ಒಟ್ಟು 14277 ಕಡೆಗಳಲ್ಲಿ , 133 ದಾಸರು , 6728 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಹಾರಶೋಭಿತ ಮುಖ ಸಾರಸ ಲೋಚನ ಪ ತೋರ್ಪ ಸುಂದರ ಬಾಹುಯುಗ ಬಂದು ಕಂದನ ಪೊರೆಯೈ 1 ಪಂಕಜಾಸನ ಮುಖ್ಯ ಶಂಕರಪೂಜಿತ ಸಂಕಟ ಪರಿಹರಿಸೈ ಶಂಕೆಯಿಲ್ಲದೆ ಸ್ಥಿರ ಲಂಕಾ ರಾಜ್ಯವನಿತ್ತೆ 2 ಜನನ ಮರಣಗಳ ಘನಪರಿವಾಹದಿ ನೆನೆದು ಶೋಕಿಪೆ ದೇವನೆ ವಿನಯದೊಳೀವುದೈ ಧೇನು ಪುರಪತೆ 3
--------------
ಬೇಟೆರಾಯ ದೀಕ್ಷಿತರು
ಹಾಲು ಮಾರಲು ಪೋದೇವಮ್ಮ ಗೋಕುಲದೊಳ- ಗ್ಹಾಲು ಮಾರಲು ಪೋದೆವಮ್ಮ ಹಾಲು ಮಾರುವ ಧ್ವನಿ ಆಲಿಸಿ ಕೇಳುತ ಬಾಲಕೃಷ್ಣ ಬಹು ಲೀಲೆ ಮಾಡುತ ಬಂದಪ ಹಸಿರು ಜರದ ಸೀರೆಯನುಟ್ಟು ಕುಸುರಿಕಂಕಣ ಎಸೆವೊ ಹವಳದ ಹಿಂಬಳೆ ಕಟ್ಟು ಮೊಸರಿನ ಕುಂಭ ಕÀುಸುಮ ಮಲ್ಲಿಗೆಯ ಮುಡಿಯಲ್ಲಿಟ್ಟು ಶಶಿವದನೆಯರೆಲ್ಲ ಚೆಂದದಿ ಬರುತಿರೆ ಕುಸುಮನಾಭ ಮುಸುಗೆಳೆದು ಮೊಸರು ಸುರಿದ1 ಬಣ್ಣ ಬಣ್ಣದ ಸೀರೆಯನುಟ್ಟು ಮುತ್ತಿನ ಬಟ್ಟು ಹೊಳೆವೊ ಕಸ್ತೂರಿ ತಿಲಕವನಿಟ್ಟು ಹಾಲಿನಕುಂಭ ಸಣ್ಣಮಲ್ಲಿಗೆ ಮುಡಿಯಲಿಟ್ಟು ಚೆನ್ನಾರ ಚೆಲುವೇರು ಚೆಂದದಿ ಬರುತಿರೆ ಕಣ್ಣು ಸನ್ನೆಮಾಡಿ ಕರೆದು ಮುದ್ದಿಡುವ 2 ಮುಂದೆ ಮುಂದಾಗಿ ಹೋಗುತಿರಲು ಹಿಂದ್ಹಾಲಿನ್ಹರವಿ- ಗೊಂದೊಂದ್ಹರಳು ಮೀಟುತಿರಲು ಧಾರೆಗೆ ಬಾಯಾ- ನಂದದಿಂದೊಡ್ಡಿ ಕುಡಿಯುತಿರಲು ಸÀಂದಣಿಯೊಳು ನಾವು ಒಂದರಿಯದಲೆ ಬಂದಿಳುಹಲು ಬರೀ ಗಡಿಗೆ ಕಾಣಮ್ಮ 3 ಕಡಗೋಲಿಂದೊಡೆದÀು ಗಡಿಗೆಯನು ಬಡವರ ಬೆಣ್ಣೆ ಒಡಲಿಗೆ ಕದ್ದು ತಿಂಬುವುದೇನು ಕಂಡರೆನಗಂಡ ಬಡಿದÀರಿನ್ನೇನು ಮಾಡುವೆ ನೀನು ಗಡಿಬಿಡಿ ಮಾಡುತ ಕತ್ತಲ ಮನೆಯೊಳು ತÀುಡುಗನಂತೆ ತಿರುಗಾಡುವ ತಾನು 4 ಸಿಟ್ಟು ಮಾಡುವುದ್ಯಾತಕಮ್ಮ ಶ್ರೀ ರಮಣನ ಬಿಟ್ಟು ಬಾಹುವುದೆ ಲೇಸಮ್ಮ ಭೀಮೇಶಕೃಷ್ಣನ ಕಟ್ಟಿ ಹಾಕುವುದೆ ಲೇಸಮ್ಮ ಪಟ್ಟುಮಾಡಿ ಪರಹೆಂಗಳೇರೊಳು ಕ- ಣ್ಣಿಟ್ಟ ಮ್ಯಾಲೆ ಒಂದಿಷ್ಟಾದರು ಬಿಡ5
--------------
ಹರಪನಹಳ್ಳಿಭೀಮವ್ವ
ಹಾಸ್ಯದ ಮಾತಿದು ಮಾನವಗೆ ವಿಷಯೇಚ್ಛೆಯ ಜೀವನವೆಂಬುದು ಶಾಶ್ವತ ಶಾಂತಿಯ ನೀಡುವ ನಿನ್ನಯ ಪದವನೆ ಮೆರೆತಿಹದು ಗುರುವೇ ಈಶ್ವರನೀತನೆಂದು ಸಾರಿತು ಶೃತಿ ಇದ ಕೇಳುತ ನಾ ಕರುಣಾ ನಿಧಿಯೇ ನಿನ್ನ ಹೊರತಿ ನ್ನನ್ಯರು ಗತಿಯಿಲ್ಲೆನ್ನುತ ನಾ ಚರಣಕಮಲಕೆ ಮೊರೆಹೊಕ್ಕೆ ಪರಮಾನಂದಾತ್ಮ ಸ್ವರೂಪದಾ ಅರಿವನು ನೀಡಿ ಪೊರೆವುದು ಎನ್ನಶಂಕರ ಗುರುದೇವಾ
--------------
ಶಂಕರಭಟ್ಟ ಅಗ್ನಿಹೋತ್ರಿ
ಹಿಂಗಾಯಿತಲ್ಲಾ ಏನಿದು ಹರಿಹರಿಪ ಮಂಗನ ತೆರ ಈ ಅಂಗವ ವಿಷಯತ ರಂಗೆ ವಡ್ಡುತ ರಂಗನ ಮರೆತಿಹೆ ಅ.ಪ. ಬರಿದೆಯೆ ಹೋಗುತ್ತಿರುವುದು ಹೊತ್ತು ಹರಿಧ್ಯಾನಕೆ ಸಾಲದು ಪುರಸೊತ್ತು ತಿರುಗಲು ಮನೆಮನೆ ಸಾಲದು ಹೊತ್ತು ಸರಸಿಜನಾಭನೆ ಇದಕ್ಕೇನು ಮದ್ದು 1 ಶ್ರೀ ಕಮಲೇಶನ ಪೂಜೆಯ ಮಾಡನೆ ಆಕಳಿಸುತ ಮೈ ಕೈ ಮುರಿಯುವೆನು ಸ್ವೀಕರಿಸಲು ಸವಿ ಪಾನೀಯಂಗಳ ಮುಖಸಹತೊಳೆಯದೆನೂಕುತ ಮುಖ ಪ್ರಕ್ಷಾಳನೆ ಬಿಡುವೆ2 ಸ್ನಾನವ ಮಾಡೆನು ಸಂಧ್ಯಾ ತಿಳಿಯೆನು ಧ್ಯಾನವು ಯೆಂತೆನೆ ಕೂಳಿನ ಚಿಂತೆಯು ಆನನ ಮುಸುಕುತ ಬರಿಪಿಚಿಯೆಂದು ನಿ ಧಾನದಿ ಜಪಸರ ನೂಕುವೆನಲ್ಲಾ 3 ಮಂತ್ರವು ಬಾರದು ಸ್ತ್ರೋತವು ಬಾರದು ತಂತ್ರದಿ ನೂಕುವೆ ದೇವರ ಪೂಜೆಯ ವಿಧಿಗಳ ಮೌನದಿ ಕರ್ಮಗಳೆಲ್ಲವ ಮಂತ್ರಿಯ ಮಡಿದಿಯು ಪೇಳಿದ ತೆರದೂಳು ಯಂತ್ರ ವಿಧಾನದಿ ನುಡಿಯುವೆ ದಿನವಹಿ4 ಹೀನಕ ವೃತ್ತಿಗಳಿಂದಲಿ ಜೀವನ ವರ್ಣವಿವೇಕವ ನಡಿಸಲಸಾಧ್ಯವು ಜನ್ಮದಿ ವಿಪ್ರನು ನಾನಿಹೆ ಬರಿಸರಿ ತಿನ್ನುತ ಕುಡಿಯುತ ತಳ್ಳುವೆ ಆಯುಷ್ಯ5 ಊಟದ ಚಪಲವು ತಿಂಡಿಯ ಚಪಲವು ನೋಟದ ಚಪಲವು ಚಪಲ ಕಂದರ್ಪನ ಕಾಟದಿ ಸಿಲುಕಿಹೆ ಕೈಟಭಮರ್ದನ ದಾಟುವೆದೆಂತೋ ಭವವನು ಕಾಣೇ 6 ಏರಿದೆ ಬಹುನಿತ್ರಾಣವು ಗಾತ್ರದಿ ಮೀರಿದವಯ ಶಾಸ್ತ್ರಾಭ್ಯಾಸಕೆ ಕಾರುವರೈ ವಿಷ ಬಾಂಧವರೆಲ್ಲರು ಆ ರವಿಸುತನಾಳ್ಗಳಗು ನಾನಿಹೆ 7 ಮಡದೀ ಮಕ್ಕಳ ಪಾಶದಿ ಬಿದ್ದಿಹೆ ದುಡಿಯದ ಕಾರಣ ದುಗುಡವ ತೋರ್ಪರು ನಡೆಯದು ತುಸನನ್ನ ಮಾತೇನಿಲ್ಲ ಮಿಡುಕುತ ಮಿಡುಕುವೆ ಮುಪ್ಪಿನ ಹಿಡಿತದಿ 8 ತೋಡಿದರೂ ಎದೆ ಕಾಣೆನು ಭಕ್ತಿಯ ಕಾಡನು ಸೇರಲೊ ಬಾವಿಗೆ ಬೀಳಲೋ ಜೋಡಿಯು ಆಗಲೊ ಜೋಳಿಗೆ ಪಿಡಿಯಲೊ ಓಡದು ಬುದ್ಧಿಯು ತೋರಿಸು ಹಾದಿ 9 ಕರುಣಾಮಯ ನೀನೆಂಬುವ ಬಿರುದನು ಹಿರಿಯರ ಮುಖದಿಂ ಕೇಳಿಹೆ ಸ್ವಾಮಿಯೆ ಭರವಸೆ ಎನಗಿಹದೊಂದೇ ನಿಶ್ಚಯ ಶರಣನ ಬಿಡದಿರು ಆಪದ್ಬಾಂಧವ 10 ಪಾಮರ ನಿಹೆಬಹು ಕಲುಷಿತ ಚಿತ್ತನು ಭೀಮಾರ್ಚಿತ ಪದಯಗ ನಂಬಿಹೆ ಪ್ರೇಮವ ಸುರಿಸುತ ಕಾಯೈ ಬೇಗನೆ ಸಾಮನೆ ಶರಣೈ “ಶ್ರೀ ಕೃಷ್ಣವಿಠಲಾ” 11
--------------
ಕೃಷ್ಣವಿಠಲದಾಸರು
ಹಿಗ್ಗದಿರು ಹಿಗ್ಗದಿರು ಮನುಜಪಶುವೆ | ಮುಗ್ಗಿತಗ್ಗುವುದು ಮುಂದರಿಯದಲೆ ಮರುಳಾದೆ ಪ ಆಯುದಲಿ ದ್ರೋಣಸುತ ಕೃಪ ವಿಭೀಷಣನೇನೊ | ಶ್ರೇಯದಲಿ ದಶರಥ ನಹುಷನೇನೊ || ಈಯುದ್ದಕೆ ಮಯಾರ ಧ್ವಜ ಶಿಬಿ ಬಲಿಯೇನೊ | ಮಾಯಾ ಬಿಡುವಲ್ಲಿ ಜಡ ಭರಿತ ನೀನೇನೊ 1 ಶೂರತ್ವದಲಿ ಭೀಷ್ಮ ಅಭಿಮನ್ಯು ನೀನೇನೊ | ಘೋರ ತಪಸಿನಲಿ ವಿಶ್ವಾಮಿತ್ರನೇನೊ || ವಿರುಕುತಿಯಲಿ ಸುರಸೈನ್ಯ ನಾಯಕನೇನೊ | ಹಾರುವ ಬಿಂಕದಲಿ ಗರುಡ ನೀನೇನೊ 2 ಬಲದಲ್ಲಿ ಬಲರಾಮ ಶಲ್ಯ ಕೀಚಕನೇನೊ | ತಿಳಿವಳಿಕೆಯಲಿ ವಿದುರ ಸಂಜಯನೇನೊ || ಒಲಿದು ಪಾಡುವಲಿ ನಾರದ ತುಂಬುರನೇನೊ | ಛಲ ಮಾಡುವಲ್ಲಿ ಧ್ರುವರಾಯ ನೀನೇನೊ 3 ಭಕುತಿಯಲಿ ಪ್ರಹ್ಲಾದ ಪುಂಡರೀಕನೇನೊ | ಭುಕುತಿಯಲಿ ಅಗಸ್ತ್ಯ ಬಕ ನೀನೇನೊ || ಉಕುತಿಯಲಿ ಸೂತ ಸಹದೇವ ಶೌನಕನೇನೊ | ಶಕುತಿಯಲಿ ವಾಲಿ ಯಮರಾಯ ನೀನೇನೊ 4 ಶುಕ ಜನಕ ಸನಕಾದಿಗಳೇನೊ | ಕರ್ಣ ನೀನೇನೊ || ಭೋಗ ಬಡುವಲ್ಲಿ ಮಹಾಭಾಗ ಇಂದ್ರನೇನೊ | ವೇಗದಲಿ ಪುರುಷ-ಮೃಗನು ನೀನೇನೊ 5 ಸಖತನ ಮಾಡುವಲ್ಲಿ ಶ್ವೇತವಾಹನನೇನೊ | ನಿಖಿಳ ಕಥೆ ಕೇಳುವಲ್ಲಿ ಪರೀಕ್ಷಿತನೇನೊ || ಅಖಿಳರನು ಗೆಲುವಲ್ಲಿ ಕಾರ್ತವೀರ್ಯನೇನೊ | ಸುಖದಲ್ಲಿ ಇಪ್ಪದಕೆ ಪವನ ನೀನೇನೊ 6 ವಿತ್ತದಲಿ ನೀನು ವೈಶ್ರವಣನೇನೊ | ಮತ್ತೆ ಕ್ಷಮೆಯಲಿ ಹರಿಶ್ಚಂದ್ರನೇನೊ | ಭೃತ್ಯತನ ಪಡೆವಲ್ಲಿ ಅಕ್ರೂರ ನೀನೇನೊ | ಸುತ್ತವಲಿ ಪ್ರಿಯವ್ರತ ರಾಯನೇನೊ 7 ವ್ರತದಲ್ಲಿ ಅಂಬರೀಷ ರುಕುಮಾಂಗದನೇನೊ | ಸ್ತುತಿಯಲ್ಲಿ ಮುಚುಕುಂದರಾಯನೇನೊ || ಅತಿ ಚೆಲುವತನದಲ್ಲಿ ಮನ್ಮಥ ನಕುಲನೇನೊ | ಕ್ರತು ಮಾಡುವಲ್ಲಿ ಧರ್ಮಪುತ್ರ ನೀನೇನೊ8 ಶಾಪಗಳ ಕೊಡುವಲ್ಲಿ ಬ್ರಹ್ಮಪುತ್ರನೇನೊ | ತಾಪ ತೋರುವಲ್ಲಿ ರವಿ ಅನಳನೇನೊ | ಕೋಪ ಮಾಡುವಲ್ಲಿ ಗಿರಿಜಾರಮಣನೇನೊ | ತಾಪಸಿರ ನಡುವೆ ವಸಿಷ್ಠ ನೀನೇನೊ9 ಉನ್ನತದಲಿ ನೀನು ಮೇರು ಪರ್ವತನೇನೊ | ಘನ ಮದದಲಿ ಧೃತರಾಷ್ಟ್ರನೇನೊ || ಇನ್ನು ಮತಿಯನ್ನು ಕೊಡುವಲಿ ಗಜಮೊಗನೇನೊ | ಮುನ್ನೆ ಕವನದಲ್ಲಿ ಶುಕ್ರದೇವನೇನೊ 10 ಹಮ್ಮಿನಲಿ ಬಾಳದಿರು ಹಿತವಾಗದೊ ನಿನಗೆ | ಆ ಮಹಿಮರ ಸರಿ ನೀನಲ್ಲವೊ || ಸಿರಿ ವಿಜಯವಿಠ್ಠಲರೇಯನ್ನ | ನೆಮ್ಮಬೇಕಾದರೆ ಸೋಹಂ ನಿರಾಕರಿಸು11
--------------
ವಿಜಯದಾಸ
ಹಿಗ್ಗಿದಳು ನಂದನ ಸತಿ ಮುಗ್ಧೆ ತನ್ನಯ ಸುತನ ಮುದ್ದು ಮುಖವ ನೋಡಿ ಅ.ಪ ಪಾಲು ಬೆಣ್ಣೆ ಕಳ್ಳ ತಾಳು ಕಟ್ಟುವೆ ನಿನ್ನ ಕಾಲುಗಳನೆಂದು ಕರಗಳಲಿ ಪಿಡಿದು ನೀಲಮೇಘಶ್ಯಾಮ ಶ್ರೀಲಕುಮಿಯರಸನನು ಬಾಲನೆಂದರಿತು ಆಲಿಂಗನದಿ ಮೈ ಮರೆತು1 ಅಂಬುಜೋದ್ಭವನಯ್ಯ ಅಂಬೆಗಾಲಿಡುವುದನು ನಂಬಬಹುದೇ ಮೋಹಜಾಲವಿರಲು ಸಂಭ್ರಮದಿ ಸುತನನ್ನು ಚುಂಬಿಸುತ ರಭಸದಲಿ ಮೋದ ಕಂಬನಿಯ ಸುರಿಸುತ್ತ 2 ಓರೆಗಣ್ಣಿನ ನೋಟ ನಾರಿಯರ ಪೇಚಾಟ ಮೂರು ಲೋಕಕೆ ಹರ್ಷಕರ ಮಂದಹಾಸ ಸೇರಿಸಿದ ಮುಕ್ತಗಳ ಮೀರಿ ಪೊಳೆಯುವ ದಂತ ಚಾರುಮುಖಿ ಸುತನ ಮನಸಾರ ದರುಶನದಿಂದ 3 ಭೃಂಗಗಳ ಧಿಕ್ಕರಿಪ ಮಂಗುರುಳು ಮಸ್ತಕದಿ ರಂಗಿನಾ ಕಸ್ತೂರಿತಿಲಕ ಪಣೆಯಲ್ಲಿ ಸಿಂಧು ಶ್ರೀರಂಗನ್ನ ನೋಡುತಲಿ ಅಂಗನಾಮಣಿ ಅಂತರಂಗ ಪ್ರೇಮದ ಭರದಿ 4 ತನ್ನ ಉದರದಿ ನಳಿÀನಜಾಂಡವನೆ ಪೊತ್ತಿರುವ ಉನ್ನತೋನ್ನತ ಸುಗುಣ ಜ್ಞಾನಮಯನ ತನ್ನ ಮಗನೆಂದರಿತು ಸ್ತನ್ಯಪಾನದಿ ಸುಪ್ರ ಸನ್ನಮುಖಿ ಹರುಷ ಪುಳಕಿತಳಾಗಿ ಹೆಮ್ಮೆಯಲಿ 5
--------------
ವಿದ್ಯಾಪ್ರಸನ್ನತೀರ್ಥರು
ಹಿಡಿ ಕೇಶವ ಕೃಷ್ಣ ನಾರಾಯಣನ ಮಾಧವ ಗೋವಿಂದ ವಿಷ್ಣುನ್ನ ಕಡಲಶÀಯನನಾದ ತಕ್ಕೊ ಮಧುಸೂದನನ ಕಡುಬ್ಯಾಗದಲಿ ತಾರೆ ತ್ರಿವಿಕ್ರಮನ ಜೋ ಜೋ 1 ವಾಮನ ಶ್ರೀಧರ ಹೃಷಿಕೇಶÀನ ಕಾಮಿಸಿ ನೀ ಕೊಳ್ಳೆ ಪದ್ಮನಾಭನ್ನ ದಾಮೋದರ ಶ್ರೀ ಸಂಕರುಷಣನ ಕೋಮಲಾಂಗಿ ತಾರೆ ವಾಸುದೇವನ್ನ ಜೋ ಜೋ 2 ಅನಿರುದ್ಧ ಪುರುಷೋತ್ತಮನ ಅಧೋಕ್ಷಜ ನಾರಸಿಂಹಾಚ್ಯುತನ ಸದ್ಯೋಜನಾದರ್Àನ್ನ ಕೊಂಡು ಉಪೇಂದ್ರನ್ನ ಸದ್ಯ ತಾರ್ಹರಿ ಭೀಮೇಶಕೃಷ್ಣನ ಜೋ ಜೋ 3
--------------
ಹರಪನಹಳ್ಳಿಭೀಮವ್ವ
ಹಿಡಿ ಸಾಧು ಸಂತರಾ ಸಂಗೆನ್ನ ಮನವೆ | ಹಿಡಿ ಸಾಧು ಸಂತರ ಸಂಗಾ | ಪೊಡವಿಲಿ ಭವಭಯ ಬಿಡಿಸಿ ಮುಕುಂದನ | ಅಡಿಗಳ ತೋರಿಸಿ ಕಾವುದು ಹಿಡಿಹಿಡಿ ಪ ಐದು ವರುಷ ಮಗನೈದಿದ ತಪದಲಿ | ಸಾಧು ಸಂಗನೇ ಹೊರೆಯಿತು | ಸಾಧಿಸಿ ಗರ್ಭದಲಿರೆ ಸಾಧು ಸಂಗ | ಪ್ರ | ಲ್ಹಾದನ ಯಚ್ಚರಿಸಿತು | ಹಾದಿಯೊಳಗ ರಾಹುಗಳ ರಾಯಾಗಾಗಲು | ಸಾಧು ಸಂಗುದ್ಧರಿಸಿತು | ಮೇದಿನಿಪತಿ ಪರೀಕ್ಷಿತಗೇಳು ದಿನದಲ್ಲಿ | ಬೋಧಿಸಿ ಸದ್ಗತಿ ದೋರಿತು ಹಿಡಿಹಿಡಿ 1 ವನಜಭವನ ಲೋಕದಲಿ ಸಾಧು ಸಂಗವು | ಸನಕಾದಿಕರ ಹೊರೆಯಿತು | ವನದಲಿ ಯದುರಾಯಗಾಗಲು ಸತ್ಸಂಗ | ಅನುಭವ ಸುಖ ದೊರೆಯಿತು | ವಿನಯದಿ ಸತ್ಸಂಗ ದೇಹೂತಿ ಮೊದಲಾದ | ಮುನಿಜನರುದ್ಧರಿಸಿತು | ರಣದಲ್ಲಿ ಅರ್ಜುನಗಾಗಲು ಸತ್ಸಂಗ | ಅನುಮಾನ ನೀಗಿಸಿ ಕಾಯಿತು ಹಿಡಿಹಿಡಿ 2 ಅಂದಿಗೆಂದಿಗೆ ಸಿದ್ಧ ಸಾಧಕರೆಲ್ಲಾ | ನಂದನ ಸುಖ ಬಿಡಿಸಿತು | ಹಿಂದಿನ ಕಥೆಗಳಿರತಿರಲಿನ್ನು ಸತ್ಸಂಗ | ಇಂದೆನ್ನ ಧನ್ಯಗೈಸಿತು | ಪಾದ ಪದುಮಸಂಗ | ನಂದನುದ್ಧರಿಸಿತು | ಯಂದೆಂದಿಗಗಲದೆ ಮುಕ್ತಿಗೆ ಹೊಣೆಯಾಗಿ | ಕುಂದದಾ ಸುಖಕೈಯ್ಯ ಗೊಟ್ಟಿತು ಹಿಡಿಹಿಡಿ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಹಿಡಿಯಬೇಕು ಶ್ರೀ ಕೃಷ್ಣನ ತುಡುಗತನವ ಧ್ರುವ ಕಡಿಯಗುಡದೆ ವೈವನು ಕೆನಿಮೊಸರ ತುಡುಗತನವನು ಮಾಡುವ ಬಲು ಹೆಸರ ಅಡಗಿಹ ಠಾವನೆ ತಾನುಸರ ಮಾಡಿ ತಾ ಕುಸರ 1 ಬಿಡಬಾರದು ಕಣ್ಣಿಲೆ ಕಟ್ಟಿ ಬಿಡಿಸಿಕೊಂಬುವ ಇವ ಬಲು ಜಗಜೆಟ್ಟಿ ಅಡಗಿಸಿಕೊಬೇಕು ಘಟ್ಟಿವಿಡಿದು ಮನಮುಟ್ಟಿ 2 ಸಾಧಿಸಿ ಸದ್ಗುರುದಯ ಕರುಣದಲಿ ಭೇದಿಸಿ ಹಿಡಿಯೊ ಮಹಿಪತಿ ಸುಮನದಲಿ ಒದಗಿಟ್ಟುಕೊ ನೀ ಹೃದಯದಲಿ ಇದೇ ನೋಡನುದಿನಲಿ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಹಿಡಿಯಬ್ಯಾಡಿ ಮೌನ ಪಡೆದುಕೊಳ್ಳಿ ಖೂನ ಒಡೆದು ಹೇಳುತಾನೆ ನೋಡಿ ಸದ್ಗುರು ನಿಧಾನ 1 ಅಹಂಭಾವಬಿಟ್ಟು ಸೋಹ್ಯ ಕೇಳಿ ಗುಟ್ಟು ದೇಹ ಅಭಿಮಾನ ಸುಟ್ಟು ಜಯಸಿ ರತಿವಿಟ್ಟು 2 ಮಾಡಿ ಗುರುಭಕ್ತಿ ನೋಡಿ ಗತಿಮುಕ್ತಿ ಕೊಡುವ ಮಹಿಪತಿ ಸ್ವಾಮಿ ಸದ್ಗತಿ ಸುಯುಕ್ತಿ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಹಿಡಿಯೊರಂಗಯ್ಯ ಉಡುಗೊರೆಕೊಡುವೆವೊ ಕೃಷ್ಣಯ್ಯಭಿಡೆ ಬ್ಯಾಡೊ ಬೆತ್ತಲಿದ್ದಿಇದೇನು ಸಡಗರ ರಂಗಯ್ಯ ಪ. ನೀಲ ದೊಡ್ಯಾಣನಿಟ್ಟುಮ್ಯಾಲೆ ಉಂಗುರವು ಮೊದಲಾಗಿಮ್ಯಾಲೆ ಉಂಗುರವು ಮೊದಲಾಗಿ ತಂದೆವಬಾಲ ಕೃಷ್ಣಯ್ಯನ ಜನಕಗೆ ಉಡುಗೊರೆ 1 ಶೌರಿ ಕೃಷ್ಣಯ್ಯನ ಜನನಿಗೆಶೌರಿ ಕೃಷ್ಣಯ್ಯನ ಜನನಿ ದೇವಕಿಗೆಕುವರಿಯರು ಕೊಟ್ಟ ಉಡುಗೊರೆ2 ಹಲವು ಸೂರ್ಯರ ಬೆಳಕು ಗೆಲವೊ ಪಿತಾಂಬರ ಬೆಲೆಯಿಲ್ಲದಂಥ ಮುಕುಟವುಬೆಲೆಯಿಲ್ಲದಂಥ ಮುಕುಟ ಮುತ್ತಿನ ಹಾರ ಬಲರಾಮನಿಗೆ ಉಡುಗೊರೆ3 ಬಿಳಿ ಬಣ್ಣದ ಸೀರೆರನ್ನ ಮಾಣಿಕದಾಭರಣಹೊನ್ನೋಲೆ ಕೊಪ್ಪು ನಡುವಿಟ್ಟುಹೊನ್ನೋಲೆ ಕೊಪ್ಪು ನಡುವಿಟ್ಟು ತಂದೆವ ಕನ್ನೆ ರೇವತಿಗೆ ಉಡುಗೊರೆ 4 ಸಕಲಾತಿ ಸೀರೆ ದೋರೆ ಕಂಕಣ ಸರಿಗೆ ಹಾರ ಪದಕಗಳ ನಡುವಿಟ್ಟುಹಾರ ಪದಕಗಳ ನಡುವಿಟ್ಟು ರಾಮೇಶನನೂರು ಮಂದಿಗೆ ಉಡುಗೊರೆ 5
--------------
ಗಲಗಲಿಅವ್ವನವರು
ಹಿಡಿಹಿಡಿಕೈಯ್ಯ ಬಿಡಲೇತಕೆ ಕೇಳೊ ಜೀಯಾ ಪ ಒಡೆಯನಲ್ಲವೆ ನಿನ್ನ ಅಡಿಗಳೆರಡಕ್ಕೆನ್ನ ಮುಡಿಯನಿಡುವೆನೆಲ್ಲೊ ಸುಡಲಿ ಜನ್ಮವು ಬಿಡದೆ 1 ಶ್ರೀಧರ ನಾರಾಯಣನೆ ಬೋಧಿಸಬೇಕೋ ಬಿಡದೆ 2 ವಾಸವಾನುತ ಹರಿದಾಸ ತುಲಸಿರಾಮ ದೇಶಿಕನಾದ ಪರಮಾತ್ಮನೆನಾ ಕೈ ಬಿಡದೆ 3
--------------
ಚನ್ನಪಟ್ಟಣದ ಅಹೋಬಲದಾಸರು
ಹಿತ ನೋಡೀ ಮಾಡಿ ಸುಜನರ | ಪಥವನೆಕೂಡಿ ಪ ಗುರುವಿಗೆ ಬಾಗಿ ಶರಣವ ಹೋಗಿ | ತರಳತೆ ನೀಗಿ ಅರಹುತರಾಗಿ 1 ಭ್ರಾಂತರಕೂಡಿ ಮತಿಗಳ ಬ್ಯಾಡೀ | ಸಂತರೊಳಾಡಿ ಅನಂತನ ಪಾಡಿ 2 ಸಂಧಿಸಿ ತಂದ ಸುಕೃತಗಳಿಂದ | ಹೊಂದುವವೆಂದೇ ನರದೇಹ ಮುಂದೆ 3 ವಿವೇಕದಿಂದಾ ವಿಡಿರಿದೆ ಛಂದಾ | ಅವನಿಲಿ ಬಂದಾ ಜನುಮಕ ಛಂದಾ 4 ಗುರುಮಹಿಪತಿಯಾ ಚರಣದ್ವಿತಿಯಾ | ವರಿಸಿ ಮುಕುತಿಯಾ ಪಡೆವದು ಗತಿಯಾಜ್ಞ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಹಿತದಿಂದ ಪೊರೆಯೆನ್ನ | ವಿತತ ಮಹಿಮ ಹರಿಯೇ ಹಿತ ಅಹಿತವೆರಡನ್ನು | ಸಹಿಸುವಂತೇ ಪ ಅತಿ ದಯಾಪರನೆಂದು | ಖತಿದೂರನೆಂದೆನುತಶ್ರುತಿ ನಿಚಯ ಸಾರುತಿದೆ | ಗತಿ ಪ್ರದನೆ ದೇವಾ ಅ.ಪ. ವೇದ ವೇದ್ಯನೆ ದೇವ | ಆದ್ಯಂತ ರಹಿತನೇಕಾದುಕೋ ಎನ್ನನು | ಮೋದಗಳನಿತ್ತೂ ||ಸಾಧನ ಸುಮಾರ್ಗದಲಿ | ಹಾದಿಯನು ಕಾಣದಲೆಬಾಧೆಗೊಳಗಾಗಿಹನ | ಆದರಿಸು ದಯವನಧೀ 1 ಪ್ರಾಣಪತಿಯೇ ಎನ್ನ | ಪ್ರಾಣಗಳು ವಶವಿಲ್ಲಧ್ಯಾನ ಮಾಡುವೆನೆನ್ನ | ಮನನಿಲ್ಲಧ್ಹರಿಯೇ ||ಜ್ಞಾನ ಕರ್ಮೇದ್ರಿಗಳು | ಏನೊಂದು ನಿನ್ನಯಾಧೀನವಿರಲೂ ನಾನು | ಏನು ಮಾಡಲು ಸಾಧ್ಯ 2 ಗೋವರ್ಧನೋದ್ಧರನೆ | ಗೋವುಗಳ ಪರಿಪಾಲಕಾವ ಕರುಣೀ ನಮ್ಮ | ದೇವರ ದೇವಾ ||ಗೋವಿದಾಂಪತಿ ಗುರು | ಗೋವಿಂದ ವಿಠಲನೆನೀವೊಲಿಯದಿನ್ನಾರು | ಕಾವರನು ಕಾಣೆನಯ್ಯಾ 3
--------------
ಗುರುಗೋವಿಂದವಿಠಲರು
ಹಿಂದಿನ ದಿನದಂತಿದಲ್ಲಣ್ಣ ಈಗ ಬಂದಿಹ ದಿನವತಿ ಹೊಸದಣ್ಣ ಪ ಹೆಂಡಿರು ಮಕ್ಕಳ ಕರೆದರೆ ಒಳಗೆ ತಂಡುಲವಿಲ್ಲ ಗಂಜಿಗೆಶರೆ ಉಂಡೆವೆನುತ ಬಾಯ ಬಿಡುತಾರೆ ಇದ ಕಂಡು ನಾಕ್ಷಣವು ಜೀವಿಸಲಾರೆ 1 ಕಡಕಟ್ಟು ಹುಟ್ಟಿತೆಂಬುದು ಹುಸಿಯಿನ್ನು ಕೊಡುವರು ಕೊಡುವುದಿಲ್ಲವೋ ರೋಸಿ ಉಡಲು ತೊಡಲಿಕ್ಕಿಲ್ಲ ಕೈ ಬೀಸಿ ಎದೆ ನಡುಗಿ ಸಾವೆನು ನಾನು ಪರದೇಶಿ 2 ಅತಿಥಿಗಿಕ್ಕಲಿಕೆ ತನಗೇ ಇಲ್ಲ ಪ್ರತಿಮೆ ಲಿಂಗ ಪೂಜೆಗಳು ಜನ್ಮದೊಳಿಲ್ಲ ವ್ರತನೇಮ ದಾನ ಧರ್ಮಗಳಿಲ್ಲ ಪರ ಗತಿಗೇನು ಮುಂದೆ ಸಾಧನವಿಲ್ಲ 3 ಸಂಸಾರದೊಳಗೇನು ಸುಖವಿಲ್ಲ ಪರಮ ಹಂಸನಾಗಲು ಮುಂದೆ ಪಥವಿಲ್ಲ ಕಂಸಾರಿ ಸ್ಮರಣೆ ಎಂದಿಗೂ ಇಲ್ಲ ತಮ ಧ್ವಂಸಿ ಯಣುಗನ ಕೈವಶರೆಲ್ಲ 4 ಕಾಲಗತಿಯು ಬಲು ಬಿರುಸಣ್ಣ ಜನ ಬಾಳುವ ಪರಿಯಿನ್ನು ಹೆಂಗಣ್ಣ ಕೂಳಿಗೆ ಬಗೆಯಿಲ್ಲದಾಯ್ತಣ್ಣ ಲಕ್ಷ್ಮೀ ಲೋಲನ ಮೇಲೆ ಭಕ್ತಿಯಿಲ್ಲಣ್ಣ 5
--------------
ಕವಿ ಪರಮದೇವದಾಸರು