ಒಟ್ಟು 3655 ಕಡೆಗಳಲ್ಲಿ , 119 ದಾಸರು , 2543 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕೆಂಪು ಮೂಗಿನ ಪಕ್ಷಿ ತಂಪಿನೊಳಿರುವುದುನೆಂಪು ಬಲ್ಲವರು ಪೇಳಿ ಪ ಹಂಪೆಯ ವಿರೂಪಾಕ್ಷ ಲಿಂಗನಲ್ಲಿಝಂಪೆಯನಾಡುತಿಹುದು ಅ ಆರು ತಲೆ ಹದಿನಾರು ಕಣ್ಣುಗಳುಂಟುಮೂರು ಮೂರು ನಾಲಗೆಬೇರೆ ಹನ್ನೆರಡು ಕಣ್ಣು ಕಿವಿಗಳುಂಟುಸೇರಿತು ತೆಂಕಲಾಗೆ 1 ಬಲೆಯ ಬೀಸಿದರು ಸಿಕ್ಕದಾ ಮೃಗಜಲದೊಳು ತಾ ನಿಲ್ಲದುನೆಲನ ಮೇಲಿರುವುದು ನಿಂತರೆ ಸಾವುದು ಕುಲದೊಳಗಾಡುತಿಹುದು 2 ಸಕಲ ಕಲೆಯು ಬಲ್ಲ ಸೀತಳ ಮಲ್ಲಿಗೆಬೇರೆ ಬೇರೆನಬಹುದುಚೆನ್ನ ಕೇಶವನಲ್ಲಿ ಕೃಪೆಯುಂಟಾದರೆಅಲ್ಲುಂಟು ಇಲ್ಲಿಲ್ಲವೆ 3
--------------
ಕನಕದಾಸ
ಕೇಳಕ್ಕಯ್ಯ ನಾ ಮಾಡಿದ ಮದುವೆ ಮನಸಿಗೆ ಬರುತ್ತದೆಕೇಳಕ್ಕಯ್ಯ ನಾ ಮಾಡಿದ ಮದುವೆ ಮನಸ್ಸಿಗೆ ಬರುತ್ತದೆ ಪ ಮುಂಡಕೆ ದಂಡೆಯ ಮಾಡಿಸಿದೆ ಮುಸುಕಲಿ ಸೋಭಾನ ಮಾಡಿದೆಮುಂಡಕೆ ರುಂಡವ ಕೂಡಿಸಿದೆ ಮಂಗಳಾರತಿ ಬೆಳಗಿಸಿದೆ 1 ಕೋತಿಯು ಅಲ್ಲಿ ಕುಣಿಯುತ್ತಿತ್ತು ಕೋಣವು ಮದ್ದಲೆ ಬಾರಿಸುತ್ತಿತ್ತುಕೋತಿಯ ಕಾಲನೆ ಮುರಿದೆ ಕೋಣನ ಮದ್ದಲೆ ಮುರಿದೆ2 ಹಾರುವವನನು ಕಟ್ಟಿ ಹಾಕಿಸಿದೆ ಹಾದಿಲಿ ದೀಪವ ಹಿಡಿಸಿದೆಮೂರು ಮನೆಯ ಮೇಲಟ್ಟದಲ್ಲಿ ಮೆರವಣಿಗೆಯನೆ ಮಾಡಿಸಿದೆ3 ಒಳ್ಳೆ ಬೀಗರ ಬೆಳ್ಳಿ ತಳಿಗೆಯಲ್ಲಿ ಎಲ್ಲರ ಒತ್ತೊತ್ತಾಗಿ ಕೂರಿಸಿದೆಬೆಲ್ಲದ ಪರಮಾನ್ನವನೆ ಉಣಿಸಿದೆ ಬೆಳ್ಳನೆ ಉಡುಗೊರೆ ಹೊದಿಸಿದೆ 4 ಗುಡ್ಡ ಮೂರ ಕೊನೆಯಲಿದ್ದ ಅಡ್ಡಗಲದೆ ದೇವರ ಮನೆಗೊಯ್ದುದೊಡ್ಡ ಚಿದಾನಂದ ಗುರುವಿಗೆ ನಾ ಅಡ್ಡಗೆಡವಿ ಮದುವೆ ಮಾಡಿಸಿದೆ5
--------------
ಚಿದಾನಂದ ಅವಧೂತರು
ಕೇಳಲೊಲ್ಲನೆ ಎನ್ನ ಮಾತನು ರಂಗ ಪ. ಕಾಳೀಮರ್ದನ ಕೃಷ್ಣಗೆ ಹೇಳೆ ಗೋಪ್ಯಮ್ಮ ಬುದ್ಧಿಅ. ಪ.ಬಿಟ್ಟ ಕಣ್ಣನು ಮುಚ್ಚಲೊಲ್ಲನೆ ದೊಡ್ಡ ಬೆಟ್ಟಕ್ಕೆ ಬೆನ್ನೊತ್ತಿ ನಿಂದನೆ ಬಲುಸಿಟ್ಟಲಿ ಕೋರೆ ಹಲ್ಲ ಕಿರಿದನೆ ಈಗಗಟ್ಟಿ ಉಕ್ಕಿನ ಕಂಬವೊಡೆದು ಬಂದನೆ ರಂಗ1 ಮೂರಡಿ ಭೂಮಿ ಬೇಡಿ ಬಂದನೆ ತಾಯ- ಶಿರವ ಕಡಿಯಲಿಕೆ ಕೊಡಲಿ ತಂದನೆನಾರಸೀರೆಯನುಟ್ಟುಕೊಂಡನೆ ಬಲುಚೋರತನÀದಲಿ ಹರವಿಹಾಲ ಕುಡಿದನೆÉ ರಂಗ 2 ಬತ್ತಲೆ ನಾರಿಯರ ಅಪ್ಪಿದ ಹೋಗಿಉತ್ತಮ ಅಶ್ವವ ಹತ್ತಿದಹತ್ತವತಾರವ ತೋರಿದ ದಿಟ್ಟಮೂರ್ತಿ ನಮ್ಮ ಚೆಲುವ ಶ್ರೀ ಹಯದವನ 3
--------------
ವಾದಿರಾಜ
ಕೇಳಿರೈ ಶಿವಶರಣರು ಹೇಳಲಂಜಿಕೆ ಆವುದು ಪ ಭಾಳನೇತ್ರನ ಭಕ್ತರಿಂತು ನೋಡಿಕೊಳ್ಳಿರೈಅ ಮೂರುಲಿಂಗ ತನ್ನೊಳು ಮುಖ್ಯವಾಗಿರುವಾಗಬೇರೊಂದು ಲಿಂಗ ಬೆಲೆ ಮಾಡಿ ತಂದುತೋರುವಂಗೈಲಿಟ್ಟು ತೋಯ ಪುಷ್ಪವ ನೀಡಿಯಾರ ಮನಕೊಪ್ಪಿಸುವರೀ ಶೀಲವಂತರು 1 ಲಿಂಗವೊಂದು ತನ್ನೊಳು ಲೀನವಾಗಿರುವಾಗಅಂಗಭವಿಗಳು ಕೂಡಿ ಆಡಿಕೊಂಬರುಅಂಗದನುಭವದರ್ಥವನರಿಯದ ಇಂತಹಭಂಗಿ ಹುಚ್ಚರೆಲ್ಲ ಶಿವನ ಭಕ್ತರಹರೆ 2 ನಾಗಲಿಂಗ ತನ್ನೊಳು ನಾಟ್ಯವಾಡುತಲಿರಲುಆಗಮಿಸಿದ ಲಿಂಗವ ಬೆದಕಲೇತಕ್ಕೆಕಾಗಿನೆಲೆಯಾದಿಕೇಶವನೆ ನಾಗಶಯನನಾಗಿರಲು ಬೇರೊಂದನರಸಲೇತಕ್ಕೆ 3
--------------
ಕನಕದಾಸ
ಕೇಳಿರೋ ಕೇಳಿರೋ ಆನಂದ ನುಡಿಗಳ | ಜಾಳಿಲಿ ದೋಷವ ಹರಿನಾಮ ನೆನೆಯುತ | ಕೇಳಿ ಕೇಳಿ ಕೇಳಿ ಕೇಳಿ ಪ ಯುಗದಂತಿಲಿ ಸರ್ವ ಮತವೆಲ್ಲ ಕೆಡಲಾಗಿ | ಜಗದೋದ್ಧಾರ ಜಗದೀಶ ಬರು ತಾನೆ 1 ಸ್ವ ಶಕ್ತಿ ಕುದುರೆಯ ನೇರಿ ರಾವುತನಾಗಿ | ಅಸಮ ಪೊನ್ನೀಟೆಯ ಹಿಡಕೊಂಡು ಬರುತಾನೆ2 ನಾಕು ವೇದಗಳೆಂಬಾ ಕುದುರೆಯ ಕಾಲವು | ಬೇಕಾದ ಅವಯವ ಆರು ಶಾಸ್ತ್ರಗಳಿವೆ3 ಮೂರು ಪೌರಾಣ ಶೃಂಗಾರಾಭರಣವು | ಶರಣವತ್ಸಲನೆಂಬ ಕಡಿವಾಣ ಕುದುರೆಗೆ4 ಬೋಧ ಹಕ್ಕರಿಕೆಯು | ಭಾವಿಸೆ ಭೂ ಭಾಗವೆಂಬುದು ಪಾವುಡವು5 ಈ ಪರಿಯಿಂದಲಿ ಭೋರ್ಗರೆವುತ ಬರೆ | ತಾಪವಡಗಿ ಸುಖ ತಂಗಾಳಿ ಬಂದೀತು 6 ತಾಯಿಯ ಧ್ವನಿ ಕೇಳಿ ಮಕ್ಕಳು ಬಹುಪರಿ | ಬಾಯ ದೆರವುತಲಿ ಜನಜಡಿ ಬಹುದು7 ಅವರಿ-ಗಭಯ ಕೊಟ್ಟು ಅಧರ್ಮವೇ ಕಿತ್ತಿ ಯವನರ ಹಂತಿಯ ಕಟ್ಟಿ ತಾ ತುಳಿಸುವ 8 ಹೊಟ್ಟವ ಹಾರಿಸಿ ಘಟ್ಟಿ ತಾ ಉಳಹುವ | ಸೃಷ್ಟಿಲಿ ಧರ್ಮ ಸಂ-ಸ್ಥಾಪನೆ ಮಾಡುವಾ 9 ಮೊದಲಂತೆ ಜಗವನು ಸುಖದಲಿ ಇಡುವನು | ಮುದದಿಂದ ಸಾರಿದ ಗುರುವರ ಮಹಿಪತಿ 10
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಕೇಳು ಕಲ್ಮಷಹಾರಿ ಕರುಣಾವಾರುಧಿ ಶೌರಿ ತಾಳು ಕ್ಷಮೆಯ ಕೃಪೆದೋರಿ ಕೇಳು ಸಂಸೃತಿ ದುಃಖ ತಾಳಲಾರೆನು ಮಾತ ನಾಲಿಸು ಮಲ್ಲಕಂಸಾರಿ ಪ. ಮೂರೊಂದು ಎಂಬತ್ತು ಲಕ್ಷ ಯೋನಿಗಳನ್ನು ಸಾರಿ ಕಡೆಗೆ ಮಾನುಷ್ಯವನು ಸೇರಿದೆನಿದಿರಲಿ ಷಡ್ವೈರಿ ಗಣವೆನ್ನ ಗಾರು ಮಾಡುವುದನೇನೆಂಬೆ 1 ದೂರಾಪುರದ ಕಾಮ ವಾರುಧಿವಳಗೀಸ ಲಾರದೆ ಬಾಯಬಿಟ್ಟೊರವೆ ಕ್ಷೀರಾಬ್ಧಿಶಯನ ಥಟ್ಟನೆ ಬಂದು ಸಲಹೊ ಮು- ರಾರಿ ನೀನ್ಯಾಕೆನ್ನ ಮರೆವೆ 2 ಬುದ್ಧಿ ಬರುವ ಮೊದಲಿದ್ದ ಪರಿಯು ಮಣ್ಣ ಮುದ್ದೆಯಂತಾಯ್ತನಂತರದಿ ಹದ್ದಿನಂದದಿ ಹಂಗಿನನ್ನವ ಕಾಯುತ್ತ ಇದ್ದೆನು ಪರರ ಮಂದಿರದಿ 3 ಮಧ್ಯವಯಸ್ಸಿನೊಳ್ ಮದನನ ¨ಲೆಯೊಳು ಬಿದ್ದು ಹೊರಳಿ ಬಹು ಬಳಲಿ ಮಧ್ವವಲ್ಲಭ ನಿನ್ನ ಮರೆತೆನು ಮುಂದಾದ- ರುದ್ಧರಿಸೆನ್ನ ಬೇಗದಲಿ 4 ನೇಮವ್ರತಗಳನೊಂದಾದರು ಮಾಡದೆ ಕಾಮಲಾಲಸನಾದೆ ಬರಿದೆ ವ್ಯಾಮೋಹ ಕಡಲಿಗೆ ಕೊನೆಗಾಣೆ ಕಾರುಣ್ಯ ಧಾಮನ ಬಿಡೆ ನಿನ್ನ ಸ್ಮರಣೆ 5 ಸಾಮಜೋದ್ಧಾರ ಸಕಲಸುರವೈರಿ ನಿ- ರ್ನಾಮವತಾರ ಭೂಧಾರ ನಿತ್ಯ ಸವಿದು ಬಾಳುವ ಮುಖ್ಯ ಕಾಮಿತಾರ್ಥವ ನೀಡು ವರದಾ 6 ಸುರಮುನಿ ಪಿತೃಋಣ ಭರವ ನೀಗುವ ಮೂರು ಕಾಲ ಕಳೆದೆ ವರ ದೇವಾಲಯ ಕೂಪಾ ರಾಮಯಜ್ಞಾದಿ ಸ- ತ್ಕರಗಳ ವಾರ್ತೆಯ ತೊರೆದೆ 7 ಗುರು ಹಿರಿಯರ ಸೇವೆ ಮರೆತು ಮನಸಿನಲ್ಲಿ ಸರಿಯಲ್ಲ ಎನಗೆಂದು ತಿಳಿದೆ ಮರಿಯಾದೆ ಗೆಟ್ಟು ಮಾಯಾತಂತು ಬಂಧದೊ- ಳಿರುವೆ ಈ ಪರಿಯಿನ್ನು ಥರವೆ 8 ಲೋಕನಾಯಕ ನಿನ್ನ ಸ್ಮರಣೆ ಒಂದಿದ್ದರೆ ಸಾಕೆಂಬ ಶ್ರುತಿ ಪುರಾಣಗಳು ವಾಕಾನುವಾಕುಗಳು ಸುರಿದ ಸರ್ವಜ್ಞ ಶ್ರೀಕರ ಪಾದದ ಮತವ 9 ಸ್ವೀಕರಿಸುತ ನಿನ್ನ ಸೇವೆ ಮಾಡಲು ಬ್ಯಾರಿ- ನ್ಯಾಕಿನ್ನು ಡಾಂಭಿಕರ ವ್ಯಾಕುಲವ ಬಿಡಿಸಿ ವೆಂಕಟನಾಥ ಕರುಣಿಸ ಬೇಕು ಶ್ರೀವರ ನಿನ್ನ ಪಥವಾ 10
--------------
ತುಪಾಕಿ ವೆಂಕಟರಮಣಾಚಾರ್ಯ
ಕೈಕೊಂಡ - ನೃಹರಿ ಕೈಕೊಂಡ ಪ ಕೈಕೊಂಡ ಪೂಜೆಯ ನೃಹರಿ | ತ್ರೈಲೋಕ್ಯಕನಾಥನು ಅಸುರಾರಿ | ಆಹತೋಕನ ಸಲಹಲು | ಏಕಮೇವನ ಲೀಲೆಕೈಕೊಂಡ ಅವತಾರ | ಆ ಕಂಬೋದ್ಭವನಾಗಿಅ.ಪ. ಭಕ್ತಿ ಭಾವದಿ ಪರಾಶರ | ಬಹುತಪ್ತ ಭಾವದಿ ಕೃಷ್ಣೇ ತೀರ | ದಲ್ಲಿಸಕ್ತನಿರೆ ಧ್ಯಾನ ಗೋಚರ | ನಾಗಿವ್ಯಕ್ತನು ಷೋಡಶಕರ | ಆಹದೃಪ್ತ ದಾನವ ಧ್ವಂಸಿ | ದೀಪ್ತಾನಂತ ತೇಜಮೂರ್ತಿ ಕಾಣಿಸಿದನ | ವ್ಯಕ್ತನಾಗಿದ್ದಂಥ 1 ಕಟಿಸೂತ್ರ ಸ್ಮರ ಕೋಟಿ ಲಾವಣ್ಯಕರ ಪಾಶ ಅಸಿಕುಂತ | ವರದಾ ಭಯವು ಹಸ್ತ 2 ಕಂಬು ಚಕ್ರ ಚರ್ಮಕರ | ಮತ್ತೆಅಂಬುಜ ಶಾಂಙÁ್ರ್ಞದಿಧರ | ಗದಸಂಭೃತ ತುಳಸಿಯ ಹಾರ | ಮತ್ತೆಇಂಬಿನ್ವ್ಯೊ ಜಯಂತಿ ಹಾರ | ಆಹಅಂಬುಜದಳ ನೇತ್ರ | ಇಂಬಾಗಿ ಕರಪಾತ್ರತುಂಬ ಪೀಯುಷಧಿ | ಪೊಂಬಸಿರ ವಂದ್ಯನು 3 ಶ್ರೀವತ್ಸ ಲಾಂಛನ ಭೂಷ | ತನ್ನಭ್ರೂವಿಲಾಸದಿ ಬ್ರಹ್ಮ ಈಶ | ರಿಗೆತಾವೊಲಿದೀವ ಆವಾಸ | ಯೆನುತವ ವೇದಂಗಳು ಅನಿಶ | ಆಹಮಾವಿನೋದಿಯ ಗುಣ | ಸಾವಕಾಶಿಲ್ಲದೆಸಾರ್ವದ ಪೊಗಳುತ್ತ | ಭಾವದೊಳ್ಹಿಗ್ಗುವವು 4 ಪೊತ್ತು ರೂಪವ ಬಲಪಾದ | ಚಾಚುತ್ತ ರಕ್ಕಸನೊಡಲಗಾಧ | ಇಟ್ಟುವತ್ತುತ ತೊಡೆಯಲ್ವಿನೋದ | ದ್ವಯಹಸ್ತ ನಖದಿ ಉದರ ಬಗೆದ | ಆಹಕಿತ್ತುತ ಕರುಳನ್ನ | ಕತ್ತಿನೊಳ್ಹಾಕುತಭಕ್ತನ ಸಂಬಂಧ | ಎತ್ತಿ ತೋರ್ದ ಜಗಕೆ 4 ಪಂಚ ಮೋಕ್ಷಪ್ರದ ಹರಿ | ಆಯ್ತುಪಂಚಾಮೃತಭಿಷೇಕ ಅವಗೆ | ಮತ್ತೆಪಂಚಕಲಶಾರ್ಚನವು ಆವಗೆ | ಆಯ್ತುಪಂಚ ಕುಂಭಾಭಿಷೇಕವಗೆ | ಆಹಸಂಚಿಂತಿಸುತ ಹೃ | ತ್ಪಂಕಜದೊಳು ನೋಡೆಸಂಚಿಂತಾಗಮ ನಾಶ | ಕೊಂಚವು ಪ್ರಾರಬ್ಧ 6 ಶಾಲಿಗ್ರಾಮದ ಶಿಲ ಏಕ | ಪೊತ್ತುಪೋದಕ ಬಾಹು ಅಲೀಕ | ಶತಶಾಲೀವಾಹನವೆಂಬ ಶಕ | ದೊಳುಜ್ವಾಲಾ ನರಹರಿ ನಾಮಕ | ಆಹಯೇಳು ಐದೊರ್ಷದ | ಭಾಳ ತಪಕೆ ಮೆಚ್ಚಿಶೀಲ ದ್ವಿಜ ದಂಪತಿ | ಗೊಲಿದು ಪೇಳಿದ ಹೀಗೆ 7 ಭೀಮಕ ರಾಜಗೆ ಪೇಳು | ತೃಣಜಾಲವ ಹಾಕೆ ನೀರೊಳು | ಅಲ್ಲಿಜ್ವಾಲೆ ಉದ್ಭವಿಸಲು ಬಲು | ನೀರಮೇಲಕ್ಕೆ ಒಳಗಿಂದ ಬರಲು | ಆಹತೋಳೆರಡಲಿ ರಾಜ | ಮೇಲೆತ್ತೆ ಬರುವನುತಾಳ ಮೇಳ್ವೈಭವ | ದೊಳಗೆ ಸ್ಥಾಪಿಸಲೆಂದು 8 ಅಂಗಹೀನರೆ ಕೇಳಿ ಆವ | ನಿಮ್ಮಭಂಗಿಪ ಮೂಕಾಂಧ ಭಾವ | ನೀಗಿಶೃಂಗಾರ ರೂಪ ಸ್ವಭಾವ | ನರಸಿಂಗ ಕೊಡುವೆನು ಸೇವ | ಆಹ ಹಿಂಗದೆ ಕೊಡುವೆನು | ಅಂಗಜ ಪಿತ ನರಸಿಂಗಪುರವೆಂದು | ಸಂಗೀತವಾಗಲಿ 9 ವತ್ಸರ ಸೌಮ್ಯವು ಪುಷ್ಯ | ದಿನದರ್ಶ ವ್ಯಾಸತೀರ್ಥ ಶಿಷ್ಯ | ಆದರ್ಶ ದಾಸರ ದಿನ ಭವ್ಯ | ಭಕ್ತವತ್ಸಲ ಸ್ವೀಕಾರ ಆಲ್ಪ್ಯ | ಆಹಉತ್ಸವ ಕೊಳ್ಳುತ | ಉತ್ಸಾಹವೆನಗಿತ್ತುಮತ್ಸ್ಯಾದಿ ದಶರೂಪಿ | ಕೃತ್ಸ್ನ ಕಾರುಣ್ಯನು 10 ಪರಾಶರಗೊಲಿದ ಸುಶೀಲ | ಖಗವರನು ಭೂದೇವಿಯು ಬಲ | ಎಡವರಲಕ್ಷ್ಮೀ ಪ್ರಹ್ಲಾದ ಬಾಲ | ಸುರವರರಿಂದ ಸ್ತುತ್ಯ ವಿಶಾಲ | ಆಹಗುರು ಗೋವಿಂದ ವಿಠ್ಠಲ | ಗುರು ಬಿಂಬ ನರಸಿಂಗಶರಣರ ಅಪಮೃತ್ಯು | ಹರಿಸಿ ಸಂತತ ಕಾಯ್ವ11
--------------
ಗುರುಗೋವಿಂದವಿಠಲರು
ಕೈಬಿಡದೆ ಕಾಪಾಡು ಕರುಣಾಳು ಹರಿಯೇ ನಾಬಿಡದೆ ನಿನ್ನಡಿಯ ಮೊರೆಹೊಕ್ಕೆ ದೊರೆಯೇ ಪ ಎಲ್ಲಿನೋಡಿದರಲ್ಲಿ ನಿನ್ನ ಮೂರ್ತಿಯ ತೋರಿ ಎಲ್ಲಕಾಲಗಳೊಳಗು ಭಜನೆ ಬಲಿಸಿ ಉಲ್ಲಸದಿ ಕಾರ್ಯಗಳೊಳೆಲ್ಲ ಸೇವೆಯಗೈಸಿ ನಿಲ್ಲದೆಯ ನೀನಂತ್ಯಕೊದಗು ಸಂತೈಸಿ1 ಧನ್ಯ ಭಕ್ತರೊಳಾಡಿ ಚನ್ನಚರಿತೆಯ ಪಾಡಿ ಉನ್ನತೋತ್ಸವಗಳನು ನೋಡಿ ನೋಡಿ ಯನ್ನ ಮನಕಿನ್ನೊಂದ ತೋರಿಸದೆಯೆ ಸಂ ಪನ್ನ ಪದಯುಗಪೂಜೆ ಕೊಡು ಮುನ್ನ 2 ಘನಜಾಜಿ ಪಟ್ಟಣವಾಸ ಇನಕರ ಪ್ರಭುಶ್ರೀಶ ವನಜಸಂಭವನಯ್ಯ ವರದ ಜೀಯ ಅನುನಯದಿ ಬೇಡುವೆನು ನಾನಂಬೆನನ್ಯರನು ತನಯನೊಳು ಕನಿಕರಿಸು ನಿನ್ನಡಿಯೊಳಿರಿಸು 3
--------------
ಶಾಮಶರ್ಮರು
ಕೈವಲ್ಯ ಪಡೆವರು ಜನರು - ಹರಿ ಪ ಮೂರ್ತಿ ಶ್ರೀ ಚೆನ್ನಕೇಶವನ ಮನದೊಳಗಿಟ್ಟು ಅ ಹಗೆ ಮಾಡಬೇಡಕುಲದಲ್ಲಿ ಜನಿಸಿ ಕುಚೋದ್ಯ ಮಾಡಲುಬೇಡನಲಿದು ಹರಿಯ ಪೊಗಳದ ನಾಲಗೆಯು ಬೇಡ 1 ಮಂದಮತಿಗಳ ಕೂಡ ಮಹಕಥೆಯ ನುಡಿಬೇಡಯತಿಯಾದ ಮೇಲೆ ಸತಿಸುತರಾಸೆ ಬೇಡ..................................................................ಹಿತ ತಪ್ಪಿ ನಡೆವಂಥ ಹೆಂಡತಿಯು ಬೇಡ 2 ಕೆಟ್ಟು ಹೋದವರನ್ನು ತಿರುಗಿ ಕರೆತರಬೇಡಮುಟ್ಟಾದ ಮೇಲೆ ಮೋಹಿಸಿ ಕೂಡಬೇಡಭ್ರಷ್ಟನಾಡಿದನೆಂದು ಸಿಟ್ಟಿನಲಿ ನುಡಿಬೇಡಕಷ್ಟದೆಸೆಯೊಳು ಧೈರ್ಯ ಬಿಟ್ಟು ಕೆಡಬೇಡ 3 ಜಂಭ ಬೇಡ 4 ತೀರ್ಥ ಯಾತ್ರೆಗೆ ಪೋಗಿ ತಿರುತಿರುಗಿ ಬಳಲಿ ಕೃ-ತಾರ್ಥನಾದೆನು ಎಂಬ ಘನತೆ ಬೇಡಪಾರ್ಥಸಾರಥಿ ಕಾಗಿನೆಲೆಯಾದಿಕೇಶವನಸಾರ್ಥಕದಿ ಭಜಿಸಿ ಸುಖಿಯಾಗು ಮನುಜ 5
--------------
ಕನಕದಾಸ
ಕೈವಲ್ಯ ಕೃಪೆಯ ಸುಜ್ಞಾನ ಸಾಧುಜನರ ನಿಜಸ್ಥಾನ ಅನುದಿನ 1 ವರ್ಣದೋರುವದನೇಕ ತುಂಬಿ ವರಮುನಿಗಳಿಗೆ ಕೌತುಕ ಪರಿಪೂರ್ಣಗಿಹ್ಯ ಮೂರು ಲೋಕ ದೋರುತಿಹದು ಬ್ರಹ್ಮಸುಖ 2 ಎನ್ನೊಳಗಾನಂದ ಭರಿತ ಜನವನದೊಳು ತಾ ಸಾಕ್ಷಾತ ತನ್ನೊಳಗದೆ ತಾ ಸ್ವಹಿತ ಕೈವಲ್ಯನಿಧಿ ಗುರುನಾಥ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಕೈವಲ್ಯಪತಿ ವಿಠಲ | ಇವಳ ನೀ ಸಲಹೋ ಪ ದೇವದೇವೊತ್ಮತವ | ದಾಸ್ಯಕಾಂಕ್ಷಿಪಳಾ ಅ.ಪ. ಗುರುಗಳೊಂದಗೆ ಯಾತ್ರೆ | ಭರದಿ ಸ್ವಪ್ನದಿಗೈದು |ಮರಳಿ ಕೊಲ್ಹಾಪುರದ | ಶಿರಿರಮೆಯ ಕಂಡೂ |ಮರುತ ದರ್ಶನದಿಂದ | ವರಸು ಉಪದೇಶಕ್ಕೆತರುಣಿ ಶುದ್ಧಳು ಇಹಳು | ಉರಗಾದ್ರಿವಾಸಾ 1 ತೈಜಸನು ನೀನಾಗಿ ನೈಜದಂಕಿತ ಪ್ರಾಪ್ತಿಮಾಜದಲೆ ಸೂಚಿಸಿಹೆ | ಭ್ರಾಜಿಷ್ಣು ಮೂರ್ತೇ|ಯೋಜಿಸಿದೆ ಅದಕಾಗಿ | ತರಳೆಗಂಕಿತವನ್ನುರಾಜಿಸೋ ಮನದಿ ತವ | ನೈಜರೂಪವನೂ 2 ತರತಮದ ಸುಜ್ಞಾನ | ಹರಿಗುರೂ ಸದ್ಭಕ್ತಿಮರುತ ಮತ ದೀಕ್ಷೆಯನು | ಪರಮ ವೈರಾಗ್ಯಕರುಣಿಸುತ ಸಂಸಾರ ಶರಧಿಯನೆ ದಾಂಟಿಸೊಅರವಿದೂರನೆ ಹರಿಯೆ | ಪ್ರಾರ್ಥಿಸುವೆ ನಿನ್ನಾ 3 ಕರ್ಮ ನಿಷ್ಕಾಮದಲಿ | ಪೇರ್ಮೆಯಲಿ ಚರಿಪಂತೆಭರ್ಮಗರ್ಭನ ಪಿತನೆ | ಸನ್ಮನವನಿತ್ತೂ |ನಿರ್ಮಮತೆ ನೀಡಿ | ಕರ್ಮನಿರ್ಲೇಪದಲಿಹಮ್ರ್ಯ ವೈಕುಂಠವನು | ಗಮಿಪ ತೆರಮಾಡೋ 4 ಭಾವುಕರ ಪರಿಪಾಲ | ಭೂವೈಕುಂಠಲೋಲದೇವದೇವೋತ್ತಮನೆ | ಗೋವಿಂದ ಮೂರ್ತೇ |ನೀ ವೊಲಿಯದಿಲ್ಲ ಗುರು | ಗೋವಿಂದ ವಿಠ್ಠಲನೆಸೇವಕಳ ಪೊರೆಯಲ್ಕೆ | ಪ್ರಾರ್ಥಿಸುವೆ ಹರಿಯೇ 5
--------------
ಗುರುಗೋವಿಂದವಿಠಲರು
ಕೊಟ್ಟಿಗೋತ್ಸವ ಗೀತೆ ಕೊಟ್ಟೊಗೋತ್ಸವ ನೋಡಿ ಸೃಷ್ಟಿಗೀಶ್ವರನ ಪ. ವಾಸುದೇವನ ಸಹಸ್ರಸ್ತಂಭಮಂಟಪವ ದಾಸರು ಬಂದು ಶೃಂಗಾರವ ಮಾಡಿ ದೇಶದ ಮೇಲುಳ್ಳ ಬೊಂಬೆಗಳನು ರಚಿಸಿ ಲೇಸಾದ ಮೇಲುಕಟ್ಟುಗಳ ಕಟ್ಟಿದರು 1 ಸೃಷ್ಟಿಗೀಶ್ವರನಾದ ರಂಗನಾಥನಿಗೆ ಕೊಟ್ಟಿಗೋತ್ಸವವನ್ನು ನಡೆಸಬೇಕೆನುತ ಕಟ್ಟಿ ಕಂಕಣವನ್ನು ನಾಲ್ಕುವೇದಗಳಿಂದ ಭಟ್ಟರು ಓದಿ ಪೇಳಿದರು ಸಂಭ್ರಮದಿ 2 ವಜ್ರದ ಕಿರೀಟವಿಟ್ಟು ರತ್ನದಂಗಿಯ ತೊಟ್ಟು ಅರ್ಜುನಸಖ ಸಂಭ್ರಮದಲಿ ಪೊರಟು ಸ್ವರ್ಗದ ಬಾಗಿಲೊಳಗೆ ತಾ ನಿಂದು ಮೂರ್ಜಗವೆಲ್ಲ ಮೋಹಿಸುತಲೆ ಬಂದು 3 ಮಂದಹಾಸದಲಿ ನಿಂದು ಮಂಟಪದಲಿ ಬಂದ ಆಳ್ವಾರರಿಗಾಸ್ಥಾನವಿತ್ತು ಚಂದದಿಂದ ದಿವ್ಯ ಪ್ರಬಂಧವ ಕೇಳಿ ಒಂದುಅಂಕಣ ಬಿಡದೆ ಬಂದ ಶ್ರೀರಂಗ 4 ಸಂಕ್ರಾಂತಿಯಲಿ ಶಂಕರನ ಪ್ರಿಯನು ಶಂಕೆ ಇಲ್ಲದೆ ಆಭರಣವನು ಧರಿಸಿ ಪಂಕಜಮುಖಿಯರೊಡಗೊಂಡು ಹರುಷದ ಲಂಕಾರವಾಗಿ ಬಂದನು ಮಂಟಪಕೆ 5 ಮತ್ತೆ ಮರುದಿನದಲ್ಲಿ ಭಕ್ತವತ್ಸಲನು ಮುತ್ತಿನಅಂಗಿ ಮುಂಡಾಸನಳವಡಿಸಿ ಮುತ್ತಿನಛತ್ರಿ ಚಾಮರ ಸೂರೆಪಾನದಿ ಮುತ್ತರಸಿಯ ಮಂಟಪಕೆ ನಡೆತಂದ 6 ಅರ್ಥಿಯಿಂಬಂದು ತಾ ಅಶ್ವವನೇರಿ ಮತ್ತೆ ಬೇಟೆಯಮೃಗವನೆ ಕೊಂದು ಸಂ ಕ್ರಾಂತಿಯ ಪಾರ್ವೇಟೆಯನಾಡಿ ಸಂತೋಷದಿ ಬಂದ 7 ನಾರಿವೇಷವ ಆಳ್ವಾರರಿಗೆ ಧರಿಸಿ ಪೇರಿಯ ತಾ ಬಿಟ್ಟು ತೇಜಿಯನೇರಿ ಚೋರತನವ ಮಾಡಿದ ಭಕ್ತರಿಗೆ ಮೂಲಮಂತ್ರವ ಪೇಳಿ ಮುಕ್ತಿಯನಿತ್ತ 8 ಮಿಂದು ಮಡಿಯನುಟ್ಟು ಅಂದು ರಾತ್ರಿಯಲಿ ಹ ನ್ನೊಂದು ವಿಧ ಭಕ್ಷ್ಯಗಳನು ತಾ ಗ್ರಹಿಸಿ ಬಂದ ಆಳ್ವಾರರಿಗೆ ಮುಕ್ತಿಯನಿತ್ತು ಬಂದು ಆಸ್ಥಾನದಿ ನಿಂದ ಶ್ರೀರಂಗ 9 ಭಕ್ತರು ಮಾಡಿದ ಪ್ರಬಂಧವನೆಲ್ಲ ಭಕ್ತಿಯಿಂದಲೆ ಪೇಳಿದ ಆಚಾರ್ಯರಿಗೆ ಯುಕ್ತಿ ತೋರಿದ ಪರಾಶರವ್ಯಾಸರಿಗೆ ಬ್ರಹ್ಮ ರಥವನಿತ್ತ ಬ್ರಹ್ಮಾಂಡರೂಪ 10 [ಶೌ]ರಿಯು ತಾನಿರಲು ಮೇಘಮಂಡಲದಂತೆ ತೋರುವುದು ತಾರಕೆಯಂತೆ ಮೈಯುಡುಗೆ ವಾರಿಜನಾಭನ ಮುತ್ತಿನಂಗಿಯ ನೋಡು ವವರಿಗೆ ತಾ ಆನಂದವಾಗಿಹುದು 11 ಕ್ಷೀರಸಾಗರದಲ್ಲಿ ಪವಡಿಸಿಹ ಹರಿಗೆ ಕ್ಷೀರಬಿಂದುಗಳು ಮೈಯೊಳಗೆ ಬಿದ್ದಂತೆ ವಾರಿಜನೇತ್ರಗೆ ವಜ್ರದನಾಮವು ಧರಿಸಿದರು ಹೇಮದ ಪಾದಹಸ್ತಗಳ 12 ಮುತ್ತಿನಂಗಿಸೇವೆ ನೋಡಬೇಕೆನುತ ಹತ್ತುಸಾವಿರ ಪ್ರಜೆ ಬಂದು ನಿಂತಿರಲು ಇತ್ತು ಕಾಣಿಕೆಯನು ನೋಡಿ ವೆಂಕಟರಂಗನ ಮುಕ್ತರಾದೆವೆಂದು ಭಕ್ತರು ನುಡಿದರು 13
--------------
ಯದುಗಿರಿಯಮ್ಮ
ಕೊಟ್ಟು ಕೊಂಡಾಡ ಬೇಕು ಘಟ್ಟಿಕೊಂಡು ಗುರುಭಕ್ತಿ ಗುಟ್ಟಿನೊಳು ನೋಡ ಬೇಕು ಇಟ್ಟು ದೋರುತದ ಮುಕ್ತಿ ಧ್ರುವ ಕೊಟ್ಟು ಗುರುವಿಗೆ ಮನಕೊಳ್ಳಬೇಕು ನಿಜಘನ ಇಟ್ಟಾದೆ ನಿಜಧನ ಪಡಿಬೇಕು ಸಾಧನ ಕೊಟ್ಟಾಂಗ ಕೊಂಬು ಖೂನ ಹೇಳಿ ಕೊಡುವ ಗುರು ಜ್ಞಾನ ಮುಟ್ಟಿ ಭಜಿಸುದು ಪೂರ್ಣ ಸ್ವಾಮಿ ಶ್ರೀನಾಥಾರ್ಪಣ 1 ಕೊಟ್ಟು ಕೊಂಡು ನೋಡಿ ನೇಮ ಸೃಷ್ಟಿಯೊಳು ಸುಧಾಮ ಕೊಂಡ ದಿವ್ಯಗ್ರಾಮ ಕೊಟ್ಟು ಶ್ಯಾಖದಳವಮ್ಮ ದ್ರೋಪದ್ಯಾದಳು ಸಂಭ್ರಮ ಕೃಷ್ಣಗಿದೆ ಅತಿ ಪ್ರೇಮ ಶಿಷ್ಟ ಜನರ ಸುಕ್ರಮ 2 ಮುಕ್ತಿಗಿದೇ ಮೇಲು ಭಕ್ತಿನೋಡಿ ಸಜ್ಜನರ ಯುಕ್ತಿ ಭೋಕ್ತ ಬಲ್ಲ ಗುರುಮೂರ್ತಿ ಮಾಡಬೇಕು ಭಾವ ಭಕ್ತಿ ಮುಕ್ತ ಜನರಿಗಿದೇ ಗತಿ ಕೊಟ್ಟು ಕೊಂಡಾಡುವ ಶಕ್ತಿ ಅರ್ತು ಇದೇ ಮಹಿಪತಿ ಕೊಂಡಾಡೋ ಗುರುಸ್ತುತಿ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಕೊಡಬೇಕು ದಾನಗಳ ಸತ್ಕಾರ್ಯಕೆಬಿಡಬೇಕು ಕೈಸಡಿಲು ಮೋಕ್ಷಸಾಧನೆಗೆ ಪಬೇಡದಲೆ ಕೊಡುವವರು ರೂಢಿಯೊಳಗುತ್ತಮರುಬೇಡಿದರೆ ಕೊಡುವ ದಾನಿಯು ಮಧ್ಯಮಬೇಡಿದರು ಕಾಡಿದರು ಕೊಡದವರು ಅಧಮರುಕೊಡೆದೆ ಬಡಬಡಿಸುವವರು ಮೂರ್ಖ ಅಧಮಾಧವುರು 1ದುಡ್ಡು ಇದ್ದರೆ ಮಾತ್ರ ದೊಡ್ಡವರು ಅನಬೇಡದುಡ್ಡಿದ್ದು ದಾನ ಧರ್ಮವು ನಡೆಯಬೇಕುದುಡ್ಡು ಕಾಯುವ ಸರ್ಪಕ್ಕೆ ಇಹ'ಲ್ಲ ಪರ'ಲ್ಲಬಿದ್ದು ಹೋದರೆ ಅವರ ಬಾಯೊಳಗೆ ಮಣ್ಣು 2ಧನಿಕರಿಗೆ ಭೂಷಣವು ದಾನಧರ್ಮವು ಸದಾಧನ'ದ್ದ ಜಿಪುಣತಾ ಜೀವಂತ ಹೆಣವುಧನ'ದ್ದು ದಾನಮಾಡುವ ಪುಣ್ಯವಂತರಿಗೆಘನಮ'ಮ ನಮ್ಮ ಭೂಪತಿ'ಠ್ಠಲನೊಲಿಯುವನು 3ತಾುಯ ಹರಕೆ
--------------
ಭೂಪತಿ ವಿಠಲರು
ಕೊಂಡಾಡಲಳವೆ ನಿನ್ನಯ ಕೀರ್ತಿ ಭೂ- ಮಂಡಲದೊಳು ಹಯಗ್ರೀವಮೂರ್ತಿ ಪ. ವೇದಂಗಳ ಜಲದಿಂದ ತಂದೆ ನೀ ಪೋದ ಗಿರಿಯ ಬೆನ್ನೊಳಾಂತು ನಿಂದೆ ಮೇದಿನಿಯ ಕದ್ದೊಯ್ದನ ಕೊಂದೆ ಸಂ- ವಾದದಿಂದ ಕಂಬದಿಂದಲಿ ಬಂದೆ 1 ಚರಣಾಗ್ರದಲಿ ನದಿಯನು ಪೆತ್ತೆ ತೀಕ್ಷ್ಣ ಪರಶು ಪಿಡಿದು ಬಾಹುಜರ ಕಿತ್ತೆ ನೆರೆನಂಬಿದಗೆ ಸ್ಥಿರಪಟ್ಟವನಿತ್ತೆ ದೊಡ್ಡ ದುರುಳಕಾಳಿಂಗನ ಶಿರದಿ ನಿಂತೆ 2 ಪರವ್ರತೆಯರ ಮಾನಭೇದನ ಚತುರ ತುರಗವೇರಿ ನಲಿವನ ಕ್ಷಿತಿಯೊಳುತ್ತಮ ವಾದಿರಾಜನ ಸ್ವಾಮಿ ಸತತ ರಕ್ಷಿಪ ಶ್ರೀ ಹಯವದನ 3
--------------
ವಾದಿರಾಜ