ಒಟ್ಟು 7039 ಕಡೆಗಳಲ್ಲಿ , 131 ದಾಸರು , 4008 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಏಳಯ್ಯ ಸುಬ್ರಹ್ಮಣ್ಯ ಬೆಳಗಾಯಿ- ತೇಳಯ್ಯ ಸುಬ್ರಹ್ಮಣ್ಯ ಕೋಳಿ ಕೂಗುವದು ವನಜಾಳಿಸೌರಭ್ಯ ತಂ- ಗಾಳಿ ಬೀಸುವದು ಕರುಣಾಳು ತವಚರಣವ- ಕೀಲಾಲಜಾಪ್ತನೀಗ ಕಾಲಕಾಲದಿ ಭಕ್ತಜಾಲವನು ಜಯಗೊಳಿಸಿ ಪಾಲಿಸುವ ಪಾರ್ವತೀಬಾಲ ಭಾಸ್ಕರತೇಜ ಲೋಲಲೋಚನೆಯ ಸಹಿತ1 ಇಂದು ಸಂಕ್ರಮಣ ದಿನ ಬಂದಿಹರು ಭಕ್ತಜನ- ವೃಂದ ಕಾಣಿಕೆ ಕಪ್ಪ ತಂದು ನಿಂದಿಹರು ಬಲ- ಸಲಹೆಂದು ಸ್ತುತಿಸೆ ಕಂದರ್ಪಸಾಹಸ್ರ ಸೌಂದರ್ಯ ಮೂರ್ತಿಯನು ಚಂದದಿಂ ಕಾಣುವಾನಂದ ಮಾನಸರು ಗೋ- ಸ್ಕಂದ ಕರುಣಾಸಿಂಧುವೆ2 ಪೃಥ್ವಿಯೊಳಗುತ್ತಮ ಪವಿತ್ರ ಪಾವಂಜಾಖ್ಯ ಕ್ಷೇತ್ರಾಧಿವಾಸ ಲೋಕತ್ರಯ ವಿಭೂಷಣ ಪ- ಕಾರ್ತಿಕೇಯ ನಮೋಸ್ತುತೇ ಭೃತ್ಯವತ್ಸಲ ಭವಭಯಾಬ್ಧಿಕುಂಭಜ ಭಜಕ- ಪ್ರೋತ್ಸಾಹ ಪಾವನಚರಿತ್ರ ಸುತ್ರಾಮನುತ ಮೃತ್ಯುಂಜಯನೆ ಪುತ್ರನೆ3
--------------
ತುಪಾಕಿ ವೆಂಕಟರಮಣಾಚಾರ್ಯ
ಏಳಯ್ಯಾ ಏಳು ಕಂದಾ | ಏಳು ಪರಮಾನಂದಾ | ಏಳು ಈರೇಳು ಜಗದೊಡೆಯ ಶ್ರೀಮುಕುಂದಾ ಪ ಮೊರೆವದೊಂದೇಗಾಲಿ | ಪರಿವಹರಿವೇಗಮಂ | ಜರಿದು ಯೇಳು ಕುದುರೆಂಗಳದರಾ | ಪೋರವರುಣನಿಂದ ಭೋರ್ಗರೆವ ಸ್ಯಂದನದೊಳಗ | ಮೆರೆವ ದಿನಕರ ಉದಯವಾದ ಪೂರ್ವಾದ್ರಿಯಲಿ 1 ಬಿರಿಯೆ ಕಮಲದ ಮೋಗ್ಗೆ ಕರಿಯೆ ಗೋವತ್ಸಗಳು | ಪರಿಯೆ ನಕ್ಷತ್ರಗಳು ಗಗನದೊಳಗ || ಸರಿಯೆ ಚೋರ್ವಿರಹಿಗಳು ವರಿಯದಂತಾಲಯಕೆ | ದೆರಿಯ ಕಣ್ಣೆವಿಯಗಳು ನಿದ್ರೆಗೈದಿದ ಜನರು 2 ಓಡುತಿದೆ ಕತ್ತಲೆಯು ಬಾಡುತಿದೆ ಕುಮುದ ಮುಖ | ಕೂಡುತಿವೆ ಚಕ್ರವಾಕಂಗಳೀಗ | ಆಡುತೆಳೆದುಂಬಿ ಚಲ್ಯಾಡುತಿದೆ ಮಧುರನವ | ಪಾಡುತಿದೆ ಮಹೀಪತಿ ಸುತನಾಮ ಕೀರ್ತಿಯನು 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಏಳು ಏಳು ಏಳು ಲೋಕದ ಒಡಿಯನೆ | ಏಳು ಗೋವಳರಾಯ ಗೋಪೇರಿಗತಿ ಪ್ರಿಯಾ | ಅಪ್ರಾಕೃತ ಕಾಯಾ ಸುರಮುನಿ ಗೇಯಾ | ಏಳು ಗೋಪಾಲಕೃಷ್ಣ ಪ ಪುರಂದರನ ದಿಶೆಯಲ್ಲಿ ಗರುಡಾಗ್ರಜನು ಬರಲು | ಶರಧಿ ತೆರೆ ತಗ್ಗಿದವು ಉರಗ ಪೆಡೆ ಪಸರಿಸಿದಾ | ಹರಿದು ಪೋಯಿತು | ಕಾಳ | ಸುರ ವೈರಿಗಳು ಅಡಗಲು | ಅರಳಿದವು ಅರವಿಂದ | ಝಂಕರಿಸಿ ಶುಕಪಿಕ ಮೃಗಾದಿ ಯೆ-| ಕರುಣಾಳುಗಳ ದೇವನೆ 1 ಮೇರೆ ತಪ್ಪಿ ಬಂದಾ ರಥಸಹಿತ ಭಾಸ್ಕರನು ದಿಶದಿಶೆಗೆ ಕಿರಣಗಳ | ಹರಹಿಕೊಳುತಾ | ಹರಿ ಗುರುವೆ ಪೇಳಲಳವೆ | ಕಲಿಸಿ ಮಂದಿರದೊಳಗೆ ಎಳೆಬಾಳೆ | ಶೃಂಗರಿಸಿದರು ಅರವಿಂದನಾಭ ಚೆಲುವ 2 ಪರಮ ಮಂಗಳವಾದ ದ್ವಾರ ದ್ವಾರಗಳಿಗೆ | ವಿರಚಿಸಿತು ಕಳಿತೆ ತೋರಣ ಕನ್ನಡಿ ಮಲಕು | ಭರದಿಂದಲಿ ಬಿಗಿದು ಮೇಲ್ಕಟ್ಟು ಚಿತ್ತರದ ಗೊಂಬೆ | ಪರಿಚಾರವು ವಪ್ಪಲು | ಹಿರಿದು ಹೂವಿನ ಮಾಲೆ ಕಟ್ಟಿದವು | ಮಕರವು ತುರ ತೊ ಗರು ಪೊಗಳು ಕಾದೋದಕವು ತಂದಿರೆ | ಅರಸಾದ ಆದಿದೈವ3 ಪರಮ ಭಾಗವತರು ಬತ್ತೀಸರಾಗದಲಿ | ಸ್ವರಮಂಡಲಾ ತಾಳ ತಂಬೂರಿ ಕಿನ್ನುರಿಗ ಸರವೇಣಿ ನಾನಾ ಗೀತ | ಪರಿ ಪರಿ ಕೊಂಡಾಡುತಿರಲು | ಕುಣಿಯುತಿದೆ ಸುರನಿಕರ ಪರಿಪಾಲಿಕ 4 ಸುರ ನರೋರಗ ಯಕ್ಷಗರುಡ ಸಿದ್ಧ ವಿದ್ಯಾ | ಕಿನ್ನರ ಸಾಮ | ಪರಮೇಷ್ಟಿ ವಾಲಗಕೆ ಬಂದು ಎ- ದುರು ನಿಂದು ತುತಿಪನಾಹಕೊ ಭರಿತಾಭರಣವಿಟ್ಟು | ಸರಸ್ವತಿ ಭಾರತಿ ಗಿರಿಜೆ ಸುರನಾರಿಯರು ತಮ್ಮ | ಹರಿವಾಣ | ದಾರುತಿಯ ಪಿಡಿದು ನಿಂದೈಧಾರೆ ಶರಣಾಗತ ವತ್ಸಲಾ 5 ಕರಿ ತುರಗ ರಥಪಾಯದಳವು ದಟ್ಟಡಿಯಾಗಿ | ನೆರದಿದೆ ಸಭೆಯಲಿ ಸಪ್ತಾಂಗದವರುಂಟು | ಅರಿ ಶಂಖಗದಾ ಪದುಮಖೇಟ ನಂದನ ಮುಸಲಾ | ಪರಶು ನೇಗಲ ಸುಶಕ್ತಿ ಪರಿಪರಿಯ ದಿವ್ಯಾಯುಧವ ತಮತಮಗೆ | ಧರಿಸಿ ಸಂತೋಷದಲಿ ದಾತಾರ ನಿನ್ನಯ ಬರುವ ಹಾರೈಸಿ | ವೈರಿಗಳು ನೋಡುತಲಿ ಹಾರೆ ಕುರುವಂಶ ವಿನಾಶಕಾ 6 ಸುರಿಗೆ ಪಾರಿಜಾತದ ಮಲ್ಲಿಗೆ | ಸುರವನ್ನೆ ಬಕುಳ ಪಾರಿ ಭದ್ರ ಸಂಪಿಗೆ | ಮರುಗ ಮಲ್ಲಿ ಜಾಜಿ ಕಾಂಜಿ ಶಾವಂತಿಗೆ ಕರವೀರ ನಂದಾವರ್ತ | ಅರಗುಂದ ಕುಂತಾತಸಿದವನ ಮುಡಿವಾಳ | ಈರವಂತಿಕೆ ಕೇತಿಕಾ ಸರ್ವ ಕುಸುಮಗಳಿಗೆ | ಶಿರೋರತನವಾದ ಎಳದುಳಸಿ ಹಾರಗಳಿಗೆ | ಅರಿಗಳ ಮಸ್ತಕಾಂಕುಶಾ7 ಚರಣದಂದಿಗೆ ಪೆಂಡೆ ಪೊಂಗೆಜ್ಜಿ ಮಣಿಮಯದ | ಸರಪಳಿಯು ತೊಡೆದು ಬಿರುದಾವಳಿಗಳು ಪೀತಾಂ | ಕಾಂಚಿ ದಾಮಾ | ಸರಿಗೆ ನ್ಯಾವಳಹಾರ ತುಳಸಿ ಕೌಸ್ತಭ ಪದÀಕ | ಸಿರಿವತ್ಸ ಕನಕಕುಂಡಲ ನೊಸಲ ಮೃಗನಾಭಿ | ಕರದಾಭೂಷ ಫಣಿಮಕುಟ ಧರಿಪಾ ದೇವಿ ನಿನ್ನ | ದರುಶನ ಭಕ್ತರಿಗೆ ಲಾಭಾ 8 ಸಿರಿ ಏಳಲೀಸಳೊ ಹತ್ತವತಾರವನು ಧರಿಸಿದ ದಣವಿಕಿಯ | ಕರಿ ಕಾಯಲಿ ಬಂದ ಭರದ ಉನ್ನತವು | ರಣದೊಳಗೆ ಪಾರ್ಥನ್ನ ರಥದ ತುರುಗವ ನಡಿಸಿದ ಲಜ್ಜೆಯ | ಸುರತ ಕ್ರೀಡೆಯಲಿ ಸ್ತ್ರೀಯರೋಳಾದಂಜಿಕಿಯೊ | ವರವ ಕೊಡು ಎಂದು ಬಂದು ಮಮ ಭಕ್ತರ ಭಯವೊ | ಸಿರಿ ವಿಜಯವಿಠ್ಠಲ ಉಡುಪಿಯ ಕೃಷ್ಣ ನಿನಗೆ | ದರಿಲ್ಲವೆಂಬೊ ಘನವೊ9
--------------
ವಿಜಯದಾಸ
ಏಳು ಗೋಪಾಲ ಬಾಲ ಇನ್ನೂ ಭಾಳ ಹೊತ್ತಾಯಿತು ಭಕ್ತ ಪರಿಪಾಲ ಪ. ಮುನಿಜನರೆದ್ದು ಪೂಜಿಸೆ ನಿನ್ನ ನಿಂತಿರೆ ಮನುಜರೆಲ್ಲರೂ ಕಾದಿಹರು ದರುಶನಕೆ ಸನಕಾದಿ ವಂದಿತ ಸರ್ವೇಶನೆಂತೆಂದು ವಿನಯದಿಂದಲಿ ನುತಿಪರು ಭಾಗವತರು 1 ತಾರೆಗಳಡಗಿತು ಕಮಲಗಳರಳಿತು ಪೂರ್ವ ದಿಕ್ಕಿನಲಿ ತೋರುವ ರವಿ ಉದಯ ಭೇರಿ ತುತ್ತೂರಿ ನಗಾರಿ ಬಾರಿಸುತಿದೆ ಸಾರಿ ಕೂಗುತಲಿದೆ ಕೋಳಿ ವೃಂದಗಳು 2 ಬಾಲಲೀಲೆಗಳಿಂದ ಗೋವಳರೊಡನಾಡಿ ಭಾಳ ಆಯಾಸವಾಗಿಹುದೆ ಕಂದಯ್ಯ ಬಾಲೆ ಗೋಪ್ಯಮ್ಮ ನಿನ್ನ ಲಾಲಿಸಲಿಲ್ಲವೆ ಬಾಲಯತಿಗಳು ಪೂಜಿಸುವರೇಳಯ್ಯ 3 ಬಿಸಿಬಿಸಿ ನೀರು ಪಂಚಾಮೃತವೆರೆಯುತ ಹಸನಾದ ಪಾಲು ಸಕ್ಕರೆ ಉಂಡೆಗಳು ಹಸುಗೂಸು ನಿನಗೆ ಹುಗ್ಗಿಯು ದೋಸೆ ಪೊಂಗಲು ಬಿಸಜಾಕ್ಷ ಯತಿಗಳರ್ಪಿಸುವರೇಳಯ್ಯ 4 ನುತಿ ಕೇಳಲಿಲ್ಲ ಆ ದಣಿದೆಂದು ಮಲಗಿದ್ಯಾ ಶ್ರುತಿ ವೇದತತಿಗಿಂತ ಚತುರ ಮಾತಿನೊಳು ಹಿತದಿ ಯಶೋದೆ ಎಬ್ಬಿಸಲೆಂದು ಮಲಗಿದ್ಯಾ ಚ್ಯುತದೂರ ಗೋಪಾಲಕೃಷ್ಣವಿಠ್ಠಲಯ್ಯ 5
--------------
ಅಂಬಾಬಾಯಿ
ಏಳು ಚೆನ್ನಿಗರಾಯ ನನ್ನೀನಾಗರ ಏಳು ಪ. ಏಳೆನ್ನ ಕಣ್ಮಣಿಯೇ ಕಾಳಿಮರ್ಧನಕೃಷ್ಣ ಅ.ಪ. ಮಾರನೆಯ ದಿನದಲ್ಲಿ ನೀ ಹಾರುತ್ಯಾರುತ ಬಂದು ಸೀರೆ ಸೆರಗನು ಪಿಡಿದು ಬೆಲ್ಲವನು ಬೇಡಲು ಕೇಳಿಕೊಳ್ಳವುದೇಕೆ ಹಗಲುಗಳ್ಳನೆ ಹೋಗು ಒಳಿತು ಚೋರರಿಗೆಲ್ಲ ಕೇಳಿ ಕೊಳಲೆಂದೆ 1 ಚೋರ ನೀನೆಂದುದಕ್ಕೆ ಈ ಸೀರೆಯನು ಜರಿವರೇ ಚೋರನಲ್ಲವೇ ನೀನು ಮಧ್ವರ ಹೃದಯ ಕದ್ದ 2 ಜಾರ ನೀನೆಂದುದಕೆ ಕರೆಕರೆಗೊಳಿಸುವರೆ ಜಾರೆಯಾಸಹುದು ನೀನಲ್ಲ ಜಾರರಮಣ 3 ಕಂಡದನು ಆಡಿದರೆ ಕಡುಕೋಪವ್ಯಾತಕೆ ಹಿಂಡು ಗೋವಳಲೊಡೆಯ ಪುಂಡನೀನಹುದು 4 ಮಜ್ಜನವ ಮಾಡಿಸುವೆ ಸುಳಿಗುರುಳ ತಿದ್ದುವೆ ಸಜ್ಜಾದ ಚಂದನದ ಚಂದ್ರಮನ ಫಣಿಯಲಿಡುವೆ 5 ಗೊಲ್ಲಬಾಲರು ಈಗ ಕರೆಯಲು ಬರುವರು ಮೆಲ್ಲಗೆ ಎದ್ದು ನೀ ಬೆಲ್ಲವನು ಮೆಲ್ವ ಬಾಲಕೃಷ್ಣ 6 ಮಧ್ವೇಶ ನೀನೇಳು ಮುದ್ದು ಮೊಗದವನೆ ಏಳು ಹದ್ದುವಾಹನ ಏಳೂ ಹಾಲಕುಡಿಯೇಳು 7 ಹಾಲು ಬೆಲ್ಲವ ಸವೆದು ಸುಧೆಯನು ಸುರಿಸೇಳೋ ಪಾಲಗಡಲ ಶಯನ ಶಯನದಿಂದೇಳೋ 8 ಮುನಿಸು ಏಕೇಕೆ ರಮಣ ಮುಸುಕನು ತೆಗೆದೇಳು ತಿನಿಸು ತಿಂಡಿಯ ಕೊಡುವೆ ತನಿವಣ್ಣ ಕೊಡುವೆ 9 ಚಿನ್ನದಾ ಒಂಟೆಳೆಯ ರನ್ನಧಾಭರಣ ಭಿನ್ನ ಭಿನ್ನವಾದ ಆಭರಣಗಳಿಡುವೆ ಕೃಷ್ಣ 10 ಹೆಚ್ಚೇನು ಪೇಳಲಿ ಮಗಸಾಮ್ರಾಜ್ಯದ ದೊರೆತನವು ನಿನ್ನದೊ ಸ್ವಚ್ಚಾಗಿ ಹೇಳುವೆನು ಫಲಿಸೇಳು ಕೃಷ್ಣಾ 11 ಬಾಧಿಸದೆ ಜಾಗವನು ಬಿಟ್ಟೇಳೊ 12 ಏನು ಬಯಸಿದ ಕೊಡುವೆ ಮನಬಯಕೆ ಪೂರೈಸೊ ಮನದನ್ನನೇ ಎನ್ನ ಕಾಳಿಮರ್ಧನಕೃಷ್ಣ 13
--------------
ಕಳಸದ ಸುಂದರಮ್ಮ
ಏಳು ನಾರಾಯಣ ಏಳು ಲಕ್ಷ್ಮೀರಮಣಏಳು ಬೆಳಗಾಯ್ತರುಣ ಬೀರುತಿದೆ ಕಿರಣ ಪ ರಂಗ ಬರುತಿಹನೆಂದು ಮಂಗಳಾಂಗಿಯರೆಲ್ಲಅಂಗಳ ಸಾರಿಸಿಸುತೆ ಮಂಗಳವ ಪಾಡುತ್ತೆರಂಗೋಲಿಯೊಳು ನಿನ್ನ ಚಿತ್ರವನು ರೇಖಿಸುತೆಶೃಂಗರಿಸುತಿಹರು ನೋಡೆದ್ದು ಬಾರೋ 1 ಹಿಂಡಿ ನೊರೆ ಹಾಲ್ಗಳನು ಗಿಂಡಿಯೊಳು ತಂದಿಟ್ಟುಕೊಂಡು ವದನವ ತೊಳೆಯ ಬಿಸಿ ನೀರು ತಂದಿಟ್ಟುತಂಡತಂಡದಿ ಭಕುತ ಮಂಡಲಿಯು ಕಾದಿಹುದು ಹೆಂಡತಿಯನೊಡಗೂಡಿಯುಂಡು ತಣಿಯು ಬಾರೋ2 ವೆಳ್ಳೆ ತುಂಬಿಗಳಾಡೆ ಮಂಗಳಾರತಿ ಮಾಡಿಬೆಳ್ಳಿ ಕಳಶಗಳೆನಲು ಅಮೃತವನು ತುಂಬಿಬೆಳ್ಳನೆಯ ಹೂಗಳನು ಮಡಿ ತಳಿಗೆಯೊಳು ಹಿಡಿದುಬಳ್ಳಿ ಮಲ್ಲಿಗೆ ತಾವು ಆತುರದಿ ನಿಂತಿಹವು 3 ಚಿಕ್ಕೆಗಳು ಬಾಡುತಿವೆ ಚೊಕ್ಕೆಲರು ತೀಡುತಿದೆಮಕ್ಕಳಾಡುಲೆವೆ ಕಕ್ಕುಲತೆಯೊಲಿ ನಮ್ಮ ರಕ್ಷಿಸಲು ನೀನೇಳು 4 ಕರ ಮಕದು ಭಕುತಿಯಿಂದಲಿ ಬೇಡುವರುಪಾವು ಮಂಚವ ಬಿಟ್ಟು ಬೇಗೆದ್ದು ಬಾರೋ 5 ಕಂಜದೆಲೆಯಲಿ ಬಿದ್ದ ಮಂಜುವನಿಗಳ ಮೇಲೆಕೆಂಜೆಡೆಯನಾಂಶುಗಳು ರಂಜಿಸಲು ದೀಪದೊಳುಕಂಜನಾಭ ನಿರಾಂಜನವ ಬೆಳಗಲಿಕೆಮುಂಜಾಮದಲೆ ಕಾಯುತಿಹಳೊ 6 ಶಿರಬಾಗಿ ನಿನ್ನ ಚರಣಗಳಿಗೆ ಬಂದಿದೆ ಶರಣನಿರುತ ಧನವಾರೋಗ್ಯವಿತ್ತು ದುರಿತಾಪಹರಣಪರಿಕಿಸದೆ ರಕ್ಷಿಸಲು ಬಾರೋ ಕರುಣಾಭರಣವರ ಗದುಗಿನಲಿ ಮೆರೆವ ವೀರನಾರಾಯಣ 7
--------------
ವೀರನಾರಾಯಣ
ಏಳು ನಾರಾಯಣನೆ - ಏಳು ವಾಸುದೇವಏಳು ಕೃಷ್ಣಾಚ್ಯುತನೆ _ ಏಳು ಹೇ ಮಾಧವಾ ಪ ಏಳು ವೈಕುಂಠನೇ - ಏಳು ಕಾರುಣ್ಯನೇಏಳು ಲಕ್ಷ್ಮೀಶನೇ - ಏಳು ಭಗವಂತ ನಮಿಪೇ 1 ಏಳು ಮಧ್ವೇಶನೇ _ ಏಳು ಪ್ರಾಣೇಶನೇಏಳು ರುದ್ರೇಶನೇ - ಏಳಾಂಬಿಕೇಶಾ 2 ಏಳು ಇಂದ್ರೇಶನೇ - ಏಳು ಶಚಿಗೀಶನೇಏಳು ವಿಪ್ರೇಕ ಭ - ಕೇಶನೆ ಗೋಪತೇ 3 ಕಾರುಣಿಕ ಮೂರ್ತೇ4 ಏಳು ಸಾಮ ಪ್ರಿಯನೆ - ಸರ್ವ ಕಾರಣ ಮೂರ್ತೆಏಳು ವೇದಾರ್ಥ ಪ್ರಿಯ - ಸರ್ವದಾ ಇಹನೇ 5 ಏಳು ಗದ್ಯ ಪ್ರಿಯನೆ - ಪುರಾಣ ಪುರುಷನೇಏಳು ಸ್ತೋತ್ರ ಪ್ರಿಯನೆ - ಸರ್ವದಾ ವಿಶ್ವಮೂರ್ತಿ 6 ಏಳು ಗುರು ಹೃದಯನೇ - ಪವನಾಂತರಾತ್ಮನೇಏಳು ಗುರು ಗೋವಿಂದ - ವಿಠಲ ಹಯವದನ 7
--------------
ಗುರುಗೋವಿಂದವಿಠಲರು
ಏಳು ಪಂಡರಿವಾಸ ಏಳು ಶ್ರೀ ದೇವೇಶ ಏಳು ಮುಕ್ತ ಗಿರೀಶ ಏಳು ಹೃದೇಶ ಪ. ಏಳು ಮೂಲೋಕದೀಶ ಏಳು ಹೃತ್ಪದವಾಸ ಏಳು ಏಳಯ್ಯ ಶ್ರೀಶಾ ಏಳು ಸರ್ವೇಶಾ ಅ.ಪ. ಗಂಗಾ ಭಾಗೀರಥಿ ತುಂಗಭದ್ರಾ ಯಮುನ ಸಂಗಮ ತ್ರೀವೇಣಿ ಸರಸ್ವತಿ ಸರಯೂ ಮಂಗಳೆ ಚಂದ್ರಭಾಗೆಯೋಳ್ ಕೂಡಿ ಸೇವಿಸೆ ರಂಗಾ ಬಾಗಿಲೋಳ್ ನಿಂತು ಕಾದಿಹಳಯ್ಯ 1 ಪುನಗು ಜವಾಜಿ ಕಸ್ತೂರಿ ಬೆರಸಿದ ಜಲ ನಿನಗೆ ತೈಲವನೊತ್ತಿ ಎರೆವೆನೆಂದು ಕನಕ ರತ್ನದಿ ಭೂಷಿತರಾದ ದೇವ ಕನ್ನಿಕೆಯರು ಕಾದಿಹರೈಯ್ಯ ಲಕುಮಿಪತಿ 2 ಪಂಚಬಾಣನ ಪಿತನೆ ಪಂಚಾಮೃತ ತಂದು ಪಂಚಕನ್ನೆಯರು ಎರೆವೆನೆಂದು ಮಿಂಚು ಕೋಟಿಯತೇಜಾಭರಣ ಪೀತಾಂಬರ ಪಂಚ ರೂಪಗೆ ಉಡಿಸಿ ಶೃಂಗರಾಗೈಯುವರು 3 ಕಸ್ತೂರಿ ತಿಲಕವು ಕನಕಾಂಬರದ ಶಾಲು ಸುತ್ತಿದ ಮುಂಡಾಸು ಶೃಂಗರಿಸಿ ಮತ್ತೆ ಕಾಸಿದ ಹಾಲು ಹಣ್ಣು ಸಕ್ಕರೆ ಕೊಟ್ಟು ಎತ್ತಿ ಬೆಳಗುವ ಮುತ್ತಿನಾರುತಿ ವಿಠಲ 4 ಪಾಪರಹಿತ ಏಳು ಪಾವನ್ನ ರೂಪ ಏಳು ಗೋಪಾಲಕೃಷ್ಣವಿಠಲ ಹರಿ ಏಳು ಶ್ರೀಪದ್ಮಭವಮುಖರಾಪಾರ ಮುನಿಗಳು ರೂಪ ನೋಡಲು ಇಲ್ಲಿ ಕಾದಿಹರೇಳಯ್ಯ5
--------------
ಅಂಬಾಬಾಯಿ
ಏಳು ರಂಗಯ್ಯ ನೀನೇಳು ಕೃಷ್ಣಯ್ಯ ಏಳಯ್ಯ ದೊರೆ ಬೆಳಗಾಯಿತೇಳೆಂದು ಪಾಲ್ಗಡಲೊಡೆಯ ಹರಿಯನೆಬ್ಬಿಸಿದಳಂದು ಬಾಲೆ ಯಶೋದೆಯು ಬಹು ಸಂಭ್ರಮದಿಂದ ಪ ಶಕ್ರನುಪಟಳವ ನೀ ಪರಿಹರಿಸಬೇಕು ವಿಕ್ರಮದಿ ಗೋವರ್ಧನ ಎತ್ತಬೇಕು ಚಕ್ರಧರ ನಿನ್ನ ಮಧುರೆಗೆ ಕರೆದೊಯ್ಯೆ 1 ಮಾವ ಕಂಸನು ನಿನ್ನ ಬಾ ಎಂದನಂತೆ ಸಾವು ಅವನಿಗೆ ಸಮೀಪದಲಿದೆಯಂತೆ ದೇವಕಿ ವಸುದೇವ ಸೆರೆಯಲಿರುವರಂತೆ ಕಾವುದಕೆ ನೀ ಪೋಗಲೇಬೇಕಂತೆ 2 ಬಿಲ್ಲ್ಹಬ್ಬದಲಿ ಜಯಶೀಲನಾಗಬೇಕು ಖುಲ್ಲ ರಕ್ಕಸ ದಲ್ಲಣನೆನಿಸಬೇಕು ಬಲ್ಲಿದ ಮಗಧನ ಕೊಲ್ಲಿಸಲುಬೇಕು 3 ದೇವಿ ದ್ರೌಪದಿಗೆ ಸುಚೇಲವೀಯಬೇಕು ಭಾವಮೈದುಗೆ ಬೋವÀನಾಗಬೇಕು ಪಾವಿನ ಶರದಿಂದವನ ಪೊರೆಯಬೇಕು ಯಾವತ್ತು ಭೂ ಭಾರವನಿಳುಹಬೇಕು 4 ಮಧ್ವರಾಯರ ಹೃತ್ಪದ್ಮದಿ ನಿಲಬೇಕು ಇದ್ದು ಉಡುಪಿಯೊಳು ಪೂಜೆಗೊಳಲುಬೇಕು ಶುದ್ಧ ವೈಷ್ಣವರಿಷ್ಟಗಳ ಸಲಿಸಬೇಕು ಮುದ್ದು ರಂಗೇಶವಿಠಲನೆನಿಸಬೇಕು 5
--------------
ರಂಗೇಶವಿಠಲದಾಸರು
ಏಳು ಲೋಕದಲಿ ಹೇಳುವರು ಅವರಕೀರ್ತಿಕೇಳಿ ಕೇಳಿ ಬಲ್ಲೆವಮ್ಮ ದೂತೆ ಬಹಳ ಬಹಳ ಭಾಗ್ಯವೇನೆ ದೂತೆ ಹೇಳಲ್ವಶವಲ್ಲವೇನೆ ದೂತೆ ಪ. ಕೃಷ್ಣನಂಘ್ರಿ ಕಮಲದಲೆ ನಿಷ್ಠನಾಗಿ ಧರ್ಮರಾಯ ಅಷ್ಟು ರಾಜ್ಯನಾಳುವನೇನ ದೂತೆ 1 ದಿಟ್ಟ ಧರ್ಮರಾಯ ದ್ರವ್ಯ ಶ್ರೇಷ್ಟ ದ್ವಿಜರಿಗೆ ಕೋಟಿಕೊಟ್ಟು ಕೊಟ್ಟು ಕಳಿಸೋನೇನೆ ದೂತೆ 2 ಮಾಧವನ ಭಕ್ತರಿಗೆ ಆದರದಿ ದ್ರವ್ಯ ಸಹಿತಗೋದಾನಗಳು ಕೊಡುವೊನೇನೆ ದೂತೆ 3 ನೀಲವರ್ಣನ ಭಕ್ತರಿಗೆ ಸಾಲಿಗ್ರಾಮ ಕೋಟಿ ಲಕ್ಷಮ್ಯಾಲೆ ದ್ರವ್ಯ ಕೊಡುವೋನೇನೆ ದೂತೆ 4 ಶ್ಯಾಮವರ್ಣನ ಭಕ್ತರಿಗೆ ಪ್ರೇಮದಿಂದ ದ್ರವ್ಯ ಸಹಿತ ಭೂಮಿದಾನ ಕೊಡುವೊನೇನೆ ದೂತೆ5 ಪನ್ನಂಗಶಯನನ ಭಕ್ತರ ಮನ್ನಿಸಿ ದ್ರವ್ಯಗಳಿಂದ ಕನ್ಯಾದಾನ ಮಾಡೋನೇನೆ ದೂತೆ 6 ಉತ್ತಮ ದ್ವಿಜರಿಗೆ ರಾಯ ಮುತ್ತು ಮಾಣಿಕರತ್ನ ಸಹಿತಛತ್ರ ಚಾಮರ ಕೊಡುವೋನೇನೆ ದೂತೆ 7 ಆನೆ ಕುದುರೆ ಅಂದಣವು ನಾನಾ ಭೂಷಣಗಳು ವಸ್ತ್ರಜ್ಞಾನಿಗಳಿಗೆ ಕೊಡುವೊನೇನೆ ದೂತೆ 8 ಸಂಪತ್ತು ದ್ವಿಜರಿಗೆ ಕೊಟ್ಟು ದಂಪತ್ತು ಪೂಜೆಗಳ ಮಾಡಿಗುಂಪು ಗುಂಪು ಕಳುಹೋನೇನೆ ದೂತೆ 9 ಮಿತಿ ಇಲ್ಲದೆ ಅನ್ನ ಮಧ್ವಮತದ ಜನಕೆ ಕೊಟ್ಟುಲಕ್ಷ್ಮೀಪತಿಗೆ ಅರ್ಪಿಸುವನೇನೆ ದೂತೆ 10 ಯದುಪತಿಯ ಭಕ್ತರಿಗೆ ಉದಕ ಪಾತ್ರೆ ಕೊಟ್ಟುರಾಯ ಅಧಿಕ ಕೀರ್ತಿ ಪಡೆಯುವನೇನೆ ದೂತೆ11 ತುಷ್ಟರಾಗಿ ಆಶೀರ್ವಾದ ಕೊಟ್ಟುರಾಯಗೆ ದ್ವಿಜರು ಕೃಷ್ಣಗರ್ಪಿಸೆಂಬೋರೇನೆ ದೂತೆ 12 ರತಿ ಇಟ್ಟು ರಾಮೇಶನಲ್ಲೆ ವ್ರತವ ಕೋಟಿ ಮಾಡಿರಾಯಕೃತ ಕೃತ್ಯನಾಗುವನೇನ ದೂತೆ13
--------------
ಗಲಗಲಿಅವ್ವನವರು
ಏಳು ಶ್ರೀ ಗುರುರಾಯ ಏಳು ಪರಮಪ್ರಿಯ ಏಳು ಮಂಗಳಕಾಯ ಭಕ್ತಜನಪ್ರಿಯ ಏಳಯ್ಯ ಬೆಳಗಾಯಿತು ಪ. ಬಳಲಿ ಬಂದಿರುವಂಥ ಬಾಲ ಶಿಷ್ಯಂದಿರನು ಸುಲಲಿತದ ಪ್ರಿಯ ವಾಕ್ಯದಿಂದ ಸಂತೈಸಿ ಮಲಿನ ಮನವನೆ ತಿದ್ದಿ ಸುಜ್ಞಾನ ಬೋಧಿಸಿ ನಳಿನನಾಭನ ಪಾದಕೊಪ್ಪಿಸಲಿಬೇಕು 1 ಶುದ್ಧಾಂತಃಕರಣದಿಂ ಪೊದ್ದಿರುವ ಶಿಷ್ಯರನು ಉದ್ಧಾರಗೈಯಲಂಕಿತಗಳಿತ್ತು ಸಾರ ತತ್ವಾಮೃತವನುಣಿಸಿ ಪದ್ಮನಾಭನ ದಾಸರೆಂದೆನಿಸಬೇಕು 2 ಎದ್ದು ಸ್ನಾನವಗೈದು ತಿದ್ದಿ ನಾಮವನ್ಹಚ್ಚಿ ಪದ್ಮಾಕ್ಷಿ ತುಳಸಿ ಮಾಲೆಗಳ ಧರಿಸಿ ಗದ್ದುಗೆಯೊಳು ಕುಳಿತು ಹೃದ್ವನಜಸ್ಥಾನ ಪದ್ಮಪಾದವ ಮನದಿ ಸ್ಮರಿಸಬೇಕು 3 ಹಿಂದ್ಯಾರು ಪೊರೆದರು ಮುಂದ್ಯಾರು ಕಾಯ್ದರು ತಂದೆ ನೀವಲ್ಲದಿರೆ ಪೊಂದಿದರಿಗೆ ತಂದೆ ಮುದ್ದುಮೋಹನದಾಸವರ ಎಮ್ಮೊಳು ಕುಂದನೆಣಿಸದೆ ಕಾಯೊ ಕರುಣಾಳು ಗುರುವೆ 4 ಆಪನ್ನ ರಕ್ಷಕನೆ ಗೋಪಾಲಕೃಷ್ಣವಿಠ್ಠಲನಂಘ್ರಿ ಕಮಲ ಕೃಪಾಳು ತೋರು ನೀ ಕೃಪೆಮಾಡು ಕಣ್ತೆರದುಶ್ರೀ ಪದ್ಮಜಾತರೊಂದಿತನ ದಾಸಾರ್ಯ 5
--------------
ಅಂಬಾಬಾಯಿ
ಐದನೆ ವರ್ಷದ ಅಂತ್ಯ ಭಾಗದೊಳಗೆ ಐದುವೊ ಮಾರ್ಗವನು ನಿಶ್ಚಯಿಸಿದೆ ಪ. ಆದಿಮಾಸದ ಶುದ್ಧನವಮಿ ಸ್ಥಿರವಾರದಲಿ ಮೋದಗುರುಗಳು ಬೋಧಿಸೆ | ದಯದಿ ಅ.ಪ. ಐದನೆ ತಿಂಗಳಲಿ ಅಂಕುರುವು ಪಲ್ಲೈಸಿ ಐದು ಇಂದ್ರಿಯವು ಕಲೆತು ಕಾಯ ಐದಲಾರದು ಜೊತೆಗೆ ಕರ್ಮ ಒಂದು ಈ ದಿವ್ಯ ಮತಿಯೆನಗೆ ಸಾದರದಿ ಪುಟ್ಟಲು ಮೋದವಾಗುತ ಮನದೊಳು ಆದಿದೈವನ ಕರುಣವಾದ ಬಳಿಕಿನ್ನೇನು ಪಾದಪದ್ಮವ ತೋರೆಲೊ | ಸ್ವಾಮಿ 1 ಐದೆರಡು ಒಂದು ಇಂದ್ರಿಯಗಳನೆ ಬಂಧಿಸಿ ಐದಿಸಿ ಮೂಲಸ್ಥಳಕೆ ಐದು ರೂಪಾತ್ಮಕನ ಆದರದಿ ಪೂಜಿಸುತ ಐದೊಂದು ದೂರ ತ್ಯಜಿಸಿ ಐದು ನಾಲ್ಕು ತತ್ವದಧಿಪತಿಗಳನು ಆದರದಿ ಧ್ಯಾನಮಾಡಿ ಐದು ಮೂರು ದಳದಿ ಆದಿತ್ಯನಂತಿರುವ ಶ್ರೀಧರನ ನುತಿಸಿ ನುತಿಸಿ | ಸ್ತುತಿಸಿ 2 ಐದು ಭೇದಗಳ ಮತ ಸ್ಥಾಪಕರ ಕರುಣದಲಿ ಐದು ಮೂರನೆ ಖಂಡಿಸಿ ಐದೆರಡು ರೂಪಕನ ಆದರದಿ ಸ್ತುತಿಸುತ್ತ ಭೇದಿಸಿ ಹೃದಯಗ್ರಂಥಿ ಶ್ರೀದ ಶ್ರೀಗೋಪಾಲಕೃಷ್ಣವಿಠ್ಠಲನ ಪದ ಆದರದಿ ನಂಬಿ ಸ್ತುತಿಸಿ ಈ ದಾರಿ ಕಾಣಲು ಇದಕೆ ಕಾರಣದಿವ್ಯ ಮೋದ ಶ್ರೀಗುರು ಕರುಣವೋ | ದಯವೋ 3
--------------
ಅಂಬಾಬಾಯಿ
ಒಡಲೆರಡಂತೆ ಅಸುವೊಂದಂತೆ ನುಡಿಯಿದು ನಿಜವೇ ಪೇಳೇ ಗೋಪಮ್ಮ ಪ ನಡೆ ನುಡಿ ಭಾವಗಳೊಂದೇಯಂತೆ ಹುಡುಗನೇನೇ ಕೃಷ್ಣ ಪೇಳೇ ಗೋಪಮ್ಮ ಅ.ಪ ಸೋದರಿಯರು ಇದ ಹೇಳುವರಮ್ಮ ನಾದ ನರ್ತನ ದೇಹಕಾಂತಿಗಳಲ್ಲಿ ಭೇದವಿಲ್ಲೆಂಬರು ನಿಜವೇನಮ್ಮಾ 1 ಬಾಲೆಯು ತಾನೆ ಗೋಪಾಲನೆನುವಳಂತೆ ಬಾಲಕೃಷ್ಣನು ರಾಧೆ ತಾನೆಂಬನಂತೆ ಬಾಲನಾರಿದರಲ್ಲಿ ಬಾಲೆಯಾರಿವರಲ್ಲಿ ಮೂಲತತ್ವವ ನೀನೆ ಹೇಳೇ ಗೋಪಮ್ಮ 2 ಯುಗ ಯುಗದಲ್ಲಿ ತಾನವತರಿಸುವ ಕೃಷ್ಣ ಜಗದೀಶ್ವರನೆ ತಾದಿಟವಮ್ಮ [ಮಿಗೆ] ಭಾಗ್ಯವೆ ನಿನ್ನದಾಗಿಹುದಮ್ಮ 3 ನಿರುಪಮ ಭಕ್ತಿಯಮೂರ್ತಿಯು ರಾಧೆ ಮುರಳೀಧರನಲಿ ಒಂದಾಗಿಹಳು ಅರಿತುದ ಪೇಳ್ವೆನು ಮಾಂಗಿರಿರಂಗನ ಶರಣರಿಗೀತತ್ವ ಕರಗತವಮ್ಮಾ 4
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಒಡಿಯಾ ನಿನ್ನಡಿಗಳಿಗೆ ಬಿಡದೆ ನಾ ನಮೋ ಎಂಬೆ ಕೊಡು ಎನಗೆ ದೃಢ ಪದವಿ ಕಡಲಶಯನಾ ಪ ಪಿತನ ತೊಡಿಯ ಮೇಲೆ ಕುಳಿತಿರಲು ಮಲತಾಯಿ ಅತಿ ರೋಷದಿಂದವನ ಹೊಯಿದೆಬ್ಬಿಸೆ ಖತಿಯಿಂದ ವನಕೆ ಪೋಗಿ ನಿನ್ನ ಪೂಜಿಸಲು ಮತಿವಂತನ ಮಾಡಿ ಧ್ರುವಪದವಿ ಕೊಡಲಿಲ್ಲವೆ 1 ತಂದೆ ಬಾಧಿಸೆ ಧೃತಿಗೆಡದೆ ನರಹರಿ ಗೋ ವಿಂದ ನಾರಾಯಣ ಕೃಷ್ಣ ವಿಷ್ಣು ಇಂದಿರಾರಮಣ ಇನಕುಲತಿಲಕ ಎಂದೆನಲು ಕಂದನಿಗೆ ಕೈವಲ್ಯಪದವಿ ಕೊಡಲಿಲ್ಲವೇ2 ಜಾತಿಧರ್ಮವ ಬಿಟ್ಟು ಅಜಮಿಳನು ಚಂಡಾಲ ಜಾತಿ ವಧುವಿಗೆ ಸೋತು ಕೆಟ್ಟು ಯಮನ ದೂತರನ ನೋಡಿ ಕಂಗೆಟ್ಟು ಮಗನನು ಕರಿಯೆ ಪ್ರೀತಿಯಲಿ ವೈಕುಂಠ ಪದವಿ ಕೊಡಲಿಲ್ಲವೇ 3 ವನಿತೆ ಪತಿವ್ರತವಾನಂತನನುಚರಿಸಿ ಬಂದಿರಲು ಮನದ ಖೇದವ ತಾಳಿ ಹರಿದು ಬಿಸುಟೆ ಮುನಿಪುಂಗ ಅಡವಿಯನು ತೊಳಲಿ ನೆಂದು ಬಿದ್ದಿರಲು ಪುನರ್ವಸು ಸ್ಥಾನವು ಕೊಡಲಿಲ್ಲವೆ4 ಶೌರ್ಯದಲಿ ಅಬ್ಧಿಯನು ಹಾರಿ ಲಂಕೆಯ ಸುಟ್ಟು ಧೂರ್ಯದಲಿ ರಕ್ಕಸರನೊರಿಸಿ ಬಿಸುಟೂ ಕಾರ್ಯದಲಿ ಹನುಮಂತ ನಿನ್ನ ಮೆಟ್ಟಿಸೆ ಒಲಿದು ಸೂರ್ಯಭಾಂದವಗೆ ಜನಪದವಿ ಕೊಡಲಿಲ್ಲವೆ 5 ಸೋದರಗೆ ಬುದ್ದಿಯನು ಪೇಳೆ ಕೇಳದೆಯಿರಲು ಪಾಧಾರಿ ದಾಟಿ ನಿಮ್ಮ ಸೇವಿಸಿ ಕಾದಿ ರಾವಣನ ಛೇದಿಸಿ ಲಂಕಾಪುರ ಪದವಿ ಪರಿಯಂತ ಕೊಡಲಿಲ್ಲವೆ 6 ಚಿತ್ತದೊಳು ಆವಾಗ ನಿನ್ನ ಧ್ಯಾನವ ಮಾಡಿ ವಿತ್ತಾದಿ ದಾನಗಳು ಮಿತಿಯಿಲ್ಲದೇ ಅತ್ಯಂತ ಕೊಡುವವನ ಮೂರು ಪಾದವ ಬೇಡಿ ಭಕ್ತಗೆ ನಲಿದು ಸುರಪದವಿ ಕೊಡಲಿಲ್ಲವೆ 7 ಮಾನಿನಿಯ ಸೀರಿಯನು ಸಭೆಯೊಳಗೆ ದುರುಳರು ಅಭಿ ಮಾನ ಭಂಗವ ಮಾಡಿ ಸುಲಿವುತಿರಲು ಶ್ರೀನಾಥ ಕೇಶವ ಮುಕುಂದನೆಂದು ಮೊರೆ ಇಡೆ ನೀನರಿತು ಅಕ್ಷಯಾಂಬರ ಕೊಡಲಿಲ್ಲವೆ8 ಬಡತನ ಉಳ್ಳವನಾಗಿ ಕ್ಲೇಶದಲಿ ಸುಧಾಮ ನಡುಗುತಲಿ ನಿನ್ನ ಪಟ್ಟಣಕೆ ಬರಲು ಹಿಡಿತುಂಬಿ ಅವಲಕ್ಕಿಗೆ ಸಂತೃಪ್ತನಾಗಿ ಕಡೆಯಿಲ್ಲದೈಶ್ವರ್ಯ ಪದವಿ ಕೊಡಲಿಲ್ಲವೆ 9 ಸರಸಿಯೊಳು ಬಾಲಕನ ನೆಗಳಿ ಪಿಡಿದು ನುಂಗೆ ಗುರುದಕ್ಷಿಣವ ಬೇಡೆ ಸಾಂದೀಪನು ಭರದಿಂದ ಪೋಗಿ ಕೃತಾಂತನೊಳು ಭೂ ಸುರಗೆ ಸುಪುತ್ರ ಪದವಿ ಕೊಡಲಿಲ್ಲವೆ 10 ಭುಜಕರೆಲ್ಲರು ನಿನಗೆ ಭಾಗ್ಯವನು ಕೊಡಲಿಲ್ಲ ಭಜಿಸಿದರವರು ತಮ್ಮ ತಕ್ಕ ತೆರದಿ ಭಜಿಸುವೆನು ನಿನ್ನ ತಕ್ಕಂತೆ ದೃಢ ಪದವಿಕೊಡು ಸಿರಿ ವಿಜಯವಿಠ್ಠಲನೆ11
--------------
ವಿಜಯದಾಸ
ಒಂದಾನು ಒಂದು ದಿನ ಶಿಂಧುವಿನೊಳ್ ನೆರೆದು ಬಂದಾರು ದೇವತೆಗಳುವೃಂದಾವು ದುಷ್ಟ ಜನರಿಂದಾಲೆ ಭೂಮಿ ನೊಂದಾಳುಎಂದುಸುರಿತಾ ಪ ಕಂದರ್ಪತಾತ ನಿನಗೊಂದಿಸಿ ಬೇಡುವೆನು ಛಂದಾದಸೂರ್ಯಸುತನಾಮಂದಿರದೋಳ್ ಜನಿಸಿ ನಂದಾದಿ ಗೋಕುಲದಿ ನಿಂದಾತ್ಮಲೀಲೆ ತೋರೊ ಅ.ಪ. ಅಂದಾಡಿದೂತ ಸುರವೃಂದಾರ ವಾಕ್ಯಗಳ ಕಿವಿಯಿಂದಾಲೆಕೇಳಿ ಹರಿಯುಛಂದಾದಿ ನೀವುಗಳು ಮುಂದಾಗಿ ಜನಿಸುವದು ಹಿಂದಾಗಿನಾ ಜನಿಸುವೇಅಂದಾಡಿದಂಥ ಹರಿ ಸುಂದರಾ ಮಾತವನು ತಂದಾನುಬ್ರಹ್ಮ ಮನದೀಇಂದ್ರಾದಿಗಳಿಗೆಲ್ಲ ಅವನಂದದ್ದು ಪೇಳೆ ನಿಜಮಂದಿರಖೋಗಿರೆಂದಾ 1 ಎಲ್ಲಾ ಅಮರರೂ ನಿಜವಲ್ಲಾಭಿಯರು ಸಹ ಅಲ್ಲಲ್ಲೆಜನಿಸುತಿಹರೂಫುಲ್ಲಾಕ್ಷತಾ ಮಥುರೆಯಲಿಟ್ಟು ಗೋಕುಲದಿ ಮೆಲ್ಲಾನೆಬೆಳೆಯುತಿರಲುಅಲ್ಲಿದ್ದ ಗೋಪಿಯರು ಯಲ್ಲಾರು ತಾವು ನಿಜವಲ್ಲಾಭೆರೆಂದು ಹರಿಯೋಳ್‍ಎಲ್ಲಾನು ಬಿಟ್ಟು ಅವನಲ್ಲಿಗೆ ಸ್ನೇಹವನು ಉಲ್ಹಾಸಮಾಡುತಿರಲು 2 ವ್ರಜ ಕರ ವೃಂದಾವನದಲ್ಲಿಳುಹಿದಾ 3 ವಂದೀನ ರಾತ್ರಿ ರವಿನಂದಿನಿಯೋಳ್ ಹರಿಯುನಿಂದೂದಲಾಗ ಕೊಳಲುವೃಂದಾದರಾಗಗಳಿಂದಾಲೆ ಕೇಳಿ ವ್ರಜದಿಂದಾವರಾನಿಹರೂಮಂದೀರದೊಳಗೆ ನಿಜ ಕಂದಾರು ನಾಥಗಳು ಛಂದಾದವಸ್ತ್ರಂಗಳುವಂದಾನು ನೋಡದಲೆ ವಂದಾರು ಯಮುನೆಯಲಿಂದಾರುಮೈಯ್ಯ ಮರೆತು 4 ಬಂದೇವು ನಾವು ನಿಜ ಮಂದೀರ ಬಿಟ್ಟು ನಿಮ್ಮ ಸುಂದರಕೊಳಲ ಧ್ವನಿಗೇಛಂದಾದ ಸ್ಮರಣೆ ಸುಖದಿಂದಿತ್ತು ನಮಗೆ ದ್ವಿಜೇಂದ್ರೇತಕಾಯೋ ಯನಲುಅಂದಾವರಾಮಾತು ನಂದಾನುಸೂನ ದಯದಿಂದಾಲೆಕೇಳಿ ಹರಿಯೂಮುಂದಣಿಯಾಗ ಅವರಿಂದಾಲೆ ಕೂಡಿ ದಯದಿಂದಾಲೆನಲಿದು ಮರೆದೂ 5 ಬಂದಾನು ಮಥುರೆಯಲಿ ಕೊಂದಾನು ಮಾತುಳನೆತಂದೀಯಾ ಬಂಧನವ ಬಿಡಿಸೀಸಾಂದೀಪಗಿತ್ತು ಕಂದಾನಸೂನ ಕುರು ನಂದಾರಕೊಲ್ಲಿಸಿದನೂಇಂದ್ರತ್ವ ಜ್ವಾಲೆಗಳೂ ಅಂತಿತ್ತು ರಾಜ ಸುಖ ಸಂದೇಹ ಸಂತೋಷದೀಇಂದ್ರಾದಿ ಸರ್ವಸುರ ಸಂದೇಹ ಪ್ರಾರ್ಥಿಸಿದ ಒಂದೊಂದೆ ಮಹಿಮೆಗಳನೂ 6 ಛಂದಾಗಿ ಮಾಡಿದ್ವಶ ಮಡುಹಿಕರ ವೃಂದಾವಪಾಲಿಸಿದನೂನಂದಾತ್ಮ ಜಾತವು ಒಂದೊಂದೆ ಮಹಿಮೆಗಳ ತಂದೊಮ್ಮೆಮನದಿ ಸ್ಮರಿಸೀಬೆಂದಾವು ಪಾಪಗಳು ಬಂದಾವು ಸೌಖ್ಯಗಳುಸಂದೇಹವಿಲ್ಲನಿದರೋಳ್‍ಕಂದಾರ ಕೊಡುವ ಧನ ವೃಂದಾವು ಪೊರೆವಾ ಮಂದೀರವಿತ್ತು ಸಲಹುವ 7 ಇಂದೆನ್ನ ಮಾನಸದಿ ತಂದಾತ್ಮ ರೂಪವನೂ ಛಂದಾಗಿ ಸಂತೈಸಲೀನಂದಬಾಲಾಷ್ಟಕವನೂ ಇಂದುವಾವರು ಪಠಿಸುವಾ ಇಂದಿರೇಶನು ಪಾಲಿಸುವನೂ 8
--------------
ಇಂದಿರೇಶರು