ಒಟ್ಟು 10544 ಕಡೆಗಳಲ್ಲಿ , 133 ದಾಸರು , 5597 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಇನ್ನುಪೇಕ್ಷೆಯ ಮಾಡೆ ಎನ್ನ ಕಾಯುವರಿಲ್ಲ ಮನ್ನಿಸಿ ಸಲಹೊ ದಯದಿ ಪ ಆಪನ್ನ ಪರಿಪಾಲ ಶ್ರೀನಿವಾಸ ಅಖಿಳಾಮರೇಶ | ಶ್ರೀಶಾ ಅ.ಪ ಕ್ರೂರತರ ಸಂಸಾರ ದಾವಾಗ್ನಿ ಮೇರೆಯಿಲ್ಲದೆ ಸುಟ್ಟು ಘೋರ ದುಃಖ ಬಿಡಿಸುತಿಹುದೊ ವಾರಿಜಾಕ್ಷ ನಿನ್ನ ನಾಮಾಮೃತವೆಂಬ ಮಳೆಗರೆದು ಹರಸಿ ಪೊರೆಯಯ್ಯ | ಜೀಯ 1 ಸತಿಸುತರ ಹಿತಕಾಗಿ ಅತಿ ನೀಚವೃತ್ತಿಲಿ ನಡೆದು ಪತಿತ ನಾನಾದೆನಯ್ಯ ಪತಿತಪಾವನ ನಿನ್ನ ಕಥೆಗಳನು ನುಡಿಸಿ ಸ- ದ್ಗತಿಯ ಪಾಲಿಸಯ್ಯ | ಪ್ರೀಯ 2 ಆರು ಮಂದಿಗಳೆಂಬ ವೈರಿಗಳೆನ್ನನು ಸೇರಿ ಗಾರು ಮಾಡುತಲಿಹರೊ ಕಂಸಾರಿ ಸೇರಿದೆ ಪರಿಹರಿಸೊ ಕಷ್ಟ | ನಿನ್ನಿಷ್ಟ 3 ಪಶುಪತಿ ಘುಡುಘುಡಿಸಿ ವ್ಯಸನದಿಂ ಕೊಲ್ಲುತಿಹುದೋÀ ಶ್ವಸನ ಅಂತರ್ಯಾಮಿ ನಿಶಾಚರ ವೈರಿ ವಶಮಾಡಿ ಎನ್ನ ಪೊರೆಯೊ | ಕಾಯೊ 4 ಅತಿತ್ತ ಪೋಗದಲೆ ಹಿತವಾದ ಚಿಂತೆಯೊಳು ರತನಾಗಿ ಖತಿಗೊಳ್ಳುತಿಹೆನೊ ಸ್ಮøತಿಯಿತ್ತು ಪಾಲಿಸೊ | ಸಲಿಸೊ 5 ಒಂದು ಕ್ಷಣವಾದರು ಕುಂದು ಮಾಳ್ಪಾಲೋಚನೆ ಯಿಂದ ಮನ ಹಿಂದಾಗದೊ ಆನಂದ ಮುನಿವಂದ್ಯ ದ್ವಂದ್ವತಪ ಪಾದದಿ ಮನ ಹೊಂದುವಂದದಿ ಮಾಡೊ | ಎನ್ನ ಕೂಡೊ 6 ಐಹಿಕ ಸುಖ ಬಯಸಿ ಲೋಕದ ವಿಹಿತಗಳೆಲ್ಲ ಮರೆದೆ ತಲ್ಪ ವಿಜಯರಾಮಚಂದ್ರವಿಠಲ ಪಾಹಿ ಸತತಯೆನ್ನ | ಮುನ್ನ 7
--------------
ವಿಜಯ ರಾಮಚಂದ್ರವಿಠಲ
ಇನ್ನೂ ಭ್ರಾಂತಿಯ ಮಾಡುವರೆ | ನನ್ನದೆಂದು ಆಡುವರೆ |ತನ್ನ ತಾ ತಿಳಿಯದೆ | ಅನ್ಯರ ಗುಣದೋಷ ನೋಡುವರೆ ಪ ಸ್ತುತಿಸುತ ಬಂದರೇನು | ಮತ್ತೆ ಜಲವ ಮಿಂದರೇನು | ಎತ್ತ ಹೋದರೂ ದಣಿವಿಕೆಯಿಲ್ಲದೆ | ನಿತ್ಯಾನಿತ್ಯ ವಿವರಿಸಲಿಲ್ಲ 1 ಮಾತಿನ ಬಣವಿಯನೊಟ್ಟಿ | ಸ್ವಂತ ವಿಷಯಂಗಳ ಮುಟ್ಟಿ |ಯಾತಕೆ ವೈರಾಗ್ಯದ ಮಾತು | ಮಾತಿನಂತೆ ನಡೆದರಾಯಿತು 2 ನಾನು ದೊಡ್ಡವ ನನ್ನವರೆಂದು | ಜ್ಞಾನ ಗರ್ವದ ಮನೆಗೆ ಬಂದು | ಜ್ಞಾನಬೋಧನ ಪ್ರಭುವ ಕೂಡದೆ ದೀನನಾಗಿ ಬಳಲುವದೇನೊ 3
--------------
ಜ್ಞಾನಬೋದಕರು
ಇನ್ನೆಲ್ಲಿ ಪರಮುಕ್ತಿ ಸಾಧನವು ನಿಮಗೆ ಭಿನ್ನ ಭೇದವಳಿಯದ ಕುನ್ನಿಮನುಜರಿಗೆ ಪ ಆಸೆಮೊದಲಳಿದಿಲ್ಲ ಮೋಸಕೃತಿನೀಗಿಲ್ಲ ಹೇಸಿ ಸಂಸಾರದ ವಾಸನ್ಹಿಂಗಿಲ್ಲ ದೋಷಕೊಂಡದಿ ನೂಕ್ವ ಕಾಸಿನಾಸ್ಹೋಗಿಲ್ಲ ದಾಸಜನ ವ್ಯಾಸಂಗ ಕನಸಿನೊಳಗಿಲ್ಲ 1 ಸತಿಮೋಹ ಕಡಿದಿಲ್ಲ ಸುತರಾಸೆ ಬಿಟ್ಟಿಲ್ಲ ಅತಿಭ್ರಮೆ ಸುಟ್ಟಿಲ್ಲ ಹಿತಚಿಂತನಿಲ್ಲ ಸ್ಮøತಿವಾಕ್ಯ ಅರಿತಿಲ್ಲ ಅತ್ಹಿತಪಥಗೊತ್ತಿಲ್ಲ ಗತಿಮೋಕ್ಷ ಕೊಡುವಂಥ ಪವಿತ್ರರೊಲಿಮಿಲ್ಲ 2 ಹಮ್ಮು ದೂರಾಗಿಲ್ಲ ಹೆಮ್ಮೆಯನು ತುಳಿದಿಲ್ಲ ಬ್ರಹ್ಮತ್ವ ತಿಳಿದಿಲ್ಲ ಚುಮ್ಮನದಳಿಕಿಲ್ಲ ಕರ್ಮ ತುಸು ತೊಳೆದಿಲ್ಲ ಧರ್ಮಗುಣ ಹೊಳಪಿಲ್ಲ ನಿರ್ಮಲಾನಂದ ಪದವಿ ಮರ್ಮ ಗುರುತಿಲ್ಲ 3 ಸತ್ಯಸನ್ಮಾರ್ಗವಿಲ್ಲ ಭೃತ್ಯನಾಗಿ ನಡೆದಿಲ್ಲ ಉತ್ತಮರೊಳಾಡಿಲ್ಲ ಮತ್ರ್ಯಗುಣ ತೊಡೆದಿಲ್ಲ ನಿತ್ಯಸುಖ ದೊರೆವಂಥ ಸತ್ಸೇವೆಯಿಲ್ಲ4 ಮೂರಾರು ಕೆಡಿಸಿಲ್ಲ ಈರೈದು ತರಿಸಿಲ್ಲ ಆರೆರಡು ಮುರಿದಿಲ್ಲ ತಾರತಮ್ಯವಿಲ್ಲ ಸಾರಮೋಕ್ಷದೀಪ ಧೀರ ಶ್ರೀರಾಮನಡಿ ಗಂ ಭೀರ ದಾಸತ್ವ ಸವಿಸಾರ ಕಂಡಿಲ್ಲ 5
--------------
ರಾಮದಾಸರು
ಇನ್ನೆಷ್ಟು ಹರಿಮಹಿಮೆ ಬಣ್ಣಿಸ್ಹೇಳಲಿ ನಿನಗೆ ನಿನ್ನೊಳು ನೀ ತಿಳಿದು ಧನ್ಯಾನಾಗೆಲೊ ಮನಸೆ ಪ ತನ್ನನ್ನು ಭಜಿಪರ ತನ್ನಂತೆ ನೋಡುವ ಉನ್ನತ ಕರುಣ್ಯೆಂದು ಚೆನ್ನಾಗಿ ನೆರೆನಂಬಿ 1 ಮೊರೆಯಿಟ್ಟು ಬೇಡುವ ಚರಣದಾಸರನಗಲಿ ಅರೆಗಳಿಗೆಯಿರ ಹರಿ ಚರಣಕ್ಕೆ ಮರೆಬೀಳು 2 ನಂಬಿದ ಭಕುತರ ಚರಣದಾಸರನಗಲಿ ನಂಬಿ ನೀ ನಗಲದೆ ಗುಂಭದಿಂ ಸ್ಮರಿಸೆಲೊ 3 ಮಾನವು ಪೋದರೇನು ಹಾನಿಯೊದಗಿದರೇನು ಪ್ರಾಣಪೋದರು ಹರಿಧ್ಯಾನ ಮರೆಯದಿರು 4 ನಾಶವಿಲ್ಲದೆ ತನ್ನ ದಾಸರ ಕಾಯ್ವನನು ಮೇಷ ಶ್ರೀರಾಮಪಾದ ಧ್ಯಾಸದೊಳಿಡು ಗಟ್ಟಿ 5
--------------
ರಾಮದಾಸರು
ಇನ್ನೇತರೊಳಗಾಸೆ ಎನಗಿಲ್ಲವೋ ಈಗಳಿನ್ನು ಹರಿನಾಮ ಸಂಕೀರ್ತನೆಯೊಂದು ಹೊರತಾಗಿ ಪ ನೋಡಿ ಸಾಕಾಯ್ತು ಲೋಕದ ಪ್ರಪಂಚವನು ಪೇ ಚಾಡಿ ಸಾಕಾಯ್ತು ದರಮಂ ಪೊರೆಯಲು ಆಡಿ ಸಾಕಾಯ್ತು ಸುಜನರೊಳ ನೃತಗಳನು ಒಡ ನಾಡಿ ಸಾಕಾಯ್ತು ಕುಜನರ ಸಂಗದೊಳಗೆ 1 ಉಂಡು ಸಾಕಾಯ್ತು ಸಂಸಾರ ಸುಖ ದುಃಖವನು ನಾ ಕಂಡು ಸಾಕಾಯ್ತು ಸುಜನರ ಭಂಗವನು ತಂಡಿ ಸಾಕಾಯ್ತು ಪರಸೇವೆಯನು ಮಾಡಿ ಜನ ರಂಡಲೆದು ಬೇಡಿ ಸಾಕಾಯ್ತು ಈ ಭವಕೆ 2 ತಿರು ತಿರುಗಿ ಸಾಕಾಯ್ತು ತಲೆ ಹುಳಿತ ನಾಯಂತೆ ಪರಿ ಪರಿಯ ದುಃಖಗಳನುಣ್ಣುತ ಚರಿಸಿದೆನು ಮರುತಸುತ ಕೋಣೆ ಲಕ್ಷ್ಮೀರಮಣ ಇರಿಸಿದಂತಿರ ಬೇಕು ಸಕಲಜನರು 3
--------------
ಕವಿ ಪರಮದೇವದಾಸರು
ಇನ್ನೇನ ಮಾಡುವೆ ಇನ್ನಾರ ಬೇಡುವೆ ಪ್ರ-ಸನ್ನ ಚೆನ್ನಕೇಶವ ಎನ್ನ ಬಿನ್ನಪವಮನ್ನಿಸಿ ದಿನದಿನದಲ್ಲಿನಿನ್ನನರ್ಚಿಪಂತೆ ಮಾಡು ಪ. ಮೊಲೆಯುಂಬ ಹಸುಗೂಸು ಮಾತನಾಡಿ ತನ್ನಮನದಭೀಷ್ಟವ ಪೇಳ್ವುದೆಚೀರಿ ಅಳುವದೈಸೆ ಅದನರಿತು ಅದರ ತಾಯಿಅಪ್ಪ್ಪಿಮುದ್ದಾಡಿಸುತ್ತಬಳಲಿಕೆÀ ಪೋಪಂತೆ ನಸುಬಿಸಿಪಾಲನುಬಾಯೆಂದು ಕುಡಿಸುವಳುಸಿರಿಲಲನೆಯರಸ ನಮ್ಮ ಈ ಪರಿಯಲಿನೀನು ಲಾಲಿಸಿ ಸಲಹಬೇಕು 1 ಕರಿ ಕರೆಯಲುಪೊರೆದಂತೆ ಪೊರೆಯೆನ್ನನುಮಕರಿಯ ಕೊಂದು ಪೊರೆದಂತೆ2 ಹುಲಿಯ ಕಂಡೋಡುವ ಹುಲ್ಲೆಯ ಮರಿಯಂತೆಭವದ ಬೇಗೆಯಲಿ ಬೆಂದೆ ವಿಘಳಿಗೆ ಘಳಿಗೆಯೊಳು ಅಲಸದೆ ಪಾಪವಗÀಳಿಸುವ ಗÀಸಣೆಗಂಜೆತುಳಸಿಯ ದಳದಿಂದ ಸಂತುಷ್ಟನಹ ನಿನ್ನಒಲಿಸುವ ಭಾಗ್ಯದಲ್ಲೆ ಈ ಇಳೆಗೆ ಭಾರವಾದೆಇಹಪರ ದುಃಖದ ಹಂಬಲಿಕೆ ಎಳ್ಳಷ್ಟು ಇಲ್ಲಸನ್ಮಾರ್ಗದ ಹಂಬಲಿಕೆ ಎಳ್ಳಷ್ಟು ಇಲ್ಲ ಅಪವರ್ಗದ ಹಂಬಲಿಕೆ ಎಳ್ಳಷ್ಟು ಇಲ್ಲ3 ಹೆಂಡಿರ ಸಾಕಲಾರದೆ ಹೆಣ್ಣು ಮಕ್ಕಳುಗಳಕಂಡ ಕಂಡವಗೆರ್À ಮಾರಿ ಜಗಭಂಡನೆನಿಸಿಕೊಂಡೆ ಬಡತನ ಹಿಂಗದೆಕೊಂಡೆಯಗಳ ಪೇಳುವೆಉಂಡುಡುವರ ಕಂಡು ಮತ್ಸರ ಮಾಡುವೆತಂಡ ತಂಡÀದವರಿಂದ ಕಡಗೊಂಡರ್ಧನ ಕೊಡದೆ ಕಲ್ಲಪೊರುವೆನು ಕೋ-ದಂಡವೇರಿಸಿ ಕೊಂಡೆನು 4 ದಂಡವಿಡಿದು ವೇಷಧಾರಿಯೆಂಬುದ ಕೈಕೊಂಡು ರಾವಣನಂತೆ ಚರಿಸಿ ಎನ್ನಮಂಡೆ ಬೋಳು ಮಾಡಿ-ಕೊಂಡು ಇಳೆಯೊಳು ಪರಸತಿಯರ ಮೋಹಿಪೆಪುಂಡರೀಕಾಕ್ಷ ಈ ಪರಿಯ ಕ್ಲೇಶಗಳನುಉಂಡರೆÀ ವೈರಾಗ್ಯ ಬಾರದು ಎಲೆಪಾಂಡವಪ್ರಿಯ ಇನ್ನಾರಿ ಗುಸುರುವೆನು ಉ-ದ್ದಂಡಭಕ್ತರ ಸೇರಿಸೊ ಕೈ-ಕೊಂಡು ನಿನ್ನುದ್ದಂಡಭಕ್ತರ ಸೇರಿಸೊ5 ತಪ್ಪಿದರೆ ತಾಯಿ ತನ್ನ ಮಕ್ಕಳುಗಳತಕ್ಕೈಸಿಕೊಂಬವೊಲು ಕಾಮ-ನಪ್ಪ ಎನ್ನಪ್ಪ ಒಂದು ಕೊರತೆಯ ಕಾಣದೆಕರುಣದಿ ಕಾಯಬೇಕುಅಪಾರಮಹಿಮ ನೀನಾಶ್ರಿತ ಜನರನುಅತ್ತ ಹೋಗೆನ್ನೆ ಗಡ ನೀನ-ಪ್ರತಿಮಹಿಮನೆನಿಸಿಕೊಂಡೆ ಅದರಿಂದಅಮರರ ಶಿರೋರನ್ನವೆ ಅರ್ಜುನಸಖಅಮರರ ಶಿರೋರನ್ನವೆ 6 ಸರಿಮಿಗಿಲಿಲ್ಲದ ಸರ್ವೇಶ ಹರಿಯೆಂದುಸಿರಿಹಯವದನರಾಯ ನಿನ್ನಪರಮ ಮುನಿಗಳೆಲ್ಲಪರೀಕ್ಷೆಮಾಡಿ ನೋಡಿಮುನ್ನ ನಿರ್ಣೈಸಿದರುಹಿರಿಯರ ಮಾತನು ಪಾಟಿಮಾಡದನಗೋತ್ರ ಸೂತ್ರಗಳು ಪೋಕುಪ್ರವರ ಗೋತ್ರ ಋಷಿಮೂಲಯೆಂದು ಪ್ರಸಿದ್ಧ ಇನ್ನಾರು ನಿನ್ನಂಥವರು 7
--------------
ವಾದಿರಾಜ
ಇನ್ನೇನು ಗತಿ ಎನಗೆ ಈ ಉದರಪೋಷಣಕೆನಿನ್ನ ಸೇವೆಯನಿತ್ತು ಸಲಹೊ ರಾಮೇಶ ಪ ಊರೂರ ತಿರುಗಿ ಭಿಕ್ಷವ ಬೇಡಲಾರೆ ನಾಂಘೋರ ವಿಷವನು ಮೊದಲೆ ಕುಡಿಯಲಾರೆನೀರ ಹೊರಲಾರೆ ಬಾಗಿಲ ಕಾಯಲಾರೆ 1 ಧರಿಸುವರೆ ವಸ್ತ್ರವಿಲ್ಲದೆ ಲೋಕದೋಳ್ ದಿಗಂ-ಬರನಾಗಿ ನಿನ್ನಂತೆ ಚರಿಸಲಾರೆಕರಿ ವ್ಯಾಘ್ರಚರ್ಮವನು ಪೊದೆದು ವರ್ತಿಸಲಾರೆಧರೆಯರಿಯೆ ನಟನಾಗಿ ಕುಣಿದಾಡಲಾರೆ 2 ಭಂಗ ರಾಮೇಶಲಿಂಗ 3
--------------
ಕೆಳದಿ ವೆಂಕಣ್ಣ ಕವಿ
ಇನ್ನೇನು ನೋಡುವಿ ನೆಲಿಯಾ | ಬನ್ನ ಬಿಡಿಸಿ ಕಾಯೋ ಶ್ರೀ ಗುರುರಾಯಾ ಪ ದಾಸಿಗೆ ಕರುಣಿಸಿ ರಾಯರಂಭೆಯ ಮಾಡಿ | ದೋಷವೆಣಿಸುವನೆ ಮುನ್ನಿನ ನೋಡಿ 1 ಸರಿ ತಾ ಹರಿದು ಬಂದು ಗಂಗೆಯಾ ಕೂಡಲಿ | ತಿರುಗಿ ನೂಕುವದೇನು ಜರೆಯುತಲಿ2 ತಂದೆ ಮಹಿಪತಿ ನಿಮ್ಮ ನಂದನನೆನಿಸುತ | ಕುಂದ ನಾರಿಸುವದು ಬಿರುದಿಗುಚಿತಾ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಇನ್ನೊಬ್ಬರಿಗೆ ಇದು ಏನು ತಿಳಿದೀತು ಧ್ರುವ ವೇದಾಂತಕಿದು ಸನ್ಮತಗೂಡುವ ಮಾತು ಸಾಧುಜನರಿಗೆ ಸಾಕ್ಷಿಯಾಗಿ ದೋರುವ ಮಾತು ಸಾಧನಕೆ ಸಾಧಿಸುವ ಮಾತು ಬೋಧಿಸಿದವಗೆ ಬಲವಾಗುವ ಮಾತು 1 ಕೋಟಿ ಜನ್ಮದಾ ಪುಣ್ಯವಂತಗಿದಿರಿಡುವ ಮಾತು ನೋಟ ನಿಜವಾದವಗೆ ನೀಟವಾಗಿಹ ಮಾತು ಸೂಟಿಗಿದೆ ಘನಕೂಟ ಮಾತು ನಾಟಿಮನದೊಳು ಮಥಿüಸುವ ಮಾತು 2 ದ್ವೈತ ಅದ್ವೈತಕ ಆಧಾರವಾಗುವ ಮಾತು ತ್ರಯಗುಣಕ ಮೀರಿ ಮಿಗಿಲಾಗಿ ದೋರುವ ಮಾತು ಮಹಿಪತಿಯ ಗುರುಗೂಢ ಮಾತು ತ್ರಯಲೋಕಕಿದೆ ತಾರಿಸುವ ಮಾತು 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಇನ್ಯಾಕೆ ಭವಬಾಧೆ ಇವಗೆ ಪನ್ನಂಗಶಯನನಡಿ ಚೆನ್ನಾಗಿ ಭಜಿಪವಗೆ ಪ ದುರಿತ ದುರ್ಗುಣಗಳನು ತರಿದೊಟ್ಟಿ ನ ಶ್ವರದ ಸಿರಿಯನಾಪೇಕ್ಷಿಸಿದೆ ನಿರುತ ಮಾನಸದಿ ಪರಕೆ ಪರತರವೆನಿಪ ಹರಿಯಂಘ್ರಿ ಎಡೆಬಿಡದೆ ಸ್ಮರಿಸುತ ಮನದೊಳಗೆ ಹರುಷಬರುವವಗೆ 1 ಹೀನಸಂಸಾರದ ನಾನಾ ಸಂಪದವೆಲ್ಲ ಶ್ವಾನನ ಕನಸಿನಂತೇನಿಲ್ಲವೆನುತ ಜ್ಞಾನದೊಳಳವಟ್ಟು ಜಾನಕೀಶನ ಧ್ಯಾನ ಮಾನಸದಿ ಒಲಿಸಿಕೊಂಡಾನಂದಿಸುವವಗೆ 2 ಹೇಸಿಯ ಪ್ರಪಂಚದ್ವಾಸನವನಳುಕಿಸಿ ದಾಸಜನ ಸಂಪದವೆ ಶಾಶ್ವತವೆನುತ ಶ್ರೀಶ ಶ್ರೀರಾಮನ ಸಾಸರನಾಮಗಳ ಧ್ಯಾಸದ್ಹೊಗಳುತ ಸಂತೋಷದಿರುವವಗೆ 3
--------------
ರಾಮದಾಸರು
ಇರಬಾರದೊ ಬಡವ ಜಗತ್ತಿನೊಳಗೆ | ಪರದೇಶಿ ಮಾನವಗೆ ದಿಕ್ಕು ಮತ್ತಾವನು ಪ ಪೊಡವಿಪತಿ ದೃಷ್ಟಿಗಳು ಒಳ್ಳೆವಲ್ಲಾವೆಂದು | ಬಿಡದೆ ಜನ ಪೇಳುವುದು ಸಿದ್ಧವಯ್ಯಾ | ಬಡವ ನಾನಯ್ಯ ನಾನಾ ಕಷ್ಟಬಟ್ಟೆರಡು | ಒಡವೆ ಸಂಪಾದಿಸಲು ಅಪಹರಿಸಿದ ನೋಡು 1 ದಿನ ಪ್ರತಿ ದಿನದಲ್ಲಿ ಕರಳು ಕಟ್ಟಿಕೊಂಡು | ಹಣದಾಸಿಯಿಂದ ನಾ ಘಳಿಸಿದ್ದೆನೊ | ಮನೆವುಗೆ ಬಂದು ಮಾಡಿಕೊಂಡೊಯ್ದಿಯಾ ಧರ್ಮವೇ | ವನಜನಾಭನೆ ನಿನ್ನ ದೊರೆತನಕೆ ಶರಣೆಂಬೆ2 ದೊರೆಗಳಾ ಲಕ್ಷಣವಿದೆ ಎಂದೆಂದಿಗೆ ತಮಗೆ | ಸರಿಬಂದ ಕಾರ್ಯಮಾಡುವರಲ್ಲದೇ | ನೆರೆಯವರದೇ ತಪ್ಪೇ ವಿಜಯ ವಿಠ್ಠಲರೇಯ | ಮರಳೆ ಮಾತಾಡಿದರೆ ಅಪರಾಧ ಹೊರಿಸುವರು 3
--------------
ವಿಜಯದಾಸ
ಇರಬೇಕು ನಿಂದಕರು ಸಜ್ಜನರಿಗೆ ಪ ದುರಿತ ರಾಶಿಗಳ ಪರಿಹರಿಸಲೋಸುಗ ಅ.ಪ. ಕಲುಷ ಕರ್ಮವ ಮಾಡೆ ಕಳೆವರಿನ್ನಾರೆಂದು ಕಮಲಭವನು ತಿಳಿದು ನಿರ್ಮಿಸಿದವನಿಯೊಳಗೆ ನಿಂದಕರ ಕಲುಷರನ ಮಾಡಿ ತನ್ನವರ ಸಲಹುವ 1 ದಿವಿಜರಿಳೆಯೊಳಗೆ ಜನ್ಮಗಳೊಲ್ಲೆವೆಂದಬ್ಜ ಭವಗೆ ಮೊರೆಯಿಡಲು ವರವಿತ್ತನಂದು ಕರ್ಮ ಮಾಡಿದರು ಸರಿಯೆತ ನ್ನವನೆನಿಸದವಗೆ ತಜ್ಜನ್ಯ ಫಲ ಬರಲೆಂದು 2 ಮಾನವಾಧಮ ಜನರು ನೋಡಿ ಸಹಿಸದಲೆ ಹೀನ ಮತಿಯಿಂದ ಮಾತುಗಳಾಡಲು ಭಾನು ಮಂಡಲಕೆ ಮೊಗವೆತ್ತಿ ಉಗುಳಿದರೆ ನ್ನಾನನವೆ ತೊಯ್ವುದಲ್ಲದರ್ಕಗೇನಪಮಾನ 3 ಮಲವ ತೊಳೆವಳು ತಾಯಿ ಕೈಗಳಿಂದಲಿ ನಿತ್ಯ ತೊಳೆವ ನಿಂದಕ ತನ್ನ ನಾಲಗಿಂದ ಬಲು ಮಿತ್ರನಿವನೆಂದು ಕರೆದು ಮನ್ನಿಸಬೇಕು ಹಲವು ಮಹ ಪಾಪಗಳ ಕಳೆದು ಪುಣ್ಯವನೀವ 4 ಅನುಭವಿಪ ದುಷ್ಕರ್ಮಗಳ ಜನ್ಯ ಫಲವು ತ ನ್ನಣುಗರಿಗೆ ಅಪವಾದ ರೂಪದಿಂದ ಉಣಿಸಿ ಮುಕ್ತರ ಮಾಡಿ ಸಂತೈಪ ನರಕ ಯಾ ತನೆಗಳವರಿಗೆ ಇಲ್ಲದುದರಿಂದ ಎಂದೆಂದೂ 5 ಮನುಜಾಧಮರಿಗೆ ಹರಿದಾಸರಲಿ ದ್ವೇಷ ವೆನಿಪ ಸಾಧನವೆ ನಿಸ್ಸಂದೇಹವು ಅನುತಾಪ ಬಿಡದೆ ಹರುಷಿತರಾಗಿ ನಿಷ್ಪ್ರಯೋ ಜನದಿ ಹರಿಪದಾಬ್ಜ ಭಜಿಪ ಭಜಕರಿಗೆ 6 ಲೋಕದೊಳು ನಿರ್ಮಿಸಿದನಿರ್ವರನು ಹರಿ ತಾನು ಭೂ ಕೋವಿದರ ಮಲವು ಪೋಗಲೆಂದು ಶ್ರೀ ಕರಾರ್ಚಿತ ಜಗನ್ನಾಥವಿಠಲ ಗ್ರಾಮ ಸೂಕರರು ನಿಂದಕರು ಕರುಣಾಳು ಇಳೆಯೊಳಗೆ 7
--------------
ಜಗನ್ನಾಥದಾಸರು
ಇಲ್ಲವಾಯಿತು ಸಾಧು ಜನಕೆ ಎಲ್ಲಾ | ಇಲ್ಲವೆಂಬುದವರ ಚಿತ್ತದೊಳಗಿಲ್ಲಾ ಪ ತನುವಿಲ್ಲ ಮನವಿಲ್ಲ, ಮನದೊಳಗೆ ನೆನವಿಲ್ಲ | ಬಿನುಗಿನ ಸುಖವ ಬಯಸಲಿಲ್ಲ |ಅನುಮಾನ ಎಂಬುವದಲ್ಲಿ ಜನಿಸುವದಿಲ್ಲ |ಚಿನುಮಯಾತ್ಮಕರಾಗಿ ಚರಿಸುತಿಹರೆಲ್ಲ 1 ಸತಿ ಸುತರೆಲ್ಲ ಹಿತವರೆಂದೆನಿಸಲಿಲ್ಲ | ಪತಿತಪಾವನ ರಘುನಾಥ ನೀನನ್ನದಲೆ |ಮಿತಿಯ ಆಯುಷ್ಯ ಕಳೆದರಲ್ಲ 2 ಮೂರ್ತಿ ಭವತಾರಕನ | ವ್ಯಾಪ ಕಾಣದೆ ಅನ್ಯ ಕಾಣಲಿಲ್ಲ 3
--------------
ಭಾವತರಕರು
ಇಲ್ಲಿ ಬಾರೋ ಹರಿ ತಾತ್ಸಾರ ಥರ ಪರಿ ಪ. ಬಿಲ್ಲಹಬ್ಬದ ನೆವನದಿಂದತಿ ಮಲ್ಲಕಂಸಾದಿಗಳ ಮಡುಹಿದ ಬಲ್ಲಿದನೆ ಲೋಕದಲಿ ಸರಿ ನಿನ- ಗಿಲ್ಲ ಶ್ರೀ ಭೂನಲ್ಲ ಕೃಪೆಯಿಂದ ಅ.ಪ. ಶ್ರೀ ಪಯೋಜಭವ ಶಿವ ಶಕ್ರಾದಿಗಳನ್ನು ಕಾಪಾಡಿ ಖಳಕುಲವ ಖಂಡಿಪ ಸರ್ವ ಭೂಪತಿ ತವ ಪಾದವ ನಂಬಿರಲೆನ್ನ ದುರಿತ ಮ- ಹಾಪಯೋಧಿಯೊಳಿಳಿಸಿದರೆ ಸುಜ- ನಾಪವಾದವು ಬಿಡದು ನಿನ್ನ ಪ- ದೇ ಪದೇ ಇನ್ನೆಷ್ಟು ಪೊಗಳಲಿ 1 ಕರ್ಮ ಕೊಡುವುದು ಫಲವೆಂಬ ನುಡಿಯನುಭವಸಿದ್ಧವು ಆದರು ಜಗ ದೊಡೆಯಗಾವದಸಾಧ್ಯವು ನೀ ಮಾಳ್ಪ ಚೋದ್ಯವು ನುಡಿ ಮನೋಗತಿಗಳುಕವೆಂಬೀ ಸಡಗರವು ವೇದ ಪ್ರಸಿದ್ಧವು ನಡೆಯಲೇಳಲು ಶಕ್ತಿ ಕುಂದಿದ ಬಡವನನು ಕೈಪಿಡಿದ ತವಕದೊಳ್ 2 ಬೆಟ್ಟದೊಡೆಯ ವೆಂಕಟೇಶ ನೀ ಗತಿ ಎಂದು ಘಟ್ಯಾಗಿ ನಂಬಿರುವ ದಾಸನ ಕೈಯ ಬಿಟ್ಟರೆ ಸರಿಯೆ ದೇವ ಸಜ್ಜನರ ಕಾವ ಸಟ್ಟಸ ಶಿಗಡಿ ನೀರ ಸುರಿಸುತ ಕಟ್ಟಿಕಟ್ಟಿಸುತದರ ಛಾಯ ದೊ - ಳಿಟ್ಟ ಗದ್ದಿಗೆಯಲ್ಲಿ ಕುಳಿತು ಸ- ಮೃಷ್ಟ ಸುಖವುಂಬರಸನಂದದಿ 3
--------------
ತುಪಾಕಿ ವೆಂಕಟರಮಣಾಚಾರ್ಯ
ಇವನ ಕಂಡಿರ್ಯಾ ಕಾವಕರುಣನ ಭಾವ ಭಾವಿಸುವ ಪರಿಯಾಗುವ ದೇವನ ಧ್ರುವ ಸಗುಣಲೀಹ್ಯನಾ ಭಕುತಿಗೊಲಿವನಾ ಸುಗಮದಿಂದ ನಿಗಮನುಳುಹಿ ನಗವ ನೆಗೆದನಾ 1 ಸಿರಿಯ ಲೋಲನಾ ವರಕೃಪಾಲನಾ ಧರಿಯನುಳುಹಿ ತರಳಗೊಲಿದು ಪ್ರಿಯವಾದನಾ2 ವರವ ಬಲಿಗೆ ಇತ್ತು ದೋರಿದ ಭಾರ್ಗವರೂಪನಾ 3 ಪರಮ ಆತ್ಮನಾ ಹರಿಸರ್ವೋತ್ತಮನಾ ಸುರರ ನೆರೆಯ ಬಿಡಿಸಿ ಹೊರಟ ಪಾಂಡವಪ್ರಿಯನಾ 4 ಹೊಳೆವ ತೇಜನಾ ಮೂಲೋಕ ಪಾವನಾ ಹಳಿದು ವ್ರತವ ನೋಡಿ ಹಯವನೇರಿ ಸುಳಿದನಾ 5 ಘನ ಮಹಿಮನಾ ದಯಾ ನಿಸ್ಸೀಮನಾ ದೀನ ಮಹಿಪತಿಸ್ವಾಮಿ ಭಾನುಕೋಟೆ ದೀಪ್ತನಾ 6
--------------
ಕಾಖಂಡಕಿ ಶ್ರೀ ಮಹಿಪತಿರಾಯರು