ಒಟ್ಟು 13659 ಕಡೆಗಳಲ್ಲಿ , 138 ದಾಸರು , 6755 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಗೆದ್ದೆಯೊ ಹನುಮಂತಾ-ಅಸುರರಒದ್ದೆಯೊ ಬಲವಂತಾ ಪಬದ್ಧಾಂಜಲಿಯಿಂದ ರಘುಪತಿ ಪಾದವಹೃದ್ಯದಿ ಭಜನೆ ಮಾಡುವ ಬುದ್ಧಿವಂತ ಅ.ಪಅಂಜನಿಸುತನೀತ-ಲಂಕಾಪುರದಿ-ಅಕ್ಷಯನ ಕೊಂದಾತ ||ಕಂಜಾಕ್ಷಿ ಸೀತೆಯ ಕಂಡು ಮುದ್ರಿಕೆಯಿತ್ತು |ಮಂಜುಳವಾರೆಯ ತಂದ ರಾಮನ ದೂತ 1ಈರೇಳು ಜಗದೊಳಗೆ-ಇನ್ನು ಮತ್ತೆ ಯಾರು ಸರಿಯೊ ನಿನಗೆವೀರ ಮಹಾಬಲ ಶೂರ ಪರಾಕ್ರಮ |ಧೀರಸಮೀರಉದಾರ ಗಂಭೀರ2ವಾಂಛಿತಫಲವೀವ-ನಾದ ಮುಖ್ಯ- ಪ್ರಾಣ ಮಹಾನುಭಾವ ||ಕಿಂಚಿತ್ತು ಕಷ್ಟವ ಪಡಲೀಸ ಭಕ್ತರ್ಗೆ |ಪಾಂಚಜನ್ಯಪುರಂದರವಿಠಲದಾಸ3
--------------
ಪುರಂದರದಾಸರು
ಗೋಕುಲ ಕೃಷ್ಣ ಗೋಪಿಸ್ತ್ರೀಯರ ಕೂಡೆ ||ಲೋಕ ಮೋಹನ ಲೀಲೆ ತೋರಿದನಲ್ಲಿ ||ಆ ಕನ್ಯೆಯರಿಗೆಲ್ಲ ಬೇಕಾದರೂಪ ತೋರಿ ||ಸಾಕಾರಿಯಾಗಿರೆ ಬಳಿಕೊಂದು ದಿವಸ 1ಸೀರೆ ಕುಪ್ಪಸ ತೊಟ್ಟು | ಹಾರ ಕಡಗವಿಟ್ಟು |ನಾರಿಯೊಬ್ಬಳುಕ್ಷೀರಮಾರುತ್ತ ಬರಲೂ ||ಕೇರಿ ಕೇರಿಗಳಲ್ಲಿ ಚರಿಸುತ್ತಲಿರೆ ಕಂಡು |ವಾರಿಜಾಕ್ಷನು ನಡೆತಂದು ತಾ ನಗುತ್ತ 2ನೀಲಕುಂತಳೆ ಗುಣಶೀಲೆ ಚಂದಿರಮುಖಿ |ಹಾಲ ಸುಂಕವ ಕೊಟ್ಟು ಪೋ | ಗವ್ವ ಚದುರೆ ||ಕೇಳಿಮಾನಿನಿಕ್ರೋಧ ತಾಳಿ ಕೃಷ್ಣನ ಕೂಡೆ |ಹಾಲ ಸುಂಕದ ಕಟ್ಟೆ ಯಾವುದಯ್ಯ ನಿನಗೆ 3ಎಂದು ನಿಂದಿಸಿ ಹಿಂದೆ ತಿರುಗಿ ಪೋಗಲು | ಕಂಡು |ನಂದಕಂದನು ತಾ | ಸೆರಗ ಪಿಡಿದು ತಾ ನಿಲಿಸೆ ||ಚಂದಿರಮುಖಿ ತಾನು ಸೆಣಸಿ ಕೃಷ್ಣನೊಳ್ ಸೋತುಕಂದಿ ಕುಂದುತ ಕೈಯ ಮುಗಿದು ಪೇಳಿದಳು 4ತಂದೆ ಸೆರಗ ಬಿಡು ಕಂದ ಸೆರಗ ಬಿಡು |ಇಂದೆನ್ನ ಗುರುವರ್ಯ | ಸೆರಗ ಬಿಡಯ್ಯ ||ತಂದೆಯು ನಾನಲ್ಲ | ಕಂದನಾನಲ್ಲವೊ | ನಿನ್ನ |ತಂದೆಗಳಿಯನೆಂದು ಭಾವಿಸೆ ತರುಣಿ 5ಮಾವ ಸೆರಗ ಬಿಡು |ಭಾವಸೆರಗ ಬಿಡು |ಸೇವಕಿ ನಿನಗೆ ನಾ ಸೆರಗ ಬಿಡಯ್ಯ ||ಮಾವನಲ್ಲವೊ | ಕೇಳೆ ಭಾವನಲ್ಲವೊ | ನಿನ್ನ ||ಮಾವನ ಮಗನು ನಾ ಕಾಣೆಂದ ಕೃಷ್ಣಾ 6ವಿಧ ವಿಧದಲಿ ಮಾತನಾಡುತಾ ಕೃಷ್ಣ |ಮದನತಾಪವ ಹೆಚ್ಚಿಸಿದನು ಮಾನಿನಿಗೆ |ಪದುಮಾಕ್ಷಿ ಭ್ರಮೆಗೊಂಡುಮದನತಾಪದಿ ನೊಂದು |ಮದನತಾತನನಪ್ಪಿ | ಮುದ್ದಿಸೆ ಕಂಡು 7ತಾಳು ತಾಳೆಲೆ ಸಖಿ ತಾಯಿ ತಂಗಿಗೆ ಸಮ |ಕೇಳು ಜಗದಿ ಪರದಾರಾಂಶ ಜನಕೆ ||ಲೋಲಲೋಚನ ಎನ್ನ ಗೋಳು ಗುಡಿಸದೀಗ |ಆಳು ನಿನ್ನಯ ಜನನಿಗೆ ಸೊಸೆ ಎಂದು ದಯದಿ 8ಇಂತೆಂದು ಕೃಷ್ಣನ ಎದೆಗೆ ಕುಚವನಿತ್ತು |ಸಂತೋಷದಿಂದಲಪ್ಪೀ ಸ್ಮರಿಸುತ್ತಲಿರಲುಕಂತುಜನಕೆ ಗೋವಿಂದಗೆ ದಾಸರೋಳೆಂತು |ಕೃಪೆಯೋ | ನಾರಿಗೊಲಿದಿಷ್ಟ ಸಲಿಸೆ ಗೋಕುಲ 9
--------------
ಗೋವಿಂದದಾಸ
ಗೋಕುಲದ ಗೋಪಿಯರದೆಷ್ಟು ಧನ್ಯರೋ |ಶ್ರೀಕಾಂತನನುರಾಗದಲಿ ಪಾಡುತಿಹರೊ ಪಕುಳಿತು ಕರೆವಾಗ ನಿಂತು ಕಳವೆಗಳ ಕುಟ್ಟುವಾಗ |ತಳಿಸಾರಣಿ ಸಮ್ಮಾರ್ಜಿಸುವಾಗ ||ಅಳುವ ಮಕ್ಕಳ ತೊಟ್ಟಿಲೊಳಿಟ್ಟು ತೂಗುವಾಗ |ಬೆಳಗುಜಾವದಿ ಮೊಸರ ಕಡೆವಾಗಲು 1ನಡೆವಾಗ ನುಡಿವಾಗ ಭೋಜನವ ಮಾಡುವಾಗ |ಉಡುವಾಗ ಆಭರಣ ಇಡುವಾಗಲು ||ಮುಡಿವಾಗ ಮಲ್ಲಿಗೆ ಉಯ್ಯಲೆಯನಾಡುವಾಗ |ಅಡಿಗಡಿಗೆ ತಾಂಬೂಲ ಮೆಲುವಾಗಲು 2ಪರಿಪರಿ ರಾಗದಿಂದಲಿ ಪರಿಪರಿ ಮಾತಿನಿಂದ |ಪರಿಪರಿ ಗೀತಪ್ರಸಂಗದಿಂದ ||ಪರಿಪೂರ್ಣನಾದ ಶ್ರೀ ಪುರಂದರವಿಠಲನ |ಹಿರಿದಾಗಿ ಮನದೊಳಗೆ ಸ್ಮರಿಸುತಿಹರು 3
--------------
ಪುರಂದರದಾಸರು
ಗೋಕುಲದೊಳಗೆಲ್ಲ ಕೊಳಲೂದಲು |ಬೇಕಾದ ಧ್ವನಿಗಳು ಕೂಡಿ ಕೃಷ್ಣ-ಗೋ- ||ಪಿಕಾಸ್ತ್ರೀಯರುತವಕದಿಂದ ನೋಡ- |ಬೇಕೆಂದು ನಡೆಯೆ ನೂಕ್ಯಾಡುತ ಪಎಂತೆಂತು ಪೊರಟರಂತು ನಾರಿಯರು |ಇಂಥ ವಿಪರೀತ ಯಿಂತಿಲ್ಲ ಮುಂದಿಲ್ಲ |ಸಂತೋಷವಹದು ಚಿಂತೆ ಪೋಗುವುದು |ಸಂತರು ಕೇಳಲುತಂತುಮಾತ್ರಾ ||ಭ್ರಾಂತರಾಗಿ ಯೇನು-ಎಂತು ತಿಳಿಯದೆ |ನಿಂತು ನಿಲ್ಲಲಾರದಂತರದಲೆವೆ |ಧ್ವಾಂತಕಿರಣನಂತಾನ ಮುತ್ತೂರು |ಅಂತರವಿಲ್ಲದ ಸಂತೆಯಂತೆ 1ಚಿಕ್ಕಟುಯೆಂದು ಒಬ್ಬಕ್ಕನು ಗಂಡನ |ತೆಕ್ಕೆಲಿ ಪಿಡಿದುಕಕ್ಕಸಬಡುತ |ಪೊಕ್ಕಳಿಗೆ ಬಟ್ಟನಿಕ್ಕಿ ಒಬ್ಬವಳು |ಅಕ್ಕಿಯ ನುಚ್ಚನೆ ಸಕ್ಕರೆಂದು ||ಮಕ್ಕಳಿಗೀವುತ ಮಿಕ್ಕವರೆಲ್ಲರು |ನಕ್ಕು ತಂತಮ್ಮೊಳಗೆ ಗುಕ್ಕುತ ತಲೆಯ |ಹಿಕ್ಕುತ ಬಂದರು ಫಕ್ಕನೆ ಈಕ್ಷಿಸ-ರಕ್ಕಸ ದಲ್ಲಣನಕ್ಕರದಿ 2ತತ್ತರಿಸಿ ಕರವೆತ್ತಿಗೆ ಬಿಟ್ಟರು |ಮುತ್ತಿನ ಕಟ್ಟಾಣಿವೊತ್ತಿ ಮುಡಿಗಿಟ್ಟು |ನೆತ್ತಿಗೆ ಸೀರೆಯ ಸುತ್ತಿಕೊಂಡು ಬರೆ |ಸುತ್ತಲಂಗನೆರು ಬತ್ತಲಾಗಿ ||ತುತ್ತು ಮಾಡಿ ಮಾಡಿ ಹತ್ತಿಸೆ ಎದೆಗೆ |ಹೊಸ್ತಲಿ ದಾಟಲಿ ಗತ್ತಿಡಲಾರದೆ |ಹತ್ತೆಂಟು ಮಂದಿಯು ಚಿತ್ತಪಲ್ಲಟಾಗಿ |ಉತ್ತಮಾಂಗನಿಗೆ ಸುತ್ತಿದರೊ 3ಹಾಲಿಗೆ ಪಿಲ್ಲೆಯು ಫಾಲವಿದೇಯೆಂದು |ಕಾಲಿಗೆ ಕುಂಕುಮ ವಾಲಿಟ್ಟು ಮೂಗಿಗೆ |ಮೇಲಾದ ಹೂವಿನ ಮಾಲಿಕೆ ಕಟಿಗೆ |ತೋಲಾದ ಸರಿಗೆ ಬಾಳಿಗಿಟ್ಟು ||ಹೇಳುವ ಮಾತನುಕೇಳಿಕೇಳದಂತೆ |ಇಳೆಗೆ ಅಗಾಧ ಧೂಳಿಯ ಮುಚ್ಚುತ |ಜಾಲಸಂಭ್ರಮದಿ ವಾಲಯ ಬಂದರು |ಜಾಲಜಾನಾಭನ ವಾಲಗಕ್ಕೆ 4ಭೋರೆಂಬ ಶಬ್ದವ ಮರೆತಳೆಮುನೆ |ಗಿರಿಯು ಬ್ಯಾವಿಯೆ ? ತುರುವು ಮೇವನು |ತೊರೆಯೆ, ಫಣಿಯು ಶಿರವ ತೂಗಿತು |ತೆರೆಯ ಕಟ್ಟಿತು ಶರಧಿಯು ||ಸುರರುನಭದಿ ನೆರೆದು ಪೂಮಳೆ |ಗರೆಯೆದುಂದುಭಿಮೊರೆಯೆ ಸುಖವ |ಸುರಿಯೆ ಪ್ರಾಣೇಶ ವಿಠಲ ಕೊಳಲ |ತ್ವರನುಡಿಸುವ ಸ್ವರಗೇಳಿ 5
--------------
ಪ್ರಾಣೇಶದಾಸರು
ಗೋಪಾಲ ಶ್ರೀಕೃಷ್ಣ ಮೂರುತಿ ನೀನೇಕಾಪಾಡೆನ್ನನುಜಿಷ್ಣುಸಾರಥಿ ಪತಾಪತ್ರಯದೊಳ್ ನೊಂದೆ ತಪಗೈಯ್ಯಲರಿಯೆನು ನೀಕೃಪೆಯೊಳನುದಿನರೂಪತೋರಿಸು ದೇವಾ ಅ.ಪದೇವಕಿಯುದರದಿ ಜನಿಸಿಗೋಪಿದೇವಿಗೆ ತನಯನೆಂದೆನಿಸಿಜೀವ ಘಾತಕೆ ಬಂದ ಪೂತನಿಯಸು ಹೀರಿಗೋವುಗಳನು ಮೇಸಿದೆ 1ದೈತ್ಯರ ಕೊಂದು ಗೋವರ್ಧನವೆತ್ತಿದೇಕಾಮದಿ ಬಂದ ಬಾಲಕಿಯರನು ಕೂಡಿದೇಹಾವಿನ ಹೆಡೆಯ ಮೇಲೆ ನಲಿದು ಬಿಲ್ ಹಬ್ಬದಿಮಾವ ಕಂಸನ ಮುರಿದು ಕರುಣದಿತಾಯಿ ತಂದೆಯ ಸೆರೆಯ ಬಿಡಿಸಿದೆ 2ಶರಧಿಮಧ್ಯದಿ ಮನೆಮಾಡಿದೇಅಲ್ಲಿಭರದಿಂದಷ್ಟಮ ಸ್ತ್ರೀಯರಲಿ ಕೂಡಿದೇನರಮುರಶಾದ್ಯರ ಮುರಿದು ಷೋಡಶ ಸಹಸ್ರತರುಣಿಯರೊಡಗೂಡಿದೇ ಪಾರಿಜಾತತರುವ ನೀನೊಲಿದು ತಂದೆ ಪಾಂಡವರೊಳುಭರಿತ ಕೃಪೆಯ ತೋರಿದೆಧುರದಿಮಾಗಧಚೈದ್ಯ ಧರಣಿಪಾಲರ ಗೆಲ್ದುತರುಣಿ ದ್ರೌಪದಿಗ್ವರವ ಪಾಲಿಸಿನರಗೆ ಸಾರಥಿಯಾದೆ ಶ್ರೀಹರೀ 3ಸಂಧಾನವೆಸಗಿ ಪಾಂಡವರಕರ-ದಿಂದ ಕೊಲ್ಲಿಸಿದೆ ಕೌರವರಚಂದ ಧರ್ಮರಾಯಗೆ ಪಟ್ಟ ಕಟ್ಟಿಸೀನಿಂದಶ್ವಮೇಧಗೈಸಿ ನೀ ಸುರಗಣವೃಂದ ಸಂತಸ ಬಡಿಸಿ ಯಾದವಕುಲ ಮುಗಿಲದಿಂದಲಿಸುಂದರಾಂಗವ ಬಿಟ್ಟು ಕ್ಷೀರಸಿಂಧುವಿಗೈದೆಚಂದದಲಿ ಗೋವಿಂದದಾಸನೆಬಂದು ಮಂಗಲ ಮುಖವ ತೋರಿಸೋ 4
--------------
ಗೋವಿಂದದಾಸ
ಗೋಪಿಯ ಭಾಗ್ಯವಿದು |ಆ ಪರಮಾತ್ಮನ ಅಪ್ಪಿ ಮುದ್ದಿಡುವುದು ಪಅಂಬೆಗಾಲಿಡು ಹರಿಕುಣಿದಾಡೈ ತೋ-|ಳಂಬಲಿ ತಾ ಹೊಂಗುಬ್ಬಿಯನು ||ಅಂಬುಜನಾಭ ನೀನಾನೆಯನಾಡೆಂದು |ಸಂಭ್ರಮದಿಂದ ಮುದ್ದಾಡುವಳೊ 1ನಿತ್ಯನಿರ್ಮಲನಿಗೆ ನೀರನೆರೆದು ತಂದು |ಎತ್ತಿ ತೊಡೆಯೊಳಿಟ್ಟು ಮುದ್ದಿಸುತಾ ||ಸತ್ಯಲೋಕವನಾಳುವ ವಿಧಿಜನಕನ |ಪುತ್ರನೆಂದರಿತು ತಕ್ಕೈಸುವಳೊ 2ಪಾಲುಗಡಲು ಮನೆಯಾಗಿ ಮೂಲೋಕವ |ಪಾಲಿಸುತಿಪ್ಪ ನಾರಾಯಣನ ||ಕಾಲಮೇಲೆ ಮಲಗಿಸಿ ಬಟ್ಟಲ ತುಂಬ |ಹಾಲು ಕುಡಿಸಿ ಸಂತೈಸುವಳೊ 3ಹರಿನಿತ್ಯತೃಪ್ತನೆಂದರಿಯದೆ ಹೊನ್ನಿನ |ಹರಿವಾಣದೊಳಗೆ ಮೃಷ್ಟಾನ್ನವನು ||ನೊರೆಹಾಲು ಘೃತ-ಸಕ್ಕರೆ ಕೂಡಿಸಿ ಕರೆ-|ಕರೆದು ಉಣಿಸಿ ತೃಪ್ತಿ ಬಡಿಸುವಳೊ 4ಅಂಗಜಪಿತನಿಗೆ ಮೋಹದಿಂದ ಹೊಸ |ಅಂಗಿಯ ತೊಡಿಸಿ ಟೊಪ್ಪಿಗೆ ಇರಿಸಿ ||ಬಂಗಾರದರಳೆಲೆ ಬಿಂದುಲಿಗಳನಿಟ್ಟು |ಸಿಂಗರವನು ಮಾಡಿ ನೋಡುವಳೊ 5
--------------
ಪುರಂದರದಾಸರು
ಗೋವಿಂದ ಎನ್ನಿರೊ -ಹರಿ ಗೋವಿಂದ ಎನ್ನಿರೊ ||<?xmಟ veಡಿsioಟಿ='1.0' eಟಿಛಿoಜiಟಿg='uಣಜಿ-8'?>ಗೋವಿಂದನ ನಾಮವ ಮರೆಯೆದಿರಿರೊ ಪ.ತುಂಬಿರುವ ಪಟ್ಟಣಕೆ ಒಂಬತ್ತು ಬಾಗಿಲು |ಸಂಭ್ರಮದರಸುಗಳೈದು ಮಂದಿ ||ಡಂಭಕತನದಿಂದ ಕಾಯುವ ಜೀವವ |ನಂಬಿ ನಚ್ಚಿ ಕೆಡಬೇಡಿ ಕಾಣಿರೊ 1ನೆಲೆಯು ಇಲ್ಲದಕಾಯ ಎಲವಿನ ಹಂದರವು |ಬಲಿದು ಸುತ್ತಿದ ಚರ್ಮದ ಹೊದಿಕೆ ||ಮಲಮೂತ್ರಂಗಳು ಕೀವುಗಳು ಕ್ರಿಮಿಗಳು |ಚೆಲುವ ತೊಗಲನು ಮೆಚ್ಚಿ ಕೆಡಬೇಡಿರಯ್ಯ 2ಹರ ಬ್ರಹ್ಮ ಸುರರಿಂದೆ ವಂದಿತನಾಗಿಪ್ಪ |ಹರಿಯೇ ಸರ್ವೋತ್ತಮನೆಂದೆನ್ನಿರೊ ||ಪುರಂದವಿಠಲನ ಸ್ಮರಣೆಯ ಮಾಡಲು |ದುರಿತಭಯಂಗಳ ಪರಿಹರಿಸುವುದು3
--------------
ಪುರಂದರದಾಸರು
ಗೋವಿಂದ ನಮೋ ಗೋವಿಂದ ನಮೋ ಗೋವಿಂದ - ನಾರಾಯಣ |ಗೋವರ್ಧನ ಗಿರಿಯೆತ್ತಿದ ಗೋವಿಂದ - ನಮ್ಮ ರಕ್ಷಿಸೊ ಪ.ಅರ್ಥವಾರಿಗೆ ಪುತ್ರರಾರಿಗೆ ಮಿತ್ರಬಾಂಧವರಾರಿಗೆ |ಕರ್ತು ಯಮನವರೆಳೆದು ಒಯ್ಯಲು ಅರ್ಥ- ಪುತ್ರರು ಕಾಯ್ವರೆ 1ಮಂಚ ಬಾರದು ಮಡದಿ ಬಾರಳು ಕಂಚುಗನ್ನಡಿ ಬಾರದು |ಸಂಚಿತಾರ್ಥವ ದ್ರವ್ಯಬಾರದು ಮುಂಚೆ ಮಾಡಿರಿ ಧರ್ಮವ 2ಒಡವೆಯಾಸೆಗೆ ಒಡಲ ಕಿಚ್ಚಿಗೆ ಮಡದಿ ಬೆನ್ನಲ್ಲಿ ಬಾಹಳು |ಬಿಡದೆ ಯಮನವರೆಳದು ಒಯ್ಯಲು ಎಡವಿಬಿದ್ದಿತು ನಾಲಗೆ 3ಪ್ರಾಣವಲ್ಲಭೆ ತನ್ನ ಪುರುಷನ ಕಾಣದೆಯೆ ನಿಲಲಾರಳು |ಪ್ರಾಣ ಹೋಗಲು ಮುಟ್ಟಲಂಜುವಳುಜಾಣೆ ಕರೆದರೆ ಬಾರಳು 4ತಂದು ಬಂದರೆ ತನ್ನ ಪುರುಷಗೆ ಬನ್ನಿ ಬಳಲಿದಿರೆಂಬಳು |ಒಂದು ದಿನದಲಿ ತಾರದಿದ್ದರೆ ಹಂದಿನಾಯಂತೆ ಕೆಲೆವಳು 5ಉಂಟುಕಾಲಕೆ ನಂಟರಿಷ್ಟರು ಬಂಟರಾಗಿಯೆ ಕಾಯ್ವರು |ಕಂಟಕರು ಯಮನವರು ಎಳೆವಾಗ ನಂಟರಿಷ್ಟರು ಬಾರರು 6ದಿಟ್ಟತನದಲಿ ಪಟ್ಟವಾಳಿದ ಮೆಟ್ಟಿ ದಿತಿಜರಸೀಳಿದ |ಮುಟ್ಟಿ ಭಜಿಸಿರೊ ಶ್ರೀ ಪುರಂದರವಿಠಲೇಶನ ಚರಣವ 7
--------------
ಪುರಂದರದಾಸರು
ಗೌರೀವರಶಿವ ನಮೋ ನಮೋ | ಶಿವ |ಗೌರೀವರ ಶಿವ ನಮೋ ನಮೋ |ಈಶಪರಾತ್ಪರದೋಷನಿವಾರ |ಕಾಶೀಪುರವರವಾಸ ವಿಶ್ವೇಶ್ವರ 1ಕರಿಚರ್ಮಾಂಬರ ಕರುಣಾಕರ |ಸ್ಮರಿಸಲು ಸರ್ವರದುರಿತನಿವಾರ 2ಭಸ್ಮಾಲೇಪನ ಶಶಿಶೇಖರವೃಷಭವಾಹನ ಸ್ಮಶಾನ ಸಂಚಾರ 3ಸುರ ಗಂಗಾಧರ | ನರರುಂಡಮಾಲಾ |ಕರದಿ ತ್ರಿಶೂಲವು ಉರಗಕುಂಡಲ 4ಜಟಾಮಕುಟ ನೀಲಕಂಠೇಶ್ವರಾ |ಅಡವಿಯೊಳ್ಕೈರಾತನಟನ ಶಂಕರ 5ಷಣ್ಮುಖ ಭೈರವ ಭೃಂಗಿ ಪ್ರಮಥ |ಗಣನಾಥ ವೀರಭದ್ರ | ನಂದಿವಂ ದಿತ 6ಮಂದರಧರಗೋವಿಂದನ ಸಖನೆ |ವಂದಿಪೆದಾಸನ ಪಾಲಿಸು ಶಿವನೆ 7
--------------
ಗೋವಿಂದದಾಸ
ಘಟಿಕಾಚಲದಿ ನಿಂತ-ಶ್ರೀ ಹನುಮಂತ ಪಘಟಿಕಾಚಲದಿ ನಿಂತ-ಪಟು ಹನುಮಂತ ತನ್ನಪಠನೆಯ ಮಾಡಲುತ್ಕಟದಿ ಪೊರೆವೆನೆಂದು ಅ.ಪಚತುರ ಯುಗದಿ ತಾನು-ಮುಖ್ಯ ಪ್ರಾಣ- ಚತುರ ಮುಖನಯ್ಯನ |ಚತುರಮೂರ್ತಿಗಳನು ಚತುರತನದಿ ಭಜಿಸಿ |ಚತುರ್ಮುಖವಾಣಿ ಜಗಕೆ ಚತುರ್ವಿಧ ಫಲವ ಕೊಡುತ 1ಸರಸಿಜಭವಗೋಸುಗ- ಕರ್ಮಠ ದೂಮವರಚಕ್ರತೀರ್ಥಸರ |ಮೆರೆವ ಛಲದಿನಿತ್ಯನರಹರಿಗೆದುರಾಗಿಸ್ಥಿರ ಯೋಗಾಸನದಲಿ ಕರೆದು ವರಗಳ ಕೊಡುತ 2ಶಂಖಚಕ್ರವ ಧರಿಸಿ-ಭಕ್ತರ ಮನಃ-ಪಂಕವ ಪರಿಹರಿಸಿ |ಪಂಕಜನಾಭಶ್ರೀ ಪುರಂದರವಿಠಲನ |ಬಿಂಕದ ಸೇವಕ ಸಂಕಟ ಕಳೆಯುತ 3
--------------
ಪುರಂದರದಾಸರು
ಘಾತಕರಿನ್ನೇಕೆ ಪರಮಾರ್ಥ ಶ್ರವಣನೀತಿವಂತರೆ ನಿಮಗೆ ಪರನಿಂದೆ ಏಕೆ ? ಪ.ಕೋತಿಗಂದಣವೇಕನಾಥನಿಗೆ ಮುನಿಸೇಕೆ ?ಹೋತು ಕಾಳಗವಾಡೆ ಖ್ಯಾತಿಯೇಕೆ ?ಸೋತ ಮನುಜಗೆ ಮುನ್ನ ಸೊಗಸು ವೆಗ್ಗಳವೇಕೆ ?ಪ್ರೀತಿಯಿಲ್ಲದ ಮನೆಯೊಳಿರುವುದೇಕೆ ? 1ದಯವಂತನಲ್ಲದಾ ದೊರೆಯ ಸೇವೆಯು ಏಕೆ ?ಭಯವು ಉಳ್ಳವಗೆ ರಣರಂಗವೇಕೆ ?ನಯವಾಕ್ಯವಿಲ್ಲದ - ಪುರುಷ ನಾರಿಯರೇಕೆವ್ಯಯವಾದ ಧನಕಿನ್ನು ಚಿಂತೆಯೇಕೆ ? 2ಬಲ್ಲಿದನ ಹಗೆಗೊಂಡು ತಲ್ಲಣಿಸುತಿರಲೇಕೆಬಲ್ಲಧಿಕ ಜ್ಞಾನಿಗೆ ದ್ವೇಷವೇಕೆ ?ಚೆಲ್ವ ಶ್ರೀಪುರಂದರ ವಿಠಲನ ದಯವಿರಲುಕ್ಷಲ್ಲಿಸುವ ಯಮಗಿನ್ನು ಅಂಜಬೇಕೆ ? 3
--------------
ಪುರಂದರದಾಸರು
ಙ್ಞÕನವೊಂದೇ ಸಾಕು ಮುಕ್ತಿಗೆ - ಇ - |ನ್ನೇನು ಬೇಕು ಹುಚ್ಚುಮರುಳು ಮಾನವನೆ ಪ.ಪಿತ ಮಾತೆಸತಿ ಸುತರನಗಲಿರಬೇಡ |ಯತಿಯಾಗಿ ಆರಣ್ಯ ಚರಿಸಲು ಬೇಡ ||ವ್ರತ - ನೇಮವ ಮಾಡಿ ದಣಿಯಲು ಬೇಡ |ಸತಿಯಿಲ್ಲದವಗೆ ಸದ್ಗತಿಯಿಲ್ಲೋ ಮೂಢ 1ಜಪತಪವನೆ ಮಾಡಿ ಸೊರಗಲುಬೇಡ |ಕಪಿಯಂತೆ ಅಡಿಗಡಿಗೆ ಹಾರಲುಬೇಡ ||(ಉಪವಾಸಪಾಶಕ್ಕೆ) ಸಿಕ್ಕಲುಬೇಡ |ಚಪಲತನದಲೇನು ಫಲವಿಲ್ಲೋ ಮೂಢ 2ಜಾಗರದಲಿ ನಿದ್ರೆ ಕೆಡಿಸಲು ಬೇಡ |ಓಗರವನು ಬಿಟ್ಟು ಒಣಗಲು ಬೇಡ ||ಸೋಗುಮಾಡಿ ಹೊತ್ತು ಕಳಿಯಲು ಬೇಡ |ಗೊಗೆ ಹಾಗೆ ಕಣ್ಣು ತಿರುಗಿಸಬೇಡ 3ಹೊನ್ನು - ಹೆಣ್ಣು - ಮಣ್ಣು ಜರೆದಿರಬೇಡ |ಅನ್ನ - ವಸ್ತ್ರಗಳನ್ನು ತೊರೆದಿರಬೇಡ ||ಬಣ್ಣದ ದೇಹವ ನೆಚ್ಚಲುಬೇಡ |ತಣ್ಣೀರೊಳಗೆ ಮುಳುಗಿ ನಡುಗಲು ಬೇಡ 4ಮಹಾವಿಷ್ಣುಮೂರ್ತಿಯ ಮರೆತಿರಬೇಡ |ಸಾಹಸದಿಂದಲಿ ಶ್ರಮ ಪಡಬೇಡ ||ಕುಹಕ ಬುದ್ಧಿಯಲಿ ಕುಣಿದಾಡಬೇಡ |ಮಹಿಮ ಪುರಂದರವಿಠಲನ ಮರೆಯದಿರೊ ಮೂಢ 5
--------------
ಪುರಂದರದಾಸರು
ಚಂಚಲಾಕ್ಷಿ ಕೇಳ್ ಪಂಚಬಾಣನ |ಮಿಂಚಿನಂಥ ಶರ ತಾಳಲಾರೆ ನಾನು |ಕಂಚುಕಿಯನು ನಿನಗೊಂಚಿಸದೀವೆನು |ಕೊಂಚ ಮುಖ ತೋರಿನ್ನು ಚಂಚಲಾಕ್ಷಿ 1ಜಾಣೆ ನಿನ್ನನು ಕಾಣೆದೆನ್ನಯ |ಪ್ರಾಣನಿಲ್ಲದೇನೇ ||ತ್ರಾಣಗುಂದಿತು ಪ್ರಾಣನಾಯಕಿ |ಕಾಣೆ ನಿನ್ನ ಗಂಡನಾಣೆ || 2ಪಟ್ಟೆ ಸೀರೆಯನ್ನುಟ್ಟುಕೊಳ್ಳೆ ನಿನ್ನ |ತೊಟ್ಟಿಕೊಳ್ವೆ ಬಾರೆ ||ಗಟ್ಟಿಗೆ ನಿನ್ನಯ ಗುಟ್ಟನರಿತೆನು |ಗಟ್ಟಿ ಬಳೆಯ ಕೊಡುವೆ ನೀರೆ 3ಮಂದಗಾಮಿನಿ ಸುಂದರಾಂಗಿಯೆ |ಬಂದು ಎನ್ನ ಕೂಡೆ ||ಚಂದದಿಂದ ಗೋವಿಂದನೊಡನೇ ಬೇ |ಗೊಂದು ಮಾತನಾಡೇ ||ಹ|| 4
--------------
ಗೋವಿಂದದಾಸ
ಚಂಚಲಿಸದಿರು ನೀನು ಚತುರನಾಗುವಂಚಿಸದೆ ಸಕಲವೊಪ್ಪಿಸು ಹರಿಗೆ ಮನವೆ ಪ.ಆರು ನಿನ್ನವರೆಂಬೆ ಅವರಗಲಿದರು ಕಡೆಗೆಭೂರಿಸಂಚಿತ ಸಂಪದೆರವಾಯಿತುಜಾರುತಿವೆ ಕ್ಷಣಲವಗಳೀಗಾಗೆ ತಿಳಿಯದುನಾರಸಿಂಹನ ನಂಬು ನಿಷ್ಠೆಯಲಿ ಮನವೆ 1ಅಲ್ಪಸುಖಕಾಗಿ ನೀ ಅನೇಕ ಸುಖ ಮರೆವರೆಕಲ್ಪಕಲ್ಪಕೆ ನಿರಯವುಣಲಿಬಹುದೆಅಲ್ಪರುಪದೇಶದಲಿ ಭ್ರಾಂತನಾಗದೆಶೇಷತಲ್ಪನ್ನ ಮರೆಹೋಗು ತಡೆಯದಲೆ ಮನವೆ 2ನಿನ್ನಿಂದಭವಬಂಧನವು ಮೋಚನವುನೋಡುನಿನ್ನಿಂದ ಪ್ರಸನ್ವೆಂಕಟೇಶನೊಲುಮೆಇನ್ನೆನ್ನ ದಣಿಸದಿರು ಇದರಿಂದ ಮೀರಿದರೆಘನ್ನಗುರು ಮಧ್ವೇಶನಾಣೆ ನಿನಗೆ 3
--------------
ಪ್ರಸನ್ನವೆಂಕಟದಾಸರು
ಚಂಡಿಯ ಕಂಡಿರಾ ಪ್ರಚಂಡೆಯ ಕಂಡಿರಾದಿಂಡೆಯರಾದವರ ಖಂಡಿಸುತಿರುವ ಕತ್ತಿಯತಿರುಹುತಿರುವ ಗದೆಯಪನಿಷ್ಟರಾಗಿಹ ಭಕ್ತರ ದೂರನುಕೇಳಿಕೋಪವತಾಳಿಕಟ್ಟುಗಳಿಲ್ಲದ ರೌದ್ರವು ತೋರಲುಮೋರೆಕಂಗಳುಕೆಂಪೇರಲುಉಟ್ಟಿಹ ಪೀತಾಂಬರವನೆ ಕಾಶಿಯಹೊಯ್ದು ದಿಟ್ಟ ನಿಟ್ಟುಸಿರಸುಯ್ದುಕಟ್ಟಿದಳು ಆಯುಧಂಗಳ ಧರಿಸಿ ಝಳಝಳ ಝಳಪಿಸಿ1ಹೂಕಾಂರವನೇ ಮಾಡುತ ದೇಹವ ಮರೆದು ಕಂಗಳ ತೆರೆದುಬೆಂಕಿಯ ಸುರಿಯಲು ಎಡಬಲ ಅದಿರೆ ಹರಿಹರ ಬೆದರೆಅಂಕೆಯಿಲ್ಲದ ಸಿಡಿಲಬ್ಬರದಂತಾಗೆ ಹಾ ಎಂದು ಕೂಗೆಪಂಕಜಮುಖಿತಾ ಕೂಗುತ ಅವುಡುಗಚ್ಚೆಭೂಮಿ ಬಾಯಿ ಬಿಚ್ಚೆ2ನಡೆದಳು ಶತ್ರುಗಳೆಡೆಗೆ ಆಗ ವೇಗದಲಿ ಮನೋ ಯೋಗದಲಿತೊಡರಿಕೊಂಡಳುವೈರಿಸೇನೆಯ ನಿಲಿಸಿ ತಾ ಘುಡು ಘುಡಿಸಿತುಡುಕಿ ಪಿಡಿದಳು ದುಷ್ಟರ ಜಿಹ್ವೆಯನೂಕಿ ತಾ ಮುಂದಕೆ ಜೀಕಿಖಡುಗದಿ ಸೀಳುತ ರೌದ್ರದಿ ನಿಂತಳು ವೀರೆಕಂಗಳುಕಿಡಿಯನೆ ಕಾರೆ3ಹೊಯ್ದಳಾಕ್ಷಣ ದುರ್ಜನ ಸೇನೆಯ ಬಗಳೆರಿಪುತಲೆಗಳು ಉರುಳೆತೊಯ್ದಳಾಕ್ಷಣ ರಕ್ತದ ಬಿಂದಿಗೆ ಉಕ್ಕೆ ಮುಖ ಪುಟವಿಕ್ಕೆಸುಯ್ದರು ವೈರಿಗಳೆಲ್ಲರು ಗತಿಮತಿಗೆಟ್ಟು ಬಹುಕೇಡ ಕೆಟ್ಟುಕಾಯ್ದಳು ತನ್ನನು ನಂಬಿದವರ ಭಯ ಹರಿಯೆಬಹು ಸುಖ ಸುರಿಯೆ4ಹಮ್ಮಿನವರನೆಲ್ಲರ ತೊಳೆದು ಶಾಂತಳಾಗಿ ಬಗಳೆ ತಾ ತೃಪ್ತಳಾಗಿಬ್ರಹ್ಮ ಚಿದಾನಂದ ಭಕ್ತನಾಥನ ಸೇರಿ ಅಮಿತಾನಂದವೇರಿಸುಮ್ಮಗೆ ಪೂಜಿಸಿಕೊಳುತ ಕೇವಲ ಘನದಿ ತಾ ನಿತ್ಯನುದಿನದಿಬ್ರಹ್ಮರಂದ್ರದಿ ವಾಸ ಮಾಡಿಹ ಸುಖಿಯಆ ಬಗಳಾಮುಖಿಯ5
--------------
ಚಿದಾನಂದ ಅವಧೂತರು