ಒಟ್ಟು 14553 ಕಡೆಗಳಲ್ಲಿ , 132 ದಾಸರು , 6967 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಇದು ಈಗ ಸಮಯ ಸೀತಾರಾಮ ಪ ಇದು ಈಗ ಸಮಯವು ಪದುಮದಳಾಕ್ಷನೆ ಸದಯದಿ ನಿಂದೆನ್ನ ಒದಗಿ ಕಾಯ್ವ ಶ್ರೀರಾಮ ಅ.ಪ. ಖಾಸವು ತುಂಬೆ ಕಂಠದಿ ಶ್ವಾಸವು ನಿಲ್ಲೆ ಘಾಸಿಯಾಗಲು ಘುರುಘುರುಕೆಂದು ಬÉೂೀರಿಡೆ ಸಾಸಿರ ಚೇಳು ಕಡಿದಂತಾಗುವಾಗ 1 ಕಾಲವು ಸಲ್ಲೆ ಪಂಚೇಂದ್ರಿಯಂಗಳು ಸಡಿಲೆ ಈ ದೇಹದಿ ಲಾಲಾ ಮೂತ್ರವು ಮಲ ಜೋಲಿ ಬೀಳುತಲಿರೆ ಕಾಲನ ದೂತರು ಬಂದು ಬಿಡದೆಳೆಯುತಿರುವಾಗ 2 ನಂದನಾದಿಗಳು ನಿಂದು ಗೋಳಿಡುತಿರೆ ಬಂಧು ಬಳಗಗಳು ಒಂದನು ನೋಡಿದೆ ಕುಂದುತ್ತ ಚಿತ್ತದಿ ನಿಂದಿರಲು ತಂದೆ ಧೇನುಪುರಿನಾಥ ಬಂದೆನ್ನ ಕಾಯೊ ಹೋಗುವಾಗ 3
--------------
ಬೇಟೆರಾಯ ದೀಕ್ಷಿತರು
ಇದು ಎಂಥ ಸವಿ ಇಹ್ಯದು ಶ್ರೀಹರಿ ನಾಮ ಮಧುಗಿಂತ ಮಧುವಿಹ್ಯದು ಪ ಅಧಮ ಮನಸೇ ನೀನು ಸ್ವಾದ ಸವಿದುನೋಡೋ ಅಧಿಕ ಅಮೃತಕಿಂತ ಮಾಧುರ್ಯ ತುಂಬಿಹ್ಯದು ಅ.ಪ ಸುಧೆಗಿಂತ ಸುಧೆಯಿಹ್ಯದು ಮೃಷ್ಟಾನ್ನದ ಮೃದುಗಿಂತ ಮೃದುವಿಹ್ಯದು ವದನದೊಳಿಟ್ಟರೆ ವಿಧವಿಧದ್ಹಸುತೃಷೆ ಸದೆದು ಸದಮಲಸುಖ ಒದಗಿಸಿ ಕೊಡುವುದು 1 ಶುಚಿಗಿಂತ ಶುಚಿಯಿಹ್ಯದು ಹೆಚ್ಚಿಗೆ ಹೆಚ್ಚು ರುಚಿಗಿಂತ ರುಚಿಯಿದ್ಯದೋ ಉಚ್ಚಿಷ್ಟರಾಗದೆ ಬಚ್ಚಿಟ್ಟು ಸುರಿವರ್ಗೆ ನಿಶ್ಚಲಸುಖಪದ ಮೆಚ್ಚಿ ತಾ ಕೊಡುವುದು 2 ಶಾಶ್ವತಸುಖವೀಯ್ವುದೋ ಭವರೋಗ ಕೌಷಧ ಮಾಗಿಹ್ಯದೋ ದಾಸಜನರಿಗನುಮೇಷ ಸವಿಯುದೋರಿ ಪೋಷಿಸುತಿರುವುದು ಶ್ರೀಶ ಶ್ರೀರಾಮನಾಮ 3
--------------
ರಾಮದಾಸರು
ಇಂದು ಕಂಡೆ ಚರಣಾ ಶ್ರೀಕೃಷ್ಣನಾ ಪ ಕೊಳಲ ದ್ವನಿಗೈದನಾ ಚಲುವಿಗೆ ಗೆದ್ದ ಕಾವನಾ 1 ಹೆಡೆಯಲಿ ಕಾಳಿಂಗನಾ ಒಡನೆ ಕುಣಿದ ರಂಗನಾ 2 ಗೋವರ್ಧ ನೆತ್ತಿದನಾ ಗೋವಳಕ ಕಾಯದನಾ 3 ಬಾಲಕ ಲೀಲಾ ಲೋಲನಾ ಮೂರುಲೋಕ ಜೀವನ ಪಾಲನಾ 4 ಮಹಿಪತಿ ನಂದನ ಜೀವನಾ ಸಹಕಾರಿ ಪಾವನ್ನನಾ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಇಂದು ಕಂಡೆನು ಹರಿಯ | ಭವಹಾರಿಯ ಇಂದು ಕಂಡೆನು ಕಂಬದಿಂದಲಿ ಪ ಬಂದು ದೈತ್ಯನ ಕೊಂದು ಕಂದನಿ- ಗಂದು ಒಲಿದಾನಂದ ಸಾಂದ್ರನ ಇಂದಿರಾ ಮಂದಿರನ ವಂದ್ಯನ ಅ.ಪ. ಎಂದಿನಂದದಿ ಬರುತ | ಮನದಲಿ ಶ್ರೀ ಮು- ಕುಂದ ನಾಮವ ನೆನೆಯುತ ಮುಂದು ಮುಂದಕೆ ನಡೆಯುತ | ಆ- ನಂದದಿ ಹೋಗುತಲಿರೆ ಸುಂದರಿ ಶ್ರೀ ತುಲಸಿಗೊಲಿದು ಬೃಂದೆಯನು ಕರವಿಡಿದು ಪೊಳೆದು ಬಂದು ಗಂಡಕಿಯಿಂದ ಭಕ್ತರ ವೃಂದ ಪೊರೆಯಲು ಪಥದಿ ನಿಂದನ1 ಸುಕೃತ | ಬಂದೊದಗಿತೊ ಶ್ರೀಶನೆನಗೆ ದೊರೆತ | ಪ್ರಭಾವದೆ ದುರಿತ | ರಾಶಿಯು ಇನ್ನು ದಾಸರಾಯರ ಕುಲದಿ ಜನಿಸಿದ ಕೂಸೆನುತ ದೇಸಿಗರ ಸೇವೆಗೆ ಮೀಸಲಾಗಿಸಲೋಸುಗೆನ್ನ ಮ- ಹಾಶಯವ ಲೇಸೆನಿಸಿ ಬಂದವ 2 ವಿಕಳ ತತಿಗೆ ಬಾಧಕ | ಈತನ ನಾಮ ಪ್ರಕಟಿಸಲಿನ್ನು ಸುಖ | ಪಾಲಿಸುವನು ಯುಕುತಿಗೆಂದಿಗು ನಿಲುಕ | ಸುಕೃತರಿಂದ ಭಕುತಿ ಸೇವೆಯನೊಂದೆ ಕೊಳ್ಳುವ ಭಕುತಿ ಮುಕುತಿಗಳನ್ನು ಕೊಡುವ ಸಕಲ ಕಾಲದಿ ನಿಂತು ಸಲಹುವ ಲಕುಮಿಕಾಂತನ ಸರ್ವ ಶಕ್ತನ 3
--------------
ಲಕ್ಷ್ಮೀನಾರಯಣರಾಯರು
ಇಂದು ಕೂಡಿದೆವು ನಿಜ ಇಂದು ಕೂಡಿದೆವು ನಿಜ ಧ್ರುವ ಇಂದೆ ಕೂಡಿದೆವಯ್ಯ ತಂದೆ ಸದ್ಗುರು ನಿಮ್ಮ ಎಂದೆಂದಗಲದ್ಹಾಂಗ ದ್ವಂದ್ವ ಶ್ರೀಪಾದ 1 ಪುಣ್ಯಗೈಸಿತು ಪ್ರಾಣ ಧನ್ಯಗೈಸಿತು ಜೀವನ ಉನ್ಮನವಾಗಿ 2 ಇಂದು ಕೂಡಿದೆವು ಬಂಧುಬಳಗ ನಮ್ಮ ಪಾದ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಇದು ಥರವೇ ಥರವೇ ದೇವಾ ಥರವೇ ನಿನ್ನವರ ವಂಚಿಸಿ ನೀ ಮರೆಯಲ್ಲಿ ಇರುವುದು ಥರವೆ ಪ. ಪರಿಪರಿಯಲಿ ಸ್ತುತಿಗೈಯುತಲಿ ನಿನ್ನ ಪರಮ ಮಂಗಳ ಪಾದಗಾಣದೆ ಮರುಗುತಿರುವಾ ವರ ಭಕುತರಿಗೆ ಕರುಣದೋರದೆ ಇರುವೆ ವೆಂಕಟ ಅ.ಪ. ಅಜಭವಾದಿಗಳು ಸ್ತುತಿಸಿ ಪೂಜಿಸಿದ ಪಾದ ತ್ರಿಜಗವಂದಿತ ಕೃಷ್ಣ ನಿನ್ನಪಾದ ಭಜನೆಯನು ಮಾಡುತ ನಿನ್ನ ತ್ಯಜಿಸದನುದಿನ ಸುಜನರೆಲ್ಲರು ಸ್ತುತಿಸಿ ಪಾಡುತಿರೇ ತ್ರಿಜಗ ಪೂಜಿತನಾಗಿ ಭಕುತರ ಭಜನೆ ನಿನಗರಿವಿಲ್ಲೇ ದೇವನೆ ಸ್ವಜನರನು ಪಾಲಿಸುವ ಬಿರುದನು ತ್ಯಜಿಸುವರೆ ಸಿರಿಯರಸ ವೆಂಕಟ 1 ಮಚ್ಛಕೂರ್ಮವರಾಹನಾಗಿ ದೈತ್ಯರ ಸ್ವಚ್ಛಭಕುತರ ಸಲಹೆ ಸಂಹರಿಸಿ ಅಚ್ಛಪ್ರಲ್ಹಾದನಿಗೊಲಿದ ನರಹರಿಯಾಗಿ ಅಚ್ಛವಾಮನನಾಗಿ ಬಲಿಯತಲೆಯತುಳಿದು ಸ್ವಚ್ಛಗಂಗೆಯ ಇಂಬಿಡದೇ ದುಷ್ಟ ರಾಜರನಳಿದ ಭಾರ್ಗವ ದುಷ್ಟ ತಾಟಕಿ ಸಂಹರಿಸಿದನೆ ಕೃಷ್ಣರೂಪದಿ ಗೋಪೆರಿಗ್ವಲಿದನೆ ಉತ್ಕøಷ್ಟ ಬೌದ್ಧ ಕಲ್ಕಿ ವೆಂಕಟ 2 ಪರಮಪುರುಷ ಬಾ ವರದ ಮೂರುತಿ ಬಾ ಪರಿಪರಿ ಸ್ತುತಿಸಿ ವಂದಿಪೆ ಸಿರಿವರದ ಬಾ ಶರಧಿಶಯನ ನಿನ್ನ ಚರಣ ಸ್ಮರಣೆಯೀಯೆ ಶರಣಾಗತ ರಕ್ಷಾಮಣಿ ಬೇಗ ಬಾ ಸಿರಿಗೆ ಪೇಳದೆ ಬಂದು ಕರಿಯ ಪೊರೆದ ದೊರೆ ಶ್ರೀ ಶ್ರೀನಿವಾಸ ಬಾ ಗರುಡ ಗಮನನೆ ಶರಣಜನರನು ಮರೆಯದಲಿ ನೀ ಕರುಣ ವೆಂಕಟ 3
--------------
ಸರಸ್ವತಿ ಬಾಯಿ
ಇಂದು ದಯದಿ ಸಂದರ್ಶನವಿತ್ತೆಯಾ ಇಂದಿರಾಧವಾ ದೇವಾ ಪ ಸುಂದರಾಂಗ ರಂಗ ಮುಂದೆ ಬಂದುನಿಂದೆ ಬೆಳಕಿನೊಳ್ ನಭದೆ ಅ.ಪ ವಿಭವದಿರ ರಥದಿ ಹಿತದಿ ಶುಭದ ಶ್ರೀಭೂನೀಳಾಸಹಿತ ಆಭಯವ ನೀಯುತಾ ನಾಥಾ 1 ಭಕ್ತ ಬೃಂದ ಗೈವ ಸೇವೆಯಾ ಸಕ್ತಿಯಂ ಪಡೆದು ದೃಢದಿ ನಿತ್ಯಗಾರುಡ ಸೂರ್ಯಮಂಡಲ ಡೊಲೊತ್ಸವದಿ2 ಮುದಗೆರೆರಂಗ ವೊರಿದಗೆನಗೆ ಮಹಿಮೆತೋರುತಾ ನಿರುತ ಪೊರೆವುದು ಜಾಜೀನಾಥ 3
--------------
ಶಾಮಶರ್ಮರು
ಇಂದು ಧರಿಯೊಳು ಬ್ರಹ್ಮಾನಂದವನು ತುಂಬಿ ತುಳುಕತಿಹ್ಯಾನಂದಮಯ ಕಾಯದೊಳು ಕೌತುಕವು ನಾದಬಿಂದು ಕಳಿಯಲಿ ಸ್ತುತಿಸಲೆನ್ನಳವಲ್ಲ ಕ್ಷಿತಿಯೊಳು ಘನಮಹಿಮೆ ಅತಿಹರುಷವನು ದೋರುತಿಹ್ಯ ಸದ್ಗತಿ ಸುಖವು ಗುರುದಾಸರು 1 ಓಂಕಾರ ಮೊದಲಾದ ಶ್ರುತಿವೇದ ಘೋಷಗಳು ಧಿಮಿಧಿಮಿಸುವ ಮಹಾಶಬ್ದಗಳು ವಾದ್ಯಗಳು ಕೇಳುವದು ನೀದೃಶ್ಯೆಲಿ ಗರ್ಜಿಸುವ ಭೃಂಗಿಶಂಖನಾದ ಧ್ವನಿಯಗಳು ಭೋರಿಡುವ ಭೇರಿ ಮೃದಂಗ ವೇಣಿಯಗಳು ಚಿಣಿ ಚಿಣಿ ತಂತ್ರ ಮೊದಲಾದ ಸಂಕಾರಗಳು ಕೇಳಿ ಪಾವನವಾದೆನು 2 ಬೆರೆದು ನೋಡಲು ಅಂತರಾತ್ಮದೊಳು ಪ್ರಭೆಯಗಳು ಥಳಥಳಿಸುವಾ ಮಹಾತೇಜಗಳು ಪುಂಜಗಳು ಹೇಳಲಿನ್ನೇನದ ಹೊಳವಗಳು ಸುಳವಗಳು ನೋಡುವದು ಅನಿಮಿಷದಲಿ ರವಿ ಶಶಿ ತಾರೆಗಳು ಸೂಸುತಿಹ್ಯ ಕಿರಣಗಳು ಭಾಸಿಸುವ ನಾನಾವರ್ಣಗಳು ಛಾಯಗಳು ಬೆರಗಾದೆÀನಿಂದ 3 ವರ್ತಿಸುತ್ತಲಿಹ ಪ್ರವೃತ್ತಿ ನಿವೃತ್ತಿಗಳು ಅಂತರಾತ್ಮದ ವಾಯುಸ್ತುತಿಯಗಳು ಗತಿಯಗಳು ತಿಳಿವದೀ ಪ್ರಣಮ್ಯಲಿ ಸೂಸುತಿಹ ಶ್ವಾಸವುಚ್ಛ್ವಾಸನಿಯ ಭಾಸಿಗಳು ಶೋಭಿಸುವ ಜೀವನದ ಮಂತ್ರ ಸರ ಮಾಲೆಗಳು ಪಾವನವಾದೆನು 4 ಕರದ್ವಯಂ ಮುಗಿದು ವರಗುರುಚರಣಕಮಲಕಿ ನ್ನೆರಗಿ ಪರಮಾನಂದ ಹರುಷದಿ ಶಿರಸದಿ ಶ್ರೀಗುರುಮೂರ್ತಿಯ ನೆನೆವೆನು ಸದ್ಭಾವದಿಂದ ಸದ್ಗುರು ಪಾದಮಂಪಿಡಿದು ಸದ್ಬ್ರಹ್ಮರಸದೊಳು ಮುಳುಗಿ ಸದ್ಭಕ್ತಿಯಲಿ ಸದ್ಗತಿ ಸಾಧನವು ಸಾಧಿಸಿಹ್ಯ ಮಹಿಪತಿಯು ] ಶ್ರೀ ಗುರುಕೃಪೆಯಲಿನ್ನು 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಇಂದು ನಂದ ಕಂದ ಮುಕ್ಕುಂದನಾ| ಬಂದು ವದಗಿಹ ಬಹಳ ಪುಣ್ಯದಿ ಛಂದವಾಯಿತು ಚಲುವನಂಘ್ರಿಯ ಪ ಬಲಿಗೆ ಭೂಮಿಯ ಬೇಡಿ ಹೆಜ್ಜೆಯಾ| ಅಳತೆಯರಡಲಿ ಅಡಗಿಸಿ| ನಳಿನ ಜಾಂಡಕ ಸಖವ ಸೋಂಕಿಸಿ| ಸುರನದಿ ಪಡೆದ ನಂಘ್ರಿಯಾ 1 ಶಿಲೆಯು ಆಗಿರೆ ಶಾಪದಲಿ ಸೋಂ| ಕಲು ನಿಜಾಂಗದ ಕಾಣಿಸಿ| ನಲಿದು ಕಾಳೀಂದಿಯೊಳುರುಗನಾ| ತಲೆಯಳಾಟದಿ ತುಳಿದ ನಂಘ್ರಿಯಾ 2 ಮುನಿಜನ ಹೃದಯ ಮನೆಯ ದೀಪವು| ಯನಿಪ ಶ್ರೀದೇವಿ ಯರಸನಾ| ಮನದಿಗುರುವರ ಮಹಿಪತಿ ಪ್ರಭು| ನೆನೆವವರೊಳಗೆ ನೆಲೆಸಿಹನ ಪದ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಇಂದು ನಿನ್ನ ಪಾದಕಮಲವಾ | ಪೊಂದಿದೆ ದೇವಾ ಪ ಪುರಂದರಾನುಜ | ಸಿಂಧೂರ ವರಪೋಷಕ ಸುರ ವಿನುತ ಇಂದಿರೇಶಾ ಅ.ಪ ಪಿತನೆ ನಿನ್ನ ಒಮ್ಮೆ ನೆನೆಯದೆ | ಮತಿಹೀನನಾಗಿ ಸ್ಮøತಿ ಪುರಾಣ ಕಥೆಯ ಕೇಳದೆ | ವಿತತ ಮಹಿಮ ಪತಿತ ನಾನಾದೆ ಅತಿವೇಗದಿ ಎನ್ನನು ನೀ ಹಿತದಿ ಪಾಲಿಸು ಕ್ಷಿತಿಜೇಶನೆ 1 ವಿಧಿಸುರೇಂದ್ರವಂದ್ಯ ನಗಧರ ಬಿಡದೆ ಸಲಹೊ ಮದನವಿತ ನೀನಧಮ ದೈತ್ಯರ ಮದವಳಿದು ಮುದದಿ ಒದಗಿದ ಸುಧೆಯನು ಸುರರಿಗೆ ನೀ ದಯದಿಕ್ಕಿದ ಪದುಮನಯನಾ 2 ಸಿಂಧುಶಯನ ಶಾಮಸುಂದರ ವಂದಿಸುವೆ ಕಂದುಗೊರಳ ಸಖ ಶ್ರೀಮನೋಹರ ಕಂದನೆಂದೀಮಂದಭಾಗ್ಯನ ತಂದೆಯ ಮರೆಯದೆ ನೀ ಚಂದದೀ ಪೊರೆ ದಶಕಂಧರಾರಿ 3
--------------
ಶಾಮಸುಂದರ ವಿಠಲ
ಇಂದು ನೋಡುವ ಇಂದಿರಾಪತಿ ಶ್ರೀಪಾದವ ಎಂದೆಂದು ಬಿಡದೆ ಮನದಲಿ ತಂದೆ ಮುಕುಂದನ ಹೊಂದಿ ಭಜಿಸುವ ಧ್ರುವ ಭಾವಭಕುತಿಗಳ ವಿಡಿವ ಭವಬಂಧನದ ಪಾಶ ಕಡಿವ ದಿವಾರಾತ್ರಿಯಲಿ ಹರುಷಬಡುವ ಕಾವಕರುಣನ ಕೃಪೆಯ ಪಡೆವ 1 ಮನಕರಗಿ ಮೈಯ್ಯಮರೆವ ಘನಸುಖದ ಸುಸ್ಮರಣಿಯಲಿರುವ ಆನಂದಮಯಸ್ವರೂಪದಿ ಬೆರೆಯುವ ತನುಮನವು ಶ್ರೀಹರಿ ಗೊಪ್ಪಿಸುವ 2 ಎರಗಿ ಏಕವಾಗಿ ನೊಡುವ ಹರಿಚರಣದಿ ಬೆರೆದು ಕೊಡುವ ಪರಮಗತಿ ಸಾಯೋಜ್ಯಪಡುವ ಧರೆಯೊಳು ನಲಿ ನಲಿದಾಡುವ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಇಂದು ಬನ್ನಿ ಇಂದಿರೇಶಾ ಇಂದುವಾರದಲಿ ಬಲು | ಅಂದದಿಂದ ಮೆರೆವನಂದವ ನೋಡಾ ಪ ಮುತ್ತಿನ ಕಿರೀಟ ಮೇಲೆ ಸುತ್ತಿದ ಲತೆ ತಳಲು | ರತ್ನಗಂಬಳಿ ಕಲ್ಲಿಯ ಬುತ್ತಿ ಪೆಗಲೂ || ತೂತ್ತುತೂರಿ ಎಂದು ಸ್ವರ | ವೆತ್ತಿ ಊದುವ ಕೊಳಲು | ಉತ್ತಮ ಶೋಕ್ಲವನು ಮೆರೆಯುತ್ತಲಿಪ್ಪುದು 1 ಉಂಗುರಗೂದಲು ಪುಬ್ಬು ಸಿಂಗಾಡಿ ಅಂದದಿ ಒಪ್ಪೆ | ಅಂಗಾರ ಕಂಕಣ ಮಂಗಳಾಂಗ ನಿಸ್ಸಂಗ | ರಂಗ ತುಂಗ ಮಹಿಮ ತಾರಂಗ ಅಂಗುಲಿಲಿ ರತ್ನ | ದುಂಗುರವ ಯಿಟ್ಟ ಸುಖಂಗಳ ನೋಡಾ 2 ಉಂಗುರವ ನಡು ಮೇಲು ಕಂಗಳ ಕುಡಿನೋಟ | ಗೋಪಾಂಗನೇರ ಮನಕೆ ಮೋಹಂಗಳ ತೋರೆ | ಅಂಗಜನ್ನೆನೆಸಿ ತಾಪಂಗಳು ವೆಗ್ಗಳದಿಂದ | ಹಂಗೀಗರಾಗೆ ನಗುವ ಗಂಗಾಜನಕ 3 ಲೋಕ ಬೆಲೆಗೊಂಬ ಅಲೌಕೀಕ ಮಣಿನಾಸದಲ್ಲಿ | ರಾಕಾಬ್ಜಾನಂದದಿ ಮೊಗಾನೇಕ ಲೋಕೇಳಾ | ನಿತ್ಯ ಬೇಕೆಂದು ಜಪಿಸಲು ದೊರಕದ ದೊಂಬಲು ಬಾ ಯದುಕುಲಾಂಬರಾ4 ಕುಂಡಲ ಕರ್ಣ ಶ್ರೀಗಂಧ ಪೂಸಿದ ವಕ್ಷ | ಪೂಗೊಂಚಲು ಸಣ್ಣನಾಮ ಆ ಗೆಜ್ಜೆಧ್ವನಿ | ಆಗಮನ ಸೋಲಿಸೆ ನಾನಾ ಭೋಗಾದಲ್ಲಿಯಿಪ್ಪ | ಮಧ್ವ | ಯೋಗಿಪ್ರಿಯಾ ವಿಜಯವಿಠ್ಠಲಾ ಗುಣನಿಧಿ 5
--------------
ವಿಜಯದಾಸ
ಇಂದು ಭಾಗ ಹರಿ ವಿಠಲ | ಪೊರೆಯ ಬೇಕಿವಳಾ ಪ ನೊಂದಿಹಳೊ ಬಹುವಾಗಿ | ಹೇಸಿ ಸಂಸ್ಕøತಿಲೀ ಅ.ಪ. ವಿನುತ | ಪರಿಪರಿಯ ಶಾಸ್ತ್ರಗಳುವರಲುತಿದೆ ಶ್ರೀಹರಿಯೆ | ಮೊರೆ ಕೇಳದೇನೋತರುಣಿ ದ್ರೌಪದಿವರದ | ಕರಿವರದ ನೀನೆಂದುಮರಳಿಮಹಪಾಪಿ ಆ | ಅಜಾಮಿಳವರದಾ 1 ಉಸಿರಿದ್ದು ಭಾರವನು | ಹೊರುಎಂದು ಪೇಳ್ಬಹುದುಉಸಿರಳಿವ ಪರಿಮಾಡೆ | ಮೊರೆ ಆವನಿಡುವಾಬಸಿರಿನಿಂ ಬಂದಂಥ | ಶಿಶುಗಳೆಲ್ಲವೂ ಪೋಗಿಯಶವ ವರ ಮೆರೆಸಲ್ಕೆ | ಹಸುಮಗನಸಲಹೋ 2 ಸಂಸಾರ ಕ್ಲೇಶಗಳ | ಶಿಂಸಿಸಲು ಅಳಿವಲ್ಲಕಂಸಾರಿ ನಾವಾಗಿ | ಪೊರೆಯ ಬೇಕಿವಳಾವಂಶ ಉದ್ದರಿಸೆ ಪದ | ಪಾಂಸು ಬೇಡ್ವಳೊ ನಿನ್ನಸಂಶಯವು ಯಾಕಿನ್ನು | ಕರುಣಿಸೋ ಹರಿಯೆ 3 ಸುಜನ | ತಂದೆ ಕೈಪಿಡಿಯೋ 4 ಜ್ಞಾನ ಸದ್ಭಕುತಿ ವೈ | ರಾಗ್ಯ ಕೊಟ್ಟವಳೀಗೆಕಾಣಿಸೋ ಸದ್ಗತಿಯ | ಕಾರುಣ್ಯ ಮೂರ್ತೇಏನೊಂದು ಅನ್ಯವನು | ನಾನು ಬೇಡುವುದಿಲ್ಲಜಾಣಗುರು ಗೋವಿಂದ | ವಿಠಲಾ ಪೊರೆ ಇವಳಾ 5
--------------
ಗುರುಗೋವಿಂದವಿಠಲರು
ಇಂದು ಭಾಸ್ಕರ ಪುಣ್ಯ ಪ್ರಭೆಯ ಕೂಡಿ ಧ್ರುವ ಪುಣ್ಯ ಎದುರಿಟ್ಟು ಬಂದು ಮುಂದೆ ಕಣ್ಣಾರೆ ಕಂಡು ತ್ರಾಹಿ ಎಂದೆ ಸಣ್ಣ ದೊಡ್ಡದರೊಳು ವಸ್ತು ಒಂದೆ ಬಣ್ಣ ಬಣ್ಣಾ ಗೀಹ್ಯದರಿಂದೆ 1 ಹೇಳಬಾರದಯ್ಯ ನಿಜವರ್ಮ ಕೇಳಿ ಶ್ರೀಸದ್ಗುರು ಪಾದಧರ್ಮ ಅಳಿಯಿತು ನೋಡಿ ಪೂರ್ವ ಕರ್ಮ ಹೊಳಿಯಿತೆನ್ನೊಳು ಘನ ಬ್ರಹ್ಮ 2 ಸೋಹ್ಯ ದೋರಿ ಕೊಟ್ಟೆನಗಿಂದು ಮಹಿಪತಿಸ್ವಾಮಿ ತಾನೆ ಬಂದು ಈಹ್ಯಪರ ಪೂರ್ಣ ಕೃಪಾಸಿಂಧು ಸಾಹ್ಯ ಮಾಡುತೀಹ್ಯ ದೀನ ಬಂಧು 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಇದು ಮುಖ್ಯಸಾರ ಮನುಜರಿಗೆ ಪ ಇದು ಮುಖ್ಯಸಾರವೆಂದೊದರುತಿಹುದು ವೇದ ಸದುಮಲಾತ್ಮಕನಾದ ಪದುಮಾಕ್ಷನಲಿ ಭಕ್ತಿ ಅ.ಪ ಕೇಳಿಪೇಳುತಮನದಿ ತಾಳಿ ಸೇವಿಸಿ ಪೂಜಿ- ಸೋಲಾಡುತೊಂದಿಸಿ ಕಾಲವ ಕಳೆಯುವ 1 ದಾಸ್ಯಸಖ್ಯಾತ್ಮನಿವೇದನಗಳಿಂದ ಆ- ಲಸ್ಯವಿಲ್ಲದೆ ಪರಮಾತ್ಮನ ತಿಳಿಯುವ 2 ತೃಟಿಕಾಲವಾದರು ನಟಿಸದೆ ಮಾಯದಿಹಟದಿ ಶ್ರೀಗುರುರಾಮವಿಠಲನ ಭಜಿಸುವ 3
--------------
ಗುರುರಾಮವಿಠಲ