ಒಟ್ಟು 1937 ಕಡೆಗಳಲ್ಲಿ , 104 ದಾಸರು , 1449 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನಿನ್ನನ್ನೆ ನಂಬಿದೆನೊ ಪನ್ನಂಗಶಾಯಿ ಎನ್ನ ನೀ ಕಾಯಬೇಕೊ ಪ ದೀನದಯಾಳು ದೇವ ನೀನೆ ಕಾಯದೆ ಬಿಟ್ಟ ರಿನ್ನಾರು ಕಾಯ್ವರು ಎನ್ನನೀ ಜಗದೊಳುಅ.ಪ ಉನ್ನತ ಹೃದಯನೆ ಮುನ್ನ ನಾ ಮಾಡಿದ ಗನ್ನಗತಕತನವನ್ನು ದಯದಿ ಕ್ಷಮಿಸು ಇನ್ನೀಭವದಿ ಎನಗೆ ನಿನ್ನಯ ಸನ್ನುತಿ ಯನ್ನು ಪಾಲಿಸಿ ಸತತ ಬನ್ನಬಡಿಸದೆ ಕಾಯೊ 1 ಶರಣಾಗತರಕ್ಷಣಾನಾಥಜನಬಂಧುವೇ ಕರುಣದಿ ನಿಮ್ಮಂಥ ದೇವರನುಕಾಣೆ ದುರಿತದೂರನೆ ಎನ್ನ ದುರಿತದುರ್ಗಣವನ್ನು ಪರಿಹರಿಸಿ ಸಲಹಯ್ಯ ಶರಣುಜನರ ಪ್ರೀಯ 2 ಕೈಯ ಪಿಡಿದು ಪೊರೆಯೊ ಬಿಡದೆನಮ್ಮಯ್ಯ ಜಗ ದಯ್ಯ ಶ್ರೀರಾಮ ವಿಜಯವಿಠಲರಾಯ ಕೈಯ ಮುಗಿದು ಮರೆಹೊಕ್ಕು ಬೇಡುವೆಯ್ಯ ಜೀಯ ದಯದಿ ಕಾಯೊ ಪಂಢರಿರಾಯ 3
--------------
ರಾಮದಾಸರು
ನಿನ್ನವ ನಾನೆಂದು ಸಿರಿನಲ್ಲಾ ರಕ್ಷಿಸೋ | ಎನ್ನವಗುಣಗಳ ಎಣಿಸದೆ ದಯದಿಂದ ಪ ನಿನ್ನ ಮೂರುತಿಯ ಬೆಳಗವದೋರಿಸಿ | ನಿನ್ನ ಪಾದಾಂಬುಜ ಪರಿಮಳ ಸುಳಿಸಿ | ನಿನ್ನ ನಾಮಾಮೃತ ಸವಿಸವಿ ಉಣಿಸಿ1 ನಿನ್ನ ಪೂಜಿಸಿಕೊಂಡು ಕರಗಳಿಂದ | ಚೆನ್ನಾಗಿ ಪ್ರದಕ್ಷಿಣೆಯಾ ಪಾದಗಳಿಂದ | ಕಾಯ ನಮನದಿಂದ - ಎನ್ನ ಮನವಿಟ್ಟು ನಿನ್ನ ನೆನುವಿನಿಂದಾ2 ಅನುದಿನ ಕೊಟ್ಟು ನಿನ್ನ ದಾಸರ ಸಂಗ | ಕೊನೆದೇಳದಿರಲೆನ್ನಾ ವಿಶ್ರಾಮದಂಗ | ನೀನಾಗಿರು ತುಂಬಿಯೆನ್ನಾ ಬಾಹ್ಯಾಂತರಂಗ | ಘನಗುರು ಮಹಿಪತಿ ಪ್ರಭುಶ್ರೀರಂಗ3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ನಿನ್ನಾಜ್ಞದವನೊ ನಾನೆನ್ನನೊಪ್ಪಿಸದೆಬಿನ್ನಹ ಚಿತ್ತೈಸಿ ಎನ್ನ ಪಾಲಿಸೊ ಕೃಷ್ಣ ಪ ಏಳು ಸುತ್ತಿನಕೋಟೆ ಯಮನಾಳು ಮುತ್ತಿಕೊಂಡುಪಾಳು ಮಾಡೇವೆಂದು ಪೇಳುತಿರಲುಆಳು ಸಾಮಗ್ರಿಯ ಅಪಾರ ಬಲಮಾಡಿಕೋಳುಹೋಗದ ಮುನ್ನ ಕೋಟೆ ರಕ್ಷಿಸಬೇಕು 1 ಆರು ಮೂರರ ಬಾಧೆ ಆರು ಎಂಟರ ಬಾಧೆಕ್ರೂರರೈವರ ಬಾಧೆ ಹೋರುತಲಿದಕೋಆರಿಂದ ನಿರ್ವಾಹವಾಗದು ಇವರನುಮೇರೆಲಿಡುವನೊಬ್ಬ ಧೀರನ್ನ ಬಲಮಾಡೊ2 ಲಕ್ಷ ಎಂಭತ್ತು ನಾಲ್ಕು ಜೀವರಾಶಿಗಳೊಳುಸೂಕ್ಷ್ಮದ ಕೋಟೆಂದುಪೇಕ್ಷಿಸದೆಪಕ್ಷಿವಾಹನ ನೀನು ಪ್ರತ್ಯಕ್ಷ ನಿಂತರೆಅಕ್ಷಯ ಬಲವೆನಗೆ ರಕ್ಷಿಸೊ ಸಿರಿಕೃಷ್ಣ 3
--------------
ವ್ಯಾಸರಾಯರು
ನಿನ್ನಾಧೀನ ----------- ವೆಂಕಟಾದ್ರಿವಾಸ ವೆಂಕಟ ಪರಹರಿಸೊ ನೀ ಎನ್ನ ಸಂಕಟ ಪ ಚಿನ್ಮಯ-----ನಾದ-----ಶ್ರೀನಿವಾಸ ಪರಮಪುರಷ ಮುನ್ನ ನಾ ಮಾಡಿದ ದೋಷದಿಂದ ಅಮಲನಾಗಿ ವ್ಯರ್ಥ ಬಳಲುತಿಹೆನಾ ------ ಘನವೆ ನಿನಗೆ ಇರುವುದಿನ್ನು ಅನಿಮಿಷವು ನಿಮ್ಮ ಧ್ಯಾನದಲ್ಲಿ ಮಗ್ನರಾದ ಅವರಾ 1 ಶರಣರಾದ ಅವರಾ ಪೊರೆವ ಬಿರುದು ನಿನ್ನದಾಗಿ ಇರಲು ಪರಮ ಪತಿತ ಪಾವನನೆ ಭಕ್ತ ಜನರ ಬಿಡದೆ ಕಾಯ್ವ ಧೊರಿಯು ನೀನೇ ಎಂದು ನಿನ್ನ ಚರಣಕಮಲ ನೆಚ್ಚಿದವನಾ ಪರಿವೆ ಮಾಡದೆ ಇರುವುದಿನ್ನು ಭರದಿ ಮೋಚನ ಪಾಪನಾಶನ 2 --------ದೊಳಧಿಕನಾದವನ ವರಹೊನ್ನ ನಿ--------- ನಿಗಮಗೋಚರ 'ಹೊನ್ನವಿಠ್ಠಲಾ’ ನಿತ್ಯ ಸತ್ಯ ಜಗವಿಲಾಸ --------ಯಿಂದ ನಿನ್ನ ಪಾಡುವಂಥ ಭಜಕರನ್ನ------------- ರಕ್ಷಿಸುವ ಅಭಯ ನಿನ್ನದಾಗಿ ಇರಲೂ 3
--------------
ಹೆನ್ನೆರಂಗದಾಸರು
ನಿನ್ಹೊರತು ಪೊರೆವರಲಿಲ್ಲ ಹರಿ ಮುರಾರಿ ಪ. ಪೂರ್ಣಾತ್ಪೂರ್ಣ ಕ್ಷೀರಾರ್ಣವ ಶಯನ ವ- ರೇಣ್ಯ ಸ್ವತಂತ್ರವಿಹಾರಿ 1 ಜೀವನಿಚಯಕೃತ ಸೇವೆಯ ಕೈಗೊಂಡು ಪಾವನಗೈವೆ ಖರಾರಿ 2 ತಾಪತ್ರಯಹರ ಗೋಪಾಲ ವಿಠಲ ಆಪನ್ನಭಯನಿವಾರಿ 3 ಪ್ರಾಣನಾಥ ಸರ್ವ ಪ್ರಾಣನಿಯಾಮಕ ಪ್ರಾಣದಾನಂತಾವತಾರಿ 4 ಲಕ್ಷ್ಮೀನಾರಾಯಣ ಬ್ರಹ್ಮಾದಿ ವಿ- ಲಕ್ಷಣ ರಕ್ಷಣಕಾರಿ 5
--------------
ತುಪಾಕಿ ವೆಂಕಟರಮಣಾಚಾರ್ಯ
ನಿರಂಜನ ಈಶ ಬಾರೊ ಕಾವ ಕರುಣ ಭವಭಂಜನ ಗುರು ಆತ್ಮ ಹಂಸ ಬಾರೊ ಧ್ರುವ ಅಗಣಿತ ಗುಣ ಅಗಾಧ ಅಪಾರಾಗಮ್ಯ ಬಾರೊ ನಿತ್ಯ ನಿರ್ಗುಣಾನಂದನುಪಮ್ಯ ಬಾರೊ ಯೋಗಿ ಜನರ ಹೃದಯ ಮುನಿಮನೋರಮ್ಯ ಬಾರೊ ಜಗದೊಳು ಭಕ್ತಜನರಿಗೆ ಪೂರಿತಕಾಮ್ಯ ಬಾರೊ 1 ಝಗಿಝಗಿಸುವ ಜಗಜ್ಯೋತಿ ಜಗನ್ಮೋಹನ ಬಾರೊ ಮಘ ಮಘ ಮಿಂಚುವ ಮಗುಟಮಣಿ ಗುಣರನ್ನ ಬಾರೊ ಬಗೆಬಗೆಯಿಂದ ಸದ್ಗೈಸುವ ಪತಿತಪಾವನ್ನ ಬಾರೊ 2 ಋಷಿ ಮುನಿವಂದಿತ ಸಾಧು ಜನ ಹೃದಯ ಬಾರೊ ಗುಹ್ಯ ಬಾರೊ ದಾಸ ಮಹಿಪತಿಯ ರಕ್ಷಿಸುವ ಪ್ರಾಣ ಪ್ರಿಯ ಬಾರೊ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ನಿರ್ಜರ ಸಾರ್ವ ಭೌಮಾ ದನುಜಕುಲಭೀಮಾ ಭೀಮಾ ರಘು ಸದ್ವಂಶದೊಳು ದ್ದಾಮಾ ಕಾದುಕೋ ನಿನ್ನ ಭಕ್ತ ಸ್ತೋಮ ಮಂಗಳನಾಮ ಹನುಮ ತ್ಪ್ರೇಮಾತಮ ಸೀತಾ ಮನೋಭಿರಾಮ ಪ ಸರಸಿಜೋದ್ಭವನ ಮಂದಿರದೊಳರ್ಚನೆಗೊಂಡು ನಿರುತಾ ಪಾವನತರ ಚರಿತಾ ಸರ್ವದೇವರ ದೇವ ಇಷ್ಟಾಕರ ರಸನ್ವಯ ನೃ ಪರಕರವಾರಿರುಹ ಪೂಜಿತನಾಗಿ ದಶರಥಾ ನರಸಿ ಜಠರದಿ ಜನಿಸಿ ಮೆರೆದಿಹ ರಾಮಾ 1 ಗಾಧಿನಂದನನ ಸುಮೇಧಾ ರಕ್ಷಿಸಿದಾ ಗಾಧನಂದ ಬಲಬೋಧಾ ಮೇದಿನಿ ಜಾತಳನೊಲಿಸಲು ನೀಲ ಪ ಯೋಧರ ಶಾಮಲ ಸುಮನಸ ವಿ ರೋಧಿ ಲೋಕಮಯ ಸದೆದ ರಘುರಾಮಾ 2 ಚತುರವಿಂಶತಿ ದಶಶತ ಸಹಸ್ರ ಜಿತಾದ್ಯಮಿತಾ ಆದ್ಯಮಿತ ರೂಪ ಜಗನ್ನಮಿತಾ ಅತುಳ ಭುಜಬಲ ರಾವಣನ ಸಂ ತತಿ ಸವರಿ ಲಂಕಾಧಿಪತ್ಯ ನತ ವಿಭೀಷಣಗಿತ್ತಾ ವರದೇಂದ್ರ ಯತಿ ವರದ ಜಗನ್ನಾಥ ವಿಠ್ಠಲ ರಾಮಾ 3
--------------
ಜಗನ್ನಾಥದಾಸರು
ನಿರ್ಮಲವಿಧಹಾಸಂ ಪ ಮಾನಂದ ವಿಲಾಸಂ ಅ.ಪ ಶ್ರೀವೇದಪುಷ್ಕರಿಣೇ ತಟ ಶ್ರೀ ಕರೋದ್ಯಾನ ವಿಹಾರಂ ಪಾವನವೃದ್ಧಿ ವಿಮಾನಾಂತರ ಪದ್ಮಾಸನಕೃತ ನಿಜಪಾರಿಚಾರಂ 1 ಸಕಲಲೋಕಸಂರಕ್ಷಣಶೀಲನಸಂಪದಮಾತ್ರಿತಸುರಭೂಜಂ ನಿಜ ಸಂಸ್ತುತಿ ಭಾಜಂ 2 ಮುಕ್ತಿಸುಗುಣ ಮುದಾರಂ 3
--------------
ವೆಂಕಟವರದಾರ್ಯರು
ನಿಲ್ಲ ಬಾ ನಿಲ್ಲ ಬಾ ಮೆಲ್ಲಮೆಲ್ಲನೆ ಹೆಜ್ಜೆನಿಟ್ಟುನಿಲ್ಲ ಬಾರೋ ಕೃಷ್ಣಾ ನಿಲ್ಲ ಬಾರೋ ಪ ದುಷ್ಟ ಪೂತನಿಯ ದೊಡ್ಡ ಹೊಟ್ಟೆಯೊಳಾಡಿದಿ ಮಂದಿದೃಷ್ಟಿ ತಾಕಿಹುದೊ ರಕ್ಷೆನಿಟ್ಟು ಮುದ್ದಿಸುವೆ 1 ಆಲಯದಂಗಳದೊಳು ಲೀಲೆ ಮಾಡುವಿಯೊ ಕೆಟ್ಟಬಾಲೆಯರ ಗಾಳಿ ಸೋಕಿಹುದೋ ಹಣ್ಣು ನಿವಾಳಿಸಿಒಗೆವೆ ಕೃಷ್ಣ 2 ಇಂದಿರೇಶ ನಿನ್ನ ಬಹುಮಂದಿ ನೋಡುವರೋ ದೃಷ್ಟಿಇಂದು ಆಗಿಹುದೊ ಮಾಳ್ಪೆ ಕದಲಾರತಿಯ ಕೂಸೆ 3
--------------
ಇಂದಿರೇಶರು
ನಿಲ್ಲು ನಿಲ್ಲು ಕೃಷ್ಣ ನಿನ್ನ ಸೊಲ್ಲ ಮುರಿಯ ಬಂದೆವು ಸೊಲ್ಲ ಮುರಿಯ ಬಂದೆವು ಈ ಕಳ್ಳತನವ ಸಹಿಸೆವು 1 ದಿಕ್ಕು ರಕ್ಷಿಪರಿಗೆ ದಿಕ್ಕು ಕಾಣದಂತೆ ಇರುವುದು ಸೊಕ್ಕು ಮುರಿದು ನಿಮ್ಮ ಕಾರ್ಯ ಧಿಕ್ಕರಿಸುವೆ ಕ್ಷಣದಲಿ 2 ಈಡುಮಾಡಲೇಕೆ ಇಂಥ ಕೇಡಿಗೆ ಈ ಅಬಲೆಯ ನೋಡಿ ಎಮ್ಮ ಅವಿತುಕೊಂಡ ಹೇಡಿ ಇವನ ಬಿಡುವೆನೆ 3 ಎಂಟು ಜನ ದಿಕ್ಪಾಲಕರು ಸೊಂಟ ಮುರಿವ ರಾಣಿಯ ಶೌರಿ ತಂಟೆಗಾರು ಬರುವರು 4 (ಸತ್ಯಭಾಮೆ ಮತ್ತು ದೇವೇಂದ್ರನ ವನಪಾಲಕರ ಸಂವಾದ)
--------------
ವಿದ್ಯಾಪ್ರಸನ್ನತೀರ್ಥರು
ನೀ ಯನ್ನ ಸಲಹುತಿಹೆ ಜನುಮ ಜನುಮಗಳಲ್ಲಿ| ದಾನವಾರಿಯೆ ಉರಗಶಯನ ಸಿರಿರಂಗರೇಯಾ ಪ ಮುದದಿಂದ ತನ್ನ ಮಕ್ಕಳನು ತಾ ನೆನಿಯಲಿಕೆ| ಅದರಿಂದ ಪದಳಿಸುವ ಕಮಠದಂತೆ| ಉದರದಲಿ ನವಮಾಸ ವಾಸಾಗಿ ಬೆಳೆಯುತಿರೆ| ಪದುನಾಭನೆ ನಿಮ್ಮದಯದಿ ವರ್ಧಿಸಿದೆನಯ್ಯಾ 1 ಜಲಧಿಯೊಳಗ ತನ್ನ ನೋಟದಿ ನೋಡಲಾಕ್ಷಣ ದಿ| ಎಳೆಮೀನಗಳು ಬಹಳ ಸುಖಿಸುವಂತೆ| ಇಳೆಯೊಳಗ ಜನಿಸಿದ ಬಳಿಕ ಕರುಣ ನೋಟದಾ| ಒಲುಮಿಂದ ಸಕಲ ಸೌಖ್ಯದಲಿರುತಿಹೆನಯ್ಯಾ 2 ನಂದನನು ಪೋಷಿಸುವ ಮಾತೆಯಂದದದಿ ದುರಿತ| ಬಂದಡರೆ ಅಡಿಗಡಿಗೆ ಪರಿಹರಿಸುತಾ| ಕುಂದ ದಾವಾಗ ರಕ್ಷಿಪೆ ತಂದೆ ಮಹಿಪತಿ ಕಂದ ನೊಡಿಯನೇ ಚಿದಾನಂದ ಮೂರುತಿ ದೇವಾ3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ನೀಡುತಲಿ ಕೃಪೆ ಮಾಡೊ ಸಿರಿವರನೆ ಪ ಹೇಡಿ ಜನ್ಮದೊಳಿಡದೆ ರಕ್ಷಿಸೊ ಅ.ಪ ನ್ನಿಷ್ಟ ಪಾಲಿಸೋ ಲಕ್ಷ್ಮಿಯೊಲ್ಲಭ 1 ನಾಗಶಯನ ಯೆನ್ನಾಗಮನವ ಬಲ್ಲೆ | ಸರ್ವಾತ್ಮ ಶಾಸ್ತ್ರ ನಿ- ಬಿಗಿದು ಪಿಡಿದೆನು ನಿನ್ನ ಪಾದವ 2 ಭವ ಕರುಣಾಸಾಗರ ಗುರು ಸದಾನಂದ3
--------------
ಸದಾನಂದರು
ನೀದಯಮಾಡಿ ಸಲಹೊ ಎನ್ನ ಪರಮಾತ್ಮ ಭವ ತೊಡರು ಬಿಡಿಸೊ ಪರಮಾತ್ಮ ಪ -----ಸಂಖ್ಯಾನೂರು ಬಳಲುತಿರೆ ಪರಮಾತ್ಮ ಇವರ ಸಂಚಿತವು ಏನೋ ಕಾಣೆನು ಪರಮಾತ್ಮ ಕೋಟಿ ಉದ್ಯೋಗದವರು ---- ಪರಮಾತ್ಮ ಪ್ರಪಂಚಕ್ಕೆ ಸರಿ ಕಾಣಲಿಲ್ಲ ಪರಮಾತ್ಮ 1 ನಾನಾ ಪರಿಯಿಂದ ನಡೆದೆ ಕಷ್ಟದಿಂದ ಪರಮಾತ್ಮ ನಿಮ್ಮ ಧ್ಯಾನವು ಎನ್ನ ಮನಕೆ ನಿಲಕದು ಪರಮಾತ್ಮ ------- ಜೀವಕೆ ಇನ್ನು ಪರಮಾತ್ಮ ಸುಜ್ಞಾನಿಗಳಿಗೆ ಜೀವನ ನೀನು ಪರಮಾತ್ಮ 2 ಸಾರಜಗವ ರಕ್ಷಿಸುವಂಥ ಪರಮಾತ್ಮ ನಿ- ಸ್ಸಾರ ಮಾಡುವರೆ ಎನ್ನ ಪರಮಾತ್ಮ ವೀರ ' ಹೊನ್ನ ವಿಠ್ಠಲಾ’ ಶ್ರೀ ಪರಮಾತ್ಮ ಗುಣ ಗಂಭೀರ ಪುಣ್ಯಪರುಷ ಕೇಳೊ ಪರಮಾತ್ಮ 3
--------------
ಹೆನ್ನೆರಂಗದಾಸರು
ನೀನಲ್ಲದನ್ಯವೆನಗಿಲ್ಲ ನಾರದ ವರದಏನೆಂಬೆ ಸರ್ವರಿಗು ನೀನೆಯಹುದಾದಡೆಯು ಪಧನದ ಬಲವುಳ್ಳವರು ಧರ್ಮಗಳ ಮಾಡುವರುಮನದ ಮೇಧಾವಿಗಳು ಮಂತ್ರಿಸುವರು ತನುವಿನಲಿ ತ್ರಾಣಿಗಳು ತೀರ್ಥಗಳ ಪಡೆಯುವರುಅನುವದಿಸಿ ವೇದಗಳನವರಾಢ್ಯರಹರು 1ತನುವ ದಂಡಿಸಿ ಪೂಜ್ಯ ತನುವಾದರವರ್ಗುಂಟುಧನದ ತ್ಯಾಗದಿ ಮುಂದೆ ದೈನ್ಯ ಹರವುಮನವ ನಿಗ್ರಹಿಸಿದರೆ ಮುಖ್ಯ ಜ್ಞಾನವುಬಹುದುಇನಿತಾದರವರ್ಗಿರುವದೇನುಂಟು ನನಗೆ 2ಇತರ ಮಾತುಗಳಾಡದೀ ವಾಕನೊಳಗಿರಿಸಿಮಿತವಾಗಿ ಸತ್ಯಯುತಮಾಗಿ ನುಡಿಸಿಅತಿದೋಷಗಳು ಹೋಗಿಯವರ್ಗೆ ಮುಂದಣ ಭವದಿವಿತತವಾಹದವಿದ್ಯೆ ವಿವರಿಸಲಿದುಂಟೆ 3ಸತತವೂ ಧನವಿಲ್ಲ ಸಾಧು ಸಮ ತನುವಿಲ್ಲವ್ರತತೀರ್ಥಗಳಲಾಡಿದೊಡಲಿದಲ್ಲಮತಿಯಲ್ಲಿ ನೋಡಿದರೆ ಮಂತ್ರ ಮನನಗಳಿಲ್ಲಸ್ತುತಿ ಮಾಳ್ಪ ಸೂಕ್ತಗಳ ಸೊಲ್ಲು ತಾನಿಲ್ಲ 4ಹಿಂದಾದ ಮುಂದೆ ಬಹ ಹೊಂದಿದೀ ಭವ ಸಹಿತತಂದೆ ಕಣ್ದೆರಪಾಗಿ ತಾ ತೋರಿತುಬಿಂದು ಸಾಧನವಿಲ್ಲದೊಡಲೊಂದು ಲಭಿಸಿರಲುಬಂಧವನು ಬಿಡಿಸುವರೆ ಬಂದೆ ಗುರುವಾಗಿ 5ಪರಮ ಕರುಣಾಸಿಂಧು ಪತಿತ ಪಾವನ ಶೀಲದುರಿತಾಂಧಕಾರಕ್ಕೆ ದಿವಸಕರನುಹರಿ ದೀನವತ್ಸಲನು ಹಾಗನಾಥರ ತಾನುಹೊರೆವನೆಂಬೀ ಮಾತು ಹುಸಿಯಾಗಲಿಲ್ಲ 6ನನ್ನನೀಪರಿಯಲ್ಲಿ ನೋಡಿ ಸಲಹಿದ ಮೇಲೆುನ್ನೇಕೆ ಸಂದೇಹವಿದೆ ಚೋದ್ಯವುಸನ್ನುತನೆ ತಿರುಪತಿಯ ಸ್ವಾಮಿ ವೆಂಕಟರಮಣನಿನ್ನಡಿಯ ಸ್ಮರಣೆಯನು ನನಗಿತ್ತೆಯಾಗಿ 7ಕಂ|| ಭೃಗುವಾರದರ್ಚನೆಯನಿದಭೃಗುಸುತೆ ಸಹ ನೀನು ಕೊಳುತೆ ರಕ್ಷಿಸುಯೆನ್ನಂಹೊಗಲಾರೆನು ಭವಸಿಂಧುವನಿಗಮಾರಾಧಿತನೆ ದೇವ ವೆಂಕಟರಮಣಾಓಂ ಯಜ್ಞ ಭೋಕ್ತ್ರೇ ನಮಃ
--------------
ತಿಮ್ಮಪ್ಪದಾಸರು
ನೀನಹುದೊ ನಮ್ಮೊಡಿಯ ಘನ ಗುರು ನಾ ನಿಮ್ಮ ಕಂಡೆ ಅಯ್ಯ ಧ್ರುವ ನಾ ನಿಮ್ಮ ಪರಿವಾರ ನಾ ನಿಮ್ಮ ಕಿಂಕರ ನೀ ನಮ್ಮ ಸಹಕಾರ ಬಡಿವಾರ 1 ನಾ ನಿಮ್ಮ ಬಾಲಕ ನೀ ನಮ್ಮ ಪಾಲಕ ನಾ ನಿಮ್ಮ ಸೇವಕ ನೀ ನಮ್ಮ ರಕ್ಷಕ 2 ನಾ ನಿಮ್ಮ ಉದ್ಧೇಶ ನೀ ನಮ್ಮ ಪ್ರಾಣೇಶ ನಾ ನಿಮ್ಮ ಸಹವಾಸ ನೀ ನಮ್ಮ ಅಭ್ಯಾಸ 3 ನಾ ನಿಮ್ಮ ಅಣುಗ ನೀ ನಮ್ಮ ಸರ್ವಾಂಗ ನಾ ನಿಮ್ಮ ಬಳಗ ನೀ ನಮ್ಮ ಬಳಗ 4 ನಾ ನಿಮ್ಮ ಶರಣ ನೀ ನಮ್ಮ ಕರುಣ ನಾ ನಿಮ್ಮ ನಿರ್ಗುಣ ನೀ ನಮ್ಮ ಭೂಷಣ 5 ನಾ ನಿಮ್ಮ ನಿರ್ಮಿತ ನೀ ನಮ್ಮ ಸಹಿತ ನಾ ನಿಮ್ಮ ಆಶ್ರಿತ ನೀ ನಮ್ಮ ಸುದಾತ 6 ನಾ ನಿಮ್ಮ ಅಂಕಿತವೃತ್ತಿ ನಿಮ್ಮ ನಮ್ಮ ವಸ್ತುಗತಿ ನಾ ನಿಮ್ಮ ಮಹಿಪತಿ ನೀ ನಮ್ಮ ಶ್ರೀಪತಿ 7
--------------
ಕಾಖಂಡಕಿ ಶ್ರೀ ಮಹಿಪತಿರಾಯರು