ಒಟ್ಟು 1741 ಕಡೆಗಳಲ್ಲಿ , 101 ದಾಸರು , 1310 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನೆನೆಮನವನುದಿನ ಹನುಮದೀಶನ ಕನಸಿನಲಿ ತನುಸುಖವನು ಬಯಸದೆ ನಿ ಪ. ಮನಸಿಜ ಪಿತನನೆ ನೆನೆನೆನೆದ್ಹಿಗ್ಗುತ ನಿನ ಹೃದಯದಲ್ಹರಿಯನು ನಿಲಿಸುತಲೆ ತನುಮನವರ್ಪಿಸೆ ಜನುಮ ಜನುಮದಘ ವನು ಕಳೆವನು ರಾಮನುಮಾನವೇಕೆ 1 ಆರು ಅರಿಯದ ತೋರಿ ಭಕ್ತಿಯೇ ಬಾರಿ ಪಾಶದಿ ಕಟ್ಟಿಹ ಹನುಮ ವಾರಿಜನಾಭನು ಹಿಗ್ಗಿ ನಿಲುತಲೆ ಚಾರುಸೇವೆಗೆ ಬಹೆ ಎನೆ ರಾಮನ ನೆನೆ2 ಕಲ್ಲಾಗಿದ್ದ ಅಹಲ್ಯೆಯ ರಾಮನು ನಲ್ಲೆಯ ಮಾಡಿದನರಿಯೆಯ ಮನವೆ ಚೆಲ್ಲುತ ಕರುಣವ ಶಬರಿಯ ಎಂಜಲನುಂಡ ರಮಾ ವಲ್ಲಭ ಶ್ರೀ ಶ್ರೀನಿವಾಸ ಕರುಣಿಯೊ ನೆನೆ 3
--------------
ಸರಸ್ವತಿ ಬಾಯಿ
ನೆನೆವವಗೆ ಹರಿಯುಂಟು ನೆನೆಯದವಗೆ ಮದ ವೆಂಟು ಪ ನೆನೆವ ಮನವಿರಲುಂಟು ಮುನಿಸುತನ ನಂಟು ಅ.ಪ ನೆನೆವ ಧೃವನೂ ಗೆದ್ದ ಶುಕಮಹಾಮುನಿಗೆದ್ದ ನೆನೆವ ಹನುಮನೂ ಗೆದ್ದ ಶರಭಂಗ ಮುನಿಗೆದ್ದ ನೆನೆವ ಗಜಪತಿಗೆದ್ದ ವಾಲಿತನಯನೂ ಗೆದ್ದ ಕನಕದಾಸನು ಗೆದ್ದ ಇದು ಸರ್ವಸಿದ್ಧ 1 ಧುರದಿ ರಾವಣ ಬಿದ್ದ ವರವಿಭೀಷಣ ಗೆದ್ದ ದುರುಳ ಕಶಿಪೂ ಬಿದ್ದ ಪ್ರಹ್ಲಾದ ಶಿಶುಗೆದ್ದ ಹಿರಿಯವಾಲಿಯುಬಿದ್ದ ಸುಗ್ರೀವ ಗೆದ್ದ 2 ಸುಲಭನೊ ಮಾಂಗಿರಿಯ ರಂಗ ಜಗದಾನಂದ ಫಲವ ಕೊಟ್ಟಳಿಗೊಲಿದ ವಿಷಧರೆಯ ಸದೆದ ಬಲು ಮೆರೆದ ಕೌರವನ ಕುಲವಿನಾಶವ ಗೈದ ಚೆಲುವ ಮಾಂಗಿರಿರಂಗ ಶರಣರಿಗೆ ವರದ3
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ನೆನೆವೆನನುದಿನ ನೀಲನೀರದವರ್ಣನ ಗುಣರನ್ನನಮುನಿಜನಪ್ರಿಯ ಮುದ್ದು ಉಡುಪಿನ ರಂಗನ ದಯಾಪಾಂಗನ ಪ. ದೇವಕೀ ಜಠÀರೋದಯಾಂಬುಧಿಚಂದ್ರನ ಸುಖಸಾಂದ್ರನಗೋವ್ರಜಕೆ ಘನ ಯಮುನೆಯನು ದಾಟಿ ಬಂದನ ಅಲ್ಲಿ ನಿಂದನಮಾವ ಕಳುಹಿದ ಮಾಯಶಠವಿಯ ಕೊಂದನ ಚಿದಾನಂದನ ದೇವರಿಪು ದೈತ್ಯೇಂದ್ರ ಶಕಟನ ಒದ್ದನ ಶ್ರುತಿಸಿದ್ಧನ 1 ಗೋಕುಲದ ಗೋಪಿಯರ ಸಂಚಿತ್ತ ಚೋರನ ಬಹು ಧೀರನ ಅ-ನೇಕ ನಾರಿಯರ್ವಸನವನು ಕದ್ದೊಯ್ದನ ಪುರಗಾಯ್ದನನಾಕಿಯರ ನೋಯಿಪಧೇನುಕ ವತ್ಸವಿಘಾತ ವಿಖ್ಯಾತನಕಾಕುಮತಿ ಕಾಳಿಂಗನ ಫಣ ತುಳಿದನ ಆವಗೊಲಿದನ 2 ಕರ ಪಿಡಿದನ ಸುಧೆಗುಡಿದನಬಾಲ ಭಾಮೆಯರೊಡನೆ ಜಲಕ್ರೀಡೆಗಿಳಿದನ ಅಲ್ಲಿ ನಲಿದನಲೀಲೆಯಲಿ ಲಲನೆಯರಿಗಿಷ್ಟವ ಕೊಟ್ಟನ ಸಂತುಷ್ಟನ 3 ಕ್ರೂರ ಬಕ ಕೇಶಿಗಳನೆಲ್ಲ ಸೀಳ್ದನ ಸುರರಾಳ್ದನ ಅಕ್ರೂರ ಕರೆಯಲು ಹರುಷದಿಂದಲಿ ಬಂದನ ಸುರವಂದ್ಯನಸಾರಿ ಕುಬ್ಜೆಗೆ ಭೂರಿಸಂತಸವಿತ್ತನ ಅತಿಶಕ್ತನವಾರಣವ ಒದ್ದು ಕೆಡಹಿದಾಪ್ರತಿಮಲ್ಲನ ಅತಿಚೆಲ್ವನ4 ಸುಲಭದಿಂದಲಿ ಶಿವನ ಧನುವನು ಮುರಿದನ ನೆರೆಮೆರೆದನಮಲೆತÀ ಮಲ್ಲರ ಮಡುಹಿರಂಗದಿ ನಿಂತನ ಜಯವಂತನಖಳಕುಲಾಗ್ರಣಿ ಕಂಸನೆಂಬನ ಹೊಡೆದನ ಹುಡಿಗೆಡೆದನಬಲದಿ ತಾಯಿತಂದೆ ಬಂಧನ ಕಡಿದನ ಕೀರ್ತಿ ಪಡೆದನ 5 ಭುವನ ಪಟ್ಟವನುಗ್ರಸೇನಗೆ ಕೊಟ್ಟನ ಅತಿ ದಿಟ್ಟನಯುವತಿಯರಿಗುದ್ಧವನ ಕಳುಹಿದ ಜಾಣನ ಸುಪ್ರವೀಣನವಿವಿಧ ವಿದ್ಯಾ ಕಲೆಗಳನ್ನೆಲ್ಲ ಅರಿತನ ಶುಭಚರಿತನ ಜವನ ಶಿಕ್ಷಿಸಿ ದ್ವಿಜನ ಕಂದನ ತಂದನ ಆನಂದನ 6 ಕುಮತಿ ಖಳ ಮಾಗಧನ ಯುದ್ಧದಿ ಗೆದ್ದನ ಅನವದ್ಯನದ್ಯುಮಣಿಸಮ ದ್ವಾರಕೆಯ ರಚಿಸಿದುದಾರನ ಗಂಭೀರನಸುಮತಿ ಮುಚುಕುಂದನೊದ್ದ ಯವನನ ಸುಟ್ಟನ ಅತಿದಿಟ್ಟನವಿಮಲ ಸುಚರಿತ್ರಾಷ್ಟಮಹಿಷಿಯರಾಳ್ದನ ನೆರೆಬಾಳ್ದನ 7 ಮುರನರಕ ಮುಖ್ಯರನು ಚಕ್ರದಿ ತರಿದನ ಕರಿವರದನಸುರತರುವ ಸತಿಗಾಗಿ ತಂದ ಸಮರ್ಥನÀ ಜಗತ್ಕರ್ತನದುರುಳ ಶಿಶುಪಾಲಾದಿ ದೈತ್ಯ ಸಂಹಾರನ ಬಹು ಶೂರನಕುರುಕುಲಕೆ ಲಯವಿತ್ತ ಪಾಂಡವಪ್ರೀಯನ ಕವಿಗೇಯನ 8 ಸಂತತವೀ ಸಾರÀ ಕತೆಯನು ಕೇಳ್ವರ ನೆರೆ ಬಾಳ್ವರಕಂತುಪಿತ ಕಾರುಣ್ಯದಿಂದಲಿ ಹೊರೆವನು ಸುಖಗರೆವನುಇಂತು ಇಳೆಯ ಸುಜನರ ಸಲಹುವ ಕಾಂತನ ಸಿರಿವಂತನಪಂಥವುಳ್ಳ ಪ್ರಸನ್ನ ಹಯವದನ್ನನಮುನಿಮಾನ್ಯನ 9
--------------
ವಾದಿರಾಜ
ನೆನೆಸಿ ನೆನೆಸಿ ನಗುವರಮ್ಮಯ್ಯಮನಸಿಜನಯ್ಯನ ಮಿತ್ರಿ ಧೇನಿಸಿಧೇನಿಸಿ ಹೇಳಿ ಬರೆಸಿದ ಚಿತ್ತಾರವ ಕಂಡು ನೆನೆಸಿ ನೆನೆಸಿ ನಗುವರಮ್ಮ ಪ. ಅತ್ತಿಗೆಯರು ಕುಳಿತಲ್ಲೆ ಅರ್ಥಿಯ ನೋಡುವ ಬರೆಬತ್ತಲೆ ಗೊಂಬೆ ಬಗೆ ಬಗೆ ಬತ್ತಲೆ ಗೊಂಬೆ ಬಗೆ ಬಗೆ ಕುಶಲರ್ಥಚಿತ್ತಾರವ ಯಾರು ಬರೆಸಿಹರು 1 ಜಾತಿ ಹಂಸ ಪಕ್ಷಿಗಳು ಮಾತಿನ ಗಿಳಿವಿಂಡುನೂತನ ನವಿಲು ಬರೆಸಿಲ್ಲನೂತನ ನವಿಲು ಪಕ್ಷಿ ಬರೆಸಿಲ್ಲಹನುಮನೆಂಬೊ ಕೋತಿ ಯಾಕೆ ಬರೆಸಿಹರು2 ಭೇರುಂಡ ಮೃಗವ ತಿದ್ದಿ ತಾನುಬರೆಸಿಲ್ಲ ಬಿದ್ದು ಜನರೆಲ್ಲ ನಗುವಂತೆ ಬಿದ್ದು ಜನರೆಲ್ಲ ನಗುವಂತೆ ತಾನುಮುದಿಹದ್ದ ಯಾಕೆ ಬರೆಸಿಹರು 3 ಎಂಟು ದಿಕ್ಕಿಗೊಪ್ಪೊ ಬಂಟರ ಬರೆಸಿಲ್ಲಕುಂಟ ಸಾರಥಿಯ ವಶವಾಗಿ ಕುಂಟ ಸಾರಥಿಯ ವಶವಾಗಿ ತಿರುಗಾಡುವ ಸೊಟ್ಟ ಸೂರ್ಯನ ಚಿತ್ತಾರ ಬರೆಸಿಹರು 4 ಸುಂದರ ಸುಂದರ ವೃಂದಾರಕರನೆಲ್ಲ ಬಿಟ್ಟುಬಂದ ಜನರೆಲ್ಲ ನಗುವಂತೆ ಬಂದ ಜನರೆಲ್ಲ ನಗುವಂತೆ ಕಳೆಗುಂದಿದಚಂದ್ರನ ಚಿತ್ತಾರ ಬರೆಸಿಹರು 5 ರೂಢಿಗೊಡೆಯನ ಮನೆಯ ಗೋಡೆ ಮ್ಯಾಲಿನ ಗೊಂಬೆ ನೋಡಿದವರೆಲ್ಲ ನಗುವಂತೆನೋಡಿದವರೆಲ್ಲ ನಗುವಂತೆ ತಾತನ ಕೋಡು ಇಲ್ಯಾಕೆ ಬರೆಸಿಹರು 6 ಚೆನ್ನ ರಾಮೇಶನ ಹೊನ್ನ ಗೋಡೆಯ ಮ್ಯಾಲೆ ಮುನ್ನೆ ಜನರೆಲ್ಲ ನಗುವಂತೆ ಮುನ್ನೆ ಜನರೆಲ್ಲ ನಗುವಂತೆ ರುಗ್ಮನ ಪನ್ನಿ ವಿಸ್ತಾರ ಬರೆಸಿಹರು ಚಿತ್ತಾರ 7
--------------
ಗಲಗಲಿಅವ್ವನವರು
ನೆರೆದು ಗೋಪಿಯರೆಲ್ಲರು - ಕೃಷ್ಣಯ್ಯನಕರವ ಪಿಡಿದುಕೊಂಡುಭರದಿಂದ ಬಂದು ಯಶೋದೆಗೆ ಚಾಡಿಯಅರುಹಿದರತಿ ವೇಗದಿ ಪ ಬಲು ಕಳ್ಳ ನಿನ್ನ ಮಗ - ಯಶೋದೆ ಕೇಳೆಹಾಲು ಕರೆಯುತಿರಲುತೊಲೆಗೆ ನಿಚ್ಚಣಿಕೆಯನೆ ಹಾಕದೆ ಸುರಿದನುನೆಲುವಿನ ಪಾಲ್ಮೊಸರ 1 ಅಮ್ಮಯ್ಯ ಇಲ್ಲ ಕಾಣೆ - ಇವಳು ಎನ್ನಸುಮ್ಮನೆ ದೂರುವಳೆಹಮ್ಮಿಂದ ನಾನವಳ ಅಟ್ಟಕ್ಕೆ ನೆಗೆಯಲುಬೊಮ್ಮ ಜಟ್ಟಿಗನೇನಮ್ಮ2 ಮತ್ತೆ ಮುತ್ತಿನಂಥ - ನಿನ್ನೀ ಮಗಹತ್ತಿ ಗವಾಕ್ಷದಿಂದಎತ್ತಿಟ್ಟ ಬೆಣ್ಣೆಯನೆಲ್ಲದ ಮೆದ್ದನುಹೆತ್ತ ಮಕ್ಕಳಿಗಿಲ್ಲದಂತೆ 3 ಗಡಿಗೆ ಬೆಣ್ಣೆ ಮೆಲ್ಲಲು - ಎನ್ನ ಹೊಟ್ಟೆಮಡುವು ಭಾವಿಯೇನೆಹುಡುಗರಿಗರಿಯದೆ ಎತ್ತಿಟ್ಟ ಬೆಣ್ಣೆಯಹೊಡೆದರವರ ಮಕ್ಕಳು 4 ಮರೆತು ಮಂಚದ ಮೇಲೆ - ನಾ ಮಲಗಿರಲುಹರಿವ ಹಾವನೆ ತಂದುಅರಿಯದಂತೆ ಬಂದು ಮುಸುಕಿನೊಳಗಿಟ್ಟುಸರಸರ ಪೋದನಮ್ಮ 5 ಹರಿದಾಡುವ ಹಾವನು - ನಾ ಹಿಡಿಯಲುತರಳ ನಾ ತಡೆಗಾರನೆಹರಕೆಯ ಹೊತ್ತುದನೊಪ್ಪಿಸದಿರಲುಗುರುತು ತೋರಲು ಬಂತೇನೊ6 ಕಕ್ಕಸ ಕುಚಗಳಮುಸುಕಿನೊಳಗೆ ಹಿಡಿದ 7 ಕೇಳು ಕೇಳೆಲೆ ಅವ್ವ - ಇವಳು ಬೇ-ತಾಳನಂತಿರುವಳುಬಾಲಕ ನಾನವಳುದ್ದಕೆ ನೆಗೆವೆನೆಜೋಲುವ ತೊಗಲಿಗಾಗಿ 8 ಮಕ್ಕಳು ಪಡೆದವರು - ಇಲ್ಲದ ಕಳವಿಕ್ಕಬಹುದೆ ಕೃಷ್ಣಗೆಸಿಕ್ಕ ತಪ್ಪು ಸಮೇತ ಎಳೆತಂದರೆತಕ್ಕ ಬುದ್ಧಿಯ ಹೇಳುವೆ 9 ಅಣುಘನರೂಪ ಕಾಣೆ - ನಿನ್ನೀ ಮಗಚಿನುಮಯ ರೂಪ ಕಾಣೆಘನ ಮಹಿಮನು - ಇಂಗಳಗೊಂದಿಯಚೆನ್ನಕೇಶವರಾಯ ಕಾಣೆ 10
--------------
ಕನಕದಾಸ
ನೇಮವಿಲ್ಲದ ಹೋಮವೇತಕೆರಾಮನಾಮವಿರದ ಮಂತ್ರವೇತಕೆ ಪ ನೀರ ಮುಣುಗಲು ಏಕೆ ನಾರಿಯಳ ಬಿಡಲೇಕೆವಾರಕೊಂದುಪವಾಸ ಮಾಡಲೇಕೆನಾರಸಿಂಹನ ದಿವ್ಯನಾಮವನು ನೆನೆದರೆಘೋರ ಪಾತಕವೆಲ್ಲ ತೊಲಗಿ ಹೋಗುವುದು 1 ಅಂಬರವ ತೊರೆಯಲೇಕೆ ತಾಂಬೂಲ ಬಿಡಲೇಕೆಡಂಭಕದ ವೃತ್ತಿಯಲಿ ಇರಲೇತಕೆಅಂಬುಜನಾಭನನು ಭಾವದಲಿ ನೆನೆದರೆಇಂಬುಂಟು ವೈಕುಂಠವೆಂಬ ಪುರದೊಳಗೆ 2 ಬಂಧದೊಳಗೆ ಬಿದ್ದು ಹರಿಯನೆ ನೆನೆಯುತಿರೆಬೆಂದು ಹೋಗುವುವು ದುರಿತಂಗಳೆಲ್ಲಬಂದ ದುಃಖಗಳೆಲ್ಲ ನಿಲ್ಲದಲೆ ಕಳೆಯುವವುಚೆಂದಾಗಿ ನೆಲೆಯಾದಿಕೇಶವನ ನೆನೆಯೆ3
--------------
ಕನಕದಾಸ
ನೊಂದು ಸಂಸಾರದೊಳಗೊಂದಿಸುವೆನೋ ಇಂದು ಮಾಧವ ಯಾದವ ಪ ಕರುಣಬಾರದೆ ನಿನಗೆ ಅಕಟಕಟ ಅಕಟಕಟ ಶರಣ ನಾ ನಿನಗಲ್ಲವೇ ಸ್ವಾಮಿ ನಿನ್ನ ಮೊರೆಹೊಕ್ಕೆ ಸರ್ವಾಂತರ್ಯಾಮಿ-ಎನ್ನ ಎರವು ಮಾಡುವರೇನೋ ಪ್ರೇಮಿ-ಇನ್ನು ಪರಿಹರಿಸು ಸಂಚಿತಾಗಾಮಿ-ಇದೇ ಸರಿಯೇನೊ ಜಗದೊಳಗೆ ಭಕುತವತ್ಸಲನೆಂಬ ಬಿರುದು ಪೊಳ್ಳಾಗದೇನೊ ನಿರುತ ಖ್ಯಾತ1 ಸತತ ಸುಖವುಳ್ಳರೆ ಬಾಯ್ದೆರೆದು ಪಲ್ಗಿರಿದು ನುತಿಸಿ ಬೇಡಿಕೊಂಬೆನೇ ನಿನ್ನ- ಮುಂದೆ ಗತಿಯ ಕಾಣದಲೆ ಚಾಲ್ವರಿದೆ ಭೇದ- ಮತಿ ಕೊಡದೆ ನೋಡುವುದು ಬರಿದೆ-ಸರ್ವ ಕ್ಷಿತಿಯೊಳಗೆ ನೀನೆಂದು ಅರಿದೆ-ವರ- ತತುವ ನಿಯ್ಯಾಮಕರ ಬಳಿ ಪಿಡಿದು ನಿನ್ನಂಘ್ರಿ ಶತಪತ್ರ ತೋರಿಸೈಯ್ಯಾ ಜೀಯಾ 2 ಶೃತಿಶಾಸ್ತ್ರ ಪೌರಾಣ ಭಾರತ ರಾಮಾಯಣ ಇತಿಹಾಸ ಪಾಂಚರಾತ್ರ ನಿಗಮ-ನಿನ್ನ ತುತಿಪ ಭಕುತರಿಗೆ ತಲೆಬಾಗಿ-ಕೊಂಡು ಪ್ರತಿದಿವಸದಲಿ ಚೆನ್ನಾಗಿ-ವಲಿದು ಅತಿಶಯವ ಕೊಡುತ ಲೇಸಾಗಿ-ವಿಘ್ನ ತತಿಕಳೆದು ನೀ ಬಂದು ಸಾರೆ ಬೆರಗಾಗುತಿದೆ ಪತಿತಿ ಪಾವನ ಮೋಹನ-ಚೆನ್ನ3 ತಡವ್ಯಾಕೆ ಗುಣಕಾಲ ಕರ್ಮದೇಶಗಳೆಲ್ಲ ವಡೆಯ ಎನ್ನಾಧೀನವೇ ಪೇಳೊ-ದು:ಖ ಬಿಡಿಸುವುದು ನಿನಗುಚಿತವಲ್ಲ-ಪಾಟು ಸಿರಿ ಲಕುಮಿನಲ್ಲ-ಒಂದು ನುಡಿವೆ ನಾನಾಂತರ್ಯ ಸೊಲ್ಲ-ಇಂತು ಕಡೆಮಾಡಿ ನೋಡದಿರು ದಿವಸ ಹಿಂದಾಗುತಿದೆ ಬಡವರಾಧಾರಿ ಕರುಣೀ-ದಾನಿ4 ಧ್ರುವನು ನಭದೊಳು ಇಲ್ಲಿ ರಾವಣಾನುಜ ಅಧೋ ಭುವನದಲಿ ಬಲಿರಾಯನ ನೋಡಿ, ನಾನು ತವಪಾದ ಗತಿಯೆಂದು ಬಂದೆ-ಮಹಾ ಭವಣೆ ಬಟ್ಟೆನೊ ಕೇಳು ಹಿಂದೆ-ಜಗದಿ ತ್ರಿವಿಧ ತಾಪಗಳಿಂದ ನೊಂದೆ-ಈ ಅವಸರಕೆ ಬಂದೊದಗಿ ನಿನ್ನ ನಾಮಾಮೃತದ ಸವಿದೋರೊ ದ್ವಾರಾವತಿಯ-ಜೀಯ 5 ಅಂಧಕೂಪದಲಿ ಬಿದ್ದವನ ನೋಡಿ ನಿನಗೆ ಚ ಕ್ಕಂದವಾಗಿದೆಯೊ ಕಾಣೆ-ನಾನು ಸಂದೇಹ ದ್ವೇಷದವನಲ್ಲ-ಇದು ಎಂದೆಂದಿಗೂ ಪುಸಿಯು ಅಲ್ಲ-ಹೃದಯ- ಮಂದಿರದೊಳು ಬಲ್ಲೆಯೆಲ್ಲ-ಸ್ವಾಮಿ ನೊಂದು ಕೂಗಿದರೆ ಎಳೆಗಂದಿಯೆಂಬಾ ಮಾತು ಇಂದು ಎತ್ತಲಿ ಪೋಯಿತೋ ತಾತ-ನೀತ 6 ಗುಣವಂತ ಬಲವಂತ ಜಯವಂತ ಸಿರಿವಂತ ಘನವಂತ ಧೈರ್ಯವಂತ ಶ್ರೀಕಾಂತ-ಎನ್ನ ಮನದ ದುಮ್ಮಾನವನೆ ಬಿಡಿಸೊ-ನಿನ್ನ ಅನವರತ ನಾಮವನು ನುಡಿಸೊ-ಮಧ್ವ ಮುನಿ ಕರುಣ ಕವಚವನು ತೊಡಿಸೊ-ಇದೇ ಜನುಮ ಜನುಮಕೆ ಬೇಡಿಕೊಂಬೆ-ಶರಣೆಂಬೆ ಪ್ರಣತ ಹೃದಯಾಬ್ಜ ತುಂಬೆ-ಕಾಂಬೆ 7 ಮಾನಸ್ನಾನವನುಂಡು ಮತಿಗೆಟ್ಟ ಪೂರ್ಣ ವಿ ಜ್ಞಾನಮಯನೆ ನಿನ್ನ ಮರೆದೆ-ಕರ್ಮ ಪ್ರಾಣೇಂದ್ರಿಯಂಗಳು ನಿನ್ನ ವಶವೊ-ಇಂಥ ಜಾಣತನ ಬಹಳ ಸಂತಸವೊ-ಹೀಗೆ ಮಾಣದಲೆ ಇಪ್ಪ ಸಾಹಸವೋ ಚನ್ನ ಜ್ಞಾನ ಭಕುತಿ ವಿರಕುತಿ ಕೊಟ್ಟು ನಿನ್ನವರೊಳಾನಂದದಲಿ ನಿಲ್ಲಿಸೈಯ್ಯ ಜೀಯ 8 ಶಂಖ ಚಕ್ರ ವರಾಭಯ ಹಸ್ತದಲಿ ನಿಂದ ವೆಂಕಟಾಚಲ ನಿವಾಸ ಶ್ರೀಶ-ನಿನ್ನ ಕಿಂಕರನ ಕಿಂಕರನೊ ನಾನು-ಅಕ- ಳಂಕ ಮನುಜನ ಮಾಡೊ ನೀನು-ಭವ ಸಂಕಟವ ಕಳೆಯಾ ಸುರಧೇನು-ಬೊಮ್ಮ ವಿನುತ ವಿಜಯವಿಠ್ಠಲ ಹರಿ- ಣಾಂಕ ಸೌವರ್ಣ ಪೂರ್ಣ ಸಂಪೂರ್ಣ 9
--------------
ವಿಜಯದಾಸ
ನೊಂದೆ ನಾ ಹರಿಯೆನ್ನದೆ ಪ ವೈರಿ ಷಡ್ವರ್ಗದಾಟಗಳಿಂದ ನೊಂದೆ ನಾ ಹರಿಯೆನ್ನದೆ ಅ ಮಾಸ ತಾಯುದರದಲಿಸಂದೇಹವಿಲ್ಲ ನವಮಾಸ ಮಲ ಮೂತ್ರದೊಳುಒಂದಾಗಿ ನಿಂದು ಕುದಿಕುದಿದು ಹುಟ್ಟಿಬಂದೆ ಎಂಬತ್ತು ನಾಲುಕು ಲಕ್ಷ ಯೋನಿಯೊಳುನೊಂದೆ ಮುನ್ನೂರ ಅರವತ್ತು ಬೇನೆಗಳಿಂದಒಂದು ಕ್ಷಣವೂ ಯಮನ ಬಾಧೆ ತಾಳಲಾರೆನುಹಿಂದೆಗೆಯದಿರು ಇಂಬಿತ್ತು ಕಾಯೊ ಮುರಾರಿ 1 ಎಲುವುಗಳ ಗಳ ಮಾಡಿ ಬಲು ನರಂಗಳ ಬಿಗಿದುಚೆಲುವ ತೊಗಲಂ ಪೊದಿಸಿ ಮಜ್ಜೆ ಮಾಂಸವ ತುಂಬಿಹೊಲೆ ಗೂಡಿನೊಳು ಪೊಗಿಸಿ ತಲೆ ಹುಳಕ ನಾಯಂತೆಅಲೆದು ಮನೆಮನೆಯೆದುರು ಉಚ್ಚಿಷ್ಟವನು ತಿಂದುಕಳವು ಹಾದರ ಪಂಚಪಾತಕಂಗಳ ಮಾಡಿನೆಲೆಯಿಲ್ಲದಧಿಕತರ ನರಕದೊಳಗಾಳ್ದೆನೈಒಲಿದು ಬಂದು ರಕ್ಷಿಸು ನಾಗವೈರಿ ವಾಹನನೆನಳಿನ ಲೋಚನನೆ ನೀ ಎನ್ನ ಕೈ ಬಿಡದೆ 2 ಹುಟ್ಟುವಾಗಲೆ ಜಾತಕರ್ಮ ಷೋಡಶವೆಂಬಕಟ್ಟಳೆಯ ದಿವಸದಲಿ ನಂಟರಿಷ್ಟರು ಕೂಡಿಕಟ್ಟಿ ಮುಂಜಿಯ, ಹರುಷದಲಿ ಮದುವೆ ಮಾಡಿ ಉಂ-ಡುಟ್ಟು ಹಾಡಿ ಹರಸಿದರು ನೂರ್ಕಾಲ ಬದುಕೆಂದುಬಿಟ್ಟು ಪ್ರಾಣಂ ಪೋಗೆ ಪೆಣನೆಂದು ಮೂಲೆಯೊಳುಕಟ್ಟಿ ಕುಳ್ಳಿರಿಸಿ ಹೊಟ್ಟೆಯ ಹೊಯ್ದುಕೊಂಡಳುತಸುಟ್ಟು ಸುಡುಗಾಡಿನಲಿ ಪಿಂಡಗಳನಿಕ್ಕಿ ಬಲುಕಟ್ಟಳೆಯ ಕಾಣಿಸಿದರಯ್ಯ ಹರಿಯೆ 3 ಹಲವು ಜನುಮದಿ ತಾಯಿ ಎನಗಿತ್ತ ಮೊಲೆಹಾಲುನಲಿನಲಿದು ಉಂಬಾಗ ನೆಲಕೆ ಬಿದ್ದುದ ಕೂಡಿಅಳೆದು ನೋಡಿದರೆ ಕ್ಷೀರಾಂಬುಧಿಗೆ ಎರಡು ಮಡಿಹಲವಾರು ಸಲ ಅತ್ತ ಅಶ್ರುಜಲವನು ಕೂಡಿಅಳೆದು ನೋಡಿದರೆ ಲವಣಾರ್ಣವಕೆ ಮೂರು ಮಡಿಎಲುವುಗಳ ಕೂಡಿದರೆ ಮೇರುವಿಗೆ ನಾಲ್ಕು ಮಡಿಸುಲಿದು ಚರ್ಮವ ಹಾಸಿದರೆ ಧರೆಗೆ ಐದು ಮಡಿನೆಲೆ ಯಾವುದೀ ದೇಹಕೆ ನರಹರಿಯೆ4 ಸತಿ ಇಂದು ಕಾಯ್ವರದಾರುದಂದುಗವನಿದನೆಲ್ಲ ನೀಬಲ್ಲೆ ನಾನರಿಯೆತಂದೆ ನೆಲೆಯಾದಿಕೇಶವನೆ ನಿನ್ನಯ ಪಾದದ್ವಂದ್ವವನು ಎಂದಿಗೂ ಬಿಡೆನು ಬಿಡೆನೊ 5
--------------
ಕನಕದಾಸ
ನೊಂದೆ ನಾನಾವಿಧದಲೀ ಬಂದ ಜನ್ಮಾವಧಿಯಲಿ ತಂದೆ ತಾಯಿ ಬಂಧು ಬಳಗ ಎಲ್ಲರೂ ನೀನೇ ಪ ಮಂದರಧರನೇ ಬೇಲೂರ ಚೆನ್ನಿಗರಾಯ ಹಿಂದಿಟ್ಟುಕೊ ಮುರಹರ ಸ್ವಾಮೀ ಅ.ಪ ಕುಕ್ಷಿಯೊಳೀರೇಳು ಲೋಕವನು ತಾಳ್ದನೇ ಪಕ್ಷಿವಾಹನಮೂರ್ತಿ ಮತ್ಸ್ಯಾವತಾರನೇ ಅಕ್ಷಯಾಗೆಂದು ದ್ರೌಪದಿಯ ಅಭಿಮಾನವನು ರಕ್ಷಿಸಿದ ಕೃಷ್ಣ ನೀನೆ ಸ್ವಾಮಿ 1 ಚಿಕ್ಕಂದು ಮೊದಲು ನಿನ್ನನು ನೆನೆವ ಬಾಲಕನಾ ಕಕ್ಕಸದ ಬಾಧೆಯಲಿ ಮೂದಲಿಪ ಹಿರಣ್ಯಕನಾ ಸೊಕ್ಕುಗಳ ಮುರಿದವನ ಕರುಳ ಮಾಲೆಯನಿಟ್ಟ ¨Àಕ್ತವತ್ಸಲನು ನೀನೇ ಸ್ವಾಮಿ 2 ಕರಿಕಂಠ ಹರನು ದಾನವನ ತಪಸಿಗೆ ಮೆಚ್ಚಿ ಅರಿತು ಅರಿಯದ ತೆರದಿ ಉರಿಹಸ್ತವನು ಕೊಡಲು ತರುಣಿ ರೂಪಿಲಿ ಪರಿಹರಿಸಿ ಭಸ್ಮಾಸುರನಾ [ಉರಿಸಿ]ಗೆಲಿದ ದೇವರದೇವಾ ಸ್ವಾಮಿ3 ಅಂದು ಮರೆಹೊಕ್ಕ ವಿಭೀಷಣಗೆ ರಾಜ್ಯವನು ಸಂದೇಹವಿಲ್ಲದಂದದಲಿ ಪಾಲಿಸಿ ನರನಾ ಮುಂದೆ ಸಾರಥಿಯಾಗಿ ರಥವ ನಡಸಿದ ಗೋ ವಿಂದ ಸಲಹಯ್ಯ ಯೆನ್ನನೂ [ಸ್ವಾಮಿ] 4 ದೇಶದೇಶದೊಳತ್ಯಧಿಕ ಕಾಶಿಗಿಂ ಮಿಗಿಲು ಭೂಸ್ವರ್ಗವೆನಿಪ ವೇಲಾಪುರವಾಸಾ ಕೇಶವ ಶ್ರೀವೈಕುಂಠ ಚೆನ್ನಿಗರಾಯಾ ಶೇಷಶಯನನೇ ಕರುಣಿಸೈ ಸ್ವಾಮೀ 5
--------------
ಬೇಲೂರು ವೈಕುಂಠದಾಸರು
ನೋಡಯ್ಯ ನಿನ್ನ ದಾಸರ ಮೇಲೆ ಕೃಪೆಗಳನುಮಾಡಯ್ಯ ಮನ್ಮನಕೆ ಸಂತಸವನುತೀಡಯ್ಯ ಭವಭಯದ ಪಾತಕಂಗಳ ದಾನವಾಡ ಗುಡ್ಡದ ತಿರುಮಲೇಶ ಸರ್ವೇಶ ಪ ಆದಿಯಲಿ ವೇದಗಳ ಕದ್ದುಕೊಂಡೊಯ್ದವನಸಾಧನಂಗೆಯ್ವೆನೆಂದಾಕ್ಷಣದೊಳುಪೋದನೆಲ್ಲೆನುತ ಶರನಿಧಿಯೊಳಗೆ ಪೊಕ್ಕ ಮ-ತ್ತಾ ದಿತ್ಯನಂ ಕೊಂದು ತಿಕ್ಕಿಮುಕ್ಕೆನೀ ದಯಾ ಪಾತ್ರನೆಂಬುದ ಕೇಳಿ ನಾನರಿತೆಭೂ ಧರೆಯ ಸುರರ ನೀ ಸಲುಹಲಾಗಪೋದ ನಿಗಮಂಗಳನು ತಂದು ಸಲೆ ರಕ್ಷಿಸಿದೆಆದಿ ಮತ್ಸ್ಯವತಾರ ಶರಣೆಂಬೆನು 1 ಮೂರ್ತಿ ನೀನಂದು ಬೇರೆಸುಮತವನು ಬೆನ್ನಲ್ಲಿ ಸಲೆ ಆತು ರಕ್ಷಿಸಿದೆಕಮಠಮೂರುತಿ ನಿನಗೆ ಶರಣೆಂಬೆನು 2 ಚಿನ್ನಗಣ್ಣವನೆಂಬನೊರ್ವ ಖಳ ಭೂದೇವಿಕನ್ನಿಕೆಯನೊಯ್ಯುತಿರೆ ಕನಲಿ ಮನದಿಇನ್ನು ಅವನನು ಸೆಣಸಿ ಜಯಿಸುವವರನು ಕಾಣೆನೆನ್ನುತಲಿ ರೋಮಗಳನುಬ್ಬೆತ್ತುತತನ್ನ ಮುಂಗೋರೆಗಳ ಮಸೆದೊಡನೆ ರಕ್ಕಸನಬೆನ್ನಟ್ಟಿ ಬರಸೆಳೆದು ಸದೆದೊರಗಿಸಿಚೆನ್ನಾಗಿ ಧರಣಿಯನು ತಂದು ಸಲೆ ರಕ್ಷಿಸಿದೆಹನ್ನೆರಡು ಪೆಸರವನೆ ಶರಣೆಂಬೆನು3 ಹೇಮಕಶ್ಯಪನೆಂಬ ನಾಮಜನ ಸುತನೊರ್ವನಾ ಮಹಾಘನವೆಂದು ನೆನೆಯುತಿರಲುತಾಮಸದ ಖಳ ತನ್ನ ತನುಜನನು ಮಥಿಸುತಿರೆರಾಮನನು ತೋರೆಂದು ಬಾಧಿಸುತಿರೆಧೂಮಜ್ವಾಲೆಗಳೊಡನೆ ಭುಗುಭುಗಿಲು ಛಿಟಿಲೆನುತಆ ಮಹಾ ರಕ್ಕಸನ ಪೊಡೆಯ ಸೀಳಿಪ್ರೇಮದಲಿ ಪ್ರಹ್ಲಾದಗೊಲಿದು ಪಟ್ಟವನಿತ್ತೆಸಾಮಜಾರಿಯ ವದನ ಶರಣೆಂಬೆನು 4 ಬಲಿಯಧ್ವರದ ಸಾಲೆಗೊಂದು ವೇಷವನಾಂತುಸಲೆ ಬಂದು ಧರೆಯ ಮೂರಡಿಯ ಬೇಡೆಒಲಿದು ಇತ್ತಪೆನೆನಲು ಧಾರೆಯನೆರೆಯಲಸುರಕುಲಗುರುವು ಜುಳಿಗೆಯೊಳು ತಡೆದು ನಿಲಲುಸಲಿಲ ವರ್ಜಿತ ನಯನನನು ಮಾಡಿ ಆಕಾಶನೆಲವೆರಡು ಪಾದವನ್ನಳೆದ ಬಳಿಕತಲೆ ಮೇಲೆ ಇರಿಸೆನಲು ತಳಕಿಳಿಸಿ ಅವನ ಬಾ-ಗಿಲ ಕಾಯ್ದ ವಾಮನನೆ ಶರಣೆಂಬೆನು 5 ರೇಣುಕೆಯ ಬಸುರಿನಲಿ ಜನಿಸಿ ಪಿತನಾಜ್ಞೆಯನುಮಾಣಬಾರದು ಎಂಬ ಮತವ ಪಿಡಿದುಕ್ಷೂಣವಿಲ್ಲದೆ ತಾಯ ಶಿರವರಿದು ತಂದೆಯನುಪ್ರಾಣಹತ್ಯವ ಮಾಡಿದರ ಕುಲವನುಕ್ಷೋಣಿಗೆರಗಿಸಿ ಕಾರ್ತವೀರ್ಯಾರ್ಜುನನ ಮಡುಹಿಜಾಣತನದಲ್ಲಿ ಭೂದಾನಗಳ ಭೂಸುರರಕಾಣುತಲೆ ಕರೆಕರೆದು ಕೊಟ್ಟೆಯೈ ನೀನು ಪೂಬಾಣಜನಕನೆ ರಾಮ ಶರಣೆಂಬೆನು 6 ಸೀತೆಯನು ಕದ್ದು ಒಯ್ದವನ ಕೊಲ್ಲುವ ಭರದಿಭೂತಳದ ಕಪಿಗಳನು ಕೂಡಿಕೊಂಡುಸೇತುವೆಯ ಕಟ್ಟಿ ಶರನಿಧಿ ದಾಟಿ ಬರಲಾಗಭೂತಗಣ ಸಂತತಿಯು ನಡುನಡುಗುತಿರಲುಚೇತನದ ರಾವಣೇಶ್ವರ ಕುಂಭಕರ್ಣ ಸ-ತ್ತ್ವಾತಿಶಯ ರಕ್ಕಸರ ಇರಿದೊರಗಿಸಿಮಾತು ಲಾಲಿಸಿ ವಿಭೀಷಣಗೆ ಪಟ್ಟವನಿತ್ತದಾತ ರಘುನಾಥನೇ ಶರಣೆಂಬೆನು 7 ಶಕಟ ಕುಕ್ಕುಟ ಧೇನುಕಾಸುರರ ಪೂತನಿಯಬಕ ವತ್ಸಹಕ ವೃಷಾಸುರ ಮುಖ್ಯರಪ್ರಕಟದಿಂದರಿದು ಕರಿಯನು ಸೀಳಿ ತನಗೆ ಸಂ-ಮುಖರಾದ ಮಲ್ಲರನು ಇರಿದೊರಗಿಸಿಮುಕುರ ದಂತ್ಯದ ಹಮ್ರ್ಯದೊಳಗಿಂದ ಕಂಸನಪುಕಪುಕನೆ ತಿವಿದವನನಿರಿದೊರಗಿಸಿಸಕಲವೆಸೆದಿರ್ದ ಮಧುರಾಪುರವ ಉಗ್ರಸೇನಕಗಿತ್ತ ಕೃಷ್ಣನೇ ಶರಣೆಂಬೆನು 8 ಮೂರು ಪುರದಬಲೆಯರ ವ್ರತಗಳನೆ ಕೆಡಿಸಲಿಕೆಬೇರೊಂದು ಅಶ್ವತ್ಥ ವೃಕ್ಷವಾಗಿನಾರಿಯರ ವ್ರತಭಂಗಗೆಯ್ಯಲಾ ದೆಸೆಯಿಂದಊರುತ್ರಯವದು ತಿರುಗುವುದು ನಿಲ್ಲಲಾಗನೀರ ಮಸ್ತಕದಲ್ಲಿ ಧರಿಸಿದನ ಕರವಿಲ್ಲನಾರಿಯೊಳು ನಾರಾಯಣಾಸ್ತ್ರವಾಗಿಘೋರತನವೆತ್ತ ತ್ರಿಪುರದ ಕೀಲ ಪರಿದ ಮದನಾರಿ ಸಖ ಬುದ್ಧನೇ ಶರಣೆಂಬೆನು 9 ಮದವೆತ್ತ ರಕ್ಕಸರು ಮಹಿಯೊಳಗೆ ಹೆಚ್ಚಲುತ್ರಿದಶಾಂತ ನಡನಡನೆ ನಡುಗುತಿರಲುಬೆದರಬೇಡೆನುತ ಅಭಯವನಿತ್ತು ಮುದದಿಂದಸುಧೆಯೊಳಗೆ ಬಂದು ಜನಿಸಿಕುದುರೆವಾಹನನಾಗಿ ಕುಂಭಿನಿಯ ಮೇಲೆ ತನಗಿದಿರಾದ ರಾವುತರನಿರಿದೊರಗಿಸಿಮೊದಲ ಭಾಷೆಯನು ದಿವಜರಿಗಿತ್ತೆ ಬೇಗದಲಿಚದುರ ಕಲ್ಕ್ಯವತಾರ ಶರಣೆಂಬೆನು10 ಇಂತು ದಶ ಅವತಾರಗಳನೆತ್ತಿ ರಕ್ಕಸರಸಂತತಿಯನೊರಸಿ ಭೂಭಾರವಿಳುಹಿಕಂತುಪಿತ ತಿರುವೆಂಗಳೇಶ ತಿರುಮಲೆಯೊಳಗೆಚಿಂತಿಸುವ ಭಕ್ತರನು ಪಾಲಿಸುತಲಿದಂತಿರಾಜನ ಪೊರೆದು ದಾನವಾಡಿಗೆ ಬಂದುನಿಂತಾದಿಕೇಶವನೆ ಶರಣೆಂಬೆನು 11
--------------
ಕನಕದಾಸ
ನೋಡಲುಬೇಕೇ ಎನ್ನೊಡೆಯನನೂ ನೋಡಿದಿರೇ ತಾಳಪಾಕಂ ಚಿಣ್ಣೈಯಾ ಪ ದಿಕ್ಕುಗಳನು ಬೆಳಗುವ ಸುಕೀರಿಟವ ನಿಕ್ಕಿಹ ಮಾಣಿಕದೋಲೆಯನೂ ಚೊಕ್ಕಟ ಮೂಗುತಿಯಿಂದೊಪ್ಪುವನ್ನ ಜ ಗಕ್ಕೆ ಪತಿಯೆನ್ನೆರೆಯ ಚೆನ್ನಿಗನಾ 1 ಕಂಬು ಚಕ್ರಗದೆ ಪದುಮವ ಪಿಡಿದು ಪೀ ತಾಂಬರದಂಗಿಯ ಧರಿಸಿಕೊಂಡೂ ತುಂಬಿದ ವಕ್ಷದಿ ರಮೆ ಕೌಸ್ತುಭದಿಂ ಗಂಭೀರಾರ್ಣವನಾದ ಚೆನ್ನಿಗನ 2 ಸುರರೆಲ್ಲರು ಪೂಜಿಸುವ ಚರಣದೊಳು ಕಿರುಗೆಜ್ಜೆ ಪೆಂಡೆಯವಿಟ್ಟವನಾ ವರವೈಕುಂಠ ವೇಲಾಪುರದರಸನ ಶರಣ ವತ್ಸಲನಾದ ಕರುಣಾಂಬುಧಿಯಾ 3
--------------
ಬೇಲೂರು ವೈಕುಂಠದಾಸರು
ನೋಡಿ ನಿನ್ನನು ಧನ್ಯಳಾದೆನು ಮಾಡಿ ಕೃಪೆಯನು ಮನ್ನಿಸೂಬೇಡಿಕೊಂಬೆನು ಭವವ ಮುಂದಕೆ ನೀಡದಂಘ್ರಿಯೊಳೊಂದಿಸೂ ಪಕೃಷ್ಣ ನಿನ್ನನು ಮುದ್ದನಾಡುತ ಕಷ್ಟವನು ಕಡೆಗಾಂಬೆನೂಇಷ್ಟದೈವವು ನನ್ನ ಜಠರದಿ ಪುಟ್ಟೆ ನಿನ್ನನು ಕಂಡೆನೂದುಷ್ಟಕರ್ಮಗಳೆಲ್ಲವನು ನೆರೆ ನಷ್ಟಗೈಯುವ ದೇವನೂಪುಟ್ಟಮಗುವಾಗಿರಲು ಕೇಶವ ಮುಟ್ಟಿಲಾಲಿಪಳಾದೆನೂ 1ಬಟ್ಟಚೆಲು'ನ ರತ್ನದರಳೆಲೆ ಕಟ್ಟಿ ಬೊಪ್ಪದೊಳೊಲೆಯಲೂಪುಟ್ಟ ಮಾಗಾುಗಳು ಕಿ'ಗಳವಟ್ಟು ಕದಪುಗಳೊಪ್ಪಲೂನಟ್ಟನಡು ಪಣೆಯಲ್ಲಿ ಕತ್ತುರಿಬಟ್ಟು ಬೆಡಗನು ಬೀರಲೂಇಟ್ಟ ಕಪ್ಪಿನ ಕಣ್ಗಳೆಸೆಯಲು ಬಿಟ್ಟಬಾಯಲಿ ಸ'ಯಲು 2ಮುತ್ತು ರತ್ನಗಳನ್ನು ತೆತ್ತಿಸಿ ಸುತ್ತಕಾಂತಿಯ ಬೀರುವಉತ್ತಮದ ಮಕುಟವನು ನಿನ್ನಯ ನೆತ್ತಿಗಿಡುವೆನು ಕೇಶವಮತ್ತು ಕಂಕಣಗಳನು ಕರಗಳಿಗಿತ್ತು ಕಟ್ಟುವೆ ಪವಳವಾಸತ್ಯವಂತನೆ ನೀನು ಶಿಶುತನವೆತ್ತೆ ಪಡೆದೆನು ಭಾಗ್ಯವಾ 3ಸನ್ನುತನೆ ಪದಕಗಳ ಸರಗಳ ನಿನ್ನ ಕೊರಳಿಗೆ ಕಟ್ಟಿಚಿನ್ನ ಮುಕ್ತದಿ ಪೊಳೆವ ಕೌಸ್ತುಭವನ್ನು ಉರಕಳವಡಿಸುವಾರನ್ನ ಮಾಣಿಕದುಡಿಯ ಸೂತ್ರಗಳನ್ನು ಕಟಿಯಲಿ ರಚಿಸುವಾಇನ್ನು ಬಹು'ಧವಾಗಿ ಮನ್ನಿಪುದನ್ನು ವ'ಸಿದೆ ದಾಸ್ಯವಾ 4ಕಟ್ಟಿ ಘಂಟೆಯ ಸರವ ಕಟಿಯಲಿ ಪುಟ್ಟ ಶ್ರೀಮೃದುಪಾದವಾಮುಟ್ಟಿ ಕೈುಂದಂದುಗೆಗಳ ನಾನಿಟ್ಟು ಘಲಿಘಲಿಗುಟ್ಟುವಾಬಟ್ಟಗೆಜ್ಜೆಯ ಸಣ್ಣಸಾಲ್ಗಳ ದಟ್ಟಗೊಳಿಸೀಯೆಂದವಾನೆಟ್ಟದ್ಟೃಯಲೀಕ್ಷಿಸುತ ಹೊರಗಟ್ಟಿಬಿಟ್ಟೆನು ಕ್ಲೇಶವಾ 5ಒಂದು ಸ್ತನವನು ಸ'ಯುತಲೆ ಮತ್ತೊಂದು ಸ್ತನವನು ಕರದಲಿತಂದು ವದನದೊಳಿಟ್ಟು ದಣಿಯುತ ಮಂದಹಾಸದ ಮುಖದಲಿಇಂದಿರೇಶನೆ ನಿನ್ನ ನೋಡುತ ಇಂದು ಸಲ'ದೆ ಕೃಪೆಯಲಿವಂದಿಪರು ನಿನ್ನಡಿಗೆ ಸುರಮುನಿವೃಂದ ಭಾ'ಸಿ ಮನದಲಿ 6ಸಕಲ ಲೋಕಾಧಾರನಾಗಿಯೆ ಸಕಲ ಜೀವರ ಸಾಕ್ಷಿಯೆಪ್ರಕಟವಾಗೆನಗೀಗ ತೋರಿದೆ ಮುಕುತಿದಾಯಕ ಮೂರ್ತಿಯೆಭೃಕುಟಿಯಲಿ ನಿರ್'ುಸಿದ ಮಾಯೆಯ 'ಕರಿಸುವನುಸಾರಿಯೆಚಕಿತಳಿಗೆ ನನಗೊಲಿದೆ ತಿರುಪತಿ ವೆಂಕಟನಡಿಗೆ ಸ್ವಾ'ುಯೆ7
--------------
ತಿಮ್ಮಪ್ಪದಾಸರು
ನೋಡಿ ನೋಡಿ ನೋಡುದರೊಳಗೆ ನೋಡಿದ ನೋಟ ಸದ್ಭನವಾಗುವ್ಹಾಂಗ ಧ್ರುವ ಮನದಿಂದಲಿ ಮನನೋಡುವ ಯೋಗ ಘನಸುಖ ತೋರುವದಿದೆ ಬ್ರಹ್ಮಭೋಗ 1 ಕಣ್ಣಿನಿಂದಲಿ ಕಣ್ಣುದೆರುವ್ಹಾಂಗ ಮಾಡಿ ಚನ್ನಾಗಿ ಉದಯವಾಗುದು ಘನ ಮೂಡಿ 2 ಭಾವ ಬಲಿದು ನೋಡುವುದು ಬಲುಚೆಂದ ಆವಾಗ ಮಹಿಪತಿಗಿದೆ ಬ್ರಹ್ಮಾನಂದ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ನೋಡಿದರೆ ನೋಡು ಮಾತಾಡು ತಾಯಿಗಳೆಂದು ನೋಡಿ ಭ್ರಮಿಸಲು ಬೇಡ ಪರಸತಿಯರ ಪ. ದಾರಿಯೊಳು ಭಯವೆಂದು ಚೋರರೊಳು ಪೋಗುವರೆ ಗೇರುಬೀಜದ ತೈಲ ಲೇಪಿಸುವರೆ ಅರಣ್ಯ ಮಧ್ಯದಲಿ ಮೃಗವಿರಲು ತುರಗವೆಂ ದೇರುವರೆ ಪರಸತಿಯ ಪಾಪಿ ಮನವೆ 1 ಹಸಿಯ ಯಕ್ಕೆಯಕಾಯಿ ನಸುಗುನ್ನಿ ತುರುಚೆಯನು ತೃಷೆಗೆ ಮೆಲುವರೆ ವ್ಯಸನ ದೋರಿತೆಂದು ವಿಷವ ಸೇವಿಸಿದಂತೆ ನೋಡಿ ನೀ ಪರಸತಿಯ ವಿಷಯಕೆಳಸುವುದೇಕೆ ಪಾಪಿ ಮನವೆ 2 ಪ್ರೀತಿಯಿಂದಲಿ ಸತಿಯ ಮನೆಗಾಗಿ ಯಿಂದ್ರನತಿ ಕಾತುರದಿ ಪೋಗಿ ಮೈತೂತಾದನು ಸೀತೆಗೋಸುಗವಾಗಿ ರಾವಣನು ತಾ ಕೆಟ್ಟ ಸೋತು ದ್ರೌಪದಿಗೆ ಕೀಚಕ ಕೆಟ್ಟನು 3 ********************4 ಕೆಟ್ಟವರದೃಷ್ಟವಿನ್ನೆಷ್ಟು ಹೇಳಿದರೇನು ಬಿಟ್ಟು ಬಿಡುವರೆ ತಮ್ಮ ಕೆಟ್ಟ ಗುಣವ ಕಟ್ಟಿನೊಳಗಿಟ್ಟು ಉತ್ಕøಷ್ಟ ಜನಗಳ ಸಂಗ ಕೊಟ್ಟು ಸಲಹಯ್ಯ ಅಚಲಾನಂದವಿಠಲ 5 * ನುಡಿ 4 ಸಿಕ್ಕಿಲ್ಲ
--------------
ಅಚಲಾನಂದದಾಸ
ನೋಡಿದೆ ವೇಂಕಟ ನಿನ್ನ ಪ ಕೊಂಡಾಡಿ ಬೇಡಿದೆ ವರವನ್ನ ಆಹಾ ರೂಢಿಯೊಳಗೆ ನಿನಗೆ ಈಡುಗಾಣೆನೊ ದೇವ ನಾಡುದೈವಗಳೆಲ್ಲ ಒಡಿಪೋದವೊ ಸ್ವಾಮಿ ಅ.ಪ ಮಣಿಗಣಮಯದ ಕಿರೀಟ, ಕಪ್ಪುವ ರಣಕುಂತಲದ ಲೋಲ್ಯಾಟ, ಯುಗತ ರಣಕುಂಡಲ ಬಹು ಮಾಟ ಅರ ಗಿಣಿ ಶÀಶಿಪೋಲ್ವ ಲಲಾಟ ಆಹಾ ಎಣೆಗಾಣೆ ಕಸ್ತೂರಿ ಮಣಿರ್ದಿಪ ಭ್ರೂಯುಗ ಕುಣಿಯುತ ಸ್ಮರಧನು ಗಣಿಸದೊ ಎಲೋದೇವಾ 1 ವಾರಿಜಯುಗಸಮನಯನ, ನಾಸ ಚಾರುಚಂಪಕ ತೆನೆ, ವದನದೊಳು ತೋರುವ ಸುಂದರರದನ ಪಂಕ್ತಿ ಸಾರಿದಾಧರ ಬಹು ಅರುಣ, ಆಹಾ ಸಾರಸಮುಖದೊಳು ಸೇರಿ ಶೋಭಿಪ ಚುಬಕ ಕೂರುಮಯುಗಕದಪು ಸಾರಕಟಾಕ್ಷವ 2 ಕಂಧರಾಂಕಿತ ಸತ್ರಿರೇಖಾ, ಕಂಠ ಪೊಂದಿಪ್ಪೊದ್ವರ್ತುಲ ಕ್ರಮುಕ, ಕೊರಳ ಸುಂದರಕೌಸ್ತುಭಪದಕ, ಬಹು ಬಂಧುರ ಚೆÉೈತ್ರ ಸುರೇಖ ಆಹಾ ಹಿಂದೆ ಸಿಂಹÀದ ಹೆÉಗಲಿನಂದದಲೊಪ್ಪಿದ ಸ್ಕಂಧದಿ ಶೋಭಿಪ ಒಂದು ಸರಿಗೆಯನ್ನು 3 ಸ್ವನ್ನ ಏಕಾವಳಿಹಾರಾ, ಬಾ ಪುತ್ಥಳಿ ಸಿರಿಯಾಕಾರ, ಬಹು ಚನ್ನವಾಗಿಹ ನಾನಾಹಾರ, ಶುಭ್ರ ವರ್ಣ ಶೋಭಿಪ ಜನಿವಾರ ಆಹಾ ಇನ್ನು ಗುಂಡಿನಮಾಲೆ, ಘನ್ನ ಜಲಸರಪಳಿ ಉನ್ನತದಾನಘ್ರ್ಯ ರನ್ನ ಜಯಂತಿಯಾ 4 ಶಿರಿವತ್ಸಲಾಂಛನಹೃದಯ, ಸುರ ಕರಿಕರತೆರಬಾಹು ಶಿರಿಯಾ, ನಾಲ್ಕು ಕರಗಳೊಪ್ಪವವೀಪರಿಯ, ಮೇಲಿ ನ್ನೆರಡು ಹಸ್ತದಿ ಶಂಖ ಅರಿಯ ಆಹಾ ವರರತ್ನ ಮುದ್ರಿಕೆ ಧರಿಸಿದ ಬೆರಳುಳ್ಳ ಕರತೋಡ ಕಡಗಕ್ಕೆ ಸರಿಗಾಣೆ ಧರೆಯೊಳು 5 ಪರಮವೈಕುಂಠದಕಿಂತ ಈ ಧರಿತಳವದಿಕವೆನ್ನು ತಾ ಬಲ ಕರದಿಂದ ಜನಕೆ ತೋರುತಾ ಬಾಹು ಎರಡು ಆಜಾನುಪೂರಿತಾ ಆಹಾ ಸ್ವರಣರತ್ನ ಖಚಿತ ವರನಾಗಭೂಷಣ ಧರಿಸಿ ಟೊಂಕದಿ ವಾಮಕರವಿಟ್ಟು ಮೆರೆವೋದು 6 ಹಸ್ತಯುಗದಿ ತೋಡ್ಯ ಕಡಗ, ಪ್ರ ಶಸ್ತ ರತ್ನದ್ಹರಳಸಂಘ ರಚಿತ ಸಿಸ್ತಾದÀ ಉಂಗುರ ಬೆಡಗ, ಬಹು ವಿಸ್ತರಾಂತರ ಭುಜಯುಗ ಆಹಾ ಹಸ್ತಿವರದ ಸಮಸ್ತಲೋಕಕೆ ಸುಖ ವಿಸ್ತಾರ ನೀಡುತ ಸಿಸ್ತಾದ ದೇವನ 7 ಉದರ ತ್ರಿರೇಖ ರೋಮಾಳಿನಾಭಿ ಪದುಮ ಶೋಭಿಪ ಗುಂಭಸುಳಿ ಮೇಲೆ ಉದಯಾರ್ಕ ಪೋಲುವ ಕಲೆ ಇಂದ ಸದಮಲಾಂಬರಪಟಾವಳಿ ಆಹಾ ಬಿದುರಶೋಭಿüತ ಮಹಾಚÀದುರದೊಡ್ಯಾಣವು ಪದಕ ಮುತ್ತಿನ ತುದಿ ವಿಧವಿಧ ಪೊಳೆವೋದು 8 ರಂಭೆ ಪೋಲುವ ಊರುಸ್ತಂಭ, ಇಂದು ಡಿಂಬ ಭಕ್ತ ಕ ದಂಬ ಮೋಹಿಪ ವಿಡಂಬ ಆಹಾ ಅಂಬುಜಾಸನಪಿತನ ತುಂಬಿದ ಮೀನ್ಜಂಘ ನಂಬಿದ ಜನರನ್ನ ಇಂಬಾಗಿ ಸಲಹೋನಾ 9 ಪರಡೆರಡು ಮಾಣಿಕ್ಯಾವರಣ, ಪೊಳೆವ ಕಿರುಗೆಜ್ಜೆನೂಪುರಾಭರಣ ಇಟ್ಟು ಮೆರೆವೊ ಗಂಗೆಯ ಪೆತ್ತ ಚರಣ ಯುಗ ನಿರುತ ಭಜಿಪರೊಳತಿ ಕರುಣ ಆಹಾ ಮರೆಯದೆ ಮಾಡುತ ಪರಿಪರಿ ಸೌಖ್ಯವ ಕರೆದುನೀಡುವನಹಿಗಿರಿವಾಸ ಶ್ರೀಶÀನ್ನ 10 ಪೋತೇಂದು ನಖಯುತ ಬೆರಳ ಸಾಲು ದೂತತತಿಗೆ ಸುಖಗಳನಿತ್ತು ನೀತಙÁ್ಞನ ಭಕ್ತಿಗಳ ನಿತ್ಯ ಪ್ರೀತಿಪಡೆಯೆ ಮುಕ್ತಿಗಳ ಆಹಾ ವಾತಗುರುಜಗನ್ನಾಥವಿಠಲನತಿ ನಿತ್ಯ 11
--------------
ಗುರುಜಗನ್ನಾಥದಾಸರು