ಒಟ್ಟು 695 ಕಡೆಗಳಲ್ಲಿ , 78 ದಾಸರು , 580 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಬಾರೋ ಬಾ ಮನೆಗೇ ರಂಗಯ್ಯ ನೀ |ತೋರೋ ಮುಖವೆನಗೆ ಪಘೋರಶರೀರ ಸುಂ |ದರಸೂಕ್ಷ್ಮಾಕಾರನೆ |ಕ್ರೂರ ದಯಾಕರ ಧೀರ ಉದಾರಿಯೆ ಅ.ಪನೀಲಮೇಘ ಶ್ಯಾಮ ನಿರ್ಮಲವನ | ಮಾಲ ಪೂರ್ಣಕಾಮ |ಕಾಲಭಯ ವಿದೂರ | ಫಾಳನೇತ್ರನಮಿತ್ರ|ಪಾಲಾಬ್ಧಿವಾಸ ಶ್ರೀಲೋಲ ಗೋಪಾಲನೇ 1ಶೇಷಶಯನ ದೇವಾ | ಭಕ್ತರಭವ|ದೋಷಹರ ಸಂಜೀವಾ |ನಾಶರಹಿತ ಸರ್ವ | ಆಶವಿನಾಶನ |ಭಾಸುರಾಂಗನೆ ಜಗ | ದೀಶ ಕೇಶವಮೂರ್ತಿ 2ಕಾಲೊಳಂದುಗೆಯೂ | ಪೀತಾಂಬರ |ಶಾಲುಮುದ್ರಿಕೆಯೂ | ತೋಳ ಸರಿಗೆ ಬಳೆ |ವೈಜಯಂತಿಯ ಮಾಲೇ ಮೇಲಾದರತ್ನಕಿರೀಟಕುಂಡಲಧಾರೀ | ಗರುಡನ ಏರಿ 3ಶಂಕೆಯಿಲ್ಲದ ಭಕ್ತರೂ | ನಿನ್ನಯ ಸದೃ-ಶಾಂಕದಿ ಸೇವಿಪರೂ | ಶಂಖಚಕ್ರಗದಾ |ಪದ್ಮವ ಧರಿಸಿದ | ಪಂಕಜನೇತ್ರವೈ- |ಕುಂಠ ವೆಂಕಟಪತೇ 4ಧಾರುಣಿ ಭಾರವನೇ | ಇಳುಹಲವ |ತಾರಗಳೆತ್ತುವನೆ |ಚಾರುಭುಜಾನ್ವಿತ |ಕೌಸ್ತುಭಮಣಿಹಾರ | ವಾರಿಜನಾx
--------------
ಗೋವಿಂದದಾಸ
ಬಾರೋ ವೆಂಕಟಗಿರಿನಾಥ| ದಯ-ದೋರೈ ಭಕುತರ ಪ್ರೀತ ಪ.ಮಾರಪಿತ ಗುಣಹಾರ ಮಂದರ-ಧಾರ ದೈತ್ಯಸಂಹಾರ ಸುಜನೋದ್ಧಾರ ಮಮಹೃದಯಾರವಿಂದಕೆಬಾರೋ ಕೃಪೆದೋರೋ ವೆಂಕಟ ಅ.ಪ.ವೃಷಭಾಸುರನೊಳು ಕಾದಿ ಸಾ-ಹಸವ ಮೆರೆಸಿದ ವಿನೋದಿವಶಗೈದು ದೈತ್ಯನ ಶಿರವ ಕತ್ತ-ರಿಸುತಲಿ ನೀನಿತ್ತೆ ವರವವಸುಧೆಯೊಳಗಿಹ ಸುಜನರನು ಮ-ನ್ನಿಸುತಲಿಷ್ಟವನಿತ್ತು ಕರುಣಾ-ರಸದಿ ಸಲಹುವ ಬಿಸಜನಾಭ ಶ್ರೀ-ವೃಷಭಾಚಲವೊಡೆಯ ವೆಂಕಟ 1ಅಂಜನೆಯೆಂಬಳ ತಪಕೆ ಭಕ್ತ-ಸಂಜೀವನೆಂಬ ಶಪಥಕೆರಂಜಿಪ ಪದವಿತ್ತೆ ಮುದದಿ ಖಿಲ-ಭಂಜನಮೂರ್ತಿ ಕರುಣದಿ|ಮಂಜುಳಾಂಗ ಶ್ರೀರಂಗ ಸುರವರಕಂಜಭವವಿನುತಾದಿ ಮಾಯಾ-ರಂಜಿತಾಂಘ್ರಿ ಸರೋರುಹದ್ವಯಅಂಜನಾಚಲವೊಡೆಯ ವೆಂಕಟ 2ಶೇಷನ ಮೊರೆಯ ತಾಕೇಳಿಬಲುತೋಷವ ಮನಸಿನೊಳ್ತಾಳಿದೋಷರಹಿತನೆಂದೆನಿಸಿ ಕರು-ಣಾಶರಧಿಯ ತಾನೆ ಧರಿಸಿಶ್ರೀಶಹರಿಸರ್ವೇಶ ನತಜನ-ಪೋಷ ದುರ್ಜನನಾಶ ರವಿಶತ-ಭಾಸ ಕೌಸ್ತುಭಭೂಷವರಶ್ರೀ-ಶೇಷಾಚಲವಾಸ ವೆಂಕಟ 3ಮಾಧವವಿಪ್ರ ವಿರಹದಿ ಭ್ರಷ್ಟಹೊಲತಿಗಳನು ಸೇರ್ದ ಮುದದಿಸಾದರದಲಿ ನಿನ್ನ ಬಳಿಗೆ ಬರೆನೀ ದಯಾನಿಧಿ ಕಂಡು ಅವಗೆಶೋಧಿಸುತ ಪಾಪಗಳೆಲ್ಲವಛೇದಿ ಬಿಸುಡುತನಿಂದುವೆಂಕಟ-ಭೂಧರದ ನೆಲೆಯಾದ ನಾದವಿ-ಭೇದಬಿಂದು ಕಲಾದಿಮೂರುತಿ 4ಧನಪತಿಯೊಳು ತಾನು ಸಾಲಕೊಂಡಘನಕೀರ್ತಿಯಿಂದ ಶ್ರೀಲೋಲವನಿತೆ ಪದ್ಮಾವತಿಪ್ರೀತ ಭಕ್ತ-ಜನಸುರಧೇನು ಶ್ರೀನಾಥವನಧಿಶಯನ ಮುರಾರಿಹರಿಚಿ-ಧ್ವನಿನಿಭಾಂಗ ಸುಶೀಲ ಕೋಮಲವನಜನಾಭನೀಯೆನ್ನ ಕೃಪೆಯೊಳ-ಗನುದಿನದಿ ಕಾಯೊ ಕೃಪಾಕರ 5ಛಪ್ಪನ್ನೈವತ್ತಾರು ದೇಶದಿಂದಕಪ್ಪವಗೊಂಬ ಸರ್ವೇಶಅಪ್ಪ ಹೋಳಿಗೆಯನ್ನುಮಾರಿಹಣ-ಒಪ್ಪಿಸಿಕೊಂಬ ಉದಾರಿಸರ್ಪಶಯನ ಕಂದರ್ಪಪಿತ ಭಜಿ-ಸಿರ್ಪವರ ಸಲಹಿರ್ಪ ಕುಜನರದರ್ಪಹರಿಸುತ ಕಪ್ಪಕಾಣಿಕೆಒಪ್ಪಿಗೊಂಬ ತಿಮ್ಮಪ್ಪಶೆಟ್ಟಿಯೆ 6ಚಾರುಚರಣತೀರ್ಥವೀಂಟಿ ನಿನ್ನೊ-ಳ್ಸಾರಿ ಬರುವ ಪುಣ್ಯಕೋಟಿಸೇರಿದೆ ಕೊಡು ಮನೋರಥವ ಲಕ್ಷ್ಮೀ-ನಾರಾಯಣನೆನ್ನೊಳ್ದಯವತೋರುನಿರತಸಮೀರಭವ ವರ-ದಾರವಿಂದದಳಾಕ್ಷ ತಿರುಪತಿವೀರ ವೆಂಕಟರಮಣ ಮದ್ಬಹು-ಭಾರನಿನ್ನದು ಪಾಲಿಸೆನ್ನನು7
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಬಿಡೆನೊ ನಿನ್ನಂಘ್ರಿ ಶ್ರೀನಿವಾಸ ನನ್ನದುಡಿಸಿಕೊಳ್ಳೆಲೊ ಶ್ರೀನಿವಾಸ ನಿನ್ನುಡಿಯ ಜೀತಲ್ಲೊ ಶ್ರೀನಿವಾಸ ನನ್ನನಡೆ ತಪ್ಪು ಕಾಯೊ ಶ್ರೀನಿವಾಸ ಪ.ಬಡಿಯೊ ಬೆನ್ನಲಿ ಶ್ರೀನಿವಾಸ ನನ್ನೊಡಲ ಹೊಯ್ಯದಿರೊ ಶ್ರೀನಿವಾಸ ನಾಬಡವ ಕಾಣೆಲೊ ಶ್ರೀನಿವಾಸ ನಿನ್ನೊಡಲ ಹೊಕ್ಕೆನೊ ಶ್ರೀನಿವಾಸ 1ಪಂಜುವಿಡಿವೆನೊ ಶ್ರೀನಿವಾಸ ನಿನ್ನೆಂಜಲ ಬಳಿದುಂಬೆ ಶ್ರೀನಿವಾಸ ನಾಸಂಜೆ ಉದಯಕೆ ಶ್ರೀನಿವಾಸ ಕಾಳಂಜಿಯ ಪಿಡಿವೆನೊ ಶ್ರೀನಿವಾಸ 2ಸತ್ತಿಗೆ ಚಾಮರ ಶ್ರೀನಿವಾಸ ನಾನೆತ್ತಿಕುಣಿವೆನೊ ಶ್ರೀನಿವಾಸ ನಿನ್ನರತ್ತುನ ಹಾವಿಗೆ ಶ್ರೀನಿವಾಸ ನಾಹೊತ್ತು ನಲಿವೆನೊ ಶ್ರೀನಿವಾಸ 3ಹೇಳಿದಂತಾಲಿಹೆ ಶ್ರೀನಿವಾಸ ನಿನ್ನಾಳಿಗಾಳಾಗಿಹೆ ಶ್ರೀನಿವಾಸ ಅವರೂಳಿಗವ ಮಾಳ್ಪೆ ಶ್ರೀನಿವಾಸ ನನ್ನಪಾಲಿಸೊ ಬಿಡದೆ ಶ್ರೀನಿವಾಸ 4ನಿನ್ನ ನಾಮ ಹೋಳಿಗೆ ಶ್ರೀನಿವಾಸ ಕಳ್ಳಕುನ್ನಿ ನಾನಾಗಿಹೆ ಶ್ರೀನಿವಾಸಕಟ್ಟಿನಿನ್ನವರೊದ್ದರೆ ಶ್ರೀನಿವಾಸ ನನಗಿನ್ನು ಲಜ್ಜ್ಯಾತಕೆ ಶ್ರೀನಿವಾಸ 5ಬೀಸಿ ಕೊಲ್ಲಲವರೆ ಶ್ರೀನಿವಾಸ ಮುದ್ರೆಕಾಸಿ ಚುಚ್ಚಲವರೆ ಶ್ರೀನಿವಾಸ ಮಿಕ್ಕಘಾಸಿಗಂಜೆನಯ್ಯ ಶ್ರೀನಿವಾಸ ಎಂಜಲಾಸೆಯಬಂಟನಾ ಶ್ರೀನಿವಾಸ6ಹೇಸಿ ನಾನಾದರೆ ಶ್ರೀನಿವಾಸಹರಿದಾಸರೊಳು ಪೊಕ್ಕೆ ಶ್ರೀನಿವಾಸಅವರಭಾಸೆಯ ಕೇಳಿಹೆ ಶ್ರೀನಿವಾಸ ಆವಾಶೆಯ ಸೈರಿಸೊ ಶ್ರೀನಿವಾಸ 7ತಿಂಗಳವನಲ್ಲ ಶ್ರೀನಿವಾಸವತ್ಸರಂಗಳವನಲ್ಲೊ ಶ್ರೀನಿವಾಸ ರಾಜಂಗಳ ಸವಡಿಪೆ ಶ್ರೀನಿವಾಸ ಭವಂಗಳ ದಾಟುವೆ ಶ್ರೀನಿವಾಸ 8ನಿನ್ನವ ನಿನ್ನವ ಶ್ರೀನಿವಾಸ ನಾನನ್ಯವನರಿಯೆನೊ ಶ್ರೀನಿವಾಸ ಅಯ್ಯಾಮನ್ನಿಸೊ ತಾಯ್ತಂದೆ ಶ್ರೀನಿವಾಸ ಪ್ರಸನ್ನ ವೆಂಕಟಾದ್ರಿ ಶ್ರೀನಿವಾಸ 9
--------------
ಪ್ರಸನ್ನವೆಂಕಟದಾಸರು
ಭಾರತೀರಮಣ ನಂಬಿದೆ ಪಾದವಾರಿಜಾಕರುಣಾ ವಾರಿಧೆ ಯನ್ನನು |ದೂರ ನೋಡದೆ ನಿನ್ನ ಸಾರೆಗರೆದುಭಯ ನಿವಾರಿಸಿ ಸಲಹೋ ಪನೀಲಲೋಹಿತನ ಪಿತನೇ ಗೋಪಾಲನ ಸುತಾ |ಕಾಳಕೂಟ ಪಾನಿ ವಿಶಾಲಾಂಬಕಾ ಮಾರರಿಂದ ||ವೇಳೆ ವೇಳೆಗಳಲ್ಲಿ ವೋಲಗವ ಕೈಕೊಂಬುವ |ಕಾಳೀವಲ್ಲಭಭೇಶಭಾಸ್ಕರರೋಲು ಸನ್ನಿಭ ||ಈ ಲೌಕಿಕ ನರರಾಲಯ ಕಾಯಿಸದೆ |ವಾಲಯ ಸುಮತಿಯ ಪಾಲಿಪುದೊಲಿದು 1ಜಾನಕೀಪತಿ ಸೇವೆ ಮಾಡಿದೈ ಕಾಣೆನೋಪ್ರತಿ|ಯಾ ನಿನಗಾರಾರಾ ಭುವನದೊಳಗೆ ಗಂಧವಹನೆ ||ಮುದ್ರಿಯ ಕೊಂಡು ಕ್ಷಣದೊಳಗೆ ಜಲಧಿಯನ್ನೆ ಹಾರಿದೆ |ಸೀತೆಗುಂಗುರವನ್ನೆ ತೋರಿದೆ ||ಆ ನಗರವನು ದಹನಗೈಸಿ ಬಹು |ದಾನವರನಳಿದು ದಶಾನನನೊದ್ದೆ 2ಪಾಪದೂರನೆ ವೃಕೋದರ ಶ್ರೀ ದ್ರೌಪದೀಶನೇ |ವಿಪಿನಚರಿಸಿ ಕುರುಪತಿಯ ತರಿದು ||ಕ್ಷಿತಿಪರನ್ನು ಬಿಡಿಸಿದೆಯೈ ಪಾಂಡವರ (ಪರಿ) ಪಾಲಕ |ಕೋಪನಾಶನ ಉದ್ಧರಿಸೆನ್ನ ಚಾಪಭಂಜನ ||ಶ್ರೀಪತಿ ದ್ವಯ ಪದ ಆಪಜ ಭಜಿಸುವ |ನೇ ಪರಮೇಷ್ಠಿಯರೂಪಗುಣಾಢ್ಯ 3ದೇಶಿಕೋತ್ತಮ ಮಾರುತಿ ಇಂದಿರೇಶನ ಪ್ರೇಮ |ಸಂಪಾದಿಸಿಕೊಂಡತಿಶಯ ಭಕುತಿಯಿಂದಲೀ ಸಮೀಚೀನವಾಗಿ ||ತ್ರಿಂಶತಿ ಸಪ್ತ ಸಂಖ್ಯಾ ದರುಶನ ಗ್ರಂಥ ವಿರಚಿಸಿ ದು |ರ್ಭಾಷ್ಯವ ಸಂತರಾ ಸಲಹುವರನಾಭಾಸ ಮಾಡಿದೆ ||ವ್ಯಾಸಭಜಕ ನಿನ್ನ ದಾಸನೆನಿಸಿಕೊಳ್ಳೋ4ಅಂಜನಾಸುತ ಪ್ರಾಣೇಶ ವಿಠಲನೆಂಜಲನೊಯ್ಯುತ |ಭುಂಜಿಸಿದಿಯಲೊನಿರಂಜನಕಪಿ ಪ್ರ- ||ಭಂಜನಕೊಡು ಕೃತಾಂಜಲಿಯಿಂ ಬೇಡುವೆ |ಕಂಜನಾಭನ ಸ್ಮರಣೆ ದಿವಾ ಸಂಜೆಯಲಿಘನ||ಪುಂಜ ಸುಗುಣಮಣಿ ಮಂಜರಿ ಅರ್ಥ ಪ- |ರಂಜಳ ತಿಳಿಸೋ ಧನಂಜಯ ರಕ್ಷ 5
--------------
ಪ್ರಾಣೇಶದಾಸರು
ಮಂಗಲಂ ಜಯ ಶುಭಮಂಗಲಂ ಪ.ಶ್ರೀಗೌರೀಸುಕುಮಾರನಿಗೆಯೋಗಿವರೇಣ್ಯ ಶುಭಾಕರಗೆರಾಗ ಲೋಭ ರಹಿತಗೆ ರಜತೇಶಗೆಭಾಗೀರಥಿಸುತ ಭವಹರಗೆ 1ಪಾಶಾಂಕುಶ ವಿವಿಧಾಯುಧಗೆಪಾಶದರಾರ್ಚಿತ ಪಾವನಗೆವಾಸರಮಣಿಶತಭಾಸಗೆ ಈಶಗೆಭಾಸುರತನಕ ವಿಭೂಷಣನಿಗೆ2ಶೀಲ ಸುಗುಣಗಣ ವಾರಿಧಿಗೆನೀಲೇಂದೀವರಲೋಚನೆಗೆಲೋಲಲಕ್ಷ್ಮೀನಾರಾಯಣ ರೂಪಗೆಶಾಲಿ ಪುರೇಶ ಷಡಾನನಗೆ 3
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಮಂಗಳ ಮಂಗಳಾತ್ಮಕಗೆ ಮಂಗಳ ಮಂಗಳಾನನಗೆಮಂಗಳ ಮಂಗಳದೇವಿಯರಸಗೆ ಪ.ಮಿಸುನಿಯ ಹರಿವಾಣದಲ್ಲಿ ಹೊಸಮುತ್ತಿನಾರತಿ ನಿಲಿಸಿಬಿಸಜಗಂಧಿಯರು ಶ್ರೀಹರಿಗೆ ಜಯವೆನ್ನಿ 1ಕುಂದಕುಟ್ಮಲರದನೆಯರು ಇಂದುಮಂಡಲವದನೆಯರುಸಿಂಧುಶಯನ ನಿತ್ಯನಿಗೆ ಜಯವೆನ್ನಿ 2ರಂಭಾಸ್ತಂಭೋರು ಅಂಬುಜಕುಚಯುಗಳೆಯರುಅಂಬುಜಶರಜನಕಗೆ ಜಯವೆನ್ನಿ 3ಪ್ರಾಗ್ಜೋತಿಷಧಿಪನರಿಗೆ ಪೂಗಣ್ಣಿಯ ಮನೋಹರಗೆನಾಗ್ಗನ್ನೆಯರ ದೇವಗೆ ಜಯವೆನ್ನಿ 4ಸೌಂದರ್ಯಾತಿಶಯ ಪೂರಣಗೆ ಸೈಂಧವಹನನಕಾರಣಗೆತಂದೆ ಪ್ರಸನ್ನವೆಂಕಟೇಶಗೆ ಜಯವೆನ್ನಿ 5
--------------
ಪ್ರಸನ್ನವೆಂಕಟದಾಸರು
ಮಹಾಮಾಯೆಗೌರಿ ಮಾಹೇಶ್ವರಿಪ.ವiಹಾದೇವಮನೋಹಾರಿ ಶಂಕರಿಮಹಾಪಾಪಧ್ವಂಸಕಾರಿ ಶ್ರೀಕರಿಮಾಂಪಾಹಿಪಾಹಿ ಶೌರಿಸೋದರಿಅ.ಪ.ಕಾಮಕೋಟಿಸುಂದರಿ ಶುಭಕರಿ ಕರಿಕುಂಭಪಯೋಧರಿಕಾಮಿತಪ್ರದೆ ಕಂಬುಕಂಧರಿಹೇಮಾಲಂಕಾರಿ ಹೈಮವತಿ ಕುವರಿ 1ಭಾನುಕೋಟಿಭಾಸ್ಕರಿ ಭವಹರಿ ಭಜಕಾಮೃತಲಹರಿಸ್ಥಾಣುವಲ್ಲಭೆ ದನುಜಸಂಹಾರಿಜ್ಞಾನಾಗೋಚರಿ ಜಗತ್ರಯೇಶ್ವರಿ 2ಪೂರ್ವದೇವಭೀಕರಿ ಭ್ರಾಮರಿ ಪುಳಿನಾಖ್ಯ ಪುರೇಶ್ವರಿಸರ್ವಲಕ್ಷ್ಮೀನಾರಾಯಣೇಶ್ವರಿಸರ್ವಸಹಚರಿ ಶಶಾಂಕಶೇಖರಿ 3
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಮಾಮವ ಮಮ ಕುಲಸ್ವಾಮಿ ಗುಹನತಜನ ದುರಿತಾಪಹ ಪ.ಭೀಮವೀರ್ಯ ನಿಸ್ಸೀಮಪರಾಕ್ರಮಧೀಮತಾಂವರ ನಿರಾಮಯ ಜಯ ಜಯ ಅ.ಪ.ಜ್ಞಾನಶಕ್ತಿ ಶತಭಾನುಭಾಸುರ ಪ್ರಸನ್ನಪಾವನ್ನಮೀನಕೇತನಸಮಾನ ಸಹಜ ಲಾವಣ್ಯಗಾನಲೋಲ ಕರುಣಾನಿಧಿ ಸುಮನಸ-ಸೇನಾನಾಥ ಭಾವನಿಸುತ ಸುಹಿತ 1ಪಟುತರಶಕ್ತಿ ಕುಕ್ಕಟ ಕುಲಿಶಾಭಯಶಯ ನಿರಪಾಯನಿಟಿಲಾಕ್ಷತನಯ ನಿಗಮಜÕ ಬಾಹುಲೇಯಕುಟಿಲ ಹೃದಯ ಖಲಪಟಲವಿದಾರಣತಟಿತ್ಸಹಸ್ರೋತ್ಕಟರುಚಿರಮಕುಟ2ಪಾವಂಜಾಖ್ಯ ಪವಿತ್ರ ಕ್ಷೇತ್ರಾಧಿವಾಸ ಸರ್ವೇಶದೇವ ಲಕ್ಷ್ಮೀನಾರಾಯಣಸ್ಮರಣೋಲ್ಲಾಸಸೇವಕ ವಿಬುಧಜನಾವಳಿಪಾಲಕಕೇವಲ ಸುಖಸಂಜೀವ ಜೀವನದ 3
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಮೀಸಲ ಗುಣದೆಯರನೆಲ್ಲ ಮೋಸಗೈಸಿ ಕೊಳಲನೂದಿರಾಸಕ್ರೀಡೆ ಮಾಡಿದಾಭಾಸಬಹಳಯ್ಯಾ ಪ.ನೀನೆ ಎಂದವರೆದೊಡ್ಡ ಕಾನನದಿ ಬಿಟ್ಟು ಒಬ್ಬಮಾನಿನಿಯಜರಿದುನಡೆದಿ ಇನ್ನೇನು ಉಚಿತವಯ್ಯ ಕೃಷ್ಣ1ಎಳೆಯಬಳ್ಳಿ ಗಿಳಿಪಕ್ಷಿನಳಿನನಾಭನ ಕಂಡಿರೇನನಳಿನಮುಖಿಯರೆಲ್ಲ ತಿರುಗಿ ಬಳಲಿ ನಿಂತಾರೊ ಕೃಷ್ಣ2ಸೂಸು ಮಲ್ಲಿಗೆ ಸಂಪಿಗೆ ಜಾಜಿ ಹಾಸಿಕೆಯ ಮಾಡಿ ಅವಳಸೋಸುಪೂರೈಸುವ ಬಗಿಯು ಶ್ರೀಶ ರಮಸಿದಿಯೋ ಕೃಷ್ಣ3ಚಂದ್ರವದನೆಗೆ ಅಂಗದಲ್ಲಿ ಗಂಧ ಕಸ್ತೂರಿ ಕುಂಕುಮವಿಟ್ಟುಮಂದಾರಮಲ್ಲಿಗೆಯ ಮುಡಿಸಿ ಆನಂದ ಬಡಿಸಿದಿಯೊ ಕೃಷ್ಣ4ಇಂದಿರೇಶನ ಕಾಣದಲೆ ನೊಂದವರ ಮ್ಯಾಲೆ ಪರಿಮಳತಂದು ಹಾಕಿದ ವಾಯು ಪಾಪಿ ಎಂದು ಬಯ್ಯುತ ಕೃಷ್ಣ 5ತಂದು ಕನ್ನಡಿ ನಿಲ್ಲಿಸಿ ಒಳಗೆ ಚಂದ್ರನ್ಹೊಗಿಸಿಮ್ಯಾಲೆಕಲ್ಲುತಂದು ಹಾಕಿ ಅವನ ನಾವು ಕೊಂದರೆ ಪಾಪಿಲ್ಲ ಎನುತ6ಬೆಂದವರ ಮ್ಯಾಲೆ ಪರಿಮಳ ಚಂದ್ರನುಡಿಸಿದ ಕಂದನಿವನುಹಿಂದಿನ ವೈರವೇ ಸವತಿ ಇಂದಿನವನೆಂದು ಭವಿತ 7ಮಲ್ಲಿಗೆ ಸಂಪಿಗೆ ಜಾಜಿ ಚಲ್ವ ತುಳಸಿ ಯಮುನಾದೇವಿಫುಲ್ಲನಾಭನ ಕಂಡಿರೇನ ನಲ್ಲೆಯರು ಹಲಬುತ ಕೃಷ್ಣ 8ನೋಡುನೋಡುಕೆಳದಿ ಇಲ್ಲೆ ಜೋಡು ಹೆಜ್ಜಿ ತೋರುತಾವಮಾಡಿ ಕಪಟದಿ ರಂಗನ ಒಬ್ಬಳು ಓಡಿಸಿ ಒಯ್ದಾಳೆ ಎನುv 9ನಗಧರಒಬ್ಬ ಬಾಲೆಯಳ ಜಿಗಿದು ಎತ್ತಿದ ಹೆಜ್ಜೆ ನೋಡಿಸಿಗಲಿ ಅವಳು ರಂಗನ ಬೆರೆದ ಬಗಿಯ ತೋರೆನುತ ಕೃಷ್ಣ 10ಹಿಂಡುನಾರಿಯರೆಲ್ಲ ಕೂಡಿಕೊಂಡು ಅವಳ ಮಂಡೆಕುಕ್ಕಿಪುಂಡರಿಕಾಕ್ಷನ ತೋರೆದಿಂಡೆಮನುಜಳೆ ಎನುತ11ಇಷ್ಟು ನಾರಿಯರೊಳು ರಾಧೆ ಶ್ರೇಷ್ಠಳೆಂದು ಗರುವಿಸ್ಯಾಳುಅಷ್ಟರೊಳಗೆ ಅವಳ ನೀನು ಬಿಟ್ಟು ಪೋಗಿದ್ಯೊ ಕೃಷ್ಣ 12ಗಲ್ಲಕುಕ್ಕಿ ಅಂಜಿ ಅವಳು ಎಲ್ಲ ನಾರಿಯರಿಗೆ ಎರಗಿಫುಲ್ಲನಾಭಮಾಡಿದಪಾಟನಎಲ್ಲಿ ಉಸಿರಲೆ ಎನುತ13ವಿಧಿಗೆ ದಯವಿಲ್ಲ ನಮ್ಮ ಚದುರ ರಂಗನ ಅಗಲಿಸಿತುಮದನಬಾಣ ನೆಟ್ಟಿತೆಂದು ಸುದತೆಯರು ಹಲಬುತ ಕೃಷ್ಣ14ಶ್ರೀಶ ರಾಮೇಶನ ಯಾವ ದೇಶದಲ್ಲಿ ಹುಡುಕಲೆಂದುಕ್ಲೇಶಬಡಲು ಕೆಲದೆಯರೆಲ್ಲ ಸರ್ವೇಶ ಬಂದೆಂದ ಪಾರ್ಥ15
--------------
ಗಲಗಲಿಅವ್ವನವರು
ಮೋಸ ಹೋದೆನಲ್ಲ - ಸಕಲವು-|ವಾಸುದೇವಬಲ್ಲಪಭಾಸುರಂಗ ಶ್ರೀ ವಾಸುಕಿಶಯನನ |ಸಾಸಿರ ನಾಮವ ಲೇಸಾಗಿ ಪಠಿಸದೆ ಅ.ಪದುಷ್ಟಜನರ ಕೂಡಿ - ನಾನತಿ-|ಭ್ರಷ್ಟನಾದೆ ನೋಡಿ ||ಸೃಷ್ಟಿಗೊಡೆಯ ಮುರ-ಮುಷ್ಟಿಕ ವೈರಿಯ |ದೃಷ್ಠಿಯಿಂದ ನಾ ನಿಟ್ಟಿಸಿ ನೋಡದೆ 1ಕಾಯವು ಸ್ಥಿರವಲ್ಲ-ಎನ್ನೊಳು-|ಮಾಯೆತುಂಬಿತಲ್ಲ ||ಪ್ರಾಯ ಮದದಿ ಪರಸ್ತ್ರೀಯರ ಕೂಡುತೆ |ಕಾಯಜಜನಕನ ಧ್ಯಾನವ ಮಾಡದೆ2ಕಂಗಳಿಂದಲಿ ನೋಡೊ-ದೇವಾನಿ-|ನ್ನಂಗ ಸಂಗವ ನೀಡೋ ||ಮಂಗಳ ಮಹಿಮ ಶ್ರೀ ಪುರಂದರವಿಠಲ ನಿ-|ನ್ನಂಗದೊಳಿರುವಂತೆ ದಯವನು ಮಾಡೊ 3
--------------
ಪುರಂದರದಾಸರು
ಯೋಗಿಯ ನೋಡಿರೋ ಸದ್ಗುರು ಯೋಗಿಯ ನೋಡಿರೋಯೋಗಿಚಿದಾನಂದಾವಧೂತ ಗುರುದೊರೆಯ ಸದ್ಗುಣ ಚರಿತನಪಆಶಾಪಾಶಗಳೆಂಬುವನೆಲ್ಲವಜರಿದುವಾಸನೆತರಿದುದೋಷದುರ್ಗ ಜನನಾದಿಗಳನು ಬಳಿದು ಸಂಶಯ ತುಳಿದುಕ್ಲೇಶಪಂಚಕ ಕಾಮಕ್ರೋಧವ ಕಡಿದು ಮುಂದಕೆ ನಡೆದುಭಾಸುರತೇಜದಿ ತೋರುವ ಪ್ರಭೆಯನುಕೂಡುವ ತಲೆಯೊಲಿದಾಡುವ1ಬಲಿದಾಧಾರವ ಕುಂಭಕದಿಂದಲಿ ಬಲಿಸಿ ವಾಯುವ ನಿಲಿಸಿನೆಲೆಯನೆ ಹತ್ತಿ ಆ ನೆಲೆಯನೆ ನಿಲುಕುತ ಮತ್ತಾನೆಲೆಯ ಹೊಲಬಲಿ ತೋರುವಭಾಸ್ಕರಕೋಟಿಯ ಮೀರಿಕಳೆಗಳ ತೋರಿ ಥಳಥಳ ಥಳಿಸಿಯೆ ಮೆರೆವಾ ಆತ್ಮನ ನೋಡುವ ಸಂತಸಪಡುವ2ಆರು ಚಕ್ರಗಳಲಿ ತೋರುವ ದಳಗಳನರಿದು ಅದರೊಳು ಬೆರೆತುಭೋರಿಡುತಿಹ ದಶನಾದದ ಬೊಬ್ಬೆಯಕೇಳಿಹರುಷವ ತಾಳಿ ಚಾತುರದಿ ಮೆರೆಯುತಲಿಹ ಜ್ಯೋತಿಯಸಾರಸೇವಿಪ ಶೂರಧಿರ ಚಿದಾನಂದಾವಧೂತಾತ್ಮ ಗುರುವಾ ಎನ್ನನು ಪೊರೆವಾ3
--------------
ಚಿದಾನಂದ ಅವಧೂತರು
ಯೋಗಿಯಹುದಹುದೋ ಚಿದಾನಂದಯೋಗಿಯಹುದುಹುದೋ ದಯಾಸಾಗರ ಕಾರಣ್ಯದಾಗರ ನಿತ್ಯಾತ್ಮಪಅಷ್ಟಮದಂಗಳನ್ನು ಸುಟ್ಟು ಭಸ್ಮವ ಮಾಡಿಹಅಷ್ಟ ಪ್ರಕೃತಿಯನ್ನು ಕಾರಿ ಕಾರಿ ಮಹದಷ್ಟ ಯೋಗವ ಸಾಧಿಸಿ ಶ್ರವಣವನ್ನುಕೊಟ್ಟುನಾದವ ಭೇದಿಸಿ ಆತ್ಮದಲ್ಲಿದೃಷ್ಟಿ ಎಂಬುದ ನಿರಿಸಿ ಸರ್ವಕಾಲಶಿಷ್ಟರೆಂದೆನಿಪ ಉತ್ಕøಷ್ಟಮಾರ್ಗದವಾಸಿ1ಆರು ಅರಿಯ ಮೀರಿದರು ಭ್ರಮೆಯ ವಿಕಾರವ ತರಿದುತರಿದು ಹೀರಿ ಆರು ಚಕ್ರದ ಮೇಲೆಏರಿ ಸಹಸ್ರಾರ ಸ್ಥಳದಿನಿಂದುಜ್ಯೋತಿರ್ಮಯಸಾರವ ಸೇವಿಸುತಲಂದು ನಿತ್ಯಾನಿತ್ಯಘೋರತಪದಿಯೋಗಿಶೂರ ಭಕ್ತರ ಬಂಧು2ಸಪ್ತವ್ಯಸನರೂಪಕೆಡಿಸಿ ಬಳಿಕ ದುಷ್ಟಸಪ್ತಾವರಣವನ್ನು ತುಳಿದು ಪಾದದಲೊದ್ದುಗುಪ್ತವಾಗಿಹ ಪ್ರಭೆಯ ಶೋಧಿಸಿಘನತೃಪ್ತ ಅಮೃತ ಸುಧೆಯ ಸುರಿದು ಮೇರುಕಾಂಚನ ಗಿರಿಯ ಸೇರಿಯೆ ಜ್ಯೋತಿವ್ಯಾಪಕಭಾಸ್ಕರದೀಪ್ಯಮಾನ ಪ್ರಭಾ3ಕರ್ಮಪಾಪವು ಪುಣ್ಯಹಮ್ಮುವಾಸನಕ್ಷಯದುರ್ಮತಿ ದುರ್ಗುಣವೆಲ್ಲ ದೊಡ್ಡಬ್ರಹ್ಮಾನಂದದ ಲಕ್ಷಣ ತಿಳಿದಾ ನಿತ್ಯಾನಿರ್ಮಳ ನಿರಾವರಣ ರೂಪಿತ ಆತ್ಮಸ್ವರ್ಮಣಿ ಸುಗುಣನಿರ್ಗುಣಪರಬ್ರಹ್ಮವೇ ತಾನಾಗಿ ಬೆಳಗುವ ಯತಿ ಜಾಣ4ಸಾಧನ ನಾಲ್ಕನು ಸಾಧಿಸಿನಾದವ ಭೇದಿಸಿ ಜ್ಯೋತಿ ಸಂಪಾದಿಸಿ ಆತ್ಮನಭೇದವೆಂಬುದನರಿತ ಬಳಿಕಘನಸಾಧನಗುಣಚರಿತಯೋಗಿ ತಾನೆನಿಸಿ ಕೈವಿಡಿಯೆನ್ನಬೋಧಸದ್ಗುರು ಚಿದಾನಂದಅವಧೂತ5
--------------
ಚಿದಾನಂದ ಅವಧೂತರು
ರಕ್ಷಿಸು ಮಹಮಾಯೆ ಕರುಣ ಕ-ಟಾಕ್ಷದಿಂದಲಿ ತಾಯೆ ಪ.ದಾಕ್ಷಾಯಿಣಿ ದೈತ್ಯಾಂತಕಿವರನಿಟಿ-ಲಾಕ್ಷನ ರಾಮಿ ನಿರೀಕ್ಷಿಸು ಜನನೀ ಅ.ಪ.ವಾಸವಮುಖವಿನುತೆ ರವಿಸಂ-ಕಾಶೆ ಸುಗುಣಯೂಥೇಭಾಸುರಮಣಿಗಣಭೂಷೆ ತ್ರಿಲೋಕಾ-ಧೀಶೆ ಭಕ್ತಜನಪೋಷೆ ಪರೇಶೆ 1ಗುಹಗಣಪರಮಾತೆ ದುರಿತಾ-ಪಹೆ ದುರ್ಜನ ಘಾತೆಬಹುಕಾಮಿತಪ್ರದೆ ಭಜಕಜನೋರ್ಜಿತೆಮಹಿತೆ ಯೋಗಿಹೃದ್ಗುಹನಿವಾಸಿನಿಯೆ 2ಶುಂಭಾಸುರಮಥಿನಿ ಸುರನಿಕು-ರುಂಬಾರ್ಚಿತೆ ಸುಮನಿರಂಭಾದಿಸುರನಿತಂಬಿನೀ ಜನಕ-ದಂಬಸೇವಿತಪದಾಂಬುಜೆ ಗಿರಿಜೆ 3ಅಷ್ಟಾಯುಧಪಾಣಿ ಸದಾಸಂ-ತುಷ್ಟೆ ಸರಸವಾಣಿಸೃಷ್ಟಿಲಯೋದಯಕಾರಿಣಿ ರುದ್ರನಪಟ್ಟದ ರಾಣಿಪರಾಕುಕಲ್ಯಾಣಿ4ನೇತ್ರಾವತಿ ತಟದ ವಟಪುರ-ಕ್ಷೇತ್ರಮಂದಿರೆ ಶುಭದಾಸುತ್ರಾಣಿ ಲಕ್ಷ್ಮೀನಾರಾಯಣಿ ಸ-ರ್ವತ್ರ ಭರಿತೆ ಲೋಕತ್ರಯನಾಯಕಿ 5
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ರಂಗನಾಯಕಸ್ವಾಮಿ ರಾಜೀವಲೋಚನ ಬೆಳಗಾಯಿತೇಳೆನ್ನುತಅಂಗನೆ ಲಕುಮಿ ತಾ ಪತಿಯನೆಬ್ಬಿಸಿದಳುಶೃಂಗಾರದ ನಿದ್ರೆ ಸಾಕೆನ್ನುತಪ.ಪಕ್ಷಿರಾಜನು ಬಂದು ಬಾಗಿಲೊಳಗೆನಿಂದುಅಕ್ಷಿ ತೆರೆದು ಬೇಗ ಈಕ್ಷಿಸೆಂಬ ||ಪಕ್ಷಿಜಾತಿಗಳೆಲ್ಲ ಚಿಲಿಪಿಲಿಗುಟ್ಟುತಸೂಕ್ಷ್ಮದಲಿ ನಿನ್ನನು ಸ್ಮರಿಸುವುವೊ ಕೃಷ್ಣ 1ಸನಕ - ಸನಂದನ - ಸನತ್ಸುಜಾತರು ಬಂದುವಿನಯದಿ ಕೈಮುಗಿದು ಓಲೈಪರು ||ಘನಶುಕ - ಶೌನಕ - ವ್ಯಾಸ ವಾಲ್ಮೀಕರುನೆನೆದು ಕೊಂಡಾಡುವರೊ ಹರಿಯೇ 2ಸುರರು ಕಿನ್ನರರು ಕಿಂಪುರುಷರು ಉರಗರುಪರಿಪರಿಯಲಿ ನಿನ್ನ ಸ್ಮರಿಸುವರು ||ಅರುಣನು ಬಂದುದಯಾಚಲದಲ್ಲಿ ನಿಂದಕಿರಣ ತೋರುವ ಭಾಸ್ಕರನು ಶ್ರೀ ಹರಿಯೇ 3ಪದುಮನಾಭನೆ ನಿನ್ನ ನಾಮಾಮೃತವನುಪದುಮಾಕ್ಷಿಯರು ತಮ್ಮ ಮನೆಯೊಳಗೆ ||ಉದಯದೊಳೆದ್ದು ಸವಿದಾಡುತ ಪಾಡುತದಧಿಯ ಕಡೆವರೇಳು ಮಧುಸೂದನ ಕೃಷ್ಣ 4ಮುರುಮಢನನೆ ನಿನ್ನ ಚರಣದ ಸೇವೆಯಕರುಣಿಸಬೇಕೆಂದು ತರುಣಿಯರು ||ಪರಿಪರಿಯಿಂದಲಿ ಸ್ಮರಿಸಿ ಹಾರೈಪರುಪುರಂದರವಿಠಲ ನೀನೇಳೊ ಹರಿಯೇ 5
--------------
ಪುರಂದರದಾಸರು
ರುದ್ರದೇವರು157ಪಾಹಿಮಾಂಪಾಹಿಪಾರ್ವತೀಪತೆಪ.ಪಾಹಿಪಾಹಿಗಂಗಾಹಿಮಕರಧರದೇಹಿಕ ಸುರತರೊ ಮೋಹನಮೂರ್ತೆ 1ದರ್ಪಕಮದಹರ ಅರ್ಪಕಮಂದರಸರ್ಪವಿಭೂಷಣ ಕರ್ಪುರಕಾಯ2ಗುಹಗಣಪತಿಪಿತ ಗಜಮಥನವೃಷವಾಹನಪೂಜಕ ವಾಹಿನಿಪಾಲ3ತ್ರ್ಯಂಬಕ ದುರಿತಕದಂಬ ನಿವಾರಕಸಾಂಬಸದಾಶಿವ ಅಂಬರಕೇಶ4ಕಪಟಿ ಜನಾರ್ದಕ ತಪನನಿಚಯಧುತೆತ್ರಿಪುರಾಂತಕ ಭವವಿಪಿನಕೃಶಾನೊ 5ಪ್ರಮಥಜನಾರ್ಥಿತ ಅಮಿತ ದಯಾನಿಧೆಸುಮತಿ ಕುಲೇಶ್ವರ ಕುಮತಿಖಳಾರೆ 6ಕರುಣಾಕರ ಸುಖಕರಣಭುವನನುತಚರಣಯುಗಳ ಖಳವಾರಣ ಪ್ರಹರಣ 7ಶೂಲಡಮರ ಸುಕಪಾಲಧರ ಶಿರೋಮಾಲಾನ್ವಿತ ಗುಣಜಾಲ ಸುಶೀಲ 8ಭಾಸುರಶುಭಕೈಲಾಸನಿಲಯಭೂತೇಶಪ್ರಸನ್ವೆಂಕಟೇಶ ಭಟೇಶ 9
--------------
ಪ್ರಸನ್ನವೆಂಕಟದಾಸರು