ಒಟ್ಟು 11932 ಕಡೆಗಳಲ್ಲಿ , 136 ದಾಸರು , 6615 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಆವುದೊಳ್ಳೆಯದೊ ನಿನ್ನಂಗ - ಚೆಲುವದೇವ ಬಂಕಾಪುರದ ಲಕುಮಿ ನರಸಿಂಗ ಪ ಜಗದೊಳಗೆ ತಾನು ತಂದೆಯ ಮಾತು ಕೇಳದಾಮಗನು ಇಹ ಪರಕೆ ಸಲುವ ಪ್ರಾಜ್ಞನೆ ?ಬಗೆಗೊಳಿಸಿ ಪ್ರಹ್ಲಾದ ಪಿತನೊಡಲ ನಿನ್ನ ಕೂ-ರುಗುರಿನಿಂ ಬಗೆಸಿದಾತಂಗೆ ಮುಕುತಿಯನೀವೆ 1 ಪೊಡವಿಯೊಳು ಅಣ್ಣನಾಜ್ಞೆಯ ಮೀರಿ ನಡೆಯುತಿಹಒಡಹುಟ್ಟಿದವಗೆ ಕೈವಲ್ಯವುಂಟೆ ?ದೃಢದಲಿ ವಿಭೀಷಣಾಗ್ರಜನನ್ನು ಬಾಣದಲಿಕೆಡಹಿಸಿದ ಬಳಿಕವಗೆ ಸ್ಥಿರಪಟ್ಟ ಕಟ್ಟಿದೆ2 ರೂಢಿಯಲಿ ಗುರುದ್ರೋಹವನು ಮಾಡಿದವನ ಮೊಗನೋಡಿದಾಗಲೆ ಪ್ರಾಯಶ್ಚಿತ್ತವುಂಟುನೋಡಿದಾಗಲೆ ಬೃಹಸ್ಪತಿಸತಿಗೆ ಅಳುಪಿದನಸೂಡಿದಾತನ ಸ್ನೇಹವನು ಮಾಡಿಕೊಂಡಿರ್ಪೆ 3 ದೇಶದೊಳು ವಂಶಕಂಟಕರೆನಿಸಿದವರೊಳಗೆಭಾಷಣವ ಮಾಡಬಪ್ಪುದೆ ಪ್ರಾಜ್ಞರು ?ಬೇಸರಿಸದೆ ಕೌರವರ ಕೊಂದ ಪಾಂಡವರ ಸಂ-ತೋಷದಲಿ ಪಕ್ಷಿಕರ ಮಾಡಿಕೊಂಡಿರ್ಪೆ 4 ಪೊಡವಿಪತಿ ಕೇಳು ಶ್ರೀ ಆದಿಕೇಶವನೆ ಹಿಂ-ಗಡೆಯಲ್ಲಿ ಮನೆಯ ಕಟ್ಟಿಸಬಾರದೆ ?ಬಿಡೆಯವಿಲ್ಲದೆ ಸಭಾಮಧ್ಯದಲಿ ಹೆಂಡತಿಯತೊಡೆಯ ಮೇಲ್ಕುಳ್ಳಿರಿಸಿಕೊಂಡಿರ್ಪ ಹಿರಿಯತನ 5
--------------
ಕನಕದಾಸ
ಆವೂರು ಈ ಊರು ಯಾವೂರು ಆದರೇನು ಪ ಕಾವೋರು ಶ್ರೀಹರಿ ಲೇಸಾಗಿ ಇರಲೂ ಅ.ಪ ನೀರಜನಾಭನ ಕಾಳಿಂಗ ಮಥನನ ಪಾರಿಜಾತವ ತಂದ ರುಕ್ಮಿಣಿ ಪತಿಯ ಸಾರುತ್ತ ಪಾಡುತ್ತ ಪೊಗಳುತ್ತಬೇಡುತ್ತ ಚರಣಾವ ನೆರೆನಂಬಿ ತಿರುಗುವ ದಾಸರಿಗೆ1 ಆರು ಆಳಿದರೇನು ಆರು ಅಳಿದರೇನು ಮಾರುವ ಧಾರಣಿ ಏರಿದರೇನು ಇಳಿದರೇನು ಊರೆಲ್ಲ ಎದುರಾದರೇನು ಹಿತವಾದರೇನು ಕರಿರಾಜವರದನ ಕೊನೇರಿ ವಾಸನ ಕರುಣವ ಪಡೆದವಗೆ 2 ಕಾಸು ಎಂದರೆ ಪ್ರಾಣ ಸಾಮಾನ್ಯಜನರಿಗೆ ಈ ಶರೀರವ ಕಷ್ಟದಿ ಬಿಡುವಾಗ ಬಾಹುದೈ ಪಾದ ಸೋಮಶೇಖರ ವಂದ್ಯ ಶೇಷಗಿರೀಶನ ದಾಸಾನು ಎಂತೆಂದು ಕುಣಿವವಗೆ 3 ಮೂರುಲೋಕದ ಅರಸು ಸಾರಂಗ ಪಾಣಿಯು ನೀರಜಭವಾಂಡ ಉದಯಕೆ ಕಾರಣ ಅಷ್ಟಕರ್ತ ಸಿರಿಪದ್ಮಜಾಸನ ವಂದ್ಯ ದೇವಾದಿದೇವನ ಮೀರಿ ನಡೆವುದುಂಟೆ ಈ ಚರಾಚರ ಜಗದೊಳು ಮನವೇ4 ಊರೆಲ್ಲನೆಂಟರು ಉಣಬಡಿಸುವರಿಲ್ಲ ಸಿರಿಯಿದ್ದಕಾಲಕ್ಕೆ ಎಲ್ಲರು ನೆಂಟರಯ್ಯ ಸಿರಿತನ ತಾ ತಪ್ಪಿ ಬಡತನ ಬಂದರೆ ನಡಿನಡಿಯೆಂಬರು 5 ಹರಿ ಊರು ನಮ್ಮೂರು ಹರಿವೋರು ನಮ್ಮೋರು ಹರಿನಾಮ ಬಂಧುವು ಹರಿನಾಮ ಬಳಗ ಹರಿಹರಿ ಎಂದರೆ ದುರಿತವು ಪರಿಹಾರ ಹರಿಗುರು ಚರಣವೆ ಪರಗತಿ ಸಾಧನ ಮನವೇ 6 ಕೋರಿ ಕೋರಿದ ವರವ ನೀಡುವ ಪ್ರಭುವು ಸಿರಿಜಯಮುನಿ ಹೃಸ್ಥವಾಯುಗ “ ಶ್ರೀ ಕೃಷ್ಣವಿಠಲಾ” ಸಾರಿದ ಜನರನು ಪೊರೆಯುವ ಕರುಣದಿ ನೆರೆನಂಬುಮನವೆ ಭಯಬೇಡ ಮನವೇ7
--------------
ಕೃಷ್ಣವಿಠಲದಾಸರು
ಆಶೆಯ ಬಿಡಿಸಿದ್ಯೋ ಎನ್ನಾ ಮುಂದೆ ವಾಸವಾಗದಂತೆ ಕಾಯೋ ಮೋಹನ್ನಾ ವಾಸುದೇವನೆ ನಿನ್ನ ಸ್ಮರಣೆಯೊಳಗೆ ಮನ ಸೂಸದಂತೆ ಸ್ಥಿರ ನಿಜದಲ್ಲಿ ನಿಲಿಸಯ್ಯಾ ಪ ಬೆಂಬಿಡದೆಲೆ ನಿಜದರಿವನ್ನು ಕೊಡುವಾ ಕುಂಭಿಣಿಯೊಳಗೆಲ್ಲಾ ನೀನಲ್ಲದೆ ಎನ್ನಾ ನಂಬಿಗೆ ಕೊಡುವವರ್ಯಾರೋ ನಾರಾಯಣಾ 1 ಬೆಂದೆನು ನಾ ಭವದೊಳಗೆ ಎನ್ನಾ ತಂದೆ ನೀ ಕಾಯೋ ನಿಜಪದದೊಳಗೆ ಹಿಂದಿನ ಪ್ರಾರಬ್ಧ ಬವಣೆಯ ತೀರಿಸಿ ಮುಂದೆ ನೀ ಸಲಹೊ ಪರಮಪುರುಷನೆ ಹರಿ 2 ವಾಸನೆ ಬಂಧವೇ ಜೀವಾ ನಿ ರ್ವಾಸನೆಯನು ಕೊಟ್ಟು ಸಲಹೊ ಮಾಧವಾ ಶೇಷಶಯನನೆ ನಿಜ ಧ್ಯಾನದೊಳಿರಿಸೆನ್ನಾ ಆಶೆಯನು ಸಲಿಸಯ್ಯಾ ಮುರಾರಿ 3 ಅನಂತ ಮಹಿಮಾ ಮೇಘಶ್ಯಾಮಾ ನಿಶ್ಚಿಂತ ನಿಜ ಶಾಂತಿ ಸ್ವಸುಖವೀವಾ ನಂತಪರಾಧವ ಕ್ಷಮಿಸೆನ್ನಾ ಗುರುವೇ 4
--------------
ಶಾಂತಿಬಾಯಿ
ಆಶ್ರಮ ಧರ್ಮ ನಾಲ್ಕು ಉಪದ್ರಆಶ್ರಮ ಧರ್ಮ ಬಿಡೆ ಅವ ಪಟ್ಟ ಬದ್ಧ ಪ ಬ್ರಹ್ಮಚಾರಿಯು ಆಗೆ ಕರ್ಮದ ಉಪದ್ರಬ್ರಹ್ಮಚರ್ಯವು ಹೋಗೆ ಸ್ತ್ರೀಯ ಉಪದ್ರಸುಮ್ಮಗೆ ವಾನಪ್ರಸ್ಥನಾಗೆ ಬೆಂಕಿ ಉಪದ್ರಹಮ್ಮಳಿದು ಸಂನ್ಯಾಸಿಯಾಗೆ ಸ್ನಾನದುಪದ್ರ 1 ಗೃಹಸ್ಥನಾಗೆ ವ್ರತಗಳ ಉಪದ್ರಸತತ ಸಂಧ್ಯಾ ಜಪತಪದ ಉಪದ್ರಮಿತಿ ಇಲ್ಲದ ನಾನಾ ಕರ್ಮಗಳ ಉಪದ್ರಸತತ ಶುಚಿ ಅಶುಚಿ ಎಂಬುದರ ಉಪದ್ರ 2 ಆವ ಆಶ್ರಮದಲಿರೆ ಆವುದೊಂದು ಉಪದ್ರಆವ ಆಶ್ರಮದಿ ಉಪದ್ರವೇ ಅದು ಹೋಗದುಆವಾಶ್ರಮಗಳಿಗೆ ಬೇರೆ ಇರೆ ಸುಖಿಯಿಹದೇವ ಚಿದಾನಂದ ಮಹ ಸರ್ವಮಹೋಪದ್ರವ ಪರಿಹಾರವಯ್ಯ 3
--------------
ಚಿದಾನಂದ ಅವಧೂತರು
ಆಸೆ ಎಂಬೋ ನದಿ ಆಸೆ ಎಂಬೋ ನದಿಆಸೆ ಎಂಬೋ ನದಿಯಿರೆ ಮಹಾ-ತೃಷೆಯ ಆರು ದಾಟಲಳವಲ್ಲ ಪ ಮನೋರಥ ನೀರು ಮನೋರಥ ನೀರುಮನೋರಥ ನೀರು ಇರೆ ಮಹಾತೃಷೆ ಅಲೆಗಳಯ್ಯ 1 ಸುಳಿ ಮೋಹವೆಂಬೋ ಸುಳಿಮೋಹವೆಂಬಾ ಸುಳಿಯಿರೆ ಮಹಾತೊರೆ ಹರಿಯಯ್ಯಾ 2 ಸತಿ ಎಂಬಾ ಮೊಸಳೆಸತಿ ಎಂಬ ಮೊಸಳೆಯಿರೆ ಸುತರೆಂಬರು ಏಡಿಗಳಯ್ಯ 3 ಬಂಧಗಳು ಗ್ರಹ ಬಂಧುಗಳು ಗ್ರಹಬಂಧಗಳು ಗ್ರಹ ಇರೆ ಬಡಿದಾಟ ನೀರು ಗುಳ್ಳೆಯಯ್ಯ4 ಗುರು ದಯವೇ ನಾವೆ ಗುರುದಯವೇ ನಾವೆಗುರುದಯವೆ ನಾವೆಯಿರೆ ಗುರು ಚಿದಾನಂದನ ಸೇರಬೇಕಯ್ಯ 5
--------------
ಚಿದಾನಂದ ಅವಧೂತರು
ಆಸೆನೀಗೋ ಹೇಸಿಮನವೆ ಕೇಶವನಂಘ್ರಿ ದಾಸನಾಗೊ ಪ ಸಕಲಭೋಗಭಾಗ್ಯ ಬರುವ ಅಖಿಲ ಸುಖದು:ಖಂಗಳೆಲ್ಲ ಭಕುತಿದಾರ್ಯಗರ್ಪಿಸಿ ಹರಿ ಭಕುತಿಯಿಂದಪಮೃತ್ಯು ಗೆಲಿಯೊ 1 ವಂದನೆ ಸ್ತುತಿ ಮಾನ ಮನ್ನಣೆ ಬಂದು ಕುಂದು ನಿಂದೆಯೆಲ್ಲ ಮಂದರಾದ್ರಿಯ ನಿಲಯಗೆಂದಾ ನಂದದಿಂ ಭವಬಂಧ ಗೆಲಿಯೊ 2 ಪೊಡವಿಸುಖಕೆ ಮೋಹಿಸದೆ ನೀ ಕೆಡುವಕಾಯಮೋಹ ತೊಡೆದು ಒಡೆಯ ಶ್ರೀರಾಮನಂಘ್ರಿ ಕಮಲ ಧೃಢದಿ ಭಜಿಸಿ ಮುಕ್ತಿ ಪಿಡಿಯೊ 3
--------------
ರಾಮದಾಸರು
ಆಸೆಪಡಬೇಡ ಮನುಜ ತಿಳಿಯದೆ ದುರಾಸೆ ಪಡಬೇಡ ಪ ಮೋಸ ಮಾರ್ಗಪಿಡಿದು ಮೂಢರನ್ನು ನೋಡಿ ನೋಡಿ ಅ.ಪ ಚಿಂತಿಸಿ ಭ್ರಾಂತನಾಗಿ ಸಂತೋಷವಿಲ್ಲದೆ ಸದಾ ಶಾಂತಚಿತ್ತರ ಕೂಡದೆ ಸಂತೆ ಕೂಟವನ್ನು ನಂಬಿ 1 ಮುಂದಿನ ಗತಿ ಗೋತ್ರವು ಸಂದೇಹವಾಗುವದೆಲೊ 2 ಶರಣರನಾಶ್ರಯಸದೆ ಕರೆ ಕರೆ ಸಂಸಾರದಿ3
--------------
ಗುರುರಾಮವಿಠಲ
ಆಳ್ವಾರಾಚಾರ್ಯಸ್ತುತಿಗಳು 1. ಶ್ರೀ ಆಂಜನೇಯ ಸ್ತುತಿಗಳು 155 ನಮೋಸ್ತು ಹನುಮಾನ್ ನಮೋಸ್ತು ಹನುಮಾನ್ ನಮೋಸ್ತು ಹನುಮಾನ್ ನಮೋ ನಮೋ ಪ ನಮೋಸ್ತು ಧೃತಿಮಾನ್ ನಮೋಸ್ತು ಧೃತಿಮಾನ್ ನಮೋಸ್ತು ಧೃತಿಮಾನ್ ನಮೋ ನಮೋ ಅ.ಪ ನಮೋಸ್ತು ಶ್ರೀಮಾನ್ ನಮೋಸ್ತು ಧೀಮಾನ್ ನಮೋಸ್ತು ಮರುತಾತ್ಮಜ ಹನುಮಾನ್ ನಮೋಸ್ತು ಬಲವಾನ್ ನಮೋಸ್ತು ವೀರ್ಯವಾನ್ ನಮೋಸ್ತು ಪಂಚಾನನ ರೂಪಾ 1 ನಮೋ ಸಮೀರಾಂಜನಾಕುಮಾರಾ ನಮೋ ದಿವಾಕರ ಭಯಂಕರಾ ವಿಧಿ ವರಪ್ರಸಾದಿತ ನಮೋ ನಮೋ 2 ನಮೋ ನಮೋ ವಾನರೇಂದ್ರ ಸಚಿವಾ ನಮೋ ಜಿತೇಂದ್ರಿಯ ಗದಾಧರಾ ಸನ್ನುತ ನಮೋಸ್ತು ಸಕಲಕಲಾಧರ 3 ವಸುಂಧರಾಪ್ರಿಯ ತನೂಭವಾನ್ಯೇ ವಸುಗಣೋತ್ಸುಕಾ ಶುಭದಾಯಕಾ ಹಸನ್ಮುಖಾ ಶ್ರೀರಘೋತ್ತಮ ಪ್ರಿಯಾ ಯ [ಸಖ] ಖಗೇಂದ್ರಸಮ ಕಪಿನಾಯಕಾ 4 ಜನಕಸುತಾ ಸುದರ್ಶನ ಹರ್ಷಿತ ವನಭಂಗಕರಾಕರಣಧೀರಾ ಲಂಕಾನಗರ ಭಯಂಕರಾ 5 ಸೀತಾರಾಮಾನಂದ ವರ್ಧಕಾ ಲಕ್ಷ್ಮಣ ಪ್ರತಾಪವಾನ್ ದೂತಕಾರ್ಯ ವಿಜಯೋತ್ಸುಕ ವಾನರ ಪತಿಸಂಪೂಜ್ಯ ಪ್ರದೀಪ್ತವಾನ್ 6 ರಾಮಾಲಿಂಗಿತ ದಿವ್ಯಶರೀರಾ ರಾವಣದರ್ಪ ವಿನಾಶಕರಾ ಭೀಮಪರಾಕ್ರಮ ಸಂಜೀವನಧರ ದಾನವತಿಮಿರ ವಿಭಾಕರ 7 ಗಂಭೀರಶರಧಿ ವಿಲಂಘನಧೀರಾ ಮೈನಾಕಾರ್ಚಿತ ಪರಮೋದಾರಾ ವಿಭೀಷಣ ಪ್ರಿಯ ಸಖಾಭಿವಂದಿತ ರಘುಪತಿಸೇವಾ ಧುರಂಧರಾ 8 ತಾರಕ ಮಂತ್ರೋಪಾಸಕ ಹನುಮಾನ್ ಶೂರಭವಿಷ್ಯ ಚತುರ್ಮುಖಾ ಧೀರೋದಾತ್ತ ಕೃಪಾಕರ ಮಾಂಗಿರಿರಂಗ ನೀಕೇತನ ಬಹಿರ್ಮುಖ 9
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಆಳ್ವಾರ್-ಆಚಾರ್ಯ ಸ್ತುತಿಗಳು ನೀರಾಟವ ನೋಡಿದೆ ನೀರಜಾಕ್ಷನ ರಾಣಿ ಗೋದಾದೇವಿಯ ಪ ಶ್ರೀವಿಲ್ಲಿಪುತ್ತೂರ ಶ್ರೀತುಳಸಿವನದಲ್ಲಿ ಶ್ರೀವಿಷ್ಣುಚಿತ್ತರಾ ಪುತ್ರಿಯೆಂದೆನಿಸಿ ಸುಪುತ್ರಿಯೆಂದೆನಿಸಿ ಶ್ರೀ ದೇವಿ ತಾನುದಿಸೆ ಬೇಗ ತೀವ್ರ ಹರುಷದಿಂ ಬೆಳೆಯುತ್ತಲಿದ್ದಾಳಲು 1 ಪುತ್ರಿಗೆ ತಕ್ಕಂಥ ವರವಿಲ್ಲವೆನುತಾಲೆ ಚಿತ್ತದೊಳಗೆ ಯೋಚಿಸಿದ ಆಳ್ವಾರರು ಪೆರಿಯಾಳ್ವರರು ಭಕ್ತವತ್ಸಲನಾ ವರಿಸಬೇಕೆನುತಾನೆ ಅರ್ಥಿಯಿಂದಲೆ ನೀರಾಟವನೆನೆದಾಳು 2 ಶ್ರೀಶವಾಸನೆಗಳ ಭಾವಿಸೀ | ಗೊಲ್ಲ ವಾಸನೆಗಳ ಭಾವಿಸೀ ವಾಸುದೇವನಾ ವರಿಸಬೇಕೆನುತಾಲೆ ಉ ಲ್ಲಾಸದಿಂದಲೆ ಹೆಂಗಳ ಕೂಡೆ ಪೊರಟಾಳು 3 ಮುತ್ತು ಮಾಣಿಕದಾಭರಣವನಿಟ್ಟು ಸುತ್ತೆಣೆ ಗಂಟನ್ಹಾಕಿ ದೇವಿ ಸುತ್ತೆಣೆ ಗಂಟನ್ಹಾಕಿ ಉತ್ತಮನಾಗಿದ್ದ ಪುಷ್ಪಗಳನೆ ಮುಡಿದು ಚಿತ್ತದೊಳೊಲ್ಲಭನಪ್ಪಣೆಗೊಂಡು ಪೊರಟಾಳು 4 ಮಾರ್ಗಶಿರ ಮಾಸದಿ ಪೊತ್ತೊಂದು ದಿವಸಾದಿ ಬೇಗ ತಾ ಪೊರಟೂ ಮಹಾಲಕ್ಷಿ ತಾ ಪೊರಟ ಳಾಗ ಬೀದಿಯನು ಸುತ್ತಿ ಮಂಟಪದಲಿ ನಿಂದು ಮಂಗಳಾರತಿಯನೆತ್ತೀ ಮಾರು ವಸ್ತ್ರವ ತೆಗದಾರು 5 ದಂತಧಾವನ ಮಾಡಿ ಕಂತುಪಿತನರಸೀಗೆ ಅಂತರಂಗದ ಭಕ್ತರು ಬೇಗ ಅಂತರಂಗದ ಭಕ್ತರು ಸಂತೋಷದಿಂದಲೆ ಮುಖವನ್ನು ತೊಳೆದು ಶ್ರೀ ಕಾಂತಗೆ ವಸ್ತ್ರದಿಂ ಮುಖವನೊರೆಸಿದಾರು 6 ಭಾಪು ಛತ್ರಿಚಾಮರ ಸೂರೆಪಾನವಾ ಜನ ಬೀಸಿ ಗೋಪಿ ಮುಕ್ತಿದಾಯಕಿಗಾಗ ಮುಕ್ತಿದಾಯಕಿಗಾಗ ದರ್ಪಣವನು ತೋರಿ ಕಂದರ್ಪನ ಮಾತೆಗೆ ಧೂಪ ದೀಪ ಕರ್ಪೂರದಾರತಿಯೆತ್ತಿದರು 7 ಬೇಗಾದಿಲಕ್ಷಿಗೆ ಆಭರಣ ಸಡುಲಿಸಿ ಆಗ ಮುಡಿಯ ಬಿಚ್ಚಿ ದೇವೀಗೆ ಆಗ ಮುಡಿಯ ಬಿಚ್ಚೀ ಬೇಗಾದಿಂ ಕಂಮೆಣ್ಣೆ ಕಸ್ತೂರಿತೈಲ ಮೈಗೆ ತಾಳಮೇಳದ ಗತಿಯಿಂದಲೊತ್ತಿದ್ದರೂ 8 ಶ್ವೇತವರ್ಣದ ದಿವ್ಯ ನಾಗವಲ್ಲಿಗಳಿಂದ ಖ್ಯಾತಿ ಪಡೆದಿರುವಾ ಕ್ರಮುಕಾ ಬೇಗ ಖ್ಯಾತಿ ಪಡೆದಿರುವಕ್ರಮುಕಾ ನೂತನವಾದ ಕರ್ಪೂರವರ್ಣಗಳಿಂದ ಜಗ ನ್ಮಾತೆಗೆ ತಾಂಬೂಲವ ನೀಡಿದರೂ 9 ಸಣ್ಣವಾದ್ಯದೊಳಗೆ ನುಡಿಸೇ ಬೇಗ ವಾದ್ಯದೊಳಗೆ ನುಡಿಸÉೀ ಹಣೆಯೊಳಗೆ ಬಾಚಿ ಮಣಿಗಂಟನಿಕ್ಕಿ ಉಳಿದ ಎಣ್ಣೆ ಭಕ್ತರಿಗೆಲ್ಲ ಯಿತ್ತಾರು 10 ಮಿಂದು ಮಡಿಯನುಟ್ಟು ಚಂದದಿಂದಲೆ ದೇವಿ ತಂದ ನೈವೇದ್ಯವುಂಡೂ ಬೇಗ ನೈವೇದ್ಯವುಂಡು ಬಂದ ಭಕ್ತರಿಗೆಲ್ಲ ತೀರ್ಥಪ್ರಸಾದವಿತ್ತು ಮಂದಗಮನೆ ತನ್ನ ಮಂದಿರಕೆ ನಡೆದಾಳು 11 ಬೈತಲೆಗೆ ರಾಗಟೆ ಹೆರಳಿಗೆ ಭಂಗಾರಗೊಂಡೆಯವ ನಿತ್ತು ಪಾನುಪಟ್ಟಿಯು ಮುತ್ತಿನಬಟ್ಟೆ ಕಟ್ಟಿ ಬೇಗ ಮುತ್ತಿನಬಟ್ಟೆ ಕಟ್ಟಿ ಕತ್ತುರಿ ಬಾವುಲಿ ಕಮಲಸರಗಳೂ ಮುತ್ತಿನ ಮೂಗುತಿ ಮುಕುರಾವನಿಟ್ಟಳೂ 12 ಹಾರಪದಕ ಹಸ್ತಕಡಗ ಹರಡಿ ವಂಕಿ ಶೀರೆಕುಪ್ಪಸ ತೊಟ್ಟೂ ಬೇಗ ಶೀರೆಕುಪ್ಪಸ ತೊಟ್ಟು ಅಂದುಗೆ ಇಂದೀರಾದೇವಿ ತಾನಿಟ್ಟು ಬಂದಳು ಆಗಾ 13 ಭಾಷ್ಯಕಾರರು ಮೊದಲಾದ ಭಕ್ತರುಯೆಲ್ಲ ಲಕ್ಷ್ಮಿದೇವಿಗೆ ಆಗ ಭಾಗ್ಯಲಕ್ಷ್ಮಿಗೆ ಆಗಾ ಭಾರಿ ಯಾ ಶೀರೆ ಕುಪ್ಪುಸವನಿತ್ತು ಪುಷ್ಪ ಮರ್ಯಾದೆಗಳ ಮಾಡೀ ಕರೆತಂದರು ಬೇಗಾ 14 ಮಂದಗಮನೆ ಅಂದು ಗೋವಿಂದನ ಎದುರಲ್ಲಿ ಆ ನಂದದಿಂದಲೆ ಕುಳಿತೂ ಬೇಗ ಆನಂದದಿಂದಲೆ ಕುಳಿತು ಚಂದದಿಂ ಮಲ್ಲಿಗೆಮಾಲೆಯ ಕಳುಹಲು ಮಂದರೋದ್ದರ ತನ್ನಾ ಮಡಿದೀಗೆ ಕಳುಹಿದ 15 ಕೂಡಾರವಲ್ಲಿಯೆಂತೆಂಬೊ ದಿವಸದಲ್ಲಿ ಕೂಡಿ ಮನ್ನಾರುರಂಗನಾ ಬೇಗ ಮನ್ನಾರುರಂಗನಾ ಕ್ಷೀರಾನ್ನ ಭೋಜನಂಗಳ ಮಾಡಿದರು ಭೋಗಿಯ ದಿನದಿ ಕಲ್ಯಾಣವ 16 ಮಕರ ಸಂಕ್ರಾಂತೀಲಿ ಮಂದರೋದ್ದಾರ ಸಹಿತ ಚೊಕ್ಕ ಪಲ್ಲಕ್ಕಿಯೇರಿ ಬೇಗ ಚೊಕ್ಕ ಪಲ್ಲಕ್ಕಿಯೇರಿ ಪಕ್ಕ ಮೆರವಣಿಗೆಯಲಿ ಬಂದು ಹರುಷದಿಂದ ವೆಂಕಟಕೃಷ್ಣನ ಎಡದಲ್ಲಿ ಕುಳಿತಾಳು 17
--------------
ಯದುಗಿರಿಯಮ್ಮ
ಇ. ಗುರುನಮನ ವಿಷ್ಣುತೀರ್ಥರೆ ಪಾಲಿಸೀ ನಿರಂತರ ಮಧ್ಯಗೇಹರ ಸುತನೆನಿಸಿರ್ದ ಗುರುವರ ಪ ಮಧ್ವಶಾಸ್ತ್ರವು ಜೀರ್ಣವಾಗುವ ಸಮಯದಿ ಬದ್ಧಾದರದಿ ಬಂದುದ್ಧರಿಸುವ ಗುರುವರ 1 ಜಾನಕೀಪತಿಯೊಳು ಲಕ್ಷುಮಣನಂತೆ 2 ವಾಲ್ಮೀಕಿಗಳ ಶಿಷ್ಯಕುಶಲವರಂತೆಯೇ ಚೆಲ್ವ ವ್ಯಾಸರು ಅನಿರುದ್ಧರು ನಿಮಗೆ 3 ಪಾಜಕ ಕ್ಷೇತ್ರದೊಳ್ಸನ್ಯಾಸಾಶ್ರಮಿಯಾಗಿ ರಾಜೇಶ ಹಯಮುಖ ಕೃಷ್ಣನರ್ಚಿಸಿದ 4
--------------
ವಿಶ್ವೇಂದ್ರತೀರ್ಥ
ಇ. ದೇವತಾ ಸ್ತುತಿ ವಾಯುದೇವರು ಇನ್ನಾದರೂ ಸುಮುಖನಾಗೊ ಧ್ವರಿಯೇ ಪ ಪರಿ ವಿಧದಿಂದ ನೊಂದು ಕರಮುಗಿದುಬಾಯ್‍ತ್ಯರದು ಕೂಗಿ ಕರಿವೆ ಸದ್ಗುರುರಾಜನೆಂದು ಅ.ಪ. ಪಾದ ನಂಬಿದ ಭಕ್ತರಿಗಾನಂದಗರಿವೆನೆಂಬ ಬಿರುದಾಂಕಿತನಾಗಿ ಸದ್ವøಂದದೊಳಗಿಪ್ಪೆ ರಾಜಾಚಾರು ಗುರು ಬೃಂದಾವನಾರ್ಯರ ಪೊರೆದ ಮಂದಾಕಿನಿಧರ ಧವಳಾಖ್ಯವಾಸಾ ಭೋಜಾ 1 ಭುವನದೊಳು ಸರಿಗಾಣೆ ನಿನಗಿನ್ನು ಪರಮಾಪ್ತ ಶಿರೋಮಣಿಗಳೊಳು ಸರ್ಜಿಸಿದ ಕಾರಣ ವಜ್ರಲೇಪನ ಮಾಡಿ ಊರ್ಜಿಸುವತ್ಯರ ಮಾಡು ಎನ್ನಾ 2 ಪರಮ ಪಾಮರನು ನಾನಯ್ಯ ಪವಮಾನರಾಯಾಪಾರುಗಾಣದೆ ಶರಧಿಯೊಳು ಮುಳುಗುವ್ಯನೋಕರವಿಡಿದು ತಡಿಗೆತ್ತಿ ಕಾಪಾಡು ತಂದೆವರದಗೋಪಾಲವಿಠಲನ ಮರಿಯೇ 3
--------------
ತಂದೆವರದಗೋಪಾಲವಿಠಲರು
ಇ) ಶ್ರೀಮನ್ಮಧ್ವಾಚಾರ್ಯರು ಮರುದಂಶರ ಮತ ಪಿಡಿಯದೆ ಇಹ -ಪರದಲ್ಲಿ ಸುಖವಿಲ್ಲವಂತೆ ಪ ಅರಿತು ವಿವೇಕದಿ ಮರೆಯದೆ ನಮ್ಮಗುರುರಾಯರ ನಂಬಿ ಬದುಕಿರೋ ಅ.ಪ. ಕ್ಷೀರವ ಕರೆದಿಟ್ಟ ಮಾತ್ರದಿ ಸಂಸ್ಕಾರವಿಲ್ಲದೆ ಘೃತವಾಗದಂತೆಸೂರಿಜನರ ಸಂಗವಿಲ್ಲದೆ ಸಾರವೈರಾಗ್ಯ ಭಾಗ್ಯ ಪುಟ್ಟದಂತೆ 1 ಉಪದೇಶವಿಲ್ಲದ ಮಂತ್ರ ಏಸುಜಪಿಸಲು ಫಲಗಳ ಕೊಡದಂತೆಉಪವಾಸ ವ್ರತಗಳಿಲ್ಲದೆ ಜೀವತಪಸಿಯೆನಿಸಿಕೊಳ್ಳಲರಿಯನಂತೆ 2 ಸಾರಮಧ್ವಶಾಸ್ತ್ರವೋದದೆ ಗುರುತಾರತಮ್ಯ ಜ್ಞಾನ ಪುಟ್ಟದಂತೆಶ್ರೀರಂಗವಿಠಲನ ಭಜಿಸದೆ ಮುಂದೆಪರಮಗತಿ ದೊರಕೊಳ್ಳದಂತೆ 3
--------------
ಶ್ರೀಪಾದರಾಜರು
ಇಕೋ ಈತ ವೆಂಕಟೇಶನೊ | ಭವದ | ಸಿಕ್ಕು ಬಿಡಿಸಿ ನೆನದವರಿಗೆ ಸಿಕ್ಕಿ ಮನದಿಂದಗಲದಿಪ್ಪಾ ಪ ಕರುಣ ಅರುಣ ಕಿರಣ ಪೋಲುವ | ಚರಣ ಧರಣಿ ತರುಣಿ ಸ್ಮರಿಸಿ | ಕರುಣಗಡಲಾ | ಧರಣಿಯಿಂದ ಉದ್ಧರಣೆ ಮಾಡಿದೆ ಪರಣನೀತ 1 ಮಂಡಿಯ ಮಂಡನ | ಕುಂಡಲ ಕಾಂತಿ | ಗಂಡ ಸ್ಥಳದಲಿ ಮಿರುಗೆ ತುಲಸಿ | ಕೌಸ್ತುಭ ಕಾಲ | ಪೆಂಡೆಯಿಟ್ಟು ನಂದನೀತ 2 ವಾಹನ ಆ ಖಂಡಲ ಇಕ್ಷುಕೋ | ಪರಮೇಷ್ಠಿ | ತೊಂಡರ ನಲಿದು ಕೊಂಡಾಡೆ ಚಂದಿರ ಮಂಡಲದೊಳು ಉ| ದ್ದಂಡನಾಗಿಯಿಪ್ಪಾ | ಪುಂಡ ದೈವನೀತ 3 ಪಂಜಿನಸಾಲು ಪರಂಜಳಿ ವಾದ್ಯ ವಿ | ರಂಜಿಸಲು ಜ್ಞಾನ | ಪುಂಜ ನಾರದ ಜಯ ಜಯ ಪೇಳಲು | ನಿರಂಜನ ಭಂಜನ ಈಶಾ 4 ಕರದ ಜನಕೆ ಸುರಧೇನು ಇದು | ನಿರುತದಲ್ಲಿ ಪೊರೆವ ಭಕ್ತರ | ಕರಿಯ ಕಾಯ್ದ ವಿಜಯವಿಠ್ಠಲ | ಪರಮ ಪುರುಷ ತಿರುಮಲನೀತ 5
--------------
ವಿಜಯದಾಸ
ಇಕೋ ದೇವನೆಂದಾಗಮಗಳು ಪೇಳೆನೀ ಕೋಟಿದೇವರನೇಕೆ ಭಜಿಸುವೆ ಪಸಾಕೊ ಸಂಸೃತಿಯಾಟವಿಷ್ಟರ ಮೇಲೆನೂಕೊ ರಾಗ ದ್ವೇಷಗಳ ಚನ್ನಾಗಿಕಾಕೋದರನಂತೆ ಕಾಡದೆ ಜನರನುಬೇಕೋ ಸಾಧನಗಳ ನೀ ಸಾಧಿಸಲು 1ಏಕೋ ಮೂಢನಂದದಿ ಸುಮ್ಮನಿರುವೆ ವಿವೇಕೋಪಚಯವ ಮಾಡು ಮನದಲಿಲೋಕೋಪಕಾರವ ನಡಸು ನಿಷ್ಕಪಟದಿಈ ಕೋಪವ ಬಿಟ್ಟರಿದಿರಾರು ನಿನಗೆ 2ಫಣ ಕೋಪಮನನಾಗಿ ಪಗಲ ಕಾಣದೆ ನಿನ್ನನಾ ಕೋಪಮೆಗೆ ಪೆಚ್ಚಿದ ನಿಜ ಸುಖವಾತಾಕೋ ಶ್ರೀ ಪಾದವನು ಗೋಪಾಲಾರ್ಯನಕೋ ಕೋ ಎಂದು ಕೊಡುವನು ಮುಕುತಿಯನು 3
--------------
ಗೋಪಾಲಾರ್ಯರು
ಇಕ್ಕೊ ಇಲ್ಲೆ ಸಿಕ್ಕಿದ ಶ್ರೀಗುರು ಪರಬ್ರಹ್ಮ ತೆಕ್ಕಿಸಿಕೊಂಬುವ ಬನ್ನಿ ಅಖರದಿ ನಮ್ಮ ಧ್ರುವ ಎಂದಿಗೆ ಬಿಡಬಾರದಿನ್ನು ತಂದೆ ನಮ್ಮಪ್ಪನ ಹೊಂದಿ ಸುಖಿಯಾಗಬೇಕು ಭಕ್ತಪಾಲಿಪನ ವಂದಿಸಬೇಕಿಂದು ಸಹಸ್ರಳದಲಿಪ್ಪನ ಸಂದೇಹವಿಲ್ಲದೆ ನೋಡಿ ಸ್ವರ್ಗಕೆ ಸೋಪಾನ 1 ಹರುಷವಾಯಿತು ಎನಗೆ ಧರೆಯೊಳಿಂದು ನೋಡಿ ಕರುಣಾಳು ಗುರುಮೂರ್ತಿಯ ಸ್ತುತಿಸ್ತವನ ಪಾಡಿ ಎರಡಿಲ್ಲದೆ ಶ್ರೀಚರಣ ವರಕೃಪೆಯ ಬೇಡಿ ಶಿರಸಾ ನಮಿಸಿದೆ ಗರ್ವಾಂಹಕಾರ ಈಡ್ಯಾಡಿ2 ಲೇಸುಲೇಸಾಯಿತು ನಮ್ಮ ವಾಸುದೇವನ ಕಂಡು ಭಾಸ್ಕರಕೋಟಿ ತೇಜನ ಸ್ಮರಣಿಯ ಸವಿಯುಂಡು ವಾಸನೆ ತೃಪ್ತ್ಯಾಯಿತು ಶ್ರೀಯೀಶನಾ ಮನಗಂಡು ದಾಸಮಹಿಪತಿಗಾನಂದವಾಯಿತು ಸದ್ಗತಿ ಸೂರೆಗೊಂಡು 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು