ಒಟ್ಟು 915 ಕಡೆಗಳಲ್ಲಿ , 92 ದಾಸರು , 765 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಸಾರಸಾಕ್ಷಿ ಬಾ ಬಾ ಬೇಗ ಸಾರಿ ನೀಂಪ. ಸಾರಸಾಕ್ಷಿ ಬೇಗ ಚಾರುಪೀಠಕೀಗ ಅ.ಪ. ಭೇರಿ ತಮ್ಮಟಾದಿ ಭಾರಿವಾದ್ಯಂಗಳೂ ಭೊರ್ಗರೆಯುತಿರಲು ನೀರೆ ನೀ ಭರದೊಳು 1 ಭಾರ್ಗವಿ ಕಲ್ಯಾಣಿ ದೇವದೇವನರಾಣಿ ಶ್ರೀಮತೀ ಪದ್ಮಿನಿ2 ಕ್ಷೀರವಾರಿಧಿಜಾತೆ ಮಾರವೈರಿವಿನುತೆ ವಾರಿಜಾಸನ ಮಾತೆ ಸಾರಿ ಬಾ ಪ್ರಖ್ಯಾತೆ 3 ಶೇಷಶೈಲನಿಲಯೆ ವಾಸವಾದಿಗೇಯೆ ವಾಸುದೇವಜಾಯೆ ವಸುಮತೀ ತನಯೆ 4
--------------
ನಂಜನಗೂಡು ತಿರುಮಲಾಂಬಾ
ಸಾರಿದ ಸಿರಿವರ ಸಡಗರದಿಂದಲಿ ಕೌರವಪುರಕೆ ಪ ಧೀರ ಪಾಂಡವರ ಕೋರಿಕೆ ಸಲ್ಲಿಸಲು ಸಾರಸ ನಯನನು ಅ.ಪ. ಪ್ರಾತರಾಹ್ನೀಕವ ತಾ ತೀರಿಸಿ ವರ ಪೀತ ವಸನ ಧರಿಸಿ ವೀತರಾಗ ಸಂಪ್ರೀತಿಯಲಿ ಫಾಲದಿ ತಾ ತಿಲಕವ ಧರಿಸಿ ಹೇಮ ಮಕುಟೋತ್ತಮಾಂಗದಿ ಧರಿಸಿ ಜ್ಯೋತಿರ್ಮಯಗತಿ ಪ್ರೀತಿಯಿಲಿ ತರುಣಿರಾ ರುತಿ ಬೆಳಗಲು ತಾ ಸುಮುಹೂರ್ತದಿ 1 ಅಂಡಜಾಧಿಪನು ಪ್ರಕಾಂಡ ಪೀಠನುದ್ದಂಡರಥವ ತರಿಸಿ ಚಂಡಗದಾ ಕೋದಂಡಾದ್ಯಾಯುಧ ಬಂಡಿಗೆಯೊಳಗಿರಿಸಿ ಮಾರ್ತಾಂಡನಂತೆ ಮೆರೆಸಿ ಹಿಂಡುಬಳಗಗಳ ಕಂಡಾದರಿಸುತ ಪಾಂಡುಸುತರ ಬೀಳ್ಕೊಂಡು ಭರದಲಿ 2 ಸುಖದಿ ಪ್ರಯಾಣ ಬೆಳಸಿ ಪ್ರಕಟ ಪಥದಿ ಮುನಿನಿಕರಂಗಳ ಮನವಿಕಸಿತಗೊಳಿಸಿ ಶುಕಪಿಕಾದಿ ಖಗಪಿಕರಂಗಳರವ ಸುಖವ ಮನದಿ ನಿಲಿಸಿ ಸಕಲಾಂತರ್ಗತ ಕರಿಗಿರೀಶ ತಾ ಯುಕುತಿಯಿಂದ ಸಂಧಾನವ ನಡೆಸಲು 3
--------------
ವರಾವಾಣಿರಾಮರಾಯದಾಸರು
ಸಾಸಿರನಾಮ ಪೂಜೆಸಾಸಿರ ನಾಮ ಪೂಜೆಯ ಸಮಯಾ ಶ್ರೀವಾಸುದೇವನೆ ರಕ್ಷಿಪ ಸಮಯಾ ಸ್ವಾಮಿ ಪಸಾಸಿರ ದಳ ಪದ್ಮ ಮಧ್ಯಕೆ ಶ್ರೀ ವೇದವ್ಯಾಸ ಗುರುವು ಬಂದಿಹ ಸಮಯಾ ಭಾಸುರ ಛಂದಸ್ಸು ಮುಖಮಂಡಲದಿ ಪ್ರಕಾಶಿಸಿ ಮಂತ್ರ ಸಿದ್ಧಿಪ ಸಮಯಾ ಸ್ವಾಮಿ 1ಶ್ರೀರಮೆ ಧರೆ ಸಹ ಹೃದಯಮಧ್ಯದಿ ಶ್ರೀಮನ್‍ನಾರಾಯಣ ನೀನಿಹ ಸಮಯಾತೋರುತಿದಿರೆ ಪೀಠದಿ ಪೂಜೆಗೊಳುತೆನ್ನಸ್ಮೇರಾಸ್ಯದಿಂ ನೋಡುವ ಸಮಯಾ ಸ್ವಾಮಿ 2ಬೀಜನಾಮವು ದಕ್ಷಿಣ ಸ್ತನ ದೇಶದಿಭ್ರಾಜಿಸಿ ಭಕ್ತಿಗೂಡುವ ಸಮಯಾರಾಜಿಪ ಶಕ್ತಿ ನಾಮವು ವಾಮದಿ ಫಲರಾಜಿಯ ಬೆಳಸುತಿರುವ ಸಮಯಾ ಸ್ವಾಮಿ 3ಹೃದಯದಿ ಕೀಲಕ ನಾಮವು ನಿನ್ನಯಪದಸನಿಯವ ಸೇರಿಪ ಸಮಯಾಪದರದೆ ವಿಘ್ನತತಿಗೆ ಭಜಿಸೆನ್ನುತಸದಯ ಸದ್ಗುರು ನಿಯಮಿಪ ಸಮಯಾ ಸ್ವಾಮಿ 4ಅಂಗುಲಿಗಳು ನಿನ್ನ ಮಂಗಳ ನಾಮಗಳಸಂಗದಿ ಶುದ್ಧಿವಡೆದಿಹ ಸಮಯಾಗಂಗೆಯ ಪಡೆದ ನಿನ್ನಡಿಗೆ ತುಲಸಿ ಕುಸುಮಂಗಳನರ್ಪಿಸುತಿಹ ಸಮಯಾ ಸ್ವಾಮಿ 5ಅಂಗಗಳಾರು ಶುಭಾಂಗಗಳಾಗಿ ನಿನ್ನಮಂಗಳ ತನುವ ಧ್ಯಾನಿಪ ಸಮಯಾತೊಂಗದೆ ವಿಷಯಗಳೊಳು ನಿನ್ನ ಪದದುಂಗುಟದುದಿಯ ಸೇರಿಹ ಸಮಯಾ ಸ್ವಾಮಿ 6ದಶನಾಮ ದಶಕ ದಶಕ ಸಮಯದಿ ದಿವ್ಯದಶವಿಧ ಭೋಜ್ಯ ಭೋಜಿಪ ಸಮಯಾದಶವಿಧದಾರತಿಗಳ ಬೆಳಕಿಗಿಂದ್ರಿಯದಶಕವು ವಶಕೆ ಬಂದಿಹ ಸಮಯಾ ಸ್ವಾಮಿ 7ಮೀನ ಕಮಠ ಬುದ್ಧ ಕಲ್ಕಿನೀನಾಗಿ ಭಕತರಿಷ್ಟವನಿತ್ತೆ ನನ್ನಯದೀನತೆಯಳಿವರಿದೇ ಸಮಯಾ ಸ್ವಾಮಿ 8ಅನುಗ್ರಹಶಕ್ತಿಯೊಳಿರುತಷ್ಟಶಕ್ತಿಗಳನು ನೋಡಿ ಸೇವೆಗೊಳುವ ಸಮಯಾಸನಕಾದಿಗಳು ಶ್ರುತಿ ಸ್ಮøತಿ ಪುರಾಣಂಗಳುವಿನಮಿತರಾಗಿ ನುತಿಪ ಸಮಯಾ ಸ್ವಾಮಿ 9ವರ ಸಿಂಹಾಸನದಗ್ನಿ ದಿಕ್ಕಿನೊಳ್ ಧರ್ಮನುಹರುಷದಿಂ ಸೇವೆಗೈಯುವ ಸಮಯಾನಿರುರುತಿ ದೇಶದಿ ಜ್ಞಾನನು ತಾಮಸಬರದಂತೆ ಕಾದು ನಿಂದಿಹ ಸಮಯಾ ಸ್ವಾಮಿ 10ವೈರಾಗ್ಯ ವಾಯವ್ಯದೊಳು ನಿಂದು ದುಃಖವಹಾರಿಸುತಲಿ ಸೇವಿಪ ಸಮಯಾಸಾರಿರುತೈಶ್ವರ್ಯನೀಶನೆಡೆಯೊಳ್ ನೀನುತೋರಿದೂಳಿಗ ಗೈಯುವ ಸಮಯಾ ಸ್ವಾಮಿ 11ಸುರಪತಿ ದೆಶೆಯೊಳಧರ್ಮನು ಬೆದರುತಕರವ ಮುಗಿದು ನಿಂದಿಹ ಸಮಯಾಇರುತ ದಕ್ಷಿಣದಲಜ್ಞಾನನು ಚೇಷ್ಟೆಯತೊರೆದು ಭಯದಿ ಭಜಿಸುವ ಸಮಯಾ ಸ್ವಾಮಿ 12ವರುಣದಿಕ್ಕಿನೊಳವೈರಾಗ್ಯನು ನಿನ್ನಡಿಗೆರಗುವವರ ನೋಡುವ ಸಮಯಾಇರುತಲುತ್ತರದಲನೈಶ್ವರ್ಯ ಮಂತ್ರದುಚ್ಚರಣೆಯ ತಪ್ಪನೆಣಿಪ ಸಮಯಾ ಸ್ವಾಮಿ 13ಕಾಮಾದಿಗಳು ಪೀಠಸೀಮೆಯೊಳಗೆ ನಿಂತು ಕೈಮುಗಿದಲುಗದಿರುವ ಸಮಯಾತಾಮಸ ರಾಜಸ ಸಾತ್ವಿಕಗಳು ನಿನ್ನನಾಮದ ಬಲುಹ ತಿಳಿವ ಸಮಯಾ ಸ್ವಾಮಿ 14ಎಂಟು ದಿಕ್ಕಿನ ದೊರೆಗಳು ಪರಿವಾರ ಸಹಬಂಟರಾಗಿಯೆ ಕಾದಿಹ ಸಮಯಾಎಂಟು ಬಗೆಯ ಸಿರಿದೇವಿಯರೊಂದಾಗಿನಂಟುತನವ ಬಳಸಿಹ ಸಮಯಾ ಸ್ವಾಮಿ 15ಮೊದಲ ನಾಮವು ವಿಶ್ವಮಯ ನಿನ್ನ ನಿರ್ಗುಣಪದವ ಸೂಚಿಸಿ ಸಲಹುವ ಸಮಯಾತುದಿಯ ನಾಮದಿ ಭಕತರಿಗಾಗಿ ತನುದಾಳಿಒದೆದು ದುರಿತವ ರಕ್ಷಿಪ ಸಮಯಾ ಸ್ವಾಮಿ 16ದೂರಕೆ ದುರಿತವು ಹಾರಿ ಹೋಗಿಯೆ ಭಕ್ತಿಸೇರಿ ನಿನ್ನೆಡೆಯೊಳಾನಿಹ ಸಮಯಾದಾರಿದ್ರ್ಯ ದುಃಖವು ತೋರದಾನಂದವ ಸಾರಿ ನಿನ್ನನು ನುತಿಸುವ ಸಮಯಾ ಸ್ವಾಮಿ 17ಸಾಸಿರ ತಾರಕ ಜಪ ಮೊದಲು ಲಭಿಸಿಸಾಸಿರ ನಾಮ ಜಪವು ಮಧ್ಯದಿಸಾಸಿರ ವಂದನೆ ಕುಸುಮ ತುಲಸಿಗಳಸಾಸಿರದಿಂದೊಪ್ಪುವ ಸಮಯಾ ಸ್ವಾಮಿ 18ಸಾಸಿರ ಸಾಸಿರ ಜನ್ಮ ಜನ್ಮಗಳೊಳುಸಾಸಿರ ಸಾಸಿರ ತಪ್ಪುಗಳಾಸಾಸಿರ ಬಾರಿ ಮಾಡಿದ್ದರು ನಾಮದಸಾಸಿರ ಪ್ರಭೆಯೊಳಳಿವ ಸಮಯಾ ಸ್ವಾಮಿ 19ಮುಂದೆನ್ನ ಕುಲವೃದ್ಧಿಯೊಂದಿ ನಿನ್ನಯ ಕೃಪೆುಂದ ಭಕತಮಯವಹ ಸಮಯಾುಂದೆನ್ನ ಭಾಗ್ಯಕೆಣೆಯ ಕಾಣದೆ ನಿನ್ನಮುಂದೆ ನಾ ನಲಿದು ಕುಣಿವ ಸಮಯಾ ಸ್ವಾಮಿ 20ಗುರುವÀರನುಪದೇಶಿಸಿದ ಮಂತ್ರಕೆ ಸಿದ್ಧಿಬರುವ ನಿನ್ನಯ ಕೃಪೆಗಿದು ಸಮಯಾಕರುಣದಿಂ ನೋಡಿ ಕೈವಿಡಿದಭಯವನಿತ್ತುಪೊರೆವದಕೆನ್ನನಿದೇ ಸಮಯಾ ಸ್ವಾಮಿ 21ಧನ್ಯನು ಧನ್ಯನು ಧನ್ಯನು ನಾನೀಗಧನ್ಯನು ಮತ್ತು ಧನ್ಯನು ವಿಭುವೆಧನ್ಯರು ಜನನೀ ಜನಕ ಬಾಂಧವರೆಲ್ಲಧನ್ಯರೆಮ್ಮನು ನೋಡುವ ಸಮಯಾ ಸ್ವಾಮಿ 22ಮೂಲ ಮಂತ್ರಾಕ್ಷರ ಮೂಲ ನೀನಾಗಿಯೆಮೂಲಾವಿದ್ಯೆಯ ತೊಲಗಿಪ ಸಮಯಾಮೂಲೋಕನಾಯಕ ಮುಕ್ತಿ ಮಾರ್ಗಕೆುದೆಮೂಲವಾಗಿಯೆ ಬದುಕುವ ಸಮಯಾ ಸ್ವಾಮಿ 23ಮುರಹರ ಮಾಧವ ತಿಮಿರ ಭಾಸ್ಕರ ಕೃಷ್ಣಶರಣುಹೊಕ್ಕೆನು ನಿನ್ನ ಚರಣ ಪಂಕಜಗಳಪೊರೆಯುವರೆನ್ನನಿದೆ ಸಮಯಾ ಸ್ವಾಮಿ 24ತಿರುಪತಿಯೊಡೆಯನೆ ಶ್ರೀ ವಾಸುದೇವಾರ್ಯಗುರುವಾಗಿ ಕಾವೇರಿ ತೀರದಲಿಕರುಣದಿಂ ಪಾದುಕೆಗಳನಿತ್ತ ಭಾಗ್ಯವುಸ್ಥಿರವಾಗಿ ಭಕತಿ ಹೆಚ್ಚುವ ಸಮಯಾ ಸ್ವಾಮಿ 25 ಓಂ ಶಕಟಾಸುರಭಂಜನಾಯ ನಮಃ
--------------
ತಿಮ್ಮಪ್ಪದಾಸರು
ಸಿರಿದೇವ ನಮ್ಮ ನಿದೈವನು ಶರಣರಕ್ಷಕವಾವನು ಪ ಆಲಯದೊಳುಛಲವಿಡಿದರೆ| ಪಾಲಗಡಲದೊಳಗಿಟ್ಟೀ ಹಾ 1 ವರದ ಮದದಿ ಭಸ್ಮಾಸುರ ಬೆನ್ನಟ್ಟಿ|ಗಿರಿಜೇಶನ ಪೀಡಿಸುತಿರೇ ಭರದಿಂದೊದಗಿ ಬಂದು ಮೋಹಕ ರೂಪದಿ| ದುರುತಳನ ಭಸ್ಮವ ಮಾಡಿದಾ 2 ಅಖಳ ದೊಳಗೆ ಅರಾರಾಧಿಸುವರು| ಭಕುತಿಯಂದದಿ ತನೊಲಿವನು ಪ್ರಕಟಿದಿ ಮಹಿಪತಿ ನಂದನಮುಖದೊಳು ಸಕಲಚರಿತೆಯನು ನುಡಿಸುವಾ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಸಿರಿಯ ಮದವೆ ಮುಕುಂದ - ನಿನ್ನಚರಣ ಸೇವಕನ ಬಿನ್ನಹ ಪರಾಕೆಲೊ ದೇವ ಪ ಅಷ್ಟದಿಕ್ಪಾಲಕರ ಮಧ್ಯದಲಿ ವೈಕುಂಠಪಟ್ಟಣವು, ಸಿರಿಯೋಲಗವ ನಿತ್ಯದಿಕಟ್ಟಿ ಓಲೈಸುತಿಹ ದಾಸರನಿಮಿಷರು, ಮನಮುಟ್ಟಿ ಪಾಡುವ ನಾರದರ ಗೀತ ಸಂಭ್ರಮದ 1 ಸಕಲ ಐಸಿರಿಯ ಅಧಿದೇವಿಯೆ ಪಿರಿಯರಸಿಯುಕುತಿಯೊಳು ಲೋಕಗಳ ಸೃಜಿಸುವಂಥಶಕುತ ನಿನ್ನಯ ಹಿರಿಯ ಮಗನು, ಜೀವಿಗಳ ಮೋ-ಹಕದಿ ಮರುಳು ಮಾಳ್ಪಾತ ಕಿರಿಮಗನೆಂಬ 2 ಅರಿ ಹೃದಯದಲ್ಲಣನೆಂಬ ಬಿರುದು ಸಾಹಸಇಲ್ಲ ನಿನಗಾರು ಇದಿರೆಂಬ ಗರ್ವದಿ ಎನ್ನಸೊಲ್ಲು ಕಿವಿ ಕೇಳದಂತಾಯಿತೆ ಹರಿಯೆ ? 3 ಶೇಷ ಹಾಸು ಮಂಚವು, ಗರುಡ ತುರುಗವು, ಪೀತವಾಸದುಡುಗೆಯು, ಕೊರಳಲಿ ವೈಜಯಂತಿಮೀಸಲಳಿಯದ ಪುಷ್ಪಮಾಲೆಗಳ ಧರಿಸಿ ಜಗದೀಶನೆಂಬುವ ಬಿರುದು ಹೊಗಳಿಸಿಕೊಳ್ಳುವ 4 ಭಕ್ತವತ್ಸಲನೆಂಬ ಬಿರುದು ಬಿಡು, ಅಲ್ಲದೊಡೆಶಕ್ತ ಎನ್ನನು ಕಾಯೋ ಸುಲಭದಿಂದಮುಕ್ತಿಯನ್ನು ಪ್ರಕಟಿಸಲು ಲೋಕದೊಳು ಭಜಕರ್ಗೆಯುಕ್ತ ಕರ್ತ ಕಾಗಿನೆಲೆಯಾದಿಕೇಶವರಾಯ5
--------------
ಕನಕದಾಸ
ಸಿಂಹ ರಮಾರಮಣ ಪ ಬ್ರಂಹ್ಮಾದ್ಯಮರವಿನುತ ಪಾದಪರ ಬ್ರಂಹ್ಮನಿನಗೆ ಮನ್ಮಾನಸವೆಂಬುವ ಅ.ಪ. ದಾರುಲೋಹಮಯ ಪೀಠಗಳೀವುದು ತರವೆ ನಿನಗೆ ಸ್ವಾಮಿ ವಾರಿಧಿತಾರಕನಾಮ ರತ್ನಮಯ 1 ಸಿರಿದೇವಿಯು ನಿನ್ನರ್ಚನೆಗೈವಡ ಶಕ್ತಳಾಗಿರುವಳು ಸ್ವರಮಣ ಸರ್ವಾಂತರ್ಯಾಮಿ ಪರಾ- ತ್ಪರ ಮುಕುಂದ ರತ್ನಮಯ ಮಣಿಖಚಿತ2 ಏಕಚಿತ್ತದಲಿ ನಿನ್ನ ಭಜಿಪರಿಗೆ ಅ- ನಾ ಕೇಶನುತ ಗುರುರಾಮ ವಿಠಲ ನಮೋ ಮಣಿ ಖಚಿತ 3
--------------
ಗುರುರಾಮವಿಠಲ
ಸೀತಾ ಕಲ್ಯಾಣ ಪಾಕ ಶೇಷಾದ್ರಿ ಬ್ರಹ್ಮಕೆ ಶರಣು ಲೋಕನಾಯಕ ಹೆಳವನಕಟ್ಟೆ ವೆಂಕಟ ನೀ ಕರುಣಿಸಿ ಸಲಹುವುದೆನಗೆ ಜಯ ಜಯ ಪ. ಮದುವೆಯ ನಾಲ್ಕು ದಿವಸದಲ್ಲಿ ಮದುವಣಿಗನು ರಾಮ ಜಾನಕಿಗೆ ಪದನ ಹೇಳುವೆ ಸುಜನರು ಕೇಳಿ ಜಯ ಜಯ 1 ಚಿತ್ತಜಪಿತ ಶ್ರೀರಾಮರಿಗೆ ಅರ್ತಿಯಿಂದರಿಷಿಣೆಣ್ಣೆಯ ಮಾಡ್ವ ಮಿತ್ರೆ ಕೌಸಲ್ಯದೇವಿ ಕೇರಿ ಕೇರಿಯ ಗುಂಟ ಮುತ್ತೈದೇರನು ಕರೆಸಿದಳು ಜಯ ಜಯ 2 ಪೀತಾಂಬರದುಡುಗೆಯನುಟ್ಟು ಜ್ಯೋತಿಯಂದದಿ ಥಳಥಳಿಸುತಲಿ ಜಾತಿಮಾಣಿಕದಾಭರಣವಿಟ್ಟು ರಾಮರ ಮಾತೆಯರೆಲ್ಲ ಶೃಂಗಾರವಾಗಿ ಜಯ ಜಯ 3 ಚೀಣ ಚೀಣಾಂಬರಗಳನುಟ್ಟು ವೇಣಿ ಕಸ್ತೂರಿಯ ಪಣೆಗಿಟ್ಟು ಜಾಣೆಯರೆಲ್ಲ ಶೃಂಗಾರವಾಗಿ ಮಲ್ಲಿಗೆ ಬಾಣನ ಪಟ್ಟದಾನೆಗಳಂತೆ ಜಯ ಜಯ 4 ಪೊಂಬಣ್ಣದ ಹಳದಿಯ ಕಲೆಸಿ ತುಂಬಿದ ಹರಿವಾಣದೊಳಗೆ ಅಂಬುಜನಾಭಗೆ ಅರಿಷಿಣೆಣ್ಣೆಯ ಮಾಡ್ವ ಸಂಭ್ರಮಕೆ ನಡೆತಂದರಾಗ ಜಯ ಜಯ 5 ಗರುಡನ್ವಲ್ಲಭ ಸೌಂದರದೇವಿ ವರುಣನ್ವಲ್ಲಭೆ ಕಾಳಕದೇವಿ ಹರನ್ವಲ್ಲಭೆ ಪಾಪ[ನಾ] ಶಿಗಂಗೆ ಸಹಿತಲಿ ಅರಿಷಿಣೆಣ್ಣೆಯ ಮಾಡಬಂದರಾಗ ಜಯ ಜಯ 6 ಬ್ರಹ್ಮವಲ್ಲಭೆ ಶಾರದಾದೇವಿ ವಾ- ಯುರಮಣಿ ಅಂಜನಾದೇವಿ ಹರುಷದಿ ಕೌಸಲ್ಯೆ ಕೈಕೆಸೌಮಿತ್ರೆಯರು ಅರಿಷಿಣೆಣ್ಣೆಯ ಮಾಡಬಂದರಾಗ ಜಯ ಜಯ7 ಅಲ್ಲಲ್ಲಿ ನಡೆವ ನಾಟಕಶಾಲೆ ಬಿಲ್ಲಾಳು ಬೆತ್ತ ಕಾಟನವರು ಸೊಲ್ಲುಸೊಲ್ಲಿಗೆ ಹಿಡಿಹೊನ್ನನು ತ್ಯಾಗವ ಚೆಲ್ಲುತ ದಶರಥ ನಡೆದನಾಗ ಜಯ ಜಯ 8 ಹೊಡೆವ ತಂಬಟೆ ಭೇರಿ ನಿಸ್ಸಾಳೆ ಬಿಡದೆ ಚೀರುವ ಹೆಗ್ಗಾಳೆಗಳು ಸಿಡಿಲು ಗರ್ಜಿಸುವಂತೆ ಪಂಚಮವಾದ್ಯದಿ ನಡೆದರು ಜನಕರಾಯನ ಮನೆಗೆ ಜಯ ಜಯ 9 ಕುಸುಮಬಾಣನ ಮಾರ್ಬಲದಂತೆ ಹಸುರು ಪಚ್ಚೆಯ ಪಲ್ಲಕ್ಕಿಗಳು ಮುಸುಕಿದ ಪರಿಮಳದೊಳಪ[ಸಾ]ತಕೆ ದಶರಥ ಬಂದನೆಂದರೆ ಜನರು ಜಯ ಜಯ 10 ಭರದಿಂದಲೆದ್ದು ಜನಕರಾಯ ತರಿಸಿ ನಿವಾಳಿಗಳನು ಹಾಕಿ ಹರುಷದಿ ಕೈಲಾಗವ ಕೊಟ್ಟಯೋಧ್ಯದ ಅರಸ[ನ] ಮನ್ನಿಸಿ ಒಡಗೊಂಡನಾಗ ಜಯ ಜಯ11 ಬೇಗದಿ ಗದ್ದುಗೆಯನು ಹಾಸಿ ಬೀಗನ ಉಪಚರಿಸಿದ ಜನಕ ಭಾಗೀರಥಿ ಪಾರ್ವತಿ ಗಂಗೆ ಸಹಿತಲಿ ನಾಗಭೂಷಣನು ಕುಳಿತನಾಗ ಜಯ ಜಯ 12 ಸುತ್ತಣ ರಾಯರಾಯರಿಗೆಲ್ಲ ರತ್ನಗಂಬಳಿಗಳ ಹರಹಿದರು ಅರ್ತಿಯಿಂದಲಿ ಸುರರೆಲ್ಲರು ಕುಳಿತರು ವಿಸ್ತರಿಸಿದ ಮಂಟಪದೊಳಗೆ ಜಯ ಜಯ 13 ಮಣಿಮಂಟಪದೊಳು ಹಸೆಹಾಸಿ ಕನಕ ಮಣಿಯ ತಂದಿಳುಹಿದರು ದಿನಕರಕುಲರಾಮ ಹಸೆಗೇಳೆನುತಲಿ ಗುಣಾವಳಿಗ[ಳ] ಕೊಂಡಾಡಿದರು ಜಯ ಜಯ 14 ಪೊಕ್ಕಳೊಳಜನ ಪೆತ್ತವನೇಳು ಅಕ್ರೂರಜನ ಪೆತ್ತವನೇಳು ಮುಕ್ಕಣ್ಣನ ರಿಪುಬಲವ ಸಂಹರಿಸಿದ ಭಕ್ತವತ್ಸಲ ಹಸೆಗೇಳೆಂದರು ಜಯ ಜಯ 15 ದಶರಥರಾಜನಂದನನೇಳು ಅಸುರಸಂಹಾರ ಕಾರಣನೇಳು ವಸುಧೆಗೊಡೆಯ ರಾಮ ಹಸೆಗೇಳೆನುತಲಿ ಋಷಿಗಳೆಲ್ಲರು ಶ್ರುತಿಗರೆದರಾಗ ಜಯ ಜಯ 16 ಋಷಿವಾಲ್ಮೀಕಿ[ಯ]ರೆಲ್ಲರು ಕೂಡಿ ಕುಶಲದ ಬಾಸಿಂಗವ ಪಿಡಿದು ಅಸುರಾರಿಯ ಮಸ್ತಕಕಳವಡಿಸೋರು ವಸುದೇವನಾಗೆಂದು ಹರಸುತಲಿ ಜಯ ಜಯ 17 ತಂಡತಂಡದ ರತ್ನ ಅಡಸಿದಾಗ ಮಣಿ ಬಿಗಿದಿದಾಗ ತೊಂಡಿಲ ಮುತ್ತೈದೇರಳವಡಿಸೋರು ಕೋ- ದಂಡ ಪಾಣಿಸತಿಜಾನಕಿಗೆ ಜಯ ಜಯ 18 ಬೆರಳಿಗೆ ಮುದ್ರೆ ಉಂಗುರವಿಟ್ಟು ಕೊರಳಿಗೆ ಏಕಾವಳಿಯನೆ ಹಾಕೋರು ತರಳಾಕ್ಷಿಯರಾ ಜಾನಕಿಗೆ ಜಯ ಜಯ 19 ಬೊಂಬೆಯ ತೊಂಡಿಲ ಮುಡಿದಿರ್ದು ಕುಂಭಿಣಿಸುತೆ ಕುಳ್ಳಿರಲಾಗಿ ಅಂಬುಜಾಂಬಕ ರಘುರಾಮನ ಹರುಷದಿ ರಂಭೆಯಿದ್ದೆಡೆಗೆ ಬಂದನೆ ನಗುತ [ಜಯ ಜಯ]20 ಬಂದನೆ ಭಾಗ್ಯಲಕ್ಷ್ಮೀರಮಣ ಬಂದನೆ ಭಕ್ತವತ್ಸಲ ಸ್ವಾಮಿ ಬಂದನೆ ಜಾನಕಿಯಡೆ ರಾಮನು ತಾ ಬಂದನೆ ಮಣಿಮಂಟಪದೆಸೆಗೆ [ಜಯ ಜಯ] 21 ಧೂರ್ಜಟಿ ಜಪಿಸುವ ನಾಮವಿಗ್ರಹ ಬಂದ ವಜ್ರಮಾಣಿಕದ್ಹಸೆಯಿದ್ದೆಡೆಗೆ ಜಯ ಜಯ 22 ಕೌಸಲ್ಯಸುತ ಕುಮಾರ ಬಂದ ಹಂಸವಾಹನಪಿತ ರಾಮ ಬಂದ ಕಂಸಾರಿ ದುಃಖವಿ [ನಾಶ] ರವಿಕುಲ ವಂಶೋದ್ಧಾರಕ ಬಂದನಾಗ [ಜಯ ಜಯ] 23 ಭಕ್ತವತ್ಸಲ ರಾಘವ ಬಂದ ಮುಕ್ತಿದಾಯಕ ಶ್ರೀರಾಮ ಬಂದ ಅರ್ಕನು ಶತಕೋಟಿತೇಜನು ಜಗಕತಿ- ಶಕ್ತ ತಾ ಬಂದನೆಂದವೆ ಕಹಳೆ ಜಯ ಜಯ 24 ಸಿಂಧುಬಂಧನ ರಾಘವ ಬಂದ ಪು- ರಂದರವರದ ಶ್ರೀರಾಮ ಬಂದ ಇಂದುವದನೆಪತಿ ರಾಮ ಬಂದನು ರಾಮ- ಚಂದ್ರ ತಾ ಬಂದನೆಂದವೆ ಕಹಳೆ ಜಯ ಜಯ 25 ಯಜ್ಞಶಿಕ್ಷಾಮಿತ್ರ ರಾಮ ಬಂದ ಸುಗ್ರೀವರಕ್ಷಕಾರಣ ಬಂದ ಲಕ್ಷ್ಮ- ಣಾಗ್ರಜ ಬಂದನೆಂದವೆ ಕಹಳೆ ಜಯ ಜಯ 26 ಯಂತ್ರವಾಹಕ ರಾಘವ ಬಂದ ಮಂತ್ರಮೂರುತಿ ರಾಮ ಬಂದ ಕಾಂತೆ ಶ್ರೀ ಜಾನಕಿರಮಣ ಬಂದನು ರಾಮ ತಂತ್ರಿ ತಾ ಬಂದನೆಂದವೆ ಕಹಳೆ ಜಯ ಜಯ 27 ದೂಷಕಹರಣ ಶ್ರೀರಾಮ ಬಂದ ವಿ- ಭೀಷಣವರದ ರಾಘವ ಬಂದ ಭಾಷೆ ಪಾಲಿಪ ರಾಮಚಂದ್ರ ಬಂದನು ಜಗ- ದೀಶ ತಾ ಬಂದನೆಂದವೆ ಕಹಳೆ ಜಯ ಜಯ 28 ತಾಟಕಪ್ರಾಣಾಪಹಾರ ಬಂದ ಜಟÁಯುಮುಕ್ತಿಕಾರಣ ಬಂದ [ತಾಟಂಕ] ಧರ ನಾರಾಯಣ ರವಿಕುಲ ಕೋಟಿ ತಾ ಬಂದನೆಂದವೆ ಕಹಳೆ ಜಯ ಜಯ 29 ವೀರ ವಿಕ್ರಮ ರಾಘವ ಬಂದ ಮಾರೀಚಮರ್ದನ ರಾಮ ಬಂದ ನಾರಿ ಶ್ರೀ ಜಾನಕಿರಮಣ ಬಂದನು ಹರಿ ರಾಮ ತಾ ಬಂದನೆಂದವೆ ಕಹಳೆ ಜಯ ಜಯ 30 ದೇವಕುಮಾರ ರಾಘವ ಬಂದ ದೇವರ ದೇವನು ರಾಮ ಬಂದ ಭಾವೆ ಶ್ರೀ ಜಾನಕಿರಮಣ ಬಂದನು ರಾಮಚಂದ್ರ ತಾ ಬಂದನೆಂದವೆ ಕಹಳೆ ಜಯ ಜಯ 31 ನಿರುಪಮಚರಿತ ರಾಘವ ಬಂದ ದುರಿತದಲ್ಲಣ ರಾಮದೇವ ಬಂದ ಭರತಶತ್ರುಘ್ನರ ಸಹೋದರಯೋಧ್ಯದ ಸುರಪತಿ ಬಂದನೆಂದವೆ ಕಹಳೆ ಜಯ ಜಯ 32 ಹೇಮಖಚಿತ ರತ್ನ ಪೀಠದಲಿ ಭೂಮಿಜೆ ಸಹಿತ ಕುಳಿತ ರಾಮ ವಾಮ ಭಾಗದಿ ಒಪ್ಪಿರ್ದಳು ಜಾನಕಿ ಆ ಮಹಾಸಭೆಯನು ಬೆಳಗುತಲಿ ಜಯ ಜಯ 33 ಕುಂದಣ ರತ್ನದಡ್ಡಿಕೆಯೊಳಗೆ ಹೊಂದಿಸಿ ನವರತ್ನ ಇರುವಂತೆ ಇಂದುವದನೆ ಜಾನಕಿ ಹರುಷದಿ ರಾಮ ಚಂದ್ರನ ಮಧ್ಯದೊಳೊಪ್ಪಿದಳು ಜಯ ಜಯ 34 ಹೇಮದ್ಹರಿವಾಣದೊಳಗ್ನಿಯನು ಕಾಮಿನಿಯರು ತಂದಿಳುಹಿದರು ರಾಮ ಮನ್ನಿಸಿ ಉಡುಗೊರೆಯಿತ್ತು ಅವರಿಗೆ ಹೇಮಾರ್ಚನೆಗಳ ತೊಡಗಿದನು ಜಯ ಜಯ 35 ಲಾಜತೊಂಡಿ[ತಂಡು?]ಲ ಆಹುತಿಗೊಟ್ಟು ಪೂಜಿಸಿದನೆ ವಿಘ್ನೇಶ್ವರನ ರಾಜವದನೆಯ ಒಡಗೊಂಡು ರಾಘವ ಪೂಜಿಸಿದನೆ ಋಷಿಮುನಿವರರ ಜಯ ಜಯ 36 ಇಂದ್ರಾದಿ ಮುನಿಗಳು ಕೈಹೊಡೆದು ಚಂದ್ರ ಸೂರ್ಯರು ಉಘೇಉಘೇಯೆನಲು ಮಂದಾರ ಮಲ್ಲಿಗೆ ಮಳೆಗಳ ಕರೆದರು ಅಂದದಿ ಸುರಜನರೆಲ್ಲರಾಗ ಜಯ ಜಯ 37 ಅರಳುವ ಕೆಂದಾವರೆ ಕುಸುಮ ಪರಿಮಳ ಸುರಮ್ಯ ಕಣ್ಗೆಸೆಯೆ ಎರಗುವ ಮರಿದುಂಬಿಗಳಂತೆ ರಾಘವ ಕರಗಳ ಪಿಡಿದೆÀತ್ತಿದ ಸತಿಯ [ಜಯ ಜಯ] 38 ಇಳೆಯ ಜಗಂಗಳನುದರದಲಿ ಅಳವಡಿಸಿದ ಮಹಾತ್ಮಕನು ಇಳೆಯ ಮಗಳನು ಎತ್ತಲಾರದೆ ರಾಮ ಬಳಲಿದನೆಂದು ನಕ್ಕರು ಜನರು ಜಯ ಜಯ 39 ಪರಾಕು ಸ್ವಾಮಿ ಪರಾಕು ದೇವ ಪಾದ ಎಚ್ಚರಿಕೆ ಸೀತಾಪತಿ ರಾಮನೆ<
--------------
ಹೆಳವನಕಟ್ಟೆ ಗಿರಿಯಮ್ಮ
ಸುಜನ ಜನ ವತ್ಸಲನ ಸೋಮ ಸೂರ್ಯರ ನಯನ ಸುಗುಣಿ ಗುಣ ಗಂಭೀರನ |ಭುಜಗ ಭೂಷಣ ಕಂಕಣನ ಭುವನ ರಕ್ಷಕನ ಭುಜ ಚತುಷ್ಕಾಯುಧಗಳಿಂದೆಸೆವ ಶುಭ್ರ ರದನ ವಿಜಯ ಮೂರುತಿ ವಿಘ್ನವಿಪಿನ ದಾಹಕನ ವಿಘ್ನೇಶ್ವರಗೆ ಸಹಸ್ರನಮನ 1 ನೀನೆ ಶಾಶ್ವತ ರೂಪ ನಿನ್ನ ಕೀರ್ತಿ ಪ್ರತಾಪ ಖೂನ ಕಂಡುಉಸುರೆನೆಂದರೆ ಶ್ರುತಿಗಳಾಲಾಪ ಮೌನಗೊಂಡವು ಮಿಕ್ಕ ಶೇಷಾದಿಕರ ಸ್ಫೂರ್ತಿ ನಿಂತು ಹೋಗಿರಲು ಗಣಪ | ........................... ನಗೇಶನ ಮಾರ್ಗದ ಕೀಲ ಕೃಪೆ ಮಾಡಿ ತೋರಿದರು ಶ್ರೀನಾಥ ಶ್ರೀಹರಿಯ ಚಾರಿತ್ರ್ಯ ಪೇಳಿಸಲಿಕೆ ಆಧಾರ ನೀನೇ ಸತ್ಯ 2 ಇಂತು ವಿಘ್ನೇಶ್ವರನ ಬಲಗೊಂಡ ಬಳಿಕ ಸಮನಂತರದೊಳಾ ಶಾರದಾಂಬಿಕೆ ಶ್ರೀಪಾದ ಅಂತರಂಗದ ಪೀಠದಾಸನಕೆ ಕರಕೊಳಲು ಬಂದೊದಗು ಜಿವ್ಹಾಗ್ರದಿ | ನಿಂತು ನಡಿಸುವ ನಿನ್ನ ಶಕ್ತಿ..................................... ವಂತೆ ವಿಶ್ರಾಂತೆ ಪಾವನ ಮೂರ್ತೆ ಪ್ರಖ್ಯಾತೆ ವರದಾತೆ ಲೋಕ ಮಾತೆ 3 ಸುಜನ ಭುಜಗ ತ್ರಿಜಗ ಜೀವರ ಜನನಿ ತ್ರಿತಾಪ ಸಂಹಾರಿಣಿ ತ್ರಿದೇಹ ಸಂಚಾರಿಣಿ | ದ್ವಿಜತುರಂಗ ಗಮನಿ ದಿವ್ಯಾಂಬರಾಭರಣಿ ರಜ .........................ಗಜಗಮನಿ ಗಂಧರ್ವಗಾನ ಲೋಲಿನಿ ವಾಣೀ ರತ್ನ ಕೃತಾಂಗಿ ಅನುಕೂಲಿನಿ 4 ಹಸ್ತಿ ಕೃಮಿ ಕೀಟ ಭೃತ್ವಲಯದೊಳಗುಳ್ಳ ...................................... ಕೇವಲ ಪರಬ್ರಹ್ಮ ಸ್ಫುರಣಸ್ಫೂರ್ತಿಯು ತೋರದಾರಿಂದ ಗುರುವಿನ್ಹೊರತು 5 ಜಲಧಿ ಎಂದು ಮೊರೆ ಹೊಕ್ಕೆ ನಿನ್ನ ಶ್ರೀ ಚರಣ .......... ಮಾಡಿ ರಚಿಸುವ 6
--------------
ಭೀಮಾಶಂಕರ
ಸುಂದರಿಯರು ಅಂದದಾರತಿ ಬೆಳಗಿ ಕುಂದರದನ ದಿವ್ಯ ಮಂದಸುಹಾಸೆಗೆ ಇಂದಿರಾಪತಿ ಹರಿಗೆ ಪ ಭಂಗ ನಿರ್ಮಲ ಗುಣ ಸಂಗರಹಿತ ಹರಿಗೆ 1 ಮಹಿಮ ನಾದ ವಿನೋದ ಹರಿಗೆ 2 ಪೀತಾಂಬರಾಚ್ಯುತ ಧಾತೃಕಾರಣ ನಿಜ ವಾತ್ಸಲ್ಯ ಭಕ್ತ ಹರಿಗೆ 3 ಜಂಭಾರಿ ಸೋದರ ಗಂಭೀರದಾಕಾರ ಸ್ತಂಭ ತನುಜ ಹರಿಗೆ 4 ಮಾನವಿವರ್ಜಿತ ಮಾನವಪೂಜಿತ ಧೇನುನಗರ ಹರಿಗೆ 5
--------------
ಬೇಟೆರಾಯ ದೀಕ್ಷಿತರು
ಸುವ್ವಿ ಶ್ರೀ ದೇವಿರಮಣ ಸುವ್ವಿ ಸರ್ಪರಾಜಶಯನ ಹರಣ ಸುವ್ವಿ ನಾರಾಯಣ ಪ ಭವ್ಯಚರಿತ ದುರಿತವಿಪಿನ ಹವ್ಯವಾಹನ ಭವೇಂದ್ರಾದಿ ಸೇವ್ಯಮಾನ ಸುಪ್ರಸಿದ್ಧ ಸುಲಭsÀ ಮೂರುತಿ ಅವ್ಯಯಾಮಿತ ಸುಖಾತ್ಮ ದಿವ್ಯ ಮಹಿಮೆ ತುತಿಪೆ ಸುವಿವೇಕಿಗಳಿಗೆ ಕೊಡುವುದಮಿತ ಮೋದವ 1 ವಾಸವಾದ್ಯಮರ ವಾರಾಶಿ ಶಾರದೇಂದು ಮಧ್ವ ದೇಶಿಕಾರ್ಯ ಚಿತ್ತ ಸಿಂಹಪೀಠಮಧ್ಯಗ ದೇಶಕಾಲ ವ್ಯಾಪ್ತ ಸರ್ವೇಶ ಸಾರ್ವಭೌಮ ಶ್ರೀಮ ಹೀ ಸಮೇತ ಕೃಷ್ಣ ಕೊಡಲಿ ಎಮಗೆ ಮಂಗಳ 2 ಕಮಲ ಸಂಭವನ ವೇದ ತಮನು ಒಯ್ಯತಿರಲು ಲಕ್ಷ್ಮೀ ಶರಧಿ ಮಥನದಿ ಕಮಠ ರೂಪಿನಿಂದ ಸುರರಿಗಮೃತವಿತ್ತು ಕಾಯ್ದ ಅಖಿಳ ಸುಮನಸೇಂದ್ರ ಸ್ವಾಮಿ ಕೊಡಲಿ ಎಮಗೆ ಮಂಗಳ 3 ಕನಕ ಲೋಚನನ ಸದೆದು ಮನುಜಸಿಂಹ ವೇಷನಾದ ದ್ಯುನದಿ ಪಡೆದು ಜನನಿ ಕಡಿದು ವನವ ಚರಿಸಿದ ಜನಪ ಕಂಸನ್ನೊದೆದು ತಿರಿಪುರವನಿತೆಯರ ಸುವ್ರ್ರತ ವಿನುತ ಕಲಿ ದೇವರಾಜ ಎಮ್ಮ ಸಲಹಲಿ 4 ಪಾಹಿ ಪಾವನ ಚರಿತ್ರ ಪಾಹಿ ಪದ್ಮ ಪತ್ರನೇತ್ರ ನಿಗಮ ಗಾತ್ರ ಮಾಂ ಪಾಹಿ ಸಜ್ಜನಸುಮಿತ್ರ ಪಾಹಿ ದೋಷದೂರ ಸುಗುಣ ಪಾಹಿ ಜಗನ್ನಾಥ ವಿಠಲ ಜಯ ತ್ರಿಧಾಮಗ 5
--------------
ಜಗನ್ನಾಥದಾಸರು
ಸುಳಾದಿ ಧ್ರುವತಾಳ ಜಿಹ್ವೆ ಸಿರಿ ಗೋಪಾಲವಿಠಲಮೂರ್ತಿಮಂತನಾಗಿ ಇಪ್ಪ ಎಲ್ಲ ಸ್ಥಳದಿ 1 ಮಠ್ಯತಾಳ ಧನವೋದನವು ಇನ್ನು ಧನದೊಳಗಿಪ್ಪನ್ನನೆನೆದು ತೆಗೆದುಕೊ ಶೋಧನಮಾಡಿ ನೋಡಿತನುವಿಗೆ ಕೆಲಸವಿಡು ತನುಬಂಧುಗಳ ನೋಡುಎಣಿಕೆಗೆ ತಂದು ಭಾಗವನು ಮಾಡು ನಾಲ್ಕುಎಣಿಸುತಲ್ಲಲ್ಲಿ ನೆನೆ ಎಲ್ಲ ಸ್ಥಳದಿಗುಣ ಹರಿಯದೆಂದು ಗುಪ್ತನಾಗಿ ಇನ್ನುಅಣುಘನಪರಿಪೂರ್ಣ ಗೋಪಾಲವಿಠಲಅನಿಮಿತ್ತ ಬಂಧ್ವೆಂಬ ಗುಣವುಂಟವನಿಗೆ2 ರೂಪಕತಾಳ ಒಂದು ಅರ್ಥವು ನಿನಗೆ ದೊರಕಿದಡಾಯಿತೆಚಂದದಿ ಚಿಂತಿಸು ಅನಂತಪರಿಯಲ್ಲಿಒಂದುಭಾಗ ದೇವಸಮುದಾಯಕ್ಕೆ ಕೊಡುಒಂದುಭಾಗ ಪಿತೃಗಳಿಗೆ ಇನ್ನು ಮಾಡುಒಂದುಭಾಗ ಪರಿವಾರ ಬಂಧುಗಳಿಗೆಚಂದದಿ ಕೊಟ್ಟು ಆನಂದ ಉಣುಕಂಡ್ಯನಂದಗೋಪನ್ನ ಕಂದ ಗೋಪಾಲವಿಠಲನ್ನಚಂದದಿ ನಿನ್ನ ಮನಮಂದಿರದೊಳು ತಿಳಿ 3 ಝಂಪೆತಾಳ ಜ್ಞಾನವೆ ಮುಖ್ಯಸಾಧನ ನಿನಗೆ ನೋಡುಏನು ಧನದಿಂದಾಗೊ ಕರ್ಮವದರೊಳಗುಂಟುಪ್ರಾಣಹಿಂಸರಹಿತಕರ್ಮ ಮಾಡು ನಿತ್ಯಶ್ರೀನಿವಾಸನು ಅದಕೆ ಮೆಚ್ಚುವನುಜ್ಞಾನಮಯಕಾಯ ಗೋಪಾಲವಿಠಲರೇಯಕಾಣಿಸುವ ನಿನಗೆ ಕರುಣವಮಾಡಿ ನಿರುತ 4 ತ್ರಿಪುಟತಾಳ ತನುವು ಮಂಟಪಮಾಡು ಮನವೆ ಪೀಠವ ಇಡುನೆನೆದು ಕುಳ್ಳಿರಿಸು ನಿನ್ನ ಒಳಗಿದ್ದ ಮೂರ್ತಿಯಧ್ಯಾನ ಆವಾಹನಾದಿಗಳ ನೆನೆದು ಅಲ್ಲಿಪ್ಪಅಣುಮಹಾಮೂರ್ತಿಗೆ ಅಭಿಷೇಕ ಮಾಡಿಸುಗುಣಮೂರರೊಳಗಿದ್ದ ಹರಿಯ ನೆನೆದುಜಿನಸು ವಸನಾಭರಣ ಧೂಪದೀಪವ ಮಾಡಿನೆನಸು ಗಂಧ ಪುಷ್ಪವನು ಮಿಕ್ಕಾದದ್ದೆಲ್ಲಗುಣ ಮೂರುವಿಧದ ಪದಾರ್ಥಗಳನ್ನೆಲ್ಲನಿನಗೆ ಒಂದು ಉದಕಮಾತ್ರ ದೊರಕಿದರೆಇನಿತು ಪರಿಯು ಎಲ್ಲ ಅದರಿಂದ ಚಿಂತಿಸೊಧನದ ಪೂಜೆಗೆ ಅತ್ಯಾಯಾಸಪಡಲಿಬೇಡಘನದೈವ ನಮ್ಮ ಗೋಪಾಲವಿಠಲರೇಯನಿನಗೆಷ್ಟುಪರಿಯಲ್ಲಿ ಪೊರೆವನವನ ತಿಳಿ 5 ಅಟ್ಟತಾಳ ಒಳಗೆ ಬಂದರೆ ನಿನ್ನ ಒಳಗೆ ಇರುತಲಿಪ್ಪಸುಳಿಯುತಿಪ್ಪ ನಿನ್ನ ಸುತ್ತ ಬಿಡದೆ ಬೆನ್ನಹಲವುಪರಿಕರ್ಮ ನಿನಗಾಗಿ ಮಾಡುತ್ತಚೆಲುವ ನಿರ್ಲಿಪ್ತನ್ನ ತಿಳಿಯದೆ ಕೆಡುವಿ ಯಾಕೆಸುಲಭವಾಗಿ ಕರತಳದಲ್ಲಿದ್ದಂಥಫಲವ ನೀ ಕಾಣದೆ ಬಲು ದಣಿಸುವುದೇನೊಗೆಳೆಯನಾಗಿ ಪಾರ್ಥಗೊಲಿದ ನಮ್ಮ ಸ್ವಾಮಿಚೆಲುವ ಗೋಪಾಲವಿಠಲರೇಯನ ನೀನುಗಳಿಗೆ ಮರೆಯಬೇಡ ಬಲುಪ್ರಿಯಾ ಬಲುಪ್ರಿಯಾ 6 ಆದಿತಾಳ ಸೂರ್ಯ ಅಧಿಷ್ಠಾನದಲ್ಲಿದ್ದುದೇವನ ಸ್ಮರಣೆಯು ಬರುತಿರಲಿ ಕಂಡ್ಯಾಕಾವನು ಬಿಡನಿನ್ನು ಗೋಪಾಲವಿಠಲ 7 ಜತೆ ಗೃಹಮೇಧಿ ಮಾಡಿ ನಿನ್ನ ಗೃಹದೊಳಗಿಪ್ಪಂಥಶ್ರೀಹರಿ ಗೋಪಾಲವಿಠಲನ್ನ ನೆನೆಕಂಡ್ಯಾ
--------------
ಗೋಪಾಲದಾಸರು
ಸೋಜಿಗ ಸೋಜಿಗ ಗೋವಿಂದನ ಸೋಜಿಗ ಗೋಪಾಲನ ಸೋಜಿಗ ಪ ಇಂದಿರೆ ರಮಣ ಈ ಪರಬ್ರಹ್ಮ | ಮಂದರೋದ್ಧಾರ ಈ ದೇವಾ | ತಂದೆ ತಾಯಿ ತ್ರೈಲೋಕ್ಯಕ್ಕೆ ತಾನಾಗಿ ನಂದ | ಆನಂದ ಯಶೋದೆಗೆ ಮಗನಾದ ನೋಡಮ್ಮ || ಸೋಜಿಗ 1 ಸದಮಲ ಸ್ವರೂಪ ಸಚ್ಚಿದಾನಂದನು |ಮುನಿಜನ ವಂದಿಪನು ಈ ದೇವ ಮುನಿಜನ ವಂದಿಪನು |ಪದುಮನಾಭ ಪೀತಾಂಬರಧರ ದೇವ ವಿದುರನ | ಆವಿದುರನ ಮನೆಯಲ್ಲಿ ಉಂಡದ್ದು ನೋಡಮ್ಮ ಸೋಜಿಗ2 ನಾನಾ ದೇವರ ದೇವ ನಾರಾಯಣ ಹರಿ ನಿಜಸುರ ವಂದಿ-ಪನು ಈ ದೇವ | ಭಾನು ಕೋಟಿ ತೇಜ ಜ್ಞಾನ-ಬೋಧನ ಸ್ವಾಮಿ | ತಾನಾಗಿ ಭಕುತಿಗೆ ಒಲಿದದ್ದುನೋಡಮ್ಮ ಸೋಜಿಗ 3
--------------
ಜ್ಞಾನಬೋದಕರು
ಸೋದಾಕ್ಷೇತ್ರವೆ ದಿವ್ಯ ಕ್ಷೇತ್ರ ಬಂದ ಜನರಿಗಿಷ್ಟವನೀವ ಕ್ಷೇತ್ರ ವೀರಶೈವರ ಗೆದ್ದ ಕ್ಷೇತ್ರ ಪ ಒಂದು ಭಾಗದಿ ರೂಪ್ಯಪೀಠ ಮ- ತ್ತೊಂದು ಭಾಗದಿ ಸೋದಾಕ್ಷೇತ್ರ ಕುಂದು ಎಳ್ಳಷ್ಟಿಲ್ಲದೆ ತೋರ್ಪು ದೆಂದು ಹರಿಭಕ್ತರಾದರಿಸುವರು 1 ವೈಕುಂಠನಂತಾಸನಗಳು ಚೆಂದವೇನೆಂದು ಪೇಳಲಿ ಮನವೆ 2 ರಾಜೇಶ ಹಯಮುಖ ಚರಣ ಕಂಜ ಮಧುಪನಂತಿರುವ ಶ್ರೀಭಾವಿ- ಕಂಜಜಾತನ ಪದಕರುಹ ವಾದಿರಾಜರಾಯರ ದಿವ್ಯ ಕ್ಷೇತ್ರ 3
--------------
ವಿಶ್ವೇಂದ್ರತೀರ್ಥ
ಸ್ಥಾಣುಂಕರ ವಿರಾಜಿತ ರಮಾಸದನ ಮೋಹನ ಪ ವಾಣೀಶ ಸಂಭಾವಿತ ಗೋಪೀಜನ ಸೇವಿತಾ ಅ.ಪ ಮಣಿಭೂಷಣ ರಂಜಿತ ಮುಕ್ತಜನಾನಂದಿತಾ 1 ಫಣಿಮಣಿಗಣ ಸಂಭೂಷಿತ ವನಿತಾಜನ ತೋಷಿತ 2 ಅಣುರೇಣು ತೃಣಪೂರಿತ ಗುಣಸಾಗರ ಮಾಂಗಿರೀಶ 3
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಸ್ಮರಿಸಿ ಬೇಡುವೆನು ನಾ ಹೇ ಗುರು ಸಾರ್ವಭೌಮಾ ಪ ನಿರುತ ನೀ ಪೊರೆ ಎನ್ನ ವಾದಿಗಜಸಿಂಹ ಅ.ಪ. ದಿತಿಸುತಗೆ ಸುತನೆನಿಸಿ | ಅತಿಮುದದಿ ಸುರಮುನಿಯ ಮತ ಹಿಡಿದು ಹರಿಯ ಮಹಿಮೆ ಪಿತಗೆ ಪೇಳಿ ಪತಿಯ ಸ್ತಂಭದಿ ಕರೆದ ಪ್ರಹ್ಲಾದ ರಾಜ 1 ಬಾಲ್ಯದಲಿ ಯತಿಯಾಗಿ ಲೀಲೆಯಿಂದಲಿ | ಭೂಮಿ ಪಾಲಗೊದಗಿರ್ದ ಕುಹು ಯೋಗ ಬಿಡಿಸಿ ಖೂಳ ಮಾಯಳ ಜಯಿಸಿ ಚಂದ್ರಿಕಾ ಗ್ರಂಥವನು ಪೇಳಿ ಹರಿಪೀಠವೇರಿದ ವ್ಯಾಸರಾಜ 2 ಕಾಮರಿಪುನುತ ಮೂಲರಾಮ ಪದಯುಗ ಕುಮುದ ಸೋಮನೆನಿಸುವ ಭಕ್ತಸ್ತೊಮಕ್ಕೆಲ್ಲ ನೇಮದಿಂದಲಿ ವಿವಿಧ ಕಾಮಿತಾರ್ಥ ಸ್ಫುಟತ ಗಾತ್ರ ಪಾವನ ಚರಿತ್ರ 3 ಶಾಂತತೆಯ ಪೊಂದಿ ಮಂತ್ರಾಲಯದಿ ವೃಂದಾವ ನಾಂತರದೊಳಿರುತ ಸಿರಿಕಾಂತ ಹರಿಯಾ ಚಿಂತಿಸುತಲಿಹ ಸರ್ವತಂತ್ರ ಸ್ವತಂತ್ರ ಕರು ಣಾಂತರಂಗನೆ ರಾಘವೇಂದ್ರ ಯತಿವರ್ಯಾ 4 ಮೂಕ ಬಧಿರಾಂಧತ್ವಗಳ ಪೊಂದಿ ಧರಣಿಯೊಳು ವ್ಯಾಕುಲವ ಪಡುವವರನುದ್ಧರಿಸುತ ನಾಕಪತಿವಿನುತ ಜಗನ್ನಾಥವಿಠಲನ ಮಧುಪ ನೀ ಕೊಟ್ಟು ಸಲಹೆನ್ನಭೀಷ್ಟ ಸಮುದಾಯ 5 ಇತರ ಯತಿವರೇಣ್ಯರ ಸ್ತೋತ್ರ
--------------
ಜಗನ್ನಾಥದಾಸರು