ಒಟ್ಟು 1527 ಕಡೆಗಳಲ್ಲಿ , 100 ದಾಸರು , 1115 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಭಜಿಸಿದ್ಯಾ | ವೆಂಕಟನಾ ನೀ | ಭಜಿಸಿದ್ಯಾ ಪ ಭಜಿಸಿದ್ಯ ಈ ಭಾಗ್ಯನಿಧಿಯ | ನೋಡು | ತ್ರಿಜಗವಂದಿತ ಗುಣಾಂಬುಧಿಯಾ ||ಆಹ|| ಪಂಕಜ ಕರ್ಣಿಕೆ ವಾಸ | ಅಜ ಸುರಾರ್ಚಿತ ಪಾದರಜ ತಮದೂರನ್ನ ಅ.ಪ. ಮನ ಸೋಲಿಸುವ ಸುಲಲಾಟ | ಚನ್ನ | ಫಣಿಗೆ ಕಸ್ತೂರಿನಾಮ ಮಾಟ | ನ ಮ್ಮನು ಪಾಲಿಸುವ ವಾರೆನೋಟ |ಆಹ| ಕನಕ ಮೋಹನ ಕುಂಡಲಾ ಕರ್ಣ ಮಿನುಗುವ ಕದವು ಆವಿನ ಸೋಲಿಪ ನಿತ್ಯಾ1 ಭೃಂಗಕುಂತಳ ನೀಲಕೇಶ | ಹುಬ್ಬು | ಚಾಪ ವಿಲಾಸ | ಉ | ತ್ತುಂಗ ಚಂಪಕ ಕೋಶನಾಸ | ರಸ ರಂಗು ತುಟಿ ಮಂದಹಾಸ || ಆಹ || ತಿಂಗಳು ಯೆಳೆ ಬೆಳೆದಿಂಗಳು ಮೀರಿ ಭೂ ಕೃತಿ ತಿರುವೆಂಗಳ ಸ್ವಾಮಿಯ 2 ಪರಿಮಳವೀಳ್ಯ ಕರ್ಪೂರ | ಇಟ್ಟು | ಜಲಧಿ ಗಂಭೀರ | ದಂತ ಪರಿಪಜ್ಞೆ ಸಮ ವಿಸ್ತಾರ ||ಆಹ || ಮಿನುಗುವನಂತ ಚಂದೀರ ತೇಜಾಧಿಕ ಮುಖ ಪರಿಪರಿ ವೇದ ಉಚ್ಚರಿಸುವ ಚತುರಾರ 3 ಬಕುಳಾರವಿಂದ ಮಲ್ಲೀಗೆ | ಅದು | ಕುರುವಕ ಪನ್ನೀರು ಸಂಪಿಗೆ | ಭೂಚಂಪಕ ಜಾಜಿ ಯಿರುವಂತಿಗೆ | ಪೂಕೇತಕಿ ಮರುಗ ಶಾವಂತಿಗೆ ||ಆಹ|| ಸಕಲ ಪೂತರುವಿರೆ ವಿಕಸಿತ ಮುಕುಳಿತ ಮಕರಂದ ಮೊರದ್ವಂದ್ವ ಕಸ್ತೂರಿಯ ನಿಂದು4 ಕರತಾಳರೇಖೋಪರೇಖ | ಕಾಂತಿ | ಅರುಣಸಾರಥಿ ಮಯೂಖ | ಬೇರೆ | ಪರಿ ಶೊಭಿತ ಹಸ್ತ ಶಂಖ | ಗದೆ | ಧರಿಸಿದ ಚಕ್ರ ನಿಶ್ಶಂಕ || ಆಹ | ಸರಿಗೆ ಕೌಸ್ತಭಮಣಿ ಸಿರಿವತ್ಸವನ ಮಾಲೆ ವೈಜಯಂತಿ ಮಂಜರಹೀರ ಹಾರನ್ನ5 ಕಡಗ ಕಂಕಣ ಮುದ್ರೆ ಬೆರಳ | ಪಾಣಿ | ನಿಡಿತೋಳ ಕಕುಭುಜಿ ಕೊರಳ ಸ್ಕಂಧ ವಿಡಿ ಸಪ್ತವರಣ ವಿಸರಳ | ಬೆನ್ನು | ಮುಡಿಯವಿಟ್ಟ ಮಣಿಹವಳ ||ಆಹ | ಝಡಿತದ ಪವಳ ವಡಸೀದ ಕೇಯೂರ ವಡನೆ ಕಾಯಿಕ ಕೀರ್ತಿ ವಡಲೀಲಿ ಮೆರೆವನ್ನ6 ಮುತ್ತು ವೈಢೂರ್ಯ ಪ್ರವಾಳ | ಪಚ್ಚೆ | ಕೆತ್ತಿದ ಪದಕನ್ಯಾವಳ ಸುತ್ತ ಸುತ್ತಿದ ಸನ್ಮುಡಿವಾಳ | ಇತ್ತ ತುತಿಪ ಜನಕೆ ಜೀವಾಳ ||ಆಹ || ಪ್ರತ್ಯೇಕವಾಗಿ ತೂಗುತ್ತಿಹ ಸರಗಳ ಸುತ್ತುಲಸಿಯ ಮಾಲೆ ಚಿತ್ರವಾಗಿರೆ ಬಹಳ 7 ಕೇಸರಿ ಅಂಬರ | ಗೋರೋ ಚನ ನಖಚಂದ ನಗಾರು | ಪೆಚ್ಚಿ | ತೆನೆ ಮೃಗನಾಭಿ ಪನ್ನೀರ | ವೆಳ | ಘನಪರಿಮಳ ಗಂಧಸಾರ ||ಆಹ || ಸೊಗಸು ಸಲಿಸುತ್ತ ಒಪ್ಪುವ ಘನರುಹ ತ್ರಿವಳಿಯಾ 8 ತ್ರಿವಳಿ ಉಪಗೂಢ ಜಠರ | ಅಖಿ | ಳಾವನೀ ಧರಿಸಿದಾ ಧೀರಾ | ಮೇಲೆ | ಕುಸುಮ ಮಂದಿರಾ | ಮೃಗದೇವ ಉಡಿನಡು ಧಾರಾ ||ಆಹ || ಭಾವ ಕಿಂಕಿಣಿ ತೋಳಲಿವಾಸನಾ ಬಿರು ದಾವಳಿಕೊಂಡರು ದೈತ್ಯಾವಳಿ ಹಾರನ್ನಾ 9 ಊರು ಜಾನು ಜಂಘ ಗುಲ್ಫ | ವಿ ಚಾರ ಶಕ್ರ ಮಾತು ಅಲ್ಪ | ಎನ್ನ ತೋರುನೆಯ ಅಗ್ರ ಸ್ವಲ್ಪ | ಗುಣ | ಸಾರಮಾಡಿಪ್ಪ ಸಂಕಲ್ಪ ||ಆಹ || ವಾರಣಕರದಂತೆ ಹಾರೈಸು ಈ ತನೂ ಪುರ ಕಡಗಾ ಗೆಜ್ಜೆ ಚಾರುಚರಣ ಪೆಂಡ್ಯಾ10 ಪಾದ | ಪಾಪ ಪಾದ | ಕಾಮ ಪಾದ | ಬಹು ಪಾದ ||ಆಹಾ|| ಅನಂತ ಚಿನ್ಮಯ ಒಮ್ಮೆ ನೀನೇ ಗತಿಯೆಂಬ ಮಾನವಗೆ ಬಂದು ಕಾಣಿಸಿಕೊಂಬನ11 ಮೃದುತಾಳಾಂಗುಲಿನಿಸಿ ಭಾಸ | ರಕ್ತ ಪದತಳ ಧ್ವಜ ವಜ್ರಾಂಕುಶ | ಚಕ್ರ ಪದುಮ ಚಿಹ್ನೆ | ನಿರ್ದೋಷ | ಸುಧಿ ಸುಧ ಕಥಾಪಾಠ ಸರಸÀ ||ಆಹ|| ತ್ರಿದಶನಾಯಕ ಶಿವ ವಿಧಿಗಮುಗುಟ ಪಾದದಲಿ ಸಮರ್ಥವಾದರು ನೋಡು ತರುವಾಯ 12 ಆಪದ್ರಕ್ಷಕ ಸುರಾಧ್ಯಕ್ಷ | ಜಗ | ದ್ವ್ಯಾಪಕ ಕರುಣಾಕಟಾಕ್ಷ | ಜಾಗ್ರತ್ | ಸ್ವಪ್ನದಲಿ ನೀನೆ ದಕ್ಷಾ | ನಗೆ | ಆಪನ್ನರಿಗೆ ನೀನೆ ವೃಕ್ಷಾ ||ಆಹ || ರೂಪರೂಪಾಂತರ ವ್ಯಾಪಾರ ಮಾಳ್ಪನ್ನ ಆಪಾದ ಮೌಳಿ ಪರಿಯಂತರ ನೀನು 13 ಹಿಂದಾಣ ಅನುಭವ ಧಾನ್ಯ | ಲೋಹ | ತಂದು ಸಂಪಾದಿಸೋ ಜ್ಞಾನ | ಭಕ್ತಿ | ಯಿಂದ ಮುಂದಕೆ ನಿಧಾನ | ಚಿತ್ತ | ಯಿಂದು ಕೊಂಡಾಡೋ ಮುನ್ನೀನ ||ಆಹ|| ಬಂಧನ ಹರಿಸಿ ಆನಂದಾವ ಕೊಡುವ ಮು- ಕುಂದ ಅನಿಮಿತ್ತ ಬಂಧು ವೆಂಕಟನಾ ನೀ14 ನಿತ್ಯ | ನೀಲ | ಪುಣ್ಯ | ವ್ರಜವ ಪಾಲಿಸುವ ವಿಶಾಲ | ವಿತ್ತು | ನಿಜದೊಳಗಿಡುವ ಈ ಕೋಲ ||ಆಹ|| ವ್ರಜದಲ್ಲಿ ಪುಟ್ಟಿದ ಸುಜನಾರಾಂಬುಧಿ ಸೋಮ | ವಿಜಯವಿಠ್ಠಲರೇಯ ಗಜರಾಜವರದನ್ನ 15
--------------
ವಿಜಯದಾಸ
ಭಯ ನಿವಾರಣ ಸುಳಾದಿ ನಾಕೇಶ ದೇವತತಿ ಆ ಕಮಲನಾಭ ಯತಿ ನಿಕರಗೊಲಿದನೆ ಶ್ರೀಕರವದನ ಸರ್ವಲೋಕಕಧಿಪ ಕೃಪಾ- ಲೋಕನದಲಿ ನೋಡಿ ಸುಖತೀರ್ಥನುತ ಚರಣ ವ್ಯಾಕುಲ ಬಿಡಿಸಿ ನಿನ್ನಾನೇಕ ಮಹಿಮೆ ತಿಳಿಸಿ ಜೋಕೆಯಿಂ ಕಾಯ್ದ ಗುರು ಆಕಾರಂತರ್ಯಾಮಿ ಈ ಕಾಲದಲಿ ಮನ ವ್ಯಾಕುಲಪಡಿಸುವ ಕಾಕು ಭಯವ ಬಿಡಿಸಿ ನೀ ಕಾಯಬೇಕೊ ದೇವ ಲೋಕ ಲೋಕಾದಿಗಳ ಸಾಕುವ ಭಾರಕರ್ತ ಆ ಕಮಲಭವನಭಯ ವ್ಯಾಕುಲ ಬಿಡಿಸಿದೆ ಲೋಕ ಸೃಷ್ಟಿಪ ಶಕ್ತಿ ಏಕಚಿತ್ತವ ಕೊಟ್ಟು ಲೋಕಲೋಕಾಧಿಪರ ನೀ ಕಾಯ್ದೆ ಕರುಣದಿ ಲೋಕವೆಲ್ಲವ ಕೊನೆಗೆ ಏಕಾಪೋಶನಗೈವ ಲೋಕಪತಿಯೆ ಭಕ್ತಾನೀಕಕÀಭಯದಾತ ಭೀಕರ ಬೆನ್ಹತ್ತಿ ತಾಕಿದ ಮನಸಿನ ವ್ಯಾಕುಲ ಭಯಬಿಡಿಸಿ ಜೋಕೆಯಿಂದಲಿ ಕಾಯೊ ಗೋಕುಲಾಂಬುಧಿ ಚಂದ್ರ ಗೋಪಾಲಕೃಷ್ಣವಿಠ್ಠಲ ಈ ಕಾಲಕೊದಗೆ ನಿನ್ನಾನೇಕ ಕೀರ್ತಿಯು ನಿಜವೋ 1 ಭಯ ನಿವಾರಕದೇವ ಭಕ್ತವತ್ಸಲ ನೀನೆ ದಯಮಾಡು ಮನಸಿನಲಿ ತಗುಲಿದ ಭಯವನೆ ಬಿಡಿಸಿ ಭಯಪಡಿಸುತಿರೆ ಖಳನು ಬಾಲಕನ ಪ್ರತಿದಿನದಿ ನಯವಿನಯದಿ ಕಂದ ನಿನ್ನನು ಮೊರೆಯಿಡೆ ಕೇಳಿ ದಯಮಾಡುತ ತರಳನಲಿ ಕನಲುತ ದೈತ್ಯನ ಕೊಂದು ಭಯ ಬಿಡಿಸಿದೆ ಬಾಲಕಗೆ ಭಕ್ತವತ್ಸಲ ನೃಹರೆ ಅಯೋನಿಜೆ ದ್ರೌಪದಿಗೊದಗಿದ ಅನುತಾಪಗಳನೆಲ್ಲ ದಯದಲ್ಲಿ ಪರಿಹರಿಸಿದ ಆಪದ್ಭಾಂಧವ ಸ್ವಾಮಿ ಭಯಪಡಿಸುತ ಭಸ್ಮಾಸುರ ಮೃತ್ಯುವಿನಂದದಿ ಮೃತ್ಯುಂ ಜಯನನು ಬೆನ್ನಟ್ಟಿ ಬರೆ ಹರನು ನಿನ್ನನು ಮೊರೆಹೋಗಲು ಸಂತೈಸಿ ತರುಣಿಯ ರೂಪದಿ ಖಳನ ಕೈಯಿಂದಲೆ ಅವನ ಶಿರ ಉರಿಸುತ ಶಿವನನು ಪೊರೆದೆ ಭಯಹಾರಕ ನರಹರೆ ಶ್ರೀ ಗೋಪಾಲಕೃಷ್ಣವಿಠ್ಠಲ ಜಯವಲ್ಲದೆ ದಾಸರಿಗೆ ಭಯವುಂಟೆ ಪೇಳೋ 2 ನಿತ್ಯ ನಿನ್ನನು ನಂಬಿ ಚಿತ್ತದಿ ನೆನೆವಂಥ ಆಪ್ತವರ್ಗಕೆ ಇನ್ನು ಮೃತ್ಯು ಭಯವು ಉಂಟಿ ಆಪ್ತನಲ್ಲವೆ ನೀನು ಚಿತ್ತಕಂಟಿದ ಭಯ ಮೃತ್ಯು ಪರಿಹರಿಸೈಯ್ಯ ಎತ್ತ ನೋಡಲು ನಿನ್ನ ವ್ಯಾಪ್ತಿ ಸುತ್ತಿರೆ ಜಗದಿ ಮೃತ್ಯುವೆತ್ತಣದೊ ನಿನ್ನುತ್ತಮ ಭಕ್ತರಿಗೆ ಇತ್ತ ದೇಹವು ನಿಂದು ಚಿತ್ತಾದಿಂದ್ರಿಯ ನಿಂದು ನಿತ್ಯ ನಡೆವ ಜೀವಕೃತ್ಯವು ನಿನದೈಯ್ಯ ಸುತ್ತುವೊ ಗ್ರಹಗತಿ ಮೃತ್ಯು ಪರಿವಾರವೆಲ್ಲ ಭೃತ್ಯರಲ್ಲವೆ ನಿನ್ನ ಚಿತ್ತಕ್ಕೆದುರಾಗುವರೆ ಭೃತ್ಯತ್ವದಲ್ಲಿರೆ ಎತ್ತಣ ಭಯವೈಯ್ಯ ಹತ್ತಿಕಾಡುವ ದುಷ್ಟಗ್ರಹಗಳ ಕಡೆಗೆ ನೂಕಿ ಚಿತ್ತ ನಿರ್ಮಲವಿತ್ತು ಮತ್ತೆ ಮಂಗಳವಿತ್ತು ನಿತ್ಯ ಕಾಯಲಿಬೇಕೊ ನಿನ್ನ ಸೇವೆಯನಿತ್ತು ಮೃತ್ಯು ಮೃತ್ಯುವೆ ಮಹಾದೈತ್ಯ ಸಂಹರಣನೆ ಚಿತ್ತದಲ್ಲಿ ನೀನು ಆಪ್ತನಾಗಿರೆ ಬೇರೆ ಹತ್ತಿಕಾಡುವ ಗ್ರಹ ಹತ್ತಿರ ಬರಲುಂಟೆ ಸಿರಿ ಗೋಪಾಲಕೃಷ್ಣವಿಠ್ಠಲ ಹತ್ತಿದ ಮೃತ್ಯು ಭಯ ಕಿತ್ತಿ ಬಿಸುಟು ಕಾಯೊ 3 ವಾಸುದೇವನೆ ನಿನ್ನ ದಾಸನ ಕಾಯುವಂಥ ಈಶನಲ್ಲವೆ ಜೀವರಾಶಿಗಳಿಗೆ ಬಿಂಬ ಸುಷುಪ್ತಿಯಲ್ಲಿ ಕಾವ ಆತ್ಮ ಆನಂದರೂಪ ತಾಸು ತಾಸಿಗೆ ಬಂದ ಭಯವ ಬಿಡಿಸುವದರಿದೆ ದಾಶರಥಿಯೆ ನಿನ್ನ ಅನುಜನ ಜೀವಭಯ ದಾಸ ಹನುಮನಿಂದ ಗಿರಿತರಿಸಿ ಹರಿಸಿದೆ ಆ ಸುಗ್ರೀವನ ಮೊರೆ ಕೇಳಿ ಅಭಯವಿತ್ತು ತೋಷದಿಂದಲಿ ಒಲಿದು ರಾಜ್ಯ ಸುಖವನಿತ್ತೆ ವಾಸವ ಮೊರೆಯಿಡೆ ಒಲಿದು ಅಮೃತವಿತ್ತು ಘಾಸಿಗೊಳಿಪ ಮೃತ್ಯುದೈತ್ಯರ ಸದೆಬಡಿದೆ ನಾಶರಹಿತ ನೃಹರಿ ಗೋಪಾಲಕೃಷ್ಣವಿಠ್ಠಲ ನಾಶದ ಭಯ ಉಂಟೆ ನಿನ್ನ ನಂಬಿದವರಿಗೆ 4 ತರಳತ್ವದಲಿ ಭಯವು ವರ ಯೌವ್ವನದಲಿ ಭಯವು ಜರೆ ಮರಣದಲಿ ಭಯವು ಪರಿಪರಿ ರೋಗದ ಭಯವು ಆರೆಘಳಿಗೆಯು ಬರದಂತೆ ಹರಿ ನೀ ಪರಿಹರಿಸುತಲಿ ಪರತರ ನಿನ್ನಯ ಮಂಗಳ ಚರಿತೆಯ ಸ್ಮರಣೆಯನಿತ್ತು ಹರಿಭಕ್ತರ ಕಾಯುವುದು ಬಿರುದಲ್ಲವೆ ನಿನಗಿನ್ನು ಪರಿಪರಿ ಭಯ ಕ್ಲೇಶಗಳ ಪರಿಹರ ಮಾಡುತ ಕಾಯೊ ವರಯಂತ್ರ ಮಂತ್ರಗಳು ಪರಿಪರಿ ಜಪ ಹೋಮಗಳು ತರತರದೌಷಧ ಪಥ್ಯ ನರಹರಿ ಎಲ್ಲವು ನೀನೆ ಹೊರಗೊಳಗೆಡಬಲದಲ್ಲಿ | ಮರೆವು ಸ್ಮರಣೆಗಳಲ್ಲಿ ಪರಿಪರಿ ಕ್ರೀಡೆಗಳಲ್ಲಿ ಚರಿಸುವ ಕರ್ಮಗಳಲ್ಲಿ ನೆರೆದಿಹ ಜನವೃಂದದಲಿ ಹಗಲಿರುಳು ಸಂಧಿಯಲಿ ಪರಿಪರಿ ಕಾಲಗಳಲ್ಲಿ ಪರಿಪರಿ ದೇಶಗಳಲ್ಲಿ ನರಹರಿ ದುರ್ಗಾಸಹಿತ ವರ ಮೃತ್ಯುಂಜಯ ವರದ ಸಿರಿಭಾರತಿಪತಿಸಹಿತ ಚರಿಸುತ ಬೆಂಬಿಡದಲೆ ನೀ ನಿರುತದಿ ಕಾಯಲಿಬೇಕೊ ಬರಿದನು ಮಾಡದೆ ಸ್ತುತಿಯ ವರ ಸುದರ್ಶನ ಪಾಂಚಜನ್ಯ ಪದ್ಮವ ಪಿಡಿದ ಪರಮ ಮಂಗಳರೂಪ ದೈತ್ಯರಿಗತಿ ಘೋರ ಗುರುಬಿಂಬನೆ ನೀನೆಂದು ಪರಿಪರಿ ಪ್ರಾರ್ಥಿಪೆನಿನ್ನು ಕೊರಗಿಸದಲೆ ಮನವನ್ನು ಹರಿ ಸೌಭಾಗ್ಯವನಿತ್ತು ಕರೆಕರೆಗೊಳಿಸದೆ ಕಾಯೊ ಕರುಣಾಬ್ಧಿಯೆ ದಾಸರನು ವರಭಾಗ್ಯವು ಆಯಸ್ಸು ಆರೋಗ್ಯಂಗಳೂ ಎಲ್ಲ ನಿರುತವಿರಲಿ ಬೇಕೊ ನಿನ್ನವರಿಗೆ ಸಾಧನಕೆ ಕರುಣಾಕರ ಗೋಪಾಲಕೃಷ್ಣವಿಠ್ಠಲ ನಿನ್ನ ಸ್ಮರಿಸಿದ ಮಾತ್ರದಿ ಸಕಲ ಭಯ ಪರಿಹಾರಕವೋ 5 ಜತೆ ನಿತ್ಯ ಮಂಗಳ ನಿನ್ನ ಸ್ಮರಿಪರ ಮನದ ಭಯವ ಕಿತ್ತು ಬಿಸುಟು ಸಲಹೋ ಗೋಪಾಲವಿಠ್ಠಲ
--------------
ಅಂಬಾಬಾಯಿ
ಭವ | ಬನ್ನ ಬಿಡಿಸಿ ಕಾಯೋ ಅಜಭವರಯ್ಯ ಪ ಆಶೆಯೆಂಬ ನದಿಯಲ್ಲಿ | ಘನ | ಸೂಸುವ ಮನೋರಥವ ಸೆಳವಿನಲಿ | ವಾಸನೆ ತೆರೆಗಳಿ ಬರಲಿ | ಬಲು | ಘಾಸಿಯಾಗುವೆ ಸಿಕ್ಕಿ ಮೋಹ ಸುಳಿಯಲಿ 1 ಉಲಿವ ಕುತರ್ಕ ಪಕ್ಷಿಗಳು | ನುಂಗ | ನಕ್ರ ಕಾಮಕ್ರೋಧಗಳು | ಬಲಿದು ವಿವೇಕ ಧಡಿಗಳು | ಕೋರೆ | ಯಲಿ ಬೀಳೆ ಧೃತಿ ಶಾಂತಿಯೆಂಬಾ ವೃಕ್ಷಗಳು2 ಸಿರಿ | ಕಾಂತ ನಿನ್ನಯ ನಾಮ ಹಡಗ ತಂದು | ಪಂಥಗಾಣಿಸೋ ಗತಿಗಿಂದು | ದಯ | ವಂತ ಗುರು ಮಹಿಪತಿ ಪ್ರಭು ದೀನ ಬಂಧು3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಭವ ಭಯಂಕರ ಪ ಶಂಕರ ತ್ವತ್ಪದ ಪಂಕಜದಲಿ ಮನ ಶಂಕೆಯಿಲ್ಲದೆ ಕೊಟ್ಟು ಕಿಂಕರನನು ಪೊರೆ 1 ಮೃತ್ಯುಪಾಶಕೆ ಸಿಕ್ಕಿ ತತ್ತರಿಸುತಲಿದ್ದ ಭಕ್ತನ ಸಲಹಿದ ಮೃತ್ಯುಂಜಯ ಸಲಹೆನ್ನ 2 ವಿಷವು ಆವರಿಸಲು ತ್ರಿದಶರು ಬೇಡಲು ನಸುನಗುಗಲಿ ವಿಷ ಧರಿಸಿದ ಸದಾಶಿವ 3 ಶಿವಶಿವಾವಲ್ಲಭ ಭವಾಭವ ಪ್ರಭವನೆ ಭುವನ ಪವಿತ್ರನೆ ಭವಹರ ಸಲಹೆನ್ನ 4 ಅಂಬಿಕನಾಥನೆ ನಂಬಿದೆ ನಿನ್ನನೆ ಶಂಭುವೆ ಭಕ್ತನ ಬೆಂಬಿಡದೆಲೆ ಪೊರೆ 5 ಅಷ್ಟ ವಿಭೂತದ ಅಷ್ಟಮೂರ್ತಿಯೆ ಪದ ಮುಟ್ಟಿ ಭಜಿಪ ಮನ ಕೊಟ್ಟು ರಕ್ಷಿಸು 6 ದಿಗಂಬರ ದಯಾಕರ ಭಗೀರಥ ಹಿತಕರ ಅಘಹರ ಮೃಗಧರ ಹಗರಣಗೊಳಿಸಿದೆ 7 ವಿಘ್ನಪ ಜನಕನೆ ಅಜ್ಞತೆ ಬಿಡಿಸಯ್ಯ ಸುಜ್ಞನೆ ಭವಾಂಬುಧಿ ಮಗ್ನನನುದ್ಧರಿಸಯ್ 8 ಲಕುಮಿಕಾಂತನ ಪ್ರಿಯಸÀಖನೆ ಶ್ರೀಕಂಠನೆಭಕುತಿ ಭಾಗ್ಯವನೀಯೊ ಶಕುತ ಬಿಡದೆ ಕಾಯೊ 9
--------------
ಲಕ್ಷ್ಮೀನಾರಯಣರಾಯರು
ಭಾಗವತ 342 ಆಗಮದಸಾರ ಶಾಸ್ತ್ರವಿಚಾರ ಪೌರಾಣ ಯೋಗತತ್ವಗಳ ಶೃಂಗಾರವೆನಿಸುತಿಹ ಶ್ರೀ ಭಾಗವತಮಂ ಪೇಳ್ವೆಸಂಕ್ಷೇಪದಿಂದ ಹನ್ನೆರಡು ಪದ್ಯಂಗಳಾಗಿ ಗುರುಸುತನ ಬಾಣದುಪಹತಿಗೆ ಮೊರೆಯಿಡುವಉ ತ್ತರೆಯ ಗರ್ಭವ ಶೌರಿರಕ್ಷಿಸಲ್ ಬಳಿಕಧರೆ ರಾಜ್ಯವಾಳುತಿರೆವಿಷ್ಣುರಾತಂ ವರಶಮೀಕಾತ್ಮಜನ ಶಾಪಬರೆತಾಕೇಳಿ ಪರಮವೈರಾಗ್ಯದಿ ಕುಶಾಸ್ತರಣದೊಳಿರಲ್ ಪ್ರಥಮಸ್ಕಂಧದೋಳ್ ತಿಳಿವುದು 1 ಸಾರವಾಗಿಹ ಭಕ್ತಿಯೋಗಮಂ ಪೂರ್ವದೋಳ್ ನಾರದಗೆ ವಿಧಿವೇಳ್ದ ಸೃಷ್ಟಿಯಕ್ರಮಂ ಪ್ರಳಯ ತನ್ನಪುರಮಂ ತೋರಿಸಿ ಚಾರುಭಾಗವತ ತತ್ವೋಪದೇಶದಿ ಸೃಷ್ಟಿ ಗಾರಂಭ ಮಾಡಿಸಿದನೆಂದು ಶುಕಮುನಿವರಂ ತಿಳಿವುದು 2 ವಿದುರ ಮೈತ್ರೇಯ ಸಂವಾದಮಂ ಸೃಷ್ಟಿಯ ಭ್ಯುದಯವಂ ಸ್ವಾಯಂಭುವಿನಜ ನನವಹರೂ ಪದ ಹರಿಯಚರಿತ ಸನಕಾದಿಗಳ್ ಜಯವಿಜಯರಿಗೆ ಕೊಟ್ಟ ಶಾಪತೆರನು ಉದಿಸಿದಂಹರಿಕರ್ದಮಂಗೆ ಕಪಿಲಾಖ್ಯದಿಂ ವಿದಿತವಾಗಲ್ ತಾಯಿಗರುಹಿದಂಸಾಖ್ಯಯೋ ತೃತೀಯಸ್ಕಂಧದೋಳ್ ತಿಳಿವದು 3 ಶಿವನ ವೈರದಿನಕ್ಷಯಾಗವಂ ಮಾಳ್ಪುದಂ ತವಕದಿಂ ಕೆಡಿಸಿ ಶಂಕರನು ಕರುಣಿಸುವದಂ ಧೃವಚರಿತಮಂಗವೇನರಚರಿತ್ರೆಗಳ್ ಪೃಥುಚಕ್ರವರ್ತಿ ಜನನ ಅವನಿಗೋರೂಪಿಯಾಗುತ ಸಕಲವಸ್ತುಸಾ ರವಕೊಡುವದುಂ ಪ್ರಚÉೀತಸರುಪಾಖ್ಯಾನಮಂ ತವೆಪುರಂಜನನುಪಾಖ್ಯಾನಮಂ ಯಿದುಚತುರ್ಥ ಸ್ಕಂಧದೋಳ್ ತಿಳಿವದು 4 ವರಪ್ರಿಯ ವ್ರತಚರಿತೆಯಾಗ್ನೀಧ್ರಚರಿತೆಯುಂ ಹರಿಯ ಋಷಭಾವತಾರದ ಮಹಾಮಹಿಮೆಯಂ ಭೂಗೋಳವಿಸ್ತಾರವು ಎರಡನೆ ಖಗೋಳದೋಳ್ ವಾಯ್ವಾದಿಮಂಡಲವಿ ವರಗಳುಂ ನರಕಾದಿ ವರ್ಣನೆಯ ಸಂಖ್ಯೆಯುಂ ಯಿದುಪಂಚಮಸ್ಕಂಧದೋಳ್ ತಿಳಿವದು 5 ಯರ ಜನನಮಂ ವಿಶ್ವರೂಪಾಖ್ಯಭೂಸುರಂ ವೃತ್ರಾಸುರನ ಕೊಲ್ವುದುಂ ಭರದಿ ಬೆನ್ಹತ್ತಿಬಹ ಬ್ರಹ್ಮಹತ್ಯವ ಸುರಪ ಧರಣಿಜಲ ವೃಕ್ಷಸ್ತ್ರೀಯರಿಗೆ ಭಾಗಿಸಿದುದಂ ತಿಳಿವದೂ 6 ವಿಧಿಯವರದಿ ಹಿರಣ್ಯಕಶ್ಯಪನು ಗರ್ವದಿವಿ ಬುಧರಂ ಜಯಿಸುವದುಂ ತರಳ ಪ್ರಹ್ಲಾದನ ನರಸಿಂಹನಾಗಿ ಹರಿಯು ಮದಮುಖನ ಸೀಳ್ವುದಂಪ್ರಹ್ಲಾದನೃಪನಜಗ ರದಮುಖದಿ ವರ್ಣಾಶ್ರಮದ ಧರ್ಮಕೇಳ್ವುದಂ ತಿಳಿವದು 7 ಮನುಗಳ ಚರಿತ್ರೆಗಳ್ ಗಜರಾಜ ಮೋಕ್ಷವಂ ದನುಜ ದಿವಿಜರು ಶರಧಿಯಂಮಥಿಸೆವಿಷವರು ಹರಿಸುರರಿಗೀಯ್ಯೆ ಅನಿಮಿಷರ ಗೆದ್ದು ಬಲಿ ಶತಕ್ರತುವಮಾಳ್ಪುದಂ ವನಜಾಕ್ಷ ವಟುವೇಷದಿಂ ದವಗೆಲ್ವುದಂ ತಿಳಿವದು 8 ಇನವಂಶ ರಾಜರಚರಿತ್ರೆಯೋಳಂಬರೀ ಷನ ಮಹಿಮೆ ಯಿಕ್ಷಾ ್ವಕುರಾಜನಚರಿತ್ರ ರಾ ಚಂದ್ರವಂಶಾನುಚರಿತಂ ವನಿತೆಯುಂ ಪುರುಷನಾಗಿದ್ದಿಳನ ಚರಿತಶು ಕ್ರನ ಮಗಳ ಶರ್ಮಿಷ್ಠೆಯರಚರಿತೆಯದುವೂರು ನವಮಸ್ಕಂಧದೋಳ್ ತಿಳಿವದು 9 ಹರಿ ದೇವಕೀ ಪುತ್ರನಾಗಿ ಗೋಕುಲದಿ ಪರಿ ಪರಿಲೀಲೆಗಳತೋರಿ ದುಷ್ಟರಂಸದೆದುತಾಂ ಪಿತೃಮಾತೃಗಳಸೆರೆಯಬಿಡಿಸಿ ವರವುಗ್ರಸೇನಂಗೆ ಪಟ್ಟಮಂಗಟ್ಟಿಸಾ ಗರದಿ ಪುರವಂರಚಿಸಿ ಬಲುತರುಣಿಯರ ಕೂಡಿ ತಿಳಿವದು 10 ನೆಸಗಿದಂ ಯದುಕುಲಕೆ ಹರಿಯಸಂಕಲ್ಪದಿಂ ಪರಮಾತ್ಮತತ್ವಬೋಧೆಯನರುಪಿದಂ ಮುಸಲದಿಂ ಯಾದವರಕ್ಷಯವೈದಲನ್ನೆಗಂ ಬಿಸಜನಾಭಂ ರಾಮನೊಡನೆ ತಾತೆರಳಿದಂ ಕರೆದೊಯಿದನೇಕಾದಶಸ್ಕಂಧದೊಳ್ 11 ಪರೀಕ್ಷಿತ ಮಹಿಪಾಲತಾಂ ಕೇಳಿದಂ ಶುಕನಿಂದಸಕಲಮುಂ ಕಲಿಕಾಲ ಸೂತಶೌನಕಾದಿಗಳಿಗಿದನು ಪೇಳಿದಂ ಬಾದರಾಯಣನ ಕೃಪೆಯಿಂದಲಿದ್ವಿ ಜಾಳಿ ಹರುಷದ ಕಡಲೊಳೀಜಾಡಿದುದುರಮಾ ಲೋಲನ ಮಹಾಲೀಲೆಯವತಾರಮದ್ಭುತಂ- -ದ್ವಾದಶಸ್ಕಂಧವಿದುವೆ 12 ಇಂತೀ ಪರಿಭಾಗವತ ಶಾಸ್ತ್ರಮಂ ಸಂತರಡಿಗಳಿಗೆರಗಿ ಪೇಳ್ದೆ ಸಂಕ್ಷೇಪದಿಂ ಕಂತುಪಿತಗÀುರುರಾಮವಿಠಲತಾಂಹೃದಯದೋಳ್- -ನಿಂತುನುಡಿಸಿದತರದೊಳು ಸ್ವಾಂತನಿರ್ಮಲರಾಗಿ ಪಠಿಸುವರಿಗನುದಿನಂ ಚಿಂತಿತಾರ್ಥಂಗಳಿಹಪರಸೌಖ್ಯವಿತ್ತುಶ್ರೀ ಕಾಂತ ಗುರುರಾಮವಿಠಲ ಪೊರೆವಜಯ- -ಜಯಮನಂತಮಹಿಮಂಗೆನಿರತಂ 13
--------------
ಗುರುರಾಮವಿಠಲ
ಭಾಗವತ ದಶಮಸ್ಕಂದ ಕಥೆ ಜಯ ಜಯ ರಾಮಾನುಜ ಪಾಹಿ ಜಯ ಜಯ ಶ್ರೀಕೃಷ್ಣಪಾಹಿ ಜಯ ಪಾಂಡವ ಮಿತ್ರ ಪಾಹಿ ಜಯ ಜಯ ಜಯತು ಪ ಭವ ಪ್ರಮುಖ ಸುರರಿ- ಗಾನಮಿಸುತ ದಶಮಸ್ಕಂದದ ಕಥೆಯ ಪೇಳುವೆ 1 ತಾಮರಸಭವಂಗೆ ಪೋಗಿ ಮೊರೆಯನಿಟ್ಟಳು 2 ಹರಮುಖ ಸುಮನಸರ ಕೂಡಿ ವಿಧಿಯು ಕ್ಷೀರ ಶರಧಿಯೈದಿ ಪರುಷಸೂಕ್ತದಿಂದ ಹರಿಯ ಸ್ತೋತ್ರ ಮಾಡಲು 3 ಸುರರು ಯಾದವರಾಗಿ ನಾನು ಬರುವೆ ದೇವಕಿ ಪುತ್ರನೆನಿಸಿ ತರಿವೆ ನೀಚರನೆಂದಾಕಾಶವಾಣಿಯಾಯಿತು 4 ಕನ್ನಿಕೆಯರು ಭುವಿಯೊಳವತರಿಸುವದೆನ್ನುತ 5 ಮೃಡ ಸಡಗರದಲಿ ತಮ್ಮ ನಿಳಯಗಳನು ಸಾರ್ದರು 6 ಶೂರಸೇನನೆಂಬ ರಾಜ ಪಾರಂಪರ್ಯದಿ ಮಧುರೆಯಲ್ಲಿ ಧಾರುಣಿಯ ಪಾಲಿಸುತೆ ಧರ್ಮದಿಂದಲಿ 7 ದೇವಕನು ದೇವಕಿಯ ವಸುದೇವಗಿತ್ತು ಉತ್ಸವ ಬರೆ ಭಾವ ಮೈದ ಕಂಸ ರಥಕೆ ಸಾರಥಿಯಾದನು8 ನಭವುನುಡಿಯೆ ಜವದಿ ತಂಗಿಯ ಮುಡಿಯ ಪಿಡಿಯೆ ಕಂಸ ಕೋಪದಿ9 ಪುಟ್ಟಿದ ಮಕ್ಕಳನೆಲ್ಲ ನಿನಗೆ ಕೊಟ್ಟುಬಿಡುವೆ ಕೊಲ್ಲದಿರವಳ ಸಿಟ್ಟು ಸೈರಿಸೆನುತ ಪೇಳ್ದ ಶೌರಿಭಾವಗೆ 10 ಕೊಡಲು ಕಂಸ ಹೃದಯದಲಿ ಸತ್ಯಕೆ ಮೆಚ್ಚಿ ಭಾವಗೆಂದನು 11 ಇವನ ಭಯವು ಎನಗೆ ಇಲ್ಲ ಈವುಂದೆಂಟನೆ ಸುತನ ಮಾತ್ರ ತವಕದಿಂದ ಮನೆಗೆ ಪೋಗು ಪುತ್ರ ಸಹಿತದಿ 12 ಸೆರೆಯೊಳಿಡಿಸಿ ಘನವಿಭವದಿ ಭುವಿಯನಾಳುತಿರ್ದ ಕಂಸನು 13 ಸುರ ಋಷಿ ರಹಸ್ಯದಲಿ ಬಂದು ಪೇಳಿದ 14 ಉರಿದ ಕಣ್ಣೊಳು ಕಿಡಿಗಳುದುರೆ ಶೌರಿಯ ಬಂಧನದೊಳಿಟ್ಟು ತರಿದನಾರುಮಂದಿ ಸುತರ ತವಕದಲಿ 15 ಏಳನೆಯ ಗರ್ಭ ಉದರವಿಳಿದೆಂದು ತಿಳಿಯೆ ಜನರು ಶ್ರೀಲತಾಂಗಿಯರಸನಂಶ ಬಳಿಕ ಬೆಳೆದುದು 16 ಅದನು ವಯ್ದು ದುರ್ಗಿ ರೋಹಿಣಿಯುದರದಲ್ಲಿ ಇಟ್ಟೆಶೋದೆ ಯುದರದಲ್ಲಿ ತಾನು ಸೇರಿ ಬೆಳೆಯುತಿರ್ದಳು 17 ಬಳಿಕಯಿಂದಿರೇಶ ತಾನು ಜಲಜಮುಖಿ ದೇವಕಿಯ ಗರ್ಭ ದಲಿ ಪ್ರವಿಷ್ಠನಾಗಿರ್ದ ಮಹಿಮೆಯಿಂದಲಿ 18 ಮುಖದಿ ಕಳೆಯೇರಿರಲ್ಕೆ ಖಳನಿದೇ ಇದೇ ಎನುತ್ತ ಸಕಲ ಭಾಗದಿ ಕಾವಲಿಟ್ಟು ಸಮಯ ನೋಡುತ್ತಿರೆ 19 ಸುರರು ಹರಿಯ ವೇದದಿಂದ ಸ್ತೋತ್ರಮಾಡಿ ಹೋದರು 20 ನಂದನರಸಿಯಲ್ಲಿ ದುರ್ಗಿಯಂದುದಿಸಿರೆ ನಭೋ ಮಾಸದಿ ಅಂದುರಾತ್ರಿಯ ಶಿತಪಕ್ಷಯಷ್ಟಮಿ ದಿನದಲಿ 21 ಸರಸಿಜಾಪ್ತನುದಿಸಿದಂತೆ ಬೆಳಕು ತುಂಬಲು 22 ದರ ಗದಾರಿ ಪದ್ಮ ಪೀತಾಂಬರ ಶ್ರೀವತ್ಸ ಕೌಸ್ತುಭಗಳ ಶೌರಿ ನೋಡಿದ 23 ದಿವ್ಯರೂಪವ ಕಾಣುತ ವಸುದೇವ ಮನದಿ ಹಿಗ್ಗಿ ಮುದದಿ ಗೋವುಗಳನು ಹತ್ತುಸಾವಿರ ಧಾರೆಯೆರೆದನು 24 ತುತಿಸಲಂದು ಸತೀಪತಿಗಳು ಹಿತದಿ ತೇಜವ ಮಾಯಗೈದು ಸುತನು ಮಗುವಿನಂತೆ ತೋರೆ ಸೊಬಗಿನಿಂದಲಿ 25 ಕಾಲಲಿದ್ದ ಸಂಕೋಲೆಗಳು ಕಳಚಿ ಬಿದ್ದುದಾಗ ದೇವಕಿ ಬಾಲನನ್ನು ನೋಡಿ ಮನದಿ ಭಯವ ಪಟ್ಟಳು 26 ಬೀಗಮುದ್ರೆ ಸಹಿತ ಎಲ್ಲ ಬಾಗಿಲು ತನ್ನಿಂತಾನೆ ತೆಗಿಯೆ ಶೌರಿ ನಡೆದನು 27 ಗೋಕುಲವನೈದಿ ಕಮಲನಾಭನಂ ಯಶೋದೆಯ ಬಳಿಯಲಿಟ್ಟನು 28 ಆಕೆ ಪಡೆದ ಹೆಣ್ಣು ಶಿಶುವ ತಾ ಕೈಕೊಂಡು ಮನೆಗೆ ಬಂದು ಜೋಕೆಯಿಂದ ಮೊದಲಿನಂತೆ ತೋರುತಿರ್ದನು 29 ಅಳಲು ಶಿಶವು ಕೇಳಿಯೆಲ್ಲ ಖಳರು ಹೋಗಿ ಕಂಸಗುಸುರೆ ಝಳಪಿಸುತ್ತ ಖಡ್ಗವನ್ನು ಜವದಿ ಬಂದನು 30 ವಂದನಾದರೂ ಬಿಡಬಾರದೆ ಸುಂದರಿ ಇವಳಣ್ಣ ಎನಲು ಮುಂದುಗಾಣದೆ ಯೋಚಿಸುತ್ತ ಮುಗುವನೆತ್ತಿದ 31 ನಭದಿನಿಂತು ಸಾರಿ ಛೀ ದುರಾತ್ಮ ಯಾರ ಕಡಿವೆ ಯೆಂದಳು? 32 ವೈರಿ ಮೀರಿ ಕೊಂದು ಪಾಪಿಯಾದೆ ಛೀ! ಹೋಗೆಂದಳು 33 ಮನದಿ ನೊಂದು ಕಂಸನು ತನ್ನನುಜೆಯನ್ನು ಭಾವನನ್ನು ವಿನಯದಿಂದ ಬೇಡಿಕೊಂಡ ಕ್ಷಮಿಸಿರೆನ್ನುತಾ 34 ನೆರಹಿ ತನ್ನ ಮಂದಿಯಾದ ದುರುಳರಿಗೀ ಸುದ್ದಿಪೇಳೆ ಬರಲಿ ಹರಿಯು ಕೊಲುವೆವವನ ಭಯಬಿಡೆಂದರು 35 ಧರೆಯೊಳು ಪುಟ್ಟಿದ ಶಿಶುಗಳನ್ನು ತರಿವುದೆಂದು ಪೂತನೆಯೆಂಬ ಮರುಳೆಯನ್ನು ಕಳುಹಿ ವಿಸ್ಮಯದಿಂದಲಿರ್ದನು 36 ನಂದಗೋಕುಲದಲ್ಲಿ ಮಹಾನಂದವಾಗಿ ಜನರೆಶೋದೆಯ ಕಂದನನ್ನು ನೋಡಿ ಹಿಗ್ಗಿಯುತ್ಸವಗೈದರು 37 ಪ್ರೀತಿಯಿಂದ ನಂದಗೋಪ ಜಾತಕರ್ಮ ಮಾಡಿಸಲ್ಕೆ ಶ್ರೀ ತರುಣಿಯ ಕಳೆ ದಿನದಿನದಿ ಪೆರ್ಚುತಿಹುದು 38 ಶೌರಿಯ ಮಧುರೆಯಲಿ ನೋಡಿ ಆದರಿಸಿ ಎನ್ನ ಮಗನೆ ಧೀರ ನಿನ್ನ ಮಗನೆನ್ನುತ ಗೋಪ ನುಡಿದನು39 ಏಳನೆಯ ದಿನದಿ ಪೂತನಿ ಬಾಲಕಂಗೆ ಮೊಲೆಯನೊಡೆ ಹಾಲಾಹಲವನೀಂಟಯಸುವನೆಳದು ಕೊಂದನು40 ಬಿಡುಬಿಡೆನ್ನುತಾರ್ಭಟಿಸುತಲೊಡನೆ ಯೋಜನವಾಗಿ ದೇಹ ಪೊಡವಿಗುರುಳೆ ನೋಡಿಗೋಪರು ಭೀತಿಗೊಂಡರು 41 ಜನ್ಮತಾರೆಯುತ್ಸವದಲಿ ಶಕಟನು ಬಂಡಿಯೊಳು ಸೇರಿ ಇರಲು ನನ್ನಿಯಿಂದಲೊದ್ದು ಕೆಡಹಿ ಕೊಂದಿತಾ ಶಿಶು ಪೋರ 42 ಬಾರಿಬಾರಿಗೆ ರಕ್ಷೆಕಟ್ಟಿನಾರಾಯಣ ಕವಚವ ತೊಡಿಸಿ ಪೋರಬಾಲನನ್ನು ಸಲಹೆನುತ ಹರಿಯ ಬೇಡಿದರು43 ಸಾರಿ ನೆಲಕೆ ಕೆಡಹಿ ಮೇಲೆ ಆಡುತಿರ್ದನು 44 ಶೌರಿ ನೇಮದಿಂದ ಗರ್ಗ ಸೇರಿ ಗೋಕುಲವನು ಸಂ ಸ್ಕಾರ ಕ್ಷತ್ರದಿಂದ ಮಾಡಿದ ಶಿಶುಗಳೆರಡಕೆ 45 ರಾಮಕೃಷ್ಣರೆಂದು ಪೆಸರ ಪ್ರೇಮದಿಂದಲಿಡಿಸಿ ನಂದನ ನೇಮಕೊಂಡು ತಾ ತೆರಳಿದ ಗರ್ಗಾಚಾರ್ಯನು46 ಶುಕ್ಲಪಕ್ಷದ ಚಂದ್ರನಂತೆ ಶುಕ್ಲನಾಮಕ ಹರಿಯು ಜನದೊ ಳಕ್ಕರಿಯಲ್ಲಿ ಬಾಲಲೀಲೆ ತೋರುತಿರ್ದನು 47 ಅಂಬೆಗಾಲಿಡುತ್ತ ಕೃಷ್ಣ ಸಂಭ್ರಮದಲಿ ಮನೆಮನೆಗಳೊ ಳಿಂಬಾಗಿ ಪಾಲು ಬೆಣ್ಣೆ ಕದ್ದು ತಿಂಬನು 48 ವಂದು ನೋಡಿ ಕಣ್ಣುಮುಚ್ಚಿ ವಿಸ್ಮಿತಳಾದಳು 49 ಮನೆಮನೆಗಳ ಪೊಕ್ಕೆಶೋದೆತನಯ ಪಾಲುಬೆಣ್ಣೆಸವಿದು ವಿ ನಯದಿಂದ ಅರಿಯದವನಂತಿರುವ ತಾಯಿಗೆ 50 ಗೋಪಿ ವಿಧ ವಿಧ ಗುಣದಿಂದಲೂಖಲಕ್ಕೆ ಕಟ್ಟಿದಳ್ 51 ವರಳ ಸೆಳೆದುಕೊಂಡು ಮತ್ತಿಮರಗಳನ್ನು ಮುರಿಯೆ ಸಿದ್ಧ ಪರುಷರೀರ್ವರಾಬಾಲಗೆ ನಮಿಸಿ ತುತಿಸಿ ಪೋದರು 52 ವನಜನಾಭ ಕೃಷ್ಣನನ್ನು ದೂರುತಿರುವರು 53 ಸೂನು ನಮ್ಮ ಮನೆಗೆ ಬಂದು ಆನಂದದಿ ಯಾರು ಆಡದಾಟ ಆಡುವ 54 ಬಾಯಿಗೊರಸಲತ್ತೆ ಸೊಸೆಯ ಹೊಡೆಯೆ ನಗುತ ಓಡಿ ಬಂದ ತವಸುತ 55 ಲೀಲೆಯಿಂದಲಿವನು ನೆಲುವಿನ ಮೇಲಿಟ್ಟಿರುವ ಭಾಂಡವನ್ನು ಕೋಲಿನಿಂದ ತಿವಿದು ವಡೆದು ಪಾಲ ಸವಿದನು56 ಎತ್ತಿಕೊಳ್ಳೆನುತ್ತ ಮೈಯ್ಯ ಹತ್ತಿ ನೆಲುವಿನ ಭಾಂಡವನ್ನು ಮತ್ತೆ ನಿಲುಕಿಸಿಕೊಂಡು ಪಾಲಕೆನೆಯ ಮೆದ್ದನು 57 ಸತಿಪತಿಗಳ್ ಮಲಗಿರೆ ಮಧ್ಯೆ ಸರ್ಪವನು ಹಾಕಿ ತಾನ- ಗುತ್ತಲಿ ಜುಟ್ಟು ಜಡೆಗೆ ಗಂಟಿಕ್ಕಿ ಓಡಿದ58 ಅಳುತಲಿರುವ ಶಿಶುವಿನ ತಲೆಯ ಕೂದಲು ಕರುವಿನಬಾಲಕೆ ಎಳೆದು ಗಂಟುಹಾಕಿ ಬೀದಿಯಲ್ಲಿ ನೂಕುವ 59 ಬೆಣ್ಣಿಯನ್ನು ಮೆದ್ದು ಮಿಕ್ಕದನ್ನು ಕೋತಿಗಿತ್ತದು ತಿನ್ನತಿರಲು ನಗುತ ನಗುತ ತಿರುಗುತಿರುವನು 60 ಇನಿತು ಎಲ್ಲ ಪೇಳೆ ಗೋಪವನಿತೆ ತಾನು ಮಗನ ಮುದ್ದಿಸಿ ಘನ ಪ್ರಮೋದ ಚಿತ್ತಳಾಗಿ ಕಾಲಕಳೆವಳು 61 ಪ್ರೀತಿಯಿಂದ ಬನ್ನಿ ಎಂದು ಕರೆವ ಬಾಲರ 62 ಮೂರು ವರ್ಷವಾಗೆ ಕೃಷ್ಣ ಮುದದಿ ಕರುಗಳ ಕಾಯುತ್ತ ವಾರಿಗೆಯವರಿಂದ ಕೂಡಿ ಕುಣಿಯುತಿರುವನು 63 ವತ್ಸ ಬಕರ ಮುರಿದು ಕೃಷ್ಣ ಸ್ವೇಚ್ಛೆಯಿಂದಲಣ್ಣನೊಡನೆ ನಿಶ್ಚಲ- ಚಿತ್ತರುಲಿಯಲಾಡುತೆಸೆದ ಮೋದದಿ64 ವೃಂದಾವನಕೆ ಪೋಗಲಲ್ಲಿ ಇಂದಿರೇಶ ವಿಷದ ಮಡುವ ನೊಂದು ದಿನದಿ ಧುಮುಕಿ ಜಲವ ನಿರ್ಮಲಗೈದನು 65 ವನದೊಳಗ್ನಿಯನು ನುಂಗಿ ಜನರ ಸಲಹಿ ರಾತ್ರಿಯಲ್ಲಿ ಮುನಿ ಜನೇಢ್ಯನಾಗಿ ಗೋಕುಲದೊಳೆಸೆದನು 66 ಅಜಗರನಾಗಿದ್ದಸುರನ ನಿಜಶರೀರ ಬೆಳಸಿ ಕೊಂದು ಸ್ವಜನರನ್ನು ಪಾಲಿಸಿದನು ವೃಜಿನದೂರನು 67 ಳನ್ನು ಕಾಯ್ದ ಕೃಷ್ಣ ತಾನು ನನ್ನಿಯಿಂದಲಿ 68 ಕರುಗಳನ್ನು ಹುಡುಗರನ್ನು ಸರಸಿಜಭವ ಬಚ್ಚಿಡಲ್ಕೆ ಹರಿಯುತಾನು ತತ್ವದ್ರೂಪವಾಗಿ ಮೆರೆದನು 69 ನಾನಾಲಂಕಾರದಿ ಗೋವುಗಳ
--------------
ಗುರುರಾಮವಿಠಲ
ಭಾಗೀರಥಿ ಭಾಗೀರಥೀ ದೇವಿ ಭಯ ನಿವಾರಣ ಗಂಗೆ ಸಾಗರ ನಿಜರಾಣಿ ಸಕಲ ಕಲ್ಯಾಣಿ ಪ ಒಮ್ಮೆ ಶ್ರೀವಿಷ್ಣು ಪಾದದಲಿ ಉದ್ಭವಿಸಿದೇ ಕರ ಪಾತ್ರೆಯಲ್ಲಿ ಬಂದೆ ಪಾದ ತೀರ್ಥವಾದಿ ಬ್ರಹ್ಮಾಂಡವೆಲ್ಲ ಪಾದನ್ನವೆಂದಿನಿಸಿದೆ 1 ದೇವಿ ನೀ ವಿಷ್ಣು ಪಾದದಲಿ ಉದ್ಭವಿಸಿದೆ ದೇವತೆಗಳೆಲ್ಲ ನಿಮ್ಮಾಧೀನವೊ ಆವ ಮಹಾದೇವನು ತಲೆಬಾಗಿರಲಾಗಿ ಮಹ ದೇವ ಶಿರಸಿನಲಿ ಉದ್ಭವಿಸಿದೆ ಜಗವರಿಯೆ 2 ದೃಷ್ಟಿಸಿ ನೋಡಲು ನೂರು ಜನ್ಮದ ಕೃತ್ಪಾಪ ಮುಟ್ಟಿದರೆ ಮುನ್ನೂರು ಜನ್ಮದ ಪಾಪವು ಮುಟ್ಟಿಮಾಡಲಿ ಬಂದು ಸ್ನಾನ ಮಾತ್ರದಿಂದ ಸುಟ್ಟುಹೋಗುವುದು ಸಹಸ್ರ ಜನ್ಮದ ಪಾಪ 3 ಜಹ್ನು ಋಷಿಯಿಂದಲಿ ಬಿದ್ದ ಕಾರಣದಿಂದ ಜಾಹ್ನವಿಯಂತೆಂದು ನೀ ಕರೆಸಿಕೊಂಡೇ ವನ್ನು ನೀ ಪಿಂತೆ ಪಾವನ ಮಾಡಬಂದೆ 4 ವಿಸ್ತಾರದಲಿ ಪೊಳಿವ ಮುತ್ತಿನಾ ಸರಗಳು ಮತ್ತೆ ರಂಗಮ್ಮ ಪವಡಿಸಿದ ನೋಡೀ ಮತ್ತೆ ಮಹಾಲಕ್ಷ್ಮಿಯೆ ಉರಸ್ಥಳದಲಿರಲಾಗಿ ಇತ್ತ ಶ್ರೀದವಿಠಲ ನನರಸಿ ಬಂದೆ 5
--------------
ಶ್ರೀದವಿಠಲರು
ಭಾಗೀರಥಿ ಭಾಗೀರಥಿಬಾಗುವವರಿಗೆ ದಯವಾಗಿರತಿ ಪ. ಗಂಗೆ ಗೌತುಮೆ ತುಂಗೆ ಮಂಗಳೆ ಕೃಷ್ಣಿ ನಿನ್ನಹಿಂಗದೆ ಅವರನ ರಂಗಿಸುವರೆ ತಾಯಿ 1 ಮಾನಸ ಸರೋವರನಾನಾ ತೀರ್ಥಗಳೆಲ್ಲಧೇನಿಸಿ ನಿನ್ನಯ ಮಾನ್ಯವ ಪಡೆದಿವೆ2 ಬ್ರಮ್ಹಾಂಡ ಬಿಚ್ಚಿ ಪರಬೊಮ್ಮಗ ಮಗಳಾದಿಬೊಮ್ಮನ ತಂಗಿ ನಾವು ನಿನ್ನನು ನೆನೆದೆವು3 ಸತ್ಯ ಲೋಕವ ಸ್ಮರಿಸಿ ಮತ್ತೆ ಸ್ವರ್ಗಕೆ ಬಂದಿಪ್ರಾರ್ಥಿಸಿದ ದೈವ ನಿನ್ನ ಅರ್ಥಿಲೆ ಗೆಲಿಸಮ್ಮ 4 ಭಗೀರಥ ಕರೆಯಲು ನಗದಲ್ಲಿ ಬಿದ್ದು ಕಾಶಿನಗರಕ್ಕೆ ಬಂದ ರಮಿ ಮಗಳ ಬಲಗೊಂಬೆ 5
--------------
ಗಲಗಲಿಅವ್ವನವರು
ಭಾಗೀರಥೀ ಜನಕಗೆ ಭಾಗವತಪ್ರಿಯಗೆ ಆಗ ನೀರೆರೆದರವಿಂದಲೋಚನನಿಗೆ ಗೋಪಿ 1 ಸಾಗರಶಯನನ ತೂಗಿ ತೊಟ್ಟಿಲೊಳಿಟ್ಟು ನಾಗಮುರಿಗೆ ವಂಕಿ ನಂದಗೋಪನ ಸುತಗೆ ಬೆರಳಿಗುಂಗುರ ಕೋಟಿಭಾಸ್ಕರತೇಜಗೆ ಹೊಳೆವೊ ಬಿಂದಲಿ ಗುಂಡು ಭುಜಕೀರ್ತಿ ಭೂಷಣ 2 ಮಲಕು ಮುತ್ತಿನ ಹಾರ ಪದಕ ಪಚ್ಚೆಯ ಕಾಂತಿ ಕೌಸ್ತುಭ ರತ್ನ ಥಳಥಳಿಸುವ ಕರ್ಣದಲ್ಲಿ ಬಾವುಲಿ ಚೌಕುಳಿ ಚಳತುಂಬು ಮುತ್ತಿನಬಟ್ಟು ಮುಂದಲೆಗೆ 3 ಹೊಸ ವಜ್ರದರಳೆಲೆ ಹುಲಿಯುಗುರು ತಾಯಿತ ಕುಸುಮನಾಭಗೆ ಕಿರುಗೆಜ್ಜೆ ಕಾಲಲಂದಿಗೆ ಮಿಸುಣಿ ಮಾಣಿಕ್ಯದುಡಿದಾರದಡ್ಡಿಕೆ ಕಟ್ಟಿ ಗೋಪಿ 4 ಕಂಜನಯ್ಯನ ನೋಡೆ ಕಂಗಳಿನ್ನೆರಡಿಲ್ಲ ಜಿಹ್ವೆ ಒಂದೆ ಸಾಲದೆನಗೆಂದು ಅಂಗಿಟೊಪ್ಪಿಗೆ ಹಾಕ್ಯಾಲಿಂಗನೆ ಮಾಡುತ ಸತಿ ತಾನಂದಾನಂದಭರಿತಳಾಗಿ5 ತನ್ನ ಮಗನ ಮುದ್ದು ತಾ ನೋಡಿ ಸಾಲದೆ ಹೊನ್ನ ಪುತ್ಥಳಿಯಂತೆ ಹೊಳೆವೊ ಕೂಸನು ಎತ್ತಿ ನಿನ್ನ ಮಗನ ಆಟ ನೀ ನೋಡೆಂದೆನುತಲಿ ತನ್ನ ಪತಿಯ ತೊಡೆಯಲ್ಲಿಟ್ಟು ನಲಿಯುತ 6 ಹೊನ್ನ ಪುತ್ಥಳಿಗೊಂಬೆ ಹೊಸ ಚಿನ್ನದರಗಿಳಿಯೆ ಹೊನ್ನು ತಾ ಗುಬ್ಬಿತಾರಮ್ಮಯ್ಯ ಎನುತಲಿ ಬಣ್ಣ ಬಣ್ಣದ ಆಟ ವರ್ಣಿಸುತಲಿ ನೀಲ- ವರ್ಣನ ತನ್ನ ತೋಳಿಂದಪ್ಪಿ ನಲಿಯುತ 7 ಸೃಷ್ಟಿಮಾಡುವರಿಲ್ಲೀ ಶಿವ ಬ್ರಹ್ಮರೊಡೆಯನ ಸೃಷ್ಟಿಕರ್ತನಾದನನ್ಹುಟ್ಟಿಸಿದ ನಾಭಿಯಿಂದಿವನು ಹೊಟ್ಟೆಲೀರೇಳು ಜಗವಿಟ್ಟು ಸಲಹುವ ಎಷ್ಟು ಸರ್ವೋತ್ತಮ ಈಗಿಲ್ಲ್ಯವತರಿಸಿದ 8 ಚತುರವದನಗೆ ವೇದ ತಂದಿಟ್ಟು ಸಾಗರ ಮಥಿಸಿ ಮಂದರವನು ಪೊತ್ತು ಅಮೃತವ ಹೀರಿ ಪೃಥಿವಿಯನು ತಂದ ಕೋರೆಯಲಂದ್ಹಿರಣ್ಯಾಕ್ಷನ ಹತವ ಮಾಡಿದ ತಾ ಭೂಪತಿ ಎಂದೆನಿಸಿದಿವನು 9 ಪರಮಭಕ್ತನು ಕರೆಯೆ ಬಿರುದು ಕಂಬದಿ ಬಂದು ಕರುಳ ಬಗೆದ ಪುಟ್ಟ ತÀರÀಳ ರೂಪವ ನೋಡಿ ಮರುಳಾಗಿ ಬಲಿ ಮೂರು ಚರಣ ದಾನ ನೀಡೆ ಬೆಳೆದು ಬ್ರಹ್ಮಾಂಡಕ್ಕೆ ಭುವನ ವ್ಯಾಪಿಸಿಕೊಂಡ10 ಕ್ಷತ್ರ ಸಂಹಾರಿ ತಾ ಎತ್ತಿ ಧನುವ ಸೀತಾ ಸೌ- ಮಿತ್ರಿಸಹಿತ್ವನದಲ್ಲಿ ಇರುತಿರಲಾಗ ಪತ್ನಿ ಒಯ್ಯಲು ಅಸುರನ್ಹತ್ತು ಶಿರಗಳ ತರಿದ ದುಷ್ಟ- ರಂತಕನೆ ನಿರ್ದುಷ್ಟ ಸಜ್ಜನಪ್ರಿಯ 11 ದೇವಾಧಿದೇವ ದೇವಕ್ಕಿ ಜಠರದಿ ಬಂದು ಮಾಯಾ- ಪೂತಣಿಯನ್ನು ಕೊಂದು ವಿಷಮೊಲೆನುಂಡು ಕಾಲಲಿ ಶಕಟನ ಕೆಡವಿದ ಯದುವೀರ ತಾ- ಗೋಪಾಲಕ ಗೋಪೀಸುತನೆಂದೆನಿಸಿಕೊಂಡ12 ವಿಪರೀತ ಮಾಯದಿ ತ್ರಿಪುರದ ಜನರಿಗೆ ದುರ್ಮತವ ಬೋಧಿಸಿ ಅಸುರಾರಿ ಮೋಹಕ ತೋರಿ ಚಪಲ ಚೆನ್ನಿಗ ಖಡ್ಗಪಿಡಿದು ತೇಜಿಯ- ನೇರಿ ಕಪಟನಾಟಕ ಕಲಿಮರ್ದನ ಕರಿಗ್ವರವಿತ್ತ13 ಜನ್ಮಕರ್ಮವು ಜರಾಮರಣಗಳಿವಗಿಲ್ಲ ಜಗದೋ- ಪರಬ್ರಹ್ಮನ ಪಾದಾಂಘ್ರಿಸ್ಮರಣಿ (ಣೆಯಿ?)ರೆ ಪರಮಾ- ದರದಿ ಕರೆದೊಯ್ವ ತನ್ನ (ಬಳಿಯ)ಲ್ಲೆ 14 ಏಸುಜನ್ಮದ ಫಲವಿನ್ನೆಷ್ಟು ಜನ್ಮದ ಸುಕೃತ ಈ ಸಮಯದಿ ಫಲಿಸಿತೀತ ಇಲ್ಲುದಿಸಿರಲು ದೋಷವರ್ಜಿತನೆ ಸಂತೋಷಭರಿತನಿವ ಭೀ- ಮೇಶಕೃಷ್ಣ ಯಶೋದೆ ಕೂಸೆಂದೆನಿಸಿಕೊಂಡ15
--------------
ಹರಪನಹಳ್ಳಿಭೀಮವ್ವ
ಭಾರ ನಿನ್ನದು ತಂದೆ ಸಿಂಧು ಎಂದೆಂದು | ಗುರುವರ್ಯ ಬಂದು ಕರುಣಿಸುವನು ಮದ್ಬಂಧೊ 1 ಮಂಗಳಾತ್ಮನೆ ಎನ್ನ ಅಂಗದಲಿ ನೀನಿಂದು ಪೊಂಗಳಧರನ ತೋರಯ್ಯ | ಅಜರಾಯ ಭಂಗಬಡಲಾರೆ ಭವದೊಳÀು 2 ನಾರಾಯಣನ ಪುತ್ರ ನಾರಾಯಣಗೆ ಮಿತ್ರ ನಿರವದ್ಯ | ನೀಡಭಯ ಕರುಣಾತ್ಮ ಗುರುವೆ ಒಲಿದಿಂದು 3 ಕಾಮರೂಪನೆ ಹರಿಯನೇಮದಲಿ ಕಪಿಯಾಗಿ ಆ ಮಹಿಮೆಗುಂಗುರ ಅರ್ಪಿಸಿ | ಅಗ್ನಿಯಲಿ ತಾಮಸರ ಹುರಿದೆ ಪುರದಲ್ಲಿ 4 ಮರಳಿ ಶರಧಿಯ ದಾಂಟಿ ಭರದಿ ರಘುಪತಿ ಚರಣ ಸರಸಿಜದಿ ಚೂಡಾಮಣಿಯನ್ನು | ಒಪ್ಪಿಸಿ ಹರಿ ಅಂಗ ಸಂಗ ಪಡೆದಯ್ಯ 5 ಸಿಂಧÀುವನು ಬಂಧಿಸಿ ಬಂದ ವಿಭೀಷಣಗೆ ಕುಂದದೆ ಅಭಯ ಕೊಡಿಸಿದೆ | ದಯಸಿಂಧು ನಿಂದೆನ್ನ ಒಳಗೆ ಮುದವೀಯೊ 6 ದೇವೇಶನಾಜ್ಞೆಯಲಿ ಜೀವೇಶ ಸಂಜೀವ ಪರ್ವತ ತಂದು ಕಪಿಸೈನ್ಯ | ಎಬ್ಬಿಸಿ ಮೊದಲೆಡೆಗೆ ಬಗೆದ ಕುಶಲಾತ್ಮ 7 ದಶಶಿರನ ಕೊಲ್ಲಿಸಿ ವಸುಧಿಪುತ್ರಿಯ ತಂದು ನಸುನಗುತ ರಾಮಚಂದ್ರಾಗೆ | ಒಪ್ಪಿಸಿ ವಿ ಭೀಷಣಗೆ ರಾಷ್ಟ್ರ ಕೊಡಿಸಿದೆ 8 ಪ್ರೇಮದಿ ಭರತನು ಸ್ವಾಮಿ ಬರಲಿಲ್ಲೆಂದು ಕಾಯ ಬಿಡುತೀರೆ | ಉಳುಹಿದೆ ಶ್ರೀ ರಾಮನಾಗಮನ ತಿಳುಹೀಸಿ9 ತುಷ್ಟನಾದೆನು ಹನುಮ ಇಷ್ಟ ನೀ ಬೇಡೆನಲು ಪಾದ ಪಿಡಿಯಲು | ಭಕ್ತಿಯಲಿ ಪಟ್ಟಾಭಿರಾಮ ತನ್ನಿತ್ತ 10 ಆಖಣಾತ್ಮಕಾಯನೆ ಅಕಳಂಕ ಗುಣಧಾಮ ನಿಖಿಲಾತ್ಮ ಹರಿಯ ಪೂಜಿಪ | ದೃಢಮಹಿಮ ಶ್ರೀಕೃಷ್ಣ ಭಕ್ತಾ ಕಲಿಭೀಮ 11 ಶಿಶುಭಾವದಲಿ ನೀನು ಶತಶೃಂಗ ಗಿರಿವಡೆದು ನಸುನಗುತ ಜನನಿಗಭಯವ | ನಿತ್ತಂಥ ಪಶುಪಾಲ ಪರನೆ ಪೊರೆಯೆನ್ನ 12 ದುರ್ಯೋಧನನ ತ್ರಾಣ ತಂತುಗಳ ಹರಿದಾಡಿ ಸರ್ವೇಶ ಹರಿಗೆ ಪ್ರಿಯಮಾಡಿ | ನಲಿದಂಥ ಸರ್ವಜ್ಞ ಭೀಮ ಬಿಡೆ ನಿನ್ನ 13 ದುಶ್ಯಾಸನನ ಮಹಾದುಶ್ಯೀಲ ಸ್ಮರಿಸುತ್ತ ಪಶುವಂತೆ ವಧೆಯ ಮಾಡಿದಿ | ರಣದೊಳು ಸುಸ್ವಾದ ಗುಣಸಾರ ಮಹವೀರ 14 ಮಾನಿನಿಯ ಸಂಕಲ್ಪ ತ್ರಾಣನೀ ಪೂರೈಸಿ ಪ್ರಾಣಸಖನಾಗಿ ಸಲಹಿದೆ | ಜಯಭೀಮ ಪಾಣೆ ಪಿಡಿಯೆನ್ನ ಮಹಘನ್ನ 15 ದುರಾರಾಧಕ ದುಷ್ಟ ಜರಸಂಧನ ಸೀಳಿ ಮುರಾರಿ ಮತ್ಪ್ರೀತಿ ಬಿಡಿಸಿದೆ | ದೀಕ್ಷೆಯಲಿ ತ್ರಿ ಪುರಾರಿ ವಂದ್ಯಾಗತಿ ನೀನೆ 16 ನಾರಾಯಣಾಸ್ತ್ರವನು ವೀರ ಗುರುಸುತ ಬಿಡಲು ಚೀರಿ ನಮೋಯೆನ್ನೆ ನೃಪರೆಲ್ಲ | ಸ್ಮøತಿ ತಪ್ಪೆ ಧೀರ ಎದುರಾಗಿ ನೀ ನಿಂತೆ 17 ಗರಡಿಯಲಿ ಕೀಚಕನ ಮುರಿದು ಮುದ್ದೆಯ ಮಾಡಿ ಮರಿಯದೆ ಅವನ ಅನುಜರ | ಸದೆಬಡಿದು ಮೋದ ನೀನಿತ್ತೆ 18 ಉರಗ ಬಂಧವ ಹರಿದು ಕರಿ ಮುಂದೆ | ನೀನಿಂತೆ ಸರ್ವನಿತ್ಯಾತ್ಮ ಕೃಷ್ಣಾತ್ಮ 19 ಮಧುವೈರಿ ಧ್ಯಾನದಲಿ ಕುದುರೆ ಆಟವನಾಡಿ ಮುದದಿಂದ ಕುರುಪನ್ಹೆಗಲೇರಿ | ಹುದುಗ್ಯವನ ಮುದದಿಂದ ನಲಿದೆ ಕಮಲಾಕ್ಷ 20 ಅರಗಿನ ಮನೆಯಲ್ಲಿ ವೈರಿಜನರ ಕೊಂದು ಪೊರೆದೆ ನೀ ಜನನಿ ಅನುಜರ | ಪಂಜರನೆ ಧರೆಯೊಳಗೆ ಎನ್ನ ಸಲಹಯ್ಯ 21 ಹಿಡಿಂಬನ ಕೊಂದು ವರ ಹಿಡಿಂಬಿಯ ಕೈಪಿಡಿದು ನಡೆದೇಕ ಚಕ್ರಪುರದಲ್ಲಿ | ಬಕನೊರಸಿ ನಡಕ ಬಿಡಿಸೀದಿ ಸುಜನರ 22 ವ್ಯಾಸದೇವನ ಕಂಡು ಸೂಸಿದ ಸದ್ಭಕ್ತಿ ಪಾಶದಲಿ ಕಟ್ಟಿ ಒಳಗಿಟ್ಟು | ಪೂಜಿಸುತ ಲೇಸಾಗಿ ಮುಂದೆ ನಡೆದಯ್ಯ 23 ನೀ ಸ್ವಯಂವರ ಸಭೆಯ ವೇಷಾಂತರದಿ ಪೊಕ್ಕು ವಾಸುದೇವನ ಕಂಡು ಆನಂದ | ತುಳುಕುತ್ತ ಆ ಸತಿಯ ತಂದೆ ವಿಜಯಾತ್ಮ 24 ರಾಜರೆಲ್ಲರ ಹಿಡಿದು ರಾಜಸೂಯಯಾಗವನು ಪೂಜೆಯನು ಮಾಡಿ ಮೆರದಯ್ಯ 25 ಲಕ್ಷ್ಮೀವನಕ್ಹೋದಂತೆ ಪಕ್ಷಿಯರ ಒಡಗೂಡಿ ದಕ್ಷನೆ ನೀನು ವನವಾಸ | ಅಜ್ಞಾತ ಪಕ್ಷವ ಕಳೆದು ಮರಳಿದೆ26 ಸಂಗರವ ನೀ ಹೂಡಿ ಭಂಗಿಸಿ ಕೌರವನ ರಂಗನ ಮುಂದೆ ಅರ್ಪಿಸಿ | ವಂದಿಸಿ ಮಂಗಳಾತ್ಮಕನೆ ಸಲಹೆಮ್ಮ 27 ನಿರ್ಮಲ ರಾಜ್ಯವನು ಧರ್ಮಂಗೆ ನೀನಿತ್ತೆ ನಿರ್ಮೂಲಗೈದು ಅರಿಗಳ | ಕೊಂದ ಪರ ಧರ್ಮಪರರನ್ನು ಪೊರೆದಯ್ಯ 28 ಮಧ್ವಾಖ್ಯ ಮಹವೀರ ಶುದ್ಧ ಸತ್ವ ಶರೀರ ಉದ್ಧರಿಪುದೊಂದೆ ವ್ಯಾಪಾರ | ಕೈಕೊಂಡ ವಿದ್ಯಾಧಿಪತಿಯೆ ಸಲಹೆನ್ನ 29 ಶ್ವಾಸ ನಿಯಾಮಕ ಪ್ರಭುವಾಸವೆ ನಿನ್ನಿಂದ ಉಸರಲೇನಯ್ಯ ನಿನ್ನಲ್ಲಿ | ಜೀವೇಶ ಸೂಸುವ ಭಕ್ತಿ ನೀಡಯ್ಯ 30 ವೇದ ಚೋರನ ಮಡುಹಿ ಸಾದರದಿ ಸುಜನಕ್ಕೆ ಬೋಧ ಮಾಡೆಂದು ಶ್ರೀ ವಿಷ್ಣು | ಕಳುಹಿದ ಮಧ್ವಾಖ್ಯ ಗುರುವೆ ಪರಿಪಾಹಿ 31 ಸುರರು ದುಂದಭಿ ಮೊರೆಯೆ ದುರುಳರ ಎದೆಯು ನಡುಗಲು | ಹರುಷದಲಿ ಮೆರೆದು ನೆರೆದರು ಸುಜನರು 32 ಕೈವಲ್ಯ ನೀನಿತ್ತೆ ಶ್ರೀವಲ್ಲಭನ ಪ್ರಥಮಾಂಗ | ಪ್ರಸನ್ನ ನೀವಲಿದು ಹರಿಯ ತೋರಯ್ಯ 33 ಹುಣಿಸೆ ಬೀಜದಿ ಪಿತನ ಘನೃಣವ ತೀರಿಸಿದಿ ಅಣಿಮಾದಿ ಸಿದ್ಧಿ ತೃಣವಯ್ಯ | ನಿನಗಿನ್ನು ಗುಣಪೂರ್ಣ ಹರಿಯ ಪ್ರತಿಬಿಂಬ 34 ಶಿವಭಟ್ಟನನು ಗೆದ್ದು ಜಯಾಂಕ ರಸ ತೋರೆ ವಿಪ್ರ ಸುರರು ಪೂಜಿಸೆ | ನಲವಿಂದ ಅವನಿಯೊಳು ಪೊಳೆದೆ ರವಿಯಂತೆ 35 ವಿದ್ಯಾಧಿಪತಿ ಗುರುವೆ ವಿದ್ಯೆ ಪೇಳಿದ ದ್ವಿಜಗೆ ಸದ್ಭಕ್ತಿ ದಕ್ಷಿಣೆ ನೀನಿತ್ತೆ | ಕರುಣಾತ್ಮ ಉದ್ಧರಿಸು ಎನ್ನ ದ್ವಿಜರತ್ನ 36 ಜನನಿ ಜನಕರು ತಡಿಯೆ ಅನುವಾದ ಸುತನಿತ್ತು ಘನವಾದ ತುರ್ಯ ಆಶÀ್ರಮ | ಕೈಗೊಂಡು ಸುನವ ಪದ್ಧತಿಯ ತೋರಿದೆ 37 ಅಚ್ಯುತ ಪ್ರೇಕ್ಷಕರಿಗೆ ಹೆಚ್ಚಾದ ದಯದಿ ಹರಿ ನಿನ್ನ | ವೊಯ್ದಿತ್ತ ಅಚ್ಚುಮೆಚ್ಚುವ ನೀ ಹರಿಗೆಂದು 38 ವಾದಿಗಳ ಭಂಗಿಸಲು ಸಾದರದಿ ಯತಿ ಕರಿಯೆ ಛೇದಿಸಿ ಖಳರ ಮದವನ್ನು | ಹರಿಸಿದೆ ಸ್ವಾದ ಗುಣಸಿಂಧು ಮದ್ಬಂಧು 39 ಬಾಳೆಗೊನೆಗಳ ಮೆದ್ದು ಬಾಡಲೇತಕೆ ಉದರ ಪೇಳೆಂದ ಯತಿಗೆ ಜಠರಾಗ್ನಿ | ಬ್ರಹ್ಮಾಂಡ ಕೊಳ್ಳುವದುಯೆಂದು ವರದಯ್ಯ 40 ವಾದಗಳ ಪರಿಹರಿಸಿ ಬೋಧಿಸಲು ಆ ದ್ವಿಜರು ಪಾದಕ್ಕೆ ಎರಗಿ ನಮೋ ಎಂದು ಅಮರರಿಗೆ ಆ ಬೋಧವೊ ಮಹಿಮೆಯೆಂದಾರು 41 ಬದರಿಯಾತ್ರೆಯಲಿ ಸುರನದಿಯು ತಾ ಮಹಿಪಡೆದು ಮುದದಲ್ಲಿ ಬಂದು ನಮಿಸಲು | ಶಿಷ್ಯಜನ ಯೈದಿ ಭಕ್ತಿಯನು ನಮೋ ಎಂದು 42 ಹರಿಯಂತೆ ನರಿಗಳನು ತುರಕ ದೂತರ ಜರಿದು ನರಪನಿಂದರ್ಧ ಮಹಿಮೆಯನ್ನು | ಪಡೆದಂಥ ಯರಡೇಳು ಭುವನ ಅಧಿಪತಿ 43 ಸತ್ಯತೀರ್ಥರ ಬಳಿಗೆ ದೈತ್ಯ ವ್ಯಾಘ್ರನು ಬರಲು ಮೃತ್ಯುವಿನ ಪುರಕೆ ಕಳುಹಿದೆ | ಲೀಲೆಯಲಿ ಭೃತ್ಯತ್ವಯೆನಗೆ ನೀಡಯ್ಯ 44 ಸೂಸುವಾ ಭಕ್ತಿಯಲಿ ವ್ಯಾಸದೇವನ ಕಂಡು ಈಶ ಸಲಹೆಂದು ಎರಗಲು | ಮನವುಬ್ಬಿ ಬಾ ಸುತನೆ ಎಂದು ತಬ್ಬಿದ 45 ಆನಂದ ಮೂರ್ತಿಯ ಆನಂದ ಸಂಗವನು ಆನಂದದಿಂದ ನೀ ಯೈದಿ | ನಂದ ಆನಂದ ತೀರ್ಥ ಕೊಟ್ಟೆಯೊ 46 ನಾರಾಯಣನಲಿ ಕರೆದೊಯ್ಯೆ ಬದರಿಪನ ಚರಣಾಬ್ಜಕೆರಗಿ ಹರಿಲೀಲೆ | ಸ್ಮರಿಸಿದ ಗುರುರತ್ನ ಸಲಹೊ ಧನ್ಯಾತ್ಮ 47 ಅಚ್ಯುತನ ಸಂಗದಲಿ ಚಿತ್ಸುಖವ ಉಂಡುಬ್ಬಿ ಹೆಚ್ಚಿನ ಪದವಿ ಇಲ್ಲೆಂದು | ನಲಿದಂಥ ಅಚ್ಯುತಾತ್ಮಾನೆ ಸಲಹೆನ್ನ 48
--------------
ಜಯೇಶವಿಠಲ
ಭಾರತೀಶನೆ ಬೇಗ ಬಾರೊ ಮನ್ಮನದಲಿ ಹರಣ ಪ ಚಾರು ಭಾಸ್ಕರ ಕ್ಷೇತ್ರ ಗಾರನೆ ದಶರಥಕುಮಾರ ಸೇವಕಾಗ್ರಣಿ ಅ.ಪ ವಾರಿಧಿ ಲಂಘಿಸಿದ ಶೂರನೆ ಗಿರಿಯಾಶ್ರಯದಿ ತೋರುವಿ ಶ್ರಮಪರಿ- ಹಾರಾರ್ಥಿಗಳ ತೆರ ಘೋರ ಪಾತಕಾಂಬುದ ಸ ಮೀರ ಪಾಲಿಸೆನ್ನನು 1 ತಂದು ನೀಡಿದಿ ದ್ರುಪದ ನಂದಿನಿಯಳಿಗೆ ಸೌ ಗಂಧಿಕ ಪುಷ್ಪ ದಯದಿ ವಂದಿಸುವೆನು ಮನ ಮಂದಿರದಲಿ ಯದು ನಂದನನಂಘ್ರೀ ನೋಳ್ಪಾ ನಂದವ ಕರುಣಿಸೊ 2 ಭೇದಾಬೋಧಿಸಿ ಬಲುಮೋದವ ಗರಿವ ಶಾಸ್ತ್ರ ನೀದಯದಲಿ ರಚಿಸಿ ವಾದಿ ಮದಗಜ ಮೃ ಗಾಧಿಪನೆನಿಸಿದ ಮೋದತೀರ್ಥಾಹ್ವಯಾ- ಗಾಧ ಮಹಿಮ ಗುರು 3 ಸತತ ಸೇವಿಪ ಗರ್ಭವತಿಯಾಗಿರುವ ವಿಪ್ರ ಸತಿಯ ನುಡಿಯ ಲಾಲಿಸಿ ನತಜನ ಪಾಲನೆ ಪ- ರ್ವತ ದಿಂದಿಳಿದಶ್ವತ್ಥ ಕ್ಷಿತಿರುಹ ಮೂಲದಿ ಪಾ- ರ್ವಾತಿ ನಾಥ ಸೇವಿತನೆ 4 ಈ ಸುಕ್ಷೇತ್ರದೊಳು ವಿದ್ವಾಂಸ ದೇವರಾಜಾಖ್ಯ ಸನ್ನುತ ವಾಸಕಾರ್ಪರ ನರ ಕೇಸರಿ ಗತಿ ಪ್ರಿಯ ದಾಸ ಪಾಲಿಸೊ ಗುರು ವ್ಯಾಸರಾಜ ಪೂಜಿತ 5
--------------
ಕಾರ್ಪರ ನರಹರಿದಾಸರು
ಭಾವೀ ಸಮೀರ ಶ್ರೀವಾದಿರಾಜರು ಕಾಯ ಕಾಯ ಬೇಕಯ್ಯ ಪ ಕಾಯ ಬೇಕೈ | ವಿಪ ಅಹಿಪ ಸುರಪಾದಿ ವಂದ್ಯವೆ |ವಿಪುಲ ಪಾಪಾಳಿಗಳ ಹರಿಸೀ | ಸುಪಥ ಸದ್ಗತಿಗೆನ್ನ ಒಯ್ದು ಅ.ಪ. ಗೌರಿದೇವಿಯ ಉದರಸಂಭವನೆ | ಹಯಾಸ್ಯನಂಘ್ರಿಸರಸಿರುಹದಲಿ ಮಧುಪ ನೆನಿಸಿದನೆ ||ದ್ವಾರಕಾದಿ ಕ್ಷೇತ್ರ ಚರಿಸುತ | ಥೋರ ಹಿಮಗಿರಿ ಸೇತುಯಾತ್ರೆಯಸಾರಿ ಸತ್ತೀರ್ಥ ಪ್ರಬಂಧವ | ಧೀರ ನೀ ರಚಿಸುತ್ತ ಮೆರೆದೆಯೊ 1 ಲಕ್ಷಿಸುತ್ತಲಿ ಮಾತೆ ಬಿನ್ನಪವ | ಮಹ ಭಾರತಸ್ಥಲಕ್ಷಪದ ಬಹು ಕ್ಲಿಷ್ಟವೆನಿಸೂವ ||ಲಕ್ಷಣದಿ ಸದ್ಯುಕ್ತ ಪದಗಳ | ಈಕ್ಷಿಸುತ ಅವಕರ್ಥ ಪೇಳುತಲಕ್ಷಸದ್ದಾಭರಣ ಮಾಲಿಕೆ | ಲಕ್ಷ್ಮಿಪತಿ ಹಯಾಸ್ಯಗರ್ಪಿತ 2 ಸೇವಿಸುತ್ತಿಹ ವಿಪ್ರನಾದವನ | ಕೌಟಿಲ್ಯ ಕಂಡುತೀವ್ರದಿಂದಲಿ ಶಾಪವಿತ್ತವನ ||ಭಾವ ತಿಳಿದು ಬೊಮ್ಮರಾಕ್ಷಸ | ಭಾವತಾಳೆಂದೆನುತ ಪೇಳಲುತೀವ್ರ ಯಾಚಿಸೆ ಕ್ಷಮೆಯ ಮಂತ್ರವ | ಆವ ಆಕಾಮ್ಮೈವ ನೊರೆದೆ 3 ಮರಳಿ ಉತ್ತರ ಯಾತ್ರೆಯಲ್ಲಿರಲು | ಗುರು ವಾದಿರಾಜರಅರಿಯದಲೆ ತನ್ಮಂತ್ರ ಪೇಳಲು ||ಒರೆದರೂ ರಂಡೇಯ ಮಗ ನೀ | ನಿರುತಿರುವೆನ ಸ್ನಾತ ಕಾರ್ತಿಕಮರಳಿ ಮಾಘಾಷಾಢ ವಿಶಿಖದಿ | ಹರಿಯಿತೂ ನಿನ ಶಾಪವೆಂದರು 4 ಆತುಗುರುಪದ ಕ್ಷಮೆಯ ಪ್ರಾರ್ಥಿಸಲು | ಗುರುರಾಜರಾಗಭೂತ ರಾಜನು ನೀನೆ ಎನ್ನುತಲು ||ಖ್ಯಾತಿ ಪೊಂದುತ ಭಾವಿರುದ್ರನೆ | ಪೊತ್ತು ಎನ್ನಯ ಮೇನೆ ಮುಂಗಡೆಕೌತುಕವ ತೋರುತ್ತ ಮೆರೆವುದು | ಪೋತ ಭಾವದಿ ತಮಗೆ ಎಂದರು 5 ಕಾಕು ಶೈವನ ಖಂಡಿಸುತ್ತಲಿಆಕೆವಾಳರ ಪೊರೆದು ದಶಮತಿ | ತೋಕನೆಂದೆನಿಸುತ್ತ ಮೆರೆದೇ 6 ಭೂವಲಯದೊಳು ಕಾರ್ಯ ಪೂರೈಸಿ | ಬದರಿಯಿಂದಲಿಭಾವಿ ಶಿವನಿಂ ಪ್ರತಿಮೆ ರಥತರಿಸೀ ||ದೇವ ಗೃಹ ಸಹ ವಿರುವ ವಿಗ್ರಹ | ತ್ರೈವಿಕ್ರಮನ ಸಂಸ್ಥಾಪಿಸುತ್ತಭಾವ ಭಕ್ತಿಯಲಿಂದ ಉತ್ಸವ | ತೀವರದಿ ರಚಿಸುತ್ತ ಮೆರೆದೆ 7 ಹಂಚಿಕಿಂದಲಿ ಪೂರ್ವರಚಿತೆನ್ನ | ವೃಂದಾವನಂಗಳುಪಂಚ ಸಂಖ್ಯೆಯಲಿಂದ ಮೆರೆವನ್ನೆ ||ಮುಂಚೆಯೇ ಸ್ಥಾಪಿತವು ಎನ್ನುವ | ಪಂಚರೂಪೀ ವ್ಯಾಸ ಸಮ್ಮುಖಸಂಚುಗೊಳಿಸೀ ಸ್ಥಾಪಿಸುತ್ತ | ಕೊಂಚವಲ್ಲದ ಕಾರ್ಯ ರಚಿಸಿದೆ 8 ಯುಕ್ತಿಮಲ್ಲಿಕೆ ರುಕ್ಮೀಣೀಶ ಜಯ | ಗುರ್ವರ್ಥ ದೀಪಿಕೆಮತ್ತೆ ಪರಿಪರಿ ಶಾಸ್ತ್ರ ಗ್ರಂಥಗಳ ||ವಿಸ್ತರಿಸಿ ಭುವನದಲಿ ಮೆರೆದೆ | ಉತ್ತಮೋತ್ತಮ ದೇವ ದೇವನುಕರ್ತೃ ಶ್ರೀಹಯ ಮುಖನು ಎನ್ನುತ | ವತ್ತಿ ಪೇಳುತ ವ್ಯಾಪ್ತಿಸಾರಿದೆ 9 ಶಿಷ್ಟ ಜನ ಸಂಸೇವ್ಯ ಧೀವರನೆ | ಶಮದಮಾನ್ವಿತಕಷ್ಟಹರ ಕಾರುಣ್ಯ ಸಾಗರನೇ ||ಕುಷ್ಟ ಅಪಸ್ಮಾರ ರೋಗದ | ಅಟ್ಟುಳಿಯ ಕಳೆಯುತ್ತ ಮೃತ್ತಿಕೆಸುಷ್ಠುಸೇವನೆಯಿಂದ ಭಕ್ತರ | ಇಷ್ಟವನೆ ಸಲಿಸುತ್ತ ಮೆರೆವೆ 10 ಹಯಾಸ್ಯ ವಾಹನ | ಬಿಡದೆ ಏರುತ ಸಾರ್ದೆ ಹರಿಯನು 11
--------------
ಗುರುಗೋವಿಂದವಿಠಲರು
ಭೀಮ ಪರಾಕ್ರಮ ನಿರುಪಮ ಪ್ರೇಮ ಪ ದಾನವಭೀಮ ಕುವಲಯ ಶ್ಯಾಮ ಅ.ಪ ಕೋಸಲಪುರಪಾಲ ದಶರಥ ಬಾಲ ದುರುಳ ಕುಲಾನಲ ಘನಗುಣಶೀಲ ಕನಕದುಕೂಲ ಮಣಿಮಯ ಮಾಲಾ ಕರುಣಾಲವಾಲ 1 ಪವನಸುತಾನತ ಸುಗುಣಗಣಾನ್ವಿತ ಭರತ ಸಂಶೋಭಿತ ಮುನಿಗಣ ಸೇವಿತ ಕಮಲದಳಾಯತ ಲೋಚನ ಸುಲಲಿತ ಕುಂಭಜಪೂಜಿತ ಮಾಂಗಿರಿನಾಥ 2
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಭೀಮ ಶೈನನೆ ಸತ್ಯಭಾಮಾ ಪ್ರಿಯನ ಪರಮ ಪ್ರೇಮ ಪಾತ್ರನೆ ಪಾಹಿಮಾಂ ಪ ಭೂಮಿಯೊಳು ಶೇವಿಸುವರಿಗೆ ಸುರ ಭೂಮಿರುಹ ವೆಂದೆನಿಸಿ ಪೊರೆಯಲು ಗ್ರಾಮ ಮೋತಂಪಲ್ಲಿ ಕ್ಷೇತ್ರ ಸುಧಾಮರಿಪುಕುಲ ಭೀಮನೆನಿಸಿದ ಅ.ಪ ರಾಮಕಾರ್ಯವನು ನಿಷ್ಕಾಮದಿ ಸಾಧಿಸಿ ಧಾಮ ಕಿಂಪುರುಷದಲ್ಲಿ ಭೂಮಿಜಾವಲ್ಲಭನ ಶುಭಗುಣ ಸ್ತೋಮಗಾನದಿ ರಮಿಸುತಿರೆ ಬಡ ಭೂಮಿದೇವನ ಪ್ರಾರ್ಥನದಿ ಬಂದೀ ಮಹಾ ಶಿಲೆ ಯೊಳಗೆ ನೆಲಸಿಹ 1 ರಾಜಕುಲಜ ಪಾಂಡುರಾಜ ನಾತ್ಮಜ ಧರ್ಮರಾಜನನುಜನೆನಿಸಿ ರಾಜ ಸೂಯಾಗವನೆ ಮಾಡಿಸಿ ಪೂಜಿಸಿದಿ ಸಿರಿಕೃಷ್ಣನಂಘ್ರಿಯ ರಾಜ ಕೌರವ ಬಲವ ಮದಿಸಿ ವಿರಾಜಿಸಿದ ಸುರರಾಜ ನಮೋ ನಮೋ 2 ಪುಟ್ಟಿಮೇದಿನಿ ಸುರಸದ್ಮದಿ ಗಜ ಪಂಚಾಸ್ಯನೆನಿಸಿಸು ಜನಕತಿ ಮೋದನೀಡಿದ 3 ಗಣಕೆ ಗಂಧವಾಹನನೆನಸಿ ಶೇಷ ಗಿರೀಂದ್ರಯಾತ್ರೆಗೆ ವೃಂದ ಸಲಹುವಿ 4 ಶೇರಿದವನೆ ಧನ್ಯನೋ ಭಜಿಸಿ ವಿಮುಕ್ತನಾದನು ಸುರಋಷಿಯ ಪದವನು 5 ಸುವಿಶಾಲ ಮಂಟಪ ಮಧ್ಯದಿ ಕೈಕೊಳುತ ಭಕುತರ ಗುರುವರ ಪಾಲಿಸೆನ್ನನು 6 ಬಂಗಾರದಾಭರಣಂಗಳಿಂದೊಪ್ಪುತ ಶೃಂಗಾರದಿಂ ಶೋಭಿತ ಸರ್ವೇಷ್ಟದಾಯಕ ಪ್ರಥಮಾಂಗನೆನಿಸಿದ 7
--------------
ಕಾರ್ಪರ ನರಹರಿದಾಸರು
ಭೀಮಶೇನಾರ್ಯರು | ಭೂಮಿತ್ಯಜಿಸಿ ಪರಂ ಧಾಮವ ಸೇರಿದರು || ಶ್ರೀಮತ್ ಕಾರ್ಪರ ಕ್ಷೇತ್ರ | ಸ್ವಾಮಿಯ ಸಂಪೂರ್ಣ ಪ್ರೇಮ ಪಡೆದವರು | ಕೇಳಿದವರು ಪ ಪರಿಮಳ ಗಾತ್ರರ ಕರುಣ ಪ್ರಸಾದದಿ ಧರೆ ಸುರಾಗ್ರಣಿ ಎನಿಪ ವರ ಜಯಾರ್ಯರ ಪತ್ನಿ | ನರಸಾಂಬೆಯಗರ್ಭ ಶರಧಿಗೆ ಹರಿಣಾಂಕರು ಸುಶಾಂತರು 1 ಎಡರೇಸು ಬಂದರೂ ಬಿಡದೆ ಸ್ವಧರ್ಮವ ಕಡುಭಕ್ತಿ ಪೂರ್ವಕದಿ ಹುಡುಗನ ಮಾತಿಗೆ | ಒಡೆದುಸ್ತಂಭದಿ ಬಂದ ಒಡೆಯನರ್ಚಿಸಿದವರು | ಕೋವಿದರು 2 ಪಂಚಬಾಣನ ಗೆದ್ದು | ಪಂಚ ಭೇದವನರಿತು ಪಂಚಾಸ್ಸನುತ ಮಾನವ ಪಂಚಾಶ್ಯದಯದಿ ಪ್ರಪಂಚ ಸಾಗಿಸುವಂಥ ಪಾಂಚಾಲಿಪತಿ ಪ್ರಿಯರು | ನಿಷ್ಕಿಂಚನರು 3 ವತ್ಸರ ಪರಿಯಂತ ನಿಷ್ಟೆಯಲಿ ನಿರುತ ತಪ ಚಳಿ ಮಳೆ ಸಹಿಸಿ ಪರಮೇಷ್ಟಿ ಜನಕನ ನಿರುತ ಸೇವಿಸಿದವರು | ನಿರ್ಮಮರು 4 ವಿನಯ ಸುಶೀಲ ಸದ್ಗುಣದಿ ಭೂಷಿತರಾದ ತನಯರೀರ್ವರ ಕರೆದು ರಿಣವಿನು ತೀರಿತು ಎನುತ ಪೇಳುತ ದ್ವಿಜಗಣಿಕೆ ದಕ್ಷಿಣೆ ನೀಡಿ ನಮನ ಮಾಡಿ 5 ಹರುಷ ಭರಿತರಾಗಿ ಸರ್ವಜಿತು ನಾಮದ ವರುಷದೊಳ್ ಯುಗ ಮಾಸದಿ | ಶರದಪಕ್ಷ ಪ್ರತಿಪದ ಪ್ರಥಮ ಕಾಯ 6 ವರುಷಂ ಪ್ರತಿ ತಪ್ಪದೆ | ಚರಿಸುತ ದೇಶದೋ ಳಿರುವ ಸದ್ಭಕ್ತರಿಗೆ | ವರಶಾಮ ಸುಂದರ ನರಹರಿದರುಶನ | ಗರೆದ ಪಾಲಿಸಿದವರು ಪಾವನ್ನರು 7
--------------
ಶಾಮಸುಂದರ ವಿಠಲ