ಒಟ್ಟು 1686 ಕಡೆಗಳಲ್ಲಿ , 112 ದಾಸರು , 1218 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಪಾಲಿಸು ಪಾಲಿಸು ಪಾಲಿಸು ಸುಮನಾ ಪಾರ್ವತಿ ತಾಯೇ ಪ. ಪಾಲಿಸು ಶ್ರೀ ರಜತಾದ್ರಿನಿವಾಸಿ ಶೀಲಮೂರುತಿ ಶಿವಶಂಕರಿ ದೇಹಿಮೆ ಅ.ಪ. ಮನಕಭಿಮಾನಿ ಮಾನುನಿರನ್ನೆ ಸರ್ವ ತನುಮನನಿನಗರ್ಪಿಸಿಹೆನೆ ತಾಯೆ ಕಾಯೆ ಅನುದಿನ ನಿನ್ನಯ ಚರಣವ ಪೂಜಿಪ ಮನವಿತ್ತು ಕರುಣದಿ ನಿನ್ನ ತನುಜರಿಗೇ ನೀಡೆ 1 ಪಂಕಜಗಂಧಿನಿ ಪಂಕಜಾಕ್ಷಿಯೆ ಶಿವ ನಂಕದಿ ಅಲಂಕೃತ ಮಾತೆ ಸುಗೀತೆ ತಾಯೆ ಅಂಕುರವಾಗುವ ತೆರ ನಿನನಾಮವ ಕಿಂಕರರಿಗೆ ನೀಡಿ ದಯಮಾಡೆ ತಾಯೆ 2 ಶ್ರೀಶ ಶ್ರೀ ಶ್ರೀನಿವಾಸ ಸಹೋದರಿ ಈಶನೈಯ್ಯನೈಯ್ಯನೊಲಿಸುವ ಮರೆಯ ಶಂಕರಿ ಶುಭಕರಿ 3
--------------
ಸರಸ್ವತಿ ಬಾಯಿ
ಪಾಲಿಸೊ ಶ್ರೀನಿವಾಸ ಪಾಲಿಸೊ ಶ್ರೀನಿವಾಸ ಪಾಲಾಬ್ಧಿಶಯನ ಕಾಪಾಲಿಯ ಕಾಯ್ದ ಗೋ ಪಾಲ ಹರಿ ವಿಶ್ವರೂಪ ಲೋಕಾಧೀಶ ಪಾಲಯವಾಗೆನ್ನ ಪಾಲಿಲಿದ್ದ ಶಿಶುಪಾಲಕ ಎನ್ನ ಕಾಯನ್ನಾ ಪ ಮನೆ ನಿನಗಾಗಿ ದೇಹಾ ಸುಮ್ಮನೆ ಪೇಳುವುದಿಲ್ಲ ಹ ಮ್ಮನೆ ಬಿಡಿಸುವುದು ಘಮ್ಮನೆ ಬಂದು ಒಲಿದು ನಿ ಮ್ಮನೆ ಭಕ್ತರ ಕೂಡ ನೆಮ್ಮನೆ ಕೊಟ್ಟ ಬಲನ ತ ಮ್ಮನೆ ನಡಿಸುವುದು ತಿಮ್ಮನೆ ಅಜಿತಾನಂತ ನಾ ಸಾರ್ವಭೌಮನೆಯಾಗಿ ಪುಟ್ಟಿ ಭೀ ಮನೆ ಗುರು ನಿತ್ಯಾ ಸಮನೆ ಎಂದು ಪೇಳಿದಾ ಮನೆಯಲ್ಲಿ ಇಡು ಮಾಮನೆಯುಳ್ಳಾ ಮಹಿಮನೆ ವೆಂಕಟೇಶಾ1 ಮನ ದುರ್ವಿಷಯಕೆ ಗಮನವಾಗಿ ಪೋಗುತಿದೆ ಕಾಮನ ಸಂಬಂಧವುಪಶಮನ ಮಾಡು ಬೇಗ ಸುಧಾ ಮನ ಮಿತ್ರ ಪವಿತ್ರ ಸುಮ್ಮನಸಕೊಡಿಯಾ ವಾ ಮನ ಮೂರುತಿಯೆ ಮನಸಂಹಾರ ಬಮ್ಮನ ಬಿಡಿಸಿದಾ ಹಿ ಮನ ಭಾವನೆ ನಿನ್ನ ಮನನಾದಿ ದಿನಯಸ್ತ ಪರಿಯಂತ ನೇಮನ ಚಿಂತಿಸುವಂತೆ2 ಜನನ ಮರಣ ಶೂನ್ಯಾ ಜನಕಾದ್ಯನಂತಗಂಗ ಜನಕಾಯಿದಾನಾದಿ ದೈವ ಅ ಜನನಯ್ಯ ಸ್ವರ್ಣ ಕಾಯಂ ಜಿನೆ ಪುತ್ರಪ್ರಿಯ್ಯಾ ದುಷ್ಟ ಜನಮರ್ದನಾ ಬಲು ಯೋಜನ ಮೆರೆವ ದೇವ ಸು ಜನಪಾಲ ಗುಣಶೀಲಾ ಜನುಮ ಜನುಮಕ್ಕು - ಜನಮತಿ ಕಳೆದು ರಂ ಜನವಾದಾ ಜ್ಞಾನ ಪುಂಜಿನ ಮಾಡು ದನುಜ ಭಂ ನಿರಂಜನ ನಿರ್ಮಳ ಅಂಜನ ಗಿರಿವಾಸಾ 3
--------------
ವಿಜಯದಾಸ
ಪಾವಮಾನಿಯೆ ತವ | ಯಾವ ಮಹಿಮೆಯೊಳೇಕಭಾವ ಪೊಗಳಲು ಆವ | ದೇವತೆಗಳಿಗಳವೇ ಪ ಶ್ರೀವರನಂಘ್ರಿಯ | ಸೇವೆಗೈವಲಿ ಬಹು | ಧಾವಿಸೀ |ಬಹು ಎಚ್ಚರದಿ ಸೇವಿಸೀ ||ನಿರುತ ಭಕ್ತಿಯ | ಭಾವದಲಿ ದುರಿ | ತಾವಳಿ ವಿಭಾವಸುನೀ ವೊಲಿದು ಭೃ | ತ್ಯಾವಳಿಯ ಪಾಲಿಪೆ | ಸಾರ್ವಕಾಲ ಮ-ತ್ತೋರ್ವರಿಲ್ಲವೊ | ದೇವರೊತ್ತಮ | ದೇವ ನೀನೇ ಅ.ಪ. ಸೂರ್ಯ ಮೋಚನ |ಆಶಿಸುತಲಿ ಹಾರಿ | ದೋಷವ ಕಳೆಯಲು | ಯತ್ನೀಸೆ ಆ ಸುಮಹದಾಕಾರ ಶೃಣಗೈದೀವಾಸವನು ನಿನ ಘಾತಿಸಲು ಕುಲಿಶದೀ ಅದಕಂಡು ತವ ಪಿತಶ್ವಾಸಗಳ ಬಲು ಪರಿಯ ರುದ್ಧಿಸಲು | ಮೂರ್ಲೋಕ ತಪಿಸೇಅಸುರರು ವಿಧಿವಿಧದಿ ಮೊರೆ ಇಡಲೂ | ಆಲೈಸ ನಾಲ್ಮೊಗಶ್ವಾಸ ಸತಿಯನು ಸೂಸಿ ಸೂಚಿಸಲೂ | ಅದಕೇಳಿ ಮತ್ತೆಲೇಸುಗೈಯ್ಯಲು ಮನವ ಮಾಡಲೂ ವಾಸವಾದ್ಯರಶ್ವಾಸ ಮಾಡುವ ತೆರನ ಮಾಡೆಯ್ದೊಕ್ಲೇಶನಾಶನ ಶ್ವಾಸಮಾನಿ ಮಹಾ ಕೃಪಾಳೊ 1 ವ್ರಾತ ಮಣಿ ರಘು | ಜಾತಗಿತ್ತೆಯೊ | ಮಾತರಿಶ್ವಾ 2 ಪುಂಡರೀಕಾಕ್ಷ ಉರ ಬಗೆದು ಕರುಳಕೊಂಡು ಕೊರಳಲಿ ಧರಿಸೀ | ನರ ಮೃಗನ ಲೀಲೆಕಂಡು ದ್ವಯೆ ಬಲ ತಪಿಸೀ | ಅರಕ್ಷೌಹಿಣಿ ಮುಂ-ಕೊಂಡು ನೀನೆ ಸಂಹರಿಸೀ | ಕೌರವನ ತೊಡೆಖಂಡಿಸುತವನ ಛೇದಿಸೀ |ಅಂಡಜಾಧಿಪವಹಗೆ ಅರ್ಪಿಸಿ | ನಿಂದೆ ಭೀಮಾ 3 ಅದ್ವೈತ ಸಿದ್ಧಿಲಿಹೇಯ ಬಹಳವ ನೀನೆ ತೋರಿಸೀ | ಬದರಿಯಲಿ ಬಾದರಾಯಣರಿಂದ ಉಪದೇಶೀಸಿ | ಮತ್ತಿಲ್ಲಿ ಬರುತಲಿಧೇಯ ಸಾಧಿಸೆ ಗ್ರಂಥ ಬಹು ರಚಿಸೀ | ಕುಭಾಷ್ಯಗಳ ಬಹುಹೇಯತ್ವವನೆ ಸಾಧಿಸೀ | ವಾದ ಕಥೆಯಲಿಮಾಯಿಗಳ ಬಲುಪರಿಯ ಸೋಲಿಸೀ |ಕಾರ್ಯ ಸರ್ವವ | ರಾಯ ಕೃಷ್ಣಗೆ ಅರ್ಪಿಸಿದೆ ಮಧ್ವಾ 4 ಪರಿ ವ್ಯಾಪ್ತನೆ | ಅಧ್ಯರ್ಥ ರೂಪಿಅಪ್ರಾಪ್ಯ ಅಶಕ್ತಿ ರಹಿತಾನೇ |ವ್ಯಾಪಿಸುತ ಜಗ | ವೀಪರೀಯಲಿ | ಮಾಳ್ಪೆ ಪ್ರಾಣಾ 5 ಮೋಕ್ಷಾಧೀಚ್ಛೆಯ ವರ್ಜ | ಅಚ್ಛಿನ್ನ ಭಕುತಾನೇದಕ್ಷಿಣಾಕ್ಷಿ ಗೋ | ವತ್ಸ ರೂಪಾನೇ ||ಅಕ್ಷಿಯೋಳಿಹ ತ್ರಿದಶಾ | ದ್ಯಕ್ಷರಿಂದಲಿ ಸಂ | ಸೇವ್ಯಾನೇ |ಕಂಠದಲಿ ನೀ ಹಂಸೋಪಾಸಕನೇ |ಶಬ್ದಗಳ ನುಡಿದು ನುಡಿಸುತಿರುವಾನೆ | ಕೂರ್ಮರೂಪಿ ಸಲಕ್ಷಣದಿ ಬ್ರಹ್ಮಾಂಡ ಧಾರಕನೆ | ಸಪುತ ಸ್ಕಂದಗತಇಚ್ಛೆಯಲಿ ಲೋಕಧಾರಕನೆ | ಬೃಹತಿ ಸಾಸಿರವಾಚ್ಯನೆಂದೆನಿಸುತ್ತ ಸ್ತುತ್ಯಾನೆ | ಪತ್ಯಬಿಂಬ ಮುಖ್ಯನೆಈಕ್ಷಿಸುವೆ ಸರ್ವತ್ರ ಹರಿಯನ್ನೆ | ಮುಂದಿನಜ ಅಪರೋಕ್ಷವನು ಪಾಲಿಸೆಂಬೇನೆ ||ಮೋಕ್ಷದನೆ ಕರುಣಾ ಕಟಾಕ್ಷದಿ | ಈಕ್ಷಿಪುದು ಪವನ 6 ಜೇಷ್ಠ ಶ್ರೇಷ್ಠನೆ ಸ | ಮಷ್ಟಿ ರೂಪನೆ ಪವನ |ವ್ಯಷ್ಟಿರೂಪದಿ ಜಗದಿ | ವರೀಷ್ಟನೇ ||ನಿಷ್ಠೇಲಿ ಭಜಿಪರಿ | ಗಿಷ್ಟಾರ್ಥವನೆ | ಸಲಿಸೂವೇ |ಅತಿರೋಹಿತ ವಿಜ್ಞಾನಿ ಎನಿಸಿರುವೆ ||ಸಕಲ ಗುಣಗಣ ಭೋಕ್ತøವೆನಿಸಿರುವೆ | ಸಕಲ ಜ್ಞಾನೋಪದೇಷ್ಟನೆಂದೆನಿಸಿ ಕರೆಸೂವೆ | ಶಿವ ಶೇಷ ಖಗಪರಿನಿಷ್ಟ ಗುರು ನೀನೆ ಎನಿಸಿರುವೆ ಸಜಾತಿ ಗುಣ ಅಯುತವರಿಷ್ಟನು ನೀನು ಆಗಿರುವೆ | ವಿಜಾತ್ಯನಂತ ಗುಣಗರಿಷ್ಟ ರೂಪಿ ಎನಿಸಿರುವೇ | ವೇದಾನುಕ್ತ ಗುಣವಿಶಿಷ್ಟ ರೂಪದಲಿಂದ ಮೆರೆಯುವೇ ||ಇಷ್ಟ ಗುರು ಗೋವಿಂದ ವಿಠ್ಠಲ | ಪ್ರೀತಿ ಪಾತ್ರನು ಆದ ಪ್ರಾಣ 7
--------------
ಗುರುಗೋವಿಂದವಿಠಲರು
ಪಾಹೀ ಪಾಹೀ ಪರ್ವತರಾಜ ಕುಮಾರೀ ಪ ತ್ರಾಹಿ - ತ್ರಾಹಿ - ತಾಯಿ ತವ ಪದಯುಗಳಕೆದೇಹ ಮಮತೆ ಕಳೆ ದಕ್ಷ ಕುಮಾರೀ ಅ.ಪ. ಗೌರಿ ಮೃಡಾಣಿಯೆ ಬಲು ಪ್ರಖ್ಯಾತೆಸುರಪತಿ ಷಣ್ಮುಖ ಗಣಪತಿ ಮಾತೆ1 ತನು ನಿನ್ನದು ತಾಯಿ ಮನದಭಿಮಾನಿಯೆಹೊನ್ನು ಮಣ್ಣಿನಲಿ ಸಮ ಮನವೀಯೇ 2 ಅಸಮನೆನ್ನುತ ಗುರು ಗೋವಿಂದ ವಿಠಲನಬಿಸರು ಹಾಂಬಕೆ ನೀ ತುತಿಸುವೆ ಪ್ರತಿಕ್ಷಣ 3
--------------
ಗುರುಗೋವಿಂದವಿಠಲರು
ಪುಟ್ಟಿದನು ಜಗದೀಶ | ಜಗಭಾರ ನೀಗಲುವೃಷ್ಣಿಕುಲದಲಿ ಈಶ | ದೇವಕಿಯ ಜಠರದಿಕೊಟ್ಟು ಅವಳಿಗೆ ಹರ್ಷ | ಕರುಣಾಬ್ದಿ ಭೇಶ ಪ ಅಟ್ಟಹಾಸದಿ ದೇವದುಂದುಭಿ | ಶ್ರೇಷ್ಠವಾದ್ಯಗಳೆಲ್ಲ ಮೊಳಗಲುಅಷ್ಟಮಿಯ ದಿನದಲ್ಲಿ ಬಲು ಉ | ತ್ಕøಷ್ಟದಲ್ಲಿರೆ ಗ್ರಹಗಳೆಲ್ಲವು ಅ.ಪ. ಪರಿ ದೇ-ವಕ್ಕಿಯಲಿ ಉದ್ಭವಿಸೀ | ಸಜ್ಜನರ ಹರ್ಷೀಸಿ ||ವಕ್ರಮನದವನಾದ ಕಂಸನು | ಕಕ್ಕಸವ ಬಡಿಸುವನು ಎನುತಲಿನಕ್ರಹರ ಪ್ರಾರ್ಥಿತನು ದೇ | ವಕ್ಕಿ ವಸುದೇವರಿಂದಲಿ 1 ದೇವ ಶಿಶುತನ ತಾಳೀ | ನಗುಮೊಗವ ತೋರಲುದೇವ ವಾಣಿಯ ಕೇಳೀ | ಅನುಸರಿಸಿ ಆದ ವಸುದೇವ ತನಯನ ಕೈಲೀ | ಕೊಂಡಾಗ ಬಂಧನಭಾವ ಕಳಚಿತು ಕೇಳೀ | ಶ್ರೀ ಹರಿಯ ಲೀಲೇ ||ಪ್ರಾವಹಿದ ಸರಿದ್ಯಮುನೆ ವೇಗದಿ | ಭಾವ ತಿಳಿಯುತ ಮಾರ್ಗವೀಯಲುಧೀವರನು ದಾಟುತಲಿ ಶಿಶು ಭಾವದವನನ ಗೋಪಿಗಿತ್ತನು 2 ವಿಭವ ||ತಂದು ಶಿಶು ಸ್ತ್ರೀಯಾಗಿ ಮಲಗಿರೆ | ಬಂದು ಕಂಸನು ಕೈಲಿ ಕೊಳ್ಳುತಕಂದನಸು ಹರಣಕ್ಕೆ ಯತ್ನಿಸೆ | ಬಾಂದಳಕ್ಕದು ಹಾರಿ ಪೇಳಿತು 3 ದುರುಳ ಭಯವನೆ ಪೊಂದಿ ತೆರಳುತತರಳರಸುಗಳ ನೀಗ ತನ್ನಯ | ಪರಿಜನಕೆ ಅಜ್ಞಾಪಿಸಿದ ಕಂಸ 4 ಆರೊಂದನೆಯ ದಿನದಿ | ಗೋಕುಲಕೆ ಬಂದಳುಕ್ರೂರಿ ಪೂಥಣಿ ವಿಷದಿ | ಪೂರಿತದ ಸ್ತನ ಕೊಡೆಹೀರಿ ಅವಳಸು ಭರದಿ | ಮೂರೊಂದು ಮಾಸಕೆಭಾರಿ ಶಕಟನ ಮುದದಿ | ಒದೆದಳಿದೆ ನಿಜಪದದಿ ||ಮಾರಿ ಪೂಥಣಿ ತನುವನಾಶ್ರಿತ | ಊರ್ವಶಿಯ ಶಾಪವನೆ ಕಳೆಯುತಪೋರ ಆಕಳಿಸುತ್ತ ಮಾತೆಗೆ | ತೋರಿದನು ತವ ವಿಶ್ವರೂಪ 5 ಭಂಜನ ||ಪಾನಗೈಯ್ಯುತ ದಾನ ವನ್ಹಿಯೆ | ಹನನ ವಿಷತರುರೂಪಿ ದೈತ್ಯನ ಧೇನುಕಾಸುರ ಮಥನ ಅಂತೆಯೆ | ಹನನ ಬಲದಿಂದಾ ಪ್ರಲಂಬನು6 ಪರಿ ಗೋವರ್ಧನ | ಶಂಖ ಚೂಡನ ಶಿರಮಣಿಯು ಬಲು ಅಪಹರಣ | ಅರಿಷ್ಟಾಸುರ ಹನನ ||ಹನನಗೈಯ್ಯಲು ಕೇಶಿ ಅಸುರನ | ಘನಸುವ್ಯೋಮಾಸುರನ ಅಂತೆಯೆ ಮನದಿ ಯೋಚಿಸಿ ಕಂಸ ಕಳುಹಿದ | ದಾನ ಪತಿಯನು ಹರಿಯ ಬಳಿಗೆ 7 ಬಲ್ಲ ಮಹಿಮೆಯ ಹರಿಯ | ಅಕ್ರೂರ ವಂದಿಸಿಬಿಲ್ಲಹಬ್ಬಕೆ ಕರೆಯ | ತಾನೀಯೆ ಕೃಷ್ಣನುಎಲ್ಲ ತಿಳಿಯುತ ನೆಲೆಯ | ಪರಿವಾರ ಸಹಿತದಿಚೆಲ್ವ ರಥದಲಿ ಗೆಳೆಯ | ಅಕ್ರೂರ ಬಳಿಯ ||ಕುಳ್ಳಿರುತ ಶಿರಿ ಕೃಷ್ಣ ತೆರಳುತ | ಅಲ್ಲಿ ಯಮುನೆಲಿ ಸ್ನಾನ ವ್ಯಾಜದಿ ಚೆಲ್ವತನ ರೂಪಗಳ ತೋರುತ | ಹಲ್ಲೆಗೈದನು ಗೆಳೆಯ ಮನವನು 8 ಬವರ | ಗೈವುದಕೆ ಬರ ಹರಿಹಲ್ಲು ಮುರಿಯುತ ಅದರ | ಸಂಹರಿಸಿ ಬಿಸುಡಲುಮಲ್ಲ ಬರೆ ಚಾಣೂರ | ಹೂಡಿದನು ಸಂಗರ ||ಚೆಲ್ವ ಕೃಷ್ಣನು ತೋರಿ ವಿಧ್ಯೆಯ | ಮಲ್ಲನನು ಸಂಹರಿಸುತಿರಲು ಬಲ್ಲಿದನು ಬಲರಾಮ ಮುಷ್ಟಿಕ | ಮಲ್ಲನನು ಹುಡಿಗೈದು ಬಿಸುಟನು 9 ಜಲಧಿ | ಆವರಿಸಿ ಬರುತಿರೆಹರಿಯ ಬಲ ಸಹ ಭರದಿ | ಸಂಹರಿಸಿ ಅವರನುಕರಿಯ ವೈರಿಯ ತೆರದಿ | ಹಾರುತಲಿ ಮಂಚಿಕೆಲಿರುವ ಕಂಸನ ಶಿರದಿ | ಪದಮೆಟ್ಟಿ ಶಿಖೆ ಪಿಡದಿ ||ಗರುಡನುರಗನ ಪಿಡಿದು ಕೊಲ್ಲುವ | ತೆರದಿ ಕೃಷ್ಣನು ಪಿಡಿದ ಕಂಸನ ಕರದಿ ಖಡ್ಗದಿ ಶಿರವ ನಿಳುಹಲು | ನೆರೆದ ಸುಜನರು ಮೋದಪಟ್ಟರು 10 ಮಂದ ಮೋದ ಪಡಿಸುವ 11
--------------
ಗುರುಗೋವಿಂದವಿಠಲರು
ಪುಟ್ಟಿಸಿದ್ದೇನು ಕಾರಣವೋ ಸೃಷ್ಟಿಗೋಡೆಯಾ ಪ. ಶ್ರೀಕೃಷ್ಣ ಮೂರುತಿವೊಂದಿಷ್ಟು ತಿಳಿಯದೋ ಮಾಯಾ ಜೀಯಾ ಅ.ಪ. ಆವಾವ ಸಾಧನವಾಗಲಿಲ್ಲಾ ಯನ್ನಿಂದ ಶ್ರೀದೇವಾ ಕರವ ಬಿಡುವುದುಚಿತವೇನು ಮಾಧವಾ ನಿನ್ನ ಮನದಣಿಯ ನೋಡಾದೆ ಹಾಗಾದೆ 1 ಹರಿಮೂರ್ತಿ ನೋಡಲೊಲ್ಲಾದು ಯನ್ನಮನವು ಪರಪುರುಷರ ನೋಡಿತು ಮನಸು ಹೊಲೆಗೆಡಿಸಿತು ಪುರುಷೋತ್ತಮನ ಮರಿತಿತು 2 ಹರಕಥಾ ಶ್ರವಣ ಕೇಳದು ಎನ್ನ ಕರ್ಣಂಗಳು ಪರವಾರ್ತೆಗೆ ಹೊತ್ತು ಸಾಲದು ಸರ್ವೋತ್ತಮನೆ ನಿನ್ನ ಮರೆತೆನು ಉನ್ಮತ್ತಳಾದೆ 3 ಹರಿನಿರ್ಮಾಲ್ಯವ ಕೊಳ್ಳದು ಯನ್ನ ಮೂಗು ಪರಪುರುಷರಾ ಮೈಗಂಧವಾ ಆಘ್ರಾಣಿಸುವುದು ನಿನ್ನ ನಾಮ ಸ್ಮರಣೆಯನು ಮರೆತೆನು 4 ಹರಿಯಾತ್ರೆಯಾ ಮಾಡಲಿಲ್ಲ ಯನ್ನ ಕಾಲು ಜಾರಸ್ತ್ರೀಯರ ಮನೆಮನೆ ತಿರುಗುವೆನು ಪರಿ ನೀಯನ್ನ ಮರೆಯುವುದುಚಿತವೆ 5 ಎನ್ನ ಇಂದ್ರಿಯಗಳು ಈ ಪರಿವ್ಯರ್ಥವಾಯಿತು ಸಾರ್ಥವಾಗಲಿಲ್ಲ ಪಾರ್ಥಸಾರಥಿ ನಿನ್ನ ನೋಡಿ ಪವಿತ್ರಳಾಗಲಿಲ್ಲ ಏಕಿನ್ನ ಈ ಪರಿಯ ಮರುಳು ಮಾಡುವಿದೇವಾ ಧರೆಯೊಳಗೆನ್ನ ತಂದುದಕೆ ಬಂದಕಾರ್ಯವಾಗಲಿಲ್ಲ 6 ಆವಬಾಧೆಯು ನಾನರಿಯೆ ಪರಜಾತಿಯ ಆ ಮನಸು ಪೋಗುವುದು ಕೋತಿಯಂದದಿ ಕುಣಿಸುವರು ಇದು ರೀತಿಯೆ 7 ಭವಸಾಗರದೊಳು ಇದ್ದು ಸೊರಗಲಾರೆನೊ ಘಾಸಿಗೊಳಿಸುವುದು ನಿನಗೆ ಧರ್ಮವೆ ವಾಸುದೇವನೆ ನಿಮ್ಮ ನಾಮವನು ನೆನೆಯದೇ 8 ಇರುಳು ಹಗಲು ಹೀಗೆ ದುರುಳತನದಲಿ ತಿರುಗಿದೆನು ಗುರು ಹಿರಿಯರಂಘ್ರಿಗೆ ಶಿರವ ಬಾಗದೆ 9 ಎಷ್ಟು ಮೊರೆ ಹೊಕ್ಕರೇನು ಒಂದಿಷ್ಟು ದಯಪುಟ್ಟದು ನಾನೀಗ ದ್ವೇಷಿಯೇನೋ ಶೇಷಶಯನನೆ ನಮ್ಮ ಕಾಳೀಮರ್ಧನಕೃಷ್ಣನೆ 10
--------------
ಕಳಸದ ಸುಂದರಮ್ಮ
ಪುರಂದರ ದಾಸರೇ ನಿಮ್ಮ ಚರಣ ಸರಸಿಜ ನಂಬಿದೆ ಪ ಗುರುವ ರಹಿತರ ಮಾಡಿ ನಮ್ಮನು ಪೊರೆವ ಭಾರವು ನಿಮ್ಮದೆ ಅ ಒಂದು ಅರಿಯದ ಮಂದಮತಿ ನಾನಿಂದು ನಿಮ್ಮನು ವಂದಿಪೆ ಇಂದಿರೇಶನ ತಂದು ತೋರಿಸಿ ತಂದೆ ಮಾಡೆಲೊ ಸತ್ಕøಪೆ 1 ಪುರಂದರ ಗಡದೊಳಗೆ ನಿಂದು ನಿರುತ ದ್ರವ್ಯವÀ ಗಳಿಸಿದೆ ಕರವ ನೀಡಿ ಯಾಚಿಸೆ 2 ಪರಮ ನಿರ್ಗುಣ ಮನವರಿತು ಹರಿಗೆ ಸೂರೆಯ ನೀಡುತ ತರುಣಿ ಸಹಿತಾ ಹೊರಟನೆ 3 ಮಾರಜನಕನ ಸನ್ನಿಧಾನದಿ ಸಾರಗಾನವ ಮಾಡುವ ನಾರದರೆ ಈ ರೂಪದಿಂದಲಿ ಚಾರುದರುಶನ ತೋರಿದ 4 ಅಜಭವಾದಿಗಳರಸನಾದ ವಿಜಯವಿಠ್ಠಲನ ಧ್ಯಾನಿಪ ಭಜಿಪೆನೋ ಕೇಳ್ ಗುರುವರ 5
--------------
ವಿಜಯದಾಸ
ಪುರಂದರದಾಸರು ಎಂತು ಪೊಗಳಲಿ ನಾನು ಪ ಕಂತುಪಿತನೇಕಾಂತ ಭಕ್ತನ ಪಂಥವನು ಪದ ಪಂಕ್ತಿಯಲಿ ತುಂಬಿಟ್ಟು ಸಲಹಿದ ದಾಸವರ್ಯರ ಅ.ಪ. ನಿತ್ಯ ನೆನೆಯುತ್ತ ಪಂಡಿತೋತ್ತಮರೊಡನೆ ಸುಖಿಸುತ್ತ ಕಂಡು ಹರಿಯನು ಮುಂದೆ ಕುಣಿಯುತ್ತ ಕುಂಡಲಿಗೆ ನಿಜ ಭೂಷಣವು ಎನಿಸುತ್ತ ಭಂಡಜನರಾ ಪುಂಡುಮಾರ್ಗವ ಕಂಡಕಂಡೆಡೆ ಖಂಡ್ರಿಸುತ ಬ್ರಹ್ಮಾಂಡ ದೊಡೆಯನ ಭಕ್ತಿ ಬಿತ್ತುತ ಹಿಂಡಿ ಮತಿಮತ ರಸವ ಕುಡಿಸಿದ ದಾಸವರ್ಯರ 1 ಮೊದಲು ಗಾಯಕ ದೇವಸಭೆಯಲ್ಲಿ ಮುದದಿ ಕಾಮುಕ ಚೇಷ್ಟೆ ನಡೆಸುತಲಿ ಪದವಿಯಿಂ ಚ್ಯುತನಾಗಿ ದಾಸಿಯಲಿ ಉದಿಸಿ ಬಂದು ಸಾಧು ಸಂಗದಲಿ ಬದಿಗೆ ತಳ್ಳುತ ಭವದ ಕೋಟಲೆ ಮುದದಿ ಜಪಿಸುತ ವಾಸುದೇವನ ಪದವಿ ಸಾಧಿಸಿ ದೇವ ಋಷಿ ತಾ ಪದುಮನಾಭನ ನೆನೆದು ನರಕವ ಬ ರಿದು ಮಾಡ್ಡ ಮಹಾನುಭಾವನ 2 ಕಾಸಿನಾಶಯವು ಮೋಸವೆಂತೆಂದು ಹೇಸಿವಿಷಯದಿ ಲೇಸು ಸಿಗದೆಂದು ಶ್ರೀಶ ಸಿಗುವನು ದಾಸಗೆಂತೆಂದು ಆಶೆಯಿಂದಲಿ ಸಾರಬೇಕೆಂದು ಓಸು ಸಂಪದ ನೂಕಿ ಭರದಿಂ ವ್ಯಾಸರಾಯರ ಶಿಷ್ಯನೆನಿಸುತ ವಾಸುದೇವನ ದಾಸನಾಗುತ ದೋಷಜ್ಞಾನವ ನಾಶಮಾಡಿದ ದೇಶ ತಿರುಗಿದ ದಾಸವರ್ಯರ 3 ಭಕ್ತಿಯಿಲ್ಲದ ಗಾನ ತಾನಿನ್ನು ಕತ್ತೆಕೂಗನುಮಾನವಿಲ್ಲೆಂದು ನಿತ್ಯದೇವನ ಗಾನ ಗೈಯಲು ಗಾತ್ರವಿದು ನಿಜವೀಣೆಯೆಂತೆಂದು ಸಪ್ತಸ್ವರಗಳ ಕ್ಲಪ್ತಮರ್ಮಗ ಳೆತ್ತಿ ತೋರುತ ಶ್ರೇಷ್ಠತರ ಸಂಗೀತ ಸೂತ್ರ ಸಂಮತ ನೀತಿ ನುಡಿದಿಹ ದಾಸವರ್ಯರ 4 ಪೊಂದಿ ಪುಸ್ತಕ ದೀಚೆ ಬರದೆಂದು ಛಂದ ಮರ್ಮವ ತಂದಿಡುವೆ ನಮ್ಮೀ ಅಂದ ಕನ್ನಡ ದೊಳಗೆ ಎಂತೆಂದು ಕಂದ ವೃತ್ತ ಸುಳಾದಿ ಪದಗಳ ಛಂದ ಭೂಷಣವೃಂದ ನೀಡುತ ನಂದದಿಂ ಕರ್ಣಾಟಮಾತೆಯ ಮುಂದೆ ತಾ ನಲಿವಂತೆ ಮಾಡಿದ ದಾಸವರ್ಯರ 5 ನಾರಿ ಮನೆ ಪರಿವಾರ ಹರಿಗೆಂದು ಸಾರವನ್ನೆ ಮುರಾರಿ ಮನೆಯೆಂದು ಚಾರು ಶ್ರುತಿಗತಸಾರ ನಡತೆಯಲಿ ಸೂರಿಯಾದವ ತೊರಬೇಕೆಂದು ನೀರಜಾಕ್ಷನ ಧೀರ ದೂತನ ಸಾರ ಮನವನು ಸಾರಿ ಸಾರುತ ದೂರ ಒಡಿಸಿ ಮೂರು ಮತಗಳ ನೇರ ಸುಖಪಥ ತೋರಿಸಿದ ಮಹರಾಯ ದಾಸರ 6 ಕರ್ಮಕೋಟಲೆಗಿಲ್ಲ ಕೊನೆಯೆಂದು ಮರ್ಮತಿಳಿಯುತ ಬಿಂಬಹೃದಯಗನ ನಿರ್ಮಮತೆಯಿಂದೆಸಗಿ ಕರ್ಮಗಳ ಕರ್ಮಪತಿಗೊಪ್ಪಿಸುತ ಸರ್ವಸ್ವ ಭರ್ಮಗರ್ಭನ ಭಕ್ತಿ ಭಾಗ್ಯದಿ ಪೇರ್ಮೆಯಿಂ ಹರಿದಾಸನೆಸಿಸುತ ಶರ್ಮ ಶಾಶ್ವತವಿತ್ತು ಸಲಹುವ ವರ್ಮ ನೀಡಿದ ವಿಶ್ವಬಾಂಧವ 7 ಇಂದಿರೇಶನು ಮುಂದೆ ಕುಣಿಯುತಿರೆ ಕುಂದುಂಟೆ ಮಹಿಮಾತಿಶಯಗಳಿಗೆ ತಂದೆ ಕೌತಕ ವೃಂದ ಮಳೆಗರೆದು ಕಂದನನು ಪೊರೆದಂದವೇನೆಂಬೆ ಬಂದು ಸತಿಸಹ ಮಂದಿರಕೆ ಗೋ ವಿಂದ ಪಾಕವಗೈದು ಬ್ರಾಹ್ಮಣ ವೃಂದಕಿಕ್ಕುತ ದಾಸರಿಗೆ ಮುದ ಮಾಧವ ಭಾಗ್ಯಕೆಣೆಯುಂಟೆ 8 ದೀನ ಹೊಲೆಯಗೆ ಪ್ರಾಣ ಬರಿಸಿದನು ಏನು ಒಲ್ಲದೆ ಹರಿಯ ಯಜಿಸಿದನು ಜ್ಞಾನ ಭಾಗ್ಯದಿ ಮುಳುಗಿ ತೇಲಿದನು ದೀನ ಜನರುದ್ಧಾರ ಮಾಡಿದನು ದಾನಿ ಜಯಮುನಿ ವಾಯು ಹೃದಯಗ ಚಿನ್ಮಯ ಶ್ರೀ ಕೃಷ್ಣವಿಠಲನ ಗಾನ ಸುಧೆಯನು ಬೀರಿಸುತ ವಿ ಜ್ಞಾನವಿತ್ತ ಮಹೋಪಕಾರಿ ವಿಶೇಷ ಮಹಿಮನ 9
--------------
ಕೃಷ್ಣವಿಠಲದಾಸರು
ಪೂಜಿಮಾಡುವ ಬನ್ನಿ ರಾಜತೇಜೋನಿಧಿಯ ರಾಜಾಧಿರಾಜ ಮಹಾರಾಜ ಗುರುಮೂರ್ತಿಯ ಧ್ರುವ ಮನವೆ ಸುಮನಮಾಡಿ ಘನಗುರು ಪಾದÀಲಿಡಿ ಅನುಭವದಿಂದ ನೋಡಿ ಅನುದಿನವೆ ಕೊಂಡಾಡಿ 1 ಷೋಡಶೋಪಚಾರ ಮಾಡಿ ದೃಢ ವಿಚಾರ ನೋಡಿ ಮನೋಹರ ಒಡಿಯನೆ ಸಹಕಾರ 2 ಕಣ್ಣಿನೊಳಿಟ್ಟು ಖೂನ ಪುಣ್ಯನೋಡಿ ನಿಧಾನ ಚಿಣ್ಣಮಹಿಪತಿಪ್ರಾಣ ಧನ್ಯಗೈಸುವ ಸಾಧನ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಪೂಜಿಸುವೆನು ದೇವಿಯ ಶ್ರೀನಿತ್ಯ ಗೌರಿಯ ಪ ಪರಶಕ್ತಿರೂಪೆಯ ಪರತತ್ವಮೂರ್ತಿಯ ಪರಮಮಂಗಳ ದೇವಿಯ ಪರಮಾನುರಾಗದಿ 1 ಮೃಗಧರಮೌಳಿಯ ಜಗದುದ್ಧಾರಾಂಬೆಯ ಮಿಗೆ ಮನದಲಿ ಧ್ಯಾನಿಸಿ ಅವಾಹಿಸುತ್ತಲಿ 2 ಸರ್ವಲೋಕೇಶ್ವರಿಯ ಸರ್ವಾಲಂಕಾರೆಯ ಸರ್ವಾಂಗ ಸುಂದರಿಯ ಆಸನವನಿತ್ತು 3 ವಿದ್ಯಾಧಿದೇವಿಯ ಶುದ್ಧಚಿದ್ರೂಪೆಯ ಪಾದ್ಯಾಘ್ರ್ಯಾಚ ಮನದಿಂದ ಪರಿಶುದ್ಧ ಹೃದಯದಿ 4 ಪಂಚಮವಾಣಿಯ ಚಂಚರಿಕಾಂಬೆಯ ಪಂಚಾಮೃತವ ಜಲವ ಮುದದಿಂದ ತಳಿಯುತ 5 ಸುಂದರ ಹಾಸೆಯ ಸೌಂದರ್ಯ ಶರದಿಯ ಚಂದ್ರಗಾವಿಯ ನುಡಿಸಿ ಕಂಚುಕವ ಗೊಡಿಸಿ 6 ಚಂದ್ರ ಬಿಂಬಾಸ್ಯೆಯ ಸಿಂಧುರ ಗಮನೆಯ ಇಂದು ತಿಲಕವ ತಿದ್ದುತ ಗಂಧವನೆ ತೊಡೆದು 7 ಮಂಗಳ ಮಾತೆಯ ಮಂಗಳ ಮೂರ್ತಿಯ ಮಂಗಳ ದ್ರವ್ಯದಿಂದ ಶೃಂಗಾರ ವೆಸಗಿ8 ಲೀಲಾವಿನೋದೆಯ ಬಾಲ ಕುಚಾಂಬೆಯ ಮಾಲೆಯ ನರ್ಪಿಸುತ ಕುಸುಮಗಳ ನಿಚಯದಿ 9 ಪಾಪನಿಹಂಶ್ರಿಯ ಶ್ರೀಪತಿ ಸೋದರಿಯ ಧೂಪ ದೀಪವ ಕಲ್ಪಿಸಿ ಅಚಮನವಿತ್ತು 10 ಸತ್ಯಸಂಕಲ್ಪೆಯ ನಿತ್ಯಸಂತುಷ್ಟೆಯ ಉತ್ತಮ ಫಲಭಕ್ಷ್ಯದಿಂ ನೈವೇದ್ಯ ವೆಸಗಿ 11 ಕಂಬುಸುಕಂಠಿಯ ಬಿಂಬಫಲಾಧರೆಯ ತಾಂಬೂಲ ದಕ್ಷಿಣೆಯಂ ಭಕ್ತಿಯೊಳಗರ್ಪಿಸಿ 12 ಮಂಗಳ ಮೂರ್ತಿಯ ಮಂಗಳ ಗೌರಿಯ ಮಂಗಳಾರತಿಯ ಗೈದು ಆಚಮನವಿತ್ತು 13 ಕಲಕೀರವಾಣಿಯ ಕಲಹಂಸಗಮನೆಯ ಲಲನಾಶಿರೋಮಣಿಯ ಬಲವಂದುನಮಿಸಿ 14 ಜಯ ಜಯ ಗೌರಿಯೆ ಜಯ ಜಯ ಮಾತೆಯೆ ಜಯದೇವಿ ಕರುಣಿಸು ನೀಂ ವರ ಸುಪ್ರಸಾದವ 15 ಮಾನಿನಿ ದೇವಿಯು ಮೌನಿ ಸುವಂದ್ಯೆಯು ಧೇನುಪುರೀಶ್ವರಿಯು ಸುಪ್ರೀತೆಯಾಗಲಿ 16
--------------
ಬೇಟೆರಾಯ ದೀಕ್ಷಿತರು
ಪೇಳುವೆ ಮನವೆ ನಿನಗೊಂದು ಕುಳಿತು ಲಾಲಿಪುದು ಮುಕ್ತಿಗೆ ಹಾದಿ ಎಂದು ಪ ಹರಿಯ ಚರಣಾಬ್ಜ್ಬಕೆ ಎರಗು ಬಡ ವರನ ಕಂಡರೆ ಅಕಟಾ ಎಂದು ಮರಗು ಹರಿ ಭಕುತಿಗೆ ನೀನೆ ಕರಗು ಇಹ ಪರದಲ್ಲಿ ಉತ್ತಮ ಯೆಂದೆನಿಸಿ ತಿರುಗು 1 ಅಹಂಕಾರ ಮಮಕಾರ ಬಿಟ್ಟು ಅಂಬು ರುಹಲೋಚನನ ಸುಮತವನ್ನೆ ತೊಟ್ಟು ಕುಹಕ ಮತಿಗಳನ್ನು ಬಿಟ್ಟು ಗುರು ದ್ರೋಹಿಗಳಾದವರ ಹೃದಯವÀ ಮೆಟ್ಟು 2 ಅಲ್ಪ ಬುದ್ಧಿಗಳನ್ನು ಮಾಣು ಒಂದು ಸ್ವಲ್ಪವಾದರು ಜ್ಞಾನದ ಮಾರ್ಗ ಕಾಣು ಬಲ್ಪಂಥದಲಿ ಬಾಹದೇನು ಬಿಡು ಅಲ್ಪಗಳ ಸಂಗ ಎಂದು ಸಾರಿದೆನು 3 ಸ್ವಾಮಿಯ ಪಾದವ ನೋಡು ನಿನ್ನ ಕಾಮ ಕ್ರೋಧಗಳೆಲ್ಲ ಕಳೆದು ಈಡಾಡು ನಾಮ ಕೀರ್ತನೆಗಳನ್ನು ಪಾಡು ತ್ರಿ ಧಾಮದೊಳಗೆ ಒಂದು ಇಂಬನೆ ಬೇಡು 4 ಎಚ್ಚತ್ತು ತಿಳಿದುಕೋ ಸೊಲ್ಲಾ ನಾನು ಮುಚ್ಚುಮೊರಿಲ್ಲದೆ ಪೇಳಿದೆನಲ್ಲಾ ಅಚ್ಚುತ ವಿಜಯವಿಠ್ಠಲನಲ್ಲದಿಲ್ಲ 5
--------------
ವಿಜಯದಾಸ
ಪೊಗಳು ಮನವೆ ನೀ ಯುಗಯುಗದಲಿ ‌ಘನ ಸೊಗಸಿಲಿಂದ ಗುರು ಜಗನ್ನಾಥರಾಯರ ಪ ಪುಲ್ಲಜಾಂಡದಿ ಸಿರಿವಲ್ಲಭನ ಪದ ಪಲ್ಲವ ಪೂಜಿಸಿದ ಸಹ್ಲಾದರಾಯರ 1 ಮಾನವಿಕ್ಷೇತ್ರದಿ ಧೇನಿಪ ಸುಜನರ ಮಾಣದೆ ಕಾಯುವ ಮಹಾನುಭಾವರ ಸದಾ 2 ಧರಿವರ ಶಾಮಸುಂದರ ಚರಿತಾಮೃತ ಸರಸ ಸುಗ್ರಂಥವ ವಿರಚಿಸಿದೋಡೆಯರ 3
--------------
ಶಾಮಸುಂದರ ವಿಠಲ
ಪೋಗದಭಿಮಾನವೇಗೈವೆನಕಟಾಆಗದಾನಂದಪದ ಇದರಿಂದಲಕಟಾ ಪತನುವೆನ್ನದೆಂದು ಪೋಸಿ ಪೊರೆದಫಲವೇನುಧನವೆನ್ನದೆಂದು ಸಾಧಿಸಿದುದೇನುಮನವೆನ್ನದೆಂದು ಮತಿಯನು ಪಡೆದ ಬಗೆಯೇನುಅನುಕೂಲವಾಗಿ ಬಾಳಿಸಿದುದೆ ತಾನು 1ವನಿತೆಯೆನ್ನವಳೆಂದು ಒಡಲಾದ ಬಗೆಯೇನುತನುಜರೆನ್ನವರೆಂದು ತಡಿಗಂಡುದೇನುಮನುಜರೆನ್ನವರೆಂದು ಮೃತ್ಯುತೊಲಗುವದೇನುಇನಿತು 'ಧದಲಿ ಸುಖವ ಕಾಣದೆುನ್ನು 2ಇದರಿಂದ ಬಂತು ಋಣಬಾಧೆ ಮಾಸಿತು ಬೋಧೆಒದಗಿದಾ 'ರತಿಯನು ನೀಗಿ ನಿಂದೆಮದ ಹೆಚ್ಚಿ ಮೈಮರೆದೆ ಮೋಹಕ್ಕೆ ಒಳಗಾದೆಎದೆಯಲಿ 'ಷಯಸುಖಕಾಗಿ ಮತಿದೊರೆದೆ 3ಆವ ಜನ್ಮಾಂತರದ ಪೈಶಾಚವೋ ಕಾಣೆಆವ ಮಾಂತ್ರಿಕನಿದನು ಬಿಡಿಸುವನೊ ಕಾಣೆಆವ ವ್ರತನಿಯಮಗಳಿಗಂಜುವುದೊ ನಾ ಕಾಣೆಆವ ಜಪಗೈದಿದನು ಕಳೆಯಲೊ ಕಾಣೆ 4ಕರುಣಿ ಚಿಕನಾಗಪುರವರನಿಲಯ ಎನ್ನೊಡೆಯಗುರುವಾಸುದೇವಾರ್ಯ ಗೂಢಚರ್ಯಮರೆಯೊಕ್ಕೆ ನಿನ್ನಡಿಯ ಮಾನಪೈಶಾಚಭಯಹರಿವಂತೆ ಮಾಡು ನ'ುಸಿದೆನು ದಮ್ಮಯ್ಯ 5
--------------
ವೆಂಕಟದಾಸರು
ಪೋತರಾಜನಲ್ಲವೋ ನಮ್ಮ ರಂಗ ಪೋತರಾಜನಲ್ಲವೋ ಭೂತಳದೊಳಜಾತನಾಗಿ ಮೆರೆವ ಪ ಏಕಾರಾರ್ಣವದೊಳು ಎಲ್ಲರ ವೊಡಲೊಳು ಸಾಕಿಕೊಳ್ಳುತ ಪೊಂದಲಿಟ್ಟುಕೊಂಡು ಲೋಕನಾಯಕ ಹರಿವಟದೆಲಿಯ ಮೇಲೆ ಮಾಕಾಂತಿಯ ಕೂಡ ಮಲಗಿದ ಗುಣನಿಧಿ 1 ಜಿನಮತದಲಿ ಪುಟ್ಟಿ ದಾನವರು ಸ ಜ್ಜನಕರ್ಮ ಮಾಡುತಲಿರೆ ವೇಗಾ ಅನಿಮಿಷರಾಡಿದ ಮಾತಿಗೆ ದೈತ್ಯನ ಮನವಂಚಿಸಿ ಉಪದೇಶ ಮಾಡಿದ ಹರಿ2 ನಂದ ವ್ರಜದಲ್ಲಿ ಪೂತಿನಿ ಶಕಟನ್ನ ಗಜ ಮಲ್ಲರ ಸವೆದು ಅಂದವಾಗಿ ಮೆರೆದ ವಿಜಯವಿಠ್ಠಲರೇಯಅಂದು ದೇವಕಿ ಬಾಲಕನಾಗಿ ತೋರಿದಾ 3
--------------
ವಿಜಯದಾಸ
ಪೌರಾಣಿಕ ಕಥನ ಸೃಷ್ಟಿಯಲಿ ಕಡು ದುಷ್ಟ ರಾವಣ ಕಟ್ಟಳೆಯ ಕಂಗೆಡಿಸಲು ಅಷ್ಟರೊಳು ಭಯಪಟ್ಟು ದಿವಿಜರು ಒಟ್ಟುಗೂಡುತ ಸ್ತುತಿಸಲು ಥಟ್ಟನೆ ದಯವಿಟ್ಟು ದಶರಥಪಟ್ಟಮಹಿಷಿಯೊಳುದಿಸಲು ದಿಟ್ಟ ಕೌಶಿಕನಿಷ್ಟಿಯನು ಕೈಗೊಟ್ಟು ಸಲಹಿದ ಶ್ರೇಷ್ಠಧನುಜಘರಟ್ಟಗಾರತಿಯ ಬೆಳಗಿದರು1 ಪಾದರಜದಿಂ ಪೊರೆಯುತ ಸಾಧಿಸಿದ ಧನು ಭೇದಿಸುತ ಹಿತಳಾದ ಸೀತೆಯ ಒಲಿಸುತ ಕ್ರೋಧದಿಂದೆದುರಾದ ಪರಶುವನಾ ದಯಾನಿಧಿ ಗೆಲ್ಲುತ ಸಾಧುಮಾರ್ಗವಿನೋದ ಸೀತಾಹ್ಲಾದ ಪಾಪವಿರೋಧ ದಾನವಸೂದನಗಾರತಿಯ ಬೆಳಗಿದರು 2 ಚಿಕ್ಕ ತಾಯಿಯ ಸೊಕ್ಕುನುಡಿಗತಿಸೌಖ್ಯವನು ಹೋಗಾಡುತ ಘಕ್ಕನನುಜನ ನಿಜಸತಿಯತಾ ಸೌಖ್ಯದಿಂದೊಡಗೂಡುತ ವನಕ್ಕೆ ತಾ ಸಂಚರಿಸುತ ಮಿಕ್ಕಿ ಬಂದಾ ರಕ್ಕಸಿಯ ಕುಚದಿಕ್ಕೆಲವ ಖಂಡಿಸಿದ ಪ್ರಭುಗೆ ಮಾಣಿಕ್ಯದಾರತಿಯ ಬೆಳಗಿದರು 3 ಧೂರ್ತ ಖರತ್ರಿಶಿರಾದಿ ದಾನವ ಮೊತ್ತವನು ಸಂಹರಿಸುತ ದೈತ್ಯಮಾಯಾವೃತ್ತಿಮೃಗವನು ಮತ್ತಕಾಶಿನಿ ಬೇಡುತ ಸತ್ತ್ವನಿಧಿ ಬೆನ್ನಟ್ಟಿ ಸೀತೆಯ ದೈತ್ಯಪತಿ ಕೊಂಡೋಡುತ ಮತ್ತೆ ಕಾಣದೆ ಕೋಪದಿಂದರಸುತ್ತ ಬಂದ ಮಹಾತ್ಮ ರಾಮಗೆ ಮುತ್ತಿನಾರತಿಯ ಬೆಳಗಿದರು 4 ತೋಯಜಾಕ್ಷಿಯ ಸುದ್ದಿ ಪೇಳ್ದ ಜಟಾಯುವಿಗೆ ಗತಿ ತೋರುತ ವಾಯುತನುಜಸಹಾಯದಿಂ ಕಪಿರಾಯ ಸಖ್ಯವ ಮಾಡುತ ನ್ಯಾಯಗರ್ಭಿತ ಸಾಯಕದಿ ಮಹಕಾಯ ವಾಲಿಯ ಕೊಲ್ಲುತ ಪ್ರಾಯಶದಿ ಗಿರಿಯೊಡ್ಡಿ ಶರಧಿಗುಪಾಯದಿಂ ಬಂಧಿಸಿದ ಜಾನಕೀಪ್ರಿಯಗಾರತಿಯ ಬೆಳಗಿದರು 5 ಮನವಿವೇಕವ ನೆನೆದು ಬಂದಾ ಧನುಜಪತಿ ಸೋದರನಿಗೆ ಇನಶಶಿಗಳುಳ್ಳನಕ ಲಂಕಾವನಿಯ ಪಾಲಿಸುತ ಮಿಗೆ ರಣದಿ ರಾವಣಕುಂಭಕರ್ಣರ ಹನನಗೈಯುತ ಲೋಕಕೆ ಸೀತೆಯ ವಿನಯ ಗೈದಗೆ ಮೇರುಗಿರಿನಿಭ ಇಂದ್ರಪುಷ್ಪಕಾವೇರಿ ತಾ ಸಾಕೇತಕೆ ಸೇರಿ ಸಾನುಜರಿಂದ ಧರ್ಮದ ಮೇರೆದಪ್ಪದೆ ಸುಜನಕೆ ಸಾರಸಂಪದವಿತ್ತು ಲೋಕೋದ್ಧಾರನಾಗುತ್ತಖಿಳಕೆ ನೀರಜೇಕ್ಷಣ ಕರುಣಪಾರಾವಾರ ಶರಧೀಗಂಭೀರ ಲಕ್ಷುಮೀ ನಾರಾಯಣ ರೂಪ ಜಯ ಜಯ 7
--------------
ತುಪಾಕಿ ವೆಂಕಟರಮಣಾಚಾರ್ಯ