ಒಟ್ಟು 93 ಕಡೆಗಳಲ್ಲಿ , 37 ದಾಸರು , 88 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ರಕ್ಷೆಸೆನ್ನ ಈ ಕ್ಷಣದಲುಪೇಕ್ಷೆ ಮಾಡದೆ ಪಕ್ಷಿವಾಹನ ಪರಮಪುರುಷ ಲಕ್ಷ್ಮಿನಾಯಕ ಪ ಅಂದಂದಿಂದ ಕೈಯಹಿಡಿದು ಚಂದದಿಂದ ಎನ್ನಬಿಡದೆ ಇಂದು ನಿನ್ನ ದ್ವಂದ್ವ ಚರಣಕ್ಹೊಂದಿದ ದಾಸನು ಎಂದು 1 ಕಷ್ಟಿ ಇವನು ಎಂದು ಕರುಣ ದೃಷ್ಟಿಯನೆ ತೋರುಬೇಗ ಸೃಷ್ಟಿಗೊಡೆಯ ನಾದ ಶ್ರೀ ಕೃಷ್ಣಮೂರುತಿ ನೀನೆ ಗತಿ 2 ಇಂದು ಮಾಡಿದಂಥದೆಂಥಾ ದೋಷವೊ ಹರಿಯೆ ಇಂದು ಎನ್ನ ಬಾಧಿಸುವುದು ಏನು ಕಾರಣವೊ ಕೃಷ್ಣಾ 3 ಸಜ್ಜನರ ರಕ್ಷಕ ದೇವ ಸರ್ವಜನರ ಪೋಷಕ ನೀನೆ ದುರ್ಜನರ ಖಂಡಿಸಿದ ಮೂಜ್ಜಗ ಪಾಲಕ ನೀನೇ ಎಂದೂ 4 ಪುಂಡರೀಕವರದ ಭೂಮಂಡಲಾಧಿಪತಿಯೆನಿಸಿ ಮಹಿಮವುಳ್ಳದೇವ 5 ಭಾವಜನಯ್ಯ ಭವ ಸ್ತೋತ್ರ ಪ್ರೀಯಾ ಪೊರೆಯದಲಿರುವದು ದೇವಾ 6 ಗಂಗೆ ಜನಕ ಮಂಗಳಾಂಗ ಕರುಣಾಸಾಗರ ಘನಗಂಭೀರಾ ರಂಗ `ಹೆನ್ನವಿಠಲ' ಕೃಪಾಂಗ ದೇವೋತ್ತುಂಗ ಹರಿಯೆ7
--------------
ಹೆನ್ನೆರಂಗದಾಸರು
ರಂಗ ಕೊಳಲನೂದುತ ಬಂದಯಶೋದೆಯ ಕಂದ ಪ ಕೊಳಲ ಧ್ವನಿಗೆ ವಿರಹವು ನಾರಿಯರಿಗೆಕಳಕಳÀವಾಗಲು ಕಳಕಳಿಸುತ ಅ.ಪ. ಶೃಂಗಾರ ಕೊಳಲ ಗಾಯನ ಮಾಡೆಸ್ತ್ರೀಯರು ನೋಡೆ ರಂಗನ ಪಾದದಲಿ ಮನ ಹೂಡೆಭೃಂಗಾಮೃತ ತೈಲದಿಅಂಗನೆಯರು ಝಳಕವ ಮಾಡೆದೇವರ್ಕಳು ನೋಡೆತುಂಗವಿಹಂಗ ಭುಜಂಗ ನವಿಲು ಸಾ -ರಂಗ ಗಿಣಿಯು ಮಾತಂಗ ಮರಿಯು ಕು-ರಂಗ ಮಧ್ಯೆ ಚರಣಂಗಳೆಡೆಗೆ ವೇ-ದಂಗಳೆರಗೆ ಕಾಮಂಗಳಲುಗೆ ನೇ-ತ್ರಂಗಳಿಗತಿ ಚಿತ್ರಂಗಳಾಗೆ ಆರಂಗನೂದ್ವ ಸಾರಂಗ ಕೇಳಿ ಋಷಿಪುಂಗಸಹಿತ ತಾವುಗಳು ಬರೆ ನರ-ಸಿಂಗನೂದಿದ ಜಗಂಗಳ ಮೋಹಿಸಿ1 ಬಂಗಾರ ಬಟ್ಟಲೊಳಗೆ ಅಂದುಕ್ಷೀರವ ತಂದು ರಂಗಗರ್ಪಿಸುವೆವು ನಾವೆಂದುಹರುಷದೊಳಂದು ಅಂಗನೆಯರು ಮೈಮರೆತು ನಿಂದುಒಲಿಯಬೇಕೆಂದು ಮಂಗಳ ಮಹಿಮನು ನೀನೆಂದುಅತಿಭಕುತಿಯೊಳಂದುತುಂಗ ವಿಕ್ರಮನ ಪದಂಗಳಿಗೆರಗಲುರಂಗ ನೆಗಹಿ ಕರಂಗಳ್ಹಿಡಿಯ ಮೋ-ಹಂಗಳಿಂದ ವಿರಹಗಳ್ಹೆಚ್ಚಿ ರವಿಕೆಂಗಳುಡೆಯ ಕುಚಂಗಳು ಬಿಟ್ಟಾ-ಲಿಂಗಿಸುತಿರೆ ಶ್ರೀ ಮಂಗಳಾಂಗಗೆ ಪು-ಷ್ಪಂಗಳಿಂದ ವರುಷಂಗಳು ಮೇಲ್ ಸುರ-ರಂಗಳು ಸುರಿಯೆ ಉತ್ತುಂಗ ಮಹಿಮ ಹರುಷಂಗಳ ಬೀರುತ ಅಂಗನೆಯರಿಗೆ 2 ಮಂದಿರ ಮಾನಿನಿಯರು ಬಿಟ್ಟುಮನದಲಿ ಕಂಗೆಟ್ಟುಮಂದರೋದ್ಧರನಲ್ಲೆ ಮನವಿಟ್ಟುಕರೆಕರೆಯ ಬಿಟ್ಟುಚಂದದಿ ಕರ್ಪೂರ ವೀಳ್ಯವನಿಟ್ಟುಸಡಗರವ ತೊಟ್ಟುಒಂದಾಗಿ ಚೆದರುತ ತೋಷವ ತೊಟ್ಟುತ್ವರೆ ಬರುವರು ಅಷ್ಟುಅಂದದಿಂದಲಾನಂದವೇರಿ ಮು -ಕುಂದನಂಘ್ರಿ ಮುದದಿಂದ ಸ್ಮರಿಸಿ ಬರು-ವಂದ ನೋಡಿ ಗೋವಿಂದ ಕೊಳಲ ಬಹುಅಂದದೊಳಿಡೆ ಈ ಇಂದುವದನೆಯರುಚಂದ್ರನುದಯವಾದಂತೆ ಆಯ್ತು ಮನಗಂಧ ಕಸ್ತೂರಿ ತಂದು ಆಗ ಹರಿಕಂದರದೊಳಗಿಡೆ ರಂಗವಿಠಲ ದಯದಿಂದ ನೋಡ್ದ ಪುರಂಧ್ರಿಯರನ್ನು3
--------------
ಶ್ರೀಪಾದರಾಜರು
ರಮಾವಿನುತ ವಿಠಲ ಪೊರೆಯಬೇಕೊ ಇವಳ ಪ ಕ್ರಮಾನುಸಾರ ತವದಾಸ್ಯ ಕಾಂಕ್ಷಿಪಳ ಅ.ಪ. ಪತಿಸುತರು ಹಿತರಲ್ಲಿ ವ್ಯತಿರೇಕ ಮತಿ ಕೊಡದೆಅತುಳ ಪ್ರೀತಿಯಲಿ ಅವರಂತರಾತ್ಮಕನಾ |ಹಿತ ಸೇವೆಯೆಂಬ ಸನ್ಮತಿಯನೇ ಕರುಣಿಸುತಕೃತ ಕಾರ್ಯಳೆಂದೆನಿಸೊ ಕ್ಷಿತಿರಮಣ ಹರಿಯೇ 1 ಭವಶರಧಿ ದಾಟಿಸುವ ಪ್ಲವವೆನಿಪ ತವನಾಮಸ್ತವನಗಳ ಸರ್ವತ್ರ ಸರ್ವಕಾರ್ಯದಲಿಹವಣಿಸುತ ನೀನಾಗಿ ಪ್ರವರ ಸಾಧನಗೈಸೊಪವಮಾನ ಸನ್ನಿಹಿತ ಭುವನ ಮೋಹನನೇ 2 ಪ್ರಾಚೀನ ಕರ್ಮಗಳ ಯೋಚಿಸಲು ಎನ್ನಳವೇಕೀಚಕಾರಿಪ್ರೀಯ ಮೋಚಕೇಚ್ಛೆಯನುಸೂಚಿಸುವುದೋ ಸವ್ಯಸಾಚಿಸಖ ಶ್ರೀಹರಿಯೆನೀಚೋಚ್ಚ ತರತಮವ ತಿಳಿಸಿ ಪೊರೆ ಇವಳಾ 3 ನಂದ ಗೋಪನ ಕಂದ ಇಂದಿರೇಶನೆ ಹೃದಯಮಂದಿರದಿ ತವರೂಪ ಸಂದರುಶನಾ |ನಂದವನೆ ಇತ್ತಿವಳ ಅಂದದಲಿ ಸಲಹೆಂದುಕಂದರ್ಪಪಿತ ನಿನ್ನ ವಂದಿಸುತ ಬೇಡ್ವೆ4 ಅನಿರುದ್ಧ ರೂಪಾತ್ಮಮಧ್ವಗುರು ಗೋವಿಂದ ವಿಠಲ ಪ್ರಾರ್ಥಿಸುವೆ 5
--------------
ಗುರುಗೋವಿಂದವಿಠಲರು
ರಾಮ ರಾಮ ರಾಮ ಶ್ರೀರಾಮನೆನ್ನಿರೊ ಪ್ರೇಮದಿಂದ ಶ್ರೀ ಜಾನಕಿ ಪ್ರೇಮನನೆನೆಯಿರೊ ಪ ಅಂದದಿಂದ ಈ ದಶರಥನಂದನೆಂದು ---- ಚಂದದಿಂದ ಚಲನೆಯಿಲ್ಲದೆ ಚಿತ್ತಸ್ವಸ್ಥದಿ ಕಾಲ ಕಳೆಯ ಹೊಂದಿ ದೇವರ ಚರಣ ಕಮಲಾ ನಂದ ಅರ್ಚಿಸುವ ಮಂದಿರದಿ ಭಜಿಸಿರೊ 1 ಕಾಮನಯ್ಯನ ಕಡಲೊಳಾಳ್ದÀ್ದನ ಕೂರ್ಮರೂಪ ವರಾಹನಾದನ ಸ್ವಾಮಿ ನರಹರಿ ವಾಮನ ಪರಶುರಾಮನಾದನಾ ರಾಮಕೃಷ್ನ ಬೌದ್ಧಕಲ್ಕಿ ನಾಮವುಳ್ಳ ನಾರಾಯಣನ ನೇಮದಿಂದ ನಿತ್ಯದಲ್ಲಿ ನಾಮ ಸ್ಮರಿಸಿರೊ 2 ಪಿತೃವಾಕ್ಯ ಪಾಲಿಸಿದವನು ಸತತ ಭಕ್ತರ ಸಲಹುತಿಹನು ಕ್ಷಿತಿಗೆ ಒಡೆಯನಾದ ದೇವನು 'ಶ್ರೀ ಹೊನ್ನ ವಿಠ್ಠಲಾ’ ನತಿಶಯದಿಂದಲಿ ಹೃದಯನಂಬಿ ಇರುವ ನರರಿಗೆ--------ಸದ್ಗತಿಯ ತೋರುವನಧಿಕ ಸಂಪನ್ನ 3
--------------
ಹೆನ್ನೆರಂಗದಾಸರು
ರಾಮಯನ್ನಮ:ಎನ್ನೋ ರಾಮಾಯನ್ನಮ: ನಾಮವರಿತದ್ದೇ ರಾಮಾಯನ್ನಮ: ಪ ಬಂದದ್ದು ಬಾರದ್ದು ರಾಮಾಯನ್ನಮ: ತಂದದ್ದು ತಾರದ್ದು ರಾಮಾಯನ್ನಮ: ಅಂದದ್ದು ಆಡದ್ದು ರಾಮಾಯನ್ನಮ: ಮಿಂದದ್ದು ಮೀಯದ್ದು ರಾಮಾಯನ್ನಮ: 1 ಉಂಡದ್ದು ಉಟ್ಟದ್ದು ರಾಮಾಯನ್ನಮ: ಕೊಂಡದ್ದು ಕೊಟ್ಟದ್ದು ರಾಮಾಯನ್ನಮ: ಕಂಡದ್ದು ಕಾಣದ್ದು ರಾಮಾಯನ್ನಮ: ಬಂಡಾದದ್ದಾಗದ್ದು ರಾಮಾಯನ್ನಮ: 2 ಇದ್ದದ್ದು ಇಲ್ಲದ್ದು ರಾಮಾಯನ್ನಮ: ಮೆದ್ದದ್ದು ಮೆಲ್ಲದ್ದು ರಾಮಾಯನ್ನಮ: ಬಿದ್ದದ್ದು ಬೀಳದ್ದು ರಾಮಾಯನ್ನಮ: ಕದ್ದದ್ದು ಕದಿಯದ್ದು ರಾಮಾಯನ್ನಮ: 3 ಬಿತ್ತಿದ್ದು ಬೆಳೆದದ್ದು ರಾಮಾಯನ್ನಮ: ಎತ್ತಿದ್ದು ಎತ್ತದ್ದು ರಾಮಾಯನ್ನಮ: ಸುತ್ತಿದ್ದು ಮುತ್ತಿದ್ದು ರಾಮಾಯನ್ನಮ: ಅತ್ತದ್ದು ಹೊತ್ತದ್ದು ರಾಮಾಯನ್ನಮ: 4 ಭಕ್ತಿ ಭಾವನೆಯೆಲ್ಲ ರಾಮಾಯನ್ನಮ: ಯುಕ್ತಿ ಯೋಚನೆಯೆಲ್ಲ ರಾಮಾಯನ್ನಮ: ಯುಕ್ತಾಯುಕ್ತವು ರಾಮಾಯನ್ನಮ: ಮುಕ್ತಿ ಸಾಧ್ಯ ಶ್ರೀ ರಾಮಾಯನ್ನಮ: 5
--------------
ರಾಮದಾಸರು
ಲಕ್ಷುಮೀನಾರಾಯಣ ಜಯಲಕ್ಷುಮೀ ನಾರಾಯಣ ಲಕ್ಷುಮೀನಾರಾಯಣ ಜಯ ಲಕ್ಷುಮೀ ನಾರಾಯಣ ಪ. ಪಾದ ದಾನವ ಗರ್ವಹರಣ ಗದಾದಿ ಧಾರಣ ಪರ್ವತಾರಿ ವರ ಪ್ರದ 1 ನಂಬಿಕೊಂಡಿಹೆ ನಿನ್ನ ದಿವ್ಯ ಪದಾಂಬುಜಗಳನು ಸರ್ವಕಾಲದಿ ಮನದೊಳಗಿಂಬುಗೊಳು ಕಮಲಾಂಬಕ 2 ಆರು ಸಂಖ್ಯೆಯ ಕಳ್ಳರೆನ್ನನು ಗಾರುಮಾಡುವರಾದರಿಂದತಿ ಧೀರ ನಿನ್ನ ಪದಾರವಿಂದಕೆ ದೂರುವೆನು ರಘುವೀರನೆ 3 ದುರ್ಮತಿಗಳಾದಸುರಹರಣಕೆ ಭರ್ಮಗರ್ಭನು ಬಂದು ಸ್ತುತಿಸಲು ಧರ್ಮಸಂಸ್ಥಾಪಿಸುತ ಬಹು ಶುಭಕರ್ಮ ತೋರುವ ಕರುಣಿಯೆ 4 ಸಪ್ತ ಋಷಿಗಳ ಕೂಡಿಕೊಂಡತಿ ಭಕ್ತಿಯಿಂದಲಿ ನಿನ್ನ ಭಜಿಸಿದ ಸತ್ಯವ್ರತನಿಗೆ ಸಕಲ ಶ್ರುತಿಗಳ ತತ್ವ ತಿಳಿಸಿದ ಮತ್ಸ್ಯನೆ 5 ಮುಳುಗಿಕೊಂಡಿಹ ಅಮಿತಗುರು ಮಂದರವ ಧರಿಸುತ ಅಮೃತರಸ ತೆಗೆದಿತ್ತನೆ 6 ದೈತ್ಯನ ತರಿದು ಬಿಸುಟು ವಿ- ಜನಿತ ಪವಿತ್ರ ಯಜ್ಞ ವರಾಹನೆ 7 ಘಡುಘಡಿಸಿ ಕಂಬದೊಳು ಬಂದ ಸಿಡಿಲಿನಂತಿಹ ನಖದಿ ದೈತ್ಯನ ಒಡಲ ಬಗೆದನು ಕೋಪದಿಂದ 8 ದಾನಕೊಂಡನಾನೆವನದಿ ದಾನವಾಹೃತ ಧರೆಯ ಕಸ್ಯಪಸೂನುಗಳಿಗೊಲಿದಿತ್ತನೆ 9 ದುಷ್ಟಭೂಭುಜಭಾರದಿಂದತಿ ಕಷ್ಟಪಡುತಿಹ ಧರೆಯ ಕರುಣಾ ನೃಪರ ಕಡಿದ 10 ನೀರಜಾವದನಾರವಿಂದ ಮಹಾ ರಸಾಸ್ವಾದನ ಪದ ಕಪಿವೀರನಿಗೆ ಸ್ವಾರಾಜ್ಯ ನೀಡಿದ ಮಾರುತಿಗೆ ದಯ ಮಾಡಿದ 11 ಬಾಲ ಲೀಲೆಯ ತೋರಿ ಗೋಪಕ ಬಾಲೆಯರ ಕೂಡಾಡಿದೆ ಖೂಳಕಂಸನ ಕೆಡಹಿ ದಾನವಮೂಲ ಕಿತ್ತು ಬಿಸಾಡಿದೆ 12 ಜೈನರನು ಮೋಹಿಸುವೆನೆಂದನುಮಾನವಿಲ್ಲದೆ ನಗ್ನನಾಗಿ ಹೀನ ಬುದ್ಧಿಯ ತಿಳಿಸಿ ತ್ರಿಪುರವ ಹಾನಿಗೈಸಿದ ಬೌದ್ಧನೆ 13 ಸುಧೆಯನು ಕರೆದು ಶಿರದಲಿ ತುಂಗ ವಿಷಯ ತರಂಗ ತಪ್ಪಿಸು ಅಂಗಭಂಗವ ಶಿಂಗನೆ 14 ಮಿಂಚಿನೊಡ್ಡಿದ ಮೇಷನಂದದಿ ಪಂಚವರ್ಣದ ತುರಗವೇರಿ ಸಂಚರಿಸಿ ಮ್ಲೇಂಛರನು ಕೊಲ್ಲಿಸಿ ಲಾಂಛಜೀವನ ವರದನೆ 15 ಮಂದಿರದಿ ನೀ ಬಂದು ರಕ್ಷಿಪೆ ಎಂದು ಸಕಲಾನಂದಗೊಂಡಿಹೆ ಇಂದಿರೇಶನೆ ಎಂದಿಗೂ ಈ ಅಂದದಿಂದಲಿನಿಂದ ಸಲಹು 16 ಕೇಶವಾದಿ ದ್ವಿದಶರೂಪವು ಮಾಸಗಳಿಧಿಷ್ಠಾನನಿಗೆ ಪ- ರೇಶ ಕಡೆಯಲಿರುವ ಕಾರ್ತಿಕವಾಸ ದಾಮೋದರ ಹರನೆ 17 ಬಳಲಿ ಕರ್ಮವ ಮಾಡಲಾರೆ ನಳಿನಜಾರ್ಜಿತ ನಿನ್ನ ಪಾದದ ನೆಳಲನಂಬಿ ಸುಮ್ಮನಿರುವೆ 18 ಅಖಿಳದೋಷ ನಿವಾರಣಾದ್ಭುತ ಸಕಲಸದ್ಗುಣಧಾರಣಾ ಕುಂಡಲ ಧಾರಿ ವೆಂಕಟಶಿಖರ ವರ ಸುಖಕಾರಣಾ 19
--------------
ತುಪಾಕಿ ವೆಂಕಟರಮಣಾಚಾರ್ಯ
ಲೋಕನೀತಿ ಮನವೇ ನೀ ಭಜಿಸು| ರಾಮನಾಮವನು ಘನ ಮುಕ್ತಿಸಾಧನೆ | ಪಾದನಾಮವನು ಪ ಅಂದದ ನಾಮ| ಚಂದದ ನಾಮ|| ವಂದಿಸೆ ಮನಕಾ| ನಂದದ ನಾಮ 1 ಕೋಮಲ ನಾಮ| ನಿರ್ಮಲ ನಾಮ| ಕಾಮಿತವೀವ ಸು| ಪ್ರೇಮದ ನಾಮ 2 ಪಾವನ ನಾಮ| ಶ್ರೀವರ ನಾಮ|| ಪವನಸಂಜಾತನು ಸ್ಮರಿಸುವ | ನಾಮ 3 ಅಗಣಿತ ಮಹಿಮ|| ಜಗದಭಿರಾಮನ | ಘನಗುಣ ನಾಮ 4 ಭಕ್ತಾದಿ ಜನರು| ಭಜಿಸುವ ನಾಮ| ಮುಕ್ತಿಸಾಧನವಾದ| ಭಕ್ತಿಯ ನಾಮ 5
--------------
ವೆಂಕಟ್‍ರಾವ್
ವಂದಿಪೆ ಶ್ರೀಮನ್ನಾರಾಯಣಗೆ ವಂದಿಪೆ ಅಮ್ಮ ಲಕ್ಷ್ಮೀದೇವಿಗೆ ಪ ವಂದಿಪೆ ವಿಶ್ವಕ್ಸೇನರಿಗೆ ಕುಂದದಿರಲಿ ಎನ್ನ ಸನ್ಮತಿ ಎಂದು ಅ.ಪ ವಂದಿಪೆ ನಾ ಮೊದಲಾಳ್ವಾರರಿಗೆ ಅಂದದಿ ಹರಿಯ ತೋರಿಕೊಟ್ಟರಿಗೆ ಕಂದಮಿಳಲಿ ಸೊಲ್ವ ನುಡಿಗಳಿಗೆ ಪ್ರ- ಬಂಧದಿವ್ಯಗಳ ಬೆಳಗಿಸಿದವರಿಗೆ 1 ವಂದಿಪೆ ವಂದಿಪೆ ಆಚಾರ್ಯರಿಗೆ ಚಂದದಾ ಯತಿತ್ರಯರುಗಳಿಗೆ ಸುಂದರ ಶ್ರೀವೈಷ್ಣವ ತತ್ವಗಳನು ಹೊಂದಿಸಿ ಬಂಧಿಸಿ ಸ್ಥಾಪಿಸಿದವರಿಗೆ 2 ಇನ್ನು ವಂದಿಪೆ ಗುರುಪೀಠಕ್ಕೆ ಚೆನ್ನ ತಿರುನಾರಾಯಣಪುರಕೆ ಉನ್ನತ ರಂಗದಾಸಯತಿವರ್ಯಗೆ ಸನ್ನುತ ಪಿತಾನುಜ ಶಾಮದಾಸರಿಗೆ 3 ಸಾಜದಲೆನ್ನಲಿ ಅರಿವನು ಮೂಡಿಸಿ ಓಜನನಾಗಿಸೆ ಕೇಶವ ನಾಮದಿ ಆರ್ಜಿಸಿ ಉಪಾದಾನದಿ ಬಳಲಿದ ಪೂಜ್ಯಪಿತ ವೆಂಕಟರಂಗಾರ್ಯರಿಗೆ 4 ವಂದಿಪೆ ಕೊನೆ ಮೊದಲಿಲ್ಲದೆ ವಂದಿ- ಪೆಂ ದಾಸನ ಮಾಡಿದ ದೇವನಿಗೆ ತಂದೆ ಜಾಜಿಪುರಾಧೀಶನಿಗೆ ಮುದ- ದಿಂದ ಶ್ರೀ ಚೆನ್ನಕೇಶವಗೆ 5
--------------
ನಾರಾಯಣಶರ್ಮರು
ವಾಲೆ ಬಂದಿಹುದೇ ತಂಗೀಯನ ವ್ವಾಲೆ ಬಂದಿಹುದೆ ಪ. ವಾಲೆ ಬರೆದ ಭಕ್ತ ಪಾಲ ಶೀಲ ಕರುಣಾಲ ವಾಲೆ ಅ.ಪ. ಅಂಬುರುಹೋದ್ಭವ ಅಖಿಲ ಸುರಾ ರಂಬರದಲಿ ಸ್ತುತಿಸೆ ಶಂಬರಾಸುರ ಸಂಹರನೈಯ್ಯನ ಹಡಗು ಅಂದು ಮಾರುತನಿಲ್ಲದೆ ಗೋಪಿ ಚಂದನಸಹಿತನಿಲ್ಲೇ ಮಧ್ಯದಿಂದಲೀ ಅಂದದಿ ಮುನಿಗಳ ನಿಂದು ಸ್ತುತಿಸುತಾ ನಂದದಿಂದಾನಂದಕಂದನ ಮುಂದೆ ಕರೆಯೆ ಮುನಿ ದಂದುಗ ಹರಿಸುತ ಬಂದೆನೆಂದು ಇಂಥಾ 1 ಬಂದೆನೆಂದು ತೋರನೆ ಹರಿ ನಿಂದಿರುವನೆ ಬದಿಲಿ ಇಂದುಧರನ ಆಣೆ ಎನ್ನ ಮಂದಿರದಲಿ ತೋರುತ ಬಂದ ಭಕ್ತರ ಸೇವಿಸೆಂದು ಬರೆದಿಹ ಬಂಧು ನಾನೆಂದು ತಿಳಿ ಎಂದು ಹೇಳುವತೆರ ಬರಹವ ಇಂದಿರೇಶ ತಾ ಬಂದು ನಿಂದು ಕೈ ಪಿಡಿದ ವಾಲೆ 2 ಶ್ರೀ ಶ್ರೀನಿವಾಸನ ತೋರುವೆ ವಾಸವಾಗುತ ಮನದಿ ಕ್ಲೇಶವ ಕಳೆ ಮನದಾಸೆ ಬಿಟ್ಟರೇನು ಶ್ರೀಶನಾಜ್ಞೆಯೆಂದು ಎನ್ನ ಶುಭ ಪತ್ರವ ದಾಸಳಾದ ಎನ್ನ ಮನದಾಸೆ ಪೂರೈಸುವ ವಾಲೆ ವಾಸುದೇವನ 3
--------------
ಸರಸ್ವತಿ ಬಾಯಿ
ವಾಹನ ಈಕ್ಷಿಸು ಪ್ರೇಮದೊಳೆನ್ನ ನೀಂ ಪ ಭೂರಿ ಸಾರಸ ಸನ್ನಿಭ ಲೋಚನ ಶ್ರೀಶ ಶಾರದ ಚಂದ್ರಸಮ ಹಾರ ವಿಹಾರ1 ಇಂದಿರೆ ತನುಮಂ ಅಂದದೊಳಪ್ಪುತ ಮೋದವ ಪೊಂದಿ ವಂದಿತ ಜನ ಮನೋನಂದ ವಿನೋದ 2 ಶ್ರೀವನಮಾಲಾ ಭಾವಿತಭಾವ ದೇವಚಿದಾತ್ಮ ಜೀವಪ್ರಭಾವ ಶ್ರೀ ವಿಭವಾನ್ವಿತ ಪಾವನರೂಪ 3 ವೈರಿ ಜ್ಞಾನ ಸ್ವರೂಪ ಭಾನುಕರಾರ್ಪಿತ ಭಾಮ ಯಶೋಧ ಧೇನುಕಪುರಪ್ರಿಯ ಗಾನ ಸ್ವರೂಪ 4
--------------
ಬೇಟೆರಾಯ ದೀಕ್ಷಿತರು
ಶ್ರೀ ಗುರುವರದೇಂದ್ರರ ಸ್ತೋತ್ರಗಳು ಅಂದಣೇರಿದ ವರದೇಂದ್ರ ಮುನಿಪರ ನಿಂದು ಪಾಡುವರಫವೃಂದ ತರಿವರ ಪ ಅಂದದಿ ಭೂಸುರ ಸಂದಣಿ ಮಧ್ಯದಿ ಚಂದದಿ ಬಹು ಕರ್ಮಂದಿಗಳರಸ ಅ.ಪ ಶ್ರೀ ಮಧ್ವಮತಾಂಬುಧಿ ಸೋಮ ನಿಷ್ಕಾಮ ತಾಮಸಮತಕÀಂಜಸ್ತೋಮ ನಿಧೂಮ ಆ ಮಹಾಭಕ್ತ ಕುಮುದ ಪ್ರೇಮ ಸತ್ಕಾಮ ಕಾಮಿತ ಕಲ್ಪದ್ರುಮಗುರುಸಾರ್ವಭೌಮ ರಾಮ ಪದಾಂಬುಜ ಪ್ರೇಮದಿ ಭಜಿಸುವ ಭೂಮಿಸುರರ ಹೃತ್ತಾಮಸಹಾರಾ 1 ಉದಿತಾಕರ್À ಸಂಕಾಶ ವಿಧಿಕುಲಾಧೀಶ ಮುದದಿ ಭಜಿಸುವ ಭಕ್ತಹೃದಯನಿವಾಸ ಸದಮಲಭಕ್ತಙÁ್ಞನ ಉದಜವಿಕಾಸ ವಿಧಿಕುಲದ್ವೇಷಿ ಕುಮುದ ತತಿನಾಶ ವಿಧವಿಧದಲಿ ಹರಿಪದ ಭಜಿಸುವ ಮತಿ ವದಗಿ ಪಾಲಿಸು ಹೃದಜನಸದಯಾ 2 ಕರುಣಾನಿಧಿಯೆ ನಿನ್ನ ಚರಣ ಸೇವಕರ ಜರಮರಣಾದಿ ದೋಷತ್ವರಿತ ಪರಿಹಾರ ಶರಧಿ ವಿಹಾರ ನಿರುತದಿ ಹರಿಯನಾಮ ಸ್ಮರಿಸುವಧೀರ ವರದೇಶ ವಿಠಲನ ಕರುಣದಿ ಧರೆಯೊಳು ಮೆರೆಯುವ ಯತಿಕುಲವರಿಯ ಸುಚರಿಯಾ 3
--------------
ವರದೇಶವಿಠಲ
ಶ್ರೀದೇವಿಯಂ ಭಕ್ತರೊಡನೆ ಶುಭಕಾಯವೊಲಿದು ಆಡಿದನುಯ್ಯಾಲ ಪ ನೀಲಿಮಾಣಿಕದ ಮಂಟಪವ ಕಟ್ಟಿ ಮುತ್ತಿನ ಸರಪಣಿಗಳನೆ ಬಿಗಿಸಿ ಮೇಲುಕಟ್ಟುಗಳ ಹಾಸಿ ಮಲ್ಲಿಗೆಮಾಲೆಗಳ ಶೃಂಗರಿಸಿ 1 ಪಟಹ ನಿಸ್ಸಾಳ ಭೇರಿ ಕೊಳಲು ತಮಟವಾದ್ಯ ಮೊಳಗುತಿರಲು ಕುಟಿಲಕುಂತಲೆಯರೊಡನೆ ಆದಿಪತಿ ವಿಠಲನಾಡಿದ 2 ಚಂದ್ರಮನ ಪೋಲ್ವ ಮುಖದಿ ಫಣಿಯೊಳು ಶೌನಕಾದಿಗಳು ಸೇರಿ [ಅಂದದಿ] ಸ್ತುತಿಸೆ ಕ್ಷೀರಾಬ್ಧಿಶಯನನಾಡಿದ3 ಭೇರಿ ಶಂಖಗಳ ದ್ವನಿಯ ದುಂದುಭಿಯ ಭೋರಿಡುವ ಜಯರವಗಳ ನಾರಿಯರು ಶೋಭನಗಳ ಪಾಡುತ್ತಿರೆ ಧೀರನಾಡಿದ 4 ವೇದಚೋರನ ತರಿದು ಆದಿಮೂರುತಿ ವರದನ ವಿ- ನೋದದಿ ತೂಗಿದರು ರವಿಸೌಂದರಿಯನಾಡಿದ 5 ನೀಲವೇಣಿಯರು ಪಾಡುತ ತೂಗಿದರು ಗೋಪಾಲನಾಡಿದ 6 ಪರಶುಧರನೆನಿಸಿ ಹರನ ಶ್ರೀರಾಮಚಂದ್ರ ಕರುಣಾ ವಾರಿಧಿ ಕೃಷ್ಣನ ತೂಗಿದರು ವರಸತಿಯರು 7 ಚೋಜಿಗದಮತ್ಪುರದಸತಿಯರನುವೋಜಿಗಲಿಸಿದಭೌದ್ಧನಾ ತೇಜಿವಾಹನಕಲ್ಕ್ಯನಾ ತೂಗಿದರು ರಾಜೀವನೇತ್ರೆಯರು ಪಾಡುತ 8 ಚಿತ್ತಜೌಘ ಮನಮನದ ಚದುರೆಯರು ಮುತ್ತು ಸರಗಳನೆ ಧರಿಸಿ ದತ್ಯಂತ ಮೋಹದಿಂದ ತೂಗಿದರು ಹಸ್ತಿನೀಕಾಮಿನಿಯರು9 ಮತ್ತೆಸಾರಂಗವೆನಲುನಡೆಯುತಲಿವಿಸ್ತರಿಸಿಕುಚಯುಗಳದಿ ಕಸ್ತೂರಿಯ ಗಂಧವೆಸೆಯೆ ತೂಗಿದರು ಚಿತ್ತಿನೀಜಾತದವರು 10 ಕುಂಕುಮಾಂಕಿತ ಚದುರೆಯರಲಂಕರಿಸಿ ಭೂಷಣಗಳ ಶಂಕರನಸಖನ ಪಾಡಿ ತೂಗಿದರು ಶಂಖಿನೀಕಾಮಿನಿಯರು 11 ಕದಪುಗಳ ಕಾಂತಿಹೊಳೆಯೆ ಮೊಗಸಿರಿಯಪದುಮವನು ಪೋಲ್ವಂದ ಯದುವೀರನನು ಪಾಡುತತೂಗಿದರು ಕುಮುದಿನೀಕಾಮಿನಿಯರು 12 ಅಂಗನಮಣಿ ಪಾರ್ವತಿ ಸರಸ್ವತಿಯರು ರಂಗುಮಾಣಿಕರತ್ನದ ಮಂಗಳಾರತಿಯನೆತ್ತಿ ತೂಗಿದರು ಗಂಗೆಯನು ಪಡೆದಯ್ಯನ 13 ಚಿಂತಿತಾರ್ಥವ ಸಲಿಸುವ ಮುದ್ದುವೆಂಕಟೇಶನು ತಾನೆನಿಸುವ ಪಿತ ದೇವಪುರದ ಶ್ರೀಲಕ್ಷ್ಮೀಕಾಂತನಾಡಿದನುಯ್ಯಾಲಾ 14
--------------
ಕವಿ ಲಕ್ಷ್ಮೀಶ
ಶ್ರೀನಿವಾಸನೆ ನಿನ್ನ ಧ್ಯಾನದಲಿ ನಾನಿದ್ದೆ ಕರವ ಪಿಡಿದೆ ಪ ಭಾನುಶತತೇಜ ನಿನ್ನಾನನಾಬ್ಜದ ಮಧುವ ಪಾನ ಮಾಡುತ ತೃಪ್ತಿ ಕಾಣದಿರುವೆ ಅ.ಪ ಕಾಮನಂತಹ ರೂಪ ಸೋಮನಂತಹ ಕಾಂತಿ ರಾಮನಂತಹ ಸತ್ಯ ಧರ್ಮ ನಡತೆ ಈ ಮಹಾ ಸುಗುಣಶಾಲಿಯು ನೀನು ನಿನ್ನಯ ಪ್ರೇಮವನು ಕಾಮಿಸುವ ಹಸುಳೆ ನಾನು 1 ಗಂಧ ಫಲಪುಷ್ಪ ತಾಂಬೂಲಗಳನು ಅಂದದ ಹೇಮದ ತಬಕದಲ್ಲಿ ತಂದು ಕೊಡುವೆನು ಪ್ರೇಮ ಕಾಣಿಕೆಯನು ಮಂದಹಾಸದಿ ನಿನ್ನ ಪಾಂಗದಿಂದ ನೋಡೋ 2 ಒಂದು ದಿನ ಕನಸಿನಲಿ ಕಂಡೆನಚ್ಚರಿ ದೃಶ್ಯ ಮುಂದೆ ನಿಂತಳು ಯುವತಿ ನಸುನಗುತಲಿ ಗಂಧ ತಾಂಬೂಲ ಫಲಪುಷ್ಪ ಪರಿಮಳದ್ರವ್ಯ ತಂದಿಹಳು ಚಿನ್ಮಯದ ತವಕದಲ್ಲ್ಲಿ ಕಂದನಿದ ನಿನಗಾಗಿ ತಂದಿರುವೆನೆಂದು ಮೃದು ಮಂದಹಾಸದಿ ತಲೆಯ ಸವರಿ ನುಡಿಯೆ ಸುಂದರಿಯೆ ನೀನಾರು ಬಂಧುವರ್ಗಗಳಲ್ಲಿ ಹಿಂದೆ ನಾ ನೋಡಿಲ್ಲವೆಂದು ನುಡಿಯೆ ನಂದಗೋಕುಲದಲ್ಲಿ ನಂದನಕುಮಾರನಿಗೆ ಅಂದ ರಾಣಿಯು ನಾನು ಸತ್ಯಭಾಮೆ ಇಂದ್ರದೇವನ ದಿವ್ಯ ನಂದನವನದಿಂದ ತಂದಿರುವೆ ನಿನ್ನ ವರಕುಲವನರಿತು ಸುಂದರಾಂಗನ ಸೇರಿ ಸುಖಪಡುವ ಸೌಭಾಗ್ಯ ಮುಂದಿಹುದು ನಿನಗೆ ಬಲು ತ್ವರಿತದಲ್ಲಿ ಅಂದು ನೀ ಈ ಸ್ವರ್ಣಮಯ ತವÀಕದಲ್ಲಿರುವ ಗಂಧ ಪುಷ್ಪಾದಿಗಳ ಫಲವನರಿವೆ ಚಂದದಲಿ ದಾಂಪತ್ಯ ಸುಖಶಾಂತಿ ಪಡೆಯುವೆ ಕಂದ ನೀ ಸ್ವೀಕರಿಸು ಪೋಗಿ ಬರುವೆ ಎಂದು ನುಡಿಯಲು ತರುಣಿ ಎಚ್ಚರಿತೆನು ಶುಭ ಸುದ್ದಿಯು ತಂದಿರುವೆ ತಬಕವ ಪ್ರಸನ್ನ ವದನ
--------------
ವಿದ್ಯಾಪ್ರಸನ್ನತೀರ್ಥರು
ಶ್ರೀಮತ್ ತಂದೆವರದಗೋಪಾಲದಾಸ ರಾಯಾವೃಂದದಿಂದಲಿ ನಿಮಗೊಂದಿಸುವೆನೋ ಜೀಯಾ ಪ. ಇಂದಿನವರೆಗೆ ನಾನಿಂದ್ಯ ಜನರೊಳು ಕೂಡಿನಿಂದ್ಯ ಮಾಡುತ ಪರರ ಡಂಭತನದಲಿ ಮೆರೆದೆನೊಕಂದನಾ ಕುಂದುಗಳ ಒಂದನೆಣಿಸದೆ ಗುರುವೇಮಂದಜನ ರಾಶಿಯೊಳು ಬೆಂದುಹೋಗುವುದನು ಕಂಡುಅಂದದಲಿ ನೀ ಹಿಡಿದೆಳೆತಂದೂ 1 ಮುಂದೆ ಪೇಳುವೆ ಕೇಳೋಚಂದ್ರಮೌಳಿಯೆ ನಿನ್ನ ಪ್ರೀತಿಪಾತ್ರನಾದಸುಂದರಾಂಗನ ಮುಖದೀ ನೀನಿಂದು ಅಘವೃಂದಗಳ ಹೊಡೆದೋಡಿಸೀಮಿಂಚಿನಿಂದಕ್ಷ ರ, ಯ, ಮ ಎಂಬಕ್ಷರಗಳ ಕಲ್ಪಿಸಿಎಂದಿಗೂ ಮರೆಯದಂಥ ತಂದೆವರದವಿಠಲನೆಂಬಅಂಕಿತದಿಂದ ಬಂಧನವ ಮಾಡಿ ಭಾವ ಸಂವತ್ಸರಫಾಲ್ಗುಣ ಶುದ್ಧ ತ್ರಯೋದಶಿಚಂದ್ರವಾರ ಅರುಣೋದಯ ಕಾಲದೀಕಡೆಕೋಳ ಶ್ರೀ ವೆಂಕಟೇಶನ ಸನ್ನಿಧಾನದಿಅನುಗ್ರಹಿಸಿದೆಯೋ ಮಹಾರಾಯಾಮಂದಮತಿ ನಾ ನಿಮ್ಮ ಮಹಿಮೆಯನು ಪೇಳಲೆನ್ನಳವೆತವಪಾದಾರವಿಂದದಿ ಅನವರದ ಜ್ಞಾನ ಭಕುತಿವೈರಾಗ್ಯವನಿತ್ತು ರಕ್ಷಿಸಬೇಕೋತಂದೆವರದವಿಠಲದೂತಾ ಮನೋ ನಿಯಾಮಕ ದೊರೆಯೇ
--------------
ಸಿರಿಗುರುತಂದೆವರದವಿಠಲರು
ಶ್ರೀರಾಮ ಜಯರಾಮ ಜಯ ಜಯತು ರಾಮ ಶ್ರೀರಾಮ ಜಯರಾಮ ಜಯ ಜಯತು ರಾಮ ಪ ನಮೋ ರಾಮಚಂದ್ರ ಸದಾಪೂರ್ಣಾನಂದ ನಮೋ ಸುಗುಣ ಸಾಂದ್ರ ಕೌಸಲ್ಯಕಂದ ನಮೋ ರಾಘವೇಂದ್ರ ಸೀತಾ ಕುಮುದ ಚಂದ್ರ ನಮೋ ಅಜಭವೇಂದ್ರಾದ್ಯಖಿಲ ಸುರವಂದ್ಯ 1 ನಿನ್ನ ಉದಯದಿರವಿಯು ಉನ್ನತಿಯನೈದಿಹನು ಘನ್ನತೆಯ ಪೊಂದಿಹರು ಕೌಸಲ್ಯದಶರಥರು ನಿನ್ನ ಅನುಜರು ಜಗದಿ ಪರಮ ಪಾವನ್ನರು ನಿನ್ನರಸಿ ಶ್ರೀಸೀತೆ ತ್ರೈಲೋಕ್ಯ ಮಾತೆ 2 ನಿನ್ನ ಕರುಣದಿ ಹನುಮ ಬ್ರಹ್ಮತ್ವ ವೈದಿದನು ನಿನ್ನ ನಾಮದಿ ವ್ಯಾಧ ವಾಲ್ಮೀಕನಾದ ನಿನ್ನ ಪದರಜ ಸೋಂಕಿ ಶಿಲೆಯಬಲೆಯಾದುದು ನಿನ್ನ ಪ್ರೇರಣೆಯಿಂದ ಪ್ರಣವೆ ಜ್ವಾಲಾಯಿತು 3 ನಿನ್ನ ಪ್ರೇಮದಿ ಶಬರಿ ಮುನ್ನ ಸವಿನೋಡಿ ಫಲ ನಿನ್ನ ಪದಕರ್ಪಿಸಲು ಘನಪದವಿಯಿತ್ತೆ ನಿನ್ನ ಸಖ್ಯವನೆ ಬೆರಸಿದವ ಸುಗ್ರೀವನು ಧನ್ಯವಾಗಿರುತಿಪ್ಪ ನಿಹಪರಂಗಳಲಿ 4 ನಿನ್ನ ದಾಸ್ಯವನೈದಿ ಅನಂತ ಕಪಿವರರು ಉನ್ನತೋನ್ನತ ಯೋಗ್ಯತೆಗಳ ಪಡೆದಿಹರು ನಿನ್ನ ದ್ವೇಷದಿ ರಾವಣಾದಿಗಳು ಮಡಿದರು ನಿನ್ನ ಪೊಂದಿದ ವಿಭೀಷಣ ರಾಜ್ಯಪಡೆದ 5 ಸುರರು ಕೃತ ಪುಟಾಂಜಲಿಯಲ್ಲಿ ಸ್ಥಿತರಾಗಿ ಇರುತಿಹರು ನಿನ್ನಾಜ್ಞದಿ ಇತರ ಮನುಜರ ತೆರದಿ ಪಿತನಾಜ್ಞೆ ಪಾಲಿಸಲು ವ್ರತವನೇ ಕೈಕೊಂಡು ವನಕೈದಿದೆ 6 ಜಾನಕಿಯು ಅವಿಯೋಗಿ ನಿನ್ನ ಬಳಿಯಿರುತಿರಲು ವಾನರರ ಭಲ್ಲೂಕಗಳ ಸೇನೆನೆರಹಿ ಕಾನನವ ಸಂಚರಿಸಿ ಖಳರನ್ನು ಮೋಹಿಸಿದೆ ಶ್ರೀನಿಧಿಯೆ ತವ ಲೀಲೆ ಬಹು ಚೋದ್ಯವು 7 ತಾಮಸರ ಸಂಹರಿಸಿ ಭೂಮಿ ಭಾರವನಿಳಿಸಿ ನೇಮದಿಂ ಕೈಕೊಂಡು ರಾಜ್ಯವನ್ನು ಪ್ರೇಮದಿಂ ಪಾಲಿಸಿದೆ ಪ್ರಜೆಗಳನು ವಿಧವಿಧದಿ ತಾಮರಸಜನ ಪ್ರಾರ್ಥನೆಯ ಮನ್ನಿಸಿ 8 ನಿನ್ನ ರಾಜ್ಯವೆ ಸಕಲ ಸುಖದ ಸಾಮ್ರಾಜ್ಯವು ನಿನ್ನ ಯಾಙ್ಞವೆ ವೇದವಾಣಿಯಿಂದಧಿಕವು ನಿನ್ನನಂತವತಾರಗಳ ಚರಿತೆ ಸೋಜಿಗವು ನಿನ್ನಯವತಾರಕ್ಕು ಮೂಲಕ್ಕಭೇದವು 9 ನಿನ್ನ ಮಹಿಮಾ ಜಲಧಿಯೊಳು ರಮೆಯು ಮುಳುಗಿಹಳು ನಿನ್ನ ಸ್ತುತಿಗೈವ ನಾಲ್ಮೊಗನು ನಾಲ್ಮೊಗದಿಂ ನಿನ್ನ ಧ್ಯಾನದಿ ಸದಾ ಮೋದಿಪನು ಮಾರುತನು ನಿನ್ನನೇ ಪಾಡುವರು ಅಜಪವನ ಪತ್ನಿಯರು 10 ನಿನ್ನ ನಾಮವ ಸವಿದು ಭವನು ನಲಿನಲಿಯುತಿಹ ಖಗರಾಜ ರತಿ ವರ್ಣಿಸುವರು ಚನ್ನೆ ಪಾರ್ವತಿಯು ವಾರುಣಿಯು ಸೌಪರ್ಣಿಯು ಚನ್ನಾಗಿ ಪಾಡುವರು ನಿನ್ನ ಗುಣಗಳನು 11 ಸುರರು ನಾರದಾದಿ ಋಷಿವರರು ವಂದಿಸುತ ಭಕ್ತಿಯಲಿ ನಿನ್ನ ಪದಗಳಿಗೆ ಅಂದದಲಿ ವೀಣಾ ಸುಗಾನ ಸಂಗೀತದಲಿ ಒಂದೊಂದೇ ಮಹಿಮೆಗಳ ಪೊಗಳಿ ಕುಣಿಯುವರು 12 ಸುಖತೀರ್ಥಮುನಿರಾಜ ಗುರುರಾಘವೇಂದ್ರಾರ್ಯ ಅಕಳಂಕ ವgದೇಂದ್ರ ಯತಿಸಾರ್ವಭೌಮರು ಮುಕುತಿದಾಯಕ ನಿನ್ನ ಪದಕಮಲ ಪೂಜಿಸುತ ಪ್ರಖರ ಕಿರಣದಿ ಜಗವ ಬೆಳಗುತ್ತಲಿಹರು 13 ತಾಳತಂಬೂರಿ ಸಮ್ಯಾಳದಿಂದಲಿ ಕೂಡಿ ಕಾಲುಗೆಜ್ಜೆಯ ಕಟ್ಟಿ ಮೇಲು ಸ್ವರದಿಂದ ಮೇಲಾದ ಭಕ್ತಿಯಲಿ ವಾಲ್ಗೈಸುತಿಹರು 14 ನಿನ್ನ ಲೀಲೆಯ ಕಥೆಯು ಮುಕ್ತಿಗೆ ಸತ್ಪಥವು ನಿನ್ನ ನಾಮದ ಮಹಿಮೆ ನಿಗಮಗಮ್ಯ ನಿನ್ನ ಚರಣೋದಕವು ತ್ರಿಜಗಪಾವನ್ನವು ನಿನ್ನ ನೇಮವೇ ಸೃಷ್ಟಿ ಸ್ಥಿತಿಲಯಕೆ ಕಾರಣವು 15 ನಿನ್ನ ನಾಮದಿ ಭರದಿ ಶುಕನು ಕುಣಿದಾಡುತಿಹ ನಿನ್ನ ಧ್ಯಾನದಿ ಯೋಗಿವೃಂದ ಸಂದಿಪು (ದು) ನಿನ್ನ ರೋಷದಿ ಅಜಭವಾದ್ಯರು ತೃಣರು 16 ಮೂರ್ತಿ ಕಣ್ಣಿಗಲ್ಹಾದಕರ ನಿನ್ನಂಘ್ರಿ ಸೇವೆ ಸಾಮ್ರಾಜ್ಯಗಿಂ ಪರತರವು ನಿನ್ನ ನಾಮದ ರುಚಿಯು ಅಮೃತಕಿಂತಧಿಕ 17 ನಿನ್ನ ಧ್ಯಾನವೆ ಸಕಲ ಸಾಧನದ ಸಾರವು ನಿನ್ನ ಗುಣಗಾನವೆ ಶಾಸ್ತ್ರಗಳ ಭೂಷಣವು ನಿನ್ನ ಮಹಿಮಾರಹಿತ ಕಾವ್ಯವಗ್ರಾಹ್ಯವು ನಿನ್ನ ಲೀಲಾ ರಹಿತ ಶಾಸ್ತ್ರವೆ ಕುಶಾಸ್ತ್ರ 18 ನಿನ್ನ ನಾಮಧ್ಯಾನವೇ ದೇಹ ಸಾರ್ಥಕವು ನಿನ್ನ ನಾಮವೆ ವಿವಿಧ ರೋಗನಿರ್ಮೂಲಕವು ನಿನ್ನ ನಾಮವೆ ದುರಿತರಾಶಿಗೆ ಪಾವಕವು ನಿನ್ನ ನಾಮವೆ ಸಕಲಭವಬಂಧ ಮೋಚಕವು 19 ರೇಣು ತೃಣ ಕಾಷ್ಟದಲಿ ನಿನ್ನ ದಯಪರಮೇಷ್ಠಿಯಿಂದಿರುವೆಗಳಲಿ ನಿನ್ನ ಪ್ರೇಮದಿ ನಲಿದ ಮಂದಮತಿ ವಂದ್ಯನು ನಿನ್ನಲ್ಲಿ ಮಮತೆಯಿಲ್ಲದವದೂಷಿತನು 20 ಅಜಭವಗಿರೀಶಾ ಭಜಕÀಜನ ದಾಸಾ ಸುಜನಮನತೋಷಾ ಕುಜನ ಮನಕ್ಲೇಶ ದ್ವಿಜತತಿಯ ಪೋಷ, ರಜನಿಚರನಾಶ ರಜತಪುರಧೀಶ, ಭುಜಗÀಗಿರಿ ವಾಸ 21 ತಂದೆ ತಾಯಿಯು ನೀನೆ, ಬಂಧು ಬಳಗವು ನೀನೆ ಹಿಂದು ಮುಂದು ನೀನೆ, ಎಂದೆಂದು ನೀನೆ ಬಂದಭಯ ಪರಿಹರಿಸಿ ಕುಂದದಲೆ ಕಾಯ್ವಸಂ - ಬಂಧಿಗನÀು ಆಪ್ತ ಗೋವಿಂದ ನೀನೆ 22 ಸೃಜಿಸಿದವನು ನೀನೆ ಪೋಷಿಸಿದವನು ನೀನೆ ನಿಜಗತಿಯ ಜೀವರಿಗೆ ನೀಡುವವÀನು ನೀನೆ ಅಜಪಿತನೆ ನಿನ್ನ ಪದ ಭಜನೆ ಮಾಳ್ಪವರನ್ನು ನಿಜವಾಗಿ ಕಾಪಾಡಿ ಪೊರೆವ ಪ್ರಭುನೀನೆ 23 ಕೊಡುವವನು ನೀನೆ ಕೋಳುವವನು ನೀನೆ ಅಡಿಗಡಿಗೆ ಸುಖದುಃಖ ನೀಡುವವ ನೀನೆ ಕೊಡುವದಾತನು ನೀನೆ ಕೊಟ್ಟದ್ದು ಕೊಂಡರೆ ಹೊಡಕೊಂಡು ಅಳುವದ್ಯಾತಕೆ ಮೂಢಪ್ರಾಣಿ 24 ಈ ಪೊಡವಿಯೊಳು ಮೊದಲು ನಾನು ಬಹು ಕಾಲದಿ ಕೌಪೀನ ಸಹ ಯನ್ನ ಸಂಗಡಿರಲಿಲ್ಲ ಈ ಪೊಡುವಿಯನು ಬಿಟ್ಟು ನಾ ಪೋಪಕಾಲಕ್ಕು ಈ ಪರಿಯೆ ಪೋಪೆನೆಂಬುದು ಸಟಿಯು ಅಲ್ಲ 25 ಗಾಡಿ ವಾಜಿಯು ಮತ್ತೆ ಬೆಡಗಿನ ವಸನಗಳು ಕೇಡುಯಿಲ್ಲದವಾ ಭರಣ ವಸ್ತುಗಳು ನಾಡಿನೊಳು ಬಹುಮನ್ನಣೆಯು ಯೆಂಬರೆಲ್ಲೆನ್ನ ಕೂಡಬರಬಹುದಾದುದೊಂದುಯಿಲ್ಲ 26 ಎಷ್ಟುಗಳಿಸಿದರೆನ್ನ ಹೊಟ್ಟೆಗೊಂದೇ ರೊಟ್ಟಿ ಸೃಷ್ಟಿಪತಿ ನಿನ್ನಂಘ್ರಿ ನಿಷ್ಠೆ ತೊರೆದು ಕಷ್ಟ ನಷ್ಟಗಳನ್ನು ಸಹಿಸಿ ನಿಷ್ಠ್ಠುರನಾಗಿ ದುಷ್ಟತನದಿಂದ ನಾನಿಷ್ಟುಪರಿಗಳಿಸಿ 27 ದಾನಧರ್ಮಗಳಿಲ್ಲ ವÀ್ರತನೇಮಗಳುಯಿಲ್ಲ ಆನಮಿಸಿಕೊಡಲಿಲ್ಲ ಮಾನಿ ವಿಪ್ರರಿಗೆ ಧೇನುಪಾಲನೆ ನಿನ್ನಧ್ಯಾನವನ್ನೇ ಮರೆದು ಶ್ವಾನನÀಂದದಿ ಕಾದು ಕೊಂಡು ಕುಳಿತಿಪ್ಪೆ 28 ವಾರನಾರಿಯರಲ್ಲಿ ವೇಷಧಾರಿಗಳಲ್ಲಿ ಸೊರೆಮಾಡಿದೆ ಕರ್ಣನೆನಿಸ ಬೇಕೆಂದು ಶ್ರೀರಮಾಪತಿ ನಿನ್ನ ಚರಣ ಕಮಲಗಳನ್ನು ಆರಾಧಿಪರಿಗೆ ನಾರುವ್ವಿ ಕೊಡಲಿಲ್ಲ 29 ಸತಿಸುತರು ಹಿತÀದವರು ಹಿತವ ಮೇಲ್ತೋರಿದು - ರ್ಗತಿಗೆನ್ನ ಗುರಿಮಾಡುತಿಪ್ಪರಲ್ಲದಲೇ ಪರ - ಗತಿಗೆ ಸಾಧನ ತೋರ್ಪರಾರು ಯನಗಿಲ್ಲ 30 ಈ ಮಹಾಜ್ವರದಿಂದ ನೊಂದು ನಿನ್ನನು ನೆನೆವೆÉ ನಾಮಹಾಭಕ್ತಿಯಲಿ ನಂಬಿದವನಲ್ಲ ನಾ ಮಾಡಿದ ಪಾಪರಾಶಿಗಳ ಪರಿಹರಿಸಿ ಪ್ರೇಮದಿಂದಲಿ ಪೊರೆಯೋ ಪರಮಕರುಣಿ 31 ರೋಗವನೆ ಹೆಚ್ಚಿಸು ನಿರೋಗಿಯನು ಮಾಡು ಭವ ರೋಗದಿಂದಗತೀ ಕಡೆದಾಂಟಿಸು ಯೋಗಿವರ ನಿನ್ನಿಚ್ಛೆ ಹೇಗೆÀಮಾಡಿದರುಸರಿ ಆಗದೆಳ್ಳಿನಿತು ಸಂಕೋಚವೆನಗೆ 32 ನೀಕೋಟ್ಟಕವಚವಿದು ನೀ ತೆಗೆದು ಹಾಕಲ್ಕೆ ನಾಕೆಟ್ಟುದುದುಯೇನು ಕರುಣಾಳುವೆ ಈ ಕವಚ ಕೆಲಕಾಲ ಬಿಟ್ಟಮಾತ್ರಕೆ ಮುಂದೆ ನೂಕಬೇಡೆನ್ನ ಮನ ಪಾಪಗಳ ಕಡೆಗೆ 33 ತನುಮನವು ನಿನ್ನದು ಧನಧಾನ್ಯ ನಿನ್ನದು ವನಿತೆ ನಿನ್ನವಳು ಮನೆ ಮಾರು ನಿನ್ನದು ದೇವ ಎನಗಾಪ್ತರೆಂಬುವರು ನಿನ್ನದಾಸರು ರಾಮ ಎನದೆಂಬ ವಸ್ತುವೆಲ್ಲವು ನಿನ್ನದು 34 ನಿನ್ನ ನಂಬಿದಯನೆಗೆ ಪಾಪದಂಜಿಕೆಯಿಲ್ಲ ಪುಣ್ಯದಾಶೆಯು ಇಲ್ಲ ಪರಮಪುರುಷ ನಿನ್ನ ಪ್ರೇರಣೆಯಿಂದ ಯನಿ
--------------
ವರದೇಶವಿಠಲ