ಒಟ್ಟು 854 ಕಡೆಗಳಲ್ಲಿ , 94 ದಾಸರು , 721 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಶ್ರೀ ಸರಸ್ವತೀದೇವಿ ವಾಣಿಯೆ ವೀಣಾಪಾಣಿಯೆ ಪಾಲಿಸು ಸದಾ ಸ್ಥಾಣು ಜನನಿ ಚತುರಾನನ ರಾಣಿ ಶ್ರೀ ಪ ಕೃತಿ | ಸುತೆ ಸರಸ್ವತಿ ದೇವಿ ಹಿತದಿಂದಲೆನ್ನನು | ಸುತನೆಂದು ಭಾವಿಸೆ 1 ಬುದ್ಧ್ಯಾಭಿಮಾನಿ ಸದ್ವಿದ್ಯಾ ಪ್ರದಾಯಿನಿ ಶುದ್ಧ ಸುಮತಿ ಕೊಟ್ಟು | ಉದ್ಧರಿಸನುದಿನ 2 ಶಾರದೆ ದಯವ್ಯಾಕೆ | ಬಾರದೆ ಎನ್ನೊಳು ನಾರದ ಸೇವಿತೆ | ಸೇರಿದೆ ತ್ವತ್ಪಾದ 3 ಪವನಾಂತರ್ಗತ ಮಾಧವನ ಸನ್ಮಹಿಮೆಯ ಕವನದಿಂದಲಿ ಸುಸ್ತವನ ಮಾಡಿಸೆ 4 ಸಾಮಗಾನವಿಲೋಲ | ಶಾಮಸುಂದರನ ಸೊಸೆ ಪ್ರೇಮದಿ ಮನ್ಮುಖ ಧಾಮದಿ ವಾನಿಸೆ5
--------------
ಶಾಮಸುಂದರ ವಿಠಲ
ಶ್ರೀ ಸುಬ್ರಹ್ಮಣ್ಯ ಸ್ತುತಿ ಅಷ್ಟೊಂದು ಸಹಾಯ ಗೈಯಬೇಕಯ್ಯ ಸೃಷ್ಟಿಗೀಶ ಸುಬ್ವರಾಯ ಕಾರ್ತಿಕೇಯ ಪ. ಬುದ್ಧಿಗಿತ್ತು ಧೈರ್ಯ ಸಿದ್ಧಿಸಯ್ಯ ಕಾರ್ಯ ಶುದ್ಧಭದ್ರಕಾಯ ರುದ್ರಾಣೀತನಯ 1 ಮಾಯಾ ಸತ್ತ್ವಗುಂದಿತಯ್ಯ ಚಿತ್ತದಭಿಪ್ರಾಯವೆತ್ತ ಬಾಹುಲೇಯ 2 ಪಾವಂಜಾಖ್ಯ ಕ್ಷೇತ್ರಾಧಿವಾಸಶ್ರೇಯ ದೇವ ಲಕ್ಷ್ಮೀನಾರಾಯಣನ ಸುಪ್ರೀಯ3
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಶ್ರೀ ಸುಬ್ರಹ್ಮಣ್ಯ ಸ್ತುತಿ ಅಷ್ಟೊಂದು ಸಹಾಯ ಗೈಯಬೇಕಯ್ಯ ಸೃಷ್ಟಿಗೀಶ ಸುಬ್ವರಾಯ ಕಾರ್ತಿಕೇಯ ಪ. ಬುದ್ಧಿಗಿತ್ತು ಧೈರ್ಯ ಸಿದ್ಧಿಸಯ್ಯ ಕಾರ್ಯ ಶುದ್ಧಭದ್ರಕಾಯ ರುದ್ರಾಣೀತನಯ 1 ಮಾಯಾ ಸತ್ತ್ವಗುಂದಿತಯ್ಯ ಚಿತ್ತದಭಿಪ್ರಾಯವೆತ್ತ ಬಾಹುಲೇಯ 2 ಪಾವಂಜಾಖ್ಯ ಕ್ಷೇತ್ರಾಧಿವಾಸಶ್ರೇಯ ದೇವ ಲಕ್ಷ್ಮೀನಾರಾಯಣನ ಸುಪ್ರೀಯ3
--------------
ತುಪಾಕಿ ವೆಂಕಟರಮಣಾಚಾರ್ಯ
ಶ್ರೀ ಸುಮಧ್ವ ವಿಜಯಸ್ಥ ಅಷ್ಟೋತ್ತರ ಶತನಾಮಾವಳಿ ನಮಿಸುವೆ ಜಗದ್ಗುರುಗಳೇ ಪ ಅಮಿತ ಮಹಿಮನ ವಿಮಲ ಪದಪದ್ಮ ತೋರ್ವುದೆಮಗೇ ಅ.ಪ. ಭೂರಿ ವಿಶ್ವ ಭೂಷಣರೇ ಪಾಹಿಮಾಂ ಪಾಹಿ 1 ಪರಿಪೂರ್ಣ ಪ್ರಮತಿಯೇ | ಪುರುಸಂಖ್ಯ ಪೂರ್ಣೇಕ್ಷ ಅರವಿಂದ ಲೋಚನರೆ | ಗುರುಮತ್ಯಮಿತ ಬುದ್ಧಿ ಮರುದಂಶ ಪ್ರಚುರಧೀ | ಪುರು ಕರುಣ ಆಂಬುಧಿಯ ಮೇರೆಯನು ಮೀರಿದವರೆ || ಸರುವಿತ್ ಪೂರ್ಣದೃಕ್ | ಉರುಮತಿಯೆ ಸಕಲಜ್ಞ ಸರುಧೀ ಪೃಥು ಹೃದಾ | ಪುರುಧೀ ಪ್ರಭೂತಧೀಃ ಪರಮ ಆನಂದ ಸತ್ತೀರ್ಥ ಸೂರಿರಾಜಾಧಿ ರಾಜರೆ ಪಾಹಿ ಪಾಹಿ 2 ಫುಲ್ಲ ಬೋಧ ಬಹುಲ ಪ್ರಬೋಧರೇ | ಮಹೀಷ್ಟ ಸುಹೃದಯರೇ ಬಹುಲ ಬೋಧಾಖ್ಯರೇ | ಮಹಾ ಪುರುಷೋತ್ತಮನ ದಾಸರೊಳಧಿಕನೆ ಪಾಹಿ 3 ನಮೊ ನಮೋ ಧೀರಮತಿ | ನಮೊ ಪೃಥೂ ದರ್ಶನರೆನಮೊ ನಮೋ ಸುಖ ತೀರ್ಥ | ನಮೊ ಪೃಥುಲ ಚೇತಾತ್ಮನಮೊ ನಮೋ ಪೃಥುಮತಿಯೆ | ನಮೊ ನಮೊ ಸಮಗ್ರ ಧೀರ್ಸುಸ್ಮಿತೇಂದುಗಳೆ ಪಾಹಿ || ನಮೊ ವಿಪುಲ ಹೃದಯರೇ | ಅಮಂದಧಿಯೆ ಶುದ್ಧಧೀಃ ನಮೊ ನಮೋ ಸುವಿಚಾರ | ನಮೊ ದಾನವರ್ಭೀಮ ನಮೊ ಪುಷ್ಟ ಬುದ್ಧಿಯೇ | ನಮೊ ಪೃಥುಲ ಹರಿ ನಿಗೂಢ ಮೂರ್ತಿಯೆ ಪಾಹಿ ಪಾಹಿ4 ಆನಂತ ಬೋಧಾಖ್ಯ | ಅನೂನ ಬೋಧರು ಎನಿಪಆನಂದ ತೀರ್ಥಾಖ್ಯ | ಅನುಮಾನ ತೀರ್ಥರೇಸ್ವರ್ಣವರ್ಣಾಭಿಧರೆ | ಧನ್ಯ ಪ್ರವರರು ಎನಿಪ ಆದೀನ ಸತುವಾಭಿಧರೆ ||ಅನಂತಧಿಯ ಮಧ್ವ ಸು | ಪೂರ್ಣ ಸಂಖ್ಯ ಧೀರದಿಹನುಮಂತ ಕೃಷ್ಣೇಷ್ಟ | ಪ್ರಾಣೇತ ಪ್ರಾಜ್ಯೇಕ್ಷಆನಮಿಸಿ ಬೇಡ್ವೆ ಸಂ | ಪೂರ್ಣ ಪ್ರಮತಿಯೆ ತವ ಚರಣ ತೋರಿಸಿ ಸಲಹುವುದೂ 5 ಪಾಹ್ಯದ ಭ್ರಮನೀಷ | ಪಾಹಿ ಪ್ರಚುರ ಪ್ರಜ್ಞಪಾಹಿ ವಿಪುಲ ಪ್ರಮತಿ | ಪಾಹಿ ಆಯುತ ಚೇತಪಾಹಿ ಪೃಥು ಪ್ರಬೋಧಾ | ಪಾಹಿ ಪ್ರಬರ್ಹ ಬೋಧಾಖ್ಯರೇ ಪಾಹಿ ಪಾಹಿ ||ಪಾಹ್ಯ ಮಂದಮನೀಷ | ಪಾಹ್ಯದ ಭ್ರಸುಸಂಖ್ಯಪಾಹಿ ಬೃಹತು ಪ್ರಬೋಧ | ಪಾಹ್ಯತಿ ಭದ್ರ ಭಾಷಣಪಾಹ್ಯ ಪೂರ್ವ ಪುರುಷ | ಪಾಹಿ ದಶಧಿಷಣಾರ್ಯಾ ವರ್ಯ ಚರ್ಯರೇ ಪಾಹಿ 6 ಸಿರಿ ಮಾಧವನ | ಗುಣ ಸಾಧಕಾಗ್ರಣಿಯೆ ಪಾಹಿಮಾಂ ಪಾಹಿ ಪಾಹಿ 7 ವಾಸುದೇವ ಪರಿ | ಶಿಕ್ಷಣದಿ ದಕ್ಷನೆನಿಸುವನಿಗೇ ಜಯವಾಗಲಿ ||ಜಯ ಹರಿಗಧಿಷ್ಠಾನ | ಜಯ ಮುಖ್ಯ ಪ್ರತಿ ಬಿಂಬಜಯ ಜಯತುದಾರಮತಿ | ಜಯ ಹರಿದಯಿತ ವರನೆಜಯ ಶ್ರೀ ಮದಾನಂದ | ತೀರ್ಥಾರ್ಯವರ್ಯ ಜಯ ಜಯತು ನಿಮ್ಮ ಪದಗಳಿಗೇ 8 ಮಧ್ವಾಖ್ಯ ಶೃತಿಪ್ರತೀ | ಪಾದ್ಯರೆಂದೆನಿಸುತಲಿಮಧ್ವ ವಿಜಯಾಖ್ಯ ಪ್ರ | ಸಿದ್ಧ ಗ್ರಂಥದಿ ಪೊಳೆವಮಧ್ವಗುರು ತವನಾಮ | ಶಬ್ದಾಖ್ಯ ಮಣಿಗಳಷ್ಟೋತ್ತರದ ಮಾಲೆಯನ್ನೂ ||ಮುದ್ದು ಮೋಹಜ ತಂದೆ | ಮುದ್ದು ಮೋಹರಲಿರುವಮಧ್ವಗುರುವೇ ನಿಮ್ಮ | ಹೃದ್ಗುಹದಲಿರುವಂಥಮುದ್ದು ಗುರುಗೋವಿಂದ | ವಿಠ್ಠಲನಿಗರ್ಪಿಸುವೆ ಉದ್ಧರಿಪುದೆಮ್ಮ ಸತತ 9
--------------
ಗುರುಗೋವಿಂದವಿಠಲರು
ಶ್ರೀಧವನ ದೂತರಿಗೆ ಭೇದವುಂಟೆ ಕ್ರೋಧ ಜಯಿಸಿದ ನರಗೆ ಕಲಹಗಳುಂಟೆ ಪ ಗರುಡನಾಲಯದಿ ಉರಗಗಳ ಭಯವುಂಟೆ ಕರಿಯ ಬೆದರಿಕೆಗೆ ಮೃಗವರಗೆ ಉಂಟೆ ಹರಿದಿನದಲುಂಬುವಗೆ ದುರೀತ ತಪ್ಪುವದುಂಟೆ ಗುರು ಕರುಣ ಪಡೆಯದವಗೆ ಪರಗತಿ ಉಂಟೆ 1 ಅದ್ರಿಗಳ ಭಯವುಂಟೆ ಸುರಪನ ವಜ್ರಕೆ ಯುದ್ಧದ ಭಯವುಂಟೆ ವೀರನಿಗೆ ಶುದ್ಧ ಮನದಲಿ ನಮ್ಮ ಮಧ್ವಮತ ಸೇರಿದವ ಗುದ್ಧಾರವಲ್ಲದೆ ನರಕುಪದ್ರಗಳುಂಟೆ 2 ಕಂದರ್ಪ ನಂಜಿಕೆಯು ಶಿಂಧುರಾನನ ಕುಂಟೆ ನಿಂದಿಸುವ ಜನಕೆ ಸುಜ್ಞಾನವುಂಟೆ ಮಂದರೋದ್ಧಾರ ಶಾಮಸುಂದರನ ಪದಯುಗವ ಪೊಂದಿರ್ಪ ಸುಗುಣರಿಗೆ ಆವ ಕುಂದುಗಳಯ್ಯ 3
--------------
ಶಾಮಸುಂದರ ವಿಠಲ
ಶ್ರೀಪತೀ-ಎನಗೇನು ಗತೀ ನನಗಾಗಲಿ ನಿನ್ನಲಿ ರತೀ ಪ ಚಪಲ ತನದಿ ಬಹು ಕಪಟಭಕುತಿನಟಿಸಿ ಗುಪಿತ ದೋಷಿಯು ಆದೆ ಅ.ಪ. ಬಟ್ಟೆ ನೋಡಲು ಬಹು ಛಂಧ-ಮೇಲೆ ಘಟ್ಟಿ ಬಣ್ಣದ ಕಾವಿ ಶಾಟಿ ಹಾಗೆ ಪಟ್ಟೆಮಡಿಗಳ ಭಾರೀ ಥಳಕೊ-ಬಹಳ ದಟ್ಟ ತುಳಸೀಸರಗಳ ಹೊಳಪೂ ಆಹಾ ಸೃಷ್ಠಿಗೊಡೆಯನೆ ಎನ್ನ ಕೆಟ್ಟ ತನಗಳನ್ನು ಎಷ್ಟೆಂದು ಬಣ್ಣಿಪೆ ನಿಟ್ಟ ನೆನೆಯದೆ ಪರರ ದೃಷ್ಟಿನೋಡುತ ಹಿಗ್ಗಿ ಅಟ್ಟಹಾಸದಿ ಕುಣಿದು ಮಾನವ ನನಗೇ 1 ವೇದ ವಾದಗಳೇನು ಕಾಣೆ-ಶುದ್ಧ ಸಾಧು ಕರ್ಮಗಳೊಂದು ಇಲ್ಲ-ಜನರ ಮೋದಗೋಸುಗವೇನೆ ಎಲ್ಲ_ಕಾಮ ಕ್ರೋಧವ ನಿಬಿಡಿತೇನೇ ಬಿಚ್ಚೆಹೃದಯಾ ಆಹಾ ಮಧ್ವರಾಯರ ಶಾಸ್ತ್ರ ಗ್ರಂಥ ಸಹ ತಿಳಿಯದೆಲೆ ಸಿದ್ಧ ಸಾಧಕನಂತೆ ಸಾಧುಲಿಂಗವ ತೋರಿ ಮುಗ್ಧಗೈಯ್ಯುತ ಮಂದಿ ಮೆದ್ದು ಪಕ್ವಾನ್ನಗಳ ಗೆದ್ದುಕೊಳ್ಳುವೆ ಬಹಳ ದಕ್ಷಿಣೆ ಬಹುಮಾನ 2 ನೇಮನಿಷ್ಠೆಗಳಾಟ ಹೊರಗೆ-ಗೃಹದಿ ಪ್ರೇಮವಿಲಾಸ ಆಟ ಕೂಟಜನ ಸ್ತೋಮರೆಲ್ಲವ ನುಡಿವ ನೀತಿ ಖ್ಯಾತಿ ಕಾಮುಕನಾಗಿ ಚರಿಸಿದೆ ಜಗದೀ ಆಹಾ ಹೇಮದಾಸೆಗೆ ಸೂಳೆ ಪ್ರೇಮವ ತೋರ್ಪಂತೆ ಕಾಮಿತಪ್ರದ ನಿನ್ನ ನಾಮ ಸವಿಯನುಣ್ಣದೆ ತಾಮಸರಿಗೆ ಉಪದೇಶ ನೀಡುತ ಸತ್ಯ- ಭಾಮೆಯರಸ ನಿನಗೆ ದೂರನಾದೆನಲ್ಲಾ 3 ಹಾಡಿಹಾಡುವೆ ಎತ್ತಿ ಸುತ್ತ ಜನರು ನೋಡಿ ಹಿಗ್ಗುತ ಬಾಪು ಬಾಪು ನುಡಿಗೆ ಹಾಡಿನಲ್ಲಿಹ ಸವಿಯುಣ್ಣ ದೇನೆ ಆಡಿ ಆಡಿಪೆ ಶಿರವ ಜ್ಞಾನಿಯಂತೆ ಆಹಾ ಕೇಡು ಚಿಂತಿಸಿ ಪರರ ಸ್ವಾರ್ಥಗೋಸುಗನಿತ್ಯ ಕಾಡಿ ಬೇಡುತ ಜನರ ದೂಡುತಿಹೆ ಸಂಸಾರ ಪ್ರೌಢ ಭಕ್ತರ ಗೋಷ್ಠಿಕೂಡಿ ಭಜಿಸದ ಎನ್ನ ಗಾಢ ಡಂಭಕೆ ಜಗದಿ ಈಡು ಕಾಣಿಸು ಸ್ವಾಮಿ4 ಭಾರಿ ಶಾಲುಗಳನ್ನೆ ಹೊದ್ದು-ನಿತ್ಯ ಕೇರಿಕೇರಿ ಪುರಾಣಗಳನ್ನು ಮೆದ್ದು-ಹಾರಿ ಹಾರುತ ತತ್ವರಾಶಿ ನುಡಿದು-ಊರು ಜ- ನರಮುಂದೆ ಪಾಂಡಿತ್ಯ ತೋರ್ಪೆ ಆಹಾ ತೋರಿ ತೋರುವೆ ಪರಮವೈರಾಗ್ಯ ಭಕ್ತಿಯ ದೂರಿ ದೂಡುವೆ ಪರರ ಹುಳುಕುಗಳನು ಎತ್ತಿ ಪಾರುಗಾಣದ ಕರುಣ ತೋರದಿದ್ದರೆ ಇನ್ನು 5 ಗುಡಿಗೆ ಹೋಗುವೆ ನಾನು-ನಿತ್ಯ ಅಲ್ಲಿ ಬೆಡಗು ಸ್ತ್ರೀಯರ ಹುಡುಕುವುದೇನೆ ಕೃತ್ಯ ದೃಢಭಕುತಿಯನು ಮಾಡಲೊಲ್ಲೆ ಸತ್ಯ-ನ ಮಡದಿ ಮಕ್ಕಳಿಗಿಲ್ಲ ಭೃತ್ಯಾನುಭೃತ್ಯಾ ಆಹಾ ಹುಡುಕೀ ನೋಡಿದಾಗ್ಯೂ ವಿರಕ್ತಿ ಭಕ್ತಿಗಳಿಲ್ಲ ಬಿಡಲು ಪೊರೆಯೆ ಪುರಾಣಶಾಸ್ತ್ರಗಳನ್ನು ನಿತ್ಯ ಎನ್ನ ಅನಾದಿ ನೀ ಕಲಿಸದಿದ್ದರೆ ಈಗ 6 ದೊಡ್ಡ ಪಂಡಿತ ನಾನೆಂಬ ಹೆಮ್ಮೆ-ಶುದ್ಧ ದಡ್ಡನೆಂಬುದ ಬಲ್ಲೆ ಮನದಿ-ಹಾಗೂ ಅಡ್ಡ ಬೀಳೆನು ಭಕ್ತ ಗಣಕೆ ಸುಳ್ಳು ವೊಡ್ಡುತವರನು ಹಳಿದೂ-ಕುದಿದೇ ಮನದೀ ಆಹಾ ದುಡ್ಡುಗೋಸುಗ ಬಹಳ ದೊಡ್ಡ ದಾಸನು ಎನಿಸೀ ಹೆಡ್ಡಮಂದಿಯ ಮುಂದೆ ದೊಡ್ಡ ಭಾಷಣ ಮಾಳ್ವೆ ಗುಡ್ಡದೊಡೆಯನೆ ಭಕ್ತಜಿಡ್ಡುಲೇಶವು ಕಾಣೆ ದೊಡ್ಡ ನಾಮವ ಹಾಕಿ ಸಡ್ಡೆ ಮಾಡದೆ ತಿರಿವ 7 ಕಚ್ಚಿ ಬಿಡದಿಹ ತುಚ್ಛ ಕಲಿಯು-ಬಹಳ ಮೆಚ್ಚಿ ಬಂದಿಹ ನವನು ಬಿಡುವನೇನು ಇಚ್ಛೆ ನನ್ನದು ನಡೆಯದೇ ನೊಂದು ತುಚ್ಛ ವಿಷಯದಿ ಸೆಳೆದು ಸೆಳೆಯುತಿಹನು ಆಹಾ ಇಚ್ಛೆಯಿಂದಲಿ ಜಗವ ಸೃಜಿಸಿ ಪಾಲಿಪಲೀಲೆ ಹಚ್ಚಿಕೊಂಡಿಹ ನಿನಗೆ ನನ್ನ ಪಾಲಿಪುದೇನು ಹೆಚ್ಚು ಕಾರ್ಯವೆ ಜೀಯ ಮುಚ್ಚಿಕೊಂಡಹ ನಿನ್ನ ಸ್ವಚ್ಛ ಬಿಂಬವ ತೊರಿ ಮೆಚ್ಚಿ ಕೊಡದಿರೆ ಜ್ಞಾನ 8 ಶ್ವಾಸಮತದಲಿ ಜನ್ಮ ವಿತ್ತೆ-ವಿಜಯ ದಾಸರ ಪ್ರಿಯ ಮೋಹನ್ನ ಪರಂಪರೆಯ ದಾಸನೆನಿಸಿ ಯೆನ್ನ ಮೆರೆಸಿ ಹೀಗೆ ದೋಷಿಗೈವುದು ಥರವೆ ಶ್ರೀಭಕ್ತಪ್ರಿಯ ಆಹಾ ವಾಸುದೇವನೆ ತುರ್ಯಲೇಸು ದೃಷ್ಟಿಯ ಬೀರೆ ನಾಶವಾಗದೆ ದೋಷ ಭಾಸವಾಗದೆ ಜ್ಞಾನ ಕಾಸುಬೀಡೆನು ಹಿರಿಯ ದಾಸರ ಗುಣ ನೋಡಿ ಲೇಸು ನೀಡೆಂತೆಂಬೆ ಶ್ರೀಕೃಷ್ಣವಿಠಲಾ9
--------------
ಕೃಷ್ಣವಿಠಲದಾಸರು
ಶ್ರೀಮತ್ ತಂದೆವರದಗೋಪಾಲದಾಸ ರಾಯಾವೃಂದದಿಂದಲಿ ನಿಮಗೊಂದಿಸುವೆನೋ ಜೀಯಾ ಪ. ಇಂದಿನವರೆಗೆ ನಾನಿಂದ್ಯ ಜನರೊಳು ಕೂಡಿನಿಂದ್ಯ ಮಾಡುತ ಪರರ ಡಂಭತನದಲಿ ಮೆರೆದೆನೊಕಂದನಾ ಕುಂದುಗಳ ಒಂದನೆಣಿಸದೆ ಗುರುವೇಮಂದಜನ ರಾಶಿಯೊಳು ಬೆಂದುಹೋಗುವುದನು ಕಂಡುಅಂದದಲಿ ನೀ ಹಿಡಿದೆಳೆತಂದೂ 1 ಮುಂದೆ ಪೇಳುವೆ ಕೇಳೋಚಂದ್ರಮೌಳಿಯೆ ನಿನ್ನ ಪ್ರೀತಿಪಾತ್ರನಾದಸುಂದರಾಂಗನ ಮುಖದೀ ನೀನಿಂದು ಅಘವೃಂದಗಳ ಹೊಡೆದೋಡಿಸೀಮಿಂಚಿನಿಂದಕ್ಷ ರ, ಯ, ಮ ಎಂಬಕ್ಷರಗಳ ಕಲ್ಪಿಸಿಎಂದಿಗೂ ಮರೆಯದಂಥ ತಂದೆವರದವಿಠಲನೆಂಬಅಂಕಿತದಿಂದ ಬಂಧನವ ಮಾಡಿ ಭಾವ ಸಂವತ್ಸರಫಾಲ್ಗುಣ ಶುದ್ಧ ತ್ರಯೋದಶಿಚಂದ್ರವಾರ ಅರುಣೋದಯ ಕಾಲದೀಕಡೆಕೋಳ ಶ್ರೀ ವೆಂಕಟೇಶನ ಸನ್ನಿಧಾನದಿಅನುಗ್ರಹಿಸಿದೆಯೋ ಮಹಾರಾಯಾಮಂದಮತಿ ನಾ ನಿಮ್ಮ ಮಹಿಮೆಯನು ಪೇಳಲೆನ್ನಳವೆತವಪಾದಾರವಿಂದದಿ ಅನವರದ ಜ್ಞಾನ ಭಕುತಿವೈರಾಗ್ಯವನಿತ್ತು ರಕ್ಷಿಸಬೇಕೋತಂದೆವರದವಿಠಲದೂತಾ ಮನೋ ನಿಯಾಮಕ ದೊರೆಯೇ
--------------
ಸಿರಿಗುರುತಂದೆವರದವಿಠಲರು
ಶ್ರೀರಂಗಶಾಯಿ ವಿಠಲ ಪೊರೆಯ ಬೇಕಿವಳ ಪ ಭವ ಶರಧಿ ದಾಂಟಿಸುತ ಅ.ಪ. ಕಾರಾಣಾತ್ಮಕ ನಿನ್ನ | ಗುಣರೂಪ ಕ್ರಿಯೆಗಳಧಾರಣೆಗಳಿಲ್ಲದಲೆ | ಧ್ಯಾನರತಳಾಗಿಮೂರಾರು ದ್ವಾರಗಳ | ಬಂಧಿಸುತ ಯೋಗದಲಿಆರಾಧ್ಯ ಮೂರ್ತಿಯನೆ | ಮರೆತ ಯೋಗಿಣಿಯ 1 ತೈಜಸ ಸು | ವ್ಯಕ್ತ ಅಂಕಿತವಾ 2 ತಾರತಮ್ಯ ಜ್ಞಾನ | ಮೂರೆರಡು ಭೇದಗಳಸಾರತತ್ವಗಳರುಹಿ | ಪೊರೆಯ ಬೇಕಿವಳ |ಕಾರುಣಿಕ ಕಂಕಣಾ | ಕಾರ ಚಕ್ರಾಕೃತಿಯತೋರಿರುವೆ ತನ್ಮಹಿಮೆ | ಅರಿಯ ಕಾತುರಳಾ 3 ಸಿರಿ ಸತ್ಯ ನರೆಯಣನೆಪರಿಪರಿಯಲಿಂದಿವಳ | ಪೊರೆಯ ಬೇಕೋಗರುಡಗಮನನೆ ದೇವ | ಸರ್ವಜ್ಞ ನೀನಿರಲುಒರೆವೆನೆಂಬಪರಾಧ | ಮರೆದು ಪಾಲಿಪುದೋ 4 ಅದ್ವೈತ ಉಪದೇಶ | ತಿದ್ದಿನಿನ ಪದದಲ್ಲಿಶುದ್ಧ ಭಕ್ತಿಜ್ಞಾನ | ವೃದ್ಧಿಯನೆ ಗೈಸೀಮಧ್ವಾಂತರಾತ್ಮ ಗುರು | ಗೋವಿಂದ ವಿಠ್ಠಲನೆಅದ್ವಿತೀಯನು ಯೆಂಬ | ಬುದ್ಧಿ ಸ್ಥಿರ ಮಾಡೋ 5
--------------
ಗುರುಗೋವಿಂದವಿಠಲರು
ಶ್ರೀರಾಮ ನಿನ್ನ ಪದಕೆರಗಿ ನಮಿಸಿವೆನು ತೋರೆನಗೆ ನಿಜರೂಪ ಪರಿವಾರ ಸಹಿತ ಪ. ಶ್ರೀ ಗುರುಗಳಿಗೆರಗಿ ಅವರ ಕರುಣಾಬಲದಿ ಈಗ ಈ ಜನ್ಮದಲಿ ನಿನ್ನ ಭಜಿಪೆ ನಾಗಶಯನನೆ ನಿನ್ನ ಜನ್ಮಕರ್ಮದ ದಿನದಿ ಬೇಗ ಬಂದೆನ್ನೊಳಗೆ ನೆಲಸಿದೆಯೊ ದೇವ 1 ನಿನ್ನ ದರುಶನಕೆಂದು ಘನ್ನ ಯೋಗಿಗಳು ಬರೆ ಮನ್ನಿಸೆ ಇರುತಿರಲು ದ್ವಾರಪಾಲಕರು ಇನ್ನವರ ಶಾಪದಲಿ ದೈತ್ಯಕುಲದಲಿ ಜನಿಸೆ ಮುನ್ನವರ ಪೊರೆಯಲು ಭೂಮಿಯೊಳು ಬಂದೆ 2 ದಶರಥಗೆ ಸುತನಾಗಿ ತಾಟಕಿಯ ಸಂಹರಿಸಿ ಅನುಜ ಕುಶಲದಿಂದಲಿ ಶಿಲೆಯ ಹೆಣ್ಣುಗೈಯುತ ಬಂದು ಶಶಿಮುಖಿ ಸೀತೆಯನು ಕರಪಿಡಿದ ದೇವ 3 ಧನುವ ಮುರಿದುದ ಕೇಳೀ ಜಮದಗ್ನಿ ಕುವರನು ನಿನ ಸಂಗಡದಲಿ ಕಾಳಗಕೆ ಬರಲು ದನುಜರಿಗೆ ಭ್ರಮೆಗೊಳಿಸಿ ಕನಲುತಿಬ್ಬರು ಕಾದಿ ಘನಬಲ ಗೆಲಿದಂಥ ಅನುಗುಣನೆ ರಾಮ 4 ಅನುಜ ಸೀತೆ ಸಹಿತದಿ ವನಕೆ ಪ್ರೀತಿಯಿಂದಲಿ ಪೋದೆ ನೀತಿಯನು ತಿಳಿದು ಪಾತಕವ ಹರಿಸುವ ಪರಮ ಪಾವನ ಮೂರ್ತಿ ಈ ತೆರದ ಲೀಲೆಯನು ತೋರಿದೆಯೊ ಜಗಕೆ 5 ಕಂಡು ಮಾಯಾಮೃಗವ ಅಂಡಲೆದು ಅದರೊಡನೆ ಭಂಡ ರಾವಣ ಬಂದು ಭಿಕ್ಷುಕನ ತೆರದಿ ಲಂಡನತದಲಿ ಸೀತೆಯನು ಕದ್ದು ಓಡಲು ಕಂಡು ನಿರ್ಜನ ಗೃಹವ ಬೆಂಡಾದ ರಾಮ 6 ಅನುಜನೊಡನೆ ವನವ ಅಲೆದಲೆದು ಕಂಗೆಟ್ಟು ಘನ ಪಕ್ಷಿಯಿಂದಲಿ ವಾರ್ತೆ ತಿಳಿದು ಹನುಮ ಸುಗ್ರೀವರಿಗೆ ಒಲಿದು ವಾಲಿಯ ಕೊಂದು ವನಿತೆ ಸೀತೆಯನರಸೆ ವಾನರರ ಕಳುಹಿದೆ 7 ಹನುಮನಿಂದಲಿ ಸುಟ್ಟು ದನುಜಪುರ ಉಂಗುರವ ವನಿತೆ ಸೀತೆಗೆ ಕೊಟ್ಟು ವಾರ್ತೆ ತರಿಸಿ ವನಧಿಗೆ ಸೇತುವೆಯ ಕಟ್ಟಿ ವಾನರರೊಡನೆ ದನುಜ ರಾವಣ ಸಹಿತ ರಕ್ಕಸರ ಕೊಂದೆ 8 ಅಗ್ನಿಯಿಂ ಸೀತೆಯನು ಶುದ್ಧಳೆನಿಸಿ ಗ್ರಹಿಸಿ ವಿಘ್ನವಿಲ್ಲದ ಪದ ವಿಭೀಷಣಗಿತ್ತು ಮಗ್ನನಾಗಿರೆ ಭರತ ನಿನ್ನ ಪದಧ್ಯಾನದಲಿ ಅಗ್ನಿಸಖಸುತನೊಡನೆ ವಾರ್ತೆ ಕಳುಹಿಸಿದೆ 9 ಬಂದೆದುರುಗೊಳ್ಳೆ ಭರತನು ಸಕಲ ಪರಿವಾರ ಬಂದಯೋಧ್ಯೆಗೆ ಸಕಲ ಸನ್ನಾಹದಿ ಅಂದು ಸಿಂಹಾಸನದಿ ಪಟ್ಟಾಭಿಷೇಕವಗೊಂಡು ಬಂದ ಭಕ್ತರಿಗೆ ಇಷ್ಟ್ಟಾರ್ಥ ಸಲಿಸಿದೆಯೊ 10 ಕೊಟ್ಟು ಕಪಿಗೆ ಬ್ರಹ್ಮಪಟ್ಟದ ಪದವಿಯನು ಶ್ರೇಷ್ಠನೆನಿಸಿದೆಯೊ ಜಗಕೆ ಬೆಟ್ಟದೊಡೆಯ ಇಷ್ಟ ಶ್ರೀ ಗೋಪಾಲಕೃಷ್ಣವಿಠ್ಠಲ ಎನಗೆಕೆಟ್ಟ ಸಂಸೃತಿ ಬಿಡಿಸಿ ಕೊಟ್ಟಭಯ ಸಲಹೊ 11
--------------
ಅಂಬಾಬಾಯಿ
ಶ್ರೀಲೋಲನೆ ಪರಿಪಾಲಿಪುದೆಮ್ಮನು ಕಾಲವಿಳಂಬಿಸದೇ ಪ. ಪೇಳಲೆಮಗೀ ನಾಲಿಗೆ ಸಾಲದು ಅ.ಪ ಅನಿಮಿಷರೂಪದಿಂದಾಗಮವನು ನೀನಜನಿಗೆ ತಂದಿತ್ತೆ ಪೂರ್ವದಿ ಘನ ಕಚ್ಛಪರೂಪದೊಳಾಗಿರಿಯನು ಬೆನ್ನೊಳಗಾಂತೇ ಅನಿಮಿಷರೊಡೆಯನ ಮನವನು ತಣಿಸಿದ ಫನಮಹಿಮನೆ ಶ್ರೀ ವನಜಜ ಜನಕನೆ ಶ್ರೀಲೋಲನೆ 1 ದುರುಳನ ಕರದಲಿ ಧರಣಿಯು ಸಿಲುಕುತ ಕರೆಕರೆಗೊಳ್ಳುತಿರೆ ವರಸೂಕರನಾಗುತ ದುರುಳನ ಛೇದಿಸಿ ಧರಣಿಯ ಕೈಪಿಡಿದೆ ಮತ್ತೆ ತರಳನ ಪೊರೆಯಲು ನರಕೇಸರಿ ರೂಪದಿ ಹಿರಣ್ಯಕನುದರದ ಕರುಳನು ಕಿತ್ತೆಸೆದೆÉೀ ಶ್ರೀಲೋಲನೆ 2 ಕಪಟತನದಲಿ ವಟುವಂದದಿ ಬಂದು ನೆಲವದಾನವ ಬೇಡಿ ಕಪಟವನರಿಯದೆ ದಾನವ ಕೊಟ್ಟನ ಪಾತಾಳಕೆ ಗುರಿ ಮಾಡಿ ಅಪರಿಮಿತಾನಂದದಿ ಮೆಚ್ಚಿ ಬಲೀಂದ್ರನ ಮನೆಬಾಗಿಲ ಕಾಯುವ ಗೊಲ್ಲ ನೀನೆನಿಸಿದೆ 3 ವರಮುನಿ ಜಮದಗ್ನಿಯ ರೇಣುಕಾಸುತ ಭಾರ್ಗವ ನೀನಾಗಿ ವರಪರಶುದರನೆಂದೆನ್ನಿಸಿ ಭೂಭುಜರನು ತರಿದಟ್ಟಿ ಧರಣೀಸುರರಿಗೆ ಸುರತರುವೆನಿಸಿದ 4 ಹರವಿರಂಚಿಯರ ವರಗಳ ಗರ್ವದೆ ದಶಶಿರದೈತ್ಯನು ಮೆರೆದು ಪರಿಪರಿ ವಿಧದಿಂ ಸುರಭೂಸುರರನು ಕರೆಕರೆಗೊಳಿಸುತಿರೆ ಧರಣಿಪ ದಶರಥ ತನುಭ ವರೆನ್ನಿಸಿ ನಿಶಿಚರ ಕುಲವನೇ ಸವರಿದ ರಾಘವ 5 ಅಷ್ಟಮದಂಗಳ ದಟ್ಟಣೆಯಿಂದತಿ ಅಟ್ಟಹಾಸದಿ ಮೆರೆದಾ ದುಷ್ಟ ಕಂಸನ ಮರ್ಧಿಸಿ ಧರಣಿಯ ಶಿಷ್ಟರ ಪಾಲಿಸಲು ವೃಷ್ಟಿವಂಶದಿ ಬಂದು ಕೃಷ್ಣನೆನಿಸಿ ತನ್ನ ಇಷ್ಟರಾದ ಪಾಂಡುಪುತ್ರರ ಸಲಹಿದ6 ಸಿದ್ದಿ ಸಂಕಲ್ಪದಿ ಬಲಭದ್ರನೆನ್ನಿಸಿ ಭವಬದ್ಧ ಜೀವಿಗಳಂ ಶುದ್ಧ ಮಾರ್ಗದಿ ಸಂಸ್ಕರಿಸಿ ಜಗವನು ಉದ್ಧರಿಸಲ್ಕಂಡು ಬುದ್ಧನೆಂದೊಳಿಸಿ ಮೆರೆದ ಸಂಕರ್ಷಣ ಭದ್ರಮಂಗಳ ಭವ್ಯಸ್ವರೂಪನೆ7 ಕಲಿಮಲದೋಷವ ತೊಳೆಯಲು ಪುನರಪಿ ಕಳೆಯೆ ನೀನೈತರುವೆ ಫಲತೆರದಲಿ ಭಕ್ತರ ಸಲಹಲು ಫಲರೂಪಗಳ ಕೈಕೊಳುವೆ ಹಲುಬುವ ಕಂದನ ಸಲಹೈ ಸಿರಿದೊರೆ 8
--------------
ನಂಜನಗೂಡು ತಿರುಮಲಾಂಬಾ
ಶ್ರೀವರ ಕೀರ್ತಿಯಂ ಅರ್ಥಿಯಿಂದಾಲಿಸೈ ಚಿತ್ತಶುದ್ಧಿಯಿಂ ಪ ಭಾವಿಸಿವಾರ್ತೆಯ ವ್ಯಾಸ ವಾಲ್ಮೀಕಿಯು [ಆವರ]ಶುಕ ಮನುಶ್ರೇಷ್ಠರೆಲ್ಲ ನಿತ್ಯಪಠಿಪರೋ ಅ.ಪ ಘೋರಾರಣ್ಯದಿ ತಿರುಗುತ್ತ ಶೌರ್ಯದಿ ಗೋಗ್ರಹಣವನು ಸಾಧಿಸುತಲಿ ಮೀರಿ ಸಂಧಿಕೇಳದ ದುರ್ಯೋಧನರ ಹತಗೈದ 1 ರಾಮನು ಕಾಡೊಳು ಮೃಗವನು ಮರ್ದಿಸಿ ಭೂಮಿಜೆಯಂ ತರೆ ರವಿಜನಿಂ ಆ ಮಹಾಸಾಗರವನು ಬಂಧಿಸಿ ಲಂಕಾ ಪ್ರೇಮಿಯನ್ನು ಕೊಂದು ಬಂದ ರಾಮಚರಿತಮಂ2 ದೇವಕಿಸುತ ಗೋಪೀಗೃಹವರ್ಧನ ಗೋವರ್ಧನಗಿರಿಯೆತ್ತಿದ ಮಾವಕಂಸಾದಿ ದುರ್ದೈತ್ಯರ ಖಂಡಿಸಿ ಸೇವಿಸುವ ಸಿಂಧುಗಳ ಸಲಹುವ ಜಾಜೀಶನು 3
--------------
ಶಾಮಶರ್ಮರು
ಶ್ರೀಶನು ತನ್ನಯ ದಾಸತ್ವ ಕೊಟ್ಟೆನ್ನ ಧ್ಯಾಸದಿ ಬಂದು ಸ್ಥಿರಮಾದ ಪ ಧ್ಯಾಸದೊಳಗೆ ಬಂದು ಸ್ಥಿರವಾಗಿ ನಿಂತಿನ್ನು ನಾಶನ ಜಗದಾಸೆ ಎನಗೇನೆ ಅ.ಪ ಸುಂದರಮಾದ ಸುಸಂಧಿಯೆನಗೆ ಫಲಿಸಿತು ಸುಕೃತ ಫಲದಿಂದೆ ಸುಕೃತ ಫಲದಿಂದ ಎನ್ನಗೆ ತಂದೆ ಗೋವಿಂದ ತಾನೆ ಗೋವಿಂದ 1 ಕೆಟ್ಟ ಬವಣೆಯಿಂದ ಕೆಟ್ಟು ಹೋಗುತಲಿರ್ದೆ ಸೃಷ್ಟೀಶ ದಯದಿ ನೋಡಿದ ಸೃಷ್ಟೀಶ ದಯದಿಂದ ನೋಡಿ ಮುಂದಕೆ ಕರೆದು ನೆಟ್ಟನ ಮಾರ್ಗಕೆ ಹಚ್ಚಿದ 2 ಸಾಧ್ಯವಲ್ಲಾರಿಗೀತಸಾಧ್ಯಮಾಗಿ ತಾನೆ ಸಾಧ್ಯವಿಲ್ಲದ ಸುದ್ದಿ ತಿಳಿಸಿದ ಸಾಧ್ಯವಿಲ್ಲದ ನಿಜ ಸುದ್ದಿ ತಿಳಿಸಿ ಪರಿ ಶುದ್ಧನ್ನ ಮಾಡಿ ನಿಲಿಸಿದ 3 ಮೂಲೆಗೆ ಬಿದ್ದ್ವೊಸ್ತು ಮೇಲಕ್ಕೆ ಎತ್ತಿ ತವ ಲೀಲೆ ನಾಲಗೆಮೇಲೆ ಬರೆದನೆ ಲೀಲೆ ನಾಲಗೆಮೇಲೆ ಬರೆದೆನ್ನಜ್ಞಾನ ಕಾಳೆಂಬ ಕತ್ತಲ ಕಳೆದನೆ 4 ಮಂತ್ರಮೂಲನು ಸರ್ವಾಂತರ್ಯಾಮಿಯು ಸ್ವ ತಂತ್ರ ತಾನೆಂಬ ನಿಜ ತಿಳಿಸಿದ ಸ್ವ ತಂತ್ರ ತಾನೆಂಬ ನಿಜ ತಿಳಿಸಿ ಎನಗನ್ಯ ಚಿಂತೆ ಭ್ರಾಂತಿಗಳೆಲ್ಲ ಬಿಡಿಸಿದ 5 ಮರವೆಯ ಹಾರಿಸಿ ಕರುಣಿಸಿ ಸ್ಥಿರಜ್ಞಾನ ಪರಿಭವ ದು:ಖ ಪರಿಹರಿಸಿದ ಪರಿಭವ ದು:ಖ ಪರಿಹರಿಸೆನಗೆ ಸ್ಥಿರವಾದ ಪರಲೋಕದರಿವು ನಿಲಿಸಿದ 6 ಆಶದಿ ಬಿದ್ದು ನಾ ದೇಶದೇಶವ ತಿರುಗಿ ಬೇಸತ್ತು ಬಾಯ ಬಿಡುತಿರ್ದೆ ಬೇಸತ್ತು ಬಾಯ ಬಿಡುತಿರ್ದೆ ಕಂಡೆನ್ನಯ್ಯ ಲೇಸಾದ ಪದವಿ ತೋರಿಸಿದ 7 ಜಗಸುಖಕೊಲತಿದ್ದೆ ಜಗದಾತ್ಮನು ಈಗ ಜಗದ್ಹಗರಣ ತೋರಿಸ ನಗಿಸಿದ ಹಗರಣ ತೋರಿಸಿ ನಗಿಸಿದಚಲಸೌಖ್ಯ ಬಗೆ ತೋರಿ ಜಗಸುಖ ಮರೆಸಿದ 8 ಏನೆಂದು ಪೇಳಲಿ ಸಾನಂದನುತ ಮಹ ದಾನಂದದಾಲಯ ಪೊಗಿಸಿದ ಆನಂದದಾಲಯ ಪೊಗಿಸೆನ್ನ ವದನದಿ ತಾ ನಿಂದು ನಿಖಿಲ ನುಡಿಸಿದ 9 ಭವಭಯಹರಿಸುವ ಸವಿನುಡಿಗಲಿಸಿದ ಭವರೋಗದ್ವೈದ್ಯ ಮಮಪಿತ ಭವರೋಗದ್ವೈದ್ಯ ಮಮಪಿತ ಮುಂದಿನ್ನು ಸಾವ್ಹುಟ್ಟೋಭೀತಿ ಎನಗಿಲ್ಲ 10 ಕರ್ತು ಸರ್ವೋತ್ತಮ ನಿತ್ಯನಿರ್ಮಲ ಎನ್ನ ಮತ್ರ್ಯದ ಗುಣವ ತೊಡೆದೆನ ಮತ್ರ್ಯದ ಗುಣ ತೊಡೆದು ಸತ್ಯ ಶ್ರೀರಾಮ ಎನ್ನ ಮುಕ್ತಿ ಸಾಮ್ರಾಜ್ಯ ತಖ್ತೆ ಏರಿಸಿದ 11
--------------
ರಾಮದಾಸರು
ಶ್ರೀಶಪದ ಕಮಲಕ್ಕೆ ಮಧುಪ | ನಿನ್ನದಾಸನೆಂದೆನಿಸುವುದು ಧನಪ | ಸಖ ಮ-ಹೇಶನ ಸುತ ಪೇಳ್ವೆ ಭಿನ್ನಪ | ನೀ ಪ್ರ-ಕಾಶಿಪುದು ಮನವಿ ವಿಘ್ನಪ 1 ಪತಿ ಕರುಣಿ ಶುಭಗಾತ್ರ | ಗ್ರಂಥಲೇಸೆನಿಸಿ ಲಿಖಿಸಿದೆ ಪವಿತ್ರ | ಮೂರ್ತಿಪಾಶಾಂಕುಶ ಪಾಣಿ ಸುಚರಿತ್ರ 2 ಸ್ವಾಂತ | ದಲ್ಲಿಅಭಯ ನೀ ತಿಳಿಸು ನಿಶ್ಚಿಂತ 3 ವಿಘ್ನಪನೆ ದುರ್ವಿಷಯದಲ್ಲಿ | ಬಹಳಮಗ್ನವಿಹ ಮನವ ಹರಿಯಲ್ಲಿ | ನಿರತಲಗ್ನ ಮಾಡಿಸು ತ್ವರ್ಯದಲ್ಲಿ | ಇನ್ನೂ ವಿಘ್ನಗಳಿಗಂಜಿಕೆಯು ಎಲ್ಲಿ ? | 4 ಧನಪ ವಿಶ್ವಕ್ಸೇನ ಯಮಳ | ಆ ಅ-ಶ್ವಿನೀಗಳ್ಗೆ ಸಮ ಕರಿಗೊರಳ | ಪುತ್ರನನುಜನೇ ಶೇಷ ಶತಗರುಗಳ | ರಲ್ಲಿಗುಣೋತ್ತಮನೆ ಕಾಯೊ ನಮ್ಮಗಳ | 5 ಬವರ | ದಲ್ಲಿಗೌರಿಪತಿ ವರದಿ ಉದ್ಧಟರ | ಆದಕ್ರೂರಿ ಜನ ಸಂಹಾರಿ ಶೂರ | 6 ಸೂತ್ರ ಅಪರೂಪ | ಖಳರದರ್ಪ ಭಂಜನನೆ ಶುಭರೂಪ | 7 ಶ್ರೀಶನತಿ ನಿರ್ಮಲವು ಎನಿಪ | ನಾಭಿದೇಶಗತನಾಗಿಹನೆ ಗಣಪ | ರಕ್ತವಾಸೆರಡು ಶೋಭಿತನೆ ಸುರಪ | ಮಿತ್ರಮೂಷಕಾ ವರವಹನ ರೂಪ | 8 ಶಂಕರಾತ್ಮಜ ದೈತ್ಯ ಜನಕೆ | ಅತಿ ಭ-ಯಂಕರ ಗತಿಯ ನೀಡಲ್ಕೇ | ನೀನುಸಂಕಟ ಚತುರ್ಥಿಗ ಎನೆಲ್ಕೆ | ಹಾಗೆಮಂಕು ಜನಾವೃತವು ಮೋಹಕ್ಕೆ 9 ಸಿದ್ಧಿ ವಿಧ್ಯಾಧರರು ಎಂಬ | ಗಣಾರಾಧ್ಯ ಪದಕಮಲ ನಿನದೆಂಬ | ಜನಕೆಸಿದ್ಧಿದಾಯಕ ವೇಗ ಎಂಬ | ಮಹಿಮಬುದ್ಧಿ ವಿದ್ಯೆಗಳ ಕೊಡು ತುಂಬ 10 ಭಕ್ತವರ ಭವ್ಯಾತ್ಮ ಪರಮ | ಶಾಸ್ತ್ರಸಕ್ತವಾಗಲಿ ಮನವು ಅಧಮ | ವಿಷಯಸಕ್ತಿರಹಿತನ ಮಾಡಿ ಪರಮ | ಶುದ್ಧಭಕ್ತನೆಂದೆನಿಸು ನಿಸ್ಸೀಮ | 11 ಶಕ್ರ ಪೂಜಿಸುತ ಗುರು ನಿನ್ನ ವೈರಿಶುಕ್ರ ಶಿಷ್ಯರ ಕೊಂದ ನಿನ್ನ | ಆ ಉ-ರುಕ್ರಮ ರಾಮ ಪೂಜಿಸೆನ್ನ | ತೋರ್ದವಕ್ರ ತುಂಡನೆ ಕರುಣವನ್ನ 12 ಕೌರವನು ಭಜಿಸದಲೆ ನಿನ್ನ | ಆಸಮೀರನ ಗದೆಯಲಿಂದಿನ್ನ | ಹತನುತಾರಕಾಂತಕನನುಜ ಯೆನ್ನೆ | ಧರ್ಮಪ್ರೇರಕನೆ ಸಂತೈಸು ಎನ್ನ 13 ಮೂಕರನ ವಾಗ್ಮಿಗಳ ಗೈವ | ಗುರು ಕೃ-ಪಾಕರನೆ ಕಾಮಗಳ ಕೊಡುವ | ಪರಮಲೇಖಕನೆ ಮನ್ಮನದಲಿರುವ | ಬಹುವ್ಯಾಕುಲವ ಪರಿಹರಿಸು ದೇವ | 14 ಸತ್ತೆ ವೃತ್ತಿಯು ಮತ್ತೆ ಪ್ರಮಿತಿ | ಜಗಕೆಇತ್ತು ತಾ ಸೃಷ್ಟ್ಯಷ್ಟಕತ್ರ್ರೀ | ಎನಿಪಚಿತ್ತಜ ಪಿತನ ದಿವ್ಯ ಸ್ಮøತಿ | ಇತ್ತುನಿತ್ಯ ನೀ ಪಾಲಿಪುದು ಸದ್ಗತಿ 15 ಪಂಚವಕ್ತ್ರನ ತನಯ ಕೇಳೊ | ಎನಗೆಪಂಚಭೇದದ ಜ್ಞಾನ ಪೇಳೊ | ಹರಿಯುವಾಂಛಿತ ಪ್ರದನ ದಿಟ ಆಳೊ | ಭವದಿವಂಚಿಸದೆ ಕಾಯೊ ಕೃಪಾಳೊ | 16 ಏನು ಬೇಡುವುದಿಲ್ಲ ನಿನ್ನ | ದುಷ್ಟಯೋನಿಗಳು ಬರಲಂಜೆ ಘನ್ನ | ಲಕುಮಿಪ್ರಾಣಪತಿ ತತ್ವರಿಂದಿನ್ನ | ಕಾರ್ಯತಾನೆಂಬ ಮತಿಯ ಕೊಡು ಮುನ್ನ 17 ಭಕ್ತ ಜನ ಕಲ್ಪ ತರುವೆನಿಪ | ಉಮೆಯಪುತ್ರ ಮಮ ಮಮತೆಯನು ಹರಿಪ | ದಾಯಹತ್ತಿಹುದು ನಿನ್ನಲ್ಲಿ ಗಣಪ | ಕಳೆಯೊಎತ್ತಿ ಕೈ ಮುಗಿವೆ ಭವರೂಪ 18 ಜಯ ಜಯವು ಎಂಬೆ ವಿಘ್ನೇಶ | ತಾಪತ್ರಯಗಳಿನು ನೀನೇ ವಿನಾಶ | ಗೈದುಭಯ ಶೋಕರಹಿತ ವಿದ್ಯೇಶ | ಜನ್ಮಾಮಯ ಮೃತಿ ಹರಿಸೊ ನಭಕೀಶ | 19 ನಮಿಸುವೆನೊ ಹೇರೊಡಲ ನಿನ್ನ | ಕರುಣಿಕಮಲಾಕ್ಷ ಹರಿನಾಮವನ್ನ | ನಿರುತವಿಮಲ ಮನದಿ ನುಡಿವಂತೆ ಎನ್ನ | ಮಾಡಿಕಮಲೇಶ ಪದ ತೋರೊ ಘನ್ನ20 ಎರಡು ನವ ಮೂರು ಪದಗಳನ್ನ | ಗೌರಿತರಳನಲಿ ಇರುವಂಥ ಪ್ರಾಣ | ಪತಿಯುಗುರು ಗೋವಿಂದ ವಿಠ್ಠಲನಾ | ಪದದಿಇರಿಸುವರ ಹರಿ ಪೊರೆವ ಅವರನ 21
--------------
ಗುರುಗೋವಿಂದವಿಠಲರು
ಶ್ರೀಶೈಲದೊಳಗಿಪ್ಪ ಸ್ವಾಮಿ ಪುಷ್ಕರಣಿ ಇತಿ ಹಾಸವ ದಿಲೀಪನೃಪ ಬೆಸಗೊಳಲು ಕೇಳಿ ದು ಕೇಳಿ ಸಂತೋಷಿಸುವುದು ಪ ಮುನಿಕುಲೋತ್ತಮ ನೆನಿಸಿ ದುರ್ವಾಸಋಷಿ ದಿಲೀ ಪನ ಸದನವೈದಿರಲು ಕೇಳಿ ಸಂತೋಷದಲಿ ಮುಗಿದು ವಿಜ್ಞಾಪಿಸಿದನು ಋಷಿಗೆ ಅನಿಮಿಷೇಶಾ ವೆಂಕಟನ ನಾಮಧೇಯ ಕುಂ ಭಿಣಿ ಯೊಳಿಪ್ಪಾಖ್ಯಾನ ತೀರ್ಥಗಳ ವೈಭವಗ ದುರ್ವಾಸ ಪೇಳೊದಗಿದಿ 1 ಕೇಳು ರಾಜೇಂದ್ರ ವೆಂಕಟ ಪರ್ವತನು ಮೇರು ಶೈಲಾತ್ಮಜನು ವಾಯು ಶೇಷರ ಸುಸಂವಾದ ಸ್ವರ್ಣ ಮುಖರೀ ತೀರದಿ ಬೀಳಲ್ಕೆ ನೊಂದು ಪ್ರಾರ್ಥಿಸಿದ ಶೇಷನು ಎನ್ನ ಮ್ಯಾಲೆ ಮಲಗಿಪ್ಪ ತೆರದಂತೆ ದಯದಿಂ ನೀನೆ ಶೇಷಾದ್ರಿಯೆನಿಸುತಿಹುದು 2 ಈ ನಗೋತ್ತಮದಾದಿ ಮಧ್ಯಾವಸಾನ ಪ್ರ ಸೂನು ಫಲ ಸಂಯುಕ್ತ ಸಾನುಗಳ ಸುರುಚಿಕೋ ಪುಷ್ಕರಣಿ ತೀರ್ಥದ ತಟದಲಿ ಶ್ರೀನಿವಾಸನು ಬಂದು ನಿಂತ ಕಾರಣವೆನಗೆ ನೀನರುಪುವುದು ಯೆಂದು ಬೆಸಗೊಳಲು ದುರ್ವಾಸ ನೃಪಗೆ ಹರುಷೋದ್ರೇಕದಿ 3 ತೀರ್ಥೋತ್ತಮತ್ವ ಸಾಪೇಕ್ಷಿಯಿಂದಲಿ ಬ್ರಹ್ಮ ಪತ್ನಿ ಪೂರ್ವದಲಿ ಬ್ರಹ್ಮಾವರ್ತ ದೇಶದೊಳ ಪುಲಸ್ತಾಖ್ಯ ಮುನಿಪ ತತ್ತೀರದಲಿ ತಪವಗೈವೆನೆಂದೆನುತ ಬರೆ ಪುತ್ರನೆಂದರಿದು ಮನ್ನಿಸದಿರಲು ಕೋಪದಲಿ ನಿಷ್ಫಲವಯೈದಲೆಂದು ನುಡಿದ 4 ನದ್ಯೋತ್ತಮತ್ವ ಜಾಹ್ನವಿಗಿರಲಿ ಗುಣಗಳಿಂ ಸ್ವರ್ಧುನಿಯು ನೀಚಳಾದರೆಯು ಸರಿ ಲೋಕ ಪ್ರ ಪಾದ ಪ್ರಸಾದದಿಂದ ವಾಗ್ದೇವಿ ನುಡಿಗಳು ಭ ವದ್ವಂಶರೆಲ್ಲ ರಾಕ್ಷಸರಾಗಿ ಬಹಳ ವಿ ಪದಕೆರಗಿ ಬಿನ್ನೈಸಿದ 5 ಅನಭಿಜ್ಞ ಲೋಕೋಪಕಾರ ತಪವೆಂದರಿಯ ದನುಚಿತೋಕ್ತಿಗಳನಾಡಿದೆ ಮಯಾಕೃತದೋಷ ಮುನಿವರನು ಸಂಪ್ರಾರ್ಥಿಸೆ ಪುನರಪಿ ವಿಶಾಪವಿತ್ತಳು ಪ್ರಸನ್ಮುಖಳಾಗಿ ಜನಿಸಲೀ ಭವದ ಪ್ರಾಂತಕ್ಕೆವರ ವಿಭೀ ಭಗವದ್ಧ್ಯಾನಪರಳಾದಳು 6 ತೀರ್ಥೋತ್ತಮತ್ವ ಸಾಪೇಕ್ಷಯಿಂ ವಾಗ್ದೇವಿ ಮತ್ತು ತಪದಿ ಪ್ರೀತಿಗೊಳಿಸಲ್ಕೆ ದೇವದೇ ಬಿನ್ನೈಸಿದಳು ವಾಂಛಿತವನು ವ್ಯರ್ಥವಾಯಿತು ತಪವು ಬಹ್ಮ ಶಾಪದಲಿ ತೀ ರ್ಥೋತ್ತಮತ್ವವು ಕರುಣಿಸೆಂದು ಕೇಳ್ದುದಕೆ ಪ್ರ ಇನಿತೆಂದು ಕಾರುಣ್ಯಸಿಂಧು 7 ನದಿಯರೂಪಕೆ ಬ್ರಹ್ಮಶಾಪ ನಿನಗಾಯಿತ ಲ್ಲದೆ ಸರೋವರಕೆ ಬ್ಯಾರಿಲ್ಲ ಪುಷ್ಕರಣಿಗಳೊ ಸ್ವಾಮಿ ಪುಷ್ಕರಣಿ ಎನಿಸಿ ವಿಧಿಪತ್ನಿ ಶೇಷನೋದ್ದೇಶ ತ್ವತ್ ಸನ್ನಿಧಾ ನದಿ ವಾಸವಾಹೆ ಸಂದೇಹವಿಲ್ಲಿದಕೆ ಸ ಸಜ್ಜನರಿಗಖಿಳಾರ್ಥವೀವೆನೆಂದ 8 ಮೂರುವರೆ ಕೋಟಿ ತೀರ್ಥಗಳು ಭುವನತ್ರಯದೊ ಳಾರಾಧಿಸಿದರೆಯೆನ್ನ ಸ್ವಸ್ವ ಪಾಪೌಘ ಪರಿ ಧನುರ್ಮಾಸ ಸಿತಪಕ್ಷದ ಈರಾರುದಿನದಲರುಣೋದಯಕೆ ತೀರ್ಥ ಪರಿ ವಾರನೈದಿರಿ ಶುದ್ಧರಾಗುವಿರಿಯೆಂದು ತ ಪ್ರೇಷ್ಯತ್ವ ವಾಣಿಗಿತ್ತ 9 ವಾಣಿದೇವಿಯು ತೀರ್ಥರೂಪಳಾಗಲು ಕೃಷ್ಣ ವೇಣಿಸಮ ಬಕುಳ ಮಾಲಿಕೆ ತೀರ್ಥ ಭೂಮಾಭಿ ಹರಿಗೆ ನೈವೇದ್ಯರಚಿಸಿ ಪಾನೀಯ ಧೀ ಭೋಗ ಪತ್ನಿ ಪೂರ್ವದಿ ಸನ್ನಿ ಧಾನದಲ್ಲಿಪ್ಪೆನೆಂದೆನುತ ಪ್ರಾರ್ಥಿಸೆ ಶೇಷ ತಾನಿತ್ತ ಕಮಲಾಕಾಂತನು 10 ಸ್ವಾಮಿ ಪುಷ್ಕರಣಿ ನವತೀರ್ಥಮಾನಿಗಳಿಗೆ ಸು ಧಾಮವೆನಿಸುವಳು ತತ್ತನ್ನಾಮಗಳು ಪೇಳ್ವೆ ಅಗ್ನಿಯನು ಋಣವಿಮೋಚನಿ ಈ ಮಹಾ ವಾಯು ತೀರ್ಥಗಳ ಸುಸ್ನಾನಲ ಕ್ಷ್ಮೀ ಮನೋಹರನ ದರುಶನ ತತ್ವ್ರಸಾದಾತ್ರ ಅಲ್ಪಾಧಿಕಾರಿಗಳಿಗೆ 11 ಕವಿಭಿರೀಡಿತ ಪೂಜ್ಯನೆನಿಸುವನು ಪದ್ಮಸಂ ಭವನು ಪೂಜಕನೆನಿಪ ನೈವೇದ್ಯಕರ್ತೃ ಭಾ ಶರ್ವಶಕ್ರಾರ್ಕ ಮುಖ್ಯ ದಿವಿಜಗಣವಿಹರೆಂದು ಚಿಂತಿಸದೆ ಮರೆದು ಮಾ ನವರೆ ವರ್ತಿಪರೆಂದು ತಿಳಿವವನು ಘೋರ ರೌರವ ಧರಾತಳದೊಳೆಂದ 12 ಮೇರುನಂದನ ವೈಕುಂಠಾದ್ರಿಶತಯೋಜನದ ಮೇರೆಯೊಳು ಪುಣ್ಯತೀರ್ಥಗಳಿಪ್ಪವಲ್ಲೆಲ್ಲ ಮುಖ್ಯಾಮುಖ್ಯ ಭೇದದಿಂದ ನೂರೆಂಟು ತೀರ್ಥಗಳು ಮುಖ್ಯವೆನಿಸುವುವಿದರೊ ಳಾರುತ್ತಮೋತ್ತಮವುಗಳ ನಾಮ ಪೇಳ್ವೆನು ಕು ತುಂಬರ ಆಕಾಶಗಂಗ 13 ವಸುರುದ್ರ ಕಾಣ್ವಗ್ನಿ ಮನ್ವಿಂದ್ರಯಮ ಸೋಮ ಬಿಸರುಹ ಪ್ರೀಯ ನವಪ್ರಜ ಆಶ್ವಿನಿಗಳು ಶುಕ ಜಗಜ್ಜಾಡ್ಯಹರ ಬಾರ್ಹಸ್ವತಿ ದಶಪ್ರಚೇತಸ ಗರುಡ ಶೇಷವಾಸುಕಿಯು ಹೈ ಬ್ಬಸುರ ನಾರದ ವೈಶ್ವದೇವ ಸ್ವಾಹಾಸ್ವಧಾ ಹಸ್ತಿ ನಾರಾಯಣಾದಿ ಪಂಚ 14 ಶಿವರೂಪಿ ದೂರ್ವಾಸ ಪೇಳ್ದನಿನಿತೆಂದು ಜಾ ಹ್ನವಿಯೊಳಬ್ದ ಸ್ನಾನಫಲ ಧನುರ್ಮಾಸದೊಳು ವಾಗ್ದೇವಿ ಶುಕ್ಲಪಕ್ಷ ದ್ವಾದಶಿ ದಿವಸದಿ ಶುಚಿರ್ಭೂತನಾಗಿ ಸಂತೋಷದಲಿ ವಿವರಾಗ್ರಜೋದಯದಿ ಸ್ನಾನವನು ಮಾಡೆ ಐ ಶಿಷ್ಯನೆಂದರಿದು ದಯದಿ 15 ನಾರದ ಮುನೀಂದ್ರನುಪದೇಶದಿಂ ದಕ್ಷನ ಕು ಮಾರಕರು ಸಾಹಸ್ರ ತಮ್ಮ ತಮ್ಮಾಶ್ರಮದ ದಾಕ್ಷಣ್ಯವೆನಿಸುತಿಹ್ಯದು ಭೈರವಾಷ್ಟ ತೀರ್ಥ ಸಿದ್ಧಿಪ್ರದಾಯಕ ಕು ಮಾರಧಾರಿಕ ಪಶ್ಚಿಮದಲಿಹವು ಎಂಟಧಿಕ ತೀರ್ಥಾದ್ರಿಯೆನಿಸುತಿಹುದು 16 ತಾ ತಿಳಿ ಪುದಿತಿಹಾಸ ಶೌನಕಾದ್ಯರಿಗೆ ವರ ಪುಷ್ಕರಣಿಮಹಿಮೆ ಪ್ರೀತಿಯಿಂದಲಿ ತಿಳಿದು ಪಠಿಸುವವರಿಗೆ ಜಗ ನ್ನಾಥ ವಿಠಲ ಮನೋವಾಂಛಿತಗಳಿತ್ತು ಪುರು ಹೂತ ಲೋಕದಲಿ ಸುಖಬಡಿಸಿ ಪ್ರಾಂತಕೆ ತನ್ನ ಪುರವನೈದಿಪ ಕೃಪಾಳು17
--------------
ಜಗನ್ನಾಥದಾಸರು
ಶ್ರೀಹರಿ ಮೂಜಗದೊಳು ನೀನು ತೇಜವುಳ್ಳವನಾಗಿ ಪ ಕಾಲದಿ ನಿನ್ನಯ ಮೇಲಿಹ ನಿರ್ಮಾಲ್ಯ ಮಾಲೆಯನೆಲ್ಲ ವಿಸರ್ಜಿಸಿ ತೊಳೆದು ನೀಲಮಾಣಿಕ ವಜ್ರಮಯವಾದ ಪೀಠದ ಮೇಲೆ ವಾಲಗವಾಗಿ ಲೀಲೆಯ ತೋರುತ1 ಮೊದಲು ಸಂಕಲ್ಪಿಸಿ ತುಳಸಿ ಶ್ರೀಗಂಧದಿ ಉದಕ ಶುದ್ಧವ ಮಾಡಿ ಅದರೊಳು ಬಳಿಕ ವಿಧಿಸಿಯೆ ಮತ್ತೇಳು ನದಿಯನುಚ್ಚರಿಸಲು ಒದಗಿ ಬಾರೆಲೊ ಕರಚರಣ ಮಜ್ಜನಕೀಗ 2 ಮಾನಸದಘ್ರ್ಯವು ಆಚಮನಗಳು ನಾನಾ ಪಂಚಾಮೃತ ಫಲವಭಿಷೇಕವು ಗಾನ ಸೂಕ್ತಗಳಿಂದ ಮಧುಪರ್ಕಾದಿಗಳು 3 ವಸ್ತ್ರವಾಭರಣವು ಯಜ್ಞಸೂತ್ರವ ತೊಡಿಸಿ ಚಿತ್ರವಾಗಿಹ ಗಂಧ ಅಕ್ಷತೆವಿಡಿಸಿ ಪತ್ರಪುಷ್ಪವು ಶ್ರೀತುಳಸಿ ಮಾಲೆಗಳಿಂದ ಸ್ತೋತ್ರವು ಸಾಹಸ್ರನಾಮಗಳಾಯಿತು 4 ಧೂಪಮಾಧ್ರೂಪಯ ದೀಪದ ದರುಶನವು ಆದಷ್ಟು ಸರ್ವೋಪಚಾರಗಳು ಕದಳಿ ನಾರಿಕೇಳÀವು ಪರಿ ನೈವೇದ್ಯ ದಯಾಪರಮೂರ್ತಿ 5 ಆಗರದೊಳು ಬೆಳೆದ ನಾಗವಲ್ಲಿಯ ದಳ ಪೂಗಿಯಫಲ ಸಹ ನಾಗಶಯನಗಿಟ್ಟು ಬೇಗದಿ ಮಂಗಳ ಪದಗಳ ಹೇಳಿ ಲೇ ಸಾಗಿ ಎತ್ತುವ ಅಮೋಘದಾರತಿಗಳ 6 ಮಾಡಿದ ಪೂಜೆಯ ನೋಡಿ ಕರುಣದಿಂದ ಬೇಡಿದಿಷ್ಟವನೀಯೊ ರೂಢಿಯ ಒಡೆಯ ಪಾಡಿ ಪೊಗಳುವೆ ನಿನ್ನ ಪಂಥ ಬೇಡೆನ್ನೊಳು ಅನುದಿನ ವರಾಹ ತಿಮ್ಮಪ್ಪ 7
--------------
ವರಹತಿಮ್ಮಪ್ಪ