ಒಟ್ಟು 1961 ಕಡೆಗಳಲ್ಲಿ , 113 ದಾಸರು , 1544 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನಮೋ ನಮೋ ಶ್ರೀ ಮಧ್ವಾಚಾರ್ಯ ಆರ್ಯಾ ಪ ಭೃಗು ಕುಲೋತ್ತಮ ರಾಮ ಭೂಸುರರಿಗೆ ಸರ್ವ ಜಗವೆಲ್ಲ ಧಾರಿಯನು ಯೆರದು ಸಂಹ್ಯಾ ನಗದಲ್ಲಿ ನಿಂದು ಸಮುದ್ರನ್ನ ಹಿಂದಕ್ಕೆ ತೆಗಿಸಿ ಈ ಭೂಮಿಯನು ಸಾಧಿಸಿದನು1 ಮೂರ್ತಿ ಅಲ್ಲಿಗಲ್ಲಿಗೆ ಕ್ಷೇತ್ರ ಗತಿ ತಪ್ಪಿದಂತೆ ನಿರ್ಮಾಣ ಮಾಡಿ ಸತಿಪತಿಯ ಉದ್ಧರಿಸಿ ಬರುತ ಕಂಡನು ಉ ನ್ನತವಾದ ಪರ್ವತವು ಯೋಜನವಿರೆ 2 ಬೆರಗಾಗಿ ಪರಶುರಾಮನು ಬಂದು ಈ ಗಿರಿಯಲ್ಲಿ ನಿಂದು ಅಗ್ರಭಾಗವೈದೆ ತರಹರಿಸಲಾರದೇ ಭೂಮಿಗಿಳಿಯಿತು ಅದ್ರಿ ನಿರೀಕ್ಷಿಸಿ ಸುಜನರು ಇದ್ದನಿತು3 ಸಿರಿರೂಪ ದುರ್ಗಾನಾಮಕಳಾದ ದೇವಿಯನು ಕರದು ಈ ಸ್ಥಾನದಲಿ ಇರ ಹೇಳಿದಾ ಅರವು ಮಾಡದೆ ಮುಂದೆ ಕಲಿಯುಗದಲಿ ನೆರದು ದುರುಳರಾತಿಯರ ಸಂಹರಿಸುಯೆಂದು 4 ಅನಿತರೊಳಾಕಾಶದಲಿ ಜಯ ಜಯವೆಂದು ಅನಿಮಿಷರು ಕೊಂಡಾಡಿ ನಗುತ ದಿವ್ಯ ಮಣಿಮಯ ವಿಮಾನದಿಂದಾ ಗಿರಿಗೆ ವೇಗದಿ ಸು ಮ್ಮನರಾಗಿ ಬಂದು ತುತಿಸಿದರು ಹರಿಯಾ 5 ಅಂದಿನಾರಭ್ಯವಾಗಿ ಇದೇ ವಿಮಾನಗಿರಿ ಯೆಂದು ಕರೆಸಿತು ಶ್ರುತಿ ಯುಕ್ತಿಯಲ್ಲಿ ಎಂದೆಂದಿಗೆ ಇದನೆ ನೋಡಿದವರಿಗೆ ದೋಷ ಗಂಧವಾದರು ಇಲ್ಲಾ ಇಲ್ಲ ಇಲ್ಲಾ6 ಈ ಮಹಿಮೆಯನು ಕೇಳಿ ಧರ್ಮ ತಪವನು ಮಾಡಿ ಸೋಮಾರ್ಕ ಪ್ರಭಯಂತೆ ಕೀರ್ತಿಯನು ಪಸರಿಸಿ ಪಾಮರರ ಉದ್ಧರಿಸಬೇಕು ಯೆಂದು7 ಪರಿ ಶ್ರೀಹರಿಯ ಧ್ಯಾನವನು ಮಾಡಲು ಶ್ರೀಪತಿ ವರವಿತ್ತ ಮುಂದೆ ಮಹ ಪಾಪಿ ಪುಟ್ಟುವನು ಅವನಗೋಸುಗ ವಾಯು ತಾ ಪರಮ ಪ್ರೀತಿಯಲಿ ಜನಿಸುವನು 8 ಅಂದ ಮಾತಿಗೆ ಯಮನು ಬಹುಕಾಲದಲಿದ್ದ ಛಂದದಿಂದದಿ ಪೋದ ತನ್ನ ಪುರಕೆ ಇಂದಿರಾಪತಿ ನೇಮಿಸಿದ ಪರಿಯಂತೆ ಆ ನಂದತೀರ್ಥರಾಗಿ ಜನಿಸಿದರು 9 ಏನು ಪೇಳಲಿ ಪುಣ್ಯ ಚರಿತಯನು ಚನ್ನಾಗಿ ಜ್ಞಾನದಲಿ ಅಧಿಕಾರಾಗಿ ಇಷ್ಟಾನಿಷ್ಟ ಪುಣ್ಯ ಮಾನದಲಿ ಕೊಂಡಾಡಿ ಸುಖಿಪರಲ್ಲಿ10 ಹುರಳಿ ಗುಗ್ಗರಿ ಮೆದ್ದ ಅದ್ಧುತವ ಕೇಳಿದರೆ ಉರಳಿ ಹೋಗುವದು ಜನ್ಮಾಂತರದ ದುಷ್ಕರ್ಮ ಮರಳಿ ಬಲಿ ಬಾಲವನು ಪಿಡಿದದು ನೆನಸಿದರೆ ಸುರರು ಮುಕ್ತಿಯಿನಿತ್ತು 11 ಧರಣಿಧರದಿಂದ ಧುಮುಕಿದ ಪಾದಯುಗ ನೋಡೆ ಎರಡೊಂದು ಏಳು ಕುಲತೃಪ್ತರಹರೊ ಅರೆ ಮ್ಯಾಲೆ ಸಾಲವನು ತಿದ್ದಿದಾ ವಾರ್ತಿ ಕೇಳಿ ಎರಡೊಂದು ಋಣದಿಂದ ಕಡೆಗಾಗುವ 12 ತಲೆಕೆಳಕಾಗಿ ಬೆಳೆದಾ ವೃಕ್ಷವನು ನೋಡಿ ಬಲಿವನು ಸುರದ್ರುಮದಂತೆ ರಂಗ ಛಲದಿಂದ ಸರ್ಪನ ವರಸಿದ ಸ್ಥಳ ಕಾಣೆ ಬಲು ವಿಷಗಳು ಪೋಗಿ ನಿರ್ಮಲಹರೋ 13 ಧೂಳಿ ಅಕ್ಷರ ಬರೆದ ಪ್ರದೇಶ ನೋಡಲು ವಾಲಯಾ ಶುಭವಿದ್ಯ ಫಲಿಸುವದು ಲೀಲೆಯಿಂದ ಗ್ರಂಥ ಅಭ್ಯಾಸಕೆ ಪೋಗಿ ಬರುವ ಶೀಲತೆಯು ಕೇಳೆ ಮನೋ ವಾಯುವೇಗ 14 ಬುತ್ತಿಯ ಉಂಡ ಸ್ಥಳವನ್ನು ಕೊಂಡಾಡಲು ತೃಪ್ತನಾಗುವ ಮನುಜ ಮೃಷ್ಟಾನ್ನದಿ ನಿತ್ಯ ಬಾಲಕ್ರೀಡೆ ಆಡಿದ್ದು ಪಾಡಲು ಪುತ್ರೋತ್ಸವಗಳಿಂದ ಬಾಳುತಿಪ್ಪ15 ಚಾಪ ಗದ ಪದುಮ ಎರಡೊಂದು ತೀರ್ಥಗಳು ಇರುತಿಪ್ಪ ವಾಸುದೇವನೆಂಬೊ ನಾಮಾ ಸರೋವರದಲಿ ಮಿಂದು ಸ್ತೋತ್ರ ಮಾಡಿದ ನರಗೆ ವಿರಜೆಯಲಿ ಸ್ನಾನ ಸಂದೇಹವಿಲ್ಲ 16 ಜನಿಸಿ ಮೊದಲು ಮಹಾ ಬದರಿಗೆ ಪೋದಾರಭ್ಯ ಎಣಿಕೆ ಇಲ್ಲದೆ ಚರಿತೆ ಅನುದಿನದಲಿ ಗುಣಿಸಿ ಗುಣದಲಿ ತಿಳಿದು ಕೀರ್ತನೆಯನೆಸಗಿದಾ ಮನುಜರಿಗೆ ಸತ್ಕೀರ್ತಿ ಬರುವುದಯ್ಯಾ 17 ಮಧ್ವ ಮಧ್ವ ಎಂಬೋ ನಾಮವನು ನುಡಿದರೆ ಬದ್ಧವಾಗಿದ್ದ ಭವಾಬ್ಧಿಯಿಂದ ಎದ್ದು ಕಡಿಗೆ ಬಿದ್ದು ಸಂಚಿತಾಗಾಮಿಯಿಂದ ಗೆದ್ದು ಚರ್ಮ ದೇಹದಿಂದ ನಲಿವ 18 ಶ್ರೀ ಪೂರ್ಣಬೋಧ ಗುರುಶೇಖರ ಸುಗುಣಧಾಮ ಆಪನ್ನ ಪರಿಪಾಲ ಅಮೃತಫಲದ ವ್ಯಾಪುತ ನಾನಾ ಸ್ಥಾನ ಹನುಮ ಭೀಮ ಸರ್ವ ರೂಪಾತ್ಮಕ ಪ್ರಾಣ ಭಾರತೀಶ19 ಕೇಳಿ ಹರುಷಿತನಾಗಿ ಬಂದ ವೈಭವದಂತೆ ಕಾಲ ಹಿಂಗಳಿಯದೇ ನಿತ್ಯದಲ್ಲಿ ಲೀಲೆಯಲಿ ವಾಸವಾಗಿರಲೆಂದು ಅಂದು ಪೇಳಲಾ ಮೌಳಿಯನು ತೂಗಿ ಸರ್ವರು ನಿಂತರು20 ಪುಂಜಕಾಸ್ಥಳ ಬಂದು ತಪವು ಮಾಡಲು ಕ್ಷೇತ್ರ ರಂಜನವಾಯಿತು ಇದೇ ನಾಮದಲ್ಲಿ ಕುಂಜರ ವರದ ನಮ್ಮ ವಿಜಯವಿಠ್ಠಲನಂಘ್ರಿ ಕಂಜವನು ಭಜಿತ ಗುರುರಾಜ ಜಯತು 21
--------------
ವಿಜಯದಾಸ
ನಮೋಸ್ತುತೇ ಕಮಲಾಪತೇ ಪ ನಮೋಸ್ತುತೇ ಶತಧೃತಿ ಶಂಕರ ಮುಖ ವಿಮಾನಚರಗಣ ವಂದಿತ ಚರಣ ಅ.ಪ ವಾರಣಭೀತಿನಿವಾರಣ ಭವಜಲ ತಾರಣ ದೈತ್ಯವಿದಾರಣ ಶುಭಗುಣ 1 ಪಂಕಜಲೋಚನ ಪಂಕವಿಮೋಚನ ಪಂಕಜಾಲಯಾಲಂಕೃತಗಾತ್ರ 2 ಶರಣಾಗತಜನ ಭರಣಾಧೃತರಥ ಚರಣಾ ಫಣಿಗಿರಿ ವರದವಿಠಲ 3
--------------
ವೆಂಕಟವರದಾರ್ಯರು
ನಮ್ಮ ಗೋವಿಂದನ ಭಜಿಸುವೆ ಸತ್ಯ ನಿತ್ಯ ಪ ಹಿಂದಿನ ಜನ್ಮದಿ ಕಾಯ್ದ ಶ್ರೀಧರನ ಚಂದದಿ ನರಜನ್ಮಕ್ಕೆಳತಂದ ಪರಿಯ 1 ಜನನಿಯ ಜಠರದಿ ಕಾಯ್ದ ಶ್ರೀಧರನ ಜನನ ಕಾಲಕೆ ಬಂದೊದಗಿದ ಪರಿಯ 2 ಕಾಲಕಾಲಕೆ ಬಂದು ಸಲಹಿದ ಪರಿಯ 3 ದುಷ್ಟ ಜನರ ಕಾಟ ಬಿಡಿಸುವ ಪರಿಯ4 ದೀನರಿಗೊದಗುತ್ತ ಕಾಯ್ವ ಶ್ರೀಧರನ ಚನ್ನಕೇಶವ ದೇವನೆಂಬ ಶ್ರೀ ಹರಿಯ5
--------------
ಕರ್ಕಿ ಕೇಶವದಾಸ
ನಮ್ಮ ರಂಗ ಮಧುರೆಗೆ ನಡೆತರಲು ಪ ಮಥುರೆಗೆ ನಡೆತರಲು ಅತಿ|ಹರುಷದಲಿ ಅಕ್ರೂರನೊಡನೆ| ರಥದಲಿ ಕುಳಿತು ಫಡ ಫಡಫಡಲೆಂದು| ಪಥದಲಿ ನಡಸ್ಯಾಡುತಲಿ 1 ಬಿಲ್ಲಹಬ್ಬದ ನೆವದಲ್ಲಿ|ಫುಲ್ಲಲೋಚನ ಮೋಹನ ಕೃಷ್ಣ| ಇಲ್ಲಿಗೆ ಬಂದನು ಎನುತಲಿ ಕೇಳಲು| ಎಲ್ಲರು ನಡೆದರು ನೋಡಲಾಗಿ 2 ಆಲಯದೊಳಗೆ ನಿಲ್ಲದೇ|ಬಾಲಕಿಯರು ತಮತಮ್ಮ| ಚಾಲವರುತಿಹಾ ತೊಟ್ಟಿಲೊಳಗಿನಾ|ಬಾಲಕರಿಗೆ ಮೊಲೆಗುಡದೆ 3 ಒಬ್ಬಳು ಅರೆಯಣ್ಣೆತಲೆಯಲಿ|ಒಬ್ಬಳು ತಿಗರವ ಹಚ್ಚಿದ ಮೈಯಲಿ ನಡೆದರು ಸಂಭ್ರಮದಿಂದ4 ಅಚ್ಚಮೈಯಲಿ ಕುಳಿತಿರೆ ಒಬ್ಬಳು|ಬಚ್ಚಲೊಳಗೆ ಮಜ್ಜಕನಾಗಿ ಅಚ್ಯುತನಾತುರದಿಂದಲಿ ಒಬ್ಬಳು ಎಚ್ಚರ ದೇಹದ ಬಿಟ್ಟು ನಡೆದಳು 5 ಎಲೆಳುಶಿಶುವೆಂದು ಬಗಲಿಲಿ|ಅಳತೆಯ ಮಾನವನಿರಿಸಿಕೊಂಡು| ನೆಲೆನೊಡದೇ ನಡೆದಳೊಬ್ಬಳು|ಚೆಲುವ ಕೃಷ್ಣನ ನೋಡಲಾಗಿ6 ಕದವನು ಒತ್ತಿಮುಂದಕ|ಒದಗದಿ ಕೆಲವರು ಮಾಳಿಗೆ ಏರಿ| ಸದಮಲಾನಂದಗ ತಲೆಯನು|ಬಾಗಿ ಪದುಮಕರವ ಮುಗಿದು7 ದಣ್ಣನೆ ನೋಡೀ ನೋಡುತಾ|ಕಣ್ಣುಪಾರಣೆ ಮಾಡಿಕೊಂಡು| ಮುನ್ನಿನ ದೋಷವ ಕರಗುವ ಪರಿಯಲಿ| ಪುಣ್ಯ ಸಾಮಗ್ರಿಯ ಮಾಡಿದರಂದು 8 ಕಂಡಾ ಪರಿಯ ರೂಪವಾ| ಧರಿಸಿಕೊಂಡು ಅಂತರಂಗದಲಿ|ತ್ವರಿತದಿಂದಲಿ ಧ್ಯಾಯಿಸುತಾ9
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ನಮ್ಮಮ್ಮನ ಕಂಡೆ ಬೊಮ್ಮನ ಪಡೆದಿಹಳ ಧ್ರುವ ಅಮ್ಮನ ಕಂಡೆನಗೆ ಸುಅಮೃತ ಪಾನವಾಯಿತು ಸಂಭ್ರಮದಿಂದಲೆನಗೆ ಬ್ರಹ್ಮಾಂಡದೊಳು 1 ಅಹ್ಲಾದವಾಯಿತಿಂದು ಫುಲ್ಲಲೋಚನೆಯ ಕಂಡು ಉಲ್ಲಾಸ ತುಂಬಿತೆನಗೆ ಮೂಲೋಕದೊಳು 2 ಮಾತೃ ಪಿತೃವೆಂಬುದು ಸೂತ್ರಧಾರಿ ತಾನೊಬ್ಬಳೆ ಅಂತ್ರ ಬಾಹ್ಯದಲೆನಗೆ ಪುತ್ರ ಮಹಿಪತಿಗೆ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ನರರಿಗೆಲ್ಲಿಯ ಭವಬಂಧ ಜ್ಞಾನಿಗಳಾದನರರಿಗೆಲ್ಲಿಯ ಭವಬಂಧತರಣಿಬಿಂಬವ ತಮಮುಸುಕಲು ಬಲ್ಲುದೆಹರಹರ ಪಾಹಿ ಶಂಕರ ರಾಮೇಶ್ವರನೆಂಬ ಪ ಸರಸಿಜಾಪ್ತನ ಕರಗಳೊಳು ಬಲುಪರಮಾಣುಗಳು ವರ್ತಿಸುವೊಲುಪರಿಪೂರ್ಣಬ್ರಹ್ಮವೊಂದರೊಳು ಬ್ರಹ್ಮಾಂಡಗಳಿರುವವನಂತ ಕೋಟಿಗಳೆಂದು ತಿಳಿದಂಥಾ1 ಬಿಂದಿಗೆ ಬಿಲುಬಿಲೆ(?) ಗಳನಂದುನಬಂದಂತೆ ಸೃಜಿಸಿ ಮತ್ತದನುಪೊಂದಿಸುವಂತೆ ವಿಶ್ವವನು ಪುಟ್ಟಿಸಿ ಲೀಲಾಸ್ಪಂದದಿಂದಡಗಿಪನೀಶನೆಂದರಿದಂಥಾ2 ವಿರುಪ ಕಾಂಚನಮೋರಂತೆ ನಾನಾಪರಿಯ ಆಭರಣವಾದಂತೆಪರಮಾತ್ಮನೋರ್ವನನೇಕನಾಮಂಗಳಧರಿಸಿಹ ಸರ್ವವು ಬ್ರಹ್ಮವೆಂದರಿದಂಥಾ3 ಇರುವುದೀಲೋಕದೊಳೆರಡು ತಮ್ಮ ಸಂಗಡಬರುವುದು ಪರಲೋಕಕೆರಡುಇರುವುದನೇ ಇಟ್ಟು ಬರುವುದು ಬಯಸುತಪರಹಿತಚರಿತದಿ ನಿರುತ ವರ್ತಿಸುವಂಥ4 ಸಾಸಿರದಳ ಕಮಲದೊಳ್ ಇಹಭಾಸುರ ಪ್ರಣವ ಪೀಠದೊಳುಈ ಸಕಲಕೆ ಸಾಕ್ಷಿಕನಾದ ಕೆಳದಿ ಪು-ರೇಶ ರಾಮೇಶನ ನಿರತ ಧ್ಯಾನಿಸುವಂಥಾ5
--------------
ಕೆಳದಿ ವೆಂಕಣ್ಣ ಕವಿ
ನರಸಿಂಹ ನರಸಿಂಹ ನಮಿಸುವೆನೊ ಘೋರ ದುರಿತ ಬೆನ್ನ ಬಿದ್ದಿದೆ ಪರಿಹರಿಸೋ ಶ್ರೀ ನರಸಿಂಹ ಪ ಪರಮೇಷ್ಠಿ ಹರ ಸುರಪತಿ ಮುಖರಾ ಸುರನಿಕರ ಪೊರೆವ ಪ್ರಭೊ ಪ್ರವರ ದುರಿತವು ಅವರನ್ನ ಬಾಧಿಸದಂತೆ ಪೊರೆದ ಪರಿಯಿಂದ ಎನ್ನ ಪೊರೆಯೊ 1 ಕಾಯ್ದು ತನ್ನಯ ತನ್ನ ತಂದೆಯ ಬಾಧೆ ಭಯದಿಂದ ಮನದಲ್ಲಿ ನಿನ್ನ ನೆನಿಯೆ ದಯದಿಂದ ನೀ ಕಂಭದಲಿ ಬಂದು ಪೊರೆದಂತೆ ಎನ್ನ ಭಯ ಪರಿಯೆ ಪೊರೆ ಶ್ರೀ ನರಸಿಂಹ 2 ನಿನ್ನ ಪೆಸರೆಂದರೆ ದುರಿತಂಗಳು ತನ್ನಿಂದ ತಾನೆ ಜರಿಯುವವು ಚನ್ನಾಗಿ ಶರಣರ ಪೊರೆದದಕೆ ನಿನ್ನವರೆಂದು ಕೇಳಿ ಬಲ್ಲೆ ಶ್ರೀ ನರಸಿಂಹ 3 ನಖ ಮುಖ ಶಿಖಿ ತನ್ನ ನೆನೆಯೆ ಸುಖಿತರವಾಹೋದು ಶರಣರಿಗೆ ಮಖಭುಜ ರವಿ ಸಾಕ್ಷಿ ಇದಕಾಗಿರೆ ವಿಖನಸಾರ್ಚಿತ ಪಾದ ಸುಖಮಯನೆ ಶ್ರೀ ನರಸಿಂಹ ಕಾಯೊ 4 ಅರಿದರೀಧರ ವರ ಕರಯುಗನೆ ಕರಯುಗ ಜಾನು ಶಿರದಲ್ಲಿಪ್ಪನೆ ಶಿರದಿಂದೊಪ್ಪುವ ಕರತಳನೆ ವರ ವಾಸುದೇವವಿಠಲ ಪೊರೆಯೊ ಶ್ರೀ ನರಸಿಂಹ ಕಾಯೊ 5
--------------
ವ್ಯಾಸತತ್ವಜ್ಞದಾಸರು
ನಲಿದಾಡು ಬಾರೊ ಗರುಡತುರಂಗಾ ಪ ದುರುಳ ಭಸ್ಮಾಸುರ ಉರಿಹಸ್ತ ಪಡೆದಂದು ತರುಣಿರೂಪದೆ ನಲಿದು ಹರನ ಪೊರೆದೆಯಲ್ತೆ 1 ಲೋಲ ಲೋಚನೆಯರ ಆಲಯಗಳ ಪೊಕ್ಕು ಹಾಲು ಬೆಣ್ಣೆಯ ಮೆದ್ದ ಗೋಪಾಲ ವಿಠಲನೇ 2 (ಭವ ಬಂಧವು ನಾಮಪ್ರಿಯ ಪರಂಧಾಮನೇ) 3 ಆವ ಬಂಧವನ್ನೂ ಬಿಡಿಸಿ ನವನೀತವೀವನೇ ಕಾವರಿಲ್ಲವೋಯೆನ್ನ ಮಾವಿನ ಕೆರೆರಂಗಾ 4 ಕಾಮಿತಂಗಳ ದೇವ ಶಾಮಲಾಂಗನೆ ನಿನ್ನ ನಾಮವ ನೆರೆಸಾರು ರಾಮದಾಸಾರ್ಚಿತ 5
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ನಲಿನಲಿದರು ದ್ವಾರಕಾಪುರದಿ ನಳಿನನಾಭ ಶ್ರೀ ರುಕ್ಮಿಣಿ ಕಲ್ಯಾಣದಿ ಪ. ಜಲರುಹಲೋಚನೆ ಚೆಲುವೆ ಶ್ರೀ ರುಕ್ಮಿಣಿ ಸಲಲಿತಾಂಗನ ನೋಡಿ ವಲುವಿನಲಿ ಕುಳಿತಿರೆ ಅ.ಪ. ಅಂಬರದಲಿ ಭೇರಿ ವಾದ್ಯಗಳೆಸಗೆ ತುಂಬುರು ನಾರದರು ಗಾನವ ಪಾಡೆ ಸಂಭ್ರಮದೊಳು ಮಾಂಗಲ್ಯ ಬಂಧನ ಮಾಡೆ ಅಂಬುಜೋದ್ಭವ ರುಕ್ಮಿಣಿ ಕಂಠದೊಳು 1 ವಿಪ್ರರು ವೇದ ಮಂತ್ರವ ಪಠಿಸೆ ಸ್ವ ಪ್ರಕಾಶ ರುಕ್ಮಿಣಿ ಕರಪಿಡಿಯೆ ಕೃಷ್ಣಾ ಅಪ್ರಮೇಯನೆಂದು ಸ್ತುತಿ ಪಾಠಕರು ಪೊಗಳೆ ಕ್ಷಿಪ್ರದಿ ವಿಪ್ರರಿಗೆ ದಕ್ಷಿಣೆ ತಾಂಬೂಲವೀಯೆ 2 ದೇವಕಿ ವಸುದೇವನಿಗ್ಹರುಷವನಿತ್ತು ದೇವ ಶ್ರೀ ಶ್ರೀನಿವಾಸ ಭಕ್ತ ಜನಾಶ್ರಿತ ಕಾವ ಸಕಲ ಜೀವರ ಹೃದಯನಿವಾಸ ದೇವ ಯಶೋದೆ ನಂದ ಕಂದನ ನೋಡಿ 3
--------------
ಸರಸ್ವತಿ ಬಾಯಿ
ನವಖಂಡದ ಸ್ವಾಮಿ ಒಂದು ನಮ್ಮಗೆಲಿಸಲಿಶುಕಬುದ್ಧಿ ಬಾಲೆಯರ ಕುಂದುಗೈಸಲಿ ಪ. ಚನ್ನನಚಾರಿವಾಸ ಮನ್ನಾರಿ ಕೃಷ್ಣನ ಸಹಮುನ್ನ ಪ್ರಯಾಗಿ ಮಾಧವನ ಬಲಗೊಂಬೆವು1 ಇಳಾ ವರ್ತಾ ಭದ್ರಶಾಮ ಈತನ ಬಲಗೊಂಬೆವುನಾವು ಈತನ ಬಲಗೊಂಬೆವು ಅವರು ನಮ್ಮ ಪಂಥ ಗೆಲಿಸೆಂಬೆವು2 ಹರಿ ವರುಷ ಕಿಂಪುರುಷ ಭರತ ಖಂಡದಲ್ಲಿದ್ದಭರತ ಖಂಡದಲ್ಲಿದ್ದ ನರಹರಿಯ ಬಲಗೊಂಬೆ ಪಂಥಗೆಲಿಸುವ ಶುದ್ಧ 3 ಕೇತು ಮೂಲ ಖಂಡದ ಹರಿಯ ಪ್ರೀತಿಲೆ ಬಲಗೊಂಬೆವುಮಾತು ಸೋಲಿಸಿ ಅವರ ನಮ್ಮ ಮಾತುUಲಿಸೆಂಬೆವು 4 ರಮ್ಯಕ್ಕೆ ಹಿರಣ್ಮಯ ಈ ಕುರುಖಂಡವೆಂಬೊಕುರುಖಂಡದಲಿ ರಮಿಸಿ ಅಲ್ಲಿರುವ ರಾಮೇಶನ ಬಲಗೊಂಬೆವು5
--------------
ಗಲಗಲಿಅವ್ವನವರು
ನವವಿಧ ಭಕ್ತಿ ಶ್ರವಣ ಪಾವನವಾದ ಹರಿಕಥೆ ಪುರಾಣ ಮೊದ ಲಾದುದನು ಕೇಳುತ್ತಿ ಪರಮಾತ್ಮನನ್ನು ಹೃದಯ ಪೀಠದಲಿರಿಸಿ ಪೂಜಿಸುವ ಭಕ್ತನೇ ಶ್ರವಣ ಫಲ ಹೊಂದಿದವ ಶ್ರವಣಭಕ್ತಿಯಿದು 64 ದಾಸಕೂಟದ ಭಕ್ತರಿಂ ರಚಿತವಾದ ಸು ಶ್ರಾವ್ಯ ಹಾಡುಗಳನ್ನು ಪಾಡಿ ಕುಣಿಯುತ್ತ ದೇವರನು ನೆನೆನೆನೆದು ಧ್ಯಾನಿಸುವ ಭಕ್ತರೇ ಕೀರ್ತನದ ಭಕ್ತರೆಂದರಿ ಮನುಜ ನೀನು 65 ವ್ಯಾಸ ದಾಸರ ಕೂಟದಿಂದರಿತ ದೇವರನು ಮಾನಸದ ಮಂಟಪದಲ್ಲಿರಿಸಿ ಪೂಜಿಸುತ ಅದನೆ ಪೌನಃಪುನ್ಯದಿಂದ ಮೆಲುಕಾಡುವದು ಸ್ಮರಣಭಕ್ತಿಯಿದೆಂದು ತಿಳಿ ಮನುಜ ನೀನು 66 ಅವತಾರ ರೂಪಗಳ ಮೂರ್ತಿಗಳ ರಚಿಸುತಲಿ ನಿನ್ನ ಚಿತ್ತದ ದೇವರನ್ನಲ್ಲಿಯಿರಿಸಿ ಅವನ ಗುಣಗಳ ನೆನೆದು ಪಾದಸೇವೆಯ ಮಾಡೆ ಪಾದಸೇವನಭಕ್ತಿಯೆಂದು ತಿಳಿ ಮನುಜ 67 ಹೂ ತುಳಸಿ ಮೊದಲಾದ ವಸ್ತುಗಳ ಶೇಖರಿಸಿ ದೇವ ಮೂರ್ತಿಗಳನ್ನು ಇದಿರಲ್ಲಿಯಿರಿಸಿ ಷೋಡಶದ ಉಪಚಾರ ಪೂಜೆಗಳ ನಿತ್ಯದಲಿ ಮಾಡುವುದೆ ಅರ್ಚನದ ಭಕ್ತಿಯಿದು ತಿಳಿಯೈ 68 ಎದೆ ಶಿರಸು ಕಣ್ಣು ಮನ ಕೈಕಾಲು ಮೊಣಕಾಲು ವಾಗೆಂಬುದೆಂಟಂಗಗಳನು ಪಾದದೆಡೆಯೀಡಾಡಿ ನಮಿಸುವುದೇ ವಂದನವು ಸಾಷ್ಟಾಂಗನಮನವಿದು ತಿಳಿಯೈ 69 ದಾಸೋಹವೆಂಬುದನು ತಿಳಿದು ನೀನನವರತ ಫಲದ ಬಯಕೆಯ ತೊರೆದು ಸೇವೆಯನು ಮಾಡೆ ಸೇವಕನ ನಿನ್ನನ್ನು ತನ್ನ ಬಳಿಗೊಯ್ಯುವನು ಭವಬಂಧ ತೊರೆಯಿಸುತ ಪಾಲಿಸುವನವನು 70 ಸಚ್ಚಿದಾನಂದ ಸ್ವರೂಪದವ ಪರಮಾತ್ಮ ತನ್ನ ಗುಣಗಳನ್ನೆಲ್ಲ ಭಕ್ತರಿಗೆ ಕೊಡುವ ನೀರು ಹಾಲನು ನಂಬಿದಂತೆ ನಂಬುವನನ್ನು ಭಕ್ತರಕ್ಷಕನವನು ಮುಕ್ತಿದಾಯಕನು 71 ಕೃಷ್ಣನು ಪರಬ್ರಹ್ಮ ಕೃಷ್ಣನನು ವಂದಿಸುವೆ ಕೃಷ್ಣನಿಂದಲೆ ಸಕಲ ವಿಶ್ವಗಳ ಸೃಷ್ಟಿ ಸುಕೃತ ದುಷ್ಕøತವೆಲ್ಲ ಕೃಷ್ಣನಡಿಯಲಿ ಮುಡಿಯು ಕೃಷ್ಣನಲಿ ಮನವು 72 ಕಾಮಹತಕನು ರುದ್ರದೇವನಿಲ್ಲಿಯೆ ಇದ್ದು ಅಷ್ಟಯತಿಗಳ ಶುದ್ಧಮಾನಸರ ಮಾಡಿ ಬಾಲಯತಿಗಳ ಮೂಲಕವೆ ಪೂಜೆಯನು ಪಡೆದು ರಾರಾಜಿಸುವೆ ದೇವ ಕೃಷ್ಣರೂಪದಲಿ 73 ಭಾರ್ಗವೀಪತಿಯಾದ ಸಿರಿವರನು ಮಾಧವನು ಭಾರ್ಗವೀರೂಪವನು ಶುಕ್ರವಾರದಲಿ ತಾಳ್ದು ಭಕುತರ ಹೃದಯವನ್ನರಳಿಸುವೆ ನೀನು ಮೋಹಿನೀರೂಪವದು ಮೋಹಕವದಲ್ತೆ 74 ಬಲ್ಲಾಳ ವಂಶಜರು ಉಡುಪ ಕುಲದವರೆಂದು ಭಕುತ ಗುರುವಾದಿರಾಜರ ಹಸ್ತದಿಂದ ಮೂರು ಅವತಾರ ಚಿಹ್ನೆಯ ತಾಳ್ದ ಮಾರುತಿಯ ಆರಾಧ್ಯ ಭೂವರಾಹರ ಕೊಡಿಸಿ ಪೊರೆದೆ 75 ದುಷ್ಟ ಜನಮರ್ದನ ಜನಾರ್ದನನು ನೀನಿರುವೆ ನಿನ್ನ ರೂಪವೆ ಪಕ್ಷನಾಥ ಸೇವಿತವು ಚಕ್ರ ಶಂಖಾಸಿ ಪಾನದ ಪಾತ್ರೆಗಳ ಧರಿಸಿ ದುಷ್ಟ ಶಿಕ್ಷಣಕಾಗಿ ಕಾಳಿ ಸೇವಿಪಳು 76 ಜಮದಗ್ನಿಪುತ್ರನಾಗವತರಿಸಿ ನೀನೊಮ್ಮೆ ಕೊಡಲಿಯಿಂ ಕಡಿಕಡಿದು ದುಷ್ಟರಾಜರನು ನಕ್ಷತ್ರ ಮಂಡಲವ ಭೂ ಮಂಡಲವ ಮಾಡಿ ಪರಶುರಾಮನು ಎಂಬ ಪೆಸರನ್ನು ಪಡೆದೆ 77 ಪರಶುರಾಮನು ರಾಮ ಪರಶುರಾಮನು ಕೃಷ್ಣ ಒಬ್ಬನೇ ಹಲವಾರು ರೂಪಗಳ ತಾಳಿ ಸಾಸಿರದ ನಾಮದಿಂ ಸ್ತುತಿಸಿಕೊಳ್ಳುವೆ ಹರಿಯೆ ನಿನ್ನ ಮಾಯಾರೂಪ ತಿಳಿದವರು ಯಾರು? 78 ಮೇಘದೆಡೆಯಿರುವ ಮಿಂಚಿನ ಹಾಗೆ ನೀನೆಂದು ತಿಳಿಸಲ್ಕೆ ನೀನು ಮೇಘದ ವರ್ಣದವನು ನೀಲತೋಯದ ಮಧ್ಯದಲ್ಲಿರುವ ವಿದ್ಯುತ್ತಿನಂತಿರುವಿ ಯೆಂದು ಶ್ರುತಿ ಹೇಳುವುದು ತಿಳಿಯೈ79 ಪುರುಷೋತ್ತಮನೆ ನಿನ್ನ ಪುರವೆಯೆನ್ನಯ ದೇಹ ಉತ್ತಮನು ನೀನಿರುವೆ ಅಧಮ ನಾನಿರುವೆ ಅಜ್ಞಾನದಾಚ್ಛಾದಿಕೆಯನೆನಗೆ ಹಾಕುತಲಿ ಬಿಂಬರೂಪದಲಿದ್ದು ಬೆಳಗಿಸುವೆ ನನ್ನ 80 ಶ್ರವಣಮನನಾದಿ ಸಾಧನದ ಬಲದಿಂದ ನಾ ನನ್ನ ಮುಸುಕನು ತೆಗೆದರೂ ನೀನು ಎನ್ನ ಬಳಿಯಲ್ಲಿದ್ದು ಕಾಣದಿಹೆ ಪರಮಾತ್ಮ ನಿನ್ನ ಪರಮಾಚ್ಛಾದಿಕೆಯ ತೆಗೆದು ತೋರು 81 ಗೋವರ್ಧನೋದ್ಧಾರಿ ಸಿರಿವರನೆ ನೀನೊಮ್ಮೆ ನಾಭಿರಾಜನ ಪುತ್ರನಾಗಿಯವತರಿಸಿ ಅಜನಾಭವೆಂಬ ಮೋಡವನು ಸೃಷ್ಟಿಸಿ ನೀನು ಲೋಕದ ಕ್ಷಾಮವನು ಹೋಗಲಾಡಿಸಿದೆ 82 ನೀನೊಮ್ಮೆ ದಕ್ಷಿಣದ ಕರ್ಣಾಟಕಕೆ ಬಂದು ಅಜಗರದ ವೃತ್ತಿಯಲಿ ದೇಹವನು ತೊರೆದು ನಿರ್ವಾಣ ಬೌದ್ಧಮತ ಜೈನಾದಿ ಮತಗಳಿಗೆ ಮೂಲಪುರುಷನದಾಗಿ ಮೆರೆದೆ ಪರಮಾತ್ಮ 83 ಸತ್ವ ರಜ ತಮವೆಂಬ ಮೂರು ಗುಣ ಪ್ರಕೃತಿಯದು ಪ್ರಾಕೃತದ ದೇಹವನು ಹೊಂದಿದಾ ಜನರು ಹುಟ್ಟುಗುಣ ಮೂರರಿಂ ಕರ್ಮವನು ಮಾಡುತ್ತ ಸುಖ ದುಃಖವನು ಹೊಂದಿ ಜೀವಿಸುವರವರು 84 ಸತ್ಯಾತ್ಮಕನು ನೀನು ಚ್ಯುತಿಯಿಲ್ಲ ಸತ್ಯಕ್ಕೆ ಅಚ್ಯುತನ ನಾಮದಿಂ ಪಾಪ ಪರಿಹರಿಪೆ ಅಂತವಿಲ್ಲದುದಾತ್ಮ ಆತ್ಮರಕ್ಷಕನಾಗಿ ನಾಮದಲನಂತನೆನಿಸಿರುವೆ ಶ್ರೀಹರಿಯೇ 85 ವೇದರಕ್ಷಕನಾಗಿ ಗೋವುಗಳ ರಕ್ಷಿಸುತ ಗೋವಿಂದನಾಮವನು ಧರಿಸುತಲಿ ನೀನು ನಾಮತ್ರಯಗಳಿವನು ಕರ್ಮಾಂತದಲಿ ಪಠಿಸೆ ಕರ್ಮದೋಷದ ಪಾಪ ಪರಿಹಾರವಹುದು 86 ಸಚ್ಚಿದಾನಂದಸ್ವರೂಪ ಹರಿ ನೀನಿರುವೆ ನಿನ್ನ ರೂಪಗಳೆಲ್ಲ ಪೂರ್ಣವಾಗಿಹವು ಜ್ಞಾನವಾನೆಂದವನು ಹೆರವರ್ಗೆ ತಿಳಿಸುತಿರೆ ನಮ್ಮಲ್ಲಿ ಹೆಚ್ಚುವವು ಅದರಿಂದ ಪೂರ್ಣ 87 ಹರದಾರಿ ಸಾವಿರಾರಿದ್ದರೂ ನಾದವನು ಚಣದೊಳಗೆಯಾಕಾಶವಾಣಿ ಕೇಳಿಸುವದು ಕಾಣದಿಹ ವಿದ್ಯುತ್ತುರೂಪವನು ತಾಳಿದವ ದೇವನಲ್ಲದೆ ಬೇರೆ ಯಾರ ಮಾಯೆಯಿದು 88
--------------
ನಿಡಂಬೂರು ರಾಮದಾಸ
ನಾ ನೋಡಿ ಬಂದೆ ಕೇಳಮ್ಮ ಗೆಳತಿ ಪ ನಾನಿಲ್ಲ ನೀನಿಲ್ಲ ಏನಂದರೇನಿಲ್ಲ ಕಾಣುವ ಮಾತಲ್ಲ ಜಾಣೆ ಸುಳ್ಳಲ್ಲ ಅ.ಪ ಹಸುರಿಲ್ಲ ಕೆಂಪಿಲ್ಲ ಪಶುವಿಲ್ಲ ಪಕ್ಷಿಲ್ಲ ವಸುಧಿಲ್ಲ ಉದಧಿಲ್ಲ ವ್ಯಸನಿಲ್ಲ ಬಂಧವಿಲ್ಲ ಹಸಿವಿಲ್ಲ ತೃಷೆಯಿಲ್ಲ ದೆಸೆಯಿಲ್ಲ ದಿಕ್ಕಿಲ್ಲ ನಿಶೆಯಿಲ್ಲ ದಿವಯಿಲ್ಲ ಕುಸುಮಾಕ್ಷಿ ಸುಳ್ಳಲ್ಲ 1 ಜಲವಿಲ್ಲ ಗಗನಿಲ್ಲ ನೆಲವಿಲ್ಲ ಗಿರಿಯಿಲ್ಲ ಕುಲವಿಲ್ಲ ಚಲವಿಲ್ಲ ಮಲಿನಿಲ್ಲ ಶೀಲಿಲ್ಲ ಜಳಕಿಲ್ಲ ಊಟಿಲ್ಲ ಬೆಳಕಿಲ್ಲ ಕಾಳಿಲ್ಲ ತಳಿಯಿಲ್ಲ ತಮಯಿಲ್ಲ ಲಲನೆ ಸುಳ್ಳಲ್ಲ 2 ಕೃಪೆಯಿಲ್ಲ ಕಪಟಿಲ್ಲ ಜಪವಿಲ್ಲ ತಪವಿಲ್ಲ ಗುಪಿತಿಲ್ಲ ಬೈಲಿಲ್ಲ ನೆಪ್ಪಿಲ್ಲ ಮರೆವಿಲ್ಲ ವಿಪಿನಿಲ್ಲ ಸದನಿಲ್ಲ ರಿಪುವಿಲ್ಲ ಸ್ನೇಹವಿಲ್ಲ ಅಪ್ಪಯಿಲ್ಲ ಅವ್ವಯಿಲ್ಲ ನಿಪುಣೆ ಸುಳ್ಳಲ್ಲ 3 ರಾಗಿಲ್ಲ ರಚನಿಲ್ಲ ಯಾಗಿಲ್ಲ ಯಜ್ಞಿಲ್ಲ ತ್ಯಾಗಿಲ್ಲ ತ್ಯಜನಿಲ್ಲ ಭೋಗಿಲ್ಲ ಭಾಗ್ಗ್ಯಿಲ್ಲ ರೋಗಿಲ್ಲ ಶ್ರಮವಿಲ್ಲ ಬೈಗಿಲ್ಲ ಬೆಳಗಿಲ್ಲ ಯಾಗಿಲ್ಲ ಪಾಪವಿಲ್ಲ ಭಗಿನಿ ಸುಳ್ಳಲ್ಲ 4 ಹೋಮವಿಲ್ಲ ವಿಪ್ರಿಲ್ಲ ಧೂಮವಿಲ್ಲ ಧೂಳಿಲ್ಲ ಭೂಮಿಲ್ಲ ಜನನಿಲ್ಲ ಕಾಮಿಲ್ಲ ಮರಣಿಲ್ಲ ನೇಮಿಲ್ಲ ಕ್ರಿಯವಿಲ್ಲ ನಾಮಿಲ್ಲ ರೂಪಿಲ್ಲ ಸ್ವಾಮಿ ಶ್ರೀರಾಮ ಬಲ್ಲ ಭಾಮೆ ಸುಳ್ಳಲ್ಲ 5
--------------
ರಾಮದಾಸರು
ನಾಕಾಧಿಪ ಮುನಿಜನವರದಾಮೆಯಾ ಪ ಲೋಕೇಶನುತ ಕಂಜಲೋಚನಾಮೆಯಾ ಸಾಕಾರ ಭೋಗೀಶ್ವರ ಮಂಜುಳಚರಣಾ ಅ.ಪ ಉದಿತ ಭಾಸ್ಕರಹಿತನಾಥನಾಧಾರೇ 1 ವರವೇಲಾಪುರವಾಸ ವೈಕುಂಠ ಸರ್ವೇಶಾ2
--------------
ಬೇಲೂರು ವೈಕುಂಠದಾಸರು
ನಾನ್ಯಾಕೆ ಚಿಂತಿಸಲಿ ನಾನ್ಯಾಕೆ ಧೇನಿಸಲಿ ತಾನಾಗಿ ಶ್ರೀರಾಘವೇಂದ್ರಯತಿ ಒಲಿದ ಪ ಪೋರತನದವನು ಎರೆಡು ತೆರೆಗಳಲ್ಲಿ ದೂರಾಗಿ ಮೊರೆಯು ಅಲ್ಲವೆಂದು ಕಾರುಣ್ಯದಿಂದ ತಮ್ಮಯ ಗುರುತುಗಳ ತೋರಿ ಧೀರ ತಾ ಕರವನು ಪಿಡಿದ ಬಳಿಕ 1 ಜಗದೊಳಗೆ ಪದಾರ್ಥಗಳು ಗುಣದಿ ಭುಂಜಿಸುವಂಗೆ ಅಗದಂಕರನು ತಾನು ಬಳಿಗೆ ಬಂದು ಬಗೆಬಗೆಯಿಂದಲಿ ಸುರಸ ಪದಾರ್ಥಗಳು ಸೊಗಸಾಗಿ ಉಣಿಸಲು ಚಿಂತೆಯುಂಟೆ2 ಪೂರ್ಣಜಲ ಹರಿವ ವಾಹಿನಿ ಕಂಡು ಬೆದರುವಗೆ ಕರ್ಣಧಾರನು ತಾನೆ ಬಂದು ನಿಂದು ತೂರ್ಣದಲಿ ಕರಪಿಡಿದು ಹರಿಗೋಲ ಒಳಗಿಟ್ಟು ಫೂರ್ಣಿಸಲು ಅವನಿಗೆ ಚಿಂತೆಯುಂಟೆ 3 ತನ್ನಯ ಹಿತವು ತಾ ವಿಚಾರಿಸಲವಂಗೆ ಚನ್ನಾಗಿ ಪರಮ ಗುರು ತಾನೆ ಬಂದು ಸನ್ಮಾರ್ಗವನು ತಾನೆ ಪೇಳುವೆನೆನಲು ಇನ್ನು ಆಯಾಸವುಂಟೆ ಅವನಿಗೆ 4 ಏಸು ಜನ್ಮದಲಿ ಅರ್ಚಿಸಿದೆನೊ ನಾ ಇನ್ನು ಪಾದ ಪದುಮ ಲೇಸಾಗಿ ಈ ಸುಕೃತದಿಂದೆನ್ನ ಹರಿದಾಸ ಈ ಸುಗುಣ ಗುರುರಾಯ ಎನಗೆ ಒಲಿದ 5
--------------
ವ್ಯಾಸತತ್ವಜ್ಞದಾಸರು
ನಾಮ ಮುದ್ರೆಯ ಧರಿಸೋ ಶ್ರೀಹರಿಯ ದಿವ್ಯ ಪ ನಾಮ ಮುದ್ರೆಯ ಧರಿಸೆ ಆ ಯಮನಾಳುಗಳ ಭೀಮವಿಕ್ರಮದ ಭಯ ಲೇಶವಿಲ್ಲವೋ ಅ.ಪ ಚಕ್ರದೊಳು ಹೀಂಕಾರನಾಮಕನಾಗಿ ನಕ್ರವೈರಿಯ ಕಾಯ್ವ ತಮವನ್ನು ಹರಿಸಿ ವಿಕ್ರಮ ಕೃಧ್ಧೋಲ್ಕ ತಮಲೋಕದೊಳು ಇದ್ದು ಚಕ್ರಧರಿಸದ ಜೀವರ ಕ್ರೂರತನದಲಿ ಶಿಕ್ಷಿಪಾ 1 ಶಂಕಿಸುವವನ ಪಾಪಪಂಕದೊಳಿಟ್ಟು ಮಂಕುಕವಿಸಿ ಮಹೋಲ್ಕ ಶಿಕ್ಷಿಪನಯ್ಯ 2 ಗದೆಯೊಳು ನಿಧನನಾಮಕ ಹರಿಯು ತಾನಿದ್ದೂ ಮುದದಿ ಮರೆಯುವವರನಾ ವೀರೋಲ್ಕ ತಾ ನಿತ್ಯ 3 ಪದುಮನೊಳು ಪ್ರಸ್ತಾವನಾಮದಿ ಪದ್ಮರಹಿತ ಮಾನವರ ದ್ಯುಲ್ಕರೂಪದಿ ನಿತ್ಯ 4 ನಾರಾಯಣ ಮುದ್ರೆಯೊಳು ಉದ್ಗೀಥನು ಹರಿಭಕುತರ ಅಂಧತಾಮಿಶ್ರ ಕಳೆವನು ದುರುಳ ಕಲ್ಯಾದ್ಯರ ಸಹಸ್ರೋಲ್ಕ ರೂಪದಿ ಕ್ರೂರತನದಿ ಅಂಧಂತಮದೊಳಿಡುವನು 5 ನೇಮದಿ ದ್ವಾದಶ ಊಧ್ರ್ವಪುಂಡ್ರಗಳು ಕಮಲ ತುಲಸಿಮಣಿಮಾಲೆಗಳ ಕೊರಳೊಳು ಯಮನಾಳುಗಳ ಭಯ ಲೇಶವಿಲ್ಲೆಂದಿಗೂ 6 ಪಂಚ ಪಂಚ ಕರಣಗಳ ಕಾರ್ಯ ಒಪ್ಪಿಸೇ ಪಂಚನರಕಬಾಧೆ ಕಿಂಚಿತ್ತ್ತಾದರು ಇಲ್ಲ ಪಂಚಾನನನುತ ಶ್ರೀ ವೇಂಕಟೇಶನ ದಿವÀ್ಯ7
--------------
ಉರಗಾದ್ರಿವಾಸವಿಠಲದಾಸರು