ಒಟ್ಟು 19041 ಕಡೆಗಳಲ್ಲಿ , 136 ದಾಸರು , 7982 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಶ್ರೀಯದುಕುಲತಿಲಕ ದೇವ ಕಾಯಬೇಕು ನೀ ಕರುಣಾವಾಲ ಪ ಶ್ರೀಯಶೋಧೆಯಮಾಯೆಯತನಯ ರಾಯನೆ ದಯೆದೋರು ಅ.ಪ ದೇವಕೀವಸುದೇವ ಜಾತ ನೀ ವಿನೋದದೆ ನಂದನೊಳಿರುತ ಆವ ಪೂತನಿಶಕಟರಸುವದೇವಹರಿಸಿದೆಭಕ್ತಭಯಹರಶ್ರೀ ಗೋವಕಾಯ್ದ ಗೋವಿಂದ ವಿಧಿಪುರಂದರಾದಿವಂದ್ಯ ಪಾವನ ಯಮನಾನಂದ ಫಣಿತರ ಫಣಿಯೊಳುನಿಂದ 1 ನಳಿನನಾಭಗೋಪಾಲ ಪುಳಿನ ಕ್ರೀಡೆಯಾಡಿಬಾಲ ರೊಳಗೆ ಮೇಲೆನಿಪ ಸುಶೀಲ ತುಳಿದೆ ಬಕ ಆಘಪ್ರಲಂಬಾದಿ ದೈತ್ಯಜಾಲ ಕಳವಳಗೊಳ್ಳುತ ಸೆರೆಯೊಳ್ ಬಳಲುವ ವನಿತಾಜನದೊಳ್ ಒಲಿಯುತ್ತಲಿ ನರಕಾಸುರ ಶಿರವರದಿನೆ ದುರಿತಶಯನ 2 ಬೃಂದಾವನ ಸಂಚಾರ ಬೆಳ್ದಿಂಗಳೊಳು ಗೋಪಿಯರ ಬಂಧುರ ವೇಣುಗಾನತೋರಿ ಹೊಂದುತಾನಂದ ನಿಧಿ ತೋರಿದ ಪರಾತ್ಪರ ತಂದೆ ತಾಯ್ಗಳ ಪೊರೆಯುತ ನಿಂದು ಕಂಸನಕೊಂದು ಅಪ್ರಮೇಯ ಜಾಜೀಶ್ವರ 3
--------------
ಶಾಮಶರ್ಮರು
ಶ್ರೀರಂಗ ರಂಗನಾಥ ಎನ್ನ ಕಣ್ಗಾಳೆದುರು ನಿಂತಿದಂತಿದೆ ಪ ವಜ್ರಮಾಣಿಕದ ಕಿರೀಟವನಿಟ್ಟು ಪ್ರಜ್ಜಲಿಸುವ ಹಣೆಯ ಕಸ್ತೂರಿಬಟ್ಟು ವಜ್ರದ ಕರ್ಣಕುಂಡಲ ಅಳವಟ್ಟು ಸಾಜದ ಅಧರಚಂದವಿನ್ನೆಷ್ಟು 1 ಕಬ್ಬುಬಿಲ್ಲನು ಪೋಲ್ವ ಪುಬ್ಬಿನ ಚಂದ ಅಬ್ಜದಂತೆಸೆವಾ ನಯನದಾನಂದ ಕುಸುಮವ ಪೋಲುವ ನಾಸಿಕದಂದ ಕದಪು ಹೊಳೆಯುತ್ತ ಬಂದ 2 ಕಂಠದೊಳಗೆ ಇಟ್ಟ ಕೌಸ್ತುಭಮಣಿಯು ಎಂಟು ಪದಕಗಳನಳವಡಿಸಿದ ಅಣಿಯು ಗಂಟೆ ಗೆಜ್ಜೆವುಡಿದಾರದ ಫಣಿಯು ಸಂಧ್ಯರಾಗವ ಪೋಲ್ವ ಪೀತಾಂಬರದಣಿಯು 3 ಶಂಖಚಕ್ರವು ಗದೆ ಆಭಯಹಸ್ತಗಳು ಪಂಕಜಮುಖಿ ಇರುವ ವಕ್ಷಸ್ಥಳವು ಶಂಕರನಪಿತನ ಪಡೆದ ನಾಭಿದಳವು ಶಂಕೆ ಇಲ್ಲದ ಕಣಕಾಲಿನ ಹೊಳವು 4 ಅಂದುಗೆ ಗೆಜ್ಜೆಗಳ ಚಂದದಿಂದಿಟ್ಟು ಕುಂದಣದ ಪಾಡಗವನಳವಟ್ಟು ಚಂದದಿಂ ವಜ್ರದಾವುಗೆಯ ಮೆಟ್ಟು ತ [ಬಂದ] ಗಂಗೆ ಪಡೆದನಖಾಪಂಕ್ತಿಗಳೆಷ್ಟು5 ವಜ್ರಾಂಕುಶ ಧ್ವಜರೇಖೆಗಳಿಂದ ಪದ್ಮಪಾದದ ಕೆಂಪುಗಳು ಬಹುಚಂದ ಹೊದ್ದಿದ ಭಕ್ತರ ಪಾಪವನೆಲ್ಲ ಒದ್ದು ಮುಕ್ತಿಯನೀವ ಮುದ್ದು ಶ್ರೀ ವೆಂಕಟಕೃಷ್ಣ 6
--------------
ಯದುಗಿರಿಯಮ್ಮ
ಶ್ರೀರಂಗನಾಥ ನಂಬಿದೇ ನಿನ್ನ ನಾನೇ ಅನಾಥ ಪ ಅನಾಥರಕ್ಷಕ ಎನ್ನಾ ಪ್ರೀತಿಯಿಂದಲೆ ಕಾಯೊ ಲೋ ಕನಾಥನೆಂದು ಬಂದು ನಂಬಿದೆ ನಿನ್ನ ಅ.ಪ ನಿಮ್ಮ ರಘುಪತಿ ನಿಮ್ಮ ವಿಭೀಷಣಗೆ ಕೊಡಲು ತಾಮುನ್ನಾ ಶ್ರೀರಂಗಕ್ಷೇತ್ರದಿ ನೆಲಸಿ ಸಂತೋಷದಿ ಧರ್ಮವರ್ಮಾದಿ ಚೋಳೇಂದ್ರ ಪೂಜಿತಪಾದ 1 ಕಂದ ಪ್ರಹ್ಲಾದ ಕರೆಯೆ ಕಂಬದಿಂದಲೆ ಬೇಗ ಬಂದು ಅವನ ತಂದೆಯನು ಸಂಹರಿಸಿದೆ ಕಂದನ ಕಾಯ್ದ ಗೋವಿಂದ ರಕ್ಷಿಸೊ ಎನ್ನ 2 ಅಜಮಿಳ ಕರೆಯೆ ಆಪತ್ತಿಗೆ ಬಂದು ನೀನೊದಗೆ ನಿಜಸ್ಮರಣೆ ಮಾತ್ರದಲವನ ದುರಿತವೆಲ್ಲವ ಕಳೆದು ನಿಜ ಪಾದವನಿತ್ತೆ ಕರುಣದಿಂದಲೆ ರಂಗ 3 ಕಂದ ಧ್ರುವ ತಾನು ಅಡವಿಯಲಿ ನಿಂತು ತಪವನು ಚಂದದಿ ಮಾಡಲು ಬಂದು ಸೇವೆಯನಿತ್ತೆ ಆ ನಂದಪದವನಿತ್ತ ಸುಂದರಾಯನೆ ನೀನು 4 ಅರ್ಕಸುತನಾಗ ನಿಮ್ಮನ್ನು ಸೇರಿ ಸೌಖ್ಯವ ಬೇಗ ಮಾಡೆ ಸೊಕ್ಕಿದ ವಾಲಿಯನೊಂದು ಬಾಣದಿಂ ಕೊಂದು ಮರ್ಕಟಗೆ ರಾಜ್ಯವನಿತ್ತ ರಂಗಯ್ಯ ನೀನು5 ಮಕರಿ ಕಾಲ್ಪಿಡಿಯೆ ಮತಂಗಜ ನಿಮ್ಮನು ಕರೆಯೆ ನಕ್ರವ ಕೊಂದು ಚಕ್ರದಿ ಅತಿವೇಗದಿಂ ಕರಿಯ ರಕ್ಷಿಸೆ ಬಂದೆ ಕರುಣದಿಂದೆ 6 ಭವಕೆ ನಾ ಬೆದರಿ ಬಂದೆನೊರಂಗ ಕಾಯೋ ನೀ ಭವದಿ ಈಶಣತ್ರಯವನ್ನು ಬಿಡಿಸಿ ನಿನ್ನಯ ಪಾ ದವಾಸವ ಮಾಡಿಸೊ ವಾಸುಕಿಶಯನನೆ 7 ಆರುಜನ ಕಳ್ಳರು ಎನ್ನಲಿ ಸೇರಿ ಬಾಧಿಸುತಿಹರು ದೂರಮಾಡವರನ್ನು ಸೇರಿಹೃದಯದಲ್ಲಿ ಶ್ರೀನಿವಾಸನೆ ನಿಮ್ಮ ಪಾದದೊಳಿರಿಸೆನ್ನ 8
--------------
ಯದುಗಿರಿಯಮ್ಮ
ಶ್ರೀರಂಗನಾಥನ ಸೇವೆಯ ಮಾಡಿರೈ ಸದಾ ಪ ಅಡಿಗಳ ಭಜಿಪರ ಎಡರು ಕಳೆವುದಕೆ ವಡವಾಟಲಿ ತಾ ಬಿಡದೆ ನೆಲೆಸಿಹನ 1 ಶರಣುಪೊಕ್ಕವರ | ಕರುಣದಿಂದ ಲಘು | ಹರಣಗೈವ ರಥ | ಚರಣಧಾರಿ ಪದ 2 ಕಷ್ಟ ಕಳೆದು ಸುಖ | ಕೊಟ್ಟು ಪೊರೆವ ಹರಿ 3 ಪ್ರಥಮಮಾಸದಲಿ | ಶಿತ ಸುಪಕ್ಷದಲಿ ತಿಥಿ ದಶಮಿಯಲಿ | ರಥವೇರಿ ಬರುವಹರಿ 4 ನೇಮದಿ ತನ್ನಯ | ನಾಮಧ್ಯಾನಿಪರ ಕಾಮಿತಗರೆಯುವ | ಶಾಮಸುಂದರ 5
--------------
ಶಾಮಸುಂದರ ವಿಠಲ
ಶ್ರೀರಂಗಪುರದೊಳ್ ಮೆರೆವ ಗಂಗಾಪಿತಗೆ ಮಂಗಳಂ ಶ್ರೀರಂಗನಾಯಕಿ ಮನೊಹರಂಗೆ ಮಂಗಳಂ ಪ. ವರದೆಕಾವೇರಿ ಸುತ್ತುವರಿಸಿ ಮೆರೆಯಲು ಉರಗತಲ್ಪದಿ ಶಿರಕೆ ಬಲದಕರವೆÀ ದಿಂಬಿರಲ್1 ಚರಣತಲದಿ ಮೆರೆಯೆ ಸಿರಿಯು ಧರೆಯು ಕುಳ್ಳಿರೆ ಪರಮಭಾಗವತರು ಮುಂದೆ ನೆರೆದು ನಿಂದಿರೆ 2 ಇಕ್ಕೆಲದಿ ಮೆರೆವ ಗಂಗಾ ಗೌರಿ ಅಕ್ಕತಂಗಿಯರ್ ನಕ್ಕುನಲಿವನೊಂದೆಡೆ ಮುಕ್ಕಣ್ಣ ಸನಿಯದಿ 3 ಆರ್ತಜನರ ಪೊರೆವನೆಂಬ ಕೀರ್ತಿಗೊಂಡಿಹ ಕರ್ತೃನೃಹರಿ ತನ್ನರಸಿಯೊಡನೆ ಇತ್ತ ಮೆರೆಯುವ 4 ಉಭಯಕಾವೇರಿ ಮಧ್ಯದಿ ಪ್ರಭುವು ತಾನೆನೆ ವಿಭವದಿಂದ ಮೆರೆವನೀಪರಿ ಪ್ರಭೆಯ ಬೀರುತ 5 ಶರಣಜನರಿಗೆರೆಯ ಶೇಷಗಿರಿಯ ವರದನ ಕರುಣ ಶರಧಿರಂಗಪುರದ ವರದನೆಂಬೆನೆ 6
--------------
ನಂಜನಗೂಡು ತಿರುಮಲಾಂಬಾ
ಶ್ರೀರಂಗಶಾಯಿ ವಿಠಲ ಪೊರೆಯ ಬೇಕಿವಳ ಪ ಭವ ಶರಧಿ ದಾಂಟಿಸುತ ಅ.ಪ. ಕಾರಾಣಾತ್ಮಕ ನಿನ್ನ | ಗುಣರೂಪ ಕ್ರಿಯೆಗಳಧಾರಣೆಗಳಿಲ್ಲದಲೆ | ಧ್ಯಾನರತಳಾಗಿಮೂರಾರು ದ್ವಾರಗಳ | ಬಂಧಿಸುತ ಯೋಗದಲಿಆರಾಧ್ಯ ಮೂರ್ತಿಯನೆ | ಮರೆತ ಯೋಗಿಣಿಯ 1 ತೈಜಸ ಸು | ವ್ಯಕ್ತ ಅಂಕಿತವಾ 2 ತಾರತಮ್ಯ ಜ್ಞಾನ | ಮೂರೆರಡು ಭೇದಗಳಸಾರತತ್ವಗಳರುಹಿ | ಪೊರೆಯ ಬೇಕಿವಳ |ಕಾರುಣಿಕ ಕಂಕಣಾ | ಕಾರ ಚಕ್ರಾಕೃತಿಯತೋರಿರುವೆ ತನ್ಮಹಿಮೆ | ಅರಿಯ ಕಾತುರಳಾ 3 ಸಿರಿ ಸತ್ಯ ನರೆಯಣನೆಪರಿಪರಿಯಲಿಂದಿವಳ | ಪೊರೆಯ ಬೇಕೋಗರುಡಗಮನನೆ ದೇವ | ಸರ್ವಜ್ಞ ನೀನಿರಲುಒರೆವೆನೆಂಬಪರಾಧ | ಮರೆದು ಪಾಲಿಪುದೋ 4 ಅದ್ವೈತ ಉಪದೇಶ | ತಿದ್ದಿನಿನ ಪದದಲ್ಲಿಶುದ್ಧ ಭಕ್ತಿಜ್ಞಾನ | ವೃದ್ಧಿಯನೆ ಗೈಸೀಮಧ್ವಾಂತರಾತ್ಮ ಗುರು | ಗೋವಿಂದ ವಿಠ್ಠಲನೆಅದ್ವಿತೀಯನು ಯೆಂಬ | ಬುದ್ಧಿ ಸ್ಥಿರ ಮಾಡೋ 5
--------------
ಗುರುಗೋವಿಂದವಿಠಲರು
ಶ್ರೀರಂಗೇಶವಿಠಲ | ಪೊರೆಯೆನ್ನ ಹೃದಯಾ- ಧಾರನೆ ಮಾಲೋಲ | ಸ್ಮರಕೋಟಿ ಸುಂದರಾ- ಕಾರ ನತಜನಪಾಲ | ಅರಿಮಸ್ತಕ ಶೂಲ ಪ ಆರು ಅರಿಗಳ ಗೆಲಿಸಿಯೆನ್ನಿಂ- ದಾರು ಎರಡನು ಮುರಿಸಿ ನಿನ್ನೊಳು ಆರು ಮೂರನೆಯಿತ್ತು ಸರ್ವದ ಪಾರುಗೈಯ್ಯಬೇಕೆಂಬೆ ದೇವ ಅ.ಪ. ಆನೆಗೊಂದಿ ನಿವಾಸ | ಭಕುತರ ನಿರಂತರ ಮಾನದಿಂ ಪೊರೆವ ಶ್ರೀಶ | ಎಂದೆಂದಿಗು ನಾನಿನ್ನ ದಾಸರ ದಾಸ | ನೆಂದು ಕರುಣಿಸು ನೀನೆನಗೆ ಲೇಸ | ಭಾನುಕೋಟಿ ಪ್ರಕಾಶ ಮಾನ ಅವಮಾನಗಳು ನಿನ್ನಾ- ಧೀನವೆಂದೇ ನಂಬಿಕೊಂಡಿಹ ದೀನನೆನ್ನನು ದೂರ ನೋಡದೆ ಸಾನುರಾಗದಿ ಪೊರೆವುದೈಯ್ಯಾ ನಳಿನಭವ ಅಂಡದೊಳಗೆ ದಾನಿ ನೀನಲ್ಲದನ್ಯರುಂಟೆ ಏನ ಬೇಡೆನು ನಿನ್ನ ಬಳಿಯಲಿ ಜ್ಞಾನ ಭಕುತಿ ವೈರಾಗ್ಯವಲ್ಲದೆ1 ವರಾಹ ಜನ ತಾಪ | ತ್ರಯ ದೂರ ವಾಮನ ಮಾನವೇಂದ್ರರ ಪ್ರತಾಪ | ವಡಗಿಸಿದೆ ಪ್ರಬಲ ದಾನವೇಂದ್ರನ ಶಾಪ | ನೀನೆ ಕಳೆದೆಯೊ ಶ್ರೀಪಾ ವಾನರ ಬಲ ನೆರಹಿಕೊಂಡು ನೀನು ರಾವಣನನ್ನು ಕೊಂದು ಮಾನಿನಿಯ ಪೊರೆದು ಶರಣಗೆ ನಿ ದಾನ ಮಾಡದೆ ಪಟ್ಟಗಟ್ಟಿದೆ ದಾನವಾಂತಕನೆಂಬ ನಾಮವ- ನ್ಯೂನವಿಲ್ಲದೆ ಪರಸತಿಯರಭಿ ಮಾನ ಕಳುಪಿದ ಜಾಣ ಕಲ್ಕಿಯೆ 2 ಸೂರಿಜನ ಪರಿಪಾಲ ಸದ್ಗುಣಗಣನಿಲಯ ಘೋರರಕ್ಕಸಕಾಲ | ವರಶೇಷತಲ್ಪವ ನೇರಿ ನಿರುಪಮ ಬಾಲ | ನಂದದಿ ನಿರುತ ನೀ ತೋರುತಿರುವೆಯೊ ಲೀಲ | ಶ್ರೀ ರಂಗೇಶವಿಠಲ ಮಾರ ಜನಕನೆ ಮಂಗಳಾಂಗನೆ ಕ್ರೂರ ಕುಲವನದಾವ ಅನಲನೆ ಭೂರಿ ಕರುಣವ ಬೀರಿ ಎನ್ನಸು ಭಾರ ನಿನ್ನದು ವಾರಿಜಾಕ್ಷನೆ ಎನ್ನ ಹೃದಯದಿ ಚಾರು ಬಿಂಬವ ಸಾರಿ ಬೇಡುವೆ ಬಾರಿ ಬಾರಿಗೆ ಶರಧಿ ಬಡಬನೆ3
--------------
ರಂಗೇಶವಿಠಲದಾಸರು
ಶ್ರೀರಘುಪತೇ ನಮೋಸ್ತುತೆ ಚಾರುನೀತಿಯುಕ್ತ ಭೂಪತೇ ಪ ನೀರದಸಮಶರೀರ [ಸಮರ] ರಣ ಧೀರ ಸದಾನಂದಕರ ಭೂಮಿಜಾಪತೇ ಅ.ಪ ಲೋಕಾಭಿರಾಮ ತಾರಕನಾಮ ಧಾಮ 1 ಸಕಲಕಲಾವಿದ ಭಜಕ ಪ್ರೇಮ ಶುಕಶೌನಕ ಮುನಿಸನ್ನುತ ನಾಮ 2 ವಿಕಸಿತ ವದನಾಂಭೋರುಹಲೋಚನ [ಸಖ] ಮಾಂಗಿರೀಶ ಹನುಮಾನತ ನಾಮ 3
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಶ್ರೀರಮಣನೆ ಕಾಯೊ ದಯಮಾಡು ರಂಗಶ್ರೀರಮಣನೆ ಕಾಯೊ ಏ ಕರುಣದಿ ಪ. ನೀರಜಭವಜನಕ ತಾರಿದೆ ಭವದಿಂದ ಏ ಮುರಹರೆಸೇರಿದೆ ನಿನ್ನ ಪದವ ಶ್ರೀರಮಣನೆ ಕಾಯೊ ಅ.ಪ. ಕರುಳ ಸಂಬಂಧವೆಂಬೊ ಎನ್ನ ಕೊರಳಿಗೆಉರುಳುಗಳನೆ ಸಿಲುಕಿ [ಸಿ]ಬರಿದೆ ಮದಗಳೆಂಬ ಈಕರಿಗಳ ಧುರತಗ್ಗದು ಹರಿಯೆ 1 ಅರಿಷಡ್ವರ್ಗವೆಂಬ ಈ ಮಹಾಉರಗಭಯಕೆ ಸಿಲುಕಿಬರಿದೆ ಮದಗಳೆಂಬ ಈ ಕರಿಗಳ ಧುರತಗ್ಗದು ಹರಿಯೆ 2 ಬಲುದುರ್ವಿಷಯಂಗಳ ಈ ಬಲೆಗಳಸಾಲಿಗೆ ಒಳಗಾದೆಕಲಾವತಿ ಜನರೆಂಬ ಈಖಳರ ಒಳಬಿದ್ದೆನೊ ಹರಿಯೆ3 ಜರೆನರೆಗಳು ಬಂದು ಇರುವಾಗಪರಸತಿಯರ ಕಾಟನರನಾಯಿಗಳಂತೆ ಈ-ಪರಿ ನೆರೆಹೊರೆಗಳ ಕೂಟ 4 ದಯವಿಲ್ಲದ ಸತಿಯು ಈ ದುರುಳರುನಯಹೀನರು ಸುತರುಭಯದಿಂದಲಿ ನೊಂದೆದಯಾಂಬುಧೇ ಹಯವದನ ನೀ ಬಂಧು 5
--------------
ವಾದಿರಾಜ
ಶ್ರೀರಮಣಿ ದಯದೋರು ಬ್ರಹ್ಮ ಸಮೀರಜನ ನೀ ಬೇಗ ಮೂರುತಾಪದ ದೂರಗೈಸಿ ಸರೋರುಹಾಕ್ಷನ ಸಾರಗೈಸುತ ಪ. ಶ್ರೀನಿವಾಸನ ಸರ್ವಸೇವೆಯ ತಾನೆ ಮಾಳ್ಪೆನೆಂದು ಭಾನುಕೋಟಿ ಸಮಾನಭಾಸ ವಿಮಾನವಾಗಿ ನಿಂದು ಮಹಾನಭೀಯ ಸಮಸ್ತ ವಸ್ತು ವಿ- ಧಾನರೂಪಿಣಿಯಾಗಿ ಭಕ್ತಜನಾನುವರ್ತಿಯ ಭಾವ ಗ್ರಹಿಸಿದ 1 ಹಾರಕಟಕ ಕಿರೀಟವರ ಕೇಯೂರ ಬಾಹುಪುರಿಯು ಚಾರುತರ ಗಂಭೀರರವ ಶೃಂಗಾರದ ನೂಪುರವ ಮಾರನೈಯ್ಯನ ಮುದ್ದು ಹಸ್ತದಿ ವಾನೈಜಾರಿಗದಾಬ್ಜರೂಪದಿ ಸೇರಿ ಶೋಭಿಪ ಶಕ್ತಿ ನಿನ್ನ ಪದಾರವಿಂದವ ನಂಬಿ ನಮಿಪೆನು 2 ಕುಂದ ನೋಡದಿಂದೂ ಹರಿ ಚಂದನಾತ್ಮಕ ವೆಂಕಟೇಶನು ಬಂದಿಲ್ಲಿಹನೆಂದು ಮುನಿಜನವೆಂದ ಮಹಿಮೆಯ ನಿಂದು ತೋರುತ ಸನ್ನಿಹಿತಳಾಗೆಂದು ಚರಣದ್ವಂದ್ವ ಪೊಗಳುವೆ 3 ,
--------------
ತುಪಾಕಿ ವೆಂಕಟರಮಣಾಚಾರ್ಯ
ಶ್ರೀರಮಣೀಮಣಿ ಬಾರೌ ಶ್ರೀಕರಮಣಿಪೀಠಕೆ ಪ. ಸಾರಸದಳನಯನೆ ಸುಗುಣಾಭರಣೆ ಸಾರಸಭವವಂದಿತಚರಣೆ ಕ್ಷೀರಸಾಗರನಂದನೇ ವರ ಕಾರುಣ್ಯಾಮೃತಪೂರಿತ ವದನೆ 1 ಪವನಾತ್ಮಜಸಂಸೇವಿತಾಂಘ್ರಿಯುಗಳೇ ಪಾಲಿತಾಮರ ಜಾಲೇ ಪಾವನಗುಣಶೀಲೇ ಶಶಾಂಕನಿಭಫಾಲೇ ಪಾಲಿಸುನೀಂ ಪಂಕಜಸುಮಮಾಲೆ 2 ಕೇಶವಹೃದಯನಿವಾಸಿನೀ ಪದ್ಮಾಸಿನೀ ಕ್ಲೇಶ ನಿವಾರಿಣಿ ಭುವನೈಕ ಜನನಿ ಕಾಂಕ್ಷಿತಾರ್ಥ ಪ್ರದಾಯಿನಿ 3
--------------
ನಂಜನಗೂಡು ತಿರುಮಲಾಂಬಾ
ಶ್ರೀರಮಾಧವಾಶ್ರೀತಜನಪಾಲಿತ ಮಾರಕೋಟಿರೂಪ ವಾರಿಧಿಶಯನ ಮುರಾರಿ ಕೇಶವ ಶ್ರೀಮ- ನ್ನಾರಾಯಣ ನೀರಜದಳಲೋಚನಪ. ಮಾನುಷತ್ವವಾಂತ ಸಮಯದಿ ಹೀನ ಭೋಗದ ಚಿಂತೆ ನಾನು ನೀನೆಂಬಾಭಿಮಾನದಿ ಮನಸು ನಿ- ಧಾನವಿಲ್ಲದೆ ಅನುಮಾನದಿಂದಿಹುದೈ ಏನು ಕಾರಣ ಹೃದಯನಳಿದೊಳು ನೀನೆ ನೆಲಸಿಕೊಂಡೀ ನರಯೋನಿಗೆ ನೀನೆ ಬರಿಸಿಯವಮಾನ ಬಡಿಸುವದು ಊನವಲ್ಲವೆ ಪದದಾಣೆ ಸತ್ಯವಿದು1 ಬಾಲಕತನದೊಳಗೆ ಕಾವ್ಯದ ಶೀಲವಿತ್ತೆಯೆನಗೆ ಕೀಳುಮಾಡದೆ ಯೆನ್ನ ಬಾಲಭೂಷಿತಂಗಳ ಕೇಳೈ ಶ್ರೀಲಕ್ಷ್ಮೀಲೋಲ ವೆಂಕಟರಾಯ ಕಾಲಕಾಲಪ್ರಿಯ ಪಾಲಿಸೊಲಿದು ಕರು- ಣಾಲವಾಲ ನತಪಾಲಶೀಲ ಮುನಿ ಜಾಲವಂದ್ಯ ವನಮಾಲದಾರಿ ಜಗ ಮೂಲಸ್ವರೂಪ ವಿಶಾಲ ಗುಣಾರ್ಣವ2 ಹಿಂದಾದುದನರಿಯೆ ಇದರಿಂ ಮುಂದಾಗುವುದು ತಿಳಿಯೆ ಹಿಂದು ಮುಂದಿಲ್ಲದೆ ಬಂಧನದೊಳು ಬಲು ನೊಂದೆನೈ ನಿನಗಿದು ಚಂದವೆ ಶ್ರೀಹರಿ ತಂದೆ ತಾಯಿ ಬಂದು ಬಾಂಧವ ಬಳಗ ನೀ ನೆಂದು ನಿನ್ನಯ ಪದದ್ವಂದ್ವವ ಭಜಿಪಾ ನಂದಸುಜ್ಞಾನದಿಂದೆಂದಿಗೂ ಸುಖ ದಿಂದಿರುವಂದದಿ ತಂದೆ ನೀ ಪಾಲಿಸು3 ಧಾರಿಣಿಗಧಿಕವಾದ ಮೆರೆವ ಕು ಮಾರಧಾರೆಯ ತಟದ ಚಾರುನೇತ್ರಾವತಿ ತೀರ ಪಶ್ಚಿಮ ಭಾಗ ಸಾರಿ ತೋರುವ ವಟಪುರದೊಳು ನೆಲಸಿಹ ವೀರ ವೆಂಕಟಪತಿ ವಾರಿಜನಾಭ ಖ- ರಾರಿ ತ್ರಿದಶಗಣವಾರವಂದ್ಯ ಭಾ- ಗೀರಥೀಪಿತ ದುರಿತಾರಿ ದೈತ್ಯಸಂ- ಹಾರಿ ಶ್ರೀಲಕ್ಷ್ಮೀನಾರಾಯಣ ಹರಿ4
--------------
ತುಪಾಕಿ ವೆಂಕಟರಮಣಾಚಾರ್ಯ
ಶ್ರೀರಾಘವೇಂದ್ರ ಸ್ವಾಮಿಗಳು ಗುರುಗಳ ನೋಡಿರಿ ರಾಘವೇಂದ್ರ ಪ ಗುರುಗಳ ನೋಡಿ ಚರಣದಿ ಬಾಗಿ ಕರೆಕರೆ ನೀಗಿ ವರಸುಖ ಪಡೆಯಿರಿ ಅ.ಪ ಕಾಮಿತ ಫಲಗಳ ಇತ್ತು ಇತ್ತು ತಾಮಸ ಗುಣಗಳ ಕೆತ್ತಿ ಕೆತ್ತಿ ರಾಮನ ಭಕ್ತಿಯ ಬಿತ್ತಿ ಬಿತ್ತಿ ಪ್ರೇಮದಿ ಶಿಷ್ಯರ ಸಲಹುವ ನಮ್ಮ 1 ಅಂತೆ ಕಂತೇ ಸಂತೆ ಮಾತು ಸಂತರ ಬೆಲ್ಲ ಇವರಲಿಲ್ಲ ಎಂಥಾ ಭಕ್ತಿ ಅಂಥಾ ಫಲವು ಕುಂತೀ ಭೀಮನ ಪಂಥಾ ಪಿಡಿದು 2 ಇಲ್ಲ ಎಂಬಗೆ ಎಲ್ಲಾ ಇಲ್ಲಾ ನಲ್ಲ ಎಂಬಗೆ ಎಲ್ಲಾ ಉಂಟು ಕ್ಷುಲ್ಲ ಸಂಶಯ ಹಲ್ಲು ಮುರಿದು ಪುಲ್ಲ ನಾಭನ ಬಲ್ಲವರೊಡನೆ 3 ಕಲಿಯೆಂದೇಕೆ ಅಳುವಿರಿ ನೀವು ಒಲಿಯಲು ಗುರುವು ಸುಳಿಯುವ ಹರಿಯು ತುಳಿಯುತ ಕಲಿಯ ಬೆಳಸಿರಿ ಭಕ್ತಿ ಕಾಲ 4 ಕೃಷ್ಣ ವಿಠಲನ ಇಷ್ಟ ಗುರುಗಳು ತೃಷ್ಠರಾದೆಡೆ ಇಷ್ಟ ಕರಗತವು ಭಷ್ಟರಾಗದೆ ಶಿಷ್ಠರ ಸೇರುತ ಪುಷ್ಠಿಯ ಗೈಸುತ ಸುಷ್ಠು ಜ್ಞಾನವ 5
--------------
ಕೃಷ್ಣವಿಠಲದಾಸರು
ಶ್ರೀರಾಘವೇಂದ್ರರ ಸ್ತೋತ್ರ ವಿನಯಾದಿಂದಲಿ ನಮಿಸುವೆನಾ ವೃಂದಾ ವನದಿ ರಾಜಿಪ ರಾಘವೇಂದ್ರ ಗುರವಿನ ಪ ದುರಿತವಾರಣ ಪಂಚಾನನನ ನರ - ಹರಿರೂಪಸ್ತಂಭದಿ ಪ್ರಕಟಗೈಸಿದನ ಹರಿಭಕ್ತಾಗ್ರಣಿಯೆಂದೆನಿಪನ ನಾರ - ದರ ಉಪದೇಶಗರ್ಭದಿ ಕೈಕೊಂಡಿಹನ 1 ಸಿರಿವ್ಯಾಸತೀರ್ಥರೆನಿಪನ ಪುರಂ - ದರ ದಾಸಾರ್ಯರಿಗು ಪದೇಶ ಗೈದವÀನ ವರಚಂದ್ರಿಕಾ ರಚಿಸಿದನ ದುಷ್ಟ ಪರಮಾದ್ರಿಗಳಿಗೆ ಕುಲಿಶನೆನಿಪನ 2 ಶ್ರೀ ಸುಧೀಂದ್ರ ಕರಾಬ್ಜಜನ ದಿವ್ಯ ಭಾಸುರ ಪರಿಮಳ ಗ್ರಂಥ ಕರ್ತರನ - ಮೀಸಲ ಮನದಿ ಭಜಿಪರನ ದೋಷ - ನಾಶನ ಗೈಸಿ ಪೋಷಿಸುವ ಶಕ್ತರನ3 ವರಮಂತ್ರ ಸದ್ಮನಿಲಯನ ಶ್ರೀ - ಗುರು ಮಧ್ವಮತ ದುರಂಧರದೆನಿಸುವನ ಹರಿಪ್ರೀತಿ ಪೂರ್ಣಪಾತ್ರರನ ಈ ಧರಿಯೊಳು ಬಹುಪರಿ ಮೆರೆವ ಮುನಿಪನ 4 ತುಂಗಭದ್ರಾತೀರವಾಸನ ಶುಭ ಮಂಗಲಚರಿತ ಕಮಂಡಲಧರನ ರಂಗವರದೇಶ ವಿಠಲನ ಪದ ಭೃಂಗ ಯತಿಕುಲ ಕಂಜಾರ್ಕ ಸನ್ನಿಭನ 5
--------------
ವರದೇಶವಿಠಲ
ಶ್ರೀರಾಮ ಎನ್ನಿರೊ ಮೂಜಗದವರೆಲ್ಲಈರೇಳು ಭುವನ ತನ್ನುದರದೊಳಿಟ್ಟನ ಪ ಅನಿಮಿಷರಂದದಿ ವನವಾಸಕೆ ಹೋದವನ _ ಶ್ರೀರಾಮ ಎನ್ನಿರೊಮನಸಿಜ ನಾರಿಯ ಪಿತನ ಕೊಂದನ ಪಿತನ ಪೊತ್ತವನ _ ಶ್ರೀರಾಮ ಎನ್ನಿರೊಘನ ಕೋಡ ಕೊನೆಯಿಂದ ಧರಣಿಯ ತಾಳ್ದವನ _ ಶ್ರೀರಾಮ ಎನ್ನಿರೊದಿನಕರನಳಿವಿನಲಿ ಪಗೆಯ ಗೆದ್ದಾತನ _ ಶ್ರೀರಾಮ ಎನ್ನಿರೊ1 ಗಜವನೇರಿದವನ ತಂದೆಯ ತಾಯನಳೆದವನ _ ಶ್ರೀರಾಮ ಎನ್ನಿರೊಭುಜಬಲದಿಂದ ಭೂಪಾಲರ ಗೆದ್ದವನ _ ಶ್ರೀರಾಮ ಎನ್ನಿರೊನಿಜಮುನಿಗಳ ವನದಿಂದ ತನಯರ ತಂದವನ _ ಶ್ರೀರಾಮ ಎನ್ನಿರೊಭುಜಗಧರನ ಕೈಯ ಆಯುಧವನು ತಂದವನ _ ಶ್ರೀರಾಮ ಎನ್ನಿರೊ 2 ವಾಸವ ಹೊಕ್ಕವನ _ ಶ್ರೀರಾಮ ಎನ್ನಿರೊತೃಣಕೆ ಬಾಯಿತ್ತನ ಮೇಲೇರಿ ಬಪ್ಪನ _ ಶ್ರೀರಾಮ ಎನ್ನಿರೊ ಅಣುರೇಣು ತೃಣದೊಳು ಪರಿಪೂರ್ಣನಾದನ _ ಶ್ರೀರಾಮ ಎನ್ನಿರೊಪ್ರಣವಗೋಚರ ಕಾಗಿನೆಲೆಯಾದಿಕೇಶವನ _ ಶ್ರೀರಾಮ ಎನ್ನಿರೊ 3
--------------
ಕನಕದಾಸ