ಒಟ್ಟು 1331 ಕಡೆಗಳಲ್ಲಿ , 94 ದಾಸರು , 990 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಮಂಗಳಂ ಕೃಷ್ಣ ಯೋಗೀಂದ್ರ ದಿವ್ಯಮಂಗಳ'ಗ್ರಹ ನಿನ್ನ ನೆನಹು ಸರ್ವ ಪನಿನ್ನ ಚರಿತೆಗೇಳಿ 'ಗ್ಗಿ ಜೀ'ಪರಿಗೆನಿನ್ನೊಲವನು ಬಯಸುವ ಧನ್ಯಗೆನಿನ್ನ ಭಕತರ ಸಂಗತಿಯೊಳಿರುವರಿಗೆನಿನ್ನ ಮೂರುತಿಗಂಡು ನ'ುಪ ಮಹಾತ್ಮಗೆ 1ನಿನ್ನ ವಾಗಮೃತಪಾನದಿ ಮತ್ತರಾದರ್ಗೆನಿನ್ನ ಸೇವೆಗೆ ಮೈಗೊಟ್ಟಿರುವರಿಗೆನಿನ್ನ ಚರಣ ಸೋಕಿದೆಡೆಯೊಳಿರುವರಿಗೆನಿನ್ನಂಗ ಸಂಗ ಮರುತಪೂತದೇಹರ್ಗೆ 2ಕರುಣದಿಂ ಚಿಕನಾಗಪುರದಿ ವಾಸುದೇವಾರ್ಯಗುರುವಾಗಿ ನರಸಾರ್ಯನೆಂದೆನಿಸಿತಿರುಪತಿಯರಸನೆ ಕೃಷ್ಣಯೋಗೀಂದ್ರ ಶ್ರೀಕರ ರಾಮದಾಸಾರ್ಯನೆಂದರಿತೆಮಗೆಲ್ಲಾ 3
--------------
ತಿಮ್ಮಪ್ಪದಾಸರು
ಮಂಗಳ ಜಯಮಂಗಳ | ಶುಭಮಂಗಳ | ಮಂಗಳ ಮಹೀಪತಿ ಗುರುಮೂರ್ತಿಗೆ | ಮಂಗಳ ಶರಣರ ಸಾರಥಿಗೆ ಪ ಹಲವು ಸಾಧನದಿಂ ತೊಳಲುತ ತತ್ವದ | ನೆಲೆಗಾಣದವರನು ತಾರಿಸಲಿ | ಒಲಿದು ಶ್ರೀಗುರು ರೂಪದಿಂದಲಿ ನರದೇಹ | ಇಳೆಯೊಳು ಧೃಡಿಸ್ಯವತರಿಸಿದಗೆ 1 ಬೇಡಿದಿಷ್ಟಾರ್ಥವ ಕಾಮ್ಯ ಭಕುತರಿಗೆ | ನೀಡುತ ನಿರುಪಾಧಿಕ ಜನರಾ | ಮಾಡಿ ಜೀವನ್ಮುಕ್ತರ ನಿಜಬೋಧದ ಲಾಡುವ ಕರುಣಾಸಾಗರಗೆ 2 ಎಡಬಲದಲಿ ಯೋಗ ಭೋಗ ಚಾಮರದಿಂ | ದೃಢಸಿಂಹಾಸನ ಲೊಪ್ಪವಗೆ | ಪೊಡವಿಲಿ ಮೂಢ ನಂದನ ಕೈಯ್ಯವ | ಬಿಡನೆಂದಭಯವಿತ್ತ ಸ್ವಾನಂದಗೆ3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಮಂಗಳ ಮಂಗಳ ಜಯ ಮಂಗಳ ಶುಭಮಂಗಳ ಗುರುಮೂರ್ತಿ ವಿರೂಪಾಕ್ಷನಿಗೆ ಪ ಶುಭ್ರಾಂಶುಧರನಿಗೆ ಶುಭ್ರವಸ್ತ್ರವನಿಟ್ಟುಶುಭ್ರತಿದೇಹ ಶುಭ್ರದಾಭರಣಗೆಶುಭ್ರಸ್ತ್ರೀಧರ ಯಶಶ್ಶುಭ್ರನಿಗೆ 1 ದರಹಾಸ ಮುಖನಿಗೆ ನಗಾಲಯನಾಗಿರ್ದಧರಶಿಖಿ ಶಿವಪಾತ್ರ ಭರಣಿಪತಿಗೆಧರಮುನಿ ವರದಗೆ ಧರರೂಪ ಪಾಲಗೆಧರಧನುವನು ತಾಳ್ದ ಧರವಾಸಗೆ 2 ಭವ ಭವ ದುರಿತನಿಗೆ 3
--------------
ಚಿದಾನಂದ ಅವಧೂತರು
ಮಂಗಳಂ ಮಂಗಳಂ ದಯಾನಿಧೆಮಂಗಳಂ ಮಂಗಳಂ ಪ. ದೇವ ದೇವೇಶ ದೇಹಿ ಕಲ್ಯಾಣಂಶ್ರೀವರ ಶ್ರಿಂಗರ ಶ್ರೀ ಶ್ರೀನಿವಾಸ 1 ನಂದನಂದನ ದಿವ್ಯಾನಂದ ಸುತೇಜಇಂದಿವರಾಕ್ಷ ಮುಕುಂದ ಮುರಾರೆ 2 ರಾಜರಾಜಿತ ಗೋಪಾಲವಿಠಲ ಮಹಾ ರಾಜ ಭೋಜ ಕಲ್ಪರಾಜ ಸುತೇಜ 3
--------------
ಗೋಪಾಲದಾಸರು
ಮಂಗಳಂ ಮಂಗಳಂ ಭವತು ತೇ ರಮಾಪತೆ ಪ. ಮಧುವೈರಿ ಮಾರಜನಕ ದಿವ್ಯಸಾರ ಸುಂದರದೇಹವಾರಿಜದಳನೇತ್ರ ಕಾರುಣ್ಯಗುಣನಿಧೆ 1 ಮಣಿಮಯ ಶುಭಕರ ಕನಕಕುಂಡಲಧರಮಿನುಗುವ ಮಕುಟಶೋಭನಕರಮೂರ್ತೆ2 ವೇದವಿಬುಧವಂದ್ಯ ಗೋಪಾಲವಿಠಲಸಾಧುಸಜ್ಜನಪಾಲ ಶ್ರೀದೇವಿಲೋಲ 3
--------------
ಗೋಪಾಲದಾಸರು
ಮಂಗಳಂ ಶ್ರೀಕೃಷ್ಣವೇಣಿಗೆ ಜಯ ಮಂಗಳಂ ಜಗದುದ್ಧಾರಳಿಗೆ ಪ ರಂಗನ ಪಾದದಿ ಗಂಗೆ ಉದ್ಧವಿಸಲು ಅಂಗದಿಂದಾಗಲೆ ತಾನುದಿಸಿ ಬಂದು ಗಂಗಾಧರನ ದೇಹದಿ ಬಂದು ವೇಣಿಯ ಸಂಗಮವಾಗಿ ಬಂದ ದೇವಿಗೆ ಅ.ಪ ಮುನ್ನೂರು ಅರವತ್ತು ನದಿಗಳೆಲ್ಲ ಕೂಡಿ ಕನ್ಯಾರಾಶಿಗೆ ಗುರು ಬಂದಿರಲು ವಾಸವ ಮಾಡಲು ಅವರ ಪಾಪವ ಕಳೆದ ಶ್ರೀ ಕೃಷ್ಣವೇಣಿಗೆ 1 ಇಂದ್ರನ ಪಾಪವ ನದಿಗಳಿಗೆ ಬಿಡಲು ನಿಂದಿತರಾಗಿ ದುಃಖಿಸುತ ಪೋಗಿ ಬಂದ ಕೃಷ್ಣವೇಣಿಗೆ ಗಂಗಾದೇವಿಗೆ 2 ವೇಣುಶೂರ್ಪಗಳಲ್ಲಿ ನಾನಾ ಫಲಗಳ ಇಟ್ಟು ನೇಮದಿಂ ಬಾಗಿನಂಗಳ ಕೊಡಲು ಮಾನಿನಿಯರೆಲ್ಲ ಮೌನದಿಂ ಕೊಡಲು ಮಾಂಗಲ್ಯವಿತ್ತು ಸಲುಹುವ ದೇವಿಗೆ 3 ಕೃಷ್ಣತೀರದಲ್ಲಿದ್ದ ವೃಕ್ಷದೇವತೆಗಳು ಋಷಿಗಳು ಪಾಷಾಣವಾಗಿರಲು ನಕ್ರ ಮೊದಲಾದ ಜಂತುಗಳೆಲ್ಲ ಯಕ್ಷರು ವಾಲೂಕ ಹರಿದ ಧೂಲಿಯಾಗಿಹರು 4 ಇಂದ್ರದಂಡಕ ದಂತ್ರಿಪಾಲ ಸೋಮಕ ಧರ್ಮ ನಂದನ ನಳ ಹರಿಶ್ಚಂದ್ರರೆಲ್ಲ ಬಂದು ಸ್ನಾನವ ಮಾಡೆ ಅವರ ಪಾಪಗಳ ಆ ನಂದದಿಂ ಕಳೆದ ಕೃಷ್ಣವೇಣಿಗೆ 5 ಮಲಾಪಹಾರಿ ಭೀಮೆ ತುಂಗಭದ್ರೆಯು ಮೊ [ಒಲವಿ]ಂದ ಸ್ನಾನಪಾನವ ಮಾಡಿದವರಿಗೆ [ಲೋಲ] ಶ್ರೀನಿವಾಸನ ಪಾದತೋರ್ಪ ಕೃಷ್ಣವೇಣಿಗೆ 6
--------------
ಯದುಗಿರಿಯಮ್ಮ
ಮಂಗಳಾ ವರಯೋಗಿ ರಾಯಗೆ | ಮಂಗಳಾ ಪರಮ ಅವಧೂತಗೆ |ಮಂಗಳಾ ಪರಮಾತ್ಮ ಶ್ರೀ ಗುರು ಸಿದ್ಧ ಬಸವಂಗೆ | ಜಯ ಜಯ ಮಂಗಳಾ ಪ ಆದಿ ಮಧ್ಯಾವಸಾನವಿಲ್ಲದ ನಾದ ಬಿಂದು ಕಲಾ ಶೂನ್ಯಗೆ |ಸಾಧಿಸುವ ಸಿದ್ಧಾಂತ ಅಗಣಿತವಾದ ಬ್ರಹ್ಮವನು | ವೇದ ವೇದಾಂತವ ವಿಚಾರಿಸಿ ನಾದ ಋಷಿ ಅಪಾರ ಚಿಂತ್ಯನು | ಮೇದಿನಿಯ ಭಕ್ತರನುಗ್ರಹಕಿತ್ತ ಬಂದ ಬಸವರಾಜಯೋಗದಲಿ 1 ಮತ್ಸ್ಯ ಕೂರ್ಮ ವರಾಹನಾದ ಮಾಧವಗೆ 2 ಮಾಧವ ಕಲಿಯೊಳಗವತರಿಸಿದ ಬಳಿಕಾ ಬಾಲಕೃಷ್ಣಂಗೆ 3 ನೋಡಿದರೆ ದುರಿತವನು ಕೆಡುವನು, ಬೇಡಿದರೆ ಸಾಯೋಜ್ಯನೀವನು ಮಾಡಿ ಪಾದದ ತೀರ್ಥಕೊಂಡಡೆ ಮರಳಿ ಪುಟ್ಟಗಡ | ಖೇಡನಾಗದೆ ನಾಮಕೀರ್ತಿಯ ಮಾಡು ಮರುಳೆ ಆದಿಪುರುಷನರೂಢಿಯೊಳು ಈಡ್ಯಾಡಿ ಮೆರೆದ ಬಸವರಾಜಯೋಗದಲಿ 4 ಇಂತು ಭಕ್ತರ ಭಕ್ತಿಗೋಸುಗ ಅಚಿಂತ್ಯ ಮಹಿಮನು ಶರೀರವತಾ- ನಂತು ಧರಿಸಿಹನಿಲ್ಲದಿದ್ದಡೆ ದೇಹ ತಾನೇ ತಾ |ಕಂತು ಹರನವತಾರವಲ್ಲದೆ ಭ್ರಾಂತಿ ಬಿಡಿಸಿದ ಕೊಳಕೂರದಲಿಸಂತತವೆ ನೆಲೆಸಿಹನು ಬಸವರಾಜಯೋಗದಲಿ 5
--------------
ಭೀಮಾಶಂಕರ
ಮತ್ಸ್ಯಾದಿ ದಶಾವತಾರಗಳು ಮತ್ಸ್ಯಾದ್ಯವತಾರವನು ತಾಳ್ದು ನೀ ಪರದೇವ ಮನ್ವಂತರ ಪ್ರಳಯಜಲಧಿಯನು ಪೊಕ್ಕು ಸೂರ್ಯಪುತ್ರನ ಮನುವ ದೋಣಿಯಲ್ಲಿರಿಸಿ ನೀನ್ ನೀರಾಟವಾಡಿದೆಯ ಲೀಲೆಯಿಂದಲಿ ನೀಂ 33 ಮಂದರ ಪೊಕ್ಕೆ ಕೂರ್ಮರೂಪವ ತಾಳ್ದು ಕಡಲಿನಡಿ ಸೇರಿ ದೇವತೆಗಳಿಗೆಯಮೃತ ಕಲಶವನು ತೆತ್ತು ನೀನ್ ದೈತ್ಯರನು ವಂಚಿಸಿದೆ ಮೋಹಿನಿಯದಾಗಿ34 ಸೂಕರದ ರೂಪವನು ತಾಳ್ದು ನೀನ್ ಸಿರಿವರನೆ ಚಿನ್ನ ಕಣ್ಣಿನ ದೈತ್ಯಸೇವಕನ ಕೊಂದು ದೈತ್ಯನಾತ್ಮಜ್ಯೋತಿಯನು ತನ್ನಲಿಯಿರಿಸಿ ವಾರಾಹ ರೂಪದಿಂದಲಿ ಆಟವಾಡ್ದೆ35 ಶಿಲ್ಪಿಯಿಂ ರೂಪುಗೊಂಡಿಹ ಕಂಬದಲಿಯಿದ್ದು ವಿಷ್ಣುವೇ ಪ್ರಹ್ಲಾದ ಮಗುವನುದ್ಧರಿಸೆ ನಂಬಿದೆಡೆಯೆಲ್ಲೆಲ್ಲು ಇರುವೆನೆಂಬುದ ತಿಳಿಸೆ ನರಸಿಂಹ ರೂಪವನು ತಾಳ್ದೆ ಪರಮಾತ್ಮ 36 ಇಂದ್ರಾವರಜನೊಮ್ಮೆ ವಟುವಾಮನನು ಬಂದು ಬಲಿಯ ಯಾಗದ ಸಮಯ ಮೂಹೆಜ್ಜೆ ಬೇಡೆ ರಾಜ ಕೊಡಬಯಸಲದ ಗುರು ಶುಕ್ರತಡೆದಾಗ ದಾನಿ ಬಲಿ ಕೊಟ್ಟವನು ಸಿದ್ಧಿಯನು ಪಡೆದಾ 37 ಸಂಹಾರ ಲೀಲೆಯನು ತೋರಲವ ಪರಮಾತ್ಮ ಪಿತೃವಾಕ್ಯಪಾಲನೆಗೆ ತಾಯ ತಲೆ ಕಡಿದು ಮಾತೆಯನು ಬದುಕಿಸುತ ದುಷ್ಟರಾಜರ ತರಿದು ರಾಜವಂಶವನು ನಿರ್ವಂಶ ಮಾಡಿದನು 38 ಎದೆಯೊಳಿಹ ಸೀತೆಯನು ಕಾಡೆಲ್ಲ ಹುಡುಕುತ್ತ ಜಲಧಿಗೇ ಕಟ್ಟಿ ಸೇತುವೆಯ ಸಿರಿವರನು ಕಪಿ ಸೈನ್ಯದೊಡಗೂಡಿ ಲಂಕೆಯನ್ನೈದುತ್ತ ರಾವಣನ ಕೊಂದು ಸೀತೆಯ ಮರಳಿ ತಂದೆ 39 ಇಬ್ಬರನು ತಾಯಂದಿರನು ರಮಿಸಿ ಮಗುವಾಗಿ ಪದಿನಾರು ಸಾಸಿರದ ಸತಿಯರನು ಒಲಿಸಿ ಏಕಕಾಲದಲಿ ಎಲ್ಲರನು ಮೆಚ್ಚಿಸಿದ ಹರಿ ಆನಂದರೂಪದವ ಪರಮಾತ್ಮ ನಿಜವು 40 ತಾಮಸದ ಜೀವರನಧೋಗತಿಗೆಯಿಳಿಸುತಲಿ ಬುದ್ಧ ರೂಪದಲಿ ತ್ರಿವಿಧ ಜೀವಂಗಳಿಗೆ ಯೋಗ್ಯತೆಗೆ ತಕ್ಕಂತೆ ಗತಿಯಾಗಿಸುವದೆ ನಿನ್ನ ಸಂಕಲ್ಪವದಲಾ 41 ಧರ್ಮವದು ನಶಿಸುತಲಿ ದುಷ್ಟರಾಜರು ತುಂಬೆ ಕಲಿಯುಗದ ಕೊನೆಯಲ್ಲಿ ಕಲ್ಕಿ ರೂಪದಲಿ ಅಶ್ವವನ್ನೇರುತಲಿ ದುಷ್ಟರನು ಸಂಹರಿಸಿ ಕೃತಯುಗವ ಮಾಡಿದೆಯ ಪರಮಾತ್ಮ ನೀನು 42 ಕಾಣದಾ ದೇವರಿಗೆ ಭಕ್ತಿಯಿಂ ಪೂಜಿಸಲು ಹತ್ತು ರೂಪಗಳಿವುಗಳೇ ಮುಖ್ಯವದರಿಂ ಅವತಾರ ರೂಪಗಳ ಪ್ರತಿಮೆಗಳ ಪೂಜಿಸುತ ಸರ್ವಾರ್ಥಸಿದ್ಧಿಗಳ ಪಡೆಯುವರು ಜನರು 43 ವೇದೋಕ್ತ ಪದಗಳಿಗೆ ಮುಖ್ಯಾರ್ಥ ಹರಿಯಿಹನು ಅಗ್ನ್ಯಾದಿ ನಾಮಗಳು ದೇವರಿಗೆಯಿಹವು ದೇವತೆಗಳಿಗೆಲ್ಲ ಅಗ್ರಣಿಯು ತಾನಾಗಿ ಅಗ್ನಿನಾಮವು ನಿನಗೆ ಒಪ್ಪುವುದು ಹರಿಯೆ 44 ಇಂದ್ರಿಯಂಗಳೆ ಕುದುರೆ ಬುದ್ಧಿಯೇ ಸಾರಥಿಯು ಮನವೆಂಬ ಕಡಿವಾಣ ಹಿಡಿದೋಡಿಸುವವನು ಜೀವನೇ ರಥಿಕನವ ವಿಷಯಬೇಟೆಗಳಲ್ಲಿ ಪರಮಾತ್ಮನರಿವೆಂತು ಮೂಡುವುದು ಅವಗೆ 45 ವಾಸದಿಂ ಬೆಳಗಿಸುವ ವಾಸುದೇವನು ತಾನು ವರುಣನಂತರ್ಗತನು ಶಿರದಲ್ಲಿಯಿಹನು ಸಪ್ತರಂಧ್ರಗಳಲ್ಲಿ ವಿದ್ಯುತ್ತ ಹರಿಸುತಲಿ ಜ್ಞಾನವನ್ನೊದಗಿಪನು ಶ್ರೀಕೃಷ್ಣನವನು 46 ವಿಜ್ಞಾನಿ ಭಗವಂತ ಹೃದಯ ಗುಹೆಯಲ್ಲಿಹನು ಅನಿರುದ್ಧ ಯಜ್ಞೇಶ ಮೊದಲಾದ ಪೆಸರಿಂ ಪ್ರಾಣವಾಯುಗಳ ಜೊತೆ ಪಾಕವನು ಗೈಯುತ್ತ ರಕ್ತರೂಪವ ಮಾಡಿ ಪಾಲಿಸುವ ನಮ್ಮ47 ಪ್ರಾಕೃತ ಜ್ಯೋತಿಯಾದೊಡೆ ದೇಹ ಸುಡದಿರದು ಅಪ್ರಾಕೃತ ಜ್ಯೋತಿ ಯಜ್ಞೇಶಗಿಹುದು ಭಕ್ಷ್ಯಭೋಜ್ಯಗಳೆಂಬ ಲೇಹ್ಯಪೇಯಗಳೆಂಬ ನಾಲ್ಕುವಿಧ ವಸ್ತುವಿನ ಪಾಕ ಮಾಡುವನು 48 ವಾಯುವಂತರ್ಗತನು ನೀಲರೂಪದ ದೇವ ಪ್ರದ್ಯುಮ್ನನಾಮಕನು ನಾಭಿಯಲ್ಲಿಹನು ಕಾಮರೂಪಿಯು ಅವನಪಾನಕ್ಕೆ ಒಡೆಯನವ ಪುರುಷರಿಂದಲಿ ಸೃಷ್ಟಿಗವನೆ ಕಾರಣನು 49 ಪೃಥ್ವಿವಿಯಪ್ ತೇಜಸ್ಸು ಮೂರು ದೇಹದ ಮೂಲ ಶ್ರೇಷ್ಠ ವಾಯುವು ಸೇರಿ ದೇಹಕ್ಕೆ ಚಲನೆ ಹೃದಯದಲ್ಲಾಗಸವು ಇರುವ ಕಾರಣದಿಂದ ಪಂಚಭೂತಂಗಳಿವು ದೇಹದಲ್ಲಿಹವು 50 ವಾಯುವಿನ ಜೊತೆಗೂಡಿ ದೇಹಚಾಲಕನು ಯಂತ್ರರೂಪದಲ್ಲಿದ್ದು ಯೋಗ್ಯತೆಗೆ ತಕ್ಕಂತೆ ಕಾರ್ಯವನು ಮಾಡಿಸುತ ಫಲವನ್ನು ಕೊಡುವ 51
--------------
ನಿಡಂಬೂರು ರಾಮದಾಸ
ಮಂದ ಮನುಜಾ ಮೂರ್ತಿ ಶ್ರೀ ಹೆನ್ನೆಹೋಬಲವಾಸನಾ ಪ ಮನಶುದ್ಧಿಯಾಗಿ ನಿರ್ಮಲಜ್ಞಾನದಲಿಯನ್ನು ವನಜಸಂಭವ ಪಿತನ ವರ್ಣಿಸುತಲಿ ದಿನಗಳನು ಕಳೆಯುತಲಿ ದೀನರಕ್ಷಕ ದೇವನ ಅನುಮಾನಗಳ ತೊರೆದು ಆನಂದದಿಂದಲಿ ಇನ್ನು 1 ಸಕಲಾಂತರ್ಯಾಮಿಯಾದ ಸಕಲ ದೀನರ ದೇವ ಸಕಲ ಸಾಧು ಸಜ್ಜನರ ಸರ್ವದಲಿ ನಿಖರವಾಗಿ ರಕ್ಷಿಸುವ ಲಕುಮಿಯರಸನ ಹೃದಯ ಭಕುತಿಯಲಿ ಪಾಡುತಲಿ ಪರಮ ಪುರುಷನ ಇಂದು2 ಎಂದೆಂದು ಹರಿಪಾದ ಹೊಂದಿದ ಮಹಾಮಹಿಮ ರಂ------ತಿಳಿದು ನೀಯಿಂದು ಇನ್ನು ಸಂದೇಹವನ್ನೆ ಬಿಟ್ಟು ತಂದೆ `ಹೆನ್ನವಿಠ್ಠಲ' ಚಂದದಿಂದಲಿ ಹೃದಯ ಮಂದಿರದಲಿನ್ನೂ 3
--------------
ಹೆನ್ನೆರಂಗದಾಸರು
ಮದ ಮತ್ಸರವ ಬಿಡದನಕಾ ವಿಧ ವಿಧದ ಸಾಧನವ ಮಾಡಲೇನೋ ಪ ವೇದ ಶಾಸ್ತ್ರಗಳೋದಲೇನು ಗಂಗಾ ಗೋದಾವರಿಯಲಿ ಸ್ನಾನವ ಮಾಡಲೇನು ಸಾಧು ಕರ್ಮವಾಚರಿಸೇನು ವಿಷ್ಣು ಪಾದದಿ ಪಿಂಡ ದಾನವ ಮಾಡಲೇನು 1 ಸನ್ಯಾಸಾಶ್ರಮ ಧರಿಸಲೇನೂ ಗೋಹಿ ರಣ್ಯಾದಿಗಳಲಿ ಮಮತೆ ಬಿಟ್ಟರೇನು ಪುಣ್ಯ ಕ್ಷೇತ್ರಕೆ ಪೋಗಲೇನು ಅನ್ನ ಕನ್ಯಾದಿ ದ್ರವ್ಯದಾನವ ಮಾಡಲೇನು 2 ಪಾಪ ಕರ್ಮವ ತೊರೆದರೇನೊ ಲಕ್ಷ ದೀಪಾರಾಧನೆ ದಿನ ದಿನ ಮಾಡಲೇನು ಶಾಪಾನುಗ್ರಹ ಶಕ್ತಿ ಇದ್ದೇನು ಪೂಜಾ ಸೋಪಸ್ಕರ ಬಹುತರವಿರಲೇನು 3 ಶ್ವಾಸ ನಿರೋಧಿಸಲೇನು ಪಕ್ಷ ಮಾಸೋಕ್ತ ಧರ್ಮ ಕರ್ಮವ ಮಾಡಲೇನು ಆಸನ ಜಯ ಸಂಪಾದಿಸಲೇನು ಉಪ ವಾಸ ವ್ರತದಿ ದೇಹ ಬಳಲಿಸಲೇನು 4 ಜ್ಯೋತಿಷ್ಟೋಮ ಮಾಡಲೇನು ಲಕ್ಷ ಶ್ರೀ ತುಳಸಿ ಅರ್ಪಿಸಲೇನು ಭೂತದಯವು ಇದ್ದರೇನು ಜಗ ನ್ನಾಥ ವಿಠಲನಂಘ್ರಿ ಪೊಂದಿದ್ದವರೊಳು 5
--------------
ಜಗನ್ನಾಥದಾಸರು
ಮಂದಾನ ಬಾಧೆಗೆ ಮನಿ ಮಂದಿ ನಾವು ಸಹಿತ ಬೆಂದು ಬೇಸರ ಗೊಂಡು ಬಳಲು ತೇವು ಹರಿ ತಂದಿ ಬೇಗದಿ ಬಂದು ದಯಮಾಡಿ ಸಲಹೋ ಗೋವಿಂದಾ ಕೃಪಾಳು ಶ್ರೀ ಕರುಣಾಂಬುಧಿಯೆ ಪ ಕೃಷ್ಣಾ ರೌದ್ರಾಂತಕನ ಕ್ರೂರದೃಷ್ಟಿ ಮುಖ ಹಲಾ ತ್ಕøಷ್ಠವಾಗಿ ಎನ್ನ ಕಾಡುತಿರಲು ನಿಷ್ಠೆ ನೇಮಗಳೆಲ್ಲ ಜರಿದು ಮತಿ ಭೃಷ್ಟನಾಗಿ ಕಷ್ಟಕ್ಕೆ ಒಳಗಾದೆ ಕಡೆಹಾಯಿಸೊ ಧೊರಿಯೆ ಇಷ್ಟದಾಯಕ ನಿನ್ನಲ್ಲಿನ ಮಾಯವೆ ಆಡುದು (ಅಹುದು) ಕೃಷ್ಣಮೂರುತಿ ಬೇಗ ಕೈಹಿಡಿ ಇನ್ನಾ ಸೃಷ್ಟಿಗೊಡೆಯ ಶ್ರೀನಿವಾಸಕೇಶವ ಎನ್ನ ಕಷ್ಟವು ಪರಿಹರಿಸಿ ಕಾಯೋ ಸಂಪೂರ್ಣ 1 ಸೂರ್ಯಾನ ಪುತ್ರನ ಕಾರ್ಯಾವು ಎಮ್ಮ ಮೇಲೆ ಭಾರಿ ಕಾಣುತಲಿದೆ ಪರಮಾತ್ಮನೆ ------- ಘಟಗಳಿಗುಪದ್ರಕಾರನಾಗಿ ವ್ಯಾಧಿ ಖಂಡಿಸೋ ವೇಳೆ ಆರು ಈ ಗ್ರಹಕರ್ತರಾಗಿರಲು ದೇವರಿನ್ನು ಧಾರುಣಿಯೊಳು ಹರಿ ದನುಜಾಂತಕಾ ವಾರಿಜಾನಾಭಾ ಶ್ರೀ ವೈದೇಹಿ ಪತಿರಾಮಾ ಸಾರನೆ ಗಡ ಬಂದು ಸಲಹೋ ತಂದೆ 2 ಗರ್ಭಾದಿ ಮುದನಿಂ ಸುಖಭ್ರೂಣ ಭಯವೆಂಬ ದೆಬ್ಬಿಗೆ ತಾಳದೆ ತಲ್ಲಣಿಸುವೆ ಅರ್ಭಕ ನಾನೊಂದು ಅರಿತು ಅರಿಯೆ ದೇವ ಸಭ್ಯಾ ನೀ ನಂದ ಸರ್ವೋತ್ತುಮಾ ನಿರ್ಭಯನನು ಮಾಡಿ ನೀನೆ ರಕ್ಷಿಸದಿರೆ ದಾರು ಮನಸು----ಳಗೆ ದರ್ಭಶಯನ ರಾಮನ-----'ಹೊನ್ನ ವಿಠ್ಠಲ’ ಸಾಕಾರ ನೀ ಎನ್ನ ತ್ವರದಿ ಪೊರೆಯೊ 3
--------------
ಹೆನ್ನೆರಂಗದಾಸರು
ಮಂದೇಹರ ಹರವೂ | ಕಾಲದಿ | ಸಂಧ್ಯಾ ವಂದನವೂ ಪ ಶುಭ | ವೆಂದ್ಹೇಳುವುದು ಅ.ಪ. ಶಚಿ ನೀನಾಗಿರಲೂ | ಕಾಯೋ | $ಶುಚೀ ಎನಿಸಿರಲೂ ||ಶುಚಿಯೆನಿಸುವಿ ಕಿವಿಯು | ಪಚರಿಸುತಲ್ಹರಿವಚ ನುಡಿಸುತ ಶ್ರೀ | ತಾಚಮನದಲೀ 1 ಕಾಲ ಕಾಲ ಮೂರ್ತಿಯನು 2 ಯುಕುತಿ ತಿಳಿದು ನೀನು | ಆರ್ಯರ | ಉಕುತಿ ಪಾಲಿಸಿನ್ನೂಮುಕುತಿದಾಯಕ ಗುರು ಗೋವಿಂದ ವಿಠಲನುಭಕುತಿಗೊಲಿದು ನಿಜ ಭಕುತರ ಪಾಲಿಪ 3
--------------
ಗುರುಗೋವಿಂದವಿಠಲರು
ಮಧ್ವಮತವ ಪೊಂದದವನ ಭಕುತಿಯಾತಕೆ ಪ ಊಧ್ರ್ವಪುಂಡ್ರ ತಿದ್ದದವನ ಕರ್ಮವ್ಯಾತಕೆಅ.ಪ ದಾನವನ್ನು ಮಾಡದವನ ದ್ರವ್ಯವ್ಯಾತಕೆ | ಸ್ನಾನವನ್ನು ಮಾಡದವನ ಮೌನವ್ಯಾತಕೆ | ಮಾನಿನಿಯು ಇಲ್ಲದವನ ಬದುಕು ಯಾತಕೆ | ಧ್ಯಾನವನ್ನು ಅರಿಯದವನ ಪೂಜೆ ಯಾತಕೆ 1 ವಂಶವನ್ನುದ್ಧರಿಸದಂಥ ಮಗನು ಯಾತಕೆ | ಹಿಂಸೆಯನ್ನು ಪಡಿಸುವಂಥ ಅರಸು ಯಾತಕೆ || ಸಂಸಾರವನು ಒಲ್ಲದಂಥ ಸತಿಯು ಯಾತಕೆ | ಕಂಸಾರಿಯನು ತಿಳಿಯದಂಥ ಜ್ಞಾನವ್ಯಾತಕೆ 2 ಬಂಧು ಬಳಗ ಬಿಟ್ಟು ಉಂಬ ನೆಂಟರ್ಯಾತಕೆ | ಕಂದರನ್ನು ಮಾರುತಿಪ್ಪ ತಂದೆಯಾತಕೆ || ಬಂದ ಅತಿಥಿಗನ್ನವಿಕ್ಕದ ಸದನವ್ಯಾತಕೆ | ನಿಂದೆಗಳು ಮಾಡುತಿಹನಾಚಾರವ್ಯಾತಕೆ 3 ಗುರೂಪದೇಶವಿಲ್ಲದಂಥ ಮಂತ್ರವ್ಯಾತಕೆ | ಹಿರಿಯರನ್ನು ಸಾಕದವನ ಪುಣ್ಯವ್ಯಾತಕೆ || ಚರಿಸಿ ತೀರ್ಥಯಾತ್ರೆ ಮಾಡದ ದೇಹವ್ಯಾತಕೆ | ವರ-ಪ್ರಸಾದವೀಯದಂಥ ದೇವರ್ಯಾತಕೆ4 ಏಕಾದಶಿಯ ಮಾಡದವನ ವ್ರತವು ಯಾತಕೆ | ಏಕಮನಸು ಇಲ್ಲದವನ ನಡತೆ ಯಾತಕೆ || ಸಾಕಿದವನ ಕೊಲ್ಲುವಂಥ ಭಂಟನ್ಯಾತಕೆ | ಲೋಕವಾರ್ತೆ ಬಿಡದವನ ಜಪವು ಯಾತಕೆ 5 ಭಾಷೆ ಬದ್ಧವಿಲ್ಲದವನ ಮಾತು ಯಾತಕೆ | ಕಾಸುವೀಸÀಕೆ ಬಡಿದಾಡುವ ಅನುಜರ್ಯಾತಕೆ || ಲೇಸು ಹೊಲ್ಲೆಹ ನೋಡದಂಥ ಗೆಳೆಯನ್ಯಾತಕೆ | ಆಸೆಯನ್ನು ಬಿಡದ ಸನ್ಯಾಸವ್ಯಾತಕೆ 6 ತಪ್ತ ಮುದ್ರೆಯಿಲ್ಲದವನ ಜನ್ಮವ್ಯಾತಕೆ | ಗುಪ್ತದಲ್ಲಿ ನಡೆಯದಿಪ್ಪ ದಾಸನ್ಯಾತಕೆ || ಆಪ್ತಬಂಧು ವಿಜಯವಿಠ್ಠಲನ ಶ್ರೀ ಚರಣದಿ | ಕ್ಲುಪ್ತ ಮೀರದೆ ನಡೆದ ಮೇಲೆ ನರಕವ್ಯಾತಕೆ 7
--------------
ವಿಜಯದಾಸ
ಮನಮರಿಯಲಿದ್ದವಗೆಲ್ಲಿಹುದು ಆತ್ಮದ ಖೂನ ತನುವನಾಗಿದ್ದವಗೆಲ್ಲಿಹುದು ಙÁ್ಞನ ಧ್ರುವ ನಿಗಮ ಓದಿದರೇನು ಅಗಮ ಹೇಳಿದರೇನು ಬಗೆ ಬಗೆ ವೇಷ ಜಗದೊಳುದೋರಿದರೇನು 1 ಮಠವು ಮಾಡಿದರೇನು ಅಡವಿ ಸಾರಿದರೇನು ಸಠೆ ಮಾಡಿ ಸಂಸಾರ ಹಟವಿಡಿದರೇನು 2 ನಿಗದಿ ಹಾಕಿದರೇನು ಗಗನಕ್ಹಾರಿದರೇನು ಮಿಗಿಲಾಗಿದೋರಿ ಬಗವಿಯ ಪೊದ್ದರೇನು 3 ಗುಹ್ಯ ಸೇರಿದರೇನು ಬಾಹ್ಯ ಮೆರೆದರೇನು ದೇಹ ದಂಡಿಸಿ ಹರವ ತೊರೆದರೇನು 4 ಮನಕೆ ಮೀರಿಹ್ಯ ಸ್ಥಾನ ಘನಸುಖದಧಿಷ್ಠಾನ ದೀನಮಹಿಪತಿ ನೀ ಸಾಧಿಸೊ ಗುರುಜ್ಞಾನ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಮನವೆ ಎಲೆ ಮನವೆ ನೀನು ಯೋಚಿಸಿ ಕೆಡುವುದು ಅನುಚಿತವಲ್ಲೆ ಪ ನೀ ಮನನಮಾಡಿದ ಸಂಸಾರಿರದು ಕಾನನದ ಬೆಳದಿಂಗಳು ಇದು ಪರಿ ತಿಳಿದು ಹೀನಯೋಚನೆ ಬಿಟ್ಟು ಧ್ಯಾನಕವಚ ತೊಟ್ಟು ಜ್ಞಾನವೆಂಬಾಯುಧಪಾಣಿಯಾಗೆಲೊ ಬೇಗ 1 ಈ ದೇಹವೆಂಬುವ ಕಾಂತಾರ್ಹೊಕ್ಕು ಉಪಾ ಯುದ್ಹುಲಿಗಳ ತರಿದ್ಹಾಕು ಮಹಮಾಯ ಕೋಣಗಳೆಂಟು ನೂಕು ದಾಯಾದ್ಯೈವರ ಕೊಂದು ಜೀವಘಾತಕರಾದ ಮೂವರಂ ಭಂಜಿಸಿ ದ್ವಯಮಾರ್ಗ ಗೆಲಿಯೆಲೊ 2 ಕಂಟಕ ಬದಿಗಿಟ್ಟು ಬಹ ಆರೊಂದು ನದಿಗಳ ದಾಂಟು ಭೋರ್ಗರೆವ ಸರ್ಪನ ಹೆಡೆ ಮೆಟ್ಟು ಮಾರಾರಿ ವಿನಮಿತ ಧೀರ ಶ್ರೀರಾಮಪಾದ ವಾರಿಜಕ್ಕೆರಗಿ ಗಂಭೀರ ಸುಖದಿ ಮೆರಿ 3
--------------
ರಾಮದಾಸರು