣಮಾಧವಾಯ ನಮೋನಮಃ 3ಇಂದಿರಾಹೃದಯಾಬ್ಧಿ ಚಂದ್ರ ಚಾರ್ವಂಗ ಮುಚು-ಕುಂದಾಪ್ತ ಸರ್ವಶ್ರುತಿವೃಂದಪ್ರತಿಪಾದ್ಯ ಸಾ-ನಂದ ಭರಿತ ಕಾಳಿಂದೀರಮಣ ರಾಮಚಂದ್ರಸನ್ನುತಮಹೇಂದ್ರವಂದಾರುಜನತ್ರಿದಶಮಂದಾರ ಕೋಮಲಿತವೃಂದಾವನವಿಹಾರ ಕಂದರ್ಪಜನಕ ಬಾ-ಳೇಂದುಶೇಖರಸಖ ಸನಂದನಾರ್ಚಿತ ಶ್ರೀಗೋವಿಂದಾಯತುಭ್ಯಂ ನಮಃ 4ಜಿಷ್ಣುರಥಸಾರಥಿ ತ್ರಿವಿಷ್ಟಪಸಭಾಧ್ಯಕ್ಷಮುಷ್ಟಿಕಾಸುರವೈರಿ ಮುನಿಜನಮನೋಹಾರಿಮುಟ್ಟಿ ಭಜಿಪರ ಮನೋಭೀಷ್ಟವ ಸಲ್ಲಿಸುವ ಶ್ರೇಷ್ಠ ಪೂರ್ಣಬ್ರಹ್ಮನೇಭ್ರಷ್ಟಸಂಸಾರದೊಳು ನಷ್ಟ ಬುದ್ಧಿಗಳಿಂಗೆತುಷ್ಟಿಯನು ನೀನಿತ್ತು ಸಲಹೊ ಸಾಮಜವರದಬೆಟ್ಟದೊಡೆಯನೆ ಕೃಪಾದೃಷ್ಟಿಯಿಂದಲಿನೋಡುವಿಷ್ಣವೇತುಭ್ಯಂ ನಮೋ 5ವಿಧಿಭವಾದಿ ಸಮಸ್ತ ತ್ರಿದಶಜನಸುಖದಾತಬುಧಜನಪ್ರಿಯ ಭೂತಭಾವನ ಜಗನ್ನಾಥಪದುಮಾಕ್ಷ ಪಾಂಡವಪ್ರತಿಷ್ಠಾಪನಾಚಾರ್ಯಮದನಕೋಟಿಸ್ವರೂಪವಿದುರನಾಲಯದಲ್ಲಿ ಪಾಲುಂಡ ಬ್ರಹ್ಮಾಂಡ-ಕಧಿಪತಿ ಕಲಿಮಲನಾಶ ಕವಿಜನಮನೋಲ್ಲಾಸವಿಧುಮಂಡಲಸ್ಥ ಸದ್‍ಹೃದಯಪಂಕಜವಾಸಮಧುಸೂದನಾಯ ನಮೋ 6ಅಕ್ರೂರವರದ ಸದತಿಕ್ರಮರ ಗೆಲಿದ ಹಯ-ವಕ್ತ್ರವೈಕುಂಠಾಖ್ಯ ಪುರವಾಸ ಜಗದೀಶಶುಕ್ರ ಶಿಷ್ಯರನೆಲ್ಲ ಪರಿಹರಿಸಿ ಪಾಲಿಸಿದೆ ಶಕ್ರಾದಿಸುರಗಣವನುಚಕ್ರ ಶಂಖ ಗದಾಬ್ಜಧರ ಚತುರ್ಭುಜ ದೇವ-ಚಕ್ರವರ್ತಿಯನಂತಕೀರ್ತಿ ಪಾವನಮೂರ್ತಿನಕ್ರಮದಹರನಾದ ಬ್ರಹ್ಮ ಗಂಗಾಪಿತತ್ರಿವಿಕ್ರಮಾಯ ನಮೋನಮಃ 7ರಾಮಣೀಯಕ ವಪು ನಿರಾಮಯ ನಿರಾಶ್ರಯ ಸು-ದಾಮಸಖ ಪರಿಪೂರ್ಣಕಾಮ ಕೈರವದಳ-ಶ್ಯಾಮ ಕಲ್ಯಾಣ ನಿಸ್ಸೀಮ ಮಹಿಮನೆಸುಜನಸ್ತೋಮಸುರಕಾಮಧೇನುಗೋಮಿನೀಪತಿ ಗೋಗಣಾನ್ವಿತನೆ ಗೋಪೀಲ-ಲಾಮ ಗೋವರ್ಧನೋದ್ಧಾರ ಗೋವಿದಾಂಪತಿ ವಿ-ರಾಮ ವಿಷ್ವಕ್ಸೇನ ವಿಶ್ವತೈಜಸಪ್ರಾಜÕವಾಮನಾಯ ನಮೋನಮಃ8ಆದಿಮಧ್ಯಾಂತವಿರಹಿತ ನಿಖಿಲಸಾರ್ಚಿತ ವಿ-ರಾಧಭಂಜನ ಭವಾಂಬೋಧಿಕುಂಭಜ ಭಜಕ-ರಾದವರನುದ್ಧರಿಪ ಬೋಧರೂಪನೆಚತುಷ್ಟಾದ ಪಾವನಚರಿತನೆಗಾಧಿಜಾಧ್ವರಪಾಲ ಗರುಡಧ್ವಜ ದಯಾಳುನಾದಬಿಂದು ಕಲಾತೀತ ರುಕ್ಮಿಣಿನಾಥಬಾದರಾಯಣನೆ ನಿರುಪಾಧಿ ಮಾಯಾತೀತಶ್ರೀಧರಾಯ ನಮೋನಮಃ 9ಪಾಶಧರನುತ ವೆಂಕಟೇಶ ಸರ್ವೇಂದ್ರಿಯಪ್ರ-ಕಾಶ ಪಾಲಿತನಿಖಿಳಭೂಸುರವ್ರಜ ಮಂದ-ಹಾಸಮುಖ ನವಕುಂದಭಾಸರದನವಿರಾಜದೂಷಣಾದ್ಯ ಸುರಹರನೆಈಶಪತಿಸೇವ್ಯಾಂಬರೀಶನೃಪವರದ ಪರ-ಮೇಶ ಕೋವಳಪೀತವಾಸ ಕರ್ದಮಶುಕಪ-ರಾಶರಾದ್ಯಮಿತಯೋಗೀಶರಕ್ಷಕಹೃಷೀಕೇಶಾಯ ತುಭ್ಯಂ ನಮೋ 10ಶುದ್ಧ ತ್ರಿಗುಣಾತೀತ ತ್ರಿವ್ರತ ತ್ರಿಜಗತ್ಪಾಲಪ್ರದ್ಯುಮ್ನ ಪ್ರಥಮಾಂಗದೊಡೆಯ ಪರಮಾತ್ಮ ಸುರ-ಸಿದ್ಧ ಪೂಜ್ಯ ಪುಂಡರೀಕದಳಾಕ್ಷಬುದ್ಧಬುಧಜನಸುಲಭಮಧ್ವವಲ್ಲಭ ಮಂತ್ರಮೂರ್ತಿ ಕ್ಷೀರಾಬ್ಧಿ ಶ್ವೇತದ್ವೀಪವೈಕುಂಠಮಂದಿರತ್ರಯ ಸಾಧು-ಹೃದ್ಯ ಭಕ್ತದ್ವೇಷಭಿದ್ಯ ನಿತ್ಯಾತ್ಮ ಶ್ರೀಪದ್ಮನಾಭಾಯ ನಮಃ11ಸಾಮಗಾನವಿನೋದ ಸಾಧುಜನಸುಖಬೋಧಕಾಮಿತಾರ್ಥಪ್ರದಾತ ಕಪಿಲಋಷಿ ಪ್ರಖ್ಯಾತವ್ಯೋಮಯಾನವರೂಥ ಓಂಕಾರಭರಿತ ರಘುರಾಮಸಮರಂಗ ಭೀಮನಾಮಧಾರಕರ ಪರಿಣಾಮರೂಪಕ ಸುಜನ-ಕ್ಷೇಮಪ್ರಾಪಕ ನೀಲಜೀಮೂತನಿಭವರ್ಣಭೌಮಪುರುಷೋತ್ತಮ ನಿಯಾಮಕನೆ ರಕ್ಷಿಸೈದಾಮೋದರಾಯ ನಮೋ 12ಶಂಕರಾಂತರ್ಯಾಮಿ ಶಾಙ್ರ್ಗಪಾಣಿ ಶರಣ್ಯವೆಂಕಟಾಚಲಸದಾಲಂಕಾರ ಶೇಷಪರಿ-ಯಂಕ ಪ್ರವಿತತನಿಷ್ಕಳಂಕಚಾರಿತ್ರ ಸುಸಂಕುಲಾರ್ಚಿತ ಪದಯುಗಲಂಕಾಧಿಪತ್ಯವ ವಿಭೀಷಣನಿಗೊಲಿದಿತ್ತಓಂಕಾರನಿಧನ ಸಾಮಕಭಕ್ತರಾನೇಕಸಂಕಟವ ಪರಿಹರಿಪ ಸತ್ಯ ಸಂಕಲ್ಪ ಶ್ರೀಸಂಕರ್ಷಣಾಯ ನಮೋ13ಈ ಸಮಸ್ತ ಜಗತ್ತು ನಿನ್ನುದರದೊಳಗಿಹುದುಈ ಸಕಲಜೀವರೊಳಗಿಹ ನಿತ್ಯನಿರ್ಮುಖ್ಯಸೂಸಿಬಹ ಸಂಸಾರಸಾಗರದಿ ಮುಳುಗಿದೆನುನೀ ಸಲಹೊ ದೇವದೇವಭೂಸಲಿಲಪಾವಕಾಕಾಶಾದಿ ಭೂತಾಧಿ-ವಾಸ ರಾಕ್ಷಸವನಹುತಾಶ ನಾನಾ ರೂಪ-ವೇಷಧಾರಕ ನರಾವೇಶ ಪಾಲಿಸು ಎನ್ನವಾಸುದೇವಾಯ ನಮೋ 14ಅದ್ವಿತೀಯನೆಯಮಿತವಿಕ್ರಮನೆ ಗುಣಕಾಲವಿದ್ಯಾಪ್ರವರ್ತಕನೆ ವಿಶ್ವಾದಿ ಸಾಹಸ್ರಸಿದ್ಧನಾಮ ನರನಾರಾಯಣಪರಾಯಣನೆ ಬುದ್ಧಿಪ್ರೇರಕಪ್ರೇರ್ಯನರುದ್ರರೂಪಪ್ರತಾಪ ಋಗ್ಯಜುಸ್ಸಾಮಶ್ರುತಿ-ವೇದ್ಯ ಬ್ರಹ್ಮಾಂಡಕೋಟಿಗಳ ಸಲೆ-ಬದ್ಧಕಮನೀಯರೂಪಸುತಪದುರಾಪಪ್ರದ್ಯುಮ್ನಾಯ ತುಭ್ಯಂ ನಮಃ 15ಉದ್ಧವಾದಿ ಸಮಸ್ತ ಭಾಗವತಜನಕಮಲ-ಮಧ್ಯಚರರಾಜಹಂಸಾಯ ಮಾನಸದಶ್ರದ್ಧೆಯಂ ಕೊಟ್ಟು ರಕ್ಷಿಸು ಧೊರೆಯೆಶ್ರೀಹರಿಯೆ ವೈದ್ಯನಾಥವಿಧಾತನೆಬದ್ಧನಾದೆನು ಕರ್ಮಪಾಶದಿಂದ ದೊರೆ ಸಿಕ್ಕಿ-ಬಿದ್ದೆ ಕೈಪಿಡಿದೆಬ್ಬಿಸೆನ್ನನೆಲೆದೇವ ಮರೆಹೊದ್ದಿದೆನು ಮೈದೋರು ಚಿನುಮಯಾತ್ಮಕನೆಅನಿರುದ್ಧಾಯ ತುಭ್ಯಂ ನಮಃ 16ಕ್ಷರ ಪುರುಷರೆಲ್ಲ ಬ್ರಹ್ಮಾದಿ ಜೀವರು ರಮಾಕ್ಷರಪುರುಷಳೆನಿಸುವಳು ನೀನೆ ಉತ್ತಮ ಪರುಷಪರತರಾವ್ಯಯಲೋಕಭರಿತಮಂಗಲರಿತ ಗುರುತಮ ಗುಣಧ್ಯಕ್ಷನೆಶರಧಿಸೇತುನಿಬದ್ಧ ಶಬರಿ ಹಣ್ಣನು ಮೆದ್ದಶರಭಂಗಮುನಿಪಾಲ ಶಮಿತದಾನವಜಾಲಧುರವಿಜಯ ವಿಜಯಮೈದುನ ಕೃಷ್ಣ ರಕ್ಷಿಸೈಪುರುಷೋತ್ತಮಾಯನ್ನಮೋ 17ಅಕ್ಷಯಾತ್ಮನೆ ವಿಶ್ವರಕ್ಷಕನೆ ವಿಶ್ವಭುಗ್-ವಿಶ್ವತೋಮುಖ ವಿಶ್ವತೋಬಾಹು ಕರುಣಾಕ-ಟಾಕ್ಷದಿಂ ನೋಡೆನ್ನಮ್ಯಾಲೆದಯಮಾಡು ಶ್ರೀವಕ್ಷಸ್ಥಲನಿವಾಸನೆಲಕ್ಷ್ಮಣಾಗ್ರಜನೆ ಸುವಿಲಕ್ಷಣನೆ ಸುಜ್ಞಾನ-ಮೋಕ್ಷದಾಯಕ ಯಜÕಮೂರ್ತಿ ರೂಪತ್ರಯ ಮ-ಹೋಕ್ಷಧ್ವಜನಂ ಮೋಹಿಸಿದ ಮೋಹಕಲ್ಪಅಧೋಕ್ಷಜಾಯ ನಮೋನಮಃ 18ಕ್ರೂರಕರ್ಮಿ ಹಿರಣ್ಯಕಶಿಪುವಂ ಕೊಂದ ದು-ರ್ವಾರದುರಿತಾಬ್ಧಿಬಾಡಬ ಭಕ್ತವತ್ಸಲ ಮ-ಹಾರವಕುಲಿಶ ಶತಕೋಟಿಸದೃಶನಶಿರಪ್ರಕರಧೀರ ಪ್ರಹ್ಲಾದಾಭಿವರದಭೂರೀಕರರೂಪ ಭೂಮಕೀರ್ತಿಕಲಾಪಸಾರವಜ್ರಸ್ತಂಭದಿಂ ಬಂದ ನಂದ ಸುಕು-ಮಾರಮಾರ್ಕಾಂಡೇಯವರದ ಲೋಕಶರಣ್ಯನಾರಸಿಂಹಾಯ ನಮೋ 19ನಿಶ್ಚಲಾತ್ಮ ನಿರೀಹ ನಿರ್ವಿಕಾರಾನಂತಪ್ರೋಚ್ಛ ಸರ್ವಗ ಸದಾನಂದ ಪರಿಪೂರ್ಣ ತ-ನ್ನಿಚ್ಛೆಯಿಂದಲಿ ಜಗವ ಪಾಲಿಸುವನಿರ್ಮಿಸುವ ಆಶ್ಚರ್ಯಕೃತಸಲೀಲಮುಚ್ಚುಮರೆ ಯಾಕಿನ್ನು ಮುಗಿದು ಬೇಡುವೆ ಕೈಯಸ್ವಚ್ಛತರ ಭಕ್ತಿಭಾಗ್ಯವನಿತ್ತು ಸಲಹೊ ಮಹ-ಕಚ್ಛಪನೆ ಕಾಳೀಯಮರ್ದನಮಹಿತಶ್ರೀಮದಚ್ಯುತಾಯ ನಮೋನಮಃ 20ಚೈದ್ಯಮಥನ ಮನೋಜÕಶುದ್ಧಾತ್ಮ ಸರ್ವಜÕಯುದ್ಧದಲಿ ಸೈಂಧವನ ಶಿರವ ಕೆಡಹಿಸಿ ಜಯವಹೊದ್ದಿಸಿದ ಪಾರ್ಥನಿಂಗೆಇದ್ದು ನೀ ಹೃದಯದೊಳು ತಿದ್ದೆನ್ನ ಮತಿಯ ಸ್ಮರ-ವಿದ್ದ ಮಾನಸವ ಪಾದದ್ವಯದೊಳಿರಿಸೈ ದ-ಯಾದ್ರ್ರಚಿತ್ತ ಸ್ವಭಕ್ತಸಂಸಾರಿ ಕಾಯೆಜನಾರ್ದನಾಯ ನಮೋನಮಃ 21ಮಂದಾಕಿನಿಯ ಪಡೆದ ಮಾತೆಯ ಶಿರವ ಕಡಿದನಂದಗೋಪನ ಕಂದನೆನಿಸಿ ಬಾಲಕತನದಚಂದಮಂ ತೋರಿಸಿದ ಕುಬುಜೆಗಂಧಕೆ ಒಲಿದಸುಂದರೀರಮಣ ಜಯತುತಂದೆತಾಯಿಯು ಸರ್ವ ಜೀವರ್ಗೆ ನೀನೆ ನಿಜ-ವೆಂದು ತಿಳಿಯದೆ ಮಾಯೆಯಿಂದ ಮಮಕರಿಸಿ ಪರ-ನಿಂದಾದಿ ದೋಷಗಳ ಮಾಡಿ ಬಳಲುತ್ತಿಹರ್ಉಪೇಂದ್ರಾಯ ತುಭ್ಯಂ ನಮಃ 22ಸ್ಥಿರಚರಾತ್ಮಕ ಧೇನುಚರ ದೇವಕೀಜಠರ-ಶರಧಿಗುರುರಾಜ ಭಾಸ್ಕರಮಂಡಲಾಂತಸ್ಥಪರಮತೇಜೋಮಯ ಪುರಾಣಪುರುಷೇಶ್ವರನೆದುರಿತದೂರ ಗಭೀರನೆನಿರತಿಶಯನಿಜನಿರ್ವಿಕಲ್ಪ ಕಲ್ಪಾಂತಸಾ-ಗರದಿ ವಟಪತ್ರಪುಟಶಯನ ಪುಣ್ಯಶ್ರವಣಪುರುಷನಾಮಕ ಪುಷ್ಕರಾಕ್ಷ ಶ್ರೀಕರನೆ ಜಯಹರಯೇ ನಮೋನಮಸ್ತೇ 23ವೃಷ್ಟಿಕುಲತಿಲಕ ಸರ್ವೇಷ್ಟದಾಯಕ ನಿಮಿತ-ಶಿಷ್ಟಜನಪರಿಪಾಲ ಶಿವಗೌರೀ ಗಣಪಗುಹ-ಸೃಷ್ಟಿಶಕ್ತಿಯನೀವ ಗೋವರ್ಧನಾಚಲವ ಬೆಟ್ಟಿನಿಂದೆತ್ತಿದ ಮಹಾದುಷ್ಟ ನರಕಾದಿದಾನವರ ಮರ್ದಿಸಿದ ಜಗ-ಜಟ್ಟಿ ಜನಿಮೃತಿಭಯವಿದೂರ ವಿಷಮಯಸರ್ಪ-ಶ್ರೇಷ್ಠನಂ ಘಾತಿಸಿದ ರಾಮಾನುಜನೆಹರೇ ಕೃಷ್ಣಾಯ ತುಭ್ಯಂ ನಮಃ 24ಅಕ್ಷೀಣ ಬಲಶಾಲಿಯಾಂಜನೇಯನಿಗಿತ್ತೆಅಕ್ಷಯದ ಬ್ರಹ್ಮಪದವಿಯ ಲೋಕದೊಳಗ್ಯಾವ-ದಕ್ಷಮರ್ದನ ನಿನಗೆ ಸರ್ವತಂತ್ರಸ್ವತಂತ್ರ ಪಕ್ಷೀಂದ್ರಭುಜವಿರಾಜಸಾಕ್ಷಿಚೈತನ್ಯರೂಪನೆ ಕಮಲನಾಭನೆ ಮು-ಮುಕ್ಷುಜನಧ್ಯಾನಗಮ್ಯನೆ ಗದಾಧರ ದನುಜ-ಶಿಕ್ಷಕ ಪರೀಕ್ಷಕನೆ ಪವನವಾಹನಲಕ್ಷ್ಮೀನಾರಾಯಣಾಯ ನಮೋ25
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
139-1ಶ್ರೀರಮಣ ಕರಕಮಲ ಪೂಜಿತ ಪದಾಂಬೋಜಸರಸಿಜಾಸನ ಶಿವಾದ್ಯಮರ ಜನವಿನುತಉರುಗುಣಾರ್ಣವ ಜಗಜ್ಜನ್ಮಾದಿಕರ್ತನರ-ಹರಿಗೆ ಪ್ರಿಯ ಜಗನ್ನಾಥದಾಸಾರ್ಯ ಶರಣು ಪ.ಶ್ರೀನಿವಾಸಾಚಾರ್ಯ ಪಂಡಿತೋತ್ತಮರುಅನಿಮಿಶಾಂಶರು ಹೌದು ಭುವಿಯಲ್ಲಿ ಹುಟ್ಟಿಮಾನುಷಾನ್ನವನುಂಡು ಕರ್ಮವಾತಾವರಣಸನ್ನಿವೇಶದ ಬಲದಿ ಗರ್ವಕೊಳಗಾದರು 1ಆದಿತೇಯರು ಭೂಮಿಯಲ್ಲಿ ಜನ್ಮವ ತಾಳೆಜಾತಾಪರೋಕ್ಷಿಗಳು ಶಕ್ತ್ಯಾತ್ಮನಾವ್ಯಕ್ತ್ಯಾತ್ಮನಾಅಪರೋಕ್ಷಪ್ರಕಾಶವುಒದಗಿ ಗುರುಗಳು ಅನುಗ್ರಹವು ಮಾಡಿದರೆ 2ದೇವತಾ ಕಕ್ಷದಲಿ ದೊಡ್ಡ ಮಟ್ಟದವರುವಿಶ್ವಾಮಿತ್ರರಿಗೆ ಉತ್ತಮರು ನಾರದಗೆಆವರರೆನಿಸುವ ಭೃಗುಋಷಿಯೇ ವಿಜಯಾರ್ಯರುತಾವೆ ಬಂದರು ಶ್ರೀನಿವಾಸರ ಬಳಿಗೆ 3ಪೂರ್ವದಲೆ ಕೇಳಿಹರು ಈ ವಿಜಯದಾಸರುದೇವಾಂಶಅಪರೋಕ್ಷಜ್ಞಾನಿಗಳು ಎಂದುಈ ವಿಧದಿಪೇಳುವುದುಪುಸಿಎಂದು ನೆನೆದರುಗರ್ವಮೌಢ್ಯದಿ ಶ್ರೀನಿವಾಸ ಆಚಾರ್ಯ 4ಕನ್ನಡ ನುಡಿ ಹಾಡಿ ಕುಣಿಕುಣಿವ ಈ ದಾಸಜ್ಞಾನಿಯೆ ? ಅರಿತವನೇ ಬ್ರಹ್ಮವಿದ್ಯೆ ಎಂದುಹೀನಮಾತ್ಸರ್ಯದಿ ಮನಸೋತು ಅವಹೇ -ಳನ ಮಾಡಿದರು ವಿಜಯಾರ್ಯರಲ್ಲಿ 5ತಾಳುವ ತನ್ನಲ್ಲಿ ಮಾಡುವ ಅಪರಾಧತಾಳಹರಿ ತನ್ನ ಭಕ್ತರಲಿ ಮಾಡುವುದುಮಾಲೋಲ ನಿಯಮನದಿ ಸ್ವೋತ್ತಮಾಪರಾಧಫಲವು ಕಂಡಿತು ಶ್ರೀನಿವಾಸರಲಿ ಬೇಗ 6ರಾಜಯಕ್ಷ್ಮವೋಗುಲ್ಮಮತ್ತೇನು ರೋಗವೋರಾಜವೈದ್ಯರು ಸಹ ನಿರ್ಣಯಿಸಲಶಕ್ಯಭೋಜನ ಅರುಚಿ ಉದರಶೂಲಿತನು ಕುಗ್ಗಿಲಾಜವೂ ಸಹ ಜೀರ್ಣ ಆಗದ ಮಾಂದ್ಯ 7ಇಂದಿರೇಶಗೆ ಪ್ರಿಯ ಮಹಾತ್ಮ ಸ್ವೋತ್ತಮರಲ್ಲಿಗೈದ ಅಪರಾಧ ಫಲವೆಂದರಿಯದೆವೈದ್ಯಕ್ಕೆ ಹಣ ವೆಚ್ಚ ಮಾಡಿ ಕ್ಷೇತ್ರಗಳಿಗೆಪೋದರು ದೈವಾನುಗ್ರಹ ಪಡೆಯಲಿಕ್ಕೆ 8ವಾದೀಂದ್ರಸನ್ನುತರಾಘವೇಂದ್ರಾರ್ಯರವೃಂದಾವನದಲ್ಲಿ ಸೇವೆ ಮಾಡಿದರುಮುಂದು ಯಾತ್ರೆ ಗೈದು ಘಟಿಕಾದ್ರಿ ಹನುಮಗೆದುಗ್ಧಾಭಿಷೇಕ ಹರಿವಾಯುಸ್ತುತಿಯಿಂದ 9ಮಂತ್ರಾಲಯ ವೆಂಕಟಗಿರಿ ಘಟಿಕಾದ್ರಿಇಂಥಾ ಸುಪುಣ್ಯ ಕ್ಷೇತ್ರಗಳಿಗೆ ಪೋಗಿಮಂತ್ರಾಲಯ ಮತ್ತೂ ಬಂದು ಶ್ರೀ ರಾಘ-ವೇಂದ್ರ ತೀರ್ಥರಪಾದಭಜಿಸಿ ನಮಿಸಿದರು10ಹರಿವಾಯುಸ್ತುತಿ ಪುರಶ್ಚರಣ ಆದರದಿಚರಿಸೆ ಭಾರತೀಶನು ಮತ್ತುಗುರುರಾಘವೇಂದ್ರರುಅರುಪಿದರು ಸ್ವಪ್ನದಿ ವಿಜಯವಿಠಲ ದಾÀಸಆರ್ಯರಲಿ ಶರಣಾಗುಕ್ಷಮೆಬೇಡು ಎಂದು11ಶ್ರೀನಿವಾಸ ಆಚಾರ್ಯರು ಎಚ್ಚರಿತುತಾನು ವಿಜಯಾರ್ಯರಲಿ ಗೈದ ಅಪರಾಧನೆನೆದು ಬಹುವ್ಯಾಕುಲಪಶ್ಚಾತ್ತಪ್ತರು ಆಗಿಕ್ಷಣದಿ ಹೊರಟರು ವಿಜಯದಾಸರ ಬಳಿಗೆ 12ದೀನ ಕರುಣಾಕರರುವಿಜಯದಾಸಾರ್ಯರುಘನದಯದಿ ಶ್ರೀನಿವಾಸಾಚಾರ್ಯರ ಕ್ಷಮಿಸಿತನ್ನ ಶಿಷ್ಯ ಗೋಪಾಲದಾಸಾರ್ಯರುಅನುಗ್ರಹ ಮಾಡುವ ಗುರುಗಳು ಎಂದರು 13ಪರಮಗುರುವರ್ಯ ಶ್ರೀ ವಿಜಯದಾಸಾರ್ಯರನಿವ್ರ್ಯಾಜ ಪ್ರೀತಿ ಅಪ್ಪಣೆಯ ತಾ ಕೊಂಡುಗುರುಗಳು ಗೋಪಾಲದಾಸಾರ್ಯರಲಿ ಪೋಗಿಶರಣಾಗಿ ಶ್ರೀನಿವಾಸರು ನಮಿಸಿದರು 14ತನ್ನಲ್ಲಿ ಗುರುಗಳು ಕಳುಹಿಸಿದವರೆಂದುದೀನ ಆಚಾರ್ಯರು ನಿಜ ಶರಣರೆಂದುಚೆನ್ನಾಗಿ ಆತನ ಪರಿಸ್ಥಿತಿ ಅರಿತುಅನುಗ್ರಹಿಸಿದರು ಗೋಪಾಲವಿಠಲರು 15ಅನ್ನ ಫಲಹಾರಗಳ ಕೊಳ್ಳದ ವ್ಯಾಧಿಯಲಿಸಣ್ಣ ಬಡವಾದಂಥ ಗಾತ್ರದಿಂದಸನ್ನಮಿಸಿದ ಶ್ರೀನಿವಾಸಾಚಾರ್ಯನ್ನಮನೆಯಲ್ಲಿ ಉಪಚರಿಸಿ ಆದರಿಸಿದರು 16ಗುರುಗ ಶಿರಿವಿಜಯವಿಠಲ ತನ್ನೊಳಿಪ್ಪಶಿರಿ ಗೋಪಾಲ ವಿಠsÀಲ ಶ್ರೀನಿವಾಸಸರಸಿಜಭವಾಂಡ ದೊರೆ ಶ್ರೀ ಜನಗ್ನಾಥನ್ನಸ್ಮರಿಸಿ ಅರ್ಚಿಸಿ ನೈವೇದ್ಯ ಮಾಡಿದರು 17ನಿವೇದಿತಾನ್ನ ಜೋಳದ ರೊಟ್ಟಿ ಕೊಟ್ಟುದ್ರವ ಮಾತ್ರ ಕೊಳ್ಳುವ ರೋಗಿ ಆಚಾರ್ಯಗೆದೇವರ ಅನಿಲನಪರಮಗುರುಗಳ ನೆನೆದುಸವಿದು ಉಣ್ಣುವುದೆಂದು ಹಿತದಿ ಪೇಳಿದರು 18ಶ್ರೀನಿವಾಸಾಚಾರ್ಯ ಉಣ್ಣಲು ರೋಗವುದಿನದಿನದಿ ಕ್ರಮದಿಂದ ನಿವಾರಣ ಆಯ್ತೂಧ್ಯಾನ ಪೂಜಾಅನುಸಂಧಾನಕ್ರಮಗಳುಚೆನ್ನಾಗಿ ಆಚಾಯರಾಕರ್ಷಿಸಿದವು 19ಶ್ರೀನಿವಾಸಾಚಾರ್ಯರ ರೋಗಮೋಚನಕೆಧ್ಯಾನಿಸಿ ಜಪಿಸಿ ಶ್ರೀ ಧನ್ವಂತರಿ ಮಂತ್ರಬಿನ್ನಪವ ಮಾಡಿದರು ಕೀರ್ತನಾ ರೂಪದಿದೀನದಯಾಳು ಗೋಪಾಲದಾಸಾರ್ಯ 20ಆಹ್ನಿಕ ಜಪಗುರುಪರಮಗುರು ನಮನವಿಘ್ನವಿಲ್ಲದೆ ಆಚಾರ್ಯರು ಚರಿಸಿದರುಘನರೋಗ ಹೋಯಿತು ತ್ರಾನ ಇನ್ನೂ ಬೇಕುಶ್ರೀನಿಧಿ ನೋಡಿದನು ಕೃಪಾದೃಷ್ಟಿಯಿಂದ 21ಶ್ರೀ ನಿಧಿಃ ಸರ್ವಭೂತಾನಾಂ ಭಯಕೃದ್ಭಯನಾ -ಶನನು ವಿಜಯದಾಸಾರ್ಯ ರೂಪದಲಿತಾನೆ ಸ್ವಪ್ನದಿ ಪೇಳ್ದ ಗೋಪಾಲದಾಸರಿಗೆದಾನ ಕೊಡು ಆಯುಷ್ಯ ಚತ್ವಾರಿವರ್ಷ 22ಶಿರಿವಿಜಯವಿಠ್ಠಲ ವಾಯುಗುರುಇಚ್ಛಾನು -ಸಾರದಿ ಶ್ರೀನಿವಾಸಾಚಾರ್ಯನಲಿ ವಾತ್ಸಲ್ಯಕಾರುಣ್ಯ ತೋರಿಸಿ ತಮಗಿದ್ದ ಆಯುಸ್ಸಲಿಎರೆದರು ಧಾರೆಯ ನಲವತ್ತು ವರ್ಷ 23ಏನೆಂಬೆ ಈ ನಮ್ಮ ಗುರುಗಳ ಔದಾರ್ಯದೀನಕರುಣಾಂಬುಧಿ ಗೋಪಾಲದಾಸರದಾನಕ್ಕೆ ಎಣೆಯುಂಟೆ ಎಲ್ಲಾದರೂ ಯಾರೂತನ್ ಆಯುಷ್ಯವ ಕೊಡುವರೆ ಅನ್ಯರಿಗೆ 24ರೋಗಕಳೆದು ಆಯುರ್ದಾನವಕೊಂಡಈಬ್ಯಾಗವಟ್ಟ ಶ್ರೀನಿವಾಸಾಚಾರ್ಯಜಗನ್ನಾಥವಿಠ್ಠಲ ದಾಸರಾಯರು ಎಂದುಜಗತ್ತಲ್ಲಿ ಖ್ಯಾತರಾಗುವ ಬಗೆ ಮಾಡಿದರು 25ಗುರುಹಿರಿಯರಲಿ ಮಾಳ್ಪ ಉದಾಸೀನ ಎಷ್ಟುಭಾರಿತರ ಆಪತ್ತು ಕೊಡುವುದು ಎಂದುಗುರುಅನುಗ್ರಹದಿಂದ ಸೌಭಾಗ್ಯಲಾಭವುಅಪಮೃತ್ಯು ಪರಿಹಾರ ಎಂದು ತಿಳಿಯುತ್ತೆ 26ವಾರಿಜಾಸನ ಪಿತನು ಪೂರ್ಣಪ್ರಜÕರ ಹೃತ್‍ಸ್ಥಶಿರಿಪ್ರಸನ್ನ ಶ್ರೀನಿವಾಸನಿಗೆ ಪ್ರಿಯತರರುಪುರಂದರವಿಜಯಗೋಪಾಲ ದಾಸಾರ್ಯರಚರಣರತ ಜಗನ್ನಾಥ ದಾಸಾರ್ಯ ಶರಣು 27-ದ್ವಿತೀಯಕೀರ್ತನೆ ಸಂಪೂರ್ಣಂ -
--------------
ಪ್ರಸನ್ನ ಶ್ರೀನಿವಾಸದಾಸರು
139-3ಶ್ರೀ ರಮಣಿ ಕರಕಮಲ ಪೂಜಿತ ಪದಾಂಬೋಜಸರಸಿಜಾಸನ ಶಿವಾದ್ಯಮರ ಜನವಿನುತಉರುಗುಣಾರ್ಣವ ಜಗಜ್ಜನ್ಮಾದಿಕರ್ತ ನರ-ಹರಿಗೆ ಪ್ರಿಯ ಜಗನ್ನಾಥದಾಸಾರ್ಯ ಶರಣು ಪ.ಹರಿದಾಸ ಶ್ರೇಷ್ಠವರ ಕರುಣಿ ಪುರಂದರಾರ್ಯಗುರುಮಹಂತರು ಕೃಪಾನಿಧಿಯು ವಿಜಯಾರ್ಯಈರ್ವರನು ಸಂಸ್ಮರಿಸಿ ಗೋಪಾಲದಾಸರುಪರಮದಯ ತೋರಿದರು ಆಚಾರ್ಯರಲ್ಲಿ1ಹರಿದಾಸ ಪಂಥದಲಿ ಆಚಾರ್ಯರು ಸೇರಿಹರಿವಾಯು ಸೇವೆಯು ಸಜ್ಜನೋದ್ಧಾರಧರೆಯಲ್ಲಿ ಮಹತ್ಕಾರ್ಯ ಆಗುವುದು ಎಂದುಅರಿವರು ಗೋಪಾಲದಾಸರು ಮೊದಲೇ 2ಹರಿದಾಸಗೋಷ್ಠಿಯು ವೆಂಕಟಾಚಲ ಯಾತ್ರೆಚರಿಸೆ ವೆಂಕಟ ರಮಣನಾಲಯದಲ್ಲಿಶ್ರೀ ಶ್ರೀನಿವಾಸನು ಈ ಆಚಾರ್ಯಗೆನೇರವಾಗಿ ತಾನೆ ಕೊಟ್ಟಿಹ ಪ್ರಸಾದ 3ನೆನೆದರು ಈಗ ಗೋಪಾಲದಾಸಾರ್ಯರುತನ್ನ ರೂಪದಿ ಅಂದುಬಂದು ವಾತ್ಸಲ್ಯದಿಅನ್ನ ನಾಮಾವೆಂಕಟಕೃಷ್ಣ ಜಗದೀಶಅನ್ನ ಕೊಟ್ಟು ಒಲಿದಿಹನು ಆಚಾರ್ಯಗೆ 4ಪುರಂದರದಾಸಾರ್ಯರು ಒಲಿದು ದಯದಿ ತಾನೆಯಾರಿಗೆ ತಿಮ್ಮಣ್ಣಾರ್ಯರದ್ವಾರ ಉಪದೇಶಅನುಗ್ರಹ ನಾಮಾಂಕಿತವ ಇತ್ತರೋ ಆನರಸಿಂಹ ದಾಸಾರ್ಯರ ಪುತ್ರರು ಇವರು 5ಹರಿದಾಸರ ಪುತ್ರರಿವರು ಯೋಗ್ಯರು ಎಂದುಹರಿದಾಸಪದ್ಧತಿ ಆರಾಧನಾಕ್ರಮಶಾಸ್ತ್ರ ಜಿಜ್ಞಾಸೆಅನುಸಂಧಾನರೀತಿಯೂಅರುಪಿದರು ಆಚಾರ್ಯರಿಗೆ ದಾಸಾರ್ಯ 6ನೆರೆದಿದ್ದರೂ ಗೋಪಾಲದಾಸಾರ್ಯರಪರಮಪ್ರೀತಿ ಪಾತ್ರ ಈಮಹಂತರುವರದ ಗೋಪಾಲರು ತಂದೆ ಗೋಪಾಲರುಗುರುಗೋಪಾಲದಾಸಾದಿಸೂರಿಗಳು7ಭಾರತೀಪತಿ ಅಂತರ್ಗತಹರಿಶ್ರೀಶಗುರುಗಳ ಒಳಗಿದ್ದು ಜ್ಞಾನೋಪದೇಶಹರಿದಾಸತ್ವದ ವರನಾಮಾಂಕಿತವಕಾರುಣ್ಯದಿಈವಅಧಿಕಾರಿಗಳಿಗೆ8ವನರುಹೇಕ್ಷಣ ಯಜÕನಧಿಷ್ಠಾನ ಯಜÕನವನಜಪಾದ ದ್ವಯವು ಮನವಾಕ್ಕಿಲಿಹುದುಅನಿಲ ಸೋಕಿದ ತೂಲರಾಶಿಯಂದದಲಿಏನು ಮೈಲಿಗೆಯಾದರು ಸುಟ್ಟು ಪೋಪುವು 9ತುಳಸಿದಳ ನಿರ್ಮಾಲ್ಯ ಹರಿಗೆ ಅರ್ಪಿತವಾದ್ದುಜಲಸ್ನಾನ ತರುವಾಯ ಧ್ಯಾನ ಸ್ನಾನಜಲಜನಾಭನ ದಿವ್ಯನಾಮ ಸಂಕೀರ್ತನೆಎಲ್ಲ ಮೈಲಿಗೆ ದೋಷ ಪರಿಹರಿಸುವುವು 10ಶೀಲ ತನುಮನದಿಂದಗುರುಪರಮಗುರುದ್ವಾರಮಾಲೋಲ ಪ್ರಿಯತಮ ಜಗದೇಕ ಗುರುವೆಂದುಗಾಳಿದೇವನು ಮಧ್ವ ಭಾವಿಬ್ರಹ್ಮನ ಸ್ಮರಿಸಿಕಾಲಿಗೆ ಎರಗಿ ಶ್ರೀಹರಿಯ ಚಿಂತಿಪುದು 11ವಾಯುದೇವನ ಒಲಸಿಕೊಳ್ಳದ ಜನರಿಗೆಭಯಬಂಧ ನಿವೃತ್ತಿಯು ಸದ್ಗತಿಯು ಇಲ್ಲಮಾಯಾಜಯೇಶನಪರಮಪ್ರಸಾದವುವಾಯು ಒಲಿದರೆ ಉಂಟು ಅನ್ಯಥಾ ಇಲ್ಲ 12ಬಲಜ್ಞಾನಾದಿಗಳಲ್ಲಿ ಹ್ರಾಸ ಇಲ್ಲವು ಇವಗೆಎಲ್ಲ ಅವತಾರಗಳು ಸಮವು ಅನ್ಯೂನಶುಕ್ಲಶೋಣಿತಸಂಬಂಧವು ಇಲ್ಲವೇ ಇಲ್ಲಇಳೆಯಲಿ ಜನಿಸಿಹ ಹನುಮ ಭೀಮ ಮಧ್ವ 13ಮಾತರಿಶ್ವಸೂತ್ರಪವಮಾನ ಮುಖ್ಯ ಪ್ರಾಣತ್ರೇತೆಯಲಿ ಹನುಮ, ದ್ವಾಪರದಲಿ ಭೀಮಈತನೇ ಕಲಿಯುಗದೆ ಮಧ್ವಾಭಿದಾನದಿಬಂದಿಹನು ಸಜ್ಜನರ ಉದ್ಧಾರಕಾಗಿ 14ರಥನಾಭಿಯಲಿ ಅರವೋಲ್ ಪ್ರಾಣನಲಿ ಸರ್ವವೂಪ್ರತಿಷ್ಠಿತವು ಜೀವರ ದೇಹಕಾಧಾರತತ್ವದೇವಾದಿಗಳ ವರಿಷ್ಟ ಚೇಷ್ಟಕನುಈ ವಾಯುವೇ ಬ್ರಹ್ಮಧಾಮನಾಗಿಹನು 15ಬ್ರಹ್ಮಧಾಮನುಜೀವೋತ್ತಮವಾಯು ಆದುದರಿಂದಬ್ರಹ್ಮ ಸುಗುಣಾರ್ಣವ ಸರ್ವೋತ್ತಮ ವಿಷ್ಣೂನಅಹರ್ನಿಶಿಸ್ಮರಿಪುದು ಈ ಬ್ರಹ್ಮಧಾಮನಲಿಬ್ರಹ್ಮಪ್ರಸಾದ ಆಕಾಂಕ್ಷಿ ಅಧಿಕಾರಿ 16ಬ್ರಹ್ಮಗುಣಪೂರ್ಣಹರಿಗೋಪಾಲ ವೆಂಕಟನೆಬ್ರಹ್ಮಾಂಡ ಸರ್ವವ ಪಾಲಿಸುವ ಪ್ರಭುವುಅಹೋರಾತ್ರಿ ಏಳುದಿನ ಗಿರಿ ಎತ್ತಿ ಮಳೆ ತಡೆದಮಹಾದ್ರಿಧೃಕ್ ಅನ್ನಾದ ಅನ್ನದ ಜಗನ್ನಾಥ 17ಗೋವರ್ಧನಗಿರಿ ಎತ್ತಿ ಜನ ಪಶು ಕಾಯ್ದಶ್ರೀವರ ಗೋಪಾಲ ವಿಠ್ಠಲ ರುಕ್ಮಿಣೀಶದಿವ್ಯ ಮಂದಿರದಲ್ಲಿ ಭೀಮರತಿಯ ತೀರದಲಿದೇವ ನಿಂತಿಹ ಶ್ರೀನಿವಾಸ ಜಗನ್ನಾಥ 18ಶ್ರೀನಿವಾಸ ವೆಂಕಟನೆ ಗೋಪಾಲ ವಿಠ್ಠಲನುತನ್ನ ಭಕ್ತನಿಗೊಲಿದು ಪಂಢರೀಪುರದಿತಾನೆ ಬಂದು ಅಲ್ಲೇ ನಿಂತು ಭಕ್ತರು ಮಾಳ್ಪಗಾನ ಸೇವಾ ಕೇಳುತ ಪಾಲಿಸುತಿಹನು 19ಸರ್ವಕ್ಷರ ಉತ್ತಮನು ಸರ್ವೇಶಸರ್ವ ಐಶ್ವಯಾದಿ ಸಚ್ಛಕ್ತಿ ಪೂರ್ಣಶಿವ ಸುರಪುರಿಗೆ ಸುಖಜ್ಞಾನಾದಿಗಳನೀವದೇವಿ ಶ್ರೀ ಲಕ್ಷ್ಮೀಶ ಠಲಕ ವಿಠ್ಠಲನು 20ಜಡಭವ ಅಂಡದ ಸೃಷ್ಟ್ಯಾದಿ ಕರ್ತನಿವತಟಿತ್ಕೋಟಿಅಮಿತ ಸ್ವಕಾಂತಿಯಲಿ ಜ್ವಲಿಪಜಡಜ ಭವಪಿತ ಡರಕ ಜಗನ್ನಾಥ ವಿಠ್ಠಲನುನೋಡಲಿಕೆ ಕಾಣುವ ಅವನಿಚ್ಛೆ ದಯದಿ 21ಜಲದಲ್ಲಿ ಜಲರೂಪ ಜಲಜೇಕ್ಷಣನಿಹನುಜಲದಲ್ಲಿ ನೀ ಮುಳುಗಿ ಮೇಲೇಳುವಾಗಜ್ವಲಿಸುವ ಶಿರೋಪರಿ ಜಗನ್ನಾಥ ವಿಠ್ಠಲನುಒಳನಿಲುವ ಹೊರಕಾಂಬ ಎಲ್ಲರ ಸ್ವಾಮಿ 22ಇಂಥಾಸುವಾಕ್ಯ ಧಾರಾನುಗ್ರಹವಹಿತದಿ ಗೋಪಾಲದಾಸಾರ್ಯರು ಎರೆಯೆಮುದಬಾಷ್ಪ ಸುರಿಸುತ್ತ ಶ್ರೀನಿವಾಸಾಚಾರ್ಯಭಕ್ತಿಯಲಿ ನಮಿಸಿದರು ಗುರುಚರಣಗಳಿಗೆ 23ವಾಸುದೇವನ ಒಲಿಸಿಕೊಂಡ ಐಜೀಯವರುಈಶಾನುಗ್ರಹ ಪಡೆದ ದಾಸಾರ್ಯರುಗಳುಆ ಸಭೆಯಲಿ ಇದ್ದ ಹರಿಭಕ್ತ ಭೂಸುರರುಆಶೀರ್ವದಿಸಿದರು ಆಚಾರ್ಯರನ್ನು 24ಉತ್ಕøಷ್ಟ ನಿಗಮಘೋಷಗಳು ಮಂಗಳಧ್ವನಿಹರಿನಾಮ ಕೀರ್ತನ ಸುಸ್ವರ ಸಂಗೀತದಾರಿಯಲಿ ಎದುರ್ಗೊಂಡ ಶುಭಕರ ಶಕುನವುಹೊರಟರಾಚಾರ್ಯ ವಿಠ್ಠಲ ದರ್ಶನಕೆ 25ವಾರಿಜಾಸನ ಪಿತನು ಪೂರ್ಣಪ್ರಜÕರ ಹೃತ್‍ಸ್ಥಶಿರಿ ಪ್ರಸನ್ನ ಶ್ರೀನಿವಾಸನಿಗೆ ಪ್ರಿಯತರುಪುರಂದರವಿಜಯಗೋಪಾಲ ದಾಸಾರ್ಯರಚರಣರತ ಜಗನ್ನಾಥ ದಾಸಾರ್ಯ ಶರಣು 26- ಚತುರ್ಥ ಕೀರ್ತನೆ ಸಂಪೂರ್ಣಂ -
--------------
ಪ್ರಸನ್ನ ಶ್ರೀನಿವಾಸದಾಸರು
139-5ಶ್ರೀ ರಮಣಿ ಕರಕಮಲ ಪೂಜಿತ ಪದಾಂಬೋಜಸರಸಿಜಾಸನ ಶಿವಾದ್ಯಮರ ಜನವಿನುತಉರುಗುಣಾರ್ಣವ ಜಗಜ್ಜನ್ಮಾದಿಕರ್ತ ನರ-ಹರಿಗೆ ಪ್ರಿಯ ಜಗನ್ನಾಥದಾಸಾರ್ಯ ಶರಣು ಪ.ವಿಠ್ಠಲನ ಮಂದಿರದಿ ತಪ್ಪದೇ ಪ್ರತಿದಿನಪಠಿಸಿ ಅರ್ಪಿಸುತ್ತಿದ್ದವಿಶ್ವವಿಷ್ಣುವಷಟ್ಕಾರ ಮೊದಲಾದ ಸಹಸ್ರನಾಮಗಳದಿಟ ಜ್ಞಾನ ಭಕ್ತಿಯಿಂ ಮಾರ್ಗದಿ ಸ್ಮರಿಸಿದರು 1ತನ್ನ ಹೊರ ಒಳಗೆ ಶ್ರೀಹರಿಯ ತಿಳಿಯುತ್ತಕಾಣುವುದು ಎಲ್ಲವೂ ಅನಘಹರಿ ಆವಾಸ್ಯತನಗೆ ಯದೃಚ್ಛದಿ ಲಭಿಸುವುವು ಹರಿಕೊಡುವುವುಎನ್ನುತ ಅನಪೇಕ್ಷಿ ನಿರ್ಭಯದಿ ನಡೆದರು 2ಮಾರ್ಗಸ್ಥ ಅಕ್ಷೋಭ್ಯ ಜಯಮುನಿಗಳಲಿಪೋಗಿ ಬಾಗಿ ಶಿರಸ್ಸಾಷ್ಠಾಂಗ ನಮಸÀ್ಕರಿಸಿ ಮುಂದುಪೋಗಿ ಕೃಷ್ಣಾ ತೀರ ಹನುಮನ್ನ ವಂದಿಸಿಚೀಕಲಪರಿವಿಗೆ ನಮಿಸಿ ಕರಮುಗಿದರು 3ಗುರುಗುಣಸ್ತವನಾದಿ ಗ್ರಂಥಗಳ ರಚಿಸಿರುವಸೂರಿವಾದೀಂದ್ರರ ನಮಿಸಿ ಅಪ್ಪಣೆಯಿಂಶ್ರೀರಾಘವೇಂದ್ರ ತೀರ್ಥರ ನಮಿಸಿ ಶರಣಾಗಿಸ್ತೋತ್ರ ಅರ್ಪಿಸಿದರು ಕವಿತಾರೂಪದಲಿ 4ಹರಿಶಿರಿ ಹನುಮ ಶಿವಗುರು ಅನುಗ್ರಹಕೊಂಡುದಾರಿಯಲ್ಲಿರುವಂಥ ಕ್ಷೇತ್ರ ಮೂರ್ತಿಗಳದರುಶನ ಮಾಡಿ ಗೋಪಾಲ ದಾಸಾರ್ಯರುಇರುವ ಸ್ಥಳ ಸೇರಿದರು ಜಗನ್ನಾಥದಾಸರು 5ಗುರುಗಳ ನೋಡಿ ಆನಂದ ಬಾಷ್ಪವ ಸುರಿಸಿಚರಣಪದ್ಮಗಳಲ್ಲಿ ನಮಿಸಿ ಶರಣಾಗಿಘೋರವ್ಯಾಧಿಹರಿಸಿ ಅಪಮೃತ್ಯು ತರಿದಂಥಕಾರುಣ್ಯ ನಿಧಿ ಉದ್ಧಾರಕರು ಎಂದರು 6ರಾಜೀವಾಲಯಪತಿವಿಜಯಗೋಪಾಲನುಭಜತರ ರಕ್ಷಿಸುವ ಕರುಣಾಸಮುದ್ರಈ ಜಗನ್ನಾಥನೇ ನಿನಗೆ ಒಲಿದಿಹನುಭುಜಗಾದ್ರಿವಾಸ ಫಂಡರಿ ವಿಠ್ಠಲ 7ನಿಜಭಕ್ತಾಗ್ರಣಿ ಗೋಪಾಲ ದಾಸಾರ್ಯರುನಿಜಭಾವದಲಿ ಈ ರೀತಿಯಲಿ ಹೇಳೆಐಜೀ ಮಹಾತ್ಮರು ಸೂಚಿಸಿದರು ಹರಿಯಭೋಜನ ಜಗನ್ನಾಥದಾಸಗೆ ಮಾಡಿಸಿದ್ದು 8ಜಗನ್ನಾಥದಾಸರು ನಡೆದ ವೃತ್ತಾಂತವಮುಗಿದು ಕರಗದ್ಗದ ಕಂಠದಲಿ ಪೇಳೆಚಕಿತರಾದರು ಅಲ್ಲಿ ನೆರೆದಿದ್ದ ಸಜ್ಜನರುಉದ್ಘೊಷ ಜಯ ಜಯ ಶಬ್ದ ಮಾಡಿದರು 9ಉತ್ತನೂರಿಗೆವೇಣಿಸೋಮಪುರದಿಂ ಪೋಗಿಮತ್ತೂವೇಣಿಸೋಮಪುರವನ್ನು ಯೈದಿಸತ್ತತ್ವ ಬ್ರಹ್ಮ ಜಿಜ್ಞಾಸವೂ ಭಾಗ -ವತ ಧರ್ಮ ಆಚರಿಸಿದರು ಮುದದಿಂದ 10ಗೋಪಾಲಕೃಷ್ಣ ಪ್ರಿಯ ಐಜೀಮಹಂತರುಗೋಪಾಲದಾಸಾರ್ಯ ªರದ ಗುರುತಂಗೋಪಾಲ ದಾಸಾರ್ಯರುಗಳ ಸಮೇತದಿಭೂಪಾಲ ಪ್ರಮುಖರು ಸಾಧುಜನಗುಂಪು 11ಶಿರಿವಾಸುದೇವಪ್ರಿಯವಾಸತತ್ವಜÕರಗುರುಗಳು ಗೋಪಾಲದಾಸರ ಅನುಗ್ರಹದಿವರದ ಗುರುತಂದೆ ಗೋಪಾಲರು ಮತ್ತೆಲ್ಲರಿಗೂಕರಮುಗಿದು ಹೊರಟರು ಅಪ್ಪಣೆಕೊಂಡು 12ಗದ್ವಾಲ ಮಾರ್ಗದಿ ಮಂತ್ರಾಲಯ ಪೋಗಿಮಧ್ವಮತ ದುಗ್ಧಾಬ್ಧಿ ಚಂದ್ರ ಶ್ರೀ ರಾಘವೇಂದ್ರ ವಾದೀಂದ್ರರ ನಮಿಸಿ ಅಲ್ಲಿಂದಯೈದಿಹರು ಪರಮಗುರುಗಳು ಇದ್ದ ಸ್ಥಳವ 13ಪರಮಗುರುಗಳು ವಿಜಯವಿಠ್ಠಲ ದಾಸಾರ್ಯರಚರಣಾರವಿಂದದಿ ಶರಣಾಗಿಅವರಕರದಿಂದ ನರಸಿಂಹ ವಿಜಯವಿಠ್ಠಲನಸುಪ್ರಸಾದವ ಕೊಂಡು ಮಾನವಿಗೆ ಹೋದರು 14ಮನುತೀರ್ಥ ತಟದಲಿ ಮನೆಯಲ್ಲಿ ವಾಸಿಸುತಹನುಮಂತಸ್ಥ ನರಹರಿ ಜಗನ್ನಾಥನ್ನಹನುಮನ್ನ ಪೂಜಿಸುತ ಗುರುಗಳ ಸ್ಮರಿಸುತ್ತಜ್ಞಾನಾರ್ಥಿ ವಿದ್ಯಾರ್ಥಿಗಳಿಗೆ ಒದಗಿಹರು 15ಇಷ್ಟರಲ್ಲೇ ಜಗನ್ನಾಥದಾಸರ ಕೀರ್ತಿಅಷ್ಟದಿಕ್ಕಲ್ಲು ಪ್ರಖ್ಯಾತಿಯ ಹೊಂದಿಇಷ್ಟಾರ್ಥ ಸಿದ್ಧಿಗೆ ಬರುವರಾದರು ಜನರುಕೃಷ್ಣನ ಒಲಿಮೆ ಈ ದಾಸರಲಿ ಪೂರ್ಣ 16ಮಾಧ್ವ ಮೂಲಗ್ರಂಥ ಟೀಕಾಟಿಪ್ಪಣಿಗಳುಸಾಧು ಹರಿದಾಸರ ಕೀರ್ತನೆಗಳುವೇದವ್ಯಾಸೋದಿತ ಪುರಾಣ ಇತಿಹಾಸವಿದ್ಯಾರ್ಥಿಗಳಿಗೆಲ್ಲ ಪಾಠ ಪ್ರವಚನವು 17ಯೋಗಿವರ ಪ್ರಾಣೇಶವಿಠ್ಠಲ ದಾಸಾರ್ಯರುಭಾಗವತವರಶ್ರೀಶ ವಿಠ್ಠಲದಾಸಾರ್ಯನಿಗಮವೇದ್ಯನ ಭಕ್ತಜನರು ಬಹುಮಂದಿಯುಬಾಗಿ ದಾಸಾರ್ಯರಿಗೆ ಶಿಷ್ಯ ಜನರಾದರು 18ಪ್ರಾಣೇಶ ದಾಸರಿಗೆ ಶರಣಾದೆ ಎಂದೆಂದುಪ್ರಾಣದೇವನು ಇವರೊಳ್ ಪ್ರಸನ್ನನಾಗಿಹನುಪ್ರಾಣದೇವಾಂತಸ್ಥ ಶ್ರಿಹರಿ ಕೇಶವನಕಾಣುತ ಭಜಿಸುವ ಭಾಗವತರೆಂದು 19ಜಗನ್ನಾಥದಾಸರ ಶಿಷ್ಯ ಸಜ್ಜನರಿಗೆಭಾಗವತವರಶ್ರೀಶ ಶ್ರೀದವಿಠ್ಠಲಾದಿಭಗವದ್ದಾಸರಿಗೆ ನಮಿಪೆ ಶ್ರೀ ಹರಿವಾಯುಝಗಝಗಿಪ ಇವರುಗಳೊಳ್ ಸಂತತ ಎಂದು 20ನೋಡಬೇಕಾಗಿದ್ದ ಕ್ಷೇತ್ರಗಳಿಗೆ ಪೋಗಿನಾಡಿನಲಿಭಾಗವತಧರ್ಮವ ಬೆಳೆಸೆಬೇಡುವ ಯೋಗ್ಯರಿಗೆ ಉಪದೇಶ ಕೊಡೆ ಶಿಷ್ಯರೊಡಗೂಡಿ ಹೊರಟರು ಜಗನ್ನಾಥದಾಸರು 21ಕರ್ಜಗಿ ಕ್ಷೇತ್ರದಲ್ಲಿ ಇರುವ ವರದಾ ನದಿಯುಸಜ್ಜನ ಸಮೂಹವು ಬಹಳ ಅಲ್ಲುಂಟುಶ್ರೀ ಜಗನ್ನಾಥನ್ನ ಭಜಿಸುತ್ತ ದಾಸರುಕರ್ಜಗಿ ಜಮೀನ್ದಾರ ಮನೆಯಲ್ಲಿ ಕುಳಿತರು 22ಸಾಧ್ವಿ ಶಿರೋಮಣಿ ಆ ಗೃಹಸ್ಥನ ಪತ್ನಿಪಾದನಮಿಸಿ ಪತಿಗೆ ಬಿನ್ನಹ ಮಾಡಿದಳುಇಂದುಲೌಕಿಕ ವಿಷಯಲಾಂಪಟ್ಯ ನಿಲ್ಲಿಸಿವಂದಿಸಿ ದಾಸರಿಗೆ ಪೂಜೆ ನೋಡೆಂದು 23ಅಹರ ಆರಾಧಿಸುವ ಕ್ರಮದಿ ದಾಸಾರ್ಯರುಸಾಯಾಹ್ನ ಸಾಮವಾಪ್ರತಿಪಾದ್ಯ ನರಸಿಂಹನವಿಹಿತದಿ ಅರ್ಚಿಸಿ ಕೀರ್ತನೆಗಳರ್ಪಿಸಿಮಹಾಹರ್ವ ಭಜಿಸುವರು ಶಿಷ್ಯರ ಸಮೇತ 24ಅಂದು ಈ ಗೃಹಸ್ಥನು ಹೆಂಡತಿ ಕೋರಿಕೆಯಂತೆಬಂದು ಕುಳಿತನು ದಾಸಾರ್ಯರ ಮುಂದೆಅಂದೇ ಆ ವಿಪ್ರನ ಅನಿಷ್ಠ ಪ್ರಾರಬ್ಧವುಚಂದದಿ ಪೋಪುವದೆಂದರಿತರು ದಾಸಾರ್ಯ 25ಪೂಜಾ ಆರಂಭ ಆಗಲಿಕೆ ಇರುವಾಗ ಆದ್ವಿಜನ ನೋಡಿ ಪ್ರಾಣೇಶ ದಾಸಾರ್ಯಗರ್ಜಿಸಿದರು ಇನ್ನಾದರೂ ಒಳ್ಳೆಋಜುಮಾರ್ಗ ಹಿಡಿ ಹರಿಯ ಒಲಿಸಿಕೊಳ್ಳೆಂದು 26ವಾಗ್ವಜ್ರಧಾರೆಯು ಪರಿಣಮಿಸಿ ವಿಪ್ರನತೀವ್ರ ಆ ಕ್ಷಣದಲ್ಲೆ ಮನಕಲುಷಕಳೆದುಶ್ರೀವರನ ಪ್ರಿಯತರ ಜಗನ್ನಾಥದಾಸರಿಗೆಸುವಿನಯದಿ ನಮಿಸಿ ಉದ್ಧರಿಸಿ ಎಂದ 27ಪ್ರಾಣೇಶ ದಾಸರಿಗು ಜಗನ್ನಾಥದಾಸರಿಗುತನ್ನ ಕೃತಜÕತೆಯನ್ನು ಚೆನ್ನಾಗಿ ತಿಳಿಸಿಮನ ಶುದ್ಧಿ ಭಕ್ತಿಯಿಂದಲಿ ಪೂಜೆ ನೋಡಲುಹನುಮಂತ ದೇವರು ಕುಳಿತಿದ್ದು ಕಂಡ 28ಶ್ರದ್ಧೆ ಭಕ್ತಿಯಿಂದ ಗೃಹಸ್ಥನುದಾಸರಪಾದಕೆರಗಿ ತನ್ನನ್ನು ಹರಿದಾಸವೃಂದದಲಿ ಸೇರಿಸಬೇಕೆಂದು ಪ್ರಾರ್ಥಿಸಿಶ್ರೀದವಿಠ್ಠಲನಾಮ ಅಂಕಿತವಕೊಂಡ29ಜಗನ್ನಾಥದಾಸಾರ್ಯಪರಮದಯಮಾಡಿಆ ಗೃಹಸ್ಥಗೆ ಶ್ರೀದವಿಠ್ಠಲಾಂಕಿತವುಭಕುತ ಜನರಿಗೆ ಫಲಮಂತ್ರಾಕ್ಷತೆ ಕೊಟ್ಟುಶ್ರೀಕರನ ಸ್ಮರಿಸಿ ಸವಣೂರಿಗೆ ಹೊರಟರು 30ವಾರಿಜಾಸನ ಪಿತನು ಪೂರ್ಣ ಪ್ರಜÕರ ಹೃತ್‍ಸ್ಥಶಿರಿ ಪ್ರಸನ್ನ ಶ್ರೀನಿವಾಸನಿಗೆ ಪ್ರಿಯತರರುಪುರಂದರವಿಜಯಗೋಪಾಲದಾಸಾರ್ಯರಚರಣರತ ಜಗನ್ನಾಥ ದಾಸಾರ್ಯ ಶರಣು 31- ಇತಿ ಷಷ್ಠ ಕೀರ್ತನೆ ಸಂಪೂರ್ಣಂ -
--------------
ಪ್ರಸನ್ನ ಶ್ರೀನಿವಾಸದಾಸರು