ಒಟ್ಟು 1401 ಕಡೆಗಳಲ್ಲಿ , 93 ದಾಸರು , 981 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ರತುನ ಸಿಕ್ಕಿದೆ ತಮ್ಮ ಇದು ಬಹು ಜತನೆಲೋ ನಿಸ್ಸೀಮ ರತುನ ಸಿಕ್ಕಿದೆ ಪ ನಿನ್ನ ಸುಕೃತದ ಫಲದಿಂದ ಪತಿತಪಾವನ ಸಿರಿಪತಿ ವಿಮಲನಾಮ ಅ.ಪ ದುರಿತ ದಾರಿದ್ರ್ಯವಿಲ್ಲದ ಈ ರತ್ನದಿಂ ಜರಮರಣಂಟಿಲ್ಲ ನರಹರಿ ವರಪಾದ ಶರಣರು ಪರಕ್ಕೆ ಪರಮ ಗೌಪ್ಯದಿಂದ ಶೋಧಿಸುತಿರುವಂಥ 1 ತಾಪತ್ರಯಗಳಿಲ್ಲ ಈ ರತ್ನದಿಂ ಪಾಪ ಶಾಪವಿಲ್ಲ ಪಾಪಿಯಮದೂತರ ಲೋಪಗೈದಯ ಭಯ ಆಪಾರ ಪರಲೋಕ ಸೋಪಾನಕ್ಹಚ್ಚುವ2 ಧರ್ಮಕೆ ಕೊಡು ನದರ ಈ ರತ್ನದ ಮರ್ಮ ತಿಳಿಯೆ ಚದರ ಬ್ರಹ್ಮ ಬ್ರಹ್ಮಾದಿಗಳೊಮ್ಮನದ್ಹೊಗಳುತ ನಿರ್ಮಲಾಗುವ ಪರಬ್ರಹ್ಮ ಶ್ರೀರಾಮನೆಂಬ 3
--------------
ರಾಮದಾಸರು
ರಾಮಚಂದ್ರನೇ ಪರದೈವನೋ ನಮ್ಮ | ಶಾಮ ಸುಂದರ ಕೃಷ್ಣ ಪರದೈವನಯ್ಯ ಪ ರಾಮಭಕ್ತ ನಿದ್ದೆಡೆಗಾಗಿ ಯದುಕುಲ | ಸ್ವಾಮಿಯ ಶರಣನು ಬಂದ ಕೀರ್ತಿಸುತ | ಪ್ರೇಮದಲೀರ್ವರ ಭಕ್ತಿಯವಾದವು | ನೇಮದಿ ಬೆಳೆಯಿತು ಕೇಳಿ ಸಜ್ಜನರು1 ಚಿಕ್ಕ ತನದಿ ತಾಟಿಕೆಯನು ಕೊಂದು ಮುನಿಮುಖ | ಅಖರದಲಿ ಕಾಯದನಾರು ಹೇಳಯ್ಯ | ಠಕ್ಕಿಸಿ ಬಂದ ಪೂತನಿಅಸುಹೀರಿಜ | ನಕ್ಕಭಯ ನಿತ್ತ ಕೃಷ್ಣ ನೋಡಯ್ಯ2 ಚರಣ ಸೋಕಿಸಿ ಶಿಲೆ ಹೆಣ್ಣವ ಮಾಡುತ | ಹರಧನು ಮುರಿದವ ನಾರು ಹೇಳಯ್ಯಾ | ಮರಗಳಾದವರ ನುದ್ಧರಿಸುತ ಕಂಸಾ | ಸುರಧನು ಹಬ್ಬವ ಗೆದ್ದ ರಂಗೈಯ್ಯಾ3 ನೆರದಿಹ ದೇವ ದಾನವರೋಳುದ್ದಂಡದಿ | ಧರಣಿ ಜೆಯ ತಂದನಾರು ಹೇಳೈಯ್ಯಾ | ವರಚೈದೈ ಘೋಷರ ಭಂಗಿಸಿ ರುಕ್ಮಿಣಿ | ಕರವಿಡಿದೊಯ್ದಿದ ಕೃಷ್ಣ ನೋಡಯ್ಯಾ 4 ವನದೊಳು ಹಣ್ಣವ ನಿತ್ತಂ ಶಬರಿಗೆ | ಚಿನುಮಯ ಪದವಿತ್ತ ನಾರು ಹೇಳಯ್ಯಾ | ಅನುವರದಲಿ ದ್ರೌಪದಿಯ ಶಾಕದಳ | ವನೆ ಕೊಂಡು ಸುಖವಿತ್ತ ಕೃಷ್ಣ ನೋಡಯ್ಯಾ5 ಜಲ ನಿಧಿಯೊಳಗ ಸೇತುಗಟ್ಟಿಸಿ ವಾನರ | ದಳನಡಿಸಿದ ವೀರನಾರು ಹೇಳಯ್ಯಾ | ಗಳಿಗಿಯೊಳರಿಯದಂದದಿ ಮಧುರ ಜನ | ನೆಲೆಮಾಡಿ ನೀರೋಳಗಿಟ್ಟ ರಂಗೈಯ್ಯಾ6 - ಅಪೂರ್ಣ
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ರುದ್ರದೇವರು ಪರಿ ವೈರಾಗ್ಯವು ವೀರ ವೈಷ್ಣವ ಭಕ್ತಾಗ್ರಣಿಯೆ ಪ ಮಾರಹರನೆ ಮನ್ಮಥನ ವೈರಿಯೆ ಮನ- ಸಾರ ಶ್ರೀರಾಮ ನಾಮವ ಜಪಿಸುವದಿದು ಅ,ಪ ಮುತ್ತು ಮಾಣಿಕ್ಯದ ಕಿರೀಟವು ಧರಿಸದೆ ನೆತ್ತಿಲಿ ಕೆಂಜೆಡೆ ಸುತ್ತಿಹುದು ಹಸ್ತದಿ ಶಂಖು ಚಕ್ರಗದೆ ಪದುಮವು ಬಿಟ್ಟು ಉತ್ತಮ ಡಮರು ತ್ರಿಶೂಲ ಪಿಡಿವುದಿದು 1 ನೊಸಲಲಿ ಕಸ್ತೂರಿ ತಿಲಕವನಿಡದಲೆ ಭಸುಮವ ಲೇಪಿಸುವುದು ತರವೆ ಕುಸುಮಲೋಚನೆ ಪ್ರಿಯ ಸಖನಾಗಿರುತಿರೆ ಎಸೆವ ಕಪಾಲ ಪಿಡಿದು ಬೇಡುವದಿದು 2 ದುಂಡು ಮುತ್ತಿನ ಹಾರ ಪದಕಗಳಿರುತಿರೆ ರುಂಡಮಾಲೆಯ ಕೊರಳೊಳು ತರವೆ ತಂಡ ತಂಡ ಪರಮಾನ್ನ ಭಕ್ಷಗಳಿರೆ ಉಂಡು ತೇಗದೇ ವಿಷಪಾನ ಮಾಡುವದಿದು3 ಭರ್ಜರಿ ಪೀತಾಂಬರ ಉಡುವುದು ಬಿಟ್ಟು ಕರಿಯ ಚರ್ಮನುಡುವುದು ತರವೆ ಪರಿ ರತ್ನಾಭರಣಗಳಿರುತಿರೆ ಉರಗಗಳಿಂದಲಂಕೃತನಾಗಿರುವದು 4 ಭೃತ್ಯರು ಸೇವೆಗೆ ಬೇಕಾದವರಿರೆ ಮತ್ತೆ ಪಿಶಾಚ ಗಣಗಳೇತಕೆ ಹಸ್ತಿ ತುರಗ ಪಲ್ಲಕ್ಕಿ ಪುಷ್ಪಕವಿರೆ ಎತ್ತನೇರಿ ಚರಿಸುವುದುಚಿತವೆ ಶಂಭೊ 5 ಸಿರದಲಿ ಗಂಗೆಯು ಸ್ಥಿರವಾಗಿರುತಿರೆ ಪರ್ವತರಾಜಕುವರಿಯೇತಕೆ ಅರಮನೆ ವಾಸಕೆ ಯೋಗ್ಯವಾಗಿರುತಿರೆ ಗಿರಿ ಕೈಲಾಸ ಪರ್ವತದಿ ವಾಸಿಸುವದು 6 ಭಕ್ತರು ಭಕುತಿಲಿ ಪಾಡಿ ಕೊಂಡಾಡಲು ನೃತ್ಯವ ಮಾಡುತ ಹರುಷದಲಿ ಕರ್ತೃ ಶ್ರೀ ಕಮಲನಾಭ ವಿಠ್ಠಲನೆಂದು ಪತ್ನಿಗೆ ಉಪದೇಶ ಮಾಡುವದಿದು 7
--------------
ನಿಡಗುರುಕಿ ಜೀವೂಬಾಯಿ
ಲಜ್ಜೆ ಲಜ್ಜೆ ನಿನ್ನ ನಂಬಿ ಕೆಟ್ಟೆನಾನು ಮಾಡೊದೇನು ಪ ಗೆಜ್ಜೆ ಕಟ್ಟಿದ್ದೊರೆ ಕೃಷ್ಣ ಭಜನೆಯಲ್ಲಿ ಮಾನದಲ್ಲಿ ಅ.ಪ. ಆರು ವಲಿದು ಮಾಡೊದೇನು ಆರುಮುನಿದು ಮಾಡೊದೇನು ಚಾರು ಚಾರು ಮೆಚ್ಚಲೇನು ಭಾರಿದೇವ ವಿಶ್ವಜನಕೆ ಹರಿಯದಾಸನೆಂದು ಇನ್ನು ಈರ ಮತವ ಸಾರಿಸಾರಿನಲಿದು ನಲಿದು ಸುಖಿಪುದಕ್ಕೆ 1 ದುಡ್ಡು ಕಾಸುಬೇಡ ನಮಗೆ ದೊಡ್ಡತನವು ಬೇಡ ಹಾಗೆ ಹೆಡ್ಡತನನ ಬಿಟ್ಟು ಪಿರಿಯಕೃಷ್ಣನನ್ನು ಭಜಿಸಲಿಕ್ಕೆ ಅಡ್ಡಿಏನು ಕುರುಡು ಮನವೆ ನೆನೆದುನೆನೆದು ನೋಡುನೀನೆ ದೊಡ್ಡತನವೆ ಸತ್ಯವೀದು ದಡ್ಡತನವೆ ದುರಭಿಮಾನ 2 ಹರಿಯದಾಸದೀಕ್ಷೆ ಪಡೆಯೆ ಸುಲಭವಲ್ಲ ಸುಲಭವಲ್ಲ ದುರಿತ ರಾಶಿಪೋಗಿ ಶುದ್ಧ ಚಿನ್ನದಂತೆ ಆಗದೇನೆ ಹಿರಿದು ಕಾಣೊ ಇಂಥಾ ಜನ್ಮ ಬರಿಯ ಮಾತಿಗೊಲಿಯದೇವ ಅರಿವಿನಂತೆ ನಡೆಯದಿರಲು ತೊರೆದು ಎಲ್ಲ ದುರಭಿಮಾನ 3 ಗೆಜ್ಜೆಕಟ್ಟಿ ಕುಣಿದು ಕುಣಿಯೆ ಲಜ್ಜೆನಾಶವಾಹುದೈಯ್ಯ ಲಜ್ಜೆನಾಶವಾಗಿ ಭಕ್ತಿಯುಕ್ತಿ ಉಕ್ಕಿಹರಿಯುತಿರಲು ಅಬ್ಜಪೀಠ ಪಿತನುತಾನೆ ಅಪ್ಪಿಕೊಂಡು ನಲಿದುನಲಿವ ಅಬ್ಜನಾಭ ನಲಿದು ವಲಿಯೆ ಹೆಚ್ಚುಉಂಟೆ ಅದರಕ್ಕಿಂತ 4 ಮೆರೆಯುತಿರಲು ದುಷ್ಟಕಲಿಯು ಅನ್ಯಮಾರ್ಗ ಸಾಧ್ಯವಿಲ್ಲ ಹರಿಯ ಭಜನೆ ಒಂದೇ ದಾರಿ ಹರಿಯ ವಲಿಸೆ ಸಿದ್ಧವೀದು ಜರಿದು ವಿಷಯ ಬೆರಸಿ ಭಕ್ತಿ ಸಿರಿಯ ರಮಣ “ಕೃಷ್ಣವಿಠಲ” ಚರಣ ಯುಗವ ಭಜಿಸಿ ನೀನು ಮಾನ್ಯನಾಗೋ ಧನ್ಯನಾಗೊ 5
--------------
ಕೃಷ್ಣವಿಠಲದಾಸರು
ಲವಕುಶರ ಹಾಡು ಹರಿಹರ ಬ್ರಹ್ಮ ತ್ರಿಮೂರ್ತಿಗಳ ಬಲಗೊಂಡು *ಗುರುಹಿರಿಯರ ಪಾದಕ್ಕೆರಗೀ | ಅಜನ ಪಟ್ಟದ ಶ್ರೀ ಸರಸ್ವತಿಯನೆ ಬಲಗೊಂಡು ತೊಡಗುವೆ ರಾಮರ ಕಥೆಯಾ 1 ಬಣ್ಣದ ಅಕ್ಷತೆ ಕಣ್ಣು ತುಂಬೆ ಪುಷ್ಪ ಸು ವರ್ಣ ದಕ್ಷಿಣೆ ತಾಂಬೂಲಾ | ಉಮ್ಮಿಯ ಪುತ್ರ ಗಣೇಶಗೆ ಅರ್ಪಿಸಿ ವರ್ಣಿಪೆ ಲವಕುಶರ ಕಥೆಯಾ 2 ಕುಲದ ಸ್ವಾಮಿ ಕದ್ರಿ ನರಸಿಂಹನ ಬಲಗೊಂಡು | ಗುರು ಮಧ್ವರಾಯರ ನೆನೆದು | ಮನದಲ್ಲಿ ವಿಷ್ಣು ದೇವತೆಗಳ ಬಲಗೊಂಡು ತೊಡಗುವೆ ರಾಮರ ಕಥೆಯಾ 3 ವೇದಪಾರಾಯಣ ಅಂತ್ಯದ ಪೀಠಕ ಮಾಧವ ಹರಿ ಸುಗೋತ್ರ | ವೇದ ಮೂರುತಿ ಕೊಂಡಪ್ಪನ ಪುತ್ರಿಕೆಗೆ (?) ಹೇಳಿದಳುಹರಿನಾಮ ಕಥೆಯಾ 4 ಯಗ್ನ ಸಂತತಿಯೂ ಪೀಠಕವೂ | ಅಜ್ಞಾನಿ ಮೂಢಜೀವರಿಗೆ 5 ಹರುವುಳ್ಳ ನಿರಯಾಗಿಗಳೂ | ಹರವುಳ್ಳ ಕೈ(?)ಮುನಿವಳ್ಳೇರು ಜಾಣರು ತಿಳಿವೂದು ಅರ್ಥಸಂದೇಶ 6 ನಾಡನ ಕಥೆಯಲ್ಲ ಬೇಡುಂಬ ಪದನಲ್ಲ ನಾಡೊಳಗೆ ಹರಿನಾಮ ಕೇಳಿದ ಜನರಿಗೆ | ವಿಲ್ಲವಾಗುವುದು 7 ಪ್ರಚಂಡರು ರಾಮಲಕ್ಷ್ಮಣರು | ಇತ್ತಬೇಟೆಯನಾಡುವ ಕ್ರಮಗಳ ಚಂದವಿನ್ನೆಂತು ವರ್ಣಿಸಲೆ 8 ತಾಂಬೂಲ ಶ್ರೀಮೊಗದಿಂದೆ | ಇಂದುವದನೆಯ ಬಿಗಿದಪ್ಪಿ ಮುದ್ದಾಡಿದ ಇಂದುವದನೆ ಗರ್ಭವೆಂದ 9 ನಳಿನನಾಭನು ತನ್ನ ಲಲನೇಯ ಮುಖನೋಡಿ ಲಲನೆ ನಿನ್ನ ಪ್ರೇಮವೇನೆ | ಮುನಿಯು ಆಮುನಿಗಳು ಕೂಡಿದ ನಂತ್ರ ವನಭೋಜನ ತನಗೆಂದ್ಲೂ 10 ಹಲವು ಕಾಲವು ಸೀತೆ ಅಸುರರ ವಡನಾಡಿ ನೆನದಳು ಋಷಿಗಳಾಶ್ರಮವಾ | ಹಸನವಲ್ಲವು ಸೀತೆ ಇನ್ನು ನೀನುಳಿವದು ಋಷಿಗಳಾಶ್ರಮಕೆ ಹೋಗೆಂದಾ 11 ಅಯೋಧ್ಯಾಪುರದ ವಾನರರೆಲ್ಲಾ ಬಿಟ್ಟು ಕೈಹಿಡಿದ ಪುರುಷನ ಬಿಟ್ಟು | ನೆನದಾಳು ಋಷಿಗಳಾಶ್ರಮವ 12 ಅಂದು ಶ್ರೀರಾಮರು ಬೇಟೆಗ್ಹೋದೇವೆಂದು ಇಂದು ಡಂಗುರವ ಸಾರಿದರೂ | ಒಂದು ಗಳಿಗೆ ಮುಹೂರ್ತತಡೆಯಲಾಗದು ಎಂದು ಮಂದಿ ಮಕ್ಕಳ ಕರಸಿದರೂ 13 ಬಂದರು ಮಂತ್ರಿ ಮಾನ್ಯರು ಪ್ರಹಸ್ತರು ಬಂದರು ಪ್ರಧಾನೇರು | ಬಂದರು ರವಿಗುರಿನವಿಗುರಿಕಾರರು (?) ಬಂದರು ವಾಲಗದೋರೊಪ್ಪಿದರು 14 ಆಟಪಾಟದೋರು ನೋಟಕ್ಕೆ ದಾರಾರು ಸೂತ್ರದವರು ಸುವ್ವಿಯವರು | ಪಾಟಕ್ಕೆ ದಾರಾರು ಪೊಗಳುವ ಭಂಟರು ರಘು ನಾಥನೋಲಗದಲೊಪ್ಪಿದರೂ 15 ಹೊನ್ನು ಹಲಗೆಯವರು ಬೆನ್ನಬತ್ತಲೆಯವರು ಚಿನ್ನಬಿನ್ನಾಣನಾಯಕರೂ | ಚೆನ್ನಿಗರಾಮರ ಪೊಗಳುವ ಭಂಟರು ಬಿನ್ನಾಣದಿಂದೊಪ್ಪುತಿಹರೂ 16 ಪಟ್ಟಾವಳಿ ಹೊಸಧೋತರವು ಇಟ್ಟರು ಆಭರಣವನ್ನೂ | ಮಕರಕುಂಡಲ ಕಿರೀಟವೂ ಇಟ್ಟರು ನೊಸಲ ಕಸ್ತುರಿಯಾ 17 ಹಾರಮಾಣಿಕನಿಟ್ಟು ಕಾಲುಪೆಂಡೆಯನಿಟ್ಟು ನ್ಯಾವಳದ ಉಡುದಾರನಿಟ್ಟು ಸೂರ್ಯನ ಕುಲದ ಕುಮಾರರು ನಾಲ್ವರು ಏರಿದರು ಹೊನ್ನ ರಥವಾ 18 ವಾಯುವೇಗ ಮನೋವೇಗವೆಂಬೋ ರಥ ಏರಿದರೆ ರಾಮಲಕ್ಷ್ಮಣರೂ | ಸೂರ್ಯ ತಾನೆ ರಥವ ನಡೆಸೆ ಕೂಡ ಬೇಟೆಗೆ ತೆರಳಿದರು 19 ಅತ್ತಿ ಆಲದ ಮರ ಸುತ್ತ ಹೆದ್ದುಮ್ಮರಿ ಉತ್ತತ್ತಿ ಬೆಳಲು ದಾಳಿಂಬ ಉತ್ತಮ ಅಶ್ವತ್ಥ ಇಪ್ಪಿಯ ವನಗಳು ವಿಸ್ತರವನವೊಪ್ಪುತಿಹವೂ 20 ನಾರಂಗ ಬೆರಸಿದ ಕಿತ್ತಳಿ ಹರಿಸಿಣದ ತೋಪು ಎಲಿತ್ವಾಟ ಅರಸುಮಕ್ಕಳು ರಾಮಲಕ್ಷ್ಮಣರೆಲ್ಲರು ಬೆರಸಿ ಬೇಟೆಯ ನಾಡುತಿಹರೂ 21 ಯಾರಾಡಿಗಿಡಗಳು ಕ್ಯಾದೀಗಿವನಗಳು ನಾಗಸಂಪಿಗೆಯ ತೋಪುಗಳು | ಜೋಡೀಲಿ ಭರತ ಶತ್ರುಘ್ನರೆಲ್ಲರು ಕಾಲಾಳು ಬೇಟೆನಾಡಿದರೂ 22 ಉದ್ದಂಡ ಕೇಕಾಪಕ್ಷಿ ಚಂದಾದ ಬಕನ ಪಕ್ಷಿಗಳೂ | ಅಂದಾದ ಆಲಿವಾಣ ಆಲಹಕ್ಕಿಯು ರಾಮ ಚಂದ್ರನು ಬೇಟೆಯಾಡಿದನು 23 ಬೇಟೆನಾಡಿ ಬಂದು ನಿಂತಾರು ನೆರಳಲ್ಲಿ ಒಂದುಗಳಿಗೆ ಶ್ರಮವ ಕಳೆದು ನಂದನವನದಲ್ಲಿ ತನಿಹಣ್ಣು ಮೆಲುವೋರು ಗಂಗೆಯ ಉದಕ ಕುಡಿಯುವೋರು 24 ನಳಿನನಾಭನು ತಾನು ಬಳಲಿ ಬೇಟೆಯನಾಡಿ ನೆರಳಲ್ಲಿ ತುರಗ ಮೇಯಿಸಿದ ಕಿರಿಯಲಕ್ಷ್ಮಣ ದೇವ ತೊಡೆಯನ್ನೆ ಕೊಡು ಎಂದು ಮಲಗೀದ ಒಂದು ನಿಮಿಷವನೂ 25 ಮುಂದಿನ ಆಗೆಂತ್ರವ(?) ಕಂಡನು ಕನಸಿನಲಿ ರಾಮ ಕಂಗೆಟ್ಟು ಮೈಮುರಿದೆದ್ದಾ | ಕಂದ ಲಕ್ಷ್ಮಣ ಕೇಳೊ ಇಂದೆನ್ನ ಸೊಪ್ನದಲಿ ಬಂದಿಹಳೊಬ್ಬ ತಾಟಕಿಯೂ 26 ಇಂದುವದನೆಮುಡಿ ಪಿಡಿದಳೆವೊ ದುಕಂಡೆ ತುಂಡರಾವಣ ಕುಯೋದು ಕಂಡೆ | ಇಂದು ನೀ ಸೀತೆಯ ಕರೆದೊಯಿದು ಕಾನನದಿ ದಿಂಜಾರಿಳಿಸೋದು ಕಂಡೆ 27 ಮುನ್ನ ಅರಿಯದೆ ನಾವು ಬಂದೆವೋ ಲಕ್ಷ್ಮಣ ಇನ್ನು ಸೀತೆಗೆ ಜಯವಿಲ್ಲಾ | ಅಂದು ಶ್ರೀರಾಮರಾ ಬೇಟೆ ಮೂಲಕದಿಂದೆ ಬಂದಾಳು ಮಾಯದ ಗರತಿ | 28 ಬಂದು ಅಯೋಧ್ಯಾಪುರದ ಬೀದಿಯವಳಗೆ ಚಂದದಿ ಕುಣಿದಾಡುತಿಹಳು | ಅಂದು ಶ್ರೀ ರಾಮರ ಅರಮನೆ ಬಾಗಿಲಿಗೆ ಚಂದುಳ್ಳ ದ್ವಾರಪಾಲಕರೂ 29 ಬಂದು ಅಸುರೆ ನಿನ್ನ ಬಿಡವಲ್ಲೆನೆಂದರೆ ಬಂದಡರಿದಳರಮನೆಗೆ ಕಂಡು ಜಾನಕಿ ತಾನು ಕರಸಿದಳಾಗಲೆ ಬಂದಳು ಮಾಯದ ಗರತಿ 30 ಬಂದು ಪಾದಕ್ಕೆರಗಿ ಕೈಮುಗಿದು ನಿಂತಳು ತಂದಳು ನಾಗ ಸಂಪಿಗೆಯಾ | ಅಂಗನೆ ಜಾನಕಿ ನೀಮುಡಿಯೆಂದು ಕೊಟ್ಟರೆ ಸಂದೇಹ ಬಟ್ಟಳಾ ಸೀತೆ 31 ಈನಾಡ ಗರತಿ ನೀನಲ್ಲ | ದಾರು ಬಂಧುಗಳುಂಟು ದಾರ ಬಳಿಗೆ ನೀ ಬಂದೀ 32 ಈರೇಳು ಲೋಕವ ಸುತ್ತಿ ತಿರುಗಿ ಬಂದೆ ನಾಗಲೋಕಕ್ಕೆ ಬಾಹೆನೆಂದು ನಾಗಲೋಕದಿಂದ ದೇವಲೋಕಕ್ಕೆ ಬಂದೆ ದೇವಿಗೆ ಕಾಣಿಕೆ ತಂದೇ 33 ಹೊನ್ನು ಹಣವನೀವೆ ಅನ್ನವಸ್ತ್ರವನೀವೆ ಇನ್ನು ನೀವಲಿದದ್ದು ಈವೆ | ಇನ್ನು ನೀವಲಿದದ್ದು ಚೆನ್ನಾಗಿ ಕೊಡುವೆನು ಬಿನ್ನವಿಸೆ ಗರತಿ ನೀ ಅಂದ್ಲೂ 34 ಹೊನ್ನು ಹಣವನೊಲ್ಲೆ ಅನ್ನವಸ್ತ್ರವನೊಲ್ಲೆ ನಿನ್ನ ಭಾಗ್ಯವು ನಾನೊಲ್ಲೆ | ಮುನ್ನಿನ ಅಸುರರೂಪ ಇನ್ನು ನೀಬರೆದರೆ ಹರಣ ಹೊರುವೆನು 35 ಮುನ್ನವನು ಕಂಡು ಕೇಳರಿಯ | ಪನ್ನಂಗಧರ ರಾಮ ಬಂದರೆ ಬೈದಾರು ಗಮನ ಮಾಡಂದ್ಲೂ36 ಅಂದರೆ ಸೀತೆ ತನ್ನಂಗಕ್ಕೆ ಬರಲೆಂದು ತಂದು ತೊಡೆದಳು ಭಸುಮವನು | ಅಂದೆನ್ನ ವನಕೆ ಪ್ರದಕ್ಷಿಣೆ ಬರುವಾಗ ಉಂಗುಷ್ಟವನು ಕಂಡುಬಲ್ಲೆ 37 ಉಂಗುಷ್ಟದಂದಕ್ಕೆ ಮುಂದೆ ಪಾದವ ಬರಿ ಹಿಂದೆ ಹಿಂಬುಡ ಮೊಣಕಾಲು | ಹೊಂದಿಸಿ ಬರೆ ಎಂದಳವಳು 38 ಚಂದಾದ ಕಾಗದ ಲೆಕ್ಕಣಿಕೆ ಪಿಡಿದು ತಂದು ಕೊಟ್ಟಳು ಸೀತೆ ಕೈಗೆ | ಒಂದು ಕಾಯಕೆ ಹತ್ತು ಸಿರಗಳ ಬರೆದಳು ಮುಂದೆರಡು ಪಾದವ ಬರೆದಳು 39 ಒಂದರ ಹಿಂದೊಂದು ವರ್ಣಿಸಿ ಬರೆದಳು ತಂದು ನಿಲಿಸಿದಳು ರಾವಣನಾ | ಚಂದವಾಯಿತು ದೇವಿ ವರವಕೊಡೆನುತಲಿ ಎಂದೆಂದಿಗೂ ಅಳಿಯದ್ಹಾಗೇ 40 ಅಳಿದು ಉಳಿಯದಿರು ಉಳಿದು ನೀ ಕೆಡದಿರು ಧರಿಯವಳಗೆ ಅಡಗದಿರು | ಕಿರಿಯ ಲಕ್ಷ್ಮಣದೇವ ಹೊಡೆದರೆ ಮಡಿ ಎಂದು ವರವ ಕೊಟ್ಟಳು ಸೀತೆ ಪಠಕೆ 41 ಮರೆ
--------------
ಹೆಳವನಕಟ್ಟೆ ಗಿರಿಯಮ್ಮ
ಲೋಕ ಭರಿತನೊ ರಂಗಾನೇಕಚರಿತನೊ ಪ. ಕಾಕುಜನರ ಮುರಿದು ತನ್ನಏಕಾಂತಭಕ್ತರ ಪೊರೆವ ಕೃಷ್ಣ ಅ.ಪ. ರಾಜಸೂಯ ಯಾಗದಲ್ಲಿ ರಾಜರಾಜರಿರಲು ಧರ್ಮ-ರಾಜಸುತನುಯೀತನೇ ಸಭಾಪೂಜ್ಯನೆಂದು ಮನ್ನಿಸಿದನಾಗ 1 ಮಿಕ್ಕನೃಪರ ಜರಿದು ಅಮಿತವಿಕ್ರಮ ಯದುವರನೆ ತನಗೆತಕ್ಕ ರಮಣನೆಂದು ರುಕ್ಮಿಣಿ ಉಕ್ಕಿ ಮಾಲೆಯಿಕ್ಕಿದಳಾಗ2 ಜ್ಞಾನಶೂನ್ಯನಾಗಿ ಸೊಕ್ಕಿ ತಾನೆ ವಾಸುದೇವನೆನಲುಹೀನ ಪೌಂಡ್ರಕನ ಶಿರವ ಜಾಣರಾಯ ತರಿದನಾಗ 3 ಉತ್ತರೆಯ ಗರ್ಭದಲ್ಲಿ ಸುತ್ತಮುತ್ತಿದಸ್ತ್ರವನ್ನುಒತ್ತಿ ಚಕ್ರದಿಂದ ನಿಜಭಕ್ತ ಪರೀಕ್ಷಿತನ ಕಾಯ್ದ4 ತನ್ನ ಸೇವಕಜನರಿಗೊಲಿದು ಉನ್ನಂತ ಉಡುಪಿಯಲ್ಲಿ ನಿಂತುಘನ್ನಮಂದಿರ ಮಾಡಿಕೊಂಡ ಪ್ರಸನ್ನ ಹಯವದನ ಕೃಷ್ಣ 5
--------------
ವಾದಿರಾಜ
ಲೋಕಕ್ಕೆ ನೀ ತಾಯಿ ಲೋಕಕ್ಕೆ ನೀ ತಂದೆ ಸಾಕುವಾಕೆಯೆ ನೀನು ಲೋಕಕ್ಕೆ ನೀ ತಾಯಿ ಪ ಬೇಸರಿಸಿ ಧರಿಸಿದಳು ಜನನಿ ಎನ್ನನÀು ದಶ- ಮಾಸ ಗರ್ಭದೊಳಿದ್ದು ಬಹಳ ಬಳಲಿದೆನು ಹೇಸಿಕೆಯ ವಿಣ್ಮೂತ್ರ ರಾಶಿಯೊಳುಗುದಿಸಿದರೆ ಆಸುರದಿ ಕೈಯೆತ್ತಿ ಪಿಡಿದು ರಕ್ಷಿಸಿದೆ1 ಮಲ ಮೂತ್ರ ಮೈಲಿಗೆಯ ಮೈಯೊಳಗೆ ಧರಿಸಿದರು ತಿಲ ಮಾತ್ರ ಹೇಸಿದೆಯ ಎನ್ನೊಳಗೆ ನೀನು ಜಲಜಮುಖಿ ಎನ್ ತಾಯಿ ಎಲೆಯ ಓಗರವಿಟ್ಟು ತೊಳೆದ ಹಸ್ತದಿ ಎನಗೆ ಕೊಳೆಯನಿಕ್ಕಿದಳು 2 ಮಗುವೆಂದು ಯೋಚಿಸದೆ ಉಗುಳುತ್ತ ಎಂಜಲನು ಒಗೆದು ಬೀಸಾಡಿದಳು ಎಡದ ಹಸ್ತದಲಿ ಜಗಳವಾಡಲು ಪಿತನು ಮಗನ ಮೋಹದ ಮೇಲೆ ತೆಗೆಯಬಾರದೆ ಮಲವನೆಂದು ಜರೆÀದಪಳು3 ಪಡೆದ ತಾಯ್ತಂದೆಗಳು ಅಡಗಿ ಹೋದರು ಎನ್ನ ಬಿಡದೆ ಸಲಹಿದೆ ನೀನು ಪೊಡವಿ ದೇವತೆಯೆ ಕಡೆಗಾಲದೊಳು ಕೈಯ ಪಿಡಿದು ರಕ್ಷಿಸದೆನ್ನ ಒಡಲ ದುಃಖವ ನೋಡಿ ನುಡಿಯದಿರಬಹುದೆ 4 ಬಲವಾಗಿ ಕೈವಿಡಿದೆ ವರಾಹತಿಮ್ಮಪ್ಪನಿಗೆ ಗೆಲವಿಂದ ಭೂರಮಣನೆನಿಸಿ ಮೆರೆವ ಜಲಜನಾಭನೆ ಎನ್ನ ಪಿತನು ಮಾತೆಯು ನೀನು ಸುಲಭದೊಳು ಮೈದೋರು ಫಲಿತವಹ ಪದವ 5
--------------
ವರಹತಿಮ್ಮಪ್ಪ
ಲೋಕನಾಯಕಿ ಹೆಣ್ಣಾ ನೋಡಮ್ಮ ಸತ್ಯ ಲೋಕೇಶ ಬೊಮ್ಮನೀಕೆ ಮಗನಮ್ಮ ಪ. ಶೋಣಿತ ಶುಕ್ಲ ಸಂಮ್ಮಂಧಗಳಿಲ್ಲ ಇಂಥಾ ಜಾಣತನವು ಬೇರೊಬ್ಬಗಿಲ್ಲ ವಾಣೀಶ ಶಂಭು ಮುಖ್ಯ ಸುರರೆಲ್ಲ ತತ್ವ ಕಾಣದೆ ನಿತ್ಯಮೆಣೀಸುವವರಲ್ಲ 1 ಮೂಢ ದೈತ್ಯರ ಮೋಹಿಸಲಿಕಂದು ಒಳ್ಳೆ ಪಾಡಾದ ಸಮಯಕೊದಗಿ ಬಂದು ಮೂಡಿ ಸುಧೆಯ ಕಲಶ ತಂದು ತಡ ಮಾಡದೆ ಸುರರಿಗಿಕ್ಕಿದಳಂದು 2 ಶಿವನು ಮರಳುಗೊಂಡ ಶೃಂಗಾರಸಾರ ಭುವನೈಕರಕ್ಷ ದೀನಮಂದಾರ ಪವನವಂದಿತೆ ಪದ್ಮೆಗಾಧಾರ ನಿತ್ಯ ನವಯವ್ವನೆಗೆ ನಾವು ಪರಿವಾರ 3 ಭಸ್ಮೋದ್ಧೂಳಿತ ದೇಹಭವನಂದು ವರವ ಭಸ್ಮಾಸುರನಿಗಿತ್ತೋಡುವ ಬಂದು ವಿಸ್ಮಯಗೊಂಡು ನೀನೆ ಗತಿಯೆಂದು ಪೇಳೆ ಭಸ್ಮಗೈದಳು ದೈತ್ಯಾಧಮನಂದು 4 ನಾಗಗಿರಿಯ ಶಿಖರದ ಮೇಲೆ ನೆಲೆ ಯಾಗಿ ಶೋಭಿಪಳತ್ಯದ್ಭುತ ಬಾಲೆ ಶ್ರೀಗುರು ಶಿವಮುಖ್ಯ ಸುರಪಾಲೆ ದಯ ವಾಗಿ ತೋರ್ಪಳು ತನ್ನ ಶುಭಲೀಲೆ 5
--------------
ತುಪಾಕಿ ವೆಂಕಟರಮಣಾಚಾರ್ಯ
ಲೋಕನೀತಿ ಮತ್ಸರಿಸುವವರಲ್ಲಿ ಮಾನ್ಯವಿರಲೀ ಪ ಬಚ್ಚಲಿಲ್ಲದ ಮನೆಯು ಸ್ವಚ್ಛತಾನಾಗಿಹುದೆ ಅ.ಪ ಅರಿಷಡ್ವರ್ಗಗಳು ತುಂಬಿಕೊಂಡಿಹ ದೇಹ ಪರಿಶುದ್ಧವಹುದೇನೊ ಆವಾಗಲೂ ಪರಿಪರಿಯಿಂದಲಿ ಪರಿವಾರ ಜನಗಳು ಪರಿಹಾಸ್ಯಮಾಡಿ ಅಘವ ಕದ್ದೊಯ್ವರಯ್ಯ 1 ಗುಣತ್ರಯಗಳಿಂದಲಿ ನಿಬಿಡವಾದೀದೇಹ ಗುಣಕಾರ್ಯ ಮಾಡದೇ ಬಿಡದೆಂದಿಗೂ ಅಣಿಯಾಗಿ ದುರ್ಗುಣಗಳೊಕ್ಕಣಿಸಿ ಪೇಳುವಡೆ ಗುಣವ ತಿದ್ದಲು ತಾವು ಋಣಿಯಾಗುವರಯ್ಯ2 ಅಭಿಮಾನವೆಂಬುದು ನಭೋಮಂಡಲವರೆಗಿಹುದು ಶುಭವೆಂತೊ ಡಾಂಭಿಕದ ಹೇ ಮಾನವಾ ತುಂಬಿತುಳುಕುವ ದುರಭಿಮಾನವನೆ ತೊಲಗಿಸಿ ಇಂಬು ತೋರುವರಯ್ಯ ಮನಸ್ಥೈರ್ಯಕೇ3 ಕಕ್ಕುಲತೆ ಪಡದೆ ನಕ್ಕುಸಂತೈಸಿಲಾಲಿಸುವ ತೆರದಿ ಅಕ್ಕರದಿ ತನ್ನ ಅಪರಾಧಗಳನೆಲ್ಲ ಲೆಕ್ಕಿಸದೆ ಪೇಳ್ವರದು ಉಪಕಾರವಯ್ಯ 4 ಮಚ್ಚರದಿ ನಿಂದಿಸೆ ಅಚ್ಚುತನ ಭಕುತರಿಗೆ ನಿಚ್ಚದಲಿ ಸ್ವಚ್ಛಭಕುತಿ ಇಹುದು ಮಚ್ಚರಕೆ ಸ್ವೇಚ್ಛೆಯಿಂದೆದುರು ಉಚ್ಚರಿಸದಿರೆ ಮೆಚ್ಚಿ ಕಾಯುವನಯ್ಯ ಶ್ರೀ ವೇಂಕಟೇಶ 5
--------------
ಉರಗಾದ್ರಿವಾಸವಿಠಲದಾಸರು
ಲೋಕನೀತಿ (ಆ) ಇರುವುದೆಲ್ಲ ಮನೆಯೊಳಗಿದ್ದರೆ ಆಡಿಗೆಗೆ ಯಾತಕ್ಕೆ ತಡವಾಗೋದು | ಪ ತರಬೇಕೇಂದು ನೂರು ತಡವೆ ನಾ ನುಡಿದರು ಅರಿಯದವರ ಪರಿತಿರುಗುತ್ತಲಿರುವದು ಅ.ಪ ಮನೆ ಮನೆಯಲಿವಂದು ಮಾನಾರ್ಧಮಾನಗಳು ಮೆಣಸಿನಪುಡಿ ಉಪ್ಪು ಅಕ್ಕಿ ಸಾಲ ದಿನ ದಿನ ಮಧ್ಯಾಹ್ನ ತಿರುಗಿದ ಮೇಲೆ ಮನೆಗೆ ಬಂದು ಹಸಿವೆನುತ ಪೇಳುವದು 1 ಎಣ್ಣೆವಗ್ಗರಣೆಯಲ್ಲದೆ ಕಾಣೆನಭಿಗಾರ ಮುನ್ನೆ ಪಿತ್ಥ ಹೆಚ್ಚಿ ತಲೆ ನೋಯ್ವುದು ನಿನ್ನೆಮೊನ್ನೆ ಹೇಳಿದುದಕೆ ಹೊಡೆಸಿಕೊಂಡೆ ದೊಣ್ಣೆಪೆಟ್ಟಿನಿಂದ ಬೆನ್ನು ಬಾತಿರುವದು 2 ವರುಷಕ್ಕಾಗುವ ಮಟ್ಟಿಗೆಲ್ಲಾ ಪದಾರ್ಥ ಶೇ- ಖರವ ಮಾಡುವುದು ಈ ಮನೆಯೊಳಿಲ್ಲಾ ಹಿರಿಯರಿಂದ ಬಂದ ಸಂಪ್ರದಾಯವಿದೇನೊ ಇಂಥಾಮನೆಯ ಸೇರಿ ಈ ಸುಖ ಪಡುವೆ 3 ಮದುವೆಯಲ್ಲಿದ್ದದ್ದು ಪ್ರಸ್ತದೊಳಗೆಯಿಲ್ಲ ಬದಲು ಸೀರೆಯು ನಾನುಟ್ಟರಿಯೆ ವಿಧಿಲಿಖಿತವು ತಪ್ಪುವುದೆಯೆಂದಿಗಾದರು ವದರಿ ಕೊಂಡರೆಯೇನು ಇದರೊಳು ಫಲವುಂಟು 4 ಜ್ಞಾನ ಶೂನ್ಯರು ಮನೆಯೊಳಿಹರೆಲ್ಲರು ಈ ನರಜನ್ಮವು ಇಷ್ಟಕ್ಕೆಸಾಕೆಂದು ಧೇನಿಸಿ ಗುರುರಾಮವಿಠಲನ ಬೇಡುವೆ 5
--------------
ಗುರುರಾಮವಿಠಲ
ಲೋಭಿಯು ಬೇಡಲು ಲಾಭವೇನಿರುವುದು ನಾಭಿಯು ಒಣಗುವುದು ಪ ಲೋಭಿಗೆ ಧನದಿಂದ ಶೋಭೆಯುಂಟೆ ಮನ ಕ್ಷೋಭೆಯಲ್ಲದೆ ಸತತ | ತನ್ನಯ ಮನಕ್ಷೋಭೆಯಲ್ಲದೆ ಸತತ ಅ.ಪ ನೂರು ಛಿದ್ರಗಳಲ್ಲಿ ತೋರುತಿದ್ದರು ದೇಹ ಕೋರನು ನವವಸನ | ಏನೆಂದು ಕೋರನು ನವವಸನ ಮೂರು ಕಾಸಿಗೆರಡು ಮಾರುತಿದ್ದರು ಅದ ದೂರದಿ ತ್ಯಜಿಸುವನು | ನೂತÀನವಸ್ತ್ರ ದೂರದಿ ತ್ಯಜಿಸುವನು 1 ಬಂಧು ಜನರು ತನ್ನ ಮಂದಿರಕ್ಕಿಳಿಯಲು ನೊಂದುಕೊಳ್ಳುವ ಮನದಿ | ತತ್ತಳಿಸುತ ನೊಂದುಕೊಳ್ಳುವ ಮನದಿ ತೊಂದರೆಗಳ ಪೊಂದಿಹೆನೆನ್ನುತ ಮುಂದಕೆ ಸಾಗಿಸುವ | ಬಂದವರನು ಮುಂದಕೆ ಸಾಗಿಸುವ 2 ಮುಗ್ಗಿದ ಧವಸವು ಅಗ್ಗÀದಿ ಮಾರಲು ಹಿಗ್ಗುತ ಕೊಳ್ಳುವನು | ಸೊಗಸಿನಲಿ ಹಿಗ್ಗುವನು ಒಗ್ಗಿಹುದೆನ್ನುತ ನುಗ್ಗಿಸಿ ಉದರದಿ ಸಗ್ಗದೆ ನಡೆಯುವನು | ಪರನುಡಿಗೆ ಸಗ್ಗದೆ ನಡೆಯುವನು 3 ಹಣದಲಿ ಲೋಭಕೆ ಕೊನೆ ಮೊದಲಿಲ್ಲದೆ ಒಣಗಿಸುವನು ತನುವ | ಕಾರ್ಪಣ್ಯದಿ ಒಣಗಿಸುವನು ತನುವ ಗೆಣೆಯನಿವನು ನಾಲ್ಕಾಣೆಯ ಕಂಡರೆ ಕುಣಿಯುವನು ಮನದಲ್ಲಿ | ಎಣೆಯಿಲ್ಲದೆ ಕುಣಿಯುವ ಮನದಲ್ಲಿ4 ಕಿಕ್ಕಿರಿದರು ಧನ ಕಕ್ಕುಲತೆಯೊಳ್ ತನ್ನ ಮಕ್ಕಳ ಸಲಹುವನು | ರಕ್ಕಸನಿವ ಮಕ್ಕಳ ಸಲಹುವನು ಮಿಕ್ಕ ಧನವ ಬಲು ಅಕ್ಕರೆಯಿಂದ ಎವೆ ಯಿಕ್ಕದೆ ನೋಡುವನು | ನೇತ್ರದಿ ಎವೆಯುಕ್ಕದೆ ನೋಡುವನು 5 ನುಡಿದರೆ ಸವಿಮಾತ ಒಡವೆ ವಸನಗಳಿ ಗ್ಹಿಡಿವಳೆಂದರಿಯುತಲಿ | ಸಡಗರದಿ ಹಿಡಿವಳೆಂದರಿಯುತಲಿ ಕರವ ಪಿಡಿವ ತನ್ನ ಮಡದಿಯ ಕಂಡರೆ ಸಿಡಿಮಿಡಿಗÀುಟ್ಟುವನು | ನಿರ್ಘೃಣನಿವ ಸಿಡಿಸಿಡಿ ಗುಟ್ಟುವನು 6 ರಾಯರೆ ನಿಮ್ಮ ಸಹಾಯ ಹೊರತು ಕಾಣೆನೆನಲು ಕಾಯುವ ಧಣಿ ನಾರಾಯಣನೆನುತಲಿ ನುಡಿಯುವನು 7 ಈ ಧನವೆ ದೊಡ್ಡ ಸಾಧನವೆನ್ನುವ ಮೇಧಾವಿಯು ಇವನು | ಓದಲರಿಯದ ಮೇಧಾವಿಯು ಇವನು ಪಾದ ಕಮಲದಲಿ ಆದರವರಿಯನಿವ | ಎಂದೆಂದಿಗು ಆದರವರಿಯನಿವ 8 ಘನತೆಯು ಬೇಡವು ಜನತೆಯು ಬೇಡವು ಧನವಿದ್ದರೆ ಸಾಕು | ಈ ನರನಿಗೆ ಧನವಿದ್ದರೆ ಸಾಕು ಮನುಜ ಮುಟ್ಟದ ಗುಬ್ಬಿಯನನುಕರಿಸುತ ಜೀ ವನವನು ಕಳೆಯುವನು | ಕ್ಲೇಶದಿ ಜೀವನವನು ಕಳೆಯುವನು9 ಗಳಿಸಿದವನ ಧನ ಬಳಸಿದವನಿಗೆಂಬ ಮುಳುಗಿ ಮುಳುಗುತಿರುವ | ಕ್ಲೇಶಗಳಲಿ ಮುಳುಗು ಮುಳುಗುತ್ತಿರುವ 10 ಭುಜಗಶಯನ ಹರಿ ಸುಜನರು ತನ್ನನು ಅಜನೆಂದು ಕರೆಯುತಿರೆ | ಸೃಷ್ಟೀಶನ ಅಜನೆಂದು ಕರೆಯುತಿರೆ ತ್ಯಜಿಸದೆ ಹೆಸರನು ಅಜಗಳ ಸ್ತನದಂತೆ ಸೃಜಿಸಿದನೀ ಜನರ | ಪ್ರಸನ್ನ ಹರಿ ಸೃಜಿಸಿದನೀ ಜನರ 11
--------------
ವಿದ್ಯಾಪ್ರಸನ್ನತೀರ್ಥರು
ವಂದನೆ ಗೈವೆನು ಗುರುವೆ ಚರಣಾರವಿಂದದ್ವಯಕೆ ಮಣಿವೆ ನೀನೇ ಕಾಯೋ ಎನ್ನ ಸದ್ಗುರುವೆ ಪ ಬಂದು ಸೇರಿದೆ ನಾನು ಕರುಣ ಸಿಂಧುವೆ ಪಾಲಿಸುನೀನು ಮಂದಮತಿಯು ಜಡಜೀವನು ನಾನು ವಸುಂ ಧರೆಯೊಳಗೆ ಸುಜ್ಞಾನಿಯು ನೀನು 1 ಕಾರಗತ್ತಲೆಯೊಳಗೆ ಏನೆಂದು ತೋರದೆ ತೊಳಲಿದ ಹಾಗೆ ದಾರಿ ಕಾಣದೆ ಕಂಗಾಣದವಗೆ ಕೃಪೆ ದೋರಿ ಸುಜ್ಞಾನ ದೀಪವ ತೋರೋ ಗುರುವೆ 2 ಸೊಕ್ಕಿನ ಮದದಿಂದ ಕಾಲವ ಪುಕ್ಕಟೆಕಳೆದೆ ಯೋಗೀಂದ್ರ ದುಃಖವೆನಿಪ ಸಂಸಾರ ಶರಧಿಯೊಳು ಸಿಕ್ಕಿದೆ ಕಾಯೋ ಸದ್ಗುರು ದಿಗಂಬರನೇ 3
--------------
ಕವಿ ಪರಮದೇವದಾಸರು
ವಂದಿಸುವೆನು ನಿತ್ಯದೊಳು ವಂದಿಸುವೆನು ಪ ವಂದಿಸುವೆ ಗುರುಮಧ್ವರಾಯನಷ್ಟಾಂಗದೊಳು ನಿಂದಿರ್ದ ವೈಷ್ಣವಮತಚಂದ್ರವಾರಿಧಿಗೆ ಅ.ಪ ಕ್ರೋಧವರ್ಜಿತನಾಗಿ ವೈರಾಗ್ಯವನು ತೊಟ್ಟು ಬಾಧಿಸುವ ಇಂದ್ರಿಯಂಗಳನೆಲ್ಲ ಬಲಿದು ಆಧರಿಸಿ ಕ್ಷಮೆ ದಮೆ ಶಾಂತ ಸದ್ಗುಣದಿಂದ ಮಾಧುರ್ಯದೊಳು ಜನರ ಪ್ರೀತಿಕರನಾದವಗೆ 1 ಭಯವಿವರ್ಜಿತನಾಗಿ ಬಹುಲೋಭವನು ತೊರೆದು ಕ್ಷಯ ಮಾಡಿ ಮೋಹವನು ಹಿಂದುಗಳೆದು ನವವಿಧದ ಜ್ಞಾನವನು ದಶಲಕ್ಷಣಗಳಿಂದ ನಿಯತವತಿ ಕೈಕೊಂಡನಕ್ಷರ ತ್ರಯದೊಳು 2 ಏಳು ಕೋಟಿಯ ಮಹಾ ಮಂತ್ರ ಬಾಹ್ಯದ ಕೋಟೆ ನಾಲಿಗೆ ವಶಮಾಡಿ ನವದ್ವಾರಗಳು ಮೂಲಾಗ್ನಿಯಿಂ ಸುಟ್ಟು ದಶವಾಯುಗಳ ಕದವ ಸಾಲು ನಾದಗಳೆಂಬ ಕಹಳೆವಿಡಿದವಗೆ 3 ದಶವಿಧದ ಘೋಷಗಳ ಬಿಂದು ಪ್ರತಾಪದಿಂ ದಶಮನಾಗಿಯೆ ಮುಂದೆ ಡೆಂಕಣಿಯ ಹಾರಿ ಗಸಣಿಯನು ಬಿಟ್ಟು ಕಳೆಯಿಂದೇಳು ಧಾತುಗಳ ಎಸೆವ ದುರ್ಗಾಂತರಕೆ ತಾಗಲಿಟ್ಟವಗೆ 4 ಒಂದು ಮುಹೂರ್ತದಲಿ ವ್ಯಸನಗಳನು ಹೂಳಿ ಬಂಧಿಸಿಯೆ ಚಂದ್ರಾರ್ಕ ವೀಧಿಗಳ ಪ್ರಣವದೊಳು ಮುಂದೆ ಮೂಲಾಧಾರವೆಂಬ ಅರಮನೆ ಪೊಕ್ಕು ನಿಂದು ನಿಯಮದಿ ಸುಲಿದನದಿಷ್ಠಾನದರಮನೆಯ 5 ಪ್ರತ್ಯಾಹಾರದಿಂ ಮಣಿಹಾರಕದ ಮನೆಯ ಕಿತ್ತು ಕಿಚ್ಚಂ ಹಾಕಿ ಧ್ಯಾನ ಯೋಗದಿ ಬಂದ ಮತ್ತೆ ಸಂಶುದ್ಧ್ದವೆಂಬರಮನೆಯ ಕೋಲಾಹಲದಿ ಉತ್ತಮದ ಅಂಬಿಕಾ ಯೋಗದಿಚ್ಛೆಯೊಳು 6 ಜ್ಞಾನ ಮಂಟಪವೆಂಬ ರಾಜ ಮನೆಯೊಳು ನಿಂತು ಮನದೊಳು ಮೂಲ ಬಂಧದಿ ಆರು ಶಕ್ತಿಗಳ ಹೀನವಾಗಿಹ ಗುಣತ್ರಯವೆಂಬ ಗೊಲ್ಲರನು ವ- ಡ್ಯಾಣ ಬಂಧದಿ ಇರಿವುತಲಿ ಕ್ಷಿಪ್ರದಲಿ 7 ಖೇಚರಿಯ ಯೋಗದಿಂ ಕರಣ ಚತುಷ್ಟಯದ ನೀಚ ಪ್ರಧಾನಿಗಳ ನೆಗಳವನಿಕ್ಕಿ ಕಾಲ ಕರ್ಮದ ಕಣ್ಣುಗಳ ಕಿತ್ತು ಯೋಚನೆಯ ಮಾಡಿದನು ವೀರಾಸನದೊಳು 8 ಮಾಯಾ ಪ್ರಪಂಚವೆಂಬನ್ಯಾಯ ನಾಯಕರ ಕಾಯ ಉಳಿಸದೆ ಸವರಿ ವಾಸ್ತಿಯಿಂದನುಗೈದು- ಪಾಯದಿಂದಾರು ವಿಕಾರಗಳ ಕೈಗಟ್ಟಿ ಬಾಯ ಹೊಯ್ದ ಗುರುವಿಗೆರಗುವೆನು ನಾನು 9 ಇಪ್ಪತ್ತೊಂದು ಸಾವಿರವಾರು ನೂರಾದ ಉತ್ಪವನ ಉಶ್ವಾಸ ನಿಶ್ವಾಸಗಳನೆಲ್ಲ ತಪ್ಪಿಸದೆ ಕುಂಭಕದಿಂದ ಬಂಧಿಸಿಕೊಂಡು ಒಪ್ಪುವನು ಅರೆನೇತ್ರದಿಂದ ಬೆಳಗುವನು 10 ಮುನ್ನೂರ ಅರುವತ್ತು ವ್ಯಾಧಿಗಳ ಲವಳಿಯಿಂ ಬೆನ್ನ ಬೆಳೆಸಿ ಕಪಾಲ ಭೌತಿಯಿಂದಷ್ಟಮದ ವರ್ಣಾಶ್ರಮಂಗಳನು ಏಕವನು ಮಾಡಿಯೆ ನಿರ್ಣಯಿಸಿಕೊಂಡು ತಾ ನೋಡುವವಗೆ 11 ನುತಿಕರ್ಮದಿಂದಷ್ಟ ಆತ್ಮಕರ ಆಸನವ ಜೊತೆಗೂಡಿ ಜಾತ ಮಧ್ಯದ ದೃಷ್ಟಿಯಿಂದ ಅತಿವೇಗದೊಳು ನಡೆವ ಅವಸ್ಥಾತ್ರಯವೆಂಬ ಕೃತಿ ಕುದುರೆಗಳ ಯುಕುತಿಯಲ್ಲಿ ಪಿಡಿದವಗೆ 12 ನಾದದಿಂ ಪಂಚಕ್ಲೇಶ ಪ್ರಭುಗಳನು ಹೊಯ್ದು ಕಾದು ಇರುತಿಹ ಹರಿಗಳಾರು ಬಿಂದುವಿನಿಂ ಸಾಧಿಸುತ ಮಂತ್ರಭ್ರಮಣದಿಂದ ಮಲತ್ರಯದ ಆದಿ ಕರಣಿಕನನ್ನು ಹಿಡಿದವನಿಗೆ13 ದಾತೃತ್ವದಿಂ ಸತ್ಯಲೋಕವನು ತಾ ಕಂಡು ಕಾತರದಿ ಆಕಾರದುರ್ಗವನು ಹತ್ತಿ ಓತಿರುವ ತಿರಿಕೂಟವೆಂಬ ಬಾಗಿಲ ದಾಟಿ ಈ ತೆರದ ಮಹಾದುರ್ಗವನು ಕಂಡವಗೆ 14 ಅಣು ಮಾತ್ರ ಸೂಕ್ಷ್ಮದೊಳು ನೋಡಿ ತಾ ಜ್ಞಾನದೊಳು ಕುಣಿಯೊಳಗೆ ಆ ಪರಂಜ್ಯೋತಿ ಆಗಿರುತಿಪ್ಪ ಗುಣನಿಧಿಯು ವರಾಹತಿಮ್ಮಪ್ಪರಾಯನನು ಕಣು ಮನದಿ ದೃಢವಾಗಿ ನೋಡಿ ಸುಖಿಯಾದವಗೆ 15
--------------
ವರಹತಿಮ್ಮಪ್ಪ
ವಂದಿಸುವೆನು ನಿನ್ನ ಅರವಿಂದಲೋಚನ- ದಿಂದ ನೋಡೊ ನೀ ಎನ್ನ ವಂದಿಸುವೆ ಅರವಿಂದಲೋಚನ- ದಿಂದ ನೋಡೊ ದಯಾಸಿಂಧು ಎನಿಸುವೆ ನಂದನಂದನನಾದ ಶ್ರೀ ಮುಕುಂದ ನೀ ಮುಚು- ಕುಂದ ವರದ ವಂದಿಸುವೆನು ನಿನ್ನ ಪ ಅಂಬರೀಷನು ಏನೋ ಮುಚುಕುಂದ ಮುನಿವರ- ನೆಂದು ರಕ್ಷಿಸುವೇನೊ ದ್ವಿಜ ತಂದವಲಕ್ಕಿ ತಿಂದ ಭಿಡೆಯಗಳೇನೊ ನೀನೆ ಸುರಧೇನು ಕಂದ ಧ್ರುವಪ್ರಹ್ಲಾದ ಕರೆಯಲು ಬಂದು ಭರದಿಂದವರ ಸಲಹಿದೆ ಮಂದಮತಿ ನಾ ಮ- ತ್ತೊಂದನರಿಯದೆ ವಂದಿಸುವೆ ನಿನ್ನ 1 ಗಜನು ಅಜಮಿಳನೇನೊ ಪಾದಾಂಬುಜ ಸ್ತುತಿಸ- ಲಜಸುತನು ನಾರದನೇನೊ ನಿಜ ಭಕುತಿಯಿಂದಿರಲ್ವಿದುರ ಉದ್ಧವನೇನೊ ನದಿಯಲ್ಲಿ ನಿನ್ನ ನಿಜಸ್ವರೂಪವ ತೋರಲಿಕ್ಕೆ ನಿನ್ನ ಬಾಂಧವಕ್ರೂರನೇ ನಾ ಕೇಳು ಘನ್ನ ಮಹಿಮ ಪ್ರಸನ್ನನಾಗಲಿಕ್ವಂದಿಸುವೆನು ನಿನ್ನ 2 ಸತ್ವರೊಳು ನಾನಲ್ಲ ಅಹಲ್ಯೆ ದ್ರೌಪದಿ ಭಕ್ತಿ ಮೊದಲೆನಗಿಲ್ಲ ಪಾಂಡವರ ದುರಿತಾಪತ್ತು ಕಳೆದ್ಯೊ ನೀಯೆಲ್ಲ ಕೇಳೆನ್ನ ಸೊಲ್ಲ ಭಕ್ತಾಧೀನನೆ ಭಯನಿವಾರಣ ಇಷ್ಟು ಭವಭಯ ಬಿಡಿಸಿ ಭೀಮೇಶಕೃಷ್ಣ ನಿನ್ನದಯ- ವಿಟ್ಟುಕರುಣಿಸೊ ವಂದಿಸುವೆನು ನಿನ್ನ 3
--------------
ಹರಪನಹಳ್ಳಿಭೀಮವ್ವ
ವಶವಲ್ಲದೀ ಮನದ ದೆಸೆಯಿಂದೆ ನಾ ಬಲು ದೆಸೆಗೆಟ್ಟು ಬಳಲುವೆ ಕುಸುಮಾಕ್ಷ ಕಣ್ದೆರೆಯೊ ಪ ನಶಿಪ ಪ್ರಪಂಚ ಭ್ರಮಿಸಿ ಹಸಗೆಡಿಸಿ ನಿಜಧ್ಯಾನ ಪಶುವಿನಂತೆನ್ನನು ದಿಸೆದಿಸೆಗೆಳಿಪುದು ಅ.ಪ ಭುವಿಪರನೊಲಿಸರೆಲವದಿ ಭೂಮಿಯ ಪಡೆದೆ ಸವ ಜೋಡಿ ನೂಕಿತ್ತು ಜವದಿ ಕಟ್ಟುವುದು ಬುವಿಯೊಳು ಮಿಗಿಲೆನಿಸುವ ತೆರೆ ಮೇಲ್ಮಾಡಿ ಭವನ ರಚಿಸಿ ಕೋಟಿದ್ರವ್ಯಗಳಿಗಳುವುದು 1 ಮದುವ್ಯಾಗಿ ಪದ್ಮಿನಿಯ ವದನದೊಳ್ವದನಿಕ್ಕಿ ಮದನಕದನದಿ ಸುಖಿಸುವುದೊಂದು ಫ¼ಗಿ ಸದನ ಮುರಿದು ಸಂ ಪದವೆಲ್ಲ ತನ್ನಗೆ ಒದಗಿಬರಲೆನ್ನುವುದು 2 ತಡೆಯದೆ ವೈರಿಗಳ ಕಡುಕೋಪದಿಂ ತಂದು ಪಿಡಿದು ಕಂಬಕೆ ಕಟ್ಟಿ ಸುಡಿಸುವುದೊಡನೆ ಕಡುಗಲಿತನದಿಂದ ಪೊಡವಿಪರ ಸದೆಬಡಿದು ಪೊಡವಿ ಗೆಲಿದು ಒಂದೇ ಕೊಡೆಯಿಂದಾಳುವುದು 3 ಯಾತ್ರೆ ಮಾಡುವುದೊಮ್ಮೆ ಕ್ಷೇತ್ರದೊಳಗೆ ಕೂತು ನೇತ್ರಮಂ ಬಂಧಿಸಿ ಸ್ತೋತ್ರ ಮಾಡುವುದು ಮೂತ್ರದ್ವಾರದೆ ಬಂದ ಸೂತ್ರದ ಕಾಯಕ್ಕೆ ಧಾತ್ರಿ ಸೊನ್ನೆಂದೊಮ್ಮೆ ಖಾತ್ರಿ ಮಾಡುವುದು 4 ಯಾತರ್ಹಲವು ಪರಿಮಿತಿಯಿಲ್ಲದ್ಯೋಚಿಸಿ ಖತಿ ತಾಳಲಾರೆ ಅತಿಭ್ರಷ್ಟಮನದ ದುರ್ಮತಿ ನಿವಾರಿಸು ಗತಿ ನೀಡೆನಗೆ ಕೃಪೆಯಿಂ ಹಿತಭಕ್ತ ಶ್ರೀರಾಮ 5
--------------
ರಾಮದಾಸರು