ಒಟ್ಟು 2786 ಕಡೆಗಳಲ್ಲಿ , 117 ದಾಸರು , 2021 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಜಯದೇವ ಜಯದೇವ ಜಯಗೋಪಾಲಕೃಷ್ಣಾ | ಜಯ ಜಯಯೋಗೀ ಮಾನಸ ಮೋಹನ ಘನಕರುಣಾ ಪ ದೇವಕಿವಸುದೇವರ ಭಾವನೆ ಪೂರಿಸಲಿ | ಶ್ರಾವಣ ಕೃಷ್ಣಪಕ್ಷದ ಅಷ್ಟಮಿರೋಹಿಣಿಲಿ || ತೀವಿದ ಚಂದ್ರೋದಯ ರಾತ್ರಿಯ ಕಾಲದಲಿ | ಭುವನದಿ ಅವತಾರವ ಮಾಡಿದೆನೀ ವೇಗದಲಿ 1 ಸೊಕ್ಕಿದ ಕಂಸನ ಕೊಂದು ದುಷ್ಕ್ರತನಾಶನವಾ | ಮುಖ್ಯಮಾಡು ಕಾರಣ ಧರ್ಮ ಸ್ಥಾಪನವಾ || ಸಖ್ಯದಿ ಕಟ್ಟಲು ಉಗ್ರಶೇನಗೆ ಪಟ್ಟವಾ | ಅಕ್ಕರದಿಂದಲಿ ಬೆಳೆದೆ ಗೋಕುಲದಲಿ ದೇವಾ 2 ಕುರುಕುಲಾನ್ವಯ ಜೀವನರೆಲ್ಲರ ಸೆಬಡಿದೆ | ಚರಣವನಂಬಿದ ಪಾಂಡವರನು ಸ್ಥಾಪನಗೈದೆ | ಪರಪರಿಯಿಂದಲಿ ಭಜಿಸುವ ಭಕ್ತಾವಳಿ ಪೊರೆದೇ | ಗುರುವರಮಹೀಪತಿ ಸುತ ಪ್ರಭುಸಲಹೆನ್ನನು ಬಿಡದೇ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಜಯದೇವಿ ಜಯದೇವಿ ಜಯ ಬಗಳಾಮುಖಿಯೇಜಯವೆಂದು ಬೆಳಗುವೆನು ಜಯಭಕ್ತ ಸಖಿಯೇ ಪ ನಿತ್ಯ ಪೀತೋಪಚರಣೆಪೀತಕುಂಡಲ ಹಾರಪೀತ ವರ್ಗಾವರಣೆಪೀತಮೂರ್ತಿಯ ನೆನೆವೆ ಪೀತ ಪ್ರಿಯೆ ಸ್ಮರಣೆ 1 ಬತ್ತೀಸಾಯುಧ ಪಿಡಿದೆ ಭಯಂಕರಿ ಉಗ್ರೇಶತ್ರುನಾಶಕಿ ನೀನು ಭಕುತ ಸಾಹಸ್ರೇಮತ್ತೆ ಹುಡುಕುತ್ತಿರುವೆ ದುಷ್ಟರನು ಶೀಘ್ರೆನಿತ್ಯ ನಾ ಭಜಿಸುತಿಹೆ ಮನವ ಏಕಾಗ್ರೇ 2 ಬ್ರಹ್ಮ ಚಿದಾನಂದ ಬಗಳಾಮುಖಿ ರಾಣಿಹಮ್ಮಳಿದ ಮಹಿಮರಾ ಮೆಚ್ಚಿನ ಕಟ್ಟಾಣಿಬ್ರಹ್ಮರಂಧ್ರದೊಳು ವಾಸಿಸುತಿಹ ದಿನಮಣಿಬಿಮ್ಮನೆ ನಮಗೊಲಿಯೆ ಶೀಘ್ರದಿಂ ಕೃಪಾಣಿ 3
--------------
ಚಿದಾನಂದ ಅವಧೂತರು
ಜಯಮಂಗಳಂ ಪ ಬುದ್ಧಿಯನಾಳ್ವಂಗೆ ಸಿದ್ಧಿಯನೀವಂಗೆಉದ್ದನ್ನ ಒಡಲಿಂಗೆ ವಿಘ್ನಗಳ ಕೊಲ್ವಂಗೆಶುದ್ಧ ಹಿಮಗಿರಿಯ ಸುತೆಯ ಮುದ್ದಾದ ಕುವರಂಗೆಜಿದ್ದಿನಲಿ ಶಣ್ಮುಖನ ಗೆದ್ದಂಥ ಜಾಣಂಗೆ 1 ಶಂಕರನ ಕುವರನಿಗೆ ಓಂಕಾರ ರೂಪನಿಗೆಸಂಕಷ್ಟನಾಶನಿಗೆ ಅಂಕುಶಾಯುಧ ಧರಗೆಹೂಂಕರಿಪ ಜನಕುಳ್ಳ ಬಿಂಕವನು ತರಿದವಗೆಕಿಂಕರದ ನಿರುತದಲಿ ಕರುಣದಲಿ ಕಾಯ್ವನಿಗೆ 2 ಶುಭಕಾರ್ಯದಲಿ ಮೊದಲು ಪೂಜೆಗೊಂಬಾತನಿಗೆಅಭಯವನು ತೋರ್ಪನಿಗೆ ಇಭವದನ ಗಣಪಗೆಪ್ರಭುವಾಗಿ ಗಣಗಳಿಗೆ ಜಗದೊಳಗೆ ಮೆರೆವವಗೆವಿಭವದಲಿ ಬಿಡುವಿಲ್ಲದೆ ಭಾರತವ ಬರೆದಂಗೆ 3 ಸೂಕ್ಷ್ಮದಲಿ ಪರಿಕಿಸಲು ಸಣ್ಣ ಕಣ್ಣುಳ್ಳವಗೆಕಾಂಕ್ಷೆಗಳ ಕೇಳಲಿಕೆ ಮರದಗಲ ಕಿವಿಯವಗೆತೀಕ್ಷ್ಣತರ ಮತಿವಿಡಿದ ಘನವಾದ ತಲೆಯವಗೆಸುಕ್ಷೇಮ ಲಾಭಗಳ ಭಕ್ತರಿಗೆ ಕೊಡುವವಗೆ 4 ಇಲಿದೇರ ವೀರನಿಗೆ ಸುಲಿದೇಕದಂತನಿಗೆಎಲರುಣಿಯನುಪವೀತ ಮಾಡಿಕೊಂಡವಗೆನೆಲದೊಳಗೆ ಗದಗುಸಿರಿ ವೀರನಾರಾಯಣನನೊಲಿಸಿ ಕೊಡುವಂಥ ಮಂಗಳ ಮೂರುತಿಗೆ 5
--------------
ವೀರನಾರಾಯಣ
ಜಯಮಂಗಳಂ ಶುಭೋದಯ ಮಂಗಳಂ ಭಯಹರಗೆ ತಿರುಪತಿಯ ವೆಂಕಟೇಶ್ವರಗೆ ಪ ಸುರಲೋಕವನು ಪಡೆದ ಶಿರದಮಕುಟದ ಪ್ರಭೆಗೆ ಸ್ಮರಚಾಪವನು ಪೋಲ್ವ ಪುರ್ಬುಗಳ ಚೆಲುವಿಕೆಗೆ ತುಂಬಿ ತುಳುಕುವ ನಯನಗಳಿಗೆ 1 ಕನಕಕುಂಡಲಗಳಿಗೆ ಘನ ನಾಸಿಕದ ಮಣಿಗೆ ಮಿನುಗುತಿಹ ಮುಗುಳುನಗೆಯೊಗುವ ಮುಖಕೆ ಇನಕೋಟಿಪ್ರಭೆಗೆ ಮಿಗಿಲೆನಿಪ ಕೌಸ್ತುಭಮಣಿಗೆ ವನಮಾಲೆಯನು ಧರಿಸಿ ಶೋಭಿಸುವ ಕಂಠಕೆ 2 ಭುಜವೆರಡರಲಿ ಶಂಖಚಕ್ರಗಳನುರೆ ಧರಿಸಿ ಅಜಸುರಾದ್ಯರು ಬಿಡದೆ ಭಜಿಪ ಪದವ ಭಜಿಪರಿಗೆ ಭವಶರಧಿ ಕಟಿಪ್ರಮಾಣವಿದೆಂದು ಅಜಪಿತನು ತೋರುತಿಹ ಕರಚತುಷ್ಟಯಕೆ 3 ಹದಿನಾಲ್ಕು ಲೋಕಕಾಶ್ರಯವಾಗಿ ತೋರುತಿಹ ಪದುಮಭವನನು ಪಡೆದ ನಾಭಿಸಹಿತ ಉದರಮಂಡಲಕೆ ಮತ್ತದರಡಿಯ ಶೋಭಿಸುವ ಹದಿನಾರು ಬಣ್ಣದಪರಂಜಿ ಕಟಿಸೂತ್ರಕೆ 4 ಕಿರಿಘಂಟೆಸರದೊಡನೆ ಹೊಳೆವ ಪೀತಾಂಬರಕೆ ಗರುಡನಂಸದಿ ಮೆರೆವ ಊರುಗಳಿಗೆ ಸುರನದಿಯ ನೆರೆ ಪಡೆದ ಚರಣದುಂಗುಟಗಳಿಗೆತಿರುಪತಿಯ ವೆಂಕಟನ ದಿವ್ಯ ಮೂರುತಿಗೆ 5
--------------
ತಿಮ್ಮಪ್ಪದಾಸರು
ಜಯವೆನ್ನಿ ಜನರೆಲ್ಲ ಸ್ವಾಮಿ ಭವರೋಗವ್ಶೆದ್ಯಗೆ ಭಾವಜನಯ್ಯಗೆ ಕುವಲಯಧರಸ್ವಾಮಿಗೆ ನಾರಾಯಣ ಪ. ಆಗಮಚೋರನ ಗೆಲಿದ ರಾಮ ಬೇಗನೆ ಸುರರಿಗೆ ಸುಧೆಯೆರೆದ ಕೃಷ್ಣ ನಾಗಲೋಕವ ಹೊಕ್ಕವನ ಕೊಂದಾಗ ಶಿಶು ಕೂಗೆ ಕಂಬದಿ ಬಂದಗೆ ನಾರಾಯಣ 1 ಭಾಗೀರಥಿಯ ಪಡೆದೆ ರಂಗ ಬಾಗಿಸಿ ತಾಯ ಶಿರವ ಕಡಿದೆ ರಾಮ ನೀಗಿದಶ್ವವಾಹಕಗೆ ನಾರಾಯಣ 2 ಜಲದೊಳಗಾಳ್ದನ ಸೀಳ್ದ ರಾಮ ಅಲಸದೆ ಗಿರಿಯ ಬೆನ್ನಲಿ ತಾಳ್ದ ಕೃಷ್ಣ ನೆಲನ ಕದ್ದೊಯ್ದಸುರನ ಮರ್ದಿಸಿದ ಶಿಶು- ಗೊಲಿದು ಬಲಿಯ ತುಳಿದೆ ನಾರಾಯಣ 3 ಛಲಪದದಿ ರಾಯರ ಕಡಿದೆ ರಾಮ ಬಲು ಬಿಲ್ಲನು ಕರದಲ್ಲಿ ಪಿಡಿದೆ ಕೃಷ್ಣ ಕೋ- ಡುಳ್ಳವ ಕೋಪದ ಮುಖ ದೈನ್ಯದಿ ಬೇಡುವೆ ಕೊಡಲಿಗಾರ ನಾರಾಯಣ 4 ರೂಢಿಯೊಳು ರಾಯರ ಗೆಲಿದ ರಾಮ ಓಡಿ ಹೊಕ್ಕನೆ ದುರ್ಗದ ಜಲ ಕೃಷ್ಣ ನೋಡೆ ನಾರಿಯರ ವ್ರತವಳಿದೆ ಹಯವದನ ರೂಢರಾವುತನಾದ ನಾರಾಯಣ5
--------------
ವಾದಿರಾಜ
ಜಯಾ ಜಯಾ ಪ ಈ ಮುದ್ದುಮುಖವೊ ಮತ್ತೆ ತನುವಿನ ಕಾಂತಿ ಈ ಬಿಲ್ಲು ಈ ಬಾಣ ನಿಂತಭಾವ 1 ಬಂಟ ಈ ಭಾಗ್ಯ ಆವ ದೇವರಿಗುಂಟು ಮೂಲೋಕದೊಳಗೆ 2 ಜಯ ಇನಕುಲೋದ್ಧರಣ ಜಯ ಮುನಿಕೃತ ಶರಣ ಜಯ ದನುಜವಿದಾರಣ ಜಯ ತಮಹರಣ 3 ಧರೆಯೊಳತಿಭಾರವನು ಇಳುಹಿ ಕಮಲಜ ಮುಖ್ಯ ಸುರರ ಮೊರೆಯನು ಕೇಳ್ದು ನರರೂಪ ತಾಳ್ದು 4 ದಶರಥನ ಗರ್ಭದಲಿ ಜನಿಸಿ ಮುನ್ನ ಮುನಿ ಮನೋರಥ ಕಾಯಿದ ಪುಣ್ಯಚರಿತ್ರ5 ಅಸುರರನು ಅಳಿದು ಅಹಲ್ಯಳಿಗಿತ್ತ ವರವಿತ್ತು ಮಿಥಿಳ ಪುರದಿ ಹರನ ಧನುವನುರೆ ಮುರಿದು 6 ಅತುಳ ಬಲದಲಿ ಸೀತೆಯ ಒಲಿಸಿದ ಭಾರ್ಗವ ಮ- ಹಿತÀಳ ಬಲವಂತ ದೇವೋತ್ತುಂಗ ಜಯತು 7 ಭರದಿಂದಲಯೋಧ್ಯಾಪುರವನು ಶೃಂಗರಿಸೆ ಹರುಷತನದಲಿ ರಾಮಗರಸುತನವೆನಲು 8 ಕಿರಿಯ ಮಾತೆಯು ಬಂದು ಭರತನಿಗೆ ಪಟ್ಟವೆನೆ ಸಿರಿಸಹಿತ ಹೊರಹೊಂಟ ಕರುಣಾಳು ಜಯತು 9 ಅನುಜ ಅವನಿಜೆ ಸಹಿತ ವನವಾಸವ ಮಾಡಿ ವನಜಾಕ್ಷ ಪತಿಯಾಗೆಂದು ರಾಕ್ಷಸಿಯು ಬರಲು 10 ಅನುವಾಯಿತೆಂದು ನಾಸಿಕವ ಹರಿದು ಭಂಗಿಸಿದೆ ಬಿನುಗು ಹೊಮ್ಮøಗವೆಚ್ಚ ಘನಮಹಿಮ ಜಯತು 11 ಜಕ್ಕಿದ ವಾಲಿಯನು ಕೊಂದು ಕುಲಸೈನ್ಯ ಸಹವಾಗಿ ನಿಲ್ಲದೆ ಸೇತುವೆಗಟ್ಟಿ ಅಸುರರೊಡಗೂಡಿ 12 ಖುಲ್ಲ ದಾನವ ಕುಂಭಕರ್ಣ ರಣಮುಟ್ಟಿ ಎಲ್ಲರನು ತರಿದಂಥ ಬಲ್ಲಿದನೆ ಜಯತು 13 ದÉೀವಕ್ಕಳು ಹರುಷದಲ್ಲಿ ಪೂಮಳೆಗರೆಯೆ ಭೂಮಿಜೆಯ ಸಹಿತ ಸೌಮಿತ್ರಿಯೊಡಗೂಡಿ 14 ಕ್ಷೇಮದಿಂದಯೋಧ್ಯಪುರದಿ ಸುಖದಲ್ಲಿರ್ದ ಸ್ವಾಮಿ ಶ್ರೀಹಯವದನ ರಘುಕುಲತಿಲಕನಲ್ಲವೆ 15
--------------
ವಾದಿರಾಜ
ಜಲಜಾಕ್ಷ ಯಾಚಿಸುವೆ ಚಲುವ ಚರಣ ತೋರೋ ಸುಲಭದಿ ಹಯವದನ ಪ [ಶಶಿಯೊಲಿರುವದರಿಧರ] ಅಕ್ಷ ಸುಬೋಧ ಪುಸ್ತಕಧರ ವಸುಮತಿ ರಮಣನೆ ನಿನ್ನ ಸಾಸಿರ ನಾಮದಲಿ ಸೋಸಿಲಿ ನಾ ಪ್ರಾರ್ಥಿಸುವೆ 1 ವರವಾದಿ ಜಯದ ವಿಮುಕ್ತಿ ಪ್ರದಾತ ಅನುದಿನ ನಿನ್ನ ಆರೆರಡು ಅ ಕ್ಷರದ ಮಂತ್ರವನೂ ಪ್ರೇಮದಿ ನಾ 2 ಮುಖದೊಳ್ ಸಕಲಾಗಮ ವಿದ್ಯಾ ಸುಘೋಷ ಮಾಡಿ ಆ ಕಮಲಜ ಭವಮುಖರಿಂದ ಅಮೃತದಲಿ [ಸ್ತುತಿಸಿಹ ಅಭಿಷಿಕ್ತನೆ] ನೀನೆನಿಸಿ ನರಹರೆ 3
--------------
ಪ್ರದ್ಯುಮ್ನತೀರ್ಥರು
ಜಾಣ ನೀನಹುದೋ ಗುರುಮುಖ್ಯಪ್ರಾಣ ನೀನಹುದೊ ಪ ರಾಣಿ ಭಾರತೀ ರಮಣ ನಿನಗೆಣೆಕಾಣೆ ತ್ರಿಭುವನದೊಳಗೆ ಸರ್ವಪ್ರಾಣಿಗಳ ಹೃದಯದಲಿ ಮುಖ್ಯಪ್ರಾಣನೆಂದೆನಿಸಿದೆಯೊ ಧಿಟ್ಟ ಅ.ಪ ಧೀರ ನೀನಹುದೋ ವಾಯುಕುಮಾರ ನೀನಹುದೊಸಾರಿದವರ ಮನೋರಥಂಗಳಬಾರಿ ಬಾರಿಗೆ ಕೊಡುವೆನೆನುತಲಿಕ್ಷೀರನದಿ ತೀರದಲಿ ನೆಲೆಸಿಹಮಾರುತಾವತಾರ ಹನುಮ 1 ಧಿಟ್ಟ ನೀನಹುದೊ ಬೆಟ್ಟವ ತಂದಿಟ್ಟವ ನೀನಹುದೊರೆಟ್ಟೆ ಹಿಡಿದಕ್ಷಯ ಕುಮಾರನಕುಟ್ಟಿ ದೈತ್ಯರ ಕೆಡಹಿ ಬೇಗದಿಸುಟ್ಟು ಲಂಕೆಯ ಸೀತೆಗುಂಗುರಕೊಟ್ಟೆ ಜಗಜ್ಜಟ್ಟಿ ಹನುಮ2 ದುರಿತ ಮಾರ್ತಾಂಡ ನೀನಹುದೊಕುಂಡಲ ಕಿರಿಘಂಟೆ ಉಡಿಯಲಿಪೆಂಡೆ ನೂಪುರ ಕಾಲಲಂದಿಗೆತಂಡ ತಂಡದಿ ಕೃಷ್ಣನಂಘ್ರಿಪುಂಡರೀಕಕೆ ಕೈಯ ಮುಗಿದ 3
--------------
ವ್ಯಾಸರಾಯರು
ಜಾಣಿ ರಂಗಯ್ಯನ ಕಾಣದೆ ನಿಲ್ಲದು ಮನ ವಾಣಿ ರಮಣನ ಪಿತನ ವೇಣದಿ ಕರೆತಾರಮ್ಮ ಪ. ಜರಿಯ ಸುತನು ತಾನು ಜಗಳಕೆ ಬಾಹೋನೆಂದು ಕರೆಸಿದ ವಿಶ್ವಕರ್ಮನ ಕರೆಸಿದ ವಿಶ್ವಕರ್ಮನ ದ್ವಾರಕಾವಿಪುರನಿರ್ಮಿಸೆಂದ ಕ್ಷಣದಾಗೆ ಜಲದೊಳು1 ತಳಿರು ತೋರಣನಿವಹ ಮೇರುವಿಗೆ ಪೊನ್ನ ಕಳಸ ಮೇರುವಿಗೆ ಪೊನ್ನ ಕಳಸ ಕನ್ನಡಿ ಮನೋಹರವಾಗಿದ್ದು ಸಟಿಯಿಲ್ಲ2 ದ್ವಾರಕಾಪುರದ ಶೃಂಗಾರ ವರ್ಣಿಸಲು ಮೂರು ಕಣ್ಣವಗೆ ವಶವಲ್ಲಮೂರು ಕಣ್ಣವಗೆ ವಶವಲ್ಲ ನಾಲ್ಕು ಮುಖದವಗೆ ಬಲುಮಿಗಿಲು3 ಹದಿನಾರು ಸಾವಿರ ಚದುರೆಯರ ಮಂದಿರ ಮದನನಯ್ಯನ ಮನೆಮಧ್ಯಮದನನಯ್ಯನ ಮನೆಮಧ್ಯ ದ್ವಾರಕೆಅದ್ಬುತವಾಗಿ ಬೆಳಗಿದೆ 4 ಶಿಶುಪಾಲ ದಂತವಕ್ತ್ರ ಮೊದಲಾದ ಮಹಾಅಸುರರನ್ನೆಲ್ಲ ಅಳುಹಿದ ಅಸುರರನ್ನೆಲ್ಲ ಅಳಿದು ದ್ವಾರಕೆಯಲ್ಲಿನಸು ನಗುತಿದ್ದ ನರಹರಿ 5 ಸತ್ಯದಿ ರುಕ್ಮಿಣಿ ಸತ್ಯಭಾಮಾದೇವಿ ವಾರಿಜ ಮುಖಿ ಷಣ್ಮಹಿಷೇರಸಹಿತಾಗಿಷಣ್ಮಹಿಷೇರ ಸಹಿತಾಗಿಕಾರುಣ್ಯಸಿಂಧು ರಾಮೇಶ ಕುಳಿತಿದ್ದ 6 ಶ್ರೀ ರಮಾರಮಣನಾದ ಶ್ರೀ ಕೃಷ್ಣನ ಅರಮನೆಗೆಸುಭಧ್ರೆ ಮುಯ್ಯ ತರುತಾಳೆಸುಭಧ್ರೆ ಮುಯ್ಯ ತರುತಾಳೆÀಹಸ್ತಿನಾವತಿಯ ಭೂಸುರರೆಲ್ಲ ಬರತಾರೆ7
--------------
ಗಲಗಲಿಅವ್ವನವರು
ಜಾತಿಭ್ರಷ್ಟ ಹೊಲೆಮಾದಿಗರಿವರಲ್ಲವೇನೋ ನೀತಿಬಾಹಿರರಾಗಿ ಆಚರಿಸುವವರು ಪ ಪನ್ನಂಗಶಯನ ಉನ್ನತ ಕತೆ ಕೀರ್ತ ನ್ಯನ್ನು ಕೇಳೆನೆ ಮುಖವನ್ನು ಹಿಂತಿರುವಿ ಭಿನ್ನ ಬೇಸರಿಲ್ಲದೆ ಅನ್ಯಜನ ಸುದ್ದಿಯೊಳು ಕುನ್ನಿಯಂದದಿ ದಿನಗಳನ್ನು ಕಳೆವವರು 1 ಆಲಯದ ಸತಿಯಳ ತಾಳದೆ ತುಸುತಪ್ಪು ತಾಳಿಯನ್ಹರಕೊಂಡು ದಾಳೀಯ ಹೊಡೆದು ಮೇಲುಜಾತಿಲಿ ಹುಟ್ಟಿ ಕೀಳು ಸೂಳೇರಿಗೊಲಿದು ಹೇಳಿದತೆರ ಕುಣಿದು ಬೀಳುಗಳೆವವರು 2 ಸದ್ಧರ್ಮಕಾರ್ಯಕ್ಕೆ ಇದ್ದುದ ಸಲ್ಲಿಸೆನಲು ಕದ್ದು ತಂದುಕೊಡುವೆವೆಂದಬದ್ಧ ನುಡಿಯುವವರು ಬದ್ಧ್ದ........ಬಂದು ಒದ್ದು ಕೂಡ್ರಿಸಲಾಗ ಸದ್ದಿಲ್ಲದೆ ತಂದು ಬೇಡಿದ್ದು ಕೊಡುವವರು 3 ಜ್ಞಾನಿಗಳು ಬಂದರೆ ಗೋಣೆತ್ತಿನೋಡದೆ ಹೀನಜನರಿಗೆ ಬಹುಮಾನ ಕೊಡುವವರು ಧ್ಯಾನ ದಾಸರ ತರದಿ ಜ್ಞಾನದ ಮಾತ್ಹೇಳಿ ಗೇಣ್ಹೊಟ್ಟಿಗೆ ಪರರ ಗೋಣು ಮುರಿವವರು 4 ತಾಸಿನ ಮೋಜೆಂಬ ನಾಶನ ಜಗಮಾಯ ಮೋಸನರಿಯದೆ ಯಮಪಾಶದೊಳು ಬಿದ್ದು ದಾಸಜನಪ್ರಿಯ ಜಗದೀಶ ಶ್ರೀರಾಮನ ಧ್ಯಾಸಮುರಿದು ದು:ಸ್ಸಹವಾಸದಿರುವವರು 5
--------------
ರಾಮದಾಸರು
ಜೀವನೇ ಶಶಿಹಾಸ ಕೇರಳ ಜಡಪ್ರಕೃತಿ ಕುಂತಳಪುರ ಶರೀರವಿದು ಸಮ್ಯಕ್ ಜ್ಞಾನ ಪಾವನದ ಶಾಸ್ತ್ರಗಳು ಗಾಲವ ಭಾವಿಸಲು ಶುಭಫಲವು ಚಂಪಕ ಮಾಲಿನಿಯು ಕನ್ಯೆ 1 ಮದನ ಚಂದ್ರಮುಖಿ ವಿಷಯೆಯು ವಿಷಯವುಮು ಕುಂದನಾತ್ಮನು ಸಾಲಿಗ್ರಾಮವು ಕಂದನೊಯ್ದ ಕಟುಕರು ಪಂಚಾಘಗಳು ತಿಳಿಯುವುದೂ 2 ಕೆಟ್ಟಕರ್ಮವು ಕಾಲೊಳಾರನೆ ಬೆಟ್ಟುನೋಡಲು ಕಾಳಿಕೆಯು ತಾ ಶ್ರೇಷ್ಠಮೂಲಪ್ರಕೃತಿ ಖಡ್ಗವು ನಿಷ್ಠೆಯೆನಿಸುವುದೂ ಸೃಷ್ಟಿಯೊಳಗೀ ವಿವರ ತಿಳಿದು ತ್ಕøಷ್ಟವೆಂದಾಲಿಪರ ಗುರುರಾಮ ವಿಠ್ಠಲನು ಕೈಪಿಡಿದು ಕೊಡುವನಭೀಷ್ಟಸಿದ್ಧಿಗಳಾ 3
--------------
ಗುರುರಾಮವಿಠಲ
ಜೊಜೊ ತುಲಸೀರಾಮ ಜೊಜೊ ಶ್ರೀರಾಮ ಜೊಜೊ ಸುಗುಣಸ್ತೋಮ ಜೊಜೊಯಭಿರಾಮಾ ಪಜೊಜೊ ಸ್ವಾರ್ಥತ್ಯಾಗಿ ಜೊಜೊ ನಿಜಯೊಗಿಜೊಜೊ 'ಷಯ'Àರಾಗಿ ಜೊಜೊ 'ತಲಾಗೀ 1ಜೊಜೊ ಸತ್ಯ'ಚಾರ ಜೊಜೊ ಸುಕುಮಾರಜೊಜೊಪತಿತೊದ್ಧಾರ ಜೊಜೊ ಯಘುದೂರ 2ಜೊಜೊ ಪರಮೋದಾರ ಜೊಜೊ ಗಂಭೀರಜೊಜೊ ದುರ್ಮತಹಾರ ಜೊಜೊ ಜಿತಮಾರ 3ಮಂಗಳಕರೋಲ್ಲಾಸ ಮಂಜುಮುಖಹಾಸಾರಂಗಸ್ವಾ'ುೀದಾಸ ರಮ್ಯಹೃದಿವಾಸಾ 4
--------------
ಮಳಿಗೆ ರಂಗಸ್ವಾಮಿದಾಸರು
ಜೋ ಜೋ ಜಾನಕಿ ಜೊ ಚಂದಿರ ಮುಖಿ ಮಾಂಗಲ್ಯದಾಯಕಿ ಮಾಡೇ ನಿದ್ರೆ ಜೋ ಜೋ 1 ಆದಿಮಾಯಳೆ ವೇದವೇದ್ಯಳೆ ಆದಿತೇಯನುತೆ ಭೂಮಿಜಾತೆ 2 ಮೃಗಮದಗಂಧಿನಿ ಮಾಧುರ್ಯಭಾಷಿಣಿ ಮಗಳೆ ಜಾನಕಿಯೆ ಕಂಬುಕಂಧರಿಯೇ 3 ಕಂಜಲೋಚನಿ ಕಂಜಭವಜನನಿ ಕುಂಜರಗಮನಿ ಸಂಜೀವನಿ 4 ವಾರಿಜನೇತ್ರೆ ವಾಸುವಸ್ತೋತ್ರೆ ಮಾರಜನನಿ ಲಕ್ಷ್ಮೀನಾರಾಯಣಿ 5
--------------
ತುಪಾಕಿ ವೆಂಕಟರಮಣಾಚಾರ್ಯ
ಜೋ ಜೋ ಜೋ ಜಗತ್ರಾಣ ಸುತ್ರಾಣ ಜೋ ಜೋ ಜೋ ಶುಭವಾಣಿಯ ರಮಣ ಜೋ ಜೋ ವೈಷ್ಣವ ಸಿದ್ಧಾಂತಿ ಶರಣ ಮುಖ್ಯಪ್ರಾಣ ಕಲ್ಯಾಣ ಪ. ಲೋಕಾ ಲೋಕ ಪರ್ವತಗಳ ಮ್ಯಾಲೆ ಏಕಾಕಾರದಿ ಪಾದಗಳೂರಿ ವ್ಯಾಕರಣಗಳ ದಿವಾಕರನಿದಿರಕಲಿ ಸ್ವೀಕರಿಸಿದ ಕರುಣಾಕರ ಮೂರ್ತಿ ಶ್ರೀಪತಿ ಕೃಷ್ಣನ ಸೇವಾನುಸಾರದಿ 1 ಕೋಪಾಟೋಪವ ಸಮರತಿ ತೋರಿ ಪಾಡಿದುಶ್ಯಾಸನ ವಕ್ಷೋವಿಧಾರಿ ದ್ರೌಪಧಿ ಕುಚಕಂಜ ಕುಟ್ಮಲಧಾ 2 ಸ್ವಾನಂದ ಪರಿಪೂರ್ಣ ಕೃಷ್ಣನ ದಾಸ ಆನಂದತೀರ್ಥ ತೋರುವ ಮಂದಹಾಸ ಶ್ರೀನಿಧಿ ವೆಂಕಟೇಶನ ನಂಬಿದವರ ತಾನೆ ಬಂದೊದಗಿ ಪಾಲಿಪ ದೇವಪ್ರವರ 3
--------------
ತುಪಾಕಿ ವೆಂಕಟರಮಣಾಚಾರ್ಯ
ಜೋ ಜೋ ಪ ಜೋ ಜೋ ಜೋ ಜೋ ಜೋ ಗುರುರಾಜಾಜೋ ಜೋ ಜೋ ಜೋ | ಯತಿ ಮಹರಾಜಾ | ಜೋಜೋಅ.ಪ. ಮೋದ ಮುನಿ ಮತವವಾದಿಗಳ ಜಯಿಸುತ್ತ | ವೇದಾರ್ಥ ಪೇಳಿ |ಸಾಧು ಸಮ್ಮತವೆನೆ | ಗ್ರಂಥ ಬಹು ರಚಿಸೀ ಆದುದಾಯಾಸವು | ಮಲಗೊ ಗುರುರಾಯ | ಜೋ ಜೋ 1 ಯೋಗಿಗಳೊಡೆಯನೆ | ಯೋಗೀಂದ್ರ ವಂದ್ಯಾಭೋಗಿ ಶಯ್ಯನ ಭಕ್ತ | ಗುರುರಾಘವೇಂದ್ರ |ಭಾಗವತರ ಬಯಕೆ | ಸಲಿಸಿ ವೇಗದಲಿಂದಯೋಗ ನಿದ್ರೆಯ ಮಾಡೆ | ಮಲಗೊ ಮುನೀಂದ್ರಾ | ಜೋಜೋ 2 ಎರಡೆರೆಡು ಮುಖದಿಂದ | ವೃಂದಾವನದಿಂದಶರಣರಿಗಾನಂದ | ಸುರಿಸಿ ಹರಿಯಿಂದ |ಗುರು ಗೋವಿಂದ ವಿಠಲನ | ಧ್ಯಾನ ಆನಂದಪರವಶದಲಿ ಮಲಗೊ | ಗುರು ರಾಘವೇಂದ್ರ | ಜೋಜೋ 3
--------------
ಗುರುಗೋವಿಂದವಿಠಲರು