ಒಟ್ಟು 1158 ಕಡೆಗಳಲ್ಲಿ , 99 ದಾಸರು , 936 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ರಂಗನೆ ಬಾ ಮನಮಂದಿರಕೆ ಶೃಂಗಾರದ ಶ್ರೀ ಹರಿ ಶೌರೇ ಪ ನಗುತ ನಗುತ ಬಾ ಖಗವಾಹನ ಹರಿ ಬಗೆ ಬಗೆ ಕ್ರೀಡೆಗಳ ತೋರುತಲಿ ಝಗ ಝಗಿಸುವ ಪೀತಾಂಬರಧಾರಿಯೆ ಅಗಣಿತ ಗುಣನಿಧಿ ಬಾ ಹರಿಯೆ 1 ಪಕ್ಷಿವಾಹನ ಪುರುಷೋತ್ತಮ ಶ್ರೀಹರಿ ರಕ್ಷಿಸಿ ಕಾಪಾಡುವ ಜಗವ ಕುಕ್ಷಿಯೊಳಡಗಿಸಿ ಸಲಹುವ ಸುಜನರ ರಕ್ಷಿಸಿ ಪೊರೆಯಲು ಬಾ ಹರಿಯೆ 2 ಪೊಂಗೊಳಲೂದುತ ಮಂಗಳ ಚರಿತ ಹೃ- ದಂಗಳದೊಳು ನಲಿದಾಡುತಲಿ ಅಂಗಜಜನಕ ಗೋಪಾಂಗನೆ ಲೋಲ ಶ್ರೀ- ಮಂಗಳ ಮೂರುತಿ ಬಾ ಹರಿಯೆ 3 ಗಂಗಾಜನಕಗೆ ಭೃಂಗಕುಂತಳೆಯರು ರಂಗು ಮಾಣಿಕದಾರತಿ ಬೆಳಗೆ ಪೈಂಗಳನಾಮ ಸಂವತ್ಸರದಲಿ ಭವ ಭಂಗವ ಮಾಡಲು ಬಾ ಹರಿಯೆ 4 ಭ್ರಮರ ಕುಂತಳೆಯರು ಘಮಘಮಿಸುವ ಸುಮಮಾಲೆಗಳ ಕಮಲನಾಭ ವಿಠ್ಠಲಗರ್ಪಿಸುವರು ಶ್ರಮ ಪರಿಹರಿಸಲು ಬಾ ಹರಿಯೆ 5
--------------
ನಿಡಗುರುಕಿ ಜೀವೂಬಾಯಿ
ರಂಗನ್ಯಾಕೆ ಬಾರ ತಂಗಿ ಮಂಗಳ ಮಹಿಮನ ದಿವ್ಯಾಂಗವ ಕಾಣದೆ ಎನ್ನಕಂಗಳು ಕಂಗೆಡುತಿವೆಪ. ರಂಗುಮಾಣಿಕದುಂಗುರದಂಗುಲಿಯ ಸನ್ನೆಯಿಂದಪೊಂಗೊಳಲೂದುವನ ತೋರೆ ರಮಣಿ ಅ.ಪ. ತಿಂಗಳು ಮೂಡಿತು ಪಿಕ ಸಂಗೀತವ ತೊಡಗಿತುಭೃಂಗ ತನ್ನಂಗನೆಯರ ಸಂಗಡ ನಲಿದು ಬಂದಶೃಂಗಾರವನದ ಮೃದು ತಂಗಾಳಿ ಬೀಸಿತು ನೋಡಾ-ನಂಗ ನೆಚ್ಚ ಬಾಣಗಳೆಂತೊ ಅಂತರಂಗವ ತಾಕಿದರೆನ್ನ ಇಂಗಿತವರಿತು ದೇವೋ-ತ್ತುಂಗ ಕಾಯದಿರೆ ಉಳಿವಂಗನ ನಾಕಾಣೆ ನಮ್ಮಪೆಂಗಳಿಗೆ ಬಂದ ಬಲುಭಂಗ ತನ್ನದಲ್ಲವೆ ಸಾ-ರಂಗಾಕ್ಷಿ ಬೇಗವನ ತೋರೆ ರಮಣಿ 1 ಕೌಸ್ತುಭ ರತ್ನಕರ್ಣಕುಂಡಲಸರಸಿಜಮುಖದಿ ಕಸ್ತೂರಿ ತಿಲಕವೆಸೆಯೆಪರಿಮಳಿಸುವ ಪೂಮಾಲೆಮೆರೆಯೆ ಪೊಳೆವ ಪೀತಾಂಬರದ ಸುತ್ತಲೊಲೆವಕಿರುಗೆಜ್ಜೆ ಮಣಿಮಯಕಾಂತಿ ಮಿಂಚುತಿರಲುಚರಣನೂಪುರ ಘಲುಘಲುಕೆನೆ ಕುಣಿವÀ ಶ್ರೀಹರಿಯನು ಕರೆದುತಾರೆ ರಮಣಿ 2 ಮಂದಜಾಸನನ ತಂದೆಯೆಂದೆನಿಪ ಗೋವಿಂದನಕಂದರ್ಪ ವೃಂದಾದಿಗಳ ಕಂದಿಸುವ ಕುಂದಿಲ್ಲದಸೌಂದರ್ಯಸಂದೋಹದೊಳಗೊಂದೊಂದನಾರು ಬಲ್ಲರುಎಂದೆಂದಿವನನು ಪೊಂದಿಪ್ಪಇಂದಿರೆ ಇವನ ಗುಣಸಾಂದ್ರ ಕಿರುಬೆರಳಿನಂದವನೋಡುತ್ತ ಆನಂದಸಿಂಧುವಿನೊಳ್ಮುಣುಗಿದಳಿಂದು ಹಯವದನ ಮುಕುಂದನ ತಂದೆನ್ನ ಮುಂದೆಇಂದುಮುಖಿ ಕರೆದುತಾರೆ ರಮಣಿ3
--------------
ವಾದಿರಾಜ
ರಂಗಪ್ಪ ಬಂದವ್ನೆ ಬಾಗ್ಲಲ್ಲಿ ನಿಂತವ್ನೆ ಸಿಂಗಾರದಿಂದವ್ನೇ ತೆಂಗಿನಕಾಯ್ಬಾಳೆಹಣ್ತಂದು ನೋಡಿರೋ ಹೊಂಗೂಳನೊತ್ತವ್ನೇ ಪ ನಾಕ್ಮಳ ನಿಂತವ್ನೆ ನೀರಲ್ಲಿ ನಿಂತವ್ನೆ ನಾಕೈಯಾ ಪಡೆದವ್ನೇ ಇಕ್ಕೆಲದಲಿ ಸಂಕುಚಕ್ರವ ಹಿಡಿದವ್ನೆ ರಾಕ್ಷಸನ್ನ ಮೆಟ್ಟವ್ನೆ1 ಗಟ್ಟಿ ಬೆನ್ನಿನ ಮ್ಯಾಗೆ ಬೆಟ್ಟವ ಹೊತ್ತವ್ನೆ ಗಟ್ಟಿ ಗದೇ ಹಿಡಿದವ್ನೇ ಮಟ್ಟಸವಾದ ನಾಕ್ಕಾಲಲ್ಲಿ ನಿಂತವ್ನೆ ಸಿಟ್ಟಿಲ್ಲ ನಗತವ್ನೇ 2 ಮೊಳದುದ್ದ ಮೂಗ್ಯ್ಮಾಲೆ ಭೂಮಿಯ ಹೊತ್ತವ್ನೇ ಬೆಳಸವ್ನೇ ಕೋರೆಹಲ್ಲಾ ತೊಳಲಿಬಳಲವನಪ್ಪ ನಮ್ಮಪ್ಪ ರಂಗಪ್ಪ ಯೆಳನಗೆ ನಗ್ತಾನೇ 3 ಮೂಡ್ತವ್ನೆ ಕಂಬ್ದಲ್ಲಿ ನರಸಿಮ್ಮನಾಗವ್ನೆ ಹಿಡಿದವ್ನೆ ದೊಡ್ರಾಕ್ಷಸ್ನಾ ದೊಡ್ದುಗ್ರಲೊಟ್ಟೆಯ ಬಗಿತವ್ನೆ ಸಿಗಿತವ್ನೆ ಕೊಡುತೀನ್ವರವನೆಂತಾನೇ 4 ಗಿಡ್ಡ ಹಾರುವನಂತೆ ಮೂರೆಜ್ಜೆ ಭೂಮಿಯನಡ್ಡಡ್ಡ ಅಳೆದವ್ನೆ ಪಾಡ್ಯದ ಹಬ್ದಲ್ಲಿ ಬಲಿಯ ಕರೆತರುತಾನೆ ಬೇಡಿದ್ದ ಕೊಡುತಾನೇ 5 ಜಯ ಜಯ ಜಯವೆಂತಾನೇ ಕೈಯಲ್ಲಿ ಹಿಡಿದವ್ನೆ ಗಂಡುಗೊಲ್ಲಿಯ ನೋಡೋ ಭಯವಿಲ್ಲ ಕೈಮುಗಿಯೋ 6 ಶಿವನ ಬಿಲ್ಮುರಿದವ್ನೆ ರಾವಣನ ತರಿದವ್ನೆ ಭೂಮಿಯೆಲ್ಲವಾಳ್ತವ್ನೆ ತವಕದಿ ನೋಡಿರೆಲ್ಲಾ 7 ಮಡುವಿಗೆ ಧುಮುಕಿ ಕಾಳಿಂಗನ ತುಳಿದವ್ನೆ ಹಿಡಿದವ್ನೆ ಹೊಂಗೊಳಲಾ ಮಾನವ ಕಡುರೂಪವಂತ ನಮ್ಮ 8 ಮತ್ತರ ಮಡದೀರ ವ್ರತವನು ಕೆಡಿಸಲು ಬೆತ್ತಲೆ ನಿಂತವ್ನೇ ಕೃತ್ತಿವಾಸನ ಕೈಯ್ಯೊಳಿಂಬಾಗಿ ನಿಂದವ್ನೆ ಉತ್ತಮ ದೇವನಮ್ಮ 9 ದುರುಳರನೊದೆಯಾಕೆ ಹೊಂಟವ್ನೇ ಪದಕಮಲಕೆ ಯೆರಗೋ 10 ಮುದ್ದು ರಂಗಪ್ಪನಿಗೆ ಪೊಂಗಲು ನೇವೇದ್ಯ ಸಿದ್ಧ ಮಾಡಿರಯ್ಯಾ ಬದ್ಧವು ಅವ ನಮ್ಮ ಕಾಯೋದು ಸಟೆಯಲ್ಲ ಎದ್ದೆದ್ದು ತಲೆಬಾಗಿರೊ 11 ರಾಮನು ಅವನೇ ಕಾಮನಪ್ಪನು ನಿಸ್ಸೀಮ ನಮ್ಮ ರಂಗನೇ ರಾಮದಾಸನ ಮನದೊಳು ಮನೆ ಮಾಡ್ಯವ್ನೇ ಪಾಮರ ವರದನೆಂಬ ಮಾಂಗಿರಿ 12
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ರಂಗಯ್ಯ ಮನೆಗೆ ಬಂದರೆ ಅಂತ-ರಂಗದಿ ಗುಡಿಕಟ್ಟಿ ಕುಣಿವೆ ನಾ ಪ ಎಳೆ ತುಳಸಿವನ ಮಾಲೆಯು ರಂಗ-ಗೆಳೆ ನೀಲದ ಮೈಯ ಢಾಳವುಪೊಳೆವ ಪೊಂಗೊಳಲೊಪ್ಪೆ, ಚೆಲುವನು ನಮ್ಮನಿಲಯಕ್ಕೆ ಬಂದ ಭಾಗ್ಯವು ನೋಡ 1 ಬಾಡಿದ ಮಾವು ಪಲ್ಲವಿಸಿತು, ಹರಿನೋಡಲು ಜಗವು ಭುಲ್ಲವಿಸಿತುಕೂಡಿದ ಮನದ ತಾಪಗಳೆಲ್ಲ, ಎತ್ತ-ಲೋಡಿತೊ ಹರಿ ಬಂದ ಭರದಿಂದ ನೋಡ 2 ಬಿಸಿಲು ಬೆಳೆದಿಂಗಳಾಯಿತು, ತಾ-ಮಸಹೋಗಿ ಜ್ಞಾನೋದಯವಾಯಿತುಕುಸುಮನಾಭನು ತಾ ಬಂದರೆ ಅಲ್ಲಿವಿಷ ಹೋಗಿ ಅಮೃತವಾಯಿತು ನೋಡ 3 ಹಾವು ನ್ಯಾವಳವಾಯಿತು, ಅಲ್ಲಿದಾವಾನಳ ತಂಪಾಯಿತುಬೇವು ಸಕ್ಕರೆ ಆಯಿತು ನಮ್ಮದೇವಕಿಸುತ ಬಂದರೆ ನೋಡ 4ಜಾಣೇರರಸನೋಡು ರಂಗನು, ಅವತಾನಾಗಿ ಬೆನ್ನ ಬಿಡ ನಮ್ಮನುಏನಾದರೂ ಅಗಲದಲೆ ನಮ್ಮಮಾನಾಭಿಮಾನದೊಡೆಯ ಶ್ರೀ ಕೃಷ್ಣ 5
--------------
ವ್ಯಾಸರಾಯರು
ರಘುರಾಮಚಂದ್ರ ಬಾರೈ ಹರೆ ದಿವ್ಯ ರತ್ನಪೀಠಕೆ ಪ ದೇವತಾಳಿ ನುತಿಯ ಕೇಳಿ ಭಾವದಲ್ಲಿ ಮುದವ ತಾಳಿ ರಾವಣಾದಿ ದನುಜ ವೃಂದವ ಸೀಳಿ ಜಗವ ಪೊರೆದ ವಿಭುವೆ 1 ಇಂದು ಸುಂದರ ಫಾಲರಾಮ ಇಂದು ವಂಶಜಲೋಲ ದಶರಥನಂದನಾಶ್ರಿತ ವತ್ಸಲ ವಿಭುವೆ 2 ಪಂಕಜ ಮಲ್ಲಿಕಾಕುಸುಮಾಳಿ ಭಾಸುರ ಪುಲ್ಲ ಚಂಪಕ ಮಾಲಕ ರಂಜಿತ ಉಲ್ಲಸನ್ಮøದುವಾಣಿ ವಿಭುವೆ 3 ಭಕ್ತ ಹೃದಯ ಕುಮುದ ಚಂದ್ರ ಶಕ್ತಿವಿಜಿತ ರಾಕ್ಷಸೇಂದ್ರ ಭುಕ್ತಿ ಮುಕ್ತಿದಾಯಕ ವಿಭುವೆ 4 ಮಾನವೇಂದ್ರ ಸುರೇಂದ್ರ ವಂದಿತ ಸೂನ ಶರ ಸಹಸ್ರ ಸುಂದರ ಚಕೋರ ಧೇನುನಗರ ಶ್ರೀರಾಮ ವಿಭುವೆ5
--------------
ಬೇಟೆರಾಯ ದೀಕ್ಷಿತರು
ರಘುರಾಯ ಯನ್ನಮನವ ನಿಲಿಸಲಾಗದೇ ನಿನ್ನ ಚರಣ ಕಮಲಲಿದ್ದು ತನ್ನ ಹರಿ ಬೀಳದಂತೆ ಪ ಹನುಮನೊಡನೇ ಕಾಂತ ಮಾತ ಅನುವರದಲಿ ಆಡುತಿರಲು ವನಧಿ ಘೋಷವನ್ನೆ ಕಂಡು ವನಜ ಕರವನೆತ್ತಿಕೊಂಡು ನಿಲ್ಲಲು ಎನಲು ತ್ಯಜಿಸಿ ತನ್ನದರ್ಪನು ಆಸ್ಥಳದಿ ಧರೆಯದೋರಿ ಸುಮ್ಮನಿಪ್ಪನು ಆಂದಿಗಿಂದಿಗಿನಿತು ವಾಕ್ಯ ಮೆರೆದಪ್ಪನು 1 ಶರಧಿ ಮಥನದಲ್ಲಿ ಮುಣುಗು ತಿರಲು ಗಿಲಿಯನೆತ್ತಿ ನಿಳಹಿ | ಹೊರೆದೆ ಸುರರ ಬಳಿಕಧರಣಿ ಹಿರಣ್ಯಾಕ್ಷ ವಯ್ಯಲಾಗ ವರಹರೂಪದಿಂದ ಮೂಡಿದೇ ಈ ಜಗವ ಕೊರೆದಾಡಿ ಲೆತ್ತಿ ಆಡಿದ ಅಧೃವನ ತಿರಗದಂತೆ ಅಢಳ ನೀಡಿದೆ 2 ನಿನ್ನ ಕಥೆಯ ಶ್ರವಣಮಾಡಿ ನಿನ್ನ ನೋಡಿ ಕೂಡಿ ಪಾಡಿ ನಿನ್ನ ನಿರ್ಮಾಲ್ಯ ಘ್ರಾಣಿಸುತಲಿ ನಿನ್ನದಾಸ ನೆನಿಸಿ ಧನ್ಯಗತಿಯ ಪಡೆವ ತೆರದಲಿ ನಿಲಿಸಬೇಕು ಎನ್ನ ಮನವ ಕರುಣದಿಂದಲಿ ಮಹಿಪತಿಸುತನ್ನ ಸ್ವಾಮಿ ಸಲಹು ಜಗದಲಿ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ರತುನ ದೊರಕಿತಲ್ಲ | ಎನಗೆ ದಿವ್ಯ ರತುನ ದೊರಕಿತಲ್ಲ ಪ ರತುನ ದೊರಕಿತು ಎನ್ನ ಜನುಮ ಪ ವಿತರವಾಯಿತು ಈ ದಿನದಿ ನಾ ಯತನ ಗೈಯುತ ಬರುತಿರಲು ಪ್ರ ಯತನವಿಲ್ಲದೆ ವಿಜಯರಾಯರೆಂಬೊ ಅ.ಪ. ಪಥದಿ ನಾ ಬರುತಿರಲು ಥಳಥಳವೆಂದು ಅತಿ ಕಾಂತಿ ಝಳಪಿಸಲು ಬೆರಗಾಗುತ್ತ ಅತಿ ಚೋದ್ಯವ ಕಾಣಲು ಸೇವಿಸುತಿರೆ ಸತತ ಕರಪಿಡಿದಾದರಿಸಿ ಮನೋ ರಥವ ಪೂರೈಸುತಲಿ ದಿವ್ಯ | ಸ ನ್ಮತಿಯ ಪಾಲಿಸಿ ಮೋಕ್ಷ ಸುಪಥವ ಅತಿಶಯದಿ ತೋರುತ್ತ ಪೊರೆದ 1 ಪುತ್ಥಳಿ ಕಂಬಿಯಲ್ಲಿ ಸುಕೃತ ಮಾಲಾ ನಾನಾವಿಧ ಹವಳದಲಿ ಸೇರಿಸುತಲಿ ಪ್ರಾಣ ಪದಕವೆಂಬ ಮಾಲೆಯನು ಅನು ಮಾನವಿಲ್ಲದೆ ಕೊರಳಿಗ್ಹಾಕುತ ಗಾನದಿಂ ಕುಣಿಯುತ್ತ ಪಾಡುತ್ತ ದೀನ ಜನರುದ್ಧಾರ ಗೈಯುವ 2 ಶೋಧಿಸಿ ಗ್ರಂಥಗಳ - ಸುಳಾದಿಯ ಮೋದದಿಂದಲಿ ಬಹಳ ಕವಿತೆ ಮಾಡಿ ಸಾಧುಜನಕೆ ಸಕಾಲ ಆನಂದ ವಿತ್ತು ವಾದಿಜನರನು ಗೆದ್ದು ಬೋಧಿಸಿ ಮಾಧವ ಜಗನ್ನಾಥ ವಿಠಲನ ಪಾದ ಕಮಲಕೆ ಮಧು ಪನಂದದಿ ಸಾದರದಿ ತೋರುತ್ತ ಮೆರೆಯುವ 3
--------------
ಜಗನ್ನಾಥದಾಸರು
ರಥವನೇರಿದ ರಥಗಾತ್ರ ಪಾಣಿ | ರಥಪತಿ ದಶರಥ ಸುತ ದಶರಥ ನೃಪ ಭಾಗೀ | ರಥಿ ವಿನುತಾ ಸು | ರಥನಯ್ಯ ಮನೋರಥ ದೇವ ಪ ಕರಿ ಭಯಂಕ ಹರ ಹರಿಣಾಂಕಾ | ಕಿರಣಶತ ಧಿಕ್ಕರಿಸುವ ದೇವಾ || ವರಮಣಿ ಭಕ್ತ ವರದಾಯುದಧಿ ತುರಗವು | ಪರತರ ತಮ ತರರಸ | ಪರಮ ಮಂಗಳ ಪುರುಷ ಪ್ರಧಾನಂ | ಪ್ರವಿಷ್ಠ ಭಾ | ಸುರ ಕೀರ್ತಿಹರ ನಿರುತ ಪ್ರದರು ಸುರಪತಿ 1 ಮಣಿಪ್ರಚುರ ಮುತ್ತಿನ ಮುಕುಟ ಸು | ಫಣಿ ಕಸ್ತೂರಿ ಕಂಕಣ ಕೇಯೂರ ಕಾಂ| ಕೌಸ್ತುಭ ಸೂರ್ಯನಗೆಲ್ಲ್ಲೆ | ವನಮಾಲೆ ಹರಿಮಣಿ ಪದಕ ಪಾ | ವನ ಪೀತಾಂಬರ ಮಿನಗುವ ಕಾಂಚಿ | ಝಣ ಝಣ ಮಹಾ | ಧ್ವನಿ ಚರಣ ಭೂಷಣವಾಗಿಯೂ ಮಾ | ನಿನಿ ಕೂಡಾ 2 ಎತ್ತಿದ ಶ್ವೇತಾತಪತ್ರ ಚಾಮೀಕರ | ವಿತ್ತ ನಭ ತುಳುಕುತ್ತಲಿರೆ ಧ್ವಜ | ಮಾತ್ರ ಬಂದಾಗಿ ತೂಗುತ್ತಿರಲು | ಸುತ್ತಲು ಊದುವ ತುತ್ತುರಿ ಶಂಖ | ವತ್ತಿ ಬಾರಿಸುವ ಮತ್ತೆ ವಾದ್ಯಗಳು | ತುತ್ತಿಸುವ ಮುನಿ | ಉತ್ತಮ ಜನ ಬಾ | ಗುತ್ತ ವಡನೆ ಬರುತಿರಲು 3 ವಸು ರುದ್ರಾದಿತ್ಯ ವಸುಜನರ ಪಾ | ಲಿಸುವೆನೆಂದು ದರಶನವು ಸರಸಿಜಗದಾಧರಿಸಿಕೊಂಡು ಅಷ್ಟ ರಸ ನಾಮಕ ಹರುಷದಿಂದ | ನಸುನಗುತ ನೀಕ್ಷಿಸಿಕೊಳುಂತ ಆ | ಲಸ ಮಾಡದೆ ರಂ | ಜಿಸುವ ಲೀಲಾಮಾನಸ ವಿಗ್ರಹ ಮೆ | ಚ್ಚಿಸಿದ ಜನರ | ವಶವಾಗಿಪ್ಪ ರಾಕ್ಷಸ ರಿಪು 4 ವನಧಿ ಚಿನ್ಮಯ ಉ | ಭಯಾ ಭಯ ಹಾರೆ | ಪಯೋವಾರಿ ನಿಧಿ | ಶಯನ ಚತುರ್ಬೀದಿಯಲಿ ತಿರುಗಿ | ಪ್ರೀಯದಿಂದಲಿ ಸ | ತ್ಕ್ರಿಯವಂತ ಜಯ ಜಯ ಪ್ರದಾ | ಸಾರಥಿ ನಿ | ರಯ ವಿದೂರ ವಿಜಯವಿಠ್ಠಲ ಸಾ | ಹಾಯವಾಗುವ ಗಿರಿಯ ವೆಂಕಟರಾಯ ಬಂದಾ 5
--------------
ವಿಜಯದಾಸ
ರಮಾ ಮನೋಹರನೆ ದೀನ - ಪತಿತಪಾವನಾ ಪ ಚೆಂದದಿಂದ ವೇದ ತಂದ ಮಂದರೋದ್ಧಾರಾ ಅರ ವಿಂದನಯನ ಬಂಧು ರಕ್ಷಿಸೊ ಇಂದು ಭೂಧರಾ 1 ಕರುಳಮಾಲೆ ಧರಿಸಿದ ಶ್ರೀ ವರದ ವಾಮನಾ ಧೃತ ಕರದ ಪರಶುರಾಮ ರಾಘವ ಯರು ಕುಲೋತ್ತಮಾ 2 ಲೋಕ ಮೋಹಕ ಬುದ್ಧನಾಗಿ ತೇಜಿಯೇರಿದಾ ಜಗ ದೇಕ ಜಗನ್ನಾಥ ವಿಠಲ ಭೀಕರಾಂತಿಕಾ 3
--------------
ಜಗನ್ನಾಥದಾಸರು
ರಾಘವೇಂದ್ರ ಗುರು ನಮೋ ನಮೋ ಯೋಗಿಜನೇಡಿತ ನಮೋ ನಮೋ ಪ ವಾದಿಜಯಪ್ರದ ನಮೋ ಸಾಧುಜವಾವ ನಮೋ ನಮೋಶ್ರೀಧರ ಬೋಧಕ ನಮೋ ಅಗಾಧತವ ಮಹಿಮ ನಮೋ 1 ಎಷ್ಟು ದಿನವಾಯಿತು ನಮೋ ಶ್ರೀ ಕೃಷ್ಣನ ಕಾಣದೆ ನಮೋಭೆಟ್ಟಿಯ ಮಾಡಿಸು ನಮೋ ವಿಷ್ಣು ದಾಸರೇಣ್ಯನೆ ನಮೋ 2 ತುಷ್ಟ ಮುಖಾಯ ನಮೋ ಶಿಷ್ಯರು ಸೇವಿಸೆ ನಮೋದೃಷ್ಟಿಲಿ ಕಳೆಯುವಿ ನಮೋ ಸರ್ವೇಷ್ಯವರಪ್ರದ ನಮೋ 3 ಚೂತರಸದಿ ಹರಿ ನಮೋ ಪೋತನು ಬೀಳಲು ನಮೋಆ ತನು ತ್ಯಜಿಸಿದ ನಮೋ ಜೀವಾತು ನೀನಾದೆ ನಮೋ 4 ವರಜಯತೀರ್ಥರ ನಮೋ ಸುರಸ ಸುಗ್ರಂಥಕೆ ನಮೋಪರಿಮಳ ಟೀಕೆಯ ನಮೋ ವಿರಚಿಸಿ ರಾಜಿಪೆ ನಮೋ 5 ರತುನಮಾಲಿಯ ನಮೋ ಹುತವಹಗಿತ್ತೆಯೋ ನಮೋಅತಿಶಯ ಪ್ರಾರ್ಥಿಸೆ ನಮೋ ಪ್ರಥಮ ತೆಗೆದುಕೊಟ್ಟೆ ನಮೋ 6 ನಾರದ ಶಿಷ್ಯನೆ ನಮೋ ನಾರಸಿಂಹಾರ್ಚಕ ನಮೋಸೇರಿ ಭಜಿಸಿ ನಿಮ್ಮ ನಮೋ ಎನ್ನ ಚಾರುದೃಷ್ಟಿಲಿನೋಡು ನಮೋ 7 ನಾಕವತಾರನೆ ನಮೋ ಲೋಕನಾಥಾಶ್ರಯ ನಮೋಕಾಕು ದರ್ಮತ ಹರ ನಮೋ ಶ್ರೀಕರ ಸೇವಕ ನಮೋ 8 ವೃಂದಾವನದಲಿ ನಮೋ ನಮೋ ಭಕ್ತ ವೃಂದರಲಿಂದು ನೀ ನಮೋಬಂದು ಮಾತಾಡುವಿ ನಮೋ ಇಂದಿರೇಶನ ಪ್ರಿಯನಮೋ ನಮೋ 9
--------------
ಇಂದಿರೇಶರು
ರಾಜ ಶಿರೋಮಣಿ ದಯಮಾಡೈ ಪ ಕಾಲವಿಭೀತಿಯಿಂ ಬಾಲನು ಗೋಳಿಡೆ ಶೂಲದೆ ಕಾಲನ ಸಂಹರಿಸಿದೆ 1 ಕ್ಷೀರಾಭ್ದಿ ಮಧ್ಯದೊಳ್ ಹಲವು ಪುಟ್ಟಲು ಲೀಲೆಯೊಳೆಲ್ಲವ ನೀಂಟಿದೆ 2 ಕೈಲಾಸವಾಸ ಶೈಲಾಪ್ತ ಬಂಧುವೆ ಬಾಲರಾಜಾಂಚಿತ ಭೂಷಣ 3 ನಿರ್ಮಲರೂಪ ನಿಷ್ಕಲ ಸ್ವರೂಪ ಬ್ರಹ್ಮಮಸ್ತಕ ಕಾಲರೂಪ 4 ಫಾಲಾಕ್ಷದೇವ ಮಾಲಾ ಮನೋಹರ ನೀಲಲೋಹಿತ ಧೇನುಭೂಪತೆ 5
--------------
ಬೇಟೆರಾಯ ದೀಕ್ಷಿತರು
ರಾಜೀವದಳನೇತ್ರ ರಾಮಚಂದ್ರನೆ ಶುಭ- ನಾಮಧೇಯನೆ ನಿನಗಾನಮಿಸುವೆನು ಪ ರಾಮರಾಕ್ಷಸಕುಲ ಭಯಂಕರ ರಾಮದಶರಥ ಪುತ್ರನೆ ವರ ಸಾಮಗಾನ ವಿಲೋಲ ಶ್ರೀವರ ರಾಮ ಭರತ ಶತ್ರುಘ್ನ ಪಾಲಕ ಅ.ಪ ಸುರರೆಲ್ಲ ನೆರೆದು ಋಷಿವರರೆಲ್ಲ ಒಂದಾಗಿ ವರ ಕ್ಷೀರಾಂಬುಧಿಯ ಸಾರುತ ವೇಗದಿ ಪರಮಾತ್ಮ ನಿನ ಕಂಡು ಪರಿಪರಿ ಸ್ಮರಿಸುತ ನೆರೆದರು ದೇವ ಗಂಧರ್ವ ನಾರದರೆಲ್ಲ ಗರುಡ ಗಮನನೆ ಉರಗಶಯನನೆ ಪರಮ ಪುರುಷನೆ ಪುಣ್ಯಚರಿತನೆ ತ್ವರದಿ ಎಮ್ಮಯ ಮೊರೆಯ ಕೇಳೆಂದು ಭರದಿ ಪ್ರಾರ್ಥನೆ ಮಾಡುತಿಹರು 1 ಖೂಳ ದೈತ್ಯರು ನಮ್ಮ ಬಾಳಗೊಡರೊ ದೇವ ಭಾಳ ವ್ಯಾಕುಲರಾಗಿ ದು:ಖಿಪೆವು ಕೇಳಿ ತಡಮಾಡದೆ ಪಾಲಿಸಿ ಸಲಹಯ್ಯ ಶ್ರೀಲೋಲ ಶ್ರೀವರ ಶ್ರೀವತ್ಸಲಾಂಛನ ಶ್ರೀಶ ಶ್ರೀ ಭೂದೇವಿ ರಮಣನೆ ಮಾತುಳಾಂತಕ ಮದನಜನಕನೆ ವಾಸುದೇವನೆ ಭಜಿಪ ಭಕ್ತರ ಸೋಸಿನಲಿ ರಕ್ಷಿಸುತ ಪೊರೆಯುವೆ 2 ಭಕ್ತವತ್ಸಲ ಸ್ವಾಮಿ ಭಕ್ತರ ಸುರಧೇನು ಯುಕ್ತ ಮಾತುಗಳಾಡಿ ಸಂತಯಿಸಿ ಸತ್ಯ ಸಂಕಲ್ಪನು ಮತ್ತವರನು ಕಳುಹಿ ಸತ್ಯಸಂಧನ ದಶರಥನುದರದಿ ಪುಟ್ಟಿ ಮತ್ತೆ ವಿಶ್ವಾಮಿತ್ರ ಬರಲು ಅರ್ಥಿಯಲಿ ಯಾಗವನೆ ನಡೆಸಲು ಸುತ್ತಿ ಬರುವ ಸುರರನೆ ಸದೆದು ಮತ್ತೆ ಯಾಗ ನಿರ್ವಿಘ್ನ ಮಾಡಿದ 3 ಸೀತಾಸ್ವಯಂವರಕ್ಕಾಗಿ ಬರುತಿರಲಾಗವರು ಗೌತಮ ಸತಿಯ ಶಾಪಹರಿಸಿ ಪಾತಕಿ ತಾಟಕಿಯನು ಕೊಂದು ಹರುಷದಿ ನಿ- ರ್ಭೀತನಾಗಿ ಮಿಥಿಲಾಪುರಕೆ ಸೇರಲು ಬಂದು ಆತ ಲಕ್ಷ್ಮಣನೊಡನೆ ಶಿವಧನು ನೀತಿಯಿಂದೆತ್ತುತಲಿ ಸೀತೆಯು ಪ್ರೀತಿಯಲಿ ವನಮಾಲೆ ಹಾಕಲು ಆಕೆಯ ಕೈಪಿಡಿದ ರಾಮನೆ 4 ರಾಮಲಕ್ಷ್ಮಣ ಭರತ ಶತ್ರುಘ್ನರಿಗೆ ಲಗ್ನ ನೇಮದಿಂದಲಿ ಮಾಡಿ ಕಳುಹಲಾಗ ಸಾಮಜವರ ಅಯೋಧ್ಯಾಪುರದಿ ಭಕ್ತ- ಸ್ತೋಮವನೆರಹಿ ರಾಜ್ಯಾಭಿಷೇಕವ ನಡಸೆ ಆ ಮಹಾಮುನಿ ಸ್ತೋಮ ಸುರಗಣ ರಾಮನಿಗೆ ಪಟ್ಟವೆನುತ ಹರುಷಿಸೆ ಆ ಮಹಾಕೈಕೆ ವರವ ಬೇಡುತ ರಾಮನಿಗೆ ವನವಾಸವೆನಲು 5 ವನವನ ಚರಿಸುತ ಘನರಕ್ಕಸರ ಕೊಂದು ವನಜಾಕ್ಷಿ ಮಾಯಾಮೃಗವೆ ಬೇಡಲು ವನಮೃಗ ಬೆನ್ನಟ್ಟಿ ತರುವೆನೆನುತ ಪೋಗಿ ಬಣಗು ರಾವಣ ಸೀತಾಹರಣವ ಮಾಡಲು ಕುರುಹು ಕಾಣದೆ ಸೀತೆಯ ವನವನದಿ ಚರಿಸುವ ಸಮಯದಲಿ ಕಪಿ ವರರ ಸೈನ್ಯವ ಕಳುಹಿ ಮುದ್ರಿಕೆ ಇತ್ತು ಜನಕ ಜಾತೆಯ ನೋಡಿ ಬರಲು 6 ಕಡಲ ಕಟ್ಟುತ ಸೈನ್ಯ ನಡಿಸಿ ಯುದ್ಧವ ಮಾಡೆ ಬಿಡದೆ ರಾವಣ ಸಹಿತೆಲ್ಲರನು ಕೊಂದು ಕಡು ಭಕ್ತನಿಗೆ ಲಂಕಾಪುರದಲಿ ಪಟ್ಟವ ಕಟ್ಟಿ ಮಡದಿ ಸಹಿತ ಪುಷ್ಪಕವನೇರಿ ಬರುತಿರೆ ಸಡಗರದಿ ಹನುಮಂತ ಭರತಗೆ ಒಡೆಯ ಬರುತಿಹನೆಂದು ಪೇಳಲು ಕಡುಹರುಷದಿ ಅಯೋಧ್ಯೆಯನಾಳಿದ ಕಡಲೊಡೆಯ ಕಮಲನಾಭ ವಿಠ್ಠಲನೆ 7 ಬಂದ ಶ್ರೀರಾಮಚಂದ್ರ ಭಾಗವತರ ಕೂಡಿಇಂದಿರೆ ಜಾನಕಿ ಸೌಮಿತ್ರಿ ಸಹಿತದಿ
--------------
ನಿಡಗುರುಕಿ ಜೀವೂಬಾಯಿ
ರಾಮ ಪೀಠಮಾಶ್ರಯ ಕಾಮಕೋಟಿ ಮೋಹನಾಂಗಕ ಶ್ರೀ ಪ ಸೂರ್ಯಕುಲ ಮಾಲಿಕಾಮಣಿ ಆರ್ಯವಂಶ ದಿವ್ಯ ಮೌಕ್ತಿಕ ಶ್ರೀ 1 ಇಂದು ಸುಂದರಾಸ್ಯ ರಾಘವ ಶ್ರೀ 2 ವೈರಿವನ ದಾವಪಾವಕ ವೀರ ವರರಘು ನಂದನ ಶ್ರೀ 3 ಭೂಮಿಸುತ ಪ್ರಾಣನಾಯಕ, ಮಾಮಿತಾರ್ಥ ಫಲದಾಯಕ 4 ಭಾನು ಶತಕೋಟಿಭಾಸುರ ಧೇನುಪುರನಾಥ ಶ್ರೀಕರ 5
--------------
ಬೇಟೆರಾಯ ದೀಕ್ಷಿತರು
ರಾಮಚಂದ್ರ ರಘುವೀರಾ ನಮೋ ನಮೋ ಪ ಶ್ಯಾಮಾಂಗ ಸುಕುಮಾರಾ ನಮೋ ನಮೋ ಕಾಮಿತಾರ್ಥದಾತಾರಾ ನಮೋ ನಮೋ ಓಂಕಾರ ಅ.ಪ ವಸಿಷ್ಟಾದಿಮುನಿ ತೋಷಿತ ನಮೋ ನಮೋ ನಿಶಚರೇಭ ಕುಲಕಾಲಾ ನಮೋ ನಮೋ ಶ್ರೀ ಬಾಲಾ 1 ನೀತಿಸುಗುಣಯುತಶೀಲಾ ನಮೋ ನಮೋ ಘನಲೀಲಾ 2 ಮಾರೀಚಾಂತಕ ವೀರಾ ನಮೋ ನಮೋ ಶ್ರೀಕಾರಾ 3 ಖ್ಯಾತ ಮೃದುವಾಕ್ ದೀಪ್ತಾ ನಮೋ ನಮೋ ಸಂತೃಪ್ತಾ4 ಪರಮ ಪುಣ್ಯಚರಿತ್ರಾ ನಮೋ ನಮೋ ಶ್ರೀಗಾತ್ರಾ 5 ಅರಿಕುಲ ನಾಶಕ ರಂಗಾ ನಮೋ ನಮೋ ಶ್ರೀರಂಗ 6 ದೇವ ದಿವಿಜನುತ ನಮೋ ನಮೋ ಶ್ರೀರಾಮಾ 7 ನಿತ್ಯ ಮುಕ್ತ ವನಮಾಲಾ ನಮೋ ನಮೋ ಭೂಪಾಲಾ8 ಮಾಂಗಿರೀಶ ಮಾಲಿಂಗಾ ನಮೋ ನಮೋ ಶ್ರೀರಂಗ 9
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ರುದ್ರ (ಶಿವ) ಸ್ತುತಿ ಲೋಕರಕ್ಷಕನೆಂಬೊ ಹರ ಗಂಗಾಧರಗೆ ಪ ನೀಕಮಲಮುಖಿ ಅಖುವೈರಿ ಅ- ನೇಕ ಮೈಯೊಳು ಸುತ್ತಿಕೊಂಡು ವಿ- ವೇಕವಿಲ್ಲದೆ ವಿಷವನುಂಡ ಪಿ- ನಾಕಧರನಿಗೆ ಸೋಲುವುದೆ ಅ.ಪ ಶಿರದೊಳು ಶಶಿಯ ಕೆಂಜಡೆಯಿಪ್ಪಭೋಗಿ ಸ್ಮರನದಹಿಸಿ ಭಸ್ಮ ಹಣೆಗಿಟ್ಟಯೋಗಿ ಇರುವೊಡೆ ಸ್ಥಳವಿಲ್ಲ ದಂತೆ ತಾ ಪೋಗಿ ಬೆರೆವ ಸ್ಮಶಾನ ಮಂದಿರ ಸುಖವಾಗಿ ಬರಿದೆ ಒಲಿವುದೆ ಗರುವೆ ಪಾರ್ವತಿ1 ಜಾಹ್ನವಿ ಶಶಿಯನ್ನೆ ಮಾಡಿ ರುಂಡಮಾಲೆಗಳ ಕೊರಲೊಳಗಿಟ್ಟು ಆಡಿ ಕುಂಡಲಗಳ ಧರಿಸಿರುವನ ನೋಡಿ ಖಂಡಪರಶುವೆಂದು ಅವನ ಕೊಂಡಾಡಿ ದಿಂಡೆಯಾಹ ಪ್ರಾಯದವಳು ನೀ ಕಂಡು ನೀನವ ಗಂಡನೆಂದು ಪ್ರಾ- ಚಂಡಗೊಲಿದಿಹೆ ಸರಿಯೆ ಪಾರ್ವತಿ 2 ವಿರಚಿಸುವ ಲೀಲಾವಿನೋದನ ವರದ ಶ್ರೀ ಗುರುರಾಮವಿಠಲನ ಪರಮ ಪ್ರಿಯ ಪರಮೇಶ ಶಿವಗೆ 3
--------------
ಗುರುರಾಮವಿಠಲ